Tag: Nandakishore

  • ನಿಖಿಲ್ ಕುಮಾರ್ ಸ್ವಾಮಿ ಹೊಸ ಸಿನಿಮಾಗೆ ‘ಮಾನ್ ಸ್ಟರ್’ ಟೈಟಲ್?

    ನಿಖಿಲ್ ಕುಮಾರ್ ಸ್ವಾಮಿ ಹೊಸ ಸಿನಿಮಾಗೆ ‘ಮಾನ್ ಸ್ಟರ್’ ಟೈಟಲ್?

    ದ್ಯ ರಾಜಕಾರಣದಲ್ಲಿ ಬ್ಯುಸಿಯಾಗಿರುವ ನಟ ನಿಖಿಲ್ ಕುಮಾರಸ್ವಾಮಿ, ವಿಧಾನಸಭಾ ಚುನಾವಣೆ ಮುಗಿಯುವ ತನಕ ಸಿನಿಮಾ ರಂಗದ ಬಗ್ಗೆ ಯೋಚನೆ ಕೂಡ ಮಾಡುವುದಿಲ್ಲ ಎನ್ನಲಾಗಿತ್ತು. ರಾಜ್ಯ ಸುತ್ತಿ ಸಂಘಟನೆ ಮಾಡುವ ಜವಾಬ್ದಾರಿಯನ್ನು ಅವರೂ ಹೊತ್ತುಕೊಂಡಿದ್ದರಿಂದ ಯದುವೀರ ಸಿನಿಮಾದ ಚಿತ್ರೀಕರಣದಲ್ಲಿ ಅವರು ಭಾಗಿ ಆಗುತ್ತಿಲ್ಲ ಎಂದೂ, ಹೀಗಾಗಿಯೇ ಯದುವೀರ ಸಿನಿಮಾ ಶುರುವಾಗಲಿಲ್ಲ ಎಂದು ಹೇಳಲಾಗುತ್ತಿತ್ತು. ಆದರೆ, ಅವರು ಮತ್ತೊಂದು ಸಿನಿಮಾ ಒಪ್ಪಿಕೊಂಡಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ.

    ಯದುವೀರ ಸಿನಿಮಾದ ಶೂಟಿಂಗ್ ಮುಂದೂಡಿದ್ದರಿಂದ, ನಿಖಿಲ್ ಹೊಸ ಸಿನಿಮಾವನ್ನು ಒಪ್ಪಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದ್ದು, ಈ ಚಿತ್ರಕ್ಕೆ ನಂದಕಿಶೋರ್ ನಿರ್ದೇಶಕರು. ನಂದಕಿಶೋರ್ ಮತ್ತು ನಿಖಿಲ್ ಕಾಂಬಿನೇಷನ್ ನಲ್ಲಿ ಸಿನಿಮಾವೊಂದು ಮೂಡಿ ಬರಲಿದೆ ಎನ್ನುವ ಸುದ್ದಿಯಿತ್ತು. ನಂದಕಿಶೋರ್ ಹೇಳಿದ್ದ ಕಥೆಯನ್ನು ನಿಖಿಲ್ ಒಪ್ಪಿಕೊಂಡಿದ್ದಾರೆ ಎಂದೂ ಹೇಳಲಾಗಿತ್ತು. ಅದೀಗ ನಿಜವಾದಂತೆ ಕಾಣುತ್ತಿದೆ. ಸದ್ಯದಲ್ಲೇ ಈ ಜೋಡಿಯ ಸಿನಿಮಾದ ಕುರಿತು ಹಲವು ಸಂಗತಿಗಳು ಬಹಿರಂಗವಾಗಲಿವೆಯಂತೆ. ಇದನ್ನೂ ಓದಿ:`ವಿಕ್ರಾಂತ್ ರೋಣ’ ಚಿತ್ರದ ನಂತರ ಹೊಸ ಸಿನಿಮಾಗೆ ಕಿಚ್ಚ ಸುದೀಪ್ ಗ್ರೀನ್ ಸಿಗ್ನಲ್

    ನಂದಕಿಶೋರ್ ಮತ್ತು ನಿಖಿಲ್ ಕಾಂಬಿನೇಷನ್ ಚಿತ್ರಕ್ಕೆ ಮಾನ್ ಸ್ಟರ್ ಎಂದು ಹೆಸರಿಡಲು ನಿರ್ಧರಿಸಿದ್ದಾರೆ ಎನ್ನಲಾಗುತ್ತಿದೆ. ಸದ್ದಿಲ್ಲದೇ ಪ್ರಿಪ್ರೊಡಕ್ಷನ್ ಕೆಲಸಗಳನ್ನೂ ಮಾಡಿ ಮುಗಿಸಿದ್ದಾರಂತೆ ನಿರ್ದೇಶಕರು. ಈಗಷ್ಟೇ ರಾಣಾ ಸಿನಿಮಾದ ಶೂಟಿಂಗ್ ಮುಗಿಸಿರುವ ನಂದಕಿಶೋರ್, ಇದೀಗ ಮಾನ್ ಸ್ಟರ್ ಸಿನಿಮಾದ ಕೆಲಸದಲ್ಲಿ ಬ್ಯುಸಿಯಾಗಿದ್ದಾರಂತೆ.

    Live Tv
    [brid partner=56869869 player=32851 video=960834 autoplay=true]

  • ದೃಶ್ಯಗಳಿಗೆ ಕತ್ತರಿ ಹಾಕಲು ಒಪ್ಪಿದ ಪೊಗರು ಟೀಮ್ – ನಂದಕಿಶೋರ್ ಕ್ಷಮೆಯಾಚನೆ

    ದೃಶ್ಯಗಳಿಗೆ ಕತ್ತರಿ ಹಾಕಲು ಒಪ್ಪಿದ ಪೊಗರು ಟೀಮ್ – ನಂದಕಿಶೋರ್ ಕ್ಷಮೆಯಾಚನೆ

    ಬೆಂಗಳೂರು: ಬ್ರಾಹ್ಮಣರಿಗೆ ಸಂಬಂಧಿಸಿದ ವಿವಾದಿತ ದೃಶ್ಯಗಳನ್ನು ಕತ್ತರಿಸಲು ಪೊಗರು ಟೀಮ್ ನಿರ್ಧರಿಸಿದ್ದು, ಸಿನಿಮಾ ನಿರ್ದೇಶಕ ನಂದಕಿಶೋರ್ ಸಹ ಈ ಬಗ್ಗೆ ಕ್ಷಮೆಯಾಚಿಸಿದ್ದಾರೆ.

    ಬ್ರಾಹ್ಮಣ ಸಮುದಾಯದವರ ಪ್ರತಿಭಟನೆ ಹಿನ್ನೆಲೆಯಲ್ಲಿ ಫಿಲ್ಮ್ ಚೇಂಬರ್ ನಲ್ಲಿ ಸಿನಿಮಾ ತಂಡ ಸುದ್ದಿಗೋಷ್ಠಿ ನಡೆಸಿ ಪೊಗರು ಚಿತ್ರದ ನಿರ್ದೇಶಕ ನಂದಕಿಶೋರ್ ಹಾಗೂ ನಿರ್ಮಾಪಕ ಬಿ.ಕೆ.ಗಂಗಾಧರ್ ಮಾತನಾಡಿದ್ದಾರೆ. ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಹೆಚ್.ಎಸ್.ಸಚ್ಚಿದಾನಂದ ಮೂರ್ತಿ ಅವರೊಂದಿಗೆ ಸಿನಿಮಾ ತಂಡದವರು ಅರವಿಂದ ಭವನದಲ್ಲಿ ನಡೆಸಿದ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಗಿದೆ.

    ಚಿತ್ರದಲ್ಲಿನ 12 ರಿಂದ 14 ದೃಶ್ಯಗಳನ್ನು ತೆಗೆಯಲು ಮಂಡಳಿ ಅಧ್ಯಕ್ಷರು ಸಭೆಯಲ್ಲಿ ಬೇಡಿಕೆ ಇಟ್ಟಿದ್ದರು. ಚಪ್ಪಲಿ ಕಾಲಿನಿಂದ ಜನಿವಾರ ಹಾಕಿರುವ ಬ್ರಾಹ್ಮಣನನ್ನು ಒದೆಯುವ ದೃಶ್ಯಗಳಿವೆ. ಆ ದೃಶ್ಯಗಳನ್ನು ತೆಗೆದು ಹಾಕಬೇಕು ಎಂದು ಸಭೆಯಲ್ಲಿ ಒತ್ತಾಯಿಸಲಾಯಿತು. ಆ ದೃಶ್ಯಗಳಿಗೆ ಕತ್ತರಿ ಹಾಕಲು ಪೊಗರು ಟೀಮ್ ಒಪ್ಪಿದ್ದು, ನಿರ್ದೇಶಕ ನಂದಕಿಶೋರ್ ಕ್ಷಮೆಯನ್ನು ಸಹ ಯಾಚಿಸಿದ್ದಾರೆ.

    ಪೊಗರು ಚಿತ್ರತಂಡ ಕ್ಷಮೆ ಕೇಳಿದರೆ ಸಾಲುವುದಿಲ್ಲ. ಬ್ರಾಹ್ಮಣರಿಗೆ ಅಪಮಾನದ ದೃಶ್ಯಗಳನ್ನು ತೆಗೆಯಲೇಬೇಕು ಎಂದು ಬ್ರಾಹ್ಮಣ ಸಮುದಾಯವರು ಆಗ್ರಹಿಸಿದ್ದರು. ಪೊಗರು ಚಿತ್ರದಲ್ಲಿ ಬ್ರಾಹ್ಮಣರಿಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ ಬ್ರಾಹ್ಮಣ ಸಮುದಾಯದವರು ಇಂದು ಚಲನಚಿತ್ರ ವಾಣಿಜ್ಯ ಮಂಡಳಿ ಮುಂದೆ ಪ್ರತಿಭಟಿಸಿದ್ದರು. ಈ ವೇಳೆ ನಿರ್ದೇಶಕ ನಂದಕಿಶೋರ್ ಕ್ಷಮೆ ಕೇಳಿದರೆ ಸಾಲುವುದಿಲ್ಲ. ಅವಮಾನ ಮಾಡಿದ ದೃಶ್ಯಗಳನ್ನು ನಾಳೆ ಒಳಗಡೆ ತೆಗೆಯಬೇಕು ಎಂದು ಗಡುವು ನೀಡಿದ್ದರು.

    ಅಖಿಲ ಕರ್ನಾಟಕ ಮಾಧ್ವ ಮಹಾಸಭಾ ಹಾಗೂ ಕರ್ನಾಟಕ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಪೊಗರು ಸಿನಿಮಾದ ವಿರುದ್ಧ ದೂರು ನೀಡಿ ದೃಶ್ಯಕ್ಕೆ ಕತ್ತರಿ ಹಾಕಬೇಕೆಂದು ಆಗ್ರಹಿಸಲಾಗಿತ್ತು.

    ಪೊಗರು ಸಿನಿಮಾದ ವಿರುದ್ಧ ಇಂದು ರಾಜ್ಯದ ಹಲವೆಡೆ ಪ್ರತಿಭಟನೆ ನಡೆದಿದೆ. ಮೈಸೂರು, ಕಲಬುರಗಿಯಲ್ಲಿ ಪ್ರತಿಭಟನೆ ನಡೆದಿದ್ದು, ಧಾರವಾಡದಲ್ಲಿ ಸುದ್ದಿಗೋಷ್ಠಿ ನಡೆಸಿ ಆಕ್ಷೇಪಾರ್ಹ ದೃಶ್ಯ ತೆಗೆಯಲು ಒತ್ತಾಯ ಮಾಡಲಾಗಿತ್ತು.

    ಪೊಗರು ನಿರ್ಮಾಪಕ ಬಿ.ಕೆ ಗಂಗಾಧರ್ ಪರ ನಿರ್ಮಾಪಕ ಸೂರಪ್ಪ ಬಾಬು ಮಾತನಾಡಿ, ಪೊಗರು ಸಿನಿಮಾ ಸೆನ್ಸಾರ್ ಆಗಿದೆ. ಈ ವಿಚಾರವನ್ನು ಕಾನೂನಾತ್ಮಕವಾಗಿ ಬಗೆಹರಿಸಬೇಕು. ಒಮ್ಮೆ ಸೆನ್ಸಾರ್ ಆದಮೇಲೆ ಅದನ್ನು ಮತ್ತೆ ಸೆನ್ಸಾರ್ ಮಂಡಳಿ ಮೂಲಕವೇ ಬಗೆಹರಿಸಬೇಕು. ನಾವು ಈಗಾಗಲೇ ಸೆನ್ಸಾರ್ ಮಂಡಳಿಗೆ ಮನವಿ ಮಾಡಿದ್ದೇವೆ. ಆಕ್ಷೇಪಾರ್ಹ ದೃಶ್ಯಗಳನ್ನ ತೆಗೆಯಲು 48 ಗಂಟೆಗಳ ಕಾಲ ಅವಕಾಶ ಬೇಕು ಎಂದು ಹೇಳಿದ್ದರು.

  • ಧ್ರುವ ಸರ್ಜಾ ಪೊಗರಿನ ಫೋಟೋ ನೋಡಿದ್ರಾ?

    ಧ್ರುವ ಸರ್ಜಾ ಪೊಗರಿನ ಫೋಟೋ ನೋಡಿದ್ರಾ?

    ಬೆಂಗಳೂರು: ಪ್ರತೀ ಚಿತ್ರ, ಅದರಲ್ಲಿನ ಗೆಟಪ್ಪುಗಳನ್ನು ಅಭಿಮಾನಿಗಳನ್ನು ದೃಷ್ಟಿಯಲ್ಲಿಟ್ಟುಕೊಂಡೇ ನಿರ್ಧಾರ ಮಾಡುತ್ತಾ ಬಂದಿರುವವರು ಧ್ರುವ ಸರ್ಜಾ. ಬಹುಶಃ ಧ್ರುವ ಅವರು ಈ ಪಾಟಿ ಅಭಿಮಾನಿ ಬಳಗವನ್ನು ಹೊಂದಿರೋದಕ್ಕೆ, ಅವರನ್ನು ಪ್ರತೀ ಹಂತದಲ್ಲಿಯೂ ತೃಪ್ತಗೊಳಿಸುತ್ತಿರೋದಕ್ಕೆ ಇಂಥಾ ಮನಸ್ಥಿತಿಯೇ ಮೂಲಕ ಕಾರಣ.

    ಇದೀಗ ಪೊಗರು ಚಿತ್ರದಲ್ಲಿನ ಧ್ರುವ ಸರ್ಜಾ ಗೆಟಪ್ಪಿನದ್ದೊಂದು ಫೋಟೋ ಜಾಹೀರಾಗಿದೆ. ಅದು ಅಭಿಮಾನಿಗಳನ್ನೆಲ್ಲ ಹುಚ್ಚೆಬ್ಬಿಸಿ ಬಿಟ್ಟಿದೆ!

    ನೀಳವಾದ ಗಡ್ಡ ಮತ್ತು ತಲೆಗೂದಲು ಬಿಟ್ಟಿರೋ ಧ್ರುವ ರಗಡ್ ಲುಕ್ಕಿನಲ್ಲಿ ಕಾಣಿಸಿಕೊಂಡಿದ್ದಾರೆ. ಪೊಗರು ಎಂಬ ಟೈಟಲ್ಲಿಗೆ ಪಕ್ಕಾ ಸೂಟ್ ಆಗುವಂತಿರೋ ಈ ಫೋಟೋವನ್ನು ಅಭಿಮಾನಿಗಳೆಲ್ಲ ಮೆಚ್ಚಿಕೊಂಡಿದ್ದಾರೆ. ಚಿತ್ರ ತಂಡ ಈ ಫಸ್ಟ್ ಲುಕ್ ಫೋಟೋ ಬಿಡುಗಡೆ ಮಾಡಿದ ಕ್ಷಣಾರ್ಧದಲ್ಲಿಯೇ ಅದು ವೈರಲ್ ಆಗೋವಷ್ಟರ ಮಟ್ಟಿಗೆ ಅದನ್ನು ಅಭಿಮಾನಿಗಳೆಲ್ಲ ಇಷ್ಟಪಟ್ಟಿದ್ದಾರೆ.

    ತಮ್ಮ ತಾಯಿಗೆ ಅನಾರೋಗ್ಯವಿದ್ದುದರಿಂದಲೇ ಧ್ರುವ ಪೊಗರು ಚಿತ್ರದ ಚಿತ್ರೀಕರಣದಿಂದ ದೂರ ಉಳಿದುಕೊಂಡಿದ್ದರು. ಆದರೀಗ ಅಮ್ಮನ ಆರೋಗ್ಯದಲ್ಲಿ ಚೇತರಿಕೆ ಕಾಣಿಸಿಕೊಂಡಿದೆ. ಈ ಹೊತ್ತಿನಲ್ಲಿಯೇ ಪೊಗರು ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿರೋ ಧ್ರುವ ಇನ್ನು ಇಪ್ಪತ್ತು ದಿನಗಳ ಕಾಲ ಚಿತ್ರೀಕರಣ ಬಿಟ್ಟು ಆಚೀಚೆ ಕದಲೋದಿಲ್ಲ. ನಿರ್ದೇಶಕ ನಂದ ಕಿಶೋರ್ ಕೂಡಾ ಅದಕ್ಕೆ ಪೂರಕವಾದ ತಯಾರಿ ಮಾಡಿಕೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv