Tag: National Film Awards

  • ಖ್ಯಾತ ಕೋರಿಯೋಗ್ರಾಫರ್ ಜಾನಿ ಮಾಸ್ಟರ್‌ಗೆ ಕೇಂದ್ರ ಸರ್ಕಾರ ಬಿಗ್ ಶಾಕ್ – ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ರದ್ದು

    ಖ್ಯಾತ ಕೋರಿಯೋಗ್ರಾಫರ್ ಜಾನಿ ಮಾಸ್ಟರ್‌ಗೆ ಕೇಂದ್ರ ಸರ್ಕಾರ ಬಿಗ್ ಶಾಕ್ – ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ರದ್ದು

    ಖ್ಯಾತ ಕೋರಿಯೋಗ್ರಾಫರ್ ಜಾನಿ ಮಾಸ್ಟರ್‌ಗೆ (Jani Master) ಕೇಂದ್ರ ಸರ್ಕಾರ ದೊಡ್ಡ ಶಾಕ್ ನೀಡಿದೆ. ಅವರಿಗೆ ನೀಡಲಾಗಿದ್ದ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು (National Film Awards) ರದ್ದುಗೊಳಿಸಿದೆ.

    ಇತ್ತೀಚೆಗೆ ಜಾನಿ ಮಾಸ್ಟರ್‌ ವಿರುದ್ಧ ತಮ್ಮ ಸಹಾಯಕ ನೃತ್ಯ ಸಂಯೋಜಕಿ ಲೈಂಗಿಕ ಕಿರುಕುಳ ನೀಡಿದ್ದಾರೆಂಬ ಆರೋಪಗಳು ಬಂದ ಹಿನ್ನೆಲೆಯಲ್ಲಿ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಈ ನಿರ್ಧಾರ ತೆಗೆದುಕೊಂಡಿದೆ. ಅವರಿಗೆ ರಾಷ್ಟ್ರ ಪ್ರಶಸ್ತಿಯನ್ನು ರದ್ದುಗೊಳಿಸಲಾಗಿದೆ ಎಂದು ಘೋಷಿಸಿದೆ. ಇದನ್ನೂ ಓದಿ: ಜಾನಿ ಮಾಸ್ಟರ್ ಬಂಧನ: ಠಾಣೆ ಮುಂದೆ ಪತ್ನಿ ಹೈಡ್ರಾಮಾ

    2022ನೇ ಸಾಲಿನ ರಾಷ್ಟ್ರೀಯ ಪ್ರಶಸ್ತಿಗಳನ್ನು ಆಗಸ್ಟ್ ತಿಂಗಳಿನಲ್ಲಿ ಪ್ರಕಟಿಸಲಾಗಿದೆ ಎಂದು ತಿಳಿದುಬಂದಿದೆ. ತಮಿಳಿನ `ತಿರುಚಿತ್ರಂಬಲಂʼ ಚಿತ್ರದ ʻಮೇಘಂ ಕರುಕಥʼ ಗೀತೆಗಾಗಿ ಜಾನಿ ಮಾಸ್ಟರ್ ಮತ್ತು ಸತೀಶ್ ಮಾಸ್ಟರ್ ಅವರಿಗೆ ಉತ್ತಮ ನೃತ್ಯ ಸಂಯೋಜನೆ ವಿಭಾಗದಲ್ಲಿ ಜಂಟಿಯಾಗಿ ರಾಷ್ಟ್ರ ಪ್ರಶಸ್ತಿ ಘೋಷಿಸಲಾಗಿತ್ತು. ಈ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಅಕ್ಟೋಬರ್‌ 8 ರಂದು ದೆಹಲಿಯಲ್ಲಿ ಆಯೋಜನೆಯಾಗಿದೆ. ರಾಷ್ಟ್ರಪತಿಗಳು ಪ್ರಶಸ್ತಿ ವಿತರಣೆ ಮಾಡಲಿದ್ದಾರೆ.

    ಅಕ್ಟೋಬರ್‌ 8ರ ಸಮಾರಂಭಕ್ಕಾಗಿ ಎಲ್ಲಾ ರೀತಿಯ ಸಿದ್ಧತೆ ನಡೆಯುತ್ತಿವೆ. ಈ ನಡುವೆ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಜಾನಿ ಮಾಸ್ಟರ್ ಜೈಲಿನಲ್ಲಿದ್ದಾರೆ. ಪೋಕ್ಸೊ ಕಾಯ್ದೆಯಡಿ ಅವರ ಮೇಲೆ ಪ್ರಕರಣ ದಾಖಲಾಗಿದೆ. ಇದು ಬಹಳ ಗಂಭೀರವಾದ ಪ್ರಕರಣ ಎಂದು ಸರ್ಕಾರ ಮತ್ತು ನ್ಯಾಯಾಲಯ ಪರಿಗಣಿಸಿ ರಾಷ್ಟ್ರ ಪ್ರಶಸ್ತಿಯನ್ನು ರದ್ದುಗೊಳಿಸಿದೆ. ಇದನ್ನೂ ಓದಿ: ಲೈಂಗಿಕ ದೌರ್ಜನ್ಯ ಆರೋಪ – ಖ್ಯಾತ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ಅರೆಸ್ಟ್‌

  • 68ನೇ ರಾಷ್ಟ್ರ ಪ್ರಶಸ್ತಿ ಪಡೆದ ಸ್ಯಾಂಡಲ್‌ವುಡ್ ತಾರೆಯರು

    68ನೇ ರಾಷ್ಟ್ರ ಪ್ರಶಸ್ತಿ ಪಡೆದ ಸ್ಯಾಂಡಲ್‌ವುಡ್ ತಾರೆಯರು

    68ನೇ ಸಾಲಿನ ರಾಷ್ಟ್ರ ಪ್ರಶಸ್ತಿ (68th National Film Awards) ಪಡೆಯಲಿರುವ ಪ್ರತಿಭಾನ್ವಿತರ ಪಟ್ಟಿಯನ್ನ ಈ ಹಿಂದೆಯೇ ಬಿಡುಗಡೆ ಮಾಡಲಾಗಿತ್ತು. ನಿನ್ನೆ (ಸೆ.30) ನವದೆಹಲಿಯ ವಿಗ್ಯಾನ್ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ವಿಜೇತರಿಗೆ ರಾಷ್ಟ್ರ ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ನಮ್ಮ ಕನ್ನಡದ ಪ್ರತಿಭಾನ್ವಿತ ಕಲಾವಿದರು ಕೂಡ ರಾಷ್ಟ್ರಪ್ರಶಸ್ತಿಗೆ ಭಾಜನರಾಗಿದ್ದಾರೆ.

    68ನೇ ಚಲನಚಿತ್ರ ರಾಷ್ಟ್ರ ಪ್ರಶಸ್ತಿ ಇಂದು ನವದೆಹಲಿಯಲ್ಲಿ (New Dehli) ಪ್ರದಾನ ಮಾಡಲಾಯಿತು. ಭಿನ್ನ ಕಥಾಹಂದರ ಹೊಂದಿರುವ ಕನ್ನಡದ `ಡೊಳ್ಳು'(Dollu)  ಚಿತ್ರಕ್ಕಾಗಿ ಪವನ್ ಒಡೆಯರ್ ಮತ್ತು ಸಾಗರ್ ಪುರಾಣಿಕ್, ಉತ್ತಮ ಸಿನಿಮಾಗಾಗಿ `ತಲೆದಂಡ’ (Thaledanda Film) ಚಿತ್ರ, ಸಾಂಸ್ಕೃತಿಕ ವಿಭಾಗದಲ್ಲಿ ಗಿರೀಶ್ ಕಾಸರವಳ್ಳಿ ನಿರ್ದೇಶನದ `ನಾದದ ನವನೀತ’ ಸಿನಿಮಾಗಳಿಗೆ ಪ್ರಶಸ್ತಿ ನೀಡಲಾಗಿದೆ. ಇದನ್ನೂ ಓದಿ:ಐಶ್ವರ್ಯ ಪಿಸ್ಸೆ ನಂತರ ದೀಪಿಕಾ ದಾಸ್ ಅಂದ್ರೆ ನನಗಿಷ್ಟ ಎಂದ ಸೈಕ್ ನವಾಜ್

    ಅತ್ಯುತ್ತಮ ಚಲನಚಿತ್ರ ಪ್ರಶಸ್ತಿಯನ್ನ ತಮಿಳು ಚಿತ್ರ `ಸೂರರೈ ಪೋಟ್ರು’ (Sorarai Potru) ಲಭಿಸಿದೆ. ಇನ್ನು ಬಾಲಿವುಡ್ ನಟ ಅಜಯ್ ದೇವಗನ್ (Ajay Devagun), ಕಾಲಿವುಡ್ ನಟ ಸೂರ್ಯ ಅವರಿಗೆ ಅತ್ಯುತ್ತಮ ನಟ ಪ್ರಶಸ್ತಿ ನೀಡಿ ಗೌರವಿಸಲಾಯ್ತು. `ಸೂರರೈ ಪೋಟ್ರು’ ಚಿತ್ರದ ನಟನೆಗಾಗಿ ಅಪರ್ಣಾ ಬಾಲಮುರಳಿ ಅವರಿಗೆ ಅತ್ಯುತ್ತಮ ನಟಿ ಪ್ರಶಸ್ತಿ ನೀಡಿದ್ದಾರೆ. ಸಂಗೀತ ಸಂಯೋಜಕ-ಚಲನಚಿತ್ರ ನಿರ್ಮಾಪಕ ವಿಶಾಲ್ ಭಾರದ್ವಾಜ್ ಅವರು `1232 ಕೆಎಂ’ ಸಾಕ್ಷ್ಯಚಿತ್ರದಲ್ಲಿ `ಮರೇಂಗೆ ತೋ ವಹಿನ್ ಜಾ ಕರ್’ ಹಾಡಿಗಾಗಿ ಅತ್ಯುತ್ತಮ ಸಂಗೀತ ನಿರ್ದೇಶನಕ್ಕಾಗಿ ರಾಷ್ಟ್ರೀಯ ಪ್ರಶಸ್ತಿಯನ್ನ ಪಡೆದರು.

    68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪಟ್ಟಿ ಹೀಗಿದೆ:

    ಅತ್ಯುತ್ತಮ ಪರಿಸರ ಸಂರಕ್ಷಣಾ ಚಿತ್ರ: ತಲೆದಂಡ (ಕನ್ನಡ)

    ವಿಶಿಷ್ಟ ಕಥಾಹಂದರ ಸಿನಿಮಾ: ಡೊಳ್ಳು (ಕನ್ನಡ)

    ಸಾಂಸ್ಕೃತಿಕ ವಿಭಾಗದ ಸಿನಿಮಾ: ನಾದದ ನವನೀತ (ಕನ್ನಡ)

    ಅತ್ಯುತ್ತಮ ನಟ: ಅಜಯ್ ದೇವಗನ್ ಮತ್ತು ಸೂರ್ಯ

    ಅತ್ಯುತ್ತಮ ನಟಿ: ಅಪರ್ಣಾ ಬಾಲಮುರಳಿ

    ಅತ್ಯುತ್ತಮ ಕನ್ನಡ ಸಿನಿಮಾ: ಡೊಳ್ಳು

    ಅತ್ಯುತ್ತಮ ಕಥಾಚಿತ್ರ: ಸೂರರೈ ಪೋಟ್ರು

    ಅತ್ಯುತ್ತಮ ಜನಪ್ರಿಯ ಚಿತ್ರ: ತಾನಾಜಿ

    ಅತ್ಯುತ್ತಮ ನಿರ್ದೇಶಕ: ಸಚ್ಚಿದಾನಂದನ್

    ಅತ್ಯುತ್ತಮ ಸಿನಿಮಾಸ್ನೇಹಿ ರಾಜ್ಯ: ಮಧ್ಯ ಪ್ರದೇಶ

    ಅತ್ಯುತ್ತಮ ಆಡಿಯೋಗ್ರಫಿ: ಡೊಳ್ಳು ಕನ್ನಡ ಸಿನಿಮಾ

    ಅತ್ಯುತ್ತಮ ಚಿತ್ರಕಥೆ: ಶಾಲಿನಿ ಉಷಾ ನಾಯರ್, ಸುಧಾ ಕೊಂಗರು (ಸೂರರೈ ಪೋಟ್ರು)

    ಅತ್ಯುತ್ತಮ ಹಿನ್ನೆಲೆ ಗಾಯಕಿ: ನಂಚಮ್ಮ (ಅಯ್ಯಪ್ಪನುಂ ಕೋಶಿಯುಂ)

    ಅತ್ಯುತ್ತಮ ಹಿನ್ನೆಲೆ ಗಾಯಕ: ರಾಹುಲ್ ದೇಶಪಾಂಡೆ (ಮಿ ವಸಂತ್ ರಾವ್)

    ಅತ್ಯುತ್ತಮ ಮಕ್ಕಳ ಸಿನಿಮಾ: ಸುಮಿ (ಮರಾಠಿ)

    Live Tv
    [brid partner=56869869 player=32851 video=960834 autoplay=true]

  • ಕಂಗನಾ, ಧನುಶ್, ಮನೋಜ್ ಬಾಜ್‍ಪೇಯಿ ರಾಷ್ಟ್ರೀಯ ಚಲನ ಚಿತ್ರ ಪ್ರಶಸ್ತಿ

    ಕಂಗನಾ, ಧನುಶ್, ಮನೋಜ್ ಬಾಜ್‍ಪೇಯಿ ರಾಷ್ಟ್ರೀಯ ಚಲನ ಚಿತ್ರ ಪ್ರಶಸ್ತಿ

    ನವದೆಹಲಿ: 67 ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆಯಾಗಿದ್ದು ನಿತೀಶ್ ತಿವಾರಿ ನಿರ್ದೇಶನದ ಹಿಂದಿಯ ಚಿಚೊರೇ ಸಿನಿಮಾಗೆ ಅತ್ಯುತ್ತಮ ಸಿನಿಮಾ ಪ್ರಶಸ್ತಿ ಸಿಕ್ಕಿದೆ.

    2019ರಲ್ಲಿ ಬಿಡುಗಡೆಯಾದ ಸಿನಿಮಾಗಳನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಿದ್ದು, ‘ಮಣಿಕರ್ಣಿಕಾ’ ಮತ್ತು ‘ಪಂಗಾ’ ಸಿನಿಮಾದ ನಟನೆಗಾಗಿ ಕಂಗನಾಗೆ ಅತ್ಯುತ್ತಮ ನಟಿ ಪ್ರಶಸ್ತಿ ಸಿಕ್ಕಿದರೆ ‘ಭೋಂಸ್ಲೆ’ ಸಿನಿಮಾಕ್ಕೆ ಮನೋಜ್ ಬಾಜ್‍ಪೇಯಿ ಮತ್ತು ‘ಅಸುರನ್’ ಸಿನಿಮಾಕ್ಕೆ ಧನುಷ್‍ ಅವರಿಗೆ  ಅತ್ಯುತ್ತಮ ನಟ ಪ್ರಶಸ್ತಿ ಸಿಕ್ಕಿದೆ.

    ರಕ್ಷಿತ್‌ ಶೆಟ್ಟಿ ಅಭಿನಯದ ಅವನೇ ಶ್ರೀಮನ್ನಾರಾಯಣ ಚಿತ್ರದ ಸಾಹಸ ನಿರ್ದೇಶನಕ್ಕೆ ರಾಷ್ಟ್ರ ಪ್ರಶಸ್ತಿ ಒಲಿದಿದೆ. ವಿಕ್ರಂ ಮೊರ್‌ ಅವರು ಸಾಹಸ ನಿರ್ದೇಶನ ಮಾಡಿದ್ದರು.

    ಮನೋಜ್ ಕುಮಾರ್ ನಿರ್ದೇಶನದ ‘ಅಕ್ಷಿ’ಗೆ ಕನ್ನಡ ಅತ್ಯುತ್ತಮ ಸಿನಿಮಾ ಪ್ರಶಸ್ತಿ ಲಭಿಸಿದೆ. ತುಳು ಭಾಷೆಯಲ್ಲಿ ಪ್ರೀತಂ ಶೆಟ್ಟಿ ನಿರ್ದೇಶನದ ‘ಪಿಂಗಾರ’ ಸಿನಿಮಾಗೆ ಸಿಕ್ಕಿದೆ.

    ಸಿನಿಮಾಗೆ ಸಂಬಂಧಿಸಿದ ಪುಸ್ತಕ ವಿಭಾಗದಲ್ಲಿ ಪಿ.ಆರ್. ರಾಮದಾಸ್ ನಾಯ್ಡು ಅವರು ಕನ್ನಡದಲ್ಲಿ ಬರೆದ ‘ಜಾಗತಿಕ ಸಿನಿಮಾ ವಿಕಾಸ-ಪ್ರಭಾವ’ ಕೃತಿಗೆ ಲಭಿಸಿದೆ.

    ಫೀಚರ್-ಅಲ್ಲದ ಚಲನಚಿತ್ರಗಳಿಗಾಗಿ ಅತ್ಯುತ್ತಮ ನಿರೂಪಣೆ  ಪ್ರಶಸ್ತಿ ಸರ್ ಡೇವಿಡ್ ಅಟೆನ್‍ಬರೋ ಅವರ ‘ವೈಲ್ಡ್ ಕರ್ನಾಟಕ’ಕ್ಕೆ (ಇಂಗ್ಲಿಷ್) ಸಿಕ್ಕಿದೆ.

  • 13 ವರ್ಷದ ನಂತ್ರ ಮತ್ತೊಮ್ಮೆ ರಾಷ್ಟ್ರಪ್ರಶಸ್ತಿ ಸಿಕ್ಕಿದ್ದು ಸಂತಸ ತಂದಿದೆ: ತಾರಾ

    13 ವರ್ಷದ ನಂತ್ರ ಮತ್ತೊಮ್ಮೆ ರಾಷ್ಟ್ರಪ್ರಶಸ್ತಿ ಸಿಕ್ಕಿದ್ದು ಸಂತಸ ತಂದಿದೆ: ತಾರಾ

    ಬೆಂಗಳೂರು: 65ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟವಾಗಿದ್ದು, ನಟಿ ತಾರಾ ಅಭಿನಯದ ‘ಹೆಬ್ಬೆಟ್ಟು ರಾಮಕ್ಕ’ ಚಿತ್ರಕ್ಕೆ ಅತ್ಯುತ್ತಮ ಕನ್ನಡ ಪ್ರಾದೇಶಿಕ ಚಿತ್ರ ಪ್ರಶಸ್ತಿ ಸಿಕ್ಕಿದೆ. ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ ಸಿಕ್ಕಿರೋದಕ್ಕೆ ನಟಿ ತಾರಾ ಸಂತಸ ವ್ಯಕ್ತಪಡಿಸಿದ್ದಾರೆ.

    ಬೆಂಗಳೂರಿನಲ್ಲಿ ಮಾತನಾಡಿದ ನಟಿ ತಾರಾ, ರಾಷ್ಟ್ರ ಪ್ರಶಸ್ತಿ ಸಿಕ್ಕಿದ್ದು ನನಗೆ ಖುಷಿ ತಂದಿದೆ. ನಾನು ನಟಿಸಿದ ಸಾಕಷ್ಟು ಚಿತ್ರಗಳಿಗೆ ರಾಷ್ಟ್ರ ಪ್ರಶಸ್ತಿ ಸಿಕ್ಕಿದೆ. ಈಗ ಇದು ಕೂಡ ಸೇರ್ಪಡೆ ಆಗಿದೆ. ಹಿಂದೆ ಹಸೀನಾ ಚಿತ್ರಕ್ಕೆ ನನಗೆ ರಾಷ್ಟ್ರ ಪ್ರಶಸ್ತಿ ಸಿಕ್ಕಿತ್ತು. ಈಗ 13 ವರ್ಷದ ನಂತರ ನಾನು ಅಭಿನಯಿಸಿದ ಚಿತ್ರಕ್ಕೆ ರಾಷ್ಟ್ರಪ್ರಶಸ್ತಿ ಸಿಕ್ಕಿರುವುದು ಖುಷಿಯಾಗಿದೆ ಎಂದು ಹೇಳಿದರು.

    ಇಂದು 11.30ಕ್ಕೆ ನವದೆಹಲಿಯ ಶಾಸ್ತ್ರಿ ಭವನದಲ್ಲಿ ಶೇಖರ್ ಕಪೂರ್ ಸಾರಥ್ಯದ 10 ಜನರ ತಂಡದ ಭಾರತೀಯ ಚಿತ್ರರಂಗದ ವಿವಿಧ ಭಾಷೆಯ ಚಿತ್ರಗಳಿಗೆ ಪ್ರಶಸ್ತಿಯನ್ನು ಘೋಷಿಸಿದರು. ‘ಹೆಬ್ಬೆಟ್ಟು ರಾಮಕ್ಕ’ ಚಿತ್ರದಲ್ಲಿ ನಟಿ ತಾರಾ ಜೊತೆ ಡೈನಾಮಿಕ್ ಸ್ಟಾರ್ ದೇವರಾಜ್ ಕೂಡ ನಟಿಸಿದ್ದಾರೆ. ಈ ಚಿತ್ರವನ್ನು ಎನ್.ಆರ್ ನಂಜೇಗೌಡ ನಿರ್ದೇಶನ ಮಾಡಿದ್ದಾರೆ.

    ಹೆಬ್ಬೆಟ್ಟು ರಾಮಕ್ಕ ಚಿತ್ರ ಮಹಿಳಾ ಪ್ರಧಾನ ಚಿತ್ರವಾಗಿದ್ದು, ಬೆಂಗಳೂರು ಹಾಗೂ ಚನ್ನಪಟ್ಟಣದಲ್ಲಿ ಶೂಟಿಂಗ್ ಮಾಡಲಾಗಿತ್ತು. ಈ ಚಿತ್ರಕ್ಕೆ ಎಸ್.ಎ ಪುಟ್ಟರಾಜು ನಿರ್ಮಿಸಿದ್ದರು. ಈ ಚಿತ್ರಕ್ಕೆ ಪೂರ್ಣಚಂದ್ರ ತೇಜಸ್ವಿ ಸಂಗೀತ ನೀಡಿದ್ದು, ಬಿ. ಸತೀಶ್ ಕ್ಯಾಮೆರಾಮೆನ್ ಆಗಿ ಕಾರ್ಯ ನಿರ್ವಹಿಸಿದ್ದರು. ನಟಿ ತಾರಾ ಅಭಿನಯದ ‘ಹೆಬ್ಬೆಟ್ಟು ರಾಮಕ್ಕ’ ಚಿತ್ರಕ್ಕೆ ಅತ್ಯುತ್ತಮ ಕನ್ನಡ ಪ್ರಾದೇಶಿಕ ಚಿತ್ರ ಎಂದು ಪ್ರಶಸ್ತಿ ನೀಡಲಾಗಿದೆ.

  • ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ: ಕನ್ನಡದ ಹೆಬ್ಬೆಟ್ಟು ರಾಮಕ್ಕ, ಬಾಹುಬಲಿಗೆ ಹಲವು ಪ್ರಶಸ್ತಿ

    ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ: ಕನ್ನಡದ ಹೆಬ್ಬೆಟ್ಟು ರಾಮಕ್ಕ, ಬಾಹುಬಲಿಗೆ ಹಲವು ಪ್ರಶಸ್ತಿ

    ನವದೆಹಲಿ: 65ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟವಾಗಿದ್ದು, ನಟಿ ತಾರಾ ಅಭಿನಯದ ‘ಹೆಬ್ಬೆಟ್ಟು ರಾಮಕ್ಕ’ ಚಿತ್ರಕ್ಕೆ ಅತ್ಯುತ್ತಮ ಕನ್ನಡ ಪ್ರಾದೇಶಿಕ ಚಿತ್ರ ಪ್ರಶಸ್ತಿ ಸಿಕ್ಕಿದೆ.

    ಇಂದು 11.30ಕ್ಕೆ ನವದೆಹಲಿಯ ಶಾಸ್ತ್ರಿ ಭವನದಲ್ಲಿ ಶೇಖರ್ ಕಪೂರ್ ಸಾರಥ್ಯದ 10 ಜನರ ತಂಡದ ಭಾರತೀಯ ಚಿತ್ರರಂಗದ ವಿವಿಧ ಭಾಷೆಯ ಚಿತ್ರಗಳಿಗೆ ಪ್ರಶಸ್ತಿಯನ್ನು ಘೋಷಿಸಿದರು. ‘ಹೆಬ್ಬೆಟ್ಟು ರಾಮಕ್ಕ’ ಚಿತ್ರದಲ್ಲಿ ನಟಿ ತಾರಾ ಜೊತೆ ಡೈನಾಮಿಕ್ ಸ್ಟಾರ್ ದೇವರಾಜ್ ಕೂಡ ನಟಿಸಿದ್ದಾರೆ. ಈ ಚಿತ್ರವನ್ನು ಎನ್.ಆರ್ ನಂಜೇಗೌಡ ನಿರ್ದೇಶನ ಮಾಡಿದ್ದಾರೆ.

    ಹೆಬ್ಬೆಟ್ಟು ರಾಮಕ್ಕ ಚಿತ್ರ ಮಹಿಳಾ ಪ್ರಧಾನ ಚಿತ್ರವಾಗಿದ್ದು, ಬೆಂಗಳೂರು ಹಾಗೂ ಚನ್ನಪಟ್ಟಣದಲ್ಲಿ ಶೂಟಿಂಗ್ ಮಾಡಲಾಗಿತ್ತು. ಈ ಚಿತ್ರಕ್ಕೆ ಎಸ್.ಎ ಪುಟ್ಟರಾಜು ನಿರ್ಮಿಸಿದ್ದರು. ಈ ಚಿತ್ರಕ್ಕೆ ಪೂರ್ಣಚಂದ್ರ ತೇಜಸ್ವಿ ಸಂಗೀತ ನೀಡಿದ್ದು, ಬಿ. ಸತೀಶ್ ಕ್ಯಾಮೆರಾಮೆನ್ ಆಗಿ ಕಾರ್ಯ ನಿರ್ವಹಿಸಿದ್ದರು.

    ‘ಪಡ್ಡಾಯಿ’ ಚಿತ್ರಕ್ಕೆ ಅತ್ಯುತ್ತಮ ತುಳು ಸಿನಿಮಾ ಪ್ರಶಸ್ತಿ ಲಭಿಸಿದೆ. ‘ಮಾಮ್’ ಚಿತ್ರದಲ್ಲಿ ನಟಿಸಿದ ದಿವಂಗತ ಶ್ರೀದೇವಿ ಅವರಿಗೆ ಅತ್ಯುತ್ತಮ ನಟಿ ಪ್ರಶಸ್ತಿ ದೊರೆತಿದೆ. ಬೆಂಗಾಲಿ ನಟ ರಿದ್ಧಿ ಸೆನ್ ಅತ್ಯುತ್ತಮ ನಟ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.

    ಖ್ಯಾತ ತೆಲಗು ಡೈರೆಕ್ಟರ್ ಎಸ್.ಎಸ್ ರಾಜಮೌಳಿ ಬೆಸ್ಟ್ ಆ್ಯಕ್ಷನ್ ಡೈರೆಕ್ಷನ್ ಪ್ರಶಸ್ತಿ ತಮ್ಮದಾಗಿಸಿಕೊಂಡಿದ್ದಾರೆ. ಈ ಬಾರಿ ಬಾಹುಬಲಿ ಚಿತ್ರತಂಡ ಹಲವು ಪ್ರಶಸ್ತಿ ಸಿಕ್ಕಿದೆ. ಬೆಸ್ಟ್ ಸೌಂಡ್ ಎಫೆಕ್ಟ್ ಚಿತ್ರ ಹಾಗೂ ಬೆಸ್ಟ್ ಎಂಟರ್‍ಟೈನ್ಮೆಂಟ್ ಸಿನಿಮಾ ಬಾಹುಬಲಿ-2ಗೆ ಲಭಿಸಿದೆ. ನಟಿ ತಾರಾ ಅಭಿನಯದ ‘ಹೆಬ್ಬೆಟ್ಟು ರಾಮಕ್ಕ’ ಚಿತ್ರಕ್ಕೆ ಅತ್ಯುತ್ತಮ ಕನ್ನಡ ಪ್ರಾದೇಶಿಕ ಚಿತ್ರ ಎಂದು ಪ್ರಶಸ್ತಿ ನೀಡಲಾಗಿದೆ.

    ಉಳಿದ ಸಿನಿಮಾಗಳ ಪ್ರಶಸ್ತಿ ಕೆಳಗಿನ ಸಾಲಿನಂತಿದೆ

    ಅತ್ಯುತ್ತಮ ಆ್ಯಕ್ಷನ್ ಡೈರೆಕ್ಷನ್- ಎಸ್.ಎಸ್.ರಾಜಮೌಳಿ (ಬಾಹುಬಲಿ-2)
    ಅತ್ಯುತ್ತಮ ತುಳು ಸಿನಿಮಾ- ಪಡ್ಡಾಯಿ
    ಅತ್ಯುತ್ತಮ ಬ್ಯಾಗ್ರೌಂಡ್ ಸಿನಿಮಾ –ಎಆರ್ ರೆಹೆಮಾನ್ (ಮಾಮ್)
    ಅತ್ಯುತ್ತಮ ಮ್ಯೂಸಿಕ್ ಡೈರೆಕ್ಷನ್ – ಎಆರ್ ರೆಹೆಮಾನ್ (ಕಾಟ್ರುವೆಲೈಯಾಡಿ)
    ಅತ್ಯುತ್ತಮ ಸೌಂಡ್ ಎಫೆಕ್ಟ್ ಬಾಹುಬಲಿ-2
    ಅತ್ಯುತ್ತಮ ಡೈರೆಕ್ಟರ್ – ನಾಗರಾಜ್ ಮಂಜುಳೆ (ದಿ ಸೈಲೆನ್ಸ್ ಹಾಗೂ ಸೈರಾಟ್ ಸಿನಿಮಾ ನಿರ್ದೇಶಕ)
    ಅತ್ಯುತ್ತಮ ಸರ್ಪೋಟಿಂಗ್ ಆ್ಯಕ್ಟರ್ – ಫೈಸಲ್
    ಅತ್ಯುತ್ತಮ ಫೀಮೇಲ್ ಸಿಂಗರ್ – ಷಾಶಾ ತ್ರಿಪಾಠಿ (ಕಾಟ್ರು ವೆಲ್ಯಾಡಿ – ವಾಣ)
    ಪಾಲ್ಕೆ ಅವಾರ್ಡ್ – ವಿನೋದ್ ಖನ್ಹಾ
    ಅತ್ಯುತ್ತಮ ನಟಿ- ಶ್ರೀದೇವಿ (ಮಾಮ್ ಚಿತ್ರ)
    ಅತ್ಯುತ್ತಮ ನಟ – ರಿದ್ಧಿ ಸೆನ್ (ನಾಗರ್‍ಕಿರ್ತನ – ಬೆಂಗಾಳಿ ಮೂವಿ)
    ಅತ್ಯುತ್ತಮ ಎಂಟರ್‍ಟೈನ್ಮೆಂಟ್ ಸಿನಿಮಾ – ಬಾಹುಬಲಿ-2
    ಅತ್ಯುತ್ತಮ ಸಿನಿಮಾ – ವಿಲೇಜ್ ರಾಕ್‍ಸ್ಟಾರ್
    ಅತ್ಯುತ್ತಮ ಅಂಡ್ವೆಂಚರ್ ಫಿಲ್ಮ್ – ಬೆಂಗಾಳಿ ಭಾಷೆಯ ಲಡ್ಕಾ ಚಲೇ ರಿಕ್ಷಾವಾಲೆ

    ಮೇ ತಿಂಗಳು ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನೆರವೇರಲಿದೆ ಎಂದು ಹೇಳಲಾಗಿದೆ.