Tag: nation

  • ರಾಷ್ಟ್ರವೋ ಅಥವಾ ಧರ್ಮ ಯಾವುದು ಮುಖ್ಯ: ಹಿಜಬ್ ವಿವಾದಕ್ಕೆ ಮದ್ರಾಸ್ ಹೈಕೋರ್ಟ್ ಪ್ರಶ್ನೆ

    ರಾಷ್ಟ್ರವೋ ಅಥವಾ ಧರ್ಮ ಯಾವುದು ಮುಖ್ಯ: ಹಿಜಬ್ ವಿವಾದಕ್ಕೆ ಮದ್ರಾಸ್ ಹೈಕೋರ್ಟ್ ಪ್ರಶ್ನೆ

    ಚೆನ್ನೈ: ಕರ್ನಾಟಕದಲ್ಲಿ ಭುಗಿಲೆದ್ದಿರುವ ಹಿಜಬ್-ಕೇಸರಿ ಶಾಲು ವಿವಾದವು ಜಗತ್ತಿನಾದ್ಯಂತ ಸದ್ದು ಮಾಡುತ್ತಿದೆ. ಧಾರ್ಮಿಕ ಪ್ರಕರರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮದ್ರಾಸ್ ಹೈಕೋರ್ಟ್, ರಾಷ್ಟ್ರವೋ ಅಥವಾ ಧರ್ಮವೋ, ಯಾವುದು ಮುಖ್ಯ ಎಂದು ಪ್ರಶ್ನಿಸಿದೆ.

    ದೇವಾಲಯಗಳಲ್ಲಿ ವಸ್ತ್ರ ಸಂಹಿತೆಗೆ ಸಂಬಂಧಿಸಿದಂತೆ ಸಲ್ಲಿಕೆಯಾಗಿದ್ದ ಸಾರ್ವಜನಿಕ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಂ.ಎನ್.ಭಂಡಾರಿ ಮತ್ತು ನ್ಯಾಯಮೂರ್ತಿ ಡಿ.ಭರತ ಚಕ್ರವರ್ತಿ ಅವರಿದ್ದ ಪೀಠವು, ಇದು ನಿಜಕ್ಕೂ ಅಚ್ಚರಿ ಮೂಡಿಸಿದೆ. ಕೆಲವರು ಹಿಜಬ್‌ಗಾಗಿ ಹೋಗುತ್ತಾರೆ. ಮತ್ತೆ ಕೆಲವರು ಟೋಪಿಗಾಗಿ ಹೋರಾಡುತ್ತಾರೆ. ಇನ್ನೂ ಕೆಲವರು ತಮಗೆ ಅಗತ್ಯವಿರುವುದಕ್ಕಾಗಿ ಪ್ರತಿಭಟಿಸುತ್ತಾರೆ. ಇದು ಒಂದು ರಾಷ್ಟ್ರವೋ ಅಥವಾ ಧರ್ಮದಿಂದ ವಿಭಜನೆಯಾಗಿದೆಯೋ ಅಥವಾ ಬೇರೆ ಇನ್ಯಾವುದೋ ಎಂದು ಖಾರವಾಗಿ ಪ್ರಶ್ನಿಸಿದೆ. ಇದನ್ನೂ ಓದಿ: ಕಾಲೇಜುಗಳಿಗೆ ಯಾರೂ ಧಾರ್ಮಿಕ ಬಟ್ಟೆಗಳನ್ನು ಧರಿಸಿ ಹೋಗುವಂತಿಲ್ಲ: ಹೈಕೋರ್ಟ್‌ ಮಧ್ಯಂತರ ಆದೇಶ

    ಭಾರತ ಜಾತ್ಯತೀತ ರಾಷ್ಟ್ರ. ಪ್ರಚಲಿತ ವಿದ್ಯಾಮಾನಗಳಿಂದ ಕಂಡು ಬರುತ್ತಿರುವುದು ಧರ್ಮದ ಹೆಸರಿನಲ್ಲಿ ದೇಶವನ್ನು ಒಡೆಯುವ ಪ್ರಯತ್ನವಲ್ಲದೇ ಬೇರೇನೂ ಅಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಭಂಡಾರಿ ಕಟು ಪದಗಳಿಂದ ಧರ್ಮದ ಹೆಸರಿನಲ್ಲಿ ದೇಶ ಒಡೆಯುವವರ ವಿರುದ್ಧ ಚಾಟಿ ಬೀಸಿದ್ದಾರೆ.

    ತಿರುಚಿರಪಳ್ಳಿ ಜಿಲ್ಲೆಯ ರಂಗರಾಜನ್ ನರಸಿಂಹನ್ ಎಂಬವರು ವಸ್ತ್ರ ಸಂಹಿತೆಗೆ ಸಂಬಂಧಿಸಿದಂತೆ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಭಕ್ತರಿಗೆ ವಸ್ತ್ರ ಸಂಹಿತೆ ರೂಪಿಸಬೇಕು. ರಾಜ್ಯಾದ್ಯಂತ ಇರುವ ದೇವಾಲಯಗಳಿಗೆ ಹಿಂದೂಯೇತರರು ಕಾಲಿಡದಂತೆ ಮತ್ತು ದೇವಸ್ಥಾನಗಳ ಆವರಣದಲ್ಲಿ ವಾಣಿಜ್ಯ ಚಟುವಟಿಕೆಗಳನ್ನು ನಿಷೇಧಿಸಬೇಕು ಎಂದು ಮನವಿ ಮಾಡಿದ್ದರು. ಇದನ್ನೂ ಓದಿ: ಡಿಕೆಶಿ ಪಾಕಿಸ್ತಾನ ಪರ ಹೇಳಿಕೆ ಕೊಡುವವರ ಪರವೋ ಅಥವಾ ಭಾರತ ಮಾತೆಯ ಪರವೋ: ರೇಣುಕಾಚಾರ್ಯ

    ಈ ಅರ್ಜಿ ವಿಚಾರಣೆ ನಡೆಸಿದ ಪೀಠವು, ಮನವಿಗೆ ಸಂಬಂಧಿಸಿದಂತೆ ಸಾಕ್ಷ್ಯಗಳನ್ನು ನೀಡುವಂತೆ ಅರ್ಜಿದಾರನನ್ನು ಪ್ರಶ್ನಿಸಿದೆ. ಆಗಮಗಳ ಯಾವ ಭಾಗವು ಪ್ಯಾಂಟ್, ಧೋತಿ ಮತ್ತು ಶರ್ಟ್‌ಗಳ ಕುರಿತು ಉಲ್ಲೇಖ ಮಾಡಿದೆ ಎಂದು ಪೀಠ ಕೇಳಿದೆ. ಅಂತಿಮವಾಗಿ ವಸ್ತ್ರ ಸಂಹಿತೆಗೆ ಸಂಬಂಧಿಸಿದಂತೆ ವಿವರಣೆಗಳೊಂದಿಗೆ ಅಫಿಡವಿಟ್ ಸಲ್ಲಿಸುವಂತೆ ಪೀಠ ಸೂಚಿಸಿದೆ.

  • ಕೇವಲ 1 ನಿಮಿಷದಲ್ಲಿ ದೇಶದ ಎಲ್ಲಾ ರಾಜ್ಯಗಳ ರಾಜಧಾನಿ ಹೆಸರು ಹೇಳ್ತಾಳೆ 2ರ ಕಂದಮ್ಮ!- ವಿಡಿಯೋ

    ಕೇವಲ 1 ನಿಮಿಷದಲ್ಲಿ ದೇಶದ ಎಲ್ಲಾ ರಾಜ್ಯಗಳ ರಾಜಧಾನಿ ಹೆಸರು ಹೇಳ್ತಾಳೆ 2ರ ಕಂದಮ್ಮ!- ವಿಡಿಯೋ

    ಚಂಡೀಗಢ: 2 ವರ್ಷದ ಪುಟ್ಟ ಬಾಲಕಿಯೊಬ್ಬಳು ಭಾರತದ ದೇಶದ ಎಲ್ಲಾ ರಾಜ್ಯದ ರಾಜಧಾನಿಗಳನ್ನು ಪಟಾ ಪಟಾಂತ ಹೇಳೋ ಮೂಲಕ ಸುದ್ದಿಯಾಗಿದ್ದಾಳೆ.

    ಹೌದು, ಹರ್ಯಾಣ ಪಂಚಕುಲಾದ ಅಮಾರ್ಯಾ ಗುಲಾಟಿ ಎಂಬ ಬಾಲಕಿ ಕೇವಲ 1 ನಿಮಿಷದಲ್ಲಿ ಎಲ್ಲಾ ರಾಜ್ಯದ ರಾಜಧಾನಿಗಳ ಹೆಸರನ್ನು ಹೇಳುವಲ್ಲಿ ಯಶಸ್ವಿಯಾಗುತ್ತಾಳೆ. ಸದ್ಯ ಈಕೆ ರಾಜಧಾನಿಗಳ ಹೆಸರನ್ನು ಹೇಳುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈಕೆಯ ತೊದಲು ಮಾತುಗಳಿಂದ ಎಲ್ಲರೂ ಪ್ರಭಾವಿತರಾಗಿದ್ದಾರೆ.

    ತೊದಲು ಮಾತಾಡುತ್ತಿರುವ ಈ ಪುಟ್ಟ ಬಾಲಕಿ ರಾಜ್ಯದ ರಾಜಧಾನಿಗಳ ಹೆಸರನ್ನು ಅಸ್ಪಷ್ಟವಾಗಿಯೇ ಹೇಳುತ್ತಾಳೆ. ಈಕೆಯ ಈ ಮಾತುಗಳಿಂದಲೇ ಸಾಮಾಜಿಕ ಜಾಲತಾಣದಲ್ಲಿ ವೀಕ್ಷಕರನ್ನು ಆಕರ್ಷಿಸಿದ್ದಾಳೆ. ಅಮಾರ್ಯಾ 7 ತಿಂಗಳ ಮಗುವಿದ್ದಾಗಲೇ ಆಕೆಯ ತಾಯಿ ರಾಜಧಾನಿಗಳು ಹಾಗೂ ಕೆಲವೊಂದು ಸ್ಥಳಗಳ ಹೆಸರನ್ನು ಹೇಳಿಕೊಡಲು ಆರಂಭಿಸಿದ್ದರು. ಹೀಗಾಗಿ ಈಕೆ ಇಂದು ಇಷ್ಟೊಂದು ಸುಲಲಿತವಾಗಿ ರಾಜಧಾನಿಗಳ ಹೆಸರನ್ನು ಹೇಳಬಲ್ಲವಳಾಗಿದ್ದಾಳೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

    ಇಷ್ಟು ಮಾತ್ರವಲ್ಲದೇ ಈಕೆ ಈಗಾಗಲೇ ದೇಶದ ವಿವಿಧ ನಗರಗಳ ಹೆಸರನ್ನು ಹೇಳುವ ಸ್ಥರ್ಧೆಯಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದುಕೊಂಡಿದ್ದಾಳೆ. ಒಟ್ಟಿನಲ್ಲಿ ಸದ್ಯ ಅಮಾರ್ಯ ತನ್ನ ತೊದಲು ಮಾತುಗಳಿಂದ ಸಾಮಾಜಿಕ ಜಾಲತಾಣಿಗರ ಮನಸ್ಸನ್ನು ಗೆದ್ದಿದ್ದಾಳೆ.

  • ಜಗತ್ತಿನಲ್ಲೇ ಜನರಿಗಿಂತ ಹೆಚ್ಚು ವಾಹನ ಹೊಂದಿರೋ ದೇಶವಿದು!

    ಜಗತ್ತಿನಲ್ಲೇ ಜನರಿಗಿಂತ ಹೆಚ್ಚು ವಾಹನ ಹೊಂದಿರೋ ದೇಶವಿದು!

    ಸಾನ್‍ಮರಿನೋ: ದೇಶದಲ್ಲಿ ಅತೀ ಹೆಚ್ಚು ಜನಸಂಖ್ಯೆ ಹೊಂದಿರುವುದನ್ನು ಕೇಳಿದ್ದೇವೆ. ಆದ್ರೆ ಜನರಿಗಿಂತ ಹೆಚ್ಚು ವಾಹನಗಳನ್ನು ಹೊಂದಿರುವುದನ್ನು ಕೇಳಿರಲ್ಲಿಕ್ಕಿಲ್ಲ. ಅಂತಹ ಪಟ್ಟಿಗೆ ಸೇರಿದೆ ಸಾನ್ ಮರಿನೋ ರಾಷ್ಟ್ರ.

    ಹೌದು. ವಿಶ್ವದ ಅತಿ ಪುಟ್ಟ ಸ್ವತಂತ್ರ ರಾಷ್ಟ್ರಗಳಲ್ಲಿ ಒಂದಾದ ಈ ದೇಶದಲ್ಲಿ ಜನರು ಕಡಿಮೆ. ವಾಹನಗಳು ಜಾಸ್ತಿ ಇವೆ. ಈ ರಾಷ್ಟ್ರದಲ್ಲಿ ಸುಮಾರು 34 ಸಾವಿರ ಜನರಿದ್ದಾರೆ. ಅಂಕಿ ಅಂಶಗಳ ಪ್ರಕಾರ ಈ ರಾಷ್ಟ್ರದ ಸರಾಸರಿ 1 ಸಾವಿರ ಜನರಿಗೆ 1,263 ವಾಹನಗಳಿವೆ. ಮಾತ್ರವಲ್ಲದೇ ಈ ದೇಶ ಒಟ್ಟು ಜಿಡಿಪಿಯಲ್ಲೂ ಶ್ರೀಮಂತವಾಗಿದೆ.

    ಸಾನ್ ಮರಿನೋ ಹಾಗೂ ವಾಟಿಕನ್ ಸಿಟಿ ಈ ಎರಡೂ ರಾಷ್ಟ್ರಗಳು ಸಂಪೂರ್ಣವಾಗಿ ಇಟಲಿಯ ಒಳಗೆ ಹುದುಗಿಕೊಂಡಿವೆ. ಇನ್ನು ಮೂರನೇ ರಾಷ್ಟ್ರವಾದ ಲೆಸ್ತೋ ಸಂಪೂರ್ಣವಾಗಿ ದಕ್ಷಿಣ ಆಫ್ರಿಕಾದಿಂದ ಸುತ್ತುವರಿದಿದೆ.