Tag: Naticharami

  • ಸಂಚಾರಿ ವಿಜಯ್ ನಟನೆಯ ಕೊನೆಯ ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ : ರಾಷ್ಟ್ರ ಪ್ರಶಸ್ತಿ ಪಡೆದ 4 ಚಿತ್ರಗಳಲ್ಲಿ ವಿಜಯ್ ನಟನೆ

    ಸಂಚಾರಿ ವಿಜಯ್ ನಟನೆಯ ಕೊನೆಯ ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ : ರಾಷ್ಟ್ರ ಪ್ರಶಸ್ತಿ ಪಡೆದ 4 ಚಿತ್ರಗಳಲ್ಲಿ ವಿಜಯ್ ನಟನೆ

    68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆಯಾಗಿದ್ದು, ಸಂಚಾರಿ ವಿಜಯ್ ನಟನೆಯ ಕೊನೆಯ ಸಿನಿಮಾ ತಲೆದಂಡ ಚಿತ್ರಕ್ಕೆ ಅತ್ಯುತ್ತಮ ಪರಿಸರ ಕಾಳಜಿ ಸಿನಿಮಾ ರಾಷ್ಟ್ರೀಯ ಗರಿ ದೊರೆತಿದೆ. ಕೃಪಾಕರ ನಿರ್ದೇಶನದಲ್ಲಿ ಮೂಡಿ ಬಂದ ಈ ಸಿನಿಮಾದಲ್ಲಿ ವಿಜಯ್ ವಿಶೇಷ ಚೇತನ ವ್ಯಕ್ತಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಈ ಸಿನಿಮಾದ ನಟನೆಗಾಗಿ ಮತ್ತೊಮ್ಮೆ ವಿಜಯ್ ನ್ಯಾಷಿನಲ್ ಅವಾರ್ಡ್ ಪಡೆಯುತ್ತಾರೆ ಎಂದೇ ಅಭಿಮಾನಿಗಳು ಭಾವಿಸಿದ್ದರು. ಆದರೆ, ಸಿನಿಮಾಗೆ ಈ ಬಾರಿ ಪ್ರಶಸ್ತಿ ಸಂದಿದೆ.

    ಅತ್ಯಂತ ಚಿಕ್ಕ ವಯಸ್ಸಿನಲ್ಲೇ ಅತ್ಯುತ್ತಮ ನಟ ರಾಷ್ಟ್ರ ಪ್ರಶಸ್ತಿ ಪಡೆದಿರುವ ವಿಜಯ್, ಹಲವು ವರ್ಷಗಳ ನಂತರ ಕನ್ನಡಕ್ಕೆ ಇಂಥದ್ದೊಂದು ಗೌರವ ಸಿಗಲು ಕಾರಣರಾಗಿದ್ದರು. ಲಿಂಗದೇವರು ನಿರ್ದೇಶನದಲ್ಲಿ ಮೂಡಿ ಬಂದ ‘ನಾನು ಅವನಲ್ಲ ಅವಳು’ ಸಿನಿಮಾಗಾಗಿ ವಿಜಯ್ ಅವರಿಗೆ ಅತ್ಯುತ್ತಮ ನಟ ರಾಷ್ಟ್ರ ಪ್ರಶಸ್ತಿ ಬಂದಿತ್ತು. ಅಲ್ಲದೇ, ವಿಜಯ್ ನಟನೆಯ ನಾಲ್ಕು ಸಿನಿಮಾಗಳಿಗೆ ರಾಷ್ಟ್ರ ಪ್ರಶಸ್ತಿ ಬಂದಿದ್ದು, ಮೂರು ಸಿನಿಮಾಗಳಿಗೆ ಮತ್ತು ಒಂದು ಚಿತ್ರಕ್ಕಾಗಿ ವಿಜಯ್ ವೈಯಕ್ತಿಕ ಪ್ರಶಸ್ತಿ ಪಡೆದಿದ್ದಾರೆ. ಓದಿ: Breaking- 68ನೇ ರಾಷ್ಟ್ರ ಚಲನಚಿತ್ರ ಪ್ರಶಸ್ತಿ : ಡೊಳ್ಳು, ತಲೆದಂಡ, ನಾದದ ನವನೀತ ಸಿನಿಮಾಗಳಿಗೆ ರಾಷ್ಟ್ರ ಗರಿ

    ಅತ್ಯುತ್ತಮ ನಟ ರಾಷ್ಟ್ರ ಪ್ರಶಸ್ತಿ ಪಡೆದ ವರ್ಷವೇ, ವಿಜಯ್ ನಟನೆಯ ಮಂಸೋರೆ ನಿರ್ದೇಶನದ ‘ಹರಿವು’ ಚಿತ್ರಕ್ಕೆ ಅತ್ಯುತ್ತಮ ಪ್ರಾದೇಶಿ ಸಿನಿಮಾ ರಾಷ್ಟ್ರ ಪ್ರಶಸ್ತಿ ಸಂದಿತ್ತು. ಅಲ್ಲದೇ, 2018ರಲ್ಲಿ ಮಂಸೋರೆ ನಿರ್ದೇಶನದ ‘ನಾತಿಚರಾಮಿ’ ಸಿನಿಮಾಗೂ ಅತ್ಯುತ್ತಮ ಪ್ರಾದೇಶಿ ಸಿನಿಮಾ ರಾಷ್ಟ್ರ ಪ್ರಶಸ್ತಿ ದೊರೆತಿದೆ. ಈ ಸಿನಿಮಾದಲ್ಲೂ ವಿಜಯ್ ನಟಿಸಿದ್ದಾರೆ. ಈ ಬಾರಿ ಕೃಪಾಕರ ನಿರ್ದೇಶನದಲ್ಲಿ ಮೂಡಿ ಬಂದಿರುವ ತಲೆದಂಡ ಸಿನಿಮಾಗೆ ಅತ್ಯುತ್ತಮ ಪ್ರಾದೇಶಿಕ ಚಲನಚಿತ್ರ ರಾಷ್ಟ್ರ ಪ್ರಶಸ್ತಿ ದೊರೆತಿದೆ. ಸಹಜವಾಗಿಯೇ ಅಭಿಮಾನಿಗಳಿಗೆ ಖುಷಿಯಾಗಿದೆ. ಈ ಸಂದರ್ಭದಲ್ಲಿ ವಿಜಯ್ ಇರಬೇಕಿತ್ತು ಎನ್ನುವ ಬೇಡಿಕೆ ಹೆ‍ಚ್ಚಿದೆ.

    Live Tv
    [brid partner=56869869 player=32851 video=960834 autoplay=true]

  • ಮತ್ತೆ ನೈಜಘಟನೆಯ ಬೆನ್ನುಹತ್ತಿದ ನಿರ್ದೇಶಕ ಮಂಸೋರೆ

    ಮತ್ತೆ ನೈಜಘಟನೆಯ ಬೆನ್ನುಹತ್ತಿದ ನಿರ್ದೇಶಕ ಮಂಸೋರೆ

    ರಡು ಬಾರಿ ರಾಷ್ಟ್ರ ಪ್ರಶಸ್ತಿ ಪಡೆದಿರುವ ನಿರ್ದೇಶಕ ಮಂಸೋರೆ, ಇದೀಗ ಮತ್ತೊಂದು ಸಿನಿಮಾಗೆ ಆಕ್ಸನ್ ಕಟ್ ಹೇಳುತ್ತಿದ್ದು, ಈ ಸಿನಿಮಾ ಇಂದಿನಿಂದ ಚಿತ್ರೀಕರಣ ಆರಂಭಿಸಿದೆ. ಇವರ ಚೊಚ್ಚಲು ಸಿನಿಮಾ ‘ಹರಿವು’ ಕೂಡ ನೈಜಘಟನೆಯನ್ನೇ ಆಧರಿಸಿತ್ತು. ಇದೀಗ ನಾಲ್ಕನೇ ಚಿತ್ರಕ್ಕೂ ಅವರು ನಡೆದ ಘಟನೆಯನ್ನೇ ತಮ್ಮ ಚಿತ್ರಕ್ಕಾಗಿ ಆಯ್ಕೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ : ಕೆಜಿಎಫ್ ಸಿನಿಮಾ ಆಗೋಕೆ ಮೂವರು ಮಹಿಳೆಯರು ಕಾರಣ: ವಿಜಯ್ ಕಿರಗಂದೂರು

    ಹರಿವು ಸಿನಿಮಾದಲ್ಲಿ ಮಗನನ್ನು ಕಳೆದುಕೊಂಡ ಅಸಹಾಯಕ ತಂದೆಯೊಬ್ಬರು ಬೆಂಗಳೂರಿನಿಂದ ಉತ್ತರ ಕರ್ನಾಟಕದ ಹಳ್ಳಿಗೆ ತಮ್ಮ ಮಗನ ಶವವನ್ನು ಪೆಟ್ಟಿಗೆಯಲ್ಲಿ  ತಗೆದುಕೊಂಡು ಹೋದ ಅಮಾನವೀಯ ಘಟನೆಯನ್ನು ಆಯ್ಕೆ ಮಾಡಿಕೊಂಡಿದ್ದರು. ಈ ಬಾರಿ ಅವರು ಘಟನೆಯ ಬಗ್ಗೆ ಹೇಳಿಕೊಳ್ಳದೇ ‘ಈ ನೆಲದ ಮಣ್ಣಿನ ಜನರ ಆರ್ದ್ರ ಬದುಕಿನ ನೈಜ ಘಟನೆಯೊಂದನ್ನು ತೆರೆಯ ಮೇಲೆ ತರುವ ಪ್ರಯತ್ನ ಮಾಡುತ್ತಿದ್ದೇನೆ’ ಎಂದಷ್ಟೇ ಬರೆದುಕೊಂಡಿದ್ದಾರೆ. ಇದನ್ನೂ ಓದಿ : ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿ ವೇದಿಕೆಯಲ್ಲೇ ಕಪಾಳಮೋಕ್ಷ: ಅತ್ಯುತ್ತಮ ನಟ ಆಸ್ಕರ್ ವಿಜೇತ ವಿಲ್ ಸ್ಮಿತ್ ಉಗ್ರತಾಪ

    ಸಿನಿಮಾದ ಶೀರ್ಷಿಕೆಯೇ ಆಕರ್ಷಕವಾಗಿದೆ ಮತ್ತು ಕುತೂಹಲ ಮೂಡಿಸುತ್ತದೆ. ತಮ್ಮ ನಾಲ್ಕನೇ ಸಿನಿಮಾಗೆ ಅವರು ’19, 20, 21’ ಎಂದು ಹೆಸರಿಟ್ಟಿದ್ದಾರೆ. ಈ ಟೈಟಲ್ ನಾನಾ ಅರ್ಥಗಳನ್ನು ಹೇಳುತ್ತಿದೆ. ಈ ಮೂರು ತಾರೀಖಿನ ದಿನಗಳಲ್ಲಿ ನಡೆದ ಘಟನೆಯಾ? ಅಥವಾ ಆರ್ಟಿಕಲ್ 19, 20, 21ರ ಬಗೆಗಿನ ಕಥಾನಕವಾ ಎನ್ನುವುದು ಸದ್ಯ ಚರ್ಚೆಯ ವಿಷಯವಾಗಿದೆ. ಇದನ್ನೂ ಓದಿ: ಕೆಜಿಎಫ್-2 ಟ್ರೈಲರ್ ರಿಲೀಸ್ ಮಾಡಿದ ಶಿವಣ್ಣ- ರಾಕಿಬಾಯ್ ಅಬ್ಬರ ಶುರು

    ಎರಡ್ಮೂರು ದಿನಗಳ ಹಿಂದೆಯೇ ಇಡೀ ಟೀಮ್ ಕಟ್ಟಿಕೊಂಡು ಮಲೆನಾಡಿನ ಸೆರೆಗಿನಲ್ಲಿ ಬೀಡುಬಿಟ್ಟಿದ್ದಾರೆ ಮಂಸೋರೆ. ಉತ್ತರ ಕರ್ನಾಟಕದ ಕೆಲ ಕಡೆ ಮತ್ತು ಕರಾವಳಿ ಭಾಗದಲ್ಲೂ ಒಂದಷ್ಟು ದಿನಗಳ ಕಾಲ ಚಿತ್ರೀಕರಣ ನಡೆಸಲಿದೆ ತಂಡ. ಎಂದಿನಂತೆ ಬಹುತೇಕ ಆಕ್ಟ್ 1978 ಸಿನಿಮಾದಲ್ಲಿ ಕೆಲಸ ಮಾಡಿದವರೇ ಈ ಟೀಮ್ ನಲ್ಲೂ ಮುಂದುವರೆದಿದ್ದಾರೆ. ಸತ್ಯಾ ಹೆಗಡೆ ಅವರ ಸಿನಿಮಾಟೋಗ್ರಫಿ, ದೇವರಾಜ್ ಅವರ ನಿರ್ಮಾಣ ಚಿತ್ರಕ್ಕಿದೆ.

  • ಮಂಸೋರೆಯವರ ಎರಡನೇ ಮ್ಯಾಜಿಕ್ ನಾತಿಚರಾಮಿ!

    ಮಂಸೋರೆಯವರ ಎರಡನೇ ಮ್ಯಾಜಿಕ್ ನಾತಿಚರಾಮಿ!

    ಬೆಂಗಳೂರು: ಮೊದಲ ಚಿತ್ರ ‘ಹರಿವು’ ಮೂಲಕವೇ ಪ್ರತಿಭಾವಂತ ನಿರ್ದೇಶಕರಾಗಿ ಹೊರಹೊಮ್ಮಿದ್ದವರು ಮಂಸೋರೆ. ಈ ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿಯೂ ಬಂದಿತ್ತು. ಕಲಾತ್ಮಕ ಚಿತ್ರವಾದರೂ ಎಂಥಾ ಕಲ್ಲೆದೆಯನ್ನೂ ಕರಗಿಸಬಲ್ಲ ಸೂಕ್ಷ್ಮ ಗುಣದಿಂದ ಈ ಚಿತ್ರ ಜನಸಾಮಾನ್ಯರನ್ನೂ ತಲುಪಿಕೊಂಡಿತ್ತು. ಇಂಥಾ ಮಂಸೋರೆ ನಿರ್ದೇಶನದ ಎರಡನೇ ಚಿತ್ರ ನಾತಿಚರಾಮಿ ಇದೇ ತಿಂಗಳ 28ರಂದು ತೆರಕಾಣಲು ಅಣಿಗೊಂಡಿದೆ.

    ಮೊದಲ ಚಿತ್ರ ಹರಿವು ಕಲಾತ್ಮಕ ಜಾಡಿನದ್ದಾಗಿತ್ತು. ಹಾಗಿದ್ದರೆ ಮಂಸೋರೆ ನಿರ್ದೇಶನದ ಎರಡನೇ ಚಿತ್ರ ನಾತಿಚರಾಮಿಯೂ ಅದೇ ಬಗೆಯದ್ದಾ ಎಂಬ ಪ್ರಶ್ನೆ ಸಹಜವೇ. ಆದರೆ ಈ ಚಿತ್ರದ ಮೂಲಕ ಮಂಸೋರೆ ಹೊಸಾ ಪ್ರಯೋಗವೊಂದಕ್ಕೆ ಕೈಹಾಕಿದ್ದಾರೆ. ಅದೇನೆಂಬುದು ಈ ತಿಂಗಳ ಇಪ್ಪತ್ತೆಂಟರಂದೇ ಜಾಹೀರಾಗಬೇಕಾದರೂ ಇದೊಂದು ಕಲಾತ್ಮಕ ಕಮರ್ಶಿಯಲ್ ಚಿತ್ರ ಎನ್ನಲಡ್ಡಿಯಿಲ್ಲ.

    ಕಮರ್ಶಿಯಲ್ ಅಂದಾಕ್ಷಣ ಸೊಂಟ ಬಳುಕಿಸೋ ಐಟಂ ಸಾಂಗು, ಮಸಾಲೆ ಐಟಮ್ಮುಗಳು ಅಂದುಕೊಂಡರೆ ನಾತಿಚರಾಮಿ ಆ ಥರದ್ದಲ್ಲ. ಆದರೆ ಭಿನ್ನ ಕಥಾ ಹಂದರ ಹೊಂದಿರೋ ಈ ಚಿತ್ರ ಹೊಸಾ ಅಲೆಯದ್ದು ಎನ್ನಲಡ್ಡಿಯಿಲ್ಲ. ಕಥೆಯ ಸೃಷ್ಟಿ ಮತ್ತು ಅದನ್ನು ಮನಸಿಗೆ ನಾಟುವಂತೆ ನಿರೂಪಣೆ ಮಾಡೋ ಚಾಕಚಕ್ಯತೆ ಮಂಸೋರೆ ಅವರಿಗಿದೆ ಎಂಬುದಕ್ಕೆ ಹರಿವು ಚಿತ್ರವೇ ಉದಾಹರಣೆ. ನಾತಿಚರಾಮಿಯಲ್ಲಿ ಬೇರೆಯದ್ದೇ ಥರದ ಕಥೆಯೊಂದಕ್ಕೆ ದೃಶ್ಯದ ಚೌಕಟ್ಟು ತೊಡಿಸಲಾಗಿದೆಯಂತೆ.

    ಈ ಚಿತ್ರಕ್ಕೆ ಕಥೆ ಮತ್ತು ಸಂಭಾಷಣೆ ಬರೆದಿರುವವರು ಎನ್. ಸಂಧ್ಯಾರಾಣಿ. ಈಗಾಗಲೇ ಸೂಕ್ಷ್ಮ ಸಂವೇದನೆಯುಳ್ಳ ಬರಹಗಾರ್ತಿಯಾಗಿ, ಅಂಕಣಗಾರ್ತಿಯಾಗಿ, ಸಾಹಿತಿಯಾಗಿ ಗುರುತಿಸಿಕೊಂಡಿರೋ ಸಂಧ್ಯಾರಾಣಿ ಈ ಚಿತ್ರಕ್ಕಾಗಿ ವಿಭಿನ್ನವಾದ ಕಥೆ ಬರೆದಿದ್ದಾರಂತೆ. ಮೊದಲ ಸಲ ಅವರು ಸಂಭಾಷಣೆಯನ್ನೂ ಬರೆದಿರೋದು ವಿಶೇಷ.

    ಹೇಳಿ ಕೇಳಿ ಕನ್ನಡ ಚಿತ್ರರಂಗದಲ್ಲಿ ಹೊಸಾ ಗಾಳಿ ಬೀಸುತ್ತಿದೆ. ಈ ಅಲೆಯಲ್ಲಿ ಬಂದು ಕಸುವು ಹೊಂದಿದ ಕಥೆಯನ್ನೆಲ್ಲ ಪ್ರೇಕ್ಷಕರು ಗೆಲ್ಲಿಸಿದ್ದಾರೆ. ನಾತಿಚರಾಮಿ ಕೂಡಾ ಪ್ರೇಕ್ಷಕರ ಮನಮುಟ್ಟುವ, ಕಾಡುವ ಚಿತ್ರವಾಗಿ ಮೂಡಿ ಬಂದಿದೆ ಎಂಬುದು ಈಗಾಗಲೇ ಸಾಬೀತಾಗಿದೆ. ಮಂಸೋರೆಯವರ ಎರಡನೇ ಮ್ಯಾಜಿಕ್ ಎಂಥಾದ್ದೆಂಬುದಕ್ಕೆ ಇನ್ನೊಂದು ವಾರದಲ್ಲಿ ಉತ್ತರ ಸಿಗಲಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv