Tag: Natasaarvabhowma

  • ‘ನಟಸಾರ್ವಭೌಮ’ ಸಂಗೀತ ನಿರ್ದೇಶಕನ ಮಾಜಿ ಪತ್ನಿ ಜೊತೆ ಶಿವಕಾರ್ತಿಕೇಯನ್ ಅಫೇರ್?

    ‘ನಟಸಾರ್ವಭೌಮ’ ಸಂಗೀತ ನಿರ್ದೇಶಕನ ಮಾಜಿ ಪತ್ನಿ ಜೊತೆ ಶಿವಕಾರ್ತಿಕೇಯನ್ ಅಫೇರ್?

    ‘ನಟಸಾರ್ವಭೌಮ’ (Natasaarvabhowma) ಸಂಗೀತ ನಿರ್ದೇಶಕ ಡಿ ಇಮ್ಮಾನ್- ಅವರ ಮೊದಲ ಪತ್ನಿಯ ವೈಯಕ್ತಿಕ ವಿಚಾರದಲ್ಲಿ ಶಿವಕಾರ್ತಿಕೇಯನ್ ಹೆಸರು ಕೇಳಿ ಬಂದಿದೆ. ಯೂಟ್ಯೂಬ್ ಚಾನೆಲ್‌ವೊಂದರಲ್ಲಿ ಶಿವಕಾರ್ತಿಕೇಯನ್ (Sivakarthikeyan) ವಿರುದ್ಧ ಡಿ ಇಮ್ಮಾನ್ (D Imman)  ಆರೋಪವೊಂದನ್ನು ಮಾಡಿದ್ದು, ಇಮ್ಮಾನ್ ಮೊದಲ ಪತ್ನಿಗೂ ಅಫೇರ್ ಇತ್ತಾ ಎಂಬ ಚರ್ಚೆ ನಡೆಯುತ್ತಿದೆ. ಇದು ಶಿವಕಾರ್ತಿಕೇಯನ್‌ಗೆ ಸಮಸ್ಯೆ ತಂದೊಡ್ಡಿದೆ. ಇದನ್ನೂ ಓದಿ:ಮತ್ತೊಂದು ಮದುವೆಗೆ ಮುಂದಾದ ಪವನ್ ಕಲ್ಯಾಣ್ ಮಾಜಿ ಪತ್ನಿ

    2008ರಲ್ಲಿ ಮೋನಿಕಾ ರಿಚರ್ಡ್ ಎಂಬುವರನ್ನು ಮದುವೆ ಆಗಿದ್ದ ಡಿ ಇಮ್ಮಾನ್ 2021ರಲ್ಲಿ ಡಿವೋರ್ಸ್ ನೀಡಿದ್ದರು. ಇದಾದ ಕೆಲವೇ ದಿನಗಳಲ್ಲಿ ಅವರು ಅಮೆಲಿ ಎಂಬುವರನ್ನು 2ನೇ ಮದುವೆ ಆಗಿದ್ದರು. ಇಮ್ಮಾನ್- ಮೋನಿಕಾ ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಇತ್ತೀಚೆಗೆ ಇಮ್ಮಾನ್ ತಮ್ಮ ವೈಯಕ್ತಿಕ ವಿಚಾರದ ಬಗ್ಗೆ ಮಾತನಾಡುವಾಗ ತಮ್ಮ ಹಾಗೂ ಮೊದಲ ಪತ್ನಿ ಡಿವೋರ್ಸ್‌ಗೆ ಶಿವಕಾರ್ತಿಕೇಯನ್ ಕಾರಣ ಎಂದು ಪರೋಕ್ಷವಾಗಿ ಆರೋಪ ಮಾಡಿದ್ದಾರೆ. ಶಿವಕಾರ್ತಿಕೇಯನ್ ಮಾಡಿದ ದ್ರೋಹವನ್ನು ನಾನು ಎಂದಿಗೂ ಮರೆಯುವುದಿಲ್ಲ. ಆದರೆ ಅವರು ಮಾಡಿದ ದ್ರೋಹ ಏನೆಂದು ಹೇಳಲಾಗುವುದಿಲ್ಲ. ಏಕೆಂದರೆ ನನಗೆ ನನ್ನ ಮಕ್ಕಳ ಭವಿಷ್ಯ ಬಹಳ ಮುಖ್ಯ ಎಂದು ಇಮ್ಮಾನ್ ಹೇಳಿದ್ದಾರೆ.

    ಮಕ್ಕಳ ಭವಿಷ್ಯಕ್ಕೂ, ಶಿವಕಾರ್ತಿಕೇಯನ್ ಮಾಡಿದ ದ್ರೋಹಕ್ಕೂ ಏನು ಸಂಬಂಧ? ಇಮ್ಮಾನ್ ಈ ರೀತಿ ಹೇಳಲು ಕಾರಣವೇನು? ನಿರ್ದೇಶಕನ ಮೊದಲ ಪತ್ನಿಯ ಜೊತೆಗೆ ನಟನಿಗೆ ಅಫೇರ್ ಇರಬಹುದಾ ಎಂದೆಲ್ಲಾ ಚರ್ಚೆ ಶುರುವಾಗಿದೆ. ಆದರೆ ಈ ಆರೋಪವನ್ನು ಮೋನಿಕಾ ರಿಚರ್ಡ್ ನಿರಾಕರಿಸಿದ್ದಾರೆ. ಶಿವಕಾರ್ತಿಕೇಯನ್ ನನಗೆ ಹಾಗೂ ಇಮ್ಮಾನ್ ಇಬ್ಬರಿಗೂ ಬಹಳ ಒಳ್ಳೆಯ ಫ್ರೆಂಡ್. ನಮ್ಮಿಬ್ಬರ ನಡುವೆ ಜಗಳವಾದಾಗ, ಡಿವೋರ್ಸ್ ವಿಚಾರ ಬಂದಾಗ ಶಿವಕಾರ್ತಿಕೇಯನ್ ನಾವಿಬ್ಬರೂ ದೂರ ಆಗದಂತೆ ತಡೆದಿದ್ದರು. ಕಾರಣ ತಿಳಿದು ಅವರು ನನ್ನ ಪರ ನಿಂತಿದ್ದರು. ತನಗೆ ಸಪೋರ್ಟ್ ಮಾಡಲಿಲ್ಲ ಎಂಬ ಕಾರಣಕ್ಕೆ ಈಗ ಇಮ್ಮಾನ್, ಶಿವಕಾರ್ತಿಕೇಯನ್ ವಿರುದ್ದ ಈ ರೀತಿ ಆರೋಪ ಮಾಡುತ್ತಿದ್ದಾರೆ. ಇದರಲ್ಲಿ ಅಫೇರ್ ಬಗ್ಗೆ ಮಾತನಾಡುವುದು ಏನೂ ಇಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ. ಇಮ್ಮಾನ್ ಮೊದಲ ಪತ್ನಿ ಜೊತೆಗಿನ ಅಫೇರ್ ಸುದ್ದಿಗೆ ನಟ ಶಿವಕಾರ್ತಿಕೇಯನ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

    ಇಮ್ಮಾನ್ ಅನೇಕ ಸಿನಿಮಾಗಳಿಗೆ ಸಂಗೀತ ನೀಡಿದ್ದು ಆ ಹಾಡುಗಳು ಸೂಪರ್ ಹಿಟ್ ಆಗಿವೆ. ಪುನೀತ್ ರಾಜ್‌ಕುಮಾರ್ ಅಭಿನಯದ ‘ನಟಸಾರ್ವಭೌಮ’ ಚಿತ್ರಕ್ಕೆ ಕೂಡಾ ಇದೇ ಇಮ್ಮಾನ್ ಸಂಗೀತ ನೀಡಿದ್ದಾರೆ. ಇಮ್ಮಾನ್ ಮೊದಲ ಪತ್ನಿಗೆ ವಿಚ್ಚೇದನ ನೀಡಿದ್ದು ಈಗ 2ನೇ ಮದುವೆ ಆಗಿದ್ದಾರೆ.

    ಶಿವಕಾರ್ತಿಕೇಯನ್ ತಮಿಳು ಚಿತ್ರರಂಗದಲ್ಲಿ ನಾಯಕನಾಗಿ ಗುರುತಿಸಿಕೊಂಡಿದ್ದಾರೆ. ಕನ್ನಡದ ‘ವಜ್ರಕಾಯ’ ಚಿತ್ರದಲ್ಲಿ ಗೆಸ್ಟ್ ಅಪಿಯರೆನ್ಸ್ ಮಾಡಿದ್ದಾರೆ. ಆರತಿ ಎಂಬುವರನ್ನು ಕೈ ಹಿಡಿದಿರುವ ಶಿವಕಾರ್ತಿಕೇಯನ್‌ಗೆ ಇಬ್ಬರು ಮಕ್ಕಳಿದ್ದಾರೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಎದೆಭಾಗದಲ್ಲಿ ಟ್ಯಾಟೂ ಹಾಕಿಸಿಕೊಂಡ ‘ನಟಸಾರ್ವಭೌಮ’ ನಟಿಗೆ ನೆಟ್ಟಿಗರಿಂದ ತರಾಟೆ

    ಎದೆಭಾಗದಲ್ಲಿ ಟ್ಯಾಟೂ ಹಾಕಿಸಿಕೊಂಡ ‘ನಟಸಾರ್ವಭೌಮ’ ನಟಿಗೆ ನೆಟ್ಟಿಗರಿಂದ ತರಾಟೆ

    ನ್ನಡದ ‘ನಟಸಾರ್ವಭೌಮ’ (Natasaarvabhowma) ನಟಿ ಅನುಪಮಾ ಪರಮೇಶ್ವರನ್ (Anupama Parameshwaran) ಅವರು ಇದೀಗ ಸುದ್ದಿಯಲ್ಲಿದ್ದಾರೆ. ಸದಾ ಟ್ರೆಡಿಷನಲ್ ಲುಕ್‌ನಲ್ಲಿ ಕಾಣಿಸಿಕೊಳ್ತಿದ್ದ ನಟಿ ಅನುಪಮಾ ಪರಮೇಶ್ವರನ್ ಇದೀಗ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಎದೆಭಾಗದಲ್ಲಿ ಟ್ಯಾಟೂ ಹಾಕಿಸಿಕೊಂಡಿರುವ ಫೋಟೋವನ್ನ ನಟಿ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ.

    ತೆಲುಗು, ಮಲಯಾಳಂ, ಕನ್ನಡ ಸೇರಿದಂತೆ ಹಲವು ಭಾಷೆಯಲ್ಲಿ ನಟಿಸುತ್ತಿರುವ ಪುನೀತ್ ರಾಜ್‌ಕುಮಾರ್ ನಾಯಕಿ ಅನುಪಮಾ ಕೈಯಲ್ಲಿ ಸಾಕಷ್ಟು ಸಿನಿಮಾಗಳಿವೆ. ರವಿತೇಜಾಗೆ ನಾಯಕಿಯಾಗಿ ‘ಈಗಲ್’ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಟಿಲ್ಲು 2 ಚಿತ್ರದಲ್ಲೂ ಅನುಪಮಾ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಇದನ್ನೂ ಓದಿ:ಸೀತೆ ಭಾರತದ ಮಗಳಲ್ಲ: ‘ಆದಿಪುರುಷ’ ಸಿನಿಮಾ ಡೈಲಾಗ್ ವಿರುದ್ಧ ಕಠ್ಮಂಡು ಮೇಯರ್ ಗರಂ

    ಕನ್ನಡದ ‘ನಟಸಾರ್ವಭೌಮ’ ನಾಯಕಿ ಅನುಪಮಾ, ಎದೆಭಾಗದಲ್ಲಿ ಟ್ಯಾಟೂ ಹಾಕಿಸಿಕೊಂಡಿರುವ ವಿಚಾರಕ್ಕೆ ಸುದ್ದಿಯಲ್ಲಿದ್ದಾರೆ. ಹಳದಿ ಬಣ್ಣ ಧಿರಿಸಿನಲ್ಲಿ ನಟಿ ಫೋಟೋ ಅಪ್‌ಲೋಡ್ ಮಾಡಿದ್ದಾರೆ. ಕರ್ಲಿ ಹೇರ್ ಫ್ರಿಯಾಗಿ ಬಿಟ್ಟು ಮಿರರ್ ಸೆಲ್ಫಿ ಶೇರ್ ಮಾಡಿದ್ದಾರೆ. ನಟಿ ಎದೆಯ ಮೇಲೆ ಟ್ಯಾಟೂ ಹಾಕಿಸಿರೋದು ಫೋಟೋದಲ್ಲಿ ಹೈಲೆಟ್ ಆಗಿದೆ. ಅನುಪಮಾ ಹಾಟ್ ಲುಕ್ ನೋಡಿ, ನಿಮ್ಮ ಮೇಲೆ ಇದ್ದ ಅಭಿಮಾನ ಕಮ್ಮಿಯಾಯ್ತು. ದಯವಿಟ್ಟು ಈ ತರಹ ಎಕ್ಸ್‌ಪೋಸ್‌ ಮಾಡಬೇಡಿ ಎಂದು ಫ್ಯಾನ್ಸ್ ಕಿಡಿಕಾರಿದ್ದಾರೆ.

    ನಿಜಕ್ಕೂ ಇದು ನೀವೇನಾ? ನಿಮ್ಮನ್ನು ಈ ರೀತಿ ನೋಡಲು ನಾವು ಇಷ್ಟಪಡಲ್ಲ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ. ಆದರೆ, ಅನುಪಮಾ ಇದಕ್ಕೆಲ್ಲ ತಲೆಕೆಡಿಸಿಕೊಂಡಿಲ್ಲ. ಈ ಫೋಟೋಗೆ ಭರ್ಜರಿ ಲೈಕ್ಸ್, ಕಾಮೆಂಟ್ ಬಂದಿದೆ. ಒಂದು ವರ್ಗದ ಜನರಿಗೆ ಅನುಪಮಾ ಪರಮೇಶ್ವರನ್ ಟ್ಯಾಟೂ ಇಷ್ಟ ಆಗಿದೆ.

  • ಪೋಸ್ಟರ್‌ಗೆ ಬಿಯರ್ ಅಭಿಷೇಕ – ನಟ ಪುನೀತ್ ಪ್ರತಿಕ್ರಿಯೆ

    ಪೋಸ್ಟರ್‌ಗೆ ಬಿಯರ್ ಅಭಿಷೇಕ – ನಟ ಪುನೀತ್ ಪ್ರತಿಕ್ರಿಯೆ

    ಬೆಂಗಳೂರು: ಸ್ಯಾಂಡಲ್‍ವುಡ್ ಬಹುನಿರೀಕ್ಷೆಯ ಚಿತ್ರ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಭಿನಯದ ‘ನಟಸಾರ್ವಭೌಮ’ ಚಿತ್ರ ಬಿಡುಗಡೆ ಆಗಿದ್ದು, ಸಿನಿಮಾಗೆ ಭರ್ಜರಿ ಸ್ವಾಗತ ದೊರೆತಿದೆ. ಆದರೆ ಅಭಿಮಾನಿಯೊಬ್ಬ ಪುನೀತ್ ಅವರ ಪೋಸ್ಟರ್‌ಗೆ ಬಿಯರ್ ಅಭಿಷೇಕ ಮಾಡಿ ವಿಕೃತಿ ಮೆರೆದಿದ್ದಾರೆ.

    ಈ ಬಗ್ಗೆ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಪ್ರತಿಕ್ರಿಯಿಸಿ, “ಆ ರೀತಿ ಮಾಡುವುದು ಬೇಡ. ಸಿನಿಮಾದಲ್ಲಿ ನಾವು ಏನೇನೋ ಮಾಡುತ್ತೇವೆ. ನಾವು ಚಿತ್ರದಲ್ಲಿ ಕೊಲೆ ಮಾಡುತ್ತೇವೆ. ಹಾಗಂತ ನೀವು ನಿಜಜೀವನದಲ್ಲಿ ಕೊಲೆ ಮಾಡಿ ಎಂದು ಹೇಳುವುದಿಲ್ಲ. ಇದು ಕೇವಲ ಒಂದು ಹಾಡು ಅಷ್ಟೇ. ಆ ಹಾಡಿನಲ್ಲಿ ಒಂದು ಥ್ರಿಲ್ ಇದೆ. ಸಮಾಜಕ್ಕೆ ಸಂದೇಶ ನೀಡುವ ಕೆಲವು ಸಿನಿಮಾದಲ್ಲಿ ಇರುತ್ತದೆ. ಅದನ್ನು ಉಪಯೋಗಿಸಿ. ಹಾಗಂತ ಬಿಯರ್ ಉಪಯೋಗಿಸುವುದು ಸರಿಯಲ್ಲ” ಎಂದು ಹೇಳಿದ್ದಾರೆ.

    ಒಟ್ಟು 500ಕ್ಕೂ ಹೆಚ್ಚಿನ ಸ್ಕ್ರೀನ್‍ಗಳಲ್ಲಿ ನಟಸಾರ್ವಭೌಮ ರಿಲೀಸ್ ಆಗಿದ್ದು, ಹೌಸ್‍ಫುಲ್ ಪ್ರದರ್ಶನ ಕಾಣುತ್ತಿದೆ. ಚಿತ್ರದಲ್ಲಿ ಪುನೀತ್ ರಾಜ್‍ಕುಮಾರ್ ಜೊತೆ ಡಿಂಪಲ್ ಬೆಡಗಿ ರಚಿತಾ ರಾಮ್, ಅನುಪಮಾ ಪರಮೇಶ್ವರ್, ಸಾಧುಕೋಕಿಲಾ, ಬಿ. ಸರೋಜಾ ದೇವಿ, ಚಿಕ್ಕಣ್ಣ, ರವಿಶಂಕರ್ ನಟಿಸಿದ್ದಾರೆ. ಈ ಚಿತ್ರವನ್ನು ರಾಕ್‍ಲೈನ್ ವೆಂಕಟೇಶ್ ಅವರು ನಿರ್ಮಿಸಿದ್ದು, ಪವನ್ ಒಡೆಯರ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ನಟಸಾರ್ವಭೌಮ ಚಿತ್ರ ಅಭಿಮಾನಿಗಳ ಮನತಣಿಸಿ, ಯಶಸ್ವಿಯಾಗಲಿ: ಪುನೀತ್‍ಗೆ ಸ್ಟಾರ್ ನಟ ವಿಶ್

    ನಟಸಾರ್ವಭೌಮ ಚಿತ್ರ ಅಭಿಮಾನಿಗಳ ಮನತಣಿಸಿ, ಯಶಸ್ವಿಯಾಗಲಿ: ಪುನೀತ್‍ಗೆ ಸ್ಟಾರ್ ನಟ ವಿಶ್

    ಬೆಂಗಳೂರು: ಸ್ಯಾಂಡಲ್‍ವುಡ್ ಬಹುನಿರೀಕ್ಷಿತ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರು ನಟಿಸಿದ ‘ನಟಸಾರ್ವಭೌಮ’ ಚಿತ್ರ ಬಿಡುಗಡೆಯಾಗಿದ್ದು ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈ ನಡುವೆ ರಾಕಿಂಗ್ ಸ್ಟಾರ್ ಯಶ್ ಅವರು ಪುನೀತ್ ಅವರ ಚಿತ್ರಕ್ಕೆ ಶುಭ ಹಾರೈಸಿದ್ದಾರೆ.

    ರಾಕಿಂದ ಸ್ಟಾರ್ ಯಶ್ ತಮ್ಮ ಟ್ವಿಟ್ಟರಿನಲ್ಲಿ, “ತಮ್ಮ ವಿಶಿಷ್ಟ ರೀತಿಯ ನೃತ್ಯ ಹಾಗೂ ವಿಭಿನ್ನ ಪಾತ್ರ ಪೋಷಣೆಯ ಮೂಲಕ ಅಪಾರ ನಿರೀಕ್ಷೆಯನ್ನು ಹುಟ್ಟು ಹಾಕಿರುವ ಪವರ್ ಸ್ಟಾರ್ ಅಪ್ಪು ಸರ್ ಅಭಿನಯದ ‘ನಟಸಾರ್ವಭೌಮ’ ಚಿತ್ರವು ಅಭಿಮಾನಿಗಳ ಮನತಣಿಸಿ, ಪ್ರೇಕ್ಷಕರ ಮನಗೆದ್ದು ಯಶಸ್ವಿಯಾಗಲಿ ಎಂದು ಹಾರೈಸುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.

    ಅಲ್ಲದೇ ಯಶ್ ಅವರು ಪುನೀತ್ ಜೊತೆಯಿರುವ ಫೋಟೋ ಹಾಕಿ ಅದಕ್ಕೆ, “ಪವರ್ ಸ್ಟಾರ್ ಅಪ್ಪು ಅವರು, ಸಹೃದಯಿ ನಿರ್ಮಾಪಕರಾದ ರಾಕ್‍ಲೈನ್ ವೆಂಕಟೇಶ್, ನಿರ್ದೇಶಕರಾದ ಸಹೋದರ ಪವನ್ ಒಡೆಯರ್, ಛಾಯಾಗ್ರಾಹಕ ರಾ ವೈದಿ ಸೇರಿದಂತೆ ನಟಸಾರ್ವಭೌಮ ಇಡೀ ಚಿತ್ರತಂಡಕ್ಕೆ ನನ್ನ ಶುಭಾಶಯಗಳು” ಎಂದು ಯಶ್ ಟ್ವೀಟ್ ಮಾಡಿದ್ದಾರೆ.

    ಇಂದು ನಟಸಾರ್ವಭೌಮ ಚಿತ್ರ ಬಿಡುಗಡೆ ಆಗಿದ್ದು, ಪ್ರೇಕ್ಷಕರು ಭರ್ಜರಿಯಾಗಿ ಸಿನಿಮಾವನ್ನು ಸ್ವಾಗತಿಸಿದ್ದಾರೆ. ಇದೇ ವೇಳೆ ಪುನೀತ್ ರಾಜ್‍ಕುಮಾರ್ ಅವರು ಚಿತ್ರ ಬಿಡುಗಡೆ ಆದ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಹೋಗಿ ಪೂಜೆ ಸಲ್ಲಿಸಿದ್ದಾರೆ.

    ಬೆಂಗಳೂರಿನ ಮಾಗಡಿ ರಸ್ತೆಯ ಪ್ರಸನ್ನ ಚಿತ್ರಮಂದಿರದಲ್ಲಿ ಬುಧವಾರ ರಾತ್ರಿ 10 ಗಂಟೆಗೆ ಫಸ್ಟ್ ಶೋ ನಡೆದಿದೆ. ಅಭಿಮಾನಿಗಳು ನಟಸಾರ್ವಭೌಮ ಚಿತ್ರವನ್ನು ಭರ್ಜರಿಯಾಗಿ ಸ್ವಾಗತ ಮಾಡಿಕೊಂಡಿದ್ದಾರೆ. ಅಲ್ಲದೆ ಚಿತ್ರದ ನಿರ್ಮಾಪಕ ರಾಕ್‍ಲೈನ್ ವೆಂಕಟೇಶ್ ಚಿತ್ರಮಂದಿರಕ್ಕೆ ಭೇಟಿ ನೀಡಿ ಚಿತ್ರ ವೀಕ್ಷಿಸಿದ್ದಾರೆ.

    ಒಟ್ಟು 500ಕ್ಕೂ ಹೆಚ್ಚಿನ ಸ್ಕ್ರೀನ್‍ಗಳಲ್ಲಿ ನಟಸಾರ್ವಭೌಮ ರಿಲೀಸ್ ಆಗಿದ್ದು, ಹೌಸ್‍ಫುಲ್ ಪ್ರದರ್ಶನ ಕಾಣುತ್ತಿದೆ. ನಟಸಾರ್ವಭೌಮ ಚಿತ್ರ 2 ಚಿತ್ರಮಂದಿರಗಳಲ್ಲಿ 24 ಗಂಟೆಗಳ ಪ್ರದರ್ಶನ ಕಾಣಲಿದೆ. ಬೆಂಗಳೂರಿನ ಊರ್ವಶಿ ಮತ್ತು ಗೌಡನಪಾಳ್ಯದ ಶ್ರೀನಿವಾಸ ಚಿತ್ರಮಂದಿರದಲ್ಲಿ ಒಂದೇ ದಿನದಲ್ಲಿ 8 ಬಾರಿ ಸಿನಿಮಾ ಪ್ರದರ್ಶನ ಕಾಣುವ ಮೂಲಕ ಹೊಸ ದಾಖಲೆ ನಿರ್ಮಾಣವಾಗಲಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಶುರುವಾಯ್ತು ನಟಸಾರ್ವಭೌಮನ ಆರ್ಭಟ – ಅಭಿಮಾನಿಗಳಿಂದ ಭರ್ಜರಿ ಸ್ವಾಗತ

    ಶುರುವಾಯ್ತು ನಟಸಾರ್ವಭೌಮನ ಆರ್ಭಟ – ಅಭಿಮಾನಿಗಳಿಂದ ಭರ್ಜರಿ ಸ್ವಾಗತ

    ಬೆಂಗಳೂರು: ಸ್ಯಾಂಡಲ್‍ವುಡ್ ಬಹುನಿರೀಕ್ಷೆಯ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಭಿನಯದ ‘ನಟಸಾರ್ವಭೌಮ’ ಚಿತ್ರ ಬಿಡುಗಡೆ ಆಗಿದ್ದು, ಸಿನಿಮಾದ ಆರ್ಭಟ ಈಗಾಗಲೇ ಶುರುವಾಗಿದೆ.

    ಬೆಂಗಳೂರಿನ ಮಾಗಡಿ ರಸ್ತೆಯ ಪ್ರಸನ್ನ ಚಿತ್ರಮಂದಿರದಲ್ಲಿ ಬುಧವಾರ ರಾತ್ರಿ 10 ಗಂಟೆಗೆ ಫಸ್ಟ್ ಶೋ ನಡೆದಿದೆ. ಅಭಿಮಾನಿಗಳು ನಟಸಾರ್ವಭೌಮ ಚಿತ್ರವನ್ನು ಭರ್ಜರಿಯಾಗಿ ಸ್ವಾಗತ ಮಾಡಿಕೊಂಡಿದ್ದಾರೆ. ಅಲ್ಲದೆ ಚಿತ್ರದ ನಿರ್ಮಾಪಕ ರಾಕ್‍ಲೈನ್ ವೆಂಕಟೇಶ್ ಥೀಯೇಟರ್ ಗೆ ಭೇಟಿ ನೀಡಿ ಚಿತ್ರ ವೀಕ್ಷಿಸಿದ್ದಾರೆ.

    ಒಟ್ಟು 500ಕ್ಕೂ ಹೆಚ್ಚಿನ ಸ್ಕ್ರೀನ್‍ಗಳಲ್ಲಿ ನಟಸಾರ್ವಭೌಮ ರಿಲೀಸ್ ಆಗಿದ್ದು, ಹೌಸ್‍ಫುಲ್ ಪ್ರದರ್ಶನ ಕಾಣುತ್ತಿದೆ. ನಟಸಾರ್ವಭೌಮ ಚಿತ್ರ 2 ಚಿತ್ರಮಂದಿರಗಳಲ್ಲಿ 24 ಗಂಟೆಗಳ ಪ್ರದರ್ಶನ ಕಾಣಲಿದೆ. ಬೆಂಗಳೂರಿನ ಊರ್ವಶಿ ಮತ್ತು ಗೌಡನಪಾಳ್ಯದ ಶ್ರೀನಿವಾಸ ಚಿತ್ರಮಂದಿರದಲ್ಲಿ ಒಂದೇ ದಿನದಲ್ಲಿ 8 ಬಾರಿ ಸಿನಿಮಾ ಪ್ರದರ್ಶನ ಕಾಣುವ ಮೂಲಕ ಹೊಸ ದಾಖಲೆಗೆ ಮುಂದಾಗಿದೆ. ಇದನ್ನೂ ಓದಿ: ನೆಚ್ಚಿನ ನಟನ ಸಿನಿಮಾ ನೋಡಲು ರಜೆ ಪತ್ರ ಬರೆದ ವಿದ್ಯಾರ್ಥಿನಿ

    ನಟಸಾರ್ವಭೌಮ ಚಿತ್ರ ಕ್ರೇಜ್ ರಾಜ್ಯಾದ್ಯಂತ ಹೆಚ್ಚಾಗಿದೆ. ತಮ್ಮ ನೆಚ್ಚಿನ ನಟನ ಸಿನಿಮಾ ಫಸ್ಟ್ ಶೋ ವೀಕ್ಷಿಸಲು ಅಭಿಮಾನಿಗಳು ರಜೆ ಕೋರಿ ಪತ್ರ ಬರೆದಿದ್ದಾರೆ. ಮೈಸೂರಿನ ಕಾಲೇಜಿನ ವಿದ್ಯಾರ್ಥಿನಿ ಚಿತ್ರ ವೀಕ್ಷಿಸಲು ರಜೆ ಕೋರಿ ಪತ್ರ ಬರೆದರೆ, ಬಾಗಲಕೋಟೆಯಲ್ಲಿ ಗ್ರಾಮ ಪಂಚಾಯ್ತು ನೌಕರ ಕೂಡ ರಜೆ ಕೋರಿ ಪತ್ರ ಬರೆದಿದ್ದಾರೆ. ಇದನ್ನೂ ಓದಿ: ಸಿನಿಮಾ ನೋಡಲು ರಜೆ ಕೇಳಿದ ಮೈಸೂರು ವಿದ್ಯಾರ್ಥಿನಿಗೆ ಪುನೀತ್ ಸಲಹೆ

    ನಟಸಾರ್ವಭೌಮ ಚಿತ್ರದಲ್ಲಿ ಪುನೀತ್ ರಾಜ್‍ಕುಮಾರ್ ಜೊತೆ ಡಿಂಪಲ್ ಬೆಡಗಿ ರಚಿತಾ ರಾಮ್, ಅನುಪಮಾ ಪರಮೇಶ್ವರ್, ಸಾಧುಕೋಕಿಲಾ, ಬಿ. ಸರೋಜಾ ದೇವಿ, ಚಿಕ್ಕಣ್ಣ, ರವಿಶಂಕರ್ ನಟಿಸಿದ್ದಾರೆ. ಈ ಚಿತ್ರವನ್ನು ರಾಕ್‍ಲೈನ್ ವೆಂಕಟೇಶ್ ಅವರು ನಿರ್ಮಿಸಿದ್ದು, ಪವನ್ ಒಡೆಯರ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ.

    `ರಣವಿಕ್ರಮ’ ಸಿನಿಮಾದ ಬಳಿಕ ಪುನೀತ್ ರಾಜ್‍ಕುಮಾರ್ ಹಾಗೂ ಪವನ್ ಒಡೆಯರ್ ಒಂದಾಗಿರುವುದು ಸಾಕಷ್ಟು ಕುತೂಹಲ ಮೂಡಿಸಿದೆ. ಈ ಚಿತ್ರ ಆಸ್ಟ್ರೇಲಿಯಾ, ಅಮೆರಿಕ ಸೇರಿದಂತೆ ಹಲವು ದೇಶಗಳಲ್ಲಿ ಬಿಡುಗಡೆಯಾಗಲಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಚಿತ್ರ ವೀಕ್ಷಣೆಗಾಗಿ ರಜೆ ಕೇಳಿದ ಗ್ರಾಮ ಪಂಚಾಯ್ತಿ ನೌಕರ

    ಚಿತ್ರ ವೀಕ್ಷಣೆಗಾಗಿ ರಜೆ ಕೇಳಿದ ಗ್ರಾಮ ಪಂಚಾಯ್ತಿ ನೌಕರ

    ಬಾಗಲಕೋಟೆ: ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಬಹುನಿರೀಕ್ಷಿತ ‘ನಟಸಾರ್ವಭೌಮ’ ಚಿತ್ರ ವೀಕ್ಷಿಸಲು ಗ್ರಾಮ ಪಂಚಾಯ್ತಿ ಬಿಲ್ ಕಲೆಕ್ಟರ್ ರಜೆ ಕೋರಿ ಪತ್ರ ಬರೆದಿದ್ದಾರೆ.

    ಅನಿಲ್ ಚೌಹಾನ್ ರಜೆ ಪತ್ರ ಕಳುಹಿಸಿದ ನೌಕರ. ಅನಿಲ್ ಬಾಗಲಕೋಟೆ ತಾಲೂಕಿನ ಸೀಗಿಕೇರಿ ಪಂಚಾಯ್ತಿ ಬಿಲ್ ಕಲೆಕ್ಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಅನಿಲ್, ಪುನೀತ್ ರಾಜ್‍ಕುಮಾರ್ ಅವರ ಕಟ್ಟಾ ಅಭಿಮಾನಿ ಆಗಿದ್ದು, ಗುರುವಾರ ಬಿಡುಗಡೆ ಆಗುತ್ತಿರುವ ನಟಸಾರ್ವಭೌಮ ಚಿತ್ರ ವೀಕ್ಷಿಸಲು ರಜೆ ಕೋರಿದ್ದಾರೆ.

    ಅನಿಲ್ ಅವರು ಪಂಚಾಯ್ತಿ ಪಿಡಿಓ ಹಿರೇಮಠ್ ಅವರಿಗೆ ವಾಟ್ಸಪ್ ಮೂಲಕ ರಜೆ ಪತ್ರ ಕಳುಹಿಸಿದ್ದಾರೆ. ಅನಿಲ್ ಅವರ ರಜೆ ಕೋರಿಕೆಗೆ ಪಿಡಿಓ ಹಿರೇಮಠ್ ಅವರು ರಜೆ ನೀಡುವುದಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: ನೆಚ್ಚಿನ ನಟನ ಸಿನಿಮಾ ನೋಡಲು ರಜೆ ಪತ್ರ ಬರೆದ ವಿದ್ಯಾರ್ಥಿನಿ

    ಪತ್ರದಲ್ಲಿ ಏನಿದೆ?
    ನಟಸಾರ್ವಭೌಮ ಚಿತ್ರ ಬಾಗಲಕೋಟೆಯಲ್ಲಿ ಫೆ. 7ರಂದು ನೋಡಲು ರಾಜ್ಯಾದ್ಯಂತ ಈ ಚಿತ್ರವು ಬಿಡುಗಡೆ ಆಗಲಿದೆ. ಈ ಚಿತ್ರ ಕುಟುಂಬದ ಎಲ್ಲಾ ಸದಸ್ಯರು ಹಾಗೂ ಎಲ್ಲಾ ವಯಸ್ಸಿನವರು ನೋಡುವಂತಹ ಒಳ್ಳೆಯ ಚಿತ್ರವಾಗಿದ್ದು ಹಾಗೂ ಚಿತ್ರದ ನಟ ನಮ್ಮ ರಾಜಕುಮಾರ ಅವರ ಹೆಮ್ಮೆಯ ತೃತೀಯ ಮಗನಾದ ಪುನೀತ್ ರಾಜ್‍ಕುಮಾರ್ ಅವರಾಗಿದ್ದು, ಹಾಗಾಗಿ ನಾನು ನಟಸಾರ್ವಭೌಮ ಚಿತ್ರ ನೋಡಲು ದಿನಾಂಕ 7ರಂದು ಆನ್‍ಲೈನ್‍ನಲ್ಲಿ ಟಿಕೆಟ್ ಬುಕ್ಕಿಂಗ್ ಮಾಡಿರುವುದರಿಂದ ನಾನು ಒಂದು ದಿನದ ರಜೆಯನ್ನು ಕೋರಿರುತ್ತೇನೆ. ಆದ್ದರಿಂದ ನನಗೆ ಕಾರ್ಯಾಲಯಕ್ಕೆ ಹಾಜರಾಗಲು ಆಗುವುದಿಲ್ಲ ಎಂದು ಪತ್ರ ಬರೆದಿದ್ದಾರೆ. ಇದನ್ನೂ ಓದಿ: ಸಿನಿಮಾ ನೋಡಲು ರಜೆ ಕೇಳಿದ ಮೈಸೂರು ವಿದ್ಯಾರ್ಥಿನಿಗೆ ಪುನೀತ್ ಸಲಹೆ

    ನಟಸಾರ್ವಭೌಮ ಚಿತ್ರದಲ್ಲಿ ಪುನೀತ್ ರಾಜ್‍ಕುಮಾರ್ ಜೊತೆ ಡಿಂಪಲ್ ಬೆಡಗಿ ರಚಿತಾ ರಾಮ್, ಅನುಪಮಾ ಪರಮೇಶ್ವರ್, ಸಾಧುಕೋಕಿಲಾ, ಬಿ. ಸರೋಜಾ ದೇವಿ, ಚಿಕ್ಕಣ್ಣ, ರವಿಶಂಕರ್ ನಟಿಸಿದ್ದಾರೆ. ಈ ಚಿತ್ರವನ್ನು ರಾಕ್‍ಲೈನ್ ವೆಂಕಟೇಶ್ ಅವರು ನಿರ್ಮಿಸಿದ್ದು, ಪವನ್ ಒಡೆಯರ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. `ರಣವಿಕ್ರಮ’ ಸಿನಿಮಾದ ಬಳಿಕ ಪುನೀತ್ ರಾಜ್‍ಕುಮಾರ್ ಹಾಗೂ ಪವನ್ ಒಡೆಯರ್ ಒಂದಾಗಿರುವುದು ಸಾಕಷ್ಟು ಕುತೂಹಲ ಮೂಡಿಸಿದ್ದು, ನಾಳೆ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಈ ಚಿತ್ರ ಆಸ್ಟ್ರೇಲಿಯಾ, ಅಮೆರಿಕ ಸೇರಿದಂತೆ ಹಲವು ದೇಶಗಳಲ್ಲಿ ಬಿಡುಗಡೆಯಾಗಲಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸಿನಿಮಾ ನೋಡಲು ರಜೆ ಕೇಳಿದ ಮೈಸೂರು ವಿದ್ಯಾರ್ಥಿನಿಗೆ ಪುನೀತ್ ಸಲಹೆ

    ಸಿನಿಮಾ ನೋಡಲು ರಜೆ ಕೇಳಿದ ಮೈಸೂರು ವಿದ್ಯಾರ್ಥಿನಿಗೆ ಪುನೀತ್ ಸಲಹೆ

    – ಮಕ್ಕಳಂದ್ರೆ ನನಗೆ ತುಂಬಾ ಇಷ್ಟ ಅಂದ್ರು ಪವರ್ ಸ್ಟಾರ್

    ಬೆಂಗಳೂರು: ನೆಚ್ಚಿನ ನಟ ಪುನೀತ್ ರಾಜ್ ಕುಮಾರ್ ಅಭಿನಯದ ನಟಸಾರ್ವಭೌಮ ಚಿತ್ರ ಬಿಡುಗಡೆಯ ದಿನ ತನಗೆ ರಜೆ ನೀಡಬೇಕು ಎಂದು ರಜಾ ಅರ್ಜಿ ಬರೆದ ಮೈಸೂರು ವಿದ್ಯಾರ್ಥಿನಿಗೆ ಪುನೀತ್ ಅಪ್ಪು ಸಲಹೆ ನೀಡಿದ್ದಾರೆ.

    ಚಿತ್ರದ ಕುರಿತು ಪಬ್ಲಿಕ್ ಟಿವಿ ನಟ ಪುನೀತ್ ಅವರನ್ನು ಸಂದರ್ಶನ ನಡೆಸಿತ್ತು. ಈ ವೇಳೆ ಮಾತನಾಡುತ್ತಾ, ಮೈಸೂರು ವಿದ್ಯಾರ್ಥಿನಿ ಚಿತ್ರ ರಿಲೀಸ್ ದಿನದಂದು ತನಗೆ ರಜೆ ನೀಡಬೇಕು ಎಂದು ಬರೆದಿರುವ ಪತ್ರದ ವಿಚಾರ ಪ್ರಸ್ತಾಪವಾಯಿತು. ಈ ಸಂದರ್ಭದಲ್ಲಿ ಪುನೀತ್, ತುಂಬಾ ಧನ್ಯವಾದಗಳು. ದಯವಿಟ್ಟು ಈ ರೀತಿ ಮಾಡಿಕೊಳ್ಳಬೇಡಿ ಎಂದು ಕೈ ಮುಗಿದು ಕೇಳಿಕೊಂಡರು. ಒಬ್ಬಳು ವಿದ್ಯಾರ್ಥಿನಿಯಾಗಿ ಮೊದಲು ವಿದ್ಯಾಭ್ಯಾಸದ ಕಡೆಗೆ ಗಮನ ಹರಿಸಿ. ಪ್ರೀತಿ, ವಿಶ್ವಾಸ ಹಾಗೆಯೇ ಉಳಿಸಿಕೊಳ್ಳಿ. ಓದು ಮುಗಿದ ಬಳಿಕ ಸಿನಿಮಾ ವೀಕ್ಷಿಸಿ ಎಂದು ಸಲಹೆ ನೀಡಿದ್ದಾರೆ.

    ಅಪ್ಪ-ಅಮ್ಮನಿಗೆ ಧನ್ಯವಾದ:
    ನಿಮ್ಮ ಕಂಡ್ರೆ ಯಾಕೆ ಎಲ್ಲರಿಗೂ ಇಷ್ಟ ಎಂದು ಇದೇ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಮೊದಲು ನನ್ನ ತಂದೆ-ತಾಯಿಗೆ ಧನ್ಯವಾದ ತಿಳಿಸಿದ್ರು. ಚಿಕ್ಕವಯಸ್ಸಿನಿಂದಲೇ ಸಿನಿಮಾಗಳನ್ನು ಮಾಡುತ್ತಿದ್ದೇನೆ ಅಲ್ಲವೇ? ಅದಕ್ಕೆ ಚಿಕ್ಕವರಿಂದ ಹಿಡಿದು ತಾತ-ಮುತ್ತಾತರವರೆಗೂ ನನ್ನ ಕಂಡರೆ ಇಷ್ಟ ಆಗಿರಬಹುದು. ಇನ್ನು ಮಕ್ಕಳಾದ ತಕ್ಷಣ ತಂದೆ-ತಾಯಿ ತಮ್ಮ ಮಕ್ಕಳಲ್ಲಿ ನಾವು ಚಿಕ್ಕವರಿದ್ದಾಗ ಈ ಹಾಡು ನೋಡುತ್ತಿದ್ದೆವು ನೋಡು ಅಂತ ಹೇಳುತ್ತಾರೆ. ಹೀಗೆ ನೋಡುತ್ತಾ ನೋಡುತ್ತಾ ಅವರು ಇಷ್ಟಪಟ್ಟಿರಬಹುದು ಅಂದ್ರು.

    ಸಾಮಾಜಿಕ ಜಾಲತಾಣದಲ್ಲೂ ಕೆಲವು ಬಾರಿ ತೋರಿಸುವುದನ್ನು ನಾನು ಗಮನಿಸಿದ್ದೇನೆ. ಪೋಸ್ಟರ್ ನೋಡಿಕೊಂಡು ಮಕ್ಕಳು ಯಾರು ಅಂತ ಗುರುತು ಹಿಡಿಯುವುದು, ಫೋನಿನಲ್ಲಿ ಫೋಟೋ ತೋರಿಸೋದನ್ನು ನೋಡಿದ್ದೇನೆ. ಇವೆಲ್ಲವನ್ನೂ ನೋಡಿದ್ರೆ ನನಗೆ ತುಂಬಾ ಸಂತಸವಾಗುತ್ತದೆ. ನನಗೂ ಮಕ್ಕಳೆಂದರೆ ತುಂಬಾ ಪ್ರೀತಿ. ತುಂಬಾನೇ ಇಷ್ಟ ಪಡುತ್ತೇನೆ. ಆ ಮಕ್ಕಳಲ್ಲಿ ಸಾಕಷ್ಟು ಮುಗ್ಧತೆ ಇರುತ್ತದೆ. ಒಟ್ಟಿನಲ್ಲಿ ನನ್ನನ್ನು ಸಿನಿಮಾ ರಂಗಕ್ಕೆ ಕರೆದುಕೊಂಡು ಬಂದ ನನ್ನ ತಂದೆ-ತಾಯಿಗೆ ಧನ್ಯವಾದಗಳು ಎಂದರು.

    ಪುನೀತ್ ರಾಜ್‍ಕುಮಾರ್ ಜೊತೆ ಡಿಂಪಲ್ ಬೆಡಗಿ ರಚಿತಾ ರಾಮ್, ಅನುಪಮಾ ಪರಮೇಶ್ವರ್, ಸಾಧುಕೋಕಿಲಾ, ಬಿ.ಸರೋಜಾ ದೇವಿ, ಚಿಕ್ಕಣ್ಣ, ರವಿಶಂಕರ್ ನಟಿಸಿದ್ದಾರೆ. ಈ ಚಿತ್ರವನ್ನು ರಾಕ್‍ಲೈನ್ ವೆಂಕಟೇಶ್ ಅವರು ನಿರ್ಮಿಸಿದ್ದು, ಪವನ್ ಒಡೆಯರ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. `ರಣವಿಕ್ರಮ’ ಸಿನಿಮಾದ ಬಳಿಕ ಪುನೀತ್ ರಾಜ್‍ಕುಮಾರ್ ಹಾಗೂ ಪವನ್ ಒಡೆಯರ್ ಒಂದಾಗಿರುವುದು ಸಾಕಷ್ಟು ಕುತೂಹಲ ಮೂಡಿಸಿದ್ದು, ಶುಕ್ರವಾರ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಈ ಚಿತ್ರ ಆಸ್ಟ್ರೇಲಿಯಾ, ಅಮೆರಿಕ ಸೇರಿದಂತೆ ನಮ್ಮ ಕನ್ನಡಿಗರು ಎಲ್ಲೆಲ್ಲ ಇದ್ದಾರೆ ಅಲ್ಲೆಲ್ಲ ಸಿನಿಮಾ ರಿಲೀಸ್ ಮಾಡುವ ಸಾಧ್ಯತೆಗಳಿವೆ ಎಂದು ಅವರು ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ನೆಚ್ಚಿನ ನಟನ ಸಿನಿಮಾ ನೋಡಲು ರಜೆ ಪತ್ರ ಬರೆದ ವಿದ್ಯಾರ್ಥಿನಿ

    ನೆಚ್ಚಿನ ನಟನ ಸಿನಿಮಾ ನೋಡಲು ರಜೆ ಪತ್ರ ಬರೆದ ವಿದ್ಯಾರ್ಥಿನಿ

    ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ನಟಿಸಿದ ಬಹುನಿರೀಕ್ಷಿತ ‘ನಟಸಾರ್ವಭೌಮ’ ಚಿತ್ರವನ್ನು ವೀಕ್ಷಿಸಲು ವಿದ್ಯಾರ್ಥಿನಿಯೊಬ್ಬಳು ರಜೆ ಕೋರಿ ಪತ್ರ ಬರೆದಿರುವ ಫೋಟೋ ವೈರಲ್ ಆಗಿದೆ.

    ಮೈಸೂರಿನ ಮಹಾರಾಣಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ವಿದ್ಯಾರ್ಥಿನಿ ಆಗಿರುವ ನಿಸರ್ಗ ಸಿನಿಮಾ ವೀಕ್ಷಿಸಲು ರಜೆ ನೀಡುವುದಾಗಿ ಪತ್ರ ಬರೆದಿದ್ದಾರೆ. ಈ ಪತ್ರದ ಫೋಟೋವನ್ನು ಚಿತ್ರದ ನಿರ್ದೇಶಕ ಪವನ್ ಒಡೆಯರ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಾಕಿ ಅದಕ್ಕೆ, “ಸಾಮಾಜಿಕ ಜಾಲತಾಣದಲ್ಲಿ ನೋಡಿದೆ. ನನಗೆ ನಗು ತಡೆಯಲು ಆಗುತ್ತಿಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

    ಪತ್ರದಲ್ಲಿ ಏನಿದೆ?
    ನಟಸಾರ್ವಭೌಮ ಚಿತ್ರ ಫೆಬ್ರವರಿ 7ರಂದು ರಾಜ್ಯಾದ್ಯಂತ ಬಿಡುಗಡೆ ಆಗಲಿದೆ. ಈ ಚಿತ್ರ ಕುಟುಂಬದ ಎಲ್ಲ ಸದಸ್ಯರು ಹಾಗೂ ಎಲ್ಲ ವಯಸ್ಸಿನವರು ನೋಡುವಂತಹ ಒಳ್ಳೆಯ ಚಿತ್ರವಾಗಿದ್ದು ಹಾಗೂ ಚಿತ್ರದ ನಾಯಕನಟ ನಮ್ಮ ರಾಜ್‍ಕುಮಾರ್ ಅವರ ಹೆಮ್ಮೆಯ ತೃತೀಯ ಸುಪುತ್ರನಾದ ಪುನೀತ್ ರಾಜ್‍ಕುಮಾರ್ ಅವರಾಗಿದ್ದು, ಹಾಗೂ ಹೀಗಿನ ಮಕ್ಕಳ ಅಚ್ಚುಮೆಚ್ಚಿನ ನಟರಾಗಿದ್ದಾರೆ. ಹಾಗಾಗಿ ನಾನು ನಟಸಾರ್ವಭೌಮ ಚಿತ್ರವನ್ನು ನೋಡಲು ಫೆ.8ರಂದು ಆನ್‍ಲೈನ್‍ನಲ್ಲಿ ಟಿಕೆಟ್ ಬುಕ್ ಮಾಡಿರುವುದರಿಂದ ನಾನು ತರಗತಿಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ನೀವು ರಜೆ ನೀಡಬೇಕೆಂದು ತಮ್ಮಲ್ಲಿ ಸವಿನಯ ಪ್ರಾರ್ಥನೆ ಎಂದು ಬರೆದಿದ್ದಾರೆ.

    ಈ ಚಿತ್ರದಲ್ಲಿ ಪುನೀತ್ ರಾಜ್‍ಕುಮಾರ್ ಜೊತೆ ಡಿಂಪಲ್ ಬೆಡಗಿ ರಚಿತಾ ರಾಮ್, ಅನುಪಮಾ ಪರಮೇಶ್ವರ್, ಸಾಧುಕೋಕಿಲಾ, ಬಿ.ಸರೋಜಾ ದೇವಿ, ಚಿಕ್ಕಣ್ಣ, ರವಿಶಂಕರ್ ನಟಿಸಿದ್ದಾರೆ. ಈ ಚಿತ್ರವನ್ನು ರಾಕ್‍ಲೈನ್ ವೆಂಕಟೇಶ್ ಅವರು ನಿರ್ಮಿಸಿದ್ದು, ಪವನ್ ಒಡೆಯರ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ‘ರಣವಿಕ್ರಮ’ ಸಿನಿಮಾದ ಬಳಿಕ ಪುನೀತ್ ರಾಜ್‍ಕುಮಾರ್ ಹಾಗೂ ಪವನ್ ಒಡೆಯರ್ ಒಂದಾಗಿರುವುದು ಸಾಕಷ್ಟು ಕುತೂಹಲ ಮೂಡಿಸಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮಂತ್ರಾಲಯಕ್ಕೆ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಭೇಟಿ

    ಮಂತ್ರಾಲಯಕ್ಕೆ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಭೇಟಿ

    ರಾಯಚೂರು: ಸ್ಯಾಂಡಲ್‍ವುಡ್ ಬಹುನಿರೀಕ್ಷಿತ ‘ನಟಸಾರ್ವಭೌಮ’ ಸಿನಿಮಾ ಬಿಡುಗಡೆ ಆಗುತ್ತಿರುವ ಹಿನ್ನೆಲೆಯಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಇಂದು ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ದರ್ಶನ ಪಡೆದರು.

    ಪತ್ನಿ ಅಶ್ವಿನಿ ಜೊತೆ ಮಠಕ್ಕೆ ಆಗಮಿಸಿದ ಪುನೀತ್ ರಾಜಕುಮಾರ್ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥರಿಂದ ಆಶೀರ್ವಾದ ಪಡೆದರು. ಇದೇ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಬಹಳ ದಿನಗಳಿಂದ ಮಂತ್ರಾಲಯಕ್ಕೆ ಬರಲು ಆಗಿರಲಿಲ್ಲ. ಈಗ ಫೆಬ್ರವರಿ 7ರಂದು ಸಿನಿಮಾ ಬಿಡುಗಡೆ ಆಗುತ್ತಿರುವ ಹಿನ್ನೆಲೆಯಲ್ಲಿ ರಾಯರ ಆಶೀರ್ವಾದ ಪಡೆಯಲು ಬಂದಿದ್ದೇನೆ. ಅಲ್ಲದೇ ಮಂತ್ರಾಲಯದಲ್ಲಿನ ರಾಜ್‍ಕುಮಾರ್ ಭವನದ ನವೀಕರಣ ಕಾರ್ಯ ಪೂರ್ಣಗೊಂಡಿದ್ದು, ಈಗ ಸಾರ್ವಜನಿಕರ ಉಪಯೋಗಕ್ಕೆ ಬರುತ್ತದೆ” ಎಂದು ಹೇಳಿದ್ದಾರೆ.

    ಇದೇ ವೇಳೆ ಪುನೀತ್ ರಾಜ್‍ಕುಮಾರ್ ಅವರಿಗೆ ಐಟಿ ದಾಳಿ ಬಗ್ಗೆ ಪ್ರಶ್ನಿಸಿದ್ದಾಗ ಅವರು ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ. ಬಳಿಕ ಫೆಬ್ರವರಿ 8, 9 ಹಾಗೂ 10ರಂದು ನಡೆಯುವ ಸುಜಯೀಂದ್ರ ತೀರ್ಥರ ದಶಮಾನೋತ್ಸವ ಕಾರ್ಯಕ್ರಮಕ್ಕೆ ಸ್ವಾಮಿಗಳು ಆಹ್ವಾನ ನೀಡಿದ್ದಾರೆ ಎಂದು ಪುನೀತ್ ಹೇಳಿದ್ದಾರೆ. ಈ ವೇಳೆ ಪುನೀತ್ ರಾಜಕುಮಾರ್ ಅವರನ್ನು ನೋಡಲು ಬಂದ ಅಭಿಮಾನಿಗಳು ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಮುಗಿಬಿದ್ದಿದ್ದರು. ಇದರಿಂದಾಗಿ ಅಲ್ಲಿ ಕೆಲ ಹೊತ್ತು ನೂಕು ನುಗ್ಗಲು ಉಂಟಾಯಿತು.

    ನಟಸಾರ್ವಭೌಮ ಚಿತ್ರವನ್ನು ಪವನ್ ಒಡೆಯರ್ ನಿರ್ದೇಶನ ಮಾಡಿದ್ದು, ರಾಕ್‍ಲೈನ್ ವೆಂಕಟೇಶ್ ನಿರ್ಮಿಸಿದ್ದಾರೆ. ಈ ಚಿತ್ರದಲ್ಲಿ ಪುನೀತ್ ರಾಜ್‍ಕುಮಾರ್ ಅವರಿಗೆ ನಾಯಕಿಯಾಗಿ ಡಿಂಪಲ್ ಬೆಡಗಿ ರಚಿತಾ ರಾಮ್ ಹಾಗೂ ಅನುಪಮ ಪರಮೇಶ್ವರನ್ ನಟಿಸಿದ್ದಾರೆ. ಈ ಹಿಂದೆ ಪವನ್ ಒಡೆಯರ್, ಪುನೀತ್ ರಾಜ್‍ಕುಮಾರ್ ಅವರ `ರಣವಿಕ್ರಮ’ ಚಿತ್ರವನ್ನು ನಿರ್ದೇಶಿಸಿದ್ದರು.

    https://www.youtube.com/watch?v=qZ-3tkezU3c&feature=youtu.be

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಗೊಂದಲ ಬೇಡ, ಶನಿವಾರ ನಟಸಾರ್ವಭೌಮ ಆಡಿಯೋ ರಿಲೀಸ್ – ಪವನ್ ಒಡೆಯರ್ ಸ್ಪಷ್ಟನೆ

    ಗೊಂದಲ ಬೇಡ, ಶನಿವಾರ ನಟಸಾರ್ವಭೌಮ ಆಡಿಯೋ ರಿಲೀಸ್ – ಪವನ್ ಒಡೆಯರ್ ಸ್ಪಷ್ಟನೆ

    ಹುಬ್ಬಳ್ಳಿ: ನಟ ಪುನೀತ್ ರಾಜ್ ಕುಮಾರ್ ಮತ್ತು ನಿರ್ಮಾಪಕ ರಾಕ್‍ಲೈನ್ ವೆಂಕಟೇಶ್ ನಿವಾಸದ ಮೇಲೆ ಐಟಿ ದಾಳಿಯಾದ ಹಿನ್ನೆಲೆಯಲ್ಲಿ ಶನಿವಾರ ನಡೆಯಬೇಕಿದ್ದ ನಟಸಾರ್ವಭೌಮ ಚಿತ್ರದ ಆಡಿಯೋ ರಿಲೀಸ್ ಕಾರ್ಯಕ್ರಮ ಮುಂದೂಡಿಕೆ ಆಗಲಿದೆ ಎನ್ನುವ ಗಾಳಿ ಸುದ್ದಿಗೆ ನಿರ್ದೇಶಕ ಪವನ್ ಒಡೆಯರ್ ಬ್ರೇಕ್ ಹಾಕಿದ್ದಾರೆ.

    ಪವನ್ ಒಡೆಯರ್ ಅವರು ಫೇಸ್‍ಬುಕ್ ನಲ್ಲಿ ಲೈವ್ ಬಂದು, ಎಲ್ಲರಿಗೂ ನಮಸ್ಕಾರ, ನಾಳೆ ‘ನಟಸಾರ್ವಭೌಮ’ ಸಿನಿಮಾದ ಆಡಿಯೋ ರಿಲೀಸ್ ಆಗುತ್ತಾ ಎಂಬ ಎಲ್ಲರಿಗೂ ಗೊಂದಲ ಇದೆ. ಶನಿವಾರ ಹುಬ್ಬಳ್ಳಿಯ ನೆಹರು ಕ್ರೀಡಾಂಗಣದಲ್ಲಿ ನಟಸಾರ್ವಭೌಮ ಚಿತ್ರದ ಧ್ವನಿ ಸುರುಳಿ ಬಿಡುಗಡೆ ಕಾರ್ಯಕ್ರಮ ನಿಮ್ಮೆಲ್ಲರ ಸಮ್ಮುಖದಲ್ಲಿ ಅದ್ಧೂರಿಯಾಗಿ ಬಿಡುಗಡೆಯಾಗಲಿದೆ ಎಂದು ತಿಳಿಸಿದ್ದಾರೆ.

    ಎಲ್ಲ ಕನ್ನಡಿಗರ ಆಶೀರ್ವಾದ ನಮ್ಮ ಸಿನಿಮಾದ ಧ್ವನಿ ಸುರುಳಿ ಬಿಡುಗಡೆಯ ಕಾರ್ಯಕ್ರಮದ ಮೇಲೆ ಇರಲಿ. ನಿಮ್ಮ ನೆಚ್ಚಿನ ಸ್ಟಾರ್ ಗಳ ಡ್ಯಾನ್ಸ್ ನಾಳೆ ಇರುತ್ತದೆ. ಆದ್ದರಿಂದ ಯಾರಿಗೂ ಯಾವುದೇ ಗೊಂದಲ ಬೇಡ. ಈ ಮೂಲಕ ನಾನು ನಾಳೆ ಎಲ್ಲ ಕನ್ನಡಾಭಿಮಾನಿಗಳು ನೆಹರೂ ಕ್ರಿಡಾಂಗಣಕ್ಕೆ ಬನ್ನಿ ಅಂತ ಹೇಳಲು ಇಷ್ಟಪಡುತ್ತೇನೆ ಎಂದು ಕಾರ್ಯಕ್ರಮ ನಡೆಯುವ ಬಗ್ಗೆ ಪವನ್ ಒಡೆಯರ್ ಸ್ಪಷ್ಟನೆ ಕೊಟ್ಟಿದ್ದಾರೆ.

    ಹುಬ್ಬಳ್ಳಿಯ ನೆಹರು ಕ್ರೀಡಾಂಗಣದಲ್ಲಿ ಶನಿವಾರ ಸಂಜೆ 5 ಗಂಟೆಗೆ ಬಿಡುಗಡೆಯ ಕಾರ್ಯಕ್ರಮ ನಡೆಯಲಿದೆ. ಜಯಂತ್ ಕಾಯ್ಕಿಣಿ, ಯೋಗರಾಜ್ ಭಟ್, ಕವಿರಾಜ್, ಮತ್ತು ಪವನ್ ವಡೆಯರ್ ಅವರ ಸಾಹಿತ್ಯದಲ್ಲಿ ಮೂಡಿ ಬಂದಿರುವ ಹಾಡುಗಳು ಹೇಗಿರಬಹುದು ಎನ್ನುವ ಕುತೂಹಲ ಹೆಚ್ಚಾಗಿದೆ.


    ಈ ಹಿಂದೆ ಪವನ್ ಒಡೆಯರ್, ಪುನೀತ್ ರಾಜ್‍ಕುಮಾರ್ ಅವರ `ರಣವಿಕ್ರಮ’ ಚಿತ್ರವನ್ನು ನಿರ್ದೇಶಿಸಿದ್ದರು. ಪುನೀತ್ ಜೊತೆ ರಚಿತಾ ರಾಮ್, ಅನುಪಮಾ ಪರಮೇಶ್ವರ್, ಸಾಧುಕೋಕಿಲಾ, ಬಿ. ಸರೋಜಾ ದೇವಿ, ಚಿಕ್ಕಣ್ಣ, ರವಿಶಂಕರ್ ನಟಿಸಿದ್ದು, ಫೆಬ್ರವರಿ 9 ರಂದು ಚಿತ್ರ ಬಿಡುಗಡೆಯಾಗಲಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv