Tag: Namma Metro Pillar Collapse

  • ಮೆಟ್ರೋ ಪಿಲ್ಲರ್‌ ಕುಸಿದು ತಾಯಿ, ಮಗು ಸಾವು ಕೇಸ್ – ಹೈಕೋರ್ಟ್‌ನಿಂದ ಸ್ವಯಂಪ್ರೇರಿತ ಪ್ರಕರಣ ದಾಖಲು

    ಮೆಟ್ರೋ ಪಿಲ್ಲರ್‌ ಕುಸಿದು ತಾಯಿ, ಮಗು ಸಾವು ಕೇಸ್ – ಹೈಕೋರ್ಟ್‌ನಿಂದ ಸ್ವಯಂಪ್ರೇರಿತ ಪ್ರಕರಣ ದಾಖಲು

    ಬೆಂಗಳೂರು: ಮೆಟ್ರೋ ಪಿಲ್ಲರ್‌ ಕುಸಿದು (Bengaluru Metro Pillar Collapse) ತಾಯಿ, ಮಗು ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್‌ (Karnataka High Court) ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ. ಆ ಮೂಲಕ ರಾಜ್ಯ ಸರ್ಕಾರ, ಬಿಎಂಆರ್‌ಸಿಎಲ್‌ಗೆ (BMRCL) ಕೋರ್ಟ್‌ ಮಾಸ್ಟರ್‌ ಸ್ಟ್ರೋಕ್‌ ಕೊಟ್ಟಿದೆ.

    ಮಾಧ್ಯಮಗಳ ಸುದ್ದಿ ಆಧರಿಸಿ ಹೈಕೋರ್ಟ್‌ ಸ್ವಯಂಪ್ರೇರಿತ ಕೇಸ್‌ ದಾಖಲಿಸಿದೆ. ಸಾರ್ವಜನಿಕ ಹಿತದೃಷ್ಟಿಯಿಂದ ಯಾವೆಲ್ಲಾ ಮುಂಜಾಗ್ರತೆ ಕ್ರಮ ಕೈಗೊಳ್ಳಲಾಗಿದೆ? ಮುಂಜಾಗ್ರತಾ ಕ್ರಮದ ಕುರಿತು ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆಯೇ ಎಂಬ ಬಗ್ಗೆ ರಿಟ್‌ ಅರ್ಜಿ ಸಲ್ಲಿಸಲು ರಿಜಿಸ್ಟರ್‌ ಜನರಲ್‌ಗೆ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಮೆಟ್ರೋ ದುರಂತ: ತನಿಖೆ ನಡೆಸಿ ವರದಿ ಸಲ್ಲಿಸಿಲು ಐಐಎಸ್‍ಸಿಗೆ ಮನವಿ – ಮತ್ತಷ್ಟು ಅಧಿಕಾರಿಗಳ ತಲೆದಂಡ ಸಾಧ್ಯತೆ

    karnataka highcourt

    ಘಟನೆಯೇನು?: ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಕುಸಿದು ತಾಯಿ, ಮಗು ಸಾವನ್ನಪ್ಪಿದ ದಾರುಣ ಘಟನೆ ಬೆಂಗಳೂರಿನ (Bengaluru) ನಾಗವಾರ ರಿಂಗ್ ರಸ್ತೆಯ ಹೆಚ್‍ಬಿಆರ್ ಲೇಔಟ್‍ನಲ್ಲಿ ನಡೆದಿತ್ತು. ಬೆಳಗ್ಗೆ 10:30ರ ಸುಮಾರಿನಲ್ಲಿ ಗದಗ ಮೂಲದ ಸಿವಿಲ್ ಎಂಜಿನಿಯರ್ ಲೋಹಿತ್, ಪತ್ನಿ ಮತ್ತು ಇಬ್ಬರು ಅವಳಿ ಮಕ್ಕಳ ಸಮೇತ ಮನೆಯಿಂದ ಹೊರಟಿದ್ದರು. ಪತ್ನಿಯನ್ನು ಕೆಲಸಕ್ಕೆ, ಇಬ್ಬರು ಮಕ್ಕಳನ್ನು ಡೇ ಕೇರ್‌ನಲ್ಲಿ ಬಿಡಲು ಮಾನ್ಯತಾ ಟೆಕ್‍ಪಾರ್ಕ್ ಕಡೆ ಲೋಹಿತ್ ತೆರಳುತ್ತಿದ್ದಾಗ ಹೆಣ್ಣೂರು ಬಳಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ದಿಢೀರ್ ಎಂದು ಕುಸಿದಿತ್ತು.

    ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಬಿಎಂಆರ್‌ಸಿಎಲ್‌ನಿಂದ 20 ಲಕ್ಷ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 10 ಲಕ್ಷ ರೂ. ಪರಿಹಾರ ಘೋಷಿಸಿದರು. ಅಲ್ಲದೇ ಮೆಟ್ರೋ ಅಧಿಕಾರಿಗಳ ನಿರ್ಲಕ್ಷ್ಯದಿಂದ ನಿರ್ಮಾಣ ಹಂತದಲ್ಲಿರುವ ಮೆಟ್ರೋ ಪಿಲ್ಲರ್ ಕುಸಿದಿದೆ ಎಂಬ ಆರೋಪ ಕೇಳಿಬಂದಿದ್ದರಿಂದ ಮೂವರು ಎಂಜಿನಿಯರ್‌ಗಳನ್ನು ಅಮಾನತು ಮಾಡಲಾಯಿತು. ಜೊತೆಗೆ ಗುತ್ತಿಗೆದಾರರ ವಿರುದ್ಧ ಕ್ರಿಮಿನಲ್‌ ದಾಖಲಿಸುವಂತೆ ಸಿಎಂ ಸೂಚನೆ ನೀಡಿದ್ದರು. ಇದನ್ನೂ ಓದಿ: ಡೆಡ್ಲಿ ಮೆಟ್ರೋಗೆ ಇಬ್ಬರು ಬಲಿ – ಪಿಲ್ಲರ್ ದುರಂತಕ್ಕೆ ಕಾರಣಗಳೇನು?

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಮೆಟ್ರೋ ಪಿಲ್ಲರ್‌ ಕುಸಿದು ತಾಯಿ, ಮಗು ಸಾವು ಪ್ರಕರಣ – ಮೂವರು ಎಂಜಿನಿಯರ್‌ ಅಮಾನತು

    ಮೆಟ್ರೋ ಪಿಲ್ಲರ್‌ ಕುಸಿದು ತಾಯಿ, ಮಗು ಸಾವು ಪ್ರಕರಣ – ಮೂವರು ಎಂಜಿನಿಯರ್‌ ಅಮಾನತು

    ಬೆಂಗಳೂರು: ಮೆಟ್ರೋ ಪಿಲ್ಲರ್‌ ಕುಸಿದು (Metro Pilllar Collapse) ತಾಯಿ, ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಎಂಜಿನಿಯರ್‌ಗಳನ್ನು ಅಮಾನತುಗೊಳಿಸಿ ಬಿಎಂಆರ್‌ಸಿಎಲ್‌ (BMRCL) ಆದೇಶ ಹೊರಡಿಸಿದೆ.

    ನಿರ್ಲಕ್ಷ್ಯ ವಹಿಸಿದ ಆರೋಪದ ಮೇಲೆ ಮೆಟ್ರೋ ಡೆಪ್ಯುಟಿ ಚೀಫ್ ಎಂಜಿನಿಯರ್‌, ಎಕ್ಸಿಕ್ಯೂಟಿವ್ ಎಂಜಿನಿಯರ್, ಸೆಕ್ಷನ್ ಎಂಜಿನಿಯರ್ ಅಮಾನತುಗೊಳಿಸಿ  ಆದೇಶಿಸಲಾಗಿದೆ ಎಂದು ಬಿಎಂಆರ್‌ಸಿಎಲ್‌ ಎಂಡಿ ಅಂಜುಂ ಫರ್ವೇಜ್‌ ತಿಳಿಸಿದ್ದಾರೆ. ಇದನ್ನೂ ಓದಿ: ದಾವಣಗೆರೆಗೆ ಬಂದ ಮೃತ ತೇಜಸ್ವಿನಿ, ಪುತ್ರನ ಶವ- ತಾಯಿ, ಮಗುವಿನ ಪ್ರತ್ಯೇಕ ಅಂತ್ಯಸಂಸ್ಕಾರ

    ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಮೆಟ್ರೋ ನಿಗಮ, ಎನ್‌ಸಿಸಿ ಕಂಪನಿಗೆ ನೋಟಿಸ್ ಮೇಲೆ ನೋಟಿಸ್ ನೀಡುತ್ತಿದೆ. ಮಂಗಳವಾರ ದುರಂತದ ಬಳಿಕ ಮೆಟ್ರೋ ಚೀಫ್ ಎಂಜಿನಿಯರ್‌ರಿಂದ ಎನ್‌ಸಿಸಿ ಕಂಪನಿಗೆ ನೋಟಿಸ್ ನೀಡಲಾಗಿದೆ. ಬುಧವಾರ ಮೆಟ್ರೋ ನಿರ್ದೇಶಕರಿಂದ ಎನ್‌ಸಿಸಿ ಆಡಳಿತ ವಿಭಾಗಕ್ಕೆ ಮತ್ತೊಂದು ನೋಟಿಸ್ ಬಂದಿದೆ. ಮೂರು ದಿನಗಳ ಒಳಗೆ ಸಂಪೂರ್ಣ ವರದಿ ನೀಡುವಂತೆ ಸೂಚಿಸಲಾಗಿದೆ.

    ಎನ್‌ಸಿಸಿ ಕಂಪನಿಯ ಮೇಲೆ ಈಗಾಗಲೇ ಕ್ರಿಮಿನಲ್ ಕೇಸ್ ದಾಖಲಾಗಿದ್ದು, ಪೋಲಿಸರು ಕ್ರಮ ಕೈಗೊಳ್ಳುತ್ತಿದ್ದಾರೆ ಎಂದು ಅಂಜುಂ ಫರ್ವೇಜ್‌ ಹೇಳಿದ್ದಾರೆ. ಇದನ್ನೂ ಓದಿ: ಪತ್ನಿ, ಮಗನ ಸಾವಿಗೆ ಕಾರಣರಾದವ್ರ ವಿರುದ್ಧ ಕ್ರಮಕ್ಕೆ ಲೋಹಿತ್ ದೂರು- ಎಫ್‍ಐಆರ್

    ಬೆಂಗಳೂರು ಮೆಟ್ರೋ ಕಾಮಗಾರಿ ದುರಂತ ಪ್ರಕರಣವು ಕೇಂದ್ರದ ಅಂಗಳ ತಲುಪಿದೆ. ಪ್ರಕರಣ ಸಂಬಂಧ ವರದಿ ನೀಡುವಂತೆ ಕೇಂದ್ರ ನಗರಾಭಿವೃದ್ಧಿ ಇಲಾಖೆ ಕೇಳಿದೆ. ಅಂಜುಂ ಫರ್ವೇಜ್‌ಗೆ ಕರೆ ಮಾಡಿ ವರದಿ ಕೇಳಿದೆ. ಎರಡು ದಿನಗಳಲ್ಲಿ ವರದಿ ನೀಡುವುದಾಗಿ ಮೆಟ್ರೋ ನಿಗಮ ತಿಳಿಸಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಮೆಟ್ರೋ ಪಿಲ್ಲರ್ ದುರಂತ – ತಪ್ಪಿತಸ್ಥರಿಗೆ ಪೊಲೀಸರಿಂದ ಬುಲಾವ್

    ಮೆಟ್ರೋ ಪಿಲ್ಲರ್ ದುರಂತ – ತಪ್ಪಿತಸ್ಥರಿಗೆ ಪೊಲೀಸರಿಂದ ಬುಲಾವ್

    ಬೆಂಗಳೂರು: ಹೆಣ್ಣೂರಿನ ಎಚ್‍ಬಿಆರ್ ಲೇಔಟ್ (HBR Lay Out) ಬಳಿ ಮಂಗಳವಾರ ಮೆಟ್ರೋ ಪಿಲ್ಲರ್ ಬಿದ್ದು (Namma Metro Pillar Collapse) ಎರಡು ಅಮಾಯಕ ಜೀವಗಳು ಹೋದ ಬೆನ್ನಲ್ಲೇ ಪೊಲೀಸ್ ಇಲಾಖೆಯಿಂದ ತಪ್ಪಿತಸ್ಥರಿಗೆ ಬುಲಾವ್ ನೀಡಲಾಗಿದೆ.

    ಸಮನ್ಸ್ ಕೊಟ್ಟು ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಸೂಚಿಸಿದ್ದಾರೆ. ಮೃತ ತೇಜಸ್ವಿನಿ ಪತಿ ಲೋಹಿತ್ (Lohith) ಕೊಟ್ಟ ದೂರಿನ ಮೇಲೆ ಐವರ ಮೇಲೆ ಗೋವಿಂದಪುರ ಠಾಣೆ ಪೊಲೀಸರು (Govindapura Police Station) ಎಫ್‍ಐಆರ್ (FIR) ದಾಖಲಿಸಿದ್ದಾರೆ. ಇದನ್ನೂ ಓದಿ: ಪತ್ನಿ, ಮಗನ ಸಾವಿಗೆ ಕಾರಣರಾದವ್ರ ವಿರುದ್ಧ ಕ್ರಮಕ್ಕೆ ಲೋಹಿತ್ ದೂರು- ಎಫ್‍ಐಆರ್

    ಎ1 ಆರೋಪಿ ಸೈಟ್ ಎಂಜಿನಿಯರ್, ಎ2 ಆರೋಪಿ ಮೆಟ್ರೋ ಗುತ್ತಿಗೆದಾರರು, ಎ3 ಆರೋಪಿ ಸೈಟ್ ಇನ್‍ಚಾರ್ಜ್ ಅಧಿಕಾರಿ, ಎ4 ಆರೋಪಿ ಬಿಎಂಆರ್‌ಸಿಎಲ್‌ ಅಧಿಕಾರಿಗಳು, ಎ5 ಇತರರ ಮೇಲೆ ಐಪಿಸಿ ಸೆಕ್ಷನ್ 336, 337, 304ಎ, 427, 34 ಅಡಿಯಲ್ಲಿ ಕೇಸ್ ದಾಖಲಾಗಿದೆ. ಸದ್ಯ ಎಲ್ಲಾ ಆರೋಪಿಗಳಿಗೂ ನೋಟಿಸ್ ಕೊಟ್ಟು ವಿಚಾರಣೆ ನಡೆಸಲು ಸಿದ್ಧತೆ ನಡೆಸಲಾಗಿದೆ. ಬಿಎಂಆರ್‌ಸಿಎಲ್‌ ಹಾಗೂ ಗುತ್ತಿಗೆದಾರರಿಂದ ನಡೆದಿರುವ ಕೊಲೆ ಎಂದು ಮೃತರ ಕುಟುಂಬ ಆಕ್ರೋಶ ಹೊರಹಾಕಿದೆ. ತಪ್ಪಿತಸ್ಥ ಅಧಿಕಾರಿಗಳ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಿ ಸಸ್ಪೆಂಡ್ ಮಾಡುವಂತೆ ಸಿಎಂ ಬಸವರಾಜ ಬೊಮ್ಮಾಯಿ (Basavarj Bommai) ಕೂಡ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಡೆಡ್ಲಿ ಮೆಟ್ರೋಗೆ ಇಬ್ಬರು ಬಲಿ – ಪಿಲ್ಲರ್ ದುರಂತಕ್ಕೆ ಕಾರಣಗಳೇನು?

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k