Tag: Naga Shourya

  • ಅಭಿಷೇಕ್ ಶೆಟ್ಟಿ ಸಹೋದರಿಯ ಕೈ ಹಿಡಿದ ತೆಲುಗಿನ ನಟ ನಾಗ ಶೌರ್ಯ

    ಅಭಿಷೇಕ್ ಶೆಟ್ಟಿ ಸಹೋದರಿಯ ಕೈ ಹಿಡಿದ ತೆಲುಗಿನ ನಟ ನಾಗ ಶೌರ್ಯ

    ಟಾಲಿವುಡ್‌ನಲ್ಲಿ ಸದ್ಯ ತೆಲುಗಿನ ನಟ ನಾಗ ಶೌರ್ಯ ಮತ್ತು ಕನ್ನಡತಿ ಅನುಷಾ ಶೆಟ್ಟಿ ಅವರದ್ದೇ ಸುದ್ದಿ. ಸೌತ್ ನಟ ನಾಗ್ ಕನ್ನಡದ ಹುಡುಗಿಯನ್ನ ಮದುವೆಯಾಗಿರುವ ಬೆನ್ನಲ್ಲೇ ಮತ್ತೊಂದು ಇಂಟರೆಸ್ಟಿಂಗ್ ಸುದ್ದಿಯೊಂದು ಹೊರಬಿದ್ದಿದೆ. ನಾಗ್ ಪತ್ನಿ ಅನುಷಾ ಕನ್ನಡದ ಹುಡುಗಿ ಎಂಬುದು ಎಲ್ಲರಿಗೂ ಗೊತ್ತಿರುವ ವಿಷ್ಯ. ಆದರೆ ಅನುಷಾ ಯಾರ ಸಹೋದರಿ ಎಂಬುದು ಹಲವರಿಗೆ ತಿಳಿದಿಲ್ಲ.

    ಕನ್ನಡದ ಪ್ರತಿಭಾನ್ವಿತ ನಟ ಕಮ್ ನಿರ್ದೇಶಕ ಅಭಿಷೇಕ್ ಶೆಟ್ಟಿ `ನಮ್ ಗಣಿ ಬಿಕಾಂ ಪಾಸ್’ ಚಿತ್ರದ ಮೂಲಕ ನಟ, ನಿರ್ದೇಶಕನಾಗಿ ಗುರುತಿಸಿಕೊಂಡಿದ್ದರು. ಇತ್ತೀಚೆಗಷ್ಟೇ `ಗಜಾನನ ಗ್ಯಾಂಗ್’ ಸಿನಿಮಾಗೆ ನಿರ್ದೇಶನ ಕೂಡ ಮಾಡಿದ್ದರು. ಸದ್ಯದ ವಿಷ್ಯ, ಅಭಿಷೇಕ್‌ ಅವರ ಅಕ್ಕ ಅನುಷಾ ಶೆಟ್ಟಿ ಜೊತೆ ತೆಲುಗಿನ ನಟ ನಾಗ ಶೌರ್ಯ ಮದುವೆ ನಡೆದಿದೆ.

    ಅಭಿಷೇಕ್ ಶೆಟ್ಟಿ ಮತ್ತು ಅನುಷಾ ಮೂಲತಃ ಕುಂದಾಪುರದವರು. ಇಬ್ಬರು ಒಂದೇ ಕುಟುಂಬದವರು. ಅಭಿಷೇಕ್ ಸಿನಿರಂಗದಲ್ಲಿ ಸುದ್ದಿ ಮಾಡಿದ್ರೆ, ಅನುಷಾ ಶೆಟ್ಟಿ ಇಂಟೀರಿಯರ್ ಡಿಸೈನರ್ ಆಗಿ ಗುರುತಿಸಿಕೊಂಡಿದ್ದಾರೆ. ಅನುಷಾ ಮತ್ತು ನಾಗ್ ಒಬ್ಬರನ್ನೊಬ್ಬರು ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಕುಟುಂಬಸ್ಥರನ್ನ ಒಪ್ಪಿಸಿ, ಇಂದು ಬೆಂಗಳೂರಿನಲ್ಲಿ ಅದ್ದೂರಿಯಾಗಿ ಮದುವೆಯಾಗಿದ್ದಾರೆ. ದಕ್ಷಿಣ ಭಾರತದ ಶೈಲಿಯಲ್ಲಿ ನಾಗ್‌, ಅನುಷಾ ವಿವಾಹ ನಡೆದಿದೆ. ಈ ಮೂಲಕ ನಾಗ ಶೌರ್ಯ ಕರ್ನಾಟಕದ ಅಳಿಯ ಆಗಿದ್ದಾರೆ.

    ಸಹೋದರಿ ಅನುಷಾ ಶೆಟ್ಟಿ ಮದುವೆಯಲ್ಲಿ ನಿರ್ದೇಶಕ ಅಭಿಷೇಕ್ ಶೆಟ್ಟಿ ಮಿಂಚಿದ್ದಾರೆ. ನವಜೋಡಿಗೆ ಶುಭಹಾರೈಸಿ, ಫೋಟೋಗೆ ಪೋಸ್ ಕೊಟ್ಟಿದ್ದಾರೆ. ಸದ್ಯ ವೀಡಿಯೋ ಸಖತ್ ಸದ್ದು ಮಾಡುತ್ತಿದೆ. ಇದನ್ನೂ ಓದಿ:ಕನ್ನಡತಿ ಅನುಷಾ ಶೆಟ್ಟಿ ಜೊತೆ ಹಸೆಮಣೆ ಏರಿದ ತೆಲುಗು ನಟ ನಾಗಶೌರ್ಯ

    ಇನ್ನೂ ಅಭಿಷೇಕ್ ಶೆಟ್ಟಿ ನಿರ್ದೇಶನದ `ಆರಾಮ್ ಅರವಿಂದ್ ಸ್ವಾಮಿ’ ಚಿತ್ರದಲ್ಲಿ ಅನೀಶ್ ತೇಜೇಶ್ವರ್ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರದ ಪ್ರಮುಖ ಅಪ್‌ಡೇಟ್ ಅನ್ನು ಮುಂದಿನ ಡಿಸೆಂಬರ್‌ನಲ್ಲಿ ಚಿತ್ರತಂಡ ಅನೌನ್ಸ್ ಮಾಡಲಿದೆ.

    Live Tv
    [brid partner=56869869 player=32851 video=960834 autoplay=true]

  • ಕನ್ನಡತಿ ಅನುಷಾ ಶೆಟ್ಟಿ ಜೊತೆ ತೆಲುಗು ಸ್ಟಾರ್ ನಾಗ ಶೌರ್ಯ ಮದುವೆ

    ಕನ್ನಡತಿ ಅನುಷಾ ಶೆಟ್ಟಿ ಜೊತೆ ತೆಲುಗು ಸ್ಟಾರ್ ನಾಗ ಶೌರ್ಯ ಮದುವೆ

    ಟಾಲಿವುಡ್‌ನ(Tollywood) ಸಾಕಷ್ಟು ಸಿನಿಮಾಗಳ ಮೂಲಕ ಸಂಚಲನ ಮೂಡಿಸಿರುವ ನಟ ನಾಗ ಶೌರ್ಯ(Nagashourya) ಇದೀಗ ಹಸೆಮಣೆ ಏರಲು ರೆಡಿಯಾಗಿದ್ದಾರೆ. ಮದುವೆಯ ಸುದ್ದಿಯ ಮೂಲಕ ಫ್ಯಾನ್ಸ್‌ಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ.

    ತೆಲುಗಿನ ಯಂಗ್ ಹೀರೋ ನಾಗ ಶೌರ್ಯ, ಬೆಂಗಳೂರಿನ(Bengaluru) ಯುವತಿ ಅನುಷಾ ಶೆಟ್ಟಿ(Anusha Shetty) ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡಲು ರೆಡಿಯಾಗಿದ್ದಾರೆ. ಕರ್ನಾಟಕ ಮೂಲದ ಇಂಟೀಯರ್ ಡಿಸೈನರ್ ಆಗಿ ಕೆಲಸ ಮಾಡುತ್ತಿರುವ ಅನುಷಾ ಶೆಟ್ಟಿ ಜೊತೆ ಹೊಸ ಬಾಳಿಗೆ ನಾಗ ಶೌರ್ಯ ಕಾಲಿಡುತ್ತಿದ್ದಾರೆ. ಅಂದಹಾಗೆ ನವೆಂಬರ್ 20ರಂದು ಬೆಂಗಳೂರಿನಲ್ಲಿ ಅದ್ದೂರಿಯಾಗಿ ಮದುವೆ ನಡೆಯಲಿದೆ.

    ನಟ ನಾಗ್ ಕುಟುಂಬ ಬೆಂಗಳೂರಿಗೆ ಶಿಫ್ಟ್ ಆಗುತ್ತಿದ್ದು, ನವೆಂಬರ್ 19, 20ರಂದು  ಅದ್ದೂರಿ ಮದುವೆ ನಡೆಯಲಿದೆ. ಈ ಮದುವೆಗೆ ಕುಟುಂಬದವರು, ಆಪ್ತರು ಚಿತ್ರರಂಗದ ಗಣ್ಯರು ಭಾಗಿಯಾಗಲಿದ್ದಾರೆ. ತೆಲುಗು ಚಿತ್ರರಂದಿಂದ ಯಾರೆಲ್ಲ ಈ ಸಂಭ್ರಮಕ್ಕೆ ಸಾಕ್ಷಿಯಾಗಲಿದ್ದಾರೆ ಎಂಬ ಕುತೂಹಲ ಹೆಚ್ಚಾಗಿದೆ. ಇದನ್ನೂ ಓದಿ:ಸಮಂತಾ ಬಾಳಲ್ಲಿ ಆಶಾಕಿರಣ: ನಾಗ ಚೈತನ್ಯ ಮನಸ್ಸು ಮಾಡಲಿ ಎಂದು ಫ್ಯಾನ್ಸ್

     

    View this post on Instagram

     

    A post shared by Naga Shaurya (@nagashaurya_universe)

    ನಾಗ್ ಮತ್ತು ಅನುಷಾ ಶೆಟ್ಟಿ ಮದುವೆ ನವೆಂಬರ್ 19, 20ರಂದು ಬೆಂಗಳೂರಿನ ವಿಟ್ಟಲ್ ಮಲ್ಯ ರಸ್ತೆಯಲ್ಲಿರುವ ಜೆಡಬ್ಲ್ಯೂ  ಮ್ಯಾರಿಯಟ್ ಹೋಟೆಲ್‌ನಲ್ಲಿ ಮದುವೆ ಸಮಾರಂಭ ಆಯೋಜಿಸಲಾಗಿದೆ. ನಾಗ್, ಅನುಷಾ ಮದುವೆ (ನ.20)ರಂದು 11.25ರ ಶುಭ ಮುಹೂರ್ತದಲ್ಲಿ ನಡೆಯಲಿದೆ. ಸದ್ಯ ಈ ಜೋಡಿಯ ಮದುವೆ ಆಮಂತ್ರಣ ಪತ್ರಿಕೆ ವೈರಲ್ ಆಗುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ಇಸ್ಪೀಟ್ ಅಡ್ಡೆ ನಡೆಸುತ್ತಿದ್ದ ನಟ ನಾಗಶೌರ್ಯ ತಂದೆ ಬಂಧನ

    ಇಸ್ಪೀಟ್ ಅಡ್ಡೆ ನಡೆಸುತ್ತಿದ್ದ ನಟ ನಾಗಶೌರ್ಯ ತಂದೆ ಬಂಧನ

    ಹೈದರಾಬಾದ್: ಇಸ್ಪೀಟ್ ಅಡ್ಡೆ ನಡೆಸುತ್ತಿದ್ದ ಆರೋಪದ ಮೇರೆಗೆ ಟಾಲಿವುಡ್ ನಟ ಖ್ಯಾತ ನಟ ನಾಗಶೌರ್ಯ ತಂದೆಯನ್ನು ಪೊಲೀಸರು ಬಂಧಿಸಿರುವ ಘಟನೆ ಹೈದರಾಬಾದ್‍ನಲ್ಲಿ ನಡೆದಿದೆ.

    ಹೈದರಾಬಾದ್ ಹೊರ ವಲಯದ ಮಂಚಿರೇವಾ ಪ್ರದೇಶದಲ್ಲಿ ಇಸ್ಪೀಟ್ ಅಡ್ಡೆ ಮೇಲೆ ದಾಳಿ ನಡೆಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ನಾಗಶೌರ್ಯ ತಂದೆ ಶಂಕರ್ ಪ್ರಸಾದ್ ಅವರನ್ನು ಬಂಧಿಸಲಾಗಿದೆ.

    ಪ್ರಸಾದ್ ನರಸಿಂಗಡಿ ಪೊಲೀಸರು ಉಪ್ಪಾರಪಳ್ಳಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಶಂಕರ್ ಪ್ರಸಾದ್ ಅವರು ಕ್ಯಾಸಿನೊ ಕಿಂಗ್‍ಪಿನ್ ಗುಟ್ಟಾ ಸುಮನ್ ಜೊತೆ ಇಸ್ಪೀಟ್ ಆಡುತ್ತಿದ್ದರು ಎಂದು ಆರೋಪಿಸಲಾಗಿದೆ. ಈ ಕುರಿತು ತಾವು ಪುರಾವೆಗಳನ್ನು ಸಂಗ್ರಹಿಸಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ ಎನ್ನಲಾಗಿದೆ. ಬಂಧನದೊಂದಿಗೆ ಮಂಚಿರೇವಾ ಫಾರ್ಮ್ ಹೌಸ್ ಪೋಕರ್ ಪ್ರಕರಣ ಮಹತ್ವದ ತಿರುವು ಪಡೆದುಕೊಂಡಿದೆ. ಇದನ್ನೂ ಓದಿ: ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಪ್ರತಿಕ್ರಿಯೆ ಕೊಡಲ್ಲ: ಬೊಮ್ಮಾಯಿ ಗರಂ

     

    View this post on Instagram

     

    A post shared by Naga Shaurya (@actorshaurya)

    ತೆಲಂಗಾಣ ಅಪರಾದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ತೆಲಂಗಾಣದಲ್ಲಿ ಇಸ್ಪೀಟ್ ಅಡ್ಡೆ ಮೇಲೆ ನಡೆದ ದಾಳಿ ಪ್ರಕರಣದಲ್ಲಿ ಪಿಡಿ ಕಾಯ್ದೆ (ಅಪಾಯಕಾರಿ ಚಟುವಟಿಕೆಗಳ (ಪಿಡಿ) ನಿಯಂತ್ರಣ ಕಾಯ್ದೆ)ಯಡಿ ಕೇಸ್ ದಾಖಲಾಗಲಿದೆ. ಈ ಪ್ರಕರಣದಲ್ಲಿ ಈ ವರೆಗೂ 30ಮಂದಿಯನ್ನು ಬಂಧಿಸಲಾಗಿದ್ದು, ಬಂಧಿತ 30 ಮಂದಿ ಹೈದರಾಬಾದ್‍ನ ದೊಡ್ಡ ವ್ಯಕ್ತಿಗಳಾಗಿದ್ದಾರೆ. ಈ ಇಸ್ಪೀಟ್ ಅಡ್ಡೆ ಆಯೋಜನೆ ವೇಳೆ ದೊಡ್ಡ ಮಟ್ಟದ ಎಣ್ಣೆ ಪಾರ್ಟಿ, ಭೋಜನ ಕೂಟ ಕೂಡ ಇತ್ತು ಎನ್ನಲಾಗಿದೆ. ಇದನ್ನೂ ಓದಿ:  ಬಿಟ್‌ಕಾಯಿನ್‌ ಹಗರಣದಲ್ಲಿ ಸಿಎಂ ತಲೆದಂಡ ಪಡೆಯಲಿದೆ: ಪ್ರಿಯಾಂಕ್ ಖರ್ಗೆ