Tag: Nagendra Shah

  • 25 ವರ್ಷಗಳ ಬಳಿಕ ಮತ್ತೆ ‘ಮಾಯಾಮೃಗ’: ಸೀರಿಯಲ್ಗೂ ಸೀಕ್ವೆಲ್‌ ಭಾಗ್ಯ

    25 ವರ್ಷಗಳ ಬಳಿಕ ಮತ್ತೆ ‘ಮಾಯಾಮೃಗ’: ಸೀರಿಯಲ್ಗೂ ಸೀಕ್ವೆಲ್‌ ಭಾಗ್ಯ

    ಟಿ.ಎನ್.ಸೀತಾರಾಮ್ ನಿರ್ದೇಶನದ ಈ ಧಾರಾವಾಹಿಯ ಮುಂದುವರೆದ ಭಾಗ “ಮತ್ತೆ ಮಾಯಾಮೃಗ” (Mayamruga)ಎಂಬ ಹೆಸರಿನಿಂದ ಸಿರಿಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿದೆ. ಈ ಕುರಿತು ಧಾರಾವಾಹಿ ತಂಡ ಕೆಲವು ವಿಷಯಗಳನ್ನು ಹಂಚಿಕೊಂಡಿತ್ತು. ಸಿನಿಮಾಗಳಿಗೆ ಸೀಕ್ವೆಲ್‌ ಬರುವುದು   ಸಾಮಾನ್ಯ. ಹಿರಿತೆರೆಗೆ ಹೋಲಿಸಿದರೆ ಕಿರುತೆರೆಯಲ್ಲಿ ಸೀಕ್ವೆಲ್‌ ಬರುವುದು ಬಹಳ ಕಡಿಮೆ. ಆದರೆ, ಈ ರೀತಿಯ ಪ್ರಯತ್ನವನ್ನು ಮಾಡಲು ಸೀತಾರಾಮ್ ಅವರು ಮುಂದಾಗಿದ್ದಾರೆ. ಬರೋಬ್ಬರಿ 25 ವರ್ಷಗಳ ಬಳಿಕ ‘ಮಾಯಾಮೃಗ’ ಧಾರಾವಾಹಿಯ ಸೀಕ್ವೆಲ್‌ ಬರುತ್ತಿದೆ.  ಇಷ್ಟೊಂದು ವರ್ಷಗಳ ಬಳಿಕ ಈ ಧಾರಾವಾಹಿಯ ಮುಂದುವರೆದ ಭಾಗ ತರುವುದು ಅಷ್ಟು ಸುಲಭವಲ್ಲ.  ಸಾಕಷ್ಟು ಚಾಲೆಂಜ್​ಗಳು ಇರುತ್ತದೆ ಎಂಬುದು ಸೀತಾರಾಮ್ (TN Seetharam) ಅವರ ಅಭಿಪ್ರಾಯ.

    ಆಗಿಲೂ, ಈಗಲೂ  ಧಾರಾವಾಹಿ ನೋಡುವವರ ಮನಸ್ಥಿತಿ ಬದಲಾಗಿದೆ.  ಸಿರಿಕನ್ನಡದ (Siri Kannada) ಸಂಜಯ್ ಶಿಂಧೆ ಅವರು ಈ ಪ್ರಪೋಸಲ್​ ತಂದಾಗ ನನಗೆ ಭಯ ಆಯ್ತು. ‘ಮಾಯಾಮೃಗ’ಕ್ಕೆ ಸೀಕ್ವೆಲ್‌ ಹೇಗೆ ಎಂಬ ಚಿಂತೆ ಕಾಡಿತು. ನಮ್ಮ ಧಾರಾವಾಹಿಯಲ್ಲಿ ನಟಿಸಿದ್ದ ಅನೇಕರು ಈಗ ಬೇರೆ ಬೇರೆ ಕಡೆ ಇದ್ದಾರೆ. ಕೆಲವರು ಈ ಜಗತ್ತಿನಲ್ಲೇ ಇಲ್ಲ’ ಎಂದು ‘ಮಾಯಮೃಗ’ದ ಸೀಕ್ವೆಲ್‌ ಇರುವ ಚಾಲೆಂಜ್​ಗಳ ಬಗ್ಗೆ ಸೀತಾರಾಮ್ ವಿವರಿಸಿದರು. ‘ಆ ಕಾಲದಲ್ಲೇ ಆಗಿದ್ದರೆ ಅವರದ್ದೇ ಎರಡನೇ ಕಥೆ ಮಾಡಬಹುದಿತ್ತು. ಈಗ ಅವರ ಮುಂದಿನ ಜನರೇಷನ್ ಕಥೆ ಹೇಳಬೇಕು. ಈಗ ಅತೀ ವೇಗದಲ್ಲಿ ಜಗತ್ತು ಸಾಗುತ್ತಿದೆ. ಸಂಬಂಧಗಳ ಮೌಲ್ಯ ಕಡಿಮೆ ಆಗಿದೆ. ಹಣದ ವಿಚಾರದಲ್ಲೂ ನಾವು ಬದಲಾಗಿದ್ದೇವೆ. ಬ್ಯಾಂಕ್​ಗೆ ಹೋಗುವ ಕೆಲಸವೇ ಇಲ್ಲ. ಮೊಬೈಲ್​ನಲ್ಲೇ ಎಲ್ಲಾ’ ಹೀಗೆ ಸಾಕಷ್ಟು ಬದಲಾಗಿದೆ ಎಂದು  ಹೇಳುವ ಮೂಲಕ ಸೀತಾರಾಮ್ ಅವರು “ಮತ್ತೆ ಮಾಯಾಮೃಗ” ದ ಕಥೆ ಹೊಸ ಜಗತ್ತಿಗೆ ತಕ್ಕ ಹಾಗೆ ಇರುತ್ತದೆ ಎಂಬುದನ್ನು ತಿಳಿಸಿದರು. ಇದನ್ನೂ ಓದಿ:ಬಿಕಿನಿಯಲ್ಲಿ `ಲೈಗರ್’ ಬ್ಯೂಟಿ ಅನನ್ಯಾ ಪಾಂಡೆ ಮಿಂಚಿಂಗ್

    ಹಿಂದಿನ ಬಾರಿ ಶಾಸ್ತ್ರಿಗಳ ಕಥೆ ಹೇಳಿದ್ದೆವು. ಈಗ ನಾವು ಹಳೆಯ ತಂಡವನ್ನೇ ಮುಂದುವರಿಸಿಕೊಂಡು ಹೋಗುತ್ತಿದ್ದೇವೆ. ಶಾಸ್ತ್ರಿಗಳು ಇವತ್ತಿನ ವೇಗದ ಜಗತ್ತಿಗೆ ಹೇಗೆ ಹೊಂದಿಕೊಂಡಿದ್ದಾರೆ, ಅವರ ಮಕ್ಕಳು ಏನು ಮಾಡುತ್ತಿದ್ದಾರೆ ಎಂಬುದರ ಮೇಲೆ ಕಥೆ ಸಾಗಲಿದೆ. ‘ಮಾಯಾಮೃಗ’ ಧಾರಾವಾಹಿಯಲ್ಲಿ ಅವಿನಾಶ್, ಮಾಳವಿಕ, ರಾಜೇಶ್ ನಟರಂಗ, ವೀಣಾ ಸುಂದರ್ ಮೊದಲಾದವರು ನಟಿಸಿದ್ದರು. ಅವರು ಈ ಧಾರಾವಾಹಿಯಲ್ಲೂ ಅಭಿನಯಿಸಲಿದ್ದಾರೆ.  ಇದರ ಜತೆಗೆ ಯುವಪೀಳಿಗೆ  ಕಥೆ ಹೇಳಲು ಸಾಕಷ್ಟು ಹೊಸ ಪಾತ್ರಗಳು ಸೇರ್ಪಡೆ ಆಗಿದೆ. ‘ಮತ್ತೆ ಮಾಯಾಮೃಗ’ ಧಾರಾವಾಹಿಯ ಚಿತ್ರೀಕರಣ ಆರಂಭವಾಗಿದೆ. ‘ಸಿರಿ ಕನ್ನಡ’ ವಾಹಿನಿಯಲ್ಲಿ ಅಕ್ಟೋಬರ್ ಮೂರನೇ ವಾರದಿಂದ ಪ್ರಸಾರವಾಗಲಿದೆ ಎಂದರು ಟಿ.ಎನ್.ಸೀತಾರಾಮ್.

    ಮೊದಲು ಮನೆಗೆ ಒಂದು ಟಿವಿ ಇರುತ್ತಿತ್ತು. ಈಗ ರೂಮಿಗೊಂದು ಟಿವಿ ಇರುತ್ತದೆ. ಅಜ್ಜ- ಅಜ್ಜಿ, ಅಪ್ಪ-ಅಮ್ಮ ಹಾಗೂ ಮಕ್ಕಳು ಬೇರೆಬೇರೆ ಕಾರ್ಯಕ್ರಮ ನೋಡುತ್ತಿರುತ್ತಾರೆ. ಅವರನೆಲ್ಲಾ ನಮ್ಮ ಧಾರಾವಾಹಿ ನೋಡುವ ಹಾಗೆ ಮಾಡುವ ಸವಾಲು ನಮಗಿದೆ ಎಂದರು ಪಿ. ಶೇಷಾದ್ರಿ (P. Sheshadri). ನಾಗೇಂದ್ರ ಶಾ (Nagendra Shah) ಸಹ ಧಾರಾವಾಹಿಯ ಕುರಿತು ಮಾತನಾಡಿದ್ದರು.”ಮತ್ತೆ ಮಾಯಾಮೃಗ” ವನ್ನು ಪ್ರಸಾರ ಮಾಡುತ್ತಿರುವುದಕ್ಕೆ ಖುಷಿಯಾಗುತ್ತಿದೆ ಎಂದರು  ಸಿರಿಕನ್ನಡ ವಾಹಿನಿಯ ಸಂಸ್ಥಾಪಕ ನಿರ್ದೇಶಕರಾದ ಸಂಜಯ್ ಶಿಂಧೆ.  ಧಾರಾವಾಹಿಯಲ್ಲಿ ನಟಿಸುತ್ತಿರುವ ಲಕ್ಷ್ಮೀ ಚಂದ್ರಶೇಖರ್, ಶಶಿಕುಮಾರ್, ವಿಕ್ರಮ್ ಸೂರಿ, ಸಿರಿ ಕನ್ನಡ ವಾಹಿನಿಯ ಮುಖ್ಯಸ್ಥ ರಾಜೇಶ್ ರಾಜಘಟ್ಟ ಹಾಗೂ “ಮತ್ತೆ ಮಾಯಾಮೃಗ” ದಲ್ಲಿ ಅಭಿನಯಿಸುತ್ತಿರುವ ಯುವ ಕಲಾವಿದರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

    Live Tv
    [brid partner=56869869 player=32851 video=960834 autoplay=true]

  • ಎಪ್ರಿಲ್ 2ನೇ ವಾರದಲ್ಲಿ ನಟಿ ಕಾವ್ಯ ಶಾ ಮದ್ವೆ : ಮಾಧ್ಯಮ ಲೋಕದ ಹುಡುಗನ ಜತೆ ಸಪ್ತಪದಿ

    ಎಪ್ರಿಲ್ 2ನೇ ವಾರದಲ್ಲಿ ನಟಿ ಕಾವ್ಯ ಶಾ ಮದ್ವೆ : ಮಾಧ್ಯಮ ಲೋಕದ ಹುಡುಗನ ಜತೆ ಸಪ್ತಪದಿ

    ನ್ನಡ, ತಮಿಳು ಸೇರಿದಂತೆ ಹಲವು ಭಾಷೆಗಳ ಚಿತ್ರಗಳಲ್ಲಿ ನಟಿಸಿರುವ ಕಾವ್ಯ ಶಾ ಸದ್ಯದಲ್ಲೇ ಸಪ್ತಪದಿ ತುಳಿಯಲಿದ್ದಾರೆ. ಹತ್ತು ವರ್ಷಗಳಿಂದ ಪ್ರೀತಿಸುತ್ತಿದ್ದ ಗೆಳೆಯನನ್ನೇ ಅವರು ಬಾಳ ಸಂಗಾತಿಯನ್ನಾಗಿ ಆಯ್ಕೆ ಮಾಡಿಕೊಂಡಿದ್ದಾರೆ. ಏಪ್ರಿಲ್ ಎರಡನೇ ವಾರದಲ್ಲಿ ಬೆಂಗಳೂರಿನಲ್ಲಿ ವಿವಾಹ ಮಹೋತ್ಸವ ನಡೆಯಲಿದೆ. ಇದನ್ನೂ ಓದಿ : ಬೆಳಗಾವಿ ಭಾಗದ ದಿಟ್ಟ ಅಧಿಕಾರಿಯ ಪಾತ್ರದಲ್ಲಿ ಧನಂಜಯ್

    ಕಾವ್ಯ ಶಾ ಮದುವೆ ಆಗುತ್ತಿರುವ ಹುಡುಗ ವರುಣ್. ಮಾಧ್ಯಮ ಕ್ಷೇತ್ರದಲ್ಲೇ ಹಲವು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಜತೆಗೆ ಕನ್ನಡದ ಬಹುತೇಕ ಸ್ಟಾರ್ ನಟರ ಜತೆ ಇವರಿಗೆ ಒಡನಾಟವಿದೆ. ಜೀ ಕನ್ನಡ ವಾಹಿನಿ ಸೇರಿದಂತೆ ಕನ್ನಡದ ನಾನಾ ವಾಹಿನಿಗಳ ರಿಯಾಲಿಟಿ ಶೋಗಳಲ್ಲಿ ಕೆಲಸ ಮಾಡಿದ್ದಾರೆ ವರುಣ್. ಇದನ್ನೂ ಓದಿ : Exclusive – ಸಿನಿಮಾವಾಗ್ತಿದೆ ಮಾಜಿ ಡಾನ್, ಹಾಲಿ ಕನ್ನಡಪರ ಹೋರಾಟಗಾರನ ಜೀವನ ಕಥೆ

    ಕಾವ್ಯ ಶಾ ಮತ್ತು ವರುಣ್ ಭೇಟಿಯಾಗಿದ್ದು ಹತ್ತು ವರ್ಷಗಳ ಹಿಂದೆ ನಡೆದ ಫ್ಯಾಶನ್ ಶೋನಲ್ಲಿ. ಆಗ ಕಾವ್ಯ ಆ ಶೋ ಸ್ಪರ್ಧಿ. ಅಲ್ಲಿಂದ ಶುರುವಾದ ಇಬ್ಬರ ಸ್ನೇಹ, ಆನಂತರ ಪ್ರೇಮಕ್ಕೆ ತಿರುಗಿದೆ. ಈಗ ಜತೆಯಾಗಿ ಬದುಕು ನಡೆಸಲು ಹೊರಟಿದೆ ಜೋಡಿ. ಇದನ್ನೂ ಓದಿ : ನನ್ನ ಮುಗಿಸ್ಬಿಡ್ತೀನಿ ಅಂತಾನೆ: ಗಂಭೀರ ಆರೋಪ ಮಾಡಿದ ನಟಿ ಸಂಜನಾ

    ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಕಾವ್ಯ ಶಾ, “ಹಲವು ವರ್ಷಗಳಿಂದ ನಾವಿಬ್ಬರೂ ಗೆಳೆಯರು. ಒಬ್ಬರಿಗೊಬ್ಬರನ್ನು ಅರ್ಥ ಮಾಡಿಕೊಂಡಿದ್ದೇವೆ. ಕುಟುಂಬದ ಒಪ್ಪಿಗೆ ಪಡೆದುಕೊಂಡು ಮದುವೆ ಆಗುತ್ತಿದ್ದೇವೆ. ಇದೊಂದು ರೀತಿಯಲ್ಲಿ ಲವ್ ಕಂ ಅರೇಂಜ್ಡ್ ಮದುವೆ’ ಎಂದರು. ಇದನ್ನೂ ನೋಡಿ : ನಟ ಚೇತನ್‌ಗೆ ನೀಡಿದ್ದ ಗನ್ ಮ್ಯಾನ್ ಹಿಂಪಡೆದ ಸರ್ಕಾರ

    ಈಗಾಗಲೇ ಮದುವೆಗೆ ಬೇಕಾದ ಎಲ್ಲ ಸಿದ್ಧತೆಯನ್ನು ಮಾಡಿಕೊಂಡಿದ್ದಾರಂತೆ ಕಾವ್ಯ. ಸದ್ಯದಲ್ಲಿಯೇ ಸ್ಯಾಂಡಲ್ ವುಡ್ ಮತ್ತು ಟಾಲಿವುಡ್  ಸಿಲಿಬ್ರಿಟಿಗಳ ಕೈಗೆ ಇವರ ಮದುವೆ ಆಹ್ವಾನ ಪತ್ರಿಕೆ ಕೈ ಸೇರಲಿದೆ. ಇದನ್ನೂ ಓದಿ : ಪ್ರಭಾಸ್‍ಗೆ ಮಿರ್ಚಿ ಪ್ರಶ್ನೆ ಕೇಳಿದ ದೀಪಿಕಾ ಪಡುಕೋಣೆ!

    ಮಿಸ್ಟರ್ ಅಂಡ್ ಮಿಸಸ್ ರಾಮಾಚಾರಿ, ಮೂಕಜ್ಜಿಯ ಕನಸು, ತಮಿಳಿನ ತಾರೈ ತಪ್ಪಟ್ಟೈ ಸೇರಿದಂತೆ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿರುವ ಕಾವ್ಯ, ಫಿಟ್ ನೆಸ್ ಬಗ್ಗೆ ತಮ್ಮದೇ ಆದ ಸ್ಟುಡಿಯೋ ಹೊಂದಿದ್ದಾರೆ. ಈ ಮೂಲಕ ಫಿಟ್ನೆಸ್ ಮಂತ್ರವನ್ನೂ ಅವರು ಅಭಿಮಾನಿಗಳ ಜತೆ ಸದಾ ಹಂಚಿಕೊಳ್ಳುತ್ತಲೇ ಇರುತ್ತಾರೆ.