Tag: Naseeruddin Shah

  • ನಟ ನಾಸಿರುದ್ಧೀನ್ ಶಾ ಭಯೋತ್ಪಾದಕರ ಬೆಂಬಲಿಗ : ಕಾಶ್ಮೀರ್ ಫೈಲ್ಸ್ ನಿರ್ದೇಶಕನ ಕಟುನುಡಿ

    ನಟ ನಾಸಿರುದ್ಧೀನ್ ಶಾ ಭಯೋತ್ಪಾದಕರ ಬೆಂಬಲಿಗ : ಕಾಶ್ಮೀರ್ ಫೈಲ್ಸ್ ನಿರ್ದೇಶಕನ ಕಟುನುಡಿ

    ಬಾಲಿವುಡ್ ಖ್ಯಾತನಟ ನಾಸಿರುದ್ಧೀನ್ ಶಾ ವಿರುದ್ಧ ದಿ ಕಾಶ್ಮೀರ್ ಫೈಲ್ಸ್ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ (Vivek Agnihotri) ಕಟುನುಡಿಗಳನ್ನು ಆಡಿದ್ದಾರೆ. ಹಿರಿಯ ನಟನನ್ನು ಅಗ್ನಿಹೋತ್ರಿ ಭಯೋತ್ಪಾದಕರ ಬೆಂಬಲಿಗರಿಗೆ ಹೋಲಿಸಿದ್ದಾರೆ.  ತಮ್ಮ ಸಿನಿಮಾಗಳ ಬಗ್ಗೆ ನಾಸಿರುದ್ಧೀನ್ ಆಡಿದ ಮಾತುಗಳಿಗೆ ತಿರುಗೇಟು ನೀಡಿದ್ದಾರೆ.

    ಸನ್ನಿ ಡಿಯೋಲ್ ನಟನೆಯ ‘ಗದರ್ 2’ (Gadar 2) ಸಿನಿಮಾ 500 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡುವ ಮೂಲಕ ಜನಮನ್ನಣೆ ಗಳಿಸಿದೆ. ಹೀಗಿರುವಾಗ ಗದರ್ 2 ಮತ್ತು ದಿ ಕಾಶ್ಮೀರ್ ಫೈಲ್ಸ್ (The Kashmir Files) ನಂತಹ ಯಶಸ್ಸಿ ಚಿತ್ರಗಳ ಬಗ್ಗೆ ಬಾಲಿವುಡ್‌ನ ಖ್ಯಾತ ನಟ ನಸೀರುದ್ದೀನ್ ಶಾ (Naseeruddin Shah)  ಟೀಕಿಸಿದ್ದರು. ಈ ರೀತಿಯ ಸಿನಿಮಾಗಳು ಸಮಾಜಕ್ಕೆ ಹಾನಿಕರ ಎಂದು ಮಾತನಾಡಿದ್ದರು. ಇದನ್ನೂ ಓದಿ:‘ಬ್ಯಾಡ್ ಮ್ಯಾನರ್ಸ್’ ಚಿತ್ರಕ್ಕೆ ಮಾಸ್ ಹಾಡು ಬರೆದ ಜಯಂತ್ ಕಾಯ್ಕಿಣಿ

    ಇತ್ತೀಚಿನ ಸಂದರ್ಶನವೊಂದರಲ್ಲಿ ಸನ್ನಿ ಡಿಯೋಲ್ (Sunny Deol) ನಟನೆಯ ಗದರ್ 2 (Gadar 2) ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಅತಿಯಾದ ದೇಶಪ್ರೇಮ ಅಪಾಯಕಾರಿ. ಸಿನಿಮಾದ ಜನಪ್ರಿಯತೆ ಅನ್ನೋದು ಇದರಿಂದಲೇ ಪ್ರೇರಿತಗೊಂಡಿದೆ. ಇಂದು ನಿಮ್ಮ ದೇಶವನ್ನು ಪ್ರೀತಿಸಿದರೆ ಸಾಕಾಗುವುದಿಲ್ಲ, ಕಾಲ್ಪನಿಕ ಶತ್ರುಗಳನ್ನು ಸೃಷ್ಟಿಸಿಕೊಳ್ಳಬೇಕು. ದಿ ಕೇರಳ ಸ್ಟೋರಿ, ಗದರ್ 2 ಚಿತ್ರಗಳು ಸಾಕಷ್ಟು ಹಾನಿಕರ. ನಾನು ಆ ಚಿತ್ರಗಳನ್ನು ನೋಡಿಲ್ಲ. ಆದರೆ, ಅವು ಯಾವ ವಿಚಾರದ ಬಗ್ಗೆ ಇದೆ ಅನ್ನೋದು ಗೊತ್ತಿದೆ ಎಂದಿದ್ದಾರೆ.

    ‘ದಿ ಕೇರಳ ಸ್ಟೋರಿ’ (The Kerala Story) ಸಿನಿಮಾ ಕೂಡ ಬಾಕ್ಸ್ ಆಫೀಸ್‌ನಲ್ಲಿ ಕಮಾಯಿ ಮಾಡಿತ್ತು. ಕೇರಳದ ಯುವತಿಯರನ್ನು ಮತಾಂತರ ಮಾಡಿ ಉಗ್ರ ಸಂಘಟನೆಗೆ ಅವರನ್ನು ಸೇರಿಸುವ ಕಥೆಯನ್ನು ಈ ಸಿನಿಮಾ ಹೊಂದಿದೆ. ಇದು ನೈಜ ಘಟನೆ ಆಧಾರಿತ ಎಂದು ತಂಡ ಹೇಳಿಕೊಂಡಿತ್ತು. ಅಂದು ಚಿತ್ರವನ್ನು ನಸೀರುದ್ದೀನ್ ಶಾ (Naseeruddin Shah) ಟೀಕಿಸಿದ್ದರು.

     

    ‘ಗದರ್ 2’ ಚಿತ್ರದ ಕಥೆಯೂ ಭಾರತ – ಪಾಕಿಸ್ತಾನ ಕುರಿತು ಒಳಗೊಂಡ ಕಥೆಯಾಗಿದೆ. ಮಗನ ರಕ್ಷಣೆಗೆ ಪಾಕಿಸ್ತಾನಕ್ಕೆ ತೆರಳುವ ತಂದೆಯಾಗಿ ಸನ್ನಿ ಡಿಯೋಲ್ ಕಾಣಿಸಿಕೊಳ್ಳುತ್ತಾರೆ. ನಾಯಕಿಯಾಗಿ ಅಮೀಷಾ ಪಟೇಲ್ ನಟಿಸಿದ್ದಾರೆ. ಅಂದಹಾಗೆ ಇತ್ತೀಚಿಗೆ ಚಿತ್ರತಂಡ ಸಕ್ಸಸ್ ಪಾರ್ಟಿ ಕೂಡ ಗ್ರ್ಯಾಂಡ್ ಆಗಿ ಸೆಲೆಬ್ರೇಟ್ ಮಾಡಿತ್ತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Gadar 2 ಸನ್ನಿ ಡಿಯೋಲ್‌ ಚಿತ್ರವನ್ನು ಟೀಕಿಸಿದ ನಸೀರುದ್ದೀನ್ ಶಾ

    Gadar 2 ಸನ್ನಿ ಡಿಯೋಲ್‌ ಚಿತ್ರವನ್ನು ಟೀಕಿಸಿದ ನಸೀರುದ್ದೀನ್ ಶಾ

    ನ್ನಿ ಡಿಯೋಲ್ ನಟನೆಯ ‘ಗದರ್ 2’ (Gadar 2) ಸಿನಿಮಾ 500 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡುವ ಮೂಲಕ ಜನಮನ್ನಣೆ ಗಳಿಸಿದೆ. ಹೀಗಿರುವಾಗ ಗದರ್ 2 ಚಿತ್ರದ ಬಗ್ಗೆ ಬಾಲಿವುಡ್‌ನ ಖ್ಯಾತ ನಟ ನಸೀರುದ್ದೀನ್ ಶಾ (Naseeruddin Shah)  ಟೀಕಿಸಿದ್ದಾರೆ. ಈ ರೀತಿಯ ಸಿನಿಮಾಗಳು ಸಮಾಜಕ್ಕೆ ಹಾನಿಕರ ಎಂದು ಮಾತನಾಡಿದ್ದಾರೆ. ಇದನ್ನೂ ಓದಿ:‘ಛೂಮಂತರ್’ ಸಿನಿಮಾದ ಟೈಟಲ್ ಟ್ರ್ಯಾಕ್ ರಿಲೀಸ್ ಮಾಡಿದ ರವಿಚಂದ್ರನ್

    ಇತ್ತೀಚಿನ ಸಂದರ್ಶನವೊಂದರಲ್ಲಿ ಸನ್ನಿ ಡಿಯೋಲ್ (Sunny Deol) ನಟನೆಯ ಗದರ್ 2 (Gadar 2) ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಅತಿಯಾದ ದೇಶಪ್ರೇಮ ಅಪಾಯಕಾರಿ. ಸಿನಿಮಾದ ಜನಪ್ರಿಯತೆ ಅನ್ನೋದು ಇದರಿಂದಲೇ ಪ್ರೇರಿತಗೊಂಡಿದೆ. ಇಂದು ನಿಮ್ಮ ದೇಶವನ್ನು ಪ್ರೀತಿಸಿದರೆ ಸಾಕಾಗುವುದಿಲ್ಲ, ಕಾಲ್ಪನಿಕ ಶತ್ರುಗಳನ್ನು ಸೃಷ್ಟಿಸಿಕೊಳ್ಳಬೇಕು. ದಿ ಕೇರಳ ಸ್ಟೋರಿ, ಗದರ್ 2 ಚಿತ್ರಗಳು ಸಾಕಷ್ಟು ಹಾನಿಕರ. ನಾನು ಆ ಚಿತ್ರಗಳನ್ನು ನೋಡಿಲ್ಲ. ಆದರೆ, ಅವು ಯಾವ ವಿಚಾರದ ಬಗ್ಗೆ ಇದೆ ಅನ್ನೋದು ಗೊತ್ತಿದೆ ಎಂದಿದ್ದಾರೆ.

    ‘ದಿ ಕೇರಳ ಸ್ಟೋರಿ’ (The Kerala Story) ಸಿನಿಮಾ ಕೂಡ ಬಾಕ್ಸ್ ಆಫೀಸ್‌ನಲ್ಲಿ ಕಮಾಯಿ ಮಾಡಿತ್ತು. ಕೇರಳದ ಯುವತಿಯರನ್ನು ಮತಾಂತರ ಮಾಡಿ ಉಗ್ರ ಸಂಘಟನೆಗೆ ಅವರನ್ನು ಸೇರಿಸುವ ಕಥೆಯನ್ನು ಈ ಸಿನಿಮಾ ಹೊಂದಿದೆ. ಇದು ನೈಜ ಘಟನೆ ಆಧಾರಿತ ಎಂದು ತಂಡ ಹೇಳಿಕೊಂಡಿತ್ತು. ಅಂದು ಚಿತ್ರವನ್ನು ನಸೀರುದ್ದೀನ್ ಶಾ (Naseeruddin Shah) ಟೀಕಿಸಿದ್ದರು.

    ‘ಗದರ್ 2’ ಚಿತ್ರದ ಕಥೆಯೂ ಭಾರತ – ಪಾಕಿಸ್ತಾನ ಕುರಿತು ಒಳಗೊಂಡ ಕಥೆಯಾಗಿದೆ. ಮಗನ ರಕ್ಷಣೆಗೆ ಪಾಕಿಸ್ತಾನಕ್ಕೆ ತೆರಳುವ ತಂದೆಯಾಗಿ ಸನ್ನಿ ಡಿಯೋಲ್ ಕಾಣಿಸಿಕೊಳ್ಳುತ್ತಾರೆ. ನಾಯಕಿಯಾಗಿ ಅಮೀಷಾ ಪಟೇಲ್ ನಟಿಸಿದ್ದಾರೆ. ಅಂದಹಾಗೆ ಇತ್ತೀಚಿಗೆ ಚಿತ್ರತಂಡ ಸಕ್ಸಸ್ ಪಾರ್ಟಿ ಕೂಡ ಗ್ರ್ಯಾಂಡ್ ಆಗಿ ಸೆಲೆಬ್ರೇಟ್ ಮಾಡಿತ್ತು.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸ್ಟಾರ್ ನಟರಿಗೆ ಟಾಂಗ್ ಕೊಟ್ಟ ‘ದಿ ಕೇರಳ ಸ್ಟೋರಿ’ ನಟಿ ಅದಾ ಶರ್ಮಾ

    ಸ್ಟಾರ್ ನಟರಿಗೆ ಟಾಂಗ್ ಕೊಟ್ಟ ‘ದಿ ಕೇರಳ ಸ್ಟೋರಿ’ ನಟಿ ಅದಾ ಶರ್ಮಾ

    ಸಾಕಷ್ಟು ಸದ್ದು ಮಾಡಿ, ಬಾಕ್ಸ್ ಆಫೀಸಿನಲ್ಲಿ ದುಡ್ಡೂ ಮಾಡಿರುವ ದಿ ಕೇರಳ ಸ್ಟೋರಿ ನಟಿ ಅದಾ ಶರ್ಮಾ (Adah Sharma)  ಕೆಲ ಸ್ಟಾರ್ ನಟರಿಗೆ ತಮ್ಮ ಮಾತಿನಲ್ಲೇ ತಿವಿದಿದ್ದಾರೆ. ‘ದಿ ಕೇರಳ ಸ್ಟೋರಿ’ ಸಿನಿಮಾ ವಿರೋಧಿಸಿ ಮಾತನಾಡಿದ್ದ ಕಮಲ್ ಹಾಸನ್, ನಾಸಿರುದ್ದೀನ್ ಶಾ ಸೇರಿದಂತೆ ಹಲವರಿಗೆ ತಮ್ಮ ಮಾತಿನಲ್ಲೇ ಏಟು ನೀಡಿದ್ದಾರೆ ಅದಾ. ‘ನಮ್ಮ ಸಿನಿಮಾದ ಓಟವನ್ನು ಕಟ್ಟಿ ಹಾಕಲು ಕೆಲವು ನಟರು ಪ್ರಯತ್ನಪಟ್ಟರು. ಆದರೆ, ಅದು ಆಗಲಿಲ್ಲ. ಯಾರ ಸಾಮರ್ಥ್ಯ ಏನು ಅಂತ ಗೊತ್ತಾಗಿದೆ’ ಎಂದು ಮಾತನಾಡಿದ್ದಾರೆ.

    ಈ ಹಿಂದೆ ಬಾಲಿವುಡ್ ಖ್ಯಾತ ನಟ ನಾಸಿರುದ್ದೀನ್ ಶಾ (Naseeruddin Shah) ‘ದಿ ಕೇರಳ ಸ್ಟೋರಿಬಗ್ಗೆ ಕಾಮೆಂಟ್ ಮಾಡಿದ್ದರು. ಸಿನಿಮಾವನ್ನು ತಾವು ಯಾವತ್ತೂ ನೋಡುವುದಿಲ್ಲ ಎಂದಿದ್ದ ಅವರು,  ಸಿನಿಮಾ ಗೆದ್ದಿದೆ ಎಂದ ಮಾತ್ರಕ್ಕೆ ಅದು ಒಳ್ಳೆಯ ಗೆಲುವಲ್ಲ. ಅದೊಂದು ಕೆಟ್ಟ ಟ್ರೆಂಡಿನ ಗೆಲುವು ಎಂದು ಪ್ರತಿಕ್ರಿಯಿಸಿದ್ದರು. ದ್ವೇಷವನ್ನು ಹಂಚುತ್ತಿರುವ ಕುರಿತು ಅವರು ಕಳವಳವನ್ನು  ವ್ಯಕ್ತಪಡಿಸಿದ್ದು, ಸಮಾಜದಲ್ಲಿ ಇನ್ನೆಷ್ಟು ದಿನ ದ್ವೇಷವನ್ನು ಹಂಚುತ್ತೀರಿ ಎಂದು ಪ್ರಶ್ನೆ ಮಾಡಿದ್ದರು.

    ಬಾಕ್ಸ್ ಆಫೀಸಿನಲ್ಲಿ ಇನ್ನೂರಕ್ಕೂ ಹೆಚ್ಚು ಕೋಟಿ ರೂಪಾಯಿ ಕಲೆಕ್ಷನ್ ಮಾಡಿ, ಇನ್ನೂ ಹಲವಾರು ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿರುವ ದಿ ಕೇರಳ ಸ್ಟೋರಿ ಬಗ್ಗೆ ಹಿಂದೆ ಕಮಲ್ ಹಾಸನ್ (Kamal Haasan) ಕೂಡ ಮಾತನಾಡಿದ್ದರು. ಅದೊಂದು ಪ್ರೊಪಗಾಂಡ ಸಿನಿಮಾ ಎಂದು ಟೀಕಿಸಿದ್ದರು. ಸತ್ಯವನ್ನು ಹೇಳದೇ ಅಸತ್ಯವನ್ನೇ ತುಂಬಿರುವಂತಹ ಚಿತ್ರವದು ಎಂದು ಮಾತನಾಡಿದ್ದರು. ಇದನ್ನೂ ಓದಿ:ಗಂಡು ಮಗುವಿಗೆ ಜನ್ಮ ನೀಡಿದ ನಟಿ, ಡೆಲಿವರಿ ಆಗ್ತಿದ್ದಂತೆ ಶೂಟಿಂಗ್ ಹಾಜರಾದ ಮಮತಾ

    ಅಬುಧಾಬಿಯಲ್ಲಿ ನಡೆದ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗಿಯಾಗಿದ್ದ ಕಮಲ್ ಹಾಸನ್,   ಸಂದರ್ಭದಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ, ‘ನಾನು ದಿ ಕೇರಳ ಸ್ಟೋರಿ ಸಿನಿಮಾವನ್ನು ವಿರೋಧಿಸುತ್ತಲೇ ಬಂದಿದ್ದೇನೆ. ಅದಕ್ಕಾಗಿ ನನ್ನನ್ನೂ ವಿರೋಧಿಸಿದ್ದಾರೆ. ಸಿನಿಮಾದಲ್ಲಿ ಸತ್ಯ ಘಟನೆ ಆಧರಿಸಿದ ಸಿನಿಮಾ ಎಂದು ಹೇಳಿದರೆ ಸಾಲದು. ಅದರಲ್ಲಿ ಸತ್ಯ ಇರಬೇಕುಎಂದು ಪ್ರತಿಕ್ರಿಯಿಸಿದ್ದರು.

    ದಿ ಕೇರಳ ಸ್ಟೋರಿ’ (The Kerala Story) ಸಿನಿಮಾದ ಕಥೆಯೇ ಬೋಗಸ್ ಎಂದು ಹಲವರು ಈಗಾಗಲೇ ಹಲವರು ವಾದ ಮಾಡಿದ್ದಾರೆ. ಅವರು ಹೇಳಿದ ಪ್ರಮಾಣದಲ್ಲಿ ಮಹಿಳೆಯರು ಇಸ್ಲಾಂ ಮೂಲಭೂತವಾದಕ್ಕೆ ಸಿಲುಕಿಲ್ಲ ಎಂದು ಚರ್ಚೆ ಮಾಡಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಸಿನಿಮಾ ಟೀಮ್ ಮಾಧ್ಯಮಗೋಷ್ಠಿ ನಡೆಸಿ, ಅಲ್ಲಿಗೆ ಸಂತ್ರಸ್ತರನ್ನು ಕರೆತಂದಿದ್ದರು. ಒಬ್ಬೊಬ್ಬರ ಕಥೆಯನ್ನು ಸಿನಿಮಾ ಟೀಮ್ ಮಾಧ್ಯಮಗಳ ಮುಂದೆ ಬಿಚ್ಚಿಟ್ಟಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ದಿ ಕೇರಳ ಸ್ಟೋರಿಯಲ್ಲಿ ಸಮಸ್ಯೆಯಿದ್ದರೆ ನಾಸಿರುದ್ದೀನ್ ಕೋರ್ಟ್ ಗೆ ಹೋಗಲಿ : ಮನೋಜ್ ತಿವಾರಿ

    ದಿ ಕೇರಳ ಸ್ಟೋರಿಯಲ್ಲಿ ಸಮಸ್ಯೆಯಿದ್ದರೆ ನಾಸಿರುದ್ದೀನ್ ಕೋರ್ಟ್ ಗೆ ಹೋಗಲಿ : ಮನೋಜ್ ತಿವಾರಿ

    ಭಾರತೀಯ ಸಿನಿಮಾ ರಂಗದಲ್ಲಿ ಸಂಚಲನ ಮೂಡಿಸಿರುವ ‘ದಿ ಕೇರಳ ಸ್ಟೋರಿ’ (The Kerala Story) ಸಿನಿಮಾ ಬಗ್ಗೆ ಅನೇಕರು ವಿರೋಧ ವ್ಯಕ್ತಪಡಿಸಿದ್ದರು. ಹಾಗೆಯೇ ಬಾಲಿವುಡ್ ನಟ ನಾಸಿರುದ್ದೀನ್ ಶಾ ಕೂಡ ವಿರೋಧಿಸಿದ್ದರು. ನಾಸಿರುದ್ದೀನ್ (Naseeruddin Shah) ಮಾತಿಗೆ ನಟ, ರಾಜಕಾರಣಿ ಮನೋಜ್ ತಿವಾರಿ (Manoj Tiwari) ಎದುರೇಟು ಕೊಟ್ಟಿದ್ದಾರೆ. ನಾಸಿರುದ್ದೀನ್ ಅವರಿಗೆ ಸಿನಿಮಾ ಬಗ್ಗೆ ತಕರಾರುಗಳಿದ್ದರೆ ನೇರವಾಗಿ ಅವರು ಕೋರ್ಟಿಗೆ ಹೋಗಬಹುದು ಎಂದಿದ್ದಾರೆ.

    ‘ದಿ ಕೇರಳ ಸ್ಟೋರಿ’ ಬಗ್ಗೆ ಕಾಮೆಂಟ್ ಮಾಡಿದ್ದ ನಾಸಿರುದ್ದೀನ್  ಈ ಸಿನಿಮಾವನ್ನು ತಾವು ಯಾವತ್ತೂ ನೋಡುವುದಿಲ್ಲ ಎಂದಿದ್ದರು.  ಸಿನಿಮಾ ಗೆದ್ದಿದೆ ಎಂದ ಮಾತ್ರಕ್ಕೆ ಅದು ಒಳ್ಳೆಯ ಗೆಲುವಲ್ಲ. ಅದೊಂದು ಕೆಟ್ಟ ಟ್ರೆಂಡಿನ ಗೆಲುವು ಎಂದು ಪ್ರತಿಕ್ರಿಯಿಸಿದ್ದಾರೆ. ದ್ವೇಷವನ್ನು ಹಂಚುತ್ತಿರುವ ಕುರಿತು ಅವರು ಕಳವಳವನ್ನು  ವ್ಯಕ್ತಪಡಿಸಿದ್ದು, ಸಮಾಜದಲ್ಲಿ ಇನ್ನೆಷ್ಟು ದಿನ ಈ ದ್ವೇಷವನ್ನು ಹಂಚುತ್ತೀರಿ ಎಂದು ಪ್ರಶ್ನೆ ಮಾಡಿದ್ದರು. ಇದನ್ನೂ ಓದಿ:ನೀನು ಮುಸ್ಲಿಂ ಸಮುದಾಯಕ್ಕೆ ಕಳಂಕ ಎಂದವರಿಗೆ ನಟಿ ಸಾರಾ ಹೇಳಿದ್ದೇನು?

    ಬಾಕ್ಸ್ ಆಫೀಸಿನಲ್ಲಿ ಇನ್ನೂರಕ್ಕೂ ಹೆಚ್ಚು ಕೋಟಿ ರೂಪಾಯಿ ಕಲೆಕ್ಷನ್ ಮಾಡಿ, ಇನ್ನೂ ಹಲವಾರು ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿರುವ ದಿ ಕೇರಳ ಸ್ಟೋರಿ ಬಗ್ಗೆ ಈ ಹಿಂದೆ ಕಮಲ್ ಹಾಸನ್ (Kamal Haasan) ಕೂಡ ಮಾತನಾಡಿದ್ದರು. ಅದೊಂದು ಪ್ರೊಪಗಾಂಡ ಸಿನಿಮಾ ಎಂದು ಟೀಕಿಸಿದ್ದರು. ಸತ್ಯವನ್ನು ಹೇಳದೇ ಅಸತ್ಯವನ್ನೇ ತುಂಬಿರುವಂತಹ ಚಿತ್ರವದು ಎಂದು ಮಾತನಾಡಿದ್ದರು.

     

    ಅಬುಧಾಬಿಯಲ್ಲಿ ನಡೆದ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗಿಯಾಗಿದ್ದ ಕಮಲ್ ಹಾಸನ್,  ಈ ಸಂದರ್ಭದಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ, ‘ನಾನು ದಿ ಕೇರಳ ಸ್ಟೋರಿ ಸಿನಿಮಾವನ್ನು ವಿರೋಧಿಸುತ್ತಲೇ ಬಂದಿದ್ದೇನೆ. ಅದಕ್ಕಾಗಿ ನನ್ನನ್ನೂ ವಿರೋಧಿಸಿದ್ದಾರೆ. ಸಿನಿಮಾದಲ್ಲಿ ಸತ್ಯ ಘಟನೆ ಆಧರಿಸಿದ ಸಿನಿಮಾ ಎಂದು ಹೇಳಿದರೆ ಸಾಲದು. ಅದರಲ್ಲಿ ಸತ್ಯ ಇರಬೇಕು’ ಎಂದು ಪ್ರತಿಕ್ರಿಯಿಸಿದ್ದರು.

  • ದಿ ಕೇರಳ ಸ್ಟೋರಿ ಕೆಟ್ಟ ಯಶಸ್ಸಿನ ಟ್ರೆಂಡ್: ನಟ ನಾಸಿರುದ್ದೀನ್ ಶಾ

    ದಿ ಕೇರಳ ಸ್ಟೋರಿ ಕೆಟ್ಟ ಯಶಸ್ಸಿನ ಟ್ರೆಂಡ್: ನಟ ನಾಸಿರುದ್ದೀನ್ ಶಾ

    ಬಾಲಿವುಡ್ ನ ಖ್ಯಾತ ನಟ ನಾಸಿರುದ್ದೀನ್ ಶಾ (Naseeruddin Shah) ‘ದಿ ಕೇರಳ ಸ್ಟೋರಿ’ ಬಗ್ಗೆ ಕಾಮೆಂಟ್ ಮಾಡಿದ್ದಾರೆ. ಈ ಸಿನಿಮಾವನ್ನು ತಾವು ಯಾವತ್ತೂ ನೋಡುವುದಿಲ್ಲ ಎಂದಿರುವ ಅವರು,  ಸಿನಿಮಾ ಗೆದ್ದಿದೆ ಎಂದ ಮಾತ್ರಕ್ಕೆ ಅದು ಒಳ್ಳೆಯ ಗೆಲುವಲ್ಲ. ಅದೊಂದು ಕೆಟ್ಟ ಟ್ರೆಂಡಿನ ಗೆಲುವು ಎಂದು ಪ್ರತಿಕ್ರಿಯಿಸಿದ್ದಾರೆ. ದ್ವೇಷವನ್ನು ಹಂಚುತ್ತಿರುವ ಕುರಿತು ಅವರು ಕಳವಳವನ್ನು  ವ್ಯಕ್ತಪಡಿಸಿದ್ದು, ಸಮಾಜದಲ್ಲಿ ಇನ್ನೆಷ್ಟು ದಿನ ಈ ದ್ವೇಷವನ್ನು ಹಂಚುತ್ತೀರಿ ಎಂದು ಪ್ರಶ್ನೆ ಮಾಡಿದ್ದಾರೆ.

    ಬಾಕ್ಸ್ ಆಫೀಸಿನಲ್ಲಿ ಇನ್ನೂರಕ್ಕೂ ಹೆಚ್ಚು ಕೋಟಿ ರೂಪಾಯಿ ಕಲೆಕ್ಷನ್ ಮಾಡಿ, ಇನ್ನೂ ಹಲವಾರು ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿರುವ ದಿ ಕೇರಳ ಸ್ಟೋರಿ ಬಗ್ಗೆ ಈ ಹಿಂದೆ ಕಮಲ್ ಹಾಸನ್ (Kamal Haasan) ಕೂಡ ಮಾತನಾಡಿದ್ದರು. ಅದೊಂದು ಪ್ರೊಪಗಾಂಡ ಸಿನಿಮಾ ಎಂದು ಟೀಕಿಸಿದ್ದರು. ಸತ್ಯವನ್ನು ಹೇಳದೇ ಅಸತ್ಯವನ್ನೇ ತುಂಬಿರುವಂತಹ ಚಿತ್ರವದು ಎಂದು ಮಾತನಾಡಿದ್ದರು. ಇದನ್ನೂ ಓದಿ:‘ಬಾಹುಬಲಿ’ ಪ್ರಭಾಸ್‌ಗೆ ಸ್ಟಾರ್ ನಟ ಕಮಲ್ ಹಾಸನ್ ವಿಲನ್

    ಅಬುಧಾಬಿಯಲ್ಲಿ ನಡೆದ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗಿಯಾಗಿದ್ದ ಕಮಲ್ ಹಾಸನ್,  ಈ ಸಂದರ್ಭದಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ, ‘ನಾನು ದಿ ಕೇರಳ ಸ್ಟೋರಿ ಸಿನಿಮಾವನ್ನು ವಿರೋಧಿಸುತ್ತಲೇ ಬಂದಿದ್ದೇನೆ. ಅದಕ್ಕಾಗಿ ನನ್ನನ್ನೂ ವಿರೋಧಿಸಿದ್ದಾರೆ. ಸಿನಿಮಾದಲ್ಲಿ ಸತ್ಯ ಘಟನೆ ಆಧರಿಸಿದ ಸಿನಿಮಾ ಎಂದು ಹೇಳಿದರೆ ಸಾಲದು. ಅದರಲ್ಲಿ ಸತ್ಯ ಇರಬೇಕು’ ಎಂದು ಪ್ರತಿಕ್ರಿಯಿಸಿದ್ದರು.

    ‘ದಿ ಕೇರಳ ಸ್ಟೋರಿ’ (The Kerala Story) ಸಿನಿಮಾದ ಕಥೆಯೇ ಬೋಗಸ್ ಎಂದು ಹಲವರು ಈಗಾಗಲೇ ಹಲವರು ವಾದ ಮಾಡಿದ್ದಾರೆ. ಅವರು ಹೇಳಿದ ಪ್ರಮಾಣದಲ್ಲಿ ಮಹಿಳೆಯರು ಇಸ್ಲಾಂ ಮೂಲಭೂತವಾದಕ್ಕೆ ಸಿಲುಕಿಲ್ಲ ಎಂದು ಚರ್ಚೆ ಮಾಡಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಸಿನಿಮಾ ಟೀಮ್ ಮಾಧ್ಯಮಗೋಷ್ಠಿ ನಡೆಸಿ, ಅಲ್ಲಿಗೆ ಸಂತ್ರಸ್ತರನ್ನು ಕರೆತಂದಿದ್ದರು. ಒಬ್ಬೊಬ್ಬರ ಕಥೆಯನ್ನು ಸಿನಿಮಾ ಟೀಮ್ ಮಾಧ್ಯಮಗಳ ಮುಂದೆ ಬಿಚ್ಚಿಟ್ಟಿದೆ.

     

    ದಿ ಕೇರಳ ಸ್ಟೋರಿಯ ಟ್ರೈಲರ್ ರಿಲೀಸ್ ಆದ ಸಂದರ್ಭದಲ್ಲಿ ಒಟ್ಟು 32 ಸಾವಿರ ಯುವತಿಯರ ಮತಾಂತರ ಮಾಡಲಾಗಿದೆ ಎಂದು ಹೇಳಿತ್ತು. ಅಂಕಿ ಸಂಖ್ಯೆಯ ಕುರಿತು ವ್ಯಾಪಕ ಟೀಕೆ ಬಂದ ಬೆನ್ನಲ್ಲೇ ಸಂಖ್ಯೆಯ ವಿಚಾರವನ್ನು ಸಿನಿಮಾದಿಂದಲೇ ಕೈ ಬಿಡಲಾಯಿತು. ಆದರೆ, ಸಾಕಷ್ಟು ಸಂಖ್ಯೆಲ್ಲಿ ಮತಾಂತರ ನಡೆದಿದೆ ಎಂದು ಚಿತ್ರತಂಡ ಹೇಳಿಕೊಂಡಿತ್ತು. ಕೆಲ ದಿನಗಳ ಹಿಂದೆ ನಡೆದ ಮಾಧ್ಯಮ ಗೋಷ್ಠಿಗೆ 26 ಯುವತಿಯರನ್ನು ಕರೆತಂದಿದ್ದರು ನಿರ್ದೇಶಕ ಸುದೀಪ್ತೋ ಸೇನ್.

  • ಆರ್.ಆರ್.ಆರ್ ಸಿನಿಮಾ ಬಗ್ಗೆ ಕಟು ಟೀಕೆ ಮಾಡಿದ ಬಾಲಿವುಡ್ ನಟ ನಾಸೀರುದ್ದೀನ್ ಶಾ ಪತ್ನಿ

    ಆರ್.ಆರ್.ಆರ್ ಸಿನಿಮಾ ಬಗ್ಗೆ ಕಟು ಟೀಕೆ ಮಾಡಿದ ಬಾಲಿವುಡ್ ನಟ ನಾಸೀರುದ್ದೀನ್ ಶಾ ಪತ್ನಿ

    ಬಾಲಿವುಡ್ ಸಿನಿಮಾ ರಂಗದ ಹಿರಿಯ ಕಲಾವಿದೆ ಹಾಗೂ ನಟ ನಾಸೀರುದ್ದೀನ್ ಶಾ (Naseeruddin Shah) ಪತ್ನಿ ರತ್ನಾ ಪಠಾಕ್ ಶಾ (Ratna Pathak Shah) ‘ಆರ್.ಆರ್.ಆರ್’ (RRR) ಸಿನಿಮಾ ಬಗ್ಗೆ ಕಟು ಟೀಕೆ ಮಾಡಿದ್ದಾರೆ. ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಭಾಗಿ ಆಗಿದ್ದ ಅವರು ‘ಆರ್.ಆರ್.ಆರ್ ರೀತಿಯ ಸಿನಿಮಾಗಳು ನಮ್ಮನ್ನು ಮತ್ತಷ್ಟು ಹಿಂದಕ್ಕೆ ಕರೆದುಕೊಂಡು ಹೋಗುತ್ತವೆ. ನಾವೆಲ್ಲರೂ ಮುಂದೆ ನೋಡುತ್ತಿರುವಾಗ, ನಮ್ಮನ್ನು ಈ ಚಿತ್ರ ಹಿಂದಕ್ಕೆ ಕರೆದುಕೊಂಡು ಹೋಗುತ್ತಿದೆ’ ಎಂದು ಹೇಳಿದ್ದಾರೆ. ಸಿನಿಮಾ ಗೆದ್ದಿದ್ದರೂ, ಅದು ಅಹಂಕಾರವನ್ನು ತೋರಿಸುತ್ತದೆ’ ಎಂದಿದ್ದಾರೆ.
    RRR NEW SONG ONE

    ಆರ್.ಆರ್.ಆರ್ ಸಿನಿಮಾದ ಕಥೆಯ ಕುರಿತು ಈ ರೀತಿಯ ಹೇಳಿಕೆಯನ್ನು ನೀಡಿರುವ ಅವರು, ಚಿತ್ರಕರ್ಮಿಗಳು ಈ ಸಿನಿಮಾವನ್ನು ವಿಮರ್ಶೆ ದೃಷ್ಟಿಯಿಂದ ನೋಡಲೇ ಇಲ್ಲವೆಂದು ವಿಷಾದವನ್ನೂ ಅವರು ವ್ಯಕ್ತ ಪಡಿಸಿದ್ದಾರೆ. ಈ ರೀತಿಯ ಸಿನಿಮಾಗಳನ್ನು ವಿಮರ್ಶೆ ಮಾಡದೇ ಇದ್ದರೆ, ಅಹಂಕಾರ ಹೊತ್ತುಕೊಂಡಿರುವ ಅವರು ತಾವು ಮಾಡಿದ್ದೇ ಶ್ರೇಷ್ಠವೆಂದು ಭಾವಿಸುತ್ತಾರೆ ಎಂದು ನಿರ್ದೇಶಕ ರಾಜಮೌಳಿಯನ್ನು (Rajamouli) ಕುಟುಕಿದ್ದಾರೆ. ವಿಮರ್ಶೆಗಳು ಏನೇ ಬಂದರೂ, ಅದನ್ನು ಮುಕ್ತವಾಗಿ ತಗೆದುಕೊಳ್ಳಬೇಕು ಎಂದು ಸಲಹೆಯನ್ನೂ ನೀಡಿದ್ದಾರೆ.

    ಸಿನಿಮಾ ಬಗ್ಗೆ ಏನೇ ಟೀಕೆ ಟಿಪ್ಪಣಿಗಳು ಬಂದರೂ, ಈ ವರ್ಷ ತೆರೆಕಂಡು ಬಾಕ್ಸ್ ಆಫೀಸ್ ಕೊಳ್ಳೆ ಹೊಡೆದಿರುವ ‘ಆರ್.ಆರ್.ಆರ್’ ಸಿನಿಮಾಗೆ ಫಿಲಡೆಲ್ಫಿಯಾ ಫಿಲ್ಮ್ ಕ್ರಿಟಿಕ್ಸ್ ಸರ್ಕಲ್ ಆನ್ಯುವಲ್ ಅವಾರ್ಡ್’ನಲ್ಲಿ ಮೂರು ಪ್ರಶಸ್ತಿಗಳನ್ನು ಬಾಚಿಕೊಂಡಿದೆ. ಮೊನ್ನೆಯಷ್ಟೇ ಈ ಸಿನಿಮಾ ನಾಮನಿರ್ದೇಶನಕ್ಕೆ ಆಯ್ಕೆಯಾಗಿದ್ದನ್ನು ಚಿತ್ರತಂಡ ಹಂಚಿಕೊಂಡಿತ್ತು. ಇದೀಗ ಮೂರು ಪ್ರಶಸ್ತಿಗಳನ್ನು ಅದು ಪಡೆದುಕೊಂಡಿದೆ. ಈ ವಿಷಯವನ್ನು ಸ್ವತಃ ಚಿತ್ರತಂಡವೇ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದೆ.

    ಫಿಲಡೆಲ್ಫಿಯಾ ಫಿಲ್ಮ್ ಕ್ರಿಟಿಕ್ಸ್ ಸರ್ಕಲ್ ಆನ್ಯುವಲ್ ಅವಾರ್ಡ್ ಸಂಸ್ಥೆಯು ಆರ್.ಆರ್.ಆರ್ ಸಿನಿಮಾಗೆ ಅತ್ಯುತಮ್ಮ ವಿದೇಶಿ ಸಿನಿಮಾ, ಅತ್ಯುತ್ತಮ ಸಂಗೀತ ಸಂಯೋಜನೆ ಮತ್ತು ಅತ್ಯುತ್ತಮ ಛಾಯಾಗ್ರಹಣ ವಿಭಾಗದಲ್ಲಿ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ನೀಡಲಾಗಿದೆ. ಈ ಪ್ರಶಸ್ತಿಗಳನ್ನು ನೀಡಿರುವ ಸಂಸ್ಥೆಗೆ ರಾಜಮೌಳಿ ಅಂಡ್ ಟೀಮ್ ಧನ್ಯವಾದಗಳನ್ನು ಅರ್ಪಿಸಿದೆ. ಇದನ್ನೂ ಓದಿ: ನಟಿ ಉರ್ಫಿ ಜಾವೇದ್ ಗೆ ‘ಲಾರಿಂಜೈಟಿಸ್’ ಖಾಯಿಲೆ: ಆಸ್ಪತ್ರೆಗೆ ದಾಖಲು

    ಆರ್.ಆರ್.ಆರ್ ಸಿನಿಮಾ ಐದು ವಿಭಾಗಗಳಲ್ಲಿ ನಾಮಿನೇಷನ್ ಪಟ್ಟಿಯಲ್ಲಿತ್ತು. ಅದರಲ್ಲಿ ಮೂರು ಪ್ರಶಸ್ತಿಗಳನ್ನು ಅದು ಬಾಚಿದೆ. ಅಲ್ಲದೇ ಈ ಬಾರಿಯ ಆಸ್ಕರ್ ಪ್ರಶಸ್ತಿಗೂ ಆರ್.ಆರ್.ಆರ್ ಸಿನಿಮಾ ಸ್ಪರ್ಧೆಯಲ್ಲಿದೆ. ಇನ್ನೂ ಅನೇಕ ಪ್ರಶಸ್ತಿಗಳಲ್ಲಿ ಚಿತ್ರ ಸ್ಪರ್ಧೆ ಮಾಡುತ್ತಿದೆ. ಅದರಲ್ಲೂ ಆಸ್ಕರ್ ಮೇಲೆ ಕಣ್ಣಿಟ್ಟು ಚಿತ್ರತಂಡ ಕೂತಿರುವುದರಿಂದ ಆ ಪ್ರಶಸ್ತಿ ಸಿಗುತ್ತಾ ಎನ್ನುವ ಕುತೂಹಲ ಕೂಡ ಮೂಡಿದೆ.

    Live Tv
    [brid partner=56869869 player=32851 video=960834 autoplay=true]

  • ಹಿರಿಯ ನಟ ನಾಸೀರುದ್ದೀನ್ ಶಾ ಆಸ್ಪತ್ರೆಗೆ ದಾಖಲು

    ಹಿರಿಯ ನಟ ನಾಸೀರುದ್ದೀನ್ ಶಾ ಆಸ್ಪತ್ರೆಗೆ ದಾಖಲು

    ಮುಂಬೈ: ಬಾಲಿವುಡ್ ಹಿರಿಯ ನಟ ನಾಸೀರುದ್ದೀನ್ ಶಾ ಅವರ ಆರೋಗ್ಯದಲ್ಲಿ ಏರುಪೇರು ಕಂಡ ಬಂದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದಾರೆ.

    ಜೂನ್ 29ರಂದು ನಾಸೀರುದ್ದೀನ್ ಅವರನ್ನು ಹಿಂದೂಜಾ ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಸೀರುದ್ದೀನ್ ಅವರು ನ್ಯೂಮೋನಿಯಾದಿಂದ ಬಳಲುತ್ತಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ವರದಿಯಾಗಿದೆ. ನಾಸೀರುದ್ದೀನ್ ಅವರ ಆರೋಗ್ಯ ಮೊದಲಿಗಿಂತ ಸುಧಾರಿಸಿದೆ ಎಂದು ಆಪ್ತ ಸಹಾಯಕ ಮಾಹಿತಿ ನೀಡಿದ್ದಾರೆ.

    ಸದ್ಯ ನಾಸೀರುದ್ದೀನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು, ವೈದ್ಯರ ತಂಡ ಅವರ ಆರೋಗ್ಯದ ಮೇಲೆ ನಿಗಾ ಇಟ್ಟಿದೆ. ನ್ಯೂಮೋನಿಯಾ ಆಗಿದ್ದರಿಂದ ಅವರನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಎರಡ್ಮೂರು ದಿನಗಳಲ್ಲಿ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ನಾಸೀರುದ್ದೀನ್ ಮ್ಯಾನೇಜರ್ ಹೇಳಿದ್ದಾರೆ.

    ಸದ್ಯ ಆಸ್ಪತ್ರೆಯಲ್ಲಿ ನಾಸೀರುದ್ದೀನ್ ಜೊತೆ ಪತ್ನಿ ರತ್ನಾ ಪಾಠಕ್, ಮಕ್ಕಳು ಜೊತೆಯಲ್ಲಿದ್ದಾರೆ. ನಾಸೀರುದ್ದೀನ್ ಹಲವು ಸೂಪರ್ ಹಿಟ್ ಸಿನಿಮಾಗಳನ್ನು ನೀಡಿದ್ದಾರೆ. ತ್ರೀದೇವ್, ಸರ್ಫೋರೋಶ್, ಮಕಬೂಲ್, ಇಕ್ಬಾಲ್, ಬನಾರಸ್, ಪರ್ಜಾನಿಯಾ, ಇಶ್ಕಿಯಾ, ದಿ ಡರ್ಟಿ ಪಿಕ್ಚರ್, ಜಾನ್ ಡೇ, ಬೇಗಂ ಜಾನ್ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಪತ್ನಿ ರತ್ನಾ ಪಾಠಕ್ ಸಹ ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ.

    2020ರಲ್ಲಿ ನಟರಾದ ಇರ್ಫಾನ್ ಖಾನ್, ರಿಷಿ ಕಪೂರ್ ನಿಧನವಾದಾಗ ನಾಸೀರುದ್ದೀನ್ ಅವರ ಆರೋಗ್ಯದ ಕುರಿತು ಊಹಾಪೋಹ ಸುದ್ದಿಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದವು. ಕೊನೆಗೆ ನಾಸೀರುದ್ದೀನ್ ಶಾ ಪುತ್ರ ವಿವಾನ್ ಎಲ್ಲ ಸ್ಪಷ್ಟನೆ ನೀಡಿ ತಂದೆ ಆರೋಗ್ಯವಾಗಿರುವ ವಿಷಯ ತಿಳಿಸಿದ್ದರು.

  • ಸಿಎಎ, ಎನ್‌ಆರ್‌ಸಿ ವಿರೋಧಿಸಿ ಅಹೋರಾತ್ರಿ ಧರಣಿ – ಮಗು ಹಿಡಿದು ಕುಳಿತ ಸೌಮ್ಯ ರೆಡ್ಡಿ

    ಸಿಎಎ, ಎನ್‌ಆರ್‌ಸಿ ವಿರೋಧಿಸಿ ಅಹೋರಾತ್ರಿ ಧರಣಿ – ಮಗು ಹಿಡಿದು ಕುಳಿತ ಸೌಮ್ಯ ರೆಡ್ಡಿ

    ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರೋ ಪೌರತ್ವ ತಿದ್ದುಪಡಿ ಕಾಯ್ದೆಯನ್ನ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಲೇ ಇದೆ. ಅದರಲ್ಲೂ ದೆಹಲಿಯಲ್ಲಿ ಪೌರತ್ವ ಕಾಯ್ದೆಯ ವಿರುದ್ಧದ ಪ್ರತಿಭಟನೆಯೂ ಹಿಂಸಾತ್ಮಕ ರೂಪ ಪಡೆದು ಅನೇಕ ಮಂದಿಯನ್ನು ಬಲಿಪಡೆದಿದೆ.

    ರಾಷ್ಟ್ರ ರಾಜಧಾನಿ ಮಾತ್ರವಲ್ಲ, ರಾಜ್ಯ ರಾಜಧಾನಿಯಲ್ಲೂ ಒಂದಿಲ್ಲೊಂದು ಭಾಗದಲ್ಲಿ ಪ್ರತಿಭಟನೆಗಳು ನಡೆಯುತ್ತಲೇ ಇದೆ. ಬೆಂಗಳೂರಿನಲ್ಲೂ ಶಾಹಿನ್ ಬಾಗ್ ರೀತಿಯಲ್ಲಿ ಅಹೋರಾತ್ರಿ ಧರಣಿ, ಪ್ರತಿಭಟನೆ ಕಳೆದ 20 ದಿನಗಳಿಂದ ನಡೆಯುತ್ತಿದೆ.

    ಹೌದು ಬೆಂಗಳೂರಿನ ಟ್ಯಾನರಿ ರಸ್ತೆಯಲ್ಲಿರೋ ಬಿಲಾಲ್ ಮಸೀದಿಯ ಮುಂಭಾಗದಲ್ಲಿ ಪ್ರತಿದಿನ ಸಿಎಎ ವಿರೋಧಿಸಿ ಪ್ರತಿಭಟನೆ ನಡೆಯುತ್ತಿದೆ. ಈ ಬಿಲಾಲ್ ಮಸೀದಿಯ ಮುಂಭಾಗದಲ್ಲಿ ನಡೆಯುತ್ತಿರೋ ಪ್ರತಿಭಟನೆಗೆ ಮತ್ತೊಂದು ಶಾಹಿನ್ ಬಾಗ್ ಎಂದು ಹೆಸರು ಕೊಟ್ಟಿದ್ದು, ಬಿಲಾಲ್ ಬಾಗ್ ಬೆಂಗಳೂರು ಎಂಬ ಹೆಸರಿನಡಿಯಲ್ಲಿ ಸೇವ್ ಇಂಡಿಯಾ, ಸಂವಿಧಾನವನ್ನ ರಕ್ಷಸಿ ಎಂದು ಬ್ಯಾನರ್ ಹಾಕಿಕೊಂಡು ನೂರಾರು ಮಹಿಳೆಯರು ಮಕ್ಕಳ ಸಮೇತ ಪ್ರತಿಭಟನೆಯಲ್ಲಿ ಭಾಗಿಯಾಗುತ್ತಿದ್ದಾರೆ.

    ಇವರ ಅಹೋರಾತ್ರಿ ಧರಣಿಗೆ ಬಾಲಿವುಡ್ ನಟ ನಸೀರುದ್ದೀನ್ ಶಾ, ಶಾಸಕಿ ಸೌಮ್ಯ ರೆಡ್ಡಿ ಸಹ ಸಾಥ್ ನೀಡಿದ್ದಾರೆ. ಕೇಂದ್ರ ಸರ್ಕಾರ ಸಿಎಎ ಹಾಗೂ ಎನ್‌ಆರ್‌ಸಿ ಕಾಯ್ದೆಯನ್ನ ಹಿಂಪಡೆಯುವವರೆಗೆ ಧರಣಿ ಮಾಡಲು ಇಲ್ಲಿನ ಮಹಿಳೆಯರು ಹಾಗೂ ಸಾರ್ವಜನಿಕರು ನಿರ್ಧಾರ ಮಾಡಿದ್ದಾರೆ.

  • ಕೊಹ್ಲಿ ವಿಶ್ವದ ಅತ್ಯುತ್ತಮ ಬ್ಯಾಟ್ಸ್‌ಮನ್, ಅತಿ ಕೆಟ್ಟ ವರ್ತನೆಯ ಆಟಗಾರ: ನಟ ನಾಸಿರುದ್ದೀನ್ ಶಾ

    ಕೊಹ್ಲಿ ವಿಶ್ವದ ಅತ್ಯುತ್ತಮ ಬ್ಯಾಟ್ಸ್‌ಮನ್, ಅತಿ ಕೆಟ್ಟ ವರ್ತನೆಯ ಆಟಗಾರ: ನಟ ನಾಸಿರುದ್ದೀನ್ ಶಾ

    ಮುಂಬೈ: ಟೀಂ ಇಂಡಿಯಾದ ಕ್ಯಾಪ್ಟನ್ ವಿರಾಟ್ ಕೊಹ್ಲಿ ವಿಶ್ವದ ಅತ್ಯುತ್ತಮ ಬ್ಯಾಟ್ಸ್‌ಮನ್. ಆದರೆ, ವಿಶ್ವದ ಅತೀ ಕೆಟ್ಟ ದುರ್ವರ್ತನೆಯ ಆಟಗಾರನೆಂದು ಬಾಲಿವುಡ್ ಹಿರಿಯ ನಟ ನಾಸಿರುದ್ದೀನ್ ಶಾ ಕಿಡಿಕಾರಿದ್ದಾರೆ.

    ಆಸ್ಟ್ರೇಲಿಯಾದ ಟೆಸ್ಟ್ ಪಂದ್ಯದಲ್ಲಿ ಕಿತ್ತಾಡಿಕೊಂಡಿದ್ದ ಕ್ಯಾಪ್ಟನ್ ಕೊಹ್ಲಿಯವರ ವರ್ತನೆ ಹಾಗೂ ಅಭಿಮಾನಿಯೊಬ್ಬರಿಗೆ ದೇಶಬಿಟ್ಟು ಹೋಗು ಎಂಬ ಹೇಳಿಕೆಗೆ ಫೇಸ್‍ಬುಕ್ ಮೂಲಕ ನಾಸಿರುದ್ದೀನ್ ಶಾ ಶಾ ಆಕ್ರೋಶ ಹೊರಹಾಕಿದ್ದಾರೆ.

    ಕೊಹ್ಲಿ ಜಗತ್ತಿನ ಅತ್ಯುತ್ತಮ ಬ್ಯಾಟ್ಸ್‌ಮನ್ ಆಗಿರಬಹುದು. ಆದರೆ ಅವರು ವಿಶ್ವದ ಅತಿ ಕೆಟ್ಟ ವರ್ತನೆಯ ಆಟಗಾರನೂ ಹೌದು. ಕ್ರಿಕೆಟ್ ಬದುಕಿನಲ್ಲಿ ತನ್ನ ಸೊಕ್ಕಿನ ಹಾಗೂ ಕೆಟ್ಟ ನಡವಳಿಕೆಯನ್ನು ತೋರುತ್ತಲೇ ಇದ್ದಾರೆ. ಇಷ್ಟೆಲ್ಲಾ ಆದರೂ ನಾನು ದೇಶ ಬಿಡುವ ಯಾವುದೇ ಉದ್ದೇಶವಿಲ್ಲವೆಂದು ನಾಸಿರುದ್ದೀನ್ ಶಾ ಫೇಸ್‍ಬುಕ್ ನಲ್ಲಿ ಬರೆದುಕೊಂಡಿದ್ದಾರೆ.

    ಸೋಶಿಯಲ್ ಮೀಡಿಯಾಗಳಲ್ಲಿ ನಾಸಿರುದ್ದೀನ್  ಶಾರವರ ಪೋಸ್ಟ್ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಕೆಲವರು ಶಾ ಪರವಾಗಿ ಮಾತನಾಡಿದ್ದರೆ, ಮತ್ತೆ ಕೆಲವರು ಖ್ಯಾತ ಆಟಗಾರನ ಕುರಿತು ಈ ರೀತಿ ಮಾತನಾಡುವುದು ಸರಿಯೇ ಎಂದು ಪ್ರಶ್ನಿಸಿದ್ದಾರೆ. ಅವರ ಪೋಸ್ಟನ್ನು ಈಗಾಗಲೇ 2 ಸಾವಿರಕ್ಕೂ ಹೆಚ್ಚು ಅಭಿಮಾನಿಗಳು ಲೈಕ್ ಮಾಡಿದ್ದು, 60ಕ್ಕೂ ಹೆಚ್ಚು ಜನರು ಶೇರ್ ಮಾಡಿಕೊಂಡಿದ್ದಾರೆ.

    ಟೆಸ್ಟ್‌ನಲ್ಲಿ ಕೊಹ್ಲಿ ಮಾಡಿದ್ದೇನು?
    ಸೋಮವಾರ ಪರ್ತ್ ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ 2ನೇ ಟೆಸ್ಟ್ ಪಂದ್ಯದ 4ನೇ ದಿನದಾಟದಲ್ಲಿ, ಬುಮ್ರಾ ಬೌಲ್ ಮಾಡುತ್ತಿದ್ದ 71 ನೇ ಓವರ್ ನಲ್ಲಿ ಕೊಹ್ಲಿ ನಾನ್ ಸ್ಟ್ರೈಕರ್ ಎಂಡ್ ಬಳಿಕ ಫೀಲ್ಡ್ ಮಾಡಲು ನಿರ್ಧರಿಸಿದ್ದರು. ಈ ವೇಳೆ ರನ್ ಓಡುತ್ತಿದ್ದ ಟಿಮ್ ಪೇನ್ ಗೆ ಅಡ್ಡ ಬಂದ ಕೊಹ್ಲಿ ನೇರವಾಗಿ ಮುಖಾಮುಖಿಯಾಗಿ ನಿಂತಿದ್ದರು. ಆಗ ವಿರಾಟ್ ಕೊಹ್ಲಿ ಹಾಗೂ ಟಿಮ್ ಪೇನ್ ನಡುವೆ ವಾಕ್ಸಮರ ಏರ್ಪಟಿತ್ತು. ಇದನ್ನು ಕಂಡ ಅಂಪೈರ್ ಇಬ್ಬರು ಆಟಗಾರರಿಗೂ ನೀವು ತಂಡದ ನಾಯಕರು, ಇಲ್ಲಿಗೆ ಬಿಡಿ ಎಂದು ಬುದ್ಧಿವಾದ ಹೇಳಿ ಕಳುಹಿಸಿದ್ದರು. ಇದನ್ನೂ ಓದಿ: ಕೊಹ್ಲಿ, ಟಿಮ್ ಪೈನೆ ನಡುವೆ ಮಾತಿನ ಕಾಳಗ – ವಿಡಿಯೋ ವೈರಲ್

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv