ಮಂಗಳೂರು/ಕಾಸರಗೋಡು: ನಳಿನ್ ಕುಮಾರ್ ಕಟೀಲ್ಗೆ (Nalin Kumar Kateel) ಮತ್ತೆ ರಾಜಕೀಯ ಸ್ಥಾನಮಾನ ಸಿಗಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಮಧೂರು ದೇವಸ್ಥಾನದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಪ್ರಾರ್ಥಿಸಿದ್ದಾರೆ.
ಕೇರಳ (Kerala) ರಾಜ್ಯದ ಕಾಸರಗೋಡಿನ ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದ (Madhur Temple) ಬ್ರಹ್ಮಕಲಶೋತ್ಸವದ ಹಿನ್ನೆಲೆ ಡಿಕೆ ಶಿವಕುಮಾರ್ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ನಳಿನ್ ಕುಮಾರ್ ಕಟೀಲ್ ಹಾಗೂ ಡಿಕೆ ಶಿವಕುಮಾರ್ ಒಂದೇ ವೇದಿಕೆಯಲ್ಲಿ ಜೊತೆಯಾಗಿದ್ದರು. ಈ ವೇಳೆ ನಳಿನ್ ಕುಮಾರ್ ಪರ ಡಿಕೆಶಿ ಬ್ಯಾಟಿಂಗ್ ಮಾಡಿದ್ದಾರೆ. ಇದನ್ನೂ ಓದಿ: ಮೈಸೂರು| ಗನ್ ಹಿಡಿದು ವೀಡಿಯೋ ಹಂಚಿಕೊಂಡ ಯುವಕ – ಸರ್ಕಾರಿ ವಾಹನದಲ್ಲಿ ಕುಳಿತು ಪೋಸ್
ಧಾರ್ಮಿಕ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಡಿಕೆಶಿ, ನನ್ನ ಮಿತ್ರ, ಮಾಜಿ ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ಇದ್ದಾರೆ. ಅವರು ಮಾಜಿ ಅಂದುಕೊಳ್ಳೋದು ಬೇಡ, ರಾಜಕಾರಣದಲ್ಲಿ ಯಾವುದೂ ಶಾಶ್ವತ ಅಲ್ಲ. ಹೀರೋ ಝೀರೋ ಆಗುತ್ತಾನೆ, ಝೀರೋ ಹೀರೋ ಆಗುತ್ತಾನೆ. ನಾನು ಮತ್ತು ನೀವು ಒಂದೇ ವೇದಿಕೆಯಲ್ಲಿ ದೇವರನ್ನ ಪ್ರಾರ್ಥನೆ ಮಾಡಿದ್ದೇವೆ. ಭಗವಂತ ನಿಮ್ಮ ಎಲ್ಲಾ ವಿಘ್ನ ನಿವಾರಣೆ ಮಾಡಿ ಮತ್ತೆ ಈ ರಾಜ್ಯದಲ್ಲಿ ಸೇವೆ ಮಾಡುವ ಅವಕಾಶ ಕೊಡಲಿ. ಮತ್ತೆ ನಿಮಗೆ ಅವಕಾಶ ಸಿಗಲಿ ಅಂತ ನಾನೂ ಕೂಡ ಪ್ರಾರ್ಥನೆ ಮಾಡುತ್ತೇನೆ ಎಂದರು. ಇದನ್ನೂ ಓದಿ: ರಾಮನವಮಿ | 50 ಲಕ್ಷ ಭಕ್ತರಿಂದ ಅಯೋಧ್ಯೆ ಶ್ರೀರಾಮನ ದರ್ಶನ ಸಾಧ್ಯತೆ
ಮಂಗಳೂರು: ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಭ್ರಷ್ಟಾಚಾರದ ಆರೋಪ ಮಾಡಿದ್ದ ಕಾಂಗ್ರೆಸ್ ಇದೀಗ 80 ಪರ್ಸೆಂಟ್ ಸರ್ಕಾರವಾಗಿದೆ. ಇದು ಕಳ್ಳರ, ಭ್ರಷ್ಟಚಾರಿಗಳ ಸರ್ಕಾರ ಎಂದು ಮಾಜಿ ಸಂಸದ, ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ವಾ (Nalin Kumar Kateel) ವಾಗ್ದಾಳಿ ನಡೆಸಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಅವರು, ಪ್ರಜಾಪ್ರಭುತ್ವ ಸಂವಿಧಾನದ ಹೆಸರಲ್ಲಿ ಮಾತನಾಡುವ ಸಿಎಂ ನೈತಿಕತೆಯಿಂದ ರಾಜೀನಾಮೆ ನೀಡಬೇಕು. ತನಿಖೆಗೆ ಆದೇಶ ಆಗಿದೆ. ರಾಜ್ಯಪಾಲರ ಆದೇಶವನ್ನೇ ಪ್ರಶ್ನೆ ಮಾಡಿದ್ರೆ ಆತ್ಮವೇ ಇಲ್ಲ ಎನ್ನುವಂತೆ. ಇನ್ನು ಆತ್ಮಸಾಕ್ಷಿ ಎಲ್ಲಿಂದ ಬಂತು ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ಸಿಎಂ ಏನ್ ದೆವ್ವನಾ ನಾನು ಹೆದರೋಕೆ – ಸಿದ್ದರಾಮಯ್ಯಗೆ ಹೆಚ್ಡಿಕೆ ತಿರುಗೇಟು
ಸಿದ್ದರಾಮಯ್ಯ ಮೊದಲಿಗೆ ರಾಜೀನಾಮೆ ಕೊಟ್ಟು ತನಿಖೆಗೆ ಆದೇಶ ಮಾಡಬೇಕಿತ್ತು. ಆಗ ಅವರ ಆದರ್ಶಗಳ ಮೇಲೆ ಇನ್ನಷ್ಟು ಗೌರವ ಹೆಚ್ಚಾಗುತ್ತಿತ್ತು ಎಂದು ಟಾಂಗ್ ಕೊಟ್ಟರು.
ಚುನಾವಣಾ ಬಾಂಡ್ ಪ್ರಕರಣದಲ್ಲಿ ನಿರ್ಮಲಾ ಸೀತಾರಾಮನ್ ಹಾಗೂ ನಮ್ಮೆಲ್ಲರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕೇಸ್ ಹಾಕಿದವರು ಯಾರೋ ಸಂಬಂಧವೇ ಇಲ್ಲದ ಮೂರನೇ ವ್ಯಕ್ತಿ. ಸದ್ಯ ಎಫ್ಐಆರ್ಗೆ ತಡೆಯಾಜ್ಞೆ ಸಿಕ್ಕಿದೆ. ಚುನಾವಣಾ ಬಾಂಡ್ ಸರಿಯಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಸಿದ್ದರಾಮಯ್ಯ ಕೇಸ್ ಹಾಗಲ್ಲ. ಮುಡಾ ಹಾಗೂ ವಾಲ್ಮೀಕಿ ಹಗರಣ ಸೇರಿ ಎರಡರಲ್ಲೂ ಸಿಕ್ಕಿ ಬಿದ್ದಿದ್ದಾರೆ ಎಂದು ಎಂದು ಹೇಳಿದರು. ಇದನ್ನೂ ಓದಿ: ಮುಡಾಸ್ತ್ರಕ್ಕೆ ಜಾತಿ ಜನಗಣತಿ ಪ್ರತ್ಯಾಸ್ತ್ರ ಬಿಟ್ಟ ಸಿಎಂ – ಕಾಂಗ್ರೆಸ್ನಲ್ಲಿ ಮತ್ತೆ ಪರ-ವಿರೋಧಕ್ಕೆ ವೇದಿಕೆ ಸಜ್ಜು
– ಚುನಾವಣಾ ಬಾಂಡ್ ಹೆಸರಲ್ಲಿ 8,000 ಕೋಟಿ ರೂ.ಗಿಂತ ಹೆಚ್ಚು ವಸೂಲಿ ಆರೋಪ
ಬೆಂಗಳೂರು: ದೇಶದ ರಾಜಕಾರಣದಲ್ಲಿ ವಿಶೇಷವಾಗಿ ಗುರುತಿಸಿಕೊಂಡಿರುವ ಕರ್ನಾಟಕ ರಾಜ್ಯದಲ್ಲೀಗ ಎಫ್ಐಆರ್ ಪಾಲಿಟಿಕ್ಸ್ (FIR Politics), ದ್ವೇಷ ರಾಜಕೀಯ, ಸೇಡಿಗೆ ಸೇಡು-ಮುಯ್ಯಿಗೆ ಮುಯ್ಯಿ ರಾಜಕೀಯ ನಡೀತಿದ್ಯಾ..? ಅಂತ ವ್ಯಾಪಕ ಚರ್ಚೆ ಆಗ್ತಿದೆ.
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಸಚಿವ ನಾಗೇಂದ್ರ ಜೈಲು ಪಾಲಾದ ಬಳಿಕ ಮುಡಾ ನಿವೇಶನ ಹಂಚಿಕೆಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಈಗ ಎಫ್ಐಆರ್ ದಾಖಲಾಗಿದೆ. ಈ ಬೆನ್ನಲ್ಲೇ, ಚುನಾವಣಾ ಬಾಂಡ್ (Electoral Bond) ಹೆಸರಲ್ಲಿ ಸುಲಿಗೆ ಆರೋಪದಲ್ಲಿ ರಾಜ್ಯದ ಸಂಸದೆ, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಮೇಲೆ ಕೋರ್ಟ್ ಆದೇಶದ ಅನ್ವಯ ಎಫ್ಐಆರ್ ದಾಖಲಾಗಿದೆ. ಇದನ್ನೂ ಓದಿ: ನಾಲ್ವರು ವಿಕಲ ಚೇತನ ಹೆಣ್ಣು ಮಕ್ಕಳಿಗೆ ಸ್ವೀಟ್ನಲ್ಲಿ ವಿಷ ಕೊಟ್ಟು ತಾನೂ ಆತ್ಮಹತ್ಯೆ ಮಾಡಿಕೊಂಡ ತಂದೆ
ಜನಾಧಿಕಾರ ಸಂಘರ್ಷ ಪರಿಷತ್ (ಜೆಎಸ್ಪಿ)ಯ ಆದರ್ಶ ಅಯ್ಯರ್ ಅನ್ನೋವ್ರು ದೂರು ಹಾಗೂ ಬೆಂಗಳೂರು ಜನಪ್ರತಿನಿಧಿಗಳ ಕೋರ್ಟ್ ಆದೇಶದ ಅನ್ವಯ ತಿಲಕ್ನಗರ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಅಲ್ಲದೇ, ಪ್ರಕರಣವನ್ನು ವಿಶೇಷ ತನಿಖಾ ತಂಡಕ್ಕೆ ವರ್ಗಾಯಿಸಲು ತಯಾರಿಯಾಗಿದ್ದು, ತಿಲಕ ನಗರ ಪೊಲೀಸ್ ಠಾಣೆ ಮುಂದೆ ಭದ್ರತೆ ಹೆಚ್ಚಿಸಲಾಗಿದೆ. ಎಫ್ಐಆರ್ನಲ್ಲಿ ನಿರ್ಮಲಾ ಜೊತೆಗೆ ರಾಜ್ಯ, ರಾಷ್ಟ್ರ ಬಿಜೆಪಿ ನಾಯಕರ ಹೆಸರೂ ಇದೆ. ಇದನ್ನೂ ಓದಿ: ಐಎಎಸ್ ಅಧಿಕಾರಿ ಪತ್ನಿ ರೇಪ್ ಕೇಸ್; ತನಿಖೆಯಲ್ಲಿ ಲೋಪವೆಸಗಿದ ಪೊಲೀಸರ ವಿರುದ್ಧ ಕ್ರಮಕ್ಕೆ ಕೋಲ್ಕತ್ತಾ ಹೈಕೋರ್ಟ್ ಸೂಚನೆ
ಚುನಾವಣಾ ಬಾಂಡ್; ಯಾರ್ಯಾರ ವಿರುದ್ಧ ಎಫ್ಐಆರ್?
* ಎ1 ನಿರ್ಮಲಾ ಸೀತಾರಾಮನ್
* ಎ2 ಇ.ಡಿ ಅಧಿಕಾರಿಗಳು
* ಎ3 ಕೇಂದ್ರ ಬಿಜೆಪಿ ಪದಾಧಿಕಾರಿಗಳು
* ಎ4 ನಳೀನ್ ಕುಮಾರ್ ಕಟೀಲ್
* ಎ5 ವಿಜಯೇಂದ್ರ
* ಎ6 ರಾಜ್ಯ ಬಿಜೆಪಿ ಪದಾಧಿಕಾರಿಗಳು
ಎಫ್ಐಆರ್ ಮುಖ್ಯಾಂಶಗಳೇನು?
* ಚುನಾವಣಾ ಬಾಂಡ್ ಹೆಸರಲ್ಲಿ 8,000 ಕೋಟಿ ರೂ.ಗಿಂತ ಹೆಚ್ಚು ವಸೂಲಿ ಆರೋಪ
* ಹಲವಾರು ಕಾರ್ಪೊರೇಟ್ ಕಂಪನಿಗಳ ಮೇಲೆ ರೇಡ್ & ಸೀಜ್ ಬೆದರಿಕೆ ಆರೋಪ
* 2019-2023ರವರೆಗೆ ಹಲವು ಕಂಪನಿಗಳಿಂದ 230.15 ಕೋಟಿ ಸುಲಿಗೆ ಆರೋಪ
* ಒಂದು ಕಂಪನಿಯಿಂದಲೇ 49.5 ಕೋಟಿ ರಹ್ಯಸವಾಗಿ ವಸೂಲಿ ಆರೋಪ
* ಮೇ 2ರಂದು ದೂರು, 5 ತಿಂಗಳ ಬಳಿಕ ಎಫ್ಐಆರ್
ಮಾತಿನ ವರಸೆ:
ಚುನಾವಣಾ ಬಾಂಡ್ ವಿಚಾರವಾಗಿ ಕಾಂಗ್ರೆಸ್-ಬಿಜೆಪಿ ಮಧ್ಯೆ ರಾಜಕೀಯ ಕೆಸರೆರಚಾಟ ಶುರುವಾಗಿದೆ. ಸೋನಿಯಾ, ರಾಹುಲ್, ಖರ್ಗೆ ಮೇಲೂ ಎಫ್ಐಆರ್ ಹಾಕ್ಬೇಕು. ಸೋನಿಯಾ, ರಾಹುಲ್ ಅರೆಸ್ಟ್ ಆಗ್ತಾರೆ ಅಂತ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದ್ರೆ, ನಿರ್ಮಲಾ ಸೀತಾರಾಮನ್ ತಮ್ಮ ಕುಟುಂಬಕ್ಕೆ ಬಾಂಡ್ ಪಡೆದಿಲ್ಲ ಅಂತ ಆರ್.ಅಶೋಕ್ ನಿರ್ಮಲಾ ಪರ ಬ್ಯಾಟ್ ಬೀಸಿದ್ದಾರೆ. ಆದ್ರೆ ಈ ಬಗ್ಗೆ ಹೆಚ್ಚು ಮಾಹಿತಿ ಇಲ್ಲ ತಿಳಿದುಕೊಂಡು ಮಾತಾಡ್ತೇನೆ ಅಂತ ಖರ್ಗೆ, ಡಿಕೆ ಜಾಣ ನಡೆ ಪ್ರದರ್ಶಿಸಿದ್ದಾರೆ. ಮೋದಿ, ನಿರ್ಮಲಾ ರಾಜೀನಾಮೆಗೆ ಹೆಚ್ಡಿಕೆ ಒತ್ತಾಯಿಸಲಿ ಅಂತ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಆಗ್ರಹಿಸಿದ್ದಾರೆ. ಇದನ್ನೂ ಓದಿ: ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ಮೇಲೆ ಹೆಚ್ಚು ರೈತರ ಸಾವು: ಪ್ರಧಾನಿ ಮೋದಿ ಆರೋಪ
ಬೆಂಗಳೂರು: ಅಧಿಕಾರ ದುರುಪಯೋಗ ಪಡಿಸಿಕೊಂಡು ಚುನಾವಣಾ ಬಾಂಡ್ ಪಡೆದ ಆರೋಪದ ಮೇಲೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಹಲವರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ನಿರ್ಮಲಾ ಸೀತಾರಾಮನ್ ಸೇರಿ ಹಲವರು ಚುನಾವಣಾ ಬಾಂಡ್ ಮೂಲಕ ಕೋಟ್ಯಂತರ ರೂ. ಹಣ ಸುಲಿಗೆ ಮಾಡಿದ್ದಾರೆಂದು ಆರೋಪಿಸಿ ಆದರ್ಶ್ ಐಯ್ಯರ್ ದೂರು ನೀಡಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಎಫ್ಐಆರ್ ದಾಖಲಿಸಲು ಆದೇಶಿಸಿತ್ತು. ಆದೇಶದ ಬೆನ್ನಲ್ಲೇ ತಿಲಕ್ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ಒಟ್ಟು ಐವರ ಮೇಲೆ ಎಫ್ಐಆರ್ ದಾಖಲಾಗಿದ್ದು, ಸೀತಾರಾಮನ್ ಅವರು ಎ1 ಆರೋಪಿಯಾಗಿದ್ದಾರೆ. ಇಡಿ ಅಧಿಕಾರಿಗಳು ಎ2, ಕೇಂದ್ರ ಬಿಜೆಪಿ ಪದಾಧಿಕಾರಿಗಳು ಎ3, ನಳಿನ್ ಕುಮಾರ್ ಕಟೀಲ್ ಎ4, ಬಿ.ವೈ.ವಿಜಯೇಂದ್ರ ಎ5, ರಾಜ್ಯ ಬಿಜೆಪಿ ಪದಾಧಿಕಾರಿಗಳು ಎ6 ಆರೋಪಿಗಳಾಗಿದ್ದಾರೆ.
– ನಳಿನ್ ಕುಮಾರ್ ಕಟೀಲ್, ಯಡಿಯೂರಪ್ಪ ಪುತ್ರ ವಿಜಯೇಂದ್ರ ವಿರುದ್ಧವೂ ಕೇಸ್ಗೆ ಸೂಚನೆ – ಚುನಾವಣಾ ಬಾಂಡ್ ಮೂಲಕ ಸುಲಿಗೆ ಆರೋಪ
ಬೆಂಗಳೂರು: ಚುನಾವಣಾ ಬಾಂಡ್ (Electoral Bonds) ಮೂಲಕ ಕೋಟ್ಯಂತರ ರೂ. ಹಣ ಸುಲಿಗೆ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಸೇರಿ ಹಲವರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.
ಬೆಂಗಳೂರಿನಲ್ಲಿ ದಾಖಲಾಗಿರುವ ದೂರಿನಲ್ಲಿ ನಿರ್ಮಲಾ ಸೀತಾರಾಮನ್ ಮಾತ್ರವಲ್ಲದೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಕರ್ನಾಟಕ ಬಿಜೆಪಿ ನಾಯಕರಾದ ನಳಿನ್ ಕುಮಾರ್ ಕಟೀಲ್ ಮತ್ತು ಬಿ.ವೈ.ವಿಜಯೇಂದ್ರ ಅವರ ಹೆಸರೂ ಇದೆ. ಒತ್ತಡದ ತಂತ್ರವಾಗಿ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ ದಾಳಿಗಳನ್ನು ಉಲ್ಲೇಖಿಸಿ ಕಾರ್ಪೊರೇಟ್ ಸಂಸ್ಥೆಗಳು ಸಾವಿರಾರು ಕೋಟಿಗಳ ಚುನಾವಣಾ ಬಾಂಡ್ಗಳನ್ನು ಖರೀದಿಸಲು ಒತ್ತಾಯಿಸಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಈ ಎಲೆಕ್ಟೋರಲ್ ಬಾಂಡ್ಗಳನ್ನು ಬಿಜೆಪಿ ನಾಯಕರು ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದಲ್ಲಿ ನಗದೀಕರಿಸಿದ್ದಾರೆ ಎಂದು ಹೇಳಲಾಗಿದೆ.
ಚುನಾವಣಾ ಬಾಂಡ್ಗಳ ಯೋಜನೆಯು ರಾಜಕೀಯ ಉದ್ದೇಶಗಳಿಗಾಗಿ ಅಕ್ರಮ ಹಣವನ್ನು ಸಂಗ್ರಹಿಸಲು ಅನುಕೂಲ ಮಾಡಿಕೊಟ್ಟಿದೆ ಎಂದು ದೂರಿನಲ್ಲಿ ಹೇಳಲಾಗಿದೆ. ಸೀತಾರಾಮನ್ ಮತ್ತು ಇತರ ಹಿರಿಯ ಬಿಜೆಪಿ ನಾಯಕರು ಈ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: ಭಯೋತ್ಪಾದಕ ದಾಳಿ ಎಚ್ಚರಿಕೆ – ಮುಂಬೈನಾದ್ಯಂತ ಪೊಲೀಸರು ಹೈಅಲರ್ಟ್
– ಇದು ಕಾರ್ಯಕರ್ತರ ಗೆಲುವು ಎಂದ ಕಟೀಲ್ – ಬೆಳಗ್ಗೆಯಿಂದ ಪೂಂಜಾ ನಿವಾಸದಲ್ಲಿ ಭಾರೀ ಹೈಡ್ರಾಮಾ
ಮಂಗಳೂರು: ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ (Beltangady BJP MLA Harish Poonja) ಅವರನ್ನು ಬಂಧನ ಮಾಡದೇ ಇರಲು ಪೊಲೀಸರು ನಿರ್ಧರಿಸಿದ್ದಾರೆ. ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ ಶಾಸಕರಿಗೆ ತಿಳಿಸಿ ತೆರಳಿದ್ದಾರೆ.
ಸಂಜೆ ಮಾಧ್ಯಮಗಳ ಜೊತೆ ಮಾತನಾಡಿದ ಹರೀಶ್ ಪೂಂಜಾ, ಅಕ್ರಮ ಕಲ್ಲಿನ ಕೋರೆ ಪ್ರಕರಣದಲ್ಲಿ ಬಿಜೆಪಿ ಯುವ ಮೋರ್ಚಾ (BJP Yuva Morcha) ಅಧ್ಯಕ್ಷ ಶಶಿಧರ್ ಶೆಟ್ಟಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೂ ಶಶಿಧರ್ ಶೆಟ್ಟಿಗೂ ಯಾವುದೇ ಸಂಬಂಧವಿಲ್ಲ. ಉದ್ದೇಶಪೂರ್ವಕವಾಗಿ ಪ್ರಕರಣದಲ್ಲಿ ಸಿಲುಕಿಸಿದ್ದಾರೆ. ಈ ಕಾರಣಕ್ಕೆ ನಾನು ಪ್ರತಿಭಟಿಸಿದ್ದೆ ಎಂದು ತಿಳಿಸಿದರು.
ಅಂದು ಅಧಿಕಾರಕ್ಕಾಗಿ ಸಿದ್ದರಾಮಯ್ಯನವರು ಬಿದರಿ ಅವರ ಕಾಲರ್ ಪಟ್ಟಿ ಹಿಡಿದಿದ್ದರು. ನಾನು ಅಧಿಕಾರಕ್ಕೆ ಪೊಲೀಸರ ವಿರುದ್ಧ ಮಾತನಾಡಿಲ್ಲ. ಕಾರ್ಯಕರ್ತನ ಪರವಾಗಿ ನಾನು ಮಾತನಾಡಿದ್ದೇನೆ. ಅಮಾಯಕನನ್ನು ಪ್ರಕರಣದಲ್ಲಿ ಸಿಲುಕಿಸಲಾಗಿದೆ. ಮುಂಚೂಣಿಯಲ್ಲಿ ನಿಂತು ಕೆಲಸ ಮಾಡುತ್ತಾನೆ ಎಂಬ ಕಾರಣಕ್ಕೆ ಕೇಸ್ ಹಾಕಲಾಗಿದೆ. ಕಾಂಗ್ರೆಸ್ನ ದ್ವೇಷದ ರಾಜಕಾರಣವನ್ನು ನಾವು ಸಹಿಸುವುದಿಲ್ಲ ಎಂದು ಹೇಳಿದರು.
ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾತನಾಡಿ, ದಕ್ಷಿಣ ಕನ್ನಡದ ಎಲ್ಲಾ ಬಿಜೆಪಿ ಶಾಸಕರು, ಹಾಲಿ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಇಲ್ಲಿಗೆ ಆಗಮಿಸಿದ್ದಾರೆ. ನೋಟಿಸ್ ನೀಡದೇ ಬಂಧನ ಮಾಡುವ ಪ್ರಯತ್ನ ನಡೆದಿತ್ತು. ಈಗ ನೋಟಿಸ್ ನೀಡಿ ಹೋಗಿದ್ದಾರೆ. ಮೊದಲ ಹಂತದ ಗೆಲುವು ಕಾರ್ಯಕರ್ಯರಿಗೆ ಮತ್ತು ಪೂಂಜಾ ಅವರಿಗೆ ಸಿಕ್ಕಿದೆ ಎಂದರು.
ಇವತ್ತು ಬೆಳಗ್ಗೆಯೇ ಹರೀಶ್ ಪೂಂಜಾ ಬಂಧಿಸಲು ಪೊಲೀಸರು ಅವರ ಗರ್ಡಾಡಿಯ ಮನೆಗೆ ಬಂದಿದ್ದರು. ಹರೀಶ್ ಪೂಂಜಾ ಮಾತ್ರ ನಾನು ಬರುವುದಿಲ್ಲ ಎಂದು ಹೇಳಿದರು. ಹರೀಶ್ ಪೂಂಜಾ ಮಾತ್ರ ನಾನು ಬರುವುದಿಲ್ಲ ಎಂದು ಹೇಳಿದರು. ವಿಷಯ ತಿಳಿದ ಪೂಂಜಾ ಬೆಂಬಲಿಗರು ಭಾರೀ ಸಂಖ್ಯೆಯಲ್ಲಿ ಸೇರಿದರು.
ಪೊಲೀಸರು ಮತ್ತು ಕಾರ್ಯಕರ್ತರ ಮಧ್ಯೆ ವಾಗ್ವಾದ ನಡೆಯುತ್ತಿದ್ದಂತೆ ಹರೀಶ್ ಪೂಂಜಾ ಮನೆಗೆ ಹೆಚ್ಚುವರಿ ಪೋಲಿಸರು ಆಗಮಿಸಿದರು. ಪುತ್ತೂರು ಡಿವೈಎಸ್ ಪಿ ಅರುಣ್ ನಾಗೇಗೌಡ ನೇತೃತ್ವದಲ್ಲಿ 150 ಕ್ಕೂ ಅಧಿಕ ಪೊಲೀಸ ಆಗಮಿಸಿದರು. ಆದರೆ ಪೊಲಿಸರನ್ನು ಮನೆಯ ಒಳಗೆ ಹೋಗಲು ಕಾರ್ಯಕರ್ತರು ಬಿಡಲಿಲ್ಲ.
ಈ ಸಂದರ್ಭದಲ್ಲಿ ಡಿವೈಎಸ್ಪಿ ಹಾಗೂ ಸರ್ಕಲ್ ಪೋಲಿಸ್ ಅಧಿಕಾರಿಗಳು ಹರೀಶ್ ಪೂಂಜಾ ಜೊತೆ ಮಾತುಕತೆ ನಡೆಸಿದರು. ವಕೀಲರು ಸ್ಥಳಕ್ಕೆ ಆಗಮಿಸಿ ನೋಟಿಸ್ ನೀಡದೇ ಬಂಧನ ಮಾಡುವುದು ಎಷ್ಟು ಸರಿ. ಈ ಪ್ರಕರಣಕ್ಕೆ ಜಾಮೀನು ರಹಿತ ಸೆಕ್ಷನ್ ಸೇರಿಸಿದ್ದು ಎಷ್ಟು ಸರಿ ಎಂದು ಪ್ರಶ್ನಿಸಿದರು. ಬೆಳಗ್ಗೆಯಿಂದ ಸಂಜೆಯವರೆಗೂ ಭಾರೀ ಹೈಡ್ರಾಮಾ ನಡೆದು ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿ ಬಂಧನ ಮಾಡದೇ ತೆರಳಿದರು.
ಶಾಸಕರು ಏನೋ ಉದ್ವೇಗದಿಂದ ಮಾತಾಡಿದ್ದಾರೆ. ಆದರೆ ದುರುದ್ದೇಶದಿಂದ ಕೂಡಿಲ್ಲ. ಇದನ್ನೇ ನೆಪ ಮಾಡಿಕೊಂಡು ಶಾಸಕರ ಬಂಧನಕ್ಕೆ ಮುಂದಾಗಿರುವುದು ಸರಿಯಲ್ಲ. ಮುಂದೆ ಆಗುವ ಅನಾಹುತಗಳಿಗೆ ಪೊಲೀಸರೇ ಹೊಣೆಯಾಗುತ್ತಾರೆ ಎಂದು ಎಚ್ಚರಿಕೆ ನೀಡಿದ್ದರು.
ಹರೀಶ್ ಪೂಂಜಾ ಅವರನ್ನು ಬಂಧನ ಮಾಡಿದರೆ ನಾಳೆ ದಕ್ಷಿಣ ಕನ್ನಡ ಬಂದ್ಗೆ ಕರೆ ನೀಡಲಾಗುವುದು ಎಂದು ನಳಿನ್ ಕುಮಾರ್ ಕಟೀಲ್ ಹೇಳಿದ್ದರು.
ಏನಿದು ಪ್ರಕರಣ?
ಅನುಮತಿ ಪಡೆಯದೇ ಪ್ರತಿಭಟನೆ (Protest) ನಡೆಸಿ ಬೆಳ್ತಂಗಡಿ ಪೊಲೀಸರಿಗೆ ಬೆದರಿಕೆ ಅರೋಪದ ಮೇಲೆ ಹರೀಶ್ ಪೂಂಜಾ ವಿರುದ್ಧ ಕೇಸ್ ದಾಖಲಾಗಿತ್ತು. ಅರೆಸ್ಟ್ ಆಗಿರುವ ಕಾರ್ಯಕರ್ತರಿಗಾಗಿ ಪೊಲೀಸರ ಕಾಲರ್ ಹಿಡಿಯಲು ಸಿದ್ದ ಬೆಂಗಳೂರಿನ ಡಿ.ಜೆ ಹಳ್ಳಿ, ಕೆ.ಜೆ ಹಳ್ಳಿಯ ಪೊಲೀಸ್ ಠಾಣೆಗೆ ಆದ ಗತಿಯನ್ನು ಬೆಳ್ತಂಗಡಿ ಠಾಣೆಗೂ ಕಾಣಿಸ್ತೇನೆ ಎಂದು ಹರೀಶ್ ಪೂಂಜಾ ಬೆದರಿಕೆ ಹಾಕಿದ್ದರು. ಈ ಸಂಬಂಧ ಬೆಳ್ತಂಗಡಿ ಬಿಜೆಪಿ ಶಾಸಕರ ವಿರುದ್ಧ ಐಪಿಸಿ 143, 147, 341, 504, 506 ಜೊತೆಗೆ 149 ಸೆಕ್ಷನ್ಗಳ ಅಡಿ ಒಟ್ಟು ಎರಡು ಕೇಸ್ ದಾಖಲಾಗಿತ್ತು.
ಮಂಗಳೂರು: ಬಿಜೆಪಿ ಶಾಸಕ ಹರೀಶ್ ಪೂಂಜಾ (Harish Poonja) ಬಂಧನಕ್ಕೆ ಪೊಲೀಸರು ಮುಂದಾಗಿದ್ದು, ಬೆಳ್ತಂಗಡಿಯಲ್ಲಿ (Belthangady) ಇಡೀ ದಿನ ಭಾರೀ ಹೈಡ್ರಾಮಾ ನಡೆಯಿತು.
ಇವತ್ತು ಬೆಳಗ್ಗೆಯೇ ಹರೀಶ್ ಪೂಂಜಾ ಬಂಧಿಸಲು ಪೊಲೀಸರು ಅವರ ಗರ್ಡಾಡಿಯ ಮನೆಗೆ ಬಂದಿದ್ದರು. ಹರೀಶ್ ಪೂಂಜಾ ಮಾತ್ರ ನಾನು ಬರುವುದಿಲ್ಲ ಎಂದು ಹೇಳಿದರು. ಭಾರೀ ಸಂಖ್ಯೆಯಲ್ಲಿ ಕಾರ್ಯಕರ್ತರು ಸೇರಿದ ಕಾರಣ ಭಾರೀ ಸಂಖ್ಯೆಯಲ್ಲಿ ಪೊಲೀಸರು ಸಹ ಆಗಮಿಸಿದ್ದರು. ಇನ್ನೊಂದು ಕಡೆ ವಕೀಲರು ಸಹ ಮನೆಗೆ ಆಗಮಿಸಿದರು.
ವಿಷಯ ತಿಳಿದ ಪೂಂಜಾ ಬೆಂಬಲಿಗರು ಭಾರೀ ಸಂಖ್ಯೆಯಲ್ಲಿ ಸೇರಿದರು. ಸಂಸದ ನಳಿನ್ ಕುಮಾರ್ ಕಟೀಲ್ (Nalin Kumar Kateel) ದಕ್ಷಿಣ ಕನ್ನಡ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟಾ (Brijesh Chauta) ಸೇರಿ ಹಲವರು ಆಗಮಿಸಿದರು. ಯಾವುದೇ ಕಾರಣಕ್ಕೂ ಪೂಂಜಾ ಬಂಧಿಸಬಾರದು. ಪೊಲೀಸರು ವಾಪಸ್ ಹೋಗ್ಬೇಕು ಎಂದು ಬಿಜೆಪಿ ಕಾರ್ಯಕರ್ತರು ಪಟ್ಟು ಹಿಡಿದರು.
ಉದ್ದೇಶಪೂರ್ವಕವಾಗಿ ಪೂಂಜಾರನ್ನು ಜೈಲಿಗೆ ಕಳಿಸುವ ಷಡ್ಯಂತ್ರ ನಡೆದಿದೆ ಎಂದು ಆಕ್ರೋಶ ಹೊರಹಾಕಿದರು. ಶಾಸಕರು ಏನೋ ಉದ್ವೇಗದಿಂದ ಮಾತಾಡಿದ್ದಾರೆ. ಆದರೆ ದುರುದ್ದೇಶದಿಂದ ಕೂಡಿಲ್ಲ. ಇದನ್ನೇ ನೆಪ ಮಾಡಿಕೊಂಡು ಶಾಸಕರ ಬಂಧನಕ್ಕೆ ಮುಂದಾಗಿರೋದು ಸರಿಯಲ್ಲ. ಮುಂದೆ ಆಗುವ ಅನಾಹುತಗಳಿಗೆ ಪೊಲೀಸರೇ ಹೊಣೆ ಆಗ್ತಾರೆ ಎಂದು ಬಿಜೆಪಿ ಎಚ್ಚರಿಕೆ ನೀಡಿತ್ತು.
ಪ್ರತಿಭಟನೆ ಜೋರಾಗುತ್ತಿದ್ದಂತೆ ಪೊಲೀಸರು ವಿಚಾರಣೆಗೆ ಹಾಜರಾಗಬೇಕೆಂದು ಸೂಚಿಸಿ ಹರೀಶ್ ಪೂಂಜಾ ಅವರಿಗೆ ನೋಟಿಸ್ ಜಾರಿ ಮಾಡಿ ತೆರಳಿದರು.
ಅನುಮತಿ ಪಡೆಯದೇ ಪ್ರತಿಭಟನೆ (Protest) ನಡೆಸಿ ಬೆಳ್ತಂಗಡಿ ಪೊಲೀಸರಿಗೆ ಬೆದರಿಕೆ ಅರೋಪದ ಮೇಲೆ ಹರೀಶ್ ಪೂಂಜಾ ವಿರುದ್ಧ ಕೇಸ್ ದಾಖಲಾಗಿತ್ತು. ಅರೆಸ್ಟ್ ಆಗಿರುವ ಕಾರ್ಯಕರ್ತರಿಗಾಗಿ ಪೊಲೀಸರ ಕಾಲರ್ ಹಿಡಿಯಲು ಸಿದ್ದ ಬೆಂಗಳೂರಿನ ಡಿ.ಜೆ ಹಳ್ಳಿ, ಕೆ.ಜೆ ಹಳ್ಳಿಯ ಪೊಲೀಸ್ ಠಾಣೆಗೆ ಆದ ಗತಿಯನ್ನು ಬೆಳ್ತಂಗಡಿ ಠಾಣೆಗೂ ಕಾಣಿಸ್ತೇನೆ ಎಂದು ಹರೀಶ್ ಪೂಂಜಾ ಬೆದರಿಕೆ ಹಾಕಿದ್ದರು.
ಈ ಸಂಬಂಧ ಬೆಳ್ತಂಗಡಿ ಬಿಜೆಪಿ ಶಾಸಕರ ವಿರುದ್ಧ ಐಪಿಸಿ 143, 147, 341, 504, 506 ಜೊತೆಗೆ 149 ಸೆಕ್ಷನ್ಗಳ ಅಡಿ ಒಟ್ಟು ಎರಡು ಕೇಸ್ ದಾಖಲಾಗಿತ್ತು.
ಉಡುಪಿ: ಏಪ್ರಿಲ್ 14ರ ಸಂಜೆ 4ಕ್ಕೆ ಮಂಗಳೂರಿನ (Mangaluru) ಗೋಲ್ಡ್ ಫಿಂಚ್ (Gold Finch) ಮೈದಾನದಲ್ಲಿ ಪ್ರಧಾನಿ ಮೋದಿ (Narendra Modi) ಸಮಾವೇಶ ಉದ್ದೇಶಿಸಿ ಮಾತನಾಡುತ್ತಾರೆ. ಲಕ್ಷ ಸಂಖ್ಯೆಯಲ್ಲಿ ಕಾರ್ಯಕರ್ತರು, ಮತದಾರರು ಭಾಗಿಯಾಗಲಿದ್ದಾರೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ (Nalin Kumar Kateel) ಹೇಳಿದರು.
ಈಶ್ವರಪ್ಪ (KS Eshwarappa) ನಮ್ಮ ಕಟ್ಟಾಳು ಇಡೀ ರಾಜ್ಯದಲ್ಲಿ ಬಿಜೆಪಿ (BJP) ಬೆಳವಣಿಗೆಗೆ ಅವರೂ ಕಾರಣರಾದವರು. ಸಹಜವಾಗಿಯೇ ತನ್ನ ಭಾವನೆಯನ್ನು ವ್ಯಕ್ತಪಡಿಸುತ್ತಿದ್ದಾರೆ. ಹಿರಿಯರು ಅವರ ಜೊತೆ ಮಾತನಾಡುತ್ತಾರೆ. ಇದು ವಿಚಾರಧಾರೆಗಳ ನಡುವಿನ ಚುನಾವಣೆ. ಇಲ್ಲಿ ಜಾತಿ ರಾಜಕೀಯ ಇಲ್ಲ. ಕಾಂಗ್ರೆಸ್ ವಿರುದ್ಧ ನಮ್ಮ ಹೋರಾಟ ಎಂದು ಹೇಳಿದರು. ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಇಂಡಿಯಾ ಒಕ್ಕೂಟದ ನಡುವೆ ಸೀಟು ಹಂಚಿಕೆ ಫೈನಲ್
ದಿಂಗಾಲೇಶ್ವರ ಶ್ರೀ ವಿವಾದದ ವಿಚಾರವಾಗಿ ಮಾತನಾಡಿದ ಅವರು, ಚುನಾವಣೆ ಬಂದಾಗ ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಮಾತನಾಡುವ ಹಕ್ಕಿದೆ. ಅದು ಅವರ ವೈಯಕ್ತಿಕ ಅಭಿಪ್ರಾಯ. ದಿಂಗಾಲೇಶ್ವರ ಸ್ವಾಮಿಗಳು ಅವರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಇದರ ಲಾಭ ಪಡೆಯುತ್ತಿದೆ ಎಂದರೆ ಆ ಪಕ್ಷದ ವೈಫಲ್ಯತೆ ಕಾಣುತ್ತದೆ. ಅಭ್ಯರ್ಥಿ ಇಲ್ಲದ ಕಾರಣ ಇದ್ದಬದ್ದವರ ಕೈಕಾಲು ಹಿಡಿಯುವ ಪರಿಸ್ಥಿತಿ ಬಂದಿದೆ. ರಾಜ್ಯದಲ್ಲಿ ಕಾಂಗ್ರೆಸ್ ಹೀನಾಯವಾದ ಸ್ಥಿತಿಯಲ್ಲಿದೆ. ಅಧಿಕಾರ ಇದ್ದರೂ ಲೋಕಸಭಾ ಚುನಾವಣೆ ಗೆಲ್ಲಲು ಆಗುತ್ತಿಲ್ಲ ಎಂದು ಟೀಕಿಸಿದರು. ಇದನ್ನೂ ಓದಿ: ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ಗೆ ʻZ’ ಕೆಟಗರಿ ಭದ್ರತೆ
ರಾಜ್ಯದಲ್ಲಿ ಬಿಜೆಪಿ ಅತೀ ಹೆಚ್ಚು ಸ್ಥಾನ ಗೆಲ್ಲುತ್ತದೆ. ಕಾಂಗ್ರೆಸ್ ಅಭ್ಯರ್ಥಿಯ ಹುಡುಕಾಟದಲ್ಲಿದೆ. ಉಡುಪಿ ಚಿಕ್ಕಮಗಳೂರಿನಲ್ಲಿ ಬಿಜೆಪಿಯಲ್ಲಿ ಇದ್ದ ಹೆಗಡೆಯನ್ನು ತೆಗೆದುಕೊಂಡರು. ರಾಜ್ಯದಲ್ಲಿ ಆಡಳಿತ ವೈಫಲ್ಯ ಆಗಿದೆ. ಅಭಿವೃದ್ಧಿ ಯೋಜನೆ ಇಲ್ಲದ ಭ್ರಷ್ಟಾಚಾರದ ಆಡಳಿತ ರಾಜ್ಯದಲ್ಲಿದೆ. ಯಾವ ಗುಂಪಿಗೆ ಎಷ್ಟು ಪಾಲು ಹಂಚಿಕೊಳ್ಳಬೇಕು ಎಂಬ ತಕರಾರು ಇದೆ. ಡಿಕೆಶಿಗೆ ಎಷ್ಟು ಸೀಟು ಸಿದ್ದರಾಮಯ್ಯನಿಗೆ ಎಷ್ಟು ಸೀಟು ಎಂದು ಚರ್ಚೆ ನಡೆಯುತ್ತಿದೆ. ಯಾವ ಗುಂಪಿಗೆ ಎಷ್ಟು ಕೊಡಬೇಕು ಎಂಬ ಚರ್ಚೆ ಇದೆ. ಮುಳುಗುವವನಿಗೆ ಹುಲ್ಲು ಕಡ್ಡಿ ಸಾಕು ಎಂಬಂತೆ ಕಾಂಗ್ರೆಸ್ನ ಸ್ಥಿತಿಯಾಗಿದೆ. ಬೆಂಗಳೂರು ಉತ್ತರ ಕ್ಷೇತ್ರವನ್ನು ಅತಿ ಹೆಚ್ಚು ಮತದಲ್ಲಿ ಬಿಜೆಪಿ ಗೆಲ್ಲುತ್ತದೆ. ಎಲ್ಲಾ ನಾಯಕರು ಪ್ರಚಾರಕ್ಕೆ ಬರುತ್ತಾರೆ ಎಂದು ತಿಳಿಸಿದರು. ಇದನ್ನೂ ಓದಿ: ಪಾಕ್-ಸೌದಿ ಸಭೆಯಲ್ಲಿ ಕಾಶ್ಮೀರ ಗಡಿ ಸಮಸ್ಯೆ ಪ್ರಸ್ತಾಪ – ಪಾಕ್ಗೆ ಭಾರತ ನೀಡಿದ ಎಚ್ಚರಿಕೆ ಏನು?
ಮಂಗಳೂರು: ತಿರುವನಂತಪುರಂ-ಕಾಸರಗೋಡು ನಡುವೆ ಸಂಚರಿಸುತ್ತಿದ್ದ ವಂದೇ ಭಾರತ್ ಎಕ್ಸ್ಪ್ರೆಸ್ (Vande Bharat Express) ರೈಲನ್ನು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ (Nalin Kumar Kateel) ಅವರ ಮನವಿಯ ಮೇರೆಗೆ ಮಂಗಳೂರಿನವರೆಗೆ (Mangaluru) ವಿಸ್ತರಣೆ ಮಾಡಲಾಗಿದೆ.
ಇಂದು (ಫೆ.21) ರೈಲ್ವೆ ಮಂಡಳಿ ಹೊರಡಿಸಿರುವ ಆದೇಶದ ಪ್ರಕಾರ, ವಂದೇ ಭಾರತ್ ರೈಲು ಇನ್ನು ಮುಂದೆ ತಿರುವನಂತಪುರ-ಮಂಗಳೂರು ನಡುವೆ ಸಂಚರಿಸಲಿದೆ. ಹೊಸ ರೈಲ್ವೆ ವೇಳಾ ಪಟ್ಟಿಯಂತೆ ಈ ರೈಲು ಮಂಗಳೂರಿನಿಂದ ಬೆಳಗ್ಗೆ 06:15ಕ್ಕೆ ಹೊರಟು ಅಪರಾಹ್ನ 3:05ಕ್ಕೆ ತಿರುವನಂತಪುರಂ ಅನ್ನು ತಲುಪಲಿದೆ. ಹಾಗೆಯೇ ತಿರುವನಂತಪುರಂನಿಂದ ಸಂಜೆ 4:05ಕ್ಕೆ ಹೊರಟು ಮಂಗಳೂರನ್ನು ರಾತ್ರಿ 12:40ಕ್ಕೆ ತಲುಪಲಿದೆ.
ಬುಧವಾರ ಹೊರತು ಪಡಿಸಿ ವಾರದ 6 ದಿನಗಳೂ ವಂದೇ ಭಾರತ್ ರೈಲು ಸಂಚರಿಸಲಿದೆ. ಸಂಸದರ ಮನವಿ ಪುರಸ್ಕರಿಸಿ ವಂದೇ ಭಾರತ್ ರೈಲನ್ನು ಮಂಗಳೂರುವರೆಗೆ ವಿಸ್ತರಿಸಿದ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ (Ashwini Vaishnav) ಅವರಿಗೆ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.
ಮಂಗಳೂರು: ಕೇಂದ್ರ ಸರ್ಕಾರದ ನಿವೃತ್ತ ನೌಕರರ ಬಹುದಿನ ಬೇಡಿಕೆಯಾದ ಸೆಂಟ್ರಲ್ ಗವರ್ನ್ ಮೆಂಟ್ ಹೆಲ್ತ್ ಸ್ಕೀಮ್ (CGHS) ವೆಲ್ ನೆಸ್ ಸೆಂಟರ್ ಅನ್ನು ಮಂಗಳೂರಿನಲ್ಲಿ ತೆರೆಯಲು ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.
ಸಂಸದ ನಳಿನ್ ಕುಮಾರ್ (Nalin Kumar Kateel) ಪ್ರಯತ್ನದಿಂದ ಬಹುದಿನದ ಬೇಡಿಕೆ ಈಡೇರಿದ್ದು, ಕಳೆದ ಬಾರಿ ಕೇಂದ್ರ ಆರೋಗ್ಯ ಸಚಿವರಿಗೆ ಭೇಟಿಯಾಗಿ ಮಂಗಳೂರಿನಲ್ಲಿ CGHS ವೆಲ್ ನೆಸ್ ಸೆಂಟರ್ ನ್ನು ತೆರೆಯುವಂತೆ ಮನವಿ ಮಾಡಿದ್ದರು. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಡಾ. ಮನ್ ಸುಖ್ ಮಾಂಡವೀಯ ಅವರು ನಳಿನ್ ಕುಮಾರ್ ರವರಿಗೆ ಪತ್ರ ಬರೆದು ಮಂಗಳೂರು (Mangaluru) ಸೇರಿದಂತೆ ದೇಶದ 20 ನಗರಗಳಲ್ಲಿ CGHS ವೆಲ್ ನೆಸ್ ಸೆಂಟರ್ ಗಳನ್ನು ತೆರೆಯುತ್ತಿರುವುದಾಗಿ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಹಾಗೂ ನೆರೆಯ ಜಿಲ್ಲೆಗಳ 50ಕ್ಕೂ ಅಧಿಕ ಕೇಂದ್ರ ಸರ್ಕಾರದ ಇಲಾಖೆಗಳ ಸುಮಾರು 5,500 ಉದ್ಯೋಗಿಗಳಿದ್ದು, 29,000 ಕ್ಕೂ ಅಧಿಕ ನಿವೃತ್ತ ಕೇಂದ್ರ ಸರ್ಕಾರದ ಉದ್ಯೋಗಿಗಳಿದ್ದಾರೆ. ಮಂಗಳೂರಿನಲ್ಲಿ ಈ ಕೇಂದ್ರ ಪ್ರಾರಂಭವಾಗುವುದರಿಂದ ಅವರು ನಿಯಮಾನುಸಾರ ವೈದ್ಯಕೀಯ ಚಿಕಿತ್ಸೆ ಪಡೆಯಲು ಅನುಕೂಲವಾಗುತ್ತದೆ. ತಮ್ಮ ಮನವಿಯನ್ನು ಪುರಸ್ಕರಿಸಿ ಮಂಗಳೂರಿಗೆ CGHS ವೆಲ್ ನೆಸ್ ಸೆಂಟರ್ ಅನ್ನು ಮಂಜೂರು ಮಾಡಿದ ಕೇಂದ್ರ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾಧ ಡಾ. ಮನ್ ಸುಖ್ ಮಾಂಡವೀಯರವರಿಗೆ ಸಂಸದರು ಕೃತಜ್ಞತೆ ಸಲ್ಲಿಸಿದ್ದಾರೆ.
ಏನಿದು CGHS ಸ್ಕೀಮ್?, ಫಲಾನುಭವಿಗಳು ಯಾರು?: ಈ ಯೋಜನೆಯು ಕೇಂದ್ರ ಸರ್ಕಾರಿ ನೌಕರರು, ಪಿಂಚಣಿದಾರರು ಹಾಗೂ ಅವರ ಅವಲಂಬಿತರಿಗೆ ಇರುವ ಆರೋಗ್ಯ ವಿಮಾ ಸೇವೆಯಾಗಿದೆ. ಸ್ವಾತಂತ್ರ್ಯ ಹೋರಾಟಗಾರರು, ಮಾಜಿ ರಾಜ್ಯಪಾಲರು, ಮಾಜಿ ಲೆಫ್ಟಿನೆಂಟ್ ಗವರ್ನರ್ಗಳು, ಹೈಕೋರ್ಟ್ ನಿವೃತ್ತ ನ್ಯಾಯಾಧೀಶರು, ರೈಲ್ವೆ ಬೋರ್ಡ್ ಉದ್ಯೋಗಿಗಳು, ಮಾಜಿ ಮತ್ತು ಹಾಲಿ ಸಂಸದರು, ಪೋಸ್ಟಲ್ ಮತ್ತು ಟೆಲಿಗ್ರಾಫ್ ಇಲಾಖೆಯ ಉದ್ಯೋಗಿಗಳು ಕೂಡ ಈ ಯೋಜನೆಗೆ ಫಲಾನುಭವಿಗಳಾಗಿರುತ್ತಾರೆ.
CGHS ಮೊತ್ತ ಎಷ್ಟು?: ಒಪಿಡಿ ದರ: 350 ರೂ., ಐಪಿಡಿ ಕನ್ಸಲ್ಟೇಶನ್ ಶುಲ್ಕ: 350 ರೂ., ಐಸಿಯು ಸರ್ವಿಸಸ್: 5,400, ಆಸ್ಪತ್ರೆಯ ಜನರಲ್ ರೂಮ್ ಬಾಡಿಗೆ ದರ: 1,500 ರೂ., ಸೆಮಿ ಪ್ರೈವೇಟ್ ವಾರ್ಡ್: 3,500 ರೂ., ಖಾಸಗಿ ರೂಮ್ ದರ: 4,500 ರೂ. ಆಗಿರುತ್ತದೆ.