Tag: Nadahabha

  • ದಾಂಡಿಯಾ, ಗರ್ಬಾ ಡ್ಯಾನ್ಸ್ ಮಾಡಿ ಸಂಭ್ರಮಿಸಿದ್ರು ಕಾರವಾರದ ಮಂದಿ: ವಿಡಿಯೋ ನೋಡಿ

    ದಾಂಡಿಯಾ, ಗರ್ಬಾ ಡ್ಯಾನ್ಸ್ ಮಾಡಿ ಸಂಭ್ರಮಿಸಿದ್ರು ಕಾರವಾರದ ಮಂದಿ: ವಿಡಿಯೋ ನೋಡಿ

    ಕಾರವಾರ: ಒಂಬತ್ತು ದಿನಗಳ ಕಾಲ ನಡೆಯುವ ನವರಾತ್ರಿ ಉತ್ಸವವನ್ನು ರಾಜ್ಯದ ಕರಾವಳಿ ತಾಲೂಕಾದ ಕಾರವಾರದಲ್ಲೂ ಸಹ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಗುಜರಾತ್, ರಾಜಸ್ಥಾನ, ಪಂಜಾಬ್ ನಂತಹ ರಾಜ್ಯಗಳಲ್ಲಿ ನವರಾತ್ರಿ ಸಂಭ್ರಮದಲ್ಲಿ ಹೆಚ್ಚಾಗಿ ಪ್ರಚಲಿತದಲ್ಲಿರುವ ದಾಂಡಿಯಾ, ಗರ್ಬಾ ನೃತ್ಯವನ್ನು ಮಾಡಿ ಸಂಭ್ರಮಿಸಿದ್ದಾರೆ.

    ಒಂದೆಡೆ ದೀಪಾಲಂಕೃತಗೊಂಡಿರುವ ಆವರಣದಲ್ಲಿ ಬಣ್ಣ ಬಣ್ಣದ ಸೀರೆಯನ್ನುಟ್ಟು ಕೈಯಲ್ಲಿ ಕೋಲನ್ನ ಹಿಡಿದು ನೃತ್ಯದಲ್ಲಿ ಭಾಗಿಯಾದ ಮಹಿಳೆಯರು, ಇನ್ನೊಂದೆಡೆ ಇಂಪಾದ ಗಾಯನಕ್ಕೆ ಸೊಗಸಾಗಿ ಹೆಜ್ಜೆ ಹಾಕುತ್ತಿರುವ ಪುರುಷರು, ಯುವಕ, ಯುವತಿಯರು ಗುಜರಾತಿ ಸ್ಪೆಷಲ್ ದಾಂಡಿಯಾ ಆಡಿ ಕುಣಿದು ಕುಪ್ಪಳಿಸಿದ್ದಾರೆ.

    ಕಾರವಾರದ ದೇವಳಿವಾಡ, ಸೋನಾರವಾಡಗಳದ್ದು ಕಳೆದ 13 ವರ್ಷಗಳಿಂದ ಹೊರ ರಾಜ್ಯಕ್ಕೆ ಸೀಮಿತವಾಗಿದ್ದ ದಾಂಡ್ಯವನ್ನು ಈ ಭಾಗದಲ್ಲಿಯೂ ಮಾಡುವ ಮೂಲಕ ಜನರು ನವರಾತ್ರಿಯನ್ನು ವಿಶೇಷವಾಗಿ ಆಚರಿಸಿ ಎಂಜಾಯ್ ಮಾಡಿದರು. ನವರಾತ್ರಿ ಉತ್ಸವದ ಒಂಬತ್ತೂ ದಿನಗಳಲ್ಲಿ ಕಾರವಾರ ತಾಲೂಕಿನಲ್ಲಿ ದಾಂಡಿಯಾ ನೃತ್ಯವನ್ನ ಆಯೋಜನೆ ಮಾಡಲಾಗಿರುತ್ತದೆ. ಇಲ್ಲಿನ ಪ್ರಮುಖ ದೇವತೆಗಳಾದ ದುರ್ಗಾದೇವಿ, ಸಂತೋಷಿ ಮಾತಾ, ಕುಂಠಿ ಮಹಾಮಾಯಿ ಸೇರಿದಂತೆ ಅನೇಕ ದೇವಾಲಯದ ಆವರಣದಲ್ಲಿ ದಾಂಡಿಯಾವನ್ನ ಆಯೋಜನೆ ಮಾಡಲಾಗಿರುತ್ತದೆ. ಇದಕ್ಕಾಗಿ ದಸರಾ ದಿನದಿಂದ 15 ದಿನಗಳ ಕಾಲ ತರಬೇತಿ ಪಡೆದು ನಂತರ ಮಾಡುತ್ತಾರೆ. ಇದಲ್ಲದೇ ಮಕ್ಕಳು, ಮಹಿಳೆಯರು, ವೃದ್ಧರಾದಿಯಾಗಿ ತಂಡ ಕಟ್ಟಿಕೊಂಡು ದಾಂಡಿಯಾ ನೃತ್ಯದ ಮೂಲಕ ದೇವಿಗೆ ವಿಶೇಷ ಪೂಜೆ ನೆರವೇರಿಸಿ ನವರಾತ್ರಿ ಉತ್ಸವವನ್ನು ಆಚರಿಸಿದ್ದಾರೆ.

    ಒಟ್ಟಾರೆ ಕರ್ನಾಟಕದ ಕಾಶ್ಮೀರ ಎಂಬ ಖ್ಯಾತಿ ಪಡೆದಿರುವ ಕಾರವಾರದಲ್ಲಿನ ಜನರು ನವರಾತ್ರಿ ಉತ್ಸವವನ್ನ ದಾಂಡಿಯಾ ನೃತ್ಯದ ಮೂಲಕ ಸಂಭ್ರಮದಿಂದ ಆಚರಿಸಿದ್ದಾರೆ. ನವರಾತ್ರಿಯ ಒಂಬತ್ತು ದಿನಗಳಲ್ಲೂ ಕಾರವಾರದ ಬಹುತೇಕ ಎಲ್ಲಾ ಕಾಲೋನಿಗಳಲ್ಲಿ ದಾಂಡಿಯಾ ಆಯೋಜನೆ ಮಾಡುವುದರಿಂದ ಜಾತಿ-ಪಂಗಡಗಳಿಲ್ಲದೇ ಎಲ್ಲಾ ಭೇದವನ್ನು ಮರೆತು ಬೇರೆಯುವುದರಿಂದ ಜನರಲ್ಲಿ ಸೌಹಾರ್ದತೆ ಭಾವ ಬೆಳೆಯಲು ಸಹಾಯ ಮಾಡಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಅಂಬಾವಿಲಾಸ ಅರಮನೆಯಲ್ಲಿ ಆಯುಧ ಪೂಜೆಯ ಸಂಭ್ರಮ

    ಅಂಬಾವಿಲಾಸ ಅರಮನೆಯಲ್ಲಿ ಆಯುಧ ಪೂಜೆಯ ಸಂಭ್ರಮ

    ಮೈಸೂರು: ಜಿಲ್ಲೆಯ ಅಂಬಾವಿಲಾಸ ಅರಮನೆಯಲ್ಲಿ ಇಂದು ಆಯುಧ ಪೂಜೆ ಸಂಭ್ರಮದಿಂದ ತುಂಬಿ ತುಳುಕುತ್ತಿದೆ.

    ಜಯ ಮಾರ್ತಾಂಡ ದ್ವಾರದ ಬಳಿ ಇರುವ ಕೋಡಿಸೋಮೇಶ್ವರ ದೇವಸ್ಥಾನದಲ್ಲಿ ಆಯುಧಗಳಿಗೆ ಪೂಜೆ ಮಾಡಲಾಗಿದೆ. ಸಿಬ್ಬಂದಿ ಅರಮನೆಯಿಂದ ದೇವಸ್ಥಾನದವರೆಗೆ ಪಟ್ಟದ ಆನೆ, ಕುದುರೆ ಒಂಟೆಗಳ ಜೊತೆ ಕೊಂಡೊಯ್ಯಲಾಗಿತ್ತು. ಪೂಜೆ ಬಳಿಕ ಅರಮನೆಯ ಕೊಠಡಿಯಲ್ಲಿ ಚಂಡಿಕಾ ಹೋಮ ನೆರವೇರಿತು.

    ಅರಮನೆಯ ವಾಹನಗಳು ಆಯುಧ ಪೂಜೆಗೆ ಸಿದ್ಧವಾಗಿದ್ದು, ಅರಮನೆ ಸಿಬ್ಬಂದಿ ವಾಹನಗಳನ್ನ ಬಾಳೆ ಹೂವಿನಿಂದ ರಾಜಮನೆತನದ ಎಲ್ಲ ಕಾರುಗಳನ್ನು ಸಿಂಗರಿಸಿದ್ದಾರೆ. ನವರಾತ್ರಿ ಉತ್ಸವಕ್ಕೆ ಇಂದು ತೆರೆಯಾಗುತ್ತಿದ್ದು, ರಾಜವಂಶಸ್ಥರ ಖಾಸಗಿ ದರ್ಬಾರ್ ಸಂಜೆ ಸಮಾಪ್ತಿಯಾಗಲಿದೆ. ಮೈಸೂರು ಅರಮನೆಯಲ್ಲಿಂದು ಸಾಂಪ್ರದಾಯಿಕ ಆಯುಧ ಪೂಜೆ ಆಚರಣೆ ಜರುಗುತ್ತಿದ್ದು, ಇಂದು ಮುಂಜಾನೆ ಚಂಡಿಕಾ ಹೋಮದ ಕೊಠಡಿಯಲ್ಲಿ ಚಂಡಿಕಾ ಹೋಮ ಆರಂಭವಾಗಿದೆ. ಬೆಳಗ್ಗೆ 7 ಗಂಟೆಗೆ ಆನೆ ಬಾಗಿಲಿಗೆ ಪಟ್ಟದ ಆನೆ, ಪಟ್ಟದ ಹಸು, ಪಟ್ಟದ ಕುದುರೆ ಆಗಮಿಸಿವೆ. ನಂತರ ಆಯುಧಗಳನ್ನು ಅರಮನೆಯ ಜಯ ಮಾರ್ತಾಂಡ ದ್ವಾರದ ಮಾರ್ಗವಾಗಿ ಕೋಡಿ ಸೋಮೇಶ್ವರ ದೇವಾಲಯಕ್ಕೆ ಕಳುಹಿಸಿ ಪೂಜೆ ಮಾಡಲಾಗಿದೆ. ಇದರೊಂದಿಗೆ ಪಟ್ಟದ ಆನೆ, ಕುದುರೆ, ಹಸು ಕೂಡ ಹೆಜ್ಜೆ ಹಾಕಿದ್ದವು.

    ಬೆಳಗ್ಗೆ 8.15 ರಿಂದ 8.30ಕ್ಕೆ ಕೋಡಿ ಸೋಮೇಶ್ವರ ದೇವಾಲಯದಿಂದ ಅರಮನೆಯ ಕಲ್ಯಾಣ ಮಂಟಪಕ್ಕೆ ಆಯುಧಗಳನ್ನು ತರಲಾಗಿದ್ದು, ಬೆ. 9 ಕ್ಕೆ ಚಂಡಿಕಾ ಹೋಮದ ಕೊಠಡಿಯಲ್ಲಿ ಚಂಡಿಕಾ ಹೋಮ ಪೂರ್ಣಾಹುತಿಯಾಗಲಿದೆ. ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಂದ ಬೆ.10 ರಿಂದ 10.25ದ ವರೆಗೆ ಕಲ್ಯಾಣ ಮಂಟಪದಲ್ಲಿ ಆಯುಧ ಪೂಜೆ ಕೈಗೊಂಡಿದ್ದು, ಕತ್ತಿ, ಖಡ್ಗ, ಗುರಾಣಿ, ಯುದ್ಧೋಪಕರಣ, ವಾಹನ ಸೇರಿದಂತೆ ಅರಮನೆಯ ಆಯುಧಗಳಿಗೆ ಪೂಜೆ ಮಾಡಲಿದ್ದಾರೆ.

    ಸಂಜೆ ಅಂಬಾವಿಲಾಸ ದರ್ಬಾರ್ ಹಾಲ್‍ನಲ್ಲಿ ಸಿಂಹಾಸನ ವಿಸರ್ಜನೆ ಮಾಡಲಿದ್ದು, ವಾಣಿ ವಿಲಾಸ ದೇವರ ಮನೆಯಲ್ಲಿ ಕಂಕಣ ವಿಸರ್ಜನೆ ಮಾಡಲಾಗುತ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಯದುವೀರ್ ಒಡೆಯರಿಂದ ಸರಸ್ವತಿ ಪೂಜೆ- ಏರ್‌ಶೋ ಕಣ್ತುಂಬಿಕೊಂಡ ಪ್ರವಾಸಿಗರು

    ಯದುವೀರ್ ಒಡೆಯರಿಂದ ಸರಸ್ವತಿ ಪೂಜೆ- ಏರ್‌ಶೋ ಕಣ್ತುಂಬಿಕೊಂಡ ಪ್ರವಾಸಿಗರು

    ಮೈಸೂರು: ವಿಶ್ವ ವಿಖ್ಯಾತ ದಸರಾದ ಹಿನ್ನೆಲೆ ಮೈಸೂರು ಅರಮನೆಯಲ್ಲಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸರಸ್ವತಿ ಪೂಜೆ ಮಾಡಿದರು.

    ಬೆಳಗ್ಗೆ 10:15 ರಿಂದ 10:45 ರ ವರೆಗೆ ಸಲ್ಲುವ ಶುಭಲಗ್ನದಲ್ಲಿ ಕನ್ನಡಿ ತೊಟ್ಟಿಯಲ್ಲಿ ಸರಸ್ವತಿ ಭಾವಚಿತ್ರಕ್ಕೆ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿದರು. ನವರಾತ್ರಿ ಪೂಜಾ ಕೈಂಕರ್ಯಗಳಲ್ಲಿ ಸರಸ್ವತಿ ಪೂಜಾ ಪ್ರಧಾನವಾದ ಆಚರಣೆಯಾಗಿದೆ. ಇಂದು ಸಂಜೆ ದರ್ಬಾರ್ ನಂತರ ಕನ್ನಡಿ ತೊಟ್ಟಿಯಲ್ಲಿ ಕಾಳರಾತ್ರಿ ಪೂಜೆ, ಮಹಿಷಾಸುರನ ಸಂಹಾರ ನಡೆಯಲಿದೆ.

    ದಸರಾದ ಪ್ರಮುಖ ಅಕರ್ಷಣೆಯಾದ ಏರ್ ಶೋವನ್ನು ಸಚಿವ ಜಿಟಿ ದೇವೇಗೌಡ ಹಾಗೂ ಸಾರಾ ಮಹೇಶ್ ಉದ್ಘಾಟಿಸಿದರು. ನಗರದ ಬನ್ನಿ ಮಂಟಪದಲ್ಲಿ ನಡೆಯುತ್ತಿರುವ ವೈಮಾನಿಕ ಪ್ರದರ್ಶನವನ್ನು ಕಣ್ತುಂಬಿಕೊಳ್ಳಲು ಪ್ರವಾಸಿಗರು ಮುಗಿ ಬೀಳುತ್ತಿದ್ದಾರೆ.

    ಬಾನಂಗಳದಲ್ಲಿ ಲೋಹದ ಹಕ್ಕಿಗಳ ಹಾರಾಟ ಕಲರವದಿಂದ ಕೂಡಿದ್ದು, ಆಗಸದಲ್ಲಿ ಭಾರತದ ತ್ರಿವರ್ಣ ಧ್ವಜ ಮೂಡಿತು. ಆಗಸದಲ್ಲಿ ಯೋಧರಿಂದ ಸ್ಕೈ ಡೈವಿಂಗ್, ಸರ್ಜಿಕಲ್ ಆಪರೇಷನ್ ಸೇರಿದಂತೆ ನಾನಾ ಸಾಹಸ ಪ್ರದರ್ಶನ ನಡೆಯಿತು. ಬಾನೆತ್ತರದ ಸ್ಕೈಡೈವಿಂಗ್ ನೆರೆದಿದ್ದ ಪ್ರವಾಸಿಗರ ಮೈ ನವಿರೇಳಿಸಿತು. ಹೆಲಿಕಾಪ್ಟರ್ ನಿಂದ 115 ಅಡಿ ಎತ್ತರದಿಂದ ಯೋಧರು ಪುಷ್ಪಾರ್ಚನೆ ಮಾಡಿದರು.

    ಮೈಸೂರಿನ ಹಾಕಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಸಾಕು ಪ್ರಾಣಿಗಳು ಪ್ರದರ್ಶನ ಪ್ರಾಣಿ ಪ್ರಿಯರಲ್ಲಿ ಸಂತಸ ಮೂಡಿಸಿತು. ಈ ಪ್ರದರ್ಶನದಲ್ಲಿ ಡಾಬರ್ ಮನ್, ಜರ್ಮನ್ ಶೆಫರ್ಡ್, ಮುದೋಳ, ಡ್ಯಾಷೆಂಡ್, ಲ್ಯಾಬ್ರಡಾರ್, ರಾರಯಟ್, ವ್ಹೀಲರ್, ಪಿಟ್‍ಬುಲ್, ಸೇಂಟ್ ಬರ್ನಾಟ್, ಸೈಬೀರಿಯನ್ ಹಸ್ಕಿ ಸೇರಿದಂತೆ 21 ಜಾತಿಯ ನಾಯಿಗಳು ಸ್ಪರ್ಧೆಯಲ್ಲಿ ಪಾಲ್ಗೊಂಡು ಪ್ರಾಣಿ ಪ್ರೀಯರ ಮನಸ್ಸು ಗೆದ್ದವು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಪಂಚೆಯಲ್ಲಿಯೇ ಓಡಿ ಬಿದ್ರು ಸಚಿವರು: ವಿಡಿಯೋ

    ಪಂಚೆಯಲ್ಲಿಯೇ ಓಡಿ ಬಿದ್ರು ಸಚಿವರು: ವಿಡಿಯೋ

    ಮೈಸೂರು: ಪಂಚೆಯಲ್ಲೇ ಓಡುತ್ತಿದ್ದ ಉನ್ನತ ಶಿಕ್ಷಣ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಅವರು ರಸ್ತೆ ಮಧ್ಯದಲ್ಲಿಯೇ ಬಿದ್ದಿದ್ದಾರೆ. ಅದೃಷ್ಟವಶಾತ್ ಸಚಿವರಿಗೆ ಯಾವುದೇ ಗಂಭೀರ ಗಾಯಗಳಾಗಿಲ್ಲ.

    ದಸರಾ ಹಿನ್ನೆಲೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ನಗರದ ಓವಲ್ಸ್ ಮೈದಾನದಲ್ಲಿ ಮ್ಯಾರಥಾನ್ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ಸಚಿವರಾದ ಸಾರಾ ಮಹೇಶ್ ಹಾಗೂ ಜಿ.ಟಿ.ದೇವೇಗೌಡ, ಶ್ರೀನಿವಾಸ್ ಮ್ಯಾರಥಾನ್‍ಗೆ ಚಾಲನೆ ನೀಡಿದರು.

    ಮ್ಯಾರಥಾನ್ ಚಾಲನೆ ಬಳಿಕ ಸಚಿವರು ಓಟಗಾರರ ಜೊತೆಗೆ ಸ್ಪರ್ಧೆ ನೀಡಲು ಮುಂದಾದರು. ಆದರೆ ಪಂಚೆ ಧರಿಸಿದ್ದ ಜಿ.ಟಿ.ದೇವೇಗೌಡ ಅವರು, ಪಂಚೆಯನ್ನು ಎರಡೂ ಕೈಯಲ್ಲಿ ಹಿಡಿದುಕೊಂಡು ವೇಗವಾಗಿ ಹೆಜ್ಜೆ ಹಾಕುತ್ತಿದ್ದರು. ಈ ವೇಳೆ ಕಾಲು ತೊಡರಾಗಿ ನೆಲಕ್ಕೆ ಬಿದ್ದಿದ್ದಾರೆ. ಅದೃಷ್ಟವಶಾತ್ ಯಾವುದೇ ಗಂಭೀರ ಗಾಯವಾಗಿಲ್ಲ. ಸಚಿವರು ಬೀಳುತ್ತಿದ್ದಂತೆ ಇಬ್ಬರು ಕ್ಯಾಮೆರಾ ಮೆನ್ ಹಾಗೂ ಒಬ್ಬರು ಮ್ಯಾರಥಾನ್ ಸ್ಪರ್ಧಿ ಅವರ ಕೈ ಹಿಡಿದು ಮೇಲೆತ್ತಿದ್ದಾರೆ.

    ಇದಕ್ಕೂ ಮುನ್ನ ಮ್ಯಾರಥಾನ್ ಉದ್ಘಾಟನೆಗೆ ಸಚಿವರಾದ ಜಿಟಿ ದೇವೇಗೌಡ ಮತ್ತು ಸಾರಾ ಮಹೇಶ್ ಒಂದೂವರೇ ಗಂಟೆ ತಡವಾಗಿ ಬಂದಿದ್ದರು. ಇದರಿಂಗಾಗಿ ಸ್ಪರ್ಧಿಗಳು ಸಚಿವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://www.youtube.com/watch?v=rcI0vmfDiW0

  • ಮೈಸೂರು ದಸರಾ 2018: ಇಂದು ಹಾಫ್ ಮ್ಯಾರಥಾನ್ ಆಯೋಜನೆ!

    ಮೈಸೂರು ದಸರಾ 2018: ಇಂದು ಹಾಫ್ ಮ್ಯಾರಥಾನ್ ಆಯೋಜನೆ!

    ಮೈಸೂರು: ಮೈಸೂರು ದಸರಾದ ಹಿನ್ನೆಲೆ ದಿನವೂ ಒಂದೊಂದು ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿತ್ತು. ಇಂದು ಐದನೇ ದಿನವಾಗಿದ್ದು, ಮ್ಯಾರಥಾನ್ ಓಟ ಆಯೋಜನೆ ಮಾಡಲಾಗಿದೆ.

    ದಸರಾ ಹಿನ್ನೆಲೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು, ಪ್ರವಾಸೋದ್ಯಮ ಸಚಿವ ಸಾರಾ ಮಹೇಶ್ ಹಾಗೂ ಉನ್ನತ ಶಿಕ್ಷಣ ಸಚಿವ ಜಿ ಟಿ ದೇವೇಗೌಡ ಸಣ್ಣ ಕೈಗಾರಿಕೆ ಸಚಿವ ಶ್ರೀನಿವಾಸ್ ಮ್ಯಾರಥಾನ್‍ಗೆ ಚಾಲನೆ ನೀಡಿದರು. ಮ್ಯಾರಥಾನ್ ನಲ್ಲಿ ಮೈಸೂರಿನ ಜನತೆ ಭಾಗಿಯಾಗಿದ್ದಾರೆ. ಅಷ್ಟೇ ಅಲ್ಲದೇ ಮಕ್ಕಳು, ಯುವಕ, ಯುವತಿಯರು ಭಾಗಿಯಾಗಿದ್ದಾರೆ.

    ಮೈಸೂರಿನ ಓವಲ್ಸ್ ಮೈದಾನದಲ್ಲಿ ಮ್ಯಾರಥಾನ್ ಓಟವನ್ನು ಪ್ರಾರಂಭ ಮಾಡಲಾಗಿದ್ದು, ಮೈಸೂರಿನ ಪ್ರಮುಖ ರಸ್ತೆಯಲ್ಲಿ ಮ್ಯಾರಥಾನ್ ಓಟವನ್ನು ಏರ್ಪಡಿಸಲಾಗಿದೆ.

    ಮ್ಯಾರಥಾನ್ ಉದ್ಘಾಟನೆಗೆ ತಡವಾಗಿ ಬಂದ ಸಚಿವರ ವಿರುದ್ಧ ಮೈಸೂರಿಗರು ಅಸಮಾಧಾನ ಹೊರ ಹಾಕಿದ್ರು. ಬೆಳ್ಳಗ್ಗೆ ಆರು ಗಂಟೆಗೆ ಪ್ರಾರಂಭವಾಗಬೇಕಿದ್ದ ಮ್ಯಾರಥಾನ್ ಓಟ ಸಚಿವರಾದ ಜಿಟಿ ದೇವೇಗೌಡ ಮತ್ತು ಸಾರಾ ಮಹೇಶ್ ಒಂದೂವರೇ ಗಂಟೆ ತಡವಾಗಿ ಬಂದ ಕಾರಣ ಬಿಸಿಲಿನಲ್ಲಿ ಓಡಬೇಕಾ ಅಂತ ಮೈಸೂರಿಗರು ಆಕ್ರೋಶ ವ್ಯಕ್ತಪಡಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಬಿಸಿ ಬಿಸಿ ರಾಗಿಮುದ್ದೆ, ನಾಟಿಕೋಳಿ ಸೇವಿಸಿದ್ರು ಸ್ಪರ್ಧಿಗಳು!

    ಬಿಸಿ ಬಿಸಿ ರಾಗಿಮುದ್ದೆ, ನಾಟಿಕೋಳಿ ಸೇವಿಸಿದ್ರು ಸ್ಪರ್ಧಿಗಳು!

    ಮೈಸೂರು: ವಿಶ್ವವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಆಯೋಜಿಸಿರುವ ಆಹಾರ ಮೇಳದಲ್ಲಿ ಪ್ರತಿದಿನ ಒಂದೊಂದು ಸ್ಪರ್ಧೆ ನಡೆಸುತ್ತಿದ್ದು, ಜನರು ಸ್ಪರ್ಧೆಯಲ್ಲಿ ಪಾಲ್ಗೊಂಡು ಫುಲ್ ಎಂಜಾಯ್ ಮಾಡುತ್ತಿದ್ದಾರೆ.

    ಸ್ಕೌಟ್ಸ್ ಅಂಡ್ ಗೈಡ್ಸ್ ಮೈದಾನದಲ್ಲಿ ಇಂದು ನಡೆದ ರಾಗಿ ಮುದ್ದೆ ಮತ್ತು ನಾಟಿ ಕೋಳಿ ತಿನ್ನೋ ಸ್ಪರ್ಧೆಯಲ್ಲಿ ಸ್ಪರ್ಧಿಗಳು ರಾಗಿ ಮುದ್ದೆಯನ್ನು ತಾ ಮುಂದು ತಾ ಮುಂದು ಎಂದು ತಿಂದರು. ಒಬ್ಬ ಸ್ಪರ್ಧಿಗೆ ನಾಲ್ಕು ಮುದ್ದೆ ನಾಟಿ ಕೋಳಿ ಸಾಂಬರ್ ಮತ್ತು ಮೂರು ಮಾಂಸದ ಪೀಸ್ ಗಳನ್ನು ನೀಡಲಾಗಿತ್ತು.

    ಸ್ಪರ್ಧೆಯಲ್ಲಿ 10 ಮಂದಿಯನ್ನು ಲಾಟರಿ ಚೀಟಿ ಮೂಲಕ ಆಯ್ಕೆ ಮಾಡಲಾಗಿತ್ತು. ನೋಡು ನೋಡುತ್ತಿದ್ದ ಹಾಗೇ ಸ್ಪರ್ಧಿಗಳು ಮುದ್ದೆಯನ್ನು ನಾಟಿ ಕೋಳಿಗೆ ನೆಂಚಿಕೊಂಡು ಬಾಯಿ ಚಪ್ಪರಿಸಿದರೆ, ಮಾಂಸದ ಪೀಸ್ ಗಳನ್ನು ಮಸ್ತ್ ಆಗಿ ತಿಂದಿದ್ದಾರೆ. ಮೂರು ನಿಮಿಷದಲ್ಲಿ ಶ್ರೀರಂಗಪಟ್ಟಣ ಕೌಶಿಕ್ ರಾಗಿ ಮುದ್ದೆ ನಾಟಿ ಕೋಳಿ ತಿನ್ನೋ ಮೂಲಕ ಮೊದಲ ಸ್ಥಾನ ಪಡೆದರೆ, ಮೈಸೂರಿನ ಶಿವಾನಂದ್ ಮೂರುವರೆ ನಿಮಿಷದಲ್ಲಿ ತಿನ್ನೋ ಮೂಲಕ ಎರಡನೇ ಸ್ಥಾನ ಪಡೆದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕಡಲ ನಗರಿಯಲ್ಲಿ ಹಬ್ಬದ ಕಳೆ, ನಾಳೆಯಿಂದ ಮಂಗಳೂರು ದಸರಾ!

    ಕಡಲ ನಗರಿಯಲ್ಲಿ ಹಬ್ಬದ ಕಳೆ, ನಾಳೆಯಿಂದ ಮಂಗಳೂರು ದಸರಾ!

    ಮಂಗಳೂರು: ಮೈಸೂರು ದಸರಾ ಮಾದರಿಯಲ್ಲೇ ಮಂಗಳೂರು ದಸರಾ ಖ್ಯಾತಿಯೂ ಏರುತ್ತಿದೆ. ಕಡಲ ತಡಿಯ ಮಂಗಳೂರಿನ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುವ ಈ ದಸರಾ ಉತ್ಸವ ಮಂಗಳೂರಿನ ಪಾಲಿಗೆ ಹಬ್ಬದ ಕಳೆ ತರುತ್ತೆ. ಈ ಬಾರಿ ಉತ್ಸವಕ್ಕೆ ರಾಜ್ಯದ ಮುಖ್ಯಮಂತ್ರಿ ಚಾಲನೆ ನೀಡುತ್ತಿದ್ದಾರೆ.

    ಹೌದು. ಹಿಂದೆಲ್ಲಾ ದಸರಾ ಅಂದರೆ ಬರೀ ಮೈಸೂರು ಅನ್ನುವುದಷ್ಟೇ ರಾಜ್ಯದ ಜನರಿಗಿತ್ತು. ಆದರೆ, ಈಗ ಕರಾವಳಿಯ ಮಂಗಳೂರಿನ ದಸರಾ ದೇಶದಲ್ಲಿ ಗುರುತಿಸುವಷ್ಟರ ಮಟ್ಟಿಗೆ ಬೆಳೆದು ನಿಂತಿದೆ. ಮೈಸೂರು ದಸರಾ ರೀತಿಯಲ್ಲೇ ಮಂಗಳೂರಿನ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ದಸರಾ ಉತ್ಸವ ಕಳೆಗಟ್ಟಿದ್ದು, ಹತ್ತು ದಿನಗಳ ವೈಭವದ ಉತ್ಸವಕ್ಕೆ ನಾಳೆ ಅದ್ಧೂರಿ ಚಾಲನೆ ಸಿಗಲಿದೆ.

    ದಸರಾ ಹಿನ್ನೆಲೆಯಲ್ಲಿ ಈಗಾಗಲೇ ಮಂಗಳೂರು ನಗರವಿಡೀ ವಿದ್ಯುತ್ ದೀಪಗಳಿಂದ ಅಲಂಕಾರಗೊಂಡಿದ್ದು, ಉತ್ಸವದ ಕಳೆ ಬಂದಿದೆ. ಸಂಜೆಯಾಗುತ್ತಿದ್ದಂತೆ ಬಣ್ಣದ ಲೋಕ ಆವರಿಸುತ್ತಿದೆ. ನಾಳೆ ಬೆಳಗ್ಗೆ ನವದುರ್ಗೆಯರ ಸಹಿತ ಶಾರದಾ ಮೂರ್ತಿಯ ಪ್ರತಿಷ್ಠೆ ನಡೆಯಲಿದ್ದು ಕರ್ಣಾಟಕ ಬ್ಯಾಂಕ್ ಅಧ್ಯಕ್ಷ ಮಹಾಬಲೇಶ್ವರ ಎಸ್. ಉದ್ಘಾಟಿಸಲಿದ್ದಾರೆ.

    ಮಂಗಳೂರು ದಸರಾ ಉತ್ಸವಕ್ಕೆ ಅಕ್ಟೋಬರ್ 14 ರಂದು ರಾಜ್ಯದ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಉದ್ಘಾಟನೆ ಚಾಲನೆ ನೀಡಲಿದ್ದಾರೆ. ಕ್ಷೇತ್ರದ ರೂವಾರಿ ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ನೇತೃತ್ವದಲ್ಲಿ ಹಬ್ಬದೋಪಾದಿಯಲ್ಲಿ ಉತ್ಸವ ನಡೆಯಲಿದ್ದು, ವಿಜಯದಶಮಿಯಂದು ಸುದೀರ್ಘ ದಸರಾ ಮೆರವಣಿಗೆ ನಡೆಯಲಿದೆ. 75 ಕ್ಕೂ ಹೆಚ್ಚು ಸ್ತಬ್ಧಚಿತ್ರಗಳೊಂದಿಗೆ 9 ಕಿಮೀ ಉದ್ದಕ್ಕೆ 16 ಗಂಟೆಗಳ ಕಾಲ ಮೆರವಣಿಗೆ ನಡೆಯುವುದು ವಿಶೇಷ ಎಂದು ಕುದ್ರೋಳಿ ಕ್ಷೇತ್ರದ ಟ್ರಸ್ಟಿ ಹರಿಕೃಷ್ಣ ಬಂಟ್ವಾಳ್ ಹೇಳಿದ್ದಾರೆ.

    ಒಟ್ಟಿನಲ್ಲಿ ಮೈಸೂರು ದಸರಾ ರೀತಿಯಲ್ಲೇ ವಿದೇಶಿಗರನ್ನು ಆಕರ್ಷಿಸುವ ಮಾದರಿಯಲ್ಲಿ ಮಂಗಳೂರು ದಸರಾ ಉತ್ಸವ ನಡೆಯುವುದು ಕರಾವಳಿಗರಿಗೆ ಹೆಮ್ಮೆಯಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • KSTDCಯಿಂದ ದಸರಾಗಾಗಿ ಬಂತು ವಿಶೇಷ ವಿಮಾನದ ಬಂಪರ್ ಆಫರ್!

    KSTDCಯಿಂದ ದಸರಾಗಾಗಿ ಬಂತು ವಿಶೇಷ ವಿಮಾನದ ಬಂಪರ್ ಆಫರ್!

    ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ 2018 ಹಿನ್ನೆಲೆಯಲ್ಲಿ ಪ್ರಯಾಣಿಕರಿಗಾಗಿ ಕರ್ನಾಟಕ ಪ್ರವಾಸೋದ್ಯಮ ಇಲಾಖೆ ವಿಮಾನ ಪ್ರಯಾಣಿಕರಿಗೆ ಬಂಪರ್ ಕೊಡುಗೆ ನೀಡುತ್ತಿದೆ.

    ಮೈಸೂರು ದಸರಾಗೆ ವಿಶೇಷ ವಿಮಾನಯಾನ ಸೇವೆ ಆರಂಭವಾಗಿದ್ದು, ಕರ್ನಾಟಕ ಪ್ರವಾಸೋದ್ಯಮ ಇಲಾಖೆ ಮೈಸೂರಿನಿಂದ ಬೆಂಗಳೂರಿಗೆ ಕೇವಲ 999 ರೂ. ಗೆ ವಿಶೇಷ ವಿಮಾನಯಾನದ ಬಂಪರ್ ಆಫರ್ ಅನ್ನು ನೀಡಿದೆ. ಆಕಾಶ್ ಅಂಬಾರಿ ಹೆಸರಿನಲ್ಲಿ ಮೈಸೂರಿನಿಂದ ಬೆಂಗಳೂರಿಗೆ ವಿಶೇಷ ವಿಮಾನ ವ್ಯವಸ್ಥೆಯನ್ನು ಕಲ್ಪಿಸಿದೆ. ಕರ್ನಾಟಕ ಪ್ರವಾಸೋದ್ಯಮ ಇಲಾಖೆಯಿಂದ ವಿಶೇಷ ಫ್ಲೈಟ್ ಗಳು ಹಾರಲಿವೆ.

    ಅಕ್ಟೋಬರ್ 10 ರಿಂದ 19 ರ ವರೆಗೆ 9 ದಿನಗಳವರೆಗೆ ಪ್ರಯಾಣಿಕರ ಸೇವೆಗೆ ಲಭ್ಯವಿದ್ದು, ಮಧ್ಯಾಹ್ನ 2:10 ಕ್ಕೆ ಬೆಂಗಳೂರಿನಿಂದ ಹೊರಟು 3 ಗಂಟೆ ಮೈಸೂರು ತಲುಪುತ್ತದೆ. ಬಳಿಕ 3;30 ರಿಂದ ಮೈಸೂರಿನಿಂದ ಹೊರಟು 4:20 ಕ್ಕೆ ಬೆಂಗಳೂರಿಗೆ ತಲುಪುತ್ತದೆ. ಆನ್‍ಲೈನ್ ನಲ್ಲಿ ಟಿಕೆಟ್ ಬುಕ್ ಮಾಡಬಹುದು. ವಿದೇಶಿ ಪ್ರಯಾಣಿಕರು ಹಾಗೂ ಸ್ಥಳೀಯರ ಆಗಸ ಯಾತ್ರೆಗೆ ವಿಶೇಷ ವ್ಯವಸ್ಥೆ ಇದಾಗಿದ್ದು, ವಿಶೇಷ ವಿಮಾನಗಳು ಆಕಾಶ್ ಅಂಬಾರಿ ಹೆಸರಿನಲ್ಲಿ ಹಾರಲಿವೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಗಾಂಧೀಜಿ ಜನ್ಮದಿನ- ದಸರಾ ಗಜಪಡೆಗೆ ಇಂದು ಭಾರವಿಲ್ಲದೆ ತಾಲೀಮು!

    ಗಾಂಧೀಜಿ ಜನ್ಮದಿನ- ದಸರಾ ಗಜಪಡೆಗೆ ಇಂದು ಭಾರವಿಲ್ಲದೆ ತಾಲೀಮು!

    ಮೈಸೂರು: ಮಹತ್ಮಾ ಗಾಂಧೀಜಿ ಅವರ ಜನ್ಮದಿನವಾದ ಹಿನ್ನೆಲೆಯಲ್ಲಿ ಇಂದು ದಸರಾ ಗಜಪಡೆಗಳಿಗೆ ಭಾರವಿಲ್ಲದೆ ತಾಲೀಮು ನಡೆಸಲಾಗುತ್ತಿದೆ.

    ಗಾಂಧಿ ಜಯಂತಿ ಆದ್ದರಿಂದ ಭಾರ ಹೊರಿಸದೆ ಆನೆಗಳು ಬರಿ ಮೈಯಲ್ಲಿ ತಾಲೀಮು ನಡೆಸಿದವು. ಈವರೆಗೂ 400 ರಿಂದ 500 ಕೆಜಿ ತೂಕದ ಭಾರ ಹೊತ್ತು ತಾಲೀಮು ನಡೆಸುತ್ತಿದ್ದ ಆನೆಗಳು, ಇಂದು ಗಾಂಧಿ ಜಯಂತಿ ಹಿನ್ನೆಲೆಯಲ್ಲಿ ಅಹಿಂಸೆ ದೃಷ್ಟಿಯಿಂದ ಆನೆಗೆ ಭಾರ ಹೊರಿಸದೆ ತಾಲೀಮು ನಡೆಸಲಾಗುತ್ತಿದೆ. ಪ್ರತಿ ವರ್ಷ ದಸರಾ ಸಂದರ್ಭದಲ್ಲಿ ಗಾಂಧಿ ಜಯಂತಿ ಇದ್ದರೆ ಭಾರವಿಲ್ಲದೆ ತಾಲೀಮು ನೀಡುವ ಅಧಿಕಾರಿಗಳು, ಗಾಂಧೀಜಿಗೆ ಗೌರವ ಸಲ್ಲಿಸುವ ಸಲುವಾಗಿ ಖಾಲಿ ಮೈಯಲ್ಲಿ ಭಾರವಿಲ್ಲದೆ ಅರಮನೆಯಿಂದ ಬನ್ನಿಮಂಟಪದವರೆಗೆ ಆನೆಗಳು ಸಾಗಿದವು.

    ಈ ಮೊದಲು ಧನಂಜಯ ಆನೆಗೆ ಭಾರ ಹೊರುವ ತಾಲೀಮು ನೀಡಲಾಗಿತ್ತು. ಧನಂಜಯನ ಬೆನ್ನಿಗೆ ಸುಮಾರು 300 ಕೆ.ಜಿ. ತೂಕದ ಭಾರವನ್ನು ಹೊರಿಸಲಾಗುತ್ತಿತ್ತು. ಅರ್ಜುನ ಆನೆಗೂ ಮರಳು ಮೂಟೆ ಹೊತ್ತುಕೊಟ್ಟು ತಾಲೀಮು ನಡೆಸಲಾಗಿತ್ತು. ಅರಣ್ಯ ಇಲಾಖೆ ಅಂಬಾರಿ ಹೊರಲು ಅರ್ಜುನ, ಧನಂಜಯ, ಬಲರಾಮನಿಗೆ ಪ್ರಾಕ್ಟೀಸ್ ಮಾಡಿಸುತ್ತಿದ್ದರು.

    ತಾಲೀಮು ಏಕೆ?
    ಆನೆಗಳಿಗೆ ಜನರ ಗದ್ದಲ, ವಾಹನಗಳ ಧ್ವನಿ ಮತ್ತು ರಸ್ತೆಯ ಪರಿಚಯ ಮಾಡುವ ಉದ್ದೇಶದಿಂದ ಈ ತಾಲೀಮು ಮಾಡಿಸಲಾಗುತ್ತದೆ. ಅಲ್ಲದೆ ಕಾಡಿನಲ್ಲಿ ಓಡಾಡುವ ಆನೆಗಳು ಸಿಮೆಂಟ್ ಹಾಗೂ ಕಾಂಕ್ರಿಟ್ ರಸ್ತೆ ಮೇಲೆ ನಡೆಯುವುದನ್ನು ಅಭ್ಯಾಸ ಮಾಡಿಸುವುದು ಈ ತಾಲೀಮಿನ ಉದ್ದೇಶವಾಗಿದೆ. ತಾಲೀಮು ಮುಗಿದ ನಂತರ ಆನೆಗಳಿಗೆ ಪೌಷ್ಠಿಕ ಆಹಾರ ನೀಡಿ ಅವು ಸದೃಢವಾಗಿರುವಂತೆ ನೋಡಿಕೊಳ್ಳಲಾಗುತ್ತದೆ. ಯಾವುದೇ ಹಂತದಲ್ಲೂ ಆನೆಗಳು ಸಿಮೆಂಟ್ ಹಾಗೂ ಕಾಂಕ್ರಿಟ್ ರಸ್ತೆ ಮೇಲೆ ಸಾಗಿ ಸುಸ್ತಾಗದಂತೆ ನೋಡಿಕೊಳ್ಳುವುದು ಅತಿ ಮುಖ್ಯವಾಗಿದೆ ಎಂದು ಆನೆ ವೈದ್ಯರಾದ ಡಾ. ನಾಗರಾಜ್ ಹೇಳಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv