Tag: narayana swamy

  • ಜಾತಿಗಳನ್ನು ಬಿಟ್ಟು ಒಗ್ಗಟ್ಟಾಗಿ ಹೋಗೋಣ ಅಂತಾರೆ ಇನ್ನೊಂದೆಡೆ ಎತ್ತಿಕಟ್ಟಿ ಬೆಂಕಿ ಹಚ್ಚುತ್ತಾರೆ: ನಾರಾಯಣ ಸ್ವಾಮಿ

    ಜಾತಿಗಳನ್ನು ಬಿಟ್ಟು ಒಗ್ಗಟ್ಟಾಗಿ ಹೋಗೋಣ ಅಂತಾರೆ ಇನ್ನೊಂದೆಡೆ ಎತ್ತಿಕಟ್ಟಿ ಬೆಂಕಿ ಹಚ್ಚುತ್ತಾರೆ: ನಾರಾಯಣ ಸ್ವಾಮಿ

    ಬೆಂಗಳೂರು: ಸಿದ್ದರಾಮಯ್ಯ ಜಾತಿ ಗಣತಿ ಮಾಡಿಸಿದ್ರು ಆದರೆ ಅದನ್ನು ಪ್ರಕಟ ಮಾಡಲಿಲ್ಲ. ಜಾತಿಗಳನ್ನು ಬಿಟ್ಟು ಒಗ್ಗಟ್ಟಾಗಿ ಹೋಗೋಣ ಅನ್ನೋದು ಒಂದು ಕಡೆ. ಇನ್ನೊಂದು ಕಡೆ ಜಾತಿಗಳನ್ನು ಎತ್ತಿಕಟ್ಟಿ ಬೆಂಕಿ ಹಚ್ಚುವ ಕೆಲಸ ಆಗುತ್ತಿದೆ ಎರಡು ಕೆಲಸ ಅವರೇ ಮಾಡುತ್ತಾರೆ ಎಂದು ಬಿಜೆಪಿ ಎಸ್‍ಸಿ ಮೋರ್ಚಾ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

    ಬೆಂಗಳೂರಿನಲ್ಲಿ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಈ ವರ್ಷದ ಬಜೆಟ್ ಮುಂದಿನ ತಿಂಗಳು ಮಂಡನೆಯಾಗಲಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ಮೀಸಲಿಡುವ ಹಣದಲ್ಲಿ ಉತ್ತಮ ಕಾರ್ಯ ಮಾಡುವ ಬಗ್ಗೆ ಚರ್ಚೆ ಮಾಡಿದ್ದೆವು. ಸಮುದಾಯದ ಮುಖಂಡರ ಜೊತೆ ಚರ್ಚೆ ನಡೆಸಿದ್ದೇವೆ. ಕಳೆದ ಬಾರಿ ಬಿಎಸ್ ವೈ ಯಡಿಯೂರಪ್ಪ ಸಿಎಂ ಆಗಿದ್ದಾಗಲೂ ಸಭೆ ಮಾಡಿ ಮನವಿ ಮಾಡಿದ್ದೇವು. ಅದರಂತೆ ಕೆಲವು ಬೇಡಿಕೆ ಈಡೇರಿಸಿದ್ದಾರೆ. ಅದರಂತೆ ಈ ಬಾರಿಯೂ ಹಲವು ಬೇಡಿಕೆಗಳ ಬಗ್ಗೆ ಸಿಎಂ ಗಮನಕ್ಕೆ ತರುತ್ತೇವೆ. ಸಮುದಾಯದ ಯುವಕರಿಗೆ ಉದ್ಯೋಗದ ಬಗ್ಗೆಯೂ ಮನವಿ ಮಾಡುತ್ತೇವೆ. ಸಿ.ಟಿ.ರವಿಯವರನ್ನು ಭೇಟಿ ಮಾಡಿ ಅವರ ಗಮನಕ್ಕೂ ತಂದು ಅವರೊಂದಿಗೆ ಸಿಎಂಗೆ ಮನವಿ ನೀಡುತ್ತೇವೆ ಎಂದರು. ಇದನ್ನೂ ಓದಿ: ಕೆಲವರು ವಯಸ್ಸಾಗಿ ನಿಶಕ್ತರಾದರೆ, ಇನ್ನೂ ಕೆಲವರು ರಾಜಕೀಯ ನಿಶಕ್ತರಾಗುತ್ತಿದ್ದಾರೆ : ಸಿದ್ದರಾಮಯ್ಯಗೆ ಇಬ್ರಾಹಿಂ ಟಾಂಗ್‌

    ಹಿಂದುಳಿದ ವರ್ಗಗಳ ಜಾತಿ ಸಮೀಕ್ಷೆ ವಿಚಾರವಾಗಿ ಮಾತನಾಡಿ, ಸರ್ವರನ್ನೂ ಸಮನಾಗಿ ನೋಡಬೇಕಾಗಿದೆ. ಜನಗಣತಿ ಮಾಡುವುದರಲ್ಲೇ ಎಲ್ಲವೂ ಸಿಗುತ್ತೆ. ಮತ್ಯಾಕೆ ಜಾತಿ ಗಣತಿ ಬೇಕು?. ಸರ್ಕಾರಕ್ಕೆ ಒತ್ತಾಯ ಮಾಡುವ ಅವಶ್ಯಕತೆ ಇಲ್ಲ. ಕಾಂಗ್ರೆಸ್ ಇದ್ದಾಗ ಯಾಕೆ ರಿಲೀಸ್ ಮಾಡಲಿಲ್ಲ. ಸಿದ್ದರಾಮಯ್ಯ ಜಾತಿಗಣತಿ ಮಾಡಿದ್ದೇ ತಪ್ಪು ಅನ್ನೋ ಹಂಗಾಯ್ತಲ. ಸಿದ್ದರಾಮಯ್ಯ ಮಾಡಿಸಿದ್ದ ಜಾತಿ ಗಣತಿ ಸರಿ ಇದೆ ಅಂತ ಯಾರು ಹೇಳಿದ್ದು ಎಂದು ಪ್ರಶ್ನೆ ಮಾಡಿದರು. ಇದನ್ನೂ ಓದಿ: ರಾಜರ ವಂಶವನ್ನು ನಾಶ ಮಾಡಲು ಹೋದ ಟಿಪ್ಪು ಸುಲ್ತಾನ್ ಹೆಸರು ರೈಲಿಗೆ ಯಾಕೆ?: ಪ್ರತಾಪ್ ಸಿಂಹ

    ಈ ವರ್ಷದ ಬಜೆಟ್‍ನಲ್ಲಿ ಪರಿಶಿಷ್ಟ ಜಾತಿ ವರ್ಗಗಳಿಗೆ ಮೀಸಲಿಟ್ಟ ಹಣದಲ್ಲಿ ಉತ್ತಮ ಕಾರ್ಯಗಳಿಗೆ ಬಳಸಬೇಕು. ಹೀಗಾಗಿ ನಮ್ಮ ಸಮುದಾಯದ ಮುಖಂಡರ ಜೊತೆ ಸಭೆ ನಡೆಸಿದ್ದೇವೆ. ಬೊಮ್ಮಾಯಿ ಅವರ ಮುಂದೆ ಹಲವು ಮನವಿ ಸಲ್ಲಿಸಿದ್ದೇವೆ. ಹರಿಯಾಣ ಮಾದರಿಯಲ್ಲಿ ಕರ್ನಾಟಕದಲ್ಲಿ ಪರಿಶಿಷ್ಟ ಜಾತಿ ವರ್ಗಗಳ ಬೆಳವಣಿಗೆಗೆ ಸಹಕರಿಸಬೇಕಾಗಿದೆ. ಭೂಮಿ, ವಸತಿ ಕೊಡಬೇಕು ಎಂಬ ಸಲಹೆ ಬಂದಿದೆ ಈ ಬಗ್ಗೆ ಸಿಎಂ ಜೊತೆ ಚರ್ಚಿಸುತ್ತೇವೆ ಎಂದು ತಿಳಿಸಿದರು.

  • ರಾಜ್ಯದ ನಾಲ್ವರಿಗೆ ಮಂತ್ರಿಗಿರಿ – ಆಯ್ಕೆಗೆ ಮಾನದಂಡ ಏನು?

    ರಾಜ್ಯದ ನಾಲ್ವರಿಗೆ ಮಂತ್ರಿಗಿರಿ – ಆಯ್ಕೆಗೆ ಮಾನದಂಡ ಏನು?

    ನವದೆಹಲಿ: ಮೋದಿ ಸಂಪುಟಕ್ಕೆ ಭರ್ಜರಿ ಸರ್ಜರಿಯಾಗಿದೆ. ಇಂದು 36 ಮಂದಿ ಕೇಂದ್ರ ಸಚಿವ ಸಂಪುಟ ಸೇರಿದ್ದಾರೆ. ಈ ಪೈಕಿ ಕರ್ನಾಟಕಕ್ಕೆ ಬಂಪರ್ ಪಾಲೇ ಸಿಕ್ಕಿದೆ. ರಾಜ್ಯ ನಾಲ್ವರು ಸಂಸದರಿಗೆ ಮಂತ್ರಿ ಸ್ಥಾನ ಸಿಕ್ಕಿದೆ.

    ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಿಕ್ಕಮಗಳೂರು-ಉಡುಪಿ ಸಂಸದೆ ಶೋಭಾ ಕರಂದ್ಲಾಜೆ, ಬೀದರ್ ಸಂಸದ ಭಗವಂತ ಖೂಬಾ, ಚಿತ್ರದುರ್ಗ ಸಂಸದ ನಾರಾಯಣಸ್ವಾಮಿ, ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಅವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಪ್ರತಿಜ್ಞಾವಿಧಿ ವಿಧಿ ಬೋಧಿಸಿದರು.  ಇದನ್ನೂ ಓದಿ: ಮೋದಿ ಕ್ಯಾಬಿನೆಟ್‍ನಿಂದ ರವಿಶಂಕರ್ ಪ್ರಸಾದ್, ಜಾವಡೇಕರ್ ಔಟ್

    ಈ ನಾಲ್ವರೊಂದಿಗೆ ಕೇಂದ್ರ ಸಂಪುಟದಲ್ಲಿ ರಾಜ್ಯವನ್ನು ಪ್ರತಿನಿಧಿಸುತ್ತಿರುವ ಸಚಿವರ ಸಂಖ್ಯೆ ಆರಕ್ಕೇರಿದೆ. ಈಗಾಗಲೇ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವರಾಗಿ ಪ್ರಹ್ಲಾದ್ ಜೋಷಿ, ಕರ್ನಾಟದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೋದಿ ಸಂಪುಟದ ಆಯಾಕಟ್ಟಿನ ಜಾಗಗಳಲ್ಲಿ ಇದ್ದಾರೆ.

    ಶೋಭಾ ಕರಂದ್ಲಾಜೆ ಸಚಿವೆ ಆಗುವ ಮೂಲಕ ಸರೋಜಿನಿ ಮಹಿಷಿ, ಬಸವರಾಜೇಶ್ಚರಿ, ರತ್ನಮಾಲಾ ಸವಣೂರು, ಡಿಕೆ ತಾರಾದೇವಿ, ಮಾರ್ಗರೇಟ್ ಆಳ್ವಾ ಬಳಿಕ ಸಂಪುಟ ಸೇರಿದ ರಾಜ್ಯದ ಆರನೇ ಮಹಿಳೆ ಎಂಬ ಗರಿಮೆಗೆ ಪಾತ್ರರಾಗಿದ್ದಾರೆ. ನಿರೀಕ್ಷೆಯಂತೆ ಮೋದಿ ಸಂಪುಟದಿಂದ ಡಿವಿ ಸದಾನಂದಗೌಡರಿಗೆ ಕೊಕ್ ನೀಡಲಾಗಿದೆ.

    ಶೋಭಾ ಕರಂದ್ಲಾಜೆ:
    2014, 2019ರಲ್ಲಿ ಸತತ ಎರಡು ಬಾರಿ ಚಿಕ್ಕಮಗಳೂರು-ಉಡುಪಿ ಕ್ಷೇತ್ರದಿಂದ ಆಯ್ಕೆ ಆಗಿದ್ದಾರೆ. ಕರಾವಳಿ, ಒಕ್ಕಲಿಗ ಕೋಟಾ, ಡಿವಿಎಸ್ ಸ್ಥಾನಕ್ಕೆ ಭರ್ತಿ ಮಾಡಲಾಗಿದೆ. ರಾಜ್ಯ ಸರ್ಕಾರದಲ್ಲಿ ಸಚಿವೆಯಾಗಿ ಮಾಡಿದ್ದ ಕೆಲಸ, ಅನುಭವವನ್ನು ಪರಿಗಣಿಸಲಾಗಿದೆ. ಆರ್‍ಎಸ್‍ಎಸ್, ಹೈಕಮಾಂಡ್ ಸೂಚನೆ ಮೇರೆಗೆ ರಾಜ್ಯ ಸರ್ಕಾರದಿಂದ ಇವರು ಅಂತರವನ್ನು ಕಾಯ್ದುಕೊಂಡಿದ್ದರು.

    ಭಗವಂತ ಖೂಬಾ:
    ಬೀದರ್ ಸಂಸದಾಗಿರುವ ಇವರನ್ನು ಕಲ್ಯಾಣ ಕರ್ನಾಟಕ, ಲಿಂಗಾಯತ ಕೋಟಾ, ಸುರೇಶ್ ಅಂಗಡಿ ಸ್ಥಾನಕ್ಕೆ ಭರ್ತಿ ಮಾಡಲಾಗಿದೆ.ಆರ್‌ಎಸ್‌ಎಸ್‌ ಹಿನ್ನೆಲೆ, ಪಕ್ಷ ನಿಷ್ಠ ಅಲ್ಲದೇ ಎಂಜಿನಿಯರ್ ಪದವಿಯನ್ನು ಓದಿದ್ದಾರೆ. ಹೈಕಮಾಂಡ್ ಮಟ್ಟದ ನಾಯಕರ ಆಪ್ತ ವಲಯಕ್ಕೆ ಖುಬಾ ಸೇರಿದ್ದಾರೆ.

    ನಾರಾಯಣಸ್ವಾಮಿ:
    ಚಿತ್ರದುರ್ಗ ಸಂಸದರಾಗಿರುವ ಇವರು ದಲಿತ ಎಡಗೈ ಕೋಟಾವನ್ನು ಪ್ರತಿನಿಧಿಸುತ್ತಿದ್ದಾರೆ. ಯುವ ಮುಖ ಅಲ್ಲದೇ ಮೊದಲ ಬಾರಿ ಸಂಸದರಾಗಿ ಆಯ್ಕೆ ಆಗಿದ್ದಾರೆ. ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಅವರ ಜೊತೆ ಗುರುತಿಸಿಕೊಂಡಿದ್ದಾರೆ.

    ರಾಜೀವ್ ಚಂದ್ರಶೇಖರ್:
    3ನೇ ಬಾರಿ ರಾಜ್ಯಸಭಾ ಸದಸ್ಯರಾಗಿರುವ ಇವರಿಗೆ ಇದೇ ಮೊದಲ ಬಾರಿಗೆ ಮಂತ್ರಿ ಸ್ಥಾನ ನೀಡಲಾಗಿದೆ. ಮೂಲ ಕೇರಳವಾಗಿದ್ದರೂ ಕರ್ನಾಟಕದ ರಾಜ್ಯಸಭಾ ಕೋಟಾದಿಂದ ಆಯ್ಕೆ ಮಾಡಲಾಗಿದೆ. ಹಲವು ಸಂಸದೀಯ ಸಮಿತಿಗಳಲ್ಲಿ ಚುರುಕಾಗಿ ಕೆಲಸ ಮಾಡಿದ ಅನುಭವ ಇವರಿಗಿದೆ.

  • ‘ಚಿಣಿಮಿಣಿ’ ಉಲ್ಲೇಖಿಸಿದ ನಾರಾಯಣಸ್ವಾಮಿ – ನಗೆಗಡಲಲ್ಲಿ ತೇಲಿದ ಸದಸ್ಯರು

    ‘ಚಿಣಿಮಿಣಿ’ ಉಲ್ಲೇಖಿಸಿದ ನಾರಾಯಣಸ್ವಾಮಿ – ನಗೆಗಡಲಲ್ಲಿ ತೇಲಿದ ಸದಸ್ಯರು

    ಬೆಂಗಳೂರು: ಒಂದೊಂದು ಸಾರಿ ಒಂದೊಂದು ಪದಗಳು ಸಿಕ್ಕಾಪಟ್ಟೆ ಹೆಸರು ಮಾಡಿ ಬಿಡುತ್ತವೆ. ಆ ಹೆಸರು ಮಾಡಿದ ಪದಗಳು ಹೊಸ ಹೊಸ ಪದಗಳ ಸೃಷ್ಟಿಗೂ ಕಾರಣವಾಗಿ ಬಿಡುತ್ತವೆ. ಇತ್ತೀಚೆಗೆ ಫೇಮಸ್ ಆಗಿದ್ದ ಪದದಿಂದ ಈಗ ಹೊಸ ಪದವೊಂದು ಸೃಷ್ಟಿಯಾಗಿ ಪ್ರಚಾರ ಆಗ್ತಿದೆ. ಈ ಹೊಸ ಪದ ಸೃಷ್ಟಿಯಾಗಿದ್ದು, ವಿಧಾನ ಪರಿಷತ್ ನ ಕಲಾಪದಲ್ಲಿ.

    ಕಲಾಪದಲ್ಲಿ ಮಂಗಳೂರು ಬಾಂಬ್ ಪ್ರಕರಣವನ್ನು ಕಾಂಗ್ರೆಸ್ ಸದಸ್ಯ ನಾರಾಯಣಸ್ವಾಮಿ ಪ್ರಸ್ತಾಪ ಮಾಡಿದ್ರು. ವಿಮಾನ ನಿಲ್ದಾಣದಲ್ಲಿ ಇರಿಸಲಾಗಿದ್ದು ಬಾಂಬ್ ಮಾದರಿಯ ವಸ್ತುವಿನಲ್ಲಿ ‘ಚಿಣಿಮಿಣಿ’ ಪದಾರ್ಥ ಇತ್ತು ಎಂದ ನಾರಾಯಣಸ್ವಾಮಿ ಚರ್ಚೆ ವೇಳೆ ಹೇಳಿದ್ರು. ಈ ಪದ ಕೇಳಿದ ಕೂಡಲೇ ಸದನ ನಗೆಗಡಲಲ್ಲಿ ತೇಲಿತು.

    ಅಷ್ಟಕ್ಕೂ ಅ ಹೊಸ ಪದ ಸೃಷ್ಟಿ ಆಗಲು ಕೋರ್ಟ್ ಆದೇಶವೇ ಕಾರಣ. ಭಾರೀ ಟ್ರೋಲ್ ಆಗುತ್ತಿದ್ದ ಆ ಪದವನ್ನು ಬಳಕೆ ಮಾಡಬಾರದು ಎಂದು ಮಾಜಿ ಸಿಎಂ ಕುಮಾರಸ್ವಾಮಿ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದರು.

    ತಡೆಯಾಜ್ಞೆಯ ಹಿನ್ನೆಲೆಯಲ್ಲಿ ಸದನದಲ್ಲೂ ಕೂಡಾ ಆ ಪದವನ್ನು ಬಳಸಲು ನಾರಾಯಣಸ್ವಾಮಿ ಹಿಂದೇಟು ಹಾಕಿದರು. ಆ ಪದಕ್ಕೆ ಬದಲಾಗಿ ಚಿಣಿಮಿಣಿ ರೀತಿಯ ಪದಾರ್ಥ ಇತ್ತು ಅಂತ ಬಳಕೆ ಮಾಡಿದರು.