ಸೆಲೆಬ್ರಿಟಿಗಳು ಕೆಲವೊಮ್ಮೆ ಸಿಂಪಲ್ ಲೈಫ್ ಇಷ್ಟ ಪಡ್ತಾರೆ ಅನ್ನೋದನ್ನ ನಾವೆಲ್ಲರೂ ಕೇಳಿದ್ದೇವೆ. ಇಂಥಹ ಜೀವನ ಇಷ್ಟ ಪಡುವ ಸೆಲೆಬ್ರಿಟಿಗಳು ಕಡಿಮೆ ಜನರಿರುವ ಜಾಗಕ್ಕೆ ಹೋಗಿ ಸಾಮಾನ್ಯರಂತೆ ಕೆಲ ಸಮಯ ಕಳೆದು ಬರ್ತಾರೆ.
View this post on Instagram
ಇದೀಗ ಇಂಥದ್ದೇ ಲೈಫ್ ಫೀಲ್ ಮಾಡಿರುವ ನಟಿ ಶೋಭಿತಾ ಧೂಲಿಪಲಾ (Sobhita Dhulipala) ಸೋಷಿಯಲ್ ಮೀಡಿಯಾದಲ್ಲಿ ಒಂದಷ್ಟು ಫೋಟೋ ಹಾಗೂ ವೀಡಿಯೋಗಳನ್ನ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ‘ಮಹಾನ್’ ಚಿತ್ರ ಒಪ್ಪಿಕೊಂಡ ಬಿಗ್ ಬಾಸ್ ಖ್ಯಾತಿಯ ನಟಿ ನಮ್ರತಾ

ಸೂಪರ್ ಸ್ಟಾರ್ ನಾಗಾರ್ಜುನ ಸೊಸೆ, ನಟ ನಾಗಚೈತನ್ಯ ಪತ್ನಿ ಶೋಭಿತಾ ಪ್ರವಾಸದ ವೇಳೆ ಅಡುಗೆ ಮಾಡ್ತಿರುವ ಫೋಟೋ ಹಂಚಿಕೊಂಡು ಗಮನ ಸೆಳೆದಿದ್ದಾರೆ. ಇದನ್ನೂ ಓದಿ: ಬಿಗ್ ಬಾಸ್ ಪ್ರೋಮೋ ರಿಲೀಸ್ – ಸ್ಪರ್ಧಿಗಳ ಬಗ್ಗೆ ಮಾಹಿತಿಯೂ ಔಟ್

ರಸ್ತೆಯಲ್ಲೇ ಅಡುಗೆ ಸಾಂಬಾರ್ ಮಾಡೋದು, ಬೆಂಡೇಕಾಯಿ ಕಟ್ ಮಾಡುವುದು, ತೆಂಗಿನಕಾಯಿ ಒಡೆಯೋದು, ಕುಟಾಣಿಯಲ್ಲಿ ಕುಟ್ಟುವ ಕೆಲಸ ಮಾಡುತ್ತಿರುವ ಫೋಟೋಸ್ ಗಾಗೂ ವಿಡಿಯೋಗಳನ್ನ ತಮ್ಮ ಇನ್ಸ್ಟಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ನಮ್ಮನೆ ಅವ್ರ ಮನೆ ಒಂದೇ, ನಾವೆಲ್ಲ ಒಂದೇ ಕುಟುಂಬದವರು: ಯಶ್ ತಾಯಿ ಪುಷ್ಪ ಅರುಣ್ಕುಮಾರ್

ನಾಗಚೈತನ್ಯ 2ನೇ ಪತ್ನಿಯಾಗಿರುವ ಶೋಭಿತಾ ಸೂಪರ್ ಮಾಡೆಲ್ ಹಾಗೂ ನಟಿಯಾಗಿಯೂ ಗುರುತಿಸಿಕೊಂಡವರು. ಆದ್ರೆ ಇಷ್ಟು ಸರಳವಾಗಿರುತ್ತಾರೆಯೇ ಎಂದು ನೆಟ್ಟಿಗರು ಆಶ್ಚರ್ಯ ಪಡುವಂತೆ ನಡೆದುಕೊಂಡಿದ್ದಾರೆ. ಅಂದಹಾಗೆ ಶೋಭಿತಾಗೆ ಅಡುಗೆ ಮಾಡೋದು ಅಂದ್ರೆ ಇಷ್ಟ ಅನ್ನೋದು ಸಾಬೀತಾಗಿದೆ.


ಧನುಷ್ (Dhanush) ಭಿಕ್ಷುಕ ಪಾತ್ರದಲ್ಲಿ ಕಾಣಿಸಿಕೊಂಡಿದ್ರೆ, ರಶ್ಮಿಕಾ ಪಕ್ಕಾ ಮಿಡಲ್ ಕ್ಲಾಸ್ ಹುಡುಗಿಯಾಗಿ ಕಾಣಿಸಿಕೊಂಡಿದ್ದಾರೆ. ಉದ್ದನೆಯ ಗಡ್ಡ ಹರಿದ ಬಟ್ಟೆಯಲ್ಲಿ ಧನುಷ್ ಭಿನ್ನವಾಗಿ ಕಾಣಿಸಿಕೊಂಡಿದ್ದಾರೆ. ದುಡ್ಡಿನ ಸುತ್ತ ಹೆಣೆಯಲಾದ ಕಥೆ ಎಂಬುದನ್ನು ಟೀಸರ್ನಲ್ಲಿ ಹಿಂಟ್ ಬಿಟ್ಟು ಕೊಡಲಾಗಿದೆ. ಇದನ್ನೂ ಓದಿ:
ನಾಗರ್ಜುನ ಅಕ್ಕಿನೇನಿ ಶ್ರೀಮಂತ ವ್ಯಕ್ತಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ತಮಿಳು, ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಸಿನಿಮಾ ತಯಾರಾಗಿದೆ. ಇದೇ ಜೂನ್ 20ರಂದು ಚಿತ್ರ ರಿಲೀಸ್ ಆಗಲಿದೆ. ಫಿದಾ, ಲವ್ ಸ್ಟೋರಿ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದ ಶೇಖರ್ ಕಮ್ಮುಲಾ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಧನುಷ್ ಹಾಗೂ ರಶ್ಮಿಕಾ ನಟಿಸಿರುವ ಈ ಚಿತ್ರಕ್ಕಾಗಿ ಅಭಿಮಾನಿಗಳು ಎದುರು ನೋಡ್ತಿದ್ದಾರೆ.






‘ಕುಬೇರ’ ಸಿನಿಮಾದಲ್ಲಿ ನಟನೆಗೆ ಸ್ಕೋಪ್ ಇರುವಂತಹ ಪಾತ್ರದಲ್ಲಿ ನಾಗಾರ್ಜುನ ಅಕ್ಕಿನೇನಿ (Nagarjuna Akkineni) ನಟಿಸಿದ್ದಾರೆ. ಸದ್ಯ ನಟನ ಪೋಸ್ಟರ್ವೊಂದನ್ನು ಚಿತ್ರತಂಡ ಹಂಚಿಕೊಂಡಿದೆ. ಜೊತೆಗೆ ನವೆಂಬರ್ 15ರಂದು ಸಿನಿಮಾದ ಮೊದಲ ಗ್ಲಿಂಪ್ಸ್ ಬಿಡುಗಡೆ ಮಾಡೋದಾಗಿ ಚಿತ್ರತಂಡ ಅಪ್ಡೇಟ್ ಹಂಚಿಕೊಂಡಿದೆ. ಇದನ್ನೂ ಓದಿ:





10 ಎಕರೆ ಜಾಗದಷ್ಟು ಎನ್ ಕನ್ವೆನ್ಷನ್ ಸೆಂಟರ್ ಹಲವಾರು ಭೂ ಬಳಕೆ ಹಾಗೂ ಪರಿಸರ ನಿಮಯಮಗಳನ್ನು ಉಲ್ಲಂಘಿಸಿರುವುದು ಕಂಡು ಬಂದಿದೆ. ಜೊತೆಗೆ 1.2 ಎಕರೆ ತುಮ್ಮಿಡ್ಕುಂಟಾ ಕೆರೆಯನ್ನು (Tummidikunta Lake) ಒತ್ತುವರಿ ಮಾಡಿಕೊಳ್ಳಲಾಗಿತ್ತು. 2 ಎಕರೆ ಬಫರ್ ವಲಯವನ್ನು ಬಳಸಿಕೊಂಡು ಎನ್ ಕನ್ವೆನ್ಷನ್ ಸೆಂಟರ್ನ್ನು ನಿರ್ಮಾಣ ಮಾಡಿದ್ದಾರೆ ಎಂದು ಆರೋಪ ಬಂದಿತ್ತು. ಇದೀಗ ಹೈಡ್ರಾ ಸಂಸ್ಥೆಯ ಅಧಿಕಾರಿಗಳು ಸುಮಾರು ಮೂರುವರೆ ಎಕರೆ ಜಾಗದಲ್ಲಿರುವ ಎನ್ ಕನ್ವೆನ್ಷನ್ ಸೆಂಟರ್ನ್ನು ತೆರವುಗೊಳಿಸಿದ್ದಾರೆ.ಇದನ್ನೂ ಓದಿ: 









