Tag: National Congress

  • ಮೋದಿ ಗೆದ್ದಿರೋದು 2024ರಲ್ಲಿ ಅಲ್ಲ, ಮೈತ್ರಿ ಮುರಿದ ಬಳಿಕ ಸಿಎಂ ನಿತೀಶ್ ವಾಗ್ದಾಳಿ

    ಮೋದಿ ಗೆದ್ದಿರೋದು 2024ರಲ್ಲಿ ಅಲ್ಲ, ಮೈತ್ರಿ ಮುರಿದ ಬಳಿಕ ಸಿಎಂ ನಿತೀಶ್ ವಾಗ್ದಾಳಿ

    ಪಾಟ್ನಾ: ಮೈತ್ರಿ ಕಡಿದುಕೊಂಡು ನೂತನ ಸರ್ಕಾರ ರಚನೆಯಾದ ದಿನದಿಂದಲೇ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿಗೆ ಬಿಹಾರದ ನೂತನ ಸಿಎಂ ನಿತೀಶ್ ಕುಮಾರ್ ಮುಂದಾಗಿದ್ದಾರೆ.

    ಜನತಾ ದಳ (ಯುನೈಟೆಡ್) (ಜೆಡಿಯು) ಬಿಜೆಪಿಯೊಂದಿಗೆ ಮುರಿದು ಬಿಹಾರದಲ್ಲಿ ಸರ್ಕಾರ ರಚಿಸಲು ಆರ್‌ಜೆಡಿ, ಕಾಂಗ್ರೆಸ್ ಮತ್ತು ಇತರ ಪ್ರಾದೇಶಿಕ ಪಕ್ಷಗಳೊಂದಿಗೆ ಕೈಜೋಡಿಸಿತು. ಇಂದು 8ನೇ ಬಾರಿಗೆ ನಿತೀಶ್ ಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ಆರ್‌ಜೆಡಿಯ ತೇಜಸ್ವಿ ಯಾದವ್ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದನ್ನೂ ಓದಿ: ಊಟ ಬೇಕಂದ್ರೆ ಕೇಳಿ ಹಾಕಿಸ್ಕೋತಿನಿ ಬಿಡು ಗುರು – ನಟ ಕೋಮಲ್ ಶೈಲಿ ಕಾಪಿ ಹೊಡೆದ್ರಾ ಶಿಖರ್ ಧವನ್?

    ಪ್ರಮಾಣ ವಚನ ಸ್ವೀಕಾರ ಸಮಾರಂಭದ ನಂತರ ಮಾತನಾಡಿದ ಅವರಿಂದು, ಪ್ರಧಾನಿ ನರೇಂದ್ರ ಮೋದಿ ಗೆದ್ದಿರೋದು 2014, 2018ರಲ್ಲಿ 2024ರಲ್ಲಿ ಅಲ್ಲ. ನಾವು 2024ರ ಚುನಾವಣೆಯ ಬಗ್ಗೆ ಚಿಂತಿಸಬೇಕು ಎಂದು ಪಕ್ಷದ ಎಲ್ಲ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

    ನಮ್ಮ ಪಕ್ಷವು ಬಿಜೆಪಿ ತೊರೆಯಲು ಒಟ್ಟಾಗಿ ನಿರ್ಧಾರ ಮಾಡಿತು. 2024ರ ಚುನಾವಣೆಗೆ ಏನು ಬೇಕಾದರೂ ಆಗಬಹುದು. 2014-2018ರಲ್ಲಿ ಅಧಿಕಾರಕ್ಕೆ ಬಂದವರು 2024 ರಲ್ಲಿ ಗೆಲ್ಲುತ್ತಾರೆಯೇ? 2024ಕ್ಕೆ ನಾವೆಲ್ಲರೂ ಒಂದಾಗಬೇಕೆಂದು ನಾನು ಬಯಸುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಒಂದು ಹುಡುಗಿ ನಿಮ್ಮೊಂದಿಗೆ ಸೆಕ್ಸ್ ಮಾಡಬೇಕು ಅಂದ್ರೆ..? – ಶಕ್ತಿಮಾನ್ ಖ್ಯಾತಿಯ ಮುಖೇಶ್ ವಿವಾದಾತ್ಮಕ ಹೇಳಿಕೆ

    ಇದೇ ವೇಳೆ 2024ಕ್ಕೆ ಪ್ರಧಾನಿ ಅಭ್ಯರ್ಥಿ ಆಗಲಿದ್ದಾರೆ ಎನ್ನುವ ಹೇಳಿಕೆಯನ್ನು ತಳ್ಳಿಹಾಕಿದ್ದು, ನಾನು ಪ್ರಧಾನಿಗೆ ಹುದ್ದೆಗೆ ಸ್ಪರ್ಧಿಸುವುದಿಲ್ಲವೆಂದು ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • BJP ಸಂಸದರ ಪತ್ನಿಯರು ಅಡುಗೆ ಮನೆ ಹೇಗೆ ನಿಭಾಯಿಸ್ತಾರೆ: AIUDF ಮುಖ್ಯಸ್ಥ ಪ್ರಶ್ನೆ

    BJP ಸಂಸದರ ಪತ್ನಿಯರು ಅಡುಗೆ ಮನೆ ಹೇಗೆ ನಿಭಾಯಿಸ್ತಾರೆ: AIUDF ಮುಖ್ಯಸ್ಥ ಪ್ರಶ್ನೆ

    ನವದೆಹಲಿ: ಆಹಾರ ಪದಾರ್ಥ, ಇಂಧನ ಹಾಗೂ ಅಗತ್ಯ ವಸ್ತುಗಳ ಮೇಲಿನ ಬೆಲೆ ಏರಿಕೆಯಿಂದಾಗಿ ಪ್ರತಿ ಪಕ್ಷಗಳು ಬಿಜೆಪಿ ವಿರುದ್ಧ ಕಿಡಿಕಾರಿವೆ. ಈ ನಡುವೆ ಆಲ್ ಇಂಡಿಯಾ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (AIUDF) ಮುಖ್ಯಸ್ಥ ಬದ್ರುದ್ದೀನ್ ಅಜ್ಮಲ್ ಸಹ ವಾಗ್ದಾಳಿ ನಡೆಸಿದ್ದಾರೆ.

    ಈ ಕುರಿತು ಇಂದು ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಕಿಡಿ ಕಾರಿದ್ದಾರೆ. ಭಾರತದ ಹಣ, ಹಣಕಾಸು ಸಚಿವರ ಬಳಿಯಿದೆ. ಒಬ್ಬ ವ್ಯಕ್ತಿಯು ಖರಿದಿಸಲು ಎಷ್ಟು ಖರ್ಚು ಮಾಡಬೇಕು ಎಂದು ಅವರು ಹೇಗೆ ತಿಳಿಯುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಚೀನಾದೊಂದಿಗಿನ ಉದ್ವಿಗ್ನದ ಮಧ್ಯೆ ತೈವಾನ್ ರಕ್ಷಣಾ ಅಧಿಕಾರಿ ಶವವಾಗಿ ಪತ್ತೆ

    ಬೆಲೆ ಏರಿಕೆ ಜನಸಂಖ್ಯೆಯ ಮೇಲೆ ಪರಿಣಾಮ ಬೀರುತ್ತಿದೆ. ಯಾವ ಸಚಿವರಿಗೂ ಹಣದುಬ್ಬರವಿಲ್ಲ. ಬಿಜೆಪಿ ಸಂಸದರು ತಮ್ಮ ಪತ್ನಿಯರಿಗೆ ಅಡುಗೆ ಮನೆ ಹೇಗೆ ನಡೆಸುತ್ತಿದ್ದಾರೆ ಎಂದು ಕೇಳಬೇಕು. 2024 ರಲ್ಲಿ ಹಣದುಬ್ಬರವು ಅವರ ಸರ್ಕಾರವನ್ನೇ ತಿನ್ನುತ್ತದೆ. ಈಗಾಗಲೇ ಇದರ ಬೆಳವಣಿಗೆಯನ್ನು ಗಮನಿಸುತ್ತಿರಬೇಕು ಎಂದು ಎಐಯುಡಿಎಫ್ ಮುಖ್ಯಸ್ಥರು ಹೇಳಿದ್ದಾರೆ. ಇದನ್ನೂ ಓದಿ: ಬಿಗ್ ಬಾಸ್ ಮನೆಗೆ ವಾಸುಕಿ ವೈಭವ್ ಎಂಟ್ರಿ: ದೊಡ್ಮನೆಯಲ್ಲಿ ‘ಏನ್ ಕಿತ್ತು ದಬ್ಬಾಕ್ತಿಯೋ’ ಎಂದ ಗಾಯಕ

    ರಾಷ್ಟ್ರೀಯ ಕಾಂಗ್ರೆಸ್ ಬೆಲೆ ಏರಿಕೆ, ಜಿಎಸ್‌ಟಿ ನೀತಿಗಳ ವಿರುದ್ಧ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ರಾಮ ಭಕ್ತರನ್ನು ಅಪಮಾನಿಸಲೆಂದೇ ಕಾಂಗ್ರೆಸ್ ಪ್ರತಿಭಟಿಸಿದೆ – ರಾಮಮಂದಿರಕ್ಕೆ ನಂಟು ಕಲ್ಪಿಸಿದ ಅಮಿತ್ ಶಾ, ಯೋಗಿ

    ರಾಮ ಭಕ್ತರನ್ನು ಅಪಮಾನಿಸಲೆಂದೇ ಕಾಂಗ್ರೆಸ್ ಪ್ರತಿಭಟಿಸಿದೆ – ರಾಮಮಂದಿರಕ್ಕೆ ನಂಟು ಕಲ್ಪಿಸಿದ ಅಮಿತ್ ಶಾ, ಯೋಗಿ

    ನವದೆಹಲಿ: ಕಾಂಗ್ರೆಸ್ ಪಕ್ಷದ ನಾಯಕರು ಶುಕ್ರವಾರ ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ ನಡೆಸಿದ್ದ ಬಿಜೆಪಿ ನಾಯಕರು ಗರಂ ಆಗಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿ ಕಳೆದ ವರ್ಷ ಇದೇ ದಿನ ಅಯೋಧ್ಯೆಯಲ್ಲಿ ರಾಮಮಂದಿರಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದರು. ಹೀಗಾಗಿ ರಾಮಭಕ್ತರನ್ನು ಅಪಮಾನಿಸುವ ಸಲುವಾಗಿಯೇ ಕಾಂಗ್ರೆಸ್ ಬ್ಲಾಕ್ ಫ್ರೈಡೆ ಆಚರಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪಿಸಿದ್ದಾರೆ. ಕಾಂಗ್ರೆಸ್ ನಾಯಕರೇ ನೀವು ಹೀಗೆ ಮಾಡಿದ್ದು ಎಷ್ಟು ಸರಿ? ಇನ್ನೂ ಎಷ್ಟು ದಿನ ಈ ತುಷ್ಟೀಕರಣ ಎಂದು ಪ್ರಶ್ನಿಸಿದ್ದಾರೆ.

    ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರಂತೂ ರಾಹುಲ್ ಗಾಂಧಿಯನ್ನು ಟಾರ್ಗೆಟ್ ಮಾಡಿದ್ದಾರೆ. ಪವಿತ್ರವಾದ ದಿನದಂದೂ ಕಪ್ಪು ಬಟ್ಟೆ ಧರಿಸ್ತೀರಾ? ಕಾಂಗ್ರೆಸ್ ನಾಯಕರ ನಡೆ ಪ್ರಜಾಪ್ರಭುತ್ವಕ್ಕೆ, ನ್ಯಾಯವ್ಯವಸ್ಥೆಗೆ ಮಾಡುತ್ತಿರುವ ಅಪಮಾನ ಎಂದು ಗರಂ ಆಗಿದ್ದಾರೆ. ಆದರೆ ಇದಕ್ಕೆ ಕಾಂಗ್ರೆಸ್ ಕೂಡ ತಿರುಗೇಟು ನೀಡಿದೆ. ಇದನ್ನೂ ಓದಿ: ಮಗು ಕೊಂದ ಕೇಸ್‍ಗೆ ಟ್ವಿಸ್ಟ್- ತಾಯಿ ಕುಕೃತ್ಯಕ್ಕೆ ಕಾರಣವಾಯ್ತಾ ಪರ್ಸನಲ್ ಮ್ಯಾಟರ್..?

    ಜೈರಾಮ್ ರಮೇಶ್ ಟ್ವೀಟ್ ಮಾಡಿ, ಬೆಲೆ ಏರಿಕೆ ಖಂಡಿಸಿ ನಾವು ಪ್ರತಿಭಟನೆ ಮಾಡ್ತಿದ್ರೆ, ಕೇಂದ್ರ ಗೃಹಮಂತ್ರಿಗಳು ಇಲ್ಲೂ ಮತೀಯ ರಾಜಕಾರಣ ಮಾಡಲು ಹೊರಟಿದ್ದಾರೆ. ಬೋಗಸ್ ಆರ್ಗ್ಯೂಮೆಂಟ್ ಮಾಡ್ತಾ ಇದ್ದಾರೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಇಂದು ಉಪರಾಷ್ಟ್ರಪತಿ ಚುನಾವಣೆಗೆ ವೋಟಿಂಗ್ – NDA ಅಭ್ಯರ್ಥಿ ಜಗದೀಪ್ ಧನ್ಕರ್ ಆಯ್ಕೆ ಖಚಿತ

    ಎಐಸಿಸಿ ವಕ್ತಾರ ಪವನ್ ಖೇರಾ, ಜಿಎಸ್‌ಟಿ, ನಿರುದ್ಯೋಗ, ಬೆಲೆ ಏರಿಕೆ, ಹಣದುಬ್ಬರದ ಬಗ್ಗೆ ಜನ ಪ್ರಶ್ನೆ ಮಾಡ್ತಾ ಇದ್ದಾರೆ. ಇವೆಲ್ಲಾ ಅವರಿಗೆ ಔಟಾಫ್ ಸಿಲಬಸ್. ಅದಕ್ಕೆ ಮಂದಿರ-ಮಸೀದಿಯ ಉತ್ತರ ನೀಡಿದ್ದಾರೆ ಎಂದು ಟಾಂಗ್ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರಧಾನಿ ನಿವಾಸಕ್ಕೆ ಘೆರಾವ್? – ಬೆಲೆ ಏರಿಕೆ ವಿರುದ್ಧ ಹೆಚ್ಚಿದ ಕಿಚ್ಚು

    ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರಧಾನಿ ನಿವಾಸಕ್ಕೆ ಘೆರಾವ್? – ಬೆಲೆ ಏರಿಕೆ ವಿರುದ್ಧ ಹೆಚ್ಚಿದ ಕಿಚ್ಚು

    ನವದೆಹಲಿ: ಅಗತ್ಯ ವಸ್ತುಗಳ ಬೆಲೆ ಏರಿಕೆ, ಜಿಎಸ್‌ಟಿ ಏರಿಕೆ ಹಾಗೂ ನಿರುದ್ಯೋಗ ಸಮಸ್ಯೆಗಳಿಂದಾಗಿ ಆಕ್ರೋಶಗೊಂಡಿರುವ ರಾಷ್ಟ್ರೀಯ ಕಾಂಗ್ರೆಸ್ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ ನಡೆಸುತ್ತಿದೆ.

    ಪ್ರತಿಭಟನೆಯ ಭಾಗವಾಗಿ `ಪ್ರಧಾನಿ ಮನೆಗೆ ಘೆರಾವ್’ ಹಾಕಲು ಮುಂದಾಗಿದೆ. ಈಗಾಗಲೇ ಸಂಸತ್ ಭವನದಿಂದ `ಚಲೋ ರಾಷ್ಟ್ರಪತಿ ಭವನ್’ ಮೆರವಣಿಗೆ ಆರಂಭಿಸಿದ್ದು, ಧಿಕ್ಕಾರ ಕೂಗುತ್ತಾ ಕಾಲ್ನಡಿಗೆಯಲ್ಲಿ ಹೊರಟಿದ್ದಾರೆ. ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಸದಸ್ಯರು ಮತ್ತು ಹಿರಿಯ ನಾಯಕರು ಪ್ರಧಾನಿ ನರೇಂದ್ರ ಮೋದಿ ನಿವಾಸಕ್ಕೆ ಮುತ್ತಿಗೆ ಹಾಕಲು ಮುಂದಾಗುತ್ತಿದ್ದಾರೆ. ಲೋಕಸಭೆ ಮತ್ತು ರಾಜ್ಯಸಭೆ ಸಂಸದರು ರಾಷ್ಟ್ರಪತಿ ಭವನದವರೆಗೆ ಮೆರವಣಿಗೆ ತೆರಳಲಿದ್ದಾರೆ ಎಂದು ಕಾಂಗ್ರೆಸ್ ನಾಯಕರು ತಿಳಿಸಿದ್ದಾರೆ. ಇದನ್ನೂ ಓದಿ: ನಾಲ್ಕೈದು ಉದ್ಯಮಿಗಳಿಗಾಗಿ ರಾಜಕಾರಣಿಗಳಿಬ್ಬರು ಕೆಲಸ ಮಾಡ್ತಿದ್ದಾರೆ: ರಾಹುಲ್ ಗಾಂಧಿ ವಾಗ್ದಾಳಿ

    ಕಾಂಗ್ರೆಸ್ ಬೃಹತ್ ಪ್ರತಿಭಟನೆಗೂ ಮುನ್ನವೇ ದೆಹಲಿಯ ಕೆಲ ಭಾಗಗಳಲ್ಲಿ ದೊಡ್ಡ-ದೊಡ್ಡ ಸಭೆ, ಸಮಾರಂಭಗಳನ್ನ ನಿಷೇಧಿಸಿ ನಿಷೇಧಾಜ್ಞೆ ಹೊರಡಿಸಲಾಗಿದೆ. ಲ್ಯೂಟೆನ್ಸ್ ದೆಹಲಿಯ ಪ್ರದೇಶಗಳಲ್ಲಿ ವಾಹನ ಸಂಚಾರಕ್ಕೆ ತೊಂದರೆ ಉಂಟಾಗಲಿದೆ ಎಂದು ದಿಲ್ಲಿ ಸಂಚಾರ ಪೊಲೀಸರು ಈಗಾಗಲೇ ಸೂಚನೆ ಹೊರಡಿಸಿದ್ದಾರೆ. ಪ್ರಮುಖ ರಸ್ತೆಗಳಲ್ಲಿ ಎಲ್ಲೆಲ್ಲಿ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆ ಇದೆಯೋ, ಆ ಭಾಗಗಳಲ್ಲಿ ಮಾರ್ಗ ಬದಲಾವಣೆ ಹಾಗೂ ಸಂಚಾರ ನಿಯಂತ್ರಣಕ್ಕೆ ಅಗತ್ಯ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ive Tv
    [brid partner=56869869 player=32851 video=960834 autoplay=true]

  • ರಾಜಕೀಯ ಪ್ರವೇಶದ ಸುಳಿವು ಕೊಟ್ಟ ಸೋನಿಯಾ ಅಳಿಯ ರಾಬರ್ಟ್ ವಾದ್ರಾ

    ರಾಜಕೀಯ ಪ್ರವೇಶದ ಸುಳಿವು ಕೊಟ್ಟ ಸೋನಿಯಾ ಅಳಿಯ ರಾಬರ್ಟ್ ವಾದ್ರಾ

    ನವದೆಹಲಿ: ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಅಧ್ಯಕ್ಷತೆ ಕುರಿತು ಸಕ್ರೀಯ ರಾಜಕಾರಣದಿಂದ ದೂರವೇ ಉಳಿದಿರುವ ಅವರ ಅಳಿಯ ಇದೀಗ ರಾಜಕೀಯ ಪ್ರವೇಶಿಸುವ ಸುಳಿವನ್ನು ಬಿಟ್ಟುಕೊಟ್ಟಿದ್ದಾರೆ.

    ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯ ವಿಚಾರಣೆಗೆ ಒಳಪಡಿಸಿರುವುದರ ವಿರುದ್ಧ ಕಿಡಿಕಾರಿರುವ ಅವರ ಅಳಿಯ ರಾಬರ್ಟ್ ವಾದ್ರಾ, ಅಗತ್ಯ ಉಂಟಾದರೆ ರಾಜಕೀಯಕ್ಕೆ ಪ್ರವೇಶಿಸುವ ಸುಳಿವು ನೀಡಿದ್ದಾರೆ. ಇದನ್ನೂ ಓದಿ: ಶಿವಾನಿ ಆತ್ಮಹತ್ಯೆ ಪ್ರಕರಣ – ಕಾಲೇಜ್‍ನಲ್ಲಿ ಕೊಟ್ಟ ಕಿರುಕುಳವೇ ಕಾರಣ: ಪೋಷಕರ ಆರೋಪ

    ತನಿಖಾ ಸಂಸ್ಥೆಗಳನ್ನು ಬಿಜೆಪಿ ದುರುಪಯೋಗ ಪಡಿಸಿಕೊಳ್ಳುತ್ತಿದೆ. ಈ ಸಂಸ್ಥೆಗಳು ವಿಚಾರಣೆಗೆ ಕರೆಸಿಕೊಂಡ ಒಬ್ಬ ಬಿಜೆಪಿ ನಾಯಕನ ಹೆಸರನ್ನು ಹೇಳಲಿ ನೋಡೋಣ. ಪ್ರತಿ ಬಾರಿಯೂ ತನ್ನ ನೀತಿಗಳ ಬಗ್ಗೆ ದೇಶಕ್ಕೆ ಅಸಮಾಧಾನ ಉಂಟಾಗುತ್ತಿದೆ ಎಂಬ ಭಾವನೆ ಬಿಜೆಪಿಯಲ್ಲಿ ಮೂಡಿದಾಗ, ಗಾಂಧಿ ಕುಟುಂಬಕ್ಕೆ ತೊಂದರೆ ಕೊಡಲು ಆರಂಭಿಸುತ್ತದೆ ಎಂದು ಟೀಕಿಸಿದ್ದಾರೆ.

    ಈ ದೇಶದಲ್ಲಿ ಬದಲಾವಣೆಯ ಅಗತ್ಯವಿದೆ. ದೇಶಕ್ಕೆ ಅಗತ್ಯವಿರುವ ಬದಲಾವಣೆಯನ್ನು ನಾನು ತರಬಲ್ಲೆ ಎಂದು ಜನರಿಗೆ ಅನಿಸಿದರೆ, ನಾನು ರಾಜಕಾರಣ ಪ್ರವೇಶಿಸುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸೋನಿಯಾ ಗಾಂಧಿ ಆಪ್ತ ಸಹಾಯಕನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು

    ಜನರು ಜಿಎಸ್‌ಟಿ ವಿಚಾರವಾಗಿ ಅಸಮಾಧಾನಗೊಂಡಿದ್ದಾರೆ ಎಂಬ ಕಾರಣಕ್ಕೆ ಇ.ಡಿ ಸೋನಿಯಾ ಗಾಂಧಿ ಅವರನ್ನು ವಿಚಾರಣೆಗೆ ಒಳಪಡಿಸುತ್ತಿದೆ. ನಾನು ಅವರಿಗೆ (ಸೋನಿಯಾ ಗಾಂಧಿ) ತನಿಖಾ ಸಂಸ್ಥೆಯನ್ನು ಹೇಗೆ ನಿಭಾಯಿಸಬೇಕು ಎಂದು ಸಲಹೆ ನೀಡಿದ್ದೆ. ಏಕೆಂದರೆ ನಾನು 15 ಬಾರಿ ಇ.ಡಿಗೆ ಹೋಗಿದ್ದೆ ಮತ್ತು 23,000 ದಾಖಲೆಗಳನ್ನು ಸಲ್ಲಿಸಿದ್ದೇನೆ ಎಂದು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಯುರೋಪ್ ಪ್ರವಾಸ ಕೈಗೊಂಡ ರಾಹುಲ್ – ಕಾಂಗ್ರೆಸ್ ಮಹತ್ವದ ಸಭೆಗೆ ಗೈರು

    ಯುರೋಪ್ ಪ್ರವಾಸ ಕೈಗೊಂಡ ರಾಹುಲ್ – ಕಾಂಗ್ರೆಸ್ ಮಹತ್ವದ ಸಭೆಗೆ ಗೈರು

    ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್‌ಗಾಂಧಿ ಅವರು ಖಾಸಗಿ ಭೇಟಿಗಾಗಿ ಯುರೋಪ್ ಪ್ರವಾಸ ಕೈಗೊಂಡಿದ್ದು, ರಾಷ್ಟ್ರಪತಿ ಚುನಾವಣೆ ಹಾಗೂ ಸಂಸತ್ ಮುಂಗಾರು ಅಧಿವೇಶನಕ್ಕೂ ಮುನ್ನ ಭಾನುವಾರ ಭಾರತಕ್ಕೆ ಮರಳುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

    ರಾಹುಲ್‌ಗಾಂಧಿ ಆಗಾಗ್ಗೆ ವಿದೇಶಿ ಪ್ರವಾಸ ಕೈಗೊಳ್ಳುವುದು ಸಹಜ. ಆದರೆ ಕಾಂಗ್ರೆಸ್ ಪಕ್ಷಕ್ಕೆ ಮಹತ್ವದ ಸಭೆ ನಡೆಯುತ್ತಿರುವ ಸಂದರ್ಭದಲ್ಲಿ ಅವರು ಗೈರಾಗುತ್ತಿರುವುದು ಚರ್ಚೆಗೆ ಗ್ರಾಸವಾಗಿದೆ. ಇದನ್ನೂ ಓದಿ: RSS ನಿಮ್ಮ ಜೊತೆ ಇದೆ: ದಲಿತ, ಹಿಂದುಳಿದ ವರ್ಗಗಳ ಮಠಾಧೀಶರೊಂದಿಗೆ ಮೋಹನ್‌ ಭಾಗವತ್‌ ಸಂವಾದ

    ಪಕ್ಷದ ಅಧ್ಯಕ್ಷರ ಆಯ್ಕೆಯ ಬಗ್ಗೆಯೇ ಕಾಂಗ್ರೆಸ್ ಗುರುವಾರ ಸಭೆ ಆಯೋಜನೆ ಮಾಡಿದೆ. ಸೋನಿಯಾ ಗಾಂಧಿ ಅವರು ಅನಾರೋಗ್ಯಕ್ಕೆ ಒಳಗಾಗಿದ್ದು, ಈಗ ಚೇತರಿಸಿಕೊಂಡಿದ್ದಾರೆ. ಈ ಬೆನ್ನಲ್ಲೇ ಜುಲೈ 21ಕ್ಕೆ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಹೇಳಿದೆ. ಈ ಸಂದರ್ಭದಲ್ಲಿ ಪಕ್ಷದ ನಾಯಕತ್ವದ ಬದಲಾವಣೆಗೆ ಒತ್ತಡ ಹೆಚ್ಚಾಗುತ್ತಿದೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಸಭೆ ಮುಖ್ಯವಾಗಿದೆ. ಆದರೂ ರಾಹುಲ್ ಈ ಸಭೆಗೆ ಗೈರಾಗುತ್ತಿದ್ದಾರೆ. ಅಧ್ಯಕ್ಷೀಯ ಹುದ್ದೆಯನ್ನು 2019ರ ಲೋಕಸಭಾ ಚುನಾವಣೆ ಸೋಲಿನ ಬಳಿಕ ತ್ಯಜಿಸಿದ್ದ ರಾಹುಲ್ ಗಾಂಧಿ, ಮತ್ತೆ ಈ ಹುದ್ದೆಯನ್ನು ಒಪ್ಪಿಕೊಳ್ಳುತ್ತಾರೆಯೇ ಎನ್ನುವುದು ಸ್ಪಷ್ಟವಾಗಿಲ್ಲ.

    11 ಕಾಂಗ್ರೆಸ್ ಸದಸ್ಯರ ಬಲ ಹೊಂದಿರುವ ಗೋವಾದಲ್ಲಿ ಹಿರಿಯ ನಾಯಕರು ಬಂಡಾಯ ಏಳಲು ಮುಂದಾಗಿದ್ದಾರೆ. ಇದರ ಲಾಭ ಪಡೆಯಲು ಮುಂದಾಗಿರುವ ಬಿಜೆಪಿ ಕಾಂಗ್ರೆಸ್ ಶಾಸಕರನ್ನು ತನ್ನತ್ತ ಸೆಳೆಯಲು ಮುಂದಾಗಿದೆ. ಆದರೂ ಈವರೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯಾಗಲಿ, ರಾಷ್ಟ್ರೀಯ ಕಾಂಗ್ರೆಸ್ ಸಮಿತಿಯಾಗಲಿ ಈ ಬಗ್ಗೆ ಪ್ರತಿಕ್ರಿಯೆ ನೀಡದಿರುವುದು ಚರ್ಚೆಗೆ ಗ್ರಾಸವಾಗಿದೆ. ಇದನ್ನೂ ಓದಿ: ಆರ್ಥಿಕವಾಗಿ ಸ್ಥಿತಿವಂತರಾಗಿದ್ರೆ ಅನುಕಂಪದ ನೌಕರಿಯಿಲ್ಲ – ಹೊಸ ಮಾರ್ಗಸೂಚಿಯಲ್ಲಿ ಏನಿದೆ?

    ಗುರುವಾರ ನಡೆಯಲಿರುವ ಕಾಂಗ್ರೆಸ್ ಸಭೆಯಲ್ಲಿ, ಅಕ್ಟೋಬರ್ 2ರಂದು ಆರಂಭಿಸಲಿರುವ `ಭಾರತ್ ಜೋಡೋ ಯಾತ್ರಾ’ ಅಥವಾ ಭಾರತವನ್ನು ಒಗ್ಗೂಡಿಸುವ ಯಾತ್ರೆಯ ಯೋಜನೆ ರೂಪಿಸುವ ಕುರಿತು ಸಹ ಚರ್ಚಿಸಲಾಗುತ್ತದೆ. ರಾಹುಲ್ ಗಾಂಧಿ ಅವರ ಗೈರು, ನಾಯಕತ್ವದ ಪ್ರಶ್ನೆ ಕುರಿತಾದ ಊಹಾಪೋಹಗಳನ್ನು ಮತ್ತಷ್ಟು ಹೆಚ್ಚಿಸಿದೆ.

    Live Tv
    [brid partner=56869869 player=32851 video=960834 autoplay=true]

  • ಜುಲೈ 21ಕ್ಕೆ ಹಾಜರಾಗಿ – ಸೋನಿಯಾ ಗಾಂಧಿಗೆ ಮತ್ತೆ ED ಸಮನ್ಸ್

    ಜುಲೈ 21ಕ್ಕೆ ಹಾಜರಾಗಿ – ಸೋನಿಯಾ ಗಾಂಧಿಗೆ ಮತ್ತೆ ED ಸಮನ್ಸ್

    ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರಿಗೆ ಮತ್ತೆ ಜಾರಿ ನಿರ್ದೇಶನಾಲಯದ ಟೆನ್ಷನ್ ಶುರುವಾಗಿದೆ. ಜಾರಿ ನಿರ್ದೇಶನಾಲಯವು (ED) ಜುಲೈ 21ರಂದು ತನಿಖೆಗೆ ಹಾಜರಾಗುವಂತೆ ಸೋನಿಯಾ ಗಾಂಧಿ ಅವರಿಗೆ ನೋಟಿಸ್ ಜಾರಿ ಮಾಡಿದೆ.

    ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ನಡೆದಿರುವ ಬಗ್ಗೆ ಇಡಿ ತನಿಖೆ ನಡೆಸುತ್ತಿದೆ. ಈಗಾಗಲೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನ ವಿಚಾರಣೆಗೆ ಒಳಪಡಿಸಿದೆ.

    ಕಳೆದ ತಿಂಗಳಿನಲ್ಲಿ ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರನ್ನು ಇ.ಡಿ ವಿಚಾರಣೆಗೆ ಕರೆದಿತ್ತು. ಇದೇ ವೇಳೆ ಸೋನಿಯಾರಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿತ್ತು. 75 ವರ್ಷ ವಯಸ್ಸಿನ ಸೋನಿಯಾರಿಗೆ ಕೋವಿಡ್‌ನಿಂದಾಗಿ ವೈದ್ಯರು ಮನೆಯಲ್ಲಿ ಕಡ್ಡಾಯ ವಿಶ್ರಾಂತಿ ಪಡೆಯುವಂತೆ ಸೂಚಿಸಿದ್ದರು. ಶ್ವಾಸಕೋಶ ಸೋಂಕಿಗೆ ತುತ್ತಾಗಿದ್ದ ಸೋನಿಯಾ ಗಾಂಧಿ ಅವರು ಹಲವು ದಿನಗಳ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿದ್ದಾರೆ. ಇದನ್ನೂ ಓದಿ: ಹೊಸ ಸಂಸತ್ ಭವನದಲ್ಲಿ 9,500 ಕೆಜಿ ಕಂಚಿನ ರಾಷ್ಟ್ರೀಯ ಲಾಂಛನ ಅನಾವರಣ – ಏನಿದರ ವಿಶೇಷ?

    ಇದೇ ಕಾರಣದಿಂದಾಗಿ ಜೂನ್ 23 ರಂದು ಸೋನಿಯಾ ಗಾಂಧಿ ಅವರು ಇಡಿ ಎದುರು ವಿಚಾರಣೆಗೆ ಹಾಜರಾಗಲು ಸಾಧ್ಯ ಆಗಿರಲಿಲ್ಲ. ಈಗ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಮೂಲಗಳು ತಿಳಿಸಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ. ಇದನ್ನೂ ಓದಿ: ಸೀರೆಯಲ್ಲಿ ಮಿಂಚಿದ ಉರ್ಫಿ ಜಾವೇದ್: ಹೀಗೂ ಸೀರೆ ಉಡಬಹುದಾ ಎಂದ ಫ್ಯಾನ್ಸ್

    ಏನಿದು ಪ್ರಕರಣ? 
    ಜವಹರಲಾಲ್ ನೆಹರೂ ಅವರು ಆರಂಭಿಸಿದ್ದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು ಅಸೋಸಿಯೇಟ್ ಜರ್ನಲ್ಸ್ ಲಿಮಿಟೆಡ್ ಎಂಬ ಸಂಸ್ಥೆ ಪ್ರಕಟಿಸುತ್ತಿತ್ತು. ಈ ಸಾರ್ವಜನಿಕ ಸಂಸ್ಥೆಯನ್ನು ರಾಹುಲ್ ಗಾಂಧಿ ನಿರ್ದೇಶಕರಾಗಿರುವ ಯಂಗ್ ಇಂಡಿಯಾ ಲಿಮಿಟೆಡ್ ಖಾಸಗಿ ಸಂಸ್ಥೆಯು ಖರೀದಿ ಮಾಡಿತ್ತು. ಈ ವೇಳೆ ಅಕ್ರಮವಾಗಿ ಹಣ ವರ್ಗಾವಣೆ ಆಗಿದೆ ಎಂಬ ಆರೋಪ ಕೇಳಿ ಬಂದಿದೆ.

    Live Tv
    [brid partner=56869869 player=32851 video=960834 autoplay=true]

  • ಶ್ರೀರಾಮ, ಹಿಂದೂಗಳ ಮೇಲೆ ಕಾಂಗ್ರೆಸ್‌ಗೆ ಏಕಿಷ್ಟು ಕೋಪ – ಹಾರ್ದಿಕ್ ಪಟೇಲ್

    ಶ್ರೀರಾಮ, ಹಿಂದೂಗಳ ಮೇಲೆ ಕಾಂಗ್ರೆಸ್‌ಗೆ ಏಕಿಷ್ಟು ಕೋಪ – ಹಾರ್ದಿಕ್ ಪಟೇಲ್

    ಗಾಂಧಿನಗರ: ಈಚೆಗಷ್ಟೇ ಕಾಂಗ್ರೆಸ್‌ ಪಕ್ಷ ತೊರೆದ ಪಾಟಿದಾರ್ ಸಮುದಾಯದ ಯುವ ನಾಯಕ ಹಾರ್ದಿಕ್ ಪಟೇಲ್, ಸತತವಾಗಿ ಕಾಂಗ್ರೆಸ್ ವಿರುದ್ಧ ದಾಳಿ ನಡೆಸುತ್ತಿದ್ದಾರೆ.

    ಈ ಕುರಿತು ಟ್ವೀಟ್ ಮಾಡಿರುವ ಅವರು, ಅಯೋಧ್ಯೆಯಲ್ಲಿ ಶತಮಾನಗಳ ನಂತರ ಭಗವಾನ್ ಶ್ರೀರಾಮ ಮಂದಿರ ನಿರ್ಮಾಣವಾಗುತ್ತಿರುವುದಕ್ಕೆ ನಾವು ಹೆಮ್ಮೆ ಪಡಬೇಕು. ಆದರೂ ಕಾಂಗ್ರೆಸ್ ನಾಯಕರು ಭಗವಾನ್ ಶ್ರೀರಾಮನ ವಿರುದ್ಧ ಕೀಳು ಭಾವನೆಯ ಹೇಳಿಕೆಗಳನ್ನು ನೀಡುತ್ತಲೇ ಇದ್ದಾರೆ. ಶ್ರೀರಾಮ ಮತ್ತು ಹಿಂದೂಗಳ ಮೇಲೆ ಕಾಂಗ್ರೆಸ್‌ಗೆ ಏಕಿಷ್ಟು ಕೋಪ ಎಂದೂ ಪ್ರಶ್ನಿಸಿದ್ದಾರೆ.

    ಕಾಂಗ್ರೆಸ್ ಜನರ ಭಾವನೆಗಳಿಗೆ ಧಕ್ಕೆ ತರುತ್ತಿದೆ. ಯಾವಾಗಲೂ ಹಿಂದೂಗಳ ನಂಬಿಕೆಗೆ ಧಕ್ಕೆ ತರಲು ಪ್ರಯತ್ನಿಸುತ್ತಿದೆ. ಹಿಂದೆಯೂ ನಾನು ಇದನ್ನೇ ಹೇಳಿದ್ದೆ. ಹಾಗಾಗಿ ರಾಮಮಂದಿರವನ್ನು ಶೀಘ್ರವಾಗಿ ನಿರ್ಮಿಸಬೇಕೆಂದು ಬಯಸುತ್ತೇನೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ಮೇ 26 ರಿಂದ ಮಸೀದಿ ಪರ ಅರ್ಜಿ ವಿಚಾರಣೆ, ಯಥಾಸ್ಥಿತಿ ಕಾಯ್ದುಕೊಳ್ಳಿ: ಕೋರ್ಟ್ ಆದೇಶ

    ಸಾಮಾಜಿಕ ಜಾಲತಾಣದಲ್ಲಿ ಟಾರ್ಗೆಟ್: ಸದ್ಯ ಹಾರ್ದಿಕ್ ಪಟೇಲ್ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರೊಂದಿಗೆ ಇರುವ ಚಿತ್ರವನ್ನು ಹಂಚಿಕೊಂಡಿದ್ದು, ಹೇಳಲು ಇನ್ನೇನೂ ಉಳಿದಿಲ್ಲ ಎಂದು ಟ್ವೀಟ್ ಮಾಡಿರುವುದು ಕೆಂಗಣ್ಣಿಗೆ ಗುರಿಯಾಗಿದೆ. ಇದಕ್ಕೆ ವಿರೋಧ ವ್ಯಕ್ತಪಡಿಸಿರುವ ಕೆಲವರು `ಹಾರ್ದಿಕ್ ಭಾಯ್, ನೀವು ತುಂಬಾ ವೇಗವಾಗಿ ಬದಲಾಗುತ್ತೀರಿ ಅಂದುಕೊಂಡಿರಲಿಲ್ಲ. ನೀವು ಕಪಿಲ್ ಮಿಶ್ರಾ ಆಗಲು ಬಯಸುತ್ತೀರೆಂದು ನಾನು ಒಪ್ಪುತ್ತೇನೆ’ ಎಂದು ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: ಕುತುಬ್ ಮಿನಾರ್ ಬಳಿ ಪೂಜೆ ಮಾಡುವ ಹಕ್ಕು ಯಾರಿಗೂ ಇಲ್ಲ – ASI ಖಡಕ್ ಉತ್ತರ

    ಹಾರ್ದಿಕ್ ಪಟೇಲ್ ಅವರು ಇದೇ ಮೇ 18 ರಂದು ಕಾಂಗ್ರೆಸ್ ಪಕ್ಷದ ಸ್ಥಾನ ಮತ್ತು ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಕಾಂಗ್ರೆಸ್ ಪಕ್ಷವು ಕೇವಲ ಪ್ರತಿಭಟನೆಯ ರಾಜಕೀಯಕ್ಕೆ ಸೀಮಿತವಾಗಿದೆ ಎಂದು ಅವರು ತಮ್ಮ ರಾಜೀನಾಮೆ ಪತ್ರದಲ್ಲಿ ಬರೆದು, ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾದ ಸೋನಿಯಾಗಾಂಧಿ ಅವರಿಗೆ ಹಂಚಿಕೊಂಡಿದ್ದರು.