ಬೆಂಗಳೂರು: ಈ ಬಾರಿ ಸಚಿವ ಸಂಪುಟ ವಿಸ್ತರಣೆ ಆದಾಗ ನನಗೆ ಸಚಿವ ಸ್ಥಾನ ಸಿಗುವ ವಿಶ್ವಾಸ ಇದೆ ಎಂದು ಬಂಗಾರಪೇಟೆ ಕಾಂಗ್ರೆಸ್ ಶಾಸಕ ನಾರಾಯಣಸ್ವಾಮಿ (Naryanaswamy) ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ನವೆಂಬರ್ಗೆ ಸಂಪುಟ ವಿಸ್ತರಣೆ ಆಗಬಹುದು. ಬಿಹಾರ ಚುನಾವಣೆ (Bihar Election) ಆದ ಮೇಲೆ ವಿಸ್ತರಣೆ ಆಗಬಹುದು. 2.5 ವರ್ಷ ಆದ ಮೇಲೆ ಮಂತ್ರಿ ಕೊಡ್ತೀವಿ ಅಂತ ಯಾರಿಗೆ ಹೈಕಮಾಂಡ್ ಮಾತು ಕೊಟ್ಟಿದ್ದರೋ ಅವರಿಗೆ ಸಚಿವ ಸ್ಥಾನ ಕೊಡಬೇಕು. ದಲಿತ ಬಲಗೈ ಸಮುದಾಯ ಕರ್ನಾಟಕದಲ್ಲಿ ಜಾಸ್ತಿ ಜನ ಇದ್ದಾರೆ. ಚನ್ನಯ್ಯ ನಂತರ ಕೋಲಾರ ಸೇರಿ ಮೂರು ಜಿಲ್ಲೆಗಳಲ್ಲಿ ಬಲಗೈ ಸಮುದಾಯಕ್ಕೆ ಅನೇಕ ವರ್ಷಗಳಿಂದ ಮಂತ್ರಿ ಸ್ಥಾನ ಕೊಟ್ಟಿಲ್ಲ.ಹೈಕಮಾಂಡ್ ಮೇಲೆ ವಿಶ್ವಾಸ ನನಗೆ ಇದೆ. ಈ ಬಾರಿ ಮಂತ್ರಿ ಸ್ಥಾನ ಸಿಗುವ ವಿಶ್ವಾಸ ಇದೆ ಎಂದರು. ಇದನ್ನೂ ಓದಿ: ರಾವಲ್ಪಿಂಡಿ ಚಿಕನ್ ಟಿಕ್ಕಾ ಮಸಾಲದಿಂದ ಬಾಲಕೋಟ್ ತಿರಮಿಸು ವರೆಗೆ – ಊಟದ ಮೆನು ಮೂಲಕ ಪಾಕ್ಗೆ ಭಾರತೀಯ ವಾಯುಸೇನೆ ವ್ಯಂಗ್ಯ
ನಮ್ಮ ಜಿಲ್ಲೆಯಲ್ಲಿ ನಾನು ಸೀನಿಯರ್. ಹೆಚ್ಚು ಬಾರಿ ಗೆದ್ದಿರುವುದರಿಂದ ಪಕ್ಷ ಈ ಬಾರಿ ನನ್ನನ್ನು ಮಂತ್ರಿ ಮಾಡಬೇಕು ಎಂದು ಮನವಿ ಮಾಡುತ್ತೇನೆ. ರೂಪಕಲಾ ಅವರಿಗೆ ಸಚಿವ ಸ್ಥಾನ ಕೊಡುವುದು ಹೈಕಮಾಂಡ್ಗೆ ಬಿಟ್ಟಿದ್ದು. ನಾನು ಹಿರಿಯ ನನಗೆ ಸಚಿವ ಸ್ಥಾನ ಸಿಗೋ ವಿಶ್ವಾಸ ಇದೆ ಎಂದರು.
ಕೋಲಾರ: ಇತ್ತೀಚೆಗೆ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಶಾಸಕ ನಾರಾಯಣಸ್ವಾಮಿ (Narayanaswamy) ಹಾಗೂ ಸಂಸದ ಮುನಿಸ್ವಾಮಿ (S Muniswamy) ಮಧ್ಯೆ ನಡೆದ ಜಟಾಪಟಿ ಸಂಬಂಧ ಇಬ್ಬರ ವಿರುದ್ಧವೂ ಪ್ರಕರಣ ದಾಖಲಾಗಿದೆ.
ಕೋಲಾರ (Kolar) ಸಂಸದ ಮುನಿಸ್ವಾಮಿ ವಿರುದ್ಧ ಬಂಗಾರಪೇಟೆ ಶಾಸಕರ ದೂರಿನ ಅನ್ವಯ FIR ದಾಖಲಾಗಿದೆ. ಮತ್ತೊಂದೆಡೆ ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷ ಬಾಲಾಜಿ ನೀಡಿದ ದೂರಿನ ಅನ್ವಯ ಶಾಸಕ ನಾರಾಯಣಸ್ವಾಮಿ ವಿರುದ್ಧ ಕೇಸ್ ದಾಖಲಾಗಿದೆ.
ಸೆಪ್ಟೆಂಬರ್ 25ರಂದು ನಡೆದ ಜನತಾದರ್ಶನ ಕಾರ್ಯಕ್ರಮದಲ್ಲಿ (Janata Darshan Programme) ಸಂಸದ ಮುನಿಸ್ವಾಮಿ ಸಚಿವ ಭೈರತಿ ಸುರೇಶ್ ಪಕ್ಕದಲ್ಲಿ ಕುಳಿತಿದ್ದರು. ಈ ವೇಳೆ ಬಂಗಾರಪೇಟೆ ಶಾಸಕ ಎಸ್.ಎನ್ ನಾರಾಯಣಸ್ವಾಮಿ ಅವರನ್ನ ನೋಡಿಕೊಂಡು ಎಲ್ಲಾ ಭೂಗಳ್ಳರನ್ನು ಅಕ್ಕಪಕ್ಕ ಕೂರಿಸಿಕೊಂಡು ಜನತಾ ದರ್ಶನ ಮಾಡ್ತಾ ಇದ್ದಾರೆ ಎಂದರು. ಈ ವೇಳೆ ಕ್ಷಣಾರ್ಧದಲ್ಲಿ ಆಕ್ರೋಶಗೊಂಡ ನಾರಾಯಣಸ್ವಾಮಿ ಸಂಸದರಿಗೆ ಏಕವಚನದಲ್ಲೇ ಬೈಯಲು ಶುರು ಮಾಡಿಕೊಂಡರು.
ಕೊನೆಗೆ ಇಬ್ಬರ ನಡುವಿನ ಜಟಾಪಟಿ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿತ್ತು. ಈ ವೇಳೆ ಸಂಸದ ಮುನಿಸ್ವಾಮಿಯನ್ನು ತಬ್ಬಿಕೊಂಡ ಕೋಲಾರ ಎಸ್ಪಿ ನಾರಾಯಣ ಸಂಸದರನ್ನ ಹಿಡಿದುಕೊಂಡು ವೇದಿಕೆಯಿಂದ ಹೊರಗೆ ಕರೆದುಕೊಂಡು ಹೋದರು. ಈ ಸಂದರ್ಭ ಸಾಕಷ್ಟು ತಳ್ಳಾಟ ನೂಕಾಟದ ಜೊತೆಗೆ ಕಾರ್ಯಕ್ರಮದ ವೇದಿಕೆಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.
ಘಟನೆ ನಂತರ ಸಂಸದ ಮುನಿಸ್ವಾಮಿ ಅವಾಚ್ಯ ಶಬ್ಧಗಳಿಂದ ನಿಂದಿಸಿ ಪ್ರಾಣ ಬೆದರಿಕೆ ಹಾಕಿದ್ದಾರೆ ಎಂದು ಶಾಸಕ ನಾರಾಯಣಸ್ವಾಮಿ ಗಲ್ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಅರಣ್ಯ ಇಲಾಖೆ ತೆರವು ಕಾರ್ಯಾಚರಣೆ ವಿಚಾರದಲ್ಲಿ ಮುನಿಸ್ವಾಮಿ ವಿರುದ್ಧ FIR ದಾಖಲಾಗಿತ್ತು. ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ A1 ಆರೋಪಿಯಾಗಿ FIR ದಾಖಲಾಗಿತ್ತು. ಇದೀಗ ಮತ್ತೆ ಗಲ್ಪೇಟೆ ಪೊಲೀಸ್ ಠಾಣೆಯಲ್ಲಿ ಸಂಸದ ಮುನಿಸ್ವಾಮಿ ವಿರುದ್ಧ 2ನೇ FIR ದಾಖಲಾಗಿದೆ. ಈ ನಡುವೆ ಸಂಸದ ಮುನಿಸ್ವಾಮಿ ಸೆಪ್ಟೆಂಬರ್ 27 ರಂದು ಎಸ್.ಎನ್ ನಾರಾಯಣಸ್ವಾಮಿ ಹಾಗೂ ಎಸ್ಪಿ ನಾರಾಯಣ್ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದಾರೆ.
ಬೆಂಗಳೂರು: ಈ ಬಾರಿ ಆನೇಕಲ್ ವಿಧಾನ ಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ (Congress) ಹಾಗೂ ಬಿಜೆಪಿ (BJP) ಪಕ್ಷಗಳ ನಡುವೆ ಫೈಟ್ ಏರ್ಪಟ್ಟಿದ್ದು, ಬಿಎಸ್ಪಿ ಹಾಗೂ ಜೆಡಿಎಸ್ ಅಭ್ಯರ್ಥಿಗಳು ಕಾಂಗ್ರೆಸ್ ಮತಗಳನ್ನು ವಿಭಜಿಸುವ ಸಾಧ್ಯತೆಯಿದೆ.
ಇದಕ್ಕೂ ಮೊದಲು 18 ವರ್ಷ ಕೇಂದ್ರ ಸಚಿವ ಎ. ನಾರಾಯಣಸ್ವಾಮಿ (A Narayanaswamy) ಆನೆಕಲ್ ಬಿಜೆಪಿ ಶಾಸಕರಾಗಿ ಸೇವೆ ಸಲ್ಲಿಸಿದ್ದಾರೆ. ಇನ್ನು ಹಾಲಿ ಶಾಸಕ ಶಿವಣ್ಣ ಬಿಜೆಪಿ ಭದ್ರಕೋಟೆಯನ್ನು ಭೇದಿಸಿ 10 ವರ್ಷಗಳಿಂದ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ.
ಕಾಂಗ್ರೆಸ್ ಧನಾತ್ಮಕ ಅಂಶಗಳು: ಸಿದ್ದರಾಮಯ್ಯ ಅವಧಿಯಲ್ಲಿ ಕ್ಷೇತ್ರದಲ್ಲಿ ಸಾವಿರ ಕೋಟಿ ಅನುದಾನ ಬಿಡುಗಡೆಯಾಗಿತ್ತು. ಬಿಜೆಪಿ ಕಡೆಯಿಂದ ಪ್ರಬಲ ಅಭ್ಯರ್ಥಿ ಘೋಷಣೆ ಮಾಡದಿರುವುದರಿಂದ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಹಾಲಿ ಶಾಸಕ ಶಿವಣ್ಣನಿಗೆ ಲಾಭವಾಗುವ ಸಾಧ್ಯತೆ ಇದೆ. ಜೊತೆಗೆ ಬಿಜೆಪಿಯಲ್ಲಿ ಟಿಕೆಟ್ ಸಿಗದವರ ಭಿನ್ನಮತ ಸ್ಫೋಟ ಕಾಂಗ್ರೆಸ್ಗೆ ಸಹಾಯವಾಗುವ ಸಾಧ್ಯತೆಯಿದೆ.
ಕಾಂಗ್ರೆಸ್ ಋಣಾತ್ಮಕ ಅಂಶಗಳು: ಕಳೆದ 5 ವರ್ಷಗಳಲ್ಲಿ ಹೇಳಿಕೊಳ್ಳುವಂತಹ ಅಭಿವೃದ್ಧಿ ಕಾರ್ಯಗಳು ಯಾವುದು ಸಹ ಕ್ಷೇತ್ರದಲ್ಲಿ ನಡೆದಿಲ್ಲ. ಇದರ ಜೊತೆಗೆ ನಡೆದಿರುವ ಕಾಮಗಾರಿಗಳು ಕಳಪೆ ಮಟ್ಟದ ಕಾಮಗಾರಿಗಳು ಅನೇಕ ಮಂದಿ ಹಿರಿಯ ಮುಖಂಡರನ್ನು ಕಾಂಗ್ರೆಸ್ನ ಶಾಸಕ ಶಿವಣ್ಣ ಗಣನೆಗೆ ತೆಗೆದುಕೊಂಡಿಲ್ಲ ಎಂಬ ಆರೋಪಗಳು ಇವೆ. ಇದರಿಂದ ಸಾಕಷ್ಟು ಸಮಸ್ಯೆಗಳಾಗುವ ಸಾಧ್ಯತೆಯಿದೆ.
ಜೆಡಿಎಸ್ ಪಕ್ಷದ ಅಭ್ಯರ್ಥಿ ಕಾಂಗ್ರೆಸ್ ಮತಗಳನ್ನು ಸೆಳೆದರೆ ಕಾಂಗ್ರೆಸ್ ಪಕ್ಷಕ್ಕೆ ಸೋಲು ಕಟ್ಟಿಟ್ಟ ಬುತ್ತಿ. ಬಿಎಸ್ಪಿ ಪಕ್ಷದ ಚಿನ್ನಪ್ಪ ಚಿಕ್ಕ ಆ ಕಡೆ ಸಹ ಮತಗಳನ್ನು ಸೆಳೆಯುವ ಎಲ್ಲಾ ರೀತಿಯ ಸಾಧ್ಯತೆಗಳು ಸಹ ಇವೆ. ಇದನ್ನೂ ಓದಿ:ನಮಗೆ ರಾಹುಲ್ ಗಾಂಧಿ ರಕ್ತದ ಬಗ್ಗೆ ಸಂಶಯವಿದೆ : ಕಟೀಲ್
ಬಿಜೆಪಿ ಧನಾತ್ಮಕ ಅಂಶಗಳು: ಬಿಜೆಪಿ ಪಕ್ಷದಲ್ಲಿ ಇದಕ್ಕೂ ಮೊದಲು ಶಾಸಕರಾಗಿದ್ದ ನಾರಾಯಣಸ್ವಾಮಿ ಅವರ ಅಭಿವೃದ್ಧಿ ಕಾರ್ಯಗಳು ಮುನ್ನಡೆ ನೀಡುವ ಸಾಧ್ಯತೆ ಇದೆ. ಜೊತೆಗೆ ಕಾಂಗ್ರೆಸ್ ಶಾಸಕರಿಂದ ಈ ಬಾರಿ ಆಗದ ಅಭಿವೃದ್ಧಿ ಕಾರ್ಯಗಳು ಬಿಜೆಪಿಗೆ ಪ್ಲಸ್ ಆಗುತ್ತದೆ. ಇದನ್ನೂ ಓದಿ: ಡಿಕೆಶಿಗೆ ಸೋಲಿನ ಭಯ ಕಾಡ್ತಿದೆ, ಅದಕ್ಕಾಗಿ ಮಾಟ-ಮಂತ್ರ ಮಾಡಿಸ್ತಿದ್ದಾರೆ: ಆರ್.ಅಶೋಕ್
ಬಿಜೆಪಿ ಋಣಾತ್ಮಕ ಅಂಶಗಳು: ಶ್ರೀನಿವಾಸ್ ಕಣಕ್ಕಿಳಿಯುತ್ತಿರುವುದು ಸಾಕಷ್ಟು ಮಂದಿ ಬಿಜೆಪಿ ಆಕಾಂಕ್ಷಿಗಳಿಗೆ ಹಾಗೂ ಮುಖಂಡರಿಗೆ ಇಷ್ಟವಿಲ್ಲ. ಹಿರಿಯ ಮುಖಂಡರನ್ನು ಗಣನೆಗೆ ತೆಗೆದುಕೊಳ್ಳದೇ ಉಲ್ಲಹಳ್ಳಿ ಶ್ರೀನಿವಾಸ್ ಸಾಕಷ್ಟು ಬಾರಿ ಆಗೌರವ ತೋರಿದ್ದಾರೆ ಎಂಬ ಆರೋಪಗಳು ಕೇಳಿಬಂದಿದೆ. ಕೆಲವು ಆಕಾಂಕ್ಷಿಗಳು ಈಗಾಗಲೇ ಬಂಡಾಯ ಹೇಳುವ ಎಲ್ಲಾ ಸಾಧ್ಯತೆಗಳು ಸಹ ಕಾಣಿಸುತ್ತಿವೆ. ಇನ್ನು 2 ಬಾರಿ ಶಿವಣ್ಣನವರನ್ನು ಆಯ್ಕೆ ಮಾಡಿ ಬದಲಾವಣೆ ಬಯಸುವಂತಹ ಸಾರ್ವಜನಿಕರು ಬಿಜೆಪಿಗೆ ಮತ ಚಲಾಯಿಸುವಂತಹ ಸಾಧ್ಯತೆಗಳಿವೆ.
ಚಿಕ್ಕೋಡಿ: ಯಡಿಯೂರಪ್ಪ (Yediyurappa) ವಿರುದ್ದ ಬಹಿರಂಗ ಹೇಳಿಕೆ ನೀಡುತ್ತಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ವಿಚಾರದಲ್ಲಿ ನಾನೇನು ಮಾತನಾಡುವುದಿಲ್ಲ, ಎಲ್ಲವನ್ನೂ ಹೈ ಕಮಾಂಡ್ ಗಮನಿಸುತ್ತಿದೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಸಚಿವ ನಾರಾಯಣಸ್ವಾಮಿ (Narayanaswamy) ಶಾಸಕ ಯತ್ನಾಳ್ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.
ಬೆಳಗಾವಿ (Belgavi) ಜಿಲ್ಲೆಯ ನಿಪ್ಪಾಣಿ ಪಟ್ಟಣದಲ್ಲಿ ಕೇಂದ್ರ ಸರ್ಕಾರದ ವಯೋಶ್ರೀ ಯೋಜನೆಯಡಿ ಫಲಾನುಭವಿಗಳಿಗೆ ವಿವಿಧ ಸೌಲಭ್ಯಗಳನ್ನು ವಿತರಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ (HighCommand) ಎಲ್ಲವನ್ನೂ ಗಮನಿಸುತ್ತಿದೆ. ಯತ್ನಾಳ್ ಕುರಿತು ನಾನು ಚರ್ಚೆ ಮಾಡಲ್ಲ. ನಮ್ಮ ಹೈಕಮಾಂಡ್ ಎಲ್ಲವನ್ನೂ ನೋಡುತ್ತಿದೆ. ನಮ್ಮ ರಾಜ್ಯದ ಅಧ್ಯಕ್ಷರು ಸಹ ಎಲ್ಲವನ್ನು ನೋಡುತ್ತಿದ್ದಾರೆ. ಕಾರ್ಯಕರ್ತರಿಂದ ನಮಗೆ ನಮ್ಮ ಐಡೆಂಟಿಟಿ ಸಿಕ್ಕಿದೆ. ಎಲ್ಲರನ್ನೂ ಗೌರವಿಸಿ ಮಾನವೀಯ ಮೌಲ್ಯಗಳನ್ನು ಕಲಿಯಬೇಕು ಎಂದು ಯತ್ನಾಳ್ ವಿರುದ್ಧ ಕಿಡಿಕಾರಿದ್ದಾರೆ. ಇದನ್ನೂ ಓದಿ: ರೈಲಿಗಿಟ್ಟಿದ್ದ ಟಿಪ್ಪು ಹೆಸರೇಕೆ ತೆಗೆಯಬೇಕಿತ್ತು, ಬೇರೆ ಟ್ರೈನ್ಗೆ ಒಡೆಯರ್ ಹೆಸರಿಡಲಿ: ಹೆಚ್.ಡಿ. ರೇವಣ್ಣ
ಎಸ್.ಸಿ, ಎಸ್.ಟಿ ಸಮುದಾಯದಕ್ಕೆ ಮೀಸಲಾತಿ ಹೆಚ್ಚಳ ವಿಚಾರವಾಗಿ ಮಾತನಾಡಿದ ಅವರು, ಹಲವು ಸಮುದಾಯಗಳ ಬೇಡಿಕೆಯ ನಡುವೆ ಎಸ್ಸಿ, ಎಸ್ಟಿ ಮೀಸಲಾತಿ ಹೆಚ್ಚಿಸುವ ನಿರ್ಧಾರದ ಧೈರ್ಯವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (BasavarajBommai) ಅವರು ತೋರಿದ್ದಾರೆ. ಧೈರ್ಯ ತೋರಿದ ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸುತ್ತೇವೆ. ಈ ಹಿಂದಿನ ಕಾಂಗ್ರೆಸ್ ಮುಖ್ಯಮಂತ್ರಿಗಳಿಗೆ ಈ ರೀತಿಯ ಎದೆಗಾರಿಕೆ ಇರಲಿಲ್ಲ ಎಂದು ಲೇವಡಿ ಮಾಡಿದ್ದಾರೆ.
ಕ್ಯಾಬಿನೆಟ್ನಲ್ಲಿ ತೀರ್ಮಾನ ಮಾಡಿ ಸದನದಲ್ಲಿ ಮಂಡನೆ ಮಾಡುತ್ತಾರೆ. ಸದನದಲ್ಲಿ ಮಂಡನೆ ಮಾಡಿ ಕಾನೂನು ತೊಡಕುಗಳು ಹಾಗೂ ಸುಪ್ರೀಂ ಕೋರ್ಟ್ (Supreme Court) ತೀರ್ಮಾನದ ಕುರಿತು ಚರ್ಚೆ ಮಾಡಲಿ. ಶೋಷಿತ ವರ್ಗಕ್ಕೆ ಮೀಸಲು ಅವಶ್ಯಕತೆ ಇದೆ ಎನ್ನುವ ಧೈರ್ಯ ತೋರಿದ್ದಾರೆ ಅದಕ್ಕೆ ನಾವು ಮೆಚ್ಚುಗೆ ವ್ಯಕ್ತಪಡಿಸುತ್ತೇವೆ ಎಂದು ಹೇಳಿದ್ದಾರೆ.
ಸದಾಶಿವ ಆಯೋಗದ ವರದಿ ಜಾರಿ ಮಾಡಲು ಕಾಂಗ್ರೆಸ್ ಸಚಿವ ಆಂಜನೇಯ ಫೈಲ್ ಹಿಡಿದುಕೊಂಡು ಕ್ಯಾಬಿನೆಟ್ಗೆ ಹೋದರು ಮಂಡನೆ ಮಾಡಿಲ್ಲ. ಅವರ ವರದಿ ಮಂಡನೆ ಮಾಡುವುದಕ್ಕೂ ಕೊಟ್ಟಿಲ್ಲ ಎಂದು ಕಾಂಗ್ರೆಸ್ (Congress) ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ದೇವಾಲಯಕ್ಕೆ ನುಗ್ಗಿ ಕಾಳಿ ದೇವಿಯ ವಿಗ್ರಹವನ್ನು ಧ್ವಂಸಗೊಳಿಸಿದ ದುಷ್ಕರ್ಮಿಗಳು
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಮಂಡ್ಯ ಜಿಲ್ಲೆಯ ಜ್ವಲಂತ ಸಮಸ್ಯೆ ಮತ್ತು ಅಭಿವೃದ್ಧಿ ಕುರಿತು ಜಿಲ್ಲಾ ಉಸ್ತುವಾರಿ ಮತ್ತು ಅಬಕಾರಿ ಸಚಿವ ಕೆ.ಗೋಪಾಲಯ್ಯ, ಸಂಸದೆ ಸುಮಲತಾ ಅಂಬರೀಶ್ ಮತ್ತು ಸಚಿವ ನಾರಾಯಣ ಸ್ವಾಮಿ ಇಂದು ಆರ್ ಟಿ ನಗರದಲ್ಲಿರುವ ಮುಖ್ಯಮಂತ್ರಿಗಳ ಗೃಹ ಕಚೇರಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು. ಇದನ್ನೂ ಓದಿ: ಇಂಟಲಿಜೆನ್ಸ್ ಈಶ್ವರಪ್ಪ ಹತ್ರ ಇದೆಯಾ..?- ಪ್ರಿಯಾಂಕ್ ಖರ್ಗೆ ಕಿಡಿ
ಮೈ ಶುಗರ್ ಕಾರ್ಖಾನೆ ಆದಷ್ಟು ಬೇಗ ಶುರು ಮಾಡುವುದು, ಜಿಲ್ಲೆಯ ನೀರಾವರಿ ಯೋಜನೆ, ಯುವಕರಿಗೆ ಉದ್ಯೋಗ ಕಲ್ಪಿಸುವುದು, ಅಕ್ರಮ ಗಣಿಗಾರಿಕೆ ತಡೆ ಹಾಗೂ ಕೆಆರ್ಎಸ್ ಸುತ್ತ ಮುತ್ತ ಗಣಿಗಾರಿಕೆ ನಿಯಂತ್ರಣ, ಪ್ರವಾಸೋದ್ಯಮ ಕ್ಷೇತ್ರದ ಬಲವರ್ಧನೆ ಕುರಿತು ಸಿಎಂ ಜೊತೆ ಚರ್ಚೆ ನಡೆಸಲಾಯಿತು.
ಆನೇಕಲ್: ಬಿಜೆಪಿ ಈ ದೇಶದ ಬಗ್ಗೆ ಚಿಂತನೆ ಮಾಡುವ ಏಕೈಕ ಪಕ್ಷ ಎಂದು ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಹೇಳಿದ್ದಾರೆ.
ಭಾನುವಾರ ಅತ್ತಿಬೆಲೆ ಮಂಡಲದ ವತಿಯಿಂದ ಆಯೋಜಿಸಿದ್ದ ಜನಾಶಿರ್ವಾದ ಯಾತ್ರೆಯ ಬಳಿಕ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಈ ದೇಶದಲ್ಲಿ ಯಾವ ರೀತಿ ಆಡಳಿತ ನಡೆಸಿದೆ ಎನ್ನುವುದು ಎಲ್ಲರಿಗೂ ಗೊತ್ತಿದೆ. 60 ವರ್ಷ ಅವರ ಆಡಳಿತ ವೈಖರಿಯಿಂದಾಗಿ ಹಾಗೂ ಕೊರೊನಾ ಸಂಕಷ್ಟದಿಂದ ಬೆಲೆ ಏರಿಕೆ ಆಗಿದೆ ಹೊರತು ಬಿಜೆಪಿಯಾಗಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ ಆಗಲಿ ಜನರಿಗೆ ತೊಂದರೆಯಾಗುವ ನಿಟ್ಟಿನಲ್ಲಿ ಎಂದು ಕೂಡ ನಡೆದುಕೊಳ್ಳುವುದಿಲ್ಲ. ಬಿಜೆಪಿ ಈ ದೇಶದ ಬಗ್ಗೆ ಚಿಂತನೆ ಮಾಡುವ ಏಕೈಕ ಪಕ್ಷ ಎಂದರು.
ಅಧಿಕಾರ ಸಿಕ್ಕಾಗ ನಾವು ಜನಪರ ಯೋಜನೆಗಳನ್ನು ಜಾರಿಗೆ ತರಬೇಕು. ಜನ ನಮಗೆ ಅಧಿಕಾರ ನೀಡುವುದು ಸ್ಥಳೀಯವಾಗಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಎನ್ನುವ ಕಾರಣಕ್ಕೆ ಆದರೆ ಕೆಲವರು ಅಧಿಕಾರ ಸಿಕ್ಕಾಗ ಅದರ ಅಮಲಿನಲ್ಲಿ ಇರುತ್ತಾರೆ. ಪಕ್ಷ ವಿರೋಧಿ ಚಟುವಟಿಕೆ ಮಾಡುವವರನ್ನು ನಾನು ಎಂದು ಕೂಡ ಸಹಿಸುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ:ಯಾದಗಿರಿಯಲ್ಲಿ ವರುಣಾರ್ಭಟ – ವೀರಾಂಜನೇಯ, ಕಂಗಳೇಶ್ವರ ದೇವಾಲಯ ಜಲಾವೃತ್ತ
ನನ್ನ ಸೋಲಿಗೆ ಕಾರಣರಾದವರನ್ನು ನಾನು ಕ್ಷಮಿಸುತ್ತೇನೆ!
ಚುನಾವಣೆ ಸಂದರ್ಭದಲ್ಲಿ ಯಾರು ಬಿಜೆಪಿ ಪಕ್ಷದಲ್ಲೇ ಇದ್ದು, ಬೇರೆ ಪಕ್ಷದವರ ಜೊತೆ ಕೈಜೋಡಿಸಿ ಕೆಲಸ ಮಾಡುತ್ತಾರೋ ಅವರನ್ನು ನಾನು ಎಂದು ಕೂಡ ಸಹಿಸುವುದಿಲ್ಲ. ಈ ಹಿಂದೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ನನ್ನ ಸೋಲಿಗೆ ಕಾರಣರಾದವರನ್ನು ನಾನು ಕ್ಷಮಿಸುತ್ತೇನೆ. ಆದರೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಸೋಲಿಗೆ ಯಾರು ಕೆಲಸ ಮಾಡುತ್ತಾರೆ ಅವರನ್ನು ಯಾರೂ ಕೂಡ ಕ್ಷಮಿಸುವ ಮಾತೇ ಇಲ್ಲ ಎಂದು ಹೇಳುವ ಮೂಲಕ ವೇದಿಕೆಯಲ್ಲಿ ಹಾಜರಿದ್ದ ಕೆಲವು ಬಿಜೆಪಿ ಕಾರ್ಯಕರ್ತರಿಗೆ ಹಾಗೂ ಮುಖಂಡರಿಗೆ ಕಿವಿಮಾತು ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಆಡಳಿತದಲ್ಲಿ ಮಾತ್ರ ಭ್ರಷ್ಟಾಚಾರ ಇಲ್ಲದೆ ಆಡಳಿತ ನಡೆಸಲಾಗುತ್ತಿದೆ. ಆದರೆ ಈ ಹಿಂದೆ ದೇಶವನ್ನು ಆಳಿದವರು ಎಷ್ಟು ಲೂಟಿ ಹೊಡೆದಿದ್ದಾರೆ ಎನ್ನುವ ಮಾಹಿತಿ ಜನರಿಗೂ ಕೂಡ ಇದೆ. ಈ ನಿಟ್ಟಿನಲ್ಲಿ ಇದೆಲ್ಲವನ್ನು ಅರಿತು ಸುಭದ್ರ ದೇಶ ಕಟ್ಟಬೇಕಾದರೆ ಬಿಜೆಪಿಯಿಂದ ಮಾತ್ರ ಸಾಧ್ಯ. ಬಿಜೆಪಿಯಿಂದ ಗೆದ್ದು ಬಂದವರು ಪಕ್ಷ ನಿಷ್ಠೆಯಿಂದ ಕೆಲಸ ಮಾಡಬೇಕು. ನಮಗೆ ಅಧಿಕಾರ ನೀಡಿದ ಪಕ್ಷ ತಾಯಿಗೆ ಸಮಾನ. ಈ ನಿಟ್ಟಿನಲ್ಲಿ ನಾವು ತಾಯಿಗೆ ದ್ರೋಹ ಮಾಡದಂತೆ ಕೆಲಸ ಮಾಡಬೇಕು ಎಂದು ಹೇಳಿದರು. ಇದನ್ನೂ ಓದಿ:ಬೆಲೆ ಏರಿಕೆ, ಜನ ಸಾಮಾನ್ಯರ ದುಸ್ಥಿಗೆ ಸರ್ಕಾರ ಹೊಣೆ: ನಾರಾಯಣಸ್ವಾಮಿ
ಆನೇಕಲ್ ತಾಲೂಕಿಗೆ ಶಿಂಶಾ ನದಿ ನೀರನ್ನು ತರುವ ಬಗ್ಗೆ ನಾನೇ ಹೇಳಿದ್ದೆ. ಇದಕ್ಕೆ ಕೆಲವು ಕಾಂಗ್ರೆಸ್ ಸದಸ್ಯರು ಮಾತನಾಡಿರುವುದು ನನ್ನ ಕಿವಿಗೆ ಬಿದ್ದಿದೆ. ನನ್ನ ಮನದಲ್ಲಿರುವ ಅನಿಸಿಕೆಯನ್ನು ಹೇಳಿಕೊಳ್ಳುವುದು, ಅಂತಹ ಕಾರ್ಯಕ್ರಮಗಳನ್ನು ರೂಪಿಸುವುದು ನನಗೆ ಬಿಟ್ಟ ವಿಚಾರವಾಗಿದೆ. ಇದಕ್ಕೆ ಮೂಗು ತೂರಿಸಲು ಅವರ್ಯಾರು ಎಂದು ಪ್ರಶ್ನಿಸುವ ಮೂಲಕ ಕಾಂಗ್ರೆಸ್ಸಿನ ಬೆಂಗಳೂರು ಗ್ರಾಮಾಂತರ ಲೋಕಸಭಾ ಸಂಸದ ಡಿ.ಕೆ ಸುರೇಶ್ ಅವರಿಗೆ ತಿರುಗೇಟು ನೀಡಿದರು.
ಬಿಜೆಪಿ ಭದ್ರಕೋಟೆ!
ಆನೇಕಲ್ ತಾಲೂಕು ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ಎನ್.ಬಸವರಾಜು ಸಭೆಯನ್ನು ಉದ್ದೇಶಿಸಿ ಮಾತನಾಡಿ, ಆನೇಕಲ್ ತಾಲೂಕು ಎಂದಿಗೂ ಕೂಡ ಬಿಜೆಪಿ ಭದ್ರಕೋಟೆ, ತಾಲೂಕಿನಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸಿದವರು ಸಾಕಷ್ಟು ಜನ ಇದ್ದು, ಅವರೆಲ್ಲರನ್ನೂ ಇಂತಹ ಸಂದರ್ಭದಲ್ಲಿ ಸ್ಮರಿಸಿಕೊಳ್ಳಬೇಕು. ನಾಲ್ಕು ಬಾರಿ ಆನೇಕಲ್ಲಿನಲ್ಲಿ ಶಾಸಕರಾಗಿ ಸೋತ ಬಳಿಕ ಚಿತ್ರದುರ್ಗ ಲೋಕಸಭಾ ಸಂಸದರಾಗಿ ಕೇಂದ್ರ ಸಚಿವರಾಗಿರುವ ನಾರಾಯಣಸ್ವಾಮಿ ಅವರು ರೂಢಿಸಿಕೊಂಡ ಸರಳತೆ ಪಕ್ಷದ ಸಿದ್ಧಾಂತದಿಂದಾಗಿ ಕೇಂದ್ರದಲ್ಲಿ ಉನ್ನತ ಸ್ಥಾನವನ್ನು ಕಲ್ಪಿಸಿಕೊಂಡಿದ್ದಾರೆ. ಇಂತಹ ಹುದ್ದೆಗಳನ್ನು ಪಡೆಯಲು ಬಿಜೆಪಿ ಪಕ್ಷದಲ್ಲಿ ಇರುವ ಕಾರ್ಯಕರ್ತರು ಹಾಗೂ ಮುಖಂಡರಿಗೆ ಮಾತ್ರ ಸಾಧ್ಯ ಎಂದು ಪ್ರಶಂಸಿದ್ದಾರೆ. ಇದನ್ನೂ ಓದಿ:ಮೂರನೇ ಅಲೆ ಮಕ್ಕಳಿಗೆ ಹೆಚ್ಚು ಎಫೆಕ್ಟ್ – ಹೊಸ ಸಂಶೋಧನೆ ವರದಿ ಆತಂಕ
ಹಿರಿಯ ಬಿಜೆಪಿ ಮುಖಂಡ ಯಂಗಾ ರೆಡ್ಡಿ, ಬಿ.ಜಿ.ಆಂಜಿನಪ್ಪ, ಅತ್ತಿಬೆಲೆ ಬಿಜೆಪಿ ಮಂಡಲ ಅಧ್ಯಕ್ಷ ಎಸ್.ಆರ್.ಟಿ. ಅಶೋಕ್, ಎನ್.ಶಂಕರ್, ಬಿದರಗುಪ್ಪೆ ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಜೇಶ್, ಅತ್ತಿಬೆಲೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಮಂಜುನಾಥ್ ರೆಡ್ಡಿ ಈ ಕಾರ್ಯಕ್ರಮಕ್ಕೆ ಆಗಮಿಸಿದ್ದರು.
ಚಿತ್ರದುರ್ಗ: ಸಮುದಾಯದ ವಿಚಾರದಲ್ಲಿ ಏಕಪಕ್ಷೀಯ ತೀರ್ಮಾನ ಸರಿಯಲ್ಲವೆಂದು ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ವಿರುದ್ಧ ಬೋವಿ ಗುರುಪೀಠದ ಸಿದ್ದರಾಮೇಶ್ವರ ಸ್ವಾಮೀಜಿ ಗುಡುಗಿದ್ದಾರೆ.
ನೂತನ ಕೇಂದ್ರಸಚಿವರಾದ ಬೆನ್ನಲ್ಲೇ ನಾರಾಯಣಸ್ವಾಮಿ ಅವರಿಗೆ ಸದಾಶಿವ ವರದಿಯ ಒಳಮೀಸಲಾತಿ ವಿಚಾರ ಬಾರಿ ತಲೆನೋವಾಗಿ ಪರಿಣಮಿಸಿದೆ. ಸ್ವಜಾತಿ ಪ್ರೇಮದ ಭರಾಟೆಯಲ್ಲಿ ನಿನ್ನೆ ಮಾಧ್ಯಮಗಳೊಂದಿಗೆ ಮಾತನಾಡುವಾಗ ಸದಾಶಿವ ವರದಿ ಜಾರಿ ವಿಚಾರವಾಗಿ ಬೋವಿ ಸ್ವಾಮೀಜಿ ಜೊತೆ ಚರ್ಚಸಿರುವುದಾಗಿ ಹೇಳಿಕೆ ನೀಡಿದ್ದ ಸಚಿವರ ವಿರುದ್ಧ ಬೋವಿ ಗುರುಪೀಠದ ಸಿದ್ದರಾಮೇಶ್ವರ ಸ್ವಾಮೀಜಿ ಕಿಡಿ ಕಾರಿದ್ದಾರೆ. ನಾರಾಯಣಸ್ವಾಮಿ ನಮ್ಮೊಂದಿಗೆ ಒಳಮೀಸಲಾತಿ ವಿಚಾರವಾಗಿ ಯಾವುದೇ ಚರ್ಚೆಯನ್ನು ಮಾಡಿಲ್ಲ. ಅನಾವಶ್ಯಕವಾಗಿ ಗೊಂದಲ ಸೃಷ್ಠಿಸಬಾರದು. ಅವರು ನಿನ್ನೆ ನೀಡಿರುವ ಹೇಳಿಕೆಯಲ್ಲಿ ಸ್ಪಷ್ಟನೆ ಇಲ್ಲ. ಅಲ್ಲದೆ ಈಗಾಗಲೇ ಸೋರಿಕೆಯಾಗಿರುವ ವರದಿಯನ್ನು ಸರ್ಕಾರ ಗೌಪ್ಯವಾಗಿಡದೇ 101 ಜಾತಿಗಳ ಕೈಗೆ ಸಾರ್ವಜನಿಕವಾಗಿ ನೀಡಲಿ. ಅದರಲ್ಲಿರುವ ಸತ್ಯಾಂಶವನ್ನು ಬಹಿರಂಗಪಡಿಸಲಿ ಎಂದು ಒತ್ತಾಯಿಸಿದ್ದಾರೆ.
ಒಳಮೀಸಲಾತಿ ವಿಚಾರದಲ್ಲಿ ಎರಡು ಸಮುದಾಯಗಳ ನಡುವೇ ರಾಜಕೀಯ ಸಮರ ನಡೆಯುವುದು ಬೇಡವೆನ್ನುವ ಉದ್ದೇಶದಿಂದ ಎಲ್ಲರು ಒಟ್ಟಾಗಿ ಚರ್ಚಿಸಿ, ಈ ಗೊಂದಲಕ್ಕೊಂದು ತಾರ್ಕಿಕ ಅಂತ್ಯ ಆಡೋಣವೆಂದು ಮುನಿಯಪ್ಪ, ಗೋವಿಂದ ಕಾರಜೋಳ ಹಾಗೂ ನಾರಾಯಣಸ್ವಾಮಿ ಅವರಿಗೆ ನಾವೇ ಸಲಹೆ ನೀಡಿದ್ದೆವು. ಆದರೆ ನಾರಾಯಣಸ್ವಾಮಿ ಅವರು ಈ ರೀತಿ ನಮ್ಮೊಂದಿಗೆ ಹಾಗೂ ನಮ್ಮ ಸಮುದಾಯದ ಶಾಸಕರೊಂದಿಗೆ ಚರ್ಚಿಸಿದ್ದೇನೆಂದು ಹೇಳಿರುವುದು ಸರಿಯಲ್ಲ. ಆ ಬಗ್ಗೆ ಚರ್ಚಿಸೋಣ ಎಂದು ಹೇಳಿದ್ದರಷ್ಟೇ ಆದರೆ ಯಾವುದೇ ಚರ್ಚೆ ಬೈಠಕ್ ಆಗಿಲ್ಲ. ಹೀಗಾಗಿ ಈ ಬಗ್ಗೆ ಚರ್ಚಿಸಲು ಒಂದೇ ವೇದಿಕೆಗೆ ನಮ್ಮೊಂದಿಗೆ ಸಚಿವರು ಧಾವಿಸಲಿ ಎಂದು ಆಹ್ವಾನಿಸಿದ್ದಾರೆ. ಇದನ್ನೂ ಓದಿ: ಕೇಂದ್ರ ಸಚಿವ ನಾರಾಯಣಸ್ವಾಮಿ ಕಾರ್ಯಕ್ರಮಲ್ಲಿ ಮೂವರ ಜೇಬಿಗೆ ಕತ್ತರಿ, 20 ಸಾವಿರ ಕಳ್ಳತನ
ಸಮುದಾಯವನ್ನು ಸ್ವಾಮೀಜಿ ದಿಕ್ಕುತಪ್ಪಿಸಬಾರದು- ನಾರಾಯಣಸ್ವಾಮಿ
ಶ್ರೀಗಳ ಹೇಳಿಕೆಗೆ ತಿರುಗೇಟು ನೀಡಿರುವ ನಾರಾಯಣಸ್ವಾಮಿ, ಸಮುದಾಯವನ್ನು ಸ್ವಾಮೀಜಿ ದಿಕ್ಕು ತಪ್ಪಿಸಬಾರದು ಚಿತ್ರದುರ್ಗದಲ್ಲಿ ಮಾತನಾಡಿದ ಅವರು, ರಾಜಕೀಯಕ್ಕೆ ಬಂದಾಗಿಂದ ನಾನು ತಪ್ಪು ಮಾಡಿಲ್ಲ. ಸದಾಶಿವ ಆಯೋಗದ ವರದಿ ವಿಚಾರದಲ್ಲಿ ಮಿಸ್ ಗೈಡ್ ಸಹ ಮಾಡಿಲ್ಲ. ಸದಾಶಿವ ಆಯೋಗದಲ್ಲಿ ಲಂಬಾಣಿ, ಬೋವಿ ಸಮಾಜಗಳನ್ನು ಕೈಬಿಡಬೇಕು ಎಂಬ ಯಾವುದೇ ಪದವಿಲ್ಲ. ಆದರೂ ಅಲ್ಲಲ್ಲಿ ಈ ಬಗ್ಗೆ ಚರ್ಚೆಗಳು ನಡೆಯುತ್ತಿವೆ ಎಂಬುದು ನನಗೂ ನಿನ್ನೆ ಅನುಭವವಾಗಿದೆ. ನಾನು ಆ ಸಮಾಜವನ್ನು ವಿರೋಧ ಮಾಡುತ್ತೇನೆ ಎಂದು ಹೇಳುತ್ತಿದ್ದಾರೆ. ನಾನ್ಯಾಕೆ ವಿರೋಧ ಮಾಡಲಿ, ನಾನೇನು ಜಸ್ಟಿಸ್ಸಾ? ನಾನೊಬ್ಬ ಕ್ಯಾಬಿನೆಟ್ ಮಂತ್ರಿಯಾಗಿ ಯಾವುದೇ ವರದಿ ತೆಗೆದುಕೊಳ್ಳುವುದು ನನ್ನ ಜವಾಬ್ದಾರಿಯಾಗಿತ್ತು. ಹೀಗಾಗಿ ಅಂದು ಸಮಾಜ ಕಲ್ಯಾಣ ಮಂತ್ರಿ ಆಗಿದ್ದಾಗ ವರದಿ ಸ್ವೀಕರಿಸಿದ್ದೆನೆ. ನಮ್ಮಲ್ಲಿ ಯಾವುದೇ ಕಾಲಘಟ್ಟದಲ್ಲಿ ಸ್ವತಃ ನಾನೇ ಬೋವಿ ಸಮಾಜ ಹಾಗೂ ಲಂಬಾಣಿ ಶಾಸಕರ ಜೊತೆ ಚರ್ಚಿಸಿದ್ದೇನೆ. ಕಡಿಮೆ ಮಾಡಿಕೊಳ್ಳಲು ನಾವು ಸಿದ್ದರಿದ್ದೇವೆ. ಆದ್ದರಿಂದ ಎಲ್ಲರೂ ಒಂದಾಗೋಣ ಎಂದು ಹೇಳಿದ್ದೇನೆ.
ಇಡೀ ಸಮಾಜವನ್ನು ಒಟ್ಟಾಗಿ ತೆಗೆದುಕೊಂಡು ಹೋಗಿ, ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಒಳ್ಳೆಯದು ಮಾಡಬೇಕೆಂಬ ಉದ್ದೇಶ ನನ್ನಲ್ಲಿದೆ. ನಾವ್ಯಾಕೆ ಗುಂಪುಗಾರಿಕೆಮಾಡಲಿ, ನಮ್ಮಲ್ಲಿ ಯಾಕೆ ಈ ಮನಸ್ಥಿತಿ ಬರುತ್ತದೆ? ಈ ವಿಚಾರವಾಗಿ ನಾನೇ ನೇರವಾಗಿ ಸ್ವಾಮೀಜಿ ಜೊತೆ ಮಾತನಾಡಿದ್ದೇನೆ, ಸುಮ್ಮನೆ ಯಾಕೆ ಚರ್ಚೆ ಮಾಡುತ್ತೀರಿ ಸ್ವಾಮೀಜಿಗಳ ಮೇಲೆ ನನಗೆ ಗೌರವ ಇದೆ. ಆದರೆ ನಾನು ಶ್ರೀಗಳ ಜೊತೆ ಮಾತನಾಡಿಲ್ಲ ಎಂದರೆ ಏನರ್ಥ? ಈ ಸ್ವಾಮೀಜಿಯವರು ಬೋವಿ ಗುರುಪೀಠದ ಸ್ವಾಮೀಜಿಗಳಾಗಿ ದಿಕ್ಕು ತಪ್ಪಿಸಬಾರದು. ಇದನ್ನೂ ಓದಿ: ಡಬಲ್ ಮರ್ಡರ್ಗೆ ಬೆಚ್ಚಿಬಿತ್ತು ಮೆಟ್ರೋ ಸಿಟಿ – ಲಕ್ಷ್ಮಿ ಹಬ್ಬದ ದಿನವೇ ಹೆಣವಾದ್ರು ವೃದ್ಧ ದಂಪತಿ
ಸದಾಶಿವ ಆಯೋಗದಲ್ಲಿ ಈ ಎರಡು ಸಮಾಜಗಳನ್ನು ಮೀಸಲಾತಿಯಿಂದ ಕೈ ಬಿಡುವ ಚರ್ಚೆಗಳು ಹಿಂದೆಯೇ ನಡೆದಿದ್ದವು. ನಾನು ಅನೇಕ ಸಭೆಗಳಲ್ಲಿ ಹೇಳಿದ್ದೇನೆ. ಈ ಎರಡು ಸಮಾಜಗಳನ್ನು ಆಯೋಗದಿಂದ ತೆಗೆಯುವುದು ಯಾರ ಮನಸ್ಸಿನಲ್ಲಿ ಇಲ್ಲ. ನೀವ್ಯಾಕೆ ಈ ಕುರಿತು ಚರ್ಚೆ ಮಾಡುತ್ತೀರಾ? ಯಾಕೆ ಗೊಂದಲ ಸೃಷ್ಠಿ ಮಾಡುತ್ತೀರ ಎಂದು ಸ್ವಾಮೀಜಿಯನ್ನು ನಾರಾಯಣ ಸ್ವಾಮಿ ಪ್ರಶ್ನಿಸಿದ್ದಾರೆ.
ನವದೆಹಲಿ: ಪ್ರಧಾನಿ ಮೋದಿ ಅವರ ಸಂಪುಟ ಪುನಾರಚನೆ ಇವತ್ತು ನಡೆಯಲಿದ್ದು, ಕರ್ನಾಟಕದ ಸಂಸದರಾದ ನಾರಾಯಣಸ್ವಾಮಿ ಮತ್ತು ಶೋಭಾ ಕರಂದ್ಲಾಜೆ ಅದೃಷ್ಟ ಒಲಿದು ಬಂದಿದೆ ಎಂದು ತಿಳಿದು ಬಂದಿದೆ. ಸಂಜೆ 6 ಗಂಟೆಗೆ ನೂತನ ಕೇಂದ್ರ ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ.
ಸದ್ಯ ಕೇಂದ್ರ ಸಂಪುಟದಲ್ಲಿರುವ ಡಿ.ವಿ.ಸದಾನಂದ ಗೌಡರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಶೋಭಾ ಕರಂದ್ಲಾಜೆ ಕೇಂದ್ರ ಸಂಪುಟ ಸೇರ್ಪಡೆಯಾದ್ರೆ ರಾಜ್ಯದ ಆರನೇ ಸಂಸದೆಯಾಗಲಿದ್ದಾರೆ. ಈ ಹಿಂದೆ ಸರೋಜಿನಿ ಮಹಿಷಿ, ಬಳ್ಳಾರಿ ಸಂಸದೆಯಾಗಿದ್ದ ಬಸವರಾಜೇಶ್ಚರಿ, ಚಿಕ್ಕಮಗಳೂರು ಸಂಸದೆಯಾಗಿದ್ದ ಡಿ.ಕೆ.ತಾರದೇವಿ, ಕೆನರಾ ಸಂಸದೆಯಾಗಿದ್ದ ಮಾರ್ಗರೇಟ್ ಅಳ್ವಾ ಕೇಂದ್ರ ಸಚಿವರಾಗಿದ್ದರು. ಈಗ ಮತ್ತೆ ಉಡುಪಿ-ಚಿಕ್ಕಮಗಳೂರಿಗೆ ಅದೃಷ್ಟ ಒಲಿದು ಬಂದಿದೆ.
ಸಂಸದ ನಾರಾಯಣಸ್ವಾಮಿಗೆ ಏಕೆ ಸ್ಥಾನ?
ಎಸ್ಸಿ ಎಡಗೈ ಸಮುದಾಯದ ಕೋಟಾ ಇತ್ತು. ಮೊದಲ ಅವಧಿಯಲ್ಲಿ ಮೋದಿ ಸಂಪುಟದಲ್ಲಿ ವಿಜಯಪುರದ ಸಂಸದ ರಮೇಶ್ ಜಿಗಜಿಣಗಿ ಸ್ಥಾನ ಕೊಡಲಾಗಿತ್ತು. ಆದರೆ ಎರಡನೇ ಅವಧಿಯಲ್ಲಿ ಸ್ಥಾನವನ್ನ ಕೊಟ್ಟಿರಲಿಲ್ಲ. ಹಾಗಾಗಿ ಆ ಕೋಟಾದಲ್ಲಿ ಚಿತ್ರದುರ್ಗ ಸಂಸದರಾದ ನಾರಾಯಣಸ್ವಾಮಿ ಅವರಿಗೆ ಸ್ಥಾನ ನೀಡಲಾಗಿದೆ. ಇನ್ನೂ ನಾರಾಯಣಸ್ವಾಮಿ ಅವರು ಬಿ.ಎಲ್.ಸಂತೋಷ್ ಗುಂಪಿನಲ್ಲಿ ಗುರುತಿಸಿಕೊಂಡಿದ್ದರು.
ಶೋಭಾ ಕರಂದ್ಲಾಜೆಗೆ ಏಕೆ ಸ್ಥಾನ?
ಜಾತಿ ಸಮೀಕರಣದಲ್ಲಿ ಶೋಭಾ ಕರಂದ್ಲಾಜೆಗೆ ಅವರಿಗೆ ಅದೃಷ್ಟ ಒಲಿದಿದೆ. ಡಿ.ವಿ.ಸದನಾಂದಗೌಡರ ಸ್ಥಾನಕ್ಕೆ ಎರಡು ರೀತಿಯಲ್ಲಿ ಸಮೀಕರಣ ರಚನೆ ಮಾಡಲಾಗಿತ್ತು. ಒಂದು ಜಾತಿ ಇನ್ನೊಂದು ಕರಾವಳಿ ಭಾಗದ ಸಮೀಕರಣದಲ್ಲಿ ಶೋಭಾ ಕರಂದ್ಲಾಜೆ ಅವರಿಗೆ ಸ್ಥಾನ ಸಿಕ್ಕಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಾಗ ದೂರ ಇರುವಂತೆ ಹೈಕಮಾಂಡ್, ಆರ್ಎಸ್ಎಸ್ ಸೂಚನೆ ನೀಡಿತ್ತು ಎನ್ನಲಾಗಿದೆ. ಇಬ್ಬರ ಆಜ್ಞೆಯನ್ನು ಶೋಭಾ ಕರಂದ್ಲಾಜೆ ಚಾಚೂತಪ್ಪದೇ ಪಾಲಿಸಿದ್ದಾರೆ.
ಕಳೆದ ಎರಡು ವರ್ಷಗಳಿಂದ ಶೋಭಾ ಕರಂದ್ಲಾಜೆ ಅವರು ವ್ಯಕ್ತಿ ನಿಷ್ಠೆಯಿಂದ ಅಂತರ ಕಾಯ್ದುಕೊಂಡಿದ್ದರು. ಪಕ್ಷ, ಸಂಘ ನಿಷ್ಠರಾಗಿ ಉಳಿದು ರಾಜ್ಯ ರಾಜಕಾರಣದಿಂದ ದೂರವಿದ್ದ ಲಾಭವೇ ಕೇಂದ್ರ ಸಂಪುಟದಲ್ಲಿ ಸ್ಥಾನ ಎನ್ನಲಾಗುತ್ತಿದೆ.
ಕೇಂದ್ರ ಸಂಪುಟದಲ್ಲಿ ಸ್ಥಾನ ಪಡೆದ ಕರ್ನಾಟಕ 6ನೇ ಸಂಸದೆ ಶೋಭಾ ಕರಂದ್ಲಾಜೆ: ಈ ಹಿಂದೆ ಧಾರವಾಡ ಉತ್ತರ- ಸರೋಜಿನಿ ಮಹಿಷಿ, ಬಳ್ಳಾರಿ- ಬಸವರಾಜೇಶ್ವರಿ, ಚಿಕ್ಕೋಡಿ- ರತ್ನಾಮಾಲಾ ಸವಣೂರು, ಚಿಕ್ಕಮಗಳೂರು- ಡಿ.ಕೆ.ತಾರದೇವಿ, ಕೆನರಾ – ಮಾರ್ಗರೇಟ್ ಅಳ್ವಾ ಕೇಂದ್ರ ಸಚಿವರಾಗಿದ್ದರು. @publictvnews@ShobhaBJP@BJP4Karnataka@sukeshdh
ಬೆಂಗಳೂರು: ದೀಪವೊಂದು ಮರೆಯಾಗಿದೆ. ಬದುಕಿನ ಅಸ್ಮಿತೆಗಳನ್ನು, ಬದುಕಿನ ಕಥನಗಳನ್ನು ಅಕ್ಷರ ರೂಪದಲ್ಲಿ ಕಟ್ಟಿದವರು ದಲಿತ ಕವಿ ಶ್ರೀ ಸಿದ್ದಲಿಂಗಯ್ಯನವರು. ಸಾಹಿತ್ಯ ಲೋಕದಲ್ಲಿ ತಮ್ಮ ವರ್ಗದ ಅಸ್ಮಿತೆಗೆ ಧ್ವನಿಯಾಗಿ ‘ದಲಿತ ಕವಿ’ಎಂದೇ ಪ್ರಸಿದ್ಧರಾದ ನಾಡೋಜ ಸಿದ್ಧಲಿಂಗಯ್ಯನವರ ಅಗಲುವಿಕೆಗೆ ಭಾರತೀಯ ಜನತಾ ಪಾರ್ಟಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿಯವರು ಸಂತಾಪ ಸೂಚಿಸಿದ್ದಾರೆ.
ಇವರ ಒಳ ಧ್ವನಿಯ ಆಕ್ರೋಶದಿಂದ ಹುಟ್ಟಿದ ಹಾಡುಗಳು ಆರಂಭದ ದಿನಗಳಲ್ಲಿ ಚಳುವಳಿಗೆ ಬಲ ತುಂಬಿದವು ನಂತರದ ದಿನಗಳಲ್ಲಿ ರಾಷ್ಟ್ರೀಯತೆಯ ಕಾರಣಕ್ಕಾಗಿ ಮಧ್ಯಮ ಮಾರ್ಗವನ್ನು ಕಂಡುಕೊಂಡ ಶ್ರೀಯುತರು ಕನ್ನಡ ಸಾಹಿತ್ಯ ರಂಗದ ಒಬ್ಬ ಅಪ್ರತಿಮ ಸಾಧಕರು. ಶ್ರೀಯುತರ ಸಾಹಿತ್ಯದ ಕೃಷಿಗೆ ಕನ್ನಡದ ಶ್ರೇಷ್ಠ ಪ್ರಶಸ್ತಿ ಪಂಪ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡಮಿ ಪ್ರಶಸ್ತಿ, ಜಾನಪದ ತಜ್ಞ ಪ್ರಶಸ್ತಿ, ಡಾ. ಅಂಬೇಡ್ಕರ್ ಪ್ರಶಸ್ತಿ, ಸತ್ಯಕಾಮ ಪ್ರತಿಷ್ಠಾನ ಪ್ರಶಸ್ತಿ, ಬಾಬು ಜಗಜೀವನ ರಾಮ್ ಪ್ರಶಸ್ತಿ, ಹಂಪಿ ವಿಶ್ವವಿದ್ಯಾಲಯದ ನಾಡೋಜ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳು ಇವರಿಗೆ ಸಂದಿದ್ದವು. ಇದನ್ನೂ ಓದಿ: ‘ಊರುಕೇರಿ’ ತೊರೆದು ಹೋದ ಸಿದ್ದಲಿಂಗಯ್ಯ
ಹೊಲೆ ಮಾದಿಗರ ಹಾಡು, ಮೆರವಣಿಗೆ, ಸಾವಿರಾರು ನದಿಗಳು, ಕಪ್ಪು ಕಾಡಿನ ಹಾಡು ಮೊದಲಾದ ಕೃತಿಗಳನ್ನು ರಚಿಸಿದ ಶ್ರೀಯುತರು ಕನ್ನಡ ಸಾಹಿತ್ಯ ಲೋಕಕ್ಕೆ ನೀಡಿದ ಕೊಡುಗೆ ಅಪಾರ. ಎರಡು ಬಾರಿ ರಾಜ್ಯ ವಿಧಾನ ಪರಿಷತ್ತಿನ ಸದಸ್ಯರಾಗಿದ್ದ ಶ್ರೀಯುತರು 81ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ಕವಿ ಸಿದ್ಧಲಿಂಗಯ್ಯನವರು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾಗಿಯೂ ಅತ್ತಂತ ಸಮರ್ಪಕವಾಗಿ ಕೆಲಸ ನಿರ್ವಹಿಸಿದ್ದರು.
ದೀಪವೊಂದು ಮರೆಯಾಗಿದೆ. ಬದುಕಿನ ಅಸ್ಮಿತೆಗಳನ್ನು, ಬದುಕಿನ ಕಥನಗಳನ್ನು ಅಕ್ಷರ ರೂಪದಲ್ಲಿ ಕಟ್ಟಿದವರು ದಲಿತ ಕವಿ ಶ್ರೀ ಸಿದ್ದಲಿಂಗಯ್ಯನವರು. ಸಾಹಿತ್ಯ ಲೋಕದಲ್ಲಿ ತಮ್ಮ ವರ್ಗದ ಅಸ್ಮಿತೆಗೆ ಧ್ವನಿಯಾಗಿ ‘ದಲಿತ ಕವಿ’ ಎಂದೇ ಪ್ರಸಿದ್ಧರಾದ ನಾಡೋಜ ಸಿದ್ಧಲಿಂಗಯ್ಯನವರ ಅಗಲುವಿಕೆಗೆ ಕನ್ನಡ ಸಾಹಿತ್ಯ ಲೋಕಕ್ಕೆ ಬಹುದೊಡ್ಡ ನಷ್ಟವಾಗಿದೆ. #ಓಂಶಾಂತಿಃpic.twitter.com/glo6WmYgQx
— C T Ravi ???????? ಸಿ ಟಿ ರವಿ (@CTRavi_BJP) June 11, 2021
ನನ್ನಂತಹ ಸಾವಿರ ಸಾವಿರ ಓದುಗರ ಪಾಲಿಗೆ ಶ್ರೀಯುತರ ಅಗಲಿಕೆ ಅತಿದೊಡ್ಡ ನಷ್ಟ. ಇಹಕಾಯವನ್ನು ತೊರೆದಿದ್ದರೂ ಅವರ ಬರವಣಿಗೆಗಳ ಮೂಲಕ ನಮ್ಮ ನಡುವೆ ಸದಾ ನೆಲೆಸಿರುತ್ತಾರೆ. ಅವರ ಅಗಲುವಿಕೆಯ ದುಃಖ ಭರಿಸುವ ಶಕ್ತಿ ಅವರ ಕುಟುಂಬಕ್ಕೆ, ಅವರ ಅಭಿಮಾನಿ ವರ್ಗಕ್ಕೆ ಹಾಗೂ ಓದುಗ ಬಳಗಕ್ಕೆ ಶ್ರೀ ಗುರು ದತ್ತಾತ್ರೇಯರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಂತಾಪ ಸೂಚಿಸಿದ್ದಾರೆ.
ನಾರಾಯಣಸ್ವಾಮಿ ಸಂತಾಪ:
ಕನ್ನಡದ ಕವಿ ಡಾ ಸಿದ್ಧಲಿಂಗಯ್ಯ ನವರು ಇಹಲೋಕ ತ್ಯಜಿಸಿದ್ದಾರೆ. ದಲಿತ ಸಮುದಾಯದ ಉನ್ನತಿ ಮತ್ತು ಪ್ರಗತಿಗಾಗಿ ಶ್ರಮಿಸಿದ ಸಿದ್ದಲಿಂಗಯ್ಯ ನವರಿಗೆ ಭಾವಪೂರ್ಣ ಶ್ರದ್ಧಾಂಜಲಿ, ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಅಂತಾ ಬಿಜೆಪಿ ಎಸ್ ಸಿ ಮೋರ್ಚಾ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಸಂತಾಪ ಸೂಚಿಸಿದ್ದಾರೆ.
ಮುಖ್ಯಮಂತ್ರಿ ಮಾನ್ಯ ಯಡಿಯೂರಪ್ಪನವರಲ್ಲಿ ಮನವಿ ಮಾಡುತ್ತೇನೆ. ಸಿದ್ಧಲಿಂಗಯ್ಯನವರು ರಾಜ್ಯದಲ್ಲಿ ಹೆಸರಾಂತ ಕವಿಗಳು ಮಾತ್ರವಲ್ಲ ಅವರು ಪ್ರೊಫೆಸರ್ ಆಗಿ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಸುದೀರ್ಘ ಸೇವೆ ಸಲ್ಲಿಸಿದ ಹಾಗೂ ಎರಡು ಅವಧಿಗೆ ಕರ್ನಾಟಕ ವಿಧಾನಪರಿಷತ್ ಸದಸ್ಯರಾಗಿಯೂ ಸೇವೆ ಸಲ್ಲಿಸಿ ರಾಜ್ಯದಲ್ಲಿ ಜನಾನುರಾಗಿ ಆಗಿದ್ದಾರೆ. ಆದ್ದರಿಂದ ಅವರ ಸಹಸ್ರಾರು ಸಂಖ್ಯೆಯ ಶಿಷ್ಯವೃಂದ ಹಾಗೂ ಅವರ ಅನುಯಾಯಿಗಳು ಸಿದ್ಧಲಿಂಗಯ್ಯನವರನ ಅಂತ್ಯಕ್ರಿಯೆ ನಡೆಸಲು ಬೆಂಗಳೂರು ವಿಶ್ವವಿದ್ಯಾಲಯದ ಕಲಾಗ್ರಾಮದಲ್ಲಿ ಪ್ರೊಫೆಸರ್ ಜಿ.ಎಸ್ ಶಿವರುದ್ರಪ್ಪ ಮತ್ತು ಪ್ರೊಫೆಸರ್ ಯು.ಆರ್ ಅನಂತಮೂರ್ತಿರವರ ಸ್ಮಾರಕಗಳ ಸ್ಥಳದಲ್ಲಿ ಅಂತ್ಯಕ್ರಿಯೆಗೆ ಸ್ಥಳಾವಕಾಶ ಕೋರುತ್ತಿದ್ದಾರೆ. ದಯಮಾಡಿ ದಲಿತ ಸಮುದಾಯಗಳ ಈ ಮನವಿಗೆ ಸ್ಪಂದಿಸಿ ಅವಕಾಶ ಕಲ್ಪಿಸಿಕೊಡಲು ಮನವಿ ಮಾಡುತ್ತೇನೆ ಅಂತಾ ಛಲವಾದಿ ನಾರಾಯಣಸ್ವಾಮಿ ಮನವಿ ಮಾಡಿದ್ದಾರೆ. ಇದನ್ನೂ ಓದಿ:ದಲಿತ ಕವಿ ಸಿದ್ದಲಿಂಗಯ್ಯ ನಿಧನ – ವಿಪಕ್ಷ ನಾಯಕ ಸಿದ್ದರಾಮಯ್ಯ ಸಂತಾಪ
ಕೋಲಾರ: ಕೊರೊನಾ ಎರಡನೇ ಅಲೆ ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ ರಸ್ತೆಗಿಳಿದು ಜನರಿಗೆ ಕೊರೊನಾ ಜಾಗೃತಿ ಮೂಡಿಸಿದ್ದಾರೆ.
ಎಸ್.ಎನ್.ನಾರಾಯಣಸ್ವಾಮಿ, ಖುದ್ದು ನಗರದಲ್ಲಿ ಮೈಕ್ ಹಿಡಿದು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಂಚಾರ ಮಾಡಿ ಕೋಲಾರ ಜಿಲ್ಲೆಯಲ್ಲಿ ಕೊರೊನಾ ಎರಡನೇ ಅಲೆಯಿಂದ ಸೋಂಕಿನ ಪ್ರಕರಣ ಹೆಚ್ಚಾಗುತ್ತಿದೆ. ಹಾಗಾಗಿ ಯಾರೋ ಕೂಡ ನಿರ್ಲಕ್ಷ್ಯವಹಿಸುವುದು ಬೇಡ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡರು. ಪ್ರತಿಯೊಬ್ಬರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಸಾಮಾಜಿಕ ಅಂತರ ಕಾಯ್ದುಕೊಂಡು ಕೊರೊನಾದಿಂದ ಮುಕ್ತರಾಗುವಂತೆ ಸಲಹೆ ನೀಡಿದರು.
ಎಸ್.ಎನ್.ನಾರಾಯಣಸ್ವಾಮಿ ಅವರಿಗೆ ತಹಶೀಲ್ದಾರ್ ದಯಾನಂದ್, ಸಿಪಿಐ ಸುನಿಲ್ ಕುಮಾರ್, ಸೇರಿದಂತೆ ಅರೋಗ್ಯ ಇಲಾಖೆ ಅಧಿಕಾರಿಗಳು, ಪೊಲೀಸರು, ಪುರಸಭೆ ಸದಸ್ಯರು ಕೊರೊನಾ ಜಾಗೃತಿ ಮೂಡಿಸಲು ಸಾಥ್ ನೀಡಿದರು.