Tag: National Crime Records Bureau

  • ಮಹಿಳೆಯರ ಸುರಕ್ಷತೆಗೆ ಏನು ಮಾಡದ ಯೋಗಿ ತೀರ್ಥಯಾತ್ರೆಗೆ ಹೊರಡಲಿ: ಜಯಾ ಬಚ್ಚನ್

    ಮಹಿಳೆಯರ ಸುರಕ್ಷತೆಗೆ ಏನು ಮಾಡದ ಯೋಗಿ ತೀರ್ಥಯಾತ್ರೆಗೆ ಹೊರಡಲಿ: ಜಯಾ ಬಚ್ಚನ್

    ಲಕ್ನೋ: ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಎಲ್ಲಾ ಬಿಟ್ಟು ತೀರ್ಥಯಾತ್ರೆಗೆ ಹೊರಡಲಿ. ಮಹಿಳೆಯರ ಸುರಕ್ಷತೆ, ಅಭಿವೃದ್ಧಿ ಬಗ್ಗೆ ಏನೂ ಮಾಡಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದೆ ಜಯಾ ಬಚ್ಚನ್ ವಾಗ್ಧಾಳಿ ಮಾಡಿದ್ದಾರೆ.

    ಉತ್ತರ ಪ್ರದೇಶ ಚುನಾವಣೆ ಪ್ರಯುಕ್ತ ಸಮಾವೇಶದಲ್ಲಿ ಭಾಗಿಯಾಗಿ ಮಾತನಾಡಿ, ಉತ್ತರ ಪ್ರದೇಶದ ಹೆಣ್ಣು ಮಕ್ಕಳ ನೋವನ್ನು ಅರ್ಥ ಮಾಡಿಕೊಳ್ಳುವಲ್ಲಿ ಮುಖ್ಯಮಂತ್ರಿ ವಿಫಲರಾಗಿದ್ದಾರೆ.ಅವರು ತೀರ್ಥಯಾತ್ರೆಗೆ ಹೋಗುವುದು ಉತ್ತಮ ಎಂದು ವ್ಯಂಗ್ಯವಾಡಿದ್ದಾರೆ.

    ಹೆಣ್ಣು ಮಕ್ಕಳ ಸುರಕ್ಷತೆ ಹಾಗೂ ಅವರ ಅಭಿವೃದ್ಧಿ ಬಗ್ಗೆ ಕೇವಲ ಮಾತಿನಲ್ಲಿ ಮನೆ ಕಟ್ಟುವ ಬಿಜೆಪಿ ನಾಯಕರು, ಆ ಪಕ್ಷದ ಒಬ್ಬರೇ ಒಬ್ಬ ಸಂಸದರು ಸಂಸತ್ತಿನಲ್ಲಿ ಚರ್ಚೆ ಮಾಡಿಲ್ಲ. ಯೋಗಿ ಆದಿತ್ಯನಾಥ ಅವರ ಸರ್ಕಾರ ಅವಧಿಯಲ್ಲಿಯೇ ಅತಿ ಹೆಚ್ಚು ಪ್ರಕರಣಗಳು ಉತ್ತರ ಪ್ರದೇಶದಲ್ಲಿ ನಡೆದಿದೆ ಎಂದು ಎನ್‍ಸಿಆರ್‌ಬಿ(National Crime Records Bureau) ಹೇಳಿದೆ. ಇದು ನಾಚೆಕೆಗೇಡಿನ ವಿಚಾರವಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಬೈಡನ್ ದೌರ್ಬಲ್ಯದಿಂದಲೇ ಈ ಅನಾಹುತವಾಗಿದೆ: ಟ್ರಂಪ್

    ಬ್ರಿಟಿಷರು ಭಾರತಕ್ಕೆ ಬಂದು ಇಲ್ಲಿನ ಸಂಪತ್ತು ದೋಚಿ ಹೋಗಿದ್ದಾರೆ. ಆದರೆ ಇದೀಗ ಅಧಿಕಾರ ನಡೆಸುವವರು ಬ್ರಿಟಿಷರ ಮತ್ತೊಂದು ರೂಪವಾಗಿದ್ದಾರೆ ಎಂದು ಉತ್ತರ ಪ್ರದೇಶ ಆಡಳಿತ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಉಕ್ರೇನ್‍ನಲ್ಲಿರುವ ಕಟ್ಟ ಕಡೆಯ ವಿದ್ಯಾರ್ಥಿಯನ್ನು ಸುರಕ್ಷಿತವಾಗಿ ಕರೆತರುವ ತನಕ ಆಪರೇಷನ್ ನಿಲ್ಲದು: ಆರ್.ಅಶೋಕ್

  • ಅಪರಾಧ ನಗರಗಳ ಪಟ್ಟಿಯಲ್ಲಿ ಬೆಂಗ್ಳೂರಿಗೆ 2ನೇ ಸ್ಥಾನ ಸಿಕ್ಕಿದ್ದು ಯಾಕೆ: ರಾಮಲಿಂಗಾ ರೆಡ್ಡಿ ನಿಜವಾದ ಕಾರಣ ವಿವರಿಸಿದ್ರು

    ಅಪರಾಧ ನಗರಗಳ ಪಟ್ಟಿಯಲ್ಲಿ ಬೆಂಗ್ಳೂರಿಗೆ 2ನೇ ಸ್ಥಾನ ಸಿಕ್ಕಿದ್ದು ಯಾಕೆ: ರಾಮಲಿಂಗಾ ರೆಡ್ಡಿ ನಿಜವಾದ ಕಾರಣ ವಿವರಿಸಿದ್ರು

    ಬೆಂಗಳೂರು: ಟ್ರಾಫಿಕ್ ಪೊಲೀಸರು ಜಾಸ್ತಿ ಕಾರ್ಯಚರಣೆ ಮಾಡಿದ್ದ ಹಿನ್ನೆಲೆಯಲ್ಲಿ ದೇಶದಲ್ಲಿ ಅಪರಾಧ ಪ್ರಕರಣಗಳು ದಾಖಲಾದ ನಗರಗಳ ಪಟ್ಟಿಯಲ್ಲಿ ಬೆಂಗಳೂರು ಎರಡನೇ ಸ್ಥಾನ ಪಡೆದಿದೆ ಎಂದು ಗೃಹಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.

    ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೊ ಬಿಡುಗಡೆಗೊಳಿಸಿದ ಅಂಕಿ ಅಂಶಗಳ ಪ್ರಕಾರ ದೇಶದಲ್ಲಿ ಬೆಂಗಳೂರು ಅತ್ಯಾಧಿಕ ಅಪರಾಧ ಪ್ರಕರಣ ದಾಖಲಾದ ನಗರ ಎಂಬ ವರದಿಯಾಗಿತ್ತು. ಆದರೆ ನಗರದಲ್ಲಿ ನಡೆಯುತ್ತಿರುವ ಅಪರಾಧ ಪ್ರಕರಣಗಳ ಅಂಕಿ ಅಂಶಗಳನ್ನು ಗಮನಿಸಿದ ಸಂದರ್ಭದಲ್ಲಿ ಕಳೆದ ಒಂದು ವರ್ಷದಲ್ಲಿ ಸುಮಾರು ಒಂದು ಸಾವಿರ ಪ್ರಕರಣಗಳು ಕಡಿಮೆಯಾಗಿವೆ ಎಂದು ಸ್ಪಷ್ಟಪಡಿಸಿದರು.

    ಶುಕ್ರವಾರ ರಾಮಲಿಂಗಾರೆಡ್ಡಿರವರು ಬೆಂಗಳೂರು ನಗರ ಸಿ.ಎ.ಆರ್ ಕೇಂದ್ರ ಘಟಕದಲ್ಲಿ ನಿರ್ಮಿಸುತ್ತಿರುವ 192 ಪೊಲೀಸ್ ವಸತಿಗೃಹಗಳ ಸಮುಚ್ಛಯದ ನಿರ್ಮಾಣಕ್ಕಾಗಿ ಇಂದು ಶಂಕುಸ್ಥಾಪನೆ ನಡೆಸಿದರು. ಈ ವೇಳೆ ಮಾಧ್ಯಮಗಳ ಪ್ರಶ್ನೆ ಕೇಳಿದಾಗ, ನೀವು ಈ ಪ್ರಶ್ನೆಯನ್ನು ಕೇಳುತ್ತೀರಿ ಎನ್ನುವ ಕಾರಣಕ್ಕಾಗಿ ನಾನು ತಯಾರಿ ಮಾಡಿಕೊಂಡೆ ಬಂದಿದ್ದೇನೆ ಎಂದು ಹೇಳಿ ತಮ್ಮ ಕೈಯಲ್ಲಿದ್ದ ಡೇಟಾವನ್ನು ನೀಡಲು ಆರಂಭಿಸಿದರು. (ಇದನ್ನೂ ಓದಿ:  ಜನ್ರಿಗೆ ಫೈನ್ ಹಾಕಿ ಸರ್ಕಾರಕ್ಕೆ ಕೋಟಿ ಕೋಟಿ ದುಡಿದು ಕೊಟ್ಟ ಬೆಂಗ್ಳೂರು ಟ್ರಾಫಿಕ್ ಪೊಲೀಸರು!)

    ಅಪರಾಧ ಪ್ರಕರಣಗಳಲ್ಲಿ ಕೊಲೆ, ಸುಲಿಗೆ, ದರೋಡೆ, ಸರಗಳ್ಳತನ, ಮನೆ ಕಳ್ಳತನ ಸೇರಿದಂತೆ 9 ವಿಭಾಗಗಳಾಗಿ ವಿಂಗಡಿಸಲಾಗಿದೆ. ಇದರಲ್ಲಿ 2015 ರಲ್ಲಿ ಸುಮಾರು 17,435 ಪ್ರಕರಣಗಳು ದಾಖಲಾಗಿದೆ. 2016 ರಲ್ಲಿ 16,797 ಪ್ರಕರಣಗಳು ದಾಖಲಾಗಿದೆ. ಆಂದರೆ ವಾರ್ಷಿಕವಾಗಿ ಸುಮಾರು ಒಂದು ಸಾವಿರ ಪ್ರಕರಣಗಳು ಕಡಿಮೆಯಾಗಿದೆ. ಆದರೆ ರಾಷ್ಟ್ರೀಯ ಅಪರಾಧ ದಾಖಲೆಗಳಲ್ಲಿ ನಗರ ಎರಡನೇ ಸ್ಥಾನ ಪಡೆದುಕೊಳ್ಳಲು ಪ್ರಮುಖ ಕಾರಣ ಟ್ರಾಫಿಕ್ ಸಂಬಂಧಿಸಿದಂತೆ ಐಪಿಸಿ 283ರ ಅಡಿ ದಾಖಲಾದ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ. 2015 ರಲ್ಲಿ ಈ ಕುರಿತು ಕೇವಲ 3,502 ಪ್ರಕರಣಗಳು ಮಾತ್ರ ದಾಖಲಾಗಿದ್ದವು. 2016 ರಲ್ಲಿ 13,759 ಪ್ರಕರಣಗಳು ದಾಖಲಾಗಿದೆ. ಸುಮಾರು 10 ಸಾವಿರ ಪ್ರಕರಣಗಳ ಸಂಖ್ಯೆ ಟ್ರಾಫಿಕ್‍ನಲ್ಲಿ ಹೆಚ್ಚಳವಾಗಿದೆ. ನಗರ ಪೊಲೀಸರು ಹೆಚ್ಚು ದಕ್ಷತೆಯಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಇನ್ನು ನಗರದಲ್ಲಿ ಐಟಿ ಉದ್ಯಮಗಳು ಹೆಚ್ಚಾಗಿರುವುದರಿಂದ ಸೈಬರ್ ಪ್ರಕರಣಗಳು ಹೆಚ್ಚಾಗಿದೆ ಎಂದು ವಿವರಿಸಿದರು. ನಮ್ಮ ಪೊಲೀಸರು ಚೆನ್ನಾಗಿ ಕಾರ್ಯನಿರ್ವಹಿಸುತ್ತಾರೆ ಹೀಗಾಗಿ ನಾವು ನಮ್ಮ ಬೆನ್ನನ್ನು ತಟ್ಟಿಕೊಳ್ಳಬೇಕು ಎಂದು ತಿಳಿಸಿದರು.

    ರಾಷ್ಟ್ರೀಯ ಅಪರಾಧ ದಾಖಲೆ ವಿಭಾಗದ 2016ನೇ ವರದಿ ಪ್ರಕಾರ ದೇಶದ 19 ಮೆಟ್ರೊಪೊಲಿಟನ್ ನಗರಗಳಲ್ಲಿ ಅಪರಾಧ, ಹಿಂಸೆ, ಕೊಲೆ, ಲೈಂಗಿಕ ಕಿರುಕುಳ, ಅತ್ಯಾಚಾರ ಇತ್ಯಾದಿ ಘಟನೆಗಳ ಬಗ್ಗೆ ದಾಖಲಾದ ಪ್ರಕರಣದ ಆಧಾರದಲ್ಲಿ ಬೆಂಗಳೂರು ಎರಡನೇ ಸ್ಥಾನದಲ್ಲಿದೆ. ಅಲ್ಲದೇ ಮಹಿಳೆಯರು ಹಾಗೂ ಮಕ್ಕಳ ಮೇಲೆ ನಡೆಯುವ ಅಪರಾಧ ಪ್ರಕರಣಗಳಲ್ಲಿ ಮೂರನೇ ಸ್ಥಾನದಲ್ಲಿದೆ. ನಂತರದ ಸ್ಥಾನವನ್ನು ಮುಂಬೈ ನಗರ ಪಡೆದುಕೊಂಡಿದೆ.

    ಏನಿದುಐಪಿಸಿ ಸೆಕ್ಷನ್ 283?
    ಐಪಿಸಿ 283 ಪ್ರಕಾರ, ಸಾರ್ವಜನಿಕ ರಸ್ತೆ ಅತಿಕ್ರಮಣ ತಪ್ಪು. ಫುಟ್‍ಪಾತ್‍ನಲ್ಲಿ ಪಾರ್ಕಿಂಗ್ ಮಾಡೋದು ಅಪರಾಧ ಎಂದು ಪರಿಗಣಿಸಲಾಗುತ್ತದೆ. ಮನೆ ಮುಂದಿನ ರಸ್ತೆಯಲ್ಲಿ ವಾಹನ ನಿಲ್ಲಿಸುವುದು ಅಪರಾಧ. ಮನೆ ಎದುರಿನ ಫುಟ್‍ಪಾತ್ ಮೇಲೆ ಪಾರ್ಕಿಂಗ್ ಮಾಡೋದೂ ಅಪರಾಧ. ಪೊಲೀಸ್ ನವರು ಕಂಪ್ಲೇಂಟ್ ಹಾಕಿ ಎಫ್‍ಐಆರ್ ಹಾಕುತ್ತಾರೆ. ವಾಹನ ಸೀಝ್ ಮಾಡಿ ಎತ್ತಕೊಂಡು ಹೋಗ್ತಾರೆ. 90 ದಿನಗಳ ಒಳಗೆ ಚಾರ್ಜ್ ಶೀಟ್ ಹಾಕುತ್ತಾರೆ. ಅಪರಾಧ ಸಾಬೀತಾದ್ರೆ 200 ರೂ. ದಂಡ ಕಟ್ಟಬೇಕಾಗುತ್ತದೆ ಮತ್ತು ಆ ದಂಡವನ್ನ ಕೋರ್ಟಿನಲ್ಲೇ ಕಟ್ಟಬೇಕಾಗುತ್ತದೆ.

    https://www.youtube.com/watch?v=oh8lPilttTE