Tag: mysuru- bengaluru express way

  • ಬೆಂ-ಮೈ ದಶಪಥ ಹೆದ್ದಾರಿ ಟೋಲ್ ಮತ್ತಷ್ಟು ದುಬಾರಿ- ಜೂನ್ 1ರಿಂದಲೇ ಪ್ರಯಾಣಿಕರ ಜೇಬಿಗೆ ಕತ್ತರಿ

    ಬೆಂ-ಮೈ ದಶಪಥ ಹೆದ್ದಾರಿ ಟೋಲ್ ಮತ್ತಷ್ಟು ದುಬಾರಿ- ಜೂನ್ 1ರಿಂದಲೇ ಪ್ರಯಾಣಿಕರ ಜೇಬಿಗೆ ಕತ್ತರಿ

    ರಾಮನಗರ: ದಶಪಥ ಹೆದ್ದಾರಿಯಲ್ಲಿ (Bengaluru-Mysuru Expressway) ಸಂಚಾರ ಮತ್ತಷ್ಟು ದುಬಾರಿಯಾಗಿದ್ದು ಹೆದ್ದಾರಿ ಪ್ರಾಧಿಕಾರ 22% ರಷ್ಟು ಟೋಲ್ ದರ ಏರಿಕೆ ಮಾಡಿದೆ.

    ಜೂನ್ 1 ರಿಂದಲೇ ದುಬಾರಿ ಶುಲ್ಕ ವಸೂಲಿ ಮಾಡಲಾಗುತ್ತಿದ್ದು, ಪ್ರಯಾಣಿಕರ ಜೇಬಿಗೆ ಕತ್ತರಿ ಹಾಕಲಾಗುತ್ತಿದೆ. ಫಾಸ್ಟ್ ಟ್ಯಾಗ್ (Fastag) ಇರೋ ಕಾರಣ ವಾಹನ ಸವಾರರ ಗಮನಕ್ಕೂ ಬಾರದೇ ಹಣ ವಸೂಲಿ ಮಾಡಲಾಗುತ್ತಿದೆ. ಕಾರ್, ವ್ಯಾನ್, ಜೀಪ್‍ಗಳ ಏಕಮುಖ ಸಂಚಾರಕ್ಕೆ 135 ರೂ.ನಿಂದ 165ಕ್ಕೆ ಏರಿಕೆ (30 ರೂ. ಹೆಚ್ಚಳ) ಮಾಡಲಾಗಿದೆ. ಲಘು ವಾಹನಗಳು, ಮಿನಿ ಬಸ್‍ಗಳ ಏಕಮುಖ ಟೋಲ್ 220 ರೂ.ನಿಂದ 270ಕ್ಕೆ ಏರಿಕೆ(50ರೂ ಹೆಚ್ಚಳ).

    ಟ್ರಕ್, ಬಸ್, 2 ಆಕ್ಸೆಲ್ ವಾಹನಗಳ ಏಕಮುಖ ಸಂಚಾರಕ್ಕೆ 460 ರೂ.ನಿಂದ 565ಕ್ಕೆ ಏರಿಕೆ(105 ಹೆಚ್ಚಳ). 3 ಆಕ್ಸೆಲ್ ವಾಣಿಜ್ಯ ವಾಹನಗಳ ಏಕಮುಖ ಸಂಚಾರ 500 ರೂ.ನಿಂದ 615ಕ್ಕೆ ಏರಿಕೆ (115 ರೂ ಹೆಚ್ಚಳ). ಭಾರೀ ವಾಹನಗಳ ಏಕಮುಖ ಸಂಚಾರ 720 ರೂ.ನಿಂದ 885ಕ್ಕೆ ಏರಿಕೆ (165 ಹೆಚ್ಚಳ). 7 ಅಥವಾ ಅದಕ್ಕಿಂತ ಹೆಚ್ಚಿನ ಆಕ್ಸೆಲ್ ವಾಹನಗಳ ಏಕಮುಖ ಸಂಚಾರ 880 ರೂ.ನಿಂದ 1,080ಕ್ಕೆ ಏರಿಕೆ (200 ಹೆಚ್ಚಳ) ಮಾಡಲಾಗಿದೆ.

    ಈ ಹಿಂದೆ ಏಪ್ರಿಲ್ 1ರಂದೇ ದರ ಏರಿಕೆ ಮಾಡಿದ್ದ ಹೆದ್ದಾರಿ ಪ್ರಾಧಿಕಾರ ಸಾರ್ವಜನಿಕರ ಭಾರೀ ಆಕ್ರೋಶ ಹಿನ್ನೆಲೆಯಲ್ಲಿ ದರ ಹೆಚ್ಚಳವನ್ನು ವಾಪಸ್ ಪಡೆದಿತ್ತು. ಇದೀಗ ಮತ್ತೆ ಟೋಲ್ ದರ (Toll Rate) ಏರಿಕೆ ಮಾಡಲಾಗಿದ್ದು, ವಾಹನ ಸವಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಎರಡು ತಿಂಗಳ GST ಪಾಲು ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ- ಕರ್ನಾಟಕಕ್ಕೆ ಸಿಕ್ಕಿದೆಷ್ಟು?

  • ಬೆಂ-ಮೈಸೂರು ಎಕ್ಸ್‌ಪ್ರೆಸ್ ಹೈವೇನಲ್ಲಿ ಭಯಾನಕ ಅಪಘಾತ- 5 ತಿಂಗಳಲ್ಲೇ 55 ಮಂದಿ ಸಾವು!

    ಬೆಂ-ಮೈಸೂರು ಎಕ್ಸ್‌ಪ್ರೆಸ್ ಹೈವೇನಲ್ಲಿ ಭಯಾನಕ ಅಪಘಾತ- 5 ತಿಂಗಳಲ್ಲೇ 55 ಮಂದಿ ಸಾವು!

    ಮಂಡ್ಯ: ಮೈಸೂರು ನಗರಕ್ಕೆ ಕೈಗಾರಿಕೆಗಳು ಬರಲಿ, ಸಾಂಸ್ಕೃತಿಕ ನಗರಿ ಬೆಳೆಯಲಿ. ಪ್ರತಿದಿನ ಬೆಂಗಳೂರು-ಮೈಸೂರು ಸಂಚರಿಸುವ ಜನರಿಗೆ ಅನುಕೂಲವಾಗಲಿ ಎಂಬ ದೃಷ್ಟಿಯಿಂದ ಕೇಂದ್ರ ಸರ್ಕಾರ 9000 ಕೋಟಿ ವೆಚ್ಚದಲ್ಲಿ ಮೈ-ಬೆಂ ದಶಪಥ ಹೆದ್ದಾರಿ (Mysuru Bengaluru Expressway) ನಿರ್ಮಾಣ ಮಾಡಲಾಗಿದೆ. ಆದರೆ ಈ ಹೆದ್ದಾರಿ ಇದೀಗ ಡೆಡ್ಲಿ ಆಕ್ಸಿಡೆಂಟ್ ಪ್ಲೇಸ್ ಆಗ್ತಿದೆ. ಮಂಡ್ಯ ಜಿಲ್ಲೆ ವ್ಯಾಪ್ತಿಯಲ್ಲಿ ಕೇವಲ 5 ತಿಂಗಳಲ್ಲೆ 55 ಮಂದಿ ಅಪಘಾತದಲ್ಲಿ ಮೃತಪಟ್ಟಿರೋದು ಆತಂಕ ಮೂಡಿಸಿದೆ.

    ಹೌದು. ಮೈ-ಬೆಂ ಟೆನ್ ಲೈನ್ ಹೈವೇ ಮಂಡ್ಯ (Mandya) ಜಿಲ್ಲೆ ವ್ಯಾಪ್ತಿಯಲ್ಲಿಯೇ ಹೆಚ್ಚು ಹಾದು ಹೋಗಿದೆ. ಬರೋಬ್ಬರಿ 55 ಕಿ.ಮೀಗೂ ಹೆಚ್ಚು ದಶಪಥ ಹೆದ್ದಾರಿ ಇದೆ. ಸದ್ಯ ದಶಪಥ ಹೆದ್ದಾರಿ ಕಾಮಗಾರಿ ಸಂಪೂರ್ಣ ಮುಗಿದಿದ್ದು, ವಾಹನ ಸವಾರರು ಖುಷಿಯಿಂದ ಪ್ರಯಾಣ ಬೆಳೆಸುತ್ತಿದ್ದಾರೆ. ಆದರೆ ಮಂಡ್ಯ ಜಿಲ್ಲಾ ವ್ಯಾಪ್ತಿಯ ದಶಪಥ ಹೆದ್ದಾರಿಯಲ್ಲಿ ನಡೆದಿರುವ ಅಪಘಾತ ಪ್ರಕರಣ ಹಾಗೂ ಅದರಿಂದ ಮೃತಪಟ್ಟವರ ಸಂಖ್ಯೆ ನೋಡಿದರೆ ಜನರಲ್ಲಿ ಆತಂಕ ಮೂಡಿಸುತ್ತಿದೆ. ಜನವರಿ ತಿಂಗಳಿಂದ ಮೇ ತಿಂಗಳ ಅಂತ್ಯದ ವರೆಗೆ 570 ಅಪಘಾತ ಪ್ರಕರಣ ಸಂಭವಿಸಿದ್ದು, 55 ಮಂದಿ ಮೃತಪಟ್ಟರೇ, 52 ಮಂದಿಗೆ ತೀವ್ರ ಪೆಟ್ಟು ಬಿದ್ದಿದೆ. ಇನ್ನು 184 ಮಂದಿಗೆ ಕೈಕಾಲು ಮುರಿದಿದ್ದು, 279 ಜನರಿಗೆ ಅಪಘಾತದಲ್ಲಿ ಸಣ್ಣ ಪುಟ್ಟ ಗಾಯಗಳಾಗಿದ್ದು ಜನರಲ್ಲಿ ಆಘಾತ ಮೂಡಿಸಿದೆ.

    ಅಪಘಾತಕ್ಕೆ ಕಾರಣಗಳನ್ನ ನೋಡೋದಾದ್ರೆ ಮೊದಲಿಗೆ ಕೇಳಿಬರುವಂತ ವಿಚಾರ ಅಂದ್ರೆ ಅತಿ ವೇಗ. ಎಕ್ಸ್ ಪ್ರೆಸ್ ವೇ ಸೇರಿದಂತೆ ಸರ್ವಿಸ್ ರಸ್ತೆಯಲ್ಲಿಯು ವೇಗವಾಗಿ ವಾಹನಗಳು ಬರುತ್ತಿದ್ದು, ನಿಯಂತ್ರಿಸಲಾಗದೇ ಅಪಘಾತ ನಡೆಯುತ್ತಿದೆ. ಇನ್ನೊಂದೆಡೆ ಅವೈಜ್ಞಾನಿಕವಾಗಿ ಕಾಮಗಾರಿಯು ಕಾರಣ ಎನ್ನುವ ಮಾತುಗಳು ಕೇಳಿಬರುತ್ತಿದೆ. ಮತ್ತೊಂದೆಡೆ ಸರ್ವಿಸ್ ರಸ್ತೆಗಳಲ್ಲಿ ದಿಬ್ಬ ನಿರ್ಮಾಣ ಆಗ್ತಿದ್ದು, ಅಲ್ಲಿಯು ಅಪಘಾತಗಳು ಹೆಚ್ಚಾಗಿ ಸಂಭವಿಸುತ್ತಿದೆ. ಇನ್ನು ಹಲವು ಕಾರಣಗಳಿಂದ ಅಪಘಾತ ದಿನೇ ದಿನೇ ಹೆಚ್ಚಾಗ್ತಿದ್ದು, ಸ್ವಲ್ಪ ಯಾಮಾರಿದ್ರು ಅಪಘಾತ ಕಟ್ಟಿಟ್ಟ ಬುತ್ತಿ ಎನಿಸುತ್ತಿದೆ.

    ಒಟ್ಟಿನಲ್ಲಿ ಸವಾರರು ಜಾಗರೂಕರಾಗಿ ವಾಹನ ಚಲಾಯಿಸಬೇಕಿದ್ದು, ಅಪಘಾತಕ್ಕೆ ಜನರಿಂದಲೇ ಕಡಿವಾಣ ಹಾಕಿಕೊಳ್ಳಬೇಕಿದೆ. ಇದನ್ನೂ ಓದಿ: ಯುಪಿ ಕೋರ್ಟ್‍ನಲ್ಲೇ ಗ್ಯಾಂಗ್‍ಸ್ಟರ್ ಹತ್ಯೆ