Tag: Nambi Narayanan

  • ಚಂದ್ರಯಾನ-2 ವೈಫಲ್ಯದಿಂದ ಕಲಿತ ಪಾಠಗಳು ಚಂದ್ರಯಾನ-3 ಯಶಸ್ಸಿಗೆ ಕಾರಣ: ಇಸ್ರೋ ಮಾಜಿ ವಿಜ್ಞಾನಿ ನಂಬಿ ನಾರಾಯಣನ್‌

    ಚಂದ್ರಯಾನ-2 ವೈಫಲ್ಯದಿಂದ ಕಲಿತ ಪಾಠಗಳು ಚಂದ್ರಯಾನ-3 ಯಶಸ್ಸಿಗೆ ಕಾರಣ: ಇಸ್ರೋ ಮಾಜಿ ವಿಜ್ಞಾನಿ ನಂಬಿ ನಾರಾಯಣನ್‌

    ತಿರುವನಂತಪುರಂ: ಚಂದ್ರಯಾನ-2ರ (Chandrayaan-3) ವೈಫಲ್ಯದಿಂದ ಕಲಿತ ಪಾಠಗಳು ಭಾರತದ ಚಂದ್ರಯಾನ-3 (Chandrayaan-3) ಯಶಸ್ಸಿಗೆ ಕಾರಣವಾಗಿವೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ISRO) ಮಾಜಿ ಬಾಹ್ಯಾಕಾಶ ವಿಜ್ಞಾನಿ ನಂಬಿ ನಾರಾಯಣನ್ (Nambi Narayanan) ಅಭಿಪ್ರಾಯಪಟ್ಟಿದ್ದಾರೆ.

    ಚಂದ್ರಯಾನ-3 ಮಿಷನ್‌ ವಿಜ್ಞಾನಿಗಳಿಗೆ ನಂಬಿ ನಾರಾಯಣನ್‌ ಅಭಿನಂದನೆ ಸಲ್ಲಿಸಿದರು. ಚಂದ್ರಯಾನ-2ರ ಪ್ರತಿ ವೈಫಲ್ಯವನ್ನು ಇಲ್ಲಿ ಪರಿಹರಿಸಲಾಗಿದೆ. ಉಪಗ್ರಹ ಸಮಸ್ಯೆಯಾಗಿರಲಿ, ಸ್ಥಿರತೆಯ ಸಮಸ್ಯೆಯಾಗಿರಲಿ ಅಥವಾ ಹೆಚ್ಚುವರಿ ಅವಶ್ಯಕತೆಯ ಸಮಸ್ಯೆಯಾಗಿರಲಿ.. ಎಲ್ಲವನ್ನೂ ಚಂದ್ರಯಾನ-3ರಲ್ಲಿ ಪರಿಹರಿಸಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಚಂದ್ರಯಾನ-3 ಸಕ್ಸಸ್ – ಇಸ್ರೋ ಅಧ್ಯಕ್ಷರಿಗೆ ಸೋನಿಯಾ ಗಾಂಧಿ ಪತ್ರ

    ಇಸ್ರೋ ವಿಜ್ಞಾನಿಗಳು ಅದ್ಭುತ ಕೆಲಸ ಮಾಡಿದ್ದಾರೆ. ಚಂದ್ರಯಾನ-3 ಯಶಸ್ವಿಯಾಗಲಿದೆ ಎಂಬ ವಿಶ್ವಾಸ ನಮಗೆ ಉಡಾವಣೆಗೂ ಮುನ್ನ ಇತ್ತು. ಇಸ್ರೋ ವಿಜ್ಞಾನಿಗಳಿಗೆ ನನ್ನ ಅಭಿನಂದನೆಗಳು ಎಂದು ಹೇಳಿದ್ದಾರೆ.

    ಇದು ಇಸ್ರೋ, ಭಾರತ ಮತ್ತು ಮನುಕುಲಕ್ಕೂ ಉತ್ತಮ ದಿನವಾಗಿದೆ. ನಾವು ಸಾಧಿಸಿದ್ದು ಒಂದರ್ಥದಲ್ಲಿ ನಂಬಲಸಾಧ್ಯ. ಚಂದ್ರಯಾನ-2 ವೈಫಲ್ಯದ ಬಳಿಕ ಕಡಿಮೆ ಬಜೆಟ್‌ನಲ್ಲಿ ಚಂದ್ರಯಾನ-3 ಕೈಗೊಂಡು ಯಶಸ್ಸು ಸಾಧಿಸಿದ್ದು ನಿಜಕ್ಕೂ ಸವಾಲಿನ ಕಾರ್ಯವಾಗಿತ್ತು. ಇಷ್ಟೆಲ್ಲ ಸವಾಲುಗಳ ನಡುವೆ ಮಿಷನ್‌ ಉದ್ದೇಶವನ್ನು ಸಾಧಿಸಿದ್ದಾರೆ ಎಂದು ಮಾತನಾಡಿದ್ದಾರೆ. ಇದನ್ನೂ ಓದಿ: Chandrayaan-3 ಸಕ್ಸಸ್‌; ಇಸ್ರೋ ಅಧ್ಯಕ್ಷರು, ವಿಜ್ಞಾನಿಗಳಿಗೆ ಸಿಎಂ ಅಭಿನಂದನೆ

    ಜುಲೈ 14 ರಂದು ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಚಂದ್ರಯಾನ-3 ಬಾಹ್ಯಾಕಾಶ ನೌಕೆಯನ್ನು ಉಡಾವಣೆ ಮಾಡಲಾಯಿತು. ಆ.23 ರಂದು ವಿಕ್ರಮ್‌ ಲ್ಯಾಂಡರ್‌ ಯಶಸ್ವಿಯಾಗಿ ಚಂದ್ರನ ಮೇಲ್ಮೈನಲ್ಲಿ ಇಳಿಯಿತು. ಭಾರತವು ಯುಎಸ್, ರಷ್ಯಾ ಮತ್ತು ಚೀನಾದ ನಂತರ ಚಂದ್ರನ ಲ್ಯಾಂಡಿಂಗ್ ಮಿಷನ್ ಅನ್ನು ಯಶಸ್ವಿಯಾಗಿ ನಡೆಸಿದ ನಾಲ್ಕನೇ ರಾಷ್ಟ್ರವಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸುಳ್ಳು ಕೇಸ್ ಹಾಕಿದ್ದಕ್ಕೆ ಇಸ್ರೋ ವಿಜ್ಞಾನಿಗೆ 50 ಲಕ್ಷ ಪರಿಹಾರ ನೀಡಿ – ಕೇರಳಕ್ಕೆ ಸುಪ್ರೀಂ ಆದೇಶ

    ಸುಳ್ಳು ಕೇಸ್ ಹಾಕಿದ್ದಕ್ಕೆ ಇಸ್ರೋ ವಿಜ್ಞಾನಿಗೆ 50 ಲಕ್ಷ ಪರಿಹಾರ ನೀಡಿ – ಕೇರಳಕ್ಕೆ ಸುಪ್ರೀಂ ಆದೇಶ

    ನವದೆಹಲಿ: ಇಸ್ರೊ ಬೇಹುಗಾರಿಕೆ ನಡೆಸಿದ್ದಾರೆ ಎಂದು ಆರೋಪಿಸಿ ವಿಜ್ಞಾನಿ ನಂಬಿ ನಾರಾಯಣನ್ ಸುಳ್ಳು ಕೇಸ್ ದಾಖಲಿಸಿದ್ದಕ್ಕಾಗಿ ಅವರಿಗೆ 50 ಲಕ್ಷ ರೂ. ಪರಿಹಾರ ಧನವನ್ನು ನೀಡುವಂತೆ ಕೇರಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಆದೇಶಿಸಿದೆ.

    ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ಎಎಂ ಖಾನ್ವಿಲ್ಕರ್, ಚಂದ್ರಚೂಡ್ ನೇತೃತ್ವದ ಪೀಠ ಈ ತೀರ್ಪು ಪ್ರಕಟಿಸಿದ್ದು, ಪರಿಹಾರ ಧನವನ್ನು 8 ವಾರದ ಒಳಗಡೆ ನೀಡುವಂತೆ ಸೂಚಿಸಿದೆ. ಅಷ್ಟೇ ಅಲ್ಲದೇ ಈ ಪ್ರಕರಣದಲ್ಲಿ ನಂಬಿ ನಾರಾಯಣನ್ ವಿರುದ್ಧ ಸುಳ್ಳು ಕೇಸ್ ದಾಖಲಿಸಿದ್ದ ಕೇರಳ ಪೊಲೀಸರ ವಿರುದ್ಧ ತನಿಖೆ ನಡೆಸಲು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾ. ಡಿಕೆ ಜೈನ್ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಿದೆ.

    ಏನಿದು ಪ್ರಕರಣ?
    ಇಸ್ರೋದ ಸ್ವದೇಶಿ ನಿರ್ಮಿತ ಕ್ರಯೋಜೆನಿಕ್ ಎಂಜಿನ್ ತಂತ್ರಜ್ಞಾನವನ್ನು ಅಭಿವೃದ್ಧಿ ಪಡಿಸುತ್ತಿದ್ದಾಗ ಈ ತಂತ್ರಜ್ಞಾನವನ್ನು ನಂಬಿ ನಾರಾಯಣನ್ ಮಾಲ್ಡಿವ್ಸ್ ಗೆ ಮಾರಾಟ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಸಂಬಂಧ 1994ರ ನವೆಂಬರ್ 30 ರಂದು ಕೇರಳ ಪೊಲೀಸರು ನಂಬಿ ನಾರಾಯಣನ್ ಅವರನ್ನು ಬಂಧಿಸಿದ್ದರು. ನಂತರ ಸಿಬಿಐ ತನಿಖೆ ನಡೆಸಿತ್ತು. ಈ ಪ್ರಕರಣದಲ್ಲಿ ಬೇಹುಗಾರಿಕೆ ನಡೆದಿಲ್ಲ ಎಂದು ಸಿಬಿಐ ಹೇಳಿತ್ತು. ನಂತರ ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ 1998ರಲ್ಲಿ ಈ ಪ್ರಕರಣದಲ್ಲಿ ಆಪಾದಿತರೆಂದು ಪರಿಗಣಿಸಲಾಗಿರುವ ನಂಬಿ ನಾರಾಯಣನ್, ಇಸ್ರೊ ವಿಜ್ಞಾನಿ ಡಿ. ಶಶಿಕುಮಾರನ್ ಮತ್ತು ಬೆಂಗಳೂರು ಮೂಲದ ಇಬ್ಬರು ಉದ್ಯಮಿಗಳಾದ ಎಸ್.ಕೆ. ಶರ್ಮಾ ಮತ್ತು ಚಂದ್ರಶೇಖರನ್, ಮಾಜಿ ಐಜಿಪಿ ಶ್ರೀವಾತ್ಸವ ಹಾಗೂ ಮಾಲ್ಡೀವ್ಸ್ ನ ಇಬ್ಬರು ಮಹಿಳೆಯರಾದ ಮ್ಯಾರಿಯಮ್ ರಶೀಡಾ ಮತ್ತು ಫೌಜಿಯಾ ಹಸನ್ ಅವರನ್ನು ಬಿಡುಗಡೆಗೊಳಿಸುವಂತೆ ಆದೇಶಿಸಿತ್ತು.

    ಇದಾದ ಬಳಿಕ ನಾರಾಯಣನ್ ಅವರು, ತಮ್ಮ ವೃತ್ತಿ ಜೀವನಕ್ಕೆ ಕಳಂಕ ತಂದ ಸರಕಾರದ ಕ್ರಮವನ್ನು ಪ್ರಶ್ನಿಸಿ 10 ಲಕ್ಷ ರೂ. ಪರಿಹಾರ ಧನಕ್ಕೆ ಆಗ್ರಹಿಸಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ(ಎನ್‍ಎಚ್‍ಆರ್’ಸಿ) ಮೊರೆ ಹೋಗಿದ್ದರು. ಎನ್‍ಎಚ್‍ಆರ್‍ಸಿ 10 ಲಕ್ಷ ರೂ. ಪರಿಹಾರ ನೀಡುವಂತೆ ಆದೇಶಿಸಿತ್ತು. ಕೇರಳ ಹೈಕೋರ್ಟ್ ಸಹ ನಂಬಿ ನಾರಾಯಣನ್ ಪರವಾಗಿ ತೀರ್ಪು ನೀಡಿ ಕೇರಳ ಸರ್ಕಾರಕ್ಕೆ 10 ಲಕ್ಷ ರೂ. ನೀಡುವಂತೆ ಸೂಚಿಸಿತ್ತು. ಈ ಪ್ರಕರಣವು ಕೇರಳದ ಮುಖ್ಯಮಂತ್ರಿ ಆಗಿದ್ದ ಕೆ.ಕರುಣಾಕರನ್ ಅವರ ಹುದ್ದೆಗೆ ಆಗ ಕುತ್ತು ತಂದಿತ್ತು.

    ನಂಬಿ ನಾರಾಯಣನ್ ಬಂಧನದಿಂದಾಗಿ ಕ್ರಯೋಜೆನಿಕ್ ಯೋಜನೆ, ಜಿಎಸ್‍ಎಲ್‍ವಿ, ಪಿಎಸ್‍ಎಲ್‍ವಿ ರಾಕೆಟ್ ಅಭಿವೃದ್ಧಿ ಸೇರಿದಂತೆ ಇಸ್ರೊದ ಹತ್ತಾರು ಯೋಜನೆಗಳು ಹಿಂದಕ್ಕೆ ಬಿದ್ದಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv