Tag: national herald case

  • ಹೌದು ನಾವು ನ್ಯಾಷನಲ್ ಹೆರಾಲ್ಡ್‌ಗೆ ದೇಣಿಗೆ ಕೊಟ್ಟಿದ್ದೇವೆ, ತಪ್ಪೇನಿದೆ?: ಡಿಕೆಶಿ ಸಮರ್ಥನೆ

    ವಿಜಯಪುರ: ಹೌದು, ನಾವು ನ್ಯಾಷನಲ್ ಹೆರಾಲ್ಡ್‌ಗೆ (National Herald) ದೇಣಿಗೆ ಕೊಟ್ಟಿದ್ದೇವೆ. ಅದರಲ್ಲಿ ತಪ್ಪೇನಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ (D.K.Shivakumar) ಸಮರ್ಥಿಸಿಕೊಂಡರು.

    ಹೆರಾಲ್ಡ್ ಕೇಸಲ್ಲಿ ಡಿಕೆ ಬ್ರದರ್ಸ್‌ ಹೆಸರು ವಿಚಾರಕ್ಕೆ ವಿಜಯಪುರದ ಕೊಲ್ಹಾರ ಪಟ್ಟಣದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಹೌದು, ನ್ಯಾಷನಲ್‌ ಹೆರಾಲ್ಡ್‌ಗೆ ನಾನು 25 ಲಕ್ಷ, ನನ್ನ ತಮ್ಮ ಡಿ.ಕೆ.ಸುರೇಶ್‌ 25 ಲಕ್ಷ ಕೊಟ್ಟಿದ್ದೇವೆ. ಅದು ನಮ್ಮ ಪತ್ರಿಕೆ. ಕೊಟ್ಟರೆ ಅದರಲ್ಲಿ ತಪ್ಪೇನಿದೆ? ನಾವು ಕೊಟ್ಟಿಲ್ಲ ಅಂತಾ ಹೇಳ್ತಿಲ್ಲ ಅಲ್ವಾ ಎಂದು ತಿಳಿಸಿದರು. ಇದನ್ನೂ ಓದಿ: Delhi Election| ಆಪ್‌ಗಿಂತ ಮೂರು ಪಟ್ಟು ಹೆಚ್ಚು ಖರ್ಚು ಮಾಡಿತ್ತು ಕಾಂಗ್ರೆಸ್‌ – 68 ಮಂದಿಗೆ ಬಿಜೆಪಿಯಿಂದ ತಲಾ 25 ಲಕ್ಷ

    ರನ್ಯಾ ರಾವ್‌ ಚಿನ್ನದ ವಿಚಾರ ಹೇಳಿದ್ದು ಕಾಂಗ್ರೆಸ್ ನಾಯಕ ಎಂಬ ಹೆಚ್ಡಿಕೆ ಹೇಳಿಕೆಗೆ ಪ್ರತಿಕ್ರಿಯಿಸಿ, ಕುಮಾರಸ್ವಾಮಿ ಮೆಂಟ್ಲು. ಪಾಪ ಮೆಂಟ್ಲು ಹೆಚ್ಚು ಕಡಿಮೆ ಆಗಿರಬೇಕು. ಕುಮಾರಸ್ವಾಮಿಗೆ ತಲೆ ಸರಿ ಇಲ್ಲ. ಸುಳ್ಳಿಗೆ ಮತ್ತೊಂದು ಹೆಸರೇ ಕುಮಾರಸ್ವಾಮಿ ಎಂದು ಹೆಚ್ಡಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

    ರಾಮನಗರ ವಿಚಾರದ ಬಗ್ಗೆ ಮಾತನಾಡಿ, ಅದು ಬೆಂಗಳೂರು ಜಿಲ್ಲೆ. ರಾಮನಗರ ಚೇಂಜ್ ಮಾಡ್ತಿಲ್ಲ. ರಾಮನಗರ ರಾಮನಗರವಾಗಿಯೇ ಇರುತ್ತೆ.‌ ಇವರ‍್ಯಾಕೆ ಹಾಸನದಿಂದ ಬಂದ್ರು? ಹಾಸನದಿಂದಲೇ ರಾಜಕಾರಣ ಮಾಡಬೇಕಿತ್ತಲ್ಲ. ಇವರ ಹೆಸರನ್ನು ಮೊದಲು ಚೇಂಜ್ ಮಾಡಿಕೊಳ್ಳಲಿ.‌ ಹೆಚ್‌.ಡಿ.ಕುಮಾರಸ್ವಾಮಿ ಎನ್ನುವ ಹೆಸರನ್ನು ಬದಲಾಯಿಸಿಕೊಳ್ಳಲಿ. ಅವರ ತಂದೆ ಹಸರು, ಅವರ ಊರ ಹೆಸರನ್ನು ಯಾಕೆ ಇಟ್ಕೊಂಡಿದ್ದಾರೆ? ನಾವು ಬೆಂಗಳೂರು ರೀ. ನಾವು ನಮ್ಮ ಬೆಂಗಳೂರು ಜಿಲ್ಲೆಯವರು. ನಮಗೆ ನಮ್ಮದೇ ಆದ ಆಸೆ ಎಲ್ಲಾ ಇರುತ್ತೆ. ಮದ್ರಾಸ್‌ನ ಚೆನ್ನೈ ಯಾಕ್ ಮಾಡಿದ್ರು? ಗುಲಬರ್ಗಾ ಕಲಬುರಗಿ ಯಾಕ್ ಮಾಡಿದ್ರು? ಬೆಂಗಳೂರು ಜಿಲ್ಲೆ ಅಂತಾ ಮಾಡಿದ್ರೆ ಅವರಿಗೇನು ತೊಂದರೆ. ಮುಂದೆ ಏನ್ ಮಾಡ್ತೀವಿ ಎಂದು ನೋಡಲಿ ಎಂದು ಸವಾಲ್ ಹಾಕಿದರು. ಇದನ್ನೂ ಓದಿ: ರಾಮನಗರ ಹೆಸರು ಬದಲಾವಣೆ – ತಮ್ಮ ಭೂಮಿಗಳ ಬೆಲೆ ಹೆಚ್ಚಿಸುವ ಷಡ್ಯಂತ್ರದ ಭಾಗ: ಹೆಚ್‌ಡಿಕೆ ಕೆಂಡ

    ರಿಯಲ್ ಎಸ್ಟೇಟ್ ಡೆವೆಲಪ್ಮೆಂಟ್‌ಗಾಗಿ ಮಾಡಿದ್ದು ಎನ್ನುವ ಆರೋಪಕ್ಕೆ ಪ್ರತಿಕ್ರಿಯಿಸಿ, ಹೌದ್ರಿ ಅದಕ್ಕಾಗಿಯೇ ಮಾಡಿದ್ದು. ನಮ್ಮ ಬೆಂಗಳೂರು, ನಮ್ಮ ಹಳ್ಳಿಯವರು ಅಭಿವೃದ್ಧಿ ಆಗಬೇಕು. ಎಲ್ಲರ ಆಸ್ತಿಗಳ ಬೆಲೆ ಹೆಚ್ಚಾಗಬೇಕು. ರೈತರ ಬದುಕು ಒಳ್ಳೆಯದಾಗಬೇಕು, ಉದ್ಯೋಗ ಸಿಗಬೇಕು. ಹೊರ ದೇಶದಿಂದ ಬಂದು ಬಂಡವಾಳ ಹಾಕಬೇಕು ಎಂದು ಹೆಚ್‌ಡಿಕೆಗೆ ಟಾಂಗ್‌ ಕೊಟ್ಟರು.

  • ಸೋನಿಯಾ, ರಾಹುಲ್‌ ಗಾಂಧಿಗೆ ದೆಹಲಿ ಕೋರ್ಟ್‌ ನೋಟಿಸ್‌

    ಸೋನಿಯಾ, ರಾಹುಲ್‌ ಗಾಂಧಿಗೆ ದೆಹಲಿ ಕೋರ್ಟ್‌ ನೋಟಿಸ್‌

    ನವದೆಹಲಿ: ನ್ಯಾಷನಲ್‌ ಹೆರಾಲ್ಡ್‌ ಹಣ ವರ್ಗಾವಣೆ ಪ್ರಕರಣಕ್ಕೆ (National Herald Case) ಸಂಬಂಧಿಸಿದಂತೆ ಕಾಂಗ್ರೆಸ್‌ ನಾಯಕರಾದ ಸೋನಿಯಾ ಗಾಂಧಿ (Sonia Gandhi), ರಾಹುಲ್‌ ಗಾಂಧಿಗೆ (Rahul Gandhi) ದೆಹಲಿ ನ್ಯಾಯಾಲಯ ನೋಟಿಸ್‌ ಜಾರಿ ಮಾಡಿದೆ.

    ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ ತನಿಖೆ ಮತ್ತು ಒಂದು ದಶಕದ ಹಿಂದಿನ ಕಾನೂನು ವಿವಾದದ ನಂತರ ಇಬ್ಬರಿಗೂ ಔಪಚಾರಿಕ ನೋಟಿಸ್ ಜಾರಿ ಮಾಡಿದೆ. ಇದನ್ನೂ ಓದಿ: ಪಾಕಿಸ್ತಾನದ ಭಯೋತ್ಪಾದಕ ಸಂಪರ್ಕಗಳು ರಹಸ್ಯವೇನಲ್ಲ: ಬಿಲಾವಲ್ ಭುಟ್ಟೋ

    ಯಾವುದೇ ಹಂತದಲ್ಲಿ ವಿಚಾರಣೆ ನಡೆಸುವ ಹಕ್ಕು ನ್ಯಾಯಯುತ ವಿಚಾರಣೆಗೆ ಜೀವ ತುಂಬುತ್ತದೆ ಎಂದು ನ್ಯಾಯಾಧೀಶರಾದ ವಿಶಾಲ್ ಗೋಗ್ನೆ ತಿಳಿಸಿದ್ದಾರೆ. ಮುಂದಿನ ವಿಚಾರಣೆಯನ್ನು ಮೇ 8ಕ್ಕೆ ನಿಗದಿಪಡಿಸಿದ್ದಾರೆ.

    ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರು 2014 ರ ಜೂನ್‌ನಲ್ಲಿ ಸಲ್ಲಿಸಿದ ಖಾಸಗಿ ಕ್ರಿಮಿನಲ್ ದೂರನ್ನು ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಕೈಗೆತ್ತಿಕೊಂಡ ನಂತರ 2021 ರಲ್ಲಿ ಜಾರಿ ನಿರ್ದೇಶನಾಲಯದ ತನಿಖೆ ಔಪಚಾರಿಕವಾಗಿ ಪ್ರಾರಂಭವಾಯಿತು. ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್‌ನ ಉನ್ನತ ನಾಯಕತ್ವವನ್ನು ಒಳಗೊಂಡ ಕ್ರಿಮಿನಲ್ ಪಿತೂರಿ ಮತ್ತು ಆರ್ಥಿಕ ದುರುಪಯೋಗದ ಬಗ್ಗೆ ದೂರಿನಲ್ಲಿ ಆರೋಪಿಸಲಾಗಿದೆ. ಇದನ್ನೂ ಓದಿ: ಭಾರತದ ಮೊದಲ ಟ್ರಾನ್ಸ್‌ಶಿಪ್‌ಮೆಂಟ್ ಹಬ್‌ಗೆ ಪ್ರಧಾನಿ ಮೋದಿ ಚಾಲನೆ

  • `ಕೈ’ ಸರ್ಕಾರ ಬಂದ್ಮೇಲೆ ಜನಿವಾರ, ಶಿವದಾರ, ಉಡುದಾರಕ್ಕೂ ಕತ್ತರಿ ಬೀಳ್ತಿದೆ, ಹಿಜಬ್‌ಗೆ ಬಹುಪರಾಕ್ ನಡೀತಿದೆ: ಆರ್.ಅಶೋಕ್

    `ಕೈ’ ಸರ್ಕಾರ ಬಂದ್ಮೇಲೆ ಜನಿವಾರ, ಶಿವದಾರ, ಉಡುದಾರಕ್ಕೂ ಕತ್ತರಿ ಬೀಳ್ತಿದೆ, ಹಿಜಬ್‌ಗೆ ಬಹುಪರಾಕ್ ನಡೀತಿದೆ: ಆರ್.ಅಶೋಕ್

    ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ (Congress Government) ಬಂದ ಮೇಲೆ ಜನಿವಾರ, ಶಿವದಾರ, ಉಡುದಾರ ಎಲ್ಲದಕ್ಕೂ ಕತ್ತರಿ ಬೀಳುತ್ತಿದೆ. ತಾಳಿಗೆ ಭಾಗ್ಯ ಇಲ್ಲ, ಹಿಜಬ್‌ಗೆ ಬಹುಪರಾಕ್ ನಡೆಯುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ (R Ashok) ವಾಗ್ದಾಳಿ ನಡೆಸಿದರು.

    ಹೈಕಮಾಂಡ್ (High Command) ಸೂಚನೆ ಮೇರೆಗೆ ನ್ಯಾಷನಲ್ ಹೆರಾಲ್ಡ್ ಪ್ರಕರಣ (National Herald Case) ಸಂಬಂಧ ವಿಧಾನಸೌಧದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಲ್ಲಿ ಅಂಬೇಡ್ಕರ್ ಸಂವಿಧಾನದ ಸರ್ಕಾರ ಇಲ್ಲ. ಧಾರವಾಡದಲ್ಲಿಯೂ ಜನಿವಾರ ಪ್ರಕರಣ ನಡೆದಿದೆ. ನಂದನ್ ಎಂಬ ವಿದ್ಯಾರ್ಥಿಗೆ ಜನಿವಾರ ಕತ್ತರಿಸಿ ಪರೀಕ್ಷೆ ಬರೆಸಿದ್ದಾರೆ. ಪರೀಕ್ಷೆ ಅಂದರೆ ಎಲ್ಲ ವಿದ್ಯಾರ್ಥಿಗಳಲ್ಲೂ ಉದ್ವೇಗ ಇರುತ್ತದೆ. ಆದರೆ ಜನಿವಾರ ತೆಗೆಯಲು ತಿಳಿಸಿ ಆ ಭಾವನೆಯನ್ನು ಘಾಸಿ ಮಾಡುತ್ತೀರಾ. ಈ ಮೊದಲು ಸಾಬರಿಗೆ ಹಿಜಬ್ ತೆಗೆದಿದ್ದಕ್ಕೆ ಬಾಯಿ ಬಾಯಿ ಬಡಿದುಕೊಂಡಿದ್ದರು. ಜನಿವಾರ ಒಂದು ದಾರ ಅಷ್ಟೇ, ಅದು ಹಿಜಬ್ ಥರ ಬಟ್ಟೆ ಅಲ್ಲ. ಜನಿವಾರದಲ್ಲಿ ಕಾಪಿ ಮಾಡೋಕ್ಕಾಗುತ್ತಾ? ಶಿವದಾರವನ್ನೂ ತೆಗೆಸಿದ್ದಾರೆ, ಕತ್ತರಿ ಹಾಕಿದ್ದಾರೆ, ಒಕ್ಕಲಿಗರ ಉಡುದಾರ ಕಟ್, ತಾಳಿಗೂ ಭಾಗ್ಯ ಇಲ್ಲ. ಇದು ಮನೆಹಾಳ ಸರ್ಕಾರ, ದುರುಳ ಕಾಂಗ್ರೆಸ್, ಹೆಣ್ಣಿನ ತಾಳಿಗೆ ಕೈ ಹಾಕಿದವರು ಸರ್ವನಾಶವಾಗುತ್ತಾರೆ, ಓಲೆಯನ್ನೂ ತೆಗೆಸಿದ್ದಾರೆ. ಕಾಂಗ್ರೆಸ್ ಸತ್ತು ಹೋಗುತ್ತದೆ ಎಂದು ತಾಳಿ, ಓಲೆ ತೆಗೆಸಿದ ಫೋಟೋ ತೋರಿಸಿ ಆರೋಪಿಸಿದರು.ಇದನ್ನೂ ಓದಿ: ಆಗೋದೆಲ್ಲಾ ಒಳ್ಳೆಯದಕ್ಕೆ ಭಗವಂತ ನಮ್ಮೊಂದಿಗೆ ಇದ್ದಾನೆ: ಕಹಿ ಘಟನೆ ನೆನೆದ ವೈಷ್ಣವಿ

    ಕಾಂಗ್ರೆಸ್ ಸರ್ಕಾರ ಹಿಂದೂಗಳನ್ನು ದಮನ ಮಾಡುತ್ತಿದೆ, ಅವಮಾನ ಮಾಡುತ್ತಿದೆ. ಸರ್ಕಾರ ಹಿಂದೂಗಳನ್ನು ಅವಮಾನ ಮಾಡಿ ವಿಕೃತ ಸಂತೋಷ ಪಡುತ್ತದೆ. ಕೇಂದ್ರದ ಮಾನವ ಹಕ್ಕು ಆಯೋಗ, ರಾಜ್ಯ ಮಾನವ ಹಕ್ಕುಗಳ ಆಯೋಗಗಳು ಕೂಡಲೇ ಸರ್ಕಾರದ ಮೇಲೆ ಕ್ರಮ ಕೈಗೊಳ್ಳಲಿ. ಹೆಣ್ಣುಮಕ್ಕಳ ತಾಳಿ, ಓಲೆ ತೆಗೆಸಿದ ಪ್ರಕರಣ ಸಂಬಂಧ ನಾನು ಕೇಂದ್ರದ ಮಹಿಳಾ ಆಯೋಗಕ್ಕೆ ಪತ್ರ ಬರೆಯುತ್ತೇನೆ ಎಂದರು.

    ಇನ್ನೂ ಸೋನಿಯಾ ಗಾಂಧಿ (Sonia Gandhi) ಹಾಗೂ ರಾಹುಲ್ ಗಾಂಧಿ (Rahul Gandhi) ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆ ವಿಚಾರವಾಗಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ದೇಶ ಲೂಟಿ ಮಾಡುವ ಪಕ್ಷ, ಮನಮೋಹನ್ ಸಿಂಗ್ (Manmohan Singh) ಕಾಲದಲ್ಲಿ ಹಗರಣಗಳ ಸರಮಾಲೆ ನಡೆದಿತ್ತು. ಈಗ ಪತ್ರಿಕೆಯನ್ನೇ ಲೂಟಿ ಮಾಡಿದ್ದಾರೆ. ಹಿಂದೆ 1937ರಲ್ಲಿ ಶುರುವಾದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯಲ್ಲಿ ಈಗ ಲೂಟಿ ಮಾಡಿದ್ದಾರೆ. 2008ರಲ್ಲಿ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ನಷ್ಟದ ಕಾರಣ ನೀಡಿ ಮುಚ್ಚಲಾಗಿತ್ತು. ನಂತರ ಅದರ 3,000 ಕೋಟಿ ರೂ. ಆಸ್ತಿ ಮೇಲೆ ರಾಹುಲ್, ಸೋನಿಯಾ ಗಾಂಧಿ ಕಣ್ಣು ಬಿದ್ದಿತ್ತು. ನಂತರ ಯಂಗ್ ಇಂಡಿಯನ್ ಕಂಪನಿ ಎಂಬ ಚಾರಿಟೆಬಲ್ ಕಂಪನಿ ಮಾಡಿ ಅದರ ಆಸ್ತಿ ಲೂಟಿ ಮಾಡಿದ್ದಾರೆ. 50 ಲಕ್ಷ ರೂ. ಕೊಟ್ಟು ನ್ಯಾಷನಲ್ ಹೆರಾಲ್ಡ್ನ ಎರಡು ಸಾವಿರ ಕೋಟಿ ತಗೆದುಕೊಂಡರು.ನ್ಯಾಷನಲ್ ಹೆರಾಲ್ಡ್‌ನ ಆಸ್ತಿಗಳಿಂದ ಬಂದ ನೂರಾರು ಕೋಟಿ ಬಾಡಿಗೆ ಹಣದ ಲೆಕ್ಕವೂ ಕೊಡಲಿಲ್ಲ. ಇದು ಕಾಂಗ್ರೆಸ್‌ನ ಪತ್ರಿಕೆ ಅಲ್ಲ, ಸ್ವಾತಂತ್ರ‍್ಯ ಹೋರಾಟಗಾರರು ಆರಂಭಿಸಿದ್ದ ಪತ್ರಿಕೆ ಎಂದು ಆಕ್ರೋಶ ಹೊರಹಾಕಿದರು.

    ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್‌ನಲ್ಲಿಯೂ ವಿನಾಯಿತಿ ಸಿಗಲಿಲ್ಲ. ಕೋರ್ಟ್ ಆದೇಶದ ಹಿನ್ನೆಲೆ ಈ ಪ್ರಕರಣದ ತನಿಖೆ ಇಡಿ ನಡೆಸುತ್ತಿದೆ. ಕಾಂಗ್ರೆಸ್‌ಗೆ ಲೂಟಿ ಮಾಡುವ ಅಧಿಕಾರ ಯಾರು ಕೊಟ್ಟರು? ಚಾರಿಟೆಬಲ್ ಟ್ರಸ್ಟ್ ಅಡಿ ಅವ್ಯವಹಾರ ನಡೆದರೆ ಸರ್ಕಾರ ಮಧ್ಯಪ್ರವೇಶ ಮಾಡೇ ಮಾಡುತ್ತದೆ. ಯಂಗ್ ಇಂಡಿಯನ್ ಎಂಬ ನಾಮದ ಕಂಪನಿ ಹೇಗೆ ನ್ಯಾಷನಲ್ ಹೆರಾಲ್ಡ್ ಆಸ್ತಿ ಖರೀದಿಸಿತು? ಇವರು ದೇಶದ ಆಸ್ತಿ ಲೂಟಿ ಮಾಡಿದ್ರೂ ಯಾರೂ ಕೇಳಬಾರದಾ? ಇಂದಿರಾ ಅಂದ್ರೆ ಇಂಡಿಯಾ, ಇಂಡಿಯಾದ ಆಸ್ತಿಯೆಲ್ಲ ಇಂದಿರಾ ಕುಟುಂಬಕ್ಕೆ ಸೇರಿದ್ದು ಎನ್ನುವ ಮನಸ್ಥಿತಿಯಲ್ಲಿ ಕಾಂಗ್ರೆಸ್‌ನವರಿದ್ದಾರೆ. ಇವತ್ತು ಈ ಪ್ರಕರಣ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಮಾಡುತ್ತಿದೆ, ಅದು ಬೂಟಾಟಿಕೆಯ ಪ್ರತಿಭಟನೆ, ಅದಕ್ಕೆ ಏನೂ ಅರ್ಥ ಇಲ್ಲ. ಕಾಂಗ್ರೆಸ್‌ಗೆ ಈಗ ರಾಹುಕಾಲವಿದೆ. ರಾಹು ಬಿಡಬೇಕಾದರೆ ಇನ್ನೂ ನೂರು ವರ್ಷ ಬೇಕು. ಎಪ್ಪತ್ತು ವರ್ಷ ಆಳ್ವಿಕೆ ನಡೆಸಿ ಲೂಟಿ ಮಾಡಿದ್ದರು. ಆಗ ಅವರ ಬಳಿಯಿದ್ದ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡರು. ಎಮರ್ಜೆನ್ಸಿ ತಂದು ಆ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡಿದ್ದು ಯಾರು? ಕಾಂಗ್ರೆಸ್‌ನವರು 70 ಸಲ ಸಂವಿಧಾನಕ್ಕೆ ತಿದ್ದುಪಡಿ ತಂದು ಕಾನೂನು ಉಲ್ಲಂಘಿಸಿದ್ದರು ಎಂದು ಆಗ್ರಹಿಸಿದರು.ಇದನ್ನೂ ಓದಿ: ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ನಾಳೆ ಭಾರತಕ್ಕೆ ಭೇಟಿ – ಪ್ರಧಾನಿ ಮೋದಿಯಿಂದ ವಿಶೇಷ ಔತಣಕ್ಕೆ ಸಿದ್ಧತೆ

  • ರಾಹುಲ್‌ಗಾಂಧಿ 3 ವರ್ಷ ಸಾಮಾನ್ಯ ಪಾಸ್‌ಪೋರ್ಟ್‌ ಬಳಸಲು ದೆಹಲಿ ಕೋರ್ಟ್‌ ಅನುಮತಿ

    ರಾಹುಲ್‌ಗಾಂಧಿ 3 ವರ್ಷ ಸಾಮಾನ್ಯ ಪಾಸ್‌ಪೋರ್ಟ್‌ ಬಳಸಲು ದೆಹಲಿ ಕೋರ್ಟ್‌ ಅನುಮತಿ

    ನವದೆಹಲಿ: ಸಂಸತ್‌ ಸದಸ್ಯತ್ವದಿಂದ ಅನರ್ಹಗೊಂಡ ನಂತರ ಸಂಸದೀಯ ಸವಲತ್ತುಗಳನ್ನೂ ಕಳೆದುಕೊಂಡ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಅವರಿಗೆ 3 ವರ್ಷ ಸಾಮಾನ್ಯ ಪಾಸ್‌ಪೋರ್ಟ್‌ (Ordinary ParssPort) ಬಳಸಲು ದೆಹಲಿ ಕೋರ್ಟ್‌ ಶುಕ್ರವಾರ ಅನುಮತಿ ನೀಡಿದೆ.

    ಸಂಸದ ಸ್ಥಾನದಿಂದ ಅನರ್ಹಗೊಂಡ ನಂತರ ರಾಹುಲ್‌ಗಾಂಧಿ ತಮ್ಮ ಪಾಸ್‌ಪೋರ್ಸ್‌ ಅನ್ನು ಒಪ್ಪಿಸಿದ್ದರು. ನಂತರ ಗಾಂಧಿ ಅವರು ನಿರಾಕ್ಷೇಪಣಾ ಪ್ರಮಾಣಪತ್ರಕ್ಕಾಗಿ (NOC) ಕೋರ್ಟ್‌ ಸಂಪರ್ಕಿಸಿದ್ದರು. ಈ ಕುರಿತು ವಿಚಾರಣೆ ನಡೆಸಿದಾಗ ಅರ್ಜಿಯನ್ನು ಭಾಗಶಃ ಅನುಮತಿಸುವುದಾಗಿ ಕೋರ್ಟ್‌ ಹೇಳಿದೆ. ಆದ್ರೆ 10 ವರ್ಷಗಳು ಇರುವುದಿಲ್ಲ, ಕೇವಲ 3 ವರ್ಷಗಳ ಕಾಲ ಸಾಮಾನ್ಯ ಪಾಸ್‌ಪೋರ್ಟ್‌ ಬಳಸಬಹುದಾಗಿ ತಿಳಿಸಿದೆ. ಇದನ್ನೂ ಓದಿ: ಮೋದಿ ವಿರುದ್ಧ ವಿವಾದಿತ ಹೇಳಿಕೆ – ಸತ್ಯವೇ ನನ್ನ ದೇವರು ಎಂದ ರಾಹುಲ್

    ರಾಹುಲ್ ಗಾಂಧಿ ಅವರು ಪಾಸ್‌ ಪೋರ್ಟ್ ಹೊಂದಲು ನ್ಯಾಯಾಲಯದ ಅನುಮತಿ ಬೇಕಿತ್ತು. ಏಕೆಂದರೆ ಅವರು ನ್ಯಾಷನಲ್ ಹೆರಾಲ್ಡ್ ಪ್ರಕರಣದ (National Herald Case) ಆರೋಪಿಯಾಗಿದ್ದಾರೆ. ಅಕ್ರಮ ಹಣ ವರ್ಗಾವಣೆ ಪ್ರಕರಣ ಹಾಗೂ ಹಣಕಾಸು ದುರ್ಬಳಕೆ ಆರೋಪಗಳು ಅವರ ಮೇಲಿದೆ. ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರು ರಾಹುಲ್ ಗಾಂಧಿ ವಿರುದ್ಧ ಪ್ರಕರಣ ದಾಖಲಿಸಿದ್ದರು. ಇದನ್ನೂ ಓದಿ: ನ್ಯಾಷನಲ್ ಹೆರಾಲ್ಡ್ ಕೇಸ್- ರಾಹುಲ್, ಸೋನಿಯಾ ಅರ್ಜಿ ವಜಾ

    ರಾಹುಲ್ ಗಾಂಧಿ ಅವರು ಪಾಸ್ ಪೋರ್ಟ್‌ ಹೊಂದಲು ನ್ಯಾಯಾಲಯದಿಂದ ನಿರಪೇಕ್ಷಣಾ ಪತ್ರ ಕೋರಿದ್ದ ಹಿನ್ನೆಲೆಯಲ್ಲಿ ನ್ಯಾಯಾಲಯವು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರಿಗೆ ತಮ್ಮ ಪ್ರತಿಕ್ರಿಯೆ ಸಲ್ಲಿಸುವಂತೆ ಕಳೆದ ಬುಧವಾರ ಸೂಚಿಸಿತ್ತು. ಶುಕ್ರವಾರದ ಒಳಗೆ ತಮ್ಮ ಪ್ರತಿಕ್ರಿಯೆ ಸಲ್ಲಿಸುವಂತೆ ಸ್ವಾಮಿ ಅವರಿಗೆ ನ್ಯಾಯಾಲಯ ಡೆಡ್ ಲೈನ್ ನೀಡಿತ್ತು. ಶುಕ್ರವಾರದ ವಿಚಾರಣೆ ವೇಳೆ ಮೆಟ್ರೋಪಾಲಿಟನ್ ನ್ಯಾಯಾಲಯದ ಹೆಚ್ಚುವರಿ ಮುಖ್ಯ ನ್ಯಾಯಮೂರ್ತಿ ವೈಭವ್ ಮೆಹ್ತಾ ಅವರು ರಾಹುಲ್ ಗಾಂಧಿ ಅವರಿಗೆ ಪ್ರಯಾಣ ಮಾಡುವ ಮೂಲಭೂತ ಹಕ್ಕು ಇದೆ ಎಂದು ಅಭಿಪ್ರಾಯಪಟ್ಟರು. ಇದಕ್ಕೆ ನಾವು ನಿರ್ಬಂಧ ಹೇರಲು ಸಾಧ್ಯವಿಲ್ಲ ಎಂದು ಹೇಳಿದ ನ್ಯಾಯಮೂರ್ತಿಗಳು ವಿದೇಶಿ ಪ್ರವಾಸಕ್ಕೆ ಅನುಮತಿ ನೀಡಿದ್ದಾರೆ.

    2015ರ ಡಿಸೆಂಬರ್‌ನಲ್ಲಿ ರಾಹುಲ್‌ ಗಾಂಧಿ ಅವರಿಗೆ ಜಾಮೀನು ನೀಡುವಾಗ ನ್ಯಾಯಾಲಯವು ಅವರ ಪ್ರಯಾಣದ ಮೇಲೆ ಯಾವುದೇ ನಿರ್ಬಂಧ ವಿಧಿಸಿಲ್ಲ. ಈ ಹಿನ್ನೆಲೆಯಲ್ಲಿ ನಿರ್ಬಂಧ ವಿಧಿಸಬೇಕೆನ್ನುವ ಬಿಜೆಪಿ ನಾಯಕನ ಮನವಿಯನ್ನು ನ್ಯಾಯಾಲಯ ತಿಸ್ಕರಿಸಿದೆ.

    2019ರ ಲೋಕಸಭಾ ಚುನಾವಣೆ ವೇಳೆ ರಾಹುಲ್‌ ಗಾಂಧಿ ಅವರು ಭಾಷಣ ಮಾಡುತ್ತಾ ʻಮೋದಿʼ ಉಪನಾಮ ಬಳಸಿ ಟೀಕಿಸಿದ್ದರು. ಈ ಹಿನ್ನೆಲೆ ಮಾನನಷ್ಟ ಮೊಕದ್ದಮೆಯಲ್ಲಿ 2 ವರ್ಷ ಶಿಕ್ಷೆಗೆ ಗುರಿಯಾಗಿ ಸಂಸತ್‌ ಸದಸ್ಯತ್ವ ಸ್ಥಾನವನ್ನೂ ಕಳೆದುಕೊಂಡರು. ಇದನ್ನೂ ಓದಿ: ರಾಹುಲ್‌ಗೆ ಬಿಗ್‌ ರಿಲೀಫ್‌ – 30 ದಿನಗಳ ಜಾಮೀನು ಮಂಜೂರು’

    ಏನಿದು ನ್ಯಾಷನಲ್ ಹೆರಾಲ್ಡ್ ಪ್ರಕರಣ?
    2013ರಲ್ಲಿ ಜನವರಿ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಖರೀದಿಯಲ್ಲಿ ಭಾರೀ ಅವ್ಯವಹಾರ ನಡೆದಿರುವ ಕುರಿತು ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಅವರು ದೆಹಲಿ ಪಟಿಯಾಲಾ ಹೌಸ್ ಕೋರ್ಟ್‍ನಲ್ಲಿ ಅಂದಿನ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಅವರ ಕಂಪೆನಿ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಸೇರಿದಂತೆ ಸೋನಿಯಾ ಗಾಂಧಿ ಸಂಬಂಧಿತ ವ್ಯಕ್ತಿಗಳ ವಿರುದ್ಧ ದೂರು ಸಲ್ಲಿಸಿದ್ದರು. ಇದನ್ನೂ ಓದಿ: ಮೋದಿ ವಿರುದ್ಧ ವಿವಾದಿತ ಹೇಳಿಕೆ – ಸತ್ಯವೇ ನನ್ನ ದೇವರು ಎಂದ ರಾಹುಲ್

    ಸುಬ್ರಮಣಿಯನ್ ಸ್ವಾಮಿ ಆರೋಪವೇನು?
    ಅಸೋಸಿಯೇಟೆಡ್ ಜರ್ನಲ್ಸ್(AGL) ಸಂಸ್ಥೆಯನ್ನು ಜವಹಾರ್ ಲಾಲ್ ನೆಹರು ಅವರು 1937ರ ನವೆಂಬರ್ 20 ರಂದು ಸ್ಥಾಪಿಸಿದ್ದರು. 5 ಸಾವಿರ ಸ್ವಾತಂತ್ರ್ಯ ಹೋರಾಟಗಾರರ ಸಹಕಾರದಿಂದ ಈ ಸಾರ್ವಜನಿಕ ಕಂಪನಿ ಸ್ಥಾಪನೆಯಾಗಿತ್ತು. ಎಜೆಎಲ್ ಸಂಸ್ಥೆಯ ಸ್ಥಾಪನೆ ಬಳಿಕ ಅಂದಿನ ಪ್ರಧಾನಿ ನೆಹರೂ ಅವರು, ನವದೆಹಲಿ, ಲಕ್ನೋ, ಭೋಪಾಲ್, ಮುಂಬೈ, ಇಂದೋರ್ ನಗರದಲ್ಲಿ ಸರ್ಕಾರದ ವತಿಯಿಂದ ಜಮೀನು ಮಂಜೂರು ಮಾಡಿದ್ದರು. ಅಲ್ಲದೇ ಅವರ ಅವಧಿಯಲ್ಲಿ ಸಂಸ್ಥೆಗೆ ಅಪಾರ ಪ್ರಮಾಣದ ದೇಣಿಗೆ ಹರಿದುಬಂದಿತ್ತು. ಎಜೆ ಸಂಸ್ಥೆ ಅಂದು ಉರ್ದು ಆವೃತ್ತಿಯ ‘ಕ್ವಾಮಿ ಆವಾಜ್’ ಹಾಗೂ ಇಂಗ್ಲಿಷ್ ಆವೃತ್ತಿಯ ‘ನ್ಯಾಷನಲ್ ಹೆರಾಲ್ಡ್’ ಪತ್ರಿಕೆಗಳನ್ನು ಪ್ರಕಟಿಸುತಿತ್ತು.

    ಎಜೆಎಲ್ ಸಂಸ್ಥೆಗೆ ಕಾಂಗ್ರೆಸ್ ಪಕ್ಷ ಸಂಗ್ರಹಿಸಿದ್ದ ನಿಧಿಯಿಂದ 90 ಕೋಟಿ ರೂ. ಹಣವನ್ನು ಶೂನ್ಯ ಬಡ್ಡಿದರದಲ್ಲಿ ಸಾಲ ನೀಡಲಾಗಿತ್ತು. 2011ರಲ್ಲಿ ಎಜೆಎಲ್ ಸಂಸ್ಥೆಯ ಅಧ್ಯಕ್ಷರಾಗಿದ್ದ ಮೋತಿ ಲಾಲ್ ವೋರಾ ತಮ್ಮ ಸಂಸ್ಥೆ ಸಾಲ ಮರುಪಾವತಿ ಮಾಡಲು ಸಾಧ್ಯವಿಲ್ಲ ಎಂದು ಹೇಳಿ ಸಂಸ್ಥೆ ಹಾಗೂ ಅದರ ಆಸ್ತಿಗಳನ್ನು ರಾಹುಲ್ ಗಾಂಧಿ ಕುಟುಂಬ ಒಡೆತನದಲ್ಲಿದ್ದ ಯಂಗ್ ಇಂಡಿಯನ್ ಸಂಸ್ಥೆಗೆ ವರ್ಗಾಯಿಸಲು ಸಮ್ಮತಿಸಿದ್ದರು.

  • ಗಾಂಧಿ ಕುಟುಂಬಕ್ಕೆ ಸದ್ಯಕಿಲ್ಲ ಮುಕ್ತಿ – ರಾಹುಲ್, ಸೋನಿಯಾಗೆ ಮತ್ತೆ ED ಸಮನ್ಸ್?

    ಗಾಂಧಿ ಕುಟುಂಬಕ್ಕೆ ಸದ್ಯಕಿಲ್ಲ ಮುಕ್ತಿ – ರಾಹುಲ್, ಸೋನಿಯಾಗೆ ಮತ್ತೆ ED ಸಮನ್ಸ್?

    ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಿಂದ (National Herald case) ಗಾಂಧಿ ಕುಟುಂಬಕ್ಕೆ (Gandhi Famiy) ಸದ್ಯಕ್ಕೆ ಮುಕ್ತಿ ದೊರೆತಂತೆ ಕಾಣ್ತಿಲ್ಲ. ಕಾಂಗ್ರೆಸ್ (Congress) ಒಡೆತನದ ಯಂಗ್ ಇಂಡಿಯನ್‌ನಲ್ಲಿ ಸಂಶಯಾಸ್ಪದ ವಹಿವಾಟುಗಳು ನಡೆದಿದ್ದು, ಜಾರಿ ನಿರ್ದೇಶನಾಲಯ (ED) ಮತ್ತೆ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ (Sonia Gandhi) ಹಾಗೂ ರಾಹುಲ್‌ ಗಾಂಧಿಯವರಿಗೆ (Rahul Gandhi) ಸಮನ್ಸ್ ನೀಡುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

    ಶೆಲ್ ಕಂಪನಿಗಳ ಮೂಲಕ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸುಮಾರು 4 ರಿಂದ 5 ಕೋಟಿ ರೂ.ಗಳ ವಹಿವಾಟು ನಡೆದಿದೆ. ಈ ಹೇಳಿಕೆಯನ್ನು ಇ.ಡಿ (ED) ದಾಖಲಿಸಿಕೊಂಡಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಖರ್ಗೆ ಸಮ್ಮುಖದಲ್ಲಿ ನ್ಯಾಷನಲ್‌ ಹೆರಾಲ್ಡ್‌ ಕಚೇರಿ ಶೋಧ: ಅಧಿವೇಶನದ ಮಧ್ಯೆ ಸಮನ್ಸ್‌ ಜಾರಿಗೆ ಕಾಂಗ್ರೆಸ್‌ ಕಿಡಿ

    ಪವನ್ ಬನ್ಸಾಲ್, ಮಲ್ಲಿಕಾರ್ಜುನ ಖರ್ಗೆ (Mallikarjun Kharge), ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಸೇರಿದಂತೆ ಯಂಗ್ ಇಂಡಿಯನ್‌ನ ಎಲ್ಲಾ ಪದಾಧಿಕಾರಿಗಳನ್ನು ಶೀಘ್ರದಲ್ಲೇ ವಿಚಾರಣೆಗೆ ಕರೆಸಲಾಗುತ್ತದೆ. ಜೊತೆಗೆ ಅನುಮಾನಾಸ್ಪದ ವಹಿವಾಟುಗಳಿಗೆ ಸಂಬಂಧಿಸಿದ ಸಾಕ್ಷ್ಯಗಳನ್ನು ಇಟ್ಟುಕೊಂಡೇ ಅವರ ವಿಚಾರಣೆ ನಡೆಸಲು ಇಡಿ ನಿರ್ಧರಿಸಿದೆ. ಎಐಸಿಸಿ ಅಧ್ಯಕ್ಷ (AICC President) ಮಲ್ಲಿಕಾರ್ಜುನ ಖರ್ಗೆಗೂ ಸಮನ್ಸ್ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಇದನ್ನೂ ಓದಿ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ – ಯಂಗ್‌ ಇಂಡಿಯಾ ಕಚೇರಿ ಸೀಲ್‌ ಮಾಡಿದ ED

    ಸೋನಿಗಾ ಗಾಂಧಿ ಹಾಗೂ ರಾಹುಲ್ ಗಾಂಧಿ ಯಂಗ್ ಇಂಡಿಯನ್‌ನಲ್ಲಿ ಹೆಚ್ಚಿನ ಷೇರು ಹೊಂದಿದ್ದಾರೆ. ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ನಡೆಯುತ್ತಿರುವ ತನಿಖೆಯ ಭಾಗವಾಗಿ ಆಗಸ್ಟ್‌ ಇಡಿ ದೆಹಲಿಯ ಯಂಗ್ ಇಂಡಿಯನ್ ಕಚೇರಿಯಲ್ಲಿ ಶೋಧ ಕಾರ್ಯಾಚರಣೆ ನಡೆಸಿತ್ತು. ಇದನ್ನೂ ಓದಿ: ನ್ಯಾಷನಲ್‌ ಹೆರಾಲ್ಡ್‌ ಕೇಸ್‌- ಇಂದು ಇಡಿ ಮುಂದೆ ಹಾಜರಾಗಲಿದ್ದಾರೆ ಸೋನಿಯಾ

    ಹೆರಾಲ್ಡ್ ಹೌಸ್ ಕಟ್ಟಡದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಸಮ್ಮುಖದಲ್ಲಿ 6 ಗಂಟೆಗಳಿಗೂ ಹೆಚ್ಚು ಕಾಲ ಶೋಧ ನಡೆಸಲಾಗಿತ್ತು. ಸಂಸತ್ತಿನ ಅಧಿವೇಶನದ ಮಧ್ಯದಲ್ಲಿಯೇ ಮಲ್ಲಿಕಾರ್ಜುನ್ ಖರ್ಗೆಯವರಿಗೆ ಸಮನ್ಸ್ ಜಾರಿ ಮಾಡಿರುವ ಬಗ್ಗೆ ಕಾಂಗ್ರೆಸ್ ಪಕ್ಷ ಈ ಹಿಂದೆ ಆಕ್ರೋಶ ವ್ಯಕ್ತಪಡಿಸಿತ್ತು.

    Live Tv
    [brid partner=56869869 player=32851 video=960834 autoplay=true]

  • ಇಡಿಯಿಂದ ಮುಂದುವರಿದ ವಿಚಾರಣೆ- ಅರೆಸ್ಟ್ ಆಗ್ತಾರಾ ರಾಹುಲ್ ಗಾಂಧಿ..?

    ಇಡಿಯಿಂದ ಮುಂದುವರಿದ ವಿಚಾರಣೆ- ಅರೆಸ್ಟ್ ಆಗ್ತಾರಾ ರಾಹುಲ್ ಗಾಂಧಿ..?

    ನವದೆಹಲಿ: ಜಾರಿ ನಿರ್ದೇಶನಾಲಯ(ಇಡಿ) ಇಕ್ಕಳದಲ್ಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅರೆಸ್ಟ್ ಆಗ್ತಾರಾ ಅನ್ನೋ ಅನುಮಾನವೊಂದು ಹುಟ್ಟಿಕೊಂಡಿದೆ.

    ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಇಡಿ ಡ್ರಿಲ್ ಮುಂದುವರಿದಿದ್ದು, ಇನ್ನೂ ಇಡಿ ಕಚೇರಿಯಲ್ಲೇ ಇದ್ದಾರೆ. ಮಧ್ಯರಾತ್ರಿವರೆಗೆ ವಿಚಾರಣೆ ಮುಂದುವರಿಯುವ ಸಾಧ್ಯತೆ ಇದೆ. 5ನೇ ದಿನವಾದ ಇಂದು ಕೂಡ ಬೆಳಗ್ಗೆಯಿಂದ ಇಡಿ ಕಚೇರಿಯಲ್ಲೇ ರಾಗಾ ಇದ್ದಾರೆ. ಈ ಹಿನ್ನೆಲೆಯಲ್ಲಿ ಇಡಿ ರಾಹುಲ್ ಬಂಧನಕ್ಕೆ ಸಿದ್ಧವಾಗಿದ್ಯಾ ಅನ್ನೋ ಪ್ರಶ್ನೆ ಎದ್ದಿದೆ. ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆ – ಬಿಜೆಪಿಯಿಂದ ಅಭ್ಯರ್ಥಿಯಾಗಿ ಬುಡಕಟ್ಟು ಜನಾಂಗದ ದ್ರೌಪದಿ ಮುರ್ಮು ಆಯ್ಕೆ

    ಇಂದು ಬೆಳಗ್ಗೆ 11 ಗಂಟೆಗೆ ರಾಗಾ ವಿಚಾರಣೆ ಹಾಜರಾಗಿದ್ದಾರೆ. ರಾತ್ರಿ 8:30ರ ವೇಳೆಗೆ ಇಡಿ ಅಧಿಕಾರಿಗಳು ರಾಹುಲ್‍ಗೆ ವಿರಾಮ ನೀಡಿದರು. ಈ ಮೂಲಕ ಇಡೀ ದಿನ ನಿರಂತರ ವಿಚಾರಣೆ ನಡೆಸಿ ಅರ್ಧ ಗಂಟೆ ವಿರಾಮ ನೀಡಲಾಗಿತ್ತು. ಇದೀಗ ವಿರಾಮದ ಬಳಿಕ ಮತ್ತೆ ವಿಚಾರಣೆ ಮುಂದುವರಿದಿದೆ. ತಡ ರಾತ್ರಿಯವರೆಗೂ ಇಡಿ ಡ್ರಿಲ್ ಮಾಡುತ್ತಿರುವುದರಿಂದ ರಾಗಾ ಬಂಧಿಸಲು ಅಧಿಕಾರಿಗಳು ಸಿದ್ಧತೆ ನಡೆಸುತ್ತಿದ್ದಾರಾ ಅನ್ನೋ ಕುತೂಹಲ ಮೂಡಿದೆ.

    ಇತ್ತ ನಾಳೆ ದೆಹಲಿಯಲ್ಲಿ ಕಾಂಗ್ರೆಸ್ ಹೈಡ್ರಾಮಾ ನಡೆಯುವ ಸಾಧ್ಯತೆ ಇದೆ. ಇಡಿ ವಿಚಾರಣೆ ವಿರೋಧಿಸಿ ನಾಳೆ ದೆಹಲಿಯಲ್ಲಿ ಪ್ರೊಟೆಸ್ಟ್ ನಡೆಯಲಿದ್ದು, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಸೇರಿ ಎಲ್ಲಾ ರಾಜ್ಯಗಳ ಪ್ರಮುಖ ನಾಯಕರು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ.

    Live Tv

  • ಇಡಿಯಿಂದ ರಾಹುಲ್ ಗಾಂಧಿಗೆ 3 ದಿನ ರಿಲೀಫ್

    ಇಡಿಯಿಂದ ರಾಹುಲ್ ಗಾಂಧಿಗೆ 3 ದಿನ ರಿಲೀಫ್

    ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ವಿಚಾರಣೆ ಎದುರಿಸುತ್ತಿರುವ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿಗೆ ಇಡಿ ವಿಚಾರಣೆಯಿಂದ ಮೂರು ದಿನ ರಿಲೀಫ್‌ ನೀಡಿದೆ.

    ಗುರುವಾರ ಈ ಸಂಬಂಧ ಇಡಿ ಅಧಿಕಾರಿಗಳಿಗೆ ಪತ್ರ ಬರೆದಿರುವ ರಾಹುಲ್ ಗಾಂಧಿ, ತಾಯಿ ಸೋನಿಯಾ ಗಾಂಧಿಗೆ ಕೊರೊನಾ ಸೋಂಕು ತಗುಲಿದ್ದು ಆಸ್ಪತ್ರೆ ದಾಖಲಾಗಿದ್ದಾರೆ ಮತ್ತು ಇದೇ ಭಾನುವಾರ ತಮ್ಮ ಹುಟ್ಟುಹಬ್ಬ ಇರುವ ಹಿನ್ನೆಲೆ ಭಾನುವಾರದವರೆಗೂ ವಿಚಾರಣೆಗೆ ಹಾಜರಾಗಲು ಸಾಧ್ಯವಾಗುವುದಿಲ್ಲ ಎಂದು ಮನವಿ ಪತ್ರದಲ್ಲಿ ತಿಳಿಸಿದ್ದರು. ಇದನ್ನೂ ಓದಿ: ಇಸ್ಲಾಮಿಕ್ ಜಿಹಾದಿ ಧರ್ಮಾಂಧತೆ ಬಗ್ಗೆ ಕ್ರಮಕೈಗೊಳ್ಳಿ – ರಾಷ್ಟ್ರಪತಿಗೆ ಭಜರಂಗದಳದಿಂದ ಪತ್ರ

    ಸೋಮವಾರದಿಂದ ಬುಧವಾರದವರೆಗೂ ವಿಚಾರಣೆಗೆ ಹಾಜರಾಗಿದ್ದ ರಾಹುಲ್ ಗಾಂಧಿ ಸುಮಾರು 16 ಪ್ರಶ್ನೆಗಳಿಗೆ ಉತ್ತರ ನೀಡಿದ್ದರು. ಗುರುವಾರ ಬಿಡುವು ನೀಡಿದ್ದ ಇಡಿ ಶುಕ್ರವಾರ ವಿಚಾರಣೆ ಹಾಜರಾಗಲು ಸಮನ್ಸ್ ನೀಡಿತ್ತು. ಆದರೆ ಈ ನಡುವೆ ಈ ಪತ್ರ ಬರೆದು ವಿನಾಯಿತಿ ಕೋರಿದ್ದರು. ಇದೀಗ ಇಡಿ ಅಧಿಕಾರಿಗಳು ರಾಹುಲ್ ಗಾಂಧಿಗೆ ಅನುಮತಿಯನ್ನು ನೀಡಿದ್ದಾರೆ. ಇದನ್ನೂ ಓದಿ: ಬೆಳ್ಳಂಬೆಳಗ್ಗೆ ಅಧಿಕಾರಿಗಳಿಗೆ ಎಸಿಬಿ ಶಾಕ್- ಬೆಂಗಳೂರು ಸೇರಿ 21 ಕಡೆ ದಾಳಿ

    ಸೋಮವಾರದವರೆಗೂ ರಾಹುಲ್ ಗಾಂಧಿ ವಿಚಾರಣೆಗೆ ಹಾಜರಾಗುವುದಿಲ್ಲ ಎಂದು ತಿಳಿಸಿವೆ. ರಾಹುಲ್ ಗಾಂಧಿ ವಿಚಾರಣೆಯಿಂದ ಬ್ರೇಕ್ ತೆಗೆದುಕೊಂಡ ಹಿನ್ನೆಲೆ ಎಲ್ಲ ಕಾಂಗ್ರೆಸ್ ನಾಯಕರಿಗೂ ಕ್ಷೇತ್ರಕ್ಕೆ ತೆರಳಿ ಸೋಮವಾರ ದೆಹಲಿಗೆ ಮರಳುವಂತೆ ಸೂಚಿಸಿದ್ದಾರೆ.

    Live Tv

  • ನ್ಯಾಷನಲ್‌ ಹೆರಾಲ್ಡ್‌ ಸೋನಿಯಾ, ರಾಹುಲ್‌ ಗಾಂಧಿ ವೈಯಕ್ತಿಕ ಆಸ್ತಿಯಲ್ಲ: ಮಲ್ಲಿಕಾರ್ಜುನ ಖರ್ಗೆ

    ನ್ಯಾಷನಲ್‌ ಹೆರಾಲ್ಡ್‌ ಸೋನಿಯಾ, ರಾಹುಲ್‌ ಗಾಂಧಿ ವೈಯಕ್ತಿಕ ಆಸ್ತಿಯಲ್ಲ: ಮಲ್ಲಿಕಾರ್ಜುನ ಖರ್ಗೆ

    ನವದೆಹಲಿ: ನ್ಯಾಷನಲ್‌ ಹೆರಾಲ್ಡ್‌ ಪತ್ರಿಕೆ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ಅವರ ವೈಯಕ್ತಿಕ ಆಸ್ತಿಯಲ್ಲ ಎಂದು ರಾಜ್ಯಸಭಾ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.

    ರಾಹುಲ್‌ ಗಾಂಧಿ ಅವರನ್ನು ಇ.ಡಿ ವಿಚಾರಣೆಗೆ ಒಳಪಡಿಸಿರುವುದನ್ನು ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ ವೇಳೆ ಮಾತನಾಡಿದ ಖರ್ಗೆ, ಸ್ವತಂತ್ರ್ಯ ನಂತರ ನೆಹರೂ ಅವರು ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಹುಟ್ಟುಹಾಕಿದರು. ಇಂಗ್ಲಿಷ್, ಹಿಂದಿ, ಉರ್ದು ಮೂರು ಭಾಷೆಗಳಲ್ಲಿ ಪತ್ರಿಕೆ ನಡೆಯಿತು. 2008ರ ಬಳಿಕ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದರಿಂದ ಪತ್ರಿಕೆ ಮುಚ್ಚಲಾಯಿತು. ನಂತರ ನೌಕರರ ಬಾಕಿ ಹಣ ತೀರಿಸಲು 90 ಕೋಟಿ ರೂ. ಸಾಲ ಮಾಡಲಾಗಿತ್ತು. ಜಾತ್ಯತೀತ ತತ್ವದ ಪ್ರಚಾರಕ್ಕಾಗಿ ಈ ಪತ್ರಿಕೆ ರೂಪಿಸಲಾಗಿತ್ತು. ಅದೇ ಕಾರಣಕ್ಕೆ ನ್ಯಾಷನಲ್ ಹೆರಾಲ್ಡ್ ಅನ್ನು ಯಂಗ್ ಇಂಡಿಯಾ ಸಂಸ್ಥೆಗೆ ನೀಡಲಾಗಿದೆ ಎಂದು ಇತಿಹಾಸದ ಬಗ್ಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ರಾಹುಲ್‍ಗೆ 11 ಗಂಟೆ ಇಡಿ ಡ್ರಿಲ್‌ – ಇಂದು ಹಾಜರಾಗುವಂತೆ ಸೂಚನೆ

    9 ವರ್ಷದ ಬಳಿಕ ಇ.ಡಿ ಈ ಬಗ್ಗೆ ದೂರು ದಾಖಲಿಸಿಕೊಂಡಿದೆ. ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರ ಧೈರ್ಯ ಕಡಿಮೆ ಮಾಡಲು ಈ ದಾಳಿ ನಡೆಸಲಾಗಿದೆ. ರಾಹುಲ್ ಗಾಂಧಿ, ಹಣದುಬ್ಬರ, ನಿರುದ್ಯೋಗ ಮತ್ತಿತರ ಜ್ವಲಂತ ಸಮಸ್ಯೆಗಳ ಬಗ್ಗೆ ಮಾತನಾಡುತ್ತಿದ್ದಾರೆ. ರಾಹುಲ್ ಗಾಂಧಿ ಅವರ ಬಾಯಿ ಮುಚ್ಚಿಸಲು ಇ.ಡಿ ದಾಳಿ ಮಾಡಲಾಗಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

    ಯಂಗ್ ಇಂಡಿಯನ್ ಸಂಸ್ಥೆ ಬೈಲಾ ಪ್ರಕಾರ ಯಾರೂ ಹಣ ತೆಗೆಯಲು ಸಾಧ್ಯವಿಲ್ಲ. ಸದಸ್ಯರು ಟಿಎ-ಡಿಎ ಅನ್ನು ಕೂಡ ಡ್ರಾ ಮಾಡಲು ಸಾಧ್ಯವಿಲ್ಲ. ಆದರೂ ಕೇಂದ್ರ ಸರ್ಕಾರ ದುರುದ್ದೇಶದಿಂದ ದೂರು ದಾಖಲಿಸಿಕೊಂಡಿದೆ. ಕೇಂದ್ರ ಸರ್ಕಾರದ ದುರುದ್ದೇಶದ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದೇವೆ. ಶಾಂತಯುತವಾಗಿ ಪ್ರತಿಭಟನೆ ಮಾಡಲು ಮುಂದಾಗಿದ್ದೆವು. ಆದರೆ ಎಐಸಿಸಿ ಕಚೇರಿಗೆ ಬರುವ ಎಲ್ಲಾ ರಸ್ತೆಗಳನ್ನು ಬಂದ್ ಮಾಡಿದ್ದಾರೆ. ನನ್ನ ಕಚೇರಿಗೆ ಬರುವುದಕ್ಕೂ ತಡೆಯೊಡ್ಡುತ್ತಿದ್ದಾರೆ. ನಮ್ಮ ನಾಯಕರನ್ನು ಭೇಟಿ ಮಾಡುವುದನ್ನೂ ತಡೆಯುತ್ತಿದ್ದಾರೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಇದನ್ನೂ ಓದಿ: ಪ್ರತಿಭಟನೆ ವೇಳೆ ತಳ್ಳಿದ ಪೊಲೀಸರು – ಮೂಳೆ ಮುರಿತಕ್ಕೊಳಗಾದ ಪಿ.ಚಿದಂಬರಂ

    ಕಾಂಗ್ರೆಸ್ ಪಕ್ಷದ ಮೇಲೆ ದಬ್ಬಾಳಿಕೆ ಮಾಡಲಾಗುತ್ತಿದೆ. ಈ ದಬ್ಬಾಳಿಕೆಗೆ ಕಾಂಗ್ರೆಸ್ಸಿಗರು ಜಗ್ಗಲ್ಲ. ಬಿಜೆಪಿಯವರಿಗೆ ಸತ್ಯಾಗ್ರಹ ಗೊತ್ತಿಲ್ಲ, ಚಳವಳಿ ಗೊತ್ತಿಲ್ಲ. ಬಿಜೆಪಿಯವರಿಗೆ ಪ್ರಚೋದನಕಾರಿ ಭಾಷಣ ಮಾಡುವುದು ಗೊತ್ತು. ರಾಷ್ಟ್ರದ ಹಿತಕ್ಕಾಗಿ ಕಾಂಗ್ರೆಸ್ ಪತ್ರಿಕೆಗಳನ್ನು ಹುಟ್ಟು ಹಾಕಿದೆ. ರಾಷ್ಟ್ರದ ಹಿತಕ್ಕಾಗಿ ಬಿಜೆಪಿ ಯಾವ ಪತ್ರಿಕೆಯನ್ನೂ ತೆರೆದಿಲ್ಲ ಎಂದು ಕುಟುಕಿದ್ದಾರೆ.

  • ನ್ಯಾಷನಲ್ ಹೆರಾಲ್ಡ್ ಕೇಸಲ್ಲಿ ರಾಹುಲ್ ಗಾಂಧಿಗೆ ಸಂಕಷ್ಟ – ಇಂದು 2 ಹಂತಗಳಲ್ಲಿ ಇ.ಡಿ ಡ್ರಿಲ್

    ನ್ಯಾಷನಲ್ ಹೆರಾಲ್ಡ್ ಕೇಸಲ್ಲಿ ರಾಹುಲ್ ಗಾಂಧಿಗೆ ಸಂಕಷ್ಟ – ಇಂದು 2 ಹಂತಗಳಲ್ಲಿ ಇ.ಡಿ ಡ್ರಿಲ್

    ನವದೆಹಲಿ: ಸಾಂವಿಧಾನಿಕ ತನಿಖಾ ಸಂಸ್ಥೆಗಳ ದುರುಪಯೋಗದ ಆರೋಪದ ನಡುವೆ ನ್ಯಾಷನಲ್ ಹೆರಾಲ್ಡ್ ಕೇಸಲ್ಲಿ ರಾಹುಲ್ ಗಾಂಧಿಯನ್ನು ಜಾರಿ ನಿರ್ದೇಶನಾಲಯ ವಿಚಾರಣೆಗೆ ಒಳಪಡಿಸುತ್ತಿದೆ. ದೆಹಲಿಯ ಇ.ಡಿ (ಜಾರಿ ನಿರ್ದೇಶನಾಲಯ) ಕಚೇರಿ ಮೂರನೇ ಅಂತಸ್ತಿನಲ್ಲಿ ಜಾರಿ ನಿರ್ದೇಶನಾಲಯದ ಹಿರಿಯ ಅಧಿಕಾರಿಗಳು ರಾಹುಲ್ ಗಾಂಧಿಯನ್ನು ಕಳೆದ 9 ಗಂಟೆಗಳಿಂದ ಸುದೀರ್ಘ ವಿಚಾರಣೆ ಮಾಡ್ತಿದ್ದಾರೆ.

    ಮನಿ ಲಾಂಡ್ರಿಂಗ್ ಪ್ರಕರಣಕ್ಕೆ ಸಂಬಂಧಿಸಿ ಹಲವು ಪ್ರಶ್ನೆ ಕೇಳಿದ್ದಾರೆ. ಬೆಳಗ್ಗೆ 11ರಿಂದ ಮಧ್ಯಾಹ್ನ 2.30ರವರೆಗೂ ಮೊದಲ ಹಂತದ ವಿಚಾರಣೆ ನಡೆದಿತ್ತು. ಊಟದ ವಿರಾಮದ ವೇಳೆ ರಾಹುಲ್ ಗಾಂಧಿ ಗಂಗಾರಾಮ್ ಆಸ್ಪತ್ರೆಗೆ ತೆರಳಿ ತಾಯಿ ಸೋನಿಯಾ ಆರೋಗ್ಯ ವಿಚಾರಿಸಿದ್ರು.

    ಮಧ್ಯಾಹ್ನ ಮೂರೂವರೆಗೆ ಮತ್ತೆ ಇ.ಡಿ ಕಚೇರಿಗೆ ವಾಪಸ್ಸಾದ ರಾಹುಲ್ ಗಾಂಧಿಯನ್ನು ಈ ಕ್ಷಣದವರೆಗೂ ಈಚೆ ಬಿಟ್ಟಿಲ್ಲ. ಯಾವಾಗ ಬಿಡ್ತಾರೋ ಗೊತ್ತಿಲ್ಲ. ಇಡಿ ಅಧಿಕಾರಿಗಳ ನಡೆ ಕುತೂಹಲ ಮೂಡಿಸಿದೆ. ಇ.ಡಿ ಸಮನ್ಸ್ ಪ್ರಕಾರ ಜೂನ್ ಏಳರಂದೇ ರಾಹುಲ್ ಗಾಂಧಿ ವಿಚಾರಣೆಗೆ ಹಾಜರಾಗಬೇಕಿತ್ತು. ಆದ್ರೆ, ರಾಹುಲ್ ವಿದೇಶ ಪ್ರವಾಸದಲ್ಲಿದ್ದ ಕಾರಣ ಕಾಲಾವಕಾಶ ಕೇಳಿದ್ರು. ಇದಕ್ಕೆ ಸ್ಪಂದಿಸಿದ್ದ ಇ.ಡಿ ವಿಚಾರಣೆ ಇಂದಿಗೆ ನಿಗದಿ ಮಾಡಿತ್ತು.

    ಏನಿದು ನ್ಯಾಷನಲ್ ಹೆರಾಲ್ಡ್ ಪ್ರಕರಣ?: ಮಾಜಿ ಪ್ರಧಾನಿ ದಿ. ಜವಾಹರ್ ಲಾಲಾ ನೆಹರೂ ಅವರ ಕನಸಿನ ಪತ್ರಿಕೆ ನ್ಯಾಷನಲ್ ಹೆರಾಲ್ಡ್. 1938ರಲ್ಲಿ ಮಾತೃಸಂಸ್ಥೆ ನ್ಯಾಷನಲ್ ಹೆರಾಲ್ಡ್ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ ಸ್ಥಾಪಿಸಿ, ಅಲ್ಲಿಂದ ನ್ಯಾಷನಲ್ ಹೆರಾಲ್ಡ್ ಸ್ಥಾಪಿಸಿದ್ರು. ಸದ್ಯ ಇದು ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಕಂಪನಿಯ ಯಂಗ್ ಇಂಡಿಯಾ ಲಿಮಿಟೆಡ್ ಒಡೆತನದಲ್ಲಿದೆ. ಇದನ್ನೂ ಓದಿ: ಬಿಜೆಪಿ ಹಿರಿಯ ಮುಖಂಡ ಎ.ಜಿ.ಕೊಡ್ಗಿ ನಿಧನ- ಸಿಎಂ, ಕಟೀಲ್ ಸಂತಾಪ

    ಮಾತೃಸಂಸ್ಥೆಯು ಸಾಲದ ಸುಳಿಯಲ್ಲಿ ಸಿಲುಕಿದ ನಂತರ 2008 ರಲ್ಲಿ ಪತ್ರಿಕೆಗಳನ್ನು ಮುಚ್ಚಲಾಯಿತು. ಈ ಹಿಂದೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‍ನಿಂದ 90.25 ಕೋಟಿ ಬಡ್ಡಿ ರಹಿತ ಸಾಲವನ್ನು ತೆಗೆದುಕೊಂಡಿತ್ತು. 2010ರ ವೇಳೆಗೆ ಎಜಿಎಲ್ 1057 ಷೇರುದಾರರನ್ನು ಹೊಂದಿತ್ತು, ಆದರೆ ತೀವ್ರ ನಷ್ಟದಲ್ಲಿದ್ದ ಈ ಕಂಪನಿಯ ಷೇರುಗಳನ್ನು 2011ರಲ್ಲಿ ಯಂಗ್ ಇಂಡಿಯಾ ಸಂಸ್ಥೆಗೆ ವರ್ಗಾವಣೆ ಮಾಡಲಾಗಿತ್ತು. 2016ರಿಂದ ಮ್ತತೊಮ್ಮೆ ಮುದ್ರಣ ಪ್ರಾರಂಭಿಸಿತು.

    2013ರಲ್ಲಿ ಜನವರಿ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಖರೀದಿಯಲ್ಲಿ ಭಾರೀ ಅವ್ಯವಹಾರ ನಡೆದಿರುವ ಕುರಿತು ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಅವರು ದೆಹಲಿ ಪಟಿಯಾಲಾ ಹೌಸ್ ಕೋರ್ಟ್‍ನಲ್ಲಿ ಅಂದಿನ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಅವರ ಕಂಪೆನಿ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಸೇರಿದಂತೆ ಸೋನಿಯಾ ಗಾಂಧಿ ಸಂಬಂಧಿತ ವ್ಯಕ್ತಿಗಳ ವಿರುದ್ಧ ದೂರು ಸಲ್ಲಿಸಿದ್ದರು. ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆ – ಶರದ್ ಪವಾರ್ ಒಮ್ಮತದ ಅಭ್ಯರ್ಥಿ?

    ಕಾಂಗ್ರೆಸ್ ಹೇಳೋದೇನು?: ಯಂಗ್ ಇಂಡಿಯಾ ಯಾವುದೇ ಲಾಭಾಪೇಕ್ಷೆ ಇಲ್ಲದ ಸಂಸ್ಥೆಯಾಗಿದೆ. ಆಡಳಿತ ಮಂಡಳಿಯ ಸದಸ್ಯರು, ಪಾಲುದಾರರಿಗೆ ಲಾಭ ಹಂಚಿಕೆಯಾಗಿಲ್ಲ. ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಒಡೆತನ ಎಜೆಎಲ್ ಸಂಸ್ಥೆಯ ಬಳಿಯೇ ಇದೆ. ಯಂಗ್ ಇಂಡಿಯಾಗೆ ಎಜೆಎಲ್ ಆಸ್ತಿಗಳನ್ನು ಹಸ್ತಾಂತರ ಮಾಡಲಾಗಿಲ್ಲ. ದುಡ್ಡೇ ಇಲ್ಲದೇ ಮನಿಲಾಂಡ್ರಿಂಗ್ ಕೇಸ್ ಹೇಗೆ ನಡೆಯುತ್ತೆ ಎಮದು ಕಾಂಗ್ರೆಸ್ ಪ್ರಶ್ನಿಸಿದೆ.

    ನಮ್ಮ ಧ್ವನಿಯ ದಮನಕ್ಕಾಗಿ ಹಾಕಲಾದ ರಾಜಕೀಯ ಪ್ರೇರಿತ ಕೇಸ್ ಇದಾಗಿದೆ. ಇದು ವಿಚಿತ್ರ ಪ್ರಕರಣವಾಗಿದ್ದು, ಸಾಂವಿಧಾನಿಕ ಸಂಸ್ಥೆಯ ದುರುಪಯೋಗ. ಬಿಜೆಪಿ ಸರ್ಕಾರದ ಷಡ್ಯಂತ್ರ್ಯಗಳಿಗೆ ಹೆದರಲ್ಲ, ಹೋರಾಟ ನಿಲ್ಲಿಸಲ್ಲ ಎಂದು ಕಾಂಗ್ರೆಸ್ ಪಕ್ಷದ ನಾಯಕರು ಹೇಳಿದ್ದಾರೆ.