Tag: namibian cheetah

  • ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಮತ್ತೊಂದು ಚೀತಾ ಸಾವು; 10 ಕ್ಕೇರಿದ ಸಾವಿನ ಸಂಖ್ಯೆ

    ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಮತ್ತೊಂದು ಚೀತಾ ಸಾವು; 10 ಕ್ಕೇರಿದ ಸಾವಿನ ಸಂಖ್ಯೆ

    ಭೋಪಾಲ್: ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನದಲ್ಲಿ (Kuno National Park) ಇಂದು (ಮಂಗಳವಾರ) ಮತ್ತೊಂದು ಚಿರತೆ ಸಾವನ್ನಪ್ಪಿದೆ. ಆ ಮೂಲಕ ಇಲ್ಲಿ ಚಿರತೆಗಳ ಸಾವಿನ ಸಂಖ್ಯೆ 10 ಕ್ಕೇರಿದೆ.

    2022 ರಲ್ಲಿ ನಮೀಬಿಯಾ ಚಿರತೆಗಳನ್ನು (Namibian Cheetah) ಭಾರತದಲ್ಲಿ ಮತ್ತೆ ಪರಿಚಯಿಸಲಾಗಿತ್ತು. ಇಂದು ಮೃತಪಟ್ಟ ನಮೀಬಿಯಾದ ಚಿರತೆ ‘ಶೌರ್ಯ’ ಎಂದು ಗುರುತಿಸಲಾಗಿದೆ. ಮರಣೋತ್ತರ ಪರೀಕ್ಷೆಯ ನಂತರ ಸಾವಿನ ಕಾರಣ ತಿಳಿಯಲಿದೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ. ಇದನ್ನೂ ಓದಿ: ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ 3 ಮರಿಗಳಿಗೆ ಜನ್ಮ ನೀಡಿದ ಚೀತಾ ಆಶಾ

    ಇಲ್ಲಿಯವರೆಗೆ ರಾಷ್ಟ್ರೀಯ ಉದ್ಯಾನದಲ್ಲಿ ಏಳು ವಯಸ್ಕ ಮತ್ತು ಮೂರು ಚಿರತೆ ಮರಿಗಳು ಸಾವನ್ನಪ್ಪಿವೆ. ಮಧ್ಯಾಹ್ನ 3:17 ರ ಸುಮಾರಿಗೆ ನಮೀಬಿಯಾದ ಶೌರ್ಯ ಹೆಸರಿನ ಚಿರತೆ ಕೊನೆಯುಸಿರೆಳೆದಿದೆ.

    1952 ರಲ್ಲಿ ಭಾರತದಲ್ಲಿ ಚೀತಾಗಳು ಅಳಿವಿನಂಚಿನಲ್ಲಿವೆ ಎಂದು ಘೋಷಿಸಲಾಯಿತು. 2022 ರಲ್ಲಿ ಮತ್ತೆ ಈ ತಳಿಯ ಪ್ರಾಣಿಗಳನ್ನು ಉದ್ಯಾನವನಕ್ಕೆ ತರಲಾಯಿತು. ಚೀತಾಗಳನ್ನು ಎರಡು ಬ್ಯಾಚ್‌ಗಳಲ್ಲಿ ಆಮದು ಮಾಡಿಕೊಳ್ಳಲಾಯಿತು. 2022 ರಲ್ಲಿ ನಮೀಬಿಯಾ ಮತ್ತು 2023 ರಲ್ಲಿ ದಕ್ಷಿಣ ಆಫ್ರಿಕಾದಿಂದ ಅವುಗಳನ್ನು ತರಲಾಗಿತ್ತು. ಇದನ್ನೂ ಓದಿ: ಗುಡ್‌ನ್ಯೂಸ್‌ – ಕುನೋ ಪಾರ್ಕ್‌ನಲ್ಲಿ ಇನ್ಮುಂದೆ ಪ್ರವಾಸಿಗರಿಗೆ ಚೀತಾ ವೀಕ್ಷಣೆ ಭಾಗ್ಯ

  • ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ 3 ಮರಿಗಳಿಗೆ ಜನ್ಮ ನೀಡಿದ ಚೀತಾ ಆಶಾ

    ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ 3 ಮರಿಗಳಿಗೆ ಜನ್ಮ ನೀಡಿದ ಚೀತಾ ಆಶಾ

    ಭೋಪಾಲ್​: ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ (Madhya Pradesh’s Kuno National Park) ಆಶಾ (Aasha) ಹೆಸರಿನ ಚೀತಾ ಇಂದು ಮೂರು ಮರಿಗಳಿಗೆ ಜನ್ಮ ನೀಡಿದೆ.

    ಈ ವಿಚಾರವನ್ನು ಕೇಂದ್ರ ಸಚಿವ ಭೂಪೇಂದ್ರ ಯಾದವ್ (Bhupendra Yadav)​ ಅವರು ತಮ್ಮ ಎಕ್ಸ್​ ಖಾತೆಯ ಮೂಲಕ ತಿಳಿಸಿದ್ದಾರೆ. ಅಲ್ಲದೆ ಮೂರು ಮರಿಗಳ ವೀಡಿಯೋವನ್ನು ಹಂಚಿಕೊಂಡಿದ್ದಾರೆ. ಜೊತೆಗೆ ಕುನೋ ರಾಷ್ಟ್ರೀಯ ಉದ್ಯಾನವನವು ಮೂವರು ಹೊಸ ಸದಸ್ಯರನ್ನು ಸ್ವಾಗತಿಸಿರುವ ಸುದ್ದಿಯನ್ನು ಹಂಚಿಕೊಳ್ಳಲು ನನಗೆ ಸಂತಸವಾಗುತ್ತಿದೆ. ಆಶಾ ಹೆಸರಿನ ನಮೀಬಿಯಾ ಚೀತಾಗೆ ಮೂರು ಮರಿಗಳು ಜನಿಸಿವೆ ಎಂದು ಸಚಿವರು ಬರೆದುಕೊಂಡಿದ್ದಾರೆ.  ಇದನ್ನೂ ಓದಿ: ಅಕ್ರಮ ಹಣ ವರ್ಗಾವಣೆ ಆರೋಪ- ಇಡಿ ಮೂರನೇ ಸಮನ್ಸ್‌ಗೂ ಜಗ್ಗದ ಕೇಜ್ರಿವಾಲ್

    ಕೇಂದ್ರ ಸರ್ಕಾರದ ಚೀತಾ ಪ್ರಾಜೆಕ್ಟ್​ ಅಡಿಯಲ್ಲಿ ನಮೀಬಿಯಾದಿಂದ (Namibian cheetah) ಭಾರತಕ್ಕೆ ಇದನ್ನು ಕರೆತರಲಾಗಿತ್ತು. ಇದೀಗ ಚೀತಾ ಪ್ರಾಜೆಕ್ಟ್​ನಲ್ಲಿ ತೊಡಗಿಸಿಕೊಂಡಿರುವ ಅಧಿಕಾರಿಗಳಿಗೆ ಮತ್ತು ತಜ್ಞರಿಗೆ ಅಭಿನಂದನೆಗಳನ್ನು ಸಹ ಸಲ್ಲಿಸಿದ್ದಾರೆ. ಅಲ್ಲದೆ ಪರಿಸರ ಸಮತೋಲನವನ್ನು ಮರುಸ್ಥಾಪಿಸಲು ಪ್ರಧಾನಿ ನರೇಂದ್ರ ಮೋದಿಯವರು ರೂಪಿಸಿದ ಚೀತಾ ಯೋಜನೆಗೆ ಯಶಸ್ಸು ಸಿಕ್ಕಿದೆ ಎಂದು ಅವರು ಹೇಳಿದ್ದಾರೆ.

    ಕಳೆದ ವರ್ಷ ಮಾರ್ಚ್ ತಿಂಗಳಲ್ಲಿ ಮತ್ತೊಂದು ಚೀತಾ ಜ್ವಾಲಾ ನಾಲ್ಕು ಮರಿಗಳಿಗೆ ಜನ್ಮ ನೀಡಿತ್ತು. ಆದರೆ ಅದರಲ್ಲಿ ಒಂದು ಮರಿ ಮಾತ್ರ ಬದುಕುಳಿದಿತ್ತು.