Tag: National Highway 4

  • ನೆಲಮಂಗಲ ಬಳಿ ಕಂಟೈನರ್ ಲಾರಿ ಪಲ್ಟಿ- ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್

    ನೆಲಮಂಗಲ ಬಳಿ ಕಂಟೈನರ್ ಲಾರಿ ಪಲ್ಟಿ- ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್

    ಬೆಂಗಳೂರು: ಬೃಹತ್ ಕಂಟೈನರ್ ಲಾರಿ ಪಲ್ಟಿಯಾಗಿ ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್ ಸಂಭವಿಸಿರುವ ಘಟನೆ ನಗರದ ಹೊರವಲಯದ ನೆಲಮಂಗಲ ಬಳಿ ನಡೆದಿದೆ.

    ನೆಲಮಂಗಲ ತಾಲೂಕಿನ ಎಡೆಹಳ್ಳಿ ಸಮೀಪ ಬೃಹತ್ ಕಂಟೈನರ್ ಲಾರಿಯೊಂದು ಪಲ್ಟಿಯಾಗಿದ್ದು, ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿತ್ತು. ಇದರಿಂದಾಗಿ ವಾಹನ ಸವಾರರು ಸಾಲುಗಟ್ಟಿ ನಿಲ್ಲುವಂತಾಗಿತ್ತು. ಸುಮಾರು 5 ಗಂಟೆ ಹೊತ್ತಿಗೆ ಕಂಟೈನರ್ ಪಲ್ಟಿಯಾಗಿದ್ದು, ಬರೋಬ್ಬರಿ 20 ನಿಮಿಷಗಳ ಕಾಲ ವಾಹನಗಳು ನಿಂತಲ್ಲೇ ನಿಂತಿದ್ದವು. ಇದರಿಂದಾಗಿ ನೂರಾರು ವಾಹನಗಳು ಕಿಲೋಮೀಟರ್‌ಗಟ್ಟಲೆ ಸಾಲುಗಟ್ಟಿ ನಿಂತಿದ್ದವು.

    ಕೈಗಾರಿಕಾ ಪ್ರದೇಶದಿಂದ ತುಮಕೂರು ಮಾರ್ಗವಾಗಿ ಹೋಗುವ ಸಂದರ್ಭದಲ್ಲಿ ಕಂಟೈನರ್ ಪಲ್ಟಿಯಾಗಿದೆ. ನಂತರ ಪೊಲೀಸರು ಆಗಮಿಸಿ ರಾಷ್ಟ್ರೀಯಲ್ಲಿ ಪಲ್ಟಿಯಾಗಿದ್ದ ಲಾರಿಯನ್ನು ಕ್ರೇನ್ ಮೂಲಕ ತೆರವುಗೊಳಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಹಾನಿ ಸಂಭವಿಸಿಲ್ಲ. ಲಾರಿ ಚಾಲಕ ಸಹ ಬಚಾವ್ ಆಗಿದ್ದಾನೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

  • ಪ್ರಾಣವನ್ನು ಲೆಕ್ಕಿಸದೇ ಹೆದ್ದಾರಿ ಮೇಲೆ ಬಿದ್ದಿದ್ದ ಈರುಳ್ಳಿ ಆಯ್ದುಕೊಂಡ ಜನರು

    ಪ್ರಾಣವನ್ನು ಲೆಕ್ಕಿಸದೇ ಹೆದ್ದಾರಿ ಮೇಲೆ ಬಿದ್ದಿದ್ದ ಈರುಳ್ಳಿ ಆಯ್ದುಕೊಂಡ ಜನರು

    ಬೆಂಗಳೂರು: ಪ್ರಾಣವನ್ನು ಲೆಕ್ಕಿಸದೇ ರಸ್ತೆ ಮೇಲೆ ಬಿದ್ದ ಈರುಳ್ಳಿ ಆಯ್ದುಕೊಳ್ಳಲು ಸಾರ್ವಜನಿಕರು ಮುಂದಾದ ಘಟನೆ ನೆಲಮಂಗಲ ತಾಲೂಕಿನ ಗುಂಡೇನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

    ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಬೆಂಗಳೂರಿನಿಂದ ತುಮಕೂರು ಕಡೆಗೆ ಈರುಳ್ಳಿ ತುಂಬಿದ್ದ ವಾಹನ ಹೋಗಿದೆ. ಚಾಲಕನ ಅರಿವಿಗೆ ಬಾರದೆ ವಾಹನದಿಂದ ಈರುಳ್ಳಿ ಮೂಟೆಗಳು ಗುಂಡೇನಹಳ್ಳಿ ಬಳಿಯ ನಾಲ್ಕೈದು ಸ್ಥಳಗಳಲ್ಲಿ ಉರುಳಿ ಬಿದ್ದಿದ್ದವು

    ಮೂಟೆ ಕೆಳಗೆ ಬಿಳುತ್ತಿದಂತೆ ಈರುಳ್ಳಿ ರಸ್ತೆಯ ಬದಿಗೆ ಹಾಗೂ ಮಧ್ಯದಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಹೆದ್ದಾರಿಯಲ್ಲಿ ಭಾರೀ ಗಾತ್ರದ ವಾಹಗಳು ಸಂಚಾರ ದಟ್ಟನೆ ನಡುವೆಯೇ ಸ್ಥಳೀಯರು ಹಾಗೂ ಕೆಲ ಪ್ರಯಾಣಿಕರು ಈರುಳ್ಳಿ ಆಯ್ದು ಚೀಲಗಳಲ್ಲಿ ತುಂಬಿಸಿಕೊಂಡು ಹೋಗಿದ್ದಾರೆ.

  • ವೀಡಿಯೋ: ಧಗಧಗನೆ ಹೊತ್ತಿ ಉರಿದ ಚಲಿಸುತ್ತಿದ್ದ ಕಾರು

    ವೀಡಿಯೋ: ಧಗಧಗನೆ ಹೊತ್ತಿ ಉರಿದ ಚಲಿಸುತ್ತಿದ್ದ ಕಾರು

    ಬೆಂಗಳೂರು: ಚಲಿಸುತ್ತಿದ್ದ ಕಾರೊಂದು ಹೊತ್ತಿ ಉರಿದಿದ್ದು ಚಾಲಕ ಸೇರಿದಂತೆ ಮೂವರು ಪ್ರಾಣಪಾಯದಿಂದ ಪಾರಾಗಿರುವ ಘಟನೆ ನೆಲಮಂಗಲ ಸಮೀಪದ ಅಡಕಿಮಾರನಹಳ್ಳಿ ಬಳಿ ಶನಿವಾರ ರಾತ್ರಿ ನಡೆದಿದೆ.

    ತುಮಕೂರು ಜಿಲ್ಲೆ ತುರುವೇಕೆರೆಯಿಂದ ಬೆಂಗಳೂರಿಗೆ ಸ್ಕಾರ್ಪಿಯೋ ಕಾರು ಬರುತ್ತಿತ್ತು. ಬೆಂಗಳೂರಿನ ರಾಮಕೃಷ್ಣ ಎಂಬವರಿಗೆ ಸೇರಿದ ಕಾರು ಇದಾಗಿದ್ದು, ಆಕಸ್ಮಿಕವಾಗಿ ಇಂಜಿನ್‍ನಲ್ಲಿ ಕಾಣಿಸಿಕೊಂಡ ಬೆಂಕಿಯಿಂದ ಕಾರು ಸಂಪೂರ್ಣ ಭಸ್ಮವಾಗಿದೆ.

    ಈ ಘಟನೆಯಿಂದ ಕೆಲಕಾಲ ತುಮಕೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ನೆಲಮಂಗಲ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿಯನ್ನ ನಂದಿಸಿದ್ದಾರೆ. ಘಟನಾ ಸಂಬಂಧ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

    https://www.youtube.com/watch?v=M9MleBzq1lY

     

  • ಬೆಳಗಾವಿ: ಬೈಕ್‍ಗೆ ಡಿಕ್ಕಿ ಹೊಡೆದ ಕಾರು, ಸ್ಥಳದಲ್ಲೇ ಮೂವರ ದುರ್ಮರಣ

    ಬೆಳಗಾವಿ: ಬೈಕ್‍ಗೆ ಡಿಕ್ಕಿ ಹೊಡೆದ ಕಾರು, ಸ್ಥಳದಲ್ಲೇ ಮೂವರ ದುರ್ಮರಣ

    ಬೆಳಗಾವಿ: ಕಾರೊಂದು ಬೈಕ್‍ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹುಕ್ಕೇರಿ ತಾಲೂಕಿನ ಚಿಕಾಲಗುಡ್ಡ ಗ್ರಾಮದ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಗುರುವಾರ ತಡರಾತ್ರಿ ನಡೆದಿದೆ.

    ಮುಜಾಹಿದ್ ದೇಸಾಯಿ, ಅಬ್ದುಲ್‍ರಜಾಕ್ ಪಟೇಲ್ ಹಾಗೂ ಕಲೀಮುನ ಪಟೇಲ್ ಅಪಘಾತದಲ್ಲಿ ಮೃತಪಟ್ಟ ದುರ್ಧೈವಿಗಳು. ಮೃತರೆಲ್ಲರೂ ಬೆಳಗಾವಿ ಜಿಲ್ಲೆಯ ಕರೋಶಿ ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದೆ.

    ಮೃತರು ಬೆಳಗಾವಿಯಲ್ಲಿ ಸಂಬಂಧಿಕರೊಬ್ಬರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡು, ಕರೋಶಿ ಗ್ರಾಮಕ್ಕೆ ವಾಪಾಸ್ಸಾಗುತ್ತಿದ್ದ ಸಂದರ್ಭದಲ್ಲಿ ಎದುಗಡೆಯಿಂದ ವೇಗವಾಗಿ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಬೈಕ್‍ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಮೇಲೆ ಇದ್ದ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಯಮಕನಮರಡಿ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ.