Tag: Narendra Modi Stadium

  • 1.30 ಲಕ್ಷ‌ ಅಭಿಮಾನಿಗಳನ್ನ ದಿಗ್ಭ್ರಮೆಗೊಳಿಸುತ್ತೇವೆ – ಟೀಂ ಇಂಡಿಯಾ ಸೋಲಿಸುವ ಎಚ್ಚರಿಕೆ ನೀಡಿದ ಪ್ಯಾಟ್‌ ಕಮ್ಮಿನ್ಸ್

    1.30 ಲಕ್ಷ‌ ಅಭಿಮಾನಿಗಳನ್ನ ದಿಗ್ಭ್ರಮೆಗೊಳಿಸುತ್ತೇವೆ – ಟೀಂ ಇಂಡಿಯಾ ಸೋಲಿಸುವ ಎಚ್ಚರಿಕೆ ನೀಡಿದ ಪ್ಯಾಟ್‌ ಕಮ್ಮಿನ್ಸ್

    ಅಹಮದಾಬಾದ್‌: 13ನೇ ಆವೃತ್ತಿಯ ಏಕದಿನ ವಿಶ್ವಕಪ್‌ (World Cup) ಟೂರ್ನಿಗೆ ಕ್ಷಣಗಣನೆ ಬಾಕಿಯಿದ್ದು, ಸೂಪರ್‌ ಸಂಡೇ ಕದನಕ್ಕೆ ನರೇಂದ್ರ ಮೋದಿ ಕ್ರೀಡಾಂಗಣ ಸಜ್ಜಾಗಿದೆ. ಈ ಬಗ್ಗೆ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್‌ ಕಮ್ಮಿನ್ಸ್‌ (Pat Cummins) ಟೀಂ ಇಂಡಿಯಾ (Team India) ತಂಡವನ್ನು ಸೋಲಿಸುವ ಎಚ್ಚರಿಕೆ ನೀಡಿದ್ದಾರೆ.

    ವಿಶ್ವಕಪ್‌ ಪಂದ್ಯಕ್ಕೂ ಮುನ್ನ ನಡೆದ ಪ್ರೀ ಮ್ಯಾಚ್‌ ಪ್ರೆಸೆಂಟೇಷನ್‌ನಲ್ಲಿ ಮಾತನಾಡಿರುವ ಕಮ್ಮಿನ್ಸ್‌, ಫೈನಲ್‌ (World Cup Final) ಪಂದ್ಯದಲ್ಲಿ 1.30 ಲಕ್ಷಕ್ಕೂ ಹೆಚ್ಚು ಅಭಿಮಾನಿಗಳು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಅಷ್ಟೂ ಆತಿಥೇಯ ಪ್ರೇಕ್ಷಕರ ಬಾಯಿ ಮುಚ್ಚಿಸುವುದೇ ತಂಡದ ಬಹುದೊಡ್ಡ ಗುರಿ ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ವಿಶ್ವ ಮಹಾಸಮರಕ್ಕೆ ಕ್ಷಣಗಣನೆ – ಅಡಾಲಾಜ್ ಸ್ಟೆಪ್‌ವೆಲ್‌ನಲ್ಲಿ ನಾಯಕರ ಪ್ರೀ ಫೋಟೋಶೂಟ್

    ಆತಿಥೇಯರ ಎದುರು ಫೈನಲ್‌ ಆಡುತ್ತಿರುವ ಕಾರಣ ಕ್ರೀಡಾಂಗಣದಲ್ಲಿ ಪ್ರೇಕ್ಷಕರ ಬೆಂಬಲ ನೂರರಷ್ಟು ಆತಿಥೇಯರ ತಂಡದ ಪರವಾಗಿಯೇ ಇರಲಿದೆ. ಅಂತೆಯೇ ಈ ವಿಶ್ವಕಪ್‌ ಟೂರ್ನಿಯಲ್ಲಿ ಟೀಂ ಇಂಡಿಯಾ ಜಯದ ನಾಗಾಲೋಟದಲ್ಲಿ ಫೈನಲ್‌ಗೆ ತಲುಪಿದೆ. ಸಹಜವಾಗಿಯೇ ಅಭಿಮಾನಿಗಳ ಬೆಂಬಲ ಭಾರತ ತಂಡದ ಪರವಾಗಿ ಇರುತ್ತದೆ. ಹೀಗಾಗಿ ಕ್ರೀಡಾಂಗಣದಲ್ಲಿ ಪ್ರೇಕ್ಷಕರ ಬಾಯಿ ಮುಚ್ಚಿಸುವಂತಹ ಆಟವಾಡಿದರೆ ಅದಕ್ಕಿಂತಲೂ ತೃಪ್ತಿಕರ ಅನುಭವ ಮತ್ತೊಂದು ಇರಲಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸರಣಿ ಶ್ರೇಷ್ಠ ಪ್ರಶಸ್ತಿಗೆ 9 ಮಂದಿಯ ನಾಮನಿರ್ದೇಶನ – ಟೀಂ ಇಂಡಿಯಾದ ನಾಲ್ವರು ಆಯ್ಕೆ

    ಟೀಂ ಇಂಡಿಯಾ ಇಲ್ಲಿಯವರೆಗೆ ಅಜೇಯವಾಗಿ ಉತ್ತಮ ಕ್ರಿಕೆಟ್‌ ಆಡುತ್ತಾ ಬಂದಿದೆ. ಆದ್ರೆ ನಾವು ಅವರಿಗೆ ಹೇಗೆ ಶಾಕ್‌ ನೀಡಬೇಕೆಂಬುದು ತಿಳಿದಿದೆ. ಕಳೆದ 2 ವರ್ಷಗಳಲ್ಲಿ ಅವರೊಂದಿಗೆ ಸಾಕಷ್ಟು ಬಾರಿ ಸರಣಿ ಆಡಿದ್ದೇವೆ ಎಂದು ಹೇಳಿದ್ದಾರೆ.

    ಶಮಿ ದೊಡ್ಡ ಶಕ್ತಿ: ಇದೇ ವೇಳೆ ಮೊಹಮ್ಮದ್‌ ಶಮಿ ಬೌಲಿಂಗ್‌ ಪ್ರದರ್ಶನದ ಕುರಿತು ಮಾತನಾಡಿರುವ ಪ್ಯಾಟ್‌ ಕಮ್ಮಿನ್ಸ್‌, ಶಮಿ ಟೀಂ ಇಂಡಿಯಾದ ದೊಡ್ಡ ಶಕ್ತಿ ಎಂದು ಹೊಗಳಿದ್ದಾರೆ. ಪ್ರಸ್ತುತ ನಡೆಯುತ್ತಿರುವ ವಿಶ್ವಕಪ್‌ನಲ್ಲೇ ಮೊಹಮ್ಮದ್‌ ಶಮಿ ಒಟ್ಟು 23 ವಿಕೆಟ್‌ಗಳನ್ನ ಪಡೆದುಕೊಂಡಿದ್ದಾರೆ. ಈ ಪೈಕಿ ಒಂದೇ ವಿಶ್ವಕಪ್‌ನಲ್ಲಿ 3 ಬಾರಿ 5 ವಿಕೆಟ್‌ ಪಡೆದ ಸಾಧನೆ ಮಾಡಿದ್ದಾರೆ. ಇದನ್ನೂ ಓದಿ: ಮತ್ತೆ ಮಾತಿನಲ್ಲೇ ತಿವಿದ ವಿಚ್ಛೇದಿತ ಪತ್ನಿ – ತೆರೆಯ ಹಿಂದೆ ಶಮಿಯ ಬದುಕು ಘೋರ!

    5 ಬಾರಿ ಚಾಂಪಿಯನ್ಸ್‌ ಆಸ್ಟ್ರೇಲಿಯಾ ತಂಡದ ರೋಚಕ ಸೆಮಿಫೈನಲ್‌ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನ 3 ವಿಕೆಟ್‌ಗಳಿಂದ ಮಣಿಸಿ ದಾಖಲೆಯ 8ನೇ ಬಾರಿ ಫೈನಲ್‌ಗೆ ಕಾಲಿಟ್ಟಿದೆ. ಇನ್ನೂ ಲೀಗ್‌ ಹಂತದಲ್ಲಿ ಆರಂಭಿಕ ಎರಡು ಪಂದ್ಯಗಳಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ಎದುರು ಸೋತಿದ್ದ ಆಸ್ಟ್ರೇಲಿಯಾ, ಇನ್ನುಳಿದ 7 ಪಂದ್ಯಗಳಲ್ಲೂ ಗೆಲುವು ಸಾಧಿಸಿತ್ತು. ಆದ್ರೆ ಆರಂಭದಿಂದಲೂ ಭಾರತ ಒಂದೂ ಪಂದ್ಯವನ್ನೂ ಸೋಲದೇ ಸತತ 10 ಪಂದ್ಯಗಳನ್ನೂ ಗೆದ್ದಿರುವ ಹಿಟ್‌ಮ್ಯಾನ್‌ ಸೈನ್ಯ ಫೈನಲ್‌ ಪಂದ್ಯವನ್ನೂ ಗೆದ್ದು ಟ್ರೋಫಿ ಎತ್ತಿ ಹಿಡಿಯುವ ಗುರಿ ಹೊಂದಿದೆ.

  • ವಿಶ್ವ ಮಹಾಸಮರಕ್ಕೆ ಕ್ಷಣಗಣನೆ – ಅಡಾಲಾಜ್ ಸ್ಟೆಪ್‌ವೆಲ್‌ನಲ್ಲಿ ನಾಯಕರ ಪ್ರೀ ಫೋಟೋಶೂಟ್

    ವಿಶ್ವ ಮಹಾಸಮರಕ್ಕೆ ಕ್ಷಣಗಣನೆ – ಅಡಾಲಾಜ್ ಸ್ಟೆಪ್‌ವೆಲ್‌ನಲ್ಲಿ ನಾಯಕರ ಪ್ರೀ ಫೋಟೋಶೂಟ್

    ಅಹ್ಮದಾಬಾದ್: ದೇಶವೇ ಎದುರು ನೋಡುತ್ತಿರುವ ವಿಶ್ವಕಪ್ ಮಹಾಸಮರಕ್ಕೆ (World Cup Final) ಕ್ಷಣಗಣನೆ ಬಾಕಿಯಿದೆ. ಟೀಂ ಇಂಡಿಯಾ (Team India) ವಿಶ್ವ ಸಾಮ್ರಾಟನಾಗಿ ಮೆರೆದಾಡುವುದನ್ನು ಕಣ್ತುಂಬಿಕೊಳ್ಳಲು 140 ಕೋಟಿ ಭಾರತೀಯರು ಕಾದು ಕುಳಿತಿದ್ದಾರೆ.

    ಅಹಮದಾಬಾದ್‌ನಲ್ಲಿರುವ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ (Narendra Modi Stadium) ಭಾನುವಾರ ಮಧ್ಯಾಹ್ನ 2 ಗಂಟೆಗೆ ಪಂದ್ಯ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಶನಿವಾರ (ನ.18) ಗುಜರಾತ್‌ನ ಗಾಂಧಿನಗರಕ್ಕೆ ಸಮೀಪವಿರುವ ಅಡಾಲಾಜ್ ಸ್ಟೆಪ್‌ವೆಲ್‌ (Adalaj Stepwell) ಪ್ರವಾಸಿ ತಾಣದಲ್ಲಿ ಸಾಂಪ್ರದಾಯಿಕವಾಗಿ ವಿಶ್ವಕಪ್‌ನೊಂದಿಗೆ ಪ್ರೀ ಫೋಟೋಶೂಟ್‌ ನಡೆಸಲಾಗಿದೆ. ಟೀಂ ಇಂಡಿಯಾ ನಾಯಕ ರೋಹಿತ್‌ ಶರ್ಮಾ ಮತ್ತು ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್‌ ಕಮ್ಮಿನ್ಸ್‌ ಅವರನ್ನು ವಿಶ್ವಕಪ್‌ನೊಂದಿಗೆ ಫೋಟೋಶೂಟ್‌ ಮಾಡಿಸಲಾಗಿದೆ. ಈ ಫೋಟೋಗಳು ಜಾಲತಾಣದಲ್ಲಿ ಸಖತ್‌ ಸದ್ದು ಮಾಡುತ್ತಿದ್ದು, ಅಭಿಮಾನಿಗಳು ಟೀಂ ಇಂಡಿಯಾ ಗೆಲುವಿಗೆ ಶುಭ ಹಾರೈಸಿದ್ದಾರೆ. ಇದನ್ನೂ ಓದಿ: ಇಂಡೋ-ಆಸೀಸ್‌ ರೋಚಕ ಫೈನಲ್‌ ವೀಕ್ಷಿಸಲಿದ್ದಾರೆ ಮೋದಿ – ಸೂಪರ್‌ ಸಂಡೇ ಏನೆಲ್ಲಾ ಸ್ಪೆಷಲ್‌ ಇದೆ ಗೊತ್ತಾ..?

    ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾನುವಾರ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವೆ ಹೈವೋಲ್ಟೇಜ್ ಪಂದ್ಯ ಆರಂಭಕ್ಕೂ ಮುನ್ನವೇ 2 ಗಂಟೆ ವಿಶೇಷ ಕಾರ್ಯಕ್ರಮಗಳು ನಡೆಯಲಿವೆ. ಹಲವು ನೃತ್ಯಪಟುಗಳು ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಬೀಡುಬಿಟ್ಟಿದ್ದು, ಸ್ಫೂರ್ತಿ ಗೀತೆಗಳಿಗೆ ನೃತ್ಯ ಅಭ್ಯಾಸ ನಡೆಸುತ್ತಿದ್ದಾರೆ. ಅದಕ್ಕಾಗಿ ʻಜೀತೇಗ ಇಂಡಿಯಾ ಜೀತೇಗ’ ವಿಶೇಷ ಗೀತೆಯನ್ನೂ ಸಿದ್ಧಪಡಿಸಲಾಗಿದೆ. ಅಲ್ಲದೇ ಬಾಲಿವುಡ್ ತಾರೆಯರಿಂದ ನೃತ್ಯ ಪ್ರದರ್ಶನ ಕಾರ್ಯಕ್ರಮಗಳೂ ನಡೆಯಲಿವೆ. ಇದಕ್ಕೂ ಮುನ್ನ ಇತಿಹಾಸದಲ್ಲೇ ಮೊದಲ ಬಾರಿಗೆ ವಿಶ್ವಕಪ್ ಟೂರ್ನಿಯ ಫೈನಲ್ ಸಮಾರಂಭದಲ್ಲಿ ಭಾರತೀಯ ವಾಯುಪಡೆಯಿಂದ ವಿಶೇಷ ಏರ್‌ಶೋ ಪ್ರದರ್ಶನ ನಡೆಸಿಕೊಡಲಿದೆ. ಇದು ಕ್ರಿಕೆಟ್ ಅಭಿಮಾನಿಗಳ ಕಣ್ಣಿಗೆ ಹಬ್ಬವನ್ನುಂಟುಮಾಡಲಿದೆ.

    ಮೋದಿಯೇ ಮುಖ್ಯ ಆಕರ್ಷಣೆ: ಐಸಿಸಿ ವಿಶ್ವಕಪ್ 2023ರ ಫೈನಲ್ ಪಂದ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹಸಚಿವ ಅಮಿತ್‌ ಶಾ ಹಾಜರಾಗಲಿದ್ದಾರೆ. ಐಸಿಸಿ ವಿಶ್ವಕಪ್ 2023ರ ಫೈನಲ್ ಪಂದ್ಯಕ್ಕೆ ಪ್ರಧಾನಿ ಗೌರವಾನ್ವಿತ ಅತಿಥಿಯಾಗಿ ಭಾಗವಹಿಸಲಿದ್ದಾರೆ. ನರೇಂದ್ರ ಮೋದಿ ಕ್ರೀಡಾಂಗಣವು ವಿಶ್ವದ ಅತಿದೊಡ್ಡ ಕ್ರಿಕೆಟ್ ಮೈದಾನವಾಗಿದ್ದು, ರೋಚಕ ಪಂದ್ಯ ವೀಕ್ಷಿಸಲು 1.30 ಲಕ್ಷಕ್ಕೂ ಹೆಚ್ಚು ಜನರು ಆಗಮಿಸಲಿದ್ದಾರೆ. ಈ ವೇಳೆ ಹಲವಾರು ಗಣ್ಯರು ಮೈದಾನದಕ್ಕೆ ಭೇಟಿ ನೀಡಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಗಣ್ಯರೊಂದಿಗೆ ಫೈನಲ್ ಪಂದ್ಯ ವೀಕ್ಷಿಸಲಿದ್ದಾರೆ. ಇದನ್ನೂ ಓದಿ: ಸರಣಿ ಶ್ರೇಷ್ಠ ಪ್ರಶಸ್ತಿಗೆ 9 ಮಂದಿಯ ನಾಮನಿರ್ದೇಶನ – ಟೀಂ ಇಂಡಿಯಾದ ನಾಲ್ವರು ಆಯ್ಕೆ

    ಏನೇನು ವಿಶೇಷ..?
    ನವೆಂಬರ್ 19ರಂದು ಅಹಮದಾಬಾದ್‌ನಲ್ಲಿ ನಡೆಯಲಿರುವ ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ಭಾರತೀಯ ವಾಯುಪಡೆಯು ವಿಶೇಷ ಏರ್ ಶೋ ಪ್ರದರ್ಶನ ನಡೆಸಿಕೊಡಲಿದೆ. ಇದರೊಂದಿಗೆ ಖ್ಯಾತ ಬಾಲಿವುಡ್ ತಾರೆಯರು ಮೋದಿ ಕ್ರೀಡಾಂಗಣಕ್ಕೆ ಮತ್ತಷ್ಟು ರಂಗು ತರಲಿದ್ದಾರೆ. ನೃತ್ಯ, ಸಂಗೀತ, ವಿಶೇಷ ಲೈಟಿಂಗ್ ಶೋ ಕಾರ್ಯಕ್ರಮಗಳು ನಡೆಯಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಜೀತೇಗ ಇಂಡಿಯಾ ಜೀತೇಗ – ವಿಶ್ವ ಮಹಾಸಮರಕ್ಕೆ ಮೋದಿ ಅಂಗಳ ಸಜ್ಜು, ಕೋಟ್ಯಂತರ ಅಭಿಮಾನಿಗಳ ಕಾತರ!

  • ಸರಣಿ ಶ್ರೇಷ್ಠ ಪ್ರಶಸ್ತಿಗೆ 9 ಮಂದಿಯ ನಾಮನಿರ್ದೇಶನ – ಟೀಂ ಇಂಡಿಯಾದ ನಾಲ್ವರು ಆಯ್ಕೆ

    ಸರಣಿ ಶ್ರೇಷ್ಠ ಪ್ರಶಸ್ತಿಗೆ 9 ಮಂದಿಯ ನಾಮನಿರ್ದೇಶನ – ಟೀಂ ಇಂಡಿಯಾದ ನಾಲ್ವರು ಆಯ್ಕೆ

    ಅಹಮದಾಬಾದ್: 2023ರ ಏಕದಿನ ವಿಶ್ವಕಪ್ (World Cup) ಅಂತಿಮ ಹಂತಕ್ಕೆ ತಲುಪಿದೆ. ಭಾನುವಾರ ಭಾರತ (India) ಮತ್ತು ಆಸ್ಟ್ರೇಲಿಯಾ (Australia) ತಂಡದ ಮಧ್ಯೆ ನಡೆಯಲಿರುವ ಫೈನಲ್ (Final) ಪಂದ್ಯದೊಂದಿಗೆ ಈ ಮಹಾ ಟೂರ್ನಿಯ ಪಯಣ ಕೊನೆಗೊಳ್ಳಲಿದೆ. ಗುಜರಾತ್‌ನ (Gujarat) ನರೇಂದ್ರ ಮೋದಿ ಸ್ಟೇಡಿಯಂನಲ್ಲಿ (Narendra Modi Stadium) ವಿಶ್ವಕಪ್‌ನ ಕೊನೆಯ ಪಂದ್ಯ ನಡೆಯಲಿದ್ದು, ಹೈವೋಲ್ಟೇಜ್ ಮ್ಯಾಚ್ ವೀಕ್ಷಿಸಲು ಎಲ್ಲರೂ ಕಾತುರದಿಂದ ಕಾಯುತ್ತಿದ್ದಾರೆ. ಅದಕ್ಕೂ ಮುನ್ನ ಈ ಟೂರ್ನಿಯ ಸರಣಿ ಶ್ರೇಷ್ಠ ಆಟಗಾರ (Player of Tournament) ಪ್ರಶಸ್ತಿಗಾಗಿ 9 ಆಟಗಾರರನ್ನು ಐಸಿಸಿ (ICC) ನಾಮನಿರ್ದೇಶನ ಮಾಡಿದೆ ಎಂದು ವರದಿಗಳು ತಿಳಿಸಿವೆ. ಆದರೆ ಈ ಬಗ್ಗೆ ಐಸಿಸಿ ಯಾವುದೇ ಅಧಿಕೃತ ಮಾಹಿತಿಯನ್ನು ಇದುವರೆಗೂ ಹಂಚಿಕೊಂಡಿಲ್ಲ.

    ಈ 9 ಆಟಗಾರರ ಪೈಕಿ ಟೀಂ ಇಂಡಿಯಾದ ನಾಲ್ವರು ನಾಮನಿರ್ದೇಶನಗೊಂಡಿದ್ದು, ಆಸ್ಟ್ರೇಲಿಯಾಮತ್ತು ನ್ಯೂಜಿಲೆಂಡ್ ತಂಡಗಳ ತಲಾ 2 ಆಟಗಾರರು ಮತ್ತು ದಕ್ಷಿಣ ಆಫ್ರಿಕಾದ ಒಬ್ಬ ಆಟಗಾರ ಈ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಾರೆ. ಇದನ್ನೂ ಓದಿ: ಶಮಿ ತವರಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾದ ಯೋಗಿ ಸರ್ಕಾರ

    ಭಾರತ ತಂಡದಿಂದ ಆಯ್ಕೆಯಾದವರು ಯಾರು?
    ಐಸಿಸಿ ಪ್ಲೇಯರ್ ಆಫ್ ದಿ ಟೂರ್ನಮೆಂಟ್ ಪ್ರಶಸ್ತಿಗೆ ನಾಮನಿರ್ದೇಶನಗೊಂಡ ಭಾರತದ ಆಟಗಾರರಲ್ಲಿ ನಾಯಕ ರೋಹಿತ್ ಶರ್ಮಾ (Rohit Sharma), ವಿರಾಟ್ ಕೊಹ್ಲಿ (Virat Kohli)), ಮೊಹಮ್ಮದ್ ಶಮಿ (Mohammed Shami) ಮತ್ತು ಜಸ್ಪ್ರೀತ್ ಬುಮ್ರಾ (Jasprit Bumrah) ಅವರ ಹೆಸರುಗಳು ಸೇರಿವೆ. ವಿಶ್ವಕಪ್ ಪಂದ್ಯಾವಳಿಯಲ್ಲಿ ಇವರಿಂದ ಉತ್ತಮ ಪ್ರದರ್ಶನ ಕಂಡುಬಂದಿದೆ. ಬ್ಯಾಟಿಂಗ್‌ನಲ್ಲಿ ಅಬ್ಬರಿಸಿರುವ ವಿರಾಟ್ ಕೊಹ್ಲಿ 700 ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. ಹಾಗೆಯೇ ನಾಯಕ ರೋಹಿತ್ ಶರ್ಮಾ ಕೂಡ ತಂಡಕ್ಕೆ ಉತ್ತಮ ಆರಂಭವನ್ನು ನೀಡಿದ್ದು, 500ಕ್ಕೂ ಹೆಚ್ಚು ರನ್ ಕಲೆಹಾಕಿದ್ದಾರೆ. ಇದನ್ನೂ ಓದಿ: ಮತ್ತೆ ಮಾತಿನಲ್ಲೇ ತಿವಿದ ವಿಚ್ಛೇದಿತ ಪತ್ನಿ – ತೆರೆಯ ಹಿಂದೆ ಶಮಿಯ ಬದುಕು ಘೋರ!

    ಬೌಲಿಂಗ್‌ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿರುವ ಮೊಹಮ್ಮದ್ ಶಮಿ, ಪ್ರಸ್ತುತ ಟೂರ್ನಿಯಲ್ಲಿ 23 ವಿಕೆಟ್ ಪಡೆದ ಬೌಲರ್‌ಗಳ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ. ಬುಮ್ರಾ ಕೂಡ ಇಲ್ಲಿಯವರೆಗೆ ಮ್ಯಾಚ್ ವಿನ್ನಿಂಗ್ ಬೌಲರ್ ಎಂಬುದನ್ನು ಸಾಬೀತುಪಡಿಸಿದ್ದಾರೆ. ಇದನ್ನೂ ಓದಿ: ಜೀತೇಗ ಇಂಡಿಯಾ ಜೀತೇಗ – ವಿಶ್ವ ಮಹಾಸಮರಕ್ಕೆ ಮೋದಿ ಅಂಗಳ ಸಜ್ಜು, ಕೋಟ್ಯಂತರ ಅಭಿಮಾನಿಗಳ ಕಾತರ!

    ಇತರ ದೇಶಗಳಿಂದ ಯಾರ್ಯಾರು?
    ಈ ಪಟ್ಟಿಯಲ್ಲಿ ಸೇರ್ಪಡೆಗೊಂಡಿರುವ ಇತರ ದೇಶಗಳ ಆಟಗಾರರ ಬಗ್ಗೆ ಹೇಳುವುದಾದರೆ, ಆಸೀಸ್ ಲೆಗ್ ಸ್ಪಿನ್ನರ್ ಆಡಮ್ ಝಂಪಾ ಮತ್ತು ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್ವೆಲ್  ಈ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಝಂಪಾ 22 ವಿಕೆಟ್‌ಗಳೊಂದಿಗೆ ಇದುವರೆಗೆ ಟೂರ್ನಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್‌ಗಳ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದರೆ, ಮ್ಯಾಕ್ಸ್ವೆಲ್ ಕೂಡ ಬ್ಯಾಟಿಂಗ್ ಜೊತೆಗೆ ಬೌಲಿಂಗ್‌ನಲ್ಲೂ ಉತ್ತಮ ಪ್ರದರ್ಶನ ನೀಡಿದ್ದಾರೆ. ಈ ಇಬ್ಬರೊಂದಿಗೆ ನ್ಯೂಜಿಲೆಂಡ್‌ನ ಡೇರಿಲ್ ಮಿಚೆಲ್ ಮತ್ತು ರಚಿನ್ ರವೀಂದ್ರ ಅವರೂ ಸಹ ಸರಣಿ ಶ್ರೇಷ್ಠ ಆಟಗಾರ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಾರೆ. ಇದನ್ನೂ ಓದಿ: ಟೀಂ ಇಂಡಿಯಾ ಹೀನಾಯವಾಗಿ ಸೋಲುತ್ತೆ, ಆಸ್ಟ್ರೇಲಿಯಾ ಟ್ರೋಫಿ ಎತ್ತಿ ಹಿಡಿಯುತ್ತೆ – ಮಿಚೆಲ್‌ ಮಾರ್ಷ್‌ ಭವಿಷ್ಯವಾಣಿ ವೈರಲ್‌

    ರಚಿನ್ ರವೀಂದ್ರ ತಮ್ಮ ಮೊದಲ ವಿಶ್ವಕಪ್‌ನಲ್ಲಿಯೇ 64.22 ಸರಾಸರಿಯಲ್ಲಿ 578 ರನ್ ಕಲೆಹಾಕಿದ್ದಾರೆ. ಡೇರಿಲ್ ಮಿಚೆಲ್ ಕೂಡ 69ರ ಸರಾಸರಿಯಲ್ಲಿ 552 ರನ್ ಬಾರಿಸಿದ್ದರು. ಟೂರ್ನಿಯಲ್ಲಿ ನಾಲ್ಕು ಶತಕ ಸೇರಿದಂತೆ 59.40 ಸರಾಸರಿಯಲ್ಲಿ 594 ರನ್ ಬಾರಿಸಿರುವ ದಕ್ಷಿಣ ಆಫ್ರಿಕಾದ ಕ್ವಿಂಟನ್ ಡಿ ಕಾಕ್ ಈ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಇದನ್ನೂ ಓದಿ: 2023 World Cup Final – 20 ವರ್ಷದ ಹಿಂದಿನ ಸೇಡನ್ನು ತೀರಿಸಿಕೊಳ್ಳುತ್ತಾ ಟೀಂ ಇಂಡಿಯಾ?

  • ಜೀತೇಗ ಇಂಡಿಯಾ ಜೀತೇಗ – ವಿಶ್ವ ಮಹಾಸಮರಕ್ಕೆ ಮೋದಿ ಅಂಗಳ ಸಜ್ಜು, ಕೋಟ್ಯಂತರ ಅಭಿಮಾನಿಗಳ ಕಾತರ!

    ಜೀತೇಗ ಇಂಡಿಯಾ ಜೀತೇಗ – ವಿಶ್ವ ಮಹಾಸಮರಕ್ಕೆ ಮೋದಿ ಅಂಗಳ ಸಜ್ಜು, ಕೋಟ್ಯಂತರ ಅಭಿಮಾನಿಗಳ ಕಾತರ!

    ಅಹ್ಮದಾಬಾದ್: ದೇಶವೇ ಎದುರು ನೋಡುತ್ತಿರುವ ವಿಶ್ವಕಪ್‌ ಮಹಾಸಮರಕ್ಕೆ ಇನ್ನೊಂದು ದಿನ ಬಾಕಿಯಿದೆ. ಕೋಟ್ಯಂತರ ಅಭಿಮಾನಿಗಳು ಫೈನಲ್‌ (World Cup Final) ಪಂದ್ಯ ವೀಕ್ಷಣೆ ಮಾಡಲು ಕಾದು ಕುಳಿತಿದ್ದಾರೆ. ಲೀಗ್‌ ಸುತ್ತಿನಿಂದಲೂ ಒಂದೇ ಒಂದು ಪಂದ್ಯ ಸೋಲದ ಭಾರತ ಸರಿಸಾಟಿಯೇ ಇಲ್ಲದಂತೆ ಮುನ್ನುಗ್ಗುತ್ತಿದೆ.

    ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ (Narendra Modi Stadium) ಭಾನುವಾರ ಭಾರತ ಮತ್ತು ಆಸ್ಟ್ರೇಲಿಯಾ (Ind vs Aus) ತಂಡಗಳ ನಡುವೆ ಹೈವೋಲ್ಟೇಜ್‌ ಪಂದ್ಯ ನಡೆಯಲಿದೆ. ನವೆಂಬರ್‌ 19 ರಂದು ಮಧ್ಯಾಹ್ನ 2 ಗಂಟೆ ವೇಳೆಗೆ ಪಂದ್ಯ ಆರಂಭವಾಗಲಿದ್ದು, 20 ವರ್ಷಗಳ ಬಳಿಕ ಭಾರತ ಕಾಂಗರೂ ಪಡೆ ವಿರುದ್ಧ ಸೇಡು ತೀರಿಸಿಕೊಳ್ಳಲು ತುದಿಗಾಲಿನಲ್ಲಿ ನಿಂತಿದೆ. ಆದ್ರೆ ಪಂದ್ಯ ಆರಂಭಕ್ಕೂ ಮುನ್ನವೇ ಭಾರತ ತಂಡಕ್ಕೆ (Team India) ಸ್ಫೂರ್ತಿ ತುಂಬಲು ಹಲವು ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಈಗಾಗಲೇ ಹಲವು ನೃತ್ಯಪಟುಗಳು ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಬೀಡುಬಿಟ್ಟಿದ್ದು, ನೃತ್ಯ ಅಭ್ಯಾಸ ನಡೆಸುತ್ತಿದ್ದಾರೆ.

    ಟೀಂ ಇಂಡಿಯಾವನ್ನು ಮತ್ತಷ್ಟು ಹುರಿದುಂಬಿಸಲು ʻಜೀತೇಗ ಇಂಡಿಯಾ ಜೀತೇಗʼ (Jeetega, India Jeetega) ವಿಶೇಷ ಗೀತೆಯೊಂದಿಗೆ ನೃತ್ಯ ಪ್ರದರ್ಶನವನ್ನೂ ಏರ್ಪಡಿಸಲಾಗಿದೆ. ಅಲ್ಲದೇ ಬಾಲಿವುಡ್‌ ತಾರೆಯರಿಂದ ನೃತ್ಯ ಪ್ರದರ್ಶನ ಕಾರ್ಯಕ್ರಮಗಳನ್ನೂ ಆಯೋಜಿಸಲಾಗಿದೆ. ಇದಕ್ಕೂ ಮುನ್ನ ಇತಿಹಾಸದಲ್ಲೇ ಮೊದಲ ಬಾರಿಗೆ ವಿಶ್ವಕಪ್‌ ಟೂರ್ನಿಯ ಫೈನಲ್‌ ಸಮಾರಂಭದಲ್ಲಿ ಭಾರತೀಯ ವಾಯುಪಡೆಯಿಂದ ವಿಶೇಷ ಏರ್‌ಶೋ ಪ್ರದರ್ಶನ ನಡೆಯಲಿದೆ. ಇದು ಕ್ರಿಕೆಟ್‌ ಅಭಿಮಾನಿಗಳ ಕಣ್ಣಿಗೆ ಹಬ್ಬವನ್ನುಂಟುಮಾಡಲಿದೆ. ಇಂದು ಮೊದಲ ಹಂತದ ರಿಹರ್ಸಲ್‌ ಕೂಡ ನಡೆದಿದೆ. ಇದನ್ನೂ ಓದಿ: ಟೀಂ ಇಂಡಿಯಾ ಹೀನಾಯವಾಗಿ ಸೋಲುತ್ತೆ, ಆಸ್ಟ್ರೇಲಿಯಾ ಟ್ರೋಫಿ ಎತ್ತಿ ಹಿಡಿಯುತ್ತೆ – ಮಿಚೆಲ್‌ ಮಾರ್ಷ್‌ ಭವಿಷ್ಯವಾಣಿ ವೈರಲ್‌

    ಮೋದಿ ಮುಖ್ಯ ಆಕರ್ಷಣೆ: ಐಸಿಸಿ ವಿಶ್ವಕಪ್ 2023ರ ಫೈನಲ್ ಪಂದ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಜರಾಗಲಿದ್ದಾರೆ. ಐಸಿಸಿ ವಿಶ್ವಕಪ್ 2023ರ ಫೈನಲ್ ಪಂದ್ಯಕ್ಕೆ ಪ್ರಧಾನಿ ಗೌರವಾನ್ವಿತ ಅತಿಥಿಯಾಗಿ ಭಾಗವಹಿಸಲಿದ್ದಾರೆ. ನರೇಂದ್ರ ಮೋದಿ ಕ್ರೀಡಾಂಗಣವು ವಿಶ್ವದ ಅತಿದೊಡ್ಡ ಕ್ರಿಕೆಟ್ ಮೈದಾನವಾಗಿದ್ದು, ರೋಚಕ ಪಂದ್ಯ ವೀಕ್ಷಿಸಲು 1.30 ಲಕ್ಷಕ್ಕೂ ಹೆಚ್ಚು ಜನರು ಆಗಮಿಸಲಿದ್ದಾರೆ. ಈ ವೇಳೆ ಹಲವಾರು ಗಣ್ಯರು ಮೈದಾನದಕ್ಕೆ ಭೇಟಿ ನೀಡಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಗಣ್ಯರೊಂದಿಗೆ ಫೈನಲ್ ಪಂದ್ಯ ವೀಕ್ಷಿಸಲಿದ್ದಾರೆ.

    ದಕ್ಷಿಣ ಆಫ್ರಿಕಾ ವಿರುದ್ಧ ರೋಚಕ ಜಯ ಸಾಧಿಸಿದ ನಂತ್ರ ಆಸ್ಟ್ರೇಲಿಯಾ 8ನೇ ಬಾರಿಗೆ ಫೈನಲ್ ಪ್ರವೇಶಿಸಿದೆ. ಭಾರತ ಮತ್ತು ಆಸ್ಟ್ರೇಲಿಯಾ ರೋಚಕ ಕದನ ವೀಕ್ಷಿಸಲು ಕೋಟ್ಯಂತರ ಅಭಿಮಾನಿಗಳು ಕಾದು ಕುಳಿತಿದ್ದಾರೆ. ಇದನ್ನೂ ಓದಿ: 2023 World Cup Final – 20 ವರ್ಷದ ಹಿಂದಿನ ಸೇಡನ್ನು ತೀರಿಸಿಕೊಳ್ಳುತ್ತಾ ಟೀಂ ಇಂಡಿಯಾ?

    ಏನೇನು ವಿಶೇಷ..?
    ನವೆಂಬರ್ 19ರಂದು ಅಹಮದಾಬಾದ್‌ನಲ್ಲಿ ನಡೆಯಲಿರುವ ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ಭಾರತೀಯ ವಾಯುಪಡೆಯು ವಿಶೇಷ ಏರ್ ಶೋ ಪ್ರದರ್ಶನ ನಡೆಸಿಕೊಡಲಿದೆ. ಇದರೊಂದಿಗೆ ಖ್ಯಾತ ಬಾಲಿವುಡ್ ತಾರೆಯರು ಮೋದಿ ಕ್ರೀಡಾಂಗಣಕ್ಕೆ ಮತ್ತಷ್ಟು ರಂಗು ತರಲಿದ್ದಾರೆ. ನೃತ್ಯ, ಸಂಗೀತ, ವಿಶೇಷ ಲೈಟಿಂಗ್ ಶೋ ಕಾರ್ಯಕ್ರಮಗಳು ನಡೆಯಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

  • ಇಂಡೋ-ಆಸೀಸ್‌ ರೋಚಕ ಫೈನಲ್‌ ವೀಕ್ಷಿಸಲಿದ್ದಾರೆ ಮೋದಿ – ಸೂಪರ್‌ ಸಂಡೇ ಏನೆಲ್ಲಾ ಸ್ಪೆಷಲ್‌ ಇದೆ ಗೊತ್ತಾ..?

    ಇಂಡೋ-ಆಸೀಸ್‌ ರೋಚಕ ಫೈನಲ್‌ ವೀಕ್ಷಿಸಲಿದ್ದಾರೆ ಮೋದಿ – ಸೂಪರ್‌ ಸಂಡೇ ಏನೆಲ್ಲಾ ಸ್ಪೆಷಲ್‌ ಇದೆ ಗೊತ್ತಾ..?

    ಅಹ್ಮದಾಬಾದ್: ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ (Narendra Modi Stadium) ನವೆಂಬರ್ 19ರಂದು ನಡೆಯಲಿರುವ ಐಸಿಸಿ ವಿಶ್ವಕಪ್ 2023ರ ಫೈನಲ್ ಪಂದ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ (Narendra Modi) ಹಾಜರಾಗುವ ನಿರೀಕ್ಷೆಯಿದೆ.

    ಐಸಿಸಿ ವಿಶ್ವಕಪ್ 2023ರ ಫೈನಲ್ ಪಂದ್ಯಕ್ಕೆ ಪ್ರಧಾನಿ ಗೌರವಾನ್ವಿತ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ನರೇಂದ್ರ ಮೋದಿ ಕ್ರೀಡಾಂಗಣವು ವಿಶ್ವದ ಅತಿದೊಡ್ಡ ಕ್ರಿಕೆಟ್ ಮೈದಾನವಾಗಿದ್ದು, ರೋಚಕ ಪಂದ್ಯ ವೀಕ್ಷಿಸಲು 1.30 ಲಕ್ಷಕ್ಕೂ ಹೆಚ್ಚು ಜನರು ಆಗಮಿಸಲಿದ್ದಾರೆ. ಈ ವೇಳೆ ಹಲವಾರು ಗಣ್ಯರು ಮೈದಾನಕ್ಕೆ ಭೇಟಿ ನೀಡಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಗಣ್ಯರೊಂದಿಗೆ ಫೈನಲ್‌ ಪಂದ್ಯ ವೀಕ್ಷಿಸಲಿದ್ದಾರೆ ಎಂದು ಹೇಳಲಾಗಿದೆ. ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಪಂದ್ಯಕ್ಕೂ ಮುನ್ನ ನಡೆದ ಬಾರ್ಡರ್‌ ಗವಾಸ್ಕರ್‌ ಸರಣಿಯ 4ನೇ ಟೆಸ್ಟ್‌ ಪಂದ್ಯವನ್ನು ಪ್ರಧಾನಿ ಮೋದಿ ವೀಕ್ಷಿಸಿದ್ದರು.

    ದಕ್ಷಿಣ ಆಫ್ರಿಕಾ ವಿರುದ್ಧ ರೋಚಕ ಜಯ ಸಾಧಿಸಿದ ಆಸ್ಟ್ರೇಲಿಯಾ (Australia) 8ನೇ ಬಾರಿಗೆ ಫೈನಲ್‌ ಪ್ರವೇಶಿಸಿದೆ. ಭಾರತ ಮತ್ತು ಆಸ್ಟ್ರೇಲಿಯಾ ರೋಚಕ ಕದನ ವೀಕ್ಷಿಸಲು ಕೋಟ್ಯಂತರ ಅಭಿಮಾನಿಗಳು ಕಾದು ಕುಳಿತಿದ್ದಾರೆ. ಅಂದು ವಿಶ್ವಕಪ್‌ಗೆ (ICC World Cup) ಮತ್ತಷ್ಟು ರಂಗು ತರಲು ಹಲವು ವಿಶೇಷ ಕಾರ್ಯಕ್ರಮಗಳನ್ನ ಹಮ್ಮಿಕೊಂಡಿದೆ.

    ಏನೇನು ವಿಶೇಷ..?
    ನವೆಂಬರ್‌ 19ರಂದು ಅಹಮದಾಬಾದ್‌ನಲ್ಲಿ ನಡೆಯಲಿರುವ ವಿಶ್ವಕಪ್‌ ಫೈನಲ್‌ (World Cup Final) ಪಂದ್ಯಕ್ಕೂ ಮುನ್ನ ಭಾರತೀಯ ವಾಯುಪಡೆಯು ವಿಶೇಷ ಏರ್‌ ಶೋ ಪ್ರದರ್ಶನ ನಡೆಸಿಕೊಡಲಿದೆ. ಇದರೊಂದಿಗೆ ಖ್ಯಾತ ಬಾಲಿವುಡ್‌ ತಾರೆಯರು ಮೋದಿ ಕ್ರೀಡಾಂಗಣಕ್ಕೆ ಮತ್ತಷ್ಟು ರಂಗು ತರಲಿದ್ದಾರೆ. ನೃತ್ಯ, ಸಂಗೀತ, ವಿಶೇಷ ಲೈಟಿಂಗ್‌ ಶೋ ಕಾರ್ಯಕ್ರಮಗಳು ನಡೆಯಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

  • ಭಾರತ, ಪಾಕ್ ಪಂದ್ಯದ ವೇಳೆ ವ್ಯಕ್ತಿಯೊಂದಿಗೆ ಮಹಿಳಾ ಪೊಲೀಸ್ ಗಲಾಟೆ – ಪೊಲೀಸ್‍ಗೆ ಕಪಾಳಮೋಕ್ಷಕ್ಕೆ ಯತ್ನ

    ಭಾರತ, ಪಾಕ್ ಪಂದ್ಯದ ವೇಳೆ ವ್ಯಕ್ತಿಯೊಂದಿಗೆ ಮಹಿಳಾ ಪೊಲೀಸ್ ಗಲಾಟೆ – ಪೊಲೀಸ್‍ಗೆ ಕಪಾಳಮೋಕ್ಷಕ್ಕೆ ಯತ್ನ

    ಅಹಮದಾಬಾದ್: ಭಾರತ (Team India) ಪಾಕ್ ಪಂದ್ಯದ ವೇಳೆ ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ (Narendra Modi Stadium) ಮಹಿಳಾ ಪೊಲೀಸ್ ಸಿಬ್ಬಂದಿ ಹಾಗೂ ವ್ಯಕ್ತಿಯೊಬ್ಬನ ನಡುವೆ ನಡೆದ ಗಲಾಟೆಯ ವೀಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ವೈರಲ್ ಆಗಿರುವ ವೀಡಿಯೋದಲ್ಲಿ ಮಹಿಳಾ ಪೊಲೀಸ್ ಸಿಬ್ಬಂದಿ (Woman Cop) ಹಾಗೂ ವ್ಯಕ್ತಿಯ ನಡುವೆ ವಾಗ್ವಾದವಾಗಿದೆ. ಈ ವೇಳೆ ಪೊಲೀಸ್‍ಗೆ ವ್ಯಕ್ತಿ ಕಪಾಳಮೋಕ್ಷ ಮಾಡಲು ಮುಂದಾಗಿದ್ದ. ಆಗ ವ್ಯಕ್ತಿಗೆ ಪೊಲೀಸ್ ಸಿಬ್ಬಂದಿ ಕೆನ್ನೆಗೆ ಹೊಡೆದಿದ್ದಾರೆ. ಬಳಿಕ ಇಬ್ಬರ ನಡುವೆ ಗಲಾಟೆ ಹೆಚ್ಚಾಗುತ್ತಿದ್ದಂತೆ ಉಳಿದ ಪ್ರೇಕ್ಷಕರು ಅವರಿಬ್ಬರನ್ನೂ ಸಮಾಧಾನ ಪಡೆಸಿದ್ದಾರೆ. ಇದನ್ನೂ ಓದಿ: ಸಿಕ್ಸ್‌ ಸಿಡಿಸಿ ದಾಖಲೆ ಬರೆದ ರೋಹಿತ್‌ ಶರ್ಮಾ

    ಈ ವೀಡಿಯೋ ಬಗ್ಗೆ ನೆಟ್ಟಿಗರು ಪರ ವಿರೋಧ ಚರ್ಚೆಗಳನ್ನು ನಡೆಸಿದ್ದಾರೆ. ಕೆಲವರು ಪೊಲೀಸ್ ಸಿಬ್ಬಂದಿ ಹಲ್ಲೆ ನಡೆಸಬಾರದಿತ್ತು ಎಂದು ಹೇಳಿದ್ದಾರೆ. ಇನ್ನೂ ಕೆಲವರು ಅಲ್ಲಿ ಏನು ನಡೆಯಿತು ಎಂದು ಪ್ರಶ್ನಿಸಿದ್ದಾರೆ.

    ಇದರ ನಡುವೆ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಟೀಂ ಇಂಡಿಯಾ ಜಯಗಳಿಸಿತು. ಈ ಮೂಲಕ ಪಾಕ್ ವಿರುದ್ಧದ ಪಂದ್ಯದಲ್ಲಿ 8-0 ವಿಜಯಯಾತ್ರೆಯನ್ನು ಮುಂದುವರೆಸಿದೆ. ಇದನ್ನೂ ಓದಿ: ಭಾರತದ ಬೆಂಕಿ ಬೌಲಿಂಗ್‌, ರೋʼಹಿಟ್‌ʼ ಬ್ಯಾಟಿಂಗ್‌ಗೆ ಪಾಕ್‌ ಭಸ್ಮ – ಮೊದಲ ಸ್ಥಾನಕ್ಕೆ ಜಿಗಿದ ಟೀಂ ಇಂಡಿಯಾ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪಾಕ್‌ ಉಗ್ರರನ್ನ ಹತ್ಯೆಗೈದ ಕಮಾಂಡೋಗಳಿಂದಲೇ ಭಾರತ-ಪಾಕ್ ಪಂದ್ಯಕ್ಕೆ ಭದ್ರತೆ – ಇಲ್ಲಿದೆ ಡಿಟೇಲ್ಸ್‌

    ಪಾಕ್‌ ಉಗ್ರರನ್ನ ಹತ್ಯೆಗೈದ ಕಮಾಂಡೋಗಳಿಂದಲೇ ಭಾರತ-ಪಾಕ್ ಪಂದ್ಯಕ್ಕೆ ಭದ್ರತೆ – ಇಲ್ಲಿದೆ ಡಿಟೇಲ್ಸ್‌

    ಅಹಮದಾಬಾದ್‌: ಏಕದಿನ ವಿಶ್ವಕಪ್‌ (World Cup 2023) ಟೂರ್ನಿ ಆರಂಭವಾಗಿದ್ದು, ತೀವ್ರ ಕುತೂಹಲ ಕೆರಳಿಸಿರುವ ಭಾರತ – ಪಾಕಿಸ್ತಾನ ಪಂದ್ಯಕ್ಕೆ (Ind vs Pak) ದಿನಗಣನೆ ಆರಂಭವಾಗಿದೆ. ಕ್ರಿಕೆಟ್ ಅಭಿಮಾನಿಗಳಲ್ಲಿ ತೀವ್ರ ಕುತೂಹಲ ಮೂಡಿಸಿದ್ದು, ಟ್ವಿಟ್ಟರ್‌ನಲ್ಲೂ ಟ್ರೆಂಡ್ ಅಲೆ ಎದ್ದಿದೆ.

    ಹೌದು. ಇದೇ ಅಕ್ಟೋಬರ್‌ 14 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ (Narendra Modi Stadium)  ಭಾರತ ಮತ್ತು ಪಾಕಿಸ್ತಾನ ನಡುವಿನ ಹೈವೋಲ್ಟೇಜ್‌ ಪಂದ್ಯ ನಡೆಯಲಿದ್ದು, ಬಿಗಿ ಭದ್ರತೆ ಒದಗಿಸಲಾಗಿದೆ. 2008ರ ನವೆಂಬರ್‌ 26ರಂದು ನಡೆದ ಮುಂಬೈ ದಾಳಿಯಲ್ಲಿ ಪಾಕ್‌ ಉಗ್ರರನ್ನು ಮಟ್ಟ ಹಾಕಿದ್ದ NSG ಕಮಾಂಡೋಗಳನ್ನು ಈ ಪಂದ್ಯಕ್ಕೆ ಭದ್ರತೆಗಾಗಿ ನಿಯೋಜಿಸಲಾಗಿದೆ.

    ಗುಜರಾತ್ ಪೊಲೀಸ್, ಎನ್​ಎಸ್​​ಜಿ, ರ‍್ಯಾಪಿಡ್‌ ಆಕ್ಷನ್‌ ಫೋರ್ಸ್‌ (RAF) ಮತ್ತು ಗೃಹರಕ್ಷರು ಸೇರಿದಂತೆ ವಿವಿಧ ಏಜೆನ್ಸಿಗಳ 11,000ಕ್ಕೂ ಹೆಚ್ಚು ಸಿಬ್ಬಂದಿಯನ್ನ ಭದ್ರತೆಗೆ ನಿಯೋಜಿಸಲಾಗುತ್ತಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ದೆಹಲಿ ಕಾಂಗ್ರೆಸ್‌ನವರು ಬೈದಿದ್ದಕ್ಕೆ ಪ್ರದೀಪ್ ಬಿಗ್ ಬಾಸ್ ಮನೆಯಿಂದ ಹೊರಗೆ ಬಂದಿರೋದು: ಸುಧಾಕರ್  

    ಕಳೆದ 20 ವರ್ಷಗಳಲ್ಲಿ ಅಹಮದಾಬಾದ್ ನಗರದಲ್ಲಿ ಯಾವುದೇ ಕೋಮುಗಲಭೆಗಳು ನಡೆದಿಲ್ಲವಾದರೂ, ಮುನ್ನೆಚ್ಚರಿಕೆ ಕ್ರಮವಾಗಿ ಹಲವಾರು ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗುವುದು ಎಂದು ಅಹಮದಾಬಾದ್ ಪೊಲೀಸ್ ಆಯುಕ್ತ ಜಿ.ಎಸ್.ಮಲಿಕ್ ತಿಳಿಸಿದ್ದಾರೆ.

    ಇದಕ್ಕೂ ಮುನ್ನ ಗುಜರಾತ್ ಸಿಎಂ ಭೂಪೇಂದ್ರಬಾಯ್‌ ಪಟೇಲ್ ಅವರು ಗೃಹ ಖಾತೆ ರಾಜ್ಯ ಸಚಿವ ಹರ್ಷ್ ಸಾಂಘವಿ, ರಾಜ್ಯ ಡಿಜಿಪಿ ವಿಕಾಸ್ ಸಹಾಯ್, ಜಿ.ಎಸ್ ಮಲಿಕ್ ಮತ್ತು ಇತರ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಗಾಂಧಿನಗರದಲ್ಲಿ ಸಭೆ ನಡೆಸಿ ಪೊಲೀಸರ ಪ್ಲ್ಯಾನ್‌ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಜೊತೆಗೆ ಇಂಡೋ ಪಾಕ್‌ ಪಂದ್ಯದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಇಸ್ರೇಲ್‌ನಲ್ಲಿರುವ ಕರಾವಳಿಗರ ರಕ್ಷಣೆಗೆ ವಿದೇಶಾಂಗ ಸಚಿವರಿಗೆ ಪತ್ರ: ನಳಿನ್ ಕುಮಾರ್ ಕಟೀಲ್

    ಮೋದಿ ಕ್ರೀಡಾಂಗಣದಲ್ಲಿ 1.32 ಲಕ್ಷ ಆಸನಗಳ ವ್ಯವಸ್ಥೆಯಿದ್ದು, ಪ್ರತಿಯೊಬ್ಬ ಪ್ರೇಕ್ಷಕರ ಚಲನವಲನಗಳ ಮೇಲೆ ನಿಗಾ ವಹಿಸಲು ಸೂಚನೆ ನೀಡಿದ್ದಾರೆ. ಅಲ್ಲದೇ ಇತ್ತೀಚೆಗೆ ಮುಂಬೈ ಪೊಲೀಸರಿಗೆ ಬಂದಿದ್ದ ಇಮೇಲ್‌ ಬೆದರಿಕೆ ಸಂದೇಶಗಳನ್ನು ಗಮನದಲ್ಲಿಟ್ಟುಕೊಂಡು ವ್ಯಾಪಕ ಭದ್ರತಾ ವ್ಯವಸ್ಥೆಗಳನ್ನ‌ ನಿಯೋಜನೆ ಮಾಡಿರುವುದಾಗಿ ಪೊಲೀಸ್‌ ಆಯುಕ್ತರು ತಿಳಿಸಿದ್ದಾರೆ. ಇದನ್ನೂ ಓದಿ: ಉಗ್ರರಿದ್ದ ಕಾರನ್ನು ಬೆನ್ನಟ್ಟಿ ಬೈಕ್‌ ಓಡಿಸುತ್ತಲೇ ಗುಂಡು ಹಾರಿಸಿದ ಇಸ್ರೇಲ್‌ ಪೊಲೀಸ್‌ – ರೋಚಕ ದೃಶ್ಯದ ವೀಡಿಯೋ ವೈರಲ್‌

    7,000ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯೊಂದಿಗೆ, ಕ್ರೀಡಾಂಗಣದ ಭದ್ರತೆಗಾಗಿ ಮತ್ತು ಪಂದ್ಯದ ಸಮಯದಲ್ಲಿ ನಗರದ ಕೋಮು ಸೂಕ್ಷ್ಮ ಪ್ರದೇಶಗಳಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ನಾವು ಸುಮಾರು 4,000 ಗೃಹರಕ್ಷಕರನ್ನು ನಿಯೋಜಿಸಲಾಗುವುದು. ಈ ಸಿಬ್ಬಂದಿಯ ಜೊತೆಗೆ ನಾವು ಮೂರು ‘ಹಿಟ್ ತಂಡಗಳು’ ಮತ್ತು ಎನ್ಎಸ್​ಜಿಯು ಒಂದು ಡ್ರೋನ್ ತಡೆ ತಂಡವನ್ನು ನಿಯೋಜಿಸುತ್ತೇವೆ. ನಮ್ಮ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳದ 9 ತಂಡಗಳನ್ನು ಸಹ ಬಳಸಿಕೊಳ್ಳಲಾಗುತ್ತದೆ. ಅಷ್ಟೇ ಅಲ್ಲದೇ ಇನ್ಸ್‌ಪೆಕ್ಟರ್‌ ಜನರಲ್ ಮತ್ತು ಡೆಪ್ಯೂಟಿ ಇನ್ಸ್‌ಪೆಕ್ಟರ್‌ ಜನರಲ್ ಶ್ರೇಣಿಯ ನಾಲ್ವರು ಹಿರಿಯ ಐಪಿಎಸ್ ಅಧಿಕಾರಿಗಳು ಮತ್ತು 21 ಉಪ ಪೊಲೀಸ್ ಆಯುಕ್ತರು (ಡಿಸಿಪಿ) ಶ್ರೇಣಿಯ ಅಧಿಕಾರಿಗಳು ಪಂದ್ಯದ ದಿನದಂದು ಸಿಬ್ಬಂದಿ ಮೇಲ್ವಿಚಾರಣೆ ಮತ್ತು ಮಾರ್ಗದರ್ಶನ ನೀಡಲಿದ್ದಾರೆ ಎಂದೂ ಪೊಲೀಸ್‌ ಆಯುಕ್ತರು ತಿಳಿಸಿದ್ದಾರೆ.

    “ರಾಜ್ಯ ಮೀಸಲು ಪೊಲೀಸ್ (SRP) ಯ 13 ತುಕಡಿಗಳಲ್ಲದೆ, ನಮ್ಮ ಭದ್ರತಾ ವ್ಯವಸ್ಥೆಯ ಭಾಗವಾಗಿ ನಾವು ಕ್ಷಿಪ್ರ ಕ್ರಿಯಾ ಪಡೆಯ ಮೂರು ತುಕಡಿಗಳನ್ನು ನಿಯೋಜಿಸುತ್ತೇವೆ. ಆರ್ ಎಎಫ್ ನಗರದ ಕೋಮು ಸೂಕ್ಷ್ಮ ಪ್ರದೇಶಗಳ ಮೇಲೆ ನಿಗಾ ಇಡಲಿದೆ. ಕಾಲ್ತುಳಿತದ ಸಂದರ್ಭದಲ್ಲಿ ಜನರಿಗೆ ಸಹಾಯ ಮಾಡಲು, ನಾವು ಈಗಾಗಲೇ ಸ್ಥಳಾಂತರಿಸುವ ಯೋಜನೆಯನ್ನು ಸಿದ್ಧಪಡಿಸಿದ್ದೇವೆ ಮತ್ತು ಕ್ರೀಡಾಂಗಣದಲ್ಲಿ ಪೂರ್ವಾಭ್ಯಾಸವೂ ನಡೆಯುತ್ತಿದೆ ಎಂದು ಮಲಿಕ್ ಮಾಹಿತಿ ನೀಡಿದ್ದಾರೆ.

    ಇತ್ತೀಚೆಗಷ್ಟೇ ಜೈಲಿನಲ್ಲಿರುವ ದರೋಡೆಕೋರ ಲಾರೆನ್ಸ್ ಬಿಷ್ಣೋಯ್‌ನನ್ನ ಬಿಡುಗಡೆ ಮಾಡಬೇಕು, ಜೊತೆಗೆ 500 ಕೋಟಿ ರೂ. ನೀಡಬೇಕು. ಇಲ್ಲವಾದರೆ ಪ್ರಧಾನಿ ಮೋದಿ ಅವರನ್ನು ಹತ್ಯೆ ಮಾಡಲಾಗುವುದು. ಅಷ್ಟೇ ಅಲ್ಲದೇ ಅಹಮದಾಬಾದ್‌ನ ಮೋದಿ ಕ್ರೀಡಾಂಗಣವನ್ನು ಸ್ಫೋಟಿಸಲಾಗುವುದು ಎಂದು ಮುಂಬೈ ಪೊಲೀಸರಿಗೆ ಇಮೇಲ್‌ ಮೂಲಕ ಬೆದರಿಕೆ ಸಂದೇಶ ಬಂದಿತ್ತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪ್ರಧಾನಿ ಮೋದಿ ಹತ್ಯೆ, ಮೋದಿ ಸ್ಟೇಡಿಯಂ ಸ್ಫೋಟ ಬೆದರಿಕೆ – ಮುಂಬೈ ಪೊಲೀಸರಿಗೆ ಸಂದೇಶ

    ಪ್ರಧಾನಿ ಮೋದಿ ಹತ್ಯೆ, ಮೋದಿ ಸ್ಟೇಡಿಯಂ ಸ್ಫೋಟ ಬೆದರಿಕೆ – ಮುಂಬೈ ಪೊಲೀಸರಿಗೆ ಸಂದೇಶ

    – 500 ಕೋಟಿ ರೂ., ಲಾರೆನ್ಸ್ ಬಿಷ್ಣೋಯ್ ಬಿಡುಗಡೆಗೆ ಬೇಡಿಕೆ

    ಮುಂಬೈ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಹತ್ಯೆ ಮಾಡುವುದಾಗಿ ಹಾಗೂ ಅಹಮದಾಬಾದ್‌ನಲ್ಲಿರುವ ನರೇಂದ್ರ ಮೋದಿ ಕ್ರೀಡಾಂಗಣವನ್ನು (Narendra Modi Stadium) ಸ್ಫೋಟಿಸುವುದಾಗಿ ಭಯೋತ್ಪಾದಕರು ಮುಂಬೈ ಪೊಲೀಸರಿಗೆ ಇಮೇಲ್ ಬೆದರಿಕೆ ಹಾಕಿದ್ದು, ಭಾರತೀಯ ಭದ್ರತಾ ಏಜೆನ್ಸಿಗಳು ಹೈ ಅಲರ್ಟ್ ಆಗಿವೆ.

    ರಾಷ್ಟ್ರೀಯ ತನಿಖಾ ದಳ (NIA) ಮತ್ತು ಮುಂಬೈ ಪೊಲೀಸರಿಗೆ (Mumbai Police) ಬೆದರಿಕೆ ಮೇಲ್ ಬಗ್ಗೆ ಎಚ್ಚರಿಕೆ ನೀಡಲಾಗಿದ್ದು, ಗುಜರಾತ್ ಪೊಲೀಸರು ಹಾಗೂ ಪ್ರಧಾನಿಯ ಭದ್ರತೆಗೆ ಸಬಂಧಿಸಿದ ವಿವಿಧ ಏಜೆನ್ಸಿಗಳೊಂದಿಗೂ ಮಾಹಿತಿ ಹಂಚಿಕೊಳ್ಳಲಾಗಿದೆ. ಇದನ್ನೂ ಓದಿ: Asian Games 2023: ಚಿನ್ನದ ಮಳೆ – ಚೊಚ್ಚಲ ಚಾಂಪಿಯನ್‌ ಕಿರೀಟ ಧರಿಸಿದ ಭಾರತ

    ಬೆದರಿಕೆ ಇಮೇಲ್‌ನಲ್ಲಿ, ಜೈಲಿನಲ್ಲಿರುವ ದರೋಡೆಕೋರ ಲಾರೆನ್ಸ್ ಬಿಷ್ಣೋಯ್‌ನನ್ನ (Lawrence Bishnoi) ಬಿಡುಗಡೆ ಮಾಡಬೇಕು, ಜೊತೆಗೆ 500 ಕೋಟಿ ರೂ. ನೀಡಬೇಕು. ಇಲ್ಲವಾದರೆ ಪ್ರಧಾನಿ ಮೋದಿ ಅವರನ್ನು ಹತ್ಯೆ ಮಾಡಲಾಗುವುದು. ಅಷ್ಟೇ ಅಲ್ಲದೇ ಅಹಮದಾಬಾದ್‌ನ (Ahmedabad) ಮೋದಿ ಕ್ರೀಡಾಂಗಣವನ್ನು ಸ್ಫೋಟಿಸಲಾಗುವುದು ಎಂದು ಎಚ್ಚರಿಸಲಾಗಿದೆ. ಇದನ್ನೂ ಓದಿ: Asian Games 2023: ಜಪಾನ್‌ ಮಣಿಸಿ ಚಿನ್ನದ ಹಾರ ʻಹಾಕಿʼಕೊಂಡ ಭಾರತ – ಪ್ಯಾರಿಸ್‌ ಒಲಿಂಪಿಕ್ಸ್‌ಗೆ ಗ್ರೀನ್‌ ಸಿಗ್ನಲ್‌!

    ಈ ಬಗ್ಗೆ ಮುಂಬೈ ಪೊಲೀಸ್ ನಿಯಂತ್ರಣ ಕೊಠಡಿಗೆ ಎನ್‌ಐಎ ಕಚೇರಿಯಿಂದ ಎಚ್ಚರಿಕೆ ಸಂದೇಶ ಬಂದಿದ್ದು, ಇಮೇಲ್ ಮೂಲ ಪತ್ತೆ ಹಚ್ಚಲು ಭದ್ರತಾ ಏಜೆನ್ಸಿಗಳು ಮುಂದಾಗಿವೆ. ಈಗಾಗಲೇ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ 5 ವಿಶ್ವಕಪ್ ಕ್ರಿಕೆಟ್ ಪಂದ್ಯಗಳನ್ನೂ ಆಯೋಜಿಸಿರುವುದರಿಂದ ಮುಂಬೈನಲ್ಲೂ ಭದ್ರತೆ ಹೆಚ್ಚಿಸಲಾಗಿದೆ. ಅಷ್ಟೇ ಅಲ್ಲದೇ ಗುರುವಾರ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ನಡುವೆ ಉದ್ಘಾಟನಾ ಪಂದ್ಯ ನಡೆದಿದ್ದು, ಇನ್ನೂ ನಾಲ್ಕು ಪಂದ್ಯಗಳು ಬಾಕಿ ಉಳಿದಿವೆ. ಇದನ್ನೂ ಓದಿ: ಕನ್ನಡ ಮಾತು ಕೇಳಿ ಇಂಗ್ಲಿಷ್‌ನಲ್ಲಿ ಉತ್ತರ ಕೊಟ್ಟ ರಚಿನ್‌ – ಬೆಂಗ್ಳೂರು ವಿಲ್ಸನ್‌ ಗಾರ್ಡನ್‌ ನೆನಪು ಹಂಚಿಕೊಂಡ ರವೀಂದ್ರ

    ಅ.14 ರಂದು ಭಾರತ ಮತ್ತು ಪಾಕಿಸ್ತಾನ, ನವೆಂಬರ್ 4 ರಂದು ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ, ನವೆಂಬರ್ 10 ರಂದು ದಕ್ಷಿಣ ಆಫ್ರಿಕಾ ಮತ್ತು ಬಾಂಗ್ಲಾದೇಶ ಹಾಗೂ ನವೆಂಬರ್ 19 ರಂದು ವಿಶ್ವಕಪ್ ಫೈನಲ್ ಪಂದ್ಯ ನಡೆಯಲಿದೆ. ಆದ್ದರಿಂದ ಮೋದಿ ಕ್ರೀಡಾಂಗಣಕ್ಕೂ ಹೆಚ್ಚಿನ ಭದ್ರತೆ ಕಲ್ಪಿಸುವ ಬಗ್ಗೆ ಚಿಂತನೆ ನಡೆದಿದೆ. ಇದನ್ನೂ ಓದಿ: ಆಂಗ್ಲರ ವಿರುದ್ಧ ಶತಕ ಸಿಡಿಸಿ ಮೆರೆದಾಡಿದ ಬೆಂಗ್ಳೂರು ಮೂಲದ ರಚಿನ್‌ ರವೀಂದ್ರ ಯಾರು ಗೊತ್ತಾ?

    ಬೆದರಿಕೆ ಮೇಲ್‌ನಲ್ಲಿ ಬಂದ ಸಂದೇಶವೇನು?
    ನಿಮ್ಮ ಸರ್ಕಾರ ನಮಗೆ 500 ಕೋಟಿ ರೂ. ನೀಡಬೇಕು. ಲಾರೆನ್ಸ್ ಬಿಷ್ಣೋಯ್‌ನನ್ನು ಬಿಡುಗೆ ಮಾಡಬೇಕು. ಇಲ್ಲವಾದರೆ ನಾವು ನರೇಂದ್ರ ಮೋದಿ ಹತ್ಯೆ ಮಾಡುತ್ತೇವೆ ಮತ್ತು ನರೇಂದ್ರ ಮೋದಿ ಸ್ಟೇಡಿಯಂ ಅನ್ನು ಸ್ಫೋಟಿಸುತ್ತೇವೆ. ಹಿಂದೂಸ್ತಾನದಲ್ಲಿ ಎಲ್ಲವೂ ಮಾರಾಟವಾಗುತ್ತದೆ. ಹಾಗಾಗಿ ನಾವೂ ಇದನ್ನು ಖರೀದಿಸಲು ನಿರ್ಧರಿಸಿದ್ದೇವೆ. ನೀವು ಎಷ್ಟೇ ಭದ್ರತೆ ಪಡೆದುಕೊಂಡರೂ ನಮ್ಮಿಂದ ಸುರಕ್ಷಿತವಾಗಿರಲು ಸಾಧ್ಯವಿಲ್ಲ ಎಂದು ಇಮೇಲ್ ಸಂದೇಶ ಬಂದಿದೆ.

    ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ 2014ರಿಂದ ಜೈಲಿನಲ್ಲಿದ್ದಾನೆ. ಜೈಲಿನ ಒಳಗಿನಿಂದಲೇ ತನ್ನ ಗ್ಯಾಂಗ್ ಕಾರ್ಯಾಚರಣೆ ನಡೆಸುತ್ತಿದ್ದಾನೆ ಎಂದು ಮೂಲಗಳು ತಿಳಿಸಿವೆ. ಕಳೆದ ವರ್ಷ ಪಂಜಾಬಿನಲ್ಲಿ ಪಂಜಾಬಿ ಗಾಯಕ ಸಿಧು ಮೂಸೆವಾಲಾ ಹತ್ಯೆ ಸೇರಿದಂತೆ ಹಲವು ಪ್ರಕರಣಗಳನ್ನು ಎದುರಿಸುತ್ತಿದ್ದಾನೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವಿಶ್ವಕಪ್‌ ಹವಾ; ಅಹಮದಾಬಾದ್‌ನಲ್ಲಿ ಹೋಟೆಲ್‌ಗಳ ಬೆಲೆ ದುಬಾರಿ – ದಿನದ ಬಾಡಿಗೆ 1 ಲಕ್ಷ ರೂ.ವರೆಗೆ ಏರಿಕೆ

    ವಿಶ್ವಕಪ್‌ ಹವಾ; ಅಹಮದಾಬಾದ್‌ನಲ್ಲಿ ಹೋಟೆಲ್‌ಗಳ ಬೆಲೆ ದುಬಾರಿ – ದಿನದ ಬಾಡಿಗೆ 1 ಲಕ್ಷ ರೂ.ವರೆಗೆ ಏರಿಕೆ

    ಅಹಮದಾಬಾದ್‌: ವಿಶ್ವಕಪ್‌ನ (ICC ODI WorldCup) ಭಾರತ-ಪಾಕ್ ನಡುವಿನ ಪಂದ್ಯ ಹಾಗೂ ಫೈನಲ್ ಪಂದ್ಯ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ (Narendra Modi Stadium) ನಡೆಯುವುದು ಖಚಿತಗೊಂಡ ಬೆನ್ನಲ್ಲೇ ನಗರದಲ್ಲಿ ಹೋಟೆಲ್ ರೂಮ್‌ಗಳ ಬೆಲೆ ಗಗನಕ್ಕೇರಿದೆ.

    ಸಾಮಾನ್ಯವಾಗಿ ಪಂಚತಾರಾ ಹೋಟೆಲ್‌ಗಳಲ್ಲಿ (Hotels) ಒಂದು ರಾತ್ರಿ ಉಳಿಯಲು 6,500-10,000 ರೂ. ಇರುವ ಬೆಲೆ ಅ.13ರಿಂದ 16ರ ನಡುವೆ ಬರೋಬ್ಬರಿ 50 ಸಾವಿರದಿಂದ 1 ಲಕ್ಷ ರೂ. ವರೆಗೂ ಏರಿಕೆಯಾಗಿದೆ. ಬೆಲೆ ಗಗನಕ್ಕೇರಿದ್ದರೂ ನಗರದ ಹೋಟೆಲ್‌ಗಳು ಶೇ. 80 ರಷ್ಟು ಮುಂಗಡ ಬುಕಿಂಗ್ ಆಗಿವೆ ಎನ್ನಲಾಗಿದೆ.

    ಹೌದು. ವಿಶ್ವಕಪ್‌ ವೇಳಾಪಟ್ಟಿ ಬಿಡುಗಡೆಯಾಗಿದ್ದು, ಅಕ್ಟೋಬರ್‌ 15 ರಂದು ಭಾರತ-ಪಾಕಿಸ್ತಾನ ತಂಡಗಳ ರಣರೋಚಕ ಪಂದ್ಯ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಕ್ರಿಕೆಟ್‌ ಅಭಿಮಾನಿಗಳು ಮುಂಚಿತವಾಗಿಯೇ ಕ್ರೀಡಾಂಗಣಕ್ಕೆ ಹತ್ತಿರದ ಹೋಟೆಲ್‌ಗಳಲ್ಲಿ (Ahmedabad Hotels) ರೂಮ್‌ಗಳನ್ನ ಬುಕಿಂಗ್‌ ಮಾಡೋಕೆ ಶುರು ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ರೂಮ್‌ ಬುಕಿಂಗ್‌ ಬೆಲೆ ಸಾಮಾನ್ಯ ಅವಧಿಗಿಂತ ಸುಮಾರು 10 ಪಟ್ಟು ಹೆಚ್ಚಾಗಿದೆ.  ಇದನ್ನೂ ಓದಿ: ICC ODI WorldCup: ಈ ನಾಲ್ಕು ತಂಡಗಳು ಸೆಮಿಫೈನಲ್‌ ಪ್ರವೇಶಿಲಿವೆ – ಸೆಹ್ವಾಗ್‌ ಭವಿಷ್ಯ

    ಸಾಮಾನ್ಯ ದಿನಗಳಲ್ಲಿ ಐಷಾರಾಮಿ ಹೋಟೆಲ್‌ಗಳಲ್ಲಿ ರೂಮ್‌ ಬಾಡಿಗೆ 5 ರಿಂದ 8 ಸಾವಿರ ವರೆಗೆ ಇರುತ್ತಿತ್ತು. ಆದ್ರೆ ಅಕ್ಟೋಬರ್‌ 15ರ ವೇಳೆ 40 ಸಾವಿರದಿಂದ 1 ಲಕ್ಷಕ್ಕೆ ಏರಿಕೆಯಾಗಿದೆ. ಇದನ್ನೂ ಓದಿ: ICC ODI World Cup: ಪಾಕ್ ಪಂದ್ಯಗಳಿಗೆ ಬಿಗಿ ಭದ್ರತೆ ನೀಡ್ತೇವೆ – ಬಂಗಾಳ ಕ್ರಿಕೆಟ್‌

    ಹೋಟೆಲ್‌ ಬುಕಿಂಗ್‌ ಪೋರ್ಟಲ್‌ ಪ್ರಕಾರ, ಐಟಿಸಿ ಹೋಟೆಲ್‌ಗಳಲ್ಲಿ ಒಂದು ಡೀಲಕ್ಸ್‌ ರೂಮಿನ ಬಾಡಿಗೆ 5,699 ರೂ. ಇದ್ದರೆ, ಅಕ್ಟೋಬರ್‌ 15 ರಂದು ಒಂದು ದಿನಕ್ಕೆ 71,999 ರೂ.ಗೆ ತಲುಪಿದೆ. ಇನ್ನೂ ದಿನಕ್ಕೆ 8 ಸಾವಿರ ರೂ. ಬಾಡಿಗೆ ಪಡೆಯುತ್ತಿದ್ದ ಅಹಮದಾಬಾದ್‌ನ ನವೋದಯ ಹೋಟೆಲ್‌ ಅ.15ಕ್ಕೆ 90,679 ರೂ. ನಿಗದಿಮಾಡಿದೆ. ಪ್ಲಾಜಾ ಹೋಟೆಲ್‌ಗಳಲ್ಲಿ ದಿನದ ಬಾಡಿಗೆ 36,180 ರೂ.ಗೆ ಹೆಚ್ಚಿದರೆ, ಕೇವಲ 3 ಸಾವಿರ ವಿಧಿಸುತ್ತಿದ್ದ ಜನಸ್ನೇಹಿ ಹೋಟೆಲ್‌ಗಳಲ್ಲಿ ದಿನದ ಬಾಡಿಗೆ 27,233ಕ್ಕೆ ಹೆಚ್ಚಿದೆ. ಹೋಟೆಲ್‌ಗಳ ಬೆಲೆ ದುಬಾರಿಯಾಗಿದ್ದರೂ ಶೇ.80ರಷ್ಟು ಹೋಟೆಲ್‌ಗಳು ಈಗಾಗಲೇ ಬುಕಿಂಗ್‌ ಆಗಿವೆ. ಐಟಿಸಿ ನರ್ಮದಾ, ಕೋರ್ಟ್‌ಯಾರ್ಡ್‌ನಲ್ಲಿ ಅಕ್ಟೋಬರ್ 15ಕ್ಕೆ ಕೊಠಡಿಗಳು ಬುಕಿಂಗ್‌ ಫುಲ್‌ ಆಗಿವೆ ಎಂದು ಮೂಲಗಳು ತಿಳಿಸಿವೆ.

    ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣ ಒಂದು ಲಕ್ಷಕ್ಕೂ ಅಧಿಕ ಮಂದಿ ಸೇರುವ ಸಾಮರ್ಥ್ಯ ಒಳಗೊಂಡಿದ್ದು, ವಿಶ್ವಕಪ್‌ನ ಐದು ಪಂದ್ಯಗಳು ನಡೆಯಲಿವೆ. ಇಂಗ್ಲೆಂಡ್‌-ನ್ಯೂಜಿಲೆಂಡ್‌ ನಡುವಿನ ಆರಂಭಿಕ ಪಂದ್ಯ, ಅಕ್ಟೋಬರ್‌ 15ರಂದು ನಡೆಯಲಿರುವ ಭಾರತ ಮತ್ತು ಪಾಕಿಸ್ತಾನ ಪಂದ್ಯ ಹಾಗೂ ಫೈನಲ್‌ ಪಂದ್ಯ ಸೇರಿ ಒಟ್ಟು 5 ಪಂದ್ಯಗಳು ಇಲ್ಲಿ ನಡೆಯಲಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮೋದಿ ಕ್ರೀಡಾಂಗಣದಲ್ಲಿ ಇಂಡೋ ಪಾಕ್ ಕದನ – ರಣರೋಚಕ ಪಂದ್ಯಕ್ಕಾಗಿ ಕಾಯ್ತಿದ್ದಾರೆ ಫ್ಯಾನ್ಸ್

    ಮೋದಿ ಕ್ರೀಡಾಂಗಣದಲ್ಲಿ ಇಂಡೋ ಪಾಕ್ ಕದನ – ರಣರೋಚಕ ಪಂದ್ಯಕ್ಕಾಗಿ ಕಾಯ್ತಿದ್ದಾರೆ ಫ್ಯಾನ್ಸ್

    – ಬಿಸಿಸಿಐ ಕರಡು ವೇಳಾಪಟ್ಟಿ ಪ್ರಕಟ

    ಮುಂಬೈ: ಅಕ್ಟೋಬರ್‌ನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ (ODI World Cup) ಟೂರ್ನಿಗೆ BCCI ಸಿದ್ಧಪಡಿಸಿದ ಕರಡು ವೇಳಾಪಟ್ಟಿಯನ್ನು ICCಯೊಂದಿಗೆ ಹಂಚಿಕೊಂಡಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಮುಂದಿನ ಅಕ್ಟೋಬರ್ 15 ರಂದು ಭಾರತ ಮತ್ತು ಪಾಕಿಸ್ತಾನ ತಂಡಗಳು ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಮತ್ತೊಮ್ಮೆ ಸೆಣಸಲಿವೆ.

    ಟಿ20 ಏಷ್ಯಾಕಪ್ ಹಾಗೂ ಟಿ20 ವಿಶ್ವಕಪ್ ಟೂರ್ನಿಗಳ ಬಳಿಕ ಮತ್ತೊಮ್ಮೆ ಭಾರತ-ಪಾಕಿಸ್ತಾನದ (Ind vs Pak) ರಣರೋಚಕ ಪಂದ್ಯವನ್ನ ಕಣ್ತುಂಬಿಕೊಳ್ಳಲು ಅಭಿಮಾನಿಗಳು ಹಾತೊರೆಯುತ್ತಿದ್ದಾರೆ. ಇದನ್ನೂ ಓದಿ: ಇಷ್ಟಕ್ಕೆ ಮುಗಿದಿಲ್ಲ – ವಿಶ್ವಟೆಸ್ಟ್ ಚಾಂಪಿಯನ್ ಶಿಪ್ ಸೋಲಿನ ಬಳಿಕ ಗಿಲ್ ಖಡಕ್ ರಿಯಾಕ್ಷನ್

    ಬಿಸಿಸಿಐ ಕರಡು ವೇಳಾಪಟ್ಟಿ ಪ್ರಕಾರ, ಅಕ್ಟೋಬರ್ 8ರಂದು ಚೆನ್ನೈನಲ್ಲಿ ಆಸ್ಟ್ರೇಲಿಯಾ ವಿರುದ್ಧ ಕಣಕ್ಕಿಳಿಯುವ ಮೂಲಕ ಭಾರತ ತನ್ನ ವಿಶ್ವಕಪ್ ಅಭಿಯಾನ ಆರಂಭಿಸಲಿದೆ. ಅಕ್ಟೋಬರ್ 15 ರಂದು ಪಾಕ್ ವಿರುದ್ಧ ಅಹಮದಾಬಾದ್‌ನ ಮೋದಿ ಸ್ಟೇಡಿಯಂನಲ್ಲಿ (Narendra Modi Stadium) ಕಣಕ್ಕಿಳಿದು ಅಬ್ಬರಿಸಲಿದೆ. ಮುಂದಿನ ವಾರದಲ್ಲೇ ಅಂತಿಮ ವೇಳಾಪಟ್ಟಿ ಪ್ರಕಟವಾಗಲಿದ್ದು, ಅದಕ್ಕೂ ಮುನ್ನ ಭಾಗವಹಿಸುವ ದೇಶಗಳಿಗೆ ಪ್ರತಿಕ್ರಿಯೆಗಾಗಿ ಕಳುಹಿಸಲಾಗಿದೆ.

    ಅಕ್ಟೋಬರ್ 5 ರಿಂದ ಏಕದಿನ ವಿಶ್ವಕಪ್ ಟೂರ್ನಿ (ODI World Cup 2023) ಆರಂಭವಾಗಲಿದ್ದು, ಅಹಮದಾಬಾದ್‌ನಲ್ಲಿ ಹಾಲಿ ಚಾಂಪಿಯನ್ಸ್ ಇಂಗ್ಲೆಂಡ್ ಹಾಗೂ ಕಳೆದ ಆವೃತ್ತಿಯಲ್ಲಿ ರನ್ನರ್ ಅಪ್ ಪ್ರಶಸ್ತಿ ಪಡೆದ ನ್ಯೂಜಿಲೆಂಡ್ ತಂಡಗಳ ನಡುವೆ ಮೊದಲ ಪಂದ್ಯ ನಡೆಯಲಿದೆ. ನವೆಂಬರ್ 19ರಂದು ಫೈನಲ್ ಪಂದ್ಯಕ್ಕೂ ಮೋದಿ ಕ್ರೀಡಾಂಗಣ ಆತಿಥ್ಯ ವಹಿಸಲಿದೆ. ಆದರೆ ನವೆಂಬರ್ 15 ಮತ್ತು 16 ರಂದು ನಡೆಯಲಿರುವ ಸೆಮಿಫೈನಲ್ ಪಂದ್ಯಗಳ ಸ್ಥಳಗಳನ್ನೂ ಇನ್ನೂ ನಿರ್ಧರಿಸಲಾಗಿಲ್ಲ.

    ಕೊನೆಯದ್ದಾಗಿ 2011ರಲ್ಲಿ ಸ್ವದೇಶದಲ್ಲಿ ವಿಶ್ವಕಪ್ ಗೆದ್ದ ಅತಿಥೇಯ ಭಾರತ ಕೋಲ್ಕತ್ತಾ, ಮುಂಬೈ, ದೆಹಲಿ ಹಾಗೂ ಬೆಂಗಳೂರು ಸೇರಿದಂತೆ 9 ನಗರಗಳಲ್ಲಿ ಲೀಗ್ ಹಂತದ ಪಂದ್ಯಗಳನ್ನ ಆಡಲಿದೆ. ಪಾಕಿಸ್ತಾನ ಭಾರತದ 5 ನಗರಗಳಲ್ಲಿ ಲೀಗ್ ಪಂದ್ಯಗಳನ್ನಾಡಲಿದೆ. ಈ ನಡುವೆ ಅಕ್ಟೋಬರ್ 15 ರಂದು ಭಾರತ ಮತ್ತು ಪಾಕಿಸ್ತಾನ ತಂಡಗಳು ಮೋದಿ ಅಂಗಳದಲ್ಲಿ ಮುಖಾಮುಖಿಯಾಗಲಿವೆ. ಇದನ್ನೂ ಓದಿ: WTC: ಭಾರತಕ್ಕೆ ಹೀನಾಯ ಸೋಲು – 209 ರನ್‌ಗಳ ಭರ್ಜರಿ ಜಯ, ಆಸೀಸ್‌ಗೆ ಚೊಚ್ಚಲ ಟ್ರೋಫಿ

    ಟೂರ್ನಿಯಲ್ಲಿ ಒಟ್ಟು 10 ತಂಡಗಳು ಭಾಗವಹಿಸಲಿವೆ. ಈ ಪೈಕಿ 8 ತಂಡಗಳನ್ನು ಈಗಾಗಲೇ ನಿರ್ಧರಿಸಲಾಗಿದ್ದು, ಇನ್ನೆರಡು ತಂಡಗಳು ಅರ್ಹತಾ ಸುತ್ತಿನ ಮೂಲಕ ಮುಖ್ಯ ಟೂರ್ನಿಗೆ ಅರ್ಹತೆ ಪಡೆಯಲಿವೆ.

    ಯಾವ ಸ್ಥಳದಲ್ಲಿ ಆಯೋಜನೆ?
    ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಕ್ರಿಕೆಟ್‌ಗೆ ಬಿಸಿಸಿಐ 12 ಕ್ರೀಡಾಂಗಣವನ್ನು ಅಂತಿಮಗೊಳಿಸಿದೆ. ಅದರಂತೆ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣ, ಬೆಂಗಳೂರು, ಚೆನ್ನೈ, ದೆಹಲಿ, ಧರ್ಮಶಾಲಾ, ಗುವಾಹಟಿ, ಹೈದರಾಬಾದ್, ಕೋಲ್ಕತ್ತಾ, ಲಕ್ನೋ, ಇಂದೋರ್, ರಾಜ್‌ಕೋಟ್ ಮತ್ತು ಮುಂಬೈನಲ್ಲಿ ಪಂದ್ಯ ನಡೆಯಲಿದೆ.

    ಟೀಂ ಇಂಡಿಯಾದ ತಾತ್ಕಾಲಿಕ ವೇಳಾಪಟ್ಟಿ:
    ಅಕ್ಟೋಬರ್‌ 8: ಭಾರತ Vs ಆಸ್ಟ್ರೇಲಿಯಾ – ಸ್ಥಳ: ಚೆನ್ನೈ
    ಅಕ್ಟೋಬರ್‌ 11: ಭಾರತ Vs ಅಫ್ಘಾನಿಸ್ತಾನ – ಸ್ಥಳ: ನವದೆಹಲಿ
    ಅಕ್ಟೋಬರ್‌ 15: ಭಾರತ Vs ಪಾಕಿಸ್ತಾನ – ಸ್ಥಳ: ಅಹಮದಾಬಾದ್‌
    ಅಕ್ಟೋಬರ್‌ 19: ಭಾರತ Vs ಬಾಂಗ್ಲಾದೇಶ – ಸ್ಥಳ: ಪುಣೆ
    ಅಕ್ಟೋಬರ್‌ 22: ಭಾರತ Vs ನ್ಯೂಜಿಲೆಂಡ್‌ – ಸ್ಥಳ: ಧರ್ಮಶಾಲಾ
    ಅಕ್ಟೋಬರ್‌ 29: ಭಾರತ Vs ‌ಇಂಗ್ಲೆಂಡ್‌ – ಸ್ಥಳ: ಲಕ್ನೋ
    ನವೆಂಬರ್‌ 2: ಭಾರತ Vs ಕ್ವಾಲಿಫೈಯರ್ – ಸ್ಥಳ: ಮುಂಬೈ
    ನವೆಂಬರ್‌ 5: ಭಾರತ Vs ದಕ್ಷಿಣ ಆಫ್ರಿಕಾ – ಸ್ಥಳ: ಕೋಲ್ಕತ್ತಾ
    ನಂವೆಬರ್‌ 11: ಭಾರತ Vs ಕ್ವಾಲಿಫೈಯರ್‌ – ಸ್ಥಳ: ಬೆಂಗಳೂರು