Tag: Nanda Kishore

  • ನಾನು ಸತ್ತರೆ ನಂದಕಿಶೋರ್, ಸಾರಾ ಗೋವಿಂದು ಕಾರಣ – ವೀಡಿಯೋ ಹರಿಬಿಟ್ಟ ಶಬರೀಶ್ ಶೆಟ್ಟಿ

    ನಾನು ಸತ್ತರೆ ನಂದಕಿಶೋರ್, ಸಾರಾ ಗೋವಿಂದು ಕಾರಣ – ವೀಡಿಯೋ ಹರಿಬಿಟ್ಟ ಶಬರೀಶ್ ಶೆಟ್ಟಿ

    ಸ್ಯಾಂಡಲ್‍ವುಡ್‍ನ (Sandalwood) ಯುವನಟ ಶಬರೀಶ್ ಶೆಟ್ಟಿ ಆಘಾತಕಾರಿ ವೀಡಿಯೋ ಮಾಡಿ ತಮ್ಮ ಅಳಲು ತೋಡಿಕೊಂಡಿದ್ದಾರೆ. ಅಸಹಾಯಕತೆಯಿಂದ ವೀಡಿಯೋ ಮಾಡಿ ನಾನು ಸತ್ತರೆ ಅದಕ್ಕೆ ಕಾರಣ ನಿರ್ದೇಶಕ ನಂದಕೀಶೋರ್ (Nanda Kishore) ಹಾಗೂ ಸಾರಾ ಗೋವಿಂದು (Sa Ra Govindu) ಎಂದಿದ್ದಾರೆ. ಕಳೆದ ಕೆಲ ತಿಂಗಳ ಹಿಂದೆ ನಿರ್ದೇಶಕ ನಂದಕೀಶೋರ್ ಮೇಲೆ 22 ಲಕ್ಷ ರೂ. ವಂಚಿಸಿದ ಆರೋಪ ಮಾಡಿದ್ದರು.

    ನಿರ್ದೇಶಕ ನಂದಕೀಶೋರ್ ಮೇಲೆ ವಂಚನೆ ಆರೋಪ (Fraud Case) ಮಾಡಿದ್ದ ನಟ ಶಬರೀಶ್ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ಕೊಟ್ಟಿದ್ದರು. ಬಳಿಕ ಫಿಲ್ಮ್ ಚೇಂಬರ್ ವತಿಯಿಂದ ಮಾಜಿ ಅಧ್ಯಕ್ಷ ಸಾರಾ ಗೋವಿಂದು ಯುವನಟ ಶಬರೀಶ್‍ಗೆ ಕರೆಮಾಡಿ ಈ ಸಮಸ್ಯೆಯನ್ನು ಬಗೆಹರಿಸುತ್ತೇನೆ ಹಣ ವಾಪಸ್ ಕೊಡಿಸುತ್ತೇನೆ ದುಡಕಬೇಡ ಎಂದಿದ್ದರಂತೆ. ಸಾರಾ ಗೋವಿಂದು ಕೊಟ್ಟ ಸಮಯ ಮುಗಿದ ಬಳಿಕ ಶಬರೀಶ್ ಕರೆ ಮಾಡಿ ವಿಚಾರಿಸಿದಾಗ ಏನ್ ಬೇಕಾದ್ರೂ ಮಾಡಿಕೊಳ್ಳಿ ಎಂಬ ಉತ್ತರ ಬಂದಿದ್ದಕ್ಕೆ ನೊಂದ ಯುವನಟ ಇದೀಗ ವೀಡಿಯೋ ರೆಕಾರ್ಡ್ ಮಾಡಿ ನಡೆದಿರುವ ಘಟನೆ ವಿವರಿಸಿದ್ದಾರೆ. ಇದನ್ನೂ ಓದಿ: ರೆಟ್ರೋ ಲುಕ್‌ನಲ್ಲಿ ಮಿಂಚಿದ ಶಿವಣ್ಣ, ಡಾಲಿ

    ನಿರ್ದೇಶಕ ನಂದಕಿಶೋರ್ ಮೇಲೆ 22 ಲಕ್ಷ ರೂ. ವಂಚನೆ ಆರೋಪ ಮಾಡಿದ್ದ ಶಬರೀಶ್ ಶೆಟ್ಟಿ. ಫಿಲ್ಮ್ ಚೇಂಬರ್‍ಗೆ ದೂರು ಕೊಟ್ಟಿದ್ದರು. ಬಳಿಕ ಸಾಲಪಡೆದ ನಂದಕಿಶೋರ್ ಸಂಪರ್ಕ ಮಾಡಲು ಆಗದೆ ಅಸಹಾಯಕರಾಗಿದ್ದೇನೆ ಎಂದಿದ್ದಾರೆ. ಬಳಿಕ ಶಬರೀಶ್‍ಗೆ ಕರೆ ಮಾಡಿದ್ದ ಫಿಲ್ಮ್ ಚೇಂಬರ್ ಮಾಜಿ ಅಧ್ಯಕ್ಷ, ನಂದಕಿಶೋರ್ ಪರವಾಗಿ ಸಂಧಾನ ಮಾಡೋದಾಗಿ ಹೇಳಿದ್ದರಂತೆ. ಸಾರಾ ಗೋವಿಂದ್ ಮಾತು ಕೇಳಿ ಪೊಲೀಸರಿಗೆ ದೂರು ಕೊಡುವ ನಿರ್ಧಾರವನ್ನ ಕೈ ಬಿಟ್ಟಿದ್ದ ಅವರು, 2 ತಿಂಗಳಾದ್ರೂ ಸಂಧಾನ ಆಗದೇ ಇದ್ದಾಗ ಮತ್ತೆ ಸಾರಾ ಗೋವಿಂದ್‍ಗೆ ಕರೆ ಮಾಡಿದ್ದಾರೆ. ಈ ವೇಳೆ ನಿನ್ನ ಕೈಯಿಂದ ಏನ್ ಮಾಡೋಕೆ ಆಗತ್ತೋ ಮಾಡ್ಕೋ ಅಂದ್ರಂತೆ. ಇತ್ತ ಹಣವೂ ಬಾರದೇ, ಅತ್ತ ಸಂಧಾನವೂ ನಡೆಯದೇ ಆತ್ಮಹತ್ಯೆಯ ಬೆದರಿಕೆ ಹಾಕಿದ್ದಾರೆ.

    ನಾನೇನಾದರೂ ಸೂಸೈಡ್ ಮಾಡಿಕೊಂಡರೆ ಅದಕ್ಕೇ ನೇರ ಹೊಣೆ ನಂದಕಿಶೋರ್ ಮತ್ತು ಸಾರಾ ಗೋವಿಂದ್ ಎಂದು ಆರೋಪಿಸಿ ವೀಡಿಯೋ ಮಾಡಿ ಹರಿಬಿಟ್ಟಿದ್ದಾರೆ ಶಬರೀಶ್ ಶೆಟ್ಟಿ. ಇದನ್ನೂ ಓದಿ: ಕೋರ್ಟ್ ಆದೇಶಿಸಿದ್ರೂ ಹಾಸಿಗೆ, ದಿಂಬು ಒದಗಿಸಿಲ್ಲ – ಮತ್ತೆ ಅರ್ಜಿ ಸಲ್ಲಿಸಿದ ದರ್ಶನ್ ಪರ ವಕೀಲರು

  • ಸಾಲ ವಾಪಸ್ ಕೇಳಿದ್ದಕ್ಕೆ ಉದ್ಯಮಿ ಕಿಡ್ನ್ಯಾಪ್ – ನಿರ್ದೇಶಕ ನಂದಕಿಶೋರ್‌ಗೆ ಹಣ ಕೊಡಿಸಿದ್ದ ರೌಡಿಶೀಟರ್‌

    ಸಾಲ ವಾಪಸ್ ಕೇಳಿದ್ದಕ್ಕೆ ಉದ್ಯಮಿ ಕಿಡ್ನ್ಯಾಪ್ – ನಿರ್ದೇಶಕ ನಂದಕಿಶೋರ್‌ಗೆ ಹಣ ಕೊಡಿಸಿದ್ದ ರೌಡಿಶೀಟರ್‌

    ಬೆಂಗಳೂರು: ನಿದೇರ್ಶಕ ನಂದಕಿಶೋರ್‌ಗೆ (Nanda Kishore) ಕೊಟ್ಟಿದ್ದ ಸಾಲ ವಾಪಸ್ ಕೇಳಿದ್ದಕ್ಕೆ ಉದ್ಯಮಿಯೊಬ್ಬನನ್ನು ಕಿಡ್ನ್ಯಾಪ್ ಮಾಡಿರುವ ಘಟನೆ ನಡೆದಿದೆ.

    ಮನೋಜ್ (28) ಕಿಡ್ನ್ಯಾಪ್ ಆದ ಉದ್ಯಮಿ. ಈತನನ್ನು ಕಿಡ್ನ್ಯಾಪ್ ಮಾಡಿ ರೌಡಿಶೀಟರ್‌ಗಳು ಲಕ್ಷಗಟ್ಟಲೆ ಹಣ ಕಿತ್ತಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಭೋವಿ ನಿಗಮದ ಅಕ್ರಮ; ಕಾಂಗ್ರೆಸ್ ಸರ್ಕಾರದ 60% ಕಮಿಷನ್‌ಗೆ ಸಾಕ್ಷಿ – ಜೆಡಿಎಸ್ ಕಿಡಿ

    ಉದ್ಯಮಿಗೆ ರೌಡಿಶೀಟರ್ ರಾಜೇಶ್ @ ಅಪ್ಪಿ ಪರಿಚಯವಿದ್ದ. ಒಂದು ವರ್ಷದ ಹಿಂದೆ ನಿರ್ದೇಶಕ ನಂದಕಿಶೋರ್‌ಗೆ ರೌಡಿ ರಾಜೇಶ್ ಸಾಲ ಕೊಡಿಸಿದ್ದ. ಮನೋಜ್‌ನಿಂದ ನಂದಕಿಶೋರ್‌ಗೆ 1.20 ಲಕ್ಷ ಸಾಲ ಕೊಡಿಸಿದ್ದ. ನಿರ್ದೇಶಕನಿಂದ ಅಸಲು ಮತ್ತು ಬಡ್ಡಿ ಬರದೇ ಮನೋಜ್ ನೊಂದಿದ್ದ.

    ಹಣ ಕೊಡಿಸಿದ್ದು ನೀನೆ, ಸಾಲ ವಾಪಸ್ ಕೊಡಿಸು ಅಂತಾ ರೌಡಿ ರಾಜೇಶನ ಬೆನ್ನು ಬಿದ್ದಿದ್ದ. ಗೌರಿ ಹಬ್ಬದ ದಿನ ನಂದಕಿಶೋರ್ ಮನೆ ಬಳಿ ಬಾ ಹಣ ಕೊಡಿಸ್ತೀನಿ ಅಂತಾ ಮನೋಜ್‌ನ ರೌಡಿಶೀಟರ್ ಕರೆಸಿದ್ದ. ಹಣ ಕೊಡಿಸೋದಾಗಿ ಕರೆಸಿ ಬಸವೇಶ್ವರನಗರದ ನಂದಕಿಶೋರ್ ಹಳೆಯ ಅಪಾರ್ಟ್ಮೆಂಟ್ ಬಳಿಯಿಂದ ಕಿಡ್ನ್ಯಾಪ್ ಮಾಡಿಸಿದ್ದಾನೆ. ಇದನ್ನೂ ಓದಿ: ಅಮೆರಿಕದಲ್ಲಿ ಭೀಕರ ಅಪಘಾತ – ಕೋಲಾರ ಮೂಲದ ಬಾಡಿ ಬಿಲ್ಡರ್ ದುರ್ಮರಣ

    ರೌಡಿಗಳಾದ ರಾಜೇಶ್, ಬೇಕರಿ ರಘು, ಅಣ್ಣ ಸೀನ @ ಶ್ರೀನಿವಾಸ್, ಲೋಕಿ, ಸೋಮ, ರಾಜೇಶ್ ಮತ್ತು ನವೀನ್ ಸೇರಿಕೊಂಡು ಕಿಡ್ನ್ಯಾಪ್ ಮಾಡಿದ್ದರು. ಅಪಹರಣ ಮಾಡಿ 3 ಲಕ್ಷ ಹಣ ವರ್ಗಾವಣೆ ಮಾಡಿಸಿಕೊಂಡಿದ್ದರು. ಅಲ್ಲದೇ, 10 ಲಕ್ಷ ನೀಡದಿದ್ರೆ ಮನೋಜ್ ಕುಟುಂಬಸ್ಥರ ಕೊಲೆ ಮಾಡೋದಾಗಿ ಬೆದರಿಕೆ ಹಾಕಿದ್ದಾರೆ.

    ಹಣ ಹೊಂದಿಸುವುದಾಗಿ ಹೇಳಿ ಬಿಡಿಸಿಕೊಂಡು ಬಂದು ಮನೋಜ್ ದೂರು ನೀಡಿದ್ದಾರೆ. ಮನೋಜ್ ದೂರಿನ ಆಧಾರದ ಸಿಸಿಬಿಯಿಂದ 6 ರೌಡಿಗಳ ಬಂಧನವಾಗಿದೆ.

  • `ಸುದೀಪ್ ಸರ್ ನನ್ನ ದೇವರು’..ಅವ್ರೇನ್ ಮಾಡ್ತಾರೆ – ನಂದಕಿಶೋರ್ ವಿರುದ್ಧ ದೂರು ಕೊಟ್ಟ ಶಬರೀಶ್ ಮಾತು

    `ಸುದೀಪ್ ಸರ್ ನನ್ನ ದೇವರು’..ಅವ್ರೇನ್ ಮಾಡ್ತಾರೆ – ನಂದಕಿಶೋರ್ ವಿರುದ್ಧ ದೂರು ಕೊಟ್ಟ ಶಬರೀಶ್ ಮಾತು

    ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಫಿಲ್ಮ್ ಚೇಂಬರ್‌ಗೆ ನಟ ಶಬರೀಶ್ ಶೆಟ್ಟಿ ದೂರು ನೀಡಿದ್ದಾರೆ. ಹಲವು ದಾಖಲೆಗಳನ್ನೊಳಗೊಂಡ ಪ್ರತಿ ಸಮೇತ ಅಧ್ಯಕ್ಷ ನರಸಿಂಹಲು ಬಳಿ ದೂರುಪತ್ರ ನೀಡಿದ್ದಾರೆ ಯುವ ನಟ ಶಬರೀಶ್.

    ನಿರ್ದೇಶಕ ನಂದಕಿಶೋರ್ ಯುವನಟನಿಗೆ 22 ಲಕ್ಷ ಹಣ ವಂಚನೆ ಮಾಡಿರುವ ಪ್ರಕರಣ ಇದಾಗಿದ್ದು, ದೂರು ಸ್ವೀಕರಿಸಿದ ಫಿಲ್ಮ್ ಚೇಂಬರ್ ನಿರ್ದೇಶಕ, ನಂದಕಿಶೋರ್‌ರನ್ನು ಚೇಂಬರ್‌ಗೆ ಕರೆಸಿ ವಿಚಾರಣೆ ನಡೆಸೋದಾಗಿ ತಿಳಿಸಿದ್ದಾರೆ.ಇದನ್ನೂ ಓದಿ: ಗಂಭೀರ ಸಮಸ್ಯೆಯಿಂದ ಬಳಲುತ್ತಿದ್ದಾರೆ ನಟ ಸಲ್ಮಾನ್ ಖಾನ್

    ಶಬರೀಶ್‌ಗೆ ಸುದೀಪ್ ಅವರ ಪರಿಚಯ ಮಾಡಿಸೋದು, ಅವರ ಕ್ಯಾಪ್ಟನ್‌ಶಿಪ್‌ನಲ್ಲಿ ನಡೆಯುವ ಸಿಸಿಎಲ್ ಕ್ರಿಕೆಟ್ ಮ್ಯಾಚ್‌ನಲ್ಲಿ ಅವಕಾಶ ಕೊಡಿಸೋದು, ತಮ್ಮ ನಿರ್ದೇಶನದ ಚಿತ್ರಗಳಲ್ಲಿ ಚಾನ್ಸ್ ಕೊಡಿಸೋದಾಗಿ ಭರವಸೆ ಕೊಡುತ್ತಾ ಬಂದಿದ್ದರಂತೆ ನಂದಕಿಶೋರ್. ಹಣ ಕೇಳ್ದಾಗೆಲ್ಲ ತಪ್ಪಿಸಿಕೊಳ್ಳುತ್ತಾ ಬಂದಿದ್ದರಂತೆ. ಹಿಂದೊಮ್ಮೆ ಕಿಚ್ಚ ಸುದೀಪ್‌ರನ್ನ ಭೇಟಿ ಮಾಡಿಸಿ ವಿಶ್ವಾಸ ಮೂಡಿಸಿದ್ದ ನಂದಕಿಶೋರ್ ಬಳಿಕ ತಮ್ಮನ್ನು ಯಾಮಾರಿಸಿದ್ದಾರೆ ಎಂದು ʻಪಬ್ಲಿಕ್ ಟಿವಿʼಗೆ ಶಬರೀಶ್ ತಿಳಿಸಿದ್ದಾರೆ.

    ಶಬರೀಶ್ ಹೇಳೋದೇನು ?
    ಕಿಚ್ಚ ಸುದೀಪ್ ಅವರ ದೊಡ್ಡ ಅಭಿಮಾನಿ ನಾನು, ಬಹುಶಃ ಈಗ ಅವರಿಗೆ ವಿಷಯ ತಿಳಿದಿರುತ್ತೆ. ಅವರನ್ನ ಮೊದಲು ಭೇಟಿ ಮಾಡಿಸಿ ವಿಶ್ವಾಸ ಗಳಿಸಿದ್ದ ನಂದಕಿಶೋರ್ ಅವರು ಬಳಿಕ ಅವರನ್ನ ಪರಿಚಯ ಮಾಡಿಸಿಕೊಡೋದಾಗಿ ಹೇಳಿ. ಹಣ ಪೀಕುತ್ತಾ ಬಂದಿದ್ರು. ಸುದೀಪ್ ಸರ್ ನನ್ನ ಪಾಲಿನ ದೇವರು, ಅವರ ಬಳಿ ಹೋಗಿ ಕಂಪ್ಲೇಟ್ ಮಾಡುವಷ್ಟು ಸಂಪರ್ಕ ಇಂಡಸ್ಟ್ರೀಯಲ್ಲಿ ನನಗಿಲ್ಲ. ಅವರಿಗೆ ಗೊತ್ತಾದ್ರೂ ಅವ್ರೇನ್ ಮಾಡ್ತಾರೆ ಪಾಪ. ಅವರಿಗೂ ಈ ಪ್ರಕರಣಕ್ಕೂ ಏನೂ ಸಂಬಂಧ ಇಲ್ಲ. ಈಗ ಸಿನಿಮಾ ರಿಲೀಸ್ ಮಾಡುವುದಕ್ಕೂ ನನ್ನ ಬಳಿ ದುಡ್ಡಿಲ್ಲ. ಹೀಗಾಗೇ ದೂರು ಕೊಡಲು ಮುಂದಾಗಿದ್ದೇನೆ. ಫಿಲ್ಮ್ ಚೇಂಬರ್‌ನಲ್ಲಿ ನನ್ನ ಸಮಸ್ಯೆ ಬಗೆಹರಿಯುವ ವಿಶ್ವಾಸವಿದೆ. ಸಮಸ್ಯೆ ಬಗೆಹರಿಯದಿದ್ದರೆ ಕಾನೂನು ಹೋರಾಟ ಮಾಡ್ತೀನಿ ಎಂದು ʻಪಬ್ಲಿಕ್ ಟಿವಿʼಗೆ ಶಬರೀಶ್ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದಾರೆ.ಇದನ್ನೂ ಓದಿ: ಸರ್ದಾರ್ ಜಿ 3 ಸಿನಿಮಾ ವಿರುದ್ಧ ಭುಗಿಲೆದ್ದ ಆಕ್ರೋಶ

  • ದರ್ಶನ್‌ಗೆ ಜಾಮೀನು ಸಿಕ್ಕಿದ್ದು ಖುಷಿ ಆಯ್ತು: ನಂದ ಕಿಶೋರ್

    ದರ್ಶನ್‌ಗೆ ಜಾಮೀನು ಸಿಕ್ಕಿದ್ದು ಖುಷಿ ಆಯ್ತು: ನಂದ ಕಿಶೋರ್

    ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ದರ್ಶನ್‌ಗೆ (Darshan) 5 ತಿಂಗಳ ನಂತರ ಜಾಮೀನು (Bail) ಸಿಕ್ಕಿರೋದು ಫ್ಯಾನ್ಸ್ ಸಂಭ್ರಮಿಸುತ್ತಿದ್ದಾರೆ. ಈ ಕುರಿತು ನಟನ ಆಪ್ತ ‌’ಪೊಗರು’ ಚಿತ್ರದ ಡೈರೆಕ್ಟರ್ ನಂದ ಕಿಶೋರ್ (Nanda Kishore) ಪ್ರತಿಕ್ರಿಯಿಸಿ, ದರ್ಶನ್‌ಗೆ ಜಾಮೀನು ಸಿಕ್ಕಿದ್ದು, ಖುಷಿ ಆಯ್ತು ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ:5 ತಿಂಗಳ ಬಳಿಕ ದರ್ಶನ್ ರಿಲೀಸ್ – ಹೈಕೋರ್ಟ್‌ನಿಂದ 6 ವಾರಗಳ ಜಾಮೀನು ಮಂಜೂರು

    ಎಲ್ಲರಿಗೂ ನಮಸ್ಕಾರ ಒಂದು ಸಂತೋಷದ ಸುದ್ದಿ ಅಂತಲೇ ಹೇಳಬಹುದು. ನಾನು ದೇವಸ್ಥಾನದಲ್ಲಿದ್ದೆ ಈಗ ಗೊತ್ತಾಯ್ತು. ದರ್ಶನ್‌ಗೆ ಮಧ್ಯಂತರ ಜಾಮೀನು ಸಿಕ್ಕಿದೆ ತುಂಬಾ ತುಂಬಾ ಸಂತೋಷ ಆಯಿತು. ಅವರಿಗೆ, ಅವರ ಕುಟುಂಬಸ್ಥರಿಗೆ ಆಯಸ್ಸು, ಆರೋಗ್ಯ ಕೊಟ್ಟು ಕಾಪಾಡಲಿ. ಕನ್ನಡ ಚಿತ್ರರಂಗದಲ್ಲಿ ಮತ್ತೆ ಸಂಭ್ರಮ ಮನೆ ಮಾಡುತ್ತದೆ. ಎಲ್ಲರಿಗೂ ಹ್ಯಾಪಿ ದೀಪಾವಳಿ ಎಂದು ನಂದ ಕಿಶೋರ್ ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿದ್ದಾರೆ.

    ಅಂದಹಾಗೆ, ರೇಣುಕಾಸ್ವಾಮಿ ಕೊಲೆ (Renukaswamy Murder Case) ಪ್ರಕರಣದಲ್ಲಿ ಆರೋಪಿ ದರ್ಶನ್‌ರನ್ನು ಜೂನ್ 11ರಂದು ಬಂಧಿಸಿದ್ದು, ಬಳ್ಳಾರಿ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

  • ಎಐ ಟೆಕ್ನಾಲಜಿ ಬಂದಿರೋದ್ರಿಂದ ಫೋಟೋ ಮಾರ್ಫಿಂಗ್ ಮಾಡಿರಬಹುದು: ಡೈರೆಕ್ಟರ್ ನಂದ ಕಿಶೋರ್

    ಎಐ ಟೆಕ್ನಾಲಜಿ ಬಂದಿರೋದ್ರಿಂದ ಫೋಟೋ ಮಾರ್ಫಿಂಗ್ ಮಾಡಿರಬಹುದು: ಡೈರೆಕ್ಟರ್ ನಂದ ಕಿಶೋರ್

    ರಪ್ಪನ ಅಗ್ರಹಾರದಲ್ಲಿರುವ ದರ್ಶನ್‌ಗೆ (Darshan) ರಾಜಾತಿಥ್ಯ ಸಿಗುತ್ತಿದೆ ಅಂತ ಫೋಟೋವೊಂದು ಭಾರೀ ಚರ್ಚೆ ಹುಟ್ಟು ಹಾಕಿದ ಬೆನ್ನಲ್ಲೇ ನಿರ್ದೇಶಕ ನಂದ ಕಿಶೋರ್ ಮಾತನಾಡಿದ್ದಾರೆ. ಎಐ ಟೆಕ್ನಾಲಜಿ ಬಂದಿರೋದ್ರಿಂದ ಫೋಟೋ ಮಾರ್ಫಿಂಗ್ ಮಾಡಿರಬಹುದು ಎಂದು ‘ಪೊಗರು’ ಡೈರೆಕ್ಟರ್ ನಂದ ಕಿಶೋರ್ (Nanda Kishore) ಮಾತನಾಡಿದ್ದಾರೆ.

    ಎಐ ಟೆಕ್ನಾಲಜಿ ಬಂದಿರೋದ್ರಿಂದ ಯಾವ ಫೋಟೋನಾ ಹೇಗೆ ಬೇಕಾದರೂ ಮಾರ್ಪಿಂಗ್ ಮಾಡಬಹುದು. ಇನ್ನೂ ಪೊಲೀಸ್ ಇಲಾಖೆ ತುಂಬಾ ನಿಷ್ಠೆಯಿಂದ ಕೆಲಸ ಮಾಡುತ್ತಿದೆ. ಹಾಗಾಗಿ ಜೈಲಿನಲ್ಲಿ ಹೀಗೆ ಆಗ್ತಿದೆ ಅಂತ ನನಗೆ ಅನಿಸುತ್ತಿಲ್ಲ. ಬೇರೆ ಯಾವುದು ಫೋಟೋನೂ ವೈರಲ್ ಆಗಿಲ್ಲ. ಆದರೆ ಇದೇ ಫೋಟೋ ಎಲ್ಲಾ ಕಡೆ ವೈರಲ್ ಆಗ್ತಿದೆ ಅಂದರೆ ಏನಿದರ ಉದ್ದೇಶ ಎಂದು ಮಾತನಾಡಿದ್ದಾರೆ. ಈ ವಿಚಾರವಾಗಿ ಗೃಹಮಂತ್ರಿ ಪರಮೇಶ್ವರ್ ಅವರ ನಿರ್ಧಾರವನ್ನು ಪ್ರಶ್ನೆ ಮಾಡೋಕೆ ಆಗಲ್ಲ. ಆದರೆ ಇನ್ನೂ ಈ ಬಗ್ಗೆ ತನಿಖೆ ಆಗುತ್ತಿದೆ. ಸತ್ಯ ಆಚೆ ಬರುತ್ತದೆ ಕಾದು ನೋಡೋಣ ಎಂದಿದ್ದಾರೆ ನಂದ ಕಿಶೋರ್.‌

    ಎಂತಹ ಮನುಷ್ಯನಾದರೂ ಪಶ್ಚಾತ್ತಾಪ ಇದ್ದೇ ಇರುತ್ತದೆ. ಟಿವಿ ಮುಂದೆ ಮಾಡಿದರೆ ಅದನ್ನು ಬೂಟಾಟಿಕೆ ಅಂತಾರೆ. ದರ್ಶನ್ ಅವರು ಪಶ್ಚಾತ್ತಾಪ ಪಡ್ತಿರೋದನ್ನ ಪೋಟೋ ತೆಗೆದಿಲ್ಲ. ಅವರ ಮುಂದೆ ಬಂದು ಮಗ ಅಪ್ಪಾಜಿ ಅನ್ನೋವಾಗ ಪಶ್ಚಾತ್ತಾಪ ಕಾಡಿರುತ್ತದೆ. ನಾವು ನಿಂತಿಕೊಂಡು ಜಡ್ಜ್ ಮಾಡೋಕೆ ಹೋಗಬಾರದು. ಇನ್ನೂ ವಿಲ್ಸನ್‌ ಗಾರ್ಡನ್‌ ನಾಗನ ಕುರಿತು ಎದುರಾದ ಪ್ರಶ್ನೆಗೆ, ಮನಪರಿವರ್ತನೆ ಆಗುವಂತ ಜಾಗದಲ್ಲಿ ಕ್ರೈಂ ಮಾಡಿದವರೇ ಇರುತ್ತಾರೆ ಅಲ್ವ. ಅಲ್ಲಿ ಸಾದು ಸಂತರು ಇರುತ್ತಾರಾ? ಎಂದು ಕೇಳಿದ್ದಾರೆ. ದೊಡ್ಡ ನಟ ದರ್ಶನ್ ಅವರ ಅಭಿಮಾನಿ ಇವರು ಆಗಿರಬಹುದು ಆ ಸಂದರ್ಭದಲ್ಲಿ ತೆಗೆದಿರಬಹುದು ಈ ಫೋಟೋ ಎಂದು ನಂದ ಕಿಶೋರ್ ಮಾತನಾಡಿದ್ದಾರೆ.

    ಇದೆಲ್ಲವನ್ನು ನಾವು ಕಣ್ಣಾರೆ ನೋಡಿಲ್ಲ. ಇದು ಇನ್ನೂ ತನಿಖೆ ನಡೆಯುತ್ತಿದೆ. ಇದು ಮಾರ್ಫ್ಡ್ ಫೋಟೋ ನೋ ನಿಜವಾದ ಫೋಟೋನೋ ಗೊತ್ತಿಲ್ಲ ಸದ್ಯ ತನಿಖೆ ನಡೆಯುತ್ತಿದೆ. ಎಷ್ಟು ಜನ ಕಲಾವಿದರು ಇಲ್ಲ ಅಂದರು ಅವರ ವಾಯ್ಸ್ ಬಳಸ್ತಿದ್ದೀವಿ ಎಂದು ನಂದಕಿಶೋರ್ ವೈರಲ್ ಫೋಟೋ ಕುರಿತು ಮಾತನಾಡಿದ್ದಾರೆ. ಇನ್ನೂ ಈ ವೇಳೆ, ರೇಣುಕಾಸ್ವಾಮಿ ಕುಟುಂಬದ ಬಗ್ಗೆ ನಮಗೆ ತುಂಬಾ ದುಃಖ ಇದೆ. ಇಡೀ ಚಿತ್ರರಂಗ ಅವತ ಕುಟುಂಬದ ಪರ ನಿಂತಿದೆ. ಪಶ್ಚಾತ್ತಾಪ ಎಲ್ಲರಿಗೂ ಕಾಡುತ್ತಿದೆ ಎಂದು ಮಾತನಾಡಿದ್ದಾರೆ.

  • ಬಾಲಿವುಡ್ ಸೂಪರ್ ಸ್ಟಾರ್ಸ್‌ಗೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ ನಂದ ಕಿಶೋರ್

    ಬಾಲಿವುಡ್ ಸೂಪರ್ ಸ್ಟಾರ್ಸ್‌ಗೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ ನಂದ ಕಿಶೋರ್

    ನ್ನಡ ಚಿತ್ರರಂಗದಲ್ಲಿ ಇದೀಗ ಸ್ಟಾರ್ ನಿರ್ದೇಶಕರಲ್ಲಿ ಒಬ್ಬರಾಗಿ ಗುರುತಿಸಿಕೊಂಡಿರುವ ನಂದ ಕಿಶೋರ್ ವೃತ್ತಿರಂಗದಲ್ಲಿ ಈಗ ಹೊಸ ಹೆಜ್ಜೆ ಇಟ್ಟಿದ್ದಾರೆ. ಗಾಂಧಿನಗರದಲ್ಲಿ ಸಾಲು ಸಾಲು ಸಿನಿಮಾಗಳ ಮೂಲಕ ವಿಕ್ಟರಿ ಬಾರಿಸುವ `ಪೊಗರು’ ನಿರ್ದೇಶಕ ಈಗ ಬಿಟೌನ್‌ನ ಸ್ಟಾರ್ಸ್‌ಗೆ ನಿರ್ದೇಶನ ಮಾಡಲು ಸಜ್ಜಾಗಿದ್ದಾರೆ.‌

    ಚಂದನವನದ ನಟ ನಟಿಯರು ಮಾತ್ರ ಈಗ ಪರಭಾಷೆಗಳಲ್ಲಿ ಸೌಂಡ್ ಮಾಡ್ತಿರೋದು ಮಾತ್ರವಲ್ಲ ನಿರ್ದೇಶಕರು ಕೂಡ ಪರಭಾಷೆಗಳಲ್ಲಿ ಗುರುತಿಸಿಕೊಳ್ತಿದ್ದಾರೆ. ಈ ಸಾಲಿಗೆ `ರನ್ನ’, `ಪೊಗರು’, `ಮುಕುಂದ ಮುರಾರಿ’ ಚಿತ್ರಗಳ ನಿರ್ದೇಶಕ ನಂದ ಕಿಶೋರ್ ಕೂಡ ಒಬ್ಬರು. ಬಾಲಿವುಡ್ ಮತ್ತು ಟಾಲಿವುಡ್ ಸ್ಟಾರ್‌ಗಳಾದ ಸಂಜಯ್ ದತ್ ಮತ್ತು ವರುಣ್ ತೇಜ್ ಒಂದೇ ಸಿನಿಮಾದಲ್ಲಿ ತೋರಿಸಲು ಪ್ಲ್ಯಾನ್ ಮಾಡಿದ್ದಾರೆ.

    `ಕೆಜಿಎಫ್ 2′ ನಂತರ ಸಿಕ್ಕಾಪಟ್ಟೆ ಡಿಮ್ಯಾಂಡ್‌ನಲ್ಲಿರುವ ಸಂಜಯ್ ದತ್‌ಗಾಗಿಯೇ ಸೂಪರ್ ಕಥೆಯೊಂದನ್ನ ನಂದ ಕಿಶೋರ್ ರೆಡಿ ಮಾಡಿದ್ದಾರೆ. ಸಂಜಯ್ ದತ್ ಕಥೆ ಕೇಳಿ ಥ್ರಿಲ್ ಆಗಿ, ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಈ ಚಿತ್ರದ ಪ್ರಮುಖ ಪಾತ್ರದಲ್ಲಿ ತೆಲುಗಿನ ಸ್ಟಾರ್ ವರುಣ್ ತೇಜ್ ಕೂಡ ಸಾಥ್ ನೀಡಿಲಿದ್ದಾರೆ. ಇದನ್ನೂ ಓದಿ:ಸೋದರ ಸೊಸೆ ತಾನ್ಯ ಸಾವಿನ ಕುರಿತು ದಿಯಾ ಮಿರ್ಜಾ ಭಾವುಕ

    ಇತ್ತೀಚೆಗಷ್ಟೇ ನಿರ್ದೇಶಕ ನಂದ ಕಿಶೋರ್ ಕೂಡ ಮುಂಬೈಗೆ ಹೋಗಿ ಬಂದಿದ್ದಾರೆ. ಈ ಇಬ್ಬರು ಸ್ಟಾರ್‌ಗಳಿಂದ ಕಥೆಗೆ ಓಕೆ ಅಂದಿದ್ದು ಆಗಿದೆ. ಇನ್ನೂ ಅಧಿಕೃತ ಅನೌನ್ಸ್ ಆಗೋದೊಂದೆ ಬಾಕಿ. ಅಲ್ಲಿಯವರೆಗೂ ಚಿತ್ರದ ಮತ್ತಷ್ಟು ಅಪ್‌ಡೇಟ್‌ಗಾಗಿ ಕಾದು ನೋಡಬೇಕಿದೆ.

    Live Tv
    [brid partner=56869869 player=32851 video=960834 autoplay=true]

  • ಸುದೀಪ್‌ಗೆ ಅವಹೇಳನ ಮಾಡಿದವನಿಗೆ ನಂದಕಿಶೋರ್ ತರಾಟೆ – ನೀನು ಗಂಡಸಾಗಿದ್ರೆ ಸಾಕ್ಷಿ ಸಮೇತ ಪ್ರೂವ್ ಮಾಡು ಎಂದ ನಿರ್ದೇಶಕ

    ಸುದೀಪ್‌ಗೆ ಅವಹೇಳನ ಮಾಡಿದವನಿಗೆ ನಂದಕಿಶೋರ್ ತರಾಟೆ – ನೀನು ಗಂಡಸಾಗಿದ್ರೆ ಸಾಕ್ಷಿ ಸಮೇತ ಪ್ರೂವ್ ಮಾಡು ಎಂದ ನಿರ್ದೇಶಕ

    ಸ್ಯಾಂಡಲ್‌ವುಡ್ ಮಾತ್ರವಲ್ಲ ಸದ್ಯ ದೇಶದ ಮೂಲೆ ಮೂಲೆಗಳಲ್ಲೂ ಕಿಚ್ಚ ಸುದೀಪ್ ಅವರದ್ದೇ ಹವಾ ಶುರುವಾಗಿದೆ. ಬಹುನಿರೀಕ್ಷಿತ ಚಿತ್ರವಾದ `ವಿಕ್ರಾಂತ್ ರೋಣ’ ಸಿನಿ ಪ್ರಚಾರದಲ್ಲಿ ಕಿಚ್ಚ ಸುದೀಪ್ ಫುಲ್ ಬ್ಯೂಸಿಯಾಗಿದ್ದಾರೆ. ಪ್ರಚಾರದ ನಡುವೆಯೂ ಅವರು ತಮ್ಮ ಕೈಲಾದ ಸಹಾಯ ಮಾಡ್ತಿದ್ದಾರೆ.

    ಆದ್ರೆ ಯುವಕನೊಬ್ಬ ಕಿಚ್ಚ ಸುದೀಪ್ ಬಗ್ಗೆ ವೀಡಿಯೋ ಮೂಲಕ ಅವಹೇಳನಕಾರಿ ಹೇಳಿಕೆ ನೀಡಿದ್ದಾನೆ. ಸುದೀಪ್ ಅವರು ನೀಡಿದ ಖಾಸಗಿ ಜಾಹೀರಾತಿನಿಂದಾಗಿ ಯುವಕನೊಬ್ಬ ಹಣ ಕಳೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಹೇಳಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಈ ಕುರಿತ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾನೆ. ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಸುದೀಪ್ ಅಭಿಮಾನಿಗಳು ಮಾತ್ರವಲ್ಲದೇ ಕನ್ನಡ ಚಿತ್ರರಂಗದಿಂದಲೂ ಭಾರೀ ಆಕ್ರೋಶ ವ್ಯಕ್ತವಾಗಿದೆ.

    ಈ ಬೆನ್ನಲ್ಲೇ ನಿರ್ದೇಶಕ ನಂದಕಿಶೋರ್, ಅವಹೇಳನಕಾರಿ ವೀಡಿಯೋ ಕುರಿತು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕನ್ನಡ ಚಿತ್ರರಂಗದ ಕಲಾವಿದರ ಬಗ್ಗೆ ಮಾತನಾಡುವಾಗ ಎಚ್ಚರಿಕೆ ಇರಬೇಕು ಎಂದಿದ್ದಾರೆ. ಇದನ್ನೂ ಓದಿ: ವಿಜಯ್ ದೇವರಕೊಂಡ ಅರೆ ನಗ್ನ ಫೋಟೋ ನೋಡಿ ರಶ್ಮಿಕಾ ಹೇಳಿದ್ದು ಹೀಗೆ

    ಕನ್ನಡ ಕಲಾಭಿಮಾನಿಗಳೇ ನಮ್ಮ ತಂದೆ-ತಾಯಿ. ಇಲ್ಲಿ ಸುದೀಪ್, ಪುನೀತ್ ರಾಜ್‌ಕುಮಾರ್ ಸೇರಿದಂತೆ ಇತರ ಧೀಮಂತ ನಟರು ತಮ್ಮದೇ ಚೌಕಟ್ಟಿನಲ್ಲಿ ಸಹಾಯ ಮಾಡಿದ್ದಾರೆ. ಕೆಲವರು ಅಭಿಮಾನಿಗಳನ್ನೇ ದೇವರೆಂದು ತಲೆಯ ಮೇಲೆ ಹೊತ್ಕೊಂಡು ಮೆರೆದವರೂ ಇದ್ದಾರೆ. ಇಡೀ ಭಾರತವೇ ಕನ್ನಡ ಚಿತ್ರರಂಗದತ್ತ ತಿರುಗಿ ನೋಡುತ್ತಿದೆ. ಅದಕ್ಕೆ ಮೇರು ನಟರೇ ಕಾರಣ. ಅಂಥವರ ಬಗ್ಗೆ ಯಾರೋ ಮನಸ್ಸಿಗೆ ಬಂದಂತೆ ಮಾತನಾಡುತ್ತಾರೆ. ಇದೆಲ್ಲವೂ ಒಳ್ಳೆಯ ಬೆಳವಣಿಗೆಯಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಮೊದಲ ಮಗುವಿನ ನಿರೀಕ್ಷೆಯಲ್ಲಿ `ಮಹಾದೇವಿ’ ಖ್ಯಾತಿಯ ಮಾನಸಾ ಜೋಷಿ

    ವೀಡಿಯೋ ಮಾಡಿರುವ ಯುವಕನ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ನಂದ ಕಿಶೋರ್, ಸುದೀಪ್ ಅವರಿಂದ ಯುವಕ ಆತ್ಮಹತ್ಯೆ ಮಾಡ್ಕೊಂಡ ಅಂತ ನಿನ್ನಿಂದ ಸಾಬೀತು ಮಾಡಲು ಸಾಧ್ಯನಾ? ಆತ್ಮಹತ್ಯೆಗೆ ಸುದೀಪ್ ಕಾರಣ ಅಂತಾ ಮನೆಯವರು ದೂರು ಕೊಟ್ಟಿದ್ದಾರಾ? ನಿನ್ನ ಬಳಿ ಸಾಕ್ಷ್ಯಾಧಾರವಿದ್ದರೆ ಕಾನೂನು ಬದ್ಧವಾಗಿ ಕೋರ್ಟ್ನಲ್ಲಿ ಹೋರಾಡು ಅಥವಾ ಕನ್ನಡ ಚಲನಚಿತ್ರ ಮಂಡಳಿಯಲ್ಲಿ ದೂರು ಕೊಡು. ಅದನ್ನು ಬಿಟ್ಟು ಹಾದಿಬೀದಿಯಲ್ಲಿ ನಿಂತು ಮಾತನಾಡಬಾರದು. ಕನ್ನಡ ಮೇರು ನಟರಿಗೆ, ಕಲಾಭಿಮಾನಿಗಳ ಬಗ್ಗೆ ಹೀನ ಪದ ಬಳಸುವುದರಿಂದಲೇ ಗೊತ್ತಾಗುತ್ತೆ ನಿನ್ನ ಸಂಸ್ಕೃತಿ. ನಿನ್ನ ಪ್ರಚಾರಕ್ಕಾಗಿ ಸುದೀಪ್ ಅವರ ಹೆಸರು ಬಳಸಿಕೊಳ್ಳುತ್ತಿದ್ದೀಯಾ? ನೀನು ನಪುಂಸಕ ಅಲ್ಲದೇ ಇದ್ದಿದ್ರೆ ಫೋನ್ ಸ್ವಿಚ್ ಆಫ್ ಮಾಡಿಕೊಳ್ಳುತ್ತಿರಲಿಲ್ಲ. ನೀನು ಗಂಡಸಾಗಿದ್ದರೆ ಸಾಬೀತು ಮಾಡು ಎಂದು ಸವಾಲು ಹಾಕಿದ್ದಾರೆ.‌

    ಕನ್ನಡ ಚಿತ್ರರಂಗದ ಕಲಾವಿದರು ಅಭಿಮಾನಿಗಳ ಮನೆ ಮಕ್ಕಳು. ಅವರನ್ನು ಬೇರ್ಪಡಿಸಬೇಡಿ. ಡಾ.ರಾಜ್‌ಕುಮಾರ್ ಅವರು ಅಭಿಮಾನಿಗಳನ್ನೇ ದೇವರು ಅಂತ ಕರೆದಿದ್ದಾರೆ. ಬೇರೆ ಯಾರಾದ್ರು ಮಾತನಾಡಿದ್ರೆ ನೀವೇ ನಮ್ಮನ್ನ ರಕ್ಷಣೆ ಮಾಡಬೇಕು. ಏಕೆಂದರೆ ನಾವು ಬೆಳೆಯೋದು ಅಭಿಮಾನಿಗಳಿಂದಲೇ ಎಂದು ಮನವಿ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕಿಚ್ಚ ಸುದೀಪ್ ಅವರ ಕೈರುಚಿ ತಿಂದು ಹೊಗಳಿದ ಡಾಲಿ ಧನಂಜಯ್

    ಕಿಚ್ಚ ಸುದೀಪ್ ಅವರ ಕೈರುಚಿ ತಿಂದು ಹೊಗಳಿದ ಡಾಲಿ ಧನಂಜಯ್

    ಕಿಚ್ಚ ಸುದೀಪ್ ಅವರು ಕಿಚನ್ ನಲ್ಲಿ ತಯಾರಾದ ಅಡುಗೆಯನ್ನು ಹೊಗಳದವರೇ ಇಲ್ಲ. ಅದರಲ್ಲೂ ಸ್ವತ ಸುದೀಪ್ ಅವರೇ ತಮ್ಮ ಕೈಯಾರ ಅಡುಗೆ ಮಾಡಿ ಬಡಿಸುತ್ತಾರೆ. ಆ ರುಚಿಯನ್ನು ಬಲ್ಲವರೇ ಬಲ್ಲರು. ಅವರ ಕಿಚನ್ ಕೂಡ ಹಾಗೆಯೇ ಇದೆ. ದೇಶ ವಿದೇಶಗಳ ಅಡುಗೆ ಪಾತ್ರೆಗಳನ್ನು ಅದು ಹೊಂದಿದೆ. ಹಾಗಾಗಿ ಕೇವಲ ದೇಶಿ ಆಹಾರ ಮಾತ್ರ ಅಲ್ಲಿ ಬೇಯುವುದಿಲ್ಲ. ವಿದೇಶ ಅಡುಗೆಗಳೂ ತಯಾರಾಗುತ್ತವೆ. ಇದನ್ನೂ ಓದಿ : ಮಂದಣ್ಣಗಾಗಿ ಮುಂಬೈನಲ್ಲಿ ಮುಗಿಬಿದ್ದ ಫ್ಯಾನ್ಸ್ : ಬಾಲಿವುಡ್ ನಲ್ಲೂ ರಶ್ಮಿಕಾ ಹವಾ

    ಹಾಗಂತ ಕಿಚ್ಚ ಸುದೀಪ್ ಅಡುಗೆ ಮಾಡುವುದನ್ನು ಯಾವತ್ತೂ ನಿಲ್ಲಿಸಿಲ್ಲ. ಯಾವುದೇ ದೇಶಕ್ಕೆ ಹೋಗಲಿ ಉಳಿದುಕೊಂಡ ಹೋಟೆಲ್ ನ ಕಿಚನ್ ಗೆ ಭೇಟಿ ಮಾಡದೇ ಬರುವುದಿಲ್ಲವಂತೆ. ಅಡುಗೆ ಕೋಣೆ ಹೊಕ್ಕು, ಅಲ್ಲಿ ತಯಾರಾದ ವಿಶೇಷ ಭಕ್ಷ್ಯಗಳನ್ನು ನೋಡಿ, ಅದನ್ನು ತಯಾರು ಮಾಡುವ ರೀತಿ ತಿಳಿದುಕೊಳ್ಳುತ್ತಾರಂತೆ. ಅದನ್ನು ಟ್ರೈ ಕೂಡ ಮಾಡುತ್ತಾರೆ. ಹಾಗಾಗಿ ವಿವಿಧ ಬಗೆಯ ಅಡುಗೆಗಳು ಅವರಿಗೆ ಬರುತ್ತವೆ. ಇದನ್ನೂ ಓದಿ : ಬಾಲಿವುಡ್ ಎಂದರೆ ಭಾರತೀಯ ಸಿನಿಮಾರಂಗವಲ್ಲ: ಮೆಗಾಸ್ಟಾರ್ ಚಿರಂಜೀವಿಗೂ ಆಗಿತ್ತು ಅವಮಾನ

    ನಿನ್ನೆಯಷ್ಟೇ ಡಾಲಿ ಧನಂಜಯ್ ಅವರು ಸುದೀಪ್ ಮನೆಗೆ ಹೋಗಿದ್ದಾರೆ. ಇವರ ಜತೆ ನಿರ್ದೇಶಕ ನಂದ ಕಿಶೋರ್, ಸಂಗೀತ ನಿರ್ದೇಶಕ ಕಂ ಗಾಯಕ ವಾಸುಕಿ ವೈಭವ್, ಕಲಾ ನಿರ್ದೇಶಕ ಶಿವಕುಮಾರ್ ಮತ್ತು ನಿರ್ಮಾಪಕ ಜಾಕ್ ಮಂಜು ಕೂಡ ಇದ್ದಾರೆ. ಇವರೆಲ್ಲರೂ ಕಿಚ್ಚ ಸುದೀಪ್ ಅವರೇ ಅಡುಗೆ ತಯಾರಿಸಿ ಹೊಟ್ಟೆ ತುಂಬಾ ಬಡಿಸಿದ್ದಾರೆ. ಇದನ್ನೂ ಓದಿ : ಕೆಜಿಎಫ್ 2 : ಗೋವಾದಲ್ಲಿ ಸಕ್ಸಸ್ ಪಾರ್ಟಿ

    ಕಿಚ್ಚನ ಕೈ ರುಚಿ ಅನುಭವಿಸಿದ ಡಾಲಿ ಧನಂಜಯ್ ತಮ್ಮ ಟ್ವಿಟರ್ ಖಾತೆಯಲ್ಲಿ ಅದನ್ನು ಬರೆದುಕೊಂಡಿದ್ದಾರೆ. ಅಡುಗೆಯ ಬಗ್ಗೆ ಹಾಡಿ ಹೊಗಳಿದ್ದಾರೆ. ಅದಕ್ಕೆ ಸಂಗೀತ ನಿರ್ದೇಶಕ ವಾಸಕಿ ವೈಭವ್ ಕೂಡ ಅನುಮೋದಿಸಿದ್ದಾರೆ. ಈ ಟ್ವಿಟ್ ಗೆ ಅನೇಕರು ಮೆಚ್ಚಿ ತಮ್ಮ ಅಭಿಪ್ರಾಯವನ್ನು ವ್ಯಕ್ತ ಪಡಿಸಿದ್ದಾರೆ.

  • ಕೆ.ಮಂಜು ಪುತ್ರ ಶ್ರೇಯಸ್ ನಟನೆಯ ಹೊಸ ಚಿತ್ರದ ಟೈಟಲ್ ಲಾಂಚ್

    ಕೆ.ಮಂಜು ಪುತ್ರ ಶ್ರೇಯಸ್ ನಟನೆಯ ಹೊಸ ಚಿತ್ರದ ಟೈಟಲ್ ಲಾಂಚ್

    ಬೆಂಗಳೂರು: ಕೊರೊನಾ ಎರಡನೇ ಅಲೆಯಿಂದ ಸಂಕಷ್ಟಕ್ಕೆ ಒಳಗಾಗಿದ್ದ ಕನ್ನಡ ಚಿತ್ರೋದ್ಯಮದ ಚಟುವಟಿಕೆಗಳು ಅನ್ ಲಾಕ್ ಬಳಿಕ ನಿಧಾನಗತಿಯಲ್ಲಿ ಗರಿಗೆದರುತ್ತಿವೆ. ಇಂದು ಬೆಳ್ಳಂಬೆಳಗ್ಗೆ ನಿರ್ಮಾಪಕ ಕೆ.ಮಂಜು ಪುತ್ರ ಶ್ರೇಯಸ್ ಮಂಜು ನಟನೆಯ ರಾಣ ಚಿತ್ರದ ಟೈಟಲ್ ಲಾಂಚ್ ಹಾಗೂ ಸ್ಕ್ರಿಪ್ಟ್ ಪೂಜೆ ಸರಳವಾಗಿ ನೇರವೇರಿದೆ.

    ರಾಜಾಜಿನಗರದ ವರಸಿದ್ದಿ ಗಣಪತಿ ದೇವಸ್ಥಾನದಲ್ಲಿ ಶುಭ ಮೂಹೂರ್ತದಲ್ಲಿ ಪೂಜೆ ಕೈಂಕರ್ಯಗಳು ನೇರವೇರಿದ್ದು, ವಿಘ್ನವಿನಾಶಕನ ಸನ್ನಿಧಿಯಲ್ಲಿ ಚಿತ್ರ ತಂಡ ಟೈಟಲ್ ಲಾಂಚ್ ಮಾಡಿದೆ. ಕಾರ್ಯಕ್ರಮದಲ್ಲಿ ನಿರ್ಮಾಪಕ ಕೆ.ಮಂಜು, ನಟಿ ಗ್ರೀಷ್ಮಾ ನಾಣಯ್ಯ, ನಿರ್ದೇಶಕ ನಂದಕಿಶೋರ್ ಸೇರಿದಂತೆ ಚಿತ್ರತಂಡ ಭಾಗಿಯಾಗಿತ್ತು. ಇದನ್ನೂ ಓದಿ: ನೀವು ಬೇಜಾರ್ ಮಾಡ್ಕೋಬೇಡಿ – ಗೇಮ್ ಪ್ಲ್ಯಾನ್ ಬಗ್ಗೆ ವೈಷ್ಣವಿ ಜೊತೆ ಅರವಿಂದ್ ಮಾತು

    ಪೊಗರು ಬಳಿಕ ರಾಣ ಸಿನಿಮಾಗೆ ನಂದಕಿಶೋರ್ ಆಕ್ಷನ್ ಕಟ್ ಹೇಳುತ್ತಿದ್ದು, ಚಂದನ್ ಶೆಟ್ಟಿ ಸಂಗೀತ ಸಂಯೋಜನೆ ಮಾಡಲಿದ್ದಾರೆ. ಪೊಗರು ಸಿನಿಮಾ ಬಳಿಕ ಮತ್ತೆ ರಾಣ ಚಿತ್ರದಲ್ಲಿ ಚಂದನ್ ಶೆಟ್ಟಿ ಹಾಗೂ ನಂದಕಿಶೋರ್  ಜೋಡಿ ಮೋಡಿ ಮಾಡಲು ರೆಡಿಯಾಗಿದೆ. ಇನ್ನು ರಾಣ ಚಿತ್ರದ ಮೂಲಕ ನಟ ಶ್ರೇಯಸ್ ಮಂಜು ಮೊದಲ ಬಾರಿಗೆ ಆಕ್ಷನ್ ಸಿನಿಮಾದಲ್ಲಿ ಮಿಂಚಲು ತಯಾರಿ ನಡೆಸಿದ್ದು, ಇದೇ ತಿಂಗಳ ಕೊನೆ ವಾರದಲ್ಲಿ ಚಿತ್ರದ ಶೂಟಿಂಗ್ ಪ್ರಾರಂಭವಾಗಲಿದೆ.

  • ರಿಮೇಕ್ ನಿರ್ದೇಶಕ ಎನ್ನುವವರಿಗೆ ಪೊಗರು ಸಿನಿಮಾ ತಕ್ಕ ಉತ್ತರ: ನಂದಕಿಶೋರ್

    ರಿಮೇಕ್ ನಿರ್ದೇಶಕ ಎನ್ನುವವರಿಗೆ ಪೊಗರು ಸಿನಿಮಾ ತಕ್ಕ ಉತ್ತರ: ನಂದಕಿಶೋರ್

    – ನಾಲ್ಕೂವರೆ ವರ್ಷದ ಪ್ರಾಮಾಣಿಕ ಪ್ರಯತ್ನವಿದು
    – ಆಡಿಕೊಳ್ಳುವವರಿಗೆ ಕೆಲಸದ ಮೂಲಕ ಉತ್ತರ

    ಬೆಂಗಳೂರು: ನನ್ನ ಮೊದಲ ಸಿನಿಮಾ ವಿಕ್ಟರಿ ಸ್ವಮೇಕ್, ಆದರೂ ಕೆಲವರು ರಿಮೇಕ್ ನಿರ್ದೇಶಕ ಎಂದು ಆಡಿಕೊಳ್ಳುತ್ತಿದ್ದಾರೆ. ಒಂದು ಸಿನಿಮಾ ಮಾಡಿದವರಿಗೆ ನೀಡುವ ಗೌರವವನ್ನೂ ನೀಡುತ್ತಿಲ್ಲ. ಹೀಗೆ ಆಡಿಕೊಳ್ಳುವವರಿಗೆ ಪೊಗರು ಸಿನಿಮಾ ತಕ್ಕ ಉತ್ತರ ಎಂದು ಪೊಗರು ನಿರ್ದೇಶಕ ನಂದಕಿಶೋರ್ ಹೇಳಿದ್ದಾರೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಈ ವರೆಗೆ ನಾನು 7 ಸಿನಿಮಾಗಳನ್ನು ಮಾಡಿದ್ದೇನೆ, ಇದರಲ್ಲಿ 5 ಬ್ಯಾಕ್ ಟು ಬ್ಯಾಕ್ ಹಿಟ್ ನೀಡಿದ್ದೇನೆ. ಅಧ್ಯಕ್ಷ, ರನ್ನ ಹೀಗೆ ಹಲವು ಹಿಟ್ ಸಿನಿಮಾಗಳನ್ನು ನೀಡಿದ್ದೇನೆ. ಆದರೂ ರೀಮೇಕ್ ಡೈಕ್ಟರ್, ಏನೂ ಬರಲ್ಲ ಎಂದು ಆಡಿಕೊಳ್ಳುತ್ತಿದ್ದಾರೆ. ನನ್ನ ಮೊದಲ ಸಿನಿಮಾನೇ ವಿಕ್ಟರಿ ಸ್ವಮೇಕ್ ಚಿತ್ರ. ಆದರೂ ಇಂದು ಒಂದು ಸಿನಿಮಾ ಮಾಡಿದವರಿಗೆ ನೀಡುವ ಗೌರವವನ್ನೂ ನಮಗೆ ನೀಡುವುದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

    ಪೊಗರು ಸಿನಿಮಾದ ಪ್ರತಿ ಶಾಟ್, ಪ್ರತಿ ಸೀನ್‍ನ್ನು ಸಹ ಸ್ವಂತಿಕೆ ಇಟ್ಟುಕೊಂಡು ಮಾಡಿದ್ದೇನೆ. ಈಗಲಾದರೂ ಆ ಗೌರವ ನನಗೆ ಸಿಗಬೇಕೆಂದು ಅಪೇಕ್ಷಿಸುತ್ತೇನೆ. ನಾಲ್ಕೂವರೆ ವರ್ಷದಿಂದ ಪ್ರಾಮಾಣಿಕ ಪ್ರಯತ್ನ ಮಾಡಿ ಸಿನಿಮಾ ಮಾಡಿದ್ದೇವೆ. ನಿರ್ಮಾಪಕರು, ನಟ ಧ್ರುವ ಸರ್ಜಾ ಹಾಗೂ ನಾನು ತುಂಬಾ ಕಷ್ಟ ಪಟ್ಟು ಸಿನಿಮಾ ಮಾಡಿದ್ದೇವೆ. ಈಗ ಜನಗಳನ್ನು ನೋಡಿ ಸಿನಿಮಾ ಚೆನ್ನಾಗಿದೆ ಅಂದರೆ ತಪ್ಪಾಗುತ್ತದೆ. ಸಿನಿಮಾ ಹೇಗಿದೆ ಎಂದು ಸಂಜೆ ವೇಳೆಗೆ ಪ್ರೇಕ್ಷಕರೇ ಹೇಳುತ್ತಾರೆ. ಬೇರೆ ರಾಜ್ಯಗಳಲ್ಲಿ ಸಹ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದರು.

    ಸಿನಿಮಾ ನೋಡಲು ಪ್ರೇಕ್ಷಕರ ಬಳಿ ಮನವಿ ಮಾಡಿದ್ದೆವು. ನಮ್ಮ ಮನವಿಗೆ ಸ್ಪಂದಿಸಿ ಇಷ್ಟೊಂದು ಜನ ಸೇರಿದ್ದಾರೆ. ಕಲಾಭಿಮಾನಿಗಳು ಕಲಾವಿದರನ್ನು ಯಾವತ್ತೂ ಕೈಬಿಡಲ್ಲ ಎನ್ನುವುದಕ್ಕೆ ಇದೊಂದು ಉದಾಹರಣೆ. ಸಿನಿಮಾ ಏನೇ ಸಕ್ಸಸ್ ಕಂಡರು ಅವರು ಹಾಕಿರುವ ಭಿಕ್ಷೆ ಅಷ್ಟೇ. ತುಂಬಾ ಪಾಸಿಟಿವ್ ಆಗಿ ಓಪನಿಂಗ್ ಬರುತ್ತಿದೆ. ಸಂಜೆ ವೇಳೆಗೆ ಎಲ್ಲ ಚಿತ್ರಣ ಸಿಗಲಿದೆ ಎಂದು ನಂದ ಕಿಶೋರ್ ಹೇಳಿದರು.

    ಪ್ರೇಕ್ಷಕರಿಗೆ ನಿರಾಸೆಯಂತೂ ಆಗಲ್ಲ, ಮನರಂಜನೆ ನೀಡೇ ನೀಡುತ್ತೆ ಎಂಬ ನಂಬಿಕೆ ಇದೆ. ಬ್ಯಾಕ್ ಟು ಬ್ಯಾಕ್ 5 ಹಿಟ್ ಸಿನಿಮಾ ಕೊಟ್ಟಿದ್ರೂ, ರಿಮೇಕ್ ಮಾಡ್ತಾನೆ ಅನ್ನೋ ಹೆಸರು ಕೊಡ್ತಾ ಇದ್ರು ಈ ಸಿನಿಮಾದಿಂದ ಅ ಹೆಸರು ಹೋಗಿ ಪಕ್ಕ ಸ್ವಮೇಕ್ ಅನ್ನೋದು ಗೊತ್ತಾಗುತ್ತೆ. ಆಡಿಕೊಳ್ಳುವವರಿಗೆ ಕೆಲಸದ ಮೂಲಕ ಉತ್ತರ ನೀಡಿದ್ದೇನೆ. ಎರಡೂ ತರದ ಸಿನಿಮಾ ಮಾಡಬಲ್ಲೆ ಎಂಬುದನ್ನು ತೋರಿಸಿಕೊಟ್ಟಿದ್ದೇನೆ ಎಂದು ತಿಳಿಸಿದರು.