Tag: Nagalakshmi Chowdhary

  • `ಡಿ’ ಫ್ಯಾನ್ಸ್‌ನಿಂದ ಅಶ್ಲೀಲ ಕಾಮೆಂಟ್ – ರಮ್ಯಾ ದೂರು ಕೊಟ್ರೆ 7 ವರ್ಷ ಜೈಲು ಗ್ಯಾರಂಟಿ: ಮಹಿಳಾ ಆಯೋಗ

    `ಡಿ’ ಫ್ಯಾನ್ಸ್‌ನಿಂದ ಅಶ್ಲೀಲ ಕಾಮೆಂಟ್ – ರಮ್ಯಾ ದೂರು ಕೊಟ್ರೆ 7 ವರ್ಷ ಜೈಲು ಗ್ಯಾರಂಟಿ: ಮಹಿಳಾ ಆಯೋಗ

    – ಸ್ವಯಂಪ್ರೇರಿತ ದೂರು ದಾಖಲಿಸಲು ನಿರ್ಧಾರ

    ಬೆಂಗಳೂರು: ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾಗೆ (Actress Ramay) ಇನ್‌ಸ್ಟಾಗ್ರಾಂ (Instagram) ಖಾತೆಯಲ್ಲಿ ಅಶ್ಲೀಲ ಮೆಸೇಜ್ ಬರುತ್ತಿರುವ ಹಿನ್ನೆಲೆ ಮಹಿಳಾ ಆಯೋಗ (Women Commission) ಸ್ವಯಂಪ್ರೇರಿತ ದೂರು ದಾಖಲಿಸಲು ನಿರ್ಧರಿಸಿದೆ. ಅಲ್ಲದೇ ನಟಿ ರಮ್ಯಾ ಅಶ್ಲೀಲ ಕಾಮೆಂಟ್ ಮಾಡಿದವರ ವಿರುದ್ಧ ದೂರು ಕೊಟ್ಟರೆ, 3 ರಿಂದ 7 ವರ್ಷ ಜೈಲು ಶಿಕ್ಷೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಸಿದೆ.

    ಈ ಕುರಿತು ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ `ಪಬ್ಲಿಕ್ ಟಿವಿ’ ಜೊತೆ ಮಾತನಾಡಿ, ರಮ್ಯಾ ಅಂತಲ್ಲ, ಬೇರೆ ಬೇರೆ ಕಡೆ ಏನಾದರೂ ಆದಾಗ ಈ ತರ ಕೆಟ್ಟದಾಗಿ ಕಮೆಂಟ್ ಮಾಡುತ್ತಾರೆ. ತುಂಬಾ ಜನ ಸೆಲೆಬ್ರಿಟಿಗಳು ನಮ್ಮಲ್ಲಿಗೆ ಬಂದು ದೂರು ಕೊಡುತ್ತಾರೆ. ಯಾರು ಅಶ್ಲೀಲ ಪದವನ್ನು ಬಳಕೆ ಮಾಡಬೇಡಿ. ಯಾವ ಮಹಿಳೆಗೂ ಕೂಡ ಅಗೌರವ ತೋರಬೇಡಿ. ನಿಮ್ಮ ಕೆಟ್ಟ ಪದಬಳಕೆಯಿಂದಾಗಿ ಮುಂದೊಂದು ದಿನ ಜೈಲಿಗೂ ಹೋಗಬಹುದು. ಕಾನೂನಿನ ಪ್ರಕಾರ ಇದು ದೊಡ್ಡ ಅಪರಾಧ. ಈ ರೀತಿ ಒಬ್ಬರನ್ನು ನೋಡಿ ಇನ್ನೊಬ್ಬರು ಮಾಡೋದು ಬೇಡ. ಇದು ಸರಿಯಲ್ಲ. ಒಂದು ವೇಳೆ ರಮ್ಯಾ ದೂರು ದಾಖಲು ಮಾಡಿದರೆ ಖಂಡಿತಾ ಎಫ್‌ಐಆರ್ ಆಗುತ್ತದೆ. ಬಳಿಕ ಮೂರರಿಂದ ಏಳು ವರ್ಷ ಜೈಲು ಶಿಕ್ಷೆಯಾಗುವ ಸಾಧ್ಯತೆಯಿರುತ್ತದೆ ಎಂದು ಎಚ್ಚರಿಸಿದ್ದಾರೆ.ಇದನ್ನೂ ಓದಿ: `ಡಿ ಬಾಸ್‌’ ಮೇಲೆ ಗೌರವ ಇರೋರು ಯಾವುದಕ್ಕೂ ರಿಯಾಕ್ಟ್‌ ಮಾಡಬೇಡಿ: ಸೆಲೆಬ್ರಿಟಿಗಳಿಗೆ ಫ್ಯಾನ್ಸ್‌ ಪೇಜ್‌ನಲ್ಲಿ ಮನವಿ

    ಸೋಷಿಯಲ್ ಮೀಡಿಯಾದಲ್ಲಿ ಮಾನಹಾನಿ ಪ್ರಕರಣ ಮಾಡಿದರೆ ಅದಕ್ಕೆ ತುಂಬಾ ಗಂಭೀರ ಶಿಕ್ಷೆ ಇದೆ. ಬಹುತೇಕರಿಗೆ ಇದರ ಬಗ್ಗೆ ಅರಿವೇ ಇಲ್ಲ. ಸದ್ಯ ಮಹಿಳಾ ಆಯೋಗ ರಮ್ಯಾ ವಿಚಾರವಾಗಿ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ಪೊಲೀಸ್ ಕಮೀಷನರ್‌ಗೆ ಪತ್ರ ಬರೆಯಲು ನಿರ್ಧರಿಸಿದೆ. ಇಲ್ಲದೇ ಹೋದರೆ ಇದೇ ಮುಂದುವರೆಯುತ್ತದೆ ಎಂದು ತಿಳಿಸಿದ್ದಾರೆ.

    ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ರೇಣುಕಾಸ್ವಾಮಿ ಕುಟುಂಬದ ಪರವಾಗಿ ನಿಂತ ಕಾರಣಕ್ಕೆ ನಟಿ ರಮ್ಯಾ ಪದೇ ಪದೇ ದರ್ಶನ್ ಫ್ಯಾನ್ಸ್ ಆಕ್ರೋಶಕ್ಕೆ ಕಾರಣವಾಗುತ್ತಿದ್ದಾರೆ. ಜೊತೆಗೆ ಡಿ-ಬಾಸ್ ಅಭಿಮಾನಿಗಳು ನಿರಂತರವಾಗಿ ರಮ್ಯಾಗೆ ಸೋಷಿಯಲ್ ಮೀಡಿಯಾ ಮೂಲಕ ಅಶ್ಲೀಲ ಮೆಸೇಜ್ ಕಳುಹಿಸುತ್ತಿದ್ದಾರೆ. ಇದರ ಬೆನ್ನಲ್ಲೇ ನಟಿ ಕೂಡ ದರ್ಶನ್ ಫ್ಯಾನ್ಸ್ ವಿರುದ್ಧ ಗರಂ ಆಗಿದ್ದಾರೆ. ಜೊತೆಗೆ ದರ್ಶನ್ ಫ್ಯಾನ್ಸ್ ಹೆಸರಿನಲ್ಲಿ ರಮ್ಯಾಗೆ ಅಶ್ಲೀಲ ಕಮೆಂಟ್ ಮಾಡಿದ್ದವರ ಅಕೌಂಟ್‌ಗಳನ್ನು ಬಹಿರಂಗೊಳಿಸಿದ್ದಾರೆ.ಇದನ್ನೂ ಓದಿ: `I Stand With Ramya’ – ಸ್ಯಾಂಡಲ್‌ವುಡ್ ಕ್ವೀನ್ ಬೆಂಬಲಕ್ಕೆ ನಿಂತ ಒಳ್ಳೆ ಹುಡ್ಗ ಪ್ರಥಮ್

  • PUBLiC TV Impact | ಮೆಟ್ರೋ ನಿಲ್ದಾಣದಲ್ಲಿ ಆರೈಕೆ ಕೇಂದ್ರ ಸ್ಥಾಪಿಸುವಂತೆ BMRCLಗೆ ಮಹಿಳಾ ಆಯೋಗ ಪತ್ರ

    PUBLiC TV Impact | ಮೆಟ್ರೋ ನಿಲ್ದಾಣದಲ್ಲಿ ಆರೈಕೆ ಕೇಂದ್ರ ಸ್ಥಾಪಿಸುವಂತೆ BMRCLಗೆ ಮಹಿಳಾ ಆಯೋಗ ಪತ್ರ

    ಬೆಂಗಳೂರು: ಎರಡು ದಿನದ ಹಿಂದಷ್ಟೇ ಮೆಟ್ರೋ ನಿಲ್ದಾಣದಲ್ಲಿ ತಾಯಿಯೊಬ್ಬಳು ಮಗುವಿಗೆ ಹಾಲುಣಿಸಲು ಪರದಾಡಿದ್ದ ಘಟನೆಯನ್ನು ಪಬ್ಲಿಕ್ ಟಿವಿ (PUBLiC TV) ವರದಿ ಮಾಡಿತ್ತು. ಈ ಬೆನ್ನಲ್ಲೇ ಘಟನೆ ಬಗ್ಗೆ ಅಲರ್ಟ್ ಆದ ರಾಜ್ಯ ಮಹಿಳಾ ಆಯೋಗ (Karnataka State Commission for Women) ಬಿಎಂಆರ್‌ಎಲ್‌ಗೆ (BMRCL) ಪತ್ರ ಬರೆದು ಆರೈಕೆ ಕೇಂದ್ರ ಸ್ಥಾಪಿಸುವಂತೆ ಸೂಚಿಸಿದೆ.

    ಬೆಂಗಳೂರಿನ ಮೆಟ್ರೋ ನಿಲ್ದಾಣದಲ್ಲಿ ಪ್ರಯಾಣಿಸಲು ಬಂದ ತಾಯಿಯೊಬ್ಬಳು ತನ್ನ ಮಗುವಿಗೆ ಹಾಲುಣಿಸಲು ಪರದಾಡಿದ್ದ ವಿಡಿಯೋ ಸಾಕಷ್ಟು ಸದ್ದು ಮಾಡಿತ್ತು. ಈ ಬಗ್ಗೆ ಪಬ್ಲಿಕ್ ಟಿವಿ ಕೂಡ ಸುದ್ದಿ ಬಿತ್ತರಿಸುವ ಮೂಲಕ ಮೆಟ್ರೋ ಅಧಿಕಾರಿಗಳನ್ನು ಎಚ್ಚರಿಸುವ ಕೆಲಸ ಮಾಡಿತ್ತು. ಈ ಬೆನ್ನಲ್ಲೇ ಘಟನೆ ಸಂಬಂಧ ರಾಜ್ಯ ಮಹಿಳಾ ಆಯೋಗ ಬಿಎಂಆರ್‌ಎಲ್‌ಗೆ ಪತ್ರ ಬರೆದಿದೆ.ಇದನ್ನೂ ಓದಿ: ಬೆಳಗಾವಿ: ಗಣೇಶ ಮೂರ್ತಿ ವಿಸರ್ಜನೆ ವೇಳೆ ಮೂವರಿಗೆ ಚಾಕು ಇರಿತ – ಪರಿಸ್ಥಿತಿ ಉದ್ವಿಗ್ನ

    ಸೋಮವಾರ ಟ್ರಿನಿಟಿ ಮೆಟ್ರೋ ನಿಲ್ದಾಣಕ್ಕೆ (Trinity Metro Station) ಬಂದಿದ್ದ ತಾಯಿ ತನ್ನ ಮಗುವಿಗೆ ಹಾಲುಣಿಸಲು ಮೆಟ್ರೋ ನಿಲ್ದಾಣದ ಒಳಭಾಗದಲ್ಲಿ ಪರದಾಡಿದ್ದರು. ಅಕ್ಕಪಕ್ಕದ ಗೋಡೆ ಮರೆಯಲ್ಲಿ ನಿಂತು, ನೆಲದ ಮೇಲೆ ಕೂತು ಪರದಾಡಿದ್ದ ಮಹಿಳೆ ವಿಡಿಯೋ ವೈರಲ್ ಆಗಿತ್ತು. ರೈಲ್ವೆ ನಿಲ್ದಾಣ, ಬಸ್ ನಿಲ್ದಾಣಗಳಲ್ಲಿ ಆರೈಕೆ ಕೇಂದ್ರವಿದೆ. ಮೆಟ್ರೋ ನಿಲ್ದಾಣಗಳಲ್ಲಿ ಯಾಕೆ ಇಲ್ಲ ಎನ್ನುವ ಪ್ರಶ್ನೆ ಉದ್ಬವ ಆಗಿತ್ತು. ಈ ಬಗ್ಗೆ ಪಬ್ಲಿಕ್ ಟಿವಿ ಕೂಡ ಅಧಿಕಾರಿಗಳಿಗೆ ಪ್ರಶ್ನೆಗಳಿಟ್ಟಿತ್ತು. ಈ ಬೆನ್ನಲ್ಲೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ (Nagalakshmi Chowdhary) ಬಿಎಂಆರ್‌ಸಿಎಲ್ ಎಂಡಿಗೆ ಪತ್ರ ಬರೆದು ಕೂಡಲೇ ಆರೈಕೆ ಕೇಂದ್ರ ಸ್ಥಾಪಿಸುವಂತೆ ಆಗ್ರಹಿಸಿದ್ದಾರೆ.

    ಪತ್ರದಲ್ಲೇನಿದೆ….?
    * ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಗಳಲ್ಲಿ ಮಹಿಳೆಯರ ಆರೈಕೆ ಕೇಂದ್ರಗಳು ಈಗಾಗಲೇ ಇವೆ.
    * ಆದರಂತೆ ನಮ್ಮ ಮೆಟ್ರೋದಲ್ಲಿ ಮಹಿಳೆಯ ಆರೈಕೆ ಕೇಂದ್ರ ಸ್ಥಾಪನೆ ಆಗಬೇಕು.
    * ಸೆ.16 ರಂದು ತಾಯಿಯೊಬ್ಬಳು ಮಗುವಿಗೆ ಹಾಲುಣಿಸಲು ಮೆಟ್ರೋ ಸ್ಟೇಷನ್‌ನಲ್ಲಿ ಪರದಾಡುತ್ತಿರುವ ಸುದ್ದಿ ಪ್ರಸಾರವಾಗಿದೆ.
    * ಪ್ರತಿ ಮೆಟ್ರೋ ನಿಲ್ದಾಣಗಳಲ್ಲಿ ಆರೈಕೆ ಕೇಂದ್ರ ನಿರ್ಮಿಸಲು ಕ್ರಮವಹಿಸುವಂತೆ ಪತ್ರ.ಇದನ್ನೂ ಓದಿ: ಮೋದಿ ಅದ್ಭುತ ವ್ಯಕ್ತಿ, ಮುಂದಿನ ವಾರ ಅವರನ್ನ ಭೇಟಿಯಾಗ್ತೀನಿ: ಟ್ರಂಪ್‌

    ಈ ಬಗ್ಗೆ ಮಹಿಳಾ ಆಯೋಗ ಕ್ರಮಕ್ಕೆ ಆಗ್ರಹಿಸಿದೆ. ಕೂಡಲೇ ಮೆಟ್ರೋ ಅಧಿಕಾರಿಗಳು ಈ ಬಗ್ಗೆ ಎಚ್ಚೆತ್ತುಕೊಂಡು ಕ್ರಮ ಕೈಗೊಂಡರೆ ತಾಯಿ ಮತ್ತು ಮಕ್ಕಳ ಪರದಾಟ ತಪ್ಪಲಿದೆ.