Tag: N.Y.Gopalakrishna

  • ಕೈತಪ್ಪಿದ ಮೊಳಕಾಲ್ಮೂರು ‘ಕೈ’ ಟಿಕೆಟ್- ಬೆಂಬಲಿಗರ ಸಭೆಯಲ್ಲಿ ಆಕಾಂಕ್ಷಿ ಯೋಗೀಶ್ ಬಾಬು ಕಣ್ಣೀರು

    ಕೈತಪ್ಪಿದ ಮೊಳಕಾಲ್ಮೂರು ‘ಕೈ’ ಟಿಕೆಟ್- ಬೆಂಬಲಿಗರ ಸಭೆಯಲ್ಲಿ ಆಕಾಂಕ್ಷಿ ಯೋಗೀಶ್ ಬಾಬು ಕಣ್ಣೀರು

    ಚಿತ್ರದುರ್ಗ: ಮೊಳಕಾಲ್ಮೂರು (Molakalmuru) ಕಾಂಗ್ರೆಸ್ (Congress) ಟಿಕೆಟ್ ಕೈತಪ್ಪಿದ ಹಿನ್ನೆಲೆ ಬೆಂಬಲಿಗರ ಸಭೆಯಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಯೋಗೀಶ್ ಬಾಬು (B.Yogesh Babu) ಕಣ್ಣೀರಿಟ್ಟಿದ್ದಾರೆ.

    ಚಿತ್ರದುರ್ಗ (Chitradurga) ಜಿಲ್ಲೆ ಮೊಳಕಾಲ್ಮೂರು ಕ್ಷೇತ್ರದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದ ಯೋಗೀಶ್ ಬಾಬು ಮುಂದಿನ ನಿರ್ಧಾರ ಕೈಗೊಳ್ಳಲು ಬೆಂಬಲಿಗರ ಸಭೆ ನಡೆಸಿದ್ದರು. ಈ ವೇಳೆ ಗದ್ಗದಿತರಾದ ಯೋಗೀಶ್ ಬಾಬು ನಿಮ್ಮ ಅಭಿಮಾನ, ಪ್ರೀತಿ ಬಾಂಧವ್ಯ ಸದಾ ಹೀಗೆ ಇರಲಿ ಎಂದರು. ಇದನ್ನೂ ಓದಿ: ಗಂಗಾವತಿ ಜನ ಫುಟ್ಬಾಲ್ ಆಡಿದ್ರೆ ಸೀದಾ ಬಳ್ಳಾರಿಗೆ ಹೋಗಿ ಬೀಳ್ತಾರೆ- ರೆಡ್ಡಿ ಚಿಹ್ನೆ ಬಗ್ಗೆ ಅನ್ಸಾರಿ ವ್ಯಂಗ್ಯ 

    2018ರ ಚುನಾವಣೆಯಲ್ಲಿ (Election) ಮೊಳಕಾಲ್ಮೂರು ಕ್ಷೇತ್ರದಲ್ಲಿ ಸಚಿವ ಶ್ರೀರಾಮುಲು ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಯೋಗೀಶ್ ಬಾಬು, ಈ ಬಾರಿ ಟಿಕೆಟ್ ಸಿಗುವ ಭರವಸೆಯಲ್ಲಿದ್ದರು. ಆದರೆ ಕೊನೆಯ ಕ್ಷಣದಲ್ಲಿ ಕಾಂಗ್ರೆಸ್ ಸೇರಿದ ಕೂಡ್ಲಿಗಿ ಮಾಜಿ ಶಾಸಕ ಎನ್‌ವೈ ಗೋಪಾಲಕೃಷ್ಣ (N.Y.Gopalakrishna) ಅವರಿಗೆ ಕಾಂಗ್ರೆಸ್ ನಾಯಕರು ಮಣೆ ಹಾಕಿದ್ದಾರೆ. ಹೀಗಾಗಿ ಮೊಳಕಾಲ್ಮೂರು ಕ್ಷೇತ್ರಕ್ಕೂ ಕಾಂಗ್ರೆಸ್ ಬಂಡಾಯದ ಬೆಂಕಿ ಹಬ್ಬಿದೆ. ಇದನ್ನೂ ಓದಿ: ವಿಧಾನಸೌಧದಲ್ಲಿರೋ ಜಯಲಲಿತಾ ಸೀರೆ, ಚಪ್ಪಲಿ, ಚಿನ್ನಾಭರಣ ಹರಾಜಿಗೆ ಅಧಿಕಾರಿ ನೇಮಕ! 

     ಶುಕ್ರವಾರ ಸಂಜೆ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಲ್ಲಿ ಯೋಗೀಶ್ ಬಾಬು ಬೆಂಬಲಿಗರು, ಅಭಿಮಾನಿಗಳ ಸಭೆ ನಡೆಸಲಾಗಿತ್ತು. ಈ ವೇಳೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವಂತೆ ಬೆಂಬಲಿಗರಿಂದ ಸಲಹಗಳು ಬಂದಿವೆ. ಅಲ್ಲದೇ ಸಭೆಯುದ್ದಕ್ಕೂ ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ‘ಕೈ’ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್ ಟಿಕೆಟ್ ಪಡೆಯಲು ಹಣವೇ ಮಾನದಂಡವಾಗಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: KMFಗೆ ಬೊಮ್ಮಣ್ಣ ಕೈ ಹಾಕಿದ್ರೆ ರಕ್ತ ಕ್ರಾಂತಿಯಾಗುತ್ತೆ: ಸಿಎಂ ಇಬ್ರಾಹಿಂ ಎಚ್ಚರಿಕೆ   

    ಹಣಬಲದಿಂದ ಟಿಕೆಟ್ ಪಡೆದಿರುವ ಗೋಪಾಲಕೃಷ್ಣ ಅವರನ್ನು ಸೋಲಿಸಲು ದಿಟ್ಟ ನಿರ್ಧಾರಕ್ಕೆ ಮುಂದಾದ ಬಾಬು ಬೆಂಬಲಿಗರು ಶತಾಯಗತಾಯ ಯೋಗೀಶ್ ಬಾಬು ಗೆಲುವಿಗೆ ಶ್ರಮಿಸಲು ಮುಂದಾಗಿದ್ದಾರೆ. ಹೀಗಾಗಿ ಗಡಿನಾಡು ಮೊಳಕಾಲ್ಮೂರು ಕ್ಷೇತ್ರದಲ್ಲೂ ಕಾಂಗ್ರೆಸ್ ವಿರುದ್ಧ ಬಂಡಾಯದ ಬೆಂಕಿ ಧಗಧಗ ಹೊತ್ತಿ ಉರಿಯುತ್ತಿದ್ದು, ಕಾಂಗ್ರೆಸ್‌ಗೆ ನುಂಗಲಾರದ ತುತ್ತಾಗಿದೆ. ಇದನ್ನೂ ಓದಿ: Twitter logo – ನಾಯಿ ಹೋಯ್ತು, ಮತ್ತೆ ನೀಲಿ ಹಕ್ಕಿ ಬಂತು

  • ಬಿಜೆಪಿ ನನ್ನ ಬಾಡಿಗೆ ಮನೆ, ಸ್ವಂತ ಮನೆಯಾದ ಕಾಂಗ್ರೆಸ್‌ಗೆ ಮರಳುವೆ- ಗೋಪಾಲಕೃಷ್ಣ

    ಬಿಜೆಪಿ ನನ್ನ ಬಾಡಿಗೆ ಮನೆ, ಸ್ವಂತ ಮನೆಯಾದ ಕಾಂಗ್ರೆಸ್‌ಗೆ ಮರಳುವೆ- ಗೋಪಾಲಕೃಷ್ಣ

    ಚಿತ್ರದುರ್ಗ: ಬಿಜೆಪಿ (BJP) ನನ್ನ ಬಾಡಿಗೆ ಮನೆಯಾಗಿದ್ದು, ಸ್ವಂತಮನೆಯಾದ ಕಾಂಗ್ರೆಸ್‌ಗೆ (Congress) ವಾಪಸ್ ತೆರಳಲು ಸಿದ್ಧತೆ ನಡೆಸಿದ್ದೇನೆ ಎಂದು ಕೂಡ್ಲಿಗಿ ಮಾಜಿ ಶಾಸಕ ಎನ್‌ವೈ ಗೋಪಾಲಕೃಷ್ಣ (N.Y.Gopalakrishna) ತಿಳಿಸಿದ್ದಾರೆ.

    ಚಿತ್ರದುರ್ಗದಲ್ಲಿರುವ (Chitradurga) ತನ್ನ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ನನಗೆ ಹಲವರಿಂದ ಸಮಸ್ಯೆಗಳಿದ್ದವು. ಈ ಬಗ್ಗೆ ಹಲವು ಬಾರಿ ವರಿಷ್ಠರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಹೀಗಾಗಿ ಬಾಡಿಗೆ ಮನೆಯಂತಿದ್ದ ಬಿಜೆಪಿಯಲ್ಲಿ ಉಸಿರುಗಟ್ಟಿದ ವಾತಾವರಣದಲ್ಲಿ ಐದು ವರ್ಷ ಕಳೆದಿದ್ದೇನೆ. ಈ ಬಾರಿ ಮೊಳಕಾಲ್ಮೂರು (Molakalmuru) ಕ್ಷೇತ್ರದಿಂದ ಸ್ಪರ್ಧಿಸಲು ನನ್ನ ಖಾಯಂ ಮನೆಯಾದ ಕಾಂಗ್ರೆಸ್‌ಗೆ ಮರಳಲಿದ್ದೇನೆ ಎಂದರು. ಇದನ್ನೂ ಓದಿ: ಕಾಂಗ್ರೆಸ್‍ಗೆ ರಿವರ್ಸ್ ಆಪರೇಷನ್ ಭೀತಿ – ಡಿಕೆಶಿಗೆ ಬಿಜೆಪಿ, ಜೆಡಿಎಸ್‍ನಿಂದ ಮಾಸ್ಟರ್ ಸ್ಟ್ರೋಕ್! 

    ಗೋಪಾಲಕೃಷ್ಣ ಸೇರ್ಪಡೆಗೆ ವೇದಿಕೆ ಸಿದ್ಧವಾಗುತ್ತಿರುವ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟವಾಗಿದೆ. ಎನ್‌ವೈ ಗೋಪಾಲಕೃಷ್ಣ ಸ್ಪರ್ಧೆಗೆ ಮೊಳಕಾಲ್ಮೂರು ಕಾಂಗ್ರೆಸ್ ಟಿಕೇಟ್ ಆಕಾಂಕ್ಷಿಗಳಿಂದ ಭಾರೀ ವಿರೋಧ ವ್ಯಕ್ತವಾಗಿದೆ. ಅಧಿಕಾರಕ್ಕಾಗಿ ಪಕ್ಷಾಂತರ ಮಾಡುವವರಿಗೆ ಮಣೆ ಹಾಕದಂತೆ ಕಳೆದ ಬಾರಿ ಚುನಾವಣೆಯ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಯೋಗೀಶ್ ಬಾಬು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಕ್ಲೈಮ್ಯಾಕ್ಸ್ ಹಂತ ತಲುಪಿದ ಹಾಸನ ಟಿಕೆಟ್ ದಂಗಲ್ – ಇಂದು ಹೆಚ್‌ಡಿಕೆ, ರೇವಣ್ಣ ಸಂಧಾನ

    ಕಾಂಗ್ರೆಸ್ ಸೇರ್ಪಡೆಗೆ ವಿರೋಧ ವ್ಯಕ್ತವಾಗಿರುವ ವಿಚಾರಕ್ಕೆ ಪ್ರತಿಕ್ರಿಯಿಸಿರುವ ಗೋಪಾಲಕೃಷ್ಣ ಅವರು, ನಾನು ಕೂಡಾ ಲೋಕಲ್ ಅಭ್ಯರ್ಥಿ, ಹುಟ್ಟಿದಾಗಿನಿಂದ ಇದೇ ಮೊಳಕಾಲ್ಮೂರು ಕ್ಷೇತ್ರದಲ್ಲಿ ಬೆಳೆದಿದ್ದೇನೆ. ಅನಿವಾರ್ಯವಾಗಿ ಬೇರೆ ಕ್ಷೇತ್ರಕ್ಕೆ ಹೋಗಿದ್ದೆ. ನನ್ನ ವಿರುದ್ಧ ಪ್ರತಿಭಟನೆ ಮಾಡುತ್ತಿರುವುದು ಸರಿಯಲ್ಲ. ಗೋಬ್ಯಾಕ್ ಗೋಪಾಲಕೃಷ್ಣ ಎನ್ನುವ ನೈತಿಕ ಹಕ್ಕಿಲ್ಲ. ನನ್ನ ವಿರುದ್ಧ ಪ್ರತಿಭಟನೆ ಮಾಡುವುದು ಸಣ್ಣತನವಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಭಾರತದಿಂದ 85 ದೇಶಗಳಿಗೆ ರಕ್ಷಣಾ ಸಾಮಾಗ್ರಿ ರಫ್ತು – 1,5920 ಕೋಟಿ ದಾಖಲೆ 

    2018ರಲ್ಲಿ ನನಗೆ ಟಿಕೆಟ್ ತಪ್ಪಿದಾಗ ನಾನು ಹೀಗೆ ಅಸಹ್ಯ ವಾತಾವರಣ ನಿರ್ಮಿಸಲಿಲ್ಲ. ಇದು ಮೊಳಕಾಲ್ಮೂರು ಸ್ವಾಭಿಮಾನ ಹಾಗು ಗೌರವದ ಪ್ರಶ್ನೆ. ಮೊಳಕಾಲ್ಮೂರು ಗೌರವವನ್ನು ಯಾರೂ ಕಳೆಯಬಾರದು ಎಂದು ವಿರೋಧಿಗಳಿಗೆ ಟಾಂಗ್ (Tong) ಕೊಟ್ಟರು. ಇದನ್ನೂ ಓದಿ: ರೇವಣ್ಣ ಆರೋಪಕ್ಕೆ ಬೇಸತ್ತು ವರ್ಗಾವಣೆ ಕೋರಿದ ಡಿವೈಎಸ್‌ಪಿ