Tag: National Award

  • Breaking-ಇಂದು ಸಂಜೆ 5ಕ್ಕೆ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆ

    Breaking-ಇಂದು ಸಂಜೆ 5ಕ್ಕೆ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆ

    ಕೇಂದ್ರ ಸರಕಾರ ನೀಡುವ 69ನೇ ರಾಷ್ಟ್ರೀಯ ಚಲನಚಿತ್ರ (National Award) ಪ್ರಶಸ್ತಿಯನ್ನು ಇಂದು ಸಂಜೆ ಘೋಷಣೆ ಮಾಡಲಾಗುತ್ತಿದೆ. ಭಾರತದಲ್ಲಿ ತಯಾರಾಗುವ ಅಷ್ಟೂ ಸಿನಿಮಾಗಳೂ ಈ ಸ್ಪರ್ಧೆಗೆ ಸ್ಪರ್ಧಿಸಬಹುದಾಗಿದ್ದು, ಜೊತೆಗೆ ಪ್ರಾದೇಶಿಕ ಸಿನಿಮಾಗಳಿಗೂ ಪ್ರತ್ಯೇಕವಾಗಿ ಪ್ರಶಸ್ತಿಗಳು ಮೀಸಲಿವೆ.

    ಕೋವಿಡ್ ಕಾರಣದಿಂದಾಗಿ 2021ರಲ್ಲಿ ರಿಲೀಸ್ ಆಗಿರುವ ಚಿತ್ರಗಳಿಗೆ (Cinema) ಪ್ರಶಸ್ತಿಯನ್ನು ಘೋಷಣೆ ಆಗಿರಲಿಲ್ಲ. ಇದೀಗ ಆ ವರ್ಷ ರಿಲೀಸ್ ಆಗಿರುವ ಚಿತ್ರಗಳಿಗೆ ಮಾತ್ರ ಪ್ರಶಸ್ತಿ ಘೋಷಣೆ ಮಾಡಲಾಗುತ್ತಿದೆ. 2022ನೇ ಸಾಲಿನ ಚಿತ್ರಗಳನ್ನು ಇನ್ನೂ ಆಹ್ವಾನಿಸಿಲ್ಲ. ಕೇಂದ್ರ ಸರಕಾರ ಇದೇ ಮೊದಲ ಬಾರಿಗೆ ತಡವಾಗಿ ಪ್ರಶಸ್ತಿ ಘೋಷಣೆ ಮಾಡುತ್ತಿದೆ.

     

    ಸಿನಿಮಾ ರಂಗಕ್ಕೆ ನೀಡುವ ದೇಶದ ಪ್ರತಿಷ್ಠಿತ ಪ್ರಶಸ್ತಿ ಇದಾಗಿದ್ದು, ರಾಷ್ಟ್ರ ಪತಿಗಳೇ ಈ ಪ್ರಶಸ್ತಿಯನ್ನು ಪ್ರದಾನ ಮಾಡುತ್ತಾರೆ. ರಾಷ್ಟ್ರೀಯ ಪ್ರಶಸ್ತಿಗಳ ಚಿತ್ರಗಳಿಗೆ ಬೇಡಿಕೆ ಇದ್ದೇ ಇರುತ್ತದೆ. ಹಾಗಾಗಿ ಸಾಕಷ್ಟು ಚಿತ್ರಗಳು ಸ್ಪರ್ಧಾ ಕಣದಲ್ಲಿ ಇರಲಿವೆ. ಅಲ್ಲದೇ, ಪ್ರಾದೇಶಿಕ ಸಿನಿಮಾಗಳಿಗೆ ನೀಡುವ ಪ್ರಶಸ್ತಿಗಳಿಗೂ ತನ್ನದೇ ಆದ ಘನತೆ ಇದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಇನ್ಮುಂದೆ ಖಾಸಗಿ ಶಾಲಾ ಶಿಕ್ಷಕರಿಗೂ ರಾಷ್ಟ್ರೀಯ ಪ್ರಶಸ್ತಿ ನೀಡಲು ಕೇಂದ್ರ ನಿರ್ಧಾರ

    ಇನ್ಮುಂದೆ ಖಾಸಗಿ ಶಾಲಾ ಶಿಕ್ಷಕರಿಗೂ ರಾಷ್ಟ್ರೀಯ ಪ್ರಶಸ್ತಿ ನೀಡಲು ಕೇಂದ್ರ ನಿರ್ಧಾರ

    ನವದೆಹಲಿ: ಕೇಂದ್ರ ಸರ್ಕಾರ ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ಇನ್ನು ಮುಂದೆ ಖಾಸಗಿ ಶಾಲೆಗಳ ಶಿಕ್ಷಕರಿಗೂ (Private School Teacher) ರಾಷ್ಟ್ರೀಯ ಪ್ರಶಸ್ತಿ (National Awards to Teachers 2023) ನೀಡಲು ಕೇಂದ್ರ ನಿರ್ಧರಿಸಿದೆ.

    ಇಷ್ಟು ದಿನ ಸರ್ಕಾರಿ ಶಾಲಾ ಶಿಕ್ಷಕರಿಗಷ್ಟೇ ರಾಷ್ಟ್ರೀಯ ಪ್ರಶಸ್ತಿ ನೀಡಲಾಗುತ್ತಿತ್ತು. ಇದೀಗ ಕೇಂದ್ರ ಹೊಸ ನಿಯಮವನ್ನು ಜಾರಿಗೆ ತಂದಿದ್ದು, ಈ ವರ್ಷದಿಂದ ಖಾಸಗಿ ಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತ್ಯತ್ತಮ ಶಿಕ್ಷಕರಿಗೂ ರಾಷ್ಟ್ರೀಯ ಪ್ರಶಸ್ತಿ ನೀಡಲು ತೀರ್ಮಾನಿಸಿದೆ. ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಚಿತ್ರೋದ್ಯಮದ ಗಣ್ಯರು

    ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ 2023ಕ್ಕೆ ಕೇಂದ್ರ ಸರ್ಕಾರ ಅರ್ಜಿ ಆಹ್ವಾನ ಮಾಡಿದೆ. ಜುಲೈ 15 ರವರೆಗೆ ಆನ್‌ಲೈನ್ ಮೂಲಕ ಉತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಸಮಯಾವಕಾಶ ನೀಡಲಾಗಿದೆ. ಅತ್ಯುತ್ತಮ ಶಿಕ್ಷಕರಿಗೆ ಹಾಗೂ 10 ವರ್ಷ ಸತತವಾಗಿ ಸೇವೆ ಸಲ್ಲಿಸಿರುವ ಖಾಸಗಿ ಶಿಕ್ಷಕರಿಗೂ ಪ್ರಶಸ್ತಿ ನೀಡಲು ನಿರ್ಧರಿಸಲಾಗಿದೆ. ಇದನ್ನೂ ಓದಿ: ಕೃಷಿ ಇಲಾಖೆ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ರೇಡ್ – 2 ಆಮೆಗಳು ಪತ್ತೆ

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_title” view=”carousel” /]

  • ಸಂಚಾರಿ ವಿಜಯ್ ನಟನೆಯ ಕೊನೆಯ ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ : ರಾಷ್ಟ್ರ ಪ್ರಶಸ್ತಿ ಪಡೆದ 4 ಚಿತ್ರಗಳಲ್ಲಿ ವಿಜಯ್ ನಟನೆ

    ಸಂಚಾರಿ ವಿಜಯ್ ನಟನೆಯ ಕೊನೆಯ ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ : ರಾಷ್ಟ್ರ ಪ್ರಶಸ್ತಿ ಪಡೆದ 4 ಚಿತ್ರಗಳಲ್ಲಿ ವಿಜಯ್ ನಟನೆ

    68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆಯಾಗಿದ್ದು, ಸಂಚಾರಿ ವಿಜಯ್ ನಟನೆಯ ಕೊನೆಯ ಸಿನಿಮಾ ತಲೆದಂಡ ಚಿತ್ರಕ್ಕೆ ಅತ್ಯುತ್ತಮ ಪರಿಸರ ಕಾಳಜಿ ಸಿನಿಮಾ ರಾಷ್ಟ್ರೀಯ ಗರಿ ದೊರೆತಿದೆ. ಕೃಪಾಕರ ನಿರ್ದೇಶನದಲ್ಲಿ ಮೂಡಿ ಬಂದ ಈ ಸಿನಿಮಾದಲ್ಲಿ ವಿಜಯ್ ವಿಶೇಷ ಚೇತನ ವ್ಯಕ್ತಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಈ ಸಿನಿಮಾದ ನಟನೆಗಾಗಿ ಮತ್ತೊಮ್ಮೆ ವಿಜಯ್ ನ್ಯಾಷಿನಲ್ ಅವಾರ್ಡ್ ಪಡೆಯುತ್ತಾರೆ ಎಂದೇ ಅಭಿಮಾನಿಗಳು ಭಾವಿಸಿದ್ದರು. ಆದರೆ, ಸಿನಿಮಾಗೆ ಈ ಬಾರಿ ಪ್ರಶಸ್ತಿ ಸಂದಿದೆ.

    ಅತ್ಯಂತ ಚಿಕ್ಕ ವಯಸ್ಸಿನಲ್ಲೇ ಅತ್ಯುತ್ತಮ ನಟ ರಾಷ್ಟ್ರ ಪ್ರಶಸ್ತಿ ಪಡೆದಿರುವ ವಿಜಯ್, ಹಲವು ವರ್ಷಗಳ ನಂತರ ಕನ್ನಡಕ್ಕೆ ಇಂಥದ್ದೊಂದು ಗೌರವ ಸಿಗಲು ಕಾರಣರಾಗಿದ್ದರು. ಲಿಂಗದೇವರು ನಿರ್ದೇಶನದಲ್ಲಿ ಮೂಡಿ ಬಂದ ‘ನಾನು ಅವನಲ್ಲ ಅವಳು’ ಸಿನಿಮಾಗಾಗಿ ವಿಜಯ್ ಅವರಿಗೆ ಅತ್ಯುತ್ತಮ ನಟ ರಾಷ್ಟ್ರ ಪ್ರಶಸ್ತಿ ಬಂದಿತ್ತು. ಅಲ್ಲದೇ, ವಿಜಯ್ ನಟನೆಯ ನಾಲ್ಕು ಸಿನಿಮಾಗಳಿಗೆ ರಾಷ್ಟ್ರ ಪ್ರಶಸ್ತಿ ಬಂದಿದ್ದು, ಮೂರು ಸಿನಿಮಾಗಳಿಗೆ ಮತ್ತು ಒಂದು ಚಿತ್ರಕ್ಕಾಗಿ ವಿಜಯ್ ವೈಯಕ್ತಿಕ ಪ್ರಶಸ್ತಿ ಪಡೆದಿದ್ದಾರೆ. ಓದಿ: Breaking- 68ನೇ ರಾಷ್ಟ್ರ ಚಲನಚಿತ್ರ ಪ್ರಶಸ್ತಿ : ಡೊಳ್ಳು, ತಲೆದಂಡ, ನಾದದ ನವನೀತ ಸಿನಿಮಾಗಳಿಗೆ ರಾಷ್ಟ್ರ ಗರಿ

    ಅತ್ಯುತ್ತಮ ನಟ ರಾಷ್ಟ್ರ ಪ್ರಶಸ್ತಿ ಪಡೆದ ವರ್ಷವೇ, ವಿಜಯ್ ನಟನೆಯ ಮಂಸೋರೆ ನಿರ್ದೇಶನದ ‘ಹರಿವು’ ಚಿತ್ರಕ್ಕೆ ಅತ್ಯುತ್ತಮ ಪ್ರಾದೇಶಿ ಸಿನಿಮಾ ರಾಷ್ಟ್ರ ಪ್ರಶಸ್ತಿ ಸಂದಿತ್ತು. ಅಲ್ಲದೇ, 2018ರಲ್ಲಿ ಮಂಸೋರೆ ನಿರ್ದೇಶನದ ‘ನಾತಿಚರಾಮಿ’ ಸಿನಿಮಾಗೂ ಅತ್ಯುತ್ತಮ ಪ್ರಾದೇಶಿ ಸಿನಿಮಾ ರಾಷ್ಟ್ರ ಪ್ರಶಸ್ತಿ ದೊರೆತಿದೆ. ಈ ಸಿನಿಮಾದಲ್ಲೂ ವಿಜಯ್ ನಟಿಸಿದ್ದಾರೆ. ಈ ಬಾರಿ ಕೃಪಾಕರ ನಿರ್ದೇಶನದಲ್ಲಿ ಮೂಡಿ ಬಂದಿರುವ ತಲೆದಂಡ ಸಿನಿಮಾಗೆ ಅತ್ಯುತ್ತಮ ಪ್ರಾದೇಶಿಕ ಚಲನಚಿತ್ರ ರಾಷ್ಟ್ರ ಪ್ರಶಸ್ತಿ ದೊರೆತಿದೆ. ಸಹಜವಾಗಿಯೇ ಅಭಿಮಾನಿಗಳಿಗೆ ಖುಷಿಯಾಗಿದೆ. ಈ ಸಂದರ್ಭದಲ್ಲಿ ವಿಜಯ್ ಇರಬೇಕಿತ್ತು ಎನ್ನುವ ಬೇಡಿಕೆ ಹೆ‍ಚ್ಚಿದೆ.

    Live Tv
    [brid partner=56869869 player=32851 video=960834 autoplay=true]

  • Breaking- 68ನೇ ರಾಷ್ಟ್ರ ಚಲನಚಿತ್ರ ಪ್ರಶಸ್ತಿ : ಡೊಳ್ಳು, ತಲೆದಂಡ, ನಾದದ ನವನೀತ ಸಿನಿಮಾಗಳಿಗೆ ರಾಷ್ಟ್ರ ಗರಿ

    Breaking- 68ನೇ ರಾಷ್ಟ್ರ ಚಲನಚಿತ್ರ ಪ್ರಶಸ್ತಿ : ಡೊಳ್ಳು, ತಲೆದಂಡ, ನಾದದ ನವನೀತ ಸಿನಿಮಾಗಳಿಗೆ ರಾಷ್ಟ್ರ ಗರಿ

    ಇಂದು ನವದೆಹಲಿಯಲ್ಲಿ 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟವಾಗಿದ್ದು, ಕನ್ನಡದ ಸಿನಿಮಾಗಳಿಗೂ ಹಲವು ಪ್ರಶಸ್ತಿಗಳು ಸಂದಿವೆ. ಈಗಾಗಲೇ ಸಾಕಷ್ಟು ಪ್ರಶಸ್ತಿಗಳನ್ನು ಬಾಚಿಕೊಂಡಿರುವ ಸಾಗರ್ ಪುರಾಣಿಕ್ ನಿರ್ದೇಶನದ, ಪವನ್ ಒಡೆಯರ್ ನಿರ್ಮಾಣದ ಡೊಳ್ಳು ಚಿತ್ರಕ್ಕೆ ಎರಡು ಪ್ರಶಸ್ತಿಗಳು ಸಂದಿದ್ದು, ಸಂಚಾರಿ ವಿಜಯ್ ನಟನೆಯ ‘ತಲೆದಂಡ’ ಸಿನಿಮಾಗೂ ರಾಷ್ಟ್ರ ಪ್ರಶಸ್ತಿ ಸಂದಿದೆ. ಅಲ್ಲದೇ, ಗಿರೀಶ್ ಕಾಸರವಳ್ಳಿ ನಿರ್ದೇಶನದ, ವಾರ್ತಾ ಇಲಾಖೆ ನಿರ್ಮಿಸಿರುವ ಡಾ.ಪಿ.ಟಿ ವೆಂಕೇಶ್ ಕುಮಾರ್ ಬದುಕಿನ ‘ನಾದದ ನವನೀತ’ ಚಿತ್ರಕ್ಕೂ ರಾಷ್ಟ್ರೀಯ ಪ್ರಶಸ್ತಿ ಸಂದಿದೆ.

    ಅತ್ಯುತ್ತಮ ಪರಿಸರ ಕಾಳಜಿ ಚಿತ್ರವಾಗಿ ಕೃಪಾಕರ್ ನಿರ್ದೇಶನದ, ಸಂಚಾರಿ ವಿಜಯ್ ನಟನೆಯ ‘ತಲೆದಂಡ’ ಚಿತ್ರ ರಾಷ್ಟ್ರೀಯ ಪ್ರಶಸ್ತಿ ದೊರೆತರೆ, ಲೋಕೇಷನ್ ಸೌಂಡ್ ಡಿಸೈನಿಂಗ್ ವಿಭಾಗದಲ್ಲಿ ಡೊಳ್ಳು ಸಿನಿಮಾ ಪ್ರಶಸ್ತಿ ಪಡೆದುಕೊಂಡಿದೆ. ಅತ್ಯುತ್ತಮ ಪ್ರಾದೇಶಿಕ ಚಿತ್ರ ಡೊಳ್ಳು ರಾಷ್ಟ್ರೀಯ ಪ್ರಶಸ್ತಿ ಪಡೆದುಕೊಂಡರೆ, ಅತ್ಯುತ್ತಮ ಪ್ರಾದೇಶಿಕ ತುಳು ಸಿನಿಮಾ ಪ್ರಶಸ್ತಿಯು ಸಂತೋಷ್ ನಿರ್ದೇಶನದ ‘ಜೀಟಿಗೆ’ ದೊರೆತಿದೆ. ಕಲೆ ಮತ್ತು ಸಾಂಸ್ಕೃತಿಕ ಚಿತ್ರವಾಗಿ ಗಿರೀಶ್ ಕಾಸರವಳ್ಳಿ ನಿರ್ದೇಶನ ಮಾಡಿರುವ ‘ನಾದದ ನವನೀತ’ ಚಿತ್ರಕ್ಕೆ ಪ್ರಶಸ್ತಿ ಸಂದಿದೆ. ಇದನ್ನೂ ಓದಿ:`ಮಾರ್ಟಿನ್’ ಆ್ಯಕ್ಷನ್ ಸೀನ್‌ಗಾಗಿ ಧ್ರುವಾ ಸರ್ಜಾ- ಎ.ಪಿ ಅರ್ಜುನ್ ಭರ್ಜರಿ ತಯಾರಿ

    ಅತ್ಯುತ್ತಮ ಪರಿಸರ ಕಾಳಜಿ ಚಿತ್ರ : ತಲೆದಂಡ

    ಅತ್ಯುತ್ತಮ ಲೋಕೆಷನ್ ಸೌಂಡ್ ಡಿಸೈನ್ ಚಿತ್ರ : ಡೊಳ್ಳು

    ಅತ್ಯುತ್ತಮ ಕಲೆ ಮತ್ತು ಸಾಂಸ್ಕೃತಿಕ ಚಿತ್ರ : ನಾದದ ನವನೀತ

    ಅತ್ಯುತ್ತಮ ಪ್ರಾದೇಶಿಕ ಸಿನಿಮಾ : ಡೊಳ್ಳು

    ಅತ್ಯುತ್ತಮ ಪ್ರಾದೇಶಿಕ ತುಳು ಸಿನಿಮಾ : ಜೀಟಿಗೆ

    Live Tv
    [brid partner=56869869 player=32851 video=960834 autoplay=true]

  • ರಾಜ್ಯದ ಕೋವಿಡ್ ವಾರ್ ರೂಮ್​ಗೆ ರಾಷ್ಟ್ರ ಪ್ರಶಸ್ತಿ

    ರಾಜ್ಯದ ಕೋವಿಡ್ ವಾರ್ ರೂಮ್​ಗೆ ರಾಷ್ಟ್ರ ಪ್ರಶಸ್ತಿ

    ಹೈದರಾಬಾದ್: ಇ-ಆಡಳಿತದ 24ನೇ ರಾಷ್ಟ್ರೀಯ ಸಮ್ಮೇಳನದಲ್ಲಿ ಕರ್ನಾಟಕಕ್ಕೆ ರಾಷ್ಟ್ರ ಪ್ರಶಸ್ತಿ ಸಿಕ್ಕಿದೆ.

    ಹೈದರಾಬಾದ್‍ನಲ್ಲಿ ಇ-ಆಡಳಿತದ 24ನೇ ರಾಷ್ಟ್ರೀಯ ಸಮ್ಮೇಳನ ನಡೆಯಿತು. ಈ ವೇಳೆ ಕರ್ನಾಟಕ ರಾಜ್ಯ ಕೋವಿಡ್-19 ವಾರ್ ರೂಮ್ ಗೆ ಕೋವಿಡ್ ನಿರ್ವಹಣೆಯಲ್ಲಿ ಮಾಹಿತಿ ಮತ್ತು ಸಂವಹನ ತಂತ್ರಜ್ಞಾನವನ್ನು(ಐಸಿಟಿ) ಬಳಸುವ ವಿಭಾಗಕ್ಕೆ ರಾಷ್ಟ್ರ ಪ್ರಶಸ್ತಿ ಲಭಿಸಿದೆ. ಈ ಪ್ರಶಸ್ತಿಯನ್ನು ಕೋವಿಡ್ ವಾರ್ ರೂಮ್ ಮುಖ್ಯಸ್ಥ ಮುನಿಶ್ ಮೌದ್ಗಿಲ್ ಸ್ವೀಕರಿಸಿದರು. ಇದನ್ನೂ ಓದಿ:  ಮೋದಿ, ಯೋಗಿ ಫೋಟೋಗಳೊಂದಿಗೆ ಉಚಿತ ಆಹಾರ ಪ್ಯಾಕೆಟ್‍ಗಳನ್ನು ವಿತರಿಸುವಂತಿಲ್ಲ

    Contact tracing, 24x7 coordination, close watch on the quarantined in COVID-19 War Room in Karnataka | Deccan Herald

    ನಂತರ ಈ ಕುರಿತು ಮಾತನಾಡಿದ ಅವರು, ಕೋವಿಡ್ ವಾರಿಯರ್ಸ್ ಗಳಿಗೆ ನಾವು ಸಪೋರ್ಟ್ ನೆಟ್ ವರ್ಕ್ ಆಗಿದ್ದೇವೆ. ಸರಿಯಾದ ಸಮಯಕ್ಕೆ ಸೂಕ್ತ ಮಾಹಿತಿಯನ್ನು ನೀಡಿ ಜೀವ ಉಳಿಸುವ ಪ್ರಯತ್ನ ಮಾಡುತ್ತಿದ್ದೇವೆ. ಕೋವಿಡ್ ನಿರ್ವಹಣೆಗೆ ಬೆಂಬಲ ವ್ಯವಸ್ಥಿತವಾಗಿದೆ. ನಾವು ಗಡಿಯಾರದಲ್ಲಿ ಇರುವ ಮುಳ್ಳುಗಳಂತೆ ಕೆಲಸ ಮಾಡುತ್ತಿದ್ದೇವೆ. ಸಾಂಕ್ರಾಮಿಕ ರೋಗದ ಬಳಿಕ ಹೆಚ್ಚಿನ ಸಿಬ್ಬಂದಿ ಒಂದು ದಿನವೂ ರಜೆ ತೆಗೆದುಕೊಂಡಿಲ್ಲ ಎಂದು ವಿವರಿಸಿದರು.

    ರಾಜ್ಯಕ್ಕೆ ಮಾರ್ಚ್ 2020 ರಲ್ಲಿ ಮೊದಲ ಅಲೆ ಅಪ್ಪಳಿಸಿತ್ತು. ಈ ಅಲೆ ಆರಂಭವಾದ 2-3 ದಿನಗಳಲ್ಲಿ ವಾರ್ಡ್ ರೂಮ್ ಅನ್ನು ಸ್ಥಾಪಿಸಲಾಗಿತ್ತು. ಈ ವೇಳೆ ಕೊರೊನಾ ವಾಚ್ ಮೊಬೈಲ್ ಅಪ್ಲಿಕೇಶನ್ ಅನ್ನು ಮೊದಲು ರಚಿಸಲಾಯಿತು. ಇಡೀ ಭಾರತದಲ್ಲಿ ಸೋಂಕಿತರ ಸಂಪರ್ಕ ಪತ್ತೆಹಚ್ಚುವಿಕೆಗಾಗಿ ಅಪ್ಲಿಕೇಶನ್ ಅನ್ನು ಬಳಸುತ್ತಿರುವ ಏಕೈಕ ರಾಜ್ಯ ಕರ್ನಾಟಕವಾಗಿದೆ ಎಂದು ಹೆಮ್ಮೆಯಿಂದ ಹೇಳಿದರು.

     

    ಲೈನ್ ಲಿಸ್ಟ್ ಸಿಸ್ಟಮ್ ಎಂದು ಕರೆಯಲ್ಪಡುವ ರೋಗಿಗಳ ನಿರ್ವಹಣಾ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲಾಗಿದೆ. ನಮ್ಮ ರಾಜ್ಯವನ್ನೇ ಹರಿಯಾಣವೂ ಅನುಸರಿಸುತ್ತಿದೆ. ಕೊರೊನಾ ಮೊದಲ ಅಲೆ ಸಂದರ್ಭದಲ್ಲಿ ಪಾಂಡಿಚೆರಿ ರಾಜ್ಯಪಾಲ ಕಿರಣ್ ಬೇಡಿ ಅವರು ಕೋವಿಡ್ ವಾರ್ ರೂಮ್ ನ್ನು ಸಂಪರ್ಕಿಸಿ, ಸಲಹೆಗಳನ್ನು ಪಡೆದುಕೊಂಡಿದ್ದರು. ಅಲ್ಲಿಗೇ ತಂಡವೊಂದನ್ನು ರವಾನಿಸಿ ಮಾಹಿತಿಯನ್ನು ನೀಡಲಾಗಿತ್ತು. ಇದಾದ ಬಳಿಕ ಪ್ರತೀ ರಾಜ್ಯವೂ ಇದೇ ಮಾರ್ಗವನ್ನು ಅನುಸರಿಸುತ್ತಿವೆ ಎಂದು ತಿಳಿಸಿದರು.

    ಸೋಂಕಿನ ನಿರ್ವಹಣೆಗೆ ಐಟಿಯೊಂದಿಗೆ ವ್ಯವಸ್ಥಿತ ಮತ್ತು ಸಂಘಟಿತ ವಿಧಾನದ ಅಗತ್ಯವಿದೆ. ನವೆಂಬರ್ 2020ರಲ್ಲಿ, ಸ್ಟ್ಯಾನ್‍ಫೋರ್ಡ್ ವಿಶ್ವವಿದ್ಯಾಲಯವು ವಾರ್ ರೂಮ್ ಅನ್ನು ಪರಿಶೀಲನೆ ಮಾಡಿತ್ತು. ಬಳಿಕ ಕೋವಿಡ್-19 ನಿರ್ವಹಣೆಯಲ್ಲಿ ಕೋವಿಡ್ ವಾರ್ ರೂಮ್ ಅತ್ಯಂತ ಪರಿಣಾಮಕಾರಿ ಎಂದು ಹೇಳಿತ್ತು. ನಮ್ಮ ಕಾಂಟ್ಯಾಕ್ಟ್ ಟ್ರೇಸಿಂಗ್ ಮಾದರಿಯನ್ನು ಭಾರತ ಸರ್ಕಾರವು ಜೂನ್-ಜುಲೈ 2020 ರಲ್ಲಿ ಆಯ್ಕೆ ಮಾಡಿತ್ತು. ಅದನ್ನು ಕಾರ್ಯಗತಗೊಳಿಸಲು ಇತರ ರಾಜ್ಯಗಳಿಗೂ ಸೂಚನೆ ನೀಡಿತ್ತು ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ನನ್ನನ್ನ ಜ್ಯೋತಿಷಿ ಎಂದು ಕರೆದರೂ ಪರವಾಗಿಲ್ಲ, ಪಂಜಾಬ್‍ನಲ್ಲಿ ಕಾಂಗ್ರೆಸ್ ಅಧಿಕಾರ ಕಳೆದುಕೊಳ್ಳುತ್ತೆ: ಸಿ.ಟಿ.ರವಿ

    ಪ್ರಸ್ತುತ ವಾರ್ ರೂಮ್‍ನಲ್ಲಿ ಸಂಯೋಜಕರು, ತಾಂತ್ರಿಕ ಮತ್ತು ಇತರ ಸಿಬ್ಬಂದಿಯನ್ನು ಹೊರತುಪಡಿಸಿ ಸುಮಾರು 20-30 ಜನರು ಕೆಲಸ ಮಾಡುತ್ತಿದ್ದಾರೆ. ಈಗ ಮೂರನೇ ಅಲೆಯಲ್ಲಿಯೂ ಬಂದಿದ್ದು, ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿದ್ದಾರೆ. ಅದಕ್ಕಾಗಿ ಮಾಹಿತಿ ಸಂಗ್ರಹಣೆ ಮತ್ತು ವ್ಯವಸ್ಥಿತ ನಿರ್ವಹಣೆಯನ್ನು ಖಚಿತಪಡಿಸಿಕೊಳ್ಳಲು ವಾರ್ ರೂಮ್ ಶ್ರಮಿಸುತ್ತಿದೆ ಎಂದು ತಮ್ಮ ಪರಿಶ್ರಮದ ಬಗ್ಗೆ ತಿಳಿಸಿದರು.

  • ಪ್ರವಾಸೋದ್ಯಮ ಕ್ಷೇತ್ರದ 3 ವಿಭಾಗಳಲ್ಲಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಉತ್ತರಾಖಂಡ್

    ಪ್ರವಾಸೋದ್ಯಮ ಕ್ಷೇತ್ರದ 3 ವಿಭಾಗಳಲ್ಲಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಉತ್ತರಾಖಂಡ್

    ಡೆಹ್ರಾಡೂನ್: ಪ್ರವಾಸೋದ್ಯಮ ಕ್ಷೇತ್ರದ ಮೂರು ವಿಭಾಗಗಳಲ್ಲಿ ಉತ್ತರಾಖಂಡ ರಾಷ್ಟ್ರೀಯ ಮಟ್ಟದ ಪ್ರಶಸ್ತಿಗಳನ್ನು ಗೆದ್ದಿದೆ.

    ಶುಕ್ರವಾರ ಪ್ರವಾಸೋದ್ಯಮ ಸಮೀಕ್ಷೆ ಮತ್ತು ಪ್ರಶಸ್ತಿಗಳನ್ನು ವಿತರಿಸುವ ಕಾರ್ಯಕ್ರಮವನ್ನು ನವದೆಹಲಿಯಲ್ಲಿ ಆಯೋಜಿಸಲಾಯಿತು. ಈ ವೇಳೆ 9 ವಿಭಾಗಗಳಲ್ಲಿ ಭಾರತದ ಅತ್ಯುತ್ತಮ ಪ್ರವಾಸಿ ತಾಣಗಳಿಗೆ ವಿವಿಧ ಪ್ರಶಸ್ತಿಗಳನ್ನು ನೀಡಲಾಯಿತು. ಈ ಪೈಕಿ ಉತ್ತರಾಖಂಡಕ್ಕೆ ಅತ್ಯುತ್ತಮ ವನ್ಯಜೀವಿ ತಾಣ, ಅತ್ಯುತ್ತಮ ಸಾಹಸ ತಾಣ ಮತ್ತು ಅತ್ಯುತ್ತಮ ಆಧ್ಯಾತ್ಮಿಕ ತಾಣಕ್ಕೆ ಅತ್ಯುತ್ತಮ ರಾಷ್ಟ್ರೀಯ ಪ್ರಶಸ್ತಿಯನ್ನು ಲಭಿಸಿದೆ. ಇದನ್ನೂ ಓದಿ: ಬಾಗಿದ ಯೋಗಾನರಸಿಂಹ ಸ್ವಾಮಿ ಗೋಪುರದ ಕಳಶ – ಆತಂಕದಲ್ಲಿ ಭಕ್ತರು

    ಈ ಪ್ರಶಸ್ತಿಯನ್ನು ಕೇಂದ್ರ ಪ್ರವಾಸೋದ್ಯಮ ಸಚಿವ ಜಿ.ಕಿಶನ್ ರೆಡ್ಡಿ ಅವರು ಉತ್ತರಾಖಂಡದ ಪ್ರವಾಸೋದ್ಯಮ ಸಚಿವ ಸತ್ಪಾಲ್ ಮಹಾರಾಜ್ ಅವರಿಗೆ ನೀಡಿದರು. ಈ ಕುರಿತು ಕಾರ್ಯಕ್ರಮದಲ್ಲಿ ಮಾತನಾಡಿದ ರೆಡ್ಡಿ ಅವರು, ನಮ್ಮ ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ದೇಶೀಯ ಪ್ರವಾಸೋದ್ಯಮವನ್ನು ಉತ್ತೇಜಿಸಲು ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಗುರುತಿಸಿಕೊಳ್ಳಲು ಹಲವು ಕ್ರಮ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು.

    ಈ ವೇಳೆ ಪ್ರಶಸ್ತಿ ಸ್ವೀಕರಿಸಿದ ನಂತರ ಉತ್ತರಾಖಂಡದ ಪ್ರವಾಸೋದ್ಯಮ ಸಚಿವ ಮಹಾರಾಜ್ ಮಾತನಾಡಿದ್ದು, ಕೊರೊನಾದಿಂದ ಉತ್ತರಾಖಂಡ ಪ್ರವಾಸೋದ್ಯಮವು ಕ್ಷೇಮ ಪ್ರವಾಸೋದ್ಯಮ ಮತ್ತು ಆಯುಷ್ ಕ್ಷೇತ್ರದಲ್ಲಿ ಪ್ರಮುಖ ಕೇಂದ್ರವಾಗಿ ಹೊರಹೊಮ್ಮಿದೆ ಎಂದು ಖುಷಿಯನ್ನು ವ್ಯಕ್ತಪಡಿಸಿದರು.

    ಉತ್ತರಾಖಂಡವು ತನ್ನ ನೈಸರ್ಗಿಕ ಸೌಂದರ್ಯದಿಂದ ಶತಮಾನಗಳಿಂದಲೂ ಭಾರತ ಮತ್ತು ವಿದೇಶಿ ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ನಮ್ಮ ಉತ್ತರಾಖಂಡವು ಸಾಹಸ ಪ್ರವಾಸೋದ್ಯಮಕ್ಕೆ ಅಪಾರ ಸಾಮಥ್ರ್ಯವನ್ನು ಹೊಂದಿದೆ. ಈ ಪರಿಣಾಮ ಉತ್ತರಾಖಂಡ ಸಾಹಸ ಪ್ರಿಯರಿಗೆ ನೆಚ್ಚಿನ ಸ್ಥಳಗಳಲ್ಲಿ ಒಂದಾಗುತ್ತಿದೆ. ಸಾಹಸ ಕ್ರೀಡೆಗಳನ್ನು ಉತ್ತೇಜಿಸಲು ನಾವು ನಿರಂತರವಾಗಿ ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಇತಿಹಾಸ ಬರೆದ ಪವರ್ ಸ್ಟಾರ್ ಪುಣ್ಯಸ್ಮರಣೆ- ದಾಖಲೆ ಪ್ರಮಾಣದಲ್ಲಿ ನೇತ್ರದಾನಕ್ಕೆ ಅರ್ಜಿ

    ನಾವು ಹೆಚ್ಚು ಪರಿಸರ ಸ್ನೇಹಿ ಪ್ರವಾಸೋದ್ಯಮವನ್ನು ಉತ್ತೇಜಿಸುತ್ತೇವೆ. ನೌಕರರು ಮತ್ತು ಸ್ಥಳೀಯ ಸಮುದಾಯಗಳ ಅಭಿವೃದ್ಧಿಗೆ ಸರ್ಕಾರ ಯಾವಾಗಲೂ ಬದ್ಧವಾಗಿದೆ. ಅದರಲ್ಲಿಯೂ ಕೇದಾರನಾಥಕ್ಕೆ ಭೇಟಿ ನೀಡುವ ಭಕ್ತರಿಗೆ ಭವಿಷ್ಯದಲ್ಲಿ ಸೌಲಭ್ಯಗಳು ಸಿಗುವಂತೆ ಪ್ರಧಾನಿಗಳ ಮಾರ್ಗಸೂಚಿ ನೀಡಿದ್ದು, ಈ ಹಿನ್ನೆಲೆ ಕೇದಾರನಾಥದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗುತ್ತಿದೆ ಎಂದರು.

  • ವಿಜಯಪುರದ ಕುವರಿಗೆ ರಾಷ್ಟ್ರೀಯ ಪ್ರಶಸ್ತಿ

    ವಿಜಯಪುರದ ಕುವರಿಗೆ ರಾಷ್ಟ್ರೀಯ ಪ್ರಶಸ್ತಿ

    ವಿಜಯಪುರ: ಏಮ್ಸ್, ಅಖಿಲ ಭಾರತ ಮಟ್ಟದ ಪರೀಕ್ಷೆಯಲ್ಲಿ ವಿಜಯಪುರದ ಕುವರಿ ಉತ್ತಮ ಸಾಧನೆ ಮಾಡಿದ್ದು, ರಾಷ್ಟ್ರೀಯ ಪ್ರಶಸ್ತಿ ಪಡೆದು ದೇಶವೇ ಹೆಮ್ಮೆ ಪಡುವಂತಹ ಕೆಲಸ ಮಾಡಿದ್ದಾರೆ.

    ವಿಜಯಪುರ ನಗರದ ನಿವಾಸಿ ದಿವ್ಯಾ ಹಿರೊಳ್ಳಿ ಆಲ್ ಇಂಡಿಯಾ ಇನ್‍ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್(ಏಮ್ಸ್) ಸಂಸ್ಥೆಯ ಅಖಿಲ ಭಾರತಮಟ್ಟದ ಪರೀಕ್ಷೆಯಲ್ಲಿ ರಾಷ್ಟ್ರಕ್ಕೆ ಪ್ರಥಮ ರ್ಯಾಂಕ್ ಪಡೆದಿದ್ದಾರೆ. ಈ ಮೂಲಕ ಕುಟುಂಬದವರು ಮಾತ್ರವಲ್ಲ, ಜಿಲ್ಲೆಯೇ ಖುಷಿ ಪಡುವಂತಹ ಕೆಲಸ ಮಾಡಿದ್ದಾರೆ. ಇದನ್ನೂ ಓದಿ:  ರೈತರು, ನೆರೆ ಸಂತ್ರಸ್ತರಿಗೆ ಪರಿಹಾರಕ್ಕೆ ಅಧಿವೇಶನದಲ್ಲಿ ಒತ್ತಾಯ: ಸತೀಶ್ ಜಾರಕಿಹೊಳಿ

    ನವದೆಹಲಿಯ ಏಮ್ಸ್, ಅಖಿಲ ಭಾರತ ಮಟ್ಟದಲ್ಲಿ ಆಯೋಜಿಸಿದ್ದ ಪರೀಕ್ಷೆ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ನವೆಂಬರ್ 20 ರಂದು ಪರೀಕ್ಷೆ ನಡೆದಿತ್ತು. ದಿವ್ಯ ಹಿರೊಳ್ಳಿ ಅವರು ಏಮ್ಸ್ ಪರೀಕ್ಷೆಯಲ್ಲಿ ಶೇ.67.08 ಅಂಕಗಳೊಂದಿಗೆ ದೇಶಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಇದನ್ನೂ ಓದಿ:  ಪಬ್ಲಿಕ್ ಟಿವಿ ಇಂಪ್ಯಾಕ್ಟ್: ಕೊಚ್ಚಿಹೋದ ಸೇತುವೆಗೆ ಡಿಸಿ, ಎಸ್ಪಿ ಭೇಟಿ, ಶೀಘ್ರ ದುರಸ್ತಿಗೆ ಆದೇಶ

    ದಿವ್ಯಾ ತಂದೆ ಅರವಿಂದ ಹಿರೊಳ್ಳಿ ಅವರು ನಗರದ ಸೆಷನ್ ಕೋರ್ಟ್‍ನಲ್ಲಿ ಹಿರಿಯ ವಕೀಲರಾಗಿದ್ದಾರೆ. ದಿವ್ಯಾ ಅವರು ನಗರದ ಬಿಎಲ್‍ಡಿ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ವೈದ್ಯಕೀಯ ಪದವಿ, ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಎಂಡಿ, ಪಾಂಡಿಚೆರಿಯ ಜಿಪ್ ಮೆರ್ ನಲ್ಲಿ ಫೆಲೋಶಿಪ್ ಇನ್ ಕ್ರಿಟಿಕಲ್ ಕೇರ್ ಹಾಗೂ ಬೆಂಗಳೂರಿನ ನಿಮ್ಹಾನ್ಸನಲ್ಲಿ ಫೆಲೋಶಿಪ್ ಇನ್ ನ್ಯೂರೋ ಕ್ರಿಟಿಕಲ್ ಕೇರ್ ವ್ಯಾಸಾಂಗ ಮಾಡಿದ್ದಾರೆ.

  • ರಾಷ್ಟ್ರಮಟ್ಟಕ್ಕೆ ಕಾಫಿನಾಡಿನ ಎರಡು ಸರ್ಕಾರಿ ಶಾಲೆಗಳು ಆಯ್ಕೆ

    ರಾಷ್ಟ್ರಮಟ್ಟಕ್ಕೆ ಕಾಫಿನಾಡಿನ ಎರಡು ಸರ್ಕಾರಿ ಶಾಲೆಗಳು ಆಯ್ಕೆ

    ಚಿಕ್ಕಮಗಳೂರು: 2021ರ ಜನವರಿಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಉತ್ತಮ ಅಭ್ಯಾಸಗಳನ್ನು ಅಳವಡಿಕೆ ಮಾಡಿಕೊಂಡಿರುವ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳನ್ನು ಜಿಲ್ಲೆಗೆ ಎರಡರಂತೆ ಆಯ್ಕೆ ಮಾಡಿ ಕಳುಹಿಸಲು ಸರ್ಕಾರ ಸೂಚಿಸಿತ್ತು. ಇದರಂತೆ ಇದೀಗ ಕಾಫಿನಾಡಿನ ಎರಡು ಸರ್ಕಾರಿ ಶಾಲೆಗಳು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದೆ.

    ಉತ್ತಮ ಅಭ್ಯಾಸಗಳನ್ನು ಅಳವಡಿಕೊಂಡಿರುವ ಚಿಕ್ಕಮಗಳೂರು ತಾಲೂಕಿನ ಆಲ್ದೂರು ಸಮೀಪದ ಯಲಗುಡಿಗೆ ಸರ್ಕಾರಿ ಪ್ರಾಥಮಿಕ ಶಾಲೆ ಹಾಗೂ ತರೀಕೆರೆ ತಾಲೂಕಿನ ಸೊಕ್ಕೆ ಪ್ರೌಢ ರಾಷ್ಟ್ರಮಟ್ಟಕ್ಕೆ ಆಯ್ಕೆ ಆಗಿದೆ.

    ಈ ಕುರಿತು ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಡಯಟ್ ಪ್ರಾಂಶುಪಾಲರಾದ ಪುಷ್ಪಲತಾ ಅವರು, ಉತ್ತಮ ಅಭ್ಯಾಸಗಳನ್ನು ಅಳವಡಿಸಿಕೊಂಡಿರುವ ಕಾರಣ ಜಿಲ್ಲೆಯ ಎರಡು ಸರ್ಕಾರಿ ಶಾಲೆಗಳು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುವುದು ಜಿಲ್ಲೆಗೆ ಹೆಮ್ಮೆಯ ಸಂಗತಿ. ಸರ್ಕಾರ ಉತ್ತಮ ಅಭ್ಯಾಸಗಳನ್ನು ಅಳವಡಿಸಿಕೊಂಡಿರುವ ಶಾಲೆಗಳ 5 ಅಥವಾ 6 ನಿಮಿಷದ ವೀಡಿಯೋ ಜೊತೆ ಹೆಚ್ಚಿನ ವಿಡಿಯೋಗಳನ್ನು ಕಳುಹಿಸಲು ಅವಕಾಶ ನೀಡಿತ್ತು. ಅದರಂತೆ ಜಿಲ್ಲೆಯ ಎರಡು ಶಾಲೆಗಳ ವೀಡಿಯೋಗಳನ್ನು ಕಳುಹಿಸಿಕೊಡಲಾಗಿತ್ತು. ತರೀಕೆರೆ ತಾಲೂಕಿನ ಸೊಕ್ಕೆ ಸರಕಾರಿ ಪ್ರೌಢ ಶಾಲೆ ಹಾಗೂ ಚಿಕ್ಕಮಗಳೂರು ತಾಲೂಕಿನ ಯಲಗುಡಿಗೆ ಶಾಲೆಯ ಶಿಕ್ಷಕರು ಬಹಳ ಹಿಂದಿನಿಂದಲೂ ಸಾಕಷ್ಟು ಉತ್ತಮವಾದಂತಹ ಅಭ್ಯಾಸಗಳನ್ನು ಮಕ್ಕಳಲ್ಲಿ ಮಾಡಿಸಿಕೊಂಡು ಬಂದಿದ್ದರು. ಜೊತೆಗೆ ಬೇರೆ ಕ್ಷೇತ್ರಗಳಲ್ಲೂ ತಮ್ಮನ್ನು ಗುರುತಿಸಿಕೊಂಡಿರುವ ಶಾಲೆಗಳು ಇವಾಗಿವೆ ಎಂದರು. ಇದನ್ನೂ ಓದಿ: ದಾರಿಯಲ್ಲಿ ಸಿಕ್ಕ ಪರ್ಸ್ ಹಿಂದಿರುಗಿಸಿ ಮಾನವೀಯತೆ ಮೆರೆದ ಶಿಕ್ಷಕ

    2 ಶಾಲೆಗಳು ಸುಮಾರು ಐದರಿಂದ ಆರು ನಿಮಿಷದ ವೀಡಿಯೋಗಳನ್ನು ನಮಗೆ ಕಳುಹಿಸಿಕೊಟ್ಟಿತ್ತು. ನಾವು ಆ ವಿಡಿಯೋಗಳನ್ನು ಧಾರವಾಡಕ್ಕೆ ಕಳುಹಿಸಿದ್ದೆವು. ಈಗ ರಾಜ್ಯದ ಶಾಲೆಗಳಲ್ಲಿ ಉತ್ತಮ ಅಭ್ಯಾಸಗಳನ್ನ ಮಾಡಿಕೊಂಡಿರುವ ಶಾಲೆಗಳ ಪಟ್ಟಿಯಲ್ಲಿ ನಮ್ಮ ಜಿಲ್ಲೆಯ ಎರಡು ಶಾಲೆಗಳು ಸೇರಿರುವುದು ಸಂತಸದ ವಿಷಯ. ಬೇರೆ ಜಿಲ್ಲೆಗಳಲ್ಲಿ ಒಂದೊಂದು ಶಾಲೆ ಸೇರಿಕೊಂಡಿದ್ದರೆ ನಮ್ಮ ಜಿಲ್ಲೆಯಲ್ಲಿ ಎರಡೂ ಶಾಲೆಗಳು ಸೇರಿರುವುದು ಸಂತಸದ ಸಂಗತಿ ಎಂದು ಅಭಿಪ್ರಾಯಪಟ್ಟರು.

    ಈ ರೀತಿ ಉತ್ತಮವಾದ ಅಭ್ಯಾಸಗಳಿಂದ ಆಯ್ಕೆಯಾದ ಶಾಲೆಗಳಿಗೆ ಸರ್ಕಾರದಿಂದ 5000 ಪ್ರೋತ್ಸಾಹ ಧನ ಹಾಗೂ ಪ್ರಶಸ್ತಿ ಪತ್ರ ನೀಡಲಾಗುವುದು. ಈಗ ಆಯ್ಕೆಯಾಗಿರುವ ಶಾಲೆಗಳನ್ನು ರಾಜ್ಯ ಮಟ್ಟದಲ್ಲಿ ಆಯ್ಕೆ ಮಾಡಿರುವುದರಿಂದ ಮತ್ತೊಮ್ಮೆ ವಿಡಿಯೋಗಳನ್ನು ಮಾಡಿಕೊಡುವಂತೆ ಸೂಚನೆ ಬಂದಿದೆ. ಮುಂದಿನ ಹದಿನೈದು ದಿನಗಳ ಕಾಲಾವಕಾಶ ಇದೆ. ಆ ದಿನಗಳಲ್ಲಿ ನಾವು ಶಾಲೆಯ ಮತ್ತೊಂದು ವೀಡಿಯೋವನ್ನು ಮಾಡಿ ಕಳುಹಿಸಿಕೊಡಬೇಕಾಗಿದೆ. ಎಸ್.ಡಿ.ಎಂ.ಸಿ, ಪೋಷಕರು ಹಾಗೂ ಊರಿನ ಸಾರ್ವಜನಿಕರ ಸಹಕಾರ ಪಡೆದು ಶಿಕ್ಷಣದಲ್ಲಿ ತಂತ್ರಜ್ಞಾನ ಅಳವಡಿಕೆ ಸೇರಿದಂತೆ ಎಲ್ಲಾ ಅಂಶಗಳನ್ನು ಒಳಗೊಂಡಂತೆ ವೀಡಿಯೋ ಚಿತ್ರೀಕರಣಕ್ಕೆ ತಿಳಿಸಿದ್ದೇವೆ ಅದನ್ನು ಮುಂದೆ ರಾಷ್ಟ್ರ ಮಟ್ಟದ ಆಯ್ಕೆಗಾಗಿ ಕಳುಹಿಸಿಕೊಡುತ್ತೇವೆ. ಈ ಶಾಲೆಗಳು ರಾಷ್ಟ್ರಮಟ್ಟದಲ್ಲೂ ಪ್ರಶಸ್ತಿ ತೆಗೆದುಕೊಳ್ಳಲಿ ಎಂಬುದು ನಮ್ಮ ಆಶಯ ಎಂದಿದ್ದಾರೆ.

  • ಹಾಸನ ಜಿಲ್ಲೆಗೆ ರಾಷ್ಟ್ರೀಯ ಪುರಸ್ಕಾರ ಹಸ್ತಾಂತರ

    ಹಾಸನ ಜಿಲ್ಲೆಗೆ ರಾಷ್ಟ್ರೀಯ ಪುರಸ್ಕಾರ ಹಸ್ತಾಂತರ

    ಹಾಸನ: ಕೇಂದ್ರ ಸರ್ಕಾರ ನೀಡುವ ರಾಷ್ಟ್ರೀಯ ಪುರಸ್ಕಾರಕ್ಕೆ ಹಾಸನ ಜಿಲ್ಲೆ ಆಯ್ಕೆಯಾಗಿತ್ತು. ಇಂದು ರಾಜ್ಯದಲ್ಲೇ ಉತ್ತಮ ಸಾಧನೆಗಾಗಿ ಜಿಲ್ಲೆಗೆ ಅಧಿಕೃತವಾಗಿ ರಾಷ್ಟ್ರೀಯ ಪ್ರಶಸ್ತಿ ಹಸ್ತಾಂತರಗೊಂಡಿದೆ.

    ರಾಷ್ಟ್ರೀಯ ಪಂಚಾಯತ್ ರಾಜ್ ದಿವಸದ ಅಂಗವಾಗಿ ನವದೆಹಲಿಯಲ್ಲಿ ನಡೆಯಬೇಕಿದ್ದ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಕೋವಿಡ್ -19 ಹಿನ್ನೆಲೆಯಲ್ಲಿ ವರ್ಚುವಲ್ ವೇದಿಕೆ ಮುಖಾಂತರ ಮಾಡಲಾಯಿತು. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವರಾದ ನರೇಂದ್ರ ಸಿಂಗ್ ತೋಮರ್, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ವಿವಿಧ ರಾಜ್ಯದ ಮುಖ್ಯಮಂತ್ರಿಗಳು ಸೇರಿದಂತೆ ಗಣ್ಯಾತಿಗಣ್ಯರು ಪಾಲ್ಗೊಂಡಿದ್ದ ಕಾರ್ಯಕ್ರಮದಲ್ಲಿ ವಿವಿಧ ಗ್ರಾಮೀಣ ಸಶಕ್ತೀಕರಣ ಪ್ರಶಸ್ತಿಗಳನ್ನು ಸಾಂಕೇತಿಕವಾಗಿ ವಿತರಿಸಲಾಯಿತು.

    ದೆಹಲಿಯಲ್ಲಿ ನಡೆದ ಕಾರ್ಯಕ್ರಮವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿ ಮಾತನಾಡಿದರು, ಪ್ರಶಸ್ತಿ ವಿಜೇತ ಜಿಲ್ಲಾ ಪಂಚಾಯಿತಿ, ಗ್ರಾಮೀಣ ಸ್ಥಳೀಯ ಸಂಸ್ಥೆಗಳು ಹಾಗೂ ಅದರ ಅಧಿಕಾರಿಗಳಿಗೆ ಶುಭ ಕೋರಿದರು. ದೇಶದ ಶಕ್ತಿ ಗ್ರಾಮಗಳಲ್ಲಿದ್ದು ಹಳ್ಳಿಗಳ ಅಭಿವೃದ್ಧಿಯಿಂದ ಮಾತ್ರ ದೇಶದ ಸಂಪೂರ್ಣ ಪ್ರಗತಿ ಸಾಧ್ಯ. ಹಳ್ಳಿಗಳು ಮತ್ತು ಬಡವರ ಉದ್ಧಾರ ಸರ್ಕಾರದ ಆದ್ಯತೆ. ಆ ನಿಟ್ಟಿನಲ್ಲಿ ಗ್ರಾಮೀಣಾಭಿವೃದ್ಧಿಗೆ ಅನೇಕ ಯೋಜನೆಗಳನ್ನು ರೂಪಿಸಿ ಅನುಷ್ಠಾನಕ್ಕೆ ತರಲಾಗಿದೆ ಅವುಗಳನ್ನು ಸಕಾಲದಲ್ಲಿ ಅರ್ಹರಿಗೆ ತಲಿಪಿಸುವುದು ನಮ್ಮೆಲ್ಲರ ಜವಾಬ್ದಾರಿ. ಇದಕ್ಕೆ ರಾಜ್ಯ ಸರ್ಕಾರಗಳು ಹಾಗೂ ಜಿಲ್ಲಾ ಪಂಚಾಯಿತಿ, ಗ್ರಾಮ ಪಂಚಾಯಿತಿಗಳ ಸಂಪೂರ್ಣ ಪಾಲ್ಗೊಳ್ಳುವಿಕೆ ಅತ್ಯಗತ್ಯ. ಹಾಗಾಗಿ ಈ ಕಾರ್ಯದಲ್ಲಿ ಸಮರ್ಪಣಾ ಭಾವದಿಂದ ಕೆಲಸ ಮಾಡುವ, ಸಮರ್ಪಕ ಸಾಧನೆ ಮಾಡುವ ಜಿಲ್ಲಾ ಪಂಚಾಯಿತಿ, ಗ್ರಾಮೀಣ ಸ್ಥಳೀಯ ಸಂಸ್ಥೆಗಳು ಹಾಗೂ ಅಧಿಕಾರಿಗಳನ್ನು ಪ್ರೋತ್ಸಾಹಿಸಲು ಈ ಪ್ರಶಸ್ತಿಗಳನ್ನು ನೀಡಲಾಗುತ್ತಿದ್ದು, ಇನ್ನಷ್ಟು ಮಾದರಿಯಾಗಿ ಕೆಲಸ ಮಾಡಿ ಎಂದು ಪ್ರಧಾನಿ ಕರೆ ನೀಡಿದರು.

    ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವರಾದ ನರೇಂದ್ರ ಸಿಂಗ್ ತೋಮರ್ ಅವರು ಪಂಚಾಯಿತಿ ಸಶಕ್ತೀಕರಣ ಯೋಜನೆಯ ಉದ್ದೇಶ, ಆಶಯ ಆಯ್ಕೆ ಸ್ವರೂಪ ಪ್ರಶಸ್ತಿ ಪಡೆವ ಸಂಸ್ಥೆಗಳ ಜವಾಬ್ದಾರಿಗಳನ್ನು ವಿವರಿಸಿ ಎಲ್ಲಾ ಪ್ರಶಸ್ತಿ ಪುರಸ್ಕೃತ ಜಿಲ್ಲಾ ಪಂಚಾಯಿತಿ, ಗ್ರಾಮೀಣ ಸ್ಥಳೀಯ ಸಂಸ್ಥೆಗಳನ್ನು, ಜನಪ್ರತಿನಿಧಿಗಳನ್ನು ಮತ್ತು ಅಧಿಕಾರಿಗಳನ್ನು ಅಭಿನಂದಿಸಿದರು.

    ದೆಹಲಿಯಲ್ಲಿ ಸಾಂಕೇತಿಕವಾಗಿ ಪ್ರಶಸ್ತಿ ವಿತರಣೆ ಹಾಗೂ ಪ್ರಶಸ್ತಿ ಮೊತ್ತವನ್ನು ಆಯಾಯ ಜಿಲ್ಲಾ ಪಂಚಾಯತಿಗಳಿಗೆ ಆನ್ ಲೈನ್ ಮೂಲಕ ವರ್ಗಾವಣೆ ಮಾಡಿದ ನಂತರ ಇತ್ತ ಹಾಸನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಆರ್.ಗಿರೀಶ್ ಅವರು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಎ. ಪರಮೇಶ್ ಅವರಿಗೆ ಪ್ರಶಸ್ತಿ ಫಲಕವನ್ನು ಹಸ್ತಾಂತರ ಮಾಡಿ ಅಭಿನಂದನೆ ಸಲ್ಲಿಸಿದರು.

    ಇದೊಂದು ಹೆಮ್ಮೆಯ ಸಾಧನೆ. ಜಿಲ್ಲೆಗೆ ಸಂದ ಗೌರವ ಇದಕ್ಕೆ ಕಾರಣರಾದ ಜನಪ್ರತಿನಿಧಿಗಳು ಹಾಗೂ ಜಿಲ್ಲಾ ಪಂಚಾಯತಿ ಸಿ.ಇ.ಒ ಇತರ ಜಿಲ್ಲಾ ಹಾಗೂ ತಾಲೂಕು ಮತ್ತು ಗ್ರಾಮ ಪಂಚಾಯತಿ ಮಟ್ಟದ ಅಧಿಕಾರಿಗಳನ್ನು ತಾವು ಅಭಿನಂದಿಸುವುದಾಗಿ ಆರ್.ಗಿರೀಶ್ ಹೇಳಿದರು.

    ಜಿಲ್ಲಾ ಪಂಚಾಯಿತಿ ಸಿ.ಇ.ಒ ಪರಮೇಶ್ ಅವರು ಸಹ ಪ್ರಶಸ್ತಿ ಬಂದ ಬಗ್ಗೆ ಸಂತಸ ವ್ಯಕ್ತಪಡಿಸಿ ಈ ಸಾಧನೆಗೆ ಸಹಕರಿಸಿದ ಜಿಲ್ಲಾ ಉಸ್ತುವಾರಿ ಸಚಿವರು, ಲೋಕಸಭಾ ಸದಸ್ಯರು, ಶಾಸಕರು, ಜಿಲ್ಲಾ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು ಇತರ ಎಲ್ಲಾ ಜನ ಪ್ರತಿನಿಧಿಗಳು ಹಾಗೂ ಅಧಿಕಾರಿಗಳಿಗೆ ಧನ್ಯವಾದ ಸಮರ್ಪಿಸುವುದಾಗಿ ತಿಳಿಸಿದರು

    ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿಗಳಾದ ಚಂದ್ರಶೇಖರ್, ಮಹೇಶ್, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ನಾಗರಾಜ್, ಯೋಜನಾ ನಿರ್ದೇಶಕರಾದ ವಿಠಲ ಕಾವಳೆ, ಜಿಲ್ಲಾ ವಾರ್ತಾಧಿಕಾರಿ ವಿನೋದ್ ಚಂದ್ರ ಮತ್ತಿತರರು ಹಾಜರಿದ್ದರು.

  • ‘ಅಕ್ಷಿ’ ಸಿನಿಮಾಕ್ಕೆ ರಾಷ್ಟ್ರ ಪ್ರಶಸ್ತಿ – ಸಂತಸ ವ್ಯಕ್ತಪಡಿಸಿದ ಕಾಮಿಡಿ ಕಿಲಾಡಿ ಜಿಜಿ

    ‘ಅಕ್ಷಿ’ ಸಿನಿಮಾಕ್ಕೆ ರಾಷ್ಟ್ರ ಪ್ರಶಸ್ತಿ – ಸಂತಸ ವ್ಯಕ್ತಪಡಿಸಿದ ಕಾಮಿಡಿ ಕಿಲಾಡಿ ಜಿಜಿ

    ಬೆಂಗಳೂರು: ಅಕ್ಷಿ ಸಿನಿಮಾಕ್ಕೆ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಿಕ್ಕಿದ್ದು, ಕಾಮಿಡಿ ಕಿಲಾಡಿಗಳು ಕಾರ್ಯಕ್ರಮದ ಮೂಲಕ ಖ್ಯಾತಿ ಪಡೆದ ಗೋವಿಂದೇ ಗೌಡ ಸಂತಸ ವ್ಯಕ್ತಪಡಿಸಿದ್ದಾರೆ.

    ಈ ಕುರಿತಂತೆ ಮಾತನಾಡಿದ ಗೋವಿಂದ್ ಗೌಡ(ಜಿಜಿ) ಅಕ್ಷಿ ಸಿನಿಮಾಕ್ಕೆ ರಾಷ್ಟ್ರ ಪ್ರಶಸ್ತಿ ದೊರೆಯುತ್ತದೆ ಎಂದು ನಿರೀಕ್ಷಿಸಿರಲಿಲ್ಲ. ಕನ್ನಡದ ಸಿನಿಮಾ ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡಿದ್ದು, ನಾನು ಆ ಸಿನಿಮಾದಲ್ಲಿ ಅಭಿನಯಿಸಿದ್ದೇನೆ ಎಂದು ಹೇಳಲು ಹೆಮ್ಮೆಯಾಗುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದರು.

    ಈ ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ ದೊರೆಯಲು ಪ್ರಮುಖ ಕಾರಣ ಸಿನಿಮಾದ ನಿರ್ದೇಶಕ ಮನೋಜ್ ಕುಮಾರ್. ಹಾಗಾಗಿ ಅವರಿಗೆ ಈ ಕ್ರೆಡಿಟ್ ಸಲ್ಲಬೇಕು. ಸಿನಿಮಾ ಬಗ್ಗೆ ಹೇಳಿದಾಗ ಇಲ್ಲಿಯವರೆಗೂ ಜನರು ನನ್ನನ್ನು ಹಾಸ್ಯದ ಪಾತ್ರಗಳಲ್ಲಿ ಹೆಚ್ಚಾಗಿ ನೋಡಿದ್ದಾರೆ. ಆದರೆ ಅಕ್ಷಿ ಸಿನಿಮಾದಲ್ಲಿ ನನ್ನ ಪಾತ್ರ ಗಂಭೀರ ಪಾತ್ರವಾಗಿದ್ದು, ಜನ ಹೇಗೆ ಸ್ವೀಕರಿಸುತ್ತಾರೋ ಗೊತ್ತಿಲ್ಲ. ಸಿನಿಮಾವನ್ನೂ ಪ್ರಾರಂಭಿಸುವುದಕ್ಕೂ ಮುನ್ನ ಒಮ್ಮೆ ಯೋಚನೆ ಮಾಡಿ ಎಂದು ನಿರ್ದೇಶಕರಿಗೆ ಹೇಳಿದ್ದೆ. ಆದರೆ ಅವರು ನನ್ನ ಮೇಲೆ ಸಂಪೂರ್ಣ ನಂಬಿಕೆ ಇಟ್ಟು ನೀನು ಈ ಪಾತ್ರವನ್ನು ಮಾಡಲೇಬೇಕು ಎಂದು ಹೇಳಿದ್ದರು. ನಿಜಕ್ಕೂ ಅವರ ಶ್ರಮದಿಂದ ಸಿನಿಮಾಕ್ಕೆ ರಾಷ್ಟ್ರ ಪ್ರಶಸ್ತಿ ದೊರೆತಿದೆ. ಸಿನಿಮಾ ಇನ್ನೂ ಬಿಡುಗಡೆಯಾಗಿಲ್ಲ. ಆದರೂ ಕೆಲವರು ಸಿನಿಮಾವನ್ನು ವೀಕ್ಷಿಸಿದ್ದು ನನ್ನ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸುತ್ತಿದ್ದಾರೆ ಎಂದರು.

    ಸದ್ಯ ಸಿನಿಮಾವನ್ನು ಏಪ್ರಿಲ್‍ನಲ್ಲಿ ಬಿಡುಗಡೆಗೊಳಿಸಲು ಚಿತ್ರತಂಡ ತಯಾರಿ ನಡೆಸುತ್ತಿದ್ದು, ಮೊದಲ ಬಾರಿಗೆ ಮನೋಜ್‍ಕುಮಾರ್ ಆ್ಯಕ್ಷನ್ ಕಟ್ ಹೇಳಿದ್ದಾರೆ. ಗೋವಿಂದೇ ಗೌಡ, ಇಳಾ ವಿಟ್ಲಾ, ಮಾಸ್ಟರ್ ಮಿಥುನ್, ಮಾಸ್ಟರ್ ಸೌಮ್ಯ ಚಿತ್ರದ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಸಿನಿಮಾಕ್ಕೆ ಶ್ರೀನಿವಾಸ್, ರಮೇಶ್ ಬಂಡವಾಳ ಹೂಡಿದ್ದು, ಕಲಾ ದೇಗುಲ ಶ್ರೀನಿವಾಸ್ ಸಂಗೀತ ಸಂಯೋಜಿಸಿದ್ದಾರೆ ಹಾಗೂ ಮುಕುಲ್ ಗೌಡ ಛಾಯಾಗ್ರಹಣ ಸಿನಿಮಾಕ್ಕಿದೆ.