Tag: naredra modi

  • NDA 398, INDIA 130 ಸ್ಥಾನ – ಟೈಮ್ಸ್‌ ನೌ ಸಮೀಕ್ಷೆ

    NDA 398, INDIA 130 ಸ್ಥಾನ – ಟೈಮ್ಸ್‌ ನೌ ಸಮೀಕ್ಷೆ

    ನವದೆಹಲಿ: ಈಗ ದೇಶದಲ್ಲಿ ಲೋಕಸಭಾ ಚುನಾವಣೆ (Lok Sabha Election) ನಡೆದರೆ ಬಿಜೆಪಿ (BJP) ನೇತೃತ್ವದ ಎನ್‌ಡಿಎಗೆ (NDA) 358-398 ಸ್ಥಾನ ಸಿಗಲಿದೆ ಟೈಮ್ಸ್‌ನೌ ವಾಹಿನಿ ನಡೆಸಿದ ಸಮೀಕ್ಷೆ ತಿಳಿಸಿದೆ.

    INDIA ಒಕ್ಕೂಟಕ್ಕೆ 110-130, ವೈಎಸ್‌ಆರ್‌ಸಿಪಿ 21-22, ಬಿಜೆಡಿ 10-11, ಇತರರು 11-15 ಸ್ಥಾನ ಗೆಲ್ಲಲಿದ್ದಾರೆ ಎಂದು ಭವಿಷ್ಯ ನುಡಿದಿದೆ. ಇದನ್ನೂ ಓದಿ: ಬೆಂಗಳೂರು ಗ್ರಾಮಾಂತರದಿಂದ ಡಿಕೆಸು ಅಖಾಡಕ್ಕೆ – ಯಾರಾಗ್ತಾರೆ ಎದುರಾಳಿ?

    2019ರ ಚುನಾವಣೆಯಲ್ಲಿ ಎನ್‌ಡಿಎ 303, INDIA ಒಕ್ಕೂಟ 116, ಇತರರು 44 ಸ್ಥಾನವನ್ನು ಗೆದ್ದಿದ್ದರು. ಒಟ್ಟು 543 ಕ್ಷೇತ್ರಗಳಿಗೆ ಲೋಕಸಭಾ ಚುನಾವಣೆ ನಡೆಯಲಿದೆ.

    ಕರ್ನಾಟಕದಲ್ಲಿ ಎಷ್ಟು?
    ಬಿಜೆಪಿ 21-23, ಕಾಂಗ್ರೆಸ್‌ (Congress) 4-6, ಜೆಡಿಎಸ್‌ 1-2 ಸ್ಥಾನ ಗೆಲ್ಲಬಹುದು ಎಂದು ಹೇಳಿದೆ. 2019ರ ಚುನಾವಣೆಯಲ್ಲಿ ಬಿಜೆಪಿ 25 ಸ್ಥಾನವನ್ನು ಗೆದ್ದರೆ, ಬೆಂಗಳೂರು ಗ್ರಾಮಾಂತರದಿಂದ ಡಿಕೆ ಸುರೇಶ್‌, ಹಾಸನದಿಂದ ಜೆಡಿಎಸ್‌ನ ಪ್ರಜ್ವಲ್‌ ರೇವಣ್ಣ, ಮಂಡ್ಯದಿಂದ ಸುಮಲತಾ ಗೆದ್ದಿದ್ದರು.

    ಪಶ್ಚಿಮ ಬಂಗಾಳದಲ್ಲಿ ಬಿಜೆಪಿ 22 ಸ್ಥಾನಗಳನ್ನು ಗೆಲ್ಲುವ ಮೂಲಕ ಟಿಎಂಸಿ ಕೋಟೆಯನ್ನು ಛಿದ್ರ ಮಾಡಲಿದೆ. ಗುಜರಾತ್‌, ಮಧ್ಯಪ್ರದೇಶ, ರಾಜಸ್ಥಾನಗಳು ಸಂಪೂರ್ಣವಾಗಿ ಎನ್‌ಡಿಎ ಗೆಲ್ಲಲಿದೆ. ದಕ್ಷಿಣ ಭಾರತದ ಐದು ರಾಜ್ಯಗಳಲ್ಲಿ INDA ಒಕ್ಕೂಟ 65 ಸ್ಥಾನಗಳಿಸಲಿದೆ ಎಂದು ಹೇಳಿದೆ.

    ಈ ಬಾರಿ 400 ಸ್ಥಾನ ಗೆಲ್ಲಬೇಕು ಎಂದು ಬಿಜೆಪಿ ಘೋಷಣೆ ಮೊಳಗಿಸುತ್ತಿದ್ದರೂ 400 ಸ್ಥಾನಗಳನ್ನು ಎನ್‌ಡಿಎ ಗಳಿಸುವುದು ಕಷ್ಟ ಎಂದು ಸಮೀಕ್ಷೆ ತಿಳಿಸಿದೆ.

  • ಧಾರ್ಮಿಕ ಕೇಂದ್ರಗಳ ನಿರ್ಲಕ್ಷ್ಯಕ್ಕೆ ಗುಲಾಮಗಿರಿ ಮನಸ್ಥಿತಿಯೇ ಕಾರಣ – ಮೋದಿ

    ಧಾರ್ಮಿಕ ಕೇಂದ್ರಗಳ ನಿರ್ಲಕ್ಷ್ಯಕ್ಕೆ ಗುಲಾಮಗಿರಿ ಮನಸ್ಥಿತಿಯೇ ಕಾರಣ – ಮೋದಿ

    ಡೆಹ್ರಾಡೂನ್: ದೇಶದಾದ್ಯಂತ ಇರುವ ಧಾರ್ಮಿಕ ಕೇಂದ್ರಗಳನ್ನು (Religious Center) ಹಿಂದಿನ ಸರ್ಕಾರಗಳು ನಿರ್ಲಕ್ಷಿಸಿದ್ದವು. ಗುಲಾಮಗಿರಿ ಮನಸ್ಥಿತಿಯೇ ಇದಕ್ಕೆ ಕಾರಣ. ಈಗ ಅವುಗಳ ವೈಭವ ಮರುಸ್ಥಾಪಿಸಲಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದರು.

    ಉತ್ತರಾಖಂಡದ ಭಾರತ-ಚೀನಾ ಗಡಿಯಲ್ಲಿರುವ ಮನ ಗ್ರಾಮದಲ್ಲಿ ಕೇದಾರನಾಥ (Kedarnath Temple) ಮತ್ತು ಹೇಮಕುಂಡ್ ಸಾಹಿಬ್ ರೋಪ್ ವೇ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಈ ವೇಳೆ ಕಾಶಿ ವಿಶ್ವನಾಥ ದೇವಾಲಯ (Kashi Vishwanath Temple), ಉಜ್ಜಯಿನಿ ಮತ್ತು ಅಯೋಧ್ಯೆಯಲ್ಲಿ ಈಚೆಗೆ ಪುನರ್‌ನಿರ್ಮಾಣ ಕಾರ್ಯಗಳು ನಡೆದಿರುವುದನ್ನು ಉದಾಹರಣೆ ನೀಡಿ ಅವರು ಮಾತನಾಡಿದರು. ಇದನ್ನೂ ಓದಿ: 4ರ ಬಾಲಕಿ ಮೇಲೆ ಪ್ರಾಂಶುಪಾಲರ ಚಾಲಕನಿಂದ ಅತ್ಯಾಚಾರ – ಶಾಲೆಯನ್ನೇ ಮುಚ್ಚಿಸಿದ ಸರ್ಕಾರ

    ನಮ್ಮ ಧಾರ್ಮಿಕ ಕೇಂದ್ರಗಳು ಕೇವಲ ಕಟ್ಟಡಗಳಲ್ಲ. ಅವು ನಮ್ಮ ಸಾವಿರಾರು ವರ್ಷಗಳ ಸಾಂಸ್ಕೃತಿಕ ಪರಂಪರೆಯ ಸಂಕೇತಗಳು. ಆದರೆ ಹಿಂದಿನ ಸರ್ಕಾರಗಳು (Government) ಧಾರ್ಮಿಕ ಕೇಂದ್ರಗಳನ್ನು ನಿರ್ಲಕ್ಷಿಸಿದ್ದವು. ಗುಲಾಮಗಿರಿ ಮನಸ್ಥಿತಿಯೇ ಇದಕ್ಕೆ ಕಾರಣ ಎಂದು ಕುಟುಕಿದರು. ಇದನ್ನೂ ಓದಿ: ಅಭಿಮಾನಿಗಳ ಮೂಲಕ ಅಪ್ಪು ಇನ್ನೂ ಜೀವಂತವಾಗಿದ್ದಾರೆ: ನಟಿ ರಮ್ಯಾ

    ಹಿಮಾಲಯದ ತಪ್ಪಲಿನ ಧಾರ್ಮಿಕ ಕೇಂದ್ರಗಳ ಅಭಿವೃದ್ಧಿಯು ಯಾತ್ರಿಕರಿಗೆ ಅನುಕೂಲ ಉಂಟುಮಾಡುವುದರ ಜೊತೆಗೆ ಸ್ಥಳೀಯರಿಗೆ ಉದ್ಯೋಗಾವಕಾಶ ಸೃಷ್ಟಿಸಿದೆ. ಸ್ಥಳೀಯ ಆರ್ಥಿಕತೆಗೆ ಉತ್ತೇಜನ ನೀಡಿದೆ. ಹೇಮಕುಂಡ್ ಸಾಹಿಬ್ ಗುರುದ್ವಾರಕ್ಕೆ ರೋಪ್‌ವೇ ನಿರ್ಮಿಸುವ ಯೋಜನೆಗೆ ಚಾಲನೆ ನೀಡಿರುವುದು ದೇಶದಲ್ಲಿ ಮಾತ್ರವಲ್ಲದೆ ಬ್ರಿಟನ್, ಜರ್ಮನಿ ಕೆನಡಾದಲ್ಲಿ ನೆಲೆಸಿರುವ ಸಿಖ್ ಸಮುದಾಯದವರಲ್ಲಿ ಹರ್ಷ ಉಂಟುಮಾಡಿದೆ ಎಂದು ಶ್ಲಾಘಿಸಿದರು.

    ಇದಕ್ಕೂ ಮೊದಲು ಮೋದಿ ಅವರು ಕೇದಾರನಾಥ ಮತ್ತು ಬದರೀನಾಥ ದೇವಾಲಯಗಳಿಗೆ ಭೇಟಿ ನೀಡಿದ್ದರು.

    Live Tv
    [brid partner=56869869 player=32851 video=960834 autoplay=true]

  • ನವೆಂಬರ್‌ನಲ್ಲಿ ಕರ್ನಾಟಕಕ್ಕೂ ಬರಲಿದೆ ವಂದೇ ಭಾರತ್ ಸೆಮಿ ಹೈಸ್ಪೀಡ್ ರೈಲು

    ನವೆಂಬರ್‌ನಲ್ಲಿ ಕರ್ನಾಟಕಕ್ಕೂ ಬರಲಿದೆ ವಂದೇ ಭಾರತ್ ಸೆಮಿ ಹೈಸ್ಪೀಡ್ ರೈಲು

    ನವದೆಹಲಿ: ಕರ್ನಾಟಕಕ್ಕೂ ವಂದೇ ಭಾರತ್ ರೈಲು (Vande Bharat Express) ಬರಲಿದ್ದು, ಮುಂದಿನ ನವೆಂಬರ್ ತಿಂಗಳಿನಿಂದ ಚೆನ್ನೈ-ಬೆಂಗಳೂರು-ಮೈಸೂರು (Bengaluru-Mysuru) ಮಾರ್ಗವಾಗಿ ಸಂಚರಿಸಲಿದೆ.

    ದೆಹಲಿ – ಉನಾ ಸಂಪರ್ಕಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್‌ ಸರಣಿಯ 4ನೇ ರೈಲಿಗೆ ಪ್ರಧಾನಿ ಮೋದಿ (Narendra Modi) ಹಿಮಾಚಲ ಪ್ರದೇಶದಲ್ಲಿ ಗುರುವಾರ ಚಾಲನೆ ನೀಡಿದ್ದಾರೆ. ಇದರೊಂದಿಗೆ ನವೆಂಬರ್ 10 ರಂದು ವಂದೇ ಭಾರತ್ ಎಕ್ಸ್‌ಪ್ರೆಸ್‌ (Express Train) 5ನೇ ರೈಲು ಚಾಲನೆಗೊಳ್ಳಲಿದೆ. ಇದನ್ನೂ ಓದಿ: ದೊಡ್ಮನೆಯಲ್ಲಿ ಮಕ್ಕಳ ದರ್ಬಾರ್: ಮಗುವನ್ನು ತಬ್ಬಿ ಗಳಗಳನೆ ಅತ್ತ ಮಯೂರಿ

    ಪ್ರಧಾನಿ ನರೇಂದ್ರ ಮೋದಿ ಅವರು 4ನೇ ವಂದೇ ಭಾರತ್ ಸೆಮಿ ಹೈಸ್ಪೀಡ್ (Semi HighSpeed Train) ರೈಲಿಗೆ ಹಸಿರು ನಿಶಾನೆ ತೋರಿದ್ದಾರೆ. ಇದು ಬುಧವಾರ ಹೊರತುಪಡಿಸಿ ವಾರದ ಉಳಿದೆಲ್ಲ ದಿನಗಳಲ್ಲೂ ಸಂಚರಿಸಲಿದೆ. ಮೊದಲ ಮೂರು ರೈಲಿಗಿಂತಲೂ ಗುಣಮಟ್ಟದ್ದಾಗಿದ್ದು, ಉನಾದಿಂದ ದೆಹಲಿಯ ನಡುವೆ 2 ಗಂಟೆ ಪ್ರಯಾಣದ ಸಮಯವನ್ನು ಕಡಿಮೆಗೊಳಿಸಲಿದೆ.

    ಫೆಬ್ರುವರಿ 15, 2019ರಂದು ದೇಶದ ಮೊಟ್ಟ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿಗೆ ಪ್ರಧಾನಿ ಮೋದಿ ಚಾಲನೆ ನೀಡಿದ್ದರು. ನವದೆಹಲಿ – ಕಾನ್ಪುರ – ಅಲಹಾಬಾದ್ – ವಾರಣಾಸಿ ಮಾರ್ಗದಲ್ಲಿ ಈ ರೈಲು ಸಂಚರಿಸುತ್ತಿದೆ. 2ನೇ ರೈಲು ದೆಹಲಿಯಿಂದ ವಾರಣಾಸಿಗೆ ಸಂಚರಿಸುತ್ತಿದೆ. ಇದನ್ನೂ ಓದಿ: ಸ್ವಂತ ಉದ್ಯಮದ ಕನಸು ನನಸು – B ಟೆಕ್ ವಿದ್ಯಾರ್ಥಿನಿ ಈಗ `ಚಾಯ್‌ವಾಲಿ’

    ಏನಿದರ ವಿಶೇಷತೆ?
    ಎಲ್ಲಾ ಕೋಚ್‌ಗಳಲ್ಲೂ ಆಟೋ ಮ್ಯಾಟಿಕ್ ಡೋರ್‌ಗಳು ಇರುತ್ತವೆ. ಜಿಪಿಎಸ್ (GPS) ಆಧಾರಿತ ಆಡಿಯೋ ವಿಶ್ಯುಯಲ್ಸ್ ಪ್ರಯಾಣಿಕ ಮಾಹಿತಿ ವ್ಯವಸ್ಥೆ ಇರುತ್ತದೆ. ಉಚಿತ ವೈಫೈ ವ್ಯವಸ್ಥೆ ಇರುತ್ತದೆ. ಸೀಟ್‌ಗಳು ಆರಾಮದಾಯವಾಗಿ ಇರುತ್ತವೆ. ಟಾಯ್ಲೆಟ್‌ಗಳು ಬಯೋ ವ್ಯಾಕ್ಯೂಮ್ ತಂತ್ರಜ್ಞಾನ ಆಧಾರಿತವಾಗಿರುತ್ತವೆ. ಪ್ರತಿ ಸೀಟ್‌ಗೂ ಪ್ರತ್ಯೇಕ ಲೈಟ್ ವ್ಯವಸ್ಥೆ ಇರುತ್ತದೆ. ಇದನ್ನೂ ಓದಿ: ರಾಯಚೂರಿನಲ್ಲಿ ರಸ್ತೆ ಮಾರ್ಗವಿಲ್ಲದೆ ತುಂಬು ಗರ್ಭಿಣಿ ಪರದಾಟ

    ಪ್ರಯಾಣಿಕರಿಗೆ ಬಿಸಿ-ಬಿಸಿ ಆಹಾರ (Food) ವಿತರಣೆ ಮಾಡಲಾಗುತ್ತದೆ. ಬಿಸಿ ಹಾಗೂ ತಂಪು ಪಾನೀಯಗಳು ಲಭ್ಯವಾಗುತ್ತವೆ. ರೈಲು ಸಾಗುವಾಗ ಪ್ರಯಾಣಿಕರಿಗೆ ಹೆಚ್ಚಿನ ಶಬ್ಧ ಕೇಳಿ ಬರೋದಿಲ್ಲ. ಪ್ರತಿಯೊಂದು ವಂದೇ ಭಾರತ್ ರೈಲಿನಲ್ಲಿ 1,128 ಪ್ರಯಾಣಿಕರು ಪ್ರಯಾಣ ಮಾಡಬಹುದಾಗಿದೆ. ಎಲ್ಲದಕ್ಕಿಂತ ಹೆಚ್ಚಾಗಿ ವಂದೇ ಭಾರತ್ ರೈಲಿನಲ್ಲಿ ಅಪಘಾತ ತಡೆ ವ್ಯವಸ್ಥೆಗೆ ತುಂಬಾನೇ ಸುಧಾರಿತ ತಂತ್ರಜ್ಞಾನ ಬಳಸಲಾಗಿದೆ.

    ಪ್ರತಿ ಕೋಚ್‌ನಲ್ಲೂ ತುರ್ತು ನಿರ್ಗಮನ ಕಿಟಕಿ, ಸಿಸಿಟಿವಿ (CCTV) ಕ್ಯಾಮರಾ ಇರುತ್ತದೆ. ಅಗ್ನಿ ಅನಾಹುತ ತಡೆಯುವ ವ್ಯವಸ್ಥೆ ಕೂಡಾ ಇದೆ.

    Live Tv
    [brid partner=56869869 player=32851 video=960834 autoplay=true]

  • ಯುವಜನರ ಜೀವನ ನಾಶಮಾಡಲು ಬಿಡಲ್ಲ: ಮೋದಿ ಎಚ್ಚರಿಕೆ

    ಯುವಜನರ ಜೀವನ ನಾಶಮಾಡಲು ಬಿಡಲ್ಲ: ಮೋದಿ ಎಚ್ಚರಿಕೆ

    ಗಾಂಧಿನಗರ: ಎಷ್ಟೇ ನಗರ ನಕ್ಸಲರು (Urban Naxals) ಬಂದರೂ ಗುಜರಾತ್ (Gujarat) ರಾಜ್ಯ ಯುವಜನರ ಜೀವನ ನಾಶ ಮಾಡಲು ಅವಕಾಶ ಕೊಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ (Naredra Modi) ಎಚ್ಚರಿಸಿದರು.

    ವರ್ಷಾಂತ್ಯಕ್ಕೆ ನಡೆಯಲಿರುವ ಗುಜರಾತ್ ವಿಧಾನಸಭಾ ಚುನಾವಣೆ (Gujarat Assembly Polls) ಹಿನ್ನೆಲೆ ಭರೂಚ್ ಜಿಲ್ಲೆಯಲ್ಲಿ ಬೃಹತ್ ಔಷಧೋದ್ಯಾನ ಉದ್ಘಾಟಿಸಿ ಅವರು ಮಾತನಾಡಿದರು. ಇದನ್ನೂ ಓದಿ: ‘ಗೋವನ್ನು’ ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ಮನವಿ – ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್

    ನಗರ ನಕ್ಸಲರು ತಮ್ಮ ರೂಪ ಬದಲಿಸಿಕೊಂಡು ರಾಜ್ಯ ಪ್ರವೇಶಿಸಲು ಪ್ರಯತ್ನಿಸುತ್ತಿದ್ದಾರೆ. ರಾಜ್ಯದ ಮುಗ್ಧ ಹಾಗೂ ಶಕ್ತಿಯುತ ಯುವಕರು (Youth) ತಮ್ಮನ್ನು ಅನುಸರಿಸುವಂತೆ ದಾರಿ ತಪ್ಪಿಸುತ್ತಿದ್ದಾರೆ. ಅವರು ಏನೇ ಮಾಡಿದರೂ ನಮ್ಮ ಯುವ ಪೀಳಿಗೆಯನ್ನ ನಾಶಮಾಡಲು ಬಿಡುವುದಿಲ್ಲ. ದೇಶವನ್ನು ನಾಶ ಮಾಡುವ ಕೆಲಸಕ್ಕೆ ಕೈ ಹಾಕಿರುವ ಅರ್ಬನ್ ನಕ್ಸಲರ ವಿರುದ್ಧ ನಮ್ಮ ಮಕ್ಕಳಿಗೆ ಈಗಲೇ ಎಚ್ಚರಿಕೆ ನೀಡಬೇಕು. ಅವರು ವಿದೇಶಿ ಶಕ್ತಿಗಳ ಏಜೆಂಟ್‌ಗಳಾಗಿದ್ದಾರೆ. ಗುಜರಾತ್ ಅವರ ವಿರುದ್ಧ ತಲೆ ಕೆಡಿಸಿಕೊಳ್ಳುವುದಿಲ್ಲ, ಅಂಥವರನ್ನು ನಾಶ ಮಾಡುತ್ತದೆ ಎಂದು ಕಿಡಿಕಾರಿದರು.

    ಇದೇ ವೇಳೆ 2014ರಲ್ಲಿ ನಾನು ಪ್ರಧಾನಿಯಾಗಿ (Prime Minister) ಅಧಿಕಾರ ವಹಿಸಿಕೊಂಡಾಗ ಭಾರತದ ಆರ್ಥಿಕತೆ ವಿಶ್ವದಲ್ಲಿ 10ನೇ ಸ್ಥಾನದಲ್ಲಿತ್ತು. ಆದರೆ ಈಗ 5ನೇ ಸ್ಥಾನದಲ್ಲಿದೆ ಎಂದು ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದರು.

    Live Tv
    [brid partner=56869869 player=32851 video=960834 autoplay=true]

  • `ಗಂಧದಗುಡಿ’ ಟ್ರೈಲರ್‌ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ

    `ಗಂಧದಗುಡಿ’ ಟ್ರೈಲರ್‌ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ

    ಪುನೀತ್ ರಾಜ್‌ಕುಮಾರ್(Puneeth Rajkumar) ನಟನೆಯ `ಗಂಧದ ಗುಡಿ’ ಸಿನಿಮಾ ರಿಲೀಸ್ ಡೇಟ್ ಫಿಕ್ಸ್ ಆಗಿದೆ. ಅದಕ್ಕೂ ಮುಂಚೆ ಚಿತ್ರದ ಟ್ರೈಲರ್ ಮೂಲಕ ಅಪ್ಪು ಎಲ್ಲರನ್ನೂ ಮಂತ್ರಮುಗ್ಧರನ್ನಾಗಿಸಿದ್ದಾರೆ. ಇದೀಗ ಈ‌ ಚಿತ್ರದ ಟ್ರೈಲರ್ ನೋಡಿ ಪ್ರಧಾನಿ ನರೇಂದ್ರ ಮೋದಿ(Narendra Modi) ಕೂಡ ಮೆಚ್ಚುಗೆ ಸೂಚಿಸಿದ್ದಾರೆ.

    ಅಪ್ಪು ನಟನೆಯ ಕೊನೆಯ ಸಿನಿಮಾ `ಗಂಧದಗುಡಿ'(Gandagudi Film) ಟ್ರೈಲರ್ ರಿಲೀಸ್ ಆಗಿ, ಸಾಮಾಜಿಕ ಜಾಲತಾಣದಲ್ಲಿ ಭರ್ಜರಿ ವಿವ್ಸ್ ಗಿಟ್ಟಿಸಿಕೊಳ್ಳುತ್ತಿದೆ. `ಗಂಧದಗುಡಿ’ ಟ್ರೈಲರ್ ನೋಡಿ ಪ್ರತಿಯೊಬ್ಬರು ಅಪ್ಪುನ ನೋಡಿ ಭಾವುಕರಾಗಿದ್ದಾರೆ. ಅಪ್ಪು ಹೃದಯಕ್ಕೆ ಹತ್ತಿರವಾಗಿರುವ ಈ ಪ್ರಾಜೆಕ್ಟ್ ಬಗ್ಗೆ ಅಶ್ವೀನಿ ಪುನೀತ್ ರಾಜ್‌ಕುಮಾರ್(Ashwini Puneeth Rajkumar) ಅವರು ಮೋದಿ ಅವರಿಗೆ ಟ್ರೈಲರ್ ಲಿಂಕ್ ಶೇರ್ ಮಾಡಿ, ಟ್ವೀಟ್ ಮಾಡಿದ್ದರು. ಇದೀಗ ಚಿತ್ರದ ಟ್ರೈಲರ್ ನೋಡಿ ಟ್ವೀಟ್ ಮೂಲಕ ಪ್ರಧಾನಿ ಮೋದಿ ಅವರು ಮೆಚ್ಚುಗೆ ಸೂಚಿದ್ದಾರೆ. ಇದನ್ನೂ ಓದಿ:ಗಂಧದ ಗುಡಿಯಲ್ಲಿ ಚಂದದ ನೋಟ: ನೀವು ಇರಬೇಕಿತ್ತು ಎಂದು ಕಣ್ಣೀರಾಕಿದ ಫ್ಯಾನ್ಸ್

    ಅಪ್ಪು ಪ್ರಪಂಚದಾದ್ಯಂತ ಲಕ್ಷಾಂತರ ಜನರ ಹೃದಯದಲ್ಲಿ ನೆಲೆಸಿದ್ದಾರೆ. ಅವರು ತೇಜಸ್ಸಿನ ವ್ಯಕ್ತಿಯಾಗಿದ್ದರು, ಶಕ್ತಿಯಿಂದ ತುಂಬಿದ ಅಪ್ಪು ಪ್ರತಿಭೆಗೆ ಯಾರು ಸರಿಸಾಟಿಯಿಲ್ಲ. `ಗಂಧದಗುಡಿ’ ಪ್ರಕೃತಿ ಮಾತೆಗೆ, ಕರ್ನಾಟಕದ ನೈಸರ್ಗಿಕ ಸೌಂದರ್ಯಕ್ಕೆ ಅರ್ಪಣೆ. ಚಿತ್ರತಂಡದ ಪ್ರಯತ್ನಕ್ಕೆ ನನ್ನ ಶುಭಹಾರೈಕೆಗಳು ಎಂದು ಪ್ರಧಾನಿ ಮೋದಿ ಅವರು ಟ್ರೈಲರ್ ನೋಡಿ ಹೊಗಳಿದ್ದಾರೆ. ಟ್ವೀಟ್ ಮೂಲಕ ಶುಭಹಾರೈಸಿದ್ದಾರೆ.

    ಇನ್ನೂ ಪುನೀತ್ ನಟನೆಯ ಕೊನೆಯ ಸಿನಿಮಾ `ಗಂಧದಗುಡಿ’ ಇದೇ ಅಕ್ಟೋಬರ್ 28ಕ್ಕೆ ಕನ್ನಡ, ಇಂಗ್ಲೀಷ್ ಮತ್ತು ಹಿಂದಿಯಲ್ಲಿ ತೆರೆಕಾಣುತ್ತಿದೆ. ಪವರ್ ಸ್ಟಾರ್ ಆಗಿ ಅಲ್ಲ, ಪುನೀತ್ ರಾಜ್‌ಕುಮಾರ್ ಆಗಿ ಸಾಕ್ಷ್ಯ ಚಿತ್ರದ ಮೂಲಕ ಪ್ರೇಕ್ಷಕರ ಮುಂದೆ ಅಪ್ಪು ಬರಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮೋದಿ ತಮ್ಮ ಕೆಲಸದಿಂದ ರಾಜಕೀಯ ಸಂಸ್ಕೃತಿ ಬದಲಾಯಿಸಿದ್ದಾರೆ: ಜೆಪಿ ನಡ್ಡಾ

    ಮೋದಿ ತಮ್ಮ ಕೆಲಸದಿಂದ ರಾಜಕೀಯ ಸಂಸ್ಕೃತಿ ಬದಲಾಯಿಸಿದ್ದಾರೆ: ಜೆಪಿ ನಡ್ಡಾ

    ಧರ್ಮಶಾಲಾ: ವಿವಿಧ ಸಾಮಾಜಿಕ ಸೇವಾ ಉಪಕ್ರಮಗಳನ್ನು ಕಾರ್ಯಗೊಳಿಸಲು ಪೂರ್ವಭಾವಿಯಾಗಿ ಕಾರ್ಯ ನಿರ್ವಹಿಸುವ ಮೂಲಕ ರಾಜಕೀಯ ಸಂಸ್ಕೃತಿಯನ್ನು ಬದಲಾಯಿಸಿದ ಕೀರ್ತಿ ಪ್ರಧಾನಿ ನರೇಂದ್ರ ಮೋದಿಗೆ ಸಲ್ಲುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ತಿಳಿಸಿದರು.

    ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, 185 ಕೋಟಿ ಡಬಲ್ ಡೋಸ್, ಪಾಕಿಸ್ತಾನದಲ್ಲಿ ಸರ್ಜಿಕಲ್ ಸ್ಟ್ರೈಕ್, ಯುದ್ಧ ಪೀಡಿತ ಉಕ್ರೇನ್‍ನಿಂದ 23,000 ಭಾರತೀಯರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲು ಮೋದಿ ಸರ್ಕಾರ ಪ್ರತಿಯೊಂದು ಕ್ಷೇತ್ರದಲ್ಲೂ ದೃಢ ಸಂಕಲ್ಪದಿಂದ ಕೆಲಸ ಮಾಡಿದೆ ಎಂದು ಅಭಿಪ್ರಾಯ ಪಟ್ಟರು.

    ಬಿಜೆಪಿ ಸರ್ಕಾರವು ನೀಡಲು ಪ್ರಯತ್ನಿಸುತ್ತದೆ. ಆದರೆ ಹಿಂದಿನ ಕಾಂಗ್ರೆಸ್ ಸರ್ಕಾರವು ಯಾವಗಲೂ ರಾಜ್ಯದಿಂದ ಕಿತ್ತುಕೊಳ್ಳಲು ನೋಡುತ್ತಿದ್ದವು. ಅಂದಿನ ಮನಮೋಹನ್ ಸಿಂಗ್ ಸರ್ಕಾರವು ಹಿಮಾಚಲ ಪ್ರದೇಶದ ವಿಶೇಷ ವರ್ಗವನ್ನು ಹಿಂತೆಗೆದುಕೊಂಡಿತು ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ರಾಜ್ಯದಲ್ಲಿಂದು ಶ್ರೀರಾಮನವಮಿ ಆಚರಣೆ – ಆಂಜನೇಯನ ದೇಗುಲಗಳಲ್ಲಿ ರಾಮನ ಆರಾಧನೆ

    2014ರಲ್ಲಿ ನರೇಂದ್ರ ಮೋದಿ ಪ್ರಧಾನಿಯಾದಾಗ ಅವರು ರಾಜ್ಯದ ಸ್ಥಾನ ಮಾನವನ್ನು ಪುನಃ ಸ್ಥಾಪಿಸಿದರು. ರಾಜ್ಯದಿಂದ ಶೇ. 10 ಮತ್ತು ಕೇಂದ್ರದಿಂದ ಶೇ. 90ರಷ್ಟು ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಕೊಡುಗೆ ನೀಡಿದರು. ನಾವು ಏನು ಹೇಳಿದ್ದೇವೋ ಅದನ್ನೇ ಮಾಡಿದ್ದೇವೆ. ನಾವು ಏನು ಹೇಳುತ್ತೇವೋ ಅದನ್ನೇ ಮಾಡುತ್ತೇವೆ ಎಂದರು. ಇದನ್ನೂ ಓದಿ: ಸುರ್ಜೆವಾಲ ಟ್ವೀಟ್‌ಗೆ ಯಾವುದೇ ಕಿಮ್ಮತ್ತಿಲ್ಲ : ಬೊಮ್ಮಾಯಿ

    ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಜೈ ರಾಮ್ ಠಾಕೂರ್ ಮತ್ತು ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರು ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಆಡಳಿತ ಮಾಡಿದ ಉತ್ತಮ ಕೆಲಸಗಳನ್ನು ಹೇಳಿದರು.

  • ಸಿಎಂ ಬದಲಾವಣೆ ಮಾಡಿದ್ರೆ ಜನ ಚಪ್ಪಲಿ ತಗೊಂಡು ಬೆನ್ನು ಹತ್ತುತ್ತಾರೆ: ಮುತಾಲಿಕ್

    ಸಿಎಂ ಬದಲಾವಣೆ ಮಾಡಿದ್ರೆ ಜನ ಚಪ್ಪಲಿ ತಗೊಂಡು ಬೆನ್ನು ಹತ್ತುತ್ತಾರೆ: ಮುತಾಲಿಕ್

    – ಓವೈಸಿಯನ್ನು ನಾಯಿ ಹೋಲಿಸಿದ ಪ್ರಮೋದ್

    ಕೊಪ್ಪಳ: ಸದ್ಯದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿಯನ್ನು ಬದಲಾವಣೆ ಮಾಡಿದ್ರೆ, ಅಂತವರನ್ನ ಜನ ಚಪ್ಪಲಿ ತಗೊಂಡು ಬೆನ್ನು ಹತ್ತುತ್ತಾರೆ ಎಂದು ಶ್ರೀರಾಮ ಸೇನಾ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದರು.

    ಕೊಪ್ಪಳದಲ್ಲಿ ಮಾತನಾಡಿದ ಅವರು, ಕೋವಿಡ್ ಸಮಯದಲ್ಲಿ ರಾಜಕೀಯ ದುಷ್ಟತನ ಮಾಡಬೇಡಿ. ಒಂದು ವೇಳೆ ರಾಜಕೀಯ ದುಷ್ಟತನ ಮಾಡಿದರೆ ಜನ ಚಪ್ಪಲಿ ತಗೊಂಡು ಬೆನ್ನು ಹತ್ತುತ್ತಾರೆ. ಈ ಹಿಂದೆ ಅನಂತ್ ಕುಮಾರ್ ಹೆಗಡೆ ಮುಂದಿನ ಮುಖ್ಯಮಂತ್ರಿ ಎಂದು ಬಿಂಬಿಸಿದ್ರು. ಹಿಂದೆ ಕತ್ತಿ ನಾನೇ ಮುಖ್ಯಮಂತ್ರಿ ಎಂದರು. ಇದೆಲ್ಲ ಸುಳ್ಳು, ಅನಾವಶ್ಯಕ ಗೊಂದಲ ಸೃಷ್ಟಿ ಮಾಡಬೇಡಿ ಎಂದು ಮುತಾಲಿಕ್ ಮನವಿ ಮಾಡಿದರು.

    ಪಠ್ಯ ಪುಸ್ತಕದಿಂದ ಟಿಪ್ಪು ಸುಲ್ತಾನ್ ಕೈ ಬಿಟ್ಟ ವಿಚಾರದ ಕುರಿತು ಪ್ರತಿಕ್ರಿಯಿಸಿದ ಮುತಾಲಿಕ್, ನಾನು ಇದನ್ನು ಸ್ವಾಗತ ಮಾಡ್ತೀನಿ. ಟಿಪ್ಪು ಒಬ್ಬ ಮತಾಂಧ, ದೇಶದ್ರೋಹಿ, ಈತನನ್ನು ಪಠ್ಯಪುಸ್ತಕದಿಂದ ತೆಗೆದಿರುವ ವಿಚಾರವನ್ನು ಸ್ವಾಗತಿಸುತ್ತೇನೆ ಎಂದರು.

    ಇದೇ ವೇಳೆ ರಾಮ ಮಂದಿರ ನಿರ್ಮಾಣ ಕಾರ್ಯದಲ್ಲಿ ಮೋದಿ ಭಾಗಿಯಾಗಬಾರದು ಎಂದು ಓವೈಸಿ ಹೇಳಿಕೆ ನೀಡಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಮೋದಿ ಆನೆ ಇದ್ದಂಗೆ. ಓವೈಸಿ ನಾಯಿ ಇದ್ದಂಗೆ, ಅದೊಂದು ಕಸದ ತುಂಡು. ಹೀಗಾಗಿ ಅಂತವರು ಬೊಗಳಿದ್ರೆ ಏನೂ ಆಗಲ್ಲ ಎನ್ನುವ ಮೂಲಕ ಓವೈಸಿಯನ್ನು ನಾಯಿಗೆ ಹೋಲಿಸಿದರು.

    ಯಾವುದೇ ಗದ್ದಲ ಗಲಭೆ ಇಲ್ಲದೆ ರಾಮಮಂದಿರ ನಿರ್ಮಾಣ ಕಾರ್ಯ ಆಗತ್ತೆ ಎಂದು ಪ್ರಮೋದ್ ಮುತಾಲಿಕ್ ವಿಶ್ವಾಸ ವ್ಯಕ್ತಪಡಿಸಿದರು.