Tag: Nalini

  • ನ್ಯಾಯಾಲಯಕ್ಕೆ ಬನ್ನಿ – ಸಿದ್ದುಗೆ ಪತ್ರ ಬರೆದು ಸವಾಲೆಸೆದ ಹಿರಿಯ ವಕೀಲ

    ನ್ಯಾಯಾಲಯಕ್ಕೆ ಬನ್ನಿ – ಸಿದ್ದುಗೆ ಪತ್ರ ಬರೆದು ಸವಾಲೆಸೆದ ಹಿರಿಯ ವಕೀಲ

    ಮೈಸೂರು: ಫ್ರೀ ಕಾಶ್ಮೀರ ಫಲಕ ಪ್ರದರ್ಶನ ವಿಚಾರದಲ್ಲಿ ಆರೋಪಿ ನಳಿನಿ ಪರ ಬ್ಯಾಟಿಂಗ್ ಮಾಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಮೈಸೂರಿನ ಹಿರಿಯ ವಕೀಲ ಪಿ.ಜೆ. ರಾಘವೇಂದ್ರ ಬಹಿರಂಗ ಪತ್ರ ಬರೆದಿದ್ದಾರೆ.

    ಇತ್ತೀಚೆಗೆ ಸಿದ್ದರಾಮಯ್ಯ ಅವರು ಫ್ರೀ ಕಾಶ್ಮೀರ ಫಲಕ ಹಿಡಿದರೆ ಅದು ದೇಶದ್ರೋಹವಲ್ಲ ಎಂದು ಹೇಳಿದ್ದರು. ಹೀಗಾಗಿ ಹಿರಿಯ ನ್ಯಾಯಾವದಿ ಪಿ.ಜೆ. ರಾಘವೇಂದ್ರ ಅವರು ಸಿದ್ದರಾಮಯ್ಯ ಅವರಿಗೆ ಪತ್ರ ಬರೆಯುವ ಮೂಲಕ ನ್ಯಾಯಾಲಯಕ್ಕೆ ಆಹ್ವಾನಿಸಿದ್ದಾರೆ.

    ಪತ್ರದಲ್ಲಿ ಏನಿದೆ?
    ಫ್ರೀ ಕಾಶ್ಮೀರ ಫಲಕ ಹಿಡಿದರೆ ದೇಶದ್ರೋಹವಲ್ಲ ಎಂದಿದ್ದಾರೆ ಸಿದ್ದರಾಮಯ್ಯ. ಸಿದ್ದರಾಮಯ್ಯನವರೂ ಕಾನೂನು ಪದವೀಧರರು, ವಕೀಲರಾಗಿದ್ದವರು. ಈಗಲೂ ವಕೀಲರಾಗಿ ಕಾರ್ಯ ನಿರ್ವಹಿಸಬಲ್ಲವರು.

    ಫ್ರೀ ಕಾಶ್ಮೀರ ಫಲಕ ಹಿಡಿದರೆ ದೇಶದ್ರೋಹವಲ್ಲ ಎಂದು ಸಿದ್ದರಾಮಯ್ಯನವರು ಮಾಧ್ಯಮಗಳ ಮುಂದೆ ಗುಡುಗುವ ಬದಲಾಗಿ ಅವರೇ ಕರಿಕೋಟು ಧರಿಸಿ ನ್ಯಾಯಾಲಯದಲ್ಲಿ ಆಪಾದಿತೆಯಾದ ನಳಿನಿಯ ಪರವಾಗಿ ವಕಾಲತ್ತು ವಹಿಸಲಿ. ಆಕೆಯ ವಿರುದ್ಧ ದಾಖಲಾದ ಪ್ರಕರಣವನ್ನೇ ರದ್ದುಗೊಳಿಸುವಂತೆ ನ್ಯಾಯಾಲಯದಲ್ಲಿ ವಾದ ಮಂಡಿಸುವುದರ ಜೊತೆಗೆ ಈ ಪ್ರಕರಣವನ್ನು ದಾಖಲಿಸಿದ ಪೊಲೀಸರು ಮತ್ತು ರಾಜ್ಯ ಸರ್ಕಾರಕ್ಕೆ ದಂಡ ವಿಧಿಸಿ ಆ ದಂಡದ ಮೊತ್ತವನ್ನು ಪರಿಹಾರದ ರೂಪದಲ್ಲಿ ಆಪಾದಿತೆ ನಳಿನಿಗೆ ದೊರಕಿಸುವಂತೆ ಸಂವಿಧಾನಬದ್ಧವಾಗಿ ಹೋರಾಟ ನಡೆಸಲಿ ಎಂದು ಬರೆದಿದ್ದಾರೆ.

  • ‘ಫ್ರೀ ಕಾಶ್ಮೀರ’ ಪ್ಲೇ ಕಾರ್ಡ್ ಪ್ರದರ್ಶನ ಕೇಸ್- ವಕಾಲತ್ತಿಗೆ ವಕೀಲರ ಸಹಿ ದುರ್ಬಳಕೆ ಆರೋಪ

    ‘ಫ್ರೀ ಕಾಶ್ಮೀರ’ ಪ್ಲೇ ಕಾರ್ಡ್ ಪ್ರದರ್ಶನ ಕೇಸ್- ವಕಾಲತ್ತಿಗೆ ವಕೀಲರ ಸಹಿ ದುರ್ಬಳಕೆ ಆರೋಪ

    ಮೈಸೂರು: ಮಾನಸಗಂಗೋತ್ರಿ ‘ಫ್ರೀ ಕಾಶ್ಮೀರ’ ಪ್ಲೇ ಕಾರ್ಡ್ ಪ್ರದರ್ಶನ ಪ್ರಕರಣದಲ್ಲಿ ಆರೋಪಿ ಪರ ವಕಾಲತ್ತಿನಿಂದ ಇಬ್ಬರು ಮೈಸೂರು ವಕೀಲರು ಹಿಂದೆ ಸರಿದಿದ್ದು, ವಕಾಲತ್ತು ಅರ್ಜಿ ದುರ್ಬಳಕೆ ಮಾಡಲಾಗಿದೆ ಎಂದು ಮೈಸೂರು ವಕೀಲರ ಸಂಘಕ್ಕೆ ದೂರು ನೀಡಿದ್ದಾರೆ.

    ವಕೀಲರಾದ ಶ್ರೀಕೃಷ್ಣ ಹಾಗೂ ನಾಗರಾಜು ಅವರು ದೂರು ನೀಡಿದ್ದಾರೆ. ನಿನ್ನೆ ಮೈಸೂರು ಜಿಲ್ಲಾ ನ್ಯಾಯಾಲಯದ ವಕೀಲರಿಂದ ವಕಾಲತ್ತು ಸಲ್ಲಿಕೆ ಆಗಿತ್ತು. ಮೈಸೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಕಾಲತ್ತು ಸ್ವೀಕರಿಸಿದ್ದರು. ಆದರೆ, ವಕೀಲರಿಗೆ ವಕಾಲತ್ತಿನ ವಿಚಾರವೇ ತಿಳಿಸದೆ ಸಹಿ ಪಡೆಯಲಾಗಿದೆ ಎಂದು ಈ ಇಬ್ಬರು ವಕೀಲರು ಆರೋಪಿಸಿದ್ದಾರೆ.

    ‘ಫ್ರೀ ಕಾಶ್ಮೀರ’ ನಾಮಫಲಕ ಪ್ರದರ್ಶನ ಪ್ರಕರಣದ ಆರೋಪಿಗಳ ಪರ ವಕಾಲತ್ತು ವಹಿಸದಂತೆ ಮೈಸೂರು ವಕೀಲರ ಸಂಘ ನಿರ್ಣಯ ಕೈಗೊಂಡಿದೆ. ಸಂಘದ ನಿರ್ಣಯಕ್ಕೆ ನಾವು ಬದ್ಧರಾಗಿದ್ದೇವೆ. ಕೆಲವರು ನಮ್ಮ ಸಹಿ ಪಡೆದು ಅದನ್ನು ದುರುಪಯೋಗಪಡಿಸಿಕೊಂಡು ದುರ್ಬಳಕೆ ಮಾಡಿದ್ದಾರೆ. ಸಂಘದ ನಿರ್ಣಯಕ್ಕೆ ಬದ್ಧರಾಗಿ ವಕಾಲತ್ತಿನಿಂದ ಹಿಂದೆ ಸರಿಯುತ್ತೇವೆ ಎಂದು ಈ ಇಬ್ಬರು ವಕೀಲರು ಮೈಸೂರು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಆನಂದಕುಮಾರ್ ಗೆ ಪತ್ರ ಬರೆದಿದ್ದಾರೆ. ಈ ಪತ್ರದ ಜೊತೆ ವಕಾಲತ್ತು ವಾಪಸ್ಸು ಪಡೆಯುವ ಅರ್ಜಿಯನ್ನು ಲಗತ್ತಿಸಿದ್ದಾರೆ.

    ಮೈಸೂರು ಜಿಲ್ಲಾ ನ್ಯಾಯಾಲಯದ ಯುವ ವಕೀಲರು ಫ್ರೀ ಕಾಶ್ಮೀರ ನಾಮಫಲಕ ಪ್ರದರ್ಶನ ಪ್ರಕರಣದಲ್ಲಿ ಆರೋಪಿಗಳ ಪರ ವಕಾಲತ್ತು ವಹಿಸಬೇಡಿ. ಈ ಹಿಂದೆ ಸಹ ಇಂತಹ ಪ್ರಕರಣಗಳಲ್ಲಿ ಆರೋಪಿಗಳ ಪರ ಜಿಲ್ಲಾ ನ್ಯಾಯಾಲಯದ ವಕೀಲರು ವಕಾಲತ್ತು ವಹಿಸಿಲ್ಲ. ಶಂಕಿತ ಉಗ್ರರಾದ ಫಹಾದ್ ಮತ್ತು ಅಲಿ ಪ್ರಕರಣದಲ್ಲೂ ವಕಾಲತ್ತು ವಹಿಸಿಲ್ಲ. ಹೀಗಾಗಿ ಈ ಬಾರಿಯೂ ಇದೇ ದಿಟ್ಟ ನಿರ್ಣಯ ಕೈಗೊಳ್ಳಿ. ಈ ಮೂಲಕ ಸಂಘದ ಗೌರವ ಕಾಪಾಡಿ ಎಂದು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಆನಂದ್ ಕುಮಾರ್ ಗೆ ಮನವಿ ಸಲ್ಲಿಸಿದ್ದರು.

  • ಮಾಧ್ಯಮಗಳ ವಿರುದ್ಧ ಪ್ಲೇ ಕಾರ್ಡ್ ಗರ್ಲ್ ರಂಪಾಟ

    ಮಾಧ್ಯಮಗಳ ವಿರುದ್ಧ ಪ್ಲೇ ಕಾರ್ಡ್ ಗರ್ಲ್ ರಂಪಾಟ

    – ಕೋರ್ಟ್ ಆವರಣದಲ್ಲೇ ಮಾಧ್ಯಮಗಳ ವಿರುದ್ಧ ಆಕ್ರೋಶ

    ಮೈಸೂರು: ಮೈಸೂರಿನ ಮಾನಸಗಂಗೋತ್ರಿಯಲ್ಲಿ ನಡೆದ ಪ್ರತಿಭಟನೆ ವೇಳೆ ಫ್ರೀ ಕಾಶ್ಮಿರ್ ಪೋಸ್ಟರ್ ಹಿಡಿದಿದ್ದ ನಳಿನಿ ಮಂಗಳವಾರ ಮೈಸೂರು ಜಿಲ್ಲಾ ನ್ಯಾಯಾಲಯಕ್ಕೆ ಹಾಜರಾಗಿದ್ದಳು. ಈ ವೇಳೆ ನ್ಯಾಯಾಲಯದ ಹೊರಭಾಗದಲ್ಲಿದ್ದ ಮಾಧ್ಯಮದವರನ್ನು ಕಂಡು ರಂಪಾಟ ನಡೆಸಿದ್ದು, ಮಾಧ್ಯಮದವರನ್ನು ಕಂಡು ಕೆಂಡಾಮಂಡಲವಾಗಿದ್ದಾಳೆ.

    ಮಾಧ್ಯಮಗಳ ಕ್ಯಾಮೆರಾಗಳನ್ನು ನೋಡಿ ನ್ಯಾಯಾಲಯದ ಮುಂಭಾಗ ನಳಿನಿ ತಂದೆ ಮಾರ್ಗ ಬದಲಿಸಿದ್ದಾರೆ. ಈ ವೇಳೆ ತಂದೆ ಮೇಲೆಯೇ ಆಕ್ರೋಶ ಹೊರಹಾಕಿ, ರಸ್ತೆಯಲ್ಲೇ ಕುಳಿತಿದ್ದಾಳೆ. ನಳಿನಿಯನ್ನು ಸಮಾಧಾನ ಮಾಡಲು ತಂದೆ ಬಾಲಕುಮಾರ್ ಮುಂದಾದಾಗ ನಳಿನಿ ನಾವ್ಯಾಕೆ ಮಾಧ್ಯಮದವರ ಮುಂದೆ ಹೋಗಬೇಕು? ಅವರಿಗಾಗಿ ನಾವ್ಯಾಕೆ ದಾರಿ ಬದಲಿಸಬೇಕು ಎಂದು ಕೋಪದಿಂದಲೇ ಹೇಳಿದ್ದಾಳೆ.

    ನಂತರ ಮತ್ತೆ ಕ್ಯಾಮೆರಾಗಳ ಮುಂದೆಯೇ ನಡೆದು ಬಂದು, ನಮಗೆ ಖಾಸಗಿತನ ನೀಡಿ ಎಂದು ಕೂಗಾಡಿದ್ದಾಳೆ. ಇತ್ತೀಚೆಗೆ ಪೊಲೀಸರ ವಿಚಾರಣೆ ಬಳಿಕ ಸಹ ಮಾಧ್ಯಮಗಳ ವಿರುದ್ಧ ಆಕ್ರೋಶಗೊಂಡಿದ್ದ ನಳಿನಿ, ನನ್ನ ಹೇಳಿಕೆಯನ್ನು ಪತ್ರಿಕೆ, ವಿಡಿಯೋ ಮೂಲಕ ಹೇಳಿದ್ದೇನೆ. ಅದನ್ನು ಬಿಟ್ಟು ಬೇರೆ ಏನನ್ನೂ ಹೇಳುವುದಿಲ್ಲ ಎಂದು ಕಿಡಿಕಾರಿದ್ದಳು.

    ಮೈಸೂರಿನ ಮಾನಸಗಂಗೋತ್ರಿ ಕ್ಯಾಂಪಸ್‍ನಲ್ಲಿ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಫ್ರೀ ಕಾಶ್ಮೀರ್ ಪ್ಲೇ ಕಾರ್ಡ್ ಹಿಡಿದಿದ್ದ ವಿದ್ಯಾರ್ಥಿನಿಯನ್ನು ಪೊಲೀಸರು ಇತ್ತೀಚೆಗೆ ಸತತ 7 ಗಂಟೆಗಳ ಕಾಲ ವಿಚಾರಣೆ ಮಾಡಿದ್ದರು.

    ವಿಚಾರಣೆಯಲ್ಲಿ ಒಟ್ಟು 80 ಪ್ರಶ್ನೆ ಕೇಳಲಾಗಿತ್ತು. ಇದರಲ್ಲಿ ಕೆಲವೊಂದು ಪ್ರಶ್ನೆಗಳನ್ನು ಹೊರತುಪಡಿಸಿ ಎಲ್ಲ ಪ್ರಶ್ನೆಗಳಿಗೂ ನಳಿನಿ ಉತ್ತರಿಸಿದ್ದಾಳೆ. ಸದ್ಯಕ್ಕೆ ಮೊದಲ ಹಂತದ ವಿಚಾರಣೆ ಮುಗಿದಿದ್ದು, ಅವಶ್ಯಕತೆ ಇದ್ದರೆ ಮತ್ತೆ ವಿಚಾರಣೆಗೆ ಕರೆಯುತ್ತಾರೆ ಎಂಬ ಮಾಹಿತಿ ಮೂಲಗಳಿಂದ ಲಭ್ಯವಾಗಿತ್ತು.

    ವಿಚಾರಣೆ ಬಳಿಕ ಹೊರ ಬಂದ ನಳಿನಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಳು. ನಾನು ನನ್ನ ಹೇಳಿಕೆಯನ್ನು ಪತ್ರಿಕೆ ಹಾಗೂ ವಿಡಿಯೋ ಮೂಲಕ ಹೇಳಿದ್ದೇನೆ. ಅದನ್ನು ಬಿಟ್ಟು ಬೇರೆ ಏನು ಹೇಳುವುದಿಲ್ಲ. ಬೇರೆ ಏನು ಕೇಳಬೇಡಿ. ನಾನು ಏನನ್ನೂ ಹೇಳುವುದಿಲ್ಲ. ಪೊಲೀಸರ ವಿಚಾರಣೆಗೆ ಸಹಕರಿಸುತ್ತೇನೆ. ಮತ್ತೇನು ಹೇಳುವುದಿಲ್ಲ ಎಂದಿದ್ದಳು.

  • ಫ್ರೀ ಕಾಶ್ಮೀರ ಪ್ಲೇ ಕಾರ್ಡ್ ಹಿಡಿದ ಯುವತಿ ಪರ ವಕಾಲತ್ತು ವಹಿಸಲ್ಲ- ಮೈಸೂರು ವಕೀಲರು

    ಫ್ರೀ ಕಾಶ್ಮೀರ ಪ್ಲೇ ಕಾರ್ಡ್ ಹಿಡಿದ ಯುವತಿ ಪರ ವಕಾಲತ್ತು ವಹಿಸಲ್ಲ- ಮೈಸೂರು ವಕೀಲರು

    ಮೈಸೂರು: ಮಾನಸಗಂಗೋತ್ರಿ ಕ್ಯಾಂಪಸ್‍ನಲ್ಲಿ ಫ್ರೀ ಕಾಶ್ಮೀರ ನಾಮಫಲಕ ಪ್ರದರ್ಶನ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಮಫಲಕ ಪ್ರದರ್ಶಿದ ನಳಿನಿ ಪರ ನ್ಯಾಯಾಲಯದಲ್ಲಿ ವಕಾಲತ್ತು ವಹಿಸದೇ ಇರಲು ಮೈಸೂರು ವಕೀಲರ ಸಂಘ ನಿರ್ಣಯಿಸಿದೆ.

    ಸಂಘದ ಕಾರ್ಯಕಾರಿ ಸಮಿತಿಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಪೊಲೀಸರು ರಾಷ್ಟ್ರ ವಿರೋಧಿ ಪ್ರಕರಣ ದಾಖಲಿಸಿಕೊಂಡಿರುವ ಹಿನ್ನೆಲೆಯಲ್ಲಿ ವಕಾಲತ್ತು ವಹಿಸದಂತೆ ವಕೀಲರಿಗೆ ಸೂಚನೆ ನೀಡಲಾಗಿದೆ.

    ಮೈಸೂರು ಜಿಲ್ಲಾ ನ್ಯಾಯಾಲಯದ ಯುವ ವಕೀಲರು ಫ್ರೀ ಕಾಶ್ಮೀರ ನಾಮಫಲಕ ಪ್ರದರ್ಶನ ಪ್ರಕರಣದಲ್ಲಿ ಆರೋಪಿಗಳ ಪರ ವಕಾಲತ್ತು ವಹಿಸಬೇಡಿ. ಈ ಹಿಂದೆ ಸಹ ಇಂತಹ ಪ್ರಕರಣಗಳಲ್ಲಿ ಆರೋಪಿಗಳ ಪರ ಜಿಲ್ಲಾ ನ್ಯಾಯಾಲಯದ ವಕೀಲರು ವಕಾಲತ್ತು ವಹಿಸಿಲ್ಲ. ಶಂಕಿತ ಉಗ್ರರಾದ ಫಹಾದ್ ಮತ್ತು ಅಲಿ ಪ್ರಕರಣದಲ್ಲೂ ವಕಾಲತ್ತು ವಹಿಸಿಲ್ಲ. ಹೀಗಾಗಿ ಈ ಬಾರಿಯೂ ಇದೇ ದಿಟ್ಟ ನಿರ್ಣಯ ಕೈಗೊಳ್ಳಿ. ಈ ಮೂಲಕ ಸಂಘದ ಗೌರವ ಕಾಪಾಡಿ ಎಂದು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಆನಂದ್ ಕುಮಾರ್ ಗೆ ಮನವಿ ಸಲ್ಲಿಸಿದ್ದರು.

    ಮನವಿಗೆ ಸ್ಪಂದಿಸಿದ ಜಿಲ್ಲಾ ವಕೀಲರ ಸಂಘದ ಕಾರ್ಯಕಾರಿ ಸಮಿತಿ, ಆರೋಪಿ ನಳಿನಿ ಪರ ವಕಾಲತ್ತು ವಹಿಸದಿರುವ ಕುರಿತು ನಿರ್ಣಯ ಕೈಗೊಂಡಿದೆ.

    ಮೈಸೂರಿನ ಮಾನಸಗಂಗೋತ್ರಿ ಕ್ಯಾಂಪಸ್‍ನಲ್ಲಿ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಫ್ರೀ ಕಾಶ್ಮೀರ್ ಪ್ಲೇ ಕಾರ್ಡ್ ಹಿಡಿದಿದ್ದ ವಿದ್ಯಾರ್ಥಿನಿಗೆ ಪೊಲೀಸರು ಇತ್ತೀಚೆಗೆ ಸತತ 7 ಗಂಟೆಗಳ ಕಾಲ ವಿಚಾರಣೆ ಮಾಡಿದ್ದರು.

    ವಿಚಾರಣೆಯಲ್ಲಿ ಒಟ್ಟು 80 ಪ್ರಶ್ನೆ ಕೇಳಲಾಗಿತ್ತು. ಇದರಲ್ಲಿ ಕೆಲವೊಂದು ಪ್ರಶ್ನೆಗಳನ್ನು ಹೊರತುಪಡಿಸಿ ಎಲ್ಲ ಪ್ರಶ್ನೆಗಳಿಗೂ ನಳಿನಿ ಉತ್ತರಿಸಿದ್ದಾಳೆ. ಸದ್ಯಕ್ಕೆ ಮೊದಲ ಹಂತದ ವಿಚಾರಣೆ ಮುಗಿದಿದ್ದು, ಅವಶ್ಯಕತೆ ಇದ್ದರೆ ಮತ್ತೆ ವಿಚಾರಣೆಗೆ ಕರೆಯುತ್ತಾರೆ ಎಂಬ ಮಾಹಿತಿ ಮೂಲಗಳಿಂದ ಲಭ್ಯವಾಗಿತ್ತು.

    ವಿಚಾರಣೆ ಬಳಿಕ ಹೊರ ಬಂದ ನಳಿನಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಳು. ನಾನು ನನ್ನ ಹೇಳಿಕೆಯನ್ನು ಪತ್ರಿಕೆ ಹಾಗೂ ವಿಡಿಯೋ ಮೂಲಕ ಹೇಳಿದ್ದೇನೆ. ಅದನ್ನು ಬಿಟ್ಟು ಬೇರೆ ಏನು ಹೇಳುವುದಿಲ್ಲ. ಬೇರೆ ಏನು ಕೇಳಬೇಡಿ. ನಾನು ಏನನ್ನೂ ಹೇಳುವುದಿಲ್ಲ. ಪೊಲೀಸರ ವಿಚಾರಣೆಗೆ ಸಹಕರಿಸುತ್ತೇನೆ. ಮತ್ತೇನು ಹೇಳುವುದಿಲ್ಲ ಎಂದಿದ್ದಳು.

  • ಫ್ರೀ ಕಾಶ್ಮೀರ್ ಪ್ಲೇ ಕಾರ್ಡ್ ಪ್ರಕರಣ: ವಿದ್ಯಾರ್ಥಿನಿಗೆ ಸತತ 7:45 ಗಂಟೆ ಪೊಲೀಸರಿಂದ ವಿಚಾರಣೆ

    ಫ್ರೀ ಕಾಶ್ಮೀರ್ ಪ್ಲೇ ಕಾರ್ಡ್ ಪ್ರಕರಣ: ವಿದ್ಯಾರ್ಥಿನಿಗೆ ಸತತ 7:45 ಗಂಟೆ ಪೊಲೀಸರಿಂದ ವಿಚಾರಣೆ

    ಮೈಸೂರು: ಮೈಸೂರಿನ ಮಾನಸಗಂಗೋತ್ರಿ ಕ್ಯಾಂಪಸ್‍ನಲ್ಲಿ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಫ್ರೀ ಕಾಶ್ಮೀರ್ ಪ್ಲೇ ಕಾರ್ಡ್ ಹಿಡಿದಿದ್ದ ವಿದ್ಯಾರ್ಥಿನಿಗೆ ಪೊಲೀಸರು ಸತತ 7:45 ಗಂಟೆ ವಿಚಾರಣೆ ಮಾಡಿದ್ದಾರೆ.

    ವಿದ್ಯಾರ್ಥಿ ನಳಿನಿ ಶುಕ್ರವಾರ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಪಡೆದು, ಪ್ರತಿಯನ್ನು ಠಾಣೆಗೆ ನೀಡಿ, ಪ್ರಕರಣಕ್ಕೆ ಸಂಬಂಧಪಟ್ಟಂತೆ ತಮ್ಮ ಹೇಳಿಕೆ ದಾಖಲಿಸಲು ಜಯಲಕ್ಷೀಪುರಂ ಠಾಣೆಗೆ ಬೆಳಗ್ಗೆ ಹಾಜರಾಗಿದ್ದರು. ಡಿಸಿಪಿ ಮುತ್ತುರಾಜ್ ಹಾಗೂ ಎಸಿಪಿ ಶಿವಶಂಕರ್ ಅವರು ಬೆಳಗ್ಗೆ 10ರಿಂದ ಸಂಜೆ 5.45 ಗಂಟೆ ವೆರಗೂ ಸತತ 7:45 ಗಂಟೆ ವಿಚಾರಣೆ ನಡೆಸಿದ್ದಾರೆ.

    ವಿಚಾರಣೆಯಲ್ಲಿ ಒಟ್ಟು 80 ಪ್ರಶ್ನೆ ಕೇಳಲಾಗಿದ್ದು, ಇದರಲ್ಲಿ ಕೆಲವೊಂದು ಪ್ರಶ್ನೆಗಳನ್ನು ಹೊರತುಪಡಿಸಿ ಎಲ್ಲಾ ಪ್ರಶ್ನೆಗಳಿಗೂ ನಳಿನಿ ಉತ್ತರಿಸಿದ್ದಾರೆ. ಸದ್ಯಕ್ಕೆ ಮೊದಲ ಹಂತದ ವಿಚಾರಣೆ ಮುಗಿದಿದ್ದು, ಅವಶ್ಯಕತೆ ಇದ್ದರೆ ಮತ್ತೆ ವಿಚಾರಣೆಗೆ ಕರೆಯುತ್ತಾರೆ ಎಂಬ ಮಾಹಿತಿ ಮೂಲಗಳಿಂದ ಲಭ್ಯವಾಗಿದೆ.

    ವಿಚಾರಣೆ ಬಳಿಕ ಹೊರ ಬಂದ ನಳಿನಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದರು. ನಾನು ನನ್ನ ಹೇಳಿಕೆಯನ್ನು ಪತ್ರಿಕೆ ಹಾಗೂ ವಿಡಿಯೋ ಮೂಲಕ ಹೇಳಿದ್ದೇನೆ. ಅದನ್ನು ಬಿಟ್ಟು ಬೇರೆ ಏನು ಹೇಳುವುದಿಲ್ಲ. ಬೇರೆ ಏನು ಕೇಳಬೇಡಿ. ನಾನು ಏನನ್ನೂ ಹೇಳುವುದಿಲ್ಲ. ಪೊಲೀಸರ ವಿಚಾರಣೆಗೆ ಸಹಕರಿಸುತ್ತೇನೆ. ಮತ್ತೇನು ಹೇಳುವುದಿಲ್ಲ ಎಂದರು.

  • ಫ್ರೀ ಕಾಶ್ಮೀರ ಪೋಸ್ಟರ್ – ವಿಡಿಯೋ ಮೂಲಕ ಕ್ಷಮೆಯಾಚಿಸಿ ಸ್ಪಷ್ಟನೆ ನೀಡಿದ ಯುವತಿ

    ಫ್ರೀ ಕಾಶ್ಮೀರ ಪೋಸ್ಟರ್ – ವಿಡಿಯೋ ಮೂಲಕ ಕ್ಷಮೆಯಾಚಿಸಿ ಸ್ಪಷ್ಟನೆ ನೀಡಿದ ಯುವತಿ

    ಮೈಸೂರು: ಮೈಸೂರು ವಿವಿಯ ಕ್ಯಾಂಪಸ್‍ನಲ್ಲಿ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಫ್ರೀ ಕಾಶ್ಮೀರ ಪೋಸ್ಟರ್ ಹಿಡಿದಿದ್ದ ಯುವತಿ ನಳಿನಿ ಇವತ್ತು ಪೋಷಕರ ಸಮೇತ ಪೊಲೀಸರ ಮುಂದೆ ಹಾಜರಾಗಿದ್ದಾರೆ.

    ಶುಕ್ರವಾರ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಪಡೆದಿದ್ದ ನಳಿನಿ, ಜಾಮೀನು ಪ್ರತಿಯನ್ನು ಠಾಣೆಗೆ ನೀಡಿ, ಪ್ರಕರಣಕ್ಕೆ ಸಂಬಂಧಪಟ್ಟಂತೆ ತಮ್ಮ ಹೇಳಿಕೆ ದಾಖಲಿಸಲು ಜಯಲಕ್ಷೀಪುರಂ ಠಾಣೆಗೆ ಹಾಜರಾದರು. ಜಯಲಕ್ಷೀಪುರಂ ಠಾಣೆಯಲ್ಲಿ ನಳಿನಿ ವಿಚಾರಣೆ ನಡೆಸಿದ ಎಸಿಪಿ ಶಿವಶಂಕರ್, ಹಲವು ಕಾಲ ನಳಿನಿ ವಿಚಾರಣೆ ನಡೆಸಿ ಹೇಳಿಕೆ ದಾಖಲಿಸಿಕೊಂಡರು.

    ಮೈಸೂರು ವಿವಿ ಕ್ಯಾಂಪಸ್ ನಲ್ಲಿ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಫ್ರೀ ಕಾಶ್ಮೀರ ನಾಮಫಲಕ ಪ್ರದರ್ಶನ ಪ್ರಕರಣ ಸಂಬಂಧ ಪ್ಲೇ ಕಾರ್ಡ್ ಪ್ರದರ್ಶಿಸಿದ್ದ ನಳಿನಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಪತ್ರಿಕಾ ಹೇಳಿಕೆಯಲ್ಲಿ. ನಾನು ಪ್ರತಿಭಟನೆಯಲ್ಲಿ ಸ್ವಯಂಪ್ರೇರಿತವಾಗಿ ಭಾಗವಹಿಸಿದ್ದೆ. ನಾನು ಯಾವುದೇ ಸಂಯೋಜಕರ ಒತ್ತಡಕ್ಕೆ ಮಣಿದು ಅವರ ಪ್ರೇರಣೆಯಿಂದ ಹೋರಾಟಕ್ಕೆ ಬಂದಿರಲಿಲ್ಲ. ನಾನು ಪತ್ರಿಕೋದ್ಯಮದ ವಿದ್ಯಾರ್ಥಿಯಾಗಿದ್ದು, ನನಗೆ ದೇಶದ ಬಗ್ಗೆ ನಮ್ಮ ದೇಶದ ಜನರ ಬಗ್ಗೆ ಅತ್ಯಂತ ಕಾಳಜಿ ಮತ್ತು ಗೌರವವಿರುತ್ತದೆ ಎಂದು ತಿಳಿಸಿದ್ದಾರೆ.

    ಮೈಸೂರು ವಿಶ್ವವಿದ್ಯಾಲಯದಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಕಾಶ್ಮೀರ ಬಿಡುಗಡೆಗೊಳಿಸಿ ಎಂಬುದನ್ನು ನಾನು ಖುದ್ದಾಗಿ ಬರೆದು ಹಿಡಿದುಕೊಂಡಿದ್ದೆ. ಇತರ ರಾಜ್ಯಗಳಲ್ಲಿ ಹೇಗೆ ಜನರು ನಿರ್ಭಯವಾಗಿ ಮತ್ತು ಸ್ವತಂತ್ರವಾಗಿ ಇದ್ದಾರೆ ಅದೇ ರೀತಿ ಜಮ್ಮು-ಕಾಶ್ಮೀರದಲ್ಲಿ ಸಹ ಆಗಬೇಕು. ಈ ಒಂದೇ ಒಂದು ಭಾವನೆಯಿಂದ ಕಾಶ್ಮೀರ ಬಿಡುಗಡೆಗೊಳಿಸಿ ಪೋಸ್ಟರ್ ಅನ್ನು ಹಿಡಿದುಕೊಂಡಿದ್ದೆ ಎಂದು ಪತ್ರಿಕಾ ಪ್ರಕಟಣೆ ಮೂಲಕ ನಳಿನಿ ಸ್ಪಷ್ಟನೆ ನೀಡಿದ್ದಾರೆ.

    ಜೊತೆಗೆ ಮೈಸೂರು ವಿವಿ ಕ್ಯಾಂಪಸ್ ನಲ್ಲಿ ನಡೆದ ಪ್ರತಿಭಟನೆಯಲ್ಲಿ ಫ್ರೀ ಕಾಶ್ಮೀರ ನಾಮಫಲಕ ವಿಚಾರ ಸಂಬಂಧ ಪ್ಲೇ ಕಾರ್ಡ್ ಹಿಡಿದಿದ್ದ ನಳಿನಿ, ಮಾಧ್ಯಮಕ್ಕೆ ವಿಡಿಯೋ ಬಿಡುಗಡೆ ಮಾಡಿರುವ ನಳಿನಿ ವಿಡಿಯೋ ಮೂಲಕ ಸಾರ್ವಜನಿಕರು ಪೊಲೀಸರ ಕ್ಷಮೆಯಾಚಿಸಿದ್ದಾರೆ. ಪ್ಲೇ ಕಾರ್ಡ್ ಪ್ರದರ್ಶಿಸಿದ ಉದ್ದೇಶ ಕಾಶ್ಮೀರದಲ್ಲಿ ಇಂಟರ್ನೆಟ್ ಸೇವೆ ಸೇರಿ ರದ್ದಾಗಿರುವ ಸೇವೆಗಳ ಆರಂಭಿಸಿ ಎಂಬುದಾಗಿತ್ತು. ಅದಕ್ಕೆ ಫ್ರೀ ಕಾಶ್ಮೀರ ಎಂದು ಬರೆದುಕೊಂಡಿದ್ದೇ ಅದರಿಂದ ಉಂಟಾದ ಗೊಂದಲಕ್ಕಾಗಿ ಕ್ಷಮೆ ಯಾಚಿಸುತ್ತೇನೆ ಎಂದು ವಿಡಿಯೋದಲ್ಲಿ ಹೇಳಿದ್ದಾರೆ.