Tag: Nagarjun

  • ಡಿಎಸ್ಪಿ ಆಲ್ಬಂ ರಿಲೀಸ್ ಮಾಡಿದ ಕಮಲ್ ಹಾಸನ್, ನಾಗಾರ್ಜುನ

    ಡಿಎಸ್ಪಿ ಆಲ್ಬಂ ರಿಲೀಸ್ ಮಾಡಿದ ಕಮಲ್ ಹಾಸನ್, ನಾಗಾರ್ಜುನ

    ಕ್ಷಿಣ ಭಾರತದ ಅತ್ಯಂತ ಜನಪ್ರಿಯ ಸಂಗೀತ ನಿರ್ದೇಶಕ ಮತ್ತು ರಾಕ್ಸ್ಟಾರ್ ಎಂದೇ ಜನಪ್ರಿಯರಾಗಿರುವ ದೇವಿ ಶ್ರೀಪ್ರಸಾದ್ (Devi Sriprasad) ಅಲಿಯಾಸ್ ಡಿಎಸ್ಪಿ, ಟಿ-ಸೀರೀಸ್ ಜೊತೆಗೆ ಕೈಜೋಡಿಸಿ ‘ಓ ಪರಿ’ (O Pari) ಎಂಬ ಹಿಂದಿ ಸಿಂಗಲ್ ಹೊರತಂದಿರುವುದು, ಅದನ್ನು ಇತ್ತೀಚೆಗೆ ಮುಂಬೈನಲ್ಲಿ ರಣವೀರ್ ಸಿಂಗ್ ಬಿಡುಗಡೆ ಮಾಡಿದ್ದು ಗೊತ್ತೇ ಇದೆ. ಇದೊಂದು ಪ್ಯಾನ್ ಇಂಡಿಯಾ ಹಾಡಾಗಿದ್ದು, ಹಿಂದಿಯಲ್ಲದೆ, ಕನ್ನಡ, ತೆಲುಗು, ತಮಿಳು ಮತ್ತು ಮಲಯಾಳಂನಲ್ಲೂ ಮೂಡಿಬಂದಿದೆ. ಈಗ ‘ಓ ಪರಿ’ಯ ತಮಿಳಿನ ಅವತರಣಿಕೆಯಾದ ‘ಓ ಪೆಣ್ಣೆ’ ಮತ್ತು ತೆಲುಗು ಅವತರಣಿಕೆಯಾದ ‘ಓ ಪಿಲ್ಲ’ ಹಾಡುಗಳನ್ನು ಇತ್ತೀಚೆಗೆ ಬಿಡುಗಡೆ ಮಾಡಲಾಗಿದೆ. ತಮಿಳು ಮತ್ತು ತೆಲುಗು ‘ಬಿಗ್ ಬಾಸ್’ ಕಾರ್ಯಕ್ರಮಗಳ ಲಾಂಚ್ನಲ್ಲಿ ಎರಡೂ ಹಾಡುಗಳು ಬಿಡುಗಡೆಯಾಗಿದ್ದು, ತಮಿಳು ಹಾಡನ್ನು ಕಮಲ್ ಹಾಸನ್ ಬಿಡುಗಡೆ ಮಾಡಿದರೆ, ತೆಲುಗು ಹಾಡನ್ನು ನಾಗಾರ್ಜುನ ಬಿಡುಗಡೆ ಮಾಡಿ ಡಿಎಸ್ಪಿಗೆ ಶುಭ ಕೋರಿದ್ದಾರೆ.

    ‘ಓ ಪಿಲ್ಲ’ ಹಾಡನ್ನು ಬಿಡುಗಡೆ ಮಾಡಿ ಮಾತನಾಡಿರುವ ನಾಗಾರ್ಜುನ (Nagarjun), ‘’ಓ ಪರಿ’ ಹಾಡು ಸೂಪರ್ ಹಿಟ್ ಆಗಿದೆ, ಈ ಹಾಡು ತೆಲುಗಿನಲ್ಲೂ ಮೂಡಿಬರಬೇಕಿತ್ತು ಅಂದುಕೊಳ್ಳುತ್ತಿರುವಾಗಲೇ, ಡಿಎಸ್ಪಿ ತೆಲುಗು ಹಾಡಿನೊಂದಿಗೆ ಬಂದಿದ್ದಾರೆ. ಈ ಹಾಡು ಎಲ್ಲರಿಗೂ ಇಷ್ಟವಾಗುತ್ತದೆ ಎಂಬ ನಂಬಿಕೆ ಇದೆ. ನನಗೆ ಮೊದಲಿನಿಂದಲೂ ಡಿಎಸ್ಪಿ ಅವರ ಪ್ರತಿಭೆ ಕುರಿತು ವಿಶೇಷವಾದ ಕುತೂಹಲ, ಆಸಕ್ತಿ ಎರಡೂ ಇದೆ. ಅವರು ಹೇಗೆ ಇಷ್ಟೊಂದು ಅದ್ಭುತವಾಗಿ ಕೆಲಸ ಮಾಡುವುದರ ಜೊತೆಗೆ, ಹೇಗೆ ಈ ರೀತಿ ಹಿಟ್ ಹಾಡುಗಳನ್ನು ಕೊಡುವುದಕ್ಕೆ ಸಾಧ್ಯ ಎಂಬ ಪ್ರಶ್ನೆ ಇದೆ. ಹಾಗಿರುವಾಗಲೇ ಡಿಎಸ್ಪಿ ಇನ್ನೊಂದು ಅದ್ಭುತ ಹಾಡಿನೊಂದಿಗೆ ವಾಪಸ್ಸಾಗಿದ್ದಾರೆ’ ಎಂದಿದ್ದಾರೆ ನಾಗಾರ್ಜುನ. ಇದನ್ನೂ ಓದಿ:ಬಿಗ್ ಬಾಸ್ ಆಟಕ್ಕೆ ಫುಲ್ ಸ್ಟಾಪ್ ಇಡಲು ನಿರ್ಧರಿಸಿದ ಆರ್ಯವರ್ಧನ್ ಗುರೂಜಿ

    ಡಿಎಸ್ಪಿ ತಮಗೆ ಬಹಳ ವರ್ಷಗಳಿಂದ ಗೊತ್ತು ಎಂದು ಹೇಳಿಕೊಂಡಿರುವ ಕಮಲ್ ಹಾಸನ್ (Kamal Haasan), ‘ಅವರು ತಮ್ಮ ಹಾಡು ಮತ್ತು ಪ್ರತಿಭೆಯಿಂದ ನನ್ನನ್ನು ಖುಷಿಪಡಿಸುತ್ತಲೇ ಇದ್ದಾರೆ. ತಮ್ಮ ಸಾಧನೆಗಳಿಂದ ಹೊಸಹೊಸ ಮೈಲಿಗಲ್ಲುಗಳನ್ನು ತಲುಪುತ್ತಿದ್ದಾರೆ. ಪ್ರತಿಯೊಬ್ಬ ಸಂಗೀತ ನಿರ್ದೇಶಕರು ಸಹ ಈ ನಿಟ್ಟಿನಲ್ಲಿ ಹೊಸ ಸಾಧನೆಗಳನ್ನು ಮಾಡುವುದರ ಬಗ್ಗೆ ಯೋಚಿಸಬೇಕು. ಅವರ ಸಾಧನೆ ಮತ್ತು ಕೆಲಸಗಳಿಗೆ ಪ್ರತಿಯಾಗಿ ಅವರಿಗೆ ಯಶಸ್ಸು ಸಿಗುತ್ತಲೇ ಇದ್ದು, ಈಗ ಓ ಪರಿ ಮೂಲಕ ಮತ್ತೊಂದು ದೊಡ್ಡ ಯಶಸ್ಸನ್ನು ಕಂಡಿದ್ದಾರೆ ಡಿಎಸ್ಪಿ. ಅವರು ಇನ್ನಷ್ಟು ಎತ್ತರಗಳನ್ನು ಕಾಣಲಿ ಎನ್ನುವುದರ ಜೊತೆಗೆ, ಅವರಿಗೆ ಬೆನ್ನೆಲುಬಾಗಿ ನಿಂತಿರುವ ಭೂಷಣ್ ಕುಮಾರ್‌ರಂತಹವರ ಸಹಕಾರ ಹೀಗೆಯೇ ಮುಂದುವರೆಯಲಿ’ ಎಂದು ಹಾರೈಸಿದ್ದಾರೆ.

    ಕಮಲ್ ಹಾಸನ್ ಮತ್ತು ನಾಗಾರ್ಜುನ ಅವರ ಸಹಕಾರ ಮರೆಯುವುದಕ್ಕೆ ಸಾಧ್ಯವೇ ಇಲ್ಲ ಎನ್ನುವ ಡಿಎಸ್ಪಿ, ಅವರಿಬ್ಬರ ಪ್ರೋತ್ಸಾಹವಿಲ್ಲದೆ ಇಷ್ಟು ದೂರ ಬರುವುದಕ್ಕೆ ಸಾಧ್ಯವೇ ಇಲ್ಲ ಎಂದಿದ್ದಾರೆ. ಇಂಥದ್ದೊಂದು ಅಂತಾರಾಷ್ಟ್ರೀಯ ಮಟ್ಟದ ಹಾಡಿನ ಬಗ್ಗೆ ನಾನು ಮೊದಲು ಪ್ರಸ್ತಾಪ ಮಾಡಿದ್ದು ಕಮಲ್ ಹಾಸನ್ ಅವರ ಬಳಿ. ಅವರ ಪ್ರೋತ್ಸಾಹದ ಮಾತುಗಳು ನನ್ನನ್ನು ಈ ಹಾಡು ಸಂಯೋಜಿಸುವಂತೆ ಮಾಡಿತು. ಅವರ ಸಂಗೀತಾಸಕ್ತಿಯೇ ನಮ್ಮಿಬ್ಬರನ್ನೂ ಇಷ್ಟು ಹತ್ತಿರಕ್ಕೆ ಸೇರಿಸಿದ್ದು. ಅದೇ ಕಾರಣಕ್ಕೆ ಈ ಹಾಡನ್ನು ಅವರಿಂದಲೇ ಬಿಡುಗಡೆ ಮಾಡಿಸಲಾಯಿತು ಎಂದು ಹೇಳಿಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮದುವೆ ಬದಲು ವಿಚ್ಛೇದನವನ್ನು ಸಂಭ್ರಮಿಸಬೇಕು: ರಾಮ್ ಗೋಪಾಲ್ ವರ್ಮಾ

    ಮದುವೆ ಬದಲು ವಿಚ್ಛೇದನವನ್ನು ಸಂಭ್ರಮಿಸಬೇಕು: ರಾಮ್ ಗೋಪಾಲ್ ವರ್ಮಾ

    ಹೈದರಾಬಾದ್: ಟಾಲಿವುಡ್ ನಟಿ ಸಮಂತಾ ಹಾಗೂ ನಾಗಚೈತನ್ಯ ಇಂದು ತಾವು ವಿಚ್ಛೇದನ ಪಡೆದುಕೊಳ್ಳುವುದಾಗಿ ಅಧಿಕೃತವಾಗಿ ತಿಳಿಸಿದ್ದು, ಈ ಬೆನ್ನಲ್ಲೇ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರು ತಮ್ಮದೇ ಸ್ಟೈಲಿನಲ್ಲಿ ಸರಣಿ ಟ್ವೀಟ್ ಮಾಡುವ ಮೂಲಕ ಮತ್ತೆ ಸುದ್ದಿಯಾಗಿದ್ದಾರೆ.

    ಹೌದು. ಇಂದು ನಟ ಹಾಗೂ ನಟಿ ಡಿವೋರ್ಸ್ ನೀಡುತ್ತಿರುವ ವಿಚಾರ ಸುದ್ದಿಯಾಗುತ್ತಿದ್ದಂತೆಯೇ ರಾಮ್ ಗೋಪಾಲ್ ವರ್ಮಾ ಅವರು, ಮದುವೆ ಬದಲು ವಿಚ್ಛೇದನವನ್ನು ಸಂಭ್ರಮಿಸಬೇಕು ಎಂದು ಟ್ವೀಟ್ ಮಾಡಿದ್ದಾರೆ. ವಿಚ್ಚೇದನವನ್ನು ಸಂಭ್ರಮಿಸಬೇಕು ಅನ್ನೋ ನಿರ್ದೇಶಕರ ಟ್ವೀಟ್ ಗಳು ಸದ್ಯ ಎಲ್ಲರ ಗಮನ ಸೆಳೆದಿದೆ. ಇದನ್ನೂ ಓದಿ:  ದಾಂಪತ್ಯಕ್ಕೆ ಅಂತ್ಯ ಹಾಡಿದ ಸಮಂತಾ, ನಾಗ ಚೈತನ್ಯ

    ಇತ್ತೀಚೆಗೆ ಮದುವೆಗಳನ್ನು ಅಲ್ಲ, ಬದಲಾಗಿ ಡಿವೋರ್ಸ್‍ಗಳನ್ನು ಸಂಭ್ರಮಿಸಬೇಕಾದ ಪರಿಸ್ಥಿತಿ ಬಂದಿದೆ. ಮದುವೆಗಳು ಸಾವಿದ್ದಂತೆ, ಡಿವೋರ್ಸ್ ಪುನರ್ಜನ್ಮ ಇದ್ದಂತೆ. ಮದುವೆಗಳು ನರಕದಲ್ಲಿ ಹಾಗೂ ಡಿವೋರ್ಸ್ ಗಳು ಸ್ವರ್ಗದಲ್ಲಿ ನಿಶ್ಚಯವಾಗಿರುತ್ತವೇ ಎಂದು ತಮ್ಮದೇ ಶೈಲಿಯಲ್ಲಿ ನಿರ್ದೇಶಕರು ಬರೆದುಕೊಂಡಿರುವುದು ಎಲ್ಲರ ಗಮನ ಸೆಳೆದಿದೆ. ಅಲ್ಲದೆ ಆರ್‍ಜಿವಿ ಟ್ವೀಟ್ ಗೆ ಸಾಕಷ್ಟು ಪರ-ವಿರೋಧ ಕಾಮೆಂಟ್ ಗಳು ಹರಿದು ಬಂದಿವೆ.

    4 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಸ್ಟಾರ್ ಜೋಡಿ ಇಂದು ಅಧಿಕೃತವಾಗಿ ತಮ್ಮ ಡಿವೋರ್ಸ್ ವಿಚಾರ ಬಹಿರಂಗಪಡಿಸುವ ಮೂಲಕ ಗಾಸಿಪ್ ಗಳಿಗೆ ತೆರೆ ಎಳೆದಿದ್ದಾರೆ. ನಮ್ಮ ಖಾಸಗಿ ಬದುಕನ್ನು ಎಲ್ಲರೂ ಗೌರವಿಸಿ. ಇಂತಹ ಸಂದರ್ಭಗಳಲ್ಲಿ ನಮ್ಮ ಜೊತೆ ನಿಲ್ಲಿ ಎಂದು ಅಭಿಮಾನಿಗಳಲ್ಲಿ ಸಮಂತಾ ಹಾಗೂ ನಾಗಚೈತನ್ಯ ಮನವಿ ಮಾಡಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಅಪ್ಲೋಡ್ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಭಾರವಾದ ಹೃದಯದಿಂದ ಸೊಸೆ ಕುರಿತಾಗಿ ಬರೆದ ನಾಗರ್ಜುನ್

    ಇತ್ತ ತಮ್ಮ ಸೊಸೆ ಹಾಗೂ ಪುತ್ರನ ದಾಂಪತ್ಯದಲ್ಲಿ ಬಿರುಕು ಮೂಡಿದ್ದರ ಕುರಿತು ಬೇಸರ ವ್ಯಕ್ತಪಡಿಸಿರುವ ನಾಗಾರ್ಜುನ್, ಅತ್ಯಂತ ಭಾರವಾದ ಹೃದಯದಿಂದ ನಾನು ಇದನ್ನು ಹೇಳುತ್ತೇನೆ. ಸ್ಯಾಮ್ ಮತ್ತು ಚಾಯ್ ನಡುವೆ ನಡೆದದ್ದು ತುಂಬಾ ದುರದೃಷ್ಟಕರವಾಗಿದೆ. ದಂಪತಿ ಮಧ್ಯೆ ಏನಾಗುತ್ತಿದೆ ಎನ್ನುವುದು ತುಂಬಾ ವೈಯಕ್ತಿಕವಾಗಿದೆ. ಇಬ್ಬರು ನನಗೆ ಪ್ರಿಯರು. ನನ್ನ ಕುಟುಂಬವು ಸ್ಯಾಮ್ ಜೊತೆ ಕಳೆದ ಕ್ಷಣಗಳನ್ನು ಗೌರವಿಸುತ್ತದೆ. ಅವಳು ಯಾವಾಗಲೂ ನಮಗೆ ಪ್ರಿಯಳಾಗಿರುತ್ತಾಳೆ. ದೇವರು ಅವರಿಬ್ಬರಿಗೂ ಶಕ್ತಿಯನ್ನು ನೀಡಲಿ ಎಂದು ಬೇಸರ ಹೊರಹಾಕಿದ್ದಾರೆ.

  • ಇಬ್ಬರು ಪ್ರೀತಿಸಿ ಒಪ್ಪಿಯೇ ಮದ್ವೆಯಾಗಿದ್ದು: ಚೈತ್ರಾ ಕೊಟ್ಟೂರು

    ಇಬ್ಬರು ಪ್ರೀತಿಸಿ ಒಪ್ಪಿಯೇ ಮದ್ವೆಯಾಗಿದ್ದು: ಚೈತ್ರಾ ಕೊಟ್ಟೂರು

    – ಸಿನ್ಮಾದವಳು, ಜಾತಿ ಅಂತ ನೆಪ ಹೇಳ್ತಿದ್ದಾರೆ
    – ನಾಳೆ ಅಂತ್ಯವಾಗುತ್ತಾ ಮ್ಯಾರೇಜ್ ಮಿಸ್ಟರಿ?

    ಕೋಲಾರ: ಬಿಗ್‍ಬಾಸ್ ಸ್ಪರ್ಧಿ ಮತ್ತು ಬರಹಗಾರ್ತಿ ಚೈತ್ರಾ ಕೊಟ್ಟೂರು ಮದುವೆಗೆ ಸಿನಿಮಾ ಮತ್ತು ಜಾತಿ ಅಡ್ಡವಾಗಿದೆಯಾ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಚೈತ್ರಾ ಕೊಟ್ಟೂರು ಮದುವೆ, ಪ್ರೀತಿಗೆ ಸಂಬಂಧಿಸಿದ ಹಲವು ವಿಷಯಗಳನ್ನ ಹಂಚಿಕೊಂಡಿದ್ದಾರೆ.

    ಬಿಗ್‍ಬಾಸ್ ಮುಗಿಸಿ ಬಂದ ನಂತರ ಫೇಸ್‍ಬುಕ್ ನಲ್ಲಿ ಪರಿಚಯವಾಯ್ತು, ಎರಡ್ಮೂರು ಬಾರಿ ಸಿಕ್ಕ ನಂತರ ಇಬ್ಬರು ಆಕರ್ಷಿತವಾದೆವು, ನಂತರ ಹಾಗೇ ಆಪ್ತತೆ ಬೆಳಿಯಿತು. ಆಗ ಲಾಕ್‍ಡೌನ್ ಆಗಿದ್ದರಿಂದ ಮನೆಯಲ್ಲಿ ಭೇಟಿ ಮಾಡಿದ್ದೀವಿ. ಪರಸ್ಪರ ಪ್ರೀತಿ ಮಾಡಿ ಇಬ್ಬರು ಮನೆಗೆ ಹೋಗಿ ಬರೋದು ನಡೆದಿತ್ತು. ನಾಗಾರ್ಜುನ್ ಹುಟ್ಟುಹಬ್ಬವನ್ನ ನಾನು ಅದ್ಧೂರಿಯಾಗಿ ಆಚರಿಸಿ, ಚಿನ್ನದ ಬ್ರೆಸ್ ಲೆಟ್ ಕೂಡ ಉಡುಗೊರೆಯಾಗಿ ಕೊಟ್ಟು ಮೂರು ಲಕ್ಷ ಖರ್ಚು ಮಾಡಿದೆ. ಆಚರಣೆಯ ಫೋಟೊಗಳನ್ನು ನನ್ನ ವೈಯಕ್ತಿಕ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದೇನೆ ಎಂದರು.

    ಆಪ್ತವಾಗಿದ್ದ ಹುಡುಗ ಮದುವೆ ವಿಚಾರ ಗಂಭೀರವಾಗ್ತಿದ್ದಂತೆ ಬೇರೆಯ ರೀತಿ ನಡೆದುಕೊಳ್ಳಲು ಶುರುಮಾಡಿದ. ಇಬ್ಬರ ಒಪ್ಪಿಗೆ ಮೇರೆಗೆ ಮದುವೆ ನಡೆಯಿತು. ಮದುವೆ ನಂತ್ರ ಮನೆಯವರ ನೆಪ, ಜಾತಿ ನೆಪ, ಅಂತಸ್ಥಿನ ನೆಪ ಹೇಳುವ ಮೂಲಕ ಸದ್ಯ ನನ್ನನ್ನು ಅವಾಯ್ಡ್ ಮಾಡುತ್ತಿದ್ದಾನೆ. ನಾನು ಸಿನಿಮಾದವಳು ಎಂಬ ನೆಪ ಅಂತ ಆತನ ಮನೆಯವರು ಬೇಡ ಎನ್ನುತ್ತಿದ್ದಾರೆ.

    ಮೈಸೂರು ರೋಡಲ್ಲಿರುವ ಬಿಜಿಎಸ್ ಆಶ್ರಮದ ಬಳಿ ಮಾತುಕತೆಗೆ ಕರೆದ್ರು, ತದನಂತರ ಆ ಹುಡುಗನ ಮನೆಯವರು ಬಂದೊಡನೆ ನನ್ನನ್ನು ಅವಾಚ್ಯ ಶಬ್ದಗಳಿಂದ ಬೈದು. ನೀನು ನಡತೆಗೆಟ್ಟವಳು, ಸಿನಿಮಾದವಳು ನನ್ನ ಸೊಸೆ ಆಗೋದಕ್ಕೆ ಯೋಗ್ಯತೆ ಇಲ್ಲದವಳು ಎಂದು ಅವರ ತಂದೆ ಗಲಾಟೆ ಮಾಡಿದ್ರು, ಬಲವಂತದ ಮದುವೆ ಎಂದು ಅವನ ತಲೆಗೆ ತುಂಬಿದರು. ಆತನು ಅವರಂತೆ ಆಡಲು ಶುರು ಮಾಡಿದ್ದಾನೆ.

    ತದನಂತರ ನಿಮ್ಮ ಮನೆಯಲ್ಲಿ ಕೂತು ಮಾತಾಡಿ ಬಗೆಹರಿಸೋಣ ಎಂದು ಬಂದವರು ನಮ್ಮ ಇಡೀ ರಸ್ತೆ ನೋಡುವಂತೆ ಕಿರುಚಿ ಕೂಗಾಡಿ ಗಲಾಟೆ ಮಾಡಿದರು. ನನ್ನನ್ನು ಮತ್ತು ನನ್ಮ ಅಣ್ಣಂದಿರನ್ನು ಹೊಡೆದು, ನನ್ನ ವಯಸ್ಸಾದ ತಂದೆ ತಾಯಿಯನ್ನು ನೂಕಾಡಿ ತಳ್ಳಾಡಿ ಬೀಳಿಸಿ, ಗಾಯಗೊಳಿಸಿದರು.

    ನಂತರ ನಾನು ದೂರು ಕೊಡಲು ಹೋದಾಗ, ಹುಡುಗನ ಬಾವಂದಿರು ಕಂಪ್ಲೆಂಟ್ ಕೊಡುವ ಮುನ್ನ ಒಂದೆರಡು ದಿನ ಸಮಯ ತಗೆದುಕೊಳ್ಳೋಣ. ನಾವುಗಳು ಕುಟುಂಬದವರು ಕೂತು ಮಾತಾಡೋಣ ಎಂದು ನನ್ನನ್ನು ಕೇಳಿಕೊಂಡಾಗ ನಾನು ಆಯ್ತು ಎಂದು ಒಪ್ಪಿದೆ. ಪೋಲಿಸರು ನೀವುಗಳು ಇನ್ನೆರಡು ದಿನಗಳಲ್ಲಿ ನಾವು ಬಗೆಹರಿಕೊಂಡು ಬನ್ನಿ ಇಲ್ಲವಾದಲ್ಲಿ ಎಫ್‍ಐಆರ್ ದಾಖಲಿಸಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

    ಈಗ ಬೆಂಗಳೂರಿನ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ ಅನ್ನೋ ಮಾಹಿತಿ ಇದೆ. ನಾನು ಇಲ್ಲಿ ಕೊಟ್ಟಿರುವ ಕಂಪ್ಲೆಂಟನ್ನು ತಡೆದು ಕೂತು ಮಾತಾಡೋಣ ಎಂದು ಹೋಲ್ಡ್ ನಲ್ಲಿ ಇಟ್ಟವರು, ಮನೆಯವರ ಡಬಲ್ ಗೇಮ್ ಮಾಡುತ್ತಿದ್ದಾರೆ ಎಂದು ಚೈತ್ರಾ ಆರೋಪಿಸಿದರು.

    ಇಲ್ಲಿಂದ ಹೋದ ಬಳಿಕ ನಾಗಾರ್ಜುನ್ ನನ್ನ ಜೊತೆ ಮಾತನಾಡಿಲ್ಲ. ನಾಳೆ ಅವಕಾಶ ಇರುವುದರಿಂದ ಅವರು ಮಾತಾಡಲು ಬಂದರೆ ಮಾತಾಡುತ್ತೇವೆ. ಇಲ್ಲವಾದಲ್ಲಿ ಮುಂದೆ ಮಾಡಬೇಕಾದ ಕ್ರಮದ ಕುರಿತು ಯೋಚಿಸುತ್ತೇವೆ ಎಂದರು.

  • ಈ ಫೋಟೋ, ವಿಡಿಯೋಗಳನ್ನು ಎಲ್ಲೆಡೆ ಹಂಚಿ – ರಿವೀಲ್ ಆಯ್ತು ಚೈತ್ರಾ ಅಸಲಿ ಪ್ರೇಮ್‍ಕಹಾನಿ

    ಈ ಫೋಟೋ, ವಿಡಿಯೋಗಳನ್ನು ಎಲ್ಲೆಡೆ ಹಂಚಿ – ರಿವೀಲ್ ಆಯ್ತು ಚೈತ್ರಾ ಅಸಲಿ ಪ್ರೇಮ್‍ಕಹಾನಿ

    ಕೋಲಾರ: ನಟಿ ಹಾಗೂ ಬರಗಾರ್ತಿ ಬಿಗ್‍ಬಾಸ್ ಸೀಸನ್-7ರ ಸ್ಪರ್ಧಿ ಚೈತ್ರಾ ಕೊಟ್ಟೂರು ಭಾನುವಾರ ಬೆಳಗ್ಗೆ ನಾಗಾರ್ಜುನ್ ಎಂಬ ಉದ್ಯಮಿ ಜೊತೆಗೆ ಸಪ್ತಪದಿ ತುಳಿದಿದ್ದರು. ಆದರೆ ವಿಪರ್ಯಾಸ ಸಂಜೆ ವೇಳೆ ಜೋಡಿ ಮಧ್ಯೆ ಬಿರುಕು ಮೂಡಿ ಪ್ರಕರಣ ಪೊಲೀಸ್ ಠಾಣಾ ಮೆಟ್ಟಿಲೇರಿತು. ಸದ್ಯ ಈ ಕುರಿತಂತೆ ಚೈತ್ರಾ ಕೊಟ್ಟೂರು  ಪ್ರತಿಕ್ರಿಯೆ ನೀಡಿದ್ದಾರೆ.

    ಬಿಗ್ ಬಾಸ್ ಮುಗಿಸಿ ಬಂದ ನಂತರ ನನಗೆ ನಾಗಾರ್ಜುನ್ ಪರಿಚಯವಾಯಿತು. ಬೇರೆ ಯಾವ ಕಾರಣಗಳು ಇರದೆ ಪರಸ್ಪರ ವ್ಯಕ್ತಿತ್ವಕ್ಕೆ ಇಬ್ಬರು ಆಕರ್ಶಿತವಾದೆವು. ನಂತರ ಹಾಗೇ ಆಪ್ತತೆ ಬೆಳೆಯುತ್ತಾ ಹೋಯಿತು.  ಹೊರಗೆ ಭೇಟಿ ಮಾಡುವುದು, ಮನೆಯಲ್ಲಿ ಭೇಟಿ ಮಾಡುವುದು ಹೀಗೆ ನಡೆಯುತಿತ್ತು. ಎಲ್ಲಾ ಚೆನ್ನಾಗಿಯೇ ಇತ್ತು. ಪರಸ್ಪರ ಪ್ರೀತಿ ಆಪ್ತತೆ ಅತೀವವಾಗಿತ್ತು. ಅಲ್ಲದೆ ಆತನ ಹುಟ್ಟು ಹಬ್ಬವನ್ನ ನಾನು ಅದ್ಧೂರಿಯಾಗಿ ಆಚರಿಸಿದ್ದೆ, ಒಂದು ಚಿನ್ನದ ಬ್ರೇಸ್ ಲೆಟ್ ಕೂಡ ಉಡುಗೊರೆಯಾಗಿ ಕೊಟ್ಟಿದ್ದೆ. ಆ ಆಚರಣೆಯ ಫೋಟೊಗಳನ್ನು ನನ್ನ ವೈಯಕ್ತಿಕ  ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದೆ ಮತ್ತು ಅದನ್ನು ಸುದ್ಧಿ ಕೂಡ ಮಾಡಿದ್ದರು. ಆಪ್ತವಾಗಿದ್ದ ಹುಡುಗ ಮದುವೆ ಎನ್ನುವ ವಿಚಾರ ಗಂಭೀರವಾಗಿತ್ತಿದ್ದಂತೆ ಬೇರೆಯ ರೀತಿ ನಡೆದುಕೊಳ್ಳಲು ಶುರುಮಾಡಿದ. ಮನೆಯವರ ನೆಪ, ಜಾತಿ ನೆಪ, ಅಂತಸ್ಥಿನ ನೆಪ… ಹೀಗೆ ವಿಷಯ ಇನ್ನು ಗಂಭೀರವಾಗುತ್ತಿದ್ದಂತೆ ನಾನು ಸಿನಿಮಾದವಳು ಎಂಬ ನೆಪ ಆತನಿಂದ ಮಾತ್ರವಲ್ಲ, ಆತನ ಮನೆಯವರಿಂದಲೂ ಶುರುವಾಯ್ತು. ಒಮ್ಮೆ ಆಯ್ತು ಅನ್ನೊದು, ಒಮ್ಮೆ ಇಲ್ಲ ಅನ್ನೋದು ಮಾಡುತ್ತಿದ್ದ. ಈ ಸಮಸ್ಯೆ ನನ್ನ ಸ್ನೇಹಿತರ ಬಳಿ ಹಂಚಿಕೊಂಡಾಗ ಮದುವೆಯಾಗಿಬಿಡಿ ಎಲ್ಲಾ ಸರಿಹೋಗುತ್ತದೆ ಅಂತ ಸೂಚಿಸಿದರು.

    “ಈಗೇನು ಮದುವೆ ಆಗಬೇಕು ಅಷ್ಟೇ ತಾನೆ? ಸರಿ ಆಗ್ತೀನಿ” ಎಂದು ಮದುವೆ ಆದ. ತದನಂತರ ಆ ಹುಡುಗನ ಮನೆಯವರು ಬಂದೊಡನೆ ನನ್ನನ್ನು ಅವಾಚ್ಯ ಶಬ್ದಗಳಿಂದ ಬೈದು, ನೀನು ನಡತೆಗೆಟ್ಟವಳು, ಸಿನಿಮಾದವಳು. ನನ್ನ ಸೊಸೆ ಆಗುವುದಕ್ಕೆ ಯೋಗ್ಯತೆ ಇಲ್ಲದವಳು. ನನ್ನ ಮಗನ ತಂಟೆಗೆ ಬಂದರೆ ಕೊಲೆ ಮಾಡುತ್ತೇವೆ ಇತ್ಯಾದಿ ರೀತಿ ಬೈದು, ಒಂದಕ್ಕೆ ನೂರು ಹೇಳಿ ಹುಡುಗ ತನ್ನ ನಿಲುವನ್ನೇ ಬದಲಿಸುವಂತೆ ಮಾಡಿದರು. ಇದು ಬಲವಂತದ ಮದುವೆ ಇತ್ಯಾದಿ ಇತ್ಯಾದಿ ಅವನ ತಲೆಗೆ ತುಂಬಿದರು. ಆತನು ಅವರಂತೆ ಆಡಲು ಶುರು ಮಾಡಿದ.

    ತದನಂತರ ನಿಮ್ಮ ಮನೆಯಲ್ಲಿ ಕೂತು ಮಾತಾಡಿ ಬಗೆಹರಿಸೋಣ ಎಂದು ಬಂದವರು, ನಮ್ಮ ಮನೆಯ ಬಳಿ ಇಡೀ ರಸ್ತೆ ನೋಡುವಂತೆ ಕಿರುಚಿ ಕೂಗಾಡಿ ಗಲಾಟೆ ಮಾಡಿ ನನ್ನನ್ನು ಮತ್ತು ನನ್ಮ ಅಣ್ಣಂದಿರನ್ನು ಹೊಡೆದು, ನನ್ನ ವಯಸ್ಸಾದ ತಂದೆ ತಾಯಿಯನ್ನು ನೂಕಾಡಿ ತಳ್ಳಾಡಿ ಬೀಳಿಸಿ, ಗಾಯಗಳನ್ನು ಮಾಡಿ, ನನಗೆ ಕೊಲೆ ಬೆದರಿಕೆ ಹಾಕಿ, ನಮ್ಮ ಇಡೀ ಏರಿಯಾ ನಿಂತು ನೋಡುವಂತೆ ಮಾನಮರ್ಯಾದೆ ಹರಾಜು ಹಾಕಿ ಹೋದರು. ಬಳಿಕ ನಾನು ಸೀದಾ ಕಂಪ್ಲೆಂಟ್ ಕೊಡಲು ಹೋದಾಗ, ಹುಡುಗನ ಭಾವಂದಿರು ಕಂಪ್ಲೆಂಟ್ ಕೊಡುವ ಮುನ್ನ ಒಂದೆರಡು ದಿನ ಸಮಯ ತಗೆದುಕೊಂಡು ನಾವುಗಳು ಕುಟುಂಬದವರು ಕೂತು ಮಾತಾನಾಡೋಣ ಎಂದು ನನ್ನನ್ನು ಕೇಳಿಕೊಂಡಾಗ ನಾನು ಆಯ್ತು ಎಂದು ಒಪ್ಪಿದಾಗ ಪೋಲಿಸರು ನೀವುಗಳು ಇನ್ನೆರಡು ದಿನಗಳಲ್ಲಿ ಸಮಸ್ಯೆಯನ್ನು ಬಗೆಹರಿಕೊಂಡು ಬನ್ನಿ ಇಲ್ಲವಾದಲ್ಲಿ ನಾವು ಕಂಪ್ಲೆಂಟ್ ಲಾಡ್ಜ್ ಮಾಡುತ್ತೇವೆ ಎಂದು ಹೇಳಿದರು.

    ನಾನು ಕೊಡುವ ದೂರನ್ನು, ತಡೆದು ಕೂತು ಮಾತಾಡೋಣ ಎಂದು ಹೋಲ್ಡ್ ನಲ್ಲಿ ಇಟ್ಟವರು, ನಂತರ ತಾವು ಹೋಗಿ ದೂರು ಕೊಟ್ಟಿದ್ದಾರೆ. ಈ ಸುದ್ದಿ ತಿಳಿದು ನನಗೆ ಮನಸ್ಸಿಗೆ ಬೇಸರವಾಯಿತು. ಅವರ ಮನೆಯವರ ಡಬಲ್ ಗೇಮ್ ಮತ್ತೆ ಮತ್ತೆ ಸಾಬೀತಾದಂತಾಯಿತು. ಈಗ ಎರಡು ದಿನಗಳ ಅವಕಾಶ ಇರುವುದರಿಂದ ಅವರು ಮಾತಾಡಲು ಬಂದರೆ ಮಾತಾಡುತ್ತೇವೆ. ಇಲ್ಲವಾದಲ್ಲಿ ಮುಂದೆ ಮಾಡಬೇಕಾದ ಕ್ರಮದ ಕುರಿತು ಯೋಚಿಸುತ್ತೇವೆ ಎಂದು ಚೈತ್ರಾ ಹೇಳಿದ್ದಾರೆ.

    ಚೈತ್ರಾ ಕೊಟ್ಟೂರು ಅವರು ಸ್ನೇಹಿತರಿಗೆ ವಾಟ್ಸಪ್ ಮೂಲಕ ಮದುವೆ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಈ ಹಿಂದೆ ಇಬ್ಬರು ಜೊತೆಯಲ್ಲಿರುವ ಫೋಟೋಗಳನ್ನು ಕಳುಹಿಸಿ ಈ ಫೋಟೋ ವಿಡಿಯೋಗಳನ್ನು ಎಲ್ಲೆಡೆ ಕಳುಹಿಸಿ ಎಂದು ಮಸೇಜ್ ಮಾಡಿದ್ದಾರೆ.

  • ವಿವಾದ ಸೃಷ್ಟಿಸಿದ ಚೈತ್ರಾ ಕೊಟ್ಟೂರು ವಿವಾಹ – ಕಾದು ನೋಡಿ ತೀರ್ಮಾನ ಕೈಗೊಳ್ಳಲು ಮುಂದಾದ ಕುಟುಂಬಸ್ಥರು

    ವಿವಾದ ಸೃಷ್ಟಿಸಿದ ಚೈತ್ರಾ ಕೊಟ್ಟೂರು ವಿವಾಹ – ಕಾದು ನೋಡಿ ತೀರ್ಮಾನ ಕೈಗೊಳ್ಳಲು ಮುಂದಾದ ಕುಟುಂಬಸ್ಥರು

    ಕೋಲಾರ: ನಟಿ, ಬರಹಗಾರ್ತಿ, ಬಿಗ್ ಬಾಸ್ ಸೀಸನ್-7ರ ಸ್ಪರ್ಧಿ ಚೈತ್ರಾ ಕೊಟ್ಟೂರು ಮದುವೆ ವಿಚಾರ ದಿನಕ್ಕೊಂದು ತಿರುವು ಪಡೆಯುತ್ತಿದೆ. ಭಾನುವಾರ ಬೆಳಗ್ಗೆ ಬೆಂಗಳೂರಿನ ದೇವಾಲಯವೊಂದರಲ್ಲಿ ಸರಳವಾಗಿ ಮಂಡ್ಯ ಮೂಲದ ನಾಗರ್ಜುನರನ್ನ ಮದುವೆಯಾಗಿದ್ದ ಚೈತ್ರಾ, ಸಂಜೆ ವೇಳೆ ಕೋಲಾರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಪತ್ತೆಯಾಗಿದ್ರು.

    ನಾಗರ್ಜುನ್‍ಗೆ ಸಂಘಟನೆಗಳಿಂದ ಬೆದರಿಕೆ ಹಾಕಿ ಬಲವಂತವಾಗಿ ಮದುವೆ ಮಾಡಿದ್ದಾರೆ ಎಂದು ಉದ್ಯಮಿ ನಾಗರ್ಜುನ ಪೋಷಕರು ಕೋಲಾರದ ಚೈತ್ರಾ ಮನೆ ಎದುರು ಗಲಾಟೆ ಮಾಡಿದ್ರು. ಹಾಗಾಗಿ ಮಹಿಳಾ ಪೊಲೀಸ್ ಠಾಣೆ ಮೊರೆ ಹೋಗಿದ್ದ ಚೈತ್ರಾ ಕೊಟ್ಟೂರು ಮದುವೆ ವಿವಾದ, ಬುಧವಾರದವರೆಗೂ ಟೈಂ ಪಡೆಯುವ ಮೂಲಕ ಸಣ್ಣ ವಿರಾಮ ಪಡೆದುಕೊಂಡಿದೆ.

    ಸದ್ಯ 2 ಕುಟುಂಬದವರು ಒಂದೆಡೆ ಕುಳಿತು ಮಾತನಾಡುವ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಲು ಮುಂದಾಗಿದ್ದು, ಅದಕ್ಕೆ ಬುಧವಾರ ಅಂತಿಮ ವರದಿ ಸಿಗಲಿದೆ. ನನಗೆ ಅವನೇ ಬೇಕು ಎಂದು ಪಟ್ಟು ಹಿಡಿದಿರುವ ಚೈತ್ರಾ ಕೊಟ್ಟೂರು, ಕೋಲಾರ ನಗರದ ಕುರುಬರಪೇಟೆಯಲ್ಲಿರುವ ತಮ್ಮ ಮನೆಯಲ್ಲಿದ್ದಾರೆ.

    ಮಾಧ್ಯಮಗಳಿಂದ ಅಂತರ ಕಾಯ್ದುಕೊಳ್ಳುತ್ತಿರುವ ಚೈತ್ರಾ, ಬುಧವಾರದವೆರಗೂ ಕಾದು ನೋಡುವ ಕೆಲಸ ಮಾಡುತ್ತಿದ್ದಾರೆ. ಆದರೆ ಪೋಷಕರೊಟ್ಟಿಗೆ ಮಂಡ್ಯಕ್ಕೆ ವಾಪಸ್ಸಾಗಿರುವ ನಾಗಾರ್ಜುನ್ ಅವರ ನಿಲುವೇನು ಅನ್ನೋದು ಕೂಡ ನಿಗೂಢವಾಗಿಯೇ ಇದ್ದು, ಒಂದು ವೇಳೆ ಬುಧುವಾರ ಸಮಸ್ಯೆ ಬಗೆಹರಿಯದೆ ಇದ್ದರೆ ಕಾನೂನು ರೀತಿಯಲ್ಲಿ ಹೋರಾಟ ಮಾಡಲು ಚೈತ್ರಾ ನಿರ್ಧಾರ ಮಾಡಿದ್ದಾರೆ.

    ಕುಟುಂಬ ಸದಸ್ಯರ ಪ್ರಕಾರ ಎರಡು ಕುಟುಂಬಸ್ಥರು ಸೇರಿ ಸಮಸ್ಯೆ ಬಗೆಹರಿಸಿಕೊಳ್ಳಲು ನಿರ್ಧಾರ ಮಾಡಿದ್ದು, ಅಲ್ಲಿವರೆಗೂ ಯಾವುದೇ ರೀತಿಯ ಪ್ರತಿಕ್ರಿಯೆ ನೀಡಲ್ಲ. ಹಾಗಾಗಿ ಮನೆ ಬಳಿ ಬರಬೇಡಿ ಅನ್ನೋದು ಆಕೆಯ ಸಂಬಂಧಿಕರ ಒತ್ತಾಯದ ಎಚ್ಚರಿಕೆ.

  • ಬೆಳಗ್ಗೆಯಷ್ಟೇ ವಿವಾಹ- ಸಂಜೆ ವೇಳೆಗೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಚೈತ್ರಾ ಕೊಟ್ಟೂರು ದಂಪತಿ

    ಬೆಳಗ್ಗೆಯಷ್ಟೇ ವಿವಾಹ- ಸಂಜೆ ವೇಳೆಗೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಚೈತ್ರಾ ಕೊಟ್ಟೂರು ದಂಪತಿ

    – ನನಗೆ ಚೈತ್ರಾ ಇಷ್ಟವಿಲ್ಲವೆಂದ ನಾಗಾರ್ಜುನ್

    ಕೋಲಾರ: ಬೆಳಗ್ಗೆಯಷ್ಟೇ ದೇವಸ್ಥಾನದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟದ್ದ ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕೊಟ್ಟೂರು ಹಾಗೂ ನಾಗಾರ್ಜುನ್ ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

    ವಿವಾಹ ವಿವಾದ ಸಂಜೆ ವೇಳೆಗೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ನಾಗಾರ್ಜುನ್ ನನಗೆ ಈ ವಿವಾಹ ಇಷ್ಟವಿಲ್ಲ ಎಂದು ಹೇಳಿದ್ದಾರೆ. ಆದರೆ ಚೈತ್ರಾ ಕೊಟ್ಟೂರು ಮಾತ್ರ ನನಗೆ ನಾಗಾರ್ಜುನ್ ತುಂಬಾ ಇಷ್ಟ. ಅವರ ಜೊತೆಯೇ ಹೋಗುತ್ತೇನೆ ಎಂದು ಪಟ್ಟು ಹಿಡಿದ್ದಾರೆ.

    ನಾಗಾರ್ಜುನ್ ಗೆ ಚೈತ್ರಾ ಜೊತೆ ಮದುವೆಯಾಗುವುದು ಇಷ್ಟವಿರಲಿಲ್ಲ. ಸಂಘಟನೆಗಳ ಜೊತೆಗೂಡಿ ಬಲವಂತವಾಗಿ ನಾಗಾರ್ಜುನ್ ರನ್ನ ಕೂಡಿ ಹಾಕಿ ದೇಗುಲದಲ್ಲಿ ವಿವಾಹ ಮಾಡಿಸಲಾಗಿದೆ. ಸಂಘಟನೆಗಳ ಬೆದರಿಕೆಗೆ ಬಗ್ಗಿದ ನಾಗಾರ್ಜುನ್, ಬಲವಂತವಾಗಿ ಚೈತ್ರಾಗೆ ತಾಳಿ ಕಟ್ಟಿದ್ದಾರೆ. ನಾಗಾರ್ಜುನ್ ಸೇರಿ ಮನೆಯವರಿಗೆ ಚೈತ್ರಾ ಜೊತೆ ಮದುವೆ ಇಷ್ಟವಿರಲಿಲ್ಲ ಎಂದು ಕೋಲಾರದ ಕುರುಬರಪೇಟೆಯ ಚೈತ್ರಾ ಮನೆಗೆ ಬಂದು ನಾಗಾರ್ಜುನ್ ಕುಟುಂಬದವರು ತಗಾದೆ ತೆಗೆದಿದ್ದಾರೆ ಎನ್ನಲಾಗಿದೆ.

    ಇದೀಗ ನಾಗಾರ್ಜುನ್ ಕುಟುಂಬದವರು ಕೋಲಾರದ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಚೈತ್ರಾ ಕೊಟ್ಟೂರು ಹಾಗೂ ನಾಗಾರ್ಜುನ್ ಪೊಲೀಸ್ ಠಾಣೆಗೆ ಆಗಮಿಸಿದ್ದಾರೆ. ಈ ವೇಳೆ ಚೈತ್ರಾ ಜೊತೆ ಮದುವೆ ಇಷ್ಟವಿಲ್ಲ ಎಂದು ನಾಗಾರ್ಜುನ್ ಪಟ್ಟು ಹಿಡಿದಿದ್ದಾರೆ. ಆದರೆ ಚೈತ್ರಾ ಕೊಟ್ಟೂರು ಮಾತ್ರ ನನಗೆ ನಾಗಾರ್ಜುನ್ ಇಷ್ಟ, ಅವನ ಜೊತೆಯೇ ಹೋಗುತ್ತೇನೆ ಎಂದು ಬಿಗಿಪಟ್ಟು ಹಿಡಿದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

    ಚೈತ್ರಾ ಕೊಟ್ಟೂರು ಹಾಗೂ ನಾಗಾರ್ಜುನ್ ಇಂದು ಬೆಂಗಳೂರಿನ ಬ್ಯಾಟರಾಯನಪುರದ ಗಣಪತಿ ದೇವಸ್ಥಾನದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಬಿಗ್ ಬಾಸ್ ಸೀಸನ್ 7 ರಲ್ಲಿ ಭಾಗವಹಿಸಿದ್ದ ಕೋಲಾರ ಮೂಲದ ಚೈತ್ರಾ ಕೊಟ್ಟೂರು. ಮಂಡ್ಯ ಮೂಲದ ನಾಗಾರ್ಜುನ್ ಜೊತೆಗೆ ಮದುವೆಯಾಗಿದ್ದರು. ಹಲವು ವರ್ಷಗಳಿಂದ ಚೈತ್ರಾ ಹಾಗೂ ನಾಗರ್ಜುನ್ ಇಬ್ಬರು ಪ್ರೀತಿಸುತ್ತಿದ್ದರು. ಬಳಿಕ ವಿವಾಹವಾಗಿದ್ದಾರೆ ಎನ್ನಲಾಗಿತ್ತು.

  • ದಾಂಪತ್ಯ ಜೀವನಕ್ಕೆ ಕಾಲಿಟ್ಟ ಚೈತ್ರಾ ಕೊಟ್ಟೂರು!

    ದಾಂಪತ್ಯ ಜೀವನಕ್ಕೆ ಕಾಲಿಟ್ಟ ಚೈತ್ರಾ ಕೊಟ್ಟೂರು!

    ಬೆಂಗಳೂರು: ಬಿಗ್‍ಬಾಸ್ ಸೀಸನ್-7ರ ಸ್ಪರ್ಧಿಯಾಗಿ ದೊಡ್ಮನೆಗೆ ಆಗಮಿಸಿ ಭಾರೀ ಸುದ್ದಿ ಮಾಡಿದ್ದ ಚೈತ್ರಾ ಕೊಟ್ಟೂರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಸದ್ಯ ಚೈತ್ರಾ ಅವರ ಮದುವೆಯ ಫೋಟೋಗಳು ಸಾಮಾಜಿಕ ಜಾಲಾತಾಣದಲ್ಲಿ ಹರಿದಾಡುತ್ತಿದೆ.

    ಇಂದು ಬೆಳಗ್ಗೆ ಬೆಂಗಳೂರಿನ ಬ್ಯಾಟರಾಯಪುರದ ಗಣಪತಿ ದೇವಾಲಯದಲ್ಲಿ ಸರಳವಾಗಿ ಚೈತ್ರಾಕೊಟ್ಟೂರು, ನಾಗರ್ಜುನ್ ಜೊತೆ ಸಪ್ತಪದಿ ತುಳಿದಿದ್ದಾರೆ. ಹಲವು ವರ್ಷಗಳಿಂದ ಚೈತ್ರಾ ಹಾಗೂ ನಾಗರ್ಜುನ್ ಇಬ್ಬರು ಪ್ರೀತಿಸುತ್ತಿದ್ದು, ಇದೀಗ ಸದ್ದಿಲ್ಲದೇ ಸೈಲೆಂಟ್ ಆಗಿ ವಿವಾಹವಾಗುವ ಮೂಲಕ ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದ್ದಾರೆ.

    ಇತ್ತೀಚೆಗಷ್ಟೇ ಚೈತ್ರಾಕೊಟ್ಟೂರು ಹುಡುಗರು ತುಂಬಾ ಒಳ್ಳೆಯವರು ಎಂಬ ಹಾಡೊಂದನ್ನು ಬಿಡುಗಡೆಗೊಳಿಸಿದ್ದರು. ಈ ಹಾಡು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡಿತ್ತು. ಅಲ್ಲದೆ ಖಾಸಗಿ ವಾಹಿನಿಯೊಂದರ ಸಿರಿಯಲ್‍ನಲ್ಲಿ ಚೈತ್ರಾಕೊಟ್ಟೂರು ಅಭಿನಯಿಸಿದ್ದರು.

    ಈ ಹಿಂದೆ ಬಿಗ್‍ಬಾಸ್ ಸೀಸನ್-7ರಲ್ಲಿ ಅವಧಿಯಲ್ಲಿ ಒಂದು ಬಾರೀ ಎಲಿಮಿನೆಟ್ ಆಗಿ ಮತ್ತೊಂದು ಬಾರಿ ವೈಲ್ಡ್ ಕಾರ್ಡ್ ಮೂಲಕ ಬಿಗ್‍ಮನೆಗೆ ಎಂಟ್ರಿ ನೀಡಿದ್ದರು.

  • ಸ್ಯಾಂಡಲ್‍ವುಡ್ ನಟ ಕರೆದರೆ ಈಗಲೇ ಕನ್ನಡ ಸಿನಿಮಾ ಮಾಡ್ತೀನಿ ಅಂದ್ರು ನಾಗಾರ್ಜುನ್!

    ಸ್ಯಾಂಡಲ್‍ವುಡ್ ನಟ ಕರೆದರೆ ಈಗಲೇ ಕನ್ನಡ ಸಿನಿಮಾ ಮಾಡ್ತೀನಿ ಅಂದ್ರು ನಾಗಾರ್ಜುನ್!

    ಬೆಂಗಳೂರು: ಸ್ಯಾಂಡಲ್‍ವುಡ್ ನಟ, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಕರೆದರೆ ಈಗಲೇ ನಾನು ಕನ್ನಡ ಸಿನಿಮಾ ಮಾಡುತ್ತೀನಿ ಎಂದು ತೆಲುಗಿನ ಸೂಪರ್ ಸ್ಟಾರ್ ನಾಗಾರ್ಜುನ್ ಹೇಳಿದ್ದಾರೆ.

    ಗುರುವಾರ ಮಾರತಹಳ್ಳಿಯಲ್ಲಿ ಆರಂಭವಾದ ಮಳಿಗೆಯೊಂದರ ಉದ್ಘಾಟನೆ ಸಮಾರಂಭಕ್ಕೆ ನಾಗಾರ್ಜುನ್ ಹಾಗೂ ಶಿವರಾಜ್‍ಕುಮಾರ್ ಆಗಮಿಸಿದ್ದರು. ಇಬ್ಬರು ಒಟ್ಟಿಗೆ ಸಿನಿಮಾ ಮಾಡೋ ಬಗ್ಗೆ ಆಸಕ್ತಿ ಹೊಂದಿದ್ದಾರೆ ಎಂಬುವುದು ಕಾರ್ಯಕ್ರಮದಲ್ಲಿ ಗೊತ್ತಾಗಿದೆ.

    ಶಿವಣ್ಣ ಕರೆದರೆ ತಕ್ಷಣ ಬಂದು ಬಿಡ್ತೀನಿ. ಒಂದು ಅದ್ಭುತವಾದ ಕಥೆ ಸಿಕ್ಕರೆ ಖಂಡಿತಾ ಅವರ ಜೊತೆ ಸಿನಿಮಾ ಮಾಡುತ್ತೇನೆ. ಅದರಲ್ಲೂ ಶಿವಣ್ಣ ಅವರ ಜೊತೆಯಲ್ಲಿ ಅಂದರೆ ಈಗ ಕರೆದರೂ ನಾನು ನಟಿಸುತ್ತೇನೆ. ಡಾ. ರಾಜ್‍ಕುಮಾರ್ ಅವರ ಆ್ಯಕ್ಟಿಂಗ್ ನೋಡಿದ್ದೇನೆ. ಅಲ್ಲದೇ ನನ್ನ ಅಭಿನಯ ನೋಡಿ ಮೆಚ್ಚಿಕೊಂಡು ಫೋನ್ ಕೂಡ ಮಾಡಿದ್ದರು. ಎಂದು ನಾಗಾರ್ಜುನ್ ತಿಳಿಸಿದ್ದಾರೆ.

    ಇದೇ ವೇಳೆ ಶಿವಣ್ಣ ಕೂಡ ಮಾತನಾಡಿ, ನಾಗರ್ಜುನ್ ಅವರ ಜೊತೆ ಸಿನಿಮಾ ಮಾಡಬೇಕೆಂದರೆ ಒಂದು ಒಳ್ಳೆಯ ಸ್ಕ್ರಿಪ್ಟ್ ಬೇಕು. ಒಳ್ಳೆಯ ಸ್ಕ್ರಿಪ್ಟ್ ಸಿಕ್ಕರೆ ಖಂಡಿತಾ ನಾವಿಬ್ಬರು ಒಟ್ಟಿಗೆ ನಟಿಸುತ್ತೇವೆ. ಅಲ್ಲದೇ ಕನ್ನಡ ಹಾಗೂ ತೆಲುಗು ಎರಡರಲ್ಲೂ ಸಿನಿಮಾ ಮಾಡಬಹುದು ಎಂದು ಹೇಳಿದ್ದಾರೆ.

    ನಾಗಾರ್ಜುನ್ ಇದುವರೆಗೂ ಸುಮಾರು 90ಕ್ಕೂ ಹೆಚ್ಚು ಸಿನಿಮಾದಲ್ಲಿ ನಟಿಸಿದ್ದು, ಆದರೆ ಕನ್ನಡ ಸಿನಿಮಾದಲ್ಲಿ ನಟಿಸಿಲ್ಲ. ಹಾಗೆಯೇ ಶಿವಣ್ಣ ಕೂಡ 2017ರಲ್ಲಿ ಬಾಲಕೃಷ್ಣ ಅವರು ನಟಿಸಿದ ‘ಗೌತಮಿಪುತ್ರ ಶಾತಕರ್ಣಿ’ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ಮಿಂಚಿದ್ದರು. ಅದು ಬಿಟ್ಟು ತೆಲುಗಿನಲ್ಲಿ ಪೂರ್ಣ ಪ್ರಮಾಣದಲ್ಲಿ ನಾಯಕನಾಗಿ ನಟಿಸಿಲ್ಲ.

    1986ರಲ್ಲಿ ಶಿವಣ್ಣ ‘ಆನಂದ್’ ಸಿನಿಮಾ ಮೂಲಕ ನಾಯಕನಾಗಿ ಸ್ಯಾಂಡಲ್‍ವುಡ್‍ಗೆ ಎಂಟ್ರಿ ಕೊಟ್ಟಿದ್ದರು. ಅದೇ ವರ್ಷ ನಾಗಾರ್ಜುನ್ ಕೂಡ ‘ವಿಕ್ರಂ’ ಚಿತ್ರದ ಮೂಲಕ ಟಾಲಿವುಡ್‍ಗೆ ಎಂಟ್ರಿ ಕೊಟ್ಟಿದ್ದರು. ಸದ್ಯ ಈ ಇಬ್ಬರು ನಟರು 32 ವರ್ಷದಿಂದ ಸ್ಯಾಂಡಲ್‍ವುಡ್ ಹಾಗೂ ಟಾಲಿವುಡ್‍ನಲ್ಲಿ ಖ್ಯಾತಿ ಪಡೆದಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews