Tag: National Education Policy

  • ಇದು ಒಂದಲ್ಲ ಎರಡಲ್ಲ 6 ಲಕ್ಷ ವಿದ್ಯಾರ್ಥಿಗಳ ಸಮಸ್ಯೆ!

    ಇದು ಒಂದಲ್ಲ ಎರಡಲ್ಲ 6 ಲಕ್ಷ ವಿದ್ಯಾರ್ಥಿಗಳ ಸಮಸ್ಯೆ!

    ಬೆಂಗಳೂರು: ಇದು ಒಂದಲ್ಲ ಎರಡಲ್ಲ 6 ಲಕ್ಷ ವಿದ್ಯಾರ್ಥಿಗಳ (Students) ಸಮಸ್ಯೆ, ರಾಜ್ಯದ ಮೂಲೆ ಮೂಲೆಯ ಪೋಷಕರಿಗೂ ಗೊಂದಲದ ಪರಿಸ್ಥಿತಿ. ಹೌದು 2022ರ ರಾಷ್ಟ್ರೀಯ ಶಿಕ್ಷಣ ನೀತಿಯಿಂದ (National Education Policy 2022)  6 ಲಕ್ಷ ಮಕ್ಕಳ ದಾಖಲಾತಿಗೆ ಗೊಂದಲ ಉಂಟಾಗಿದೆ.

    2022ರ ನವೆಂಬರ್ ತಿಂಗಳಲ್ಲಿ ಶಿಕ್ಷಣ ಇಲಾಖೆ ಹೊರಡಿಸಿದ ಆದೇಶದ ಪ್ರಕಾರ 2025/26ನೇ ಸಾಲಿಗೆ ಒಂದನೇ ತರಗತಿಗೆ ದಾಖಲಾಗುವ ಮಕ್ಕಳಿಗೆ 6 ವರ್ಷ ತುಂಬಿರಬೇಕು. ಜೂ.1ನೇ ತಾರೀಖಿಗೆ ಯಾವ ಮಗುವಿಗೆ 6 ವರ್ಷ ತುಂಬಿರುತ್ತೋ ಅಂತಹ ಮಕ್ಕಳಿಗೆ ಮಾತ್ರ ಒಂದನೇ ತರಗತಿ ದಾಖಲಾತಿ ಕೊಡಬೇಕು ಅನ್ನೋ ನಿಯಮ ಜಾರಿಗೆ ತಂದಿದೆ. ಇದನ್ನೂ ಓದಿ: ಮ್ಯಾನ್ಮಾರ್‌ನಲ್ಲಿ ಮತ್ತೆ ಭೂಕಂಪ – ಆಸ್ಪತ್ರೆ ಕಟ್ಟಡಗಳೇ ನಾಮಾವಶೇಷ, ರಸ್ತೆಯಲ್ಲೇ ರೋಗಿಗಳಿಗೆ ಚಿಕಿತ್ಸೆ

    ಈಗ ಹೊಸದಾಗಿ ದಾಖಲಾಗೋ ಮಕ್ಕಳಿಗೆ ಇದರಿಂದ ಸಮಸ್ಯೆ ಆಗುವುದಿಲ್ಲ. ಅದ್ರೇ ಈಗಾಗಲೇ ಪ್ರೀಕೆಜಿ, ಎಲ್‍ಕೆಜಿಗೆ ಸೇರಿ 3 ಪೂರ್ವ ಪ್ರಾಥಮಿಕ ಶಿಕ್ಷಣ ಮುಗಿಸಿರೋ ಮಕ್ಕಳಿಗೆ ಸಮಸ್ಯೆ ಆಗ್ತಿದೆ. ಆಗಿನ ನಿಯಮದಂತೆ ಮಕ್ಕಳನ್ನ ಪ್ರೀ ಕೆಜಿಗೆ ದಾಖಲು ಮಾಡಿದ್ವಿ, ಈಗ ನಮ್ಮ ಮಕ್ಕಳು 6 ವರ್ಷಕ್ಕಿಂತ ಕಡಿಮೆ ಇದ್ದಾರೆ, ಈಗ ಮತ್ತೇ ಅದೇ ತರಗತಿಗೆ ಸೇರಿಸಿದ್ರೇ ಮಕ್ಕಳು ಮಾನಸಿಕವಾಗಿ ಕುಗ್ಗುತ್ತಾರೆ. ರಾಜ್ಯದಲ್ಲಿ ಈ ರೀತಿ 6 ಲಕ್ಷ ಮಕ್ಕಳಿದ್ದಾರೆ ಅಂತಿದ್ದಾರೆ ಪೋಷಕರು.

    ಒಂದು ವರ್ಷ ಮತ್ತೆ ಅದೇ ತರಗತಿಯಲ್ಲಿ ಓದಿಸಬೇಕಾ? ಇಲ್ಲವೇ ಮಕ್ಕಳನ್ನ ಮನೆಯಲ್ಲಿಟ್ಟು ಕೊಳ್ಳಬೇಕಾ? ಯಾವ ನಿರ್ಧಾರಕ್ಕೂ ಬರದಂತಹ ವಾತಾವರಣದಲ್ಲಿ ಪೋಷಕರಿದ್ದಾರೆ. ಇತರೆ ರಾಜ್ಯಗಳಲ್ಲಿ ನೀಡಿರುವಂತೆ ಇಲ್ಲೂ ಸಡಿಲಿಕೆ ನೀಡಿ ಅಂತಾ ಸರ್ಕಾರದ ಮುಂದೆ ಮನವಿ ಮಾಡಿ ಮಾಡಿ ಕಾಯ್ತಿದ್ದಾರೆ.

    ಒಂದನೇ ತರಗತಿಗೆ ಮಕ್ಕಳಿಗೆ ನಿಗದಿ ಮಾಡಿರುವ ವಯೋಮಿತಿ ವಿಚಾರದಲ್ಲಿಯೂ ಇದೇ ಗೊಂದಲ ಶುರು ಆಗಿದೆ. ಒಂದನೇ ತರಗತಿಗೆ ಮಗುವಿಗೆ ಅಡ್ಮಿಷನ್ ಕೊಡ್ತಿಲ್ಲ ಅನ್ನೋದು ರಾಜ್ಯದ ಲಕ್ಷಾಂತರ ಪೋಷಕರ ಆಕ್ರೋಶಕ್ಕೆ ಕಾರಣವಾಗಿದೆ. ಇದನ್ನೂ ಓದಿ: ಕೇಂದ್ರ ನೌಕರರಿಗೆ ಯುಗಾದಿ ಗಿಫ್ಟ್ – ಶೇ.2 ರಷ್ಟು ಡಿಎ ಏರಿಕೆ

  • ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕೇಂದ್ರ ಸರ್ಕಾರ ಪುನರ್‌ ವಿಮರ್ಶೆ ನಡೆಸಬೇಕು – ಎಂ.ಸಿ.ಸುಧಾಕರ್

    ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕೇಂದ್ರ ಸರ್ಕಾರ ಪುನರ್‌ ವಿಮರ್ಶೆ ನಡೆಸಬೇಕು – ಎಂ.ಸಿ.ಸುಧಾಕರ್

    – ಸೂಕ್ತ ಶಿಕ್ಷಣ ನೀಡುವ ಅಧ್ಯಾಪಕರ ಕೊರತೆ ಬಗ್ಗೆ ಚಿಂತಿಸಿಲ್ಲ ಎಂದ ಸಚಿವ

    ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ (National Education Policy) ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಮಾತ್ರ ಹೇಳಿಮಾಡಿಸಿದಂತಿದ್ದು, ಸರ್ಕಾರಿ ಶಿಕ್ಷಣ ಸಂಸ್ಥೆಗಳಿಗೆ ಸರಿಯಾದುದ್ದಲ್ಲ, ಶಿಕ್ಷಣಕ್ಕಿಂತ ಸಮಸ್ಯೆಗಳಿಗೆ ಹೆಚ್ಚು ದಾರಿ ಮಾಡಿಕೊಡಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್ (Dr. M.C.Sudhakar) ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ಬೆಂಗಳೂರು ವಿಶ್ವವಿದ್ಯಾಲಯದ 59ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಷ್ಟ್ರೀಯ ಶಿಕ್ಷಣ ನೀತಿಯಡಿ ಬಹುಶಿಸ್ತೀಯ, ಬಹು ಆಯ್ಕೆಯ, ಮುಕ್ತ ಶಿಕ್ಷಣಕ್ಕೆ ಆದ್ಯತೆ ನೀಡಲಾಗಿದೆ. ಈ ಶಿಕ್ಷಣ ನೀತಿ ಒಂದೇ ಸೂರಿನಡಿ ಎಲ್ಲಾ ವಿಭಾಗಗಳನ್ನು ಹೊಂದಿರುವ ಖಾಸಗಿ ವಿಶ್ವವಿದ್ಯಾಲಯ ಅಥವಾ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಸರಿಯಾಗಿರಬಹುದು. ಆದರೆ ಕೃಷಿ, ಕಾನೂನು, ಇಂಜಿನಿಯರಿಂಗ್, ವೈದ್ಯಕೀಯ ಎಂದೂ ಹಂಚಿಹೋಗಿರುವ ಸರ್ಕಾರಿ ವಿಶ್ವವಿದ್ಯಾಲಯದಲ್ಲಿ ಅಸಾಧ್ಯವಾಗಿದೆ ಎಂದರು.ಇದನ್ನೂ ಓದಿ: ಕೇಂದ್ರ ಗೃಹ ಸಚಿವನಾಗಿ ಜಮ್ಮು-ಕಾಶ್ಮೀರ ಭೇಟಿ ಸಮಯದಲ್ಲಿ ಭಯವಾಗುತ್ತಿತ್ತು: ಸುಶೀಲ್ ಕುಮಾರ್ ಶಿಂಧೆ

    ಕಲಾ ವಿಭಾಗದಲ್ಲಿ ಓದುವ ವಿದ್ಯಾರ್ಥಿ ವಿಜ್ಞಾನ ಓದಲು ಬಯಸಿದರೆ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಅವಕಾಶ ನೀಡಲಾಗಿದೆ. ಆದರೆ ಸೂಕ್ತ ಶಿಕ್ಷಣ ನೀಡುವ ಅಧ್ಯಾಪಕರ ಕೊರತೆಯ ಬಗ್ಗೆ ಚಿಂತನೆ ನಡೆಸಿಲ್ಲ. ಕರ್ನಾಟಕದ ಅನೇಕ ಕಾಲೇಜು, ವಿಶ್ವವಿದ್ಯಾಲಯಗಳಲ್ಲಿ ಶಿಕ್ಷಕರ ಕೊರತೆಯಿದೆ. 14 ಸಾವಿರ ಅತಿಥಿ ಉಪನ್ಯಾಸಕರು ಕಾರ್ಯ ನಿರ್ವಹಿಸುತ್ತಿದ್ದರೂ ಕೊರತೆ ಮಾತ್ರ ನೀಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

    ಕರ್ನಾಟಕ ಸರ್ಕಾರ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ವಿರೋಧಿಸಿದ್ದು, ಪರ್ಯಾಯವಾಗಿ ರಾಜ್ಯ ಶಿಕ್ಷಣ ನೀತಿಯನ್ನು ಜಾರಿಗೊಳಿಸಿದೆ. ಕ್ರೆಡಿಟ್ ಸ್ಕೋರ್ ಮತ್ತು ಮುಕ್ತ ಆಯ್ಕೆಗಳನ್ನು ಒಳಗೊಂಡಂತೆ ಸೂಕ್ತ ಮಾರ್ಪಾಡುಗಳನ್ನು ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರ ರಾಜ್ಯ ಶಿಕ್ಷಣ ನೀತಿಯನ್ನು ಜಾರಿಗೊಳಿಸಿದೆ. ರಾಜ್ಯ ಶಿಕ್ಷಣ ನೀತಿಗಾಗಿ ಆಯೋಗ ರಚಿಸಿ ಮಧ್ಯಂತರ ವರದಿ ಆಧಾರ ರಾಜ್ಯ ಶಿಕ್ಷಣ ನೀತಿ ಅನುಷ್ಠಾನಗೊಳಿಸಲಾಗಿದೆ. ಅತಿಶೀಘ್ರದಲ್ಲಿ ಅಂತಿಮ ವರದಿಯನ್ನು ಕೂಡ ಸ್ವೀಕರಿಸಲಾಗುವುದು ಎಂದು ಭರವಸೆ ನೀಡಿದರು.

    ಸರ್ಕಾರಿ ಶಿಕ್ಷಣ ಸಂಸ್ಥೆಗಳು ಈಗಾಗಲೇ ಅನೇಕ ಸಮಸ್ಯೆ ಎದುರಿಸುತ್ತಿದ್ದು, ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಮತ್ತಷ್ಟು ಸಮಸ್ಯೆಗೆ ಒಳಗಾಗಿತ್ತು. ಆ ಆತಂಕವನ್ನು ರಾಜ್ಯ ಸರ್ಕಾರ ದೂರಗೊಳಿಸಿದೆ. ಸರ್ಕಾರಿ ಶಿಕ್ಷಣ ಸಂಸ್ಥೆಗಳನ್ನು ಉಳಿಸಿ, ಬೆಳಸಬೇಕಾಗಿದೆ. ಭವಿಷ್ಯದಲ್ಲಿ ಶಿಕ್ಷಣ ಕ್ಷೇತ್ರದ ದೃಷ್ಟಿಯಿಂದ ಸರ್ಕಾರಿ ಶಿಕ್ಷಣ ಸಂಸ್ಥೆಗಳಿಗೆ ಆದ್ಯತೆ ನೀಡಬೇಕು. ಶಿಕ್ಷಣ ಕ್ಷೇತ್ರ ಖಾಸಗಿ ಶಿಕ್ಷಣ ಸಂಸ್ಥೆಗಳ ಪಾಲಾಗಕೂಡದು ಎಂದು ಎಚ್ಚರಿಕೆ ಗಂಟೆಯನ್ನು ಬಾರಿಸಿದ್ದಾರೆ.ಇದನ್ನೂಓದಿ: ಸಂಗೀತ ನಿರ್ದೇಶಕ ಗುರುಕಿರಣ್, ಸಮಾಜ ಸೇವಕ ರಾಜಣ್ಣಗೆ ಬೆಂಗಳೂರು ವಿವಿ ಗೌರವ ಡಾಕ್ಟರೇಟ್

    ಶಿಕ್ಷಣ ಕ್ಷೇತ್ರದಲ್ಲಿ ಕರ್ನಾಟಕ ರಾಜ್ಯ ಮುಂಚೂಣಿಯಲ್ಲಿದ್ದರೂ ಅನೇಕ ಕೊರತೆಗಳನ್ನು ಎದುರಿಸುತ್ತಿದೆ. ಇನ್ನೂ ಹಿಂದುಳಿದ ರಾಜ್ಯಗಳ ಪರಿಸ್ಥಿತಿ ಏನಾಗಿರಬಹುದು? ಈ ವ್ಯವಸ್ಥೆಯಲ್ಲಿ ರಾಷ್ಟ್ರದೂದ್ದಕ್ಕೂ ಒಂದೇ ಶಿಕ್ಷಣ ವ್ಯವಸ್ಥೆ ಜಾರಿ ಹೇಗೆ ಸಾಧ್ಯ? ಪರ್ಯಾಯ ವ್ಯವಸ್ಥೆಗಳನ್ನು ರೂಪಿಸದೆ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನದ ಕ್ರಮ ಸರಿಯಾದುದಲ್ಲ. ಕೇಂದ್ರ ಸರ್ಕಾರ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ಪುನರ್ ವಿಮರ್ಶಿಸುವ ಅಗತ್ಯವಿದೆ ಎಂದು ಒತ್ತಾಯಿಸಿದ್ದಾರೆ.

  • NEP ನೇಮಕಾತಿ ಮಾನದಂಡ – ಸರ್ಕಾರದ ವಿರುದ್ಧ ಸಿಡಿದೆದ್ದ ಅಂಗನವಾಡಿ ಕಾರ್ಯಕರ್ತೆಯರು

    NEP ನೇಮಕಾತಿ ಮಾನದಂಡ – ಸರ್ಕಾರದ ವಿರುದ್ಧ ಸಿಡಿದೆದ್ದ ಅಂಗನವಾಡಿ ಕಾರ್ಯಕರ್ತೆಯರು

    ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಮತ್ತೆ ಅಂಗನವಾಡಿ (Anganwadi) ಕಾರ್ಯಕರ್ತೆಯರು ಸಿಡಿದೆದ್ದಿದ್ದಾರೆ. ಸರ್ಕಾರ ರಾಷ್ಟ್ರೀಯ ಶಿಕ್ಷಣ ನೀತಿಗೆ (NEP) ಅನುಗುಣವಾಗಿ ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿಗೆ ಮಾನದಂಡ ಬದಲಾವಣೆ ಮಾಡಿರೋದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.

    ಸರ್ಕಾರ ರಾಷ್ಟ್ರೀಯ ಶಿಕ್ಷಣ ನೀತಿಗೆ ಅನುಗುಣವಾಗಿ ಅಂಗನವಾಡಿ ನೇಮಕಾತಿಗೆ ಮಾನದಂಡವನ್ನು ಬದಲಾವಣೆ ಮಾಡಿ, ಆದೇಶ ಹೊರಡಿಸಿದೆ. ಈ ಹೊಸ ಆದೇಶದ ವಿರುದ್ಧ ಅಂಗನವಾಡಿ ಕಾರ್ಯಕರ್ತೆಯರು ಕೆಂಡ ಉಗುಳುತ್ತಿದ್ದು, ಸರ್ಕಾರದ ವಿರುದ್ಧ ಹೋರಾಡಲು ಸಜ್ಜಾಗುತ್ತಿದ್ದಾರೆ. ಅಂಗನವಾಡಿ ಟೀಚರ್ ಆಗಲು ಪಿಯುಸಿ, ಡಿಪ್ಲೋಮಾ ಆಗಿರಲೇಬೇಕು ಮತ್ತು ಸಹಾಯಕರ ಹುದ್ದೆಗಳಿಗೆ SSLC ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಇತ್ತೀಚೆಗೆಷ್ಟೇ ಆದೇಶ ಹೊರಡಿಸಿತ್ತು. ಇದೀಗ ಈ ಆದೇಶವನ್ನು ಹಿಂಪಡೆಯುವಂತೆ ಅಂಗನವಾಡಿ ಕಾರ್ಯಕರ್ತೆಯರು ಒತ್ತಾಯಿಸುತ್ತಿದ್ದಾರೆ. ಇದನ್ನೂ ಓದಿ: ಟೀ, ಸಿಗರೇಟ್‍ಗೆ ಸಾಲ ಕೊಡಲಿಲ್ಲವೆಂದು ಬಡ ಅಂಗಡಿ ಮಾಲೀಕನ ಮೇಲೆ ಮಾರಣಾಂತಿಕ ಹಲ್ಲೆ

    ಟೀಚರ್ಸ್‍ಗಳಿಗೆ ಪಿಯುಸಿ ಕಡ್ಡಾಯ ಮಾಡಿರೋದು ಸರಿ, ಆದ್ರೆ ಸಹಾಯಕಿಯರಿಗೆ ಎಸ್‍ಎಸ್‍ಎಲ್‍ಸಿ ನಿಯಮ ಬೇಡ ಅಂತಾ ಅಂಗನವಾಡಿ ಕಾರ್ಯಕರ್ತೆಯರ ಸಂಘ ಒತ್ತಾಯಿಸಿದೆ. ಬೆಂಗಳೂರಿನಂತಹ ದೊಡ್ಡ ದೊಡ್ಡ ನಗರಗಳಲ್ಲಿ SSLC ಮಾಡಿರುವ ಹೆಲ್ಪರ್‌ಗಳು ಸಿಗೋದು ಕಷ್ಟ. ಇಂತಹ ಸ್ಥಳಗಳಲ್ಲಿ ಯಾರನ್ನು ನೇಮಕ ಮಾಡೋದು? ಅನೇಕ ವರ್ಷಗಳಿಂದ ಕೆಲಸ ಮಾಡಿಕೊಂಡ ಬಂದ ಸಹಾಯಕಿಯರಿಗೆ ಪಿಯುಸಿ ಕಡ್ಡಾಯ ಅಂದ್ರೆ ಹೇಗೆ? ಪಿಯುಸಿ ಮಾಡದಿದ್ರೆ, ಅವರು ಬಡ್ತಿ ಪಡೆಯದೇ, ಹಾಗೇ ನಿವೃತ್ತಿ ಆಗ್ಬೇಕಾ? ಇದು ಯಾವ ರೀತಿಯ ನ್ಯಾಯ? ಸರ್ಕಾರದ ಈ ಆದೇಶ ಕೈಬಿಡಬೇಕು ಎಂಬ ಆಗ್ರಹ ಕೇಳಿ ಬರುತ್ತಿದೆ. ಇದನ್ನೂ ಓದಿ: ಇಂದು ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮನ- ನಮೋ ಸ್ವಾಗತಕ್ಕೆ ಭರ್ಜರಿ ಸಿದ್ದತೆ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಶಿಕ್ಷಣ ವ್ಯವಸ್ಥೆಯ ಆಮೂಲಾಗ್ರ ಬದಲಾವಣೆ ವಿಶ್ವವಿದ್ಯಾಲಯದಿಂದಲೇ ಪ್ರಾರಂಭವಾಗಬೇಕು: ಸಿಎಂ

    ಶಿಕ್ಷಣ ವ್ಯವಸ್ಥೆಯ ಆಮೂಲಾಗ್ರ ಬದಲಾವಣೆ ವಿಶ್ವವಿದ್ಯಾಲಯದಿಂದಲೇ ಪ್ರಾರಂಭವಾಗಬೇಕು: ಸಿಎಂ

    ಬೆಳಗಾವಿ: ಶಿಕ್ಷಣ ವ್ಯವಸ್ಥೆಯ ಆಮೂಲಾಗ್ರ ಬದಲಾವಣೆ ವಿಶ್ವವಿದ್ಯಾಲಯದಿಂದಲೇ ಪ್ರಾರಂಭವಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

    ಬೆಳಗಾವಿಯ ಹಿರೇಬಾಗೇವಾಡಿ ಮಲ್ಲಪ್ಪನ ಗುಡ್ಡದ ಹೊಸ ನಿವೇಶನದಲ್ಲಿ ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಕಟ್ಟಡಗಳ ಭೂಮಿ ಪೂಜೆ ಹಾಗೂ ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಅವರು, ಇಂದಿನ ಸವಾಲುಗಳ ಹಾಗೂ ಬದಲಾವಣೆಯ ಯುಗಕ್ಕೆ ಹೊಂದಿಕೊಳ್ಳುವ ಶಿಕ್ಷಣ ವ್ಯವಸ್ಥೆ ಅತ್ಯಂತ ಅವಶ್ಯಕ ಎಂದರು.

    ಪಠ್ಯದಲ್ಲಿರುವ ವಿದ್ಯೆ ಹಾಗೂ ಜಗತ್ತಿನಲ್ಲಿ ಬಳಕೆಯಾಗುತ್ತಿರುವ ವಿದ್ಯೆಯಲ್ಲಿ ಬಹಳಷ್ಟು ಅಂತರ ಇದೆ. ಇವರೆಡರ ನಡುವೆ ಇರುವ ಅಂತರವನ್ನು ಕಡಿಮೆಗೊಳಿಸಲು ಎನ್‌ಇಪಿಯನ್ನು ಜಾರಿಗೊಳಿಸಲಾಗಿದೆ. ಇಂದಿನ ಪೀಳಿಗೆ ಯಾವುದೇ ಸವಾಲುಗಳನ್ನು ಆತ್ಮಸ್ಥೈರ್ಯ, ಧೈರ್ಯದಿಂದ ಎದುರಿಸಲು ಜ್ಞಾನದ ಬಲ ಇರಬೇಕು. ಎನ್‌ಇಪಿ ಈ ಜ್ಞಾನದ ಬಲವನ್ನು ನೀಡುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಗೂಗಲ್ ನಂತರ ಇದೀಗ ಇಂಟೆಲ್- ಲಸಿಕೆ ಹಾಕಿಸಿಕೊಳ್ಳದ ಉದ್ಯೋಗಿಗಳಿಗೆ ವೇತನ ಇಲ್ಲ

    ವಿಶ್ವವಿದ್ಯಾಲಯವನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಏರಲಿ: ಕಿತ್ತೂರು ರಾಣಿ ಚೆನ್ನಮ್ಮ ಆತ್ಮಸ್ಥೈರ್ಯ, ಧೈರ್ಯದಿಂದ ಹೋರಾಡಿದ ಮೊದಲನೆಯ ಮಹಿಳಾ ಸ್ವತಂತ್ರ ಹೋರಾಟಗಾರ್ತಿ. ರಾಣಿ ಚೆನ್ನಮ್ಮನೇ ಈ ವಿಶ್ವವಿದ್ಯಾಲಯದ ಸ್ಫೂರ್ತಿ. ಈ ವಿಶ್ವವಿದ್ಯಾಲಯವನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಒಯ್ಯುವ ಬದ್ಧತೆ, ಸ್ಪಷ್ಟತೆ ವಿಶ್ವವಿದ್ಯಾಲಯದ ಪ್ರತಿಯೊಬ್ಬರಿಗೂ ಇರಬೇಕು ಎಂದರು. ಇದನ್ನೂ ಓದಿ: ಅಧಿವೇಶನದಲ್ಲಿ ವಿರೋಧ ಪಕ್ಷದವರು ಚರ್ಚೆಯಿಂದ ಓಡಿ ಹೋದರು: ಜೋಶಿ ವ್ಯಂಗ್ಯ

    ವಿಭಿನ್ನ, ವಿನೂತನ ಪ್ರಯೋಗ ಕಾರ್ಯಕ್ರಮಗಳನ್ನು ರೂಪಿಸಿ, ಸಮಕಾಲೀನ ಸವಾಲುಗಳನ್ನು ಎದುರಿಸುವ ಹಾಗೂ ವೈಚಾರಿಕತೆಯಿಂದ ಸಮಾಜದಲ್ಲಿನ ಸಮಸ್ಯೆಗಳನ್ನು ನಿವಾರಿಸುವ ಕೇಂದ್ರಗಳಾಗಬೇಕು. ಕೇವಲ ಡಿಗ್ರಿ ಪಡೆಯಲು ಸೀಮಿತವಾಗಿರಬಾರದು. ಆಧುನಿಕ ತಂತ್ರಜ್ಞಾನ ಹಾಗೂ ಜ್ಞಾನ ಕ್ಷೇತ್ರದಲ್ಲಿನ ಬದಲಾವಣೆ ಹಾಗೂ ಬೆಳವಣಿಗೆಯ ವೇಗಕ್ಕೆ ಸರಿಸಮಾನವಾದ ಚಿಂತನೆಯನ್ನು ವಿಶ್ವವಿದ್ಯಾಲಯಗಳು ಮಾಡಬೇಕು. ಆವಿಷ್ಕಾರಗಳನ್ನು ಮಾಡುವ ಕೇಂದ್ರವಾಗಬೇಕು. ಸಂಶೋಧನೆಗಳಲ್ಲಿ ಸ್ವಂತಿಕೆ, ಹೊಸತನ ಹಾಗೂ ವಿಭಿನ್ನತೆ ಇರಬೇಕು ಎಂದು ತಿಳಿಸಿದರು.

    basavaraj bommai

    ತರ್ಕಬದ್ಧ ಚಿಂತನೆಗೆ ಅವಕಾಶ: ವಿಶ್ವವಿದ್ಯಾಲಯಗಳು ತರ್ಕಬದ್ಧ ಚಿಂತನೆಗೆ ಅವಕಾಶ ನೀಡುವ ಜ್ಞಾನದ ಕೇಂದ್ರವಾಗಬೇಕು. ವಿದ್ಯಾರ್ಜನೆಗೆ ಪೂರಕವಾದ ಪರಿಸರ ವಿಶ್ವವಿದ್ಯಾಲಯದಲ್ಲಿ ದೊರೆಯಬೇಕು. ವಿಶ್ವವಿದ್ಯಾಲಯದಲ್ಲಿರುವವರು ತಮ್ಮ ಸೀಮಿತ ಪ್ರಪಂಚದಿಂದ ಹೊರಗೆ ಬರಬೇಕು. ಸಂಶೋಧನೆಗಳನ್ನು ಸಮರ್ಥಿಸಿಕೊಳ್ಳದೆ ಉಳಿದವರು ಅದರ ಉಪಯುಕ್ತತೆಯನ್ನು ನಿರ್ಧರಿಸಲಿ. ವಿಶ್ವವಿದ್ಯಾಲಯಗಳಿಗೆ ಕುಲಪತಿಗಳೆ ಮುಂದಾಳತ್ವ ವಹಿಸುವ ನಾಯಕ. ಅವರು ಇತರರಿಗೆ ಉದಾಹರಣೆಯಾಗಬೇಕು. ಮಾರ್ಗದರ್ಶನ ತೋರಬೇಕು. ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಶಿಕ್ಷಣ ವ್ಯವಸ್ಥೆಯಲ್ಲಿ ಬದಲಾವಣೆಯನ್ನು ತರಲು ಸರ್ಕಾರ ಬೆಂಬಲಕ್ಕೆ ನಿಲ್ಲುತ್ತದೆ ಎಂದು ಭರವಸೆ ನೀಡಿದರು.

    ವಿಶ್ವವಿದ್ಯಾಲಯ ಜಗತ್ತಿಗೆ ಜ್ಞಾನದ ಸಂಪರ್ಕ ಕೊಂಡಿ : ವಿಶ್ವವಿದ್ಯಾಲಯಕ್ಕೆ ಸುಂದರ ಪರಿಸರ, ರಸ್ತೆ, ಮೂಲಸೌಕರ್ಯಗಳನ್ನು ಒಳಗೊಂಡ ಕಟ್ಟಡವನ್ನು ಒಂದು ವರ್ಷದಲ್ಲಿ ಮುಗಿಸುವ ಕೆಲಸವನ್ನು ಸರ್ಕಾರ ಮಾಡಲಿದೆ. ಕಟ್ಟಡದ ಪ್ರತಿಯೊಂದು ಕೊಠಡಿಯು ಡಿಜಿಟಲೈಸ್ ಆಗಬೇಕು. ಜಗತ್ತಿಗೆ ಜ್ಞಾನದ ಸಂಪರ್ಕ ಕೊಂಡಿಯಂತಿರಬೇಕು ಎಂದು ಸಲಹೆ ನೀಡಿದರು.

    ಇದು ಜ್ಞಾನದ ಶತಮಾನ. ಜ್ಞಾನ ಇದ್ದವರು ಜಗತ್ತನ್ನು ಆಳುತ್ತಾರೆ. ವಿಶ್ವವಿದ್ಯಾಲಯಗಳ ಸಂಶೋಧನೆಯನ್ನು ಇಡೀ ವಿಶ್ವ ಒಪ್ಪಿಕೊಂಡರೆ ಅದರ ಉಪಯುಕ್ತತೆ ಹೆಚ್ಚುತ್ತದೆ. ವಿಶ್ವವಿದ್ಯಾಲಯದಲ್ಲಿ ಕಳೆದ 10 ವರ್ಷದಲ್ಲಿ ಕೈಗೊಂಡಿರುವ ಪಿಎಚ್.ಡಿ ಸಂಶೋಧನೆ ಹಾಗೂ ಅದರ ಉಪಯುಕ್ತತೆ ಬಗ್ಗೆ ವಿಶ್ಲೇಷಣೆಯನ್ನು ಕೈಗೊಳ್ಳಲು ತಿಳಿಸಿದರು. ಇದನ್ನೂ ಓದಿ: MES ಗಲಭೆಗೆ ಕಾಂಗ್ರೆಸ್, ಬಿಜೆಪಿ ಕೈವಾಡ ಇಲ್ಲ, ಇದು ಪುಂಡ ಪೋಕರಿಗಳ ಕೆಲಸ: ಪ್ರಹ್ಲಾದ್ ಜೋಶಿ

    ಈ ಸಂದರ್ಭದಲ್ಲಿ ಉನ್ನತ ಶಿಕ್ಷಣ ಸಚಿವರಾದ ಡಾಕ್ಟರ್ ಸಿಎಂ ಅಶ್ವಥ್ ನಾರಾಯಣ, ಶಶಿಕಲಾ ಜೊಲ್ಲೆ, ಶಾಸಕರಾದ ಲಕ್ಷ್ಮಿ ಹೆಬ್ಬಾಳ್ಕರ್, ಮಹಾಂತೇಶ ಕವಟಗಿಮಠ, ಅರುಣ ಶಾಹಪೂರ, ಹನಮಂತ ನಿರಾಣಿ, ವಿಧಾನಪರಿಷತ್ ಚುನಾವಣೆಯಲ್ಲಿ ಜಯಶಾಲಿಯಾಗಿರುವ ಚನ್ನರಾಜ ಹಟ್ಟಿಹೊಳಿ ಉಪಸ್ಥಿತರಿದ್ದರು.

  • ಮುಂದಿನ ವರ್ಷ ಕೆಲ ಶಾಲೆಗಳಲ್ಲಿ NEP ಜಾರಿ: ಬಿ.ಸಿ.ನಾಗೇಶ್

    ಮುಂದಿನ ವರ್ಷ ಕೆಲ ಶಾಲೆಗಳಲ್ಲಿ NEP ಜಾರಿ: ಬಿ.ಸಿ.ನಾಗೇಶ್

    ಬೆಳಗಾವಿ: ರಾಜ್ಯದಲ್ಲಿ ಮುಂದಿನ ವರ್ಷ ಕೆಲ ಶಾಲೆಗಳಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ (NEP) ಜಾರಿಗೊಳಿಸುವುದಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದರು.

    ವಿಧಾನಸಭೆಯಲ್ಲಿ ಮಹಾಂತೇಶ್ ಕೌಜಲಗಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸುವ ಪ್ರಕ್ರಿಯೆ ಈಗಾಗಲೇ ರಾಜ್ಯದಲ್ಲಿ ಚಾಲ್ತಿಯಲ್ಲಿದೆ. ಅನುಷ್ಠಾನ ಕಾರ್ಯಪಡೆಯ ಶಿಫಾರಸಿನಂತೆ ಹಂತ ಹಂತವಾಗಿ ಸಂಪೂರ್ಣ ಜಾರಿಗೊಳಿಸಲಾಗುವುದು. ಪ್ರಾಥಮಿಕ ಹಂತದ ಶಿಕ್ಷಣ ಮಾತ್ರ ಆರಂಭಿಸುತ್ತೇವೆ ಎಂದು ಉತ್ತರಿಸಿದ್ದಾರೆ. ಇದನ್ನೂ ಓದಿ: ಬಿಜೆಪಿ ಸರ್ಕಾರದ ಸಚಿವರಿಗೆ ಬಿಜೆಪಿ ಶಾಸಕರಿಂದಲೇ ಶಾಕ್..!

    NEP ಅನುಷ್ಠಾನ ಹಂತದಲ್ಲಿ ವಿವಿಧ ವಿಷಯಗಳು ಮತ್ತು ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ನೇಮಕಾತಿಗೆ ಕ್ರಮವಹಿಸಲಾಗುವುದು ಎಂದು ಹೇಳಿದರು.

    ಇದೇ ವೇಳೆ ಕೌಜಲಗಿ ಅವರು, ಒಮ್ಮಿಂದೊಮ್ಮೆಯೇ ಜಾರಿಯಾದರೆ ಸಮಸ್ಯೆಯಾಗುತ್ತದೆ. ಪೂರ್ವತಯಾರಿಯಿಲ್ಲದೆ ಆರಂಭ ಮಾಡುವುದು ಬೇಡ ಎಂದರು. ಇದಕ್ಕುತ್ತರಿಸಿದ ಸಚಿವರು, ಟಾಟಾ ಸಂಸ್ಥೆ ಮೂಲಕ ಈಗಾಗಲೇ ತರಬೇತಿ ಆರಂಭವಾಗಿದೆ. ತರಬೇತಿ ನೀಡದೇ NEP ಜಾರಿ ಮಾಡಲ್ಲ ಎಂದು ಭರವಸೆ ನೀಡಿದರು. 2030ರೊಳಗೆ NEP ಸಂಪೂರ್ಣವಾಗಿ ಜಾರಿಗೊಳಿಸಲು ಹೇಳಿದ್ದಾರೆ. ಆದರೆ ತುಂಬಾ ಶಿಕ್ಷಕರ ಕೊರತೆಯಾಗಲ್ಲ ಎಂದು ಹೇಳಿದರು.  ಇದನ್ನೂ ಓದಿ: ನಮ್ಮಿಂದ ಸಚಿವರಾಗಿರೋದು, ನೀವು ಮೇಲಿಂದ ಇಳಿದು ಬಂದಿಲ್ಲ- ಮಿನಿಸ್ಟರ್ಸ್ ವಿರುದ್ಧ ಶಾಸಕರ ಆಕ್ರೋಶ

    ವಿವಿಧ ಕ್ಷೇತ್ರಗಳ ಪಾಲುದಾರರಿಗೆ NEP ಪರಿಚಯಿಸಿ ಅವರಿಂದ ಅಭಿಪ್ರಾಯ ಸಂಗ್ರಹಿಸಲಾಗಿದೆ. ಈ ಕುರಿತು ರಾಜ್ಯದ ಪ್ರಸ್ತುತ ಸ್ಥಿತಿ ಅವಲೋಕಿಸಲು ರಾಜ್ಯ ಶಿಕ್ಷಣ ಕ್ಷೇತ್ರದ ಪೊಸಿಷನ್ ಪೇಪರ್ ಸಿದ್ಧಪಡಿಸಲು ವಿವಿಧ ಸಮಿತಿ ರಚಿಸಲಾಗಿದೆ. ಇದು ಸಿದ್ಧಗೊಂಡ ಬಳಿಕ ಪಠ್ಯಕ್ರಮ ಹಾಗೂ ಪಠ್ಯಸೂಚಿ ರಚಿಸಲಾಗುವುದು ಎಂದು ಸಚಿವರು ಉತ್ತರಿಸಿದ್ದಾರೆ.

    ಖಾಲಿ ಹುದ್ದೆಗಳ ಲೆಕ್ಕ:
    ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 41,869, ಸರ್ಕಾರಿ ಪ್ರೌಢಶಾಲೆಗಳಲ್ಲಿ 8292, ಪದವಿಪೂರ್ವ ಶಿಕ್ಷಣ ಇಲಾಖೆಯಲ್ಲಿ 3539 ಉಪನ್ಯಾಸಕರ ಹುದ್ದೆಗಳು ಖಾಲಿಯಿದೆ ಎಂದು ಸಚಿವ ನಾಗೇಶ್ ಹೇಳಿದ್ದಾರೆ. ಇದನ್ನೂ ಓದಿ:ಬದುಕಿದ್ದೀವಿ ಎಂದು ತೋರಿಸಲು ಕಾಂಗ್ರೆಸ್ ಪ್ರತಿಭಟನೆ: ಈಶ್ವರಪ್ಪ

  • ಬ್ರಿಟಿಷರು ಶಿಕ್ಷಣ ವ್ಯವಸ್ಥೆಗೆ ಕೈ ಹಾಕಿದ ಕಾರಣಕ್ಕೆ ಸ್ವಾತಂತ್ರ್ಯ ಹೋರಾಟ ಆಯ್ತು: ಬಿ.ಸಿ ನಾಗೇಶ್

    ಬ್ರಿಟಿಷರು ಶಿಕ್ಷಣ ವ್ಯವಸ್ಥೆಗೆ ಕೈ ಹಾಕಿದ ಕಾರಣಕ್ಕೆ ಸ್ವಾತಂತ್ರ್ಯ ಹೋರಾಟ ಆಯ್ತು: ಬಿ.ಸಿ ನಾಗೇಶ್

    – 75 ವರ್ಷಗಳ ಶಿಕ್ಷಣ ಸ್ವಾರ್ಥದ ಬದುಕು ಕಲಿಸಿಕೊಟ್ಟಿದೆ

    ಬೆಂಗಳೂರು: ಭಾರತದಲ್ಲಿ ಬ್ರಿಟಿಷರು ಶಿಕ್ಷಣ ವ್ಯವಸ್ಥೆಗೆ ಕೈ ಹಾಕಿದ ಕಾರಣಕ್ಕೆ ಸ್ವಾತಂತ್ರ್ಯ ಹೋರಾಟ ಆಯ್ತು ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದರು.

    ರಾಷ್ಟ್ರೀಯ ಶಿಕ್ಷಣ ನೀತಿ(ಎನ್‍ಇಪಿ) ಕುರಿತು ರಾಜ್ಯ ಮಟ್ಟದ ಶೈಕ್ಷಣಿಕ ಸಮ್ಮೇಳನಕ್ಕೆ ಬಿ.ಸಿ ನಾಗೇಶ್ ಚಾಲನೆ ನೀಡಿ, ನಂತರ ಈ ಕುರಿತು ಮಾತನಾಡಿದ್ದು, ಅನೇಕ ವರ್ಷಗಳಿಂದ ಶಿಕ್ಷಣ ನೀತಿಯಲ್ಲಿ ಬದಲಾವಣೆ ಆಗಬೇಕು ಎಂಬ ಚರ್ಚೆ ಆಗಿತ್ತು. 2020ರಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಸಂಸತ್ ಅಂಗೀಕಾರ ಮಾಡಿತು. ಈ ಹಿಂದೆ ಬ್ರಿಟಿಷರು ಶಿಕ್ಷಣ ವ್ಯವಸ್ಥೆಗೆ ಕೈ ಹಾಕಿದ ಕಾರಣಕ್ಕೆ ಸ್ವಾತಂತ್ರ್ಯ ಹೋರಾಟ ಆಯ್ತು. ಬ್ರಿಟಿಷರು ಯಾವಾಗ ನಮ್ಮ ವ್ಯವಸ್ಥೆಗೆ ಕೈ ಹಾಕಿಲು ಮುಂದಾದ್ರೋ ಆಗ ಸ್ವಾತಂತ್ರ್ಯ ಹೋರಾಟ ಕಾವು ಹೆಚ್ಚಾಯ್ತು ಎಂದು ತಿಳಿಸಿದರು.

    ಶ್ಯಾಂ ಪ್ರಸಾದ್ ಮುಖರ್ಜಿ ಅವರು ಶಿಕ್ಷಣ ವ್ಯವಸ್ಥೆ ಬಗ್ಗೆ ಅಂದೇ ಧ್ವನಿ ಎತ್ತಿದ್ದರು. ಪಂಚಶೀಲ ಶಿಕ್ಷಣ ನೀತಿ ಬರಬೇಕು ಎಂದು ಮುಖರ್ಜಿ ಅವರು ಪ್ರತಿಪಾದನೆ ಮಾಡ್ತಾರೆ. ಅವರು ಅಂದೇ ಮೆಕ್ಯಾಲೆ ಶಿಕ್ಷಣ ವ್ಯವಸ್ಥೆಯನ್ನ ವಿರೋಧ ಮಾಡಿದ್ರು ಎಂದು ನೆನಪಿಸಿಕೊಂಡರು. ಇದನ್ನೂ ಓದಿ: ಟೇಕ್ ಆಫ್ ಆಗ್ತಿದ್ದಂತೇ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ

    ಈಗ ಇರುವ ಶಿಕ್ಷಣ ಪದ್ದತಿ ಕುಟುಂಬಗಳನ್ನು ವಿಭಾಗ ಮಾಡುವ ವ್ಯವಸ್ಥೆಯನ್ನ ಹುಟ್ಟು ಹಾಕುತ್ತಿದೆ. ಇಂತಹ ವ್ಯವಸ್ಥೆಯ ಶಿಕ್ಷಣ ಬದಲಾವಣೆ ಆಗಬೇಕು. 75 ವರ್ಷಗಳ ಶಿಕ್ಷಣ ಸ್ವಾರ್ಥದ ಬದುಕು ಕಲಿಸಿಕೊಟ್ಟಿದೆ. ಶಿಕ್ಷಣ ವ್ಯವಸ್ಥೆ ಮೂಲಕ ದೇಶ ಬದಲಾವಣೆ ಮಾಡಬೇಕು. ಹೊಸ ಶಿಕ್ಷಣ ನೀತಿ 2014 ರಿಂದ ಚರ್ಚೆ ಆಗಿತ್ತು. 2020ರಲ್ಲಿ ಅನುಷ್ಠಾನ ಮಾಡಲಾಗಿದೆ. ಕರ್ನಾಟಕ ಮೊದಲ ರಾಜ್ಯವಾಗಿ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ ಮಾಡಿದ್ದೇವೆ ಎಂದು ತಿಳಿಸಿದರು.

    ಮುಂದಿನ ವರ್ಷದಿಂದ ರಾಜ್ಯದಲ್ಲಿ ಪ್ರಾಥಮಿಕ ಶಿಕ್ಷಣದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡ್ತೀವಿ. ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ಈಗಾಗಲೇ ಟಾಸ್ಕ್ ಫೋರ್ಸ್ ರಚನೆ ಮಾಡಲಾಗಿದೆ. ಯಾವ ತರಗತಿಯಿಂದ ಹೇಗೆ ಅನುಷ್ಠಾನ ಮಾಡಬೇಕು ಎಂದು ಟಾಸ್ಕ್ ಫೋರ್ಸ್ ವರದಿ ಕೊಡುತ್ತೆ. ವರದಿ ಬಂದ ಬಳಿಕ ಮುಂದಿನ ವರ್ಷದಿಂದ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ ಮಾಡುತ್ತೇವೆ. ಅದು ಬಿಟ್ಟು ವಿರೋಧಗಳಿಗೆ ನಾವು ತಲೆ ಕೆಡಿಸಿಕೊಳ್ಳೊಲ್ಲ ಎಂದು ಸ್ಪಷ್ಟನೆ ನೀಡಿದರು.

    ಕೊರೊನಾ ಲಸಿಕೆಯನ್ನು ವಿರೋಧಿ ಮಾಡಿರೋ ಜನರು ನಮ್ಮ ಮಧ್ಯೆ ಇದ್ದಾರೆ. ಹೀಗಾಗಿ ಯಾವುದೇ ವಿರೋಧಕ್ಕೆ ನಾವು ತಲೆ ಕೆಡಿಸಿಕೊಳ್ಳೊಲ್ಲ. ರಾಷ್ಟ್ರೀಯ ಶಿಕ್ಷಣ ನೀತಿ ಓದಿದವರು ಯಾರು ವಿರೋಧ ಮಾಡ್ತಿಲ್ಲ. ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಓದದೇ ಅನೇಕ ಜನರು ವಿರೋಧ ಮಾಡ್ತಿದ್ದಾರೆ. ಇದಕ್ಕೆ ನಾವು ತಲೆ ಕೆಡಿಸಿಕೊಳ್ಳಲ್ಲ. ವಿರೋಧಗಳಿಗೆ ತಲೆ ಕೆಡಿಸಿಕೊಳ್ಳದೆ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ ಮಾಡ್ತೀವಿ ಎಂದು ನಿಖರವಾಗಿ ತಿಳಿಸಿದರು. ಇದನ್ನೂ ಓದಿ: ಮೃಗಾಲಯದ 4 ಸಿಂಹಗಳಿಗೆ ಕೊರೊನಾ ಪಾಸಿಟಿವ್

    ಈ ಸಮ್ಮೇಳನವನ್ನು ಆರ್.ವಿ. ಶಿಕ್ಷಕರ ಮಹಾ ವಿದ್ಯಾಲಯದ ಸಾರ್ವಜನಿಕ ಶಿಕ್ಷಣ ಇಲಾಖೆ ನೇತೃತ್ವದಲ್ಲಿ ನಡೆಯುತ್ತಿದೆ. ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಸಮಿತಿ ಸದಸ್ಯ ಎಂ.ಕೆ.ಶ್ರೀಧರ್, ಶಿಕ್ಷಣ ತಜ್ಞ ಡಾ.ಗುರುರಾಜ್ ಕರ್ಜಗಿ, ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಪಿಯುಸಿ ಬೋರ್ಡ್ ನಿರ್ದೇಶಕಿ ಸ್ನೇಹಲ್ ಸೇರಿ ಇಲಾಖೆ ಅಧಿಕಾರಿಗಳು ಸಮ್ಮೇಳನದಲ್ಲಿ ಭಾಗಿಯಾಗಿದ್ದರು.

  • ಬೆಂಗಳೂರು ವಿವಿಯಲ್ಲಿ ಹೊಸ 30 ಕೋರ್ಸ್ ಆರಂಭ

    ಬೆಂಗಳೂರು ವಿವಿಯಲ್ಲಿ ಹೊಸ 30 ಕೋರ್ಸ್ ಆರಂಭ

    ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿಯ ಅನುಷ್ಠಾನದ ಭಾಗವಾಗಿ ಬೆಂಗಳೂರು ವಿಶ್ವವಿದ್ಯಾಲಯ 30 ಹೊಸ ಕೋರ್ಸ್‍ಗಳನ್ನು ಆರಂಭಿಸಿದ್ದು, ವಿದ್ಯಾರ್ಥಿಗಳ ಅನುಕೂಲಕ್ಕಾಗಿ ದಾಖಲಾತಿಗೂ ಅವಕಾಶ ಮಾಡಿಕೊಟ್ಟಿದೆ.

    ಬೆಂಗಳೂರು ವಿಶ್ವವಿದ್ಯಾಲಯ ಆರಂಭಿಸಿರುವ ಹೊಸ ಕೋರ್ಸ್‍ಗಳಲ್ಲಿ ನಾಲ್ಕು ವರ್ಷದ ಬಿ.ಎಸ್ಸಿ ಹಾಗೂ ಬಿ.ಎ ಆನರ್ಸ್ ಪದವಿ, ಸ್ನಾತಕೋತ್ತರ ಡಿಪ್ಲೊಮಾ ಕೋರ್ಸ್‍ಗಳು, ಪ್ರೊಫೆಷನ್ ಡಿಪ್ಲೊಮಾ ಕೋರ್ಸ್‍ಗಳು, ಪ್ರಮಾಣ ಪತ್ರ ಕೋರ್ಸ್‍ಗಳು, ನಾಲ್ಕು ವರ್ಷದ ಬಿ.ಇಡಿ ಹಾಗೂ ಕೆಲವೊಂದು ತಾಂತ್ರಿಕ ಕೋರ್ಸ್‍ಗಳು ಸೇರಿಕೊಂಡಿವೆ. ಇದನ್ನೂ ಓದಿ: ದೇವಸ್ಥಾನದ ಆವರಣದಲ್ಲಿ ಚಪ್ಪಲಿ ಧರಿಸಿ ವಿಕೃತಿ ಮೆರೆದಿದ್ದ ಪುಂಡರು ಅರೆಸ್ಟ್

    ಕುಲಪತಿ ಕೆ.ಆರ್.ವೇಣುಗೋಪಾಲ್ ಈ ಕುರಿತು ಮಾತನಾಡಿದ್ದು, ರಾಷ್ಟ್ರೀಯ ಶಿಕ್ಷಣ ನೀತಿಗೆ ಅನುಸಾರವಾಗಿ ವಿದ್ಯಾರ್ಥಿಗಳಿಗೆ ಪದವಿ ಪೂರ್ಣಗೊಂಡ ನಂತರ ಉದ್ಯೋಗಾವಕಾಶಕ್ಕೆ ಪೂರಕವಾಗುವಂತೆ ಹಾಗೂ ಪದವಿಯ ಮಧ್ಯದಲ್ಲೇ ಎಕ್ಸಿಟ್, ಎಂಟ್ರಿಗೆ ಅನುಕೂಲ ಆಗುವಂತೆ ಕೋರ್ಸ್‍ಗಳ ಪಠ್ಯಕ್ರಮ ಸಿದ್ಧಪಡಿಸಿ ವಿನ್ಯಾಸಗೊಳಿಸಲಾಗಿದೆ ಎಂದು ಮಾಹಿತಿ ನೀಡಿದರು.

    ಹೊಸ ಕೋರ್ಸ್‍ಗಳ ವಿವರ: ನಾಲ್ಕು ವರ್ಷದ ಬಿ.ಎಸ್ಸಿ ಹಾಗೂ ಬಿ.ಎ ಆನರ್ಸ್ ಅಡಿಯಲ್ಲಿ ಬಯೋ ಇನ್ಫರ್ಮೇಷನ್ ಮತ್ತು ಬಯೋಟೆಕ್ನಾಲಜಿ, ಹ್ಯೂಮನ್ ಡಿಸೀಸ್ ಜೆನೆಟಿಕ್ಸ್, ಆಹಾರ ಮತ್ತು ಪೌಷ್ಠಿಕಾಂಶ, ಅರ್ಥಶಾಸ್ತ್ರ, ಘನತಾಜ್ಯ ನಿರ್ವಹಣೆ, ಫಿಲ್ಮ್ ಮೇಕಿಂಗ್, ಗ್ರಾಫಿಕ್ಸ್ ಮತ್ತು ಆ್ಯನಿಮೇಷನ್, ಕ್ರಿಮಿನಾಲಜಿ ಮತ್ತು ಫಾರೆನ್ಸಿಕ್ ಸೈನ್ಸ್, ವಿಪತ್ತು ನಿರ್ವಹಣೆ ಮತ್ತು ಮೆಡಿಸಿನಲ್ ಬಾಟನಿ ಪ್ರಾರಂಭಿಸಲಾಗುವುದು.

    ಎಂ.ಎ ವಿಭಾಗದಲ್ಲಿ ಟಿಬೆಟಿಯನ್ ಲಿಟರೇಚರ್, ಟಿಬೆಟಿಯನ್ ಲ್ಯಾಂಗ್ವೇಜ್, ಬುದ್ಧಿಸ್ಟ್ ಫಿಲಾಸಫಿ, ಟಿಬೆಟಿಯನ್ ಇತಿಹಾಸ, ಇಂಟರ್‍ಡಿಸಿಪ್ಲಿನರಿ ಇಂಡಿಯನ್ ಕ್ಲಾಸಿಕಲ್ ಮ್ಯೂಸಿಕ್ ರಿಸರ್ಚ್, ಅಡ್ವರ್ಟೈಸಿಂಗ್ ಆಂಡ್ ಪಬ್ಲಿಕ್ ರಿಸರ್ಚ್, ಮೀಡಿಯಾ ಮ್ಯಾನೇಜ್ಮೆಂಟ್ ಕೋರ್ಸ್‍ಗಳು ಆರಂಭವಾಗಲಿವೆ. ಇದನ್ನೂ ಓದಿ: ಬ್ಲೂಟೂತ್ ಬಳಸಿ ಕಾನ್‍ಸ್ಟೇಬಲ್ ಪರೀಕ್ಷೆ ಬರೆಯಲು ಯತ್ನ – ಸಿಐಡಿಗೆ ತನಿಖೆ ವಹಿಸಿದ ರಾಜ್ಯ ಗೃಹ ಇಲಾಖೆ

    ಸ್ನಾತಕೋತ್ತರ ಡಿಪ್ಲೊಮಾ ಕೋರ್ಸ್ ಅಡಿಯಲ್ಲಿ ಮ್ಯಾನುಸ್ಕ್ರಿಪ್ಟಾಲಜಿ ಮತ್ತು ಪಾಲಿಯೋಗ್ರಫಿ, ಇಂಟರ್‍ಡಿಸಿಪ್ಲಿನರಿ ಸ್ಟಡೀಸ್ ಇನ್ ಇಂಡಿಯನ್ ಕ್ಲಾಸಿಕಲ್ ಮ್ಯೂಸಿಕ್, ಆಡಿಟರಿ ವರ್ಬಲ್ ಥೆರಪಿ ಕೋರ್ಸ್, ಫಿಲ್ಮ್ ಆಕ್ಟಿಂಗ್, ಥಿಯೇಟರ್ ಆಟ್ರ್ಸ್, ಫಿಲ್ಮ್ ಮೇಕಿಂಗ್, ಕೃಷಿ ನಿರ್ವಹಣೆ, ಪ್ರೊಫೆಷನ್ ಡಿಪ್ಲೊಮಾ ವಿಭಾಗದಲ್ಲಿ ಭರತನಾಟ್ಯಂ, ಒಡಿಸ್ಸಿ, ಪ್ರಮಾಣಪತ್ರ ಕೋರ್ಸ್‍ನಲ್ಲಿ ರಿಸರ್ಚ್ ಮೆಥಡ್ ಇನ್ ಮ್ಯಾನುಸ್ಕ್ರಿಪ್ಟಾಲಜಿ ಮತ್ತು ಪಾಲಿಯೋಗ್ರಫಿ ಮತ್ತು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಬಿ.ಟೆಕ್ ವಿಭಾಗದಲ್ಲಿ ಕೃತಕ ಬುದ್ಧಿಮತ್ತೆ, ಸೈಬರ್ ಸೆಕ್ಯೂರಿಟಿ, ಸುಸ್ಥಿರ ಆರ್ಕಿಟೆಕ್ಚರ್, ಇಂಟರ್‍ನೆಟ್ ಆಫ್ ಥಿಂಗ್ಸ್ ಕೋರ್ಸ್‍ಗಳು ಶುರುವಾಗಲಿದೆ.

  • ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಡಿ ಕನ್ನಡ ಭಾಷೆಗೆ ಆದ್ಯತೆ – ಬೆಲ್ಲದ್

    ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಡಿ ಕನ್ನಡ ಭಾಷೆಗೆ ಆದ್ಯತೆ – ಬೆಲ್ಲದ್

    -ಹಿಂದಿನ ಸರ್ಕಾರ ಶಾಲೆಗಳನ್ನು ಇಂಗ್ಲೀಷ್ ಮಾಧ್ಯಮ ಮಾಡಿತ್ತು

    ಹುಬ್ಬಳ್ಳಿ: ಹಿಂದಿನ ಸರ್ಕಾರ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಇಂಗ್ಲೀಷ್ ಮಾಧ್ಯಮ ಮಾಡುವಂತೆ ನಿರ್ಣಯ ತಗೆದುಕೊಂಡಿತ್ತು, ಆದರೆ ನ್ಯಾಯಾಲಯ ಅದಕ್ಕೆ ತಡೆಹಿಡಿದಿತ್ತು. ಇದೀಗ ನೂತನವಾಗಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಬಂದಿದ್ದು, ಅದರಡಿ ಪ್ರತಿಯೊಂದು ರಾಜ್ಯದಲ್ಲಿ ಆಯಾ ಪ್ರಾಥಮಿಕ ಭಾಷೆಗೆ ಹೆಚ್ಚು ಒತ್ತು ನೀಡಲಾಗಿದೆ. ಅದರಂತೆ ನಮ್ಮ ರಾಜ್ಯದಲ್ಲಿ ಪ್ರಾಥಮಿಕ ಭಾಷೆಯಾಗಿ ಕನ್ನಡಕ್ಕೆ ಆದ್ಯತೆ ನೀಡಲಾಗಿದೆ ಎಂದು ಶಾಸಕ ಅರವಿಂದ್ ಬೆಲ್ಲದ್ ಹೇಳಿದ್ದಾರೆ.

    ನಗರದ ಶ್ರೀಸಿದ್ಧಾರೂಢ ಮಠದ ಆವರಣದಲ್ಲಿಂದು ಕನ್ನಡ ರಾಜ್ಯೋತ್ಸವ ಅಂಗವಾಗಿ ಶ್ರೀಭುವನೇಶ್ವರಿ ಮಾತೆಗೆ ಪೂಜೆ ಪುಷ್ಪಾರ್ಚನೆ ಸಲ್ಲಿಸಿ ನಂತರ ಮಾತನಾಡಿದ ಅವರು, ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಡಿ ಪ್ರಾಥಮಿಕ ಶಿಕ್ಷಣ ಸಂಪೂರ್ಣವಾಗಿ ಕನ್ನಡದ ಭಾಷೆ ಹಾಗೂ ಆಯಾ ರಾಜ್ಯದ ಭಾಷೆಯಲ್ಲಿಯೇ ಆಗುವುದು. ಇದರಿಂದ ನಮ್ಮ ದೇಶದ ಸಂಸ್ಕೃತಿ ಗಟ್ಟಿಯಾಗುತ್ತದೆ. ಮೂಲ ಭಾಷೆಗೆ ಗೌರವ ನೀಡಿದಂತಾಗುತ್ತದೆ. ಕರ್ನಾಟಕ ಹಾಗೂ ಕನ್ನಡ ಭಾಷೆ ಉದಯವಾಗಲು ಹುಬ್ಬಳ್ಳಿ ಧಾರವಾಡದ ಪಾತ್ರ ದೊಡ್ಡದಿದೆ ಎಂದರು.

    ಕನ್ನಡ ಏಕೀಕರಣಕ್ಕಾಗಿ ಕನ್ನಡ ಭಾಷೆಗಾಗಿ ಅದರಗುಂಚಿ ಶಂಕರರಾಯರು ಹೋರಾಟ ಮಾಡಿದ್ದರು. ಎಲ್ಲ ಹೋರಾಟಗಳಿಗೆ ಮುಂಚೂಣಿಯಲ್ಲಿ ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘವಿತ್ತು. ಈ ಮೊದಲು ಕರ್ನಾಟಕವು ಹೈದರಾಬಾದ್ ಕರ್ನಾಟಕ, ಮಂಗಳೂರು, ಗೋವಾ ಬಾಂಬೆ ಕರ್ನಾಟಕ ಹೀಗೆ ಹರಿದು ಹಂಚಿಹೋಗಿತ್ತು. ಇವೆಲ್ಲವೂ ಅಖಂಡವಾಗಬೇಕು, ಕನ್ನಡ ಭಾಷೆ ಮಾತನಾಡುವವರು ಒಂದೇ ಕಡೆ ಇರಬೇಕು, ಕರ್ನಾಟಕ ನಿವಾಸಿಗಳಾಗಬೇಕು ಎಂದು ಹೋರಾಟ ಮಾಡಿದವರು ಅದರಗುಂಚಿ ಶಂಕರರಾಯರು ಹಾಗೂ ಕರ್ನಾಟಕ ವಿದ್ಯಾವರ್ಧಕ ಸಂಘದ  ಹೋರಾಟಗಾರರು. ಮೈಸೂರು ಭಾಗದ ನಾಯಕರು ಅಖಂಡ ಕರ್ನಾಟಕ ಒಂದಾದರೇ ಪ್ರಾತಿನಿತ್ಯ ಹೆಚ್ಚಾಗುತ್ತದೆ ಎಂದು ಮೈಸೂರು ಕರ್ನಾಟಕ ಸೇರಿ ಒಂದಾಯಿತು. ಇದೆಲ್ಲವು ಕರ್ನಾಟಕ ಉದಯಕ್ಕೆ ಕಾರಣವಾಯಿತು. ಭಾಷೆ ಉಳಿದರೆ ಆ ಭಾಷೆಯ ಸಂಸ್ಕೃತಿ  ಉಳಿಯಲು ಸಾಧ್ಯವಾಗುತ್ತದೆ ಎಂದು ನುಡಿದರು. ಇದನ್ನೂ ಓದಿ: ಮರಣೋತ್ತರ ರಾಜ್ಯೋತ್ಸವ ನೀಡಲು ಅವಕಾಶವಿಲ್ಲ: ಸುನೀಲ್ ಕುಮಾರ್

    ಮುಖ್ಯ ಅತಿಥಿಯಾಗಿ ಹು-ಧಾ ಮಹಾನಗರ ಪಾಲಿಕೆ ಆಯುಕ್ತ ಡಾ.ಸುರೇಶ ಇಟ್ನಾಳ್ ಮಾತನಾಡಿ, ಕರ್ನಾಟಕ ಏಕೀಕರಣ ಸಂದರ್ಭದಲ್ಲಿ ಕನ್ನಡಪರ ಸಂಘಟನೆಗಳ ಪಾತ್ರ ದೊಡ್ಡದು, ಅದರಲ್ಲೂ ಧಾರವಾಡ ಕರ್ನಾಟಕ ವಿದ್ಯಾವರ್ಧಕ ಸಂಘದ ಹಾಗೂ ಸಂಘಟಣೆಗಾರರ ಪಾತ್ರವು ಹೆಚ್ಚಿದೆ. ನಗರದಲ್ಲಿ ನಾಮಫಲಕ ಬದಲಿಸುವ ಕೆಲಸ ಕಾರ್ಯೋನ್ಮುಖವಾಗಿದ್ದು, ಈಗಾಗಲೇ 320 ನಾಮಫಲಕಗಳನ್ನು ಬದಲಾವಣೆ ಮಾಡಲಾಗಿದೆ. ಇನ್ನುಳಿದ ಫಲಕಗಳನ್ನು ಶೀಘ್ರದಲ್ಲಿ ಬದಲಾವಣೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು.

    ಹುಡಾ ಅಧ್ಯಕ್ಷ ನಾಗೇಶ ಕಲಬುರ್ಗಿ ಮಾತನಾಡಿ, ಇಂದು ರಾಜ್ಯಾದ್ಯಂತ ಎಲ್ಲ ಕಡೆ ಕನ್ನಡ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಎಲ್ಲರಿಗೂ ಕನ್ನಡದ ಬಗ್ಗೆ ಅಭಿಮಾನ ಇರಬೇಕು. ಏಕೆಂದರೆ ಕನ್ನಡ ಅಳಿವು ಉಳಿವಿಗಾಗಿ ಕನ್ನಡ ಪರ ಸಂಘಟನೆಯು ದಿನನಿತ್ಯ ಹೋರಾಟ ಮಾಡುತ್ತಿದೆ. ಕನ್ನಡಕ್ಕೆ ದಕ್ಕೆಯಾದಾಗ ಹೋರಾಟ ನಡೆಸಿ ತಪ್ಪನ್ನು ತಿದ್ದುವ ಮೂಲಕ ಕನ್ನಡಪರ ಸಂಘಟನಕಾರರು ಅಭಿಮಾನವನ್ನು ತೋರುತ್ತ ಬಂದಿದ್ದಾರೆ. ಎಲ್ಲಿಯೋ ಇರು ಹೇಗೆಯೇ ಎಂದೆಂದಿಗೂ ನೀ ಕನ್ನಡವಾಗಿರು ಎಂದು ಡಾ. ರಾಜ್‍ಕುಮಾರ್, ಡಾ. ವಿಷ್ಣುವರ್ಧನ್ ಹಾಗೂ ಇನ್ನಿತರ ಕನ್ನಡ ಚಲನಚಿತ್ರ ನಟರು ಹಾಡಿನ ಮೂಲಕ ಕನ್ನಡ ಅಭಿಮಾನ ವ್ಯಕ್ತಪಡಿಸಿ, ಜನರಿಗೆ ಅರಿವು ಮೂಡಿಸುವಂತೆ ಮಾಡಿದ್ದಾರೆ. ನಮ್ಮ ನಾಡು ನುಡಿ ಉಳಿವಿಗಾಗಿ ನಾವು ಶ್ರಮಿಸಬೇಕು ಹಾಗೂ ಕನ್ನಡಕ್ಕೆ ಮೊದಲ ಆಧ್ಯತೆಯನ್ನು ನೀಡಬೇಕು. ನಮ್ಮ ಕನ್ನಡ ನಾಡು ಸಂಸ್ಕೃತಿಯನ್ನು ವಿದೇಶದವರು ಸಹ ಬೆಳೆಸುತ್ತಿದ್ದಾರೆ. ಕನ್ನಡ ಹಾಡುಗಳನ್ನು ಹಾಡಿ ಕುಣಿದು ಕುಪ್ಪಳಿಸಿ ಅಭಿಮಾನ ತೋರಿಸುತ್ತಾರೆ. ಅದಕ್ಕಾಗಿ ನಾವು ಕನ್ನಡವನ್ನು ಉಳಿಸಿ ಬೆಳೆಸಬೇಕಾಗಿದೆ ಎಂದರು. ಇದನ್ನೂ ಓದಿ: ನಾಲ್ವರ ಬಾಳಿಗೆ ಬೆಳಕಾದ ಅಪ್ಪು

    ಇದೆ ಸಂದರ್ಭದಲ್ಲಿ 2021 ನೇ ಸಾಲಿನ ಕನ್ನಡ ಭಾಷೆಯಲ್ಲಿ 125 ಕ್ಕೆ 125 ಅಂಕ ಪಡೆದ 36 ವಿಧ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆ ನೀಡಿ ಹಾಗೂ ಹುಬ್ಬಳ್ಳಿ ಮತ್ತು ಧಾರವಾಡ ವಿಭಾಗದಿಂದ ಪ್ರಬಂಧ ಸ್ಪರ್ಧೆಯಲ್ಲಿ ಆಯ್ಕೆಯಾದ 6 ವಿಜೇತರಿಗೆ ಸನ್ಮಾನ ಮಾಡಲಾಯಿತು. ಇದನ್ನೂ ಓದಿ: ನಮ್ಮನ್ನ ಎಂದೂ ಅವ್ರು ಕೆಲ್ಸದವರಂತೆ ನೋಡಿಲ್ಲ: ಕೇಶ ವಿನ್ಯಾಸಕಾರ ಕಾರ್ತಿಕ್ ಭಾವುಕ

    ಕಾರ್ಯಕ್ರಮದಲ್ಲಿ ಮೊಷ್ಲೋದೇವಿ ಮಂದಿರದ ಧರ್ಮಾಧಿಕಾರಿಗಳಾದ ಪರಮ ಪೂಜ್ಯ ದೇವಪ್ಪಜ್ಜನವರ, ಹೆಚ್ಚುವರಿ ಆಯುಕ್ತ ಎ.ಆರ್.ದೇಸಾಯಿ, ಪಾಲಿಕೆ ಪಿ.ಆರ್.ಒ ಎಸ್.ಸಿ ಬೇವೂರ ಸೇರಿದಂತೆ ಪಾಲಿಕೆ ನೂತನವಾಗಿ ಆಯ್ಕೆಯಾದ ಸರ್ವ ಸದಸ್ಯರು, ಪಾಲಿಕೆ ಅಧಿಕಾರಿಗಳು, ಕನ್ನಡಪರ ಸಂಘಟನೆಯವರು, ಪದಾಧಿಕಾರಿಗಳು ಹಾಗೂ ಇನ್ನಿತರರು ಉಪಸ್ಥಿತರಿದ್ದರು.

  • ಮಾರ್ಚ್ ಹೊತ್ತಿಗೆ ಇಡೀ ಶಿಕ್ಷಣ ವ್ಯವಸ್ಥೆ ಡಿಜಿಟಲ್ ರೂಪಾಂತರ: ಅಶ್ವಥ್ ನಾರಾಯಣ್

    ಮಾರ್ಚ್ ಹೊತ್ತಿಗೆ ಇಡೀ ಶಿಕ್ಷಣ ವ್ಯವಸ್ಥೆ ಡಿಜಿಟಲ್ ರೂಪಾಂತರ: ಅಶ್ವಥ್ ನಾರಾಯಣ್

    -ಶಿಕ್ಷಣದಲ್ಲಿ ಉತ್ಕೃಷ್ಟತೆ ಸಾಧಿಸದೆ ನಮಗೆ ಉಳಿಗಾಲವಿಲ್ಲ

    ಬಳ್ಳಾರಿ: ಶಿಕ್ಷಣ ಕ್ಷೇತ್ರದಲ್ಲಿ ತಂತ್ರಜ್ಞಾನವನ್ನು ಅನ್ವಯಿಸುವ ಮೂಲಕ ಕ್ರಾಂತಿಕಾರಕ ಬದಲಾವಣೆಗಳನ್ನು ತರುತ್ತಿದ್ದು, ಮುಂಬರುವ ಮಾರ್ಚ್ ಹೊತ್ತಿಗೆ ರಾಜ್ಯದ ಇಡೀ ಶಿಕ್ಷಣ ವ್ಯವಸ್ಥೆಯನ್ನು ಡಿಜಿಟಲ್ ಆಗಿ ರೂಪಾಂತರಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್ ಅಶ್ವಥ್ ನಾರಾಯಣ್  ಹೇಳಿದ್ದಾರೆ.

    ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ ಮತ್ತು ನಾಸ್ಕಾಂ ನಡುವಿನ ಒಡಂಬಡಿಕೆಗೆ ಮತ್ತು ಎನ್‍ಇಪಿ ವಿಚಾರ ಸಂಕಿರ್ಣವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಣದಲ್ಲಿ ಡಿಜಿಟಲಿಕರಣದಿಂದಾಗಿ ವಿದ್ಯಾರ್ಥಿಗಳು ಮತ್ತು ಬೋಧಕರಿಗೆ ಸ್ಕಿಲ್ಸ್ ಪಾಸ್ ಪೋರ್ಟ್, ಸ್ಕಿಲ್ಸ್ ವ್ಯಾಲೆಟ್ ಮತ್ತು ಬ್ಯಾಡ್ಜಸ್ ನಂತಹ ಜಾಗತಿಕ ಗುಣಮಟ್ಟದ ಕೌಶಲ್ಯಗಳು ಉಚಿತವಾಗಿ ಸಿಗಲಿವೆ ಎಂದರು. ಇದನ್ನೂ ಓದಿ: ಭಾರತೀಯ ಮಕ್ಕಳ ಸರ್ವಾಂಗಿಣ ಅಭಿವೃದ್ಧಿಗಾಗಿ ನೂತನ ಶಿಕ್ಷಣ ನೀತಿ ಜಾರಿ: ಬೊಮ್ಮಾಯಿ

    ಶಿಕ್ಷಣದಲ್ಲಿ ಉತ್ಕೃಷ್ಟತೆ ಸಾಧಿಸದೆ ನಮಗೆ ಉಳಿಗಾಲವಿಲ್ಲ. ಇದನ್ನು ಗಮನದಲ್ಲಿಟ್ಟುಕೊಂಡು, ನಾಸ್ಕಾಂನ `ಫ್ಯೂಚರ್ ಸ್ಕಿಲ್ಸ್ ಪ್ರೈಮ್’ ವೇದಿಕೆ ಸೇರಿದಂತೆ ಇತರ ಮೂಲಗಳಿಂದ ಈ ಶೈಕ್ಷಣಿಕ ವರ್ಷದಿಂದಲೇ 10 ಸಾವಿರ ಶಿಕ್ಷಕರಿಗೆ ಡಿಜಿಟಲ್ ತರಬೇತಿ ಕೊಡಲಾಗುವುದು. ಇನ್ಫೋಸಿಸ್ ಸಂಸ್ಥೆ ಮತ್ತು ಧಾರವಾಡದ ಉನ್ನತ ಶಿಕ್ಷಣ ಅಕಾಡೆಮಿ ಮೂಲಕವೂ 3 ಸಾವಿರ ಶಿಕ್ಷಕರಿಗೆ ಇಂತಹ ವಿಶ್ವ ಗುಣಮಟ್ಟದ ತರಬೇತಿಯನ್ನು ಒದಗಿಸಲಾಗುವುದು ಎಂದು ಮಾಹಿತಿ ಹಂಚಿಕೊಂಡರು.

    ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಕೇವಲ ಎರಡು ವರ್ಷಗಳಲ್ಲಿ 3.50 ಲಕ್ಷ ಕಲಿಕಾ ಸಾಮಗ್ರಿ ಸಿದ್ಧಪಡಿಸಲಾಗಿದೆ. ಹೀಗಾಗಿ ವಿದ್ಯಾರ್ಥಿಗಳು ಎಲ್ಲಿದ್ದರೂ ನಿರಂತರವಾಗಿ ಕಲಿಯಬಹುದಾಗಿದೆ. ಬಹಳ ಉತ್ತಮವಾದ ಕಲಿಕೆಯ ಮಾದರಿಯನ್ನು ಪ್ರಪ್ರಥಮವಾಗಿ ಅಳವಡಿಸಿಕೊಂಡಿರುವ ರಾಜ್ಯದತ್ತ ಇಡೀ ಭಾರತವೇ ತಿರುಗಿ ನೋಡುತ್ತಿದೆ ಎಂದು ಸಚಿವರು ನುಡಿದರು. ಇದನ್ನೂ ಓದಿ: ಹೊಸ ಶಿಕ್ಷಣ ನೀತಿಯಲ್ಲಿ ಕಾಂಬಿನೇಶನ್‍ನಿಂದ ಕೋರ್ಸ್, ಸಬ್ಜೆಕ್ಟ್‌ಗೆ ಬದಲಾಯಿಸಲಾಗಿದೆ: ಅಶ್ವಥ್ ನಾರಾಯಣ್

    ಕರ್ನಾಟಕವೇ ಇವತ್ತು ದೇಶದ ಜ್ಞಾನ ಮತ್ತು ಆರ್ಥಿಕ ರಾಜಧಾನಿಯಾಗಿದ್ದು, ಅಮೆರಿಕದಂತೆ ಉಜ್ವಲ ಅವಕಾಶಗಳಿವೆ. ಈ ವಿಚಾರದಲ್ಲಿ ನಾವು ಮುಂಬೈಯನ್ನು ಹಿಂದಿಕ್ಕಿದ್ದೇವೆ. ಸಂಶೋಧನೆ ಮತ್ತು ಆವಿಷ್ಕಾರಗಳ ತೊಟ್ಟಿಲಾಗಿರುವ ರಾಜ್ಯದ ಶಿಕ್ಷಣ ಕ್ಷೇತ್ರದತ್ತ ಈಗ ಇಡೀ ವಿಶ್ವವೇ ನೋಡುತ್ತಿದೆ ಎಂದು ಅವರು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಆನ್‍ಲೈನ್ ಪಾಠ ಕೇಳಿ ಕುಗ್ಗಿದ್ದ ಮಕ್ಕಳಿಗೆ ವಿಶೇಷ ತರಬೇತಿ ನೀಡಿದ ಸುರಾನ ವಿದ್ಯಾಲಯ

    ಎನ್‍ಇಪಿ ಗುರಿಯಂತೆ ಪ್ರತಿಯೊಬ್ಬ ಶಿಕ್ಷಿಕನಿಗೂ ಉದ್ಯೋಗ ಸಿಗಬೇಕು, ಇಲ್ಲವೇ ಉದ್ಯೋಗದಾತನಾಗಬೇಕು. ಈ ನಿಟ್ಟಿನಲ್ಲಿ ಕಲಿಕೆ, ಪ್ರಾಯೋಗಿಕತೆ, ನಾಯಕತ್ವ, ಕೌಶಲ್ಯ ಮತ್ತು ಪ್ರಾಜೆಕ್ಟ್ ಆಧರಿತ ಕಲಿಕೆಯನ್ನು ಜಾರಿಗೆ ತರಲಾಗಿದೆ. ಜೊತೆಗೆ ವಿದ್ಯಾರ್ಥಿಗಳ ಆಂತರಿಕ ಮೌಲ್ಯಮಾಪನ ಆಯಾಯ ತರಗತಿಗಳಲ್ಲೇ ನಡೆಯಲಿದೆ ಎಂದು ವಿವರಿಸಿದರು.

  • ಭಾರತೀಯ ಮಕ್ಕಳ ಸರ್ವಾಂಗಿಣ ಅಭಿವೃದ್ಧಿಗಾಗಿ ನೂತನ ಶಿಕ್ಷಣ ನೀತಿ ಜಾರಿ: ಬೊಮ್ಮಾಯಿ

    ಭಾರತೀಯ ಮಕ್ಕಳ ಸರ್ವಾಂಗಿಣ ಅಭಿವೃದ್ಧಿಗಾಗಿ ನೂತನ ಶಿಕ್ಷಣ ನೀತಿ ಜಾರಿ: ಬೊಮ್ಮಾಯಿ

    ಹುಬ್ಬಳ್ಳಿ: ಭಾರತೀಯ ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗಾಗಿ ನೂತನ ಶಿಕ್ಷಣ ನೀತಿ ಜಾರಿಗೊಳಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

    ಜಿಲ್ಲೆಯ ಪ್ರವಾಸ ಕೈಗೊಂಡಿರುವ ಅವರು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ನೂತನ ಶಿಕ್ಷಣ ನೀತಿ ಕುರಿತು ಶಿಕ್ಷಣ ತಜ್ಞರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ವಲಯದ ಮೂರು ವರ್ಷಗಳ ಕಾಲ ಚರ್ಚಿಸಿ ಸಮಗ್ರವಾಗಿ ರೂಪಿಸಲಾಗಿದೆ. 21 ಶತಮಾನಕ್ಕೆ ತಕ್ಕಂತೆ, ದೇಶದ ಗ್ರಾಮೀಣ ಭಾಗದ ವಿದ್ಯಾರ್ಥಿಗಳನ್ನು ಅಂತರಾಷ್ಟ್ರೀಯ ಮಟ್ಟದ ಪೈಪೋಟಿಗೆ ಸಿದ್ದಪಡಿಸುವುದು, ಕೌಶಲ್ಯವನ್ನು ಹೆಚ್ಚಿಸವುದು ಶಿಕ್ಷಣ ನೀತಿಯ ಉದ್ದೇಶವಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಗದಗಿಗೆ ಸಿಎಂ ಬಾರ್ತಾರೆಂದು ತರಾತುರಿಯಲ್ಲಿ ರಸ್ತೆ ದುರಸ್ತಿ

    ಪ್ರಾಥಮಿಕ ಹಾಗೂ ಉನ್ನತ ಶಿಕ್ಷಣ ವ್ಯವಸ್ಥೆಯಲ್ಲಿ ಅಮೂಲಾಗ್ರ ಬದಲಾವಣೆ ತರುವ ಪ್ರಯತ್ನವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಕೈಗೊಂಡಿದ್ದಾರೆ. ಭಾರತೀಯರಿಂದ ಭಾರತೀಯ ಮಕ್ಕಳಿಗಾಗಿ ರೂಪಿಸಿರುವ ಶಿಕ್ಷಣ ವ್ಯವಸ್ಥೆ ಇದಾಗಿದೆ ಎಂದರು.

    ಕೋವಿಡ್ ಲಾಕ್‍ಡೌನ್ ತೆರವಿನ ನಂತರ, ಜನರು ಸಾಮಾನ್ಯ ಜೀವನಕ್ಕೆ ಮರಳುತ್ತಿದ್ದಾರೆ. ವ್ಯಾಪಾರ ವಹಿವಾಟುಗಳು ಸಹಜವಾಗಿ ನಡೆಯುತ್ತಿವೆ ಈ ಸಂದರ್ಭದಲ್ಲಿ ಬಂದ್ ಕರೆ ನೀಡುವುದು ಸರಿಯಲ್ಲ. ಪಂಚಮಸಾಲಿ ಮೀಸಲಾತಿಗೆ ಕುರಿತು ಸದನದಲ್ಲಿ ಉತ್ತರಿಸಿದ್ದೇನೆ ಎಂದರು.

    ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ, ಬೃಹತ್ ಮಧ್ಯಮ ಕೈಗಾರಿಕೆ ಸಚಿವ ಮುರಗೇಶ್ ನಿರಾಣಿ, ಜಿಲ್ಲಾಧಿಕಾರಿ ನಿತೇಶ್ ಪಾಟೀಲ್, ಪೊಲೀಸ್ ಆಯುಕ್ತ ಲಾಭುರಾಮ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.