Tag: Nathuram Godse

  • ಬಾಪುರನ್ನು ಕೊಲ್ಲಲು ಗೋಡ್ಸೆಗೆ ಬಂದೂಕು ಹುಡುಕಲು ಸಾವರ್ಕರ್ ಸಹಾಯ: ಗಾಂಧಿ ಮರಿ ಮೊಮ್ಮಗನ ಸ್ಫೋಟಕ ಹೇಳಿಕೆ

    ಬಾಪುರನ್ನು ಕೊಲ್ಲಲು ಗೋಡ್ಸೆಗೆ ಬಂದೂಕು ಹುಡುಕಲು ಸಾವರ್ಕರ್ ಸಹಾಯ: ಗಾಂಧಿ ಮರಿ ಮೊಮ್ಮಗನ ಸ್ಫೋಟಕ ಹೇಳಿಕೆ

    ಮುಂಬೈ: ವಿನಾಯಕ ದಾಮೋದರ್ ಸಾವರ್ಕರ್ (Savarkar) ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಹೇಳಿಕೆಯೊಂದನ್ನು ನೀಡಿದ ಬಳಿಕ ರಾಜಕೀಯ ವಾತಾವರಣ ಬಿಸಿಯಾಗಿದೆ. ರಾಹುಲ್ ಹೇಳಿಕೆಗೆ ಬಿಜೆಪಿ ಕೆಂಡಾಮಂಡಲವಾದರೆ, ಶಿವಸೇನೆ ಕೂಡಾ ಅವರ ಹೇಳಿಕೆಯನ್ನು ಒಪ್ಪುವುದಿಲ್ಲ, ಇದು ಪಕ್ಷದಲ್ಲಿ ವಿಭಜನೆಗೆ ಕಾರಣವಾಗಬಹುದು ಎಂದು ಎಚ್ಚರಿಸಿದೆ.

    ಈ ನಡುವೆ ಮಹಾತ್ಮ ಗಾಂಧಿಯವರ (Mahatma Gandhi) ಮರಿಮೊಮ್ಮಗ ತುಷಾರ್ ಗಾಂಧಿ (Tushar Gandhi) ಸಾವರ್ಕರ್ ಬಗ್ಗೆ ಟ್ವೀಟ್ ಮಾಡಿದ್ದಾರೆ. ಸಾವರ್ಕರ್ ಅವರು ಬ್ರಿಟಿಷರಿಗೆ ಸಹಾಯ ಮಾಡಿದ್ದು ಮಾತ್ರವಲ್ಲದೇ ನಾಥೂರಾಂ ಗೋಡ್ಸೆ (Nathuram Godse) ಅವರಿಗೆ ಬಾಪು ಅವರನ್ನು ಕೊಲ್ಲಲು ಸಮರ್ಥ ಬಂದೂಕನ್ನು ಪಡೆಯಲು ಸಹಾಯ ಮಾಡಿದ್ದರು ಎಂದು ತಿಳಿಸಿದ್ದಾರೆ. ರಾಹುಲ್ ಗಾಂಧಿ ಬಳಿಕ ಇದೀಗ ತುಷಾರ್ ಅವರ ಹೇಳಿಕೆ ವಿವಾದ ಸೃಷ್ಟಿಸುವ ಸಾಧ್ಯತೆಯಿದೆ.

    ಟೀಟ್‌ನಲ್ಲೇನಿದೆ?
    ಸಾವರ್ಕರ್ ಬ್ರಿಟಿಷರಿಗೆ ಸಹಾಯ ಮಾಡಿದ್ದಲ್ಲದೇ, ಬಾಪು ಅವರನ್ನು ಕೊಲ್ಲಲು ನಾಥೂರಾಂ ಗೋಡ್ಸೆಗೆ ಸಮರ್ಥ ಬಂದೂಕನ್ನು ಹುಡುಕಲು ಸಹಾಯ ಮಾಡಿದ್ದರು. ಬಾಪು ಹತ್ಯೆಗೂ 2 ದಿನಗಳ ಮೊದಲು ಗೋಡ್ಸೆ ಬಳಿ ಪ್ರಬಲವಾದ ಯಾವುದೇ ಶಸ್ತ್ರಗಳಿರಲಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಗೃಹ ಸಚಿವರ ಮನೆಯ ಸುತ್ತಮುತ್ತಲೇ ಉಗ್ರರು ಅಡಗಿದ್ದಾರೆ – ಮುತಾಲಿಕ್

    ಟ್ವೀಟ್ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ತುಷಾರ್ ಗಾಂಧಿ ತಮ್ಮ ಹೇಳಿಕೆಯನ್ನು ವಿವರಿಸಿದ್ದಾರೆ. ನಾನು ಯಾವುದೇ ಆರೋಪ ಮಾಡುತ್ತಿಲ್ಲ. ಇತಿಹಾಸದಲ್ಲಿ ದಾಖಲಾಗಿರುವುದನ್ನು ಹೇಳುತ್ತಿದ್ದೇನೆ. ಪೊಲೀಸ್ ಎಫ್‌ಐಆರ್ ಪ್ರಕಾರ ನಾಥೂರಾಂ ಗೋಡ್ಸೆ ಮತ್ತು ವಿನಾಯಕ ಆಪ್ಟೆ ಸಾವರ್ಕರ್ ಅವರು 1948 ರ ಜನವರಿ 26, 27 ರಂದು ಭೇಟಿಯಾಗಿದ್ದರು. ಅವರ ಭೇಟಿಯಾಗುವವರೆಗೂ ಗೋಡ್ಸೆ ಬಳಿ ಬಂದೂಕು ಇರಲಿಲ್ಲ. ಅವರು ಬಂದೂಕು ಹುಡುಕುತ್ತಾ ಮುಂಬೈನಾದ್ಯಂತ ಸುತ್ತಾಡಿದ್ದಾರೆ. ಆದರೆ ಈ ಭೇಟಿಯ ಬಳಿಕ ಅವರು ನೇರವಾಗಿ ದೆಹಲಿಗೆ ಹೋಗಿ, ಅಲ್ಲಿಂದ ಗ್ವಾಲಿಯರ್‌ಗೆ ಹೋದರು. ಅಲ್ಲಿ ಅವರಿಗೆ ಒಳ್ಳೆಯ ಪಿಸ್ತೂಲ್ ಸಿಕ್ಕಿದೆ. ಇದೆಲ್ಲವೂ ಬಾಪು ಹತ್ಯೆಯ 2 ದಿನಗಳ ಮೊದಲು ನಡೆದಿದೆ. ಇದು ಆರೋಪ ಅಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮಹಾನಗರ ಪಾಲಿಕೆ ಚುನಾವಣೆ ಟಿಕೆಟ್ ಮಾರಾಟ – ಆಪ್ ವಿರುದ್ಧ ಬಿಜೆಪಿ ಗಂಭೀರ ಆರೋಪ

    Live Tv
    [brid partner=56869869 player=32851 video=960834 autoplay=true]

  • ಗಾಂಧಿ ಕೊಂದ ಗೋಡ್ಸೆ ಉತ್ಸವ ಮಾಡುವವರಿಂದ ಗಾಂಧೀಜಿ ಬಗ್ಗೆ ತಿಳಿದುಕೊಳ್ಳಬೇಕಾ – ಬೊಮ್ಮಾಯಿಗೆ ಸಿದ್ದು ತಿರುಗೇಟು

    ಗಾಂಧಿ ಕೊಂದ ಗೋಡ್ಸೆ ಉತ್ಸವ ಮಾಡುವವರಿಂದ ಗಾಂಧೀಜಿ ಬಗ್ಗೆ ತಿಳಿದುಕೊಳ್ಳಬೇಕಾ – ಬೊಮ್ಮಾಯಿಗೆ ಸಿದ್ದು ತಿರುಗೇಟು

    ಮೈಸೂರು: ಮಹಾತ್ಮ ಗಾಂಧಿಯನ್ನು (Mahatma Gandhi) ಕೊಂದ ನಾಥೂರಾಂ ಗೋಡ್ಸೆ (Nathuram Godse) ಉತ್ಸವವರಿಂದ ನಾವು ಗಾಂಧೀಜಿ ಬಗ್ಗೆ ಕೇಳಿ ತಿಳಿದುಕೊಳ್ಳಬೇಕಾ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಟೀಕ್ರಾಪ್ರಹಾರ ನಡೆಸಿದ್ದಾರೆ.

    ಮಹಾತ್ಮ ಗಾಂಧೀಜಿ ಜಯಂತಿ ಆಚರಣೆ ವೇಳೆ ರಾಹುಲ್‌ ಗಾಂಧಿ (Rahul Gandhi) ನಕಲಿ ಗಾಂಧಿ ಎಂದು ಬಸವರಾಜ ಬೊಮ್ಮಾಯಿ ಅವರು ವಾಗ್ದಾಳಿ ನಡೆಸಿದ್ದರು. ಸಿಎಂ ಹೇಳಿಕೆಗೆ ಸಿದ್ದರಾಮಯ್ಯ ಅವರು ತಿರುಗೇಟು ನೀಡಿದ್ದಾರೆ. ಅವರು ಗಾಂಧಿವಾದಿಗಳಾ? ಅವರು ಗಾಂಧಿ ಕೊಂದವರು. ಗಾಂಧಿ ಕೊಂದ ಗೋಡ್ಸೆ ಉತ್ಸವ ಮಾಡುವವರು‌. ಬೊಮ್ಮಾಯಿಗೆ ಗಾಂಧಿನೂ ಗೊತ್ತಿಲ್ಲಾ, ಗೋಡ್ಸೆನೂ ಗೊತ್ತಿಲ್ಲ, ಸಾವರ್ಕರ್ ಕೂಡ ಗೊತ್ತಿಲ್ಲ. ನಾಥೂರಾಂ ಗೋಡ್ಸೆ ಮೆರವಣಿಗೆ ಮಾಡಿದವರು ಇವರು. ಇವರಿಂದ ಗಾಂಧಿ ಬಗ್ಗೆ ಕೇಳಬೇಕಾ? ಎಂಥ ವಿಪರ್ಯಾಸ ಇದು ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ರಾಹುಲ್ ಗಾಂಧಿ ನಕಲಿ ಗಾಂಧಿ: ಬೊಮ್ಮಾಯಿ

    ಅವರು ಬಹಳ ಜನ ಬೇಲ್ ಮೇಲಿಲ್ವಾ? ಆರು ಜನ ಮಂತ್ರಿಗಳು ಆ್ಯಂಟಿಸಿಪೇಟರಿ ಬೇಲ್ ತೆಗೆದುಕೊಂಡರಲ್ಲ ಯಾಕ್ರೀ? ಕೋರ್ಟ್‌ಗೆ ಹೋಗಿ ಸ್ಟೇ ತೆಗೆದುಕೊಂಡು ಬಂದ್ರಲ್ಲ ಯಾಕೆ? ಟಿವಿಯಲ್ಲಿ ಅಶ್ಲೀಲ ಪ್ರಚಾರ ಆಗತ್ತೆ ಅಂತ ಸ್ಟೇ ತಂದರು. ಯಡಿಯೂರಪ್ಪ, ಸೋಮಣ್ಣ, ಅಶೋಕ ಬೇಲ್ ಮೇಲೆ ಇಲ್ವಾ? ಇವರ ಅಮಿತ್‌ ಶಾ ಅವರೇ ಜೈಲಿಗೆ ಹೋಗಿದ್ರಲ್ಲಪ್ಪ. ಶಾ ಏನಾಗಿದ್ರು, ಈಗ ಏನಾಗಿದ್ದಾರೆ? ಗೃಹ ಸಚಿವರೇ ಜೈಲಿಗೆ ಹೋಗಿದ್ರಲ್ಲಪ್ಪಾ ಎಂದು ಕುಟುಕಿದ್ದಾರೆ.

    ಅವರ ತಟ್ಟೆಯಲ್ಲಿ ಹೆಣನೇ ಬಿದ್ದಿದೆ. ನಮ್ಮ ತಟ್ಟೆಯಲ್ಲಿ ನೊಣ ಬಿದ್ದಿದೆ ಅಂತಾರೆ. ಬಿಜೆಪಿಯವರನ್ನು ಅಧಿಕಾರದಿಂದ ತೆಗೆಯಲೇಬೇಕು ಅಂತ ಜನ ತೀರ್ಮಾನ ಮಾಡಿಬಿಟ್ಟಿದ್ದಾರೆ. ಈ ಸಲ ಜನರೇ ಬದಲಾವಣೆ ಮಾಡ್ತಾರೆ. ವರುಣ ಕ್ಷೇತ್ರದಿಂದ ನಿಲ್ಲಬೇಕು ಅಂತ ನಾನು ತೀರ್ಮಾನ ಮಾಡಿಲ್ಲ. ಎಲ್ಲಿ ನಿಲ್ಲಬೇಕು ಅಂತ ತೀರ್ಮಾನ ಮಾಡಿಲ್ಲ. 2 ತಿಂಗಳು ಬಿಟ್ಟು ತೀರ್ಮಾನ ಮಾಡುತ್ತೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಗಾಂಧಿ ಜಯಂತಿ- ದ್ರೌಪದಿ ಮುರ್ಮು, ಸೋನಿಯಾ ಗಾಂಧಿ ಸೇರಿ ಗಣ್ಯರಿಂದ ನಮನ

    ಅಡ್ವಾಣಿ ರಥಯತ್ರೆ ಮಾಡಿದ್ರಲ್ಲ, ಅದು ಶೋ ನಾ? ಮುರುಳಿ ಮನೋಹರ ಜೋಷಿ ಮಾಡಿದ ಯಾತ್ರೆ ಅದು ಶೋನಾ? ನಾವು ಮಾಡಿದ್ರೆ ಶೋ, ಅವರು ಮಾಡಿದರೆ ಜನಪರ ಯಾತ್ರೆನಾ? ಜನ ಬೆಂಬಲ ಇಲ್ಲದಿದ್ದರೆ ಬರೀ ಯಾತ್ರೆ ಮಾಡಿದರೆ ಆಗತ್ತಾ? ಬರೀ ಸಭೆ ಮಾಡಿದರೆ ಆಗುತ್ತಾ? ಅಲ್ಟಿಮೇಟ್ ಜನರೇ ಪ್ರಭುಗಳು ಎಂದು ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಗ್ರಾಮೀಣ ರಸ್ತೆಗೆ ಗೋಡ್ಸೆ ಹೆಸರು – ಪೊಲೀಸರ ಸಮ್ಮುಖದಲ್ಲಿ ತೆರವು

    ಗ್ರಾಮೀಣ ರಸ್ತೆಗೆ ಗೋಡ್ಸೆ ಹೆಸರು – ಪೊಲೀಸರ ಸಮ್ಮುಖದಲ್ಲಿ ತೆರವು

    ಉಡುಪಿ: ಮಹಾತ್ಮ ಗಾಂಧಿಯನ್ನು ಕೊಂದ ನಾಥೂರಾಮ್ ಗೋಡ್ಸೆ ಹೆಸರನ್ನು ಕಾರ್ಕಳ ತಾಲೂಕಿನ ಬೋಳ ಗ್ರಾಮದ ರಸ್ತೆಗೆ ನಾಮಕರಣ ಮಾಡಲಾಗಿದ್ದು ಭಾರಿ ಚರ್ಚೆಗೆ ಕಾರಣವಾಗಿದೆ.

    ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಬೋಳ ಗ್ರಾಮಪಂಚಾಯತ್‍ನ ರಸ್ತೆಯೊಂದಕ್ಕೆ ನಾಥೂರಾಮ್ ಗೋಡ್ಸೆ ರಸ್ತೆ ಎಂದು 2 ದಿನಗಳ ಹಿಂದೆ ಸಿಮೆಂಟಿನ ಬೋರ್ಡ್ ಒಂದನ್ನು ಅಳವಡಿಸಲಾಗಿತ್ತು. ಈ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಕಾರ್ಕಳ ಯುವ ಕಾಂಗ್ರೆಸ್ ಇದನ್ನು ಖಂಡಿಸಿದೆ. ಬೋಳ ಗ್ರಾಮ ಪಂಚಾಯತ್‍ಗೆ ಭೇಟಿ ನೀಡಿದ ಯುವ ಕಾಂಗ್ರೆಸ್ ಮುಖಂಡರು ಪಿಡಿಒಗೆ ಮನವಿ ಕೊಟ್ಟಿದ್ದಾರೆ. ಜೊತೆಗೆ ಬೋರ್ಡನ್ನು ತೆರವುಗೊಳಿಸದಿದ್ದರೆ ನಾಳೆಯೇ ಹೋರಾಟ ನಡೆಸುತ್ತೇವೆ. ಪಂಚಾಯತ್ ಮುಂದೆ ನಿರಂತರ ಧರಣಿ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ವಿದ್ಯುತ್ ಕಂಬಕ್ಕೆ ದನದ ಬುರುಡೆ ಕಟ್ಟಿ ಕಿಡಿಗೇಡಿಗಳಿಂದ ವಿಕೃತಿ

    ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಪಂಚಾಯತ್ ಪಿಡಿಒ ರಾಜೇಂದ್ರ, ಬೋರ್ಡ್ ಅಳವಡಿಸಿರುವ ಬಗ್ಗೆ ಪಂಚಾಯತ್‍ಗೆ ಯಾವುದೇ ಮಾಹಿತಿ ಇಲ್ಲ. ಸಾಮಾನ್ಯ ಸಭೆಯಲ್ಲಿ ಯಾವುದೇ ನಿರ್ಣಯಗಳು ಆಗಿಲ್ಲ ಎಂದರು. ಇದಾಗಿ ಕೆಲವೇ ಹೊತ್ತಿನಲ್ಲಿ ಬೋಳ ಪಂಚಾಯತ್ ಸಿಬ್ಬಂದಿ ಮತ್ತು ಕಾರ್ಕಳ ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಗೋಡ್ಸೆ ಹೆಸರಿನ ಬೋರ್ಡನ್ನು ತೆರವುಗೊಳಿಸಿದ್ದಾರೆ. ಒಬ್ಬ ವ್ಯಕ್ತಿ ತನ್ನ ಮನೆಗೆ ಹೋಗುವ ರಸ್ತೆಗೆ ಈ ರೀತಿಯ ನಾಮಫಲಕವನ್ನು ಅಳವಡಿಸಿದ್ದಾರೆ ಎನ್ನಲಾಗಿದೆ. ಯುವ ಕಾಂಗ್ರೆಸ್ ಮನವಿ ಮೇರೆಗೆ ಪಂಚಾಯತ್ ಮತ್ತು ಪೊಲೀಸರ ಸಮ್ಮುಖದಲ್ಲಿ ಬೋರ್ಡ್ ತೆರವುಗೊಳಿಸಲಾಯಿತು. ಇದನ್ನೂ ಓದಿ: ಪತಿಯ ಹತ್ಯೆಗೆ ಸುಪಾರಿ ಕೊಟ್ಟಿದ್ದ ಪತ್ನಿ ಪ್ಲ್ಯಾನ್ ಫ್ಲಾಪ್

  • 3 ತಿಂಗಳ ನಂತರ ಕಾಳಿಚರಣ್ ಮಹಾರಾಜ್‍ಗೆ ಸಿಕ್ತು ಜಾಮೀನು

    3 ತಿಂಗಳ ನಂತರ ಕಾಳಿಚರಣ್ ಮಹಾರಾಜ್‍ಗೆ ಸಿಕ್ತು ಜಾಮೀನು

    ರಾಯ್‍ಪುರ: ದ್ವೇಷ ಭಾಷಣ ಮಾಡಿದ ಪ್ರಕರಣದ ಹಿನ್ನೆಲೆ ಹಿಂದೂ ಧಾರ್ಮಿಕ ಮುಖಂಡ ಕಾಳಿಚರಣ್ ಮಹಾರಾಜ್ ಕಳೆದ ಮೂರು ತಿಂಗಳಿಂದ ಸೆರೆವಾಸ ಅನುಭವಿಸುತ್ತಿದ್ದರು. ಆದರೆ ಈಗ ಛತ್ತೀಸ್‍ಗಢ ಹೈಕೋರ್ಟ್ ಕಾಳಿಚರಣ್ ಅವರಿಗೆ ಜಾಮೀನು ನೀಡಿದೆ.

    Kalicharan Maharaj: Kali devotee, who claimed a 'vision' | India News,The Indian Express

    ರಾಜ್ಯ ರಾಜಧಾನಿ ರಾಯ್‍ಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಹಾತ್ಮ ಗಾಂಧಿ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ಮತ್ತು ಹಂತಕ ನಾಥೂರಾಂ ಗೋಡ್ಸೆಯನ್ನು ಹೊಗಳಿದ್ದಕ್ಕಾಗಿ ಹಿಂದೂ ಧಾರ್ಮಿಕ ಮುಖಂಡ ಕಾಳಿಚರಣ್ ಅವರನ್ನು ಬಂಧನಕ್ಕೊಳಪಡಿಸಲಾಗಿತ್ತು. ಈ ಕುರಿತು ಭಾರೀ ಚರ್ಚೆಯಾಗುತ್ತಿತ್ತು. ಕಾಳಿಚರಣ್ ವಕೀಲರು ಜಾಮೀನಿಗಾಗಿ ಓಡಾಡುತ್ತಿದ್ದರೂ ಸಿಕ್ಕಿರಲಿಲ್ಲ. ಆದರೆ ಮೂರು ತಿಂಗಳ ನಂತರ ಛತ್ತೀಸ್‍ಗಢ ಹೈಕೋರ್ಟ್ ಶುಕ್ರವಾರ ಜಾಮೀನು ನೀಡಿದೆ. ಇದನ್ನೂ ಓದಿ: ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಪೊಲೀಸರ ಮಸ್ತ್ ಡ್ಯಾನ್ಸ್: ಪರ,ವಿರೋಧ ಚರ್ಚೆ

    ಡಿಸೆಂಬರ್ 30 ರಂದು ಮಧ್ಯಪ್ರದೇಶದ ರಾಯ್‍ಪುರ ಕಾರ್ಯಕ್ರಮದಲ್ಲಿ ಕಾಳಿಚರಣ್ ಅವರು ಮುಖ್ಯ ಅತಿಥಿಗಳಾಗಿ ಬಂದಿದ್ದರು. ಈ ವೇಳೆ ಕಾಳಿಚರಣ್ ಅವರು ಗಾಂಧಿ ದೇಶವನ್ನು ನಾಶಮಾಡುತ್ತಿದ್ದಾರೆ ಎಂದು ಆರೋಪಿಸಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.

    ಈ ವೀಡಿಯೋದಲ್ಲಿ ಅವರು, ನಾನು ನಾಥೂರಾಂ ಗೋಡ್ಸೆಗೆ ನಮನ ಸಲ್ಲಿಸುತ್ತೇನೆ ಎಂದು ಹೇಳಿದ್ದರು. ಈ ಹೇಳಿಕೆ ಚರ್ಚೆಗೆ ಕಾರಣವಾಗಿತ್ತು. ವಿಚಾರಣೆಯಲ್ಲಿ ಕಾಳಿಚರಣ್ ಪರ ವಕೀಲ ಕಿಶೋರ್ ಭಾದುರಿ ಅವರು, ತಮ್ಮ ಕಕ್ಷಿದಾರರು ನಿರಪರಾಧಿಯಾಗಿದ್ದು, ರಾಜಕೀಯ ಪೈಪೋಟಿಯಿಂದಾಗಿ ಈ ಪ್ರಕರಣದಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಹೈಕೋರ್ಟ್‍ಗೆ ತಿಳಿಸಿದ್ದರು. ಇದನ್ನೂ ಓದಿ: ಬಾಲ್ಯ ವಿವಾಹ ಮಾಡಿ ತಾಳಿ ಬಿಚ್ಚಿಸಿ ಪರೀಕ್ಷೆಗೆ ಕಳುಹಿಸಿದ್ರು

  • ʼನನ್ನ ಆದರ್ಶ ನಾಥೂರಾಂ ಗೋಡ್ಸೆʼ – ಭಾಷಣ ಸ್ಪರ್ಧೆ ಆಯೋಜಿಸಿದ್ದ ಅಧಿಕಾರಿ ಸೇವೆಯಿಂದ ಅಮಾನತು

    ʼನನ್ನ ಆದರ್ಶ ನಾಥೂರಾಂ ಗೋಡ್ಸೆʼ – ಭಾಷಣ ಸ್ಪರ್ಧೆ ಆಯೋಜಿಸಿದ್ದ ಅಧಿಕಾರಿ ಸೇವೆಯಿಂದ ಅಮಾನತು

    ಅಹಮದಾಬಾದ್: ವಿದ್ಯಾರ್ಥಿಗಳಿಗೆ ನಾಥೂರಾಂ ಗೋಡ್ಸೆಯ ಬಗ್ಗೆ ಭಾಷಣ ಸ್ಪರ್ಧೆ ಆಯೋಜಿಸಿದ್ದ ಅಧಿಕಾರಿಯನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.

    ‘ಮಾರೋ ಆದರ್ಶ್ ನಾಥೂರಾಂ ಗೋಡ್ಸೆ’ (ನನ್ನ ಆದರ್ಶ ನಾಥೂರಾಂ ಗೋಡ್ಸೆ) ಎಂಬ ವಿಷಯದ ಬಗ್ಗೆ ವಲ್ಸಾದ್ ಜಿಲ್ಲೆಯ ಹಲವು ಸರ್ಕಾರಿ ಮತ್ತು ಖಾಸಗಿ ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆ ಆಯೋಜಿಸಲಾಗಿತ್ತು.

    ಈ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಪ್ರಕಟವಾದ ಬೆನ್ನಲ್ಲೇ ಸ್ಪರ್ಧೆ ಆಯೋಜಿಸಿದ್ದ ಯುವಜನ ಅಭಿವೃದ್ಧಿ ಅಧಿಕಾರಿ ನೀತಾಬೆನ್ ಗಾವ್ಲಿಯನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಗುಜರಾತ್ ಸರ್ಕಾರದ ಯುವಜನ ಸೇವೆಗಳು ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಇಲಾಖೆ ಈಗ ವಿಚಾರಣೆ ಆರಂಭಿಸಿದೆ.

    ಸೋಮವಾರ ಗುಜರಾತ್ ಸರ್ಕಾರದ ಯುವಜನ ಸೇವಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಇಲಾಖೆಯಡಿಯಲ್ಲಿ ಜಿಲ್ಲಾ ಮಟ್ಟದ ಬಾಲಪ್ರತಿಭಾ ಶೋಧ ಸ್ಪರ್ಧೆ ಅಂಗವಾಗಿ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. 5 ರಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಭಾಷಣ ಸ್ಪರ್ಧೆಯ ವಿಜೇತರಿಗೆ ಬಹುಮಾನವನ್ನೂ ವಿತರಿಸಲಾಗಿತ್ತು. ಇದನ್ನೂ ಓದಿ: ಪಾಕಿಸ್ತಾನಕ್ಕೆ ಹೋಗುವ ಬದಲು ಭಾರತವನ್ನು ಅಜ್ಜಂದಿರು ಆಯ್ಕೆ ಮಾಡಿದ್ದು ಯಾಕೆ: ಹಿಜಬ್‌ ವಿವಾದಕ್ಕೆ ಸ್ವಾಮಿ ಪ್ರಶ್ನೆ

    ಈ ಕಾರ್ಯಕ್ರಮವನ್ನು ಆಯೋಜಿಸಲು ಶಾಲೆಯ ಆವರಣವನ್ನು ಮಾತ್ರ ನೀಡಿದ್ದೇವೆ ಮತ್ತು ಶಾಲೆಯ ಯಾರೂ ಅದರಲ್ಲಿ ಭಾಗವಹಿಸಲಿಲ್ಲ ಎಂದು ಕುಸುಮ್‌ ವಿದ್ಯಾಲಯ ತಿಳಿಸಿದೆ.

    ಜಿಲ್ಲಾ ಶಿಕ್ಷಣಾಧಿಕಾರಿ ಬಿ ಡಿ ಬಾರಯ್ಯ ಪ್ರತಿಕ್ರಿಯಿಸಿ, ಜಿಲ್ಲಾ ಯುವ ವಿಕಾಸ ಕಛೇರಿಯಿಂದ ಈ ಕಾರ್ಯಕ್ರಮವನ್ನು ಆಯೋಜಿಸಿದ್ದು ನಮಗೆ ಈ ಬಗ್ಗೆ ಮಾಹಿತಿ ಇರಲಿಲ್ಲ. ಯುವ ವಿಕಾಸ ಕಛೇರಿಯು ಫೆಬ್ರವರಿ 8 ರಂದು ಜಿಲ್ಲೆಯ ಎಲ್ಲಾ 25 ಸರ್ಕಾರಿ ಮತ್ತು ಖಾಸಗಿ ಶಾಲೆಗಳಿಗೆ ಪತ್ರವನ್ನು ರವಾನಿಸಿ ಫೆಬ್ರವರಿ 14 ರಂದು ವಲ್ಸಾದ್‌ನ ತಿಥಾಲ್ ರಸ್ತೆಯಲ್ಲಿರುವ ಕುಸುಮ್ ವಿದ್ಯಾಲಯದಲ್ಲಿ ನಡೆಯಲಿರುವ ವಿವಿಧ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸುವಂತೆ ಕೋರಿತ್ತು ಎಂದು ತಿಳಿಸಿದ್ದಾರೆ.

    ಹಿರಿಯ ಕಾಂಗ್ರೆಸ್ ನಾಯಕ ಅರ್ಜುನ್ ಮೊದ್ವಾಡಿಯಾ ಈ ಸ್ಪರ್ಧೆಯನ್ನು ಖಂಡಿಸಿದ್ದಾರೆ. ಭಾಷಣ ಸ್ಪರ್ಧೆಯ ಹೆಸರಿನಲ್ಲಿ ಗೋಡ್ಸೆ ಒಬ್ಬ ಹೀರೋ ಎಂದು ಮಕ್ಕಳಿಗೆ ಕಲಿಸುವುದು ಅತ್ಯಂತ ನಾಚಿಕೆಗೇಡಿನ ಪ್ರಯತ್ನ. ಮಕ್ಕಳ ಮನಸ್ಸಿನಲ್ಲಿ ಮಹಾತ್ಮ ಗಾಂಧಿಯ ಬಗ್ಗೆ ದ್ವೇಷವನ್ನು ಸೃಷ್ಟಿಸಲು ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಗೋಡ್ಸೆ ಪೂಜೆಯನ್ನು ಬಿಜೆಪಿ ನಿಲ್ಲಸದೇ ಇದ್ದರೆ ನಾವು ಪ್ರತಿಭಟಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

  • ನಿಜವಾದ ಹಿಂದುತ್ವವಾದಿಗಳು ಜಿನ್ನಾನನ್ನು ಕೊಲ್ಲುತ್ತಿದ್ದರು: ಸಂಜಯ್ ರಾವತ್

    ನಿಜವಾದ ಹಿಂದುತ್ವವಾದಿಗಳು ಜಿನ್ನಾನನ್ನು ಕೊಲ್ಲುತ್ತಿದ್ದರು: ಸಂಜಯ್ ರಾವತ್

    ಮುಂಬೈ: ನಿಜವಾದ ಹಿಂದುತ್ವವಾದಿಗಳು ಪಾಕಿಸ್ತಾನದ ಸಂಸ್ಥಾಪಕ ಮೊಹಮ್ಮದ್ ಅಲಿ ಜಿನ್ನಾ ಅವರನ್ನು ಕೊಲ್ಲುತ್ತಿದ್ದರೆ ಹೊರತು ಮಹಾತ್ಮ ಗಾಂಧಿಯನ್ನಲ್ಲ ಎಂದು ಶಿವಸೇನಾ ಸಂಸದ ಸಂಜಯ್ ರಾವತ್ ಹೇಳಿದರು.

    ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಟ್ವೀಟ್‌ಗೆ ಪ್ರತಿಕ್ರಿಯಿಸಿದ ಅವರು, ಭಾರತವನ್ನು ವಿಭಜಿಸಿ ಪಾಕಿಸ್ತಾನದ ಹುಟ್ಟಿಗೆ ಜಿನ್ನಾ ಕಾರಣರಾದರು. ಅವರನ್ನು ಅಂದು ಯಾರದರೂ ಕೊಂದಿದ್ದರೆ ನಿಜವಾದ ಹಿಂದೂತ್ವವಾದಿ ಎನಿಸಿಕೊಳ್ಳುತ್ತಿದ್ದರು. ಆದರೆ ಅಂತಹ ಯಾವ ಕೆಲಸವನ್ನು ಮಾಡದೇ ಗೋಡ್ಸೆ ಗಾಂಧಿ ಅವರನ್ನು ಕೊಂದಿದ್ದು ತಪ್ಪು, ಗಾಂಧೀಜಿ ಹತ್ಯೆಗೆ ಇಡೀ ಜಗತ್ತೆ ಶೋಕವನ್ನು ವ್ಯಕ್ತಪಡಿಸುತ್ತದೆ ಎಂದು ಪ್ರತಿಕ್ರಿಯಿಸಿದರು.

    ಹಿಂದುತ್ವವಾದಿ ಮಹಾತ್ಮ ಗಾಂಧಿಯನ್ನು ಗುಂಡಿಕ್ಕಿ ಕೊಂದಿದ್ದಾರೆ. ಆದರೆ ಇಂದು ಸತ್ಯವೇ ಮೇಲುಗೈ ಸಾಧಿಸಿದೆ. ಬಾಪು ಇನ್ನೂ ಜೀವಂತವಾಗಿದ್ದಾರೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದರು. ಇದನ್ನೂ ಓದಿ:  ಗಾಂಧೀಜಿಗೆ ಒಬ್ಬ ಹಿಂದುತ್ವವಾದಿ ಗುಂಡು ಹಾರಿಸಿ ಕೊಂದ: ರಾಹುಲ್‌ ಗಾಂಧಿ

    ಜ.30ರಂದು ಮಹಾತ್ಮ ಗಾಂಧೀಜಿಯವರ ಪುಣ್ಯತಿಥಿ. ಇಂದು ಬೆಳಿಗ್ಗೆ ಗಾಂಧೀಜಿಯವರ ಸಮಾಧಿ ಸ್ಥಳಕ್ಕೆ ಅನೇಕ ಗಣ್ಯರು ತೆರಳಿ ನಮನ ಸಲ್ಲಿಸಿದ್ದಾರೆ. ಇದನ್ನೂ ಓದಿ: ಬಾಪು ಆದರ್ಶಗಳನ್ನು ಮತ್ತಷ್ಟು ಜನಪ್ರಿಯಗೊಳಿಸುತ್ತೇವೆ: ಮೋದಿ

  • ಗಾಂಧಿ ನಿಂದಿಸಿ, ನಾಥೂರಾಮ್ ಗೋಡ್ಸೆ ಹೊಗಳಿದ ಹಿಂದೂ ಧಾರ್ಮಿಕ ಮುಖಂಡ ಅರೆಸ್ಟ್

    ಗಾಂಧಿ ನಿಂದಿಸಿ, ನಾಥೂರಾಮ್ ಗೋಡ್ಸೆ ಹೊಗಳಿದ ಹಿಂದೂ ಧಾರ್ಮಿಕ ಮುಖಂಡ ಅರೆಸ್ಟ್

    ಭೋಪಾಲ್: ಮಹಾತ್ಮ ಗಾಂಧಿಯನ್ನು ಅವಮಾನಿಸಿ, ನಾಥೂರಾಮ್ ಗೋಡ್ಸೆಯನ್ನು ಹೊಗಳಿದ ಹಿನ್ನೆಲೆ ಮಹಾರಾಷ್ಟ್ರದ ಹಿಂದೂ ಧಾರ್ಮಿಕ ಮುಖಂಡನನ್ನು ಪೊಲೀಸರು ಬಂಧಿಸಿದ್ದಾರೆ.

    ಹಿಂದೂ ಧಾರ್ಮಿಕ ಮುಖಂಡ ಕಾಳಿಚರಣ್ ಮಹಾರಾಜ್ ಬಂಧಿತ ಆರೋಪಿ. ಈತ ಛತ್ತೀಸ್‌ಗಢದ ರಾಯ್‌ಪುರದಲ್ಲಿ ನಡೆದ ಧರ್ಮ ಸಂಸದ್ ಸಭೆಯಲ್ಲಿ ಪಾಲ್ಗೊಂಡು ವಿವಾದಾತ್ಮಕ ಭಾಷಣ ಮಾಡಿದ್ದ.

    ಭಾಷಣದಲ್ಲಿ ಏನು ಹೇಳಿದ್ದಾರೆ?
    ಮೋಹನ್‌ದಾಸ್ ಕರಮಚಂದ್ ಗಾಂಧಿಯವರು ಭಾರತ ದೇಶವನ್ನು ನಾಶಪಡಿಸಿದ್ದಾರೆ. ಅವರನ್ನು ಕೊಂದ ನಾಥೂರಾಮ್ ಗೋಡ್ಸೆಗೆ ನಮಸ್ಕಾರಗಳು. ಹಿಂದೂ ಧರ್ಮವನ್ನು ರಕ್ಷಿಸಲು ಜನರು ಒಳ್ಳೆಯ ಹಿಂದೂ ನಾಯಕನನ್ನು ಆಯ್ಕೆ ಮಾಡಬೇಕೆಂದು ಭಾಷಣದಲ್ಲಿ ಹೇಳಿದ್ದಾರೆ. ಇದನ್ನೂ ಓದಿ: ಕ್ಷೀರಭಾಗ್ಯ ಯೋಜನೆಯಡಿ ಮಕ್ಕಳಿಗೆ ನೀಡುವ ಹಾಲಿನ ಪುಡಿಗೇ ಕನ್ನ

    ಭಾಷಣದ ವೀಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕಾಂಗ್ರೆಸ್ ನಾಯಕ ಪ್ರಮೋದ್ ದುಬೆ ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮಹಾತ್ಮ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಕಾಳಿಚರಣ್ ಭಾಷಣದ ವೀಡಿಯೋವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

    ಪೊಲೀಸರ ಟ್ರ‍್ಯಾಕಿಂಗ್‌ನಿಂದ ತಪ್ಪಿಸಿಕೊಳ್ಳಲು, ಕಾಳಿಚರಣ್ ಆಪ್ತ ಸಹಾಯಕರು ತಮ್ಮ ಫೋನ್‌ಗಳನ್ನು ಸ್ವಿಚ್ ಆಫ್ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ಇಂದು ಬೆಳಗ್ಗೆ 10 ಗಂಟೆಗೆ ಪೊಲೀಸರ ತಂಡ ಅವರನ್ನು ಅರೆಸ್ಟ್ ಮಾಡಿದೆ. ನಂತರ ಅವರನ್ನು ಛತ್ತೀಸ್‌ಗಢದ ರಾಜಧಾನಿ ರಾಯ್‌ಪುರಕ್ಕೆ ಕರೆದೊಯ್ದಿದ್ದಾರೆ. ಸಂಜೆ ವೇಳೆಗೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಹೊಸ ವರ್ಷ ಸಂಭ್ರಮಾಚರಣೆ ತಡೆಯಲು ಚೆನ್ನೈನಲ್ಲಿ ವಾಹನ ಸಂಚಾರ ಬ್ಯಾನ್

  • ನಾಥೂರಾಮ್ ಗೋಡ್ಸೆ ಪ್ರತಿಮೆ ಧ್ವಂಸಗೊಳಿಸಿದ ಕಾಂಗ್ರೆಸ್ಸಿಗರು!

    ನಾಥೂರಾಮ್ ಗೋಡ್ಸೆ ಪ್ರತಿಮೆ ಧ್ವಂಸಗೊಳಿಸಿದ ಕಾಂಗ್ರೆಸ್ಸಿಗರು!

    ಗಾಂಧಿನಗರ: ಮಹಾತ್ಮಾ ಗಾಂಧಿ ಹತ್ಯೆ ಮಾಡಿದ ನಾಥೂರಾಮ್ ಗೋಡ್ಸೆಯ ಪ್ರತಿಮೆಯನ್ನು ಗುಜರಾತ್‍ನ ಕಾಂಗ್ರೆಸ್ ಕಾರ್ಯಕರ್ತರು ಇಂದು ಬೆಳಗ್ಗೆ ಧ್ವಂಸಗೊಳಿಸಿದ್ದಾರೆ.

    ಈ ಮೂರ್ತಿಯನ್ನು ಹಿಂದು ಸೇನೆ ಸ್ಥಾಪಿಸಿತ್ತು. ಆದರೆ ಇದನ್ನು ಇಂದು ಬೆಳಗ್ಗೆ ಜಾಮ್ ನಗರದ ಕಾಂಗ್ರೆಸ್ ಅಧ್ಯಕ್ಷ ದಿಗುಭಾ ಜಡೇಜಾ ಹಾಗೂ ಅವರ ಸಹಚರರು ಸೇರಿ ಧ್ವಂಸಗೊಳಿಸಿದ್ದಾರೆ. ಅಲ್ಲದೆ ಧ್ವಂಸಗೊಳಿಸುತ್ತಿರುವ ವೇಳೆಯಲ್ಲಿ ಕಾರ್ಯಕರ್ತರೆಲ್ಲರು ಅದರ ಸುತ್ತಲು ಕೇಸರಿ ಬಣ್ಣದ ಬಟ್ಟೆಯನ್ನು ಸುತ್ತಿದ್ದಾರೆ.

    ಆಗಸ್ಟ್‍ನಲ್ಲಿ ಜಾಮ್‍ನಗರದಲ್ಲಿ ನಾಥೂರಾಂ ಗೋಡ್ಸೆ ಪ್ರತಿಮೆ ಸ್ಥಾಪಿಸುವ ನಿರ್ಧಾರವನ್ನು ಹಿಂದೂ ಸೇನೆ ಪ್ರಕಟಿಸಿತ್ತು. ಆದರೆ ಈ ವೇಳೆ ಅಲ್ಲಿನ ಸ್ಥಳೀಯ ಅಧಿಕಾರಿಗಳು ಜಾಗವನ್ನು ನೀಡಲು ನಿರಾಕರಿಸಿದ್ದರು. ಹೀಗಾಗಿ ಸಂಘಟನೆಯು ಹನುಮಾನ್ ಆಶ್ರಮದಲ್ಲಿ ಪ್ರತಿಮೆಯನ್ನು ನಿರ್ಮಿಸಿ, ‘ನಾಥುರಾಮ್ ಗೋಡ್ಸೆ ಅಮರ್ ರಹೇ’ ಎಂಬ ಘೋಷಣೆಗಳನ್ನು ಎತ್ತಿತು. ಇದನ್ನೂ ಓದಿ: 20 ವರ್ಷಗಳಲ್ಲಿ 1,888 ಆರೋಪಿಗಳು ಪೊಲೀಸ್ ಕಸ್ಟಡಿಯಲ್ಲೇ ಸಾವು – ಮೊದಲ ಸ್ಥಾನದಲ್ಲಿ ಗುಜರಾತ್

    ಈ ಮಧ್ಯೆ 1949ರಲ್ಲಿ ಮಹಾತ್ಮಾ ಗಾಂಧಿ ಕೊಂದ ಹಂತಕನನ್ನು ಗಲ್ಲಿಗೇರಿಸಿದ ಹರಿಯಾಣದ ಅಂಬಾಲಾ ಸೆಂಟ್ರಲ್ ಜೈಲಿನಿಂದ ತಂದ ಮಣ್ಣಿನಿಂದ ನಾಥೂರಾಂ ಗೋಡ್ಸೆಯ ಪ್ರತಿಮೆಯನ್ನು ತಯಾರಿಸುವುದಾಗಿ ಹಿಂದೂ ಮಹಾಸಭಾ ಹೇಳಿತ್ತು. ಅಂತೆಯೇ ಕಳೆದ ವಾರ ಮಹಾಸಭಾ ಕಾರ್ಯಕರ್ತರು ಗೋಡ್ಸೆ ಮತ್ತು ನಾರಾಯಣ ಆಪ್ಟೆ ಅವರನ್ನು ಗಲ್ಲಿಗೇರಿಸಿದ ಅಂಬಾಲಾ ಜೈಲಿನಿಂದ ಮಣ್ಣನ್ನು ತಂದರು. ಈ ಮಣ್ಣನ್ನು ಗೋಡ್ಸೆ ಮತ್ತು ಆಪ್ಟೆ ಅವರ ಪ್ರತಿಮೆಗಳನ್ನು ತಯಾರಿಸಲು ಬಳಸಲಾಗುವುದು ಮತ್ತು ಅವುಗಳನ್ನು ಗ್ವಾಲಿಯರ್‍ನಲ್ಲಿರುವ ಮಹಾಸಭಾ ಕಚೇರಿಯಲ್ಲಿ ಸ್ಥಾಪಿಸಲಾಗುವುದು ಎಂದು ಹಿಂದೂ ಮಹಾಸಭಾ ರಾಷ್ಟ್ರೀಯ ಉಪಾಧ್ಯಕ್ಷ ಡಾ.ಜೈವೀರ್ ಭಾರದ್ವಾಜ್ ತಿಳಿಸಿದ್ದಾರೆ. ಇದನ್ನೂ ಓದಿ: ಕೇರಳದಲ್ಲಿ ಭಾರೀ ಮಳೆ – 8 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

  • ಗೋಡ್ಸೆಯ ದೇಶಪ್ರೇಮಕ್ಕೆ ಜೈ, ಬಡಪಾಯಿ ಬ್ರಾಹ್ಮಣರು ಮೂಗು ಮುಚ್ಚಿಕೊಂಡು ಕೂತಿದ್ದಾರೆ: ಅನಿತಾ ಭಟ್

    ಗೋಡ್ಸೆಯ ದೇಶಪ್ರೇಮಕ್ಕೆ ಜೈ, ಬಡಪಾಯಿ ಬ್ರಾಹ್ಮಣರು ಮೂಗು ಮುಚ್ಚಿಕೊಂಡು ಕೂತಿದ್ದಾರೆ: ಅನಿತಾ ಭಟ್

    ಬೆಂಗಳೂರು: ನಾಥೂರಾಮ್ ಗೋಡ್ಸೆ ಮತ್ತು ಬ್ರಾಹ್ಮಣರ ಬಗ್ಗೆ ಚಂದನವನದ ನಟಿ ಅನಿತಾ ಭಟ್ ಸೋಶಿಯಲ್ ಮೀಡಿಯಾದಲ್ಲಿ ಮಾತನಾಡಿದ್ದು, ಅದಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

    ಸೋಶಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿರುವ ಬಿಗ್‍ಬಾಸ್ ಕನ್ನಡ ಸ್ಪರ್ಧಿ ಅನಿತಾ ಭಟ್ ಇತ್ತೀಚೆಗೆ ಟ್ವಿಟ್ಟರ್ ನಲ್ಲಿ ಬ್ರಾಹ್ಮಣ್ಯ ಮತ್ತು ಗಾಂಧೀಜಿಯನ್ನು ಕೊಂದ ಗೋಡ್ಸೆಗೆ ಜೈ ಎಂದು ಟ್ವೀಟ್ ಮಾಡಿದ್ದಾರೆ. ಈಗ ಈ ವಿಚಾರ ಪರ, ವಿರೋಧ ಚರ್ಚೆ ಆಗುತ್ತಿದೆ.

    ಟ್ವೀಟ್‍ನಲ್ಲಿ ಏನಿದೆ?
    ಅನಿತಾ ಭಟ್ ಟ್ವೀಟ್‍ನಲ್ಲಿ, ಗಾಂಧಿಯನ್ನು ಕೊಂದು ಎಂತ ದುರಂತಕ್ಕೆ ಸಿಕ್ಕಿ ಹಾಕಿಕೊಳ್ಳಬಹುದು ಎಂದು ಗೊತ್ತಿದ್ರೂ, ಅದನ್ನ ಮಾಡಿದ ಗೋಡ್ಸೆಯ ದೇಶಪ್ರೇಮಕ್ಕೆ ಜೈ. ದೇಶಕ್ಕಿಂತ ಏನೂ ದೊಡ್ಡದಲ್ಲ. ಇನ್ನೆಷ್ಟು ಚೂರಾಗ್ತಾ ಇತ್ತೋ ನಮ್ಮ ಭಾರತ ಎಂದು ಪೋಸ್ಟ್ ಮಾಡಿದ್ದು, ಅದಕ್ಕೆ ವೀಕ್ಷಕರು ಗೋಡ್ಸೆ ಜಿಂದಾಬಾದ್ ಎಂದು ಕಾಮೆಂಟ್ ಮಾಡಿದ್ದಾರೆ.

    ನಟಿ ಮುಂದುವರೆದು, ಸ್ವಾತಂತ್ರ್ಯ ಹೋರಾಟದಲ್ಲಿ ಪಾಲುಗೊಂಡಿದ್ದ ಗೋಡ್ಸೆ ಅವರು ದೇಶಭಕ್ತನೇ. ಅವರನ್ನ ಭಯೋತ್ಪಾದಕ ಅಂತ ಕರೆಯೋದು ನಿಮ್ಮಗಳ ಅಜ್ಞಾನ. ಯಾರೋ ಒಬ್ಬರಿಂದ ದೇಶಕ್ಕೆ ಸ್ವಂತಂತ್ರ ಬಂದಿಲ್ಲ. ಕೋಟಿಗಟ್ಟಲೆ ವೀರರು ನಮ್ಮ ದೇಶಕ್ಕಾಗಿ ಬಲಿದಾನ ಮಾಡಿದಾರೆ ಅನ್ನೋದು ಅರಿತುಕೊಂಡರೆ ಸಾಕು ಎಂದು ಅನಿತಾ ಭಟ್ ಹೇಳಿದ್ದಾರೆ. ಇದನ್ನೂ ಓದಿ: ಅಫ್ಘಾನ್ ನಿರಾಶ್ರಿತರಿಗೆ ಭಾರತದ ಆಶ್ರಯ – ಏನಿದು ವೀಸಾ? ವಿಶೇಷತೆ ಏನು? 

    ಮುಂದೆ ನೆಗೆಟಿವ್ ಕಾಮೆಂಟ್ ಬರುತ್ತಿರುವುದನ್ನು ಗಮನಿಸಿದ ಅವರು, ನನ್ನ ಟ್ವಿಟ್ಟರ್, ಪೋಸ್ಟ್ ಮಾಡುವುದು ನನ್ನ ಆಯ್ಕೆ. ನನ್ನ ಅಭಿಪ್ರಾಯವನ್ನು ನಿಮ್ಮ ಕೆಟ್ಟ ಕಾಮೆಂಟ್‍ಗಳು ಬದಲಾಯಿಸುವುದಿಲ್ಲ. ಇಷ್ಟಕ್ಕೆಲ್ಲ ಹೆದರೋ ಹಾಗಿದ್ರೆ ಭೂಮಿಯಿಂದಾನೆ ಹೋಗಿ ಬಿಡ್ತಿದ್ದೆ ಇಷ್ಟೊತ್ತಿಗೆ. ಎಷ್ಟು ಬೇಕಾದ್ರೂ ಗಂಟಲು ಹರ್ಕೊಳಿ ಹೋಗಿ ಎಂದು ಗರಂ ಆಗಿ ಉತ್ತರಿಸಿದ್ದಾರೆ.

    ಬ್ರಾಹ್ಮಣರು ಮೂಗು ಮುಚ್ಚಿಕೊಂಡು ಕೂತಿದ್ದಾರೆ
    ಸೋಶಿಯಲ್ ಮೀಡಿಯಾದಲ್ಲಿ ಬ್ರಾಹ್ಮಣ್ಯದ ಕುರಿತು ಮಾತನಾಡಿದ ಅವರು, ಇವರುಗಳು ತಮ್ಮ ಪದವಿ ಮುಂದೆ ಜಾತಿ ಹೆಸರು ಹಾಕಿದ ಹಾಗೆ ನಾನೇನಾದ್ರೂ ಬ್ರಾಹ್ಮಣ ನಟಿ ಅಂತ ಹಾಕಿದ್ದೇನಾ? ಜಾತಿ ಹೆಸರು ಹೇಳಿ ಕೆಲಸ ಗಿಟ್ಟಿಸೋ ಗತಿ ಇನ್ನು ನನಗೆ ಬಂದಿಲ್ಲ. ದೇವಸ್ಥಾನದ ಪ್ರಸಾದ ತಿಂದು ಬದುಕಿದ್ರೂ ಸರಿ. ಅದಕ್ಕೆ ಬ್ರಾಹ್ಮಣ್ಯ ಅನ್ನೋ ಹೆಸರು ಯಾಕ್ರೀ? ಬೇರೆ ಜಾತಿಯವರೂ ಮಾಡ್ತಾರೆ ಅಂದ್ರೆ ಅವರವರ ಜಾತಿ ಹೆಸರು ಹಾಕಿ. ಬಡಪಾಯಿ ಬ್ರಾಹ್ಮಣರು ಮೂಗು ಮುಚ್ಕೊಂಡು ಕೂತಿದ್ದಾರೆ, ಅದಕ್ಕೆ ಬೇಕಾಬಿಟ್ಟಿ ಮಾತಾಡ್ತಾರೆ. ಅಷ್ಟೇ ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಮಹಿಳೆಯರು ಕೆಲಸ ಮಾಡಬಹುದು, ಮುಸ್ಲಿಂ ಕಾನೂನುಗಳ ವ್ಯಾಪ್ತಿಯಲ್ಲಷ್ಟೇ: ತಾಲಿಬಾನ್

    ಅದಕ್ಕೆ ಒಬ್ಬ ನೆಟ್ಟಿಗ, ತಾವೇ ಸರ್ವಶ್ರೇಷ್ಠರು ಅನ್ನೋ ವಾದ, ಮಡಿವಂತಿಕೆ ಆಚರಣೆಗಳು ಇದೆಯಲ್ಲ ಅದೇ ಬ್ರಾಹ್ಮಣ್ಯ. ಅದಕ್ಕೆ ಎಲ್ಲರ ವಿರೋಧ ಅಷ್ಟೇ. ಅದು ಬಿಟ್ಟರೆ ಎಲ್ಲರೂ ಒಂದೇ ಯಾರು ಸಹ ಮೇಲಿಲ್ಲ ಕೀಳಿಲ್ಲ. ಎಂದು ಕಾಮೆಂಟ್ ಮಾಡಿದ್ದಾರೆ.

    ನನ್ನ ಅಮ್ಮ ಎಷ್ಟೋ ವರ್ಷಗಳ ಹಿಂದೇನೆ ಜಾತಿ ಪದ್ದತಿಯನ್ನ ದೂರ ಇಟ್ಟಿದ್ದಾರೆ. ಒಂದು ಲಂಬಾಣಿ ಹುಡುಗಿ ನಮ್ಮ ಮನೆಯಲ್ಲಿ ಓದೋಕೆ ಅಂತ 4 ವರ್ಷ ಇದ್ದಳು. ನಮ್ಮನೇ ದೇವರ ಪೂಜೆ ಕೂಡ ಮಾಡಿದ್ದಾಳೆ. ನನಗೆ ಇದರಲ್ಲಿ ವಿಶೇಷತೆ ಏನು ಕಂಡಿಲ್ಲ. ಸಂದರ್ಭ ಬಂದಿದ್ದರಿಂದ ಹೇಳಿದೆ ಅಷ್ಟೇ ಎಂದು ಅದಕ್ಕೆ ಉತ್ತರಿಸಿದ್ದಾರೆ.

    ಅನಿತಾ ಭಟ್, 2008ರಲ್ಲಿ ಬಿಡುಗಡೆ ಆದ ‘ಸೈಕೊ’ ಸಿನಿಮಾದ ಮೂಲಕ ಚಂದನವನಕ್ಕೆ ಕಾಲಿಟ್ಟದ್ದಾರೆ. ನಂತರ ‘ಡರ್ಟಿ ಪಿಕ್ಚರ್; ಸಿಲ್ಕ್ ಸಖತ್ ಹಾಟ್ ಮಗಾ’, ‘ದೊಡ್ಮನೆ ಹುಡ್ಗಾ’, ‘ಟಗರು'(ಡಾಲಿ ಗರ್ಲ್‍ಫ್ರೆಂಡ್ ಪಾತ್ರ), ‘ಹೊಸ ಕ್ಲೈಮ್ಯಾಕ್ಸ್’, ‘ಡಿಎನ್‍ಎ’, ‘ಕನ್ನೇರಿ’, ‘ಕಲಿವೀರ’, ‘ಬೆಂಗಳೂರು-69’, ‘ಬಳೆಪೇಟೆ’, ‘ಜೂಟಾಟ’, ತೆಲುಗಿನ ‘ಕೃಷ್ಣ ಲಂಕಾ’ ಸಿನಿಮಾ ಸೇರಿದಂತೆ ಇನ್ನೂ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ.

  • ಗೋಡ್ಸೆ, ಮೋದಿ ಇಬ್ಬರೂ ಒಂದೇ ಸಿದ್ಧಾಂತ ನಂಬ್ತಾರೆ: ರಾಹುಲ್ ಗಾಂಧಿ

    ಗೋಡ್ಸೆ, ಮೋದಿ ಇಬ್ಬರೂ ಒಂದೇ ಸಿದ್ಧಾಂತ ನಂಬ್ತಾರೆ: ರಾಹುಲ್ ಗಾಂಧಿ

    ತಿರುವನಂತಪುರಂ: ಮಹಾತ್ಮ ಗಾಂಧಿಯನ್ನು ಕೊಂದ ನಾಥೂರಾಮ್ ಗೋಡ್ಸೆ ಮತ್ತು ಪ್ರಧಾನಿ ನರೇಂದ್ರ ಮೋದಿ ಇಬ್ಬರೂ ಒಂದೇ ಸಿದ್ಧಾಂತವನ್ನು ನಂಬುವವರು ಎಂದು ಕಾಂಗ್ರೆಸ್ ಪಕ್ಷದ ಮಾಜಿ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

    ಕೇರಳದ ವಯನಾಡ್ ಜಿಲ್ಲೆಯಲ್ಲಿ ಇಂದು ನಡೆದ ಸಿಎಎ ವಿರೋಧಿ ರ‍್ಯಾಲಿಯಲ್ಲಿ ರಾಹುಲ್ ಗಾಂಧಿ ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಅವರು, ಈ ವಿಚಾರ ನಿಮಗೆ ತಿಳಿದಿದೆಯೋ? ಇಲ್ಲವೋ? ನನಗೆ ಗೊತ್ತಿಲ್ಲ. ಆದರೆ, ಗೋಡ್ಸೆ ಮಹಾತ್ಮ ಗಾಂಧಿಯ ಮೇಲೆ ಗುಂಡುಹಾರಿಸಿದ್ದಾಗ ಆತ ತನ್ನ ಕಣ್ಣನ್ನು ಮುಚ್ಚಿದ್ದ. ಏಕೆಂದರೆ ಆತನಿಗೆ ತಾನು ಏನು ಮಾಡುತ್ತಿದ್ದೇನೆ ಎಂಬುದು ತಿಳಿದಿತ್ತು. ಗೋಡ್ಸೆ ಮತ್ತು ಮೋದಿ ಇಬ್ಬರದ್ದೂ ಒಂದೇ ಸಿದ್ಧಾಂತ. ಆದರೆ, ನಾನು ಗೋಡ್ಸೆಯನ್ನು ನಂಬುತ್ತೇನೆ ಎಂದು ಬಹಿರಂಗವಾಗಿ ಹೇಳುವ ಧೈರ್ಯ ಮೋದಿಗಿಲ್ಲವಷ್ಟೆ ಎಂದು ಪ್ರಧಾನಿ ವಿರುದ್ಧ ಮಾತಿನ ಚಾಟಿ ಬೀಸಿದರು.

    ಭಾರತೀಯರೇ ನಾವು ಭಾರತಿಯರು ಎಂದು ಸಾಬೀತುಪಡಿಸಬೇಕಾದ ಸ್ಥಿತಿ ಬಂದಿದೆ. ಯಾರು ಭಾರತೀಯರು ಎಂದು ಗುರುತಿಸಲು ನರೇಂದ್ರ ಮೋದಿ ಯಾರು? ನನ್ನ ಪೌರತ್ವವನ್ನು ಪ್ರಶ್ನಿಸಿವ ಹಕ್ಕು ಮೋದಿಗೆ ಯಾರು ಕೊಟ್ಟಿದ್ದು? ನಾನು ಭಾರತೀಯನೆಂದು ನನಗೆ ಗೊತ್ತು. ನಾನು ಯಾರಿಗೂ ಅದನ್ನ ಸಾಬೀತುಪಡಿಸುವ ಅಗತ್ಯವಿಲ್ಲ. ಹಾಗೆಯೇ ಇಲ್ಲಿರುವ 140 ಕೋಟಿ ಜನರಿಗೂ ಕೂಡ ಭಾರತೀಯರು ಎಂದು ನಿರೂಪಿಸುವ ಅಗತ್ಯವಿಲ್ಲ ಎಂದು ರಾಹುಲ್ ಕಿಡಿಕಾರಿದರು.

    ಕೇಂದ್ರ ಸರ್ಕಾರದ ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ವಯನಾಡ್‍ನಲ್ಲಿ ಕಾಂಗ್ರೆಸ್ ನಾಯಕರು ಇಂದು ಬೃಹತ್ ಸಾಮೂಹಿಕ ಪ್ರತಿಭಟನಾ ರ‍್ಯಾಲಿಯನ್ನು ಹಮ್ಮಿಕೊಂಡಿದ್ದರು. ವಯನಾಡ್‍ನ ಎಸ್‍ಕೆಎಂಜೆ ಪ್ರೌಢ ಶಾಲೆಯಿಂದ ಆರಂಭವಾದ ಮೆರವಣಿಗೆ ಎರಡು ಕಿಲೋ ಮೀಟರ್ ವರೆಗೆ ನಡೆಯಿತು.