Tag: National Health Mission

  • ಬದುಕಿದ್ದಾಗ ಶಕ್ತಿ ಮೀರಿ ಪ್ರಯತ್ನಿಸಿದ್ರೂ ಆಗ್ಲಿಲ್ಲ – ಸಾವನ್ನಪ್ಪಿದ 65 ದಿನಗಳ ಬಳಿಕ ನರ್ಸ್ ವರ್ಗಾವಣೆ!

    ಬದುಕಿದ್ದಾಗ ಶಕ್ತಿ ಮೀರಿ ಪ್ರಯತ್ನಿಸಿದ್ರೂ ಆಗ್ಲಿಲ್ಲ – ಸಾವನ್ನಪ್ಪಿದ 65 ದಿನಗಳ ಬಳಿಕ ನರ್ಸ್ ವರ್ಗಾವಣೆ!

    ಭೋಪಾಲ್: ಮಧ್ಯಪ್ರದೇಶದ (Madhya Pradesh) ಆರೋಗ್ಯ ಇಲಾಖೆಯು (Health Department) ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಶುಶ್ರೂಷಕಿಯೊಬ್ಬಳನ್ನ (Nurse) ಆಕೆ ಸಾವನ್ನಪ್ಪಿದ 65 ದಿನಗಳ ನಂತರ ವರ್ಗಾವಣೆ ಮಾಡಿರುವ ಗೊಂದಲ ಮೂಡಿಸಿರುವ ಘಟನೆ ಬೆಳಕಿಗೆ ಬಂದಿದೆ.

    ರಾಷ್ಟ್ರೀಯ ಆರೋಗ್ಯ ಮಿಷನ್ ಭಾಗವಾಗಿ (National Health Mission) ಫೆಬ್ರವರಿ 23ರಂದು ಶುಶ್ರೂಷಕಿಯರ ವರ್ಗಾವಣೆ ಪಟ್ಟಿ ಬಿಡುಗಡೆ ಮಾಡಿದ್ದು, ಅದರಲ್ಲಿ ಶಿವಪುರಿ ಜಿಲ್ಲೆಯ ನರ್ಸ್ ಹೆಸರೂ ಸೇರಿದೆ. ಬದುಕಿದ್ದಾಗ ಶಕ್ತಿ ಮೀರಿ ಪ್ರಯತ್ನಿಸಿದರೂ ವರ್ಗಾವಣೆ ಆಗಿರಲಿಲ್ಲ. ಇದೀಗ ಆಕೆ ಮೃತಪಟ್ಟ 65 ದಿನಗಳ ನಂತರ ವರ್ಗಾವಣೆ ಮಾಡಿರುವುದು ಅಚ್ಚರಿ ಮೂಡಿಸಿದೆ. ಇದನ್ನೂ ಓದಿ: ವೀರಶೈವ ಲಿಂಗಾಯತರು ಬಿಜೆಪಿಗೇ ಮತ ಹಾಕಿ ಗೆಲ್ಲಿಸಿ – ಬಿಎಸ್‌ವೈ ಮನವಿ

    ಶಿವಪುರಿ ನರ್ಸ್ ಅನ್ನು ಬೇತುಲ್ ನಿವಾಸಿ ತನ್ವಿ ದಾಬಂದೆ (28) ಎಂದು ಗುರುತಿಸಲಾಗಿದ್ದು, ಆಕೆ ಮರಣದ ನಂತರ ರೈಸನ್‌ಗೆ ವರ್ಗಾಯಿಸಲಾಗಿದೆ. ಇದನ್ನೂ ಓದಿ: ಪಾಕಿಸ್ತಾನದ ಮೊದಲ ತೃತೀಯಲಿಂಗಿ ಸುದ್ದಿ ನಿರೂಪಕಿ ಮೇಲೆ ಗುಂಡಿನ ದಾಳಿ

    ಮೂಲಗಳ ಪ್ರಕಾರ, ನರ್ಸ್ ಆಗಿದ್ದ ಯುವತಿ 2022ರ ಡಿಸೆಂಬರ್ 20ರಂದು ಆತ್ಮಹತ್ಯೆ ಮಾಡಿಕೊಂಡಿದ್ದಳು. ವಾರ್ಡ್ ಬಾಯ್ ಈಕೆಯನ್ನು ಡ್ಯೂಟಿಗೆ ಬರುವಂತೆ ಕರೆಯಲು ಹೋದಾಗ ಘಟನೆ ಬೆಳಕಿಗೆ ಬಂದಿತ್ತು. ಆಕೆ ಪ್ರಜ್ಞಾಹೀನ ಸ್ಥಿತಿಯಲ್ಲಿ ತನ್ನ ಕೋಣೆಯಲ್ಲಿ ಬಿದ್ದಿದ್ದಳು. ಅದೇ ಕೋಣೆಯಲ್ಲಿ ನಿದ್ರೆ ಮಾತ್ರೆಗಳೂ ಪತ್ತೆಯಾಗಿದ್ದವು. ನಂತರ ಆಕೆಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೊನೆಗೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಳು ಎಂದು ಪೊಲೀಸರು ತನಿಖೆ ನಂತರ ತಿಳಿಸಿದ್ದರು.

  • ಒಡಿಶಾ ಸರ್ಕಾರದಿಂದ ನವ ವಿವಾಹಿತರಿಗೆ ಕಾಂಡೋಮ್, ಪ್ರೆಗ್ನೆನ್ಸಿ ಟೂಲ್ ಹೊಂದಿದ `ವೆಡ್ಡಿಂಗ್ ಕಿಟ್’ ಗಿಫ್ಟ್

    ಒಡಿಶಾ ಸರ್ಕಾರದಿಂದ ನವ ವಿವಾಹಿತರಿಗೆ ಕಾಂಡೋಮ್, ಪ್ರೆಗ್ನೆನ್ಸಿ ಟೂಲ್ ಹೊಂದಿದ `ವೆಡ್ಡಿಂಗ್ ಕಿಟ್’ ಗಿಫ್ಟ್

    ಭುವನೇಶ್ವರ: ಜನಸಂಖ್ಯೆ ನಿಯಂತ್ರಣಾ ಕ್ರಮಗಳ ಭಾಗವಾಗಿ ಒಡಿಶಾ ಸರ್ಕಾರವು ಹೊಸ ಉಪಕ್ರಮವನ್ನು ಪರಿಚಯಿಸುತ್ತಿದೆ. ಕಾಂಡೋಮ್ ಸೇರಿದಂತೆ ದಾಂಪತ್ಯ ಜೀವನಕ್ಕೆ ಸಂಬಂಧಿಸಿದ ಇತರ ಅಗತ್ಯ ವಸ್ತುಗಳನ್ನು ಹೊಂದಿರುವ `ವೆಡ್ಡಿಂಗ್ ಕಿಟ್’ಗಳನ್ನು ಉಡುಗೊರೆಯಾಗಿ ನೀಡಲು ಸರ್ಕಾರ ಸಿದ್ಧವಾಗಿದೆ. ಇದು ಕುಟುಂಬ ಯೋಜನೆ (ಫ್ಯಾಮಿಲಿ ಪ್ಲ್ಯಾನಿಂಗ್) ಅಳವಡಿಸಿಕೊಳ್ಳಲು ಪ್ರೇರೇಪಿಸುತ್ತದೆ.

    ರಾಷ್ಟ್ರೀಯ ಆರೋಗ್ಯ ಮಿಷನ್ (ಎನ್‌ಹೆಚ್‌ಎಂ) ಅಡಿಯಲ್ಲಿ `ನಯಿ ಪಹಲ್ ಯೋಜನೆ’ ಅಥವಾ `ನಬದಂಪತಿ ಕಿಟ್’ ವಿತರಿಸುವ ಹೊಸ ಉಪಕ್ರಮವನ್ನು ಜಾರಿಗೆ ತರುತ್ತಿದೆ. ಇದು ಯುವ ಜೋಡಿಗಳು ತಾತ್ಕಾಲಿಕ ಅಥವಾ ಶಾಶ್ವತ ಕುಟುಂಬ ಯೋಜನೆಯ ವಿಧಾನಗಳನ್ನು ಅಳವಡಿಸಿಕೊಳ್ಳುವ ಅಗತ್ಯತೆಗಳ ಕುರಿತು ಜಾಗೃತಿ ಮೂಡಿಸುವ ಉದ್ದೇಶವನ್ನೂ ಸರ್ಕಾರ ಹೊಂದಿದೆ. ಇದನ್ನೂ ಓದಿ: ದೇಶಕ್ಕೆ ಸ್ವಾತಂತ್ರ್ಯ ಸಿಗಲು ಬಿಜೆಪಿ, ಆರ್‌ಎಸ್‍ಎಸ್‍ನ ಯಾವುದೇ ಪಾತ್ರವಿಲ್ಲ: ಸತೀಶ್ ಜಾರಕಿಹೊಳಿ

    ವೆಡ್ಡಿಂಗ್ ಕಿಟ್‌ನಲ್ಲಿ ಏನಿರಲಿದೆ?
    ವಿವಾಹದ ಕಿಟ್‌ನಲ್ಲಿ ಕುಟುಂಬ ಮದುವೆ ನೋಂದಣಿ ನಮೂನೆ (ಅರ್ಜಿ), ಕಾಂಡೋಮ್‌ಗಳು, ಗರ್ಭನಿರೋಧಕ (ಒಸಿಪಿ) ಹಾಗೂ ತುರ್ತು ಗರ್ಭನಿರೋಧಕ ಮಾತ್ರೆಗಳು (ಇಸಿಪಿ) ಹಾಗೂ ಕುಟುಂಬ ಯೋಜನೆ ಮತ್ತು ಅದರ ಪ್ರಯೋಜನಗಳನ್ನು ತಿಳಿಸುವ ಒಂದು ಕಿರುಪುಸ್ತಿಕೆಯನ್ನು ಒಳಗೊಂಡಿರುತ್ತದೆ. ಇದರ ಹೊರತಾಗಿ, ಗರ್ಭಧಾರಣೆ ಪರೀಕ್ಷಾ ಕಿಟ್ (ಫ್ರೆಗ್ನೆನ್ಸಿ ಕಿಟ್), ಟವೆಲ್, ಬಾಚಣಿಗೆ, ಬಿಂದಿ, ಉಗುರು ಕತ್ತಿರಿಸುವ ಸಾಧನ (ನೇ‌ಲ್ಸ್‌ ಕಟ್ಟರ್‌) ಹಾಗೂ ಕನ್ನಡಿ ಸೇರಿದಂತೆ ಇತರ ಸಾಮಗ್ರಿಗಳನ್ನು ಸಹ ಒಳಗೊಂಡಿರುತ್ತದೆ. ಇದನ್ನೂ ಓದಿ: ಡ್ರಗ್ಸ್ ಸೇವಿಸಿ ಕಾರು ಅಪಘಾತ ಮಾಡಿಕೊಂಡಿದ್ದ ಖ್ಯಾತ ನಟಿ ಕೊನೆಗೂ ಉಳಿಯಲಿಲ್ಲ: ನಟಿಯ ನಿಧನಕ್ಕೆ ಹಾಲಿವುಡ್ ಕಂಬನಿ

    ಈ ವರ್ಷದ ಸೆಪ್ಟಂಬರ್ ತಿಂಗಳಿನಿಂದ ನವ ವಿವಾಹಿತರಿಗೆ ವೆಡ್ಡಿಂಗ್ ಕಿಟ್‌ಗಳನ್ನು ವಿತರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಾನ್ಯತೆ ಪಡೆದ ಆಶಾ ಕಾರ್ಯಕರ್ತರಿಗೆ ವಿತರಿಸುವ ಜವಾಬ್ದಾರಿ ನೀಡಲಾಗುತ್ತದೆ. ಅವರು ವಿವಾಹ ನಡೆಯುವ ಮನೆಗಳಿಗೆ ತೆರಳಿ ವೆಡ್ಡಿಂಗ್ ಕಿಟ್‌ಗಳನ್ನು ಉಡುಗೊರೆಯಾಗಿ ನೀಡಲಿದ್ದಾರೆ ಎಂದು ಕುಟುಂಬ ಯೋಜನಾ ನಿರ್ದೇಶಕ ಡಾ. ಬಿಜಯ್ ಪಾಣಿಗ್ರಾಹಿ ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಆಶಾ ಕಾರ್ಯಕರ್ತೆಯ ಕಾರ್ಯಕ್ಕೆ ರಾಷ್ಟ್ರೀಯ ಆರೋಗ್ಯ ಮಿಷನ್‍ನಿಂದ ಪ್ರಶಂಸೆ

    ಆಶಾ ಕಾರ್ಯಕರ್ತೆಯ ಕಾರ್ಯಕ್ಕೆ ರಾಷ್ಟ್ರೀಯ ಆರೋಗ್ಯ ಮಿಷನ್‍ನಿಂದ ಪ್ರಶಂಸೆ

    ಶಿವಮೊಗ್ಗ: ಕೊರೊನಾ ಸೋಂಕಿನಿಂದ ಸ್ನೇಹಿತರು, ಆಪ್ತರು ಹಾಗೂ ಸಂಬಂಧಿಕರೇ ದೂರ ಸರಿಯುತ್ತಿರುವ ಸಮಯದಲ್ಲಿ ಪ್ರಾಣದ ಹಂಗು ತೊರೆದು ಸೇವೆ ಸಲ್ಲಿಸುತ್ತಿರುವ ರಾಜ್ಯದ ದಿಟ್ಟ ಮಹಿಳೆಯೊಬ್ಬರಿಗೆ ರಾಷ್ಟ್ರೀಯ ಆರೋಗ್ಯ ಮಿಷನ್ ಅತ್ಯುತ್ತಮ ಆಶಾ ಕಾರ್ಯಕರ್ತೆ ಎಂದು ಪ್ರಶಂಸೆ ವ್ಯಕ್ತಪಡಿಸಿದೆ.

    ಶಿವಮೊಗ್ಗದ ತುಂಗಾನಗರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಳೆದ ಮೂರು ವರ್ಷದಿಂದ ಆಶಾ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸುತ್ತಿರುವ ಅನ್ನಪೂರ್ಣ ಅವರ ಸೇವೆಗೆ ರಾಷ್ಟ್ರೀಯ ಆರೋಗ್ಯ ಮಿಷನ್ ಪ್ರಶಂಸೆ ವ್ಯಕ್ತಪಡಿಸಿದೆ. ಕೊರೊನಾ ಸಮಯದಲ್ಲಿ ಕಂಟೈನ್ಮೆಂಟ್ ಝೋನ್ ಗಳಲ್ಲಿ ಕಾರ್ಯ ನಿರ್ವಹಿಸುವುದು ಸವಾಲಿನ ಕೆಲಸವಾಗಿರುತ್ತದೆ. ಕೆಲವೊಮ್ಮೆ ತಮ್ಮ ಪ್ರದೇಶಗಳನ್ನು ಸೀಲ್‍ಡೌನ್ ಮಾಡಿದ ಕಾರಣಕ್ಕೆ ಸ್ಥಳೀಯರು ಪ್ರತಿಭಟನೆ ಮಾಡುತ್ತಾರೆ. ಆದರೆ ಇಂತಹ ಪ್ರದೇಶಗಳಲ್ಲಿ ಆಶಾ ಕಾರ್ಯಕರ್ತೆ ಅನ್ನಪೂರ್ಣ ಅವರು ಸ್ಥಳೀಯರನ್ನು ಮನವೊಲಿಸಿ ಕೊರೊನಾ ಬಗ್ಗೆ ತಿಳಿ ಹೇಳಿದ್ದಾರೆ.

    ಬಡಾವಣೆಗೆ ಹೊರಗಿನಿಂದ ಯಾರಾದರೂ ಬಂದರೆ ಕ್ವಾರಂಟೈನ್ ಮಾಡಲು ಆರೋಗ್ಯ ಅಧಿಕಾರಿಗಳಿಗೆ ಮಾಹಿತಿ ತಿಳಿಸಿದ್ದಾರೆ. ಇವರ ಕಾರ್ಯವನ್ನು ಗುರುತಿಸಿದ ರಾಷ್ಟ್ರೀಯ ಆರೋಗ್ಯ ಮಿಷನ್ ಆಶಾ ಕಾರ್ಯಕರ್ತೆ ಅನ್ನಪೂರ್ಣ ಅವರ ಕಾರ್ಯಕ್ಕೆ ಪ್ರಶಂಸೆ ವ್ಯಕ್ತಪಡಿಸಿದೆ. ಕೊಳಚೆ ಪ್ರದೇಶದಲ್ಲಿ 3,000 ಜನರು ವಾಸವಿದ್ದು, ಇಲ್ಲಿ 10 ಕಂಟೈನ್ಮೆಂಟ್ ಝೋನ್‍ಗಳಿವೆ. ಕೊರೊನಾ ಟಾಸ್ಕನ್ನು ಅನ್ನಪೂರ್ಣ ಅವರು ಅತ್ಯುತ್ತಮವಾಗಿ ನಿಭಾಯಿಸಿದ್ದಾರೆ. ಹೊರ ಜಿಲ್ಲೆ ಹಾಗೂ ರಾಜ್ಯಗಳಿಂದ ಯಾರೇ ಬಂದರೂ ಕೂಡಲೇ ಅಲ್ಲಿಗೆ ತೆರಳುವ ಅನ್ನಪೂರ್ಣ ಮಾಹಿತಿ ಕಲೆ ಹಾಕುತ್ತಾರೆ. ಲಕ್ಷಣಗಳ ಕುರಿತು ಪರಿಶೀಲನೆ ನಡೆಸಿ ಕ್ವಾರಂಟೈನ್‍ಗೆ ಕಳುಹಿಸುವ ಕಾರ್ಯ ಮಾಡುತ್ತಾರೆ.

    ಇದರೊಂದಿಗೆ ಅನ್ನಪೂರ್ಣ ಅವರು ಕಾರ್ಯ ನಿರ್ವಹಿಸುವ ವೇಳೆ ಬಾಲ್ಯ ವಿವಾಹವೊಂದನ್ನೂ ಕೂಡ ತಡೆದಿದ್ದರು. ಬಾಲಕಿಯೊಬ್ಬಳಿಗೆ ವಿವಾಹ ಮಾಡಲಾಗುತ್ತಿದೆ ಎಂಬ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ತೆರಳಿದ ಅನ್ನಪೂರ್ಣ ಅವರು ಎರಡೂ ಕುಟುಂಬಗಳ ಮನವೊಲಿಸಿ ವಿವಾಹ ನಿಲ್ಲಿಸಿದ್ದರು. ಕೊರೊನಾ ವೈರಸ್ ರಾಜ್ಯಕ್ಕೆ ಕಾಲಿಡುವುದಕ್ಕೂ ಮುನ್ನವೂ ಅನ್ನಪೂರ್ಣ ಅವರು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದರು ಎನ್ನುತ್ತಾರೆ ಆರೋಗ್ಯ ಸಿಬ್ಬಂದಿ.

    ಒಬ್ಬ ಆಶಾ ಕಾರ್ಯಕರ್ತೆಯ ಸೇವೆಯನ್ನು ಇದೇ ಮೊದಲ ಬಾರಿಗೆ ರಾಷ್ಟ್ರೀಯ ಆರೋಗ್ಯ ಮಿಷನ್ ಗುರುತಿಸಿರುವುದಕ್ಕೆ ಇತರೆ ಆಶಾ ಕಾರ್ಯಕರ್ತೆಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಆಶಾ ಕಾರ್ಯಕರ್ತೆ ಅನ್ನಪೂರ್ಣ ಅವರ ಸೇವೆಯಿಂದ ನಾವು ಕೆಲಸ ನಿರ್ವಹಿಸಲು ಸ್ಫೂರ್ತಿ ಬಂದಂತಾಗಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.