Tag: Nandi Hill

  • ಹೊಸ ವರ್ಷ ಸಂಭ್ರಮ; ನಂದಿ ಬೆಟ್ಟಕ್ಕೆ ಪ್ರವಾಸಿಗರ ಲಗ್ಗೆ – ಟ್ರಾಫಿಕ್‌ ಜಾಮ್

    ಹೊಸ ವರ್ಷ ಸಂಭ್ರಮ; ನಂದಿ ಬೆಟ್ಟಕ್ಕೆ ಪ್ರವಾಸಿಗರ ಲಗ್ಗೆ – ಟ್ರಾಫಿಕ್‌ ಜಾಮ್

    ಚಿಕ್ಕಬಳ್ಳಾಪುರ: ಹೊಸ ವರ್ಷ 2025ಕ್ಕೆ ಭರ್ಜರಿ ಸ್ವಾಗತ ಸಿಕ್ಕಿದೆ. ನ್ಯೂ ಇಯರ್ ಸಂಭ್ರಮಾಚರಣೆಗಾಗಿ ನಂದಿಗಿರಿಧಾಮಕ್ಕೆ (Nandi Hills) ಪ್ರವಾಸಿಗರು ಲಗ್ಗೆ ಇಟ್ಟಿದ್ದಾರೆ.

    ಚಿಕ್ಕಬಳ್ಳಾಪುರ (Chikkaballapura) ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣವಾದ ನಂದಿ ಬೆಟ್ಟಕ್ಕೆ ದಂಡು ದಂಡಾಗಿ ಪ್ರವಾಸಿಗರು ಆಗಮಿಸಿದರು. ಪರಿಣಾಮ ನಂದಿ ಬೆಟ್ಟದ ಕ್ರಾಸ್‌ನಲ್ಲೇ ಭಾರೀ ಟ್ರಾಫಿಕ್ ಜಾಮ್ ಉಂಟಾಯಿತು. ಇದನ್ನೂ ಓದಿ: ಬದಲಾವಣೆಗೇಕೆ ಹೊಸ ವರ್ಷ?

    ಕಾರು ಹಾಗೂ ಬೈಕ್‌ಗಳಲ್ಲಿ ನಂದಿ ಬೆಟ್ಟಕ್ಕೆ ಪ್ರವಾಸಿಗರು ಲಗ್ಗೆ ಇಟ್ಟರು. ಬೆಳಗ್ಗೆ 7 ಗಂಟೆಗೆ ಚೆಕ್‌ಪೋಸ್ಟ್ ತೆರೆದಿದ್ದೇ ತಡ ನಾ ಮುಂದು ತಾ ಮುಂದು ಅಂತ ಆಗಮಿಸಿದರು.

    ಎಲ್ಲೆಲ್ಲೂ ಹೊಸ ವರ್ಷದ ಸಂಭ್ರಮ ಮನೆ ಮಾಡಿದ್ದು, ಬೆಂಗಳೂರಿನಲ್ಲಿ ಮಧ್ಯರಾತ್ರಿ 12 ಗಂಟೆಗೆ ಗ್ರ್ಯಾಂಡ್‌ ವೆಲ್‌ಕಮ್ ಕೋರಲಾಯಿತು. ಎಂಜಿ ರಸ್ತೆ, ಚರ್ಚ್ ಸ್ಟ್ರೀಟ್‌, ವೈಟ್‌ಫೀಲ್ಡ್ ಮೊದಲಾದ ಪ್ರಮುಖ ಭಾಗಗಳಲ್ಲಿ ಕಿಕ್ಕಿರಿದು ಯುವಜನತೆ ಸೇರಿದ್ದರು. ಇದನ್ನೂ ಓದಿ: ಕನಸಿಗೆ ಕತ್ತರಿ ಬಿದ್ದರೂ ಹುಲ್ಲಿನಂತೆ ಬೆಳೆಯಬೇಕು!

    ಅನೇಕರು ಮದ್ಯದ ಅಮಲಿನಲ್ಲಿ ಒಂದಷ್ಟು ಕಿರಿಕ್ ಮಾಡಿಕೊಂಡರು. ನಶೆಯಲ್ಲಿ ರಸ್ತೆಗೆ ಬಿದ್ದ ಯುವತಿಯನ್ನು ಸ್ನೇಹಿತ ಎತ್ತಿಕೊಂಡು ಹೋದ ಘಟನೆ ಕೂಡ ಸಿಲಿಕಾನ್ ಸಿಟಿಯಲ್ಲಿ ನಡೆಯಿತು. ಇನ್ನೂ ಅಮಲಿನಲ್ಲಿ ಕೂಗಾಡುತ್ತಿದ್ದ ಯುವಕನಿಗೆ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ.

  • ರೈತನ ಬಳಿ ಹಣ ಕಸಿದು ನಂದಿಬೆಟ್ಟಕ್ಕೆ ಹೋಗಿ ಮಜಾ ಮಾಡಿದ್ದ ಯುವಕರು ಅರೆಸ್ಟ್

    ರೈತನ ಬಳಿ ಹಣ ಕಸಿದು ನಂದಿಬೆಟ್ಟಕ್ಕೆ ಹೋಗಿ ಮಜಾ ಮಾಡಿದ್ದ ಯುವಕರು ಅರೆಸ್ಟ್

    ಚಿಕ್ಕಬಳ್ಳಾಪುರ: ರೈತನ ಬಳಿ ಹಣ ಕಸಿದು ನಂದಿಬೆಟ್ಟಕ್ಕೆ ಹೋಗಿ ಮಜಾ ಮಾಡಿದ್ದ ಯುವಕರನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ.

    ನಂದಿಬೆಟ್ಟ ನೋಡಬೇಕು ಅಂತ ಬೆಂಗಳೂರಿನಿಂದ ಬೈಕ್ ಏರಿ ನಂದಿಬೆಟ್ಟಕ್ಕೆ ಬಂದಿದ್ದ ಯುವಕರು ಚೆಕ್ ಪೋಸ್ಟ್‌ನಲ್ಲಿ ಟಿಕೆಟ್ ಖರೀದಿ ಮಾಡಲು ಹಣ ಇಲ್ಲದೆ, ರೈತರೊಬ್ಬರ ಬಳಿ ಹಣ ಹಾಗೂ ಮೊಬೈಲ್ ಸುಲಿಗೆ ಮಾಡಿ ನಂದಿಬೆಟ್ಟಕ್ಕೆ ಹೋಗಿ ಮೋಜು ಮಸ್ತಿ ಮಾಡಿರುವ ಘಟನೆ ಈ ಹಿಂದೆ ನಡೆದಿತ್ತು.

    ಆರೋಪಿಗಳನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಈಗ ಬಂಧಿಸಿದ್ದಾರೆ. ಬೆಂಗಳೂರಿನ ನಾಗವಾರದ ಗೋವಿಂದಪುರದ ಸಯ್ಯದ್ ಸಲೀಂ, ಸಯ್ಯದ್ ಅಬೀಬ್ ಉಲ್ಲಾ ಬಂಧಿತ ಆರೋಪಿಗಳು. ಇದನ್ನೂ ಓದಿ: ಮುಳಬಾಗಿಲು ಗಂಗಮ್ಮ ದೇವಾಲಯ ಮುಂಭಾಗವೇ ಕೈ ನಗರಸಭೆ ಸದಸ್ಯನ ಬರ್ಬರ ಕೊಲೆ

    BRIBE

    ಗೋವಿಂದಪುರದ 7 ಮಂದಿ ಆರೋಪಿಗಳು ಏಪ್ರಿಲ್ 29 ರಂದು ಬೆಳ್ಳಂಬೆಳಗ್ಗೆ ನಂದಿಬೆಟ್ಟಕ್ಕೆ ಬಂದಿದ್ದರು. ಚೆಕ್ ಪೋಸ್ಟ್ ಬಳಿ ಟಿಕೆಟ್ ಖರೀದಿ ಮಾಡೋಕು ದುಡ್ಡಿಲ್ಲದೆ ವಾಪಾಸ್ಸಾಗಿದ್ದಾರೆ. ಆದರೆ ಈ ವೇಳೆ ದೊಡ್ಡಬಳ್ಳಾಪುರ ಮಾರ್ಗದ ಕಡೆಗೆ ಬಂದ ಮೂವರು ಯುವಕರು ಮೇಳೆಕೋಟೆ ಕ್ರಾಸ್ ಬಳಿ ಮೇಳೆಕೋಟೆ ಗ್ರಾಮದ ರೈತ ರಾಜಣ್ಣ ನನ್ನ ಬೆದರಿಸಿ ರಾಜಣ್ಣನ ಬಳಿ ಇದ್ದ ಮೊಬೈಲ್ ಹಾಗೂ 25,200 ರೂಪಾಯಿ ಹಣ ಕಸಿದು ಪರಾರಿಯಾದ್ದರು. ಇದನ್ನೂ ಓದಿ: ಯುವತಿ ಮದುವೆಗೆ ನಿರಾಕರಿಸಿದ್ದಕ್ಕೆ ಮನನೊಂದ ಯುವಕ ನೇಣಿಗೆ ಶರಣು

    ಕದ್ದ ಹಣದಿಂದ ಮತ್ತೆ ನಂದಿಬೆಟ್ಟಕ್ಕೆ ಹೋಗಿ ಮಸ್ತ್ ಮಜಾ ಮಾಡಿದ್ದಲ್ಲದೇ ನಂದಿಬೆಟ್ಟದಿಂದ ವಾಪಸ್ ಬಂದು ಮದ್ಯ, ಚಿಕನ್ ಮಟನ್ ಪಾರ್ಟಿ ಅಂತ ಹಣ ಖರ್ಚು ಮಾಡಿದ್ದಾರೆ. ಆದರೆ ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಬೆಂಗಳೂರು ಮೂಲದ ಇಬ್ಬರು ಯುವಕನರನ್ನು ಬಂಧಿಸಿದ್ದೇವೆ ಅಂತ ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಎಸ್ಪಿ ಕೋನವಂಶಿ ಕೃಷ್ಣ ತಿಳಿಸಿದರು.

    ಏಪ್ರಿಲ್ 29 ರಂದು ರೈತ ರಾಜಣ್ಣ ತಾನು ಬೆಳೆದಿದ್ದ ಬೀನ್ಸ್‌ನ್ನು ದೊಡ್ಡಬಳ್ಳಾಪುರದ ಎಪಿಎಂಸಿ ಮಾರುಕಟ್ಟೆಗೆ ಹಾಕಿ ಬಂದು 25,200 ರೂಪಾಯಿ ಹಣ ಜೇಬಲ್ಲಿ ಇಟ್ಟು ಕೊಂಡು ತನ್ನದೇ ಸ್ಕೂಟಿಯಲ್ಲಿ ಸ್ವಗ್ರಾಮ ಮೇಳೆಕೋಟಗೆ ಬರುತ್ತಿದ್ದರು. ಈ ವೇಳೆ ಮೇಳೆಕೋಟೆ ಕ್ರಾಸ್‍ನಿಂದ ಮೇಳೆಕೋಟೆ ಗ್ರಾಮದ ಕಡೆಯು ರಸ್ತೆ ಮಧ್ಯೆ ಬಂದ ಈ ಸಯ್ಯದ್ ಸಲೀಂ, ಹಾಗೂ ಸಯ್ಯದ್ ಅಬೀಬ್ ಉಲ್ಲಾ ಹಾಗೂ ಮತ್ತೋರ್ವ ಯುವಕ ಘಾಟಿ ದೇವಾಲಯಕ್ಕೆ ಹೇಗೆ ಹೋಗಬೇಕು ಅಂತ ಅಡ್ರೆಸ್ ಕೇಳೋ ನೆಪದಲ್ಲಿ ಅಡಗಟ್ಟಿದ್ದರು.

    ರಾಜಣ್ಣ ಸ್ಕೂಟಿ ನಿಲ್ಲಿಸಿ ಅಡ್ರೆಸ್ ಹೇಳುತ್ತಿದ್ದರೆ ಇತ್ತ ಮೂವರು ಯುವಕರು ಚಾಕು ಹಿಡಿದು ರಾಜಣ್ಣನಿಗೆ ಕುತ್ತಿಗೆ ಹೊಟ್ಟೆ ಬೆನ್ನಿಗೆ ಚುಚ್ಚಿ ಹಿಡಿದಿದ್ದಾರೆ. ಈ ವೇಳೆ ಯುವಕರೇ ಕೈ ಹಾಕಿ ರಾಜಣ್ಣ ಜೇಬಿನಲ್ಲಿದ್ದ ಹಣ ಹಾಗೂ ಮೊಬೈಲ್ ತೆಗೆದುಕೊಂಡು ಎಸ್ಕೇಪ್ ಆಗಿದ್ದರು. ರೈತ ರಾಜಣ್ಣ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

    ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು 2 ತಿಂಗಳ ನಂತರ ಕದ್ದಿದ್ದ ಮೊಬೈಲ್ ಲೋಕೇಷನ್ ಪತ್ತೆ ಹಚ್ಚಿ ಇಬ್ಬರು ಯುವಕರನ್ನ ಬಂಧಿಸಿದ್ದಾರೆ. ಬಂಧಿತರಿಂದ 10,000 ರೂ. ನಗದು ಒಂದು ಮೊಬೈಲ್ ವಶಪಡಿಸಿಕೊಂಡು ಉಳಿದವರಿಗಾಗಿ ಶೋಧಕಾರ್ಯ ಮುಂದುವರೆಸಿದ್ದಾರೆ.

  • ನಂದಿಬೆಟ್ಟದ ಬ್ರಹ್ಮಗಿರಿಯಲ್ಲಿ ಭೂ ಕುಸಿತ – 10 ಅಡಿ ಆಳಕ್ಕೆ ಕುಸಿದ ರಸ್ತೆ

    ನಂದಿಬೆಟ್ಟದ ಬ್ರಹ್ಮಗಿರಿಯಲ್ಲಿ ಭೂ ಕುಸಿತ – 10 ಅಡಿ ಆಳಕ್ಕೆ ಕುಸಿದ ರಸ್ತೆ

    – ರಸ್ತೆಗೆ ಅಡ್ಡಲಾಗಿ ಉರುಳಿದ ಕಲ್ಲು, ಮಣ್ಣು, ವಿದ್ಯುತ್ ಕಂಬ
    – ಬಯಲು ಸೀಮೆಯಲ್ಲಿ ಮಲೆನಾಡು ದೃಶ್ಯ
    – ತಡರಾತ್ರಿ ಮಳೆಗೆ ಅಲ್ಲೋಲ, ಕಲ್ಲೋಲ

    ಚಿಕ್ಕಬಳ್ಳಾಪುರ: ನಂದಿಬೆಟ್ಟದ ಬ್ರಹ್ಮಗಿರಿಯಲ್ಲಿ ಭೂ ಕುಸಿತವಾಗಿದ್ದು, 10 ಅಡಿ ಆಳಕ್ಕೆ ಮುಖ್ಯ ರಸ್ತೆ ಕುಸಿದಿದೆ. ನಂದಿಬೆಟ್ಟದ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದ್ದು, ರಸ್ತೆಗೆ ಅಡ್ಡಲಾಗಿ ಬಂಡೆಗಳು ಉರುಳಿ ನಿಂತಿವೆ. ರಸ್ತೆ ಬಂದ್ ಆಗಿದ್ದರಿಂದ ನಂದಿಬೆಟ್ಟಕ್ಕೆ ಬಂದಿರುವ ಪ್ರವಾಸಿಗರನ್ನು ವಾಪಸ್ ಕಳುಹಿಸಲಾಗುತ್ತಿದೆ.

    ಮಂಗಳವಾರ ರಾತ್ರಿ ನಂದಿಬೆಟ್ಟದ ಪರಿಸರದಲ್ಲಿ ಭಾರೀ ಮಳೆಯಾಗಿದ್ದು, ಮೇಲ್ಭಾಗದಿಂದ ಮಣ್ಣು ಕೊಚ್ಚಿಕೊಂಡು ಬಂದಿದೆ. ಮಳೆಯ ನೀರಿನ ಜೊತೆ ಮಣ್ಣು, ಬೃಹತ್ ಬಂಡೆ, ಮರ ಗಿಡಗಳು ರಸ್ತೆಗೆ ಅಡ್ಡಲಾಗಿ ಬಿದ್ದಿವೆ. ಇನ್ನೂ ವಿದ್ಯುತ್ ಕಂಬಗಳು ಧರೆಗೆ ಉಳಿದಿರುವ ಕಾರಣ ನಂದಿಗಿರಿಧಾಮದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಇದನ್ನೂ ಓದಿ: ನಂದಿಬೆಟ್ಟದಲ್ಲಿ ರೋಪ್ ವೇ – ವಾಹನ ನಿಲುಗಡೆಗೆ ಕೃಷಿ ಜಮೀನು ಸ್ವಾಧೀನಕ್ಕೆ ರೈತರ ವಿರೋಧ

    ನಂದಿಬೆಟ್ಟದ ಚೆಕ್ ಪೋಸ್ಟ್ ನ ಸ್ವಲ್ಪ ದೂರದಲ್ಲೇ ರಸ್ತೆಗೆ ಅಡ್ಡಲಾಗಿ ಮಣ್ಣು ಶೇಖರಣೆಯಾಗಿದ್ದರಿಂದ, ಮೊದಲೇ ರೆಸಾರ್ಟ್ ಬುಕ್ ಮಾಡಿಕೊಂಡು ವಾಸ್ತವ್ಯ ಹೂಡಿದ್ದ ಪ್ರವಾಸಿಗರು ಮೇಲ್ಭಾಗದಲ್ಲಿಯೇ ಸಿಲುಕಿಕೊಂಡಿದ್ದಾರೆ. ಸ್ಥಳಕ್ಕೆ ಅಧಿಕಾರಿಗಳು ಆಗಮಿಸಿದ್ದು, ಮಣ್ಣು ತೆರವು ಕೆಲಸದಲ್ಲಿ ನಿರತರಾಗಿದ್ದಾರೆ. ಇದೇ ಮೊದಲ ಬಾರಿಗೆ ಇಷ್ಟು ಪ್ರಮಾಣದ ಭೂ ಕುಸಿತವಾಗಿರೋದು. ಮಲೆನಾಡು ಭಾಗದಲ್ಲಿ ಕಾಣಿಸುತ್ತಿದ್ದ ದೃಶ್ಯಗಳನ್ನ ತಮ್ಮಲ್ಲಿ ಆಗಿರೋದನ್ನು ಕಂಡು ಸ್ಥಳೀಯರು ಆತಂಕಕ್ಕೊಳಗಾಗಿದ್ದಾರೆ. ಇದನ್ನೂ ಓದಿ: ನಿರೀಕ್ಷಣಾ ಜಾಮೀನಿಗೆ ಅಜಯ್ ರಾವ್ ಅರ್ಜಿ ಸಲ್ಲಿಕೆ – ವಿಚಾರಣೆಗೆ ಹಾಜರಾಗಿ ಹೇಳಿಕೆ ದಾಖಲಿಸಿದ ರಚಿತಾ ರಾಮ್

  • ಬಡ-ಮಧ್ಯಮ ವರ್ಗದವರಿಗೆ ದುಬಾರಿಯಾದ ನಂದಿಬೆಟ್ಟ – ಊಟ, ತಿಂಡಿ, ಕಾಫಿ ಸೇರಿದಂತೆ ಪ್ರವೇಶ ಶುಲ್ಕವೂ ಬಲು ದುಬಾರಿ

    ಬಡ-ಮಧ್ಯಮ ವರ್ಗದವರಿಗೆ ದುಬಾರಿಯಾದ ನಂದಿಬೆಟ್ಟ – ಊಟ, ತಿಂಡಿ, ಕಾಫಿ ಸೇರಿದಂತೆ ಪ್ರವೇಶ ಶುಲ್ಕವೂ ಬಲು ದುಬಾರಿ

    – ಪ್ರವಾಸೋದ್ಯಮ ಇಲಾಖೆಯ ವಸತಿಗೃಹಗಳಲ್ಲಿ ಸಾವಿರಾರು ರೂಪಾಯಿ

    ಚಿಕ್ಕಬಳ್ಳಾಪುರ: ಬಡವರ ಪಾಲಿನ ಊಟಿ ಅಂತಲೇ ಪ್ರಖ್ಯಾತಿ. ಅದ್ರೆ ಇದೀಗೆ ಅದೇ ಬಡವರ-ಮಧ್ಯಮ ವರ್ಗದವರ ಪಾಲಿಗೆ ಚಿನ್ನದ ಮೊಟ್ಟೆ ಎಂಬಂತಾಗಿದೆ. ವಿಶ್ವವಿಖ್ಯಾತ ನಂದಿಗಿರಿಧಾಮಕ್ಕೆ ಹೋಗಿ ಬರಬೇಕಾದ್ರೆ ಈಗ ನೀವು ಸಾವಿರಾರು ರೂಪಾಯಿ ಖರ್ಚು ಮಾಡಬೇಕಾಗಿದ್ದು, ಜೇಬು ತುಂಬಾ ದುಡ್ಡು ಇರಬೇಕು ಎಂಬಂತಾಗಿದೆ ಅಂತ ಪ್ರವಾಸಿಗರು ದೂರುತ್ತಿದ್ದಾರೆ.

    ಬೆಂಗಳೂರಿಗೆ ಸಮೀಪದಲ್ಲರುಬ ಈ ನಂದಿಗಿರಿಧಾಮ ಬೆಂಗಳೂರಿಗರ ಪಾಲಿನ ವಿಕೇಂಡ್ ಹಾಟ್ ಸ್ಪಾಟ್ ಅಂತ ಎಲ್ಲರಿಗೂ ಗೊತ್ತಿರುವ ವಿಚಾವರ. ಇನ್ನೂ ಕೊರೊನಾ ಅನ್‍ಲಾಕ್ ಆಗಿದ್ದೇ ತಡ ಬೆಟ್ಟಕ್ಕೆ ಪ್ರವಾಸಿಗರ ದಂಡೇ ಹರಿದುಬರ್ತಿದೆ. ಹೀಗೆ ಬಂದ ಪ್ರವಾಸಿಗರಿಗೆ ಈಗ ಜೇಬು ಸುಡುವಂತಾಗಿದೆ. ಕಾರಣ ತೋಟಗಾರಿಕಾ ಇಲಾಖೆ ಸುಪರ್ದಿಯಲ್ಲಿದ್ದ ನೆಹರು ನಿಲಯ ಸೇರಿದಂತೆ ಇತರೆ ವಸತಿಗೃಹಗಳನ್ನ ಪ್ರವಾಸೋದ್ಯಮ ಇಲಾಖೆಗೆ ಹಸ್ತಾಂತರಿಸಲಾಗಿದೆ. ಪರಿಣಾಮ ನಂದಿಗಿರಿಧಾಮದ ವಸತಿಗೃಹಗಳ ನೂತನ ದರ ಪ್ರವಾಸಿಗರ ಪಾಲಿಗೆ ದುಬಾರಿಯಾಗ್ತಿದೆ.

    ನಂದಿಬೆಟ್ಟದಲ್ಲಿ ನೀವು 1 ದಿನ ತಂಗಬೇಕಾದ್ರೆ ನೆಹರು ನಿಲಯದಲ್ಲಿ ವಿಶೇಷ ವಿವಿಐಪಿ ಸೂಟ್ ವಸತಿ ಗೃಹಗಳು, ಗಾಂಧಿ ನಿಲಯದಲ್ಲಿ ಕೆಎಸ್‍ಟಿಡಿಸಿ ವಸತಿ ಗೃಹಗಳಿವೆ. ಈಗ ಸಾಮಾನ್ಯ ವಸತಿ ಗೃಹಗಳ ಆರಂಭಿಕ ದರ 2,000 ರೂ. ವಿಐಪಿ, ವಿವಿಐಪಿ ರೂಂಗಳ ಬಾಡಿಗೆ ದರ 4,000-5,000 ರೂಪಾಯಿವರೆಗೆ ಆಗಲಿದ್ದು, ವಾರಾಂತ್ಯಗಳಲ್ಲಿ 6,000 ರೂ. ಸಹ ಇರಲಿದೆ. ಇದರಿಂದ ಬಡ ಹಾಗೂ ಮಧ್ಯಮ ವರ್ಗದ ಪಾಲಿನ ಪ್ರವಾಸಿಗರಿಗೆ ಈ ದರ ದುಬಾರಿಯಾಗಲಿದ್ದು, ಪ್ರವಾಸಿಗರ ಬೇಸರಕ್ಕೆ ಕಾರಣವಾಗ್ತಿದೆ.

    ಇನ್ನೂ ವಸತಿಗೃಹಗಳ ಪರಿ ಇದಾದ್ರೆ, ನಂದಿಗಿರಿಧಾಮಕ್ಕೆ ಬರೋ ಪ್ರವಾಸಿಗರು ಜೇಬು ತುಂಬಾ ಕಾಸಿಟ್ಟುಕೊಂಡು ಬರಬೇಕಿದೆ. ಕಾರಣ ನಂದಿಗಿರಿಧಾಮ ಎಂಟ್ರಿ ಆಗ್ತಿದ್ದಂತೆ ಪ್ರವೇಶ ಶುಲ್ಕ ತಲಾ 20 ರೂ ಆದೂ,್ರ ಬೈಕ್ ಪಾರ್ಕಿಂಗ್ ಶುಲ್ಕ, ಹೆಲ್ಮೆಟ್ ದಾಸ್ತಾನು ಶುಲ್ಕ ಅಂತ ನೂರಾರು ರೂಪಾಯಿ ಖಾಲಿ ಆಗುತ್ತೆ. ಇನ್ನೂ ಬೆಟ್ಟ ಸುತ್ತಾಡಿ ಸುಸ್ತಾಗಿದೆ ಅಂತ ಕಾಫಿ, ಟೀ, ತಿಂಡಿ, ಊಟ ಅಂತ ಹೋದ್ರೆ ಹೋಟೆಲ್ ಗಳಿಗೆ ಹೋದ್ರೆ ಅಲ್ಲೂ ದುಪ್ಪಟ್ಟು ದರ.

    ಸಾಮಾನ್ಯವಾಗಿ 10 ರೂಪಾಯಿ ಕಾಫಿ-ಟೀ ಇಲ್ಲಿ 20 ರೂಪಾಯಿ, ಇಡ್ಲಿ-ವಡೆ-80 ರೂಪಾಯಿ, ಮಸಾಲೆ ದೋಸೆ-80 ರೂಪಾಯಿ, ಉದ್ದಿನ ವಡೆ ಸಹ 80 ರೂಪಾಯಿ ಹೀಗೆ ಎಲ್ಲ ದರಗಳು ಸಹ ದುಬಾರಿ. ಇದರಿಂದ ನಂದಿಬೆಟ್ಟಕ್ಕೆ ಬರೋ ಪ್ರವಾಸಿಗರು ನೂರು ಅಲ್ಲ ಸಾವಿರಾರು ರೂಪಾಯಿ ಇದ್ರೇ ಮಾತ್ರ ನಂದಿಬೆಟ್ಟದತ್ತ ಬರುವಂತಾಗಿದೆ. ಹಾಗಾಗಿ ಸರ್ಕಾರ ಇಲಾಖೆ ಅದಷ್ಟು ಬಡ ಮಧ್ಯಮ ಪ್ರವಾಸಿ ಸ್ನೇಹಿ ದರ ನಿಗದಿ ಮಾಡಬೇಕು ಅಂತಾರೆ ಪ್ರವಾಸಿಗರು.

    ಓಟ್ಟಿನಲ್ಲಿ ಅಭಿವೃದ್ದಿ ಹೆಸರಲ್ಲಿ ನಂದಿಗಿರಿಧಾಮವನ್ನ ಹೈಟೆಕ್ ಮಾಡುವ ಸಲುವಾಗಿ ಪ್ರವಾಸೋದ್ಯಮ ಇಲಾಖೆ ವಸತಿನಿಲಯಗಳ ಅಂದ ಚೆಂದ ಹೆಚ್ಚಿಸಿದೋರ ಜೊತೆ ಜೊತೆಗೆ ಸ್ವಚ್ಚತೆಗೆ ಆದ್ಯತೆ ಕೊಡ್ತಿದೆ. ಆದ್ರೆ ಈ ವಸತಿ ನಿಲಯಗಳ ಬಾಡಿಗೆ ದರ ಜನ ಸಾಮಾನ್ಯರ ಪಾಲಿಗೆ ಕೈಗೆ ಎಟುಕುದಂತಾಗುತ್ತಿದ್ದು, ಕಣ್ಣಿಗೆ ಕಾಣೋ ನಂದಿಬೆಟ್ಟ ಬಡ ಮಧ್ಯಮದವರ ಪಾಲಿಗೆ ದೂರ ಆಗುವಂತಾಗಿದೆ.

  • ಡಿ.30 ರಿಂದ ಜ.2ರವರೆಗೆ ನಂದಿ ಬೆಟ್ಟ ಬಂದ್

    ಡಿ.30 ರಿಂದ ಜ.2ರವರೆಗೆ ನಂದಿ ಬೆಟ್ಟ ಬಂದ್

    ಚಿಕ್ಕಬಳ್ಳಾಪುರ: ಕೊರೊನಾ ಆತಂಕದ ಹಿನ್ನೆಲೆ ವಿಶ್ವವಿಖ್ಯಾತ ನಂದಿಗಿರಿಧಾಮವನ್ನ 3 ದಿನಗಳ ಕಾಲ ಸಂಪೂರ್ಣ ಬಂದ್ ಮಾಡಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆರ್.ಲತಾ ಆದೇಶ ಹೊರಡಿಸಿದ್ದಾರೆ.

    ಡಿಸೆಂಬರ್ 30ರ ಬೆಳಗ್ಗೆ 06 ಗಂಟೆಯಿಂದ 2021 ಜನವರಿ 02ರ ಬೆಳಗ್ಗೆ 06 ಗಂಟೆಯವರೆಗೆ ನಂದಿಗಿರಿ ಧಾಮಕ್ಕೆ ಪ್ರವಾಸಿಗರ ಪ್ರವೇಶವನ್ನ ನಿಷೇಧಿಸಲಾಗಿದೆ. ಹೊಸ ವರ್ಷಾಚರಣೆಗೆ ಬ್ರೇಕ್ ಹಾಕುವ ಹಾಗೂ ಕೊರೊನಾ ವೈರಸ್ ಹರಡದಂತೆ ಜನ ಗುಂಪುಗೂಡುವುದನ್ನ ನಿರ್ಬಂಧಿಸುವ ಸಲುವಾಗಿ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಈ ಕ್ರಮಕೈಗೊಂಡಿದೆ. ಹೊಸ ವರ್ಷಾಚರಣೆ ಹಿನ್ನೆಲೆ ನಂದಿಬೆಟ್ಟದಲ್ಲಿ ಪ್ರವಾಸಿಗರ ದಟ್ಟಣೆ, ಮೋಜು ಮಸ್ತಿ ಮಾಡುವುದರಿಂದ ಕೊರೊನಾ ವೈರಸ್ ಹರಡುವ ಆತಂಕವಿದೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

    ಪ್ರತಿ ವರ್ಷ ವರ್ಷದ ಕೊನೆ ದಿನ ಡಿಸೆಂಬರ್ 31ರ ಸಂಜೆ 5 ಗಂಟೆಯ ನಂತರ ನಂದಿಗಿರಿಧಾಮ ಪ್ರವೇಶ ಬಂದ್ ಮಾಡಿ ಜನವರಿ 01 ರ ಬೆಳಗ್ಗೆ 08 ಗಂಟೆ ನಂತರ ಪ್ರವಾಸಿಗರ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತಿತ್ತು. ಆದರೆ ಇದೇ ಮೊದಲ ಬಾರಿಗೆ ಹೊಸ ವರ್ಷಾಚರಣೆಗೆ ಬ್ರೇಕ್ ಹಾಕಿ ನಂದಿಬೆಟ್ಟವನ್ನ ಮೂರು ದಿನಗಳ ಕಾಲ ಸಂಪೂರ್ಣ ಬಂದ್ ಮಾಡಲು ಆದೇಶ ಮಾಡಲಾಗಿದೆ.

  • ನಂದಿ ಬೆಟ್ಟದಲ್ಲಿ ರೌಂಡ್ಸ್, ಉಪ ಚುನಾವಣೆಯ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲುತ್ತೆ: ನಾರಾಯಣಗೌಡ

    ನಂದಿ ಬೆಟ್ಟದಲ್ಲಿ ರೌಂಡ್ಸ್, ಉಪ ಚುನಾವಣೆಯ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲುತ್ತೆ: ನಾರಾಯಣಗೌಡ

    ಚಿಕ್ಕಬಳ್ಳಾಪುರ: ಬೆಂಗಳೂರಿನ ರಾಜರಾಜೇಶ್ವರಿ ನಗರ ಹಾಗೂ ತುಮಕೂರಿನ ಶಿರಾ ಉಪಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ತೋಟಗಾರಿಕಾ ಸಚಿವ ನಾರಾಯಣಗೌಡ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಗಿರಿಧಾಮದಲ್ಲಿ ಕುಟುಂಬ ಸಮೇತ ವಾಸ್ತ್ಯವ್ಯ ಹೂಡಿದ್ದ ಸಚಿವ ನಾರಾಯಣಗೌಡ ಇದೇ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದರು. ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಲಿದ್ದು, ನಾನೂ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲಿದ್ದೇನೆ ಎಂದರು.

    ರಾತ್ರಿಯೇ ನಂದಿಗಿರಿಧಾಮದಲ್ಲಿ ಕುಟುಂಬ ಸಮೇತ ವಾಸ್ತವ್ಯ ಹೂಡಿದ್ದ ಸಚಿವರು, ಬೆಳ್ಳಂಬೆಳಗ್ಗೆ ರೌಂಡ್ಸ್ ಹಾಕಿದರು. ಸಚಿವನಾದ ನಂತರ ಇದೇ ಮೊದಲ ಬಾರಿಗೆ ಇಲ್ಲಿಗೆ ಆಗಮಿಸಿದ್ದೇನೆ. ನಂದಿ ಗಿರಿಧಾಮದ ಪ್ರಾಕೃತಿಕ ಸೊಬಗು ಸೌಂದರ್ಯ ಕಂಡು ಸಂತೋಷವಾಗಿದೆ. ಮತ್ತಷ್ಟು ಅಭಿವೃದ್ದಿ ಮಾಡುತ್ತೇನೆ ಆದರೆ ಯಾವುದೇ ಕಾರಣಕ್ಕೂ ನಂದಿಗಿರಿಧಾಮವನ್ನ ಪ್ರವಾಸೋದ್ಯಮ ಇಲಾಖೆಗೆ ಬಿಟ್ಟುಕೊಡುವುದಿಲ್ಲ ಎಂದು ವಿರೋಧ ವ್ಯಕ್ತಪಡಿಸಿದರು.

    ತೋಟಗಾರಿಕೆ ಇಲಾಖೆ ಅಧೀನದಲ್ಲಿರುವ ನಂದಿಗಿರಿಧಾಮ ಹಾಗೂ ಕೆಮ್ಮಣ್ಣುಗುಂಡಿಯನ್ನ ಪ್ರವಾಸೋದ್ಯಮ ಇಲಾಖೆಗೆ ನೀಡುವಂತೆ ಬೆಂಗಳೂರಿನಲ್ಲಿ ನಡೆಸಲಾಗಿದ್ದ ಪ್ರವಾಸೋದ್ಯಮ ಅಭಿವೃದ್ಧಿ ಸಭೆಯಲ್ಲಿ ಸಿಎಂ ಯಡಿಯೂರಪ್ಪ ಮೌಖಿಕ ಆದೇಶ ನೀಡಿದ್ದರು. ಆದರೆ ಪ್ರವಾಸೋದ್ಯಮ ಇಲಾಖೆಗೆ ಹಸ್ತಾಂತರ ಮಾಡುವುದಕ್ಕೆ ಹಲವು ಪರಿಸರವಾದಿಗಳು, ಸ್ಥಳೀಯ ಜನ ಹಾಗೂ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ. ಇಂದು ಸಹ ಕೆಲ ಸಂಘಟನೆಯವರು ಹಾಗೂ ಸ್ಥಳೀಯರು ನಮ್ಮನ್ನು ಭೇಟಿ ಮಾಡಿ, ಹಸ್ತಾಂತರ ಮಾಡದಂತೆ ಆಗ್ರಹಿಸಿದ್ದಾರೆ ಎಂದು ಸಚಿವರು ತಿಳಿಸಿದರು.

    ಯಾವುದೇ ಕಾರಣಕ್ಕೂ ನಂದಿಗಿರಿಧಾಮ ಹಾಗೂ ಕೆಮ್ಮಣ್ಣುಗುಂಡಿಯನ್ನು ಪ್ರವಾಸೋದ್ಯಮ ಇಲಾಖೆಗೆ ಹಸ್ತಾಂತರ ಮಾಡುವುದಿಲ್ಲ. ನಾವೇ ಅಭಿವೃದ್ದಿ ಮಾಡುತ್ತೇವೆ. ನಂದಿ ಗಿರಿಧಾಮ ಔಷಧಿ ಗುಣಗಳುಳ್ಳ ಸಸ್ಯ ಪ್ರಭೇದ ಇರುವ ತಾಣ. ಇದೊಂದು ಆರೋಗ್ಯ ಧಾಮ ಕೂಡ ಹೀಗಾಗಿ ನಂದಿ ಗಿರಿಧಾಮವನ್ನ ತೋಟಗಾರಿಕಾ ಇಲಾಖೆಯಲ್ಲೇ ಉಳಿಸಿಕೊಂಡು ಅಭಿವೃದ್ಧಿ ಪಡಿಸುತ್ತೇವೆ. ಈ ಹಸ್ತಾಂತರ ವಿಚಾರದಲ್ಲಿ ಸಂಘಟನೆಗಳು ಹಾಗೂ ಸ್ಥಳೀಯರು ವಿರೋಧ ವ್ಯಕ್ತಪಡಿಸುತ್ತಿದ್ದು, ಈ ವಿಷಯವನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು ತೋಟಗಾರಿಕಾ ಇಲಾಖೆಯಲ್ಲಿ ಉಳಿಸಿಕೊಳ್ಳುತ್ತೇವೆ ಎಂದು ಭರವಸೆ ನೀಡಿದರು.

  • ಗುಂಪು ಸೇರುವುದಕ್ಕಿಂತ 500 ಕೋತಿಗಳಿಗೆ ಆಹಾರ ನೀಡುವುದು ಒಳ್ಳೆಯದು: ಚಂದನ್

    ಗುಂಪು ಸೇರುವುದಕ್ಕಿಂತ 500 ಕೋತಿಗಳಿಗೆ ಆಹಾರ ನೀಡುವುದು ಒಳ್ಳೆಯದು: ಚಂದನ್

    – ನಂದಿ ಬೆಟ್ಟದಲ್ಲಿರುವ ಮಂಗಳಿಗೆ ಬಾಳೆಹಣ್ಣು ನೀಡಿದ ನಟ

    ಬೆಂಗಳೂರು: ಗುಂಪು ಸೇರುವುದಕ್ಕಿಂತ 500 ಕೋತಿಗಳಿಗೆ ಆಹಾರ ನೀಡುವುದು ಒಳ್ಳೆಯದು ಎಂದು ಬಿಗ್ ಬಾಸ್ ಖ್ಯಾತಿಯ ನಟ ಚಂದನ್ ಅವರು ಹೇಳಿದ್ದಾರೆ.

    ಕೊರೊನಾ ವೈರಸ್ ಭೀತಿಯಿಂದ ದೇಶ ಲಾಕ್‍ಡೌನ್ ಆಗಿದೆ. ಜನರಿಗೆ ಊಟ ಸಿಗದೆ ಪರಾದಾಡುತ್ತಿದ್ದಾರೆ. ಇನ್ನೂ ಈ ದಿನಗಳಲ್ಲಿ ಪ್ರಾಣಿ ಪಕ್ಷಿಗಳ ಕಷ್ಟವಂತು ಹೇಳತೀರದು. ಹಾಗಾಗಿ ಹಲವಾರು ಈ ಲಾಕ್‍ಡೌನ್ ಸಮಯದಲ್ಲಿ ಪ್ರಾಣಿ ಪಕ್ಷಿಗಳ ಹಸಿವನ್ನು ನೀಗಿಸುವ ಕೆಲಸ ಮಾಡುತ್ತಿದ್ದಾರೆ. ಅಂತಯೇ ನಟ ಚಂದನ್ ಅವರು ಕೂಡ ನಂದಿ ಬೆಟ್ಟಕ್ಕೆ ತೆರಳಿ ಅಲ್ಲಿನ ಕೋತಿಗಳಿಗೆ ಬಾಳೆಹಣ್ಣು ನೀಡಿ ಬಂದಿದ್ದಾರೆ.

    https://www.instagram.com/p/B-cJpFwAw91/

    ಈ ವಿಚಾರವಾಗಿ ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಪೋಸ್ಟ್ ಹಾಕಿಕೊಂಡಿರುವ ಚಂದನ್, ಪಾಠವನ್ನು ಕಲಿತೆ. ಸಾಮಾಜಿಕ ಅಂತರ ಎಂಬುದನ್ನು ನಾವು ಯಾವಾಗ ಕಲಿಯುತ್ತೆವೆ ಎಂದರೆ, 500 ಮಂಗಗಳಿಗೆ ಆಹಾರ ನೀಡುವುದು ಗುಂಪು ಸೇರುವುದಕ್ಕಿಂತ ಒಳ್ಳೆಯದು ಎಂದು ನಮಗೆ ಅರ್ಥವಾದಾಗ ಎಂದು ಬರೆದುಕೊಂಡಿದ್ದಾರೆ. ಇದರ ಜೊತೆಗೆ ಕೋತಿಗೆ ಬಾಳೆಹಣ್ಣು ನೀಡುತ್ತಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ.

    https://www.instagram.com/p/B-CN2ddgZeM/

    ನಂದಿ ಬೆಟ್ಟದಲ್ಲಿ ಸಾಕಷ್ಟು ಮಂಗಗಳು ಇದ್ದಾವೆ. ಇವುಗಳು ಅಲ್ಲಿಗೆ ಬರುವ ಪ್ರವಾಸಿಗರು ನೀಡುವ ಆಹಾರವನ್ನು ನಂಬಿ ಮತ್ತು ಅಲ್ಲಿನ ಅಂಗಡಿಗಳನ್ನು ನಂಬಿ ಬದುಕುತ್ತಿದ್ದವು. ಈಗ ದೇಶವೇ ಲಾಕ್‍ಡೌನ್ ಆಗಿದೆ. ಜೊತೆಗೆ ನಂದಿ ಬೆಟ್ಟದ ಬಾಗಿಲು ಮುಚ್ಚಿದೆ. ಅಲ್ಲಿಗೆ ಯಾವುದೇ ಪ್ರವಾಸಿಗರು ಹೋಗುತ್ತಿಲ್ಲ. ಅಂಗಡಿಗಳು ತೆರೆಯುತ್ತಿಲ್ಲ. ಆದ್ದರಿಂದ ಅಲ್ಲಿರುವ ಸಾವಿರಾರು ಮಂಗಗಳು ಹಸಿವಿನಿಂದ ಬಳಲುತ್ತಿವೆ. ಇದನ್ನು ಅರಿತ ಚಂದನ್ ಅಲ್ಲಿಗೆ ಹೋಗಿ ಅವುಗಳಿಗೆ ಆಹಾರ ನೀಡಿದ್ದಾರೆ.

    https://www.instagram.com/p/B9WlVsagIVt/

    ಸಾಕಷ್ಟು ಸಿನಿಮಾ ನಟ-ನಟಿಯರು ಕೂಡ ತಮ್ಮ ಮನೆ ಅಕ್ಕಪಕ್ಕ ನಾಯಿಗಳು ಮತ್ತು ಬೀದಿನಾಯಿಗಳಿಗೆ ಊಟ ನೀಡಿ ಮಾನವೀಯತೆ ಮೆರೆಯುತ್ತಿದ್ದಾರೆ. ಇತ್ತೀಚೆಗಷ್ಟೇ ನಟಿ ಐಂದ್ರಿಂತಾ ರೇ ಅವರು ತಮ್ಮ ಮನೆಯ ಅಕ್ಕಪಕ್ಕದ ಬೀದಿನಾಯಿಗಳಿಗೆ ಊಟ ನೀಡಿದ್ದರು. ಈ ಹಿಂದೆ ಸಂಯುಕ್ತ ಹೊರನಾಡು ಅವರು ಕೂಡ ತಮ್ಮ ಸ್ನೇಹಿತ ಬಳಗವನ್ನು ಕಟ್ಟಿಕೊಂಡು ಬೆಂಗಳೂರಿನ ಹಲವಡೆ ಬೀದಿನಾಯಿಗಳಿಗೆ ಆಹಾರ ನೀಡಿದ್ದರು.

  • ಬಿಟ್ಟು ಹೋದ ಪ್ರಿಯಕರನಿಗಾಗಿ ನಂದಿಬೆಟ್ಟದ ಬಳಿ 2-3 ತಿಂಗಳಿಂದ ಕಾಯ್ತಿರೋ ಯುವತಿ

    ಬಿಟ್ಟು ಹೋದ ಪ್ರಿಯಕರನಿಗಾಗಿ ನಂದಿಬೆಟ್ಟದ ಬಳಿ 2-3 ತಿಂಗಳಿಂದ ಕಾಯ್ತಿರೋ ಯುವತಿ

    ಚಿಕ್ಕಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ನಂದಿಬೆಟ್ಟದ ಅಂಚಿನಲ್ಲೇ ಇರುವ ಕಾರಹಳ್ಳಿ ಗ್ರಾಮದಲ್ಲಿ ಕಳೆದ 2-3 ತಿಂಗಳುಗಳಿಂದ ಅಪರಿಚಿತ ಯುವತಿಯೊಬ್ಬಳು ಮಾನಸಿಕ ಅಸ್ವಸ್ಥೆಯ ರೀತಿ ವರ್ತನೆ ಮಾಡುತ್ತಾ ನಂದಿಬೆಟ್ಟದ ರಸ್ತೆಯಲ್ಲಿ ಅಲೆದಾಡುತ್ತಿದ್ದಳು.

    ಗ್ರಾಮದ ಬಸ್ ನಿಲ್ದಾಣ, ಬೇಕರಿ, ಸೇರಿದಂತೆ ನಂದಿಬೆಟ್ಟದ ಕಡೆಯ ರಸ್ತೆಯುದ್ದಕ್ಕೂ ನಡೆದುಕೊಂಡು ಹೋಗುವುದು ಮರಳಿ ವಾಪಸ್ ಬಂದು ರಾತ್ರಿ ಬ್ಯಾಂಕಿನ ಸಿಸಿಟಿವಿ ಕೆಳಭಾಗದಲ್ಲಿ ಮಲಗುತ್ತಿದ್ದಳು. ಮತ್ತೆ ಬೆಳಾಗಾದರೆ ಇದೇ ಕಾಯಕ ಮಾಡುತ್ತಿದ್ದಳು. ಯಾರೋ ಮಾನಸಿಕ ಅಸ್ವಸ್ಥೆ ಹುಚ್ಚಿ ಎಂದು ಗ್ರಾಮಸ್ಥರು ಸುಮ್ಮನಾಗಿದ್ದರು. ಯಾರ ಜೊತೆಯೂ ಮಾತನಾಡುತ್ತಿರಲಿಲ್ಲ, ಯಾರಾದರೂ ತಿನ್ನಲೂ ಏನಾದರೂ ಕೊಟ್ಟರೂ ತಿನ್ನುತ್ತಿರಲಿಲ್ಲ.

    ಹೀಗಾಗಿ 2-3 ತಿಂಗಳು ಗಳಿಂದ ಯುವತಿಯ ಇದೇ ರೀತಿಯ ವರ್ತನೆ ಕಂಡು ಗ್ರಾಮಸ್ಥರು ಯುವತಿಯ ಏನಾದರೂ ಅನಾಹುತ ಆಗಬಹುದು ಅಂತ ಯುವತಿಯನ್ನ ವಿಚಾರಿಸಲು ಮುಂದಾಗಿದ್ದಾರೆ. ಆದರೆ ಆಕೆಗೆ ಕನ್ನಡ ಭಾಷೆ ಅರ್ಥ ಆಗುತ್ತಿರಲಿಲ್ಲ. ಗ್ರಾಮಸ್ಥರಿಗೆ ಹಿಂದಿ ಬರುತ್ತಿರಲಿಲ್ಲ. ಹೀಗಾಗಿ ಗ್ರಾಮದಲ್ಲಿ ಹಿಂದಿ ಮಾತನಾಡುತ್ತಿದ್ದ ಹಸಿನಾ ಎಂಬಾಕೆಯನ್ನ ಕರೆಸಿದ್ದು, ಆಗ ಆಸಲಿ ವಿಷಯ ಗೊತ್ತಾಗಿದೆ.

    ಅರ್ಧದಾರಿಯಲ್ಲೇ ಬಿಟ್ಟು ಹೋದ ಪ್ರಿಯಕರ
    ಕಾರಹಳ್ಳಿ ಗ್ರಾಮಕ್ಕೆ ತನ್ನ ಪ್ರಿಯಕರ ಜೊತೆ ಬಂದಿದ್ದ ಈ ಯುವತಿ, ಹಸೀನಾ ಮನೆ ಪಕ್ಕದಲ್ಲೇ ವಾಸವಾಗಿದ್ದರಂತೆ. ಪದೇ ಪದೇ ಸಣ್ಣ ಸಣ್ಣ ವಿಚಾರಗಳಿಗೂ ಗಲಾಟೆ ಮಾಡಿಕೊಳ್ಳುತ್ತಿದ್ದರು. ಆದರೆ ಒಂದು ದಿನ ಊರಿಗೆ ಹೋಗೋಣ ಎಂದು ಕರೆದುಕೊಂಡು ಹೋದ ಪ್ರಿಯಕರ ಅಜಯ್ ತನ್ನನ್ನ ಅರ್ಧದಾರಿಯಲ್ಲೇ ಬಿಟ್ಟು ಹೋಗಿದ್ದಾನೆ ಅಂತ ಈ ಯುವತಿ ಹೇಳುತ್ತಿದ್ದಾಳೆ.

    ಯುವತಿ ಹೇಳಿರುವ ಪ್ರಕಾರ ತಾನು ಕೋಲ್ಕತ್ತಾ ಮೂಲದವಳಾಗಿದ್ದು ತನ್ನನ್ನ ಪ್ರೀತಿಸಿದ ಅಜಯ್ ಎಂಬಾತ ಇಲ್ಲಿಗೆ ಕರೆದುಕೊಂಡು ಬಂದಿದ್ದ. ಆದರೆ ಊರಿಗೆ ವಾಪಸ್ ಹೋಗೋಣ ಎಂದು ಕರೆದುಕೊಂಡು ಹೋದವ ನನ್ನನ್ನ ಬಿಟ್ಟು ಹೋಗಿದ್ದಾನೆ. ಹೀಗಾಗಿ ಮರಳಿ ಅಜಯ್ ತನಗಾಗಿ ಇದೇ ಗ್ರಾಮಕ್ಕೆ ಬರುತ್ತಾನೆ ಎಂದು ತಾನು ಕಾಯುತ್ತಿರುವುದಾಗಿ ಹಿಂದಿ ಭಾಷೆಯಲ್ಲಿ ಹೇಳಿದ್ದಾಳೆ. ಯುವತಿಯ ಕಷ್ಟಕ್ಕೆ ಮನಸೋತ ಗ್ರಾಮಸ್ಥರು ಆಕೆಯನ್ನ ಸದ್ಯ ಮಹಿಳಾ ಸ್ವಾಂತಾನ ಕೇಂದ್ರಕ್ಕೆ ಕಳುಹಿಸಿದ್ದು, ಅಲ್ಲಿ ಆಶ್ರಯ ಕಲ್ಪಿಸಿದ್ದಾರೆ. ಸದ್ಯ ಮಾನಸಿಕವಾಗಿ ಜರ್ಜರಿತಳಾಗಿರುವ ಯುವತಿ ಸರಿಯಾಗಿ ಪ್ರತಿಕ್ರಿಯೆ ಕೊಡುತ್ತಿಲ್ಲ.

  • ನಂದಿಗಿರಿಧಾಮದಲ್ಲಿ ಪ್ರವಾಸಿಗರು ಐಸ್ ಕ್ರೀಂ, ತಿಂಡಿ ತಿನ್ನಂಗಿಲ್ಲ

    ನಂದಿಗಿರಿಧಾಮದಲ್ಲಿ ಪ್ರವಾಸಿಗರು ಐಸ್ ಕ್ರೀಂ, ತಿಂಡಿ ತಿನ್ನಂಗಿಲ್ಲ

    ಚಿಕ್ಕಬಳ್ಳಾಪುರ: ವಿಶ್ವವಿಖ್ಯಾತ ನಂದಿಗಿರಿಧಾಮ ಅಂದ್ರೆ ಅದು ಪ್ರೇಮಿಗಳ ಪಾಲಿನ ಹಾಟ್ ಫೇವರಿಟ್ ತಾಣ. ಅಲ್ಲಿ ಸದಾ ಪ್ರೇಮ ಪಕ್ಷಿಗಳದ್ದೇ ಕಲರವ. ಆದರೆ ಆ ಪ್ರೇಮಧಾಮ ನಂದಿಗಿರಿಧಾಮಕ್ಕೆ ಬರೋ ಪ್ರೇಮಿಗಳು ಹಾಗೂ ಪ್ರವಾಸಿಗರಿಗೆ ಈಗ ರೌಡಿಗಳ ಕಾಟ ಶುರುವಾಗಿದೆ. ಅವರು ಅಂತಿಂಥ ರೌಡಿಗಳಲ್ಲ, ಮೈ ಮೇಲೆ ಎರಗ್ತಾರೆ, ಪರಚ್ತಾರೆ. ಕೇಳಿದ್ದನ್ನ ಕೊಡಲಿಲ್ಲ ಅಂದ್ರೆ ತಮಗೆ ಬೇಕಾದದ್ದನ್ನ ಬಲವಂತವಾಗಿ ಕಸಿದುಕೊಂಡು ಹೋಗ್ತಾ ಇರ್ತಾರೆ. ಹೊಂಚು ಹಾಕಿ ಪ್ರೇಮಿಗಳನ್ನ ಅಡ್ಡ ಹಾಕಿ ಐಸ್ ಕ್ರೀಂ ಕಸಿದುಕೊಳ್ಳೋ ಕೋತಿಗಳು ನಂದಿಗಿರಿಧಾಮದಲ್ಲಿ ಒಂದು ರೀತಿ ರೌಡಿಸಂ ಮಾಡುತ್ತಿವೆ.

    ನಂದಿಗಿರಿಧಾಮದಲ್ಲಿ ಯಾರ ಕೈಯಲ್ಲಾದ್ರೂ ಐಸ್ ಕ್ರೀಂ ಕಂಡರೆ ಕೋತಿಗಳು ಎಂಟ್ರಿ ನೀಡುತ್ತವೆ. ಒಂದು ರೀತಿ ಹೆದರಿಸಿ ಕೈಯಲ್ಲಿರೋ ಐಸ್ ಕ್ರೀ ಕಸಿದುಕೊಂಡು ಓಡಿ ಹೋಗುತ್ತವೆ. ಕೇವಲ ಐಸ್ ಕ್ರೀ ಅಲ್ಲದೇ ಕೈಯಲ್ಲಿ ಯಾವುದೇ ತಿಂಡಿ ಇದ್ದರೂ ಕೋತಿಗಳು ಕಸಿದುಕೊಳ್ಳುತ್ತವೆ. ನಂದಿಗಿರಿಧಾಮದ ಸ್ಯಾಂಕಿ ವೃತ್ತದಲ್ಲಿ ಹೋಟೆಲ್ ಗಳು, ಅಂಗಡಿ ಮುಂಗಟ್ಟುಗಳು ಸೇರಿದಂತೆ ಐಸ್ ಕ್ರೀಂ ಪಾರ್ಲರ್ ಇದೆ. ಈ ಸ್ಯಾಂಕಿ ವೃತ್ತದ ಅಂಗಡಿ, ಹೋಟೆಲ್ ಗಳ ಮೇಲೆ ಕೂತು ಹೊಂಚು ಹಾಕೋ ಕೋತಿಗಳು, ಪ್ರವಾಸಿಗರು ಐಸ್ ಕ್ರೀಂ, ಕೂಲ್ ಡ್ರಿಂಕ್ಸ್ ಖರೀದಿಸಿಕೊಂಡು ಬಂದ್ರೆ ಸಾಕು ಅಟ್ಯಾಕ್ ಮಾಡಿ ಬಿಡುತ್ತವೆ.

    ಕೈಯಲ್ಲಿರೋ ತಿಂಡಿ ಕೊಡದಿದ್ದರೆ ಮೈ ಮೇಲೆ ಎರಗಿ ಪರಚಿ ಕಚ್ಚೇಬಿಡ್ತವೆ ಅನ್ನೋ ಭಯದಿಂದ ಪ್ರವಾಸಿಗರು ಕೊಟ್ಟು ಸುಮ್ಮನಾಗುತ್ತಾರೆ. ಈ ಕೋತಿಗಳ ಉಪಟಳಕ್ಕೆ ಕಡಿವಾಣ ಹಾಕಬೇಕಾದ ಅಧಿಕಾರಿಗಳು ಸಹ ಕೋತಿಗಳಿಗೆ ಹೇಗೆ ಕಡಿವಾಣ ಹಾಕೋದು ಅಂತ ಗೊತ್ತಾಗ್ತಿಲ್ಲ ಅಂತ ತಮ್ಮ ಅಸಾಹಯಕತೆಯನ್ನ ತೋಡಿಕೊಳ್ಳುತ್ತಿದ್ದಾರೆ.

    ಈ ಬಗ್ಗೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ನಂದಿಗಿರಿಧಾಮದ ವಿಶೇಷಾಧಿಕಾರಿ, ಅಕ್ಕ ಪಕ್ಕದ ಬೆಟ್ಟ ಗುಡ್ಡಗಳಲ್ಲಿ ಕೋತಿಗಳಿಗೆ ತಿನ್ನೋಕೆ ಆಹಾರ ಇಲ್ಲ. ಹೀಗಾಗಿ ಸರಿ ಸುಮಾರು 3000 ಕ್ಕೂ ಹೆಚ್ಚು ಕೋತಿಗಳು ನಂದಿಬೆಟ್ಟದಲ್ಲಿ ಗುಂಪು ಗುಂಪುಗಳಾಗಿ ಬಂದು ಬೀಡುಬಿಟ್ಟಿವೆ. ಕೋತಿಗಳ ಮೂಕರೋಧನಕ್ಕೆ ಮನಸೋತ ಕೆಲವರು ಹಣ್ಣು ಹಂಪಲು ತಂದು ಹಾಕೋದು ಉಂಟು. ಆದರೆ ಅದು ಸಾಕಾಗುತ್ತಿಲ್ಲ ಅಂತ ಕೋತಿಗಳು ಪ್ರವಾಸಿಗರ ಬಳಿ ಈ ರೀತಿ ರೌಡಿಸಂ ಮಾಡ್ತಾ ಕಸಿದುಕೊಂಡೋ ತಿನ್ನೋ ಕೆಲಸ ಮಾಡುತ್ತಿವೆ. ಆದರೆ ಅವುಗಳಿಗೆ ಹೇಗೆ ಕಡಿವಾಣ ಹಾಕಬೇಕು ಅನ್ನೋದು ನಮಗೂ ಗೊತ್ತಾಗ್ತಿಲ್ಲ ಅಂತ ಅಸಹಾಯಕತೆ ವ್ಯಕ್ತಪಡಿಸುತ್ತಾರೆ.

  • ಇಬ್ಬನಿಯ ಆಟ, ಮೋಡಗಳ ಮೈಮಾಟ ಪ್ರವಾಸಿಗರಿಗೆ ರಸದೂಟ

    ಇಬ್ಬನಿಯ ಆಟ, ಮೋಡಗಳ ಮೈಮಾಟ ಪ್ರವಾಸಿಗರಿಗೆ ರಸದೂಟ

    -ಚುಮುಚುಮು ಚಳಿಯಯಲ್ಲಿ ಮಿಂದೆದ್ದ ಪ್ರವಾಸಿಗರು

    ಚಿಕ್ಕಬಳ್ಳಾಪುರ: ಜಿಲ್ಲೆಯ ನಂದಿ ಬೆಟ್ಟ ಬರದ ನಡುವೆಯೂ ಪ್ರವಾಸಿಗರ ಪಾಲಿಗೆ ರಸದೌತಣ ಉಣಬಡಿಸುತ್ತಿದೆ. ಉತ್ತರ ಕರ್ನಾಟಕ ಹಾಗೂ ಕರಾವಳಿ ಭಾಗದ ಪ್ರವಾಸಿಗರ ದಂಡು ಈಗ ಬರದನಾಡಿನ ಪ್ರವಾಸಿತಾಣದತ್ತ ಲಗ್ಗೆ ಇಡುತ್ತಿದ್ದು ಇಡೀ ಸ್ಥಳ ಪ್ರವಾಸಿಗರಿಂದ ತುಂಬಿ ತುಳುಕುತ್ತಿದೆ.

    ಬೆಟ್ಟಕ್ಕೆ ಮುತ್ತಿಡೋಕೆ ಲಗ್ಗೆ ಇಡ್ತಿರೋ ಬೆಳ್ಳಿ ಮೋಡಗಳು, ಬೆಳ್ಳಿ ಮೋಡಗಳ ಇಬ್ಬನಿಯ ಮುಸುಕಿಗೆ ಬೆಳ್ಳನೆಯ ಬಣ್ಣ ಪಡೆದ ಹಚ್ಚು ಹಸಿರು ಪಡೆದ ಪ್ರವಾಸಿ ತಾಣವೇ ನಂದಿ ಬೆಟ್ಟ. ಚಿಕ್ಕಬಳ್ಳಾಪುರ ಜಿಲ್ಲೆ ಈ ಬಾರಿಯೂ ಬರದಿಂದ ಜಿಲ್ಲೆಯ ಜನತೆ ತತ್ತರಿಸಿ ಹೋಗಿದ್ದಾರೆ. ಹಾಗಿದ್ದರೂ ಈ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣ ನಂದಿಗಿರಿಧಾಮ ಮಾತ್ರ ಬರದ ನಡುವೆಯೂ ಹಚ್ಚ ಹಸಿರಿನಿಂದ ಕಂಗೊಳಿಸುತ್ತಾ ಪ್ರವಾಸಿಗರನ್ನ ತನ್ನತ್ತ ಬರ ಸೆಳೆಯುತ್ತಿದೆ.

    ರಾಜಧಾನಿ ಸಿಲಿಕಾನ್ ಸಿಟಿಯಿಂದ ಕೂಗಳತೆ ದೂರದ ನಂದಿ ಹಿಲ್ಸ್ ಬೆಂಗಳೂರಿಗರ ಪಾಲಿಗರ ವಿಕೇಂಡ್ ಹಾಟ್ ಸ್ಪಾಟ್. ಇದಲ್ಲದೆ ಈ ಬಾರಿ ಉತ್ತರ ಕರ್ನಾಟಕ ಹಾಗೂ ಕರಾವಳಿ ಭಾಗದಲ್ಲಾದ ನೆರೆಗೆ ಬೆದರಿದ ಜನ ನಂದಿಗಿರಿಧಾಮದತ್ತ ಮುಖ ಮಾಡಿದ್ದಾರೆ. ಹೀಗಾಗಿ ಹಿಂದಿನಿಗಿಂತಲೂ ಅತಿ ಹೆಚ್ಚಿನ ಪ್ರವಾಸಿಗರು ನಂದಿ ಗಿರಿಧಾಮಕ್ಕೆ ಲಗ್ಗೆಯಿಡುತ್ತಿದ್ದು, ಅಲ್ಲಿಯ ಸೌಂದರ್ಯಕ್ಕೆ ಮಾರು ಹೋಗುತ್ತಿದ್ದಾರೆ. ಒಟ್ಟಿನಲ್ಲಿ ಬರದ ನಡುವೆಯೂ ಈ ಬಾರಿ ಬಾಡದ ನಂದಿಗಿರಿಧಾಮ ತುಂತುರು ಮಳೆಯ ಸಿಂಚನಕ್ಕೆ ಹಚ್ಚು ಹಸುರಾಗಿ ಕಂಗೊಳಿಸುತ್ತಿದ್ದು ಪ್ರವಾಸಿಗರನ್ನ ಕೈ ಬೀಸಿ ಕರೆಯುತ್ತಿದೆ.