Tag: Namma Elections

  • ಲಾಟರಿ ಹೊಡೆದು ಸಿಎಂ ಆಗಿದ್ದೀರಿ, ಜನರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ: ಕೆ.ಎಸ್.ಈಶ್ವರಪ್ಪ

    ಲಾಟರಿ ಹೊಡೆದು ಸಿಎಂ ಆಗಿದ್ದೀರಿ, ಜನರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ: ಕೆ.ಎಸ್.ಈಶ್ವರಪ್ಪ

    ಶಿವಮೊಗ್ಗ: ಪ್ರಣಾಳಿಕೆಯಲ್ಲಿ 53 ಸಾವಿರ ಕೋಟಿ ರೂ. ಸಾಲ ಮನ್ನಾ ಮಾಡುತ್ತೇನೆ ಎಂದಿದ್ದ ಕುಮಾರಸ್ವಾಮಿ ಇಂದು ಮಾತು ಬದಲಿಸಿದ್ದಾರೆ ಎಂದು ಬಿಜೆಪಿ ಶಾಸಕ ಕೆ.ಎಸ್.ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.

    ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರಣಾಳಿಕೆಯಲ್ಲಿ 53 ಸಾವಿರ ಕೋಟಿ ರೂ. ಸಾಲ ಮನ್ನಾ ಮಾಡುತ್ತೇವೆ ಎಂದಿದ್ದ ಎಚ್‍ಡಿಕೆ ಈಗ ಪೂರ್ಣ ಪ್ರಮಾಣದ ಬಹುಮತ ಬಂದಲ್ಲಿ ಮಾತ್ರ ಮನ್ನಾ ಮಾಡುತ್ತೇನೆ ಎನ್ನುತ್ತಿದ್ದಾರೆ. ಇದು ರಾಜ್ಯದ ರೈತರಿಗೆ ಅಘಾತಕಾರಿ ಸುದ್ದಿ ಎಂದಿದ್ದಾರೆ.

    ರೈತರಿಗೆ ದ್ರೋಹ ಮಾಡಿದರೆ ರಾಜ್ಯಕ್ಕೇ ದ್ರೋಹ ಮಾಡಿದಂತೆ ಎಂದಿದ್ದ ಕುಮಾರಸ್ವಾಮಿ ಈ ಹೇಳಿಕೆಯನ್ನು ವಾಪಸ್ ಪಡೆಯಬೇಕು. ರೈತರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ. ತಕ್ಷಣ ಈ ಸಾಲ ಮನ್ನಾ ಮಾಡುವ ಹೇಳಿಕೆ ನೀಡಬೇಕು. ಇಲ್ಲವಾದಲ್ಲಿ ರೈತರ ಹೆಸರನ್ನು ಪ್ರಚಾರಕ್ಕೆ ಬಳಸಿಕೊಂಡಿದ್ದಾರೆ ಎಂದೇ ಭಾವಿಸಬೇಕಾಗುತ್ತದೆ ಎಂದು ಆರೋಪಿಸಿದರು.

    ಇಡೀ ಚುನಾವಣಾ ಪ್ರಚಾರ, ಪ್ರಣಾಳಿಕೆ ಬೋಗಸ್ ಎಂದು ಒಪ್ಪಿಕೊಳ್ಳಿ. ಲಾಟರಿ ಹೊಡೆದು ಸಿಎಂ ಆಗಿದ್ದೀರಿ. ಜನರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ. ಈ ಮೈತ್ರಿ ಅಪವಿತ್ರ. ಇಂತಹ ಸರ್ಕಾರ ಆರು ತಿಂಗಳಲ್ಲಿ ಬೀಳಲಿದೆ. ಯಾವುದೇ ಕ್ಷಣದಲ್ಲಿ ರಾಜ್ಯದಲ್ಲಿ ಮತ್ತೆ ಚುನಾವಣಾ ಬರಲಿದೆ ಎಂದು ಅವರು ಭವಿಷ್ಯ ನುಡಿದರು.

    ಹೆಚ್‍ಡಿಕೆ ಕಳೆದ ಬಾರಿ ಬಿಜೆಪಿ ಬೆಂಬಲ ಪಡೆದೇ ಸಿಎಂ ಆಗಿದ್ದಾರೆ. ಆಗ ಬಿಜೆಪಿ ಕೋಮುವಾದಿ ಎಂದು ಇವರಿಗೆ ತಿಳಿದಿರಲಿಲ್ವೇ ಎಂದು ಪ್ರಶ್ನಿಸಿದ್ದಾರೆ. ಸಾಲ ಮನ್ನಾ ಭರವಸೆ ನೀಡಿ ಈಗ ಸಾಲ ಮನ್ನಾ ಮಾಡೊಲ್ಲ ಎಂದು ಹೆಚ್‍ಡಿಕೆ ಹೇಳುತ್ತಿದ್ದಾರೆ. ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಬರುವ ರಾಷ್ಟ್ರೀಯ ನಾಯಕರು ಸ್ಪಷ್ಟಪಡಿಸಬೇಕು ಎಂದು ಅವರು ಆಗ್ರಹಿಸಿದರು.

  • ನೂತನ ಸಿಎಂಗಾಗಿ 10 ಸಾವಿರ ಲಡ್ಡುಗಳು!

    ನೂತನ ಸಿಎಂಗಾಗಿ 10 ಸಾವಿರ ಲಡ್ಡುಗಳು!

    ರಾಮನಗರ: ಇಂದು ನೂತನ ಮುಖ್ಯಮಂತ್ರಿಯಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‍ಡಿ ಕುಮಾರಸ್ವಾಮಿ ಪ್ರಮಾಣವಚನ ಸ್ವೀಕಾರ ಮಾಡುತ್ತಾರೆ. ಈ ಹಿನ್ನೆಲೆಯಲ್ಲಿ ಎಚ್‍ಡಿಕೆಯವರ ಸ್ವಕ್ಷೇತ್ರ ಚನ್ನಪಟ್ಟಣದಲ್ಲಿ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ.

    ತಾಲೂಕು ಪಂಚಾಯಿತಿ ವ್ಯಾಪ್ತಿಯಲ್ಲಿ ಸಿಹಿ ಹಂಚಲು ಮಾಜಿ ತಾಲೂಕು ಪಂಚಾಯ್ತಿ ಸದಸ್ಯರೊಬ್ಬರು ಸಕಲ ತಯಾರಿ ಮಾಡಿಕೊಂಡಿದ್ದಾರೆ. ಬರೋಬ್ಬರಿ 10 ಸಾವಿರ ಲಡ್ಡುಗಳನ್ನ ಸಾರ್ವಜನಿಕರಿಗೆ ವಿತರಿಸಲು ಬೇವೂರು ಗ್ರಾಮದಲ್ಲಿ ಸಿದ್ಧತೆ ಮಾಡಿಕೊಂಡಿದ್ದಾರೆ.

    ಬೇವೂರು ತಾಲೂಕು ಪಂಚಾಯಿತಿ ವ್ಯಾಪ್ತಿಯಲ್ಲಿ ಮನೆ ಮನೆಗೆ ಸಿಹಿ ಹಂಚಲು ತಯಾರಿ ಮಾಡಿಕೊಳ್ಳಲಾಗಿದೆ. ಮನೆಯೊಂದರಲ್ಲಿ ಲಡ್ಡು ವಿತರಣೆಗೆ ಈಗಾಗಲೇ ಲಡ್ಡು ತಯಾರಿಸಿದ್ದು, ಇಂದು ಲಡ್ಡು ವಿತರಿಸಿ ಸಂಭ್ರಮಾಚರಣೆ ನಡೆಸಲು ಜೆಡಿಎಸ್ ಕಾರ್ಯಕರ್ತರು ಮುಂದಾಗಿದ್ದಾರೆ.

  • ರಾಜ್ಯಾದ್ಯಂತ ಬಿಜೆಪಿಯಿಂದ ಕರಾಳ ದಿನಾಚರಣೆ – ಮಂಗ್ಳೂರಲ್ಲಿ ನಿಷೇಧಾಜ್ಞೆ ಜಾರಿ

    ರಾಜ್ಯಾದ್ಯಂತ ಬಿಜೆಪಿಯಿಂದ ಕರಾಳ ದಿನಾಚರಣೆ – ಮಂಗ್ಳೂರಲ್ಲಿ ನಿಷೇಧಾಜ್ಞೆ ಜಾರಿ

    ಬೆಂಗಳೂರು/ಮಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿ 25ನೇ ಮುಖ್ಯಮಂತಿಯಾಗಿ ಇಂದು ಸಂಜೆ 4.30ರ ಸುಮಾರಿಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಖಂಡಿಸಿ ಬಿಜೆಪಿ ಕರಾಳ ದಿನವನ್ನು ಆಚರಿಸುತ್ತಿದೆ.

    ಎಚ್‍ಡಿ ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕಾರ ವಿರೋಧಿಸಿ ಕಪ್ಪುಪಟ್ಟಿ ಧರಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಲಿದ್ದಾರೆ. ಬೆಂಗಳೂರಿನ ಮೌರ್ಯ ಸರ್ಕಲ್‍ನಲ್ಲಿರುವ ಗಾಂಧಿ ಪ್ರತಿಮೆ ಬಳಿ ಬೆಳಗ್ಗೆ 11 ಗಂಟೆಗೆ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಕರಾಳ ದಿನಾಚರಣೆ ನಡೆಯಲಿದೆ.

    ಆಯಾ ಜಿಲ್ಲಾ, ತಾಲೂಕು ಕೇಂದ್ರಗಳಲ್ಲಿ ಆಯಾ ಭಾಗದ ನಾಯಕರ ನೇತೃತ್ವದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಲಿದೆ. ಮಂಗಳೂರು ನಗರದಲ್ಲಿ ಕಲಂ 35ರ ಅನ್ವಯ ನಿಷೇಧಾಜ್ಞೆ ಹೇರಲಾಗಿದೆ. ಇಂದು ಮಧ್ಯಾಹ್ನ 12 ಗಂಟೆಯಿಂದ ಮೇ25ರ ಬೆಳಗ್ಗೆ 6 ಗಂಟೆವರೆಗೆ ನಿಷೇಧಾಜ್ಞೆ ಇರಲಿದೆ ಅಂತ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ.

    ಇನ್ನು ನಿಷೇಧಾಜ್ಞೆ ಹಿನ್ನೆಲೆಯಲ್ಲಿ ಯಾವುದೇ ವಿಜಯೋತ್ಸವ, ರಾಜಕೀಯ ಸಭೆ ನಡೆಸಬಾರದು ಎಂದು ಪೊಲೀಸ್ ಆಯುಕ್ತ ವಿಫುಲ್ ಕುಮಾರ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

  • 2019ರ ಲೋಕಸಭಾ ಚುನಾವಣೆಯಲ್ಲಿ ಮೋದಿಯನ್ನ ಸೋಲಿಸಲು ‘ತ್ರಿಶೂಲ ವ್ಯೂಹ’ ರಚನೆ

    2019ರ ಲೋಕಸಭಾ ಚುನಾವಣೆಯಲ್ಲಿ ಮೋದಿಯನ್ನ ಸೋಲಿಸಲು ‘ತ್ರಿಶೂಲ ವ್ಯೂಹ’ ರಚನೆ

    ಬೆಂಗಳೂರು: ದೊಡ್ಡ ಮಟ್ಟದ ರಾಜಕೀಯ ಮನ್ವಂತರಕ್ಕೆ ಕರ್ನಾಟಕ ಭೂಮಿಕೆಯಾಗಲಿದೆ ಅಂತ ಕಳೆದ ವಾರದವರೆಗೂ ಯಾರೊಬ್ಬರೂ ಊಹಿಸಿರಲಿಲ್ಲ. ಹೌದು, ರಾಷ್ಟ್ರ ರಾಜಕಾರಣದ ಸಂಭಾವ್ಯ ಬದಲಾವಣೆಗೆ ಮುನ್ನುಡಿ ಬರೆಯಲು ಕರ್ನಾಟಕ ಹೊರಟಿದೆ.
    ಕರ್ನಾಟಕದ ವರ್ತಮಾನದ ರಾಜಕೀಯ ವಿದ್ಯಮಾನವನ್ನೇ ಆಧಾರವಾಗಿಟ್ಟುಕೊಂಡು, ಮೋದಿ ವಿರುದ್ಧ ಮುನ್ನುಗ್ಗಲೇಬೇಕು ಎಂಬ ಛಲದಿಂದ ದೇಶದ ಬಿಜೆಪಿಯೇತರ ಮುಂಚೂಣಿ ನಾಯಕರೆಲ್ಲಾ ದೋಸ್ತಿ ಮಂತ್ರ ಜಪಿಸುತ್ತಾ ಬಿಗ್ ದಂಗಲ್ ಅಖಾಡಕ್ಕಿಳಿದಿದ್ದಾರೆ ಅಂತಾ ಹೇಳಲಾಗ್ತಿದೆ.
    ಕರ್ನಾಟಕವೂ ಸೇರಿದಂತೆ ದೇಶದ 17ಕ್ಕೂ ಹೆಚ್ಚು ರಾಜ್ಯಗಳಲ್ಲಿ ಮಹಾಘಟ ಬಂಧನ ಏರ್ಪಡುವ ಸಾಧ್ಯತೆ ನಿಚ್ಛಳವಾದಂತಿದೆ. ಬುಧವಾರ ಹೆಚ್.ಡಿ.ಕುಮಾರಸ್ವಾಮಿ ಪದಗ್ರಹಣ ಸಮಾರಂಭ ಕೇವಲ ಅಧಿಕಾರ ಹಿಡಿಯುವ ಕಾರ್ಯಕ್ರಮಕ್ಕೆ ಸೀಮಿತವಾಗದೇ ಮೋದಿ ವಿರುದ್ಧ ಶಕ್ತಿ ಪ್ರದರ್ಶನದ ವೇದಿಕೆಯಾಗಿ ಮಾರ್ಪಡಲಿದೆ. ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ, ಅಧ್ಯಕ್ಷ ರಾಹುಲ್ ಗಾಂಧಿ, ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ, ಸಮಾಜವಾದಿ ಪಾರ್ಟಿ ನಾಯಕ ಅಖಿಲೇಶ್ ಯಾದವ್, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಮೋದಿಯ ಎದುರಾಳಿಗಳೆಲ್ಲಾ ಈ ಪ್ರಮಾಣ ವಚನಕ್ಕೆ ಸಾಕ್ಷಿಯಾಗಲಿದ್ದಾರೆ.
    ಈ ಮೂಲಕ 2019ರ ಕುರುಕ್ಷೇತ್ರಕ್ಕೆ ಬೆಂಗಳೂರಿನಿಂದಲೇ ಪಾಂಚಜನ್ಯ ಮೊಳಗಿಸಲಿದ್ದಾರೆ ಅಂತಾ ಹೇಳಲಾಗುತ್ತಿದೆ. ಹಾಗಾದ್ರೆ ಈ ಮಹಾಮೈತ್ರಿ ಮೋದಿಗೆ ಯಾಕೆ ಎಚ್ಚರಿಕೆಯ ಗಂಟೆ..? ಇದು ಮೋದಿಗೆ ಯಾವ ಸಂದೇಶ ರವಾನಿಸಲಿದೆ..? ಯಾರೆಲ್ಲಾ ಮೋದಿ ವಿರುದ್ಧ ನಿಂತಿದ್ದಾರೆ..? ತ್ರಿಶೂಲ ವ್ಯೂಹದ ಒಳಸುಳಿ ಏನು..? ಎಂಬವುದು ಈ ಕೆಳಗಿನಂತಿದೆ.
    ತ್ರಿಶೂಲ ವ್ಯೂಹ..! 
    1. ತ್ರಿಶೂಲ ವ್ಯೂಹ – ಹೆಚ್.ಡಿ.ದೇವೇಗೌಡ
    ಕರ್ನಾಟಕ – ಕಾಂಗ್ರೆಸ್ + ಜೆಡಿಎಸ್
    ಲೋಕಸಭಾ ಸ್ಥಾನ – 28
    2. ತ್ರಿಶೂಲ ವ್ಯೂಹ – ಮಾಯಾವತಿ – ಅಖಿಲೇಶ್ ಯಾದವ್ 
    ಉತ್ತರ ಪ್ರದೇಶ -ಕಾಂಗ್ರೆಸ್ + ಎಸ್‍ಪಿ+ ಬಿಎಸ್‍ಪಿ
    ಲೋಕಸಭಾ ಸ್ಥಾನ – 80
    3. ತ್ರಿಶೂಲ ವ್ಯೂಹ – ಮಮತಾ ಬ್ಯಾನರ್ಜಿ
    ಪಶ್ಚಿಮ ಬಂಗಾಳ – ಕಾಂಗ್ರೆಸ್ + ತೃಣಮೂಲ ಕಾಂಗ್ರೆಸ್
    ಲೋಕಸಭಾ ಸ್ಥಾನ – 42
    4. ತ್ರಿಶೂಲ ವ್ಯೂಹ – ತೇಜಸ್ವಿ ಯಾದವ್
    ಬಿಹಾರ – ಕಾಂಗ್ರೆಸ್ + ಆರ್ ಜೆಡಿ
    ಲೋಕಸಭಾ ಸ್ಥಾನ – 40
    5. ತ್ರಿಶೂಲ ವ್ಯೂಹ – ಚಂದ್ರಬಾಬು ನಾಯ್ಡು
    ಆಂಧ್ರಪ್ರದೇಶ – ಕಾಂಗ್ರೆಸ್ + ಟಿಡಿಪಿ
    ಲೋಕಸಭಾ ಸ್ಥಾನ – 25
    6. ತ್ರಿಶೂಲ ವ್ಯೂಹ – ಚಂದ್ರಶೇಖರ್ ರಾವ್
    ತೆಲಂಗಾಣ – ಕಾಂಗ್ರೆಸ್ + ಟಿಆರ್‍ಎಸ್
    ಲೋಕಸಭಾ ಸ್ಥಾನ – 17
    7. ತ್ರಿಶೂಲ ವ್ಯೂಹ – ಸ್ಟಾಲಿನ್
    ತಮಿಳುನಾಡು – ಕಾಂಗ್ರೆಸ್ + ಡಿಎಂಕೆ
    ಲೋಕಸಭಾ ಸ್ಥಾನ – 39
    8. ತ್ರಿಶೂಲ ವ್ಯೂಹ   – ಪಿಣರಾಯಿ ವಿಜಯನ್
    ಕೇರಳ – ಯುಡಿಎಫ್ + ಎಲ್‍ಡಿಎಫ್
    ಲೋಕಸಭಾ ಸ್ಥಾನ – 20
    9. ತ್ರಿಶೂಲ ವ್ಯೂಹ – ಅರವಿಂದ್ ಕೇಜ್ರಿವಾಲ್
    ದೆಹಲಿ – ಕಾಂಗ್ರೆಸ್ + ಆಪ್
    ಲೋಕಸಭಾ ಸ್ಥಾನ – 07
    10. ತ್ರಿಶೂಲ ವ್ಯೂಹ   – ಶರದ್ ಪವಾರ್
    ಮಹಾರಾಷ್ಟ್ರ – ಕಾಂಗ್ರೆಸ್ + ಎನ್‍ಸಿಪಿ + ಶಿವಸೇನೆ
    ಲೋಕಸಭಾ ಸ್ಥಾನ – 48
    11. ತ್ರಿಶೂಲ ವ್ಯೂಹ   – ಹೇಮಂತ್ ಸೊರೇನ್
    ಜಾರ್ಖಂಡ್ – ಕಾಂಗ್ರೆಸ್ + ಜೆಎಂಎಂ
    ಲೋಕಸಭಾ ಸ್ಥಾನ – 14
    12. ತ್ರಿಶೂಲ ವ್ಯೂಹ – ಅಭಯ್ ಸಿಂಗ್ ಚೌಟಾಲ
    ಹರಿಯಾಣ – ಕಾಂಗ್ರೆಸ್ + ಲೋಕದಳ
    ಲೋಕಸಭಾ ಸ್ಥಾನ – 10
    13. ತ್ರಿಶೂಲ ವ್ಯೂಹ – ಕ್ಯಾಪ್ಟನ್ ಅಮರೇಂದರ್ ಸಿಂಗ್
    ಪಂಜಾಬ್ – ಕಾಂಗ್ರೆಸ್ + ಆಮ್ ಆದ್ಮಿ
    ಲೋಕಸಭಾ ಸ್ಥಾನ – 13
    14. ತ್ರಿಶೂಲ ವ್ಯೂಹ – ನವೀನ್ ಪಟ್ನಾಯಕ್
    ಒಡಿಶಾ – ಕಾಂಗ್ರೆಸ್ + ಬಿಜು ಜನತಾದಳ
    ಲೋಕಸಭಾ ಸ್ಥಾನ – 21
    15. ತ್ರಿಶೂಲ ವ್ಯೂಹ   – ಮೌಲಾನಾ ಬದ್ರುದ್ದೀನ್ ಅಜ್ಮಲ್
    ಅಸ್ಸಾಂ – ಕಾಂಗ್ರೆಸ್ + ಎಐಯುಡಿಎಫ್
    ಲೋಕಸಭಾ ಸ್ಥಾನ – 14
    16. ತ್ರಿಶೂಲ ವ್ಯೂಹ – ಓಮರ್ ಅಬ್ದುಲ್ಲಾ
    ಜಮ್ಮು ಕಾಶ್ಮೀರ – ಕಾಂಗ್ರೆಸ್ + ಜೆಎನ್‍ಸಿ
    ಲೋಕಸಭಾ ಸ್ಥಾನ – 06
    ತ್ರಿಶೂಲ ವ್ಯೂಹ  – ಮೋದಿ ಸೋಲಿಸಲು ಮಹಾ ಸ್ಕೆಚ್..!
    ಮಹಾಮೈತ್ರಿ – 424 ಸ್ಥಾನ
    ಒಟ್ಟು ಲೋಕಸಭೆ ಸ್ಥಾನ – 543
  • ಎರಡೆರಡು ತಲೆ, ನಾಲ್ಕು.. ನಾಲ್ಕು ಕೈ ಹುಟ್ಟೋ ಮಕ್ಕಳು ಬಹಳ ದಿನ ಬದುಕಲ್ಲ: ಈಶ್ವರಪ್ಪ

    ಎರಡೆರಡು ತಲೆ, ನಾಲ್ಕು.. ನಾಲ್ಕು ಕೈ ಹುಟ್ಟೋ ಮಕ್ಕಳು ಬಹಳ ದಿನ ಬದುಕಲ್ಲ: ಈಶ್ವರಪ್ಪ

    ಮೈಸೂರು: ಕಾಂಗ್ರೆಸ್ ಮತ್ತು ಜೆಡಿಎಸ್ ಸರ್ಕಾರ ಅಲ್ಪಾವಧಿ ಸರ್ಕಾರ. ಇದೊಂದು ಪ್ರಕೃತಿ ವಿರುದ್ಧವಾದ ಪ್ರಕ್ರಿಯೆಯಾಗಿದೆ ಎಂದು ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

    ಮೈಸೂರಲ್ಲಿ ಮಾತನಾಡಿದ ಅವರು, ಪ್ರಮಾಣ ವಚನ ಸ್ವೀಕಾರ ಮಾಡುವವರೆಗೂ ಈ ಸರ್ಕಾರ ಇರುತ್ತಾ ಅನ್ನೋ ಅನುಮಾನ ಇದೆ. ಒಂದೊಂದು ಬಾರಿ ಎರಡೆರಡು ತಲೆ, ನಾಲ್ಕು ನಾಲ್ಕು ಕೈ ಇರುವ ಮಕ್ಕಳು ಹುಟ್ಟುತ್ತವೆ. ಅಂತಹ ಮಕ್ಕಳು ಬಹಳ ದಿನ ಬದುಕೋಲ್ಲ. ಈ ಸರ್ಕಾರದ ಪರಿಸ್ಥಿತಿಯೂ ಹಾಗೆಯೇ ಆಗಿದೆ. ಇನ್ನು ಮೂರು ತಿಂಗಳು ಮಾತ್ರ ಈ ಮೈತ್ರಿಯ ಆಯುಷ್ಯ ಅಂತ ಭವಿಷ್ಯ ನುಡಿದರು.

    ನಾವೇನು ಆಪರೇಷನ್ ಕಮಲ ನಡೆಸೋಲ್ಲ. ಮೋದಿ ಅಭಿವೃದ್ಧಿ ಮೆಚ್ಚಿ ಬರುವವರನ್ನ ನಾವು ಸ್ವಾಗತ ಮಾಡುತ್ತೇವೆ. ಸಿದ್ದರಾಮಯ್ಯರನ್ನ ಕಾಂಗ್ರೆಸ್ ಯೂಸ್ ಮಾಡಿಕೊಳ್ಳುತ್ತಿದೇಯಾ ಅಂತ ಅವರನ್ನೆ ಕೇಳಿ ಎಂದರು.

    ಈಗಲಾದರೂ ಸಿದ್ದರಾಮಯ್ಯ ತಮ್ಮ ಭಾಷೆ ನಡವಳಿಕೆ ಬದಲಾಯಿಸಿಕೊಳ್ಳಲಿ. ಯಡಿಯೂರಪ್ಪ ಕೆಜೆಪಿಯಲ್ಲಿದ್ದಾಗ ಅವರು ಬೇರೆ ಪಕ್ಷದಲ್ಲಿದ್ದುಕೊಂಡು ವಾಗ್ದಾಳಿ ನಡೆಸಿದ್ದರು. ಆದರೆ ಜೆಡಿಎಸ್-ಕಾಂಗ್ರೆಸ್ ನಾಯಕರು ಯಾವಾಗಲೂ ಬೈದಾಡಿಕೊಂಡು ಈಗ ಒಂದಾದರೇ ಏನರ್ಥ ಎಂದು ಪ್ರಶ್ನಿಸಿದರು.

  • ಕಾಂಗ್ರೆಸ್ಸಿಗೆ ಮತ್ತೊಂದು ಟೆನ್ಷನ್ – ಹೊಸ ಬೇಡಿಕೆ ಇಟ್ಟ ಲಿಂಗಾಯತ ಸಮುದಾಯ

    ಕಾಂಗ್ರೆಸ್ಸಿಗೆ ಮತ್ತೊಂದು ಟೆನ್ಷನ್ – ಹೊಸ ಬೇಡಿಕೆ ಇಟ್ಟ ಲಿಂಗಾಯತ ಸಮುದಾಯ

    ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಗೊಂದಲ, ಕುತೂಹಲ ಏರ್ಪಟ್ಟಿತ್ತು. ಇದುವರೆಗೂ ಕಾಂಗ್ರೆಸ್ ತಮ್ಮ ತಮ್ಮ ಶಾಸಕರನ್ನು ಭದ್ರ ಪಡಿಸಿಕೊಳ್ಳುವ ಟೆನ್ಷನ್ ನಲ್ಲಿ ಇತ್ತು. ಈಗ ಕಾಂಗ್ರೆಸ್ ಗೆ ಮತ್ತೊಂದು ಟೆನ್ಷನ್ ಎದುರಾಗಿದೆ.

    ಕರ್ನಾಟಕ ರಾಜಕೀಯದಲ್ಲಿ ಈಗ ಮೈತ್ರಿ ಸರ್ಕಾರ ಶುರುವಾದ ಹಾದಿಯಲ್ಲೇ ಕಾಂಗ್ರೆಸ್ ಗೆ ಮತ್ತೊಂದು ತಲೆನೋವು ಶುರುವಾಗಿದೆ. ಕಾಂಗ್ರೆಸ್ ನಾಯಕರಿಗೆ ಲಿಂಗಾಯತ ಸಮುದಾಯದವರು ಹೊಸ ಬೇಡಿಕೆಯನ್ನು ಇಟ್ಟಿದ್ದಾರೆ.

    ಈ ಬಾರಿಯ ಕರ್ನಾಟಕ ವಿಧಾನ ಸಭಾ ಚುನಾವನೆಯಲ್ಲಿ 47 ಲಿಂಗಾಯತ ಅಭ್ಯರ್ಥಿಗಳ ಪೈಕಿ 17 ಮಂದಿ ಶಾಸಕರು ಗೆಲುವು ಸಾಧಿಸಿದ್ದಾರೆ. ಆದರೆ 46 ಒಕ್ಕಲಿಗ ಅಭ್ಯರ್ಥಿಗಳ ಪೈಕಿ 14 ಮಂದಿ ಮಾತ್ರ ಗೆದ್ದಿದ್ದಾರೆ. ಈ ಹಿನ್ನೆಲೆಯಲ್ಲಿ ಲಿಂಗಾಯತ ಸಮುದಾಯ ಡಿಸಿಎಂ ಹುದ್ದೆಗೆ ಲೆಕ್ಕಾಚಾರದ ಬೇಡಿಕೆಯಿಟ್ಟಿದೆ.

    ಈಗಾಗಲೇ ಒಕ್ಕಲಿಗ ಸಮುದಾಯದ ಕುಮಾರಸ್ವಾಮಿ ಸಿಎಂ ಆಗುತ್ತಿದ್ದಾರೆ. ಹೀಗಾಗಿ ಲಿಂಗಾಯತ ಸಮುದಾಯಕ್ಕೆ ಡಿಸಿಎಂ ಪಟ್ಟ ಕೊಡಲೇಬೇಕು. ಇಲ್ಲ ಎಂದರೆ ಕಾಂಗ್ರೆಸ್ ನಿಂದ ಲಿಂಗಾಯತರು ಶಾಶ್ವತವಾಗಿ ದೂರ ಆಗುತ್ತಾರೆ. ಜೊತೆಗೆ ಬಿ.ಎಸ್ ಯಡಿಯೂರಪ್ಪರನ್ನು ಇಳಿಸಿದ ಅಪಕೀರ್ತಿಗೆ ಕಾಂಗ್ರೆಸ್ ತುತ್ತಾಗುತ್ತೆ ಎಂದು ಲಿಂಗಾಯುತ ಸಮುದಾಯ ಹೇಳುತ್ತಿದೆ.

    ಅಪಕೀರ್ತಿಯನ್ನು ಸರಿದೂಗಿಸಲು ಶಾಮನೂರು ಶಿವಶಂಕರಪ್ಪ ಅಥವಾ ಎಂಬಿ ಪಾಟೀಲ್ ಇಬ್ಬರಲ್ಲಿ ಒಬ್ಬರನ್ನ ಡಿಸಿಎಂ ಮಾಡಬೇಕು. ದಲಿತ ಸಮುದಾಯದ ಜೊತೆಗೆ ಲಿಂಗಾಯತ ಸಮುದಾಯದ ಒಬ್ಬರನ್ನು ಉಪಮುಖ್ಯಮಂತ್ರಿ ಮಾಡಿ ಎಂದು ಕಾಂಗ್ರೆಸ್ ಹೈಕಮಾಂಡ್ ಮುಂದೆ ಲಿಂಗಾಯತ ಸಮುದಾಯ ಬೇಡಿಕೆ ಇಟ್ಟಿದೆ ಎಂದು ಮಾಹಿತಿ ಲಭ್ಯವಾಗಿದೆ.

    ಸದ್ಯಕ್ಕೆ ಕಾಂಗ್ರೆಸ್ ಹೈಕಮಾಂಡ್ ಈ ಬಗ್ಗೆ ಯಾವ ತಿರ್ಮಾನಕ್ಕೂ ಬಂದಿಲ್ಲ. ಈಗಾಗಲೇ ಸಚಿವ ಸ್ಥಾನಕ್ಕೆ ಚರ್ಚೆ ನಡೆದಿದ್ದು, ಯಡಿಯೂರಪ್ಪ ರಾಜೀನಾಮೆ ನೀಡಿದ್ದರಿಂದ ಲಿಂಗಾಯತ ಸಮುದಾಯ ಉಪ ಮುಖ್ಯಮಂತ್ರಿ ಮಾಡಬೇಕು ಎಂದು ಸಲಹೆ ಕೊಟ್ಟಿದೆ. ಇನ್ನು ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಈ ವಿಚಾರದ ಬಗ್ಗೆ ಸ್ಪಷ್ಟನೆ ದೊರೆಯುತ್ತದೆ.

  • ರಾಮನಗರದಲ್ಲಿ ಜೆಡಿಎಸ್‍ನಿಂದ ಅನಿತಾ ಕುಮಾರಸ್ವಾಮಿ ಸ್ಪರ್ಧೆ?

    ರಾಮನಗರದಲ್ಲಿ ಜೆಡಿಎಸ್‍ನಿಂದ ಅನಿತಾ ಕುಮಾರಸ್ವಾಮಿ ಸ್ಪರ್ಧೆ?

    ರಾಮನಗರ: ರಾಮನಗರ ಹಾಗೂ ಚನ್ನಪಟ್ಟಣ ಎರಡೂ ಕ್ಷೇತ್ರಗಳಿಂದ ಸ್ಪರ್ಧಿಸಿದ್ದ ಎಚ್.ಡಿ ಕುಮಾರಸ್ವಾಮಿ ತಮ್ಮ ರಾಜಕೀಯ ಕರ್ಮಭೂಮಿ ರಾಮನಗರವನ್ನ ಬಿಟ್ಟು ಚನ್ನಪಟ್ಟಣದ ಕೈ ಹಿಡಿದಿದ್ದಾರೆ.

    ಎಚ್‍ಡಿಕೆ ರಾಮನಗರವನ್ನು ಬಿಟ್ಟರೂ ಕ್ಷೇತ್ರಕ್ಕೆ ಯಾವುದೇ ನಷ್ಟವಿಲ್ಲವಂತೆ. ಕ್ಷೇತ್ರದಲ್ಲಿ ಸಣ್ಣ ಕಾರ್ಯಕರ್ತರನ್ನ ಕುಮಾರಸ್ವಾಮಿಯವರು ನಿಲ್ಲಿಸಿದರೂ ಗೆಲ್ಲುತ್ತಾರೆ ಎಂದು ಜೆಡಿಎಸ್ ಮುಖಂಡರು ಹೇಳಿದ್ದಾರೆ.

    ಆದರೆ ಸ್ಥಳೀಯರು ಕುಮಾರಸ್ವಾಮಿಯವರ ನಡೆಯಿಂದ ಬೇಜಾರಾಗಿದ್ದು, ತಮ್ಮ ಕರ್ಮಭೂಮಿಗೆ ಕೈ ಕೊಟ್ಟಿದ್ದಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೇ ಎಚ್.ಡಿ ದೇವೇಗೌಡರ ಕುಟುಂಬದವರೇ ಉಪ ಚುನಾವಣೆಯಲ್ಲಿ ಸ್ಪರ್ಧಿಸಬೇಕು ಅಂತ ಒತ್ತಾಯಿಸಿದ್ದಾರೆ. ಹೀಗಾಗಿ ಅನಿತಾ ಕುಮಾರಸ್ವಾಮಿಯವರೇ ಕಣಕ್ಕಿಳಿಯುವ ಸಾಧ್ಯತೆ ಇದೆ. ಇವರ ಪ್ರತಿಸ್ಪರ್ಧಿಯಾಗಿ ಬಿಜೆಪಿಯಿಂದ ಯೋಗೇಶ್ವರ್ ಕಣಕ್ಕಿಳಿಯುತ್ತಾರೆ ಎನ್ನಲಾಗಿದೆ. ಕಾಂಗ್ರೆಸ್ ಜೆಡಿಎಸ್ ಮೈತ್ರಿಯಾಗಿರುವ ಕಾರಣ ರಾಮನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕಣಕ್ಕೆ ಇಳಿಯುವ ಸಾಧ್ಯತೆ ಕಡಿಮೆ ಇದೆ.

    2013ರ ವಿಧಾನಸಭಾ ಚುನಾವಣೆಯಲ್ಲಿ ಚನ್ನಪಟ್ಟಣದಲ್ಲಿ ಯೋಗೇಶ್ವರ್ ಅವರು ಅನಿತಾ ಕುಮಾರಸ್ವಾಮಿ ವಿರುದ್ಧ 6,464 ಮತಗಳ ಅಂತರಿಂದ ಗೆದ್ದಿದ್ದರು. ಸಮಾಜವಾದಿ ಪಕ್ಷದಿಂದ ಸ್ಪರ್ಧಿಸಿದ್ದ ಯೋಗೇಶ್ವರ್ ಅವರಿಗೆ 80,099 ಮತಗಳು ಬಿದ್ದಿದ್ದರೆ, ಅನಿತಾ ಕುಮಾರಸ್ವಾಮಿ ಅವರಿಗೆ 73,635 ಮತಗಳು ಬಿದ್ದಿತ್ತು. ಕಾಂಗ್ರೆಸ್ಸಿನಿಂದ ಸ್ಪರ್ಧಿಸಿದ್ದ ಸದತ್ ಅಲಿ ಖಾನ್ ಅವರಿಗೆ 8,134 ಮತಗಳು ಸಿಕ್ಕಿತ್ತು.

  • ಬಿಎಸ್‍ವೈ ರಾಜೀನಾಮೆ – ಪಟಾಕಿ ಸಿಡಿಸಿ ಸಂಭ್ರಮ, ಕುಣಿದು ಕುಪ್ಪಳಿಸಿದ ಮಹಿಳೆಯರು

    ಬಿಎಸ್‍ವೈ ರಾಜೀನಾಮೆ – ಪಟಾಕಿ ಸಿಡಿಸಿ ಸಂಭ್ರಮ, ಕುಣಿದು ಕುಪ್ಪಳಿಸಿದ ಮಹಿಳೆಯರು

    ಬೆಂಗಳೂರು: ಸದನದಲ್ಲಿ ಬಿಎಸ್ ಯಡಿಯೂರಪ್ಪ ರಾಜೀನಾಮೆ ನೀಡಿ ಹೊರನಡೆಯುತ್ತಿದ್ದಂತೆ ಕಾಂಗ್ರೆಸ್-ಜೆಡಿಎಸ್ ಮುಖಂಡರು ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.

    ಕೆಪಿಸಿಸಿ ಕಚೇರಿ ಬಳಿ ರಾಹಲ್ ಗಾಂಧಿ, ಸೋನಿಯಾ ಗಾಂಧಿ, ಪರಮೇಶ್ವರ್, ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಮಾಡಿದ್ದಾರೆ. ಡಿಕೆಶಿ ಪರ ಕೈ ಕಾರ್ಯಕರ್ತರು ಜೈಕಾರ ಹಾಕಿದ್ದಾರೆ. ಈ ವೇಳೆ ಮಹಿಳೆಯರು ಕುಣಿದು ಕುಪ್ಪಳಿಸಿದ್ದಾರೆ.

    ಇದೇ ವೇಳೆ ರಾಜ್ಯಪಾಲರ ವಿರುದ್ಧ ಕುಮಾರಸ್ವಾಮಿ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದು, ರಾಜ್ಯಪಾಲರು ತೊಲಗಲಿ ಎಂದು ಘೋಷಣೆ ಕೂಗಿದ್ದಾರೆ. ದೆಹಲಿಯಲ್ಲೂ ಎಐಸಿಸಿ ಕಚೇರಿಯೆದುರು ಡೋಲು ಬಾರಿಸಿ ಸಿಹಿ ಹಂಚುವ ಮೂಲಕ ಕಾರ್ಯಕರ್ತರು ಖುಷಿ ಪಟ್ಟಿದ್ದಾರೆ.

    ಚಿತ್ರದುರ್ಗ, ಆನೇಕಲ್, ಹಾವೇರಿ, ಹಾಸನ, ಮಂಡ್ಯ, ಹುಬ್ಬಳ್ಳಿ, ರಾಮನಗರ, ಕಾರವಾರ, ಮಂಗಳೂರು, ಯಾದಗಿರಿ ಹೀಗೆ ಎಲ್ಲಾ ಕಡೆ ಕಾಂಗ್ರೆಸ್, ಜೆಡಿಎಸ್ ಕಾರ್ಯಕರ್ತರು ಸಿಹಿ ಹಂಚಿ, ಬಣ್ಣ ಎರಚಿಕೊಂಡು ವಿಜಯೋತ್ಸವ ಆಚರಿಸಿದ್ದಾರೆ.

  • ಕೊನೆಯುಸಿರು ಇರೋವರೆಗೂ ನಾನು ರೈತರಿಗಾಗಿ ಹೋರಾಡ್ತೀನಿ: ಬಿಎಸ್‍ವೈ ವಿದಾಯ ಭಾಷಣ

    ಕೊನೆಯುಸಿರು ಇರೋವರೆಗೂ ನಾನು ರೈತರಿಗಾಗಿ ಹೋರಾಡ್ತೀನಿ: ಬಿಎಸ್‍ವೈ ವಿದಾಯ ಭಾಷಣ

    ಬೆಂಗಳೂರು: 56 ಗಂಟೆಗಳ ಕಾಲ ಕರುನಾಡಿನ ರಾಜನಾಗಿದ್ದ ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

    104 ಸದಸ್ಯರ ಹೊಂದಿ ಈ ಬಾರಿ ಅಧಿಕಾರವನ್ನೇ ನಡೆಸಿಯೇ ತೀರುತ್ತೇವೆ ಎಂದಿದ್ದ ಬಿಎಸ್ ಯಡಿಯೂರಪ್ಪ ವಿಶ್ವಾಸ ಮತಯಾಚನೆ ನಡೆಸದೇ ರಾಜಭವನಕ್ಕೆ ತೆರಳಿ ರಾಜೀನಾಮೆ ನೀಡಿದ್ದಾರೆ.

    ವಿಶ್ವಾಸಮತ ಯಾಚನೆಗೂ ಮುನ್ನವೇ ಯಡಿಯೂರಪ್ಪನವರು ತಮ್ಮ ಸೋಲನ್ನು ಒಪ್ಪಿಕೊಂಡರು. ರಾಜೀನಾಮೆ ನೀಡುವ ಮುನ್ನ ಭಾಷಣ ಮಾಡಿದ ಬಿಎಸ್‍ವೈ, ಏಪ್ರಿಲ್ 14 2016ರಂದು ರಾಜ್ಯಾಧ್ಯಕ್ಷ ಮತ್ತು ಸಿಎಂ ಅಭ್ಯರ್ಥಿಯಾಗಿ ಪ್ರಧಾನಿ ಮೋದಿ ಮತ್ತು ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಘೋಷಣೆ ಮಾಡಿದರು. ಪರಿವರ್ತನಾ ಯಾತ್ರೆಯಲ್ಲಿ ಜನರ ಪ್ರೀತಿ ವಿಶ್ವಾಸ ಸಿಕ್ಕಿದ್ದು, ಅಂದು ಸಿಕ್ಕಿರುವ ಬೆಂಬಲವನ್ನು ನಾನು ಜೀವನ ಪೂರ್ತಿ ಮರೆಯುವುದಿಲ್ಲ. ಜನರು ನಮಗೆ 104 ಕ್ಷೇತ್ರಗಳಲ್ಲಿ ಗೆಲ್ಲಿಸಿ ಅಭೂತಪೂರ್ವ ಬೆಂಬಲ ನೀಡಿ, ಕಾಂಗ್ರೆಸ್ ಮತ್ತು ಜೆಡಿಎಸ್ ನ್ನು ತಿರಸ್ಕರಿಸಿದ್ದಾರೆ ಅಂತಾ ಭಾಷಣದ ಆರಂಭದಲ್ಲಿಯೇ ಎರಡೂ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ರು.

    ಚುನಾವಣಾ ಪ್ರಚಾರದಲ್ಲಿ ಅವರಪ್ಪಾಣೆ, ನಿಮ್ಮಪ್ಪರಾಣೆ ಸಿಎಂ ಆಗಲ್ಲ ಅಂತಾ ಒಬ್ಬರ ಮೇಲೊಬ್ಬರು ಆರೋಪ ಪ್ರತ್ಯಾರೋಪಗಳನ್ನು ಮಾಡುತ್ತಾ ಬಂದವರು ಇಂದು ಒಂದಾಗಿದ್ದಾರೆ. ಹಿಂದಿನ ಸರ್ಕಾರದ ವೈಫಲ್ಯತೆಯಿಂದಾಗಿ ಕರುನಾಡ ಜನರು ಕಾಂಗ್ರೆಸ್‍ನ್ನು ತಿರಸ್ಕರಿಸಿದ್ದಾರೆ. ಜನಾದೇಶದ ವಿರುದ್ಧ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡಿದೆ. ನನ್ನ ಕೊನೆಯುಸಿರು ಇರೋವರೆಗೂ ನಾನು ರೈತರಿಗಾಗಿ ಹೋರಾಡುತ್ತಿರುತ್ತೇನೆ. ರಾಜ್ಯದಲ್ಲಿಯ ಜನರು ಕುಡಿಯುವ ನೀರಿನ ಸಮಸ್ಯೆಯನ್ನು ಎದುರಿಸುತ್ತಿದ್ದೇವೆ. ರೈತರಿಗೆ ಸ್ವಾಭಿಮಾನದ ಬದುಕನ್ನು ಕಟ್ಟಿಕೊಡಲು ನಾನು ತೀರ್ಮಾನಿಸಿದ್ದೆ. ಕಳೆದ 5 ವರ್ಷಗಳಲ್ಲಿ ನಾನು ರಾಜಕೀಯ ಏಳು ಬೀಳುಗಳನ್ನು ಕಂಡಿದ್ದೇನೆ ಅಂತಾ ಹೇಳುವ ಮೂಲಕ ಭಾವುಕರಾದರು.

    ಯಾರ ಹಿಂದೆಯೋ ನಾನು ರಾಜಕೀಯ ಮಾಡಿಲ್ಲ. ರಾಜ್ಯದ ಜನರ ಸೇವೆ ಮಾಡ್ಬೇಕು, ರೈತರನ್ನು ಉಳಿಸಬೇಕು ಎಂಬ ಹಂಬಲ ನನ್ನಲಿದೆ. ಮುಂದಿನ ದಿನಗಳಲ್ಲಿಯೂ ನನ್ನ ಹೋರಾಟ ಮುಂದುವರೆಯುತ್ತದೆ. ನಮ್ಮ ರಾಜ್ಯದಲ್ಲಿ ಎಲ್ಲ ಸಂಪನ್ಮೂಲಗಳು ನಮ್ಮಲಿವೆ. ಆದ್ರೆ ಸದುಪಯೋಗ ಮಾಡಿಕೊಳ್ಳುವರ ಇಲ್ಲ. ಇಂದು ನನ್ನ ಪಾಲಿಗೆ ಅಗ್ನಿ ಪರೀಕ್ಷೆ ಇದ್ದಂತೆ ಕಾಣುತ್ತಿದೆ. ನಾನು ನನ್ನ ಜೀವನದುದ್ದಕ್ಕೂ ಹಲವ ಅಗ್ನಿ ಪರೀಕ್ಷೆಗಳನ್ನು ಎದುರಿಸಿದ್ದೇನೆ ಎಂದರು.

    ರಾಜ್ಯದ ಜನರು 113 ಸ್ಥಾನಗಳನ್ನು ನಿಮಗೆ ನೀಡಿದ್ರೆ ಇಡೀ ಕರ್ನಾಟಕದ ಚಿತ್ರಣವೇ ಬದಲಾಗುತ್ತಿತ್ತು. ಮುಂಬರುವ ಲೋಕಸಭಾ ಚುನಾವಣೆಯಲ್ಲಿ 28ಕ್ಕೆ 28 ಸ್ಥಾನಗಳನ್ನು ಗೆಲ್ಲಿಸಿಕೊಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೊಡುಗೆಯನ್ನು ನೀಡುತ್ತೇವೆ. ಮುಂಬರುವ ಚುನಾವಣೆಯಲ್ಲಿ 150 ಸ್ಥಾನಗಳನ್ನು ಗೆಲ್ಲುವ ಮೂಲಕ ಮತ್ತೆ ಬಿಜೆಪಿ ಅಧಿಕಾರಕ್ಕೆ ಏರಲಿದೆ. ಅಧಿಕಾರದಲ್ಲಿ ಇರಲಿ ಅಥವಾ ವಿರೋಧ ಪಕ್ಷದಲ್ಲಿರಲಿ ಜನರ ಸೇವೆ ಮಾಡುತ್ತೇನೆ. ರಾಜಭವನಕ್ಕೆ ತೆರಳಿ ನನ್ನ ರಾಜಿನಾಮೆ ಸಲ್ಲಿಸುತ್ತೇನೆ. ಮುಂದಿನ 5 ವರ್ಷಗಳಲ್ಲಿ ಹೋರಾಟ ಮಾಡುತ್ತೇನೆ ಎಂದು ಹೇಳಿದರು.

  • ಕೈ ಶಾಸಕನ ಪತ್ನಿಗೆ ಕರೆ: ಪುಟ್ಟಸ್ವಾಮಿಯಿಂದ 15 ಕೋಟಿ ಆಫರ್ – ಆಡಿಯೋ

    ಕೈ ಶಾಸಕನ ಪತ್ನಿಗೆ ಕರೆ: ಪುಟ್ಟಸ್ವಾಮಿಯಿಂದ 15 ಕೋಟಿ ಆಫರ್ – ಆಡಿಯೋ

    – ಆರೋಪ ನಿರಾಕರಿಸಿದ ಬಿಎಸ್‍ವೈ ಆಪ್ತ ಪುಟ್ಟಸ್ವಾಮಿ

    ಬೆಂಗಳೂರು: ಒಂದು ಕಡೆ ವಿಧಾನ ಸಭೆಯಲ್ಲಿ ಶಾಸಕರಾಗಿ ಆಯ್ಕೆಯಾದವರು ಪ್ರಮಾಣ ವಚನ ಸ್ವೀಕಾರ ಮಾಡುತ್ತಿದ್ದರೆ, ಇನ್ನೊಂದು ಕಡೆ ವಿಧಾನಸೌಧದ ಹೊರಗಡೆ ಬಿಜೆಪಿ ಆಪರೇಷನ್ ಫ್ಲವರ್ ರನ್ನು ಶುರುಮಾಡಿದೆ.

    ಕಳೆದ ದಿನ ಜನಾರ್ದನ ರೆಡ್ಡಿ ಆಮಿಷ ಒಡ್ಡಿರುವ ಆಡಿಯೋವನ್ನು ಕಾಂಗ್ರೆಸ್ ರಿಲೀಸ್ ಮಾಡಿತ್ತು. ಈಗ ವಿಧಾನ ಸೌಧದಲ್ಲಿ ಆಪರೇಷನ್ ಕಮಲದ ಮತ್ತೊಂದು ಆಡಿಯೋವನ್ನು ಕಾಂಗ್ರೆಸ್ ನಾಯಕ ಉಗ್ರಪ್ಪ ಬಿಡುಗಡೆ ಮಾಡಿದ್ದಾರೆ. ಯಲ್ಲಾಪುರ ಕಾಂಗ್ರೆಸ್ ಶಾಸಕ ಶಿವರಾಂ ಹೆಬ್ಬಾರ್ ಪತ್ನಿಗೆ ಬಿಎಸ್‍ವೈ ಆಪ್ತ ಪುಟ್ಟಸ್ವಾಮಿಯವರು ಕರೆ ಮಾಡಿ ಕೋಟಿ ಕೋಟಿ ಆಫರ್ ನೀಡಿ ಆಮಿಷ ಒಡ್ಡಿದ್ದಾರೆ ಎಂದು ಆರೋಪಿಸಿದ್ದಾರೆ.

    ಯಡಿಯೂರಪ್ಪ ಪುತ್ರ ವಿಜಯೇಂದ್ರ ಮತ್ತು ಬಿಎಸ್‍ವೈ ಆಪ್ತ ಎಂಎಲ್‍ಸಿ ಪುಟ್ಟಸ್ವಾಮಿ ಕಾಂಗ್ರೆಸ್ ಶಾಸಕರ ಪತ್ನಿಗೆ ಕರೆ ಮಾಡಿ ಆಫರ್ ಕೊಟ್ಟಿದ್ದಾರೆ. 15 ಕೋಟಿ ರೂ. ಮತ್ತು ಮಂತ್ರಿ ಸ್ಥಾನದ ಆಫರ್ ಕೊಡುತ್ತೇವೆ ಎಂದು ಆಡಿಯೋದಲ್ಲಿ ಹೇಳಿದ್ದಾರೆ ಎಂದು ಉಗ್ರಪ್ಪ ಆರೋಪಿಸಿದರು.

    ಆಡಿಯೋದಲ್ಲಿ ಏನಿದೆ?: ಮೊದಲಿಗೆ ಪುಟ್ಟಸ್ವಾಮಿ ಹೆಬ್ಬಾರ್ ಪತ್ನಿಗೆ ಕರೆ ಮಾಡಿದ್ದಾರೆ. ಅದರಲ್ಲಿ 15 ಕೋಟಿ ರೂ. ಮತ್ತು ಮಂತ್ರಿ ಸ್ಥಾನವನ್ನು ಕೊಟ್ಟಿದ್ದಾರೆ. ನಂತರ ಅವರ ಮಗನ ಗಣಿಗಾರಿಕೆಯ ಕೇಸ್ ನ್ನು ಕ್ಲೋಸ್ ಮಾಡಿಸುತ್ತೇನೆ. ನೀವು ಕೇಳಿದ ಇಲಾಖೆಯನ್ನು ನೀಡುತ್ತೇವೆ ಎಂದು ಹೇಳಿದ್ದಾರೆ.

    ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಕರೆ ಮಾಡಿದ್ದು, ಸರ್ಕಾರ ನಮ್ಮ ಕೈಯಲ್ಲಿದೆ. ನಾವು ಮೋಸ ಮಾಡುವುದಿಲ್ಲ. ಸರ್ಕಾರ ಇರುವುದರಿಂದ ಒಬ್ಬರ ಭವಿಷ್ಯ ಹಾಳು ಮಾಡಿ. ನಮ್ಮ ಭವಿಷ್ಯವನ್ನು ನೋಡಿಕೊಳ್ಳುವುದಿಲ್ಲ. ಶಿವಾರಂ ಹೆಬ್ಬಾರ್ ಪುತ್ರ ವಿವೇಕ್ ಹೆಬ್ಬಾರ್ ಮೇಲೆ ಗಣಿಗಾರಿಕೆ ಕೇಸ್ ಇದೆ. ನಮ್ಮ ಪರವಾಗಿ ಬಂದರೆ ನಿಮ್ಮ ಮೇಲಿರುವ ಕೇಸ್ ಕ್ಲೋಸ್ ಮಾಡುತ್ತೇವೆ ಎಂದು ಆಮಿಷ ಒಡ್ಡಲಾಗಿದೆ.

    ನನ್ನ ಧ್ವನಿಯಲ್ಲ: ಆಡಿಯೋ ಬಿಡುಗಡೆಯಾದ ಬಳಿಕ ಪಬ್ಲಿಕ್ ಟಿವಿಗೆ ಸ್ಪಷ್ಟನೆ ನೀಡಿದ ಪುಟ್ಟಸ್ವಾಮಿ, ಆಡಿಯೋದಲ್ಲಿ ಇರುವುದು ನನ್ನ ಧ್ವನಿಯಲ್ಲ. ನಾನು ಯಾರಿಗೂ ಕರೆ ಮಾಡಿಲ್ಲ ಎಂದು ತಿಳಿಸಿದ್ದಾರೆ.

    ಇನ್ನೊಂದು ಕಡೆ ಬಿಜೆಪಿ ಶಾಸಕರಾದ ಶ್ರೀರಾಮುಲು, ಉಮೇಶ್ ಕತ್ತಿ ಮತ್ತು ಬಾಲಚಂದ್ರ ಜಾರಕಿಹೊಳಿ ವಿಶ್ವಾಸ ಮತಯಾಚನೆಗಳಿಸಲು ಕೊನೆ ಕ್ಷಣದ ರಣತಂತ್ರ ಹೆಣೆಯುತ್ತಿದ್ದಾರೆ.

    ಉಗ್ರಪ್ಪನವರು ಮಾತನಾಡಿ, ಶ್ರೀರಾಮುಲು ಮತ್ತು ಬಿಜೆಪಿ ರಾಜ್ಯ ಉಸ್ತುವಾರಿ ಮುರುಳೀಧರ್ ರಾವ್ ಕಾಂಗ್ರೆಸ್ ಶಾಸಕರಿಗೆ ಕೋಟಿ ಕೋಟಿ ಆಫರ್ ನೀಡಿದ್ದು, ಈ ಆಡಿಯೋವನ್ನು ಮಧ್ಯಾಹ್ನ ನಂತರ ಬಿಡುಗಡೆ ಮಾಡುತ್ತೇವೆ. ಅಷ್ಟೇ ಅಲ್ಲದೇ ಸ್ವತಃ ಯಡಿಯೂರಪ್ಪ ಮತ್ತು ಪುತ್ರ ವಿಜಯೇಂದ್ರ ಆಮಿಷ ಒಡ್ಡಿ ಮಾತನಾಡಿರುವ ಆಡಿಯೋ ಇದೆ. ಅದನ್ನು ಬಿಡುಗಡೆ ಮಾಡುತ್ತೇವೆ ಎಂದು ಹೇಳಿದ್ದಾರೆ.