Tag: naked

  • ನಾನು ಅನ್ಯಗ್ರಹದಿಂದ ಬಂದಿದ್ದೇನೆ – ಬೀದಿಯಲ್ಲಿ ಬೆತ್ತಲಾಗಿ ಓಡಾಡ್ತಿದ್ದ ವ್ಯಕ್ತಿ ಅರೆಸ್ಟ್

    ನಾನು ಅನ್ಯಗ್ರಹದಿಂದ ಬಂದಿದ್ದೇನೆ – ಬೀದಿಯಲ್ಲಿ ಬೆತ್ತಲಾಗಿ ಓಡಾಡ್ತಿದ್ದ ವ್ಯಕ್ತಿ ಅರೆಸ್ಟ್

    ವಾಷಿಂಗ್ಟನ್: ಬಾಲಿವುಡ್‌ನ ಪಿಕೆ ಸಿನಿಮಾ ನೋಡಿದವರಿಗೆ ಈ ಒಂದು ಘಟನೆ ಥೇಟ್ ಅದರಂತೆಯೇ ಎನಿಸುತ್ತದೆ. ಅಮೆರಿಕದಲ್ಲಿ (America) ವ್ಯಕ್ತಿಯೊಬ್ಬ ಬೀದಿಯಲ್ಲಿ ಬೆತ್ತಲಾಗಿ (Naked) ಸಂಚರಿಸಿದ್ದಕ್ಕೆ ಆತನನ್ನು ಬಂಧಿಸಲಾಗಿದೆ. ವಿಚಾರಣೆ ವೇಳೆ ಆತ ಅನ್ಯಗ್ರಹದಿಂದ (Alien) ಬಂದಿರುವುದಾಗಿ ತಿಳಿಸಿದ್ದಾನೆ.

    ಫ್ಲೋರಿಡಾದ (Florida) ಪಾಮ್ ಬೀಚ್‌ನಲ್ಲಿ (Palm Beach) 44 ವರ್ಷದ ವ್ಯಕ್ತಿಯೊಬ್ಬ ಬೆತ್ತಲಾಗಿ ನಡೆದುಕೊಂಡು ಹೋಗುತ್ತಿದ್ದುದನ್ನು ಸ್ಥಳೀಯರು ಗಮನಿಸಿದ್ದಾರೆ. ವಿಷಯ ತಿಳಿದ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಬಳಿಕ ಆತ ತಾನು ಬೇರೊಂದು ಗ್ರಹದಿಂದ ಬಂದಿದ್ದೇನೆ ಎಂದಿದ್ದಾನೆ. ಇದನ್ನೂ ಓದಿ: ನರ್ಸ್ ವೇಷ ಧರಿಸಿ ಜಿಲ್ಲಾಸ್ಪತ್ರೆಯಿಂದ ನವಜಾತ ಶಿಶು ಕಳ್ಳತನ

    ಪೊಲೀಸರು ಬಂಧಿಸಿದಾಗ ಆತ ನಾನು ಬಟ್ಟೆಗಳನ್ನು ಎಲ್ಲಿ ಇಟ್ಟಿದ್ದೇನೋ ಗೊತ್ತಿಲ್ಲ ಎಂದಿದ್ದಾನೆ. ಆತ ತನ್ನ ಹೆಸರು ಅಥವಾ ಯಾವುದೇ ಗುರುತುಗಳನ್ನು ನೀಡಲು ನಿರಾಕರಿಸಿದ್ದಾನೆ. ಇದಾದ ಬಳಿಕ ಪೊಲೀಸರು ಆತನ ಬಗ್ಗೆ ಪತ್ತೆ ಹಚ್ಚಿ, ಹೆಸರನ್ನು ಜೇಸನ್ ಸ್ಮಿತ್ ಎಂದು ಗುರುತಿಸಿದ್ದಾರೆ.

    ವ್ಯಕ್ತಿ ನಾನು ಭೂಮಿಯವನೇ ಅಲ್ಲ, ಅನ್ಯಗ್ರಹದಿಂದ ಬಂದಿದ್ದೇನೆ. ಕೆಲ ದಿನಗಳಿಂದ ಪಾಮ್ ಬೀಚ್‌ನಲ್ಲಿ ವಾಸಿಸುತ್ತಿದ್ದೇನೆ ಎಂದು ಹೇಳಿದ್ದಾನೆ. ಇದೀಗ ಪೊಲೀಸರು ಅಸಭ್ಯವಾಗಿ ವರ್ತಿಸಿರುವುದಕ್ಕೆ ಆತನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಶಾಸಕ ಎನ್ ಮಹೇಶ್‌ಗೆ ಎದೆನೋವು – ಆಸ್ಪತ್ರೆಗೆ ದಾಖಲು

  • ಖ್ಯಾತ ನಿರ್ಮಾಪಕನ ಆಫೀಸ್ ಮುಂದೆ ಬೆತ್ತಲೆಯಾಗಿ ಪ್ರತಿಭಟನೆಗೆ ಕೂತ ನಟಿ

    ಖ್ಯಾತ ನಿರ್ಮಾಪಕನ ಆಫೀಸ್ ಮುಂದೆ ಬೆತ್ತಲೆಯಾಗಿ ಪ್ರತಿಭಟನೆಗೆ ಕೂತ ನಟಿ

    ನಿರ್ಮಾಪಕರೊಬ್ಬರು ತಮಗೆ ಮೋಸ ಮಾಡಿದ್ದಾರೆ ಎಂದು ಆರೋಪಿಸಿ, ನಿರ್ಮಾಪಕನ ಆಫೀಸ್ ಮುಂದೆ ಬೆತ್ತಲೆಯಾಗಿ ಪ್ರತಿಭಟನೆ ಮಾಡಿದ ಘಟನೆ ತೆಲುಗು ಚಿತ್ರೋದ್ಯಮದಲ್ಲಿ ನಡೆದಿದೆ. ತೆಲುಗು ಸಿನಿಮಾ ರಂಗದಲ್ಲಿ ಸಾಕಷ್ಟು ಹಿಟ್ ಸಿನಿಮಾಗಳನ್ನು ತಯಾರಿಸಿದ ನಿರ್ಮಾಪಕ ಹಾಗೂ ವಿತರಕರೂ ಆಗಿರುವ ಬನ್ನಿ ವಾಸು ಆಫೀಸ್ ಮುಂದೆ ಹೈಡ್ರಾಮಾ ನಡೆದಿದ್ದು, ನಟಿ ಸುನಿತಾ ಬೋಯಾ ಬೆತ್ತಲೆಯಾಗಿ ಪ್ರತಿಭಟಿಸಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

    ಬೆಳಗ್ಗೆ ಬನ್ನಿ ವಾಸು ಅವರ ಗೀತಾ ಆರ್ಟ್ಸ್ ಕಚೇರಿ ಮುಂದೆ ಬಂದ ನಟಿ ಸುನಿತಾ ಬೋಯಾ, ಬೆತ್ತಲೆಯಾಗಿ ಪ್ರತಿಭಟನೆಗೆ ಕೂತಿದ್ದಾರೆ. ಆ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ನಟಿಯನ್ನು ವಶಕ್ಕೆ ಪಡೆದಿದ್ದಾರೆ. ಆನಂತರ ಆಕೆಗೆ ಬಟ್ಟೆ ಹಾಕಿ ಸಮಾಧಾನದ ಮಾತುಗಳನ್ನೂ ಆಡಿದ್ದಾರೆ. ಸುನಿತಾಗೆ ಆದ ಮೋಸವನ್ನು ಕೇಳಿದ್ದಾರೆ. ನಂತರ ಆಕೆಗೆ ಸ್ವಲ್ಪ ಹಣ ಕೊಟ್ಟೂ ಕಳುಹಿಸಿದ್ದಾರೆ ಎನ್ನಲಾಗುತ್ತಿದೆ. ಇದನ್ನೂ ಓದಿ:ನನ್ನ ಮಗನ ಕಾರು ಅಪಘಾತಕ್ಕೆ ‘ಬುಧ ಭಕ್ತಿ’ ಕಾರಣ ಎಂದ ಜಗ್ಗೇಶ್

    ಬನ್ನಿ ವಾಸು ನಿರ್ಮಾಣದ ಧಾರಾವಾಹಿಯಲ್ಲಿ ಸುನಿತಾ ನಟಿಸುತ್ತಿದ್ದರಂತೆ. ಅವರಿಗೆ ಕೊಡಬೇಕಾದ ಹಣವನ್ನು ಪಾವತಿಸಿಲ್ಲವಂತೆ. ಹಾಗಾಗಿ ತಮಗೆ ಬದುಕು ನಡೆಸಲೂ ಕಷ್ಟವಾಗುತ್ತಿದೆ. ನನಗೆ ದುಡ್ಡು ಕೊಡದೇ ಸತಾಯಿಸುತ್ತಿದ್ದಾರೆ ಎಂದು ನಟಿ ಪೊಲೀಸ್ ಮುಂದೆ ಹೇಳಿಕೊಂಡಿದ್ದಾರೆ. ಕೂಡಲೇ ವಾಸು ಅವರನ್ನು ಪೊಲೀಸರು ಸಂಪರ್ಕಿಸಿ, ಹಣ ಕೊಡುವ ಭರವಸೆಯನ್ನೂ ನಟಿಗೆ ಕೊಟ್ಟಿದ್ದಾರಂತೆ.

    Live Tv
    [brid partner=56869869 player=32851 video=960834 autoplay=true]

  • ರಣ್ವೀರ್ ಸಿಂಗ್ ಬೆತ್ತಲೆ ಪ್ರಕರಣ: ಇಂದು ಪೊಲೀಸ್ ಠಾಣೆಗೆ ಬರಲಿಲ್ಲ ನಟ

    ರಣ್ವೀರ್ ಸಿಂಗ್ ಬೆತ್ತಲೆ ಪ್ರಕರಣ: ಇಂದು ಪೊಲೀಸ್ ಠಾಣೆಗೆ ಬರಲಿಲ್ಲ ನಟ

    ಬಾಲಿವುಡ್ ನಟ ರಣ್ವೀರ್ ಸಿಂಗ್ ಬೆತ್ತಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಅವರು ಪೊಲೀಸ್ ಠಾಣೆಗೆ ಹಾಜರಾಗಿ, ತನಿಖೆ ಎದುರಿಸಬೇಕಿತ್ತು. ಆಗಸ್ಟ್ 22 ರಂದು ಮುಂಬೈ ಠಾಣೆಗೆ ಬರುವಂತೆ ಪೊಲೀಸರು ಸಮನ್ಸ್ ಜಾರಿ ಮಾಡಿದ್ದರು. ಆದರೆ, ರಣ್ವೀರ್ ಇವತ್ತು ಠಾಣೆಗೆ ಬಾರದೇ ತಪ್ಪಿಸಿಕೊಂಡಿದ್ದಾರೆ. ಇನ್ನೂ ಎರಡು ವಾರಗಳ ಸಮಯಾವಕಾಶವನ್ನು ಅವರು ಕೇಳಿದ್ದಾರೆ.

    ಮುಂಬೈ ಎನ್.ಜಿಓ ಸಂಸ್ಥೆಯೊಂದು ರಣ್ವೀರ್ ಸಿಂಗ್ ಬೆತ್ತಲೆ ಫೋಟೋ ಶೂಟ್ ನಲ್ಲಿ ಪಾಲ್ಗೊಂಡಿದ್ದಕ್ಕೆ ದೂರು ದಾಖಲಿಸಿತ್ತು. ಇದೊಂದು ಮಹಿಳೆಯರಿಗೆ ಮಾಡುತ್ತಿರುವ ಅವಮಾನ ಎಂದು ದೂರಿನಲ್ಲಿ ದಾಖಲಾಗಿತ್ತು. ಈ ಸಂಬಂಧ ಆಗಸ್ಟ್ 12 ರಂದು ಮುಂಬೈ ಪೊಲೀಸರು ರಣ್ವೀರ್ ಸಿಂಗ್ ಗೆ ಸಮನ್ಸ್ ಜಾರಿ ಮಾಡಿದ್ದರು. ಠಾಣಾಧಿಕಾರಿಯ ಮುಂದೆ ಹಾಜರಾಗಬೇಕೆಂದು ತಿಳಿಸಿದ್ದರು. ಇದನ್ನೂ ಓದಿ:ಬಾಲಿವುಡ್ ರಾಧೆ ಆಲಿಯಾ ಭಟ್ ಸಂಭಾವನೆ ಕೇಳಿದ್ರೆ ಶಾಕ್ ಆಗುತ್ತೀರಾ!

    ತಾವು ಸತತವಾಗಿ ಶೂಟಿಂಗ್ ನಲ್ಲಿ ಬ್ಯುಸಿ ಆಗಿರುವ ಕಾರಣದಿಂದಾಗಿ ಪೊಲೀಸ್ ಸ್ಟೇಶನ್ ಗೆ ಬರಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಇನ್ನೂ ಎರಡು ವಾರಗಳ ಕಾಲ ಸಮಯ ಕೊಡಿ ಎಂದು ಠಾಣಾಧಿಕಾರಿಗೆ ಪತ್ರ ಬರೆದಿದ್ದಾರೆ ರಣ್ವೀರ್. ನಂತರದ ದಿನಗಳಲ್ಲಿ ಠಾಣೆಗೆ ಬರುವುದಾಗಿ ಅವರು ತಿಳಿಸಿದ್ದಾರೆ. ಈ ಫೋಟೋ ಶೂಟ್ ವೈರಲ್ ಆಗುತ್ತಿದ್ದಂತೆಯೇ ಇನ್ನೂ ಕೆಲವ ನಟರು ಇದೇ ಹಾದಿಯನ್ನು ತಿಳಿದಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ನಗ್ನ ಫೋಟೋ ವಿವಾದ: ಕರ್ನಾಟಕದ ಅಳಿಯ, ನಟ ರಣವೀರ್ ಸಿಂಗ್‌ಗೆ ಸಮನ್ಸ್ ಜಾರಿ

    ನಗ್ನ ಫೋಟೋ ವಿವಾದ: ಕರ್ನಾಟಕದ ಅಳಿಯ, ನಟ ರಣವೀರ್ ಸಿಂಗ್‌ಗೆ ಸಮನ್ಸ್ ಜಾರಿ

    ರ್ನಾಟಕದ ಅಳಿಯ, ಬಾಲಿವುಡ್ ಖ್ಯಾತ ನಟ ರಣವೀರ್ ಸಿಂಗ್ ಈ ಹಿಂದೆ ನಗ್ನ ಫೋಟೋ ಶೂಟ್ ಮಾಡಿಸಿಕೊಂಡಿದ್ದರು. ಈ ಫೋಟೋಗಳು ಸಖತ್ ವೈರಲ್ ಆಗಿದ್ದವು. ರಣವೀರ್ ಸಿಂಗ್ ಅವರೇ ಈ ರೀತಿ ಫೋಟೋಶೂಟ್ ಮಾಡಿಸಿಕೊಂಡಿರುವಾಗ, ನಾವು ಏಕೆ ಹಾಗೆ ಮಾಡಬಾರದು ಎಂದು ಹಲವರು ಇದೇ ದಾರಿಯಲ್ಲೇ ನಡೆದರು. ಹಾಗಾಗಿ ರಣವೀರ್ ಸಮಾಜದ ಸ್ವಾಸ್ತ್ಯ ಹಾಳು ಮಾಡುತ್ತಿದ್ದಾರೆ ಎನ್ನುವ ಕಾರಣಕ್ಕಾಗಿ ಅವರ ಮೇಲೆ ದೂರು ದಾಖಲಿಸಲಾಯಿತು.

    ರಣವೀರ್ ವಿರುದ್ಧ ಮುಂಬೈ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ದೂರಿನನ್ವಯ ಮುಂಬೈ ಪೊಲೀಸರು ರಣವೀರ್ ಅವರಿಗೆ ಸಮನ್ಸ್ ಜಾರಿ ಮಾಡಿದ್ದಾರೆ. ರಣವೀರ್ ಅವರ ಆಪ್ತರ ಪ್ರಕಾರ, ಅವರು ಮುಂಬೈನಿಂದ ದೂರವಿದ್ದು, ಆಗಸ್ಟ್ 16ರ ನಂತರ ವಾಪಸ್ಸಾಗಲಿದ್ದಾರಂತೆ. ಆನಂತರವಷ್ಟೇ ತನಿಖಾಧಿಕಾರಿಗಳ ಮುಂದೆ ಹಾಜರಾಗಲಿದ್ದಾರೆ ಎನ್ನುವ ಮಾಹಿತಿ ಇದೆ. ಇದನ್ನೂ ಓದಿ:ಬಿಗ್ ಬಾಸ್ ಮನೆಯಲ್ಲಿ ಟ್ರೈಯಾಂಗಲ್‌ ಲವ್ ಸ್ಟೋರಿ: ರಾಕೇಶ್ ಅಡಿಗ ಪ್ರೇಮ ಪುರಾಣ

    ಮುಂಬೈ ಮೂಲದ ಸ್ವಯಂ ಸೇವಾ ಸಂಸ್ಥೆಯೊಂದು ಚೆಂಬೂರು ಪೊಲೀಸ್ ಠಾಣೆಯಲ್ಲಿ ಜುಲೈ 26 ರಂದು ದೂರು ನೀಡಿ, ಎಫ್‍.ಐ.ಆರ್ ದಾಖಲಿಸಿದ್ದರು. ಇದು ಮಹಿಳೆಯರನ್ನು ಅಪಮಾನ ಮಾಡುವ ಉದ್ದೇಶದಿಂದ ಆಗಿರುವ ಫೋಟೋ ಶೂಟ್ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು. ಇವೆಲ್ಲವನ್ನೂ ಪರಿಗಣಿಸಿ, ರಣವೀರ್ ಅವರಿಗೆ ಸಮನ್ಸ್ ಜಾರಿ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ಪ್ರಾಣಿಗಳಿಗಾಗಿ ಬೆತ್ತಲಾಗುವಂತೆ ರಣವೀರ್ ಸಿಂಗ್ ಗೆ ಮನವಿ ಮಾಡಿದ ಪೇಟಾ

    ಪ್ರಾಣಿಗಳಿಗಾಗಿ ಬೆತ್ತಲಾಗುವಂತೆ ರಣವೀರ್ ಸಿಂಗ್ ಗೆ ಮನವಿ ಮಾಡಿದ ಪೇಟಾ

    ಬಾಲಿವುಡ್ ನಟ ರಣವೀರ್ ಸಿಂಗ್ ಬೆತ್ತಲಾಗಿದ್ದೆ ಬಂತು ಆಫರ್ ಗಳ ಮೇಲೆ ಆಫರ್ ಬರುತ್ತಿವೆಯಂತೆ. ಮೊದ ಮೊದಲು ಈ ನಟ ಯಾಕೆ ಹೀಗೆ ಮಾಡಿದರು ಎನ್ನುವ ಮಾತುಗಳು ಕೇಳಿ ಬಂದವು. ಹಲವರು ರಣವೀರ್ ವಿರುದ್ಧ ಸಿಡಿದು ಬಿದ್ದರು, ಕೆಲವರು ಗೇಲಿ ಮಾಡಿದರು. ಇನ್ನೂ ಕೆಲವರು ತಾವೂ ಬೆತ್ತಲೆ ಫೋಟೋ ಶೂಟ್ ಮಾಡಿಸಿಕೊಂಡು ಸಂಭ್ರಮಿಸಿದರು. ಇಷ್ಟೆಲ್ಲಗಳ ನಡುವೆ ರಣವೀರ್ ತಮ್ಮ ಪಾಡಿಗೆ ತಾವು ಸುಮ್ಮನಿದ್ದರು. ಈಗ ಅವರು ಮಾತನಾಡಬೇಕಾದ ಸಂದರ್ಭ ಬಂದಿದೆ.

    ಪ್ರಾಣಿಗಳ ದಯಾ ಸಂಘ ಪೇಟಾ ರಣವೀರ್ ಸಿಂಗ್ ಅವರಿಗೆ ಹೀಗೊಂದು ಮನವಿ ಮಾಡಿದ್ದು, ಪ್ರಾಣಿಗಳ ರಕ್ಷಣೆಗಾಗಿ ನೀವು ಬೆತ್ತಲಾಗಬೇಕೆಂದು ಮನವಿ ಮಾಡಿದೆ. ಈ ಬೆತ್ತಲೆ ಆಗುವುದಕ್ಕೂ ಪ್ರಾಣಿಗಳ ರಕ್ಷಣೆಗೂ ಏನು ಸಂಬಂಧ ಎನ್ನುವ ಪ್ರಶ್ನೆ ಮೂಡುವುದು ಸಹಜ. ಬೆತ್ತಲೆಯಾದರೆ, ಜನರ ಗಮನ ಸೆಳೆಯುವುದು ಸಲೀಸು. ಈ ಸಮಯದಲ್ಲಿ ಪ್ರಾಣಿಗಳ ರಕ್ಷಣೆ ಕುರಿತು ರಣವೀರ್ ಮಾತನಾಡಬಹುದು ಎನ್ನುವ ಉಪಾಯ ಇದರ ಹಿಂದಿದೆ. ಇದನ್ನೂ ಓದಿ:ಲಂಡನ್ ಸ್ಟುಡಿಯೋದಲ್ಲಿ ಕನ್ನಡ ಚಿತ್ರಕ್ಕೆ ಹಿನ್ನೆಲೆ ಸಂಗೀತ

    ಪೇಟಾ ಈ ಹಿಂದೆ ಇಂತಹ ಅನೇಕ ಪ್ರಯೋಗಗಳನ್ನು ಮಾಡಿದೆ. ಅದರಲ್ಲಿ ಗೆಲುವು ಕೂಡ ಕಂಡಿದೆ. ಪ್ರಾಣಿಗಳ ದಯೆ ವಿಷಯದಲ್ಲಿ ಅನೇಕ ಬಾರಿ ಸಿನಿಮಾಗಳ ವಿರುದ್ಧವೇ ಇದು ದಾವೆ ಹೂಡಿದೆ. ಆದರೂ, ಈ ಬಾರಿ ಸಿನಿಮಾ ಕಲಾವಿದರ ಮೂಲಕ ಪ್ರಾಣಿಗಳ ರಕ್ಷಣೆ ಕುರಿತಾಗಿ ಅಭಿಯಾನ ಮಾಡಲು ಹೊರಟಿದೆ. ಪೇಟಾ ಏನೋ ಇಂಥದ್ದೊಂದು ಕನಸು ಕಂಡಿದೆ. ಅದಕ್ಕೆ ರಣವೀರ್ ಸಿಂಗ್ ಹೇಗೆ ಸ್ಪಂದಿಸುತ್ತಾರೆ ಎನ್ನುವುದನ್ನು ಕಾದು ನೋಡಬೇಕು.

    Live Tv
    [brid partner=56869869 player=32851 video=960834 autoplay=true]

  • ಸ್ಟಾರ್ ನಟ ವಿಜಯ್ ದೇವರಕೊಂಡನ ಸಂಪೂರ್ಣ ಬೆತ್ತಲೆ ನೋಡ್ಬೇಕಂತೆ ಈ ನಟಿ

    ಸ್ಟಾರ್ ನಟ ವಿಜಯ್ ದೇವರಕೊಂಡನ ಸಂಪೂರ್ಣ ಬೆತ್ತಲೆ ನೋಡ್ಬೇಕಂತೆ ಈ ನಟಿ

    ತೆಲುಗಿನ ಖ್ಯಾತ ನಟ ವಿಜಯ್ ದೇವರಕೊಂಡ ಮತ್ತು ಬಾಲಿವುಡ್ ನಟಿ ಅನನ್ಯ ಪಾಂಡೆ ನಡುವಿನ ಗಾಸಿಪ್ ಗಳು ಎರಡೂ ಸಿನಿಮಾ ರಂಗದಲ್ಲೂ ದಟ್ಟವಾಗಿದೆ. ರಶ್ಮಿಕಾ ಮಂದಣ್ಣ ಜೊತೆ ವಿಜಯ್ ದೇವರಕೊಂಡ ಡೇಟಿಂಗ್ ಮಾಡುತ್ತಿದ್ದರು ಎನ್ನುವುದನ್ನು ಇದೇ ಅನನ್ಯ ಪಾಂಡೆ ಹೇಳಿದ್ದರು. ಅಲ್ಲದೇ, ಸದ್ಯ ಅನನ್ಯ ಪಾಂಡೆ ಜೊತೆಯೇ ವಿಜಯ್ ದೇವರಕೊಂಡ ಡೇಟಿಂಗ್ ಮಾಡುತ್ತಿದ್ದಾರೆ ಎಂದೂ ಸುದ್ದಿ ಆಗಿತ್ತು. ಇವರಿಬ್ಬರೂ ಮಧ್ಯರಾತ್ರಿ ಓಡಾಡುವ ಫೋಟೋ ಮತ್ತು ವಿಡಿಯೋ ವೈರಲ್ ಆಗಿದ್ದವು. ಇದೀಗ ಮತ್ತೊಂದು ವಿಚಿತ್ರ ಸುದ್ದಿ ಬಿಟೌನ್ ನಿಂದ ಹರಿದು ಬಂದಿದೆ.

    ಕಾಫಿ ವಿತ್ ಕರಣ್ ಶೋನಲ್ಲಿ ವಿಜಯ್ ದೇವರಕೊಂಡ ಮತ್ತು ಅನನ್ಯ ಪಾಂಡೆ ಇಬ್ಬರೂ ಭಾಗಿಯಾಗಿದ್ದರು. ತಮ್ಮ ಕೆರಿಯರ್ ಗಿಂತಲೂ ಡೇಟಿಂಗ್, ಸೆಕ್ಸ್ ಹೀಗೆ ಖಾಸಗಿ ಸಂಗತಿಗಳನ್ನೇ ಹೆಚ್ಚು ಹಂಚಿಕೊಂಡಿದ್ದರು. ಇದೇ ವೇಳೆಯಲ್ಲಿ ಅನನ್ಯ ಪಾಂಡೆ ವಿಚಿತ್ರ ಬಯಕೆಯೊಂದನ್ನು ಶೋನಲ್ಲಿ ಹಂಚಿಕೊಂಡಿದ್ದಾರೆ. ಯಾವುದೇ ಮುಜಗರವಿಲ್ಲದೇ ‘ನೀವು ವಿಜಯ್ ದೇವರಕೊಂಡ ಅವರನ್ನು ಬೆತ್ತಲೆಯಾಗಿ ನೋಡುವುದಕ್ಕೆ ಇಷ್ಟಪಡುತ್ತೀರಾ’ ಎಂದು ಕರಣ್ ಶೋನಲ್ಲಿ ಕೇಳುತ್ತಾರೆ. ಕ್ಷಣವೂ ಯೋಚಿಸದ ಅನನ್ಯ ಪಾಂಡೆ. ಸಂಪೂರ್ಣ ಬೆತ್ತಲೆಯಾಗಿ ನೋಡುವುದಕ್ಕೆ ಇಷ್ಟಪಡುತ್ತೇನೆ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಇದನ್ನೂ ಓದಿ:ಟೂ ಪೀಸ್ ಧರಿಸಿ, ಪಡ್ಡೆಹುಡುಗರ ನಿದ್ದೆಗೆಡಿಸಿದ ನಟಿ ವೇದಿಕಾ

    ಸದ್ಯ ವಿಜಯ್ ದೇವರಕೊಂಡ ಮತ್ತು ಅನನ್ಯ ಪಾಂಡೆ ಲೈಗರ್ ಸಿನಿಮಾದಲ್ಲಿ ಜೊತೆಯಾಗಿ ನಟಿಸುತ್ತಿದ್ದಾರೆ. ಇವರಿಬ್ಬರೂ ಡೇಟಿಂಗ್ ಮಾಡುತ್ತಿದ್ದಾರೆ ಎನ್ನುವ ವಿಚಾರಕ್ಕಾಗಿಯೇ ವಿಜಯ್ ಅವರಿಂದ ರಶ್ಮಿಕಾ ಮಂದಣ್ಣ ದೂರ ಇದ್ದಾರೆ ಎನ್ನುವ ಸುದ್ದಿಯೂ ಇದೆ. ಈ ನಡುವೆ ಇಂತಹ ಮಾತುಗಳು ರಶ್ಮಿಕಾ ಮಂದಣ್ಣ ಅಭಿಮಾನಿಗಳನ್ನು ಕೆರಳಿಸಿವೆ. ಅನನ್ಯ ಮಾತಿಗೆ ನೆಗೆಟಿವ್ ಕಾಮೆಂಟ್ ಗಳು ಬರುತ್ತಿವೆ.

    Live Tv
    [brid partner=56869869 player=32851 video=960834 autoplay=true]

  • ಬೀಚಿನಲ್ಲಿ ಬೆತ್ತಲೆಯಾಗಿ ಓಡಿ 55ನೇ ವರ್ಷದ ಹುಟ್ಟುಹಬ್ಬ ಆಚರಿಸಿದ ಮಿಲಿಂದ್

    ಬೀಚಿನಲ್ಲಿ ಬೆತ್ತಲೆಯಾಗಿ ಓಡಿ 55ನೇ ವರ್ಷದ ಹುಟ್ಟುಹಬ್ಬ ಆಚರಿಸಿದ ಮಿಲಿಂದ್

    ಪಣಜಿ: ಬಾಲಿವುಡ್ ನಟ ಮತ್ತು ಮಾಡೆಲ್ ಮಿಲಿಂದ್ ಸೋಮನ್ ಬೀಚಿನಲ್ಲಿ ಬೆತ್ತಲೇ ಫೋಟೋ ಶೂಟ್ ಮಾಡಿಸಿಕೊಳ್ಳುವ ಮೂಲಕ ತಮ್ಮ 55ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ.

    ಮಾಡೆಲ್ ಮಿಲಿಂದ್ ತನ್ನ 55ನೇ ವಯಸ್ಸಿನಲ್ಲೂ ಕೂಡ ಯುವಕರು ನಾಚುವಂತೆ ಬಾಡಿಯನ್ನು ಮಾಡಿದ್ದಾರೆ. ಈಗಲೂ ಕೂಡ ಸಿಕ್ಸ್ ಪ್ಯಾಕ್ ಮಾಡುತ್ತಾರೆ. ಇಂದು 55ನೇ ಹುಟ್ಟುಹಬ್ಬದ ಸಂಭ್ರಮದಲ್ಲಿರುವ ಅವರು ಗೋವಾದ ಬೀಚಿನಲ್ಲಿ ಬೆತ್ತಲೆಯಾಗಿ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಇದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

    ತನ್ನ ಅಧಿಕೃತ ಟ್ವಿಟ್ಟರ್ ನಲ್ಲಿ ಬೆತ್ತಲೆ ಫೋಟೋವನ್ನು ಶೇರ್ ಮಾಡಿಕೊಂಡಿರುವ ಮಿಲಿಂದ್, ನನಗೆ ಹುಟ್ಟುಹಬ್ಬದ ಶುಭಾಶಯಗಳು 22 ವರ್ಷ ರನ್ನಿಂಗ್ ಎಂದು ಬರೆದುಕೊಂಡಿದ್ದಾರೆ. ಇದರ ಜೊತೆಗೆ ಈ ಫೋಟೋವನ್ನು ತಮ್ಮ ಪತ್ನಿ ಅಂಕಿತಾ ಕೊನ್ವಾರ್ ತೆಗೆದಿದ್ದು ಎಂದು ಬರೆದುಕೊಂಡಿದ್ದಾರೆ. ಸದ್ಯ ಮಿಲಿಂದ್ ಅವರ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.

    ಮಿಲಿಂದ್ ಅವರ ಈ ರೀತಿ ಫೋಟೋಶೂಟ್ ಮಾಡಿಸುತ್ತಿರುವುದು ಇದೇ ಮೊದಲೇನಲ್ಲ, 90 ದಶಕದಲ್ಲೇ ಟಫ್ ಶೂ ಜಾಹೀರಾತಿಗಾಗಿ ಮಾಜಿ ಮಿಸ್ ಇಂಡಿಯಾ ಮಧು ಸಪ್ರೆ ಜೊತೆ ನಗ್ನವಾಗಿ ಪೋಸ್ ನೀಡಿದ್ದರು. ಅಂದು ಇದು ಬಹಳ ಚರ್ಚೆಯಾಗಿತ್ತು. ಜೊತೆಗೆ ಈ ವಿಚಾರವಾಗಿ ಕೇಸ್ ಕೂಡ ದಾಖಲಾಗಿತ್ತು. ಮಿಲಿಂದ್, ಮಧು ಸಪ್ರೆ, ಛಾಯಾಗ್ರಾಯಕ ಮತ್ತು ಪಬ್ಲಿಶರ್ ಎಲ್ಲರೂ ಈ ಪ್ರಕರಣದಲ್ಲಿ 14 ವರ್ಷ ಕೋರ್ಟ್‍ಗೆ ಅಲೆದಿದ್ದರು. ತದನಂತರ ಪ್ರಕರಣ ಖುಲಾಸೆಯಾಗಿತ್ತು.

  • ದನಗಳ್ಳನನ್ನು ಬೆತ್ತಲೆಗೊಳಿಸಿ ಕತ್ತೆ ಮೇಲೆ ಮೆರವಣಿಗೆ ಮಾಡಿದ ಗ್ರಾಮಸ್ಥರು

    ದನಗಳ್ಳನನ್ನು ಬೆತ್ತಲೆಗೊಳಿಸಿ ಕತ್ತೆ ಮೇಲೆ ಮೆರವಣಿಗೆ ಮಾಡಿದ ಗ್ರಾಮಸ್ಥರು

    ಚಿತ್ರದುರ್ಗ: ಗ್ರಾಮವೊಂದಕ್ಕೆ ನುಗ್ಗಿ ಜಾನುವಾರು ಕಳ್ಳತನ ಮಾಡುತ್ತಿದ್ದ ವ್ಯಕ್ತಿಯನ್ನು ಹಿಡಿದು ಬೆತ್ತಲೆಗೊಳಿಸಿ ಕತ್ತೆ ಮೇಲೆ ಮೆರವಣಿಗೆ ಮಾಡಿರುವ ಅಮಾನವೀಯ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಸರಸ್ವತಿಹಟ್ಪಿ ಗ್ರಾಮದಲ್ಲಿ ನಡೆದಿದೆ.

    ಇಂದು ಬೆಳಗ್ಗೆ ಹಿರಿಯೂರು ತಾಲೂಕಿನ ಬಡಗೊಲ್ಲರಹಟ್ಟಿ ಗ್ರಾಮದ ಈಶ್ವರ, ಸರಸ್ವತಿಹಟ್ಟಿಯ ಗ್ರಾಮಸ್ಥರು ಹೊಲಗಳಿಗೆ ತೆರಳುವುದನ್ನೇ ಕಾಯ್ದಿದ್ದು, ಮನೆಯಲ್ಲಿ ಯಾರೂ ಇಲ್ಲದಿದ್ದನ್ನು ಖಚಿತಪಡಿಸಿಕೊಂಡು ಕೊಟ್ಟಿಗೆಯಲ್ಲಿದ್ದ ಕರುಗಳನ್ನು ಎಳೆದೊಯ್ಯುತ್ತಿದ್ದನು. ಈ ವೇಳೆ ಗ್ರಾಮದ ಯುವಕರ ಕೈಗೆ ಸಿಕ್ಕಿಬಿದ್ದಿದ್ದಾನೆ.

    ಆತ ಸಿಕ್ಕಿದ್ದೆ ತಡ ರೊಚ್ಚಿಗೆದ್ದ ಯುವಕರು ಆತನ ಮೈಮೇಲಿದ್ದ ಬಟ್ಟೆಗಳನ್ನು ಬಿಚ್ಚಿ ಬೆತ್ತಲೆಗೊಳಿಸಿ, ಮುಖದ ಮೇಲೆ ಕೆಂಪು ಬಣ್ಣದಿಂದ ಮೀಸೆ ಬಳಿದು ಕಂಬಕ್ಕೆ ಕಟ್ಟಿಹಾಕಿ ಮನಬಂದಂತೆ ಥಳಿಸಿದ್ದಾರೆ. ಬಳಿಕ ಕೆರೆಮುಂದಲಹಟ್ಟಿಯಿಂದ ಸೂರಪ್ಪನಹಟ್ಟಿವರೆಗೆ ಕತ್ತೆ ಮೇಲೆ ಮೆರವಣಿಗೆ ಮಾಡಿ ಅಮಾನವೀಯತೆ ಮೆರೆದಿದ್ದಾರೆ. ಈ ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಹಿರಿಯೂರು ಗ್ರಾಮಾಂತರ ಪೊಲೀಸರು ಜಾನುವಾರು ಕಳ್ಳನನ್ನು ಬಂಧಿಸಿ, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

    ಕಳ್ಳ ಏನೇ ತಪ್ಪು ಮಾಡಿದ್ದರೂ ಸಹ ಅಲ್ಲಿನ ಗ್ರಾಮಸ್ಥರು ಆತನನ್ನು ಹಿಡಿದ ಬಳಿಕ ಪೊಲೀಸರಿಗೆ ಒಪ್ಪಿಸಬೇಕಿತ್ತು. ಆದರೆ ವ್ಯಕ್ತಿಯನ್ನು ಸಂಪೂರ್ಣ ಬೆತ್ತಲೆ ಮಾಡಿ ಕತ್ತೆ ಮೇಲೆ ಮೆರವಣಿಗೆ ಮಾಡಿರೋದು ಪ್ರಜ್ಞಾವಂತ ಸಮಾಜ ತಲೆ ತಗ್ಗಿಸುವಂತಾಗಿದೆ. ಹೀಗಾಗಿ ಹಿರಿಯೂರು ಗ್ರಾಮಾಂತರ ಪೊಲೀಸರು ಹಾಗೂ ತಹಶೀಲ್ದಾರ್ ಸತ್ಯನಾರಾಯಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

  • ವಿಮಾನಯಾನದ ವೇಳೆ ಬೆತ್ತಲಾದ ಪ್ರಯಾಣಿಕ..!- ನೋಡಿ ದಂಗಾದ್ರು ಸಹಪ್ರಯಾಣಿಕರು

    ವಿಮಾನಯಾನದ ವೇಳೆ ಬೆತ್ತಲಾದ ಪ್ರಯಾಣಿಕ..!- ನೋಡಿ ದಂಗಾದ್ರು ಸಹಪ್ರಯಾಣಿಕರು

    ಲಕ್ನೋ: ವಿಮಾನದಲ್ಲಿ ದುಬೈನಿಂದ ಲಕ್ನೋಗೆ ತೆರಳುತ್ತಿದ್ದ ಪ್ರಯಾಣಿಕನೊಬ್ಬ ಇದ್ದಕ್ಕಿದ್ದಂತೆ ತನ್ನ ಬಟ್ಟೆ ಬಿಚ್ಚಿ ವಿಮಾನದಲ್ಲಿ ಓಡಾಡಿರುವ ವಿಚಿತ್ರ ಘಟನೆ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನದಲ್ಲಿ ಶನಿವಾರದಂದು ನಡೆದಿದೆ.

    ದುಬೈನಿಂದ ಲಕ್ನೋಗೆ ತೆರಳುತ್ತಿದ್ದ ಐಎಕ್ಸ್-194 ವಿಮಾನದಲ್ಲಿ ಈ ಘಟನೆ ನಡೆದಿದೆ. ಪ್ರಯಾಣಿಕನೊಬ್ಬ ವಿಮಾನಯಾನದ ವೇಳೆ ಇದ್ದಕ್ಕಿದ್ದ ಹಾಗೆ ಬಟ್ಟೆ ಬಿಚ್ಚಿ ಬೆತ್ತಲಾಗಿ ವಿಮಾನದ ಉದ್ದಕ್ಕೂ ಓಡಾಡಿದ್ದಾನೆ. ಆತನ ವಿಚಿತ್ರ ವರ್ತನೆಯನ್ನು ಕಂಡ ಇತರೇ ಪ್ರಯಾಣಿಕರು ಒಂದು ಕ್ಷಣ ದಂಗಾಗಿದ್ದಾರೆ. ತಕ್ಷಣ ವಿಮಾನದಲ್ಲಿದ್ದ ಸಿಬ್ಬಂದಿ ಆತನಿಗೆ ಕಂಬಳಿ ಹೊದಿಸಿದ್ದಾರೆ. ಈ ಒಬ್ಬ ಪ್ರಯಾಣಿಕನಿಂದ ವಿಮಾನದಲ್ಲಿ ಕೆಲ ಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.

    ಒಟ್ಟು 150 ಮಂದಿ ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ಈ ಘಟನೆ ನಡೆದಿದ್ದು, ಲಕ್ನೋದಲ್ಲಿ ವಿಮಾನ ಲ್ಯಾಂಡ್ ಆಗುತ್ತಿದಂತೆ ದುರ್ವರ್ತನೆ ತೋರಿದ್ದ ವ್ಯಕ್ತಿಯನ್ನು ಏರ್‌ಲೈನ್‌ ಭದ್ರತಾ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ. ಆದ್ರೆ ಆತ ಯಾಕೆ ಹಾಗೆ ವರ್ತಿಸಿದ ಎಂಬ ಕಾರಣ ತಿಳಿದು ಬಂದಿಲ್ಲ.

    ವಿಮಾನದ ಕ್ಯಾಪ್ಟನ್‍ನ ಮಾಹಿತಿ ಮೇರೆಗೆ ಪ್ರಯಾಣಿಕನನ್ನು ವಶಕ್ಕೆ ಪಡೆದ ಏರ್‌ಲೈನ್‌ ಭದ್ರತಾ ಸಿಬ್ಬಂದಿ ಆತನನ್ನು ವಿಚಾರಣೆ ನಡೆಸುತ್ತಿದ್ದಾರೆ ಎಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ವಕ್ತಾರರು ಮಾಹಿತಿ ನೀಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮಲತಾಯಿ ಕಾಟದಿಂದ ಬೇಸತ್ತ ಯುವತಿ ಬೆತ್ತಲೆಯಾಗಿ ಬೀದಿಯಲ್ಲಿ ಅಲೆದಾಟ!

    ಮಲತಾಯಿ ಕಾಟದಿಂದ ಬೇಸತ್ತ ಯುವತಿ ಬೆತ್ತಲೆಯಾಗಿ ಬೀದಿಯಲ್ಲಿ ಅಲೆದಾಟ!

    ಲಖ್ನೌ: ಮಲತಾಯಿ ಕಾಟದಿಂದ ಬೇಸತ್ತು ಯುವತಿಯೊಬ್ಬಳು ಬೆತ್ತಲೆಯಾಗಿ ಬೀದಿಯಲ್ಲಿ ಅಲೆದಾಡುತ್ತಿದ್ದ ಘಟನೆ ಲಕ್ನೋದಲ್ಲಿ ನಡೆದಿದೆ.

    ಯುವತಿ ಬೆತ್ತಲೆಯಾಗಿ ಅಲೆದಾಡುತ್ತಿರುವುದನ್ನು ನೋಡಿ ಆಟೋ ಚಾಲಕನೊಬ್ಬ ಆಕೆಯನ್ನು ಕೆಟ್ಟ ಉದ್ದೇಶದಿಂದ ಕರೆದುಕೊಂಡು ಹೋಗುತ್ತಿದ್ದನು. ಆಟೋ ಚಾಲಕ ಪೊಲೀಸರನ್ನು ನೋಡಿದ ತಕ್ಷಣ ತನ್ನ ಆಟೋ ಹಾಗೂ ಯುವತಿಯನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದಾನೆ. ನಂತರ ಸಮಾಜ ಸೇವೆ ಮಾಡೋ ಆರಾಧನಾ ಸಿಂಗ್ ಎಂಬವರು ಸ್ಥಳಕ್ಕೆ ಭೇಟಿ ನೀಡಿ, ಯುವತಿಯನ್ನು ರಕ್ಷಿಸಿದ್ದಾರೆ.

    ನನಗೆ ಪತ್ರಕರ್ತರೊಬ್ಬರು ಕರೆ ಮಾಡಿ, ಹಜಾರಾತ್‍ನ ಅಲಹಾಬಾದ್ ನ ಬೀದಿಯಲ್ಲಿ ಯುವತಿಯೊಬ್ಬಳು ಬೆತ್ತಲೆಯಾಗಿ ತಿರುಗುತ್ತಿದ್ದಾಳೆ. ಚಳಿಯಿರೋ ಕಾರಣ ಯುವತಿಗೆ ಯಾರೊಬ್ಬರು ಬೆಡ್‍ಶೀಟ್ ಕೊಟ್ಟಿದ್ದರು. ಬೇಡ್ ಶೀಟ್ ಬಿಟ್ಟರೆ ಯುವತಿಯ ಮೈಮೇಲೆ ಬೇರೆ ಯಾವುದೇ ಬಟ್ಟೆ ಇರಲಿಲ್ಲ ಎಂದು ತಿಳಿಸಿದ್ದರು ಎಂದು ಆರಾಧನಾ ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ.

    ಅಷ್ಟೇ ಅಲ್ಲದೇ ಆಟೋ ಚಾಲಕ ಯುವತಿಯನ್ನು ಕೆಟ್ಟ ಉದ್ದೇಶ ಎಂದರೆ ಆಕೆಯ ಮೇಲೆ ಅತ್ಯಾಚಾರ ಮಾಡಲು ಕರೆದುಕೊಂಡು ಹೋಗುತ್ತಿದ್ದನು. ನಂತರ ಪೊಲೀಸರನ್ನು ನೋಡಿ ಯುವತಿ ಹಾಗೂ ಆಟೋವನ್ನು ಅಲ್ಲಿಯೇ ಬಿಟ್ಟು ಓಡಿ ಹೋಗಿದ್ದಾನೆ ಎಂದು ಪತ್ರಕರ್ತ ವಿವರಿಸಿದ್ರು. ಕೂಡಲೇ ನಾ ಸ್ಥಳಕ್ಕೆ ಭೇಟಿ ನೀಡಿ 20 ವರ್ಷದ ಯುವತಿಯನ್ನು ಮದರ್ ತೆರೇಸಾ ಮನೆಗೆ ಕರೆದುಕೊಂಡು ಹೋಗಿರುವುದಾಗಿ ಅವರು ಹೇಳಿದ್ರು.

    ಮಲತಾಯಿಯ ಕಿರುಕುಳದಿಂದ ಬೇಸತ್ತು ಯುವತಿ ಈ ರೀತಿ ಅಲೆದಾಟ ಮಾಡುತ್ತಿದ್ದಳು ಎಂಬುದಾಗಿ ವರದಿಯಾಗಿದೆ.