Tag: Name

  • ಉಡುಪಿಯಲ್ಲಿ ಮುಸ್ಲಿಂ ಅಂಗಡಿ ಹೆಸರು ಬದಲಿಸುವಂತೆ ಪಟ್ಟು

    ಉಡುಪಿಯಲ್ಲಿ ಮುಸ್ಲಿಂ ಅಂಗಡಿ ಹೆಸರು ಬದಲಿಸುವಂತೆ ಪಟ್ಟು

    ಉಡುಪಿ: ಹಿಜಬ್ ಹೋರಾಟ ಒಂದೊಂದು ಕಡೆ ಒಂದೊಂದು ಲೆವೆಲ್ಲಿಗೆ ಹೋಗುತ್ತಿದೆ. ಶಿರವಸ್ತ್ರದಿಂದ ಆರಂಭವಾಗಿ ಧಾರ್ಮಿಕ ಕೇಂದ್ರದ ವ್ಯಾಪಾರ, ಅಲ್ಲಿಂದ ಹಲಾಲ್ ಗೆ ಸುತ್ತುವರಿದು ಇದೀಗ ಅಂಗಡಿಗಳ ಹೆಸರು ಬದಲಾವಣೆ ಮಾಡಿಸುವವರೆಗೆ ಬಂದು ನಿಂತಿದೆ.

    ಉಡುಪಿ ಜಿಲ್ಲೆಯಲ್ಲಿ ಆರಂಭವಾದ ಹಿಜಬ್ ಹೋರಾಟ ಒಂದೊಂದೇ ಘರ್ಷಣೆಗಳಿಗೆ ಕಾರಣವಾಗುತ್ತಿದೆ. ಹಿಂದೂ ಸಂಘಟನೆಗಳು ಜಿದ್ದಿಗೆ ಬಿದ್ದಂತೆ ಮುಸ್ಲಿಮರನ್ನು ಕಾಡಲು ಶುರು ಮಾಡಿದೆ. ಉಡುಪಿ ಜಿಲ್ಲೆ ಬ್ರಹ್ಮಾವರ ತಾಲೂಕಿನ ಫೂಟ್ ವೇರ್ ಅಂಗಡಿಯ ಹೆಸರು ಬದಲಿಸುವಂತೆ ಹಿಂದೂ ಜಾಗರಣಾ ವೇದಿಕೆ ಆಗ್ರಹಿಸಿದೆ. ಸಾಲಿಗ್ರಾಮ ಪಟ್ಟಣದ ಮುಖ್ಯರಸ್ತೆಯಲ್ಲಿ ಹಿಂದೂ ದೇವರ ಹಾಗೂ ಪ್ರಸಿದ್ಧ ಕ್ಷೇತ್ರದ ಹೆಸರನಿಟ್ಟುಕೊಂಡು ವ್ಯವಹರಿಸುತ್ತಿರುವ “ಸಾಲಿಗ್ರಾಮ ಫ್ಯಾನ್ಸೀ ಮತ್ತು ಪುಟ್ ವೇರ್” ಹೆಸರು ಬದಲಾಯಿಸುವಂತೆ ಒತ್ತಾಯಿಸಲಾಗಿದೆ. ಸಾಲಿಗ್ರಾಮ ಪಟ್ಟಣ ಪಂಚಾಯತ್ ಗೆ ಹಿಂದೂ ಜಾಗರಣಾ ವೇದಿಕೆ ಮನವಿ ನೀಡಿದೆ. ಇದನ್ನೂ ಓದಿ: ಬುಲ್ಡೋಜರ್ ಜನರನ್ನು ಹತ್ತಿಕ್ಕಲು ಪ್ರಾರಂಭಿಸಿದೆ: ಅಖಿಲೇಶ್ ಯಾದವ್

    ಅಂಗಡಿ ಮಾಲೀಕ ಹಿಜಬ್ ಸಂಬಂಧಿಸಿದ ಕೋರ್ಟ್ ತೀರ್ಪು ವಿಚಾರದಲ್ಲಿ ಬಂದ್ ಮಾಡಿದ್ದರು. ಮುಸ್ಲಿಂ ಸಮುದಾಯ ನಮ್ಮ ಪವಿತ್ರ ಕ್ಷೇತ್ರದ ಹೆಸರು ಬಳಸಿಕೊಂಡು ವ್ಯವಹರಿಸಿ ದ್ರೋಹ ಎಸೆಗುತ್ತಿದ್ದಾರೆ. ವ್ಯಾವಹಾರಿಕಾ ಅಂಗಡಿಯ ಹೆಸರು ಬದಲಾಯಿಸಿಕೊಳ್ಳಬೇಕು ಎಂದು ಒತ್ತಾಯಿಸಲಾಗಿದೆ. ಈ ನಡುವೆ ವ್ಯವಹಾರ ಅಸಹಕಾರ ಮುಂದುವರೆದಿದೆ. ಗ್ರಾಮಿಣ ಪ್ರದೇಶಗಳಿಗೂ ವ್ಯಾಪಾರ ಬಹಿಷ್ಕಾರ ಆವರಿಸಿದೆ. ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳ ಸದಸ್ಯರು ಜಾತ್ರೆ ನಡೆಯುವಲ್ಲೆಲ್ಲಾ ಕರಪತ್ರ, ಬ್ಯಾನರ್ ಹಾಕಿ ವಹಿವಾಟಿಗೆ ತಡೆಯೊಡ್ಡುತ್ತಿದ್ದಾರೆ. ನಾಯಕರು ಇದನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ.

    ಉಡುಪಿ ಜಿಲ್ಲೆಯಲ್ಲಿ ಹಿಜಾಬ್ ಹೋರಾಟ ಆರಂಭವಾಗಿತ್ತು. ಧಾರ್ಮಿಕ ಕೇಂದ್ರದ ವ್ಯಾಪಾರ ವಹಿವಾಟಿಗೆ ತಡೆ ಬಿದ್ದದ್ದು ಉಡುಪಿಯಲ್ಲೇ. ಆದರೆ ಹಲಾಲ್ ಮತ್ತು ಜಟ್ಕಾ ಕಟ್ ತಿಕ್ಕಾಟ ಈವರೆಗೆ ಉಡುಪಿಯಲ್ಲಿ ಕಾಣಿಕೊಳ್ಳದಿರುವುದು ಕೊಂಚ ನೆಮ್ಮದಿಯ ಸಂಗತಿ. ಇದನ್ನೂ ಓದಿ: ಯುಗಾದಿ ಬಳಿಕ ಜಟ್ಕಾ ಕಟ್‍ಗೆ ಸ್ಪೆಷಲ್ ಕ್ಲಾಸ್..!

  • ಎರಡನೇ ಮಗುವನ್ನು ಸ್ವಾಗತಿಸಿದ ಎಲೋನ್ ಮಸ್ಕ್

    ಎರಡನೇ ಮಗುವನ್ನು ಸ್ವಾಗತಿಸಿದ ಎಲೋನ್ ಮಸ್ಕ್

    ನ್ಯೂಯಾರ್ಕ್: ಖ್ಯಾತ ಉದ್ಯಮಿ ಬಿಲಿಯನೇರ್ ಎಲೋನ್ ಮಸ್ಕ್ ಮತ್ತು ಗಾಯಕಿ ಹಾಗೂ ಗೀತರಚನೆಗಾರ್ತಿ ಗ್ರಿಮ್ಸ್ ಅವರು ಡಿಸೆಂಬರ್ 2021ರಲ್ಲಿ ಬಾಡಿಗೆ ಮೂಲಕ ತಮ್ಮ ಎರಡನೇ ಮಗುವನ್ನು ರಹಸ್ಯವಾಗಿ ಸ್ವಾಗತಿಸಿದ್ದಾರೆ.

    ಮಗುವಿನ ಪೂರ್ಣ ಹೆಸರು ಎಕ್ಸಾ ಡಾರ್ಕ್ ಸೈಡೆರೆಲ್, ಅಂತ ಗ್ರಿಮ್ಸ್ ಅವರು ಬಹಿರಂಗಪಡಿಸಿದ್ದಾರೆ. ಆದಾಗ್ಯೂ, ಮಾಜಿ ದಂಪತಿ ತಮ್ಮ ಮಗುವಿಗೆ ‘ವೈ’ ಎಂದು ಅಡ್ಡಹೆಸರು ಇಟ್ಟಿದ್ದಾರೆ.

    ಗ್ರೀಮ್ಸ್ ಅವರು ಪೀಪಲ್ ಮ್ಯಾಗಜೀನ್‍ನ ವಿಶೇಷ ಸಂಚಿಕೆಯಲ್ಲಿ ಮಾತನಾಡುತ್ತಾ ತಮ್ಮ ಮಗಳ ವಿಶಿಷ್ಟ ಹೆಸರಿನ ಒಳ ಅರ್ಥವನ್ನು ವಿವರಿಸಿದರು. ಎಕ್ಸಾ ಡಾರ್ಕ್ ಸೈಡೆರೆಲ್ ಎಂದರೆ ಎಕ್ಸಾ ಸೂಪರ್ ಕಂಪ್ಯೂಟಿಂಗ್ ಪದವಾದ ಎಕ್ಸಾಫೆÇ್ಲೀಪ್ಸ್ ಅನ್ನು ಸೂಚಿಸುತ್ತದೆ. ಆದರೆ ಡಾರ್ಕ್ ಎಂಬ ಪದ ‘ಅಜ್ಞಾತ’ ವನ್ನು ಪ್ರತಿನಿಧಿಸುತ್ತದೆ ಎಂದು ಹೇಳಿದರು.

    ಜನರು ಈ ಹೆಸರಿಗೆ ಭಯಪಡುತ್ತಾರೆ. ಆದರೆ ನಿಜವಾಗಿಯೂ ಇದು ಫೋಟಾನ್‍ಗಳ ಅನುಪಸ್ಥಿತಿಯಾಗಿದೆ. ಡಾರ್ಕ್‍ನ ಒಳ ಅರ್ಥವೆನೆಂದರೆ ನಮ್ಮ ಬ್ರಹ್ಮಾಂಡದ ಸುಂದರವಾದ ರಹಸ್ಯವಾಗಿದೆ. ಈ ಸಂದರ್ಭದಲ್ಲಿ ತಮ್ಮ ಮಗಳ ಎರಡನೇ ಅಡ್ಡ ಹೆಸರಿನ ವಿಶೇಷತೆ ಬಗ್ಗೆ ತಿಳಿಸಿದ ಅವರು, ‘ವೈ’ ನ ಪೂರ್ಣ ಹೆಸರಿನ ಮೂರನೇ ಭಾಗವಾದ ‘ಸೈಡೆರೆಲ್’ ಅನ್ನು ಡೀಯರ್-ಈ-ಎಲ್ ಎಂದು ಉಚ್ಚರಿಸಲಾಗುತ್ತದೆ ಎಂದರು. ಇದನ್ನೂ ಓದಿ: Bulldozer is Back – ಟ್ರೆಂಡ್‌ ಆಯ್ತು ಬುಲ್ಡೋಜರ್‌, ಬುಲ್ಡೋಜರ್‌ ಏರಿ ಬಿಜೆಪಿಯಿಂದ ಸಂಭ್ರಮಾಚರಣೆ

    ಸೈಡೆರೆಲ್ ಎಂಬ ಪದವು ಬ್ರಹ್ಮಾಂಡದ ನಿಜವಾದ ಸಮಯ, ನಕ್ಷತ್ರದ ಸಮಯ, ಆಳವಾದ ಬಾಹ್ಯಾಕಾಶ ಸಮಯ, ಆದರೆ ನಮ್ಮ ಸಂಬಂಧಿತ ಭೂಮಿಯ ಸಮಯವಲ್ಲ ಎಂದು ವ್ಯಾಖ್ಯಾನಿಸಿದ್ದಾರೆ.

    ತಮ್ಮ ಮಗಳಿಗೆ ಒಡಿಸ್ಸಿಯಸ್ ಮಸ್ಕ್ ಎಂದು ಹೆಸರಿಸಲು ಪ್ರಯತ್ನಿಸಿದ್ದರಂತೆ. ಏಕೆಂದರೆ ಒಡಿಸ್ಸಿಯಸ್ ಎಂಬ ಹೆಸರಿಡುವುದು ನನ್ನ ಕನಸಾಗಿತ್ತು. ಆದಾಗ್ಯೂ ನಾನು ಮಗಳಿಗೆ ಎಕ್ಸಾ ಡಾರ್ಕ್ ಸೈಡೆರೇಲ್ ಎಂಬ ಹೆಸರನ್ನು ಇಟ್ಟಿದ್ದೇನೆ ಎಂದು ಗ್ರೀಮ್ಸ್ ತಿಳಿಸಿದ್ದಾರೆ.

    ಗ್ರಿಮ್ಸ್‍ಗೆ ಈಗಾಗಲೇ 22 ತಿಂಗಳ ಮಗು ಇದ್ದು, ಟೆಸ್ಲಾ ಕಂಪನಿಯ ಮಾಲಿಕರಾದ ಎಲೋನ್ ಮಸ್ಕ್ ಜೊತೆ ಮೂರು ವರ್ಷಗಳ ನಂತರ ಇಬ್ಬರೂ ಸೆಪ್ಟೆಂಬರ್ 2021ರಲ್ಲಿ ತಮ್ಮ ಪ್ರತ್ಯೇಕತೆಯನ್ನು ಘೋಷಿಸಿದ್ದರು. ಆದರೆ ಇವರಿಬ್ಬರು ಮತ್ತೆ ಒಂದಾಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಇದನ್ನೂ ಓದಿ: ಪಂಚರಾಜ್ಯಗಳ ಫಲಿತಾಂಶದ ಬೆನ್ನಲ್ಲೇ ರಾಜ್ಯಕ್ಕೆ ಬರಲಿದ್ದಾರೆ ಮೋದಿ – ಕಲಬುರಗಿಗೆ ಯಾಕೆ?

    ಪ್ರತ್ಯೇಕತೆಯ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನಾನು ಬಹುಶಃ ಅವನನ್ನು ನನ್ನ ಗೆಳೆಯ ಎಂದು ಹೇಳಿಕೊಳ್ಳತ್ತೆನೆ. ಆದರೆ ನಾವು ತುಂಬಾ ಒಬ್ಬರನ್ನೊಬ್ಬರು ಅರ್ಥ ಮಾಡಿಕೊಂಡಿದ್ದೇವೆ. ನಾವು ಪ್ರತ್ಯೇಕ ಮನೆಗಳಲ್ಲಿ ವಾಸಿಸುತ್ತೇವೆ. ಅದಲ್ಲದೆ ನಾವು ಉತ್ತಮ ಸ್ನೇಹಿತರು. ನಾವು ಯಾವಾಗಲೂ ಒಬ್ಬರನ್ನೊಬ್ಬರು ನೋಡುತ್ತಲೇ ಇರುತ್ತೇವೆ. ನಾವು ನಮ್ಮದೇ ಆದ ವಿಷಯವನ್ನು ಹೊಂದಿದ್ದೇವೆ. ಇತರ ಜನರು ಅದನ್ನು ಅರ್ಥಮಾಡಿಕೊಳ್ಳುತ್ತಾರೆ ಎಂದು ನಾನು ನಿರೀಕ್ಷಿಸುವುದಿಲ್ಲ ಎಂದರು.

    ಮುಂಬರುವ ದಿನಗಳಲ್ಲಿ ಇವರಿಬ್ಬರು ಹೆಚ್ಚಿನ ಮಕ್ಕಳನ್ನು ಬೆಳೆಸಲು ಯೋಜಿಸಿದ್ದೇವೆ ಎಂದು ಪ್ರಕಟಣೆಗೆ ತಿಳಿಸಿದ್ದು, ನಾವು ಯಾವಾಗಲೂ ಕನಿಷ್ಠ ಮೂರು ಅಥವಾ ನಾಲ್ಕು ಮಕ್ಕಳನ್ನು ಬಯಸುತ್ತಿದ್ದೇವು ಎಂದು ತಿಳಿಸಿದರು.

  • ರೋಡ್, ಪಾರ್ಕ್, ಮೆಟ್ರೋ, ಬಸ್ ನಿಲ್ದಾಣಕ್ಕೆ ಪುನೀತ್ ಹೆಸರು?

    ರೋಡ್, ಪಾರ್ಕ್, ಮೆಟ್ರೋ, ಬಸ್ ನಿಲ್ದಾಣಕ್ಕೆ ಪುನೀತ್ ಹೆಸರು?

    ಬೆಂಗಳೂರು: ಸ್ಯಾಂಡಲ್‍ವುಡ್ ನಟ ದೊಡ್ಮನೆ ಹುಡುಗ ನಟ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ನಿಧನದ ಬಳಿಕ ಅವರ ಹೆಸರನ್ನು ರೋಡ್, ಪಾರ್ಕ್, ಮೆಟ್ರೋ ಹಾಗೂ ಬಸ್ ನಿಲ್ದಾಣಗಳಿಗೆ ಇಡುವ ಬಗ್ಗೆ ಭಾರೀ ಚರ್ಚೆಯಾಗುತ್ತಿದೆ.

    ನಗರದ ಪ್ರಮುಖ ರಸ್ತೆ, ಪಾರ್ಕ್, ಮೆಟ್ರೋ ಹಾಗೂ ಬಸ್ ನಿಲ್ದಾಣಗಳಿಗೆ ಪವರ್ ಸ್ಟಾರ್ ಹೆಸರಿಡಲು ಬೆಂಗಳೂರು ಮಹಾನನಗರ ಪಾಲಿಕೆ ವತಿಯಿಂದ ಅಭಿಪ್ರಾಯ ವ್ಯಕ್ತವಾಗಿದೆ. ಪುನೀತ್ ಅಭಿಮಾನಿಗಳ ಒತ್ತಾಸೆಯ ಬೆನ್ನಲ್ಲೇ ಬಿಬಿಎಂಪಿ ಈ ನಿರ್ಧಾರ ಕೈಗೊಂಡಿದ್ದು, ನಗರದ ಮುಖ್ಯ ರಸ್ತೆಯೊಂದಕ್ಕೆ ಪುನೀತ್ ಹೆಸರಿಡಲು ಚರ್ಚೆ ನಡೆಸಲಾಗುತ್ತಿದೆ. ಇದನ್ನೂ ಓದಿ: ಪುನೀತ್ ಸಾವಿಗೂ 46 ಸಂಖ್ಯೆಗೂ ಸಂಬಂಧವೇನು?

    ಈಗಾಗಲೇ ರಾಜಾಜಿನಗರ ಮುಖ್ಯ ರಸ್ತೆಗೆ ಪುನೀತ್ ಹೆಸರಿಡಲಾಗಿದ್ದು, ಪಕ್ಕದ ವೆಸ್ಟ್ ಆಫ್ ಕಾರ್ಡ್ ರೋಡ್‍ಗೆ ಕೂಡ ಪುನೀತ್ ನಾಮಕರಣ ಮಾಡಲು ಸಿದ್ಧತೆ ನಡೆಸಲಾಗುತ್ತಿದೆ. ಈ ಬಗ್ಗೆ ಮೊದಲು ಪುನೀತ್ ರಾಜ್‍ಕುಮಾರ್ ಅವರ ಕುಟುಂಬಸ್ಥರೊಂದಿಗೆ ಚರ್ಚಿಸಿ, ನಂತರ ಸರ್ಕಾರದ ಮುಂದೆ ಈ ವಿಚಾರ ಪ್ರಸ್ತಾಪಿಸಲಾಗುತ್ತದೆ. ಇದನ್ನೂ ಓದಿ: ಪುನೀತ್ ಸಾವಿನ ಬೆನ್ನಲ್ಲೇ ಹೆಚ್ಚಾಯ್ತು ಇಸಿಜಿ, ಹೃದಯಸಂಬಂಧಿ ಟೆಸ್ಟ್‌ಗಳು

    ನಗರದ ಪ್ರತಿಷ್ಠಿತ ಪಾರ್ಕ್, ಆಟದ ಮೈದಾನ, ಮೆಟ್ರೋ ಹಾಗೂ ಬಸ್ ನಿಲ್ದಾಣಕ್ಕೂ ಅಪ್ಪು ಹೆಸರಿಡಲು ಚಿಂತನೆ ನಡೆಸಲಾಗಿದೆ. ಆದರೆ ಈ ವಿಚಾರವಾಗಿ ಅಂತಿಮವಾಗಿ ಸರ್ಕಾರ ನಿರ್ಧರಿಸಬೇಕಾಗಿದೆ.

  • ಫೇಸ್‍ಬುಕ್ ಅಧೀನದ ಕಂಪನಿಗಳಿಗೆ ಒಂದೇ ಬ್ರ್ಯಾಂಡ್ -FB ಕಂಪನಿ ಇನ್ನು ಮೆಟಾವರ್ಸ್

    ಫೇಸ್‍ಬುಕ್ ಅಧೀನದ ಕಂಪನಿಗಳಿಗೆ ಒಂದೇ ಬ್ರ್ಯಾಂಡ್ -FB ಕಂಪನಿ ಇನ್ನು ಮೆಟಾವರ್ಸ್

    – ವಾರ್ಷಿಕ ಸಭೆಯಲ್ಲಿ ಜುಕರ್‌ಬರ್ಗ್ ಘೋಷಣೆ

    ವಾಷಿಂಗ್ಟನ್: ಫೇಸ್‍ಬುಕ್, ಇನ್‍ಸ್ಟಾಗ್ರಾಮ್, ಮೆಸೆಂಜರ್, ಒಕುಲಸ್ ಮುಂತಾದ ಕಂಪನಿಗಳು ಮಾರ್ಕ್ ಜುಕರ್‌ಬರ್ಗ್ ಒಡೆತನದಲ್ಲಿದ್ದು, ಈ ಎಲ್ಲ ಸೋಶಿಯಲ್ ಮೀಡಿಯಾಗಳನ್ನು ಒಟ್ಟಿಗೆ ತರಲಾಗುತ್ತದೆ ಎಂದು ಜುಕರ್‌ಬರ್ಗ್ ಘೋಷಿಸಿದ್ದಾರೆ

    ಪ್ರಸಿದ್ಧ ಸಾಮಾಜಿಕ ಜಾಲತಾಣ ಫೇಸ್‍ಬುಕ್ ಕಂಪನಿಯ ಮುಖ್ಯಸ್ಥ ಮಾರ್ಕ್ ಜುಕರ್ ಬರ್ಗ್ ಭವಿಷ್ಯದ ವರ್ಚುವಲ್ ದೃಷ್ಟಿಕೋನದೊಂದಿಗೆ ತಮ್ಮ ಕಂಪನಿಯನ್ನು ಮೆಟಾ ಎಂಬ ಹೆಸರಿನಲ್ಲಿ ಬ್ರಾಂಡಿಂಗ್ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಇದನ್ನೇ ಅವರು ಮೆಟಾವರ್ಸ್ ಎಂದು ಕರೆದಿದ್ದಾರೆ. ಇದನ್ನೂ ಓದಿ: ಹೆಸರು ಬದಲಿಸಲು ಚಿಂತಿಸಿದ ಫೇಸ್‍ಬುಕ್

    ನಿನ್ನೆ ನಡೆದ ಕಂಪನಿಯ ವಾರ್ಷಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಜನ ಸಾಮಾನ್ಯರ ಮಧ್ಯೆ ಸಂಪರ್ಕ ಸಾಧಿಸಲು ತಂತ್ರಜ್ಞಾನ ರೂಪಿಸುವ ಕಂಪನಿ ನಮ್ಮದಾಗಿದ್ದು, ಈ ಕಾಯಕದಲ್ಲಿ ನಾವು ಯಶಸ್ವಿಯಾಗಿದ್ದೇವೆ. ಮುಂದಿನ ಒಂದು ದಶಕದಲ್ಲಿ ಮೆಟಾವರ್ಸ್ 100 ಕೋಟಿ ಜನರನ್ನು ತಲುಪಲಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ:  ಸೂಪರ್ ಸ್ಟಾರ್ ರಜನಿಕಾಂತ್ ಆಸ್ಪತ್ರೆಗೆ ದಾಖಲು

    ಕಾಲಾಂತರದಲ್ಲಿ ನಾವು ಮೆಟಾವರ್ಸ್ ಕಂಪನಿಯಾಗಿ ಬದಲಾವಣೆಯಾವ ಭರವಸೆಯಿದೆ ಎಂದು ಹೆಳಿದ್ದಾರೆ. ಮೆಟಾವರ್ಸ್ ವೇದಿಕೆಯು ಜನರ ಸಂವಹನ, ಕೆಲಸ, ಉತ್ಪನ್ನಗಳಿಗೆ ಮಾರುಕಟ್ಟೆ ವಿವಿಧ ವಿಷಯಗಳ ಕುರಿತ ರಚನೆ ಅವಕಾಶ ನೀಡಲಿದ್ದು, ಲಕ್ಷಾಂತರ ಮಂದಿಗೆ ಉದ್ಯೋಗ ದೊರಕಿಸಿ ಕೊಡಲಿದೆ ಎಂದಿದ್ದಾರೆ.

    ಫೇಸ್ ಬುಕ್, ಇಸ್ಟಾಗ್ರಾಮ್, ಮೆಸೆಂಜರ್, ಒಕುಲಸ್ ಮುಂತಾದ ಕಂಪನಿಗಳನ್ನು ಒಟ್ಟಿಗೆ ತರಲಾಗುತ್ತದೆ. ಆದರೆ ಉದ್ಯೋಗ ಶ್ರೇಣಿಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಮಾರ್ಕ್ ಘೋಷಿಸಿದ್ದಾರೆ.

    ಏನಿದು ಮೆಟಾವರ್ಸ್?
    ಮೆಟಾವರ್ಸ್ ಒಂದು ವಿಶಾಲವಾದ ಅರ್ಥವನ್ನು ನೀಡುವ ಪದವಾಗಿದೆ. ಸಾಮಾಜಿಕ ಜಾಲತಾಣಗಳ ವಿಚಾರಕ್ಕೆ ಬರುವುದಾದರೆ ಇಂಟರ್ ನೆಟ್ ಮೂಲಕ ಒಬ್ಬ ವ್ಯಕ್ತಿ ವರ್ಚುವಲ್ ಮಾದರಿಯಲ್ಲಿ (ಸಾಮಾನ್ಯವಾಗಿ ವಿಡಿಯೋ ಕಾನ್ಫರೆನ್ಸ್ ಮಾದರಿಯಲ್ಲಿ ಅಥವಾ ಬೇರೆ ಮಾದರಿಗಳಲ್ಲಿ) ಜಗತ್ತಿನೊಂದಿಗೆ ಸಂಪರ್ಕ ಸಾಧಿಸುವುದಾಗಿದೆ. ಇದನ್ನು ಅತ್ಯಂತ ದೊಡ್ಡ ಪ್ರಮಾಣದಲ್ಲಿ ಸಾಧಿಸಲು ಫೇಸ್‍ಬುಕ್ ನಿರ್ಧಾರ ಮಾಡಿದೆ ಎಂದು ಮಾರ್ಕ್ ಜುಕರ್‌ಬರ್ಗ್ ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ನಟ ರಜನಿಕಾಂತ್

  • ಮಗಳ ಹೆಸರು ರಿವೀಲ್ ಮಾಡಿದ ಯುವರತ್ನ ನಟಿ ಸಯೇಷಾ

    ಮಗಳ ಹೆಸರು ರಿವೀಲ್ ಮಾಡಿದ ಯುವರತ್ನ ನಟಿ ಸಯೇಷಾ

    ಹೈದರಾಬಾದ್: ಯುವರತ್ನ ನಟಿ ಸಯೇಷಾ, ಆರ್ಯ ದಂಪತಿ ಇತ್ತೀಚೆಗೆ ಮಗುವನ್ನು ಬರಮಾಡಿಕೊಂಡಿದ್ದರು. ದಂಪತಿ ಮಗುವಿಗೆ ವಿಭಿನ್ನವಾಗಿರುವ ಹೆಸರು ಇಡುವ ಮೂಲಕವಾಗಿ ಸುದ್ದಿಯಾಗಿದ್ದಾರೆ.

    ಸಯೇಷಾ ಮತ್ತು ಆರ್ಯಾ ದಂಪತಿಗೆ ಮುದ್ದಾದ ಹೆಣ್ಣು ಮಗು ಜನಿಸಿ ಎರಡು ತಿಂಗಳಾಗಿದೆ. ಈಗ ಮಗುವಿಗೆ ಅರಿಯಾನಾ ಎಂದು ನಾಮಕರಣ ಮಾಡಲಾಗಿದೆ. ಈ ಬಗ್ಗೆ ಕುಟುಂಬದ ಕಡೆಯಿಂದ ಅಧಿಕೃತ ಘೋಷಣೆ ಆಗಿದೆ. ಹೆಸರು ಕೇಳಿದ ಅಭಿಮಾನಿಗಳು ಸಾಕಷ್ಟು ಖುಷಿಯಾಗಿದ್ದಾರೆ. ಅರಿಯಾನಾ ಅಂದರೆ ಅತ್ಯಂತ ಪವಿತ್ರವಾದುದು ಎನ್ನುವ ಅರ್ಥವಿದೆ. ಮಗಳ ಹೆಸರನ್ನು ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಬರೆದುಕೊಂಡು ರಿವೀಲ್ ಮಾಡಿದ್ದಾರೆ. ಇದನ್ನೂ ಓದಿ: ರಾಜ್ಯದ ಆರು ನಗರಗಳಲ್ಲಿ ವಿಧಿವಿಜ್ಞಾನ ಪ್ರಯೋಗಾಲಯಗಳ ಸ್ಥಾಪನೆ: ಬೊಮ್ಮಾಯಿ

     

    View this post on Instagram

     

    A post shared by Shaheen (@shhaheen)

    ನನ್ನ ಮೊಮ್ಮಗಳಿಗೆ ಎರಡು ತಿಂಗಳು. ನೀವು ಅವಳ ಹೆಸರನ್ನು ತಿಳಿದಿರಬೇಕು. ಅರಿಯಾನಾ, ಇದರ ಅರ್ಥ ಶುದ್ಧ. ನಾವು ಅದನ್ನು ಇಷ್ಟಪಟ್ಟಿದ್ದೇವೆ. ಆಕೆಯ ತಂದೆ ಆರ್ಯ ಹೆಸರಿಗೆ ಹತ್ತಿರವಾಗಿರುವುದರಿಂದ ಉತ್ತಮವಾಗಿದೆ. ನಿಮ್ಮೆಲ್ಲರ ಪ್ರೀತಿ ಮತ್ತು ಆಶೀರ್ವಾದದಿಂದ ಅವಳು ಮುದ್ದಾಗಿದ್ದಾಳೆ. ಸ್ವಲ್ಪ ಸಮಯದಲ್ಲಿ ನಾವು ಅವಳ ಚಿತ್ರಗಳೊಂದಿಗೆ ಅವಳನ್ನು ನಿಮಗೆ ಪರಿಚಯಿಸುತ್ತೇವೆ. ದಯವಿಟ್ಟು ನಿಮ್ಮ ಆಶೀರ್ವಾದದಿಂದ ಅವಳನ್ನು ಆಶೀರ್ವದಿಸುವುದನ್ನು ಮುಂದುವರಿಸಿ ಎಂದು ಸಯೇಷಾ ಅವರ ತಾಯಿ ಇನ್‍ಸ್ಟಾಗ್ರಾಮ್‍ನಲ್ಲಿ ಬರೆದುಕೊಂಡು ಮೊಮ್ಮಗಳ ಹೆಸರನ್ನು ರಿವೀಲ್ ಮಾಡಿ, ಸಂತೋಷವನ್ನು ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ನಾನು 35 ಅಂಕದ ಕೆಟಗೆರಿಯವರು ಅದಕ್ಕೆ ಕೈಗಾರಿಕಾ ಸಚಿವನಾದೆ: ಮುರುಗೇಶ್ ನಿರಾಣಿ

    arya daughter

    2019ರಲ್ಲಿ ಆರ್ಯ ಜೊತೆ ಸಯೇಷಾ ಮದುವೆ ನಡೆಯಿತು. ಇಬ್ಬರೂ ಕೂಡ ಅವರವರ ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಸಯೇಷಾ ಗರ್ಭಿಣಿ ಆಗಿರುವ ವಿಷಯವನ್ನು ಬಹಿರಂಗಪಡಿಸಿರಲಿಲ್ಲ. ಹೆಣ್ಣು ಮಗು ಜನಿಸಿರುವ ಸುದ್ದಿಯನ್ನು ಕಾಲಿವುಡ್ ನಟ, ಆರ್ಯ ಅವರ ಸ್ನೇಹಿತ ವಿಶಾಲ್ ಬ್ರೇಕ್ ಮಾಡಿದ್ದರು. ಇದನ್ನೂ ಓದಿ: 60 ತಿಂಗಳಲ್ಲಿ 59 ತಿಂಗಳು ಅಭಿವೃದ್ಧಿ, ಒಂದು ತಿಂಗಳ ಮಾತ್ರ ರಾಜಕಾರಣ ಮಾಡೋಣ: ಬೊಮ್ಮಾಯಿ

    ನಾನು ಅಂಕಲ್ ಆಗಿದ್ದೇನೆ ಎಂಬ ಈ ಖುಷಿ ಹಂಚಿಕೊಳ್ಳಲು ಬಹಳ ಖುಷಿ ಆಗುತ್ತಿದೆ. ನನ್ನ ಸಹೋದರ ಜಮ್ಮಿ ಮತ್ತು ಸಯೇಷಾ ಅವರಿಗೆ ಹೆಣ್ಣು ಮಗು ಜನಿಸಿದೆ. ಚಿತ್ರೀಕರಣದ ನಡುವೆ ಈ ಭಾವುಕ ಕ್ಷಣವನ್ನು ನಿಯಂತ್ರಿಸಲು ಆಗುತ್ತಿಲ್ಲ. ಅವರಿಗೆ ಸದಾ ಒಳ್ಳೆಯದಾಗಲಿ. ತಾಯಿ-ಮಗಳಿಗೆ ದೇವರ ಕೃಪೆ ಇರಲಿ. ಅಪ್ಪನಾಗಿ ಹೊಸ ಜವಾಬ್ದಾರಿ ನಿಭಾಯಿಸುತ್ತಿರುವ ಆರ್ಯಾಗೆ ಆಲ್ ದಿ ಬೆಸ್ಟ್ ಎಂದು ವಿಶಾಲ್ ಟ್ವೀಟ್ ಮಾಡಿದ್ದರು.

  • ದಾಖಲೆಗಳಲ್ಲಿ ಗ್ರಾಮದ ಹೆಸರು ಮಾಯ- ಗ್ರಾಮಸ್ಥರ ಪರದಾಟ

    ದಾಖಲೆಗಳಲ್ಲಿ ಗ್ರಾಮದ ಹೆಸರು ಮಾಯ- ಗ್ರಾಮಸ್ಥರ ಪರದಾಟ

    ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲೂಕಿನ ಪಗಡೆಕಲ್ಲಹಳ್ಳಿ ಗ್ರಾಮದಲ್ಲಿ ವಾಸಿಸುತ್ತಿರುವ ಎಲ್ಲ ನಾಗರೀಕರ ದಾಖಲೆಗಳಲ್ಲಿ ಗ್ರಾಮದ ಹೆಸರು ಬಿಟ್ಟು ಹೋಗಿ, ಬೇರೆ ಗ್ರಾಮದ ಹೆಸರು ಬರುತ್ತಿದ್ದು, ಇದರಿಂದ ತುಂಬಾ ತೊಂದರೆಯಾಗಿದೆ ಎಂದು ಗ್ರಾಮಸ್ಥರು ಅಳಲು ತೋಡಿಕೊಂಡಿದ್ದಾರೆ.

    ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಗ್ರಾಮಸ್ಥರು, ಗ್ರಾಮದಲ್ಲಿ 50 ಕುಟುಂಬಗಳಿದ್ದು, 250 ಮಂದಿ ಮತದಾರರಿದ್ದಾರೆ. ಆದರೆ ಕಳೆದ 5 ವರ್ಷಗಳಿಂದ ಗ್ರಾಮದಲ್ಲಿ ವಾಸವಾಗಿರುವ ಎಲ್ಲ ನಾಗರೀಕರ ಪಡಿತರ ಚೀಟಿ, ಮತದಾರರ ಚೀಟಿ, ಇ-ಸ್ವತ್ತು ಹಾಗೂ ಜಾತಿ, ಆದಾಯ ದೃಢೀಕರಣ ಪತ್ರ, ನರೇಗಾ ಜಾಬ್ ಕಾರ್ಡ್ ಗಳಲ್ಲಿ ಗ್ರಾಮದ ಹೆಸರು ಬಿಟ್ಟು ಹೋಗಿದೆ. ಪಕ್ಕದ ಕನಗೋನಹಳ್ಳಿ ಗ್ರಾಮದ ಹೆಸರು ಬರುತ್ತಿದೆ ಎಂದರು. ಇದನ್ನೂ ಓದಿ: ಪಲ್ಸ್ ಪೋಲಿಯೋ ಮಾದರಿಯಲ್ಲಿ ಜಾನುವಾರುಗಳಿಗೆ ಲಸಿಕೆ: ಪ್ರಭು ಚವ್ಹಾಣ್

    ಬೇರೆ ಗ್ರಾಮದ ಹೆಸರು ಬರುತ್ತಿರುವುದರಿಂದ ರೈತರು, ವಿದ್ಯಾರ್ಥಿಗಳು, ಬಡವರು ಸರ್ಕಾರಿ ಸೌಲಭ್ಯ ಪಡೆಯಲು ಸಾಧ್ಯವಾಗುತ್ತಿಲ್ಲ. ಇದರಿಂದ ತುಂಬಾ ತೊಂದರೆಯಾಗುತ್ತಿದೆ. ಶಾಲಾ ದಾಖಲಾತಿಗಳಲ್ಲಿ ಮಾತ್ರ ಪಗಡೆಕಲ್ಲಹಳ್ಳಿ ಎಂದು ತೋರಿಸಲಾಗಿದೆ. ಉಳಿದ ದಾಖಲಾತಿಗಳಲ್ಲಿ ಬೇರೆ ಗ್ರಾಮದ ಹೆಸರು ಬರುತ್ತಿದೆ ಎಂದು ಅಳಲು ತೋಡಿಕೊಂಡರು.

    ಈ ಬಗ್ಗೆ ಪಾಂಡವಪುರ ತಾಲೂಕು ಪಂಚಾಯಿತಿ, ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರೂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ಅಲ್ಲದೆ ಎಲ್ಲ ಜನಪ್ರತಿನಿಧಿಗಳನ್ನು ಭೇಟಿ ಮಾಡಿ ಸಮಸ್ಯೆ ಸರಿಪಡಿಸುವಂತೆ ಮನವಿ ಮಾಡಲಾಗಿದೆ. ಆದರೂ ನಮ್ಮ ಸಮಸ್ಯೆಗೆ ಸ್ಪಂದಿಸುತ್ತಿಲ್ಲ. ಗ್ರಾಮ ತುಂಬಾ ಹಿಂದುಳಿದಿದ್ದು, ಸರ್ಕಾರದಿಂದ ಸಿಗುವ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದೆ. ಗ್ರಾಮದ ರಸ್ತೆಗಳು ಕಲ್ಲು, ಮಣ್ಣಿನಿಂದ ಕೂಡಿದ್ದು, ಓಡಾಡಲು ತೊಂದರೆಯಾಗಿದೆ. ಒಳಚರಂಡಿಗಳು ಆಗಿಲ್ಲ. ಆದ್ದರಿಂದ ಕೂಡಲೇ ಜಿಲ್ಲಾಧಿಕಾರಿ ಕ್ರಮ ಕೈಗೊಂಡು ಗ್ರಾಮದ ಸಮಸ್ಯೆ ಸರಿಪಡಿಸಬೇಕು ಎಂದು ಆಗ್ರಹಿಸಿದರು.

  • ಸೆ.3ರಂದು ರಿವೀಲ್ ಆಗಲಿದೆ ಜ್ಯೂನಿಯರ್ ಚಿರು ನಿಜವಾದ ಹೆಸರು

    ಸೆ.3ರಂದು ರಿವೀಲ್ ಆಗಲಿದೆ ಜ್ಯೂನಿಯರ್ ಚಿರು ನಿಜವಾದ ಹೆಸರು

    ಬೆಂಗಳೂರು: ಸ್ಯಾಂಡಲ್‍ವುಡ್ ದಿವಂಗತ ನಟ ಚಿರಂಜೀವಿ ಸರ್ಜಾ ಮತ್ತು ನಟಿ ಮೇಘನಾ ರಾಜ್ ದಂಪತಿಯ ಪ್ರೀತಿಯ ಪುತ್ರ ಜ್ಯೂನಿಯರ್ ಚಿರು ಹೆಸರು ನಾಳೆ ರಿವೀಲ್ ಆಗಲಿದೆ.

    ಇಷ್ಟು ದಿನ ಚಿಂಟು, ಸಿಂಬಾ, ಪಾಪ ಕುಟ್ಟಿ, ಜೂನಿಯರ್ ಚಿರು, ಜ್ಯೂನಿಯರ್ ಸಿಂಗ ಹೀಗೆ ಹಲವಾರು ಮುದ್ದಾದ ಹೆಸರುಗಳಲ್ಲಿ ಕುಟುಂಬದವರು ಹಾಗೂ ಅಭಿಮಾನಿಗಳು ಪ್ರೀತಿಯಿಂದ ಕರೆಯುತ್ತಿದ್ದರು. ಆದರೆ ಸೆಪ್ಟೆಂಬರ್ 3ರಂದು ಜ್ಯೂನಿಯರ್ ಚಿರು ನಿಜವಾದ ಹೆಸರನ್ನು ಕುಟುಂಬದವರು ರಿವೀಲ್ ಮಾಡಲು ನಿರ್ಧರಿಸಿದ್ದಾರೆ. ಇದನ್ನೂ ಓದಿ:ಕೃಷ್ಣನ ವೇಷದಲ್ಲಿ ಜ್ಯೂನಿಯರ್ ಚಿರು – ನನ್ನ ಬೆಣ್ಣೆ, ಮುದ್ದು, ಬಂಗಾರ ಅಂದ ಮೇಘನಾ

    ಈ ಕುರಿತಂತೆ ಮೇಘನಾ ರಾಜ್ ತಮ್ಮ ಇನ್‍ಸ್ಟಾಗ್ರಾಮ್ ಖಾತೆಯಲ್ಲಿ ವೀಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಈ ವೀಡಿಯೋ ಮೇಘನಾ ಹಾಗೂ ಚಿರಂಜೀವಿ ಸರ್ಜಾ ಎಂಗೇಜ್ ಮೆಂಟ್ ವೀಡಿಯೋ ಆಗಿದ್ದು, ಇದರ ಜೊತೆಗೆ ಜ್ಯೂನಿಯರ್ ಚಿರುವಿನ ಹಲವಾರು ಹೆಸರುಗಳನ್ನು ಬಹಿರಂಗ ಪಡಿಸಿ. ಕೊನೆಗೆ ಸೆಪ್ಟೆಂಬರ್ 3 ರಂದು ಜ್ಯೂನಿಯರ್ ಚಿರು ನಿಜವಾದ ಹೆಸರನ್ನು ರಿವೀಲ್ ಮಾಡುವುದಾಗಿ ಮೇಘನಾ ತಿಳಿಸಿದ್ದಾರೆ.

     

    View this post on Instagram

     

    A post shared by Meghana Raj Sarja (@megsraj)

    ನಟ ಚಿರಂಜೀವಿ ಸರ್ಜಾ 2020ರ ಜೂನ್ 7ರಂದು ವಿಧಿವಶರಾಗಿದ್ದರು. ಬಳಿಕ 5 ತಿಂಗಳಿಗೆ ಅರ್ಥಾತ್ 22 ಅಕ್ಟೋಬರ್ ನಲ್ಲಿ ಮೇಘನಾ ಮುದ್ದಾದ ಗಂಡು ಮಗುವಿಗೆ ಜನ್ಮ ನೀಡಿದ್ದರು. ಇದನ್ನೂ ಓದಿ: ಅಪ್ಪನ ಡಾನ್ಸ್ ನೋಡೊದ್ರಲ್ಲಿ ಬ್ಯುಸಿಯಾದ ಜ್ಯೂನಿಯರ್ ಚಿರು

  • ಕರ್ನಾಟಕ, ಕೇರಳ ಸಾರಿಗೆ ಹೆಸರಿನಲ್ಲಿ ಪೈಪೋಟಿ ಇಲ್ಲ – ಸವದಿ

    ಕರ್ನಾಟಕ, ಕೇರಳ ಸಾರಿಗೆ ಹೆಸರಿನಲ್ಲಿ ಪೈಪೋಟಿ ಇಲ್ಲ – ಸವದಿ

    – ಅಧಿಕೃತವಾಗಿ ತೀರ್ಪಿನಲ್ಲಿರುವ ಅಂಶ ತಿಳಿದು ಬಂದಿಲ್ಲ
    – ಪೈಪೋಟಿಗೆ ಇಳಿದಿಲ್ಲ, ನಮಗೆ ಜನರ ಸೇವೆ ಮುಖ್ಯ

    ಬೆಂಗಳೂರು: ಕರ್ನಾಟಕ ಮತ್ತು ಕೇರಳ ಸಾರಿಗೆ ವ್ಯವಸ್ಥೆಯ ಹೆಸರಿನಲ್ಲಿ ಪೈಪೋಟಿ ಏನು ಇಲ್ಲ ಎಂದು ಸಾರಿಗೆ ಸಚಿವರಾದ ಲಕ್ಷ್ಮಣ್ ಸವದಿ ಹೇಳಿದ್ದಾರೆ.

    ಟ್ರೇಡ್‍ಮಾರ್ಕ್ ರಿಜಿಸ್ಟ್ರಿ ನೀಡಿದ ತೀರ್ಪಿನ ಹಿನ್ನೆಲೆಯಲ್ಲಿ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ ಮೂಲಕ ತಿಳಿಸಿದ ಸವದಿ, ನಮ್ಮದು ಒಕ್ಕೂಟ ವ್ಯವಸ್ಥೆ ಎಂದರೆ ಫೆಡರಲ್ ಸಿಸ್ಟಮ್. ಒಂದು ರಾಜ್ಯವು ಮತ್ತೊಂದು ರಾಜ್ಯದ ಜೊತೆಗೆ ಯಾವುದೇ ಸಂಘರ್ಷವಿಲ್ಲದೆ ಸೌಹಾರ್ದಯುತವಾಗಿ ಸಂಬಂಧವನ್ನು ಇಟ್ಟುಕೊಂಡು ಹೋಗಬೇಕೆಂದು ಈ ಫೆಡರಲ್ ಸಿಸ್ಟಮ್ ಹೇಳುತ್ತದೆ ಎಂದಿದ್ದಾರೆ. ಇದನ್ನೂ ಓದಿ: KSRTC ಟ್ರೇಡ್ ಮಾರ್ಕ್ ಕೇರಳಕ್ಕೆ ಸೇರಿದ್ದು – ಟ್ರೇಡ್ ಮಾರ್ಕ್ ಅಥಾರಿಟಿ ಆಫ್ ಇಂಡಿಯಾದಿಂದ ಆದೇಶ

    ಹೇಳಿಕೆಯಲ್ಲಿ ಏನಿದೆ?
    ಕೇರಳವು ಕೆಎಸ್ಆರ್‌ಟಿಸಿ ಎಂಬ ಶಬ್ದವನ್ನು ತಾವೇ ಮೊದಲು ಬಳಸಿದ್ದರಿಂದ ಕರ್ನಾಟಕವು ಈ ಶಬ್ದವನ್ನು ಬಳಸಬಾರದು ಎಂದು ತಕರಾರು ತೆಗೆದ ಬಗ್ಗೆ ಈಗ ಟ್ರೇಡ್‍ಮಾರ್ಕ್ ರಿಜಿಸ್ಟ್ರಿಯು ತೀರ್ಪು ನೀಡಿದೆ ಎಂದು ಮಾಹಿತಿ ಬಂದಿದೆ. ಆದರೆ ಈ ತೀರ್ಪಿನಲ್ಲಿ ಏನಿದೆ ಎಂಬ ಅಂಶವು ನಮಗೆ ಅಧಿಕೃತವಾಗಿ ಇನ್ನೂ ಬಂದಿಲ್ಲ, ಅದು ಲಭ್ಯವಾದ ನಂತರ ಕರ್ನಾಟಕ ರಾಜ್ಯದ ಮುಂದಿನ ನಿಲುವು ಮತ್ತು ಕಾನೂನು ಹೋರಾಟ ಏನು ಎಂಬುದರ ಬಗ್ಗೆ ತೀರ್ಮಾನಿಸಲಾಗುವುದು.

    ನಮ್ಮದು ಒಕ್ಕೂಟ ವ್ಯವಸ್ಥೆ ಎಂದರೆ ಫೆಡರಲ್ ಸಿಸ್ಟಮ್. ಒಂದು ರಾಜ್ಯವು ಮತ್ತೊಂದು ರಾಜ್ಯದ ಜೊತೆಗೆ ಯಾವುದೇ ಸಂಘರ್ಷವಿಲ್ಲದೆ ಸೌಹಾರ್ದಯುತವಾಗಿ ಸಂಬಂಧವನ್ನು ಇಟ್ಟುಕೊಂಡು ಹೋಗಬೇಕೆಂದು ಈ ಫೆಡರಲ್ ಸಿಸ್ಟಮ್ ಹೇಳುತ್ತದೆ. ಆದರೆ ದುರದೃಷ್ಟವಶಾತ್ ಈ ವಿವಾದ ಅನಗತ್ಯವಾಗಿ ಎದ್ದಿದೆ. ಏಕೆಂದರೆ ಖಾಸಗಿ ಸಂಸ್ಥೆಗಳಲ್ಲಾದರೆ ಈ ರೀತಿಯ ಹೆಸರು ಅಥವಾ ಟ್ರೇಡ್‍ಮಾರ್ಕ್ ಗಳಿಂದ ಅವರ ವ್ಯವಹಾರ ಮತ್ತು ಲಾಭಗಳ ಮೇಲೆ ಪ್ರಭಾವ ಬೀಳುತ್ತದೆ. ಆದರೆ ಸರ್ಕಾರಿ ಸಂಸ್ಥೆಗಳು ಹಾಗಲ್ಲ. ಇಲ್ಲಿ ಜನರ ಸೇವೆಯ ಮುಖ್ಯ.

    ಕರ್ನಾಟಕವಾಗಲಿ, ಕೇರಳವಾಗಲಿ ಪರಸ್ಪರ ಸಾರಿಗೆ ಕ್ಷೇತ್ರದಲ್ಲಿ ಲಾಭಗಳಿಸುವ ಮೇಲಾಟಕ್ಕೆ ಅಥವಾ ಸ್ಪರ್ಧೆಗೆ ಮುಂದಾಗದೆ ಸಾರ್ವಜನಿಕರ ಹಿತಾಸಕ್ತಿ ಮತ್ತು ಸೇವೆಯನ್ನು ಗಮನದಲ್ಲಿಟ್ಟುಕೊಂಡು ಕೆಲಸ ಮಾಡುತ್ತಿವೆ. ಹೀಗಾಗಿ ಈ ವಿಷಯವನ್ನು ಯಾವುದೇ ರಾಜ್ಯಗಳು ಪ್ರತಿಷ್ಠೆಯ ವಿಷಯವನ್ನಾಗಿ ಮಾಡಿಕೊಳ್ಳಬಾರದು.

    ಇದು ಕೇರಳಕ್ಕೆನು ಸಂಭ್ರಮಪಡುವಂತ ವಿಚಾರವೇನಲ್ಲ. ಕರ್ನಾಟಕದಲ್ಲಿ ಕೆಎಸ್ಆರ್‌ಟಿಸಿ ಎಂಬ ಹೆಸರಿದ್ದರೆ, ಅದರಿಂದ ಕೇರಳ ರಾಜ್ಯದ ಕೆಎಸ್ಆರ್‌ಟಿಸಿ ಸಂಸ್ಥೆಗೆ ಯಾವುದೇ ನಷ್ಟವೇನಿಲ್ಲ. ಕರ್ನಾಟಕವು ಕೇರಳದ ಸಾರಿಗೆ ಸಂಸ್ಥೆಗಳೊಂದಿಗೆ ಯಾವತ್ತೂ ಪೈಪೋಟಿಗೆ ಇಳಿದ್ದಿಲ್ಲ ಎಂಬುದನ್ನು ಕೇರಳ ಮೊದಲು ಅರ್ಥಮಾಡಿಕೊಳ್ಳಬೇಕು. ಇಂತಹ ವಿಷಯಗಳಲ್ಲಿ ಅನಗತ್ಯವಾಗಿ ವಿವಾದಗಳನ್ನು ಹೆಚ್ಚು ಮಾಡುತ್ತಾ ಪರಸ್ಪರ ರಾಜ್ಯಗಳಲ್ಲಿ ವಿವಾದಗಳನ್ನು ಬೆಳೆಸುವ ಪರಿಪಾಠಕ್ಕೆ ನಾವೆಲ್ಲರೂ ಅಂತ್ಯ ಹಾಡಬೇಕು. ದೇಶದ ಹಿತದೃಷ್ಟಿಯಿಂದ ರಾಜ್ಯ ರಾಜ್ಯಗಳ ನಡುವಿನ ಬಾಂಧವ್ಯವನ್ನು ಉತ್ತಮವಾಗಿ ಇಟ್ಟುಕೊಳ್ಳುವುದು ಬಹಳ ಮುಖ್ಯವಾದ ವಿಷಯ ಎಂದಿದ್ದಾರೆ.

     

  • ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯ್ಯರ ಹೆಸರು ಪ್ರಸ್ತಾಪ – ಕಟೀಲ್ ಸ್ಪಂದನೆ

    ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯ್ಯರ ಹೆಸರು ಪ್ರಸ್ತಾಪ – ಕಟೀಲ್ ಸ್ಪಂದನೆ

    ಮಂಗಳೂರು: ಜಿಲ್ಲೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯರ ಹೆಸರು ಇಡುವಂತೆ ಬಿಲ್ಲವ ಮುಖಂಡರ ನಿಯೋಗವೊಂದು ಇಂದು ಬಿಜೆಪಿ ರಾಜ್ಯಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ರವರನ್ನು ಭೇಟಿ ಮಾಡಿದೆ.

    ದಕ್ಷಿಣ ಕನ್ನಡದ ಕನ್ಯಾಡಿಯ ಶ್ರೀರಾಮ ಕ್ಷೇತ್ರದ ಪೀಠಾದಿ ಪತಿಗಳಾದ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಮಾರ್ಗದರ್ಶನದಲ್ಲಿ ಕಂಕನಾಡಿ ಗರೋಡಿ ಕ್ಷೇತ್ರದ ಅದ್ಯಕ್ಷರಾದ ಶ್ರೀ ಜಿತ್ತರಂಜನ್ ರವರ ನೇತ್ರತ್ವದಲ್ಲಿ ಬಿಲ್ಲವ ಮುಖಂಡರ ನಿಯೋಗವು ನಳಿನ್ ಕುಮಾರ್ ಕಟೀಲ್ ಅವರನ್ನು ಮಂಗಳೂರಿನ ಸರ್ಕಿಟ್ ಹೌಸ್ ನಲ್ಲಿ ಭೇಟಿ ಮಾಡಿ ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯ್ಯರ ಹೆಸರನ್ನು ನಾಮಕರಣ ಮಾಡುವಂತೆ ಒತ್ತಾಯಿಸಿತು.

    ಈ ಸಂದರ್ಭದಲ್ಲಿ ನಳಿನ್ ಕುಮಾರ್ ಕಟೀಲ್‍ರವರು ಮಂಗಳೂರು ಅಂತರಾಷ್ಟ್ರೀಯ ವಿಮಾಣ ನಿಲ್ದಾಣಕ್ಕೆ ಕೋಟಿ ಚೆನ್ನಯರ ಹೆಸರನ್ನು ಇಡುವ ಬಗ್ಗೆ ಈಗಾಗಲೇ ಜಿಲ್ಲೆಯಲ್ಲಿ ಬಹಳಷ್ಟು ಚರ್ಚೆಗಳು ನಡೆಯತ್ತಿದ್ದು, ಬೇರೆ ಹೆಸರುಗಳ ಬಗ್ಗೆಯು ಪ್ರಸ್ತಾಪ ಕೆಲವರು ಮಾಡಿದ್ದಾರೆ. ನಾನು ಕೋಟಿ ಚೆನ್ನಯ್ಯ ಬಗ್ಗೆ ಅಪಾರ ಭಕ್ತಿಯುಳ್ಳವನಾಗಿದ್ದು ಇದರ ಬಗ್ಗೆ ಸರ್ಕಾರ ಜೊತೆ ಚರ್ಚೆ ಮಾಡುತ್ತೇನೆ ಎಂದರು.

    ಸರ್ಕಾರದ ಕಾನೂನು ನಿಯಾಮವಳಿಗಳ ಚೌಕಟ್ಟಿನಲ್ಲಿ ನಡೆಯಬೇಕಾಗಿರುವುದರಿಂದ ಜಿಲ್ಲೆಯ ಎಲ್ಲ ಜನರ ವಿಶ್ವಾಸಗಳಿಸುವುದರ ಜೊತೆಗೆ ನಿರ್ಣಯ ಕೈಗೊಳ್ಳಬೇಕಾಗಿದೆ. ಪೂಜ್ಯ ಕನ್ಯಾಡಿ ಶ್ರೀಗಳ ಮಾರ್ಗದರ್ಶನ ಮತ್ತು ಜಿಲ್ಲಾ ಉಸ್ತುವರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಒಳಗೊಂಡಂತೆ ಜಿಲ್ಲೆಯ ಎಲ್ಲ ಶಾಸಕರ ಅಭಿಪ್ರಾಯಗಳೊಂದಿಗೆ ಕೋಟಿ-ಚೆನ್ನಯರ ಹೆಸರನ್ನು ಇಡುವ ಬಗ್ಗೆ ಶೀಘ್ರ ನಿರ್ಧಾರ ಕೈಗೊಳ್ಳುವುದಾಗಿ ನಿಯೋಗಕ್ಕೆ ಭರವಸೆ ನೀಡಿದರು. ಈ ಬಗ್ಗೆ ಯಾವುದೇ ಗೊಂದಲ ಮಾಡದೆ ಎಲ್ಲಾ ಸಮುದಾಯಗಳು ಒಂದು ದಿಕ್ಕಿನಲ್ಲಿ ಹೋಗುವ ಅವಶ್ಯಕತೆ ಇದೆ ಎಂದು ಕಟೀಲ್ ತಿಳಿಸಿದರು.

  • ಕೊನೆಗೂ ಫಿಕ್ಸ್ ಆಯ್ತು ಜೂನಿಯರ್ ಯಶ್‍ಗೆ ಹೆಸರು: ಸಿಂಡ್ರೆಲ್ಲಾ

    ಕೊನೆಗೂ ಫಿಕ್ಸ್ ಆಯ್ತು ಜೂನಿಯರ್ ಯಶ್‍ಗೆ ಹೆಸರು: ಸಿಂಡ್ರೆಲ್ಲಾ

    – ಶೀಘ್ರವೇ ನಾಮಕರಣ ಅಂದ್ರು ರಾಧಿಕಾ

    ಬೆಂಗಳೂರು: ಬರೋಬ್ಬರಿ 10 ತಿಂಗಳ ಬಳಿಕ ಇದೀಗ ಜೂನಿಯರ್ ಯಶ್ ಗೆ ನಾಮಕರಣ ಮಾಡಲಾಗುತ್ತಿದೆ.

    ಈ ಸಂಬಂಧ ಮಗನ ಫೋಟೋದೊಂದಿಗೆ ತಮ್ಮ ಫೇಸ್ ಬುಕ್ ನಲ್ಲಿ ಬರೆದುಕೊಂಡಿರುವ ಸ್ಯಾಂಡಲ್ ವುಡ್ ಸಿಂಡ್ರೆಲ್ಲಾ ಕೊನೆಗೂ ಜೂನಿಯರ್ ಗೆ ಹೆಸರು ಫಿಕ್ಸ್ ಆಗಿದ್ದು, ಶೀಘ್ರವೇ ನಾಮಕರಣ ಮಾಡಲಾಗುತ್ತದೆ ಎಂದು ಬರೆದುಕೊಂಡಿದ್ದಾರೆ.

    ಕಳೆದ ವರ್ಷದ ಅಕ್ಟೋಬರ್ 30ರಂದು ರಾಧಿಕಾ ಪಂಡಿತ್ ಫೋರ್ಟಿಸ್ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದರು. ಯಶ್ ಮನೆಗೆ ಜೂನಿಯರ್ ಯಶ್ ಆಗಮಿಸಿ ಆರು ತಿಂಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಏಪ್ರಿಲ್ 30 ರಂದು ಯಶ್ ಮತ್ತು ರಾಧಿಕಾ ಅಭಿಮಾನಿಗಳಿಗೆ ಜೂನಿಯರ್ ರಾಜಾಹುಲಿಯ ದರ್ಶನ ಮಾಡಿಸಿದ್ದರು. ರಾಧಿಕಾ ಪಂಡಿತ್ ಇನ್‍ಸ್ಟಾಗ್ರಾಂನಲ್ಲಿ ಮೊದಲ ಬಾರಿಗೆ ತಮ್ಮ ಪುತ್ರನ ಫೋಟೋವನ್ನು ರಿವೀಲ್ ಮಾಡಿದ್ದು, ”ಜೂನಿಯರ್ ಯಶ್‍ಗೆ ನಿಮ್ಮೆಲ್ಲರ ಪ್ರೀತಿ ಮತ್ತು ಆಶೀರ್ವಾದ ಬೇಕು” ಎಂದು ಬರೆದುಕೊಂಡಿದ್ದರು.

    ಇತ್ತೀಚೆಗೆ ಕೃಷ್ಣ ಜನ್ಮಾಷ್ಟಮಿ ದಿನ ಐರಾ ಮತ್ತು ಜೂನಿಯರ್ ಯಶ್‍ಗೆ ರಾಧೆ ಹಾಗೂ ಕೃಷ್ಣನ ಉಡುಪು ಧರಿಸಿ ಫೋಟೋಶೂಟ್ ಮಾಡಿಸಿದ್ದರು. ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು. ಆ ಬಳಿಕ ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಜೂನಿಯರ್ ಯಶ್ ಗಣೇಶನ ಅವತಾರದಲ್ಲಿ ಮಿಂಚಿದ್ದನು. ಕೃಷ್ಣನ ಅವತಾರದಲ್ಲಿ ಕ್ಲಿಕ್ಕಿಸಿದ್ದ ಯಶ್ ಮಗನ ಫೋಟೋವನ್ನು ಗಣೇಶನ ರೀತಿ ಎಡಿಟ್ ಮಾಡಲಾಗಿತ್ತು. ಪಕ್ಕದಲ್ಲಿ ಮೂಷಿಕನನ್ನು ಕೂರಿಸಿಕೊಂಡು, ಕೈಯಲ್ಲಿ ಮೋದಕ ಹಿಡಿದು ಕುಳಿತಿರುವ ರೀತಿ ಫೋಟೋವನ್ನು ಎಡಿಲ್ ಮಾಡಲಾಗಿದೆ.

    ಪುಟ್ಟ ಗಣೇಶನ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಫೋಟೋವನ್ನು ಸ್ವತಃ ಯಶ್ ಕೂಡ ತನ್ನ ಇನ್‍ಸ್ಟಾಗ್ರಾಂ ಸ್ಟೇಟಸ್‍ನಲ್ಲಿ ಶೇರ್ ಮಾಡಿದ್ದು, ‘ಸೂಪರ್ ನನ್ನ ಪುಟ್ಟ ಗಣೇಶ’ ಎಂದು ಕ್ಯಾಪ್ಷನ್ ನೀಡಿದ್ದರು.