Tag: napoklu

  • ಮಡಿಕೇರಿಯಲ್ಲಿ ಭೀಕರ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಸಾವು

    ಮಡಿಕೇರಿಯಲ್ಲಿ ಭೀಕರ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಸಾವು

    ಮಡಿಕೇರಿ: ಬೈಕ್ (Bike) ಮತ್ತು ಆಲ್ಟೊ (Alto) ಕಾರಿನ ನಡುವೆ ಭೀಕರ ಅಪಘಾತ (Accident) ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಡಿಕೇರಿಯಲ್ಲಿ (Madikeri) ನಡೆದಿದೆ.

    ಅಪ್ಪಾಜಿ (19) ಮೃತ ದುರ್ದೈವಿ. ಈತ ನಾಪೊಕ್ಲುವಿನ (Napoklu) ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ. ಮೂರ್ನಾಡು (Murnad) ಕಡೆಗೆ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಮೂರ್ನಾಡು ಕಡೆಯಿಂದ ನಾಪೊಕ್ಲುವಿಗೆ ಬರುತ್ತಿದ್ದ ಆಲ್ಟೊ ಕಾರು ಬೈಕಿಗೆ ಡಿಕ್ಕಿ ಹೊಡೆದಿದೆ. ಇದನ್ನೂ ಓದಿ: ಲಂಚ ತೆಗೆದುಕೊಳ್ಳುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪೊಲೀಸರು – ತಪ್ಪಾಯ್ತು ಬಿಟ್ಬಿಡಿ ಅಣ್ಣಾ ಎಂದು ಸಾರ್ವಜನಿಕರಲ್ಲಿ ಕ್ಷಮೆ

    ತಾಲೂಕಿನ ನಾಪೊಕ್ಲು- ಮೂರ್ನಾಡು ಮುಖ್ಯರಸ್ತೆಯ ಹೊದವಾಡ ಗ್ರಾಮದ ತಿರುವಿನಲ್ಲಿ ಘಟನೆ ನಡೆದಿದ್ದು, ಅಪ್ಪಾಜಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಬೈಕಿನಲ್ಲಿದ್ದ ಇನ್ನೊಬ್ಬ ಸಹಪ್ರಯಾಣಿಕ ಗಂಭೀರ ಗಾಯಗೊಂಡಿದ್ದು, ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಸ್ಥಳಕ್ಕೆ ನಾಪೊಕ್ಲು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಕೋಪದಲ್ಲಿ ಅಜ್ಜಿ ಕೊಂದು, ಕೊರಿಯನ್ ವೆಬ್ ಸೀರಿಸ್‌ನಂತೆ ಹೆಣ ಸುಡಲು ಹೋಗಿ ಪೊಲೀಸರಿಗೆ ಸಿಕ್ಕಿಬಿದ್ದ

  • ನಾಲ್ಕು ದಿನ ಗಾಳಿ, ಮಳೆಗೆ ಬೆಟ್ಟದ ಪೊದೆಯಲ್ಲಿ ಸಿಲುಕಿದ ವೃದ್ಧೆ ರಕ್ಷಣೆ

    ನಾಲ್ಕು ದಿನ ಗಾಳಿ, ಮಳೆಗೆ ಬೆಟ್ಟದ ಪೊದೆಯಲ್ಲಿ ಸಿಲುಕಿದ ವೃದ್ಧೆ ರಕ್ಷಣೆ

    ಮಡಿಕೇರಿ: 4 ದಿನಗಳ ಹಿಂದೆ ಕಣ್ಮರೆಯಾಗಿದ್ದ ವೃದ್ಧೆ ಮಡಿಕೇರಿ ತಾಲೂಕಿನ ಬಲ್ಲಮಾವಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಟ್ಟ ಪ್ರದೇಶದ ಪೊದರೆಯೊಂದರ ಬಳಿ ಪತ್ತೆಯಾಗಿದ್ದಾರೆ.

    ಬಲ್ಲಮಾವಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಂಜಾಟ್ ಕಾಲೋನಿಯ 80 ವರ್ಷದ ಸೀತಮ್ಮ ಅವರನ್ನು ರಕ್ಷಿಸಲಾಗಿದೆ. ಸೀತಮ್ಮ ಸಂಬಂಧಿಕರ ಮನೆಯಿಂದ ಹೊರಟು ತಮ್ಮ ಮನೆಗೆ ಬರುತ್ತಿರುವಾಗ ದಾರಿ ಸರಿಯಾಗಿ ಗೋತ್ತಿಲ್ಲದ ಕಾರಣ ಬೆಟ್ಟ ಪ್ರದೇಶದ ಸುತ್ತಮುತ್ತ ಓಡಾಟ ನಡೆಸಿದ್ದಾರೆ. ಈ ವೇಳೆ ಕಾಡಿನ ಪೊದೆಯೊಂದರ ಬಳಿ ಆಶ್ರಯ ಪಡೆದಿದ್ರು. ನಾಲ್ಕು ದಿನಗಳಿಂದ ಮನೆಗೆ ಬರದ ಹಿನ್ನೆಲೆ ಗ್ರಾಮಸ್ಥರೆಲ್ಲಾ ಸೇರಿಕೊಂಡು ನಾಲ್ಕು ದಿನಗಳಿಂದ ಹುಡುಕಾಟ ನಡೆಸಿದ್ದಾರೆ.

    ಅಚ್ಚರಿ ಎಂಬಂತೆ ಸೀತಮ್ಮ ಪೊದೆಯಲ್ಲಿ ಸಿಕ್ಕಿದ್ದಾರೆ. ಆದರೆ ಈಕೆ 4 ದಿನಗಳ ಕಾಲ ಊಟ ಮಾಡದೆ ಚಳಿ, ಮಳೆಗೆ ಬೆಟ್ಟದ ಪೊದೆಯಲ್ಲಿ ಜೀವ ಉಳಿಸಿದ್ದೇ ಗ್ರಾಮಸ್ಥರಿಗೆ ವಿಸ್ಮಯ ಮೂಡಿಸಿದೆ. ರೆವೆನ್ಯೂ ಇಲಾಖೆ ಸಿಬ್ಬಂದಿ ಪೂಣಚ್ಚ ಹಾಗೂ ಗ್ರಾಮ ಪಂಚಾಯಿತಿ ಸದಸ್ಯ ರವೀಂದ್ರ ಮತ್ತಿತರರು ಒಟ್ಟಾಗಿ 4 ದಿನಗಳಿಂದ ಸುತ್ತಮುತ್ತಲಿನ ಕಾಡಿನಲ್ಲಿ ಹುಡುಕಾಟ ನಡೆಸಿದ್ದರು. ಇದನ್ನೂ ಓದಿ: ನಾಡದೇವಿ ಚಾಮುಂಡೇಶ್ವರಿ ಹಬ್ಬಕ್ಕೆ ದಿನಗಣನೆ – ಮೈಸೂರು ದಸರಾಕ್ಕೆ ಬಹಿಷ್ಕಾರ ಹಾಕಿದ ಮಾವುತ ಕಾವಾಡಿಗಳು 

    ಮನೆಯಿಂದ ಸುಮಾರು 2 ಕಿ.ಮೀ. ದೂರದ ಬೆಟ್ಟದ ಪೊದೆಯಲ್ಲಿ ಸೀತಮ್ಮ ಪತ್ತೆಯಾಗಿದ್ದಾರೆ. ಅವರನ್ನು ಮನೆಗೆ ಹೊತ್ತು ತಂದು ಪ್ರಥಮ ಚಿಕಿತ್ಸೆ ನೀಡಿದ ಬಳಿಕ ವಾಹನದಲ್ಲಿ ನಾಪೋಕ್ಲುಗೆ ಕರೆದುಕೊಂಡು ಬಂದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದೀಗ ವೃದ್ಧೆ ಚೇತರಿಸಿಕೊಳ್ಳುತ್ತಿರುವುದರಿಂದ ಗ್ರಾಮಸ್ಥರು ನಿಟ್ಟುಸಿರು ಬಿಡುವಂತಾಯಿತು. ಈ ಮಾನವೀಯ ಕಾರ್ಯಕ್ಕೆ ಸಾರ್ವಜನಿಕರು ಪ್ರಸಂಸೆ ವ್ಯಕ್ತಪಡಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಯುವತಿಯ ಹೊಟ್ಟೆಯಲ್ಲಿ ಒಂದೂವರೆ ಕೆಜಿ ಕೂದಲು – ಶಸ್ತ್ರಚಿಕಿತ್ಸೆ ಮೂಲಕ ಹೊರತೆಗೆದ ವೈದ್ಯರು

    ಯುವತಿಯ ಹೊಟ್ಟೆಯಲ್ಲಿ ಒಂದೂವರೆ ಕೆಜಿ ಕೂದಲು – ಶಸ್ತ್ರಚಿಕಿತ್ಸೆ ಮೂಲಕ ಹೊರತೆಗೆದ ವೈದ್ಯರು

    – ಗೆಡ್ಡೆ ನೋಡಿ ಆಶ್ಚರ್ಯಗೊಂಡ ಸಿಬ್ಬಂದಿ

    ಮಡಿಕೇರಿ: ನಾಪೋಕ್ಲು ಗ್ರಾಮದ ಯುವತಿಯ ಹೊಟ್ಟೆಯಲ್ಲಿದ್ದ ಒಂದೂವರೆ ಕೆಜಿ ತೂಕದ ಕೂದಲಿನ ಗೆಡ್ಡೆಯನ್ನು ಹೊರತೆಗೆಯುವಲ್ಲಿ ಮಡಿಕೇರಿಯ ಜಿಲ್ಲಾಸ್ಪತ್ರೆಯ ವೈದ್ಯರು ಯಶಸ್ವಿಯಾಗಿದ್ದಾರೆ.

    ಕಳೆದ ಹಲವಾರು ವರ್ಷಗಳಿಂದ 20 ವರ್ಷದ ಯುವತಿ ಯಾರಿಗೂ ತಿಳಿಯದಂತೆ ಕೂದಲನ್ನು ತಿಂದುಕೊಂಡು ಇದ್ದಳು. ಈ ಪರಿಣಾಮ ಬರೋಬ್ಬರಿ ಒಂದೂವರೆ ಕೆ.ಜಿಯಷ್ಟು ಕೂದಲು ಹೊಟ್ಟೆಯಲ್ಲಿ ಶೇಖರಣೆಯಾಗಿದ್ದು, ಗೆಡ್ಡೆಯಾಗಿದೆ. ಈ ಹಿನ್ನೆಲೆ ಕೂದಲಿನ ಗೆಡ್ಡೆಯನ್ನು ಮಡಿಕೇರಿಯ ಜಿಲ್ಲಾಸ್ಪತ್ರೆಯ ವೈದ್ಯರು ಶಸ್ತ್ರಚಿಕಿತ್ಸೆ ಮಾಡಿ ಹೊರ ತೆಗೆದಿದ್ದಾರೆ. ಇದನ್ನೂ ಓದಿ: ಮಾರ್ಚ್ ಅಂತ್ಯದ ವೇಳೆಗೆ ಹುಬ್ಬಳ್ಳಿ ಸೇರಿ 13 ವಿಮಾನ ನಿಲ್ದಾಣಗಳ ಖಾಸಗೀಕರಣಕ್ಕೆ ಸಿದ್ಧತೆ

    ನಾಪೋಕ್ಲು ಗ್ರಾಮದಿಂದ ಹೊಟ್ಟೆ ನೋವು ಎಂದು ಹೇಳುತ್ತಿದ್ದ ಯುವತಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿಕೊಳ್ಳಲಾಗಿತ್ತು. ಈ ಯುವತಿಯನ್ನು ಪರೀಕ್ಷೆಗೊಳಪಡಿಸಿದಾಗ ಆಕೆಯ ಹೊಟ್ಟೆಯಲ್ಲಿ ಕೂದಲಿನ ಆಕಾರದ ಕಪ್ಪಾದ ಗೆಡ್ಡೆ ವೈದ್ಯರಿಗೆ ಗೋಚರಿಸಿದೆ. ಯುವತಿ ಯಾವಗಲೂ ಹೊಟ್ಟೆ ನೋವಿನಿಂದಾಗಿ ಏನು ತಿಂದರೂ ವಾಂತಿ ಮಾಡಿಕೊಳ್ಳುತ್ತಿದ್ದಳು. ಆಕೆಯಲ್ಲಿ ರಕ್ತದ ಪ್ರಮಾಣವೂ ಕಡಿಮೆಯಾಗಿದ್ದ ಹಿನ್ನೆಲೆ ರಕ್ತ ಕೊಡಿಸಿ ಉಪಚರಿಸಿದ ಬಳಿಕ ಶಸ್ತ್ರಚಿಕಿತ್ಸೆ ಮಾಡಿ ಗೆಡ್ಡೆಯನ್ನು ಹೊರತೆಗೆಯಲಾಗಿದೆ.

    ಈ ಕುರಿತು ಮಾತನಾಡಿದ ವೈದ್ಯರು, ಗೆಡ್ಡೆ ಒಂದೂವರೆ ಕೆಜಿ ತೂಕವಿದ್ದು, ಇದೀಗ ಯುವತಿ ಆರೋಗ್ಯದಿಂದಿದ್ದಾಳೆ. ಇದೊಂದು ಅಪರೂಪದ ಪ್ರಕರಣವಾಗಿದೆ. ‘ಟ್ರೆಂಕೊಬಸಾರ್’ ಎಂದು ಕರೆಯಲ್ಪಡುವ ಈ ಪ್ರಕರಣ ಇದೇ ಮೊದಲ ಬಾರಿಗೆ ಜಿಲ್ಲೆಯಲ್ಲಿ ಕಾಣಿಸಿಕೊಂಡಿದೆ. ಕೂದಲು ತಿನ್ನುವುದರಿಂದ ಅದು ಜೀರ್ಣವಾಗದೆ ಗೆಡ್ಡೆಯ ರೂಪ ತಾಳುತ್ತದೆ. ಇದು ಜೀವಕ್ಕೆ ಅಪಾಯಕಾರಿ. ಮೂರು ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ಮಾಡಿ ಈ ಗೆಡ್ಡೆಯನ್ನು ಹೊರ ತೆಗೆಯಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ:  ರೇವಣ್ಣ DCM ಆಗ್ತಾನೆಂದು ಬಿಎಸ್‍ವೈಗೆ ಅಧಿಕಾರ ಬಿಟ್ಟು ಕೊಡಲಿಲ್ಲ, ನನ್ನ ಬಳಿ ವೀಡಿಯೋ ದಾಖಲೆ ಇದೆ: ಜಮೀರ್

    ಆಶ್ಚರ್ಯಗೊಂಡ ಸಿಬ್ಬಂದಿ!

    ಶಸ್ತ್ರಚಿಕಿತ್ಸೆಯನ್ನು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಮೆಡಿಕಲ್ ಸೈನ್ಸ್ ಸಹಾಯಕ ಪ್ರಾಧ್ಯಾಪಕ ಡಾ.ಹೆಚ್.ಅಜಿತ್‍ಕುಮಾರ್, ಡಾ.ಅಭಿನಂದನ್, ಡಾ.ಪೊನ್ನಪ್ಪ, ಡಾ.ಪ್ರವೀಣ್‍ಕುಮಾರ್, ಡಾ.ತಾರಾನಂದನ್, ಡಾ.ಪ್ರದೀಪ್ ಶಸ್ತ್ರಚಿಕಿತ್ಸೆ ನಡೆಸಿ ಗೆಡ್ಡೆ ಹೊರತೆಗೆದಿದ್ದಾರೆ. ಯುವತಿ ಇದೀಗಾ ಅರೋಗ್ಯದಿಂದ ಇದ್ದು, ನಾಪೋಕ್ಲು ಮನೆಗೆ ಕಳುಹಿಸಲಾಗಿದೆ. ಈ ಗೆಡ್ಡೆ ಆಕಾರದ ಕೂದಲನ್ನು ನೋಡಿದ ಅಸ್ಪತ್ರೆಯ ಸಿಬ್ಬಂದಿ ಆಶ್ಚರ್ಯ ಪಡುತ್ತಿದ್ದಾರೆ.

  • ಸೋಂಕಿತನ ಹೆಸರು ಬಹಿರಂಗ- ಅಧಿಕಾರಿಗಳ ವಿರುದ್ಧ ದೂರು

    ಸೋಂಕಿತನ ಹೆಸರು ಬಹಿರಂಗ- ಅಧಿಕಾರಿಗಳ ವಿರುದ್ಧ ದೂರು

    ಮಡಿಕೇರಿ: ಕೊರೊನಾ ಮಹಾಮಾರಿ ಹೆಸರು ಕೇಳಿದರೆ ಸಾಕು ಜನರು ಬೆಚ್ಚಿ ಬೀಳುತ್ತಿದ್ದು, ಎಷ್ಟೇ ಜಾಗೃತಿ ಮೂಡಿಸಿದರೂ ಕೂಡ ಕೊರೊನಾ ಸೋಂಕಿತ ವ್ಯಕ್ತಿ ನೋಡುವ ಭಾವನೆ ಭಿನ್ನವಾಗುತ್ತಿಲ್ಲ. ಈ ಕಾರಣದಿಂದಲೇ ಸರ್ಕಾರ ಕೂಡ ಸೋಂಕಿತನ ಹೆಸರು ಬಹಿರಂಗ ಮಾಡುವುದಿಲ್ಲ. ಆದರೆ ಹೊರದೇಶದಿಂದ ಕೊಡಗಿಗೆ ಬಂದ ಸೋಂಕಿತರ ಹೆಸರನ್ನು ಅಧಿಕಾರಿಗಳೇ ಬಹಿರಂಗಗೊಳಿಸುವ ಮೂಲಕ ಎಡವಟ್ಟು ಮಾಡಿದ್ದಾರೆ.

    ಕೊರೊನಾ ಮಹಾಮಾರಿ ತನ್ನ ಕಬಂಧಬಾಹುಗಳನ್ನು ವಿಸ್ತಾರ ಮಾಡುತ್ತಲೇ ಇದ್ದು, ರೋಗ ನಿರೋಧಕ ಶಕ್ತಿ ಕಡಿಮೆ ಇರುವವರ ಪಾಲಿಗಂತೂ ಭಯಾನಕವಾಗಿ ಪರಿಣಮಿಸುತ್ತಿದೆ. ಈಗಾಗಿ ಕೊರೊನಾ ಪಾಸಿಟಿವ್ ಬಂದ ವ್ಯಕ್ತಿಯನ್ನು ಜನರು ಕಳಂಕಿತನಾಗಿ ನೋಡುತ್ತಿದ್ದಾರೆ. ಆದ್ದರಿಂದಲೇ ಸರ್ಕಾರ ಸೋಂಕಿತನ ಹೆಸರನ್ನು ಬಹಿರಂಗಗೊಳಿಸುವಂತಿಲ್ಲ ಎಂದು ಸ್ಪಷ್ಟವಾಗಿ ಸೂಚಿಸಿದೆ. ಆದರೆ ವಿದೇಶದಿಂದ ಬಂದ ವ್ಯಕ್ತಿಯೊಬ್ಬರು ಸೇವಾ ಸಿಂಧುವಿನಲ್ಲಿ ಅರ್ಜಿ ಸಲ್ಲಿಸಿ, ಮಡಿಕೇರಿ ತಾಲೂಕಿನ ನಾಪೋಕ್ಲಿಗೆ ಬಂದಿದ್ದರು. ನಾಪೋಕ್ಲಿನ ತಮ್ಮ ಮನೆಯಲ್ಲಿರಬೇಕಾದ ವ್ಯಕ್ತಿ ವಿರಾಜಪೇಟೆ ಪಟ್ಟಣದ ಮೀನುಪೇಟೆಯಲ್ಲಿದಿದ್ದರು. ವಿಷಯ ತಿಳಿದ ಆರೋಗ್ಯ ಇಲಾಖೆ ಅಧಿಕಾರಿಗಳು ಆತನ ಗಂಟಲ ದ್ರವ ಸಂಗ್ರಹಿಸಿ ಪರೀಕ್ಷಿಸಿದಾಗ ವ್ಯಕ್ತಿಗೆ ಪಾಸಿಟಿವ್ ಇರುವುದು ದೃಢವಾಗಿತ್ತು. ಇದರಿಂದ ವಿರಾಜಪೇಟೆ ಪಟ್ಟಣದ ಮೀನುಪೇಟೆಯನ್ನು ನಿಷೇಧಿತ ಪ್ರದೇಶವೆಂದು ಮಾಡಿದ್ದಾರೆ.

    ಅಲ್ಲದೇ ವಿರಾಜಪೇಟೆ ಪಟ್ಟಣ ಪಂಚಾಯಿತಿ ಅಧಿಕಾರಿಗಳು ವ್ಯಕ್ತಿಯ ವಿರುದ್ಧ ನಿಯಮಗಳನ್ನು ಉಲ್ಲಂಘಿಸಿದ ಆರೋಪದ ಅಡಿ ಅಲ್ಲಿನ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆದರೆ ದೂರು ನೀಡುವಾಗ ವ್ಯಕ್ತಿಯ ಹೆಸರನ್ನು ಬಹಿರಂಗಗೊಳಿಸಿದ್ದಾರೆ. ಇದರಿಂದ ಸೋಂಕಿತ ವ್ಯಕ್ತಿಯ ಸ್ನೇಹಿತರು, ಸಂಬಂಧಿಕರು ಪಟ್ಟಣ ಪಂಚಾಯಿತಿ ಅಧಿಕಾರಿಗಳ ವಿರುದ್ಧವೇ ವಿರಾಜಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

    ಈ ಕುರಿತು ಸ್ಪಷ್ಟನೆ ನೀಡಿರುವ ವಿರಾಜಪೇಟೆ ತಾಲೂಕು ಅಧಿಕಾರಿ, ಹೌದು ಹೆಸರು ಬಹಿರಂಗಪಡಿಸಬಾರದಿತ್ತು. ಇದು ಸ್ಥಳೀಯ ಆಡಳಿತದಿಂದ ತಪ್ಪಾಗಿದ್ದು, ಇನ್ಮುಂದೆ ಇಂತಹ ತಪ್ಪಾಗದಂತೆ ಸೂಚನೆ ನೀಡಲಾಗಿದೆ. ತಪ್ಪು ಮಾಡಿರುವುದಕ್ಕೆ ಶಿಕ್ಷೆಯೂ ಆಗಲಿದೆ ಎಂದು ತಿಳಿಸಿದರು.

    ಸೋಂಕಿತ ವ್ಯಕ್ತಿ ಸೇವಾ ಸಿಂಧುವಿನಲ್ಲಿ ಅರ್ಜಿ ಸಲ್ಲಿಸುವಾಗ ಮಡಿಕೇರಿ ತಾಲೂಕಿನ ನಾಪೋಕ್ಲಿನ ವಿಳಾಸ ನೀಡಿದ್ದು, ಬಳಿಕ ವಿರಾಜಪೇಟೆ ಪಟ್ಟಣಕ್ಕೆ ಬಂದು ನೆಲೆಸಿ ತಪ್ಪು ಮಾಡಿದ್ದಾನೆ. ಅಲ್ಲದೇ ವಿದೇಶದಿಂದ ಆಗಮಿಸಿದ್ದ ಆತ ಕೇರಳದಿಂದ ಬಂದಿರುವುದಾಗಿ ಸುಳ್ಳು ಮಾಹಿತಿ ನೀಡಿದ್ದ. ಇಂಥವರಿಂದಾಗಿ ಬೇರೆ ವ್ಯಕ್ತಿಗಳಿಗೆ ಹರಡಿದರೆ ಯಾರು ಜವಾಬ್ದಾರಿ. ಇದರಿಂದ ಬೇರೆಯವರಿಗೂ ತಕ್ಕ ಪಾಠವಾಗಬೇಕು ಎನ್ನುವ ಉದ್ದೇಶದಿಂದ ಅಧಿಕಾರಿಗಳು ದೂರು ನೀಡಿದ್ದಾರೆ ಎಂದು ವಿರಾಜಪೇಟೆ ತಹಶೀಲ್ದಾರ್ ಹೇಳಿದ್ದಾರೆ.

  • ಗುಂಡು ಹಾರಿಸಿಕೊಂಡು ನಿವೃತ್ತ ಯೋಧ ಆತ್ಮಹತ್ಯೆ

    ಗುಂಡು ಹಾರಿಸಿಕೊಂಡು ನಿವೃತ್ತ ಯೋಧ ಆತ್ಮಹತ್ಯೆ

    ಮಡಿಕೇರಿ: ಕೊರೊನಾ ಆತಂಕದಿಂದ ಮನೆಯಲ್ಲೇ ಇದ್ದ ನಿವೃತ್ತ ಯೋಧ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಚೋಣಕೆರೆಯಲ್ಲಿ ನಡೆದಿದೆ.

    ಚೋಣಕೆರೆಯ ಗ್ರಾಮದ 74 ವರ್ಷದ ಉತ್ತಯ್ಯ ಆತ್ಮಹತ್ಯೆಗೆ ಶರಣಾದ ನಿವೃತ್ತ ಯೋಧ. ತಮ್ಮ ಮನೆಯ ಮಲಗುವ ಕೋಣೆಯಲ್ಲೇ ಸ್ವತಃ ತಾವೇ ಎದೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಉತ್ತಯ್ಯ ಹಲವು ದಿನಗಳಿಂದ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದರು. ಇದರಿಂದಾಗಿಯೇ ಮನೆಯಲ್ಲಿದ್ದ ಕೋವಿಯಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ತೀವ್ರ ರಕ್ತ ಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

    ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಸಿಪಿಐ ದಿವಾಕರ್ ಮತ್ತು ನಾಪೋಕ್ಲು ಠಾಣೆ ಎಸ್‍ಐ ಕಿರಣ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನ – ಎಮ್ಮೆಮಾಡು ಜಮಾಅತ್ ಅಧ್ಯಕ್ಷ ಅರೆಸ್ಟ್

    ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನ – ಎಮ್ಮೆಮಾಡು ಜಮಾಅತ್ ಅಧ್ಯಕ್ಷ ಅರೆಸ್ಟ್

    ಮಡಿಕೇರಿ: ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಜಮಾಅತ್ ಅಧ್ಯಕ್ಷನನ್ನು ಕೊಡಗು  ಪೊಲೀಸರು ಬಂಧಿಸಿದ್ದಾರೆ.

    ಕೊಡಗು ಜಿಲ್ಲೆ ಮಡಿಕೇರಿ ತಾಲ್ಲೂಕಿನ ಎಮ್ಮೆಮಾಡುವಿನ ಜಮಾಅತ್ ಅಧ್ಯಕ್ಷ ಖಾದರ್ ಹಾಜಿ ಬಂಧಿತ ಆರೋಪಿ. ಖಾದರ್ ಹಾಜಿಯ ಮನೆಯಲ್ಲೇ ಬಾಡಿಗೆಗೆ ಇರುವ ಸಂತ್ರಸ್ತ ಮಹಿಳೆ ಫೆ.12 ರಂದು ಊಟಕೊಡಲು ಹೋಗಿದ್ದಾರೆ.

    ಈ ವೇಳೆ ಮನೆಯಲ್ಲಿ ಯಾರು ಇಲ್ಲದಿದ್ದರಿಂದ ಖಾದರ್ ಹಾಜಿ ಮಹಿಳೆಯನ್ನು ಹಿಡಿದು ಎಳೆದಾಡಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ತಕ್ಷಣವೇ ಮಹಿಳೆ ಚೀರಾಡಿ ಅಲ್ಲಿಂದ ತಪ್ಪಿಸಿಕೊಂಡು ಹೊರ ಬಂದಿದ್ದಾರೆ.

    ಬಳಿಕ ಆರೋಪಿ ಖಾದರ್ ಹಾಜಿ ಈ ವಿಷಯವನ್ನು ಯಾರಿಗಾದ್ರೂ ತಿಳಿಸಿದ್ರೆ ನಿನ್ನನ್ನು ಊರಿನಿಂದ ಬಹಿಷ್ಕರಿಸುವುದಾಗಿ, ಜೊತೆಗೆ ಕೊಲೆ ಮಾಡುವುದಾಗಿ ಮಹಿಳೆಗೆ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.

    ಸಂತ್ರಸ್ತ  ಮಹಿಳೆ ಜಮಾಅತ್‍ಗೆ ವಿಷಯ ತಿಳಿಸಿದ್ರೂ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಇಂದು ಪೊಲೀಸ್  ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ನಾಪೋಕ್ಲು ಪೊಲೀಸರು ಖಾದರ್ ಹಾಜಿಯನ್ನು ಬಂಧಿಸಿದ್ದು ಕೋರ್ಟ್ ನ್ಯಾಯಾಂಗ ವಶಕ್ಕೆ ನೀಡಿದೆ.