Tag: Nalinkumarkateel

  • ‘ಕರೆಂಟ್’ ಶಾಕ್‍ಗೆ ಬೆವರಿದ ಬಿಜೆಪಿ ಮುಖಂಡರು!

    ‘ಕರೆಂಟ್’ ಶಾಕ್‍ಗೆ ಬೆವರಿದ ಬಿಜೆಪಿ ಮುಖಂಡರು!

    ಬೆಂಗಳೂರು: ನಗರದಲ್ಲಿ ಇಂದು ಬಿಜೆಪಿ ಮುಖಂಡರು ಸ್ವಲ್ಪ ಗಲಿಬಿಲಿ ಆಗಿದ್ರು. 10 ನಿಮಿಷ ಕರೆಂಟ್ ಕೊಟ್ಟ ಶಾಕ್‍ಗೆ ಶಾಸಕರು, ಸಂಸದರೇ ಬೆವರಿಳಿದು ಹೋಗಿದ್ರು. ಅದಕ್ಕೆ ಕಾರಣ ವೇದಿಕೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಇದ್ದಾಗಲೇ 10 ನಿಮಿಷ ಕರೆಂಟ್ ಕೈಕೊಟ್ಟು ಕಾರ್ಯಕ್ರಮ ಸ್ತಬ್ಧವಾಗಿದ್ದು.

    ಅಂದಹಾಗೆ ಬಸವನಗುಡಿಯ ಮರಾಠ ಭವನದಲ್ಲಿ ಬೆಂಗಳೂರು ನಗರ ಜಿಲ್ಲೆಯ ದಕ್ಷಿಣ ಭಾಗದ ಜಿಲ್ಲಾಧ್ಯಕ್ಷರ ಅಧಿಕಾರ ಸ್ವೀಕಾರ ಸಮಾರಂಭ ಇತ್ತು. ಸಮಾರಂಭದಲ್ಲಿ ಅದೇಕೋ ಏನೋ ಕಂದಾಯ ಸಚಿವ ಆರ್. ಅಶೋಕ್ ಮಾತನಾಡಿದ ಬಳಿಕ ಅಂದರೆ ಮಾಜಿ ಶಾಸಕ ಮುನಿರಾಜು ಮಾತನಾಡುವಾಗ ಇದ್ದಕ್ಕಿದ್ದಂತೆ ಕರೆಂಟ್ ಕೈಕೊಡ್ತು. ಜನರೇಟರ್ ವ್ಯವಸ್ಥೆ ಇಲ್ಲದೆ ಬಿಜೆಪಿ ನಾಯಕರು ಪರದಾಡಿದ್ರು. ವೇದಿಕೆಯಲ್ಲಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಂಸದ ತೇಜಸ್ವಿ ಸೂರ್ಯ ಸೇರಿದಂತೆ ಶಾಸಕರು ಕೂಡ ಹಾಜರಿದ್ದರು. ಇಂತಹ ಕಾರ್ಯಕ್ರಮಕ್ಕೆ ಕರೆಂಟ್ ಕೈ ಕೊಟ್ಟಿದ್ದು, ನೂತನ ಅಧ್ಯಕ್ಷ ಎನ್.ಆರ್ ರಮೇಶ್ ತಲೆಬಿಸಿಗೆ ಕಾರಣವಾಯ್ತು. ಅಷ್ಟೇ ಅಲ್ಲ ಆಯೋಜಕರಿಗೆ ಶಾಸಕರೆಲ್ಲ ಪ್ರಶ್ನೆಗಳ ಸುರಿಮಳೆಗೈದ್ರು.

    ಕರೆಂಟ್ ಇಲ್ಲದ ಕಾರಣ ವೇದಿಕೆ ಮೇಲಿದ್ದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸುಮ್ಮನೆ ಕುಳಿತಿದ್ರು. 10 ನಿಮಿಷಗಳ ಕಾಲ ಕರೆಂಟ್ ಬರಲೇ ಇಲ್ಲ. ಬ್ಯಾಟರಿ ಚಾಲಿತ ಮೈಕ್ ಇಟ್ಟುಕೊಂಡು ಸ್ವಲ್ಪ ಸರ್ಕಸ್ ಮಾಡಿದ್ರು. ಕಡೆಗೆ ಬೆಸ್ಕಾಂ ಗಮನಕ್ಕೆ ತಂದು ಪ್ರಭಾವ ಬೀರಿದ ಬಳಿಕ ಕರೆಂಟ್ ಬಂತು. ಆಗ ಬಿಜೆಪಿ ಕಾರ್ಯಕ್ರಮದ ಆಯೋಜಕರು ನಿಟ್ಟುಸಿರು ಬಿಟ್ಟರು.

  • ಪೂರ್ಣಾವಧಿಗೆ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲ್ ಅವಿರೋಧ ಆಯ್ಕೆ

    ಪೂರ್ಣಾವಧಿಗೆ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲ್ ಅವಿರೋಧ ಆಯ್ಕೆ

    ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಅಂತಿಮವಾಗಿದೆ. ಮಲ್ಲೇಶ್ವರಂನ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಚುನಾವಣೆ ಪ್ರಕ್ರಿಯೆ ನಡೆಯಿತು. ಚುನಾವಣೆ ವೇಳೆ ಯಾರೂ ನಾಮಪತ್ರ ಸಲ್ಲಿಸದ ಕಾರಣ ನಾಮಪತ್ರ ಸಲ್ಲಿಸಿದ್ದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳಿನ್ ಕುಮಾರ್ ಕಟೀಲ್ ಅವಿರೋಧವಾಗಿ ಆಯ್ಕೆಯಾದರು.

    ರಾಷ್ಟ್ರೀಯ ಸಾಂಸ್ಥಿಕ ಸಹ ಚುನಾವಣಾಧಿಕಾರಿ ಸಿ.ಟಿ ರವಿ ಅವಿರೋಧ ಆಯ್ಕೆ ಘೋಷಣೆ ಮಾಡಿದರು. ನಳಿನ್ ಕುಮಾರ್ ಕಟೀಲ್‍ಗೆ ಪ್ರಮಾಣ ಪತ್ರ ನೀಡಿ ಅಭಿನಂದನೆ ಸಲ್ಲಿಸಲಾಯಿತು. ಇದೇ ವೇಳೆ ಬಿಜೆಪಿ ರಾಜ್ಯ ಸಾಂಸ್ಥಿಕ ಚುನಾವಣಾಧಿಕಾರಿ ಅಶ್ವಥ್ ನಾರಾಯಣ್ ಗೌಡ, ಸಹ ಚುನಾವಣಾಧಿಕಾರಿ ಹಾಲಪ್ಪ ಆಚಾರ್ ಸೇರಿದಂತೆ ಹಲವು ಶಾಸಕರು ಉಪಸ್ಥಿತರಿದ್ದರು. ಅಂದಹಾಗೆ 2020ರ ಜನವರಿ 16ರಿಂದ 2023ರ ಜನವರಿ 16ರ ತನಕ ನಳಿನ್ ಕುಮಾರ್ ಕಟೀಲ್ ಅಧಿಕಾರಾವಧಿ ಇರುತ್ತದೆ. ಪಕ್ಷದ ಸಂವಿಧಾನದ ಪ್ರಕಾರ ಚುನಾವಣೆ ಪ್ರಕ್ರಿಯೆ ನಡೆದಿದ್ದು, 2023ರ ವಿಧಾನಸಭಾ ಚುನಾವಣೆ ತನಕವೂ ಕಟೀಲ್ ರಾಜ್ಯಾಧ್ಯಕ್ಷರಾಗಿ ಮುಂದುವರಿಯುವ ಸಾಧ್ಯತೆ ಹೆಚ್ಚು.

    ಪೂರ್ಣಾವಧಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಬಳಿಕ ನಳಿನ್ ಕುಮಾರ್ ಕಟೀಲ್ ಸುದ್ದಿಗೋಷ್ಠಿ ನಡೆಸಿದರು. ಬಿಎಸ್‍ವೈ ನಂತರ ನನ್ನ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಅಮಿತ್ ಶಾ ನೇಮಕ ಮಾಡಿದರು. ಸಾಂಸ್ಥಿಕ ಚುನಾವಣೆ ಪ್ರಕ್ರಿಯೆಗಳನ್ನು ಕಳೆದ 6 ತಿಂಗಳಲ್ಲಿ ಪೂರ್ಣಗೊಳಿಸಿದ್ದೇವೆ. 264 ಮಂಡಲ ಅಧ್ಯಕ್ಷರನ್ನ ಆಯ್ಕೆ ಪ್ರಕ್ರಿಯೆ ಮುಗಿದಿದೆ. 37 ಸಾಂಸ್ಥಿಕ ಸಂಘಟನಾ ಜಿಲ್ಲೆಗಳಲ್ಲಿ 20 ಸಾಂಸ್ಥಿಕ ಸಂಘಟನಾ ಜಿಲ್ಲೆಗಳಿಗೆ ಅಧ್ಯಕ್ಷರ ನೇಮಕ ಆಗಿದೆ. ಚಾಚೂ ತಪ್ಪದೇ ಎಲ್ಲರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುತ್ತೇನೆ ಎಂದು ಹೇಳಿದರು.

    ಆರಂಭದಲ್ಲಿ ಕರಾವಳಿ ಅವರು ಹೇಗೆ ನಿಭಾಯಿಸ್ತಾರೆ ಅಂತಿದ್ದರು. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಯೂ ಪ್ರವಾಸ ಮಾಡಿದ್ದೇನೆ. ಮುಂದೆ ಗ್ರಾಮ ಪಂಚಾಯತ್ ಚುನಾವಣೆ ಇದೆ. ಶೇ.80ರಷ್ಟು ಸೀಟು ಗೆಲ್ಲುವ ಗುರಿ ಇದೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಯಡಿಯೂರಪ್ಪ ನೇತೃತ್ವದಲ್ಲಿ 150 ಸ್ಥಾನ ಗೆದ್ದು ಮತ್ತೆ ಅಧಿಕಾರಕ್ಕೆ ಬರುತ್ತೇವೆ. ಗುಜರಾತ್ ಮಾದರಿಯಲ್ಲಿ ಪಕ್ಷ ಸಂಘಟನೆ ಮಾಡುತ್ತೇವೆ ಎಂದು ಘೋಷಿಸಿದರು.

  • ನಳಿನ್ ಕುಮಾರ್‌ಗೆ ಕನಿಷ್ಠ ಜ್ಞಾನ ಇಲ್ಲ- ಸಿದ್ದರಾಮಯ್ಯ

    ನಳಿನ್ ಕುಮಾರ್‌ಗೆ ಕನಿಷ್ಠ ಜ್ಞಾನ ಇಲ್ಲ- ಸಿದ್ದರಾಮಯ್ಯ

    – ಸಿಎಂ ವಿರುದ್ಧ ಮಾಜಿ ಸಿಎಂ ಕಿಡಿ

    ಬೆಂಗಳೂರು: ಬಿಜೆಪಿಯವರು ನಳಿನ್ ಕುಮಾರ್ ಕಟೀಲ್ ಅವರನ್ನು ಯಾಕೆ ಅಧ್ಯಕ್ಷರನ್ನಾಗಿ ಮಾಡಿದ್ದಾರೋ ಗೊತ್ತಿಲ್ಲ. ಅವರಿಗೆ ಕನಿಷ್ಠ ಜ್ಞಾನ ಅಲ್ಲದೆ ರಾಜಕೀಯ ಜ್ಞಾನವೂ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ.

    ನಗರದ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಡಿಕೆ ಶಿವಕುಮಾರ್ ಜೈಲಿಗೆ ಹೋಗಲು ಸಿದ್ದರಾಮಯ್ಯ ಕಾರಣ ಅನ್ನೋ ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆಗೆ ತಿರುಗೇಟು ನೀಡಿದರು. ನಳಿನ್ ಕುಮಾರ್ ಗೆ ಕನಿಷ್ಠ ಜ್ಞಾನ ಇಲ್ಲ. ಇಡಿ, ಐಟಿ, ಸಿಬಿಐ ಕೇಂದ್ರ ಸರ್ಕಾರದ ಅಧೀನದಲ್ಲಿ ಇರುತ್ತದೆ. ಈಗ ಬಿಜೆಪಿ ಕೇಂದ್ರದಲ್ಲಿ ಅಧಿಕಾರದಲ್ಲಿ ಇದೆ. ಬಿಜೆಪಿಯವರು ಇಂತಹ ಹೇಳಿಕೆ ಕೊಟ್ಟು ರಾಜಕೀಯವಾಗಿ ಬೆಂಕಿ ಹಚ್ಚೋ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

    ಬಿಜೆಪಿಯವರು ಯಾಕೆ ನಳಿನ್ ಕುಮಾರ್ ನನ್ನ ಅಧ್ಯಕ್ಷ ಮಾಡಿದ್ದಾರೋ ಗೊತ್ತಿಲ್ಲ. ಕನಿಷ್ಠ ಜ್ಞಾನ ಅವ್ರಿಗೆ ಇಲ್ಲ. ಅಲ್ಲದೆ ರಾಜಕೀಯ ಜ್ಞಾನವೂ ಇಲ್ಲ. ಕರ್ನಾಟಕದ ರಾಜಕೀಯದ ಬಗ್ಗೆಯೂ ಗೊತ್ತಿಲ್ಲ. ಇದು ರಾಜಕೀಯ ಪ್ರೇರಿತ ಹೇಳಿಕೆ ಅಷ್ಟೆ. ಈ ಹೇಳಿಕೆ ದುರುದ್ದೇಶದಿಂದ ಕೂಡಿದೆ ಎಂದು ನಳಿನ್ ಕುಮಾರ್ ಕಟೀಲು ವಿರುದ್ಧ ವಾಗ್ದಾಳಿ ನಡೆಸಿದರು.

    ಇದೇ ವೇಳೆ ಕಾಂಗ್ರೆಸ್ ಸರ್ಕಾರದ ಅವಧಿಯ 5 ಯೋಜನೆಗಳ ತನಿಖೆಗೆ ವಹಿಸಿದ ಸಿಎಂ ಯಡಿಯೂರಪ್ಪ ವಿರುದ್ಧ ಸಿದ್ದರಾಮಯ್ಯ ಕಿಡಿಕಾರಿದರು. ಯಡಿಯೂರಪ್ಪ ಸಿಎಂ ಆದ ಮೇಲೆ ಟ್ರಾನ್ಸ್ ಫರ್, ದ್ವೇಷದ ರಾಜಕಾರಣ ಮಾತ್ರ ಮಾಡುತ್ತಿದ್ದಾರೆ. ನೆರೆಗೆ ತುತ್ತಾದ ಜನರಿಗೆ ಯಾವುದೇ ಪರಿಹಾರ ಕೊಟ್ಟಿಲ್ಲ. ಈಶ್ವರಪ್ಪ ಅವರು ಕೊಟ್ಟಿರೋ ಹಣನೇ ಜಾಸ್ತಿ ಅಂತಾರೆ. ಜನರ ಬಗ್ಗೆ ಬಿಜೆಪಿ ಅವರಿಗೆ ಕಾಳಜಿ ಇಲ್ಲ ಎಂದು ಗರಂ ಆದರು.

    ಸುಮ್ಮನೆ ಎಲ್ಲಾ ಯೋಜನೆಗಳ ಬಗ್ಗೆ ತನಿಖೆ ಮಾಡುತ್ತಿದ್ದಾರೆ. ಇದು ದ್ವೇಷದ ರಾಜಕಾರಣ ಅಲ್ಲದೆ ಮತ್ತೇನು ಎದು ಪ್ರಶ್ನಿಸಿದರು. ಯಡಿಯೂರಪ್ಪ ವಿಧಾನಸೌಧದಲ್ಲಿ ದ್ವೇಷದ ರಾಜಕಾರಣ ಮಾಡಲ್ಲ ಎಂದಿದ್ದರು. ಆದರೆ ಇವತ್ತು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

    4 ಕೋಟಿಯಲ್ಲಿ ವೈಟ್ ಟಾಪಿಂಗ್ ಮಾಡಬಹುದು ಅನ್ನೋ ಸಿಎಂ ಹೇಳಿಕೆಗೆ ತಿರುಗೇಟು ನೀಡಿದ ಸಿದ್ದರಾಮಯ್ಯ, ಅದೆಲ್ಲವನ್ನೂ ಹೇಳೋದಕ್ಕೆ ಯಡಿಯೂರಪ್ಪ ಎಂಜಿನಿಯರ್ ಅಲ್ಲ. ಕಡಿಮೆ ಹಣದಲ್ಲಿ ಮಾಡೋದಾದರೆ ಯಡಿಯೂರಪ್ಪ ಮಾಡಲಿ ಎಂದರು.

    ಕೃಷಿ ಹೊಂಡ ತನಿಖೆಗೆ ಅಸಮಾಧಾನ ವ್ಯಕ್ತಪಡಿಸಿದ ಮಾಜಿ ಸಿಎಂ, ಕೃಷಿ ಹೊಂಡ ರೈತರಿಗೆ ಅನುಕೂಲ ಆಗಿದೆ. ಯಾರೋ ಹೇಳಿದರು ಎಂದು ತನಿಖೆ ಮಾಡೋದು ಸರಿಯಲ್ಲ. ಇದು ದ್ವೇಷದ ರಾಜಕಾರಣ. ಇದು ಜಾಸ್ತಿ ದಿನ ಇರುವುದಿಲ್ಲ. ನಾನು ಸಿಎಂ ಆಗಿದ್ದಾಗ ದ್ವೇಷದ ರಾಜಕಾರಣ ಮಾಡಿಲ್ಲ. ಆದರೆ ಯಡಿಯೂರಪ್ಪ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

  • ಬಿಗ್ ಬುಲೆಟಿನ್ ನಲ್ಲಿ ಕಾವ್ಯ ಶ್ರೀ ಪ್ರಕರಣದ ಬಿಗ್ ಚರ್ಚೆ – ತನಿಖೆಗೆ ಸಹಕರಿಸುವೆ ಎಂದ ಮೋಹನ್ ಆಳ್ವ

    ಬಿಗ್ ಬುಲೆಟಿನ್ ನಲ್ಲಿ ಕಾವ್ಯ ಶ್ರೀ ಪ್ರಕರಣದ ಬಿಗ್ ಚರ್ಚೆ – ತನಿಖೆಗೆ ಸಹಕರಿಸುವೆ ಎಂದ ಮೋಹನ್ ಆಳ್ವ

    ಬೆಂಗಳೂರು: ರಾಜ್ಯದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಮೂಡಬಿದಿರೆಯ ಆಳ್ವಾಸ್‍ನ 10ನೇ ತರಗತಿ ವಿದ್ಯಾರ್ಥಿನಿ ಕಾವ್ಯಶ್ರೀ ನಿಗೂಢ ಸಾವು ಪ್ರಕರಣ ದಿನಕ್ಕೊಂದು ಟ್ವಿಸ್ಟ್ ಪಡೀತಾ ಇದೆ. ವಿದ್ಯಾರ್ಥಿನಿ ಕಾವ್ಯಶ್ರೀ ನಿಗೂಢ ಸಾವಿನ ತನಿಖೆಯನ್ನು ಸೂಕ್ತ ರೀತಿಯಲ್ಲಿ ನಡೆಸಬೇಕೆಂದು ಪಿಎಫ್‍ಐ ಕಾರ್ಯಕರ್ತರು ಮೂಡಬಿದ್ರೆಯಲ್ಲಿ ಪ್ರತಿಭಟನೆ ಮಾಡಿದ್ರೆ, ಡಿವೈಎಫ್‍ಐ ಮತ್ತು ಎಸ್‍ಎಫ್‍ಐ ಕಾರ್ಯಕರ್ತರು ಮಂಗಳೂರು ಡಿಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ರು.

    ಈ ಹಿನ್ನೆಲೆಯಲ್ಲಿ ಶನಿವಾರದ ಪಬ್ಲಿಕ್ ಟಿವಿ ಬಿಗ್‍ಬುಲೆಟಿನ್‍ನಲ್ಲಿ ಈ ಕುರಿತಂತೆ ಚರ್ಚೆ ನಡೀತು. ಪಬ್ಲಿಕ್ ಟಿವಿ ಪ್ರಶ್ನೆಗಳಿಗೆ ಉತ್ತರಿಸಿದ ಶಿಕ್ಷಣ ಸಂಸ್ಥೆ ಮುಖ್ಯಸ್ಥ ಮೋಹನ್ ಆಳ್ವ, ಈ ಬಗ್ಗೆ ಸೂಕ್ತ ತನಿಖೆ ನಡೆಯಬೇಕೆಂದು ನಾನು ಕೂಡ ಆಗ್ರಹಿಸುತ್ತೇನೆ. ಅವರಿಗಷ್ಟೇ ಅಲ್ಲದೇ ನನ್ನ ಸಂಸ್ಥೆಗೂ ನ್ಯಾಯ ಬೇಕು ಅಂದ್ರು.

    ಮೋಹನ್ ಆಳ್ವ ನೀಡಿದ ಉತ್ತರಕ್ಕೆ ಕಾವ್ಯಶ್ರೀಯ ತಾಯಿ ಕೂಡ ಸಹಮತ ವ್ಯಕ್ತಪಡಿಸಿದ್ರು. ನಮಗೆ ಪ್ರವೀಣ್ ಮೇಲೆ ಡೌಟ್ ಇದೆ. ತನಿಖೆ ನಡೆಯಬೇಕು ಅಂದ್ರು. ಇದೇ ವೇಳೆ ಮಾತಾಡಿದ ವಿದ್ಯಾರ್ಥಿ ಸಂಘಟನೆ ಮುಖಂಡ ದಿನಕರ್ ಶೆಟ್ಟಿ, ದೈಹಿಕ ಶಿಕ್ಷಕ ಪ್ರವೀಣ್ ರನ್ನು ಕೆಲಸದಿಂದ ತೆಗೆದುಹಾಕುವಂತೆ ಆಗ್ರಹಿಸಿದ್ರು. ಇದಕ್ಕೆ ಉತ್ತರಿಸಿದ ಆಳ್ವ, ಮೊನ್ನೆಯೇ ಆ ಕೆಲಸ ಮಾಡಿದ್ದೇನೆ ಅಂದ್ರು.

    ಇದನ್ನೂ ಓದಿ: ಕಾವ್ಯ ನಿಗೂಢ ಸಾವು: ಆಳ್ವಾಸ್ ಸಂಸ್ಥೆ ವಿರುದ್ಧ ಭಾರೀ ಪ್ರತಿಭಟನೆ- ಹಾಸ್ಟೆಲ್‍ನ ಸಿಸಿಟಿವಿ ದೃಶ್ಯ ಬಿಡುಗಡೆ 

    https://www.youtube.com/watch?v=75vzrVm8Z6w

    https://www.youtube.com/watch?v=O1dTEqQsZ80

    ಇದನ್ನೂ ಒದಿ: ಕಾವ್ಯ ನಿಗೂಢ ಸಾವು- ಪೋಷಕರಿಗೆ ಸಂಸದ ಕಟೀಲ್ ಸಾಂತ್ವನ 

    ಇದನ್ನೂ ಓದಿ: ವಿದ್ಯಾರ್ಥಿನಿ ಕಾವ್ಯ ಪೂಜಾರಿ ಕೇಸ್: ಆಳ್ವಾಸ್ ಕಾಲೇಜು ಮುಖ್ಯಸ್ಥ ಮೋಹನ್ ಆಳ್ವ ಹೇಳಿದ್ದೇನು?

    ಇದನ್ನೂ ಓದಿ: ಮಂಗ್ಳೂರಿನ ಆಳ್ವಾಸ್ ನಲ್ಲಿ SSLC ವಿದ್ಯಾರ್ಥಿನಿ ನಿಗೂಢ ಸಾವು- ಕೊಲೆ ಎಂದು ಪೋಷಕರ ಆರೋಪ