Tag: Narenndra Modi

  • ನಾಳೆಯಿಂದ ಬೆಂಗಳೂರಿನ ಗಾರ್ಡನ್‌ ಟರ್ಮಿನಲ್‌ನಿಂದ ಎಲ್ಲಾ ಅಂತಾರಾಷ್ಟ್ರೀಯ ವಿಮಾನಗಳ ಟೇಕಾಫ್‌, ಲ್ಯಾಂಡಿಂಗ್‌

    ನಾಳೆಯಿಂದ ಬೆಂಗಳೂರಿನ ಗಾರ್ಡನ್‌ ಟರ್ಮಿನಲ್‌ನಿಂದ ಎಲ್ಲಾ ಅಂತಾರಾಷ್ಟ್ರೀಯ ವಿಮಾನಗಳ ಟೇಕಾಫ್‌, ಲ್ಯಾಂಡಿಂಗ್‌

    ಬೆಂಗಳೂರು: ಮಂಗಳವಾರದಿಂದ ಎಲ್ಲಾ ಅಂತಾರಾಷ್ಟ್ರೀಯ ವಿಮಾನಗಳು (International Flight) ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದ (Kempegowda Airport) ಟರ್ಮಿನಲ್‌ 2ನಿಂದ (Terminal-2) ಟೇಕಾಫ್‌ ಮತ್ತು ಲ್ಯಾಂಡಿಂಗ್‌ ಆಗಲಿದೆ. ಅಂತಾರಾಷ್ಟ್ರೀಯ ವಿಮಾನಗಳ ಜೊತೆ ದೇಶೀಯ ವಿಮಾನಗಳು ಸಹ ಈ ಟರ್ಮಿನಲ್‌ನಿಂದಲೇ ಕಾರ್ಯಾಚರಣೆ ನಡೆಸಲಿವೆ.

    ಈ ಸಂಬಂಧ ಬಿಎಲ್‌ಆರ್‌ ಏರ್‌ಪೋರ್ಟ್‌ ಟ್ವೀಟ್‌ ಮಾಡಿದ್ದು, ಸೆ.12ರ ಬೆಳಗ್ಗೆ 10:45 ರಿಂದ ಎಲ್ಲಾ ಅಂತಾರಾಷ್ಟ್ರೀಯ ವಿಮಾನಗಳ ಜೊತೆ ದೇಶೀಯ ಸೇವೆ ನೀಡುವ ಏರ್‌ ಏಷ್ಯಾ, ಏರ್‌ ಇಂಡಿಯಾ, ಸ್ಟಾರ್‌ ಏರ್‌, ವಿಸ್ತಾರಾ ಕಂಪನಿಗಳ ವಿಮಾನ ಕಾರ್ಯಾಚರಣೆ ಟರ್ಮಿನಲ್‌ 2 ನಿಂದ ಆಗಲಿದೆ. ಆಕಾಸಾ ಏರ್‌, ಅಲೈಯನ್ಸ್‌ ಏರ್‌, ಇಂಡಿಗೋ, ಸ್ಪೈಸ್‌ ಜೆಟ್‌ ವಿಮಾನಗಳು ಟರ್ಮಿನಲ್‌ 1 ರಲ್ಲಿ ಟೇಕಾಫ್‌, ಲ್ಯಾಂಡಿಂಗ್‌ ಆಗಲಿದೆ ಎಂದು ತಿಳಿಸಿದೆ.

    ನಿಗದಿ ಪ್ರಕಾರ ಆಗಸ್ಟ್‌ 31 ರಿಂದಲೇ ಟರ್ಮಿನಲ್‌ 2 ರಿಂದ ಅಂತರರಾಷ್ಟ್ರೀಯ ವಿಮಾನಗಳ ಕಾರ್ಯಾಚರಣೆ ಆರಂಭವಾಗಬೇಕಿತ್ತು. ಆದರೆ ತಾಂತ್ರಿಕ ಕಾರಣ ಮತ್ತು ಪ್ರಯಾಣಿಕರ ಸುರಕ್ಷತಾ ದೃಷ್ಟಿಯಿಂದ ಕೊನೆ ಕ್ಷಣದಲ್ಲಿ ವಿಮಾನ ನಿಲ್ದಾಣದ ನಿರ್ವಹಣಾ ಮಂಡಳಿ ಕಾರ್ಯಾಚರಣಾ ದಿನಾಂಕವನ್ನು ಮುಂದೂಡಿತ್ತು. ಇದನ್ನೂ ಓದಿ: ಇಂಡಿಯಾ ಪಾಕ್ ಪಂದ್ಯಕ್ಕೆ ಮಳೆ ಕಾಟ – ಅಲ್ಲಾ ನಮ್ಮನ್ನು ಕಾಪಾಡಿದ ಎಂದ ಅಖ್ತರ್

    ಕಳೆದ ವರ್ಷದ ನವೆಂಬರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಸುಮಾರು 5,000 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಬೆಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್‌-2 ಉದ್ಘಾಟಿಸಿದ್ದರು. ಈ ವರ್ಷದ ಜನವರಿ 15 ದಿಂದ ದೇಶೀಯ ಕಾರ್ಯಾಚರಣೆಯನ್ನು ಪ್ರಾರಂಭಿಸಿತ್ತು.

    ಟರ್ಮಿನಲ್-2 ಅನ್ನು ಗಾರ್ಡನ್ ಟರ್ಮಿನಲ್(Garden Terminal) ಎಂದು ಕರೆಯಲಾಗುತ್ತದೆ. ಏಕೆಂದರೆ ಇದು ದೊಡ್ಡ ಕೃತಕ ಒಳಾಂಗಣ ಉದ್ಯಾನವನ್ನು ಹೊಂದಿದೆ. ಬೆಂಗಳೂರನ್ನು ಭಾರತದ ʼಗಾರ್ಡನ್‌ ಸಿಟಿʼಎಂದು ಕರೆಯಲಾದ ಬಿರುದನ್ನು ಎತ್ತಿಹಿಡಿಯಲಿದೆ ಎಂದೇ ವ್ಯಾಖ್ಯಾನಿಸಲಾಗಿದೆ. ಪ್ರಯಾಣಿಕರಿಗೆ ಉದ್ಯಾನವನದ ಅನುಭವ ನೀಡಲು ಕೃತಕ ಮರಗಿಡಗಳು, ಹಕ್ಕಿಗಳ ಕಲರವ-ಚಿಲಿಪಿಲಿ ನಾದವನ್ನು ಇಲ್ಲಿ ಕೇಳಬಹುದು.

     

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನ್ಯಾಯ ಬೇಕು ಮೋದಿ – ಪ್ರಧಾನಿಗೆ 12 ಪ್ರಶ್ನೆ ಕೇಳಿದ ಸಿದ್ದರಾಮಯ್ಯ

    ನ್ಯಾಯ ಬೇಕು ಮೋದಿ – ಪ್ರಧಾನಿಗೆ 12 ಪ್ರಶ್ನೆ ಕೇಳಿದ ಸಿದ್ದರಾಮಯ್ಯ

    ಬೆಂಗಳೂರು: ಕಲಬುರಗಿ ಹಾಗೂ ಯಾದಗಿರಿಗೆ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲು ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) 12 ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ. ಪಿಎಸ್‌ಐ ಹಗರಣ ಸೇರಿದಂತೆ ರಾಜ್ಯ ಸರ್ಕಾರದ ವಿರುದ್ಧದ ಭ್ರಷ್ಟಾಚಾರ ಆರೋಪಗಳನ್ನು ಮುಂದಿಟ್ಟುಕೊಂಡು ಪ್ರಧಾನಿ ಮೋದಿಗೆ ನ್ಯಾಯ ಬೇಕು ಮೋದಿ ಎಂದು ಪೋಸ್ಟರ್ ಗಳನ್ನು ಪ್ರಕಟ ಮಾಡಿದ್ದಾರೆ.

    1. ಪಿಎಸ್‌ಐ ನೇಮಕಾತಿ ಹಗರಣದಿಂದ, ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಹಗರಣವೂ ಸೇರಿ ಮೊನ್ನೆ ನಡೆದ PWD ಸಹಾಯಕ ಎಂಜಿನಿಯರ್ ನೇಮಕಾತಿ ಹಗರಣದಲ್ಲಿ ಕೆಲಸದಿಂದ ವಂಚಿತರಾದ ಎಲ್ಲಾ ಅರ್ಹರಿಗೆ ನ್ಯಾಯ ಕೊಡಿಸಿ ಮೋದಿಯವರೇ?

    2. ಕೆ.ಆರ್ ಪುರಂನ ಇನ್ಸ್ಪೆಕ್ಟರ್ ನಂದೀಶ್ 80 ಲಕ್ಷ ಲಂಚ ಕೊಟ್ಟು ವರ್ಗಾವಣೆ ಪಡೆದು ಬಂದ ಕಾರಣಕ್ಕೆ ಒತ್ತಡದಿಂದ ಸತ್ತಿದ್ದಾರೆ ಎಂದು ಸ್ವತಃ ಬಿಜೆಪಿ ಸಚಿವ ಎಂಟಿಬಿ ನಾಗರಾಜ್ ಹೇಳಿದ್ದಾರೆ. ಇತರರಿಗೆ ರಕ್ಷಣೆ ನೀಡುವ ಪೊಲೀಸರಿಗೇ ಹೀಗಾದರೆ ಸಾಮಾನ್ಯರ ಗತಿ ಏನು ಮೋದಿ ಅವರೇ?

    3. ಕೋವಿಡ್ ಸಂದರ್ಭದಲ್ಲಿ ಅಗತ್ಯ ಸಲಕರಣೆ ಪೂರೈಕೆ ಮಾಡಿದ್ದ ಗುತ್ತಿಗೆದಾರ ಬಸವರಾಜ ಅಮರಗೋಳ ಅವರಿಗೆ ರಾಜ್ಯ ಸರ್ಕಾರ ಬಿಲ್‌ ಹಣ ನೀಡದೆ ಇರುವುದರಿಂದ ಬೇಸತ್ತು ದಯಾಮರಣ ಕೋರಿ ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದಾರೆ. ಈತನಿಗೆ ನ್ಯಾಯ ಕೊಡಿಸಿ, ಪ್ರಾಣ ಉಳಿಸಬೇಕಾದವರು ನೀವಲ್ಲವೇ ಮೋದಿ ಅವರೇ?

    4. ಪರೇಶ್ ಮೇಸ್ತಾನ ಸಾವನ್ನೂ ತನ್ನ ಭರ್ಜರಿ ರಾಜಕೀಯ ಲಾಭಕ್ಕೆ ಬಳಸಿಕೊಂಡಿದ್ದು ಬಿಜೆಪಿ. ಈಗ ಆತನ ವಯೋವೃದ್ಧ ತಂದೆ-ತಾಯಿ ಕುಟುಂಬಕ್ಕೆ ನ್ಯಾಯ ಬೇಕು. ಇದನ್ನೂ ಓದಿ: ಹಳೇ ಮೈಸೂರಿನಲ್ಲಿ ಅಮಿತ್ ಶಾ ಸೂತ್ರ – ಕಲ್ಯಾಣ ಕರ್ನಾಟಕದಲ್ಲಿ ಮೋದಿ ಮೋಡಿ

    5. ಕೊರೊನಾ ಕಾಲದಲ್ಲಿ ಸ್ಯಾನಿಟೈಸರ್‌, ಮಾಸ್ಕ್ ನಿಂದ ಹಿಡಿದು ವೆಂಟಿಲೇಟರ್ ವರೆಗೆ ಎಲ್ಲದರಲ್ಲೂ ರಾಜ್ಯ ಸರ್ಕಾರ ಲೂಟಿ ಮಾಡಿದ್ದರಿಂದ ಕನಿಷ್ಠ 3,000 ಕೋಟಿ ರೂ. ಅವ್ಯವಹಾರ ನಡೆದಿದೆ. ಕೊರೊನಾದಿಂದ ಹಾದಿಯಲ್ಲಿ ಬೀದಿಯಲ್ಲಿ ಸತ್ತವರ ಆತ್ಮಗಳು ನ್ಯಾಯಕ್ಕಾಗಿ ನಿಮ್ಮ ಹಾದಿಯನ್ನೇ ಕಾಯುತ್ತಿವೆ ಮೋದಿ ಅವರೇ.

    6. ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳ ಹೊಣೆಗೇಡಿತನದಿಂದ ನಾಡಿಗೆ ಬೆಳಕು ಕೊಟ್ಟ ಲಕ್ಷಾಂತರ ಮಂದಿಯ ಬಾಳು ಕತ್ತಲಾಗಿದೆ. ಶರಾವತಿ ಸಂತ್ರಸ್ಥ ಕುಟುಂಬಗಳ ಸಮಸ್ಯೆಗೆ ಸಂದಿಸಿ ಪ್ರಧಾನಿಗಳೇ?

    7. ಕನ್ನಡ ನಾಡಿನ ಹೆಮ್ಮೆಯ ನಂದಿನಿ ಸಂಸ್ಥೆ ಮೇಲೆ ಗುಜರಾತಿನ ಅಮುಲ್ ಕಣ್ಣು ಬಿದ್ದಿದೆ. ನಮ್ಮ ರೈತರ ಅನ್ನದ ತಟ್ಟೆಗೆ ಮಣ್ಣು ಹಾಕುವ ವ್ಯಾಪಾರಿ ಬುದ್ದಿ ಸಾಕು ಮಾಡಿ ಪ್ರಧಾನಿಗಳೇ. ಕನ್ನಡ ನಾಡಿನ ಹೆಮ್ಮೆಯ ನಂದಿನಿ ಸಂಸ್ಥೆ ಮೇಲೆ ಗುಜರಾತಿನ ಅಮುಲ್ ಕಣ್ಣು ಬಿದ್ದಿದೆ. ನಮ್ಮ ರೈತರ ಅನ್ನದ ತಟ್ಟೆಗೆ ಮಣ್ಣು ಹಾಕುವ ವ್ಯಾಪಾರಿ ಬುದ್ದಿ ಸಾಕು ಮಾಡಿ ಪ್ರಧಾನಿಗಳೇ.

    8. ಕಾಲುಬಾಯಿರೋಗ ಮತ್ತು ಚರ್ಮಗಂಟು ರೋಗದಿಂದ ಒಂದೂವರೆ ಲಕ್ಷದಷ್ಟು ಜಾನವಾರುಗಳು ಮರಣಹೊಂದಿವೆ. ರೋಗಕ್ಕೆ ಲಸಿಕೆ ಮತ್ತು ಜೀವನಾಧಾರದ ರಾಸುಗಳನ್ನು ಕಳೆದುಕೊಂಡ ರೈತ ಕುಟುಂಬಗಳಿಗೆ ಪರಿಹಾರ ಕೊಡಿಸಿ ಪ್ರಧಾನ ಮಂತ್ರಿಗಳೇ.

    9. ರಸ್ತೆ ಗುಂಡಿಗಳಿಂದ ಸಂಭವಿಸಿದ ಅಪಘಾತದಲ್ಲಿ ಪೋಷಕರನ್ನು ಕಳೆದುಕೊಂಡ ಹತ್ತಾರು ಕುಟುಂಬಗಳ ಮಕ್ಕಳಿಗೆ ಹಾಗೂ ಮಕ್ಕಳನ್ನು ಕಳೆದುಕೊಂಡ ಪೋಷಕರಿಗೆ ನ್ಯಾಯ ಒದಗಿಸಿ. ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸಿ ಪ್ರಧಾನಿಗಳೇ.

    10. 40% ಕಮಿಷನ್ ಕೊಟ್ಟಿಲ್ಲ ಎಂಬ ಕಾರಣಕ್ಕೆ ಕಾಮಗಾರಿಯ ಹಣ ನೀಡದೆ ಸತಾಯಿಸಿದ ನಿಮ್ಮ ಬಿಜೆಪಿ ಸರ್ಕಾರದ ಹಣದಾಸೆಗೆ ಗುತ್ತಿಗೆದಾರ ಪ್ರಸಾದ್‌ ಬಲಿಯಾದ. ಈ ಸಾವಿನ ಸರಣಿಯನ್ನು ಕೊನೆಗಾಣಿಸುವವರು ಯಾರು ಮೋದಿ ಅವರೇ?

    11. ಸಚಿವರಾಗಿದ್ದ ಈಶ್ವರಪ್ಪ ಅವರಿಗೆ 40% ಕಮಿಷನ್ ನೀಡಲಾಗದೆ ಗುತ್ತಿಗೆದಾರ ಸಂತೋಷ್ ಪಾಟೀಲ ಆತ್ಮಹತ್ಯೆಗೆ ಶರಣಾದರು. ಬದುಕಿದ್ದಾಗಲಂತೂ ನೀವು ಆತನಿಗೆ ನ್ಯಾಯ ಕೊಡಿಸಿಲ್ಲ, ಸತ್ತ ಮೇಲಾದರೂ ನ್ಯಾಯ ಸಿಗುವುದು ಬೇಡವೇ ಮೋದಿ ಅವರೇ?

    12. ಮೆಟ್ರೋ ಪಿಲ್ಲರ್ ಕುಸಿತದಿಂದ ಮೃತಪಟ್ಟ ಸಾಫ್ಟ್‌ವೇರ್‌ ಎಂಜಿನಿಯರ್ ತೇಜಸ್ವಿನಿ ಹಾಗೂ ಇವರ ಎರಡು ವರ್ಷದ ಕಂದಮ್ಮ ವಿಹಾನ್ ಸಾವಿಗೆ ಹೊಣೆ ಯಾರು? ಮುಖ್ಯ ಎಂಜಿನಿಯರ್ ವಿರುದ್ಧ ಕ್ರಮ ಯಾವಾಗ ಪ್ರಧಾನಿಗಳೇ?

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k