Tag: National Protest Day

  • ವೈದ್ಯರೇ ನಿಜವಾದ ದೇವರು: ನಟ ಕೋಮಲ್

    ವೈದ್ಯರೇ ನಿಜವಾದ ದೇವರು: ನಟ ಕೋಮಲ್

    ಬೆಂಗಳೂರು: ನಟಿ ಆಶಿಕಾ ರಂಗನಾಥ್ ಬೆನ್ನಲ್ಲೇ ನಟ ಕೋಮಲ್ ಸಹ ವೈದ್ಯರ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದಾರೆ.

    ವೈದ್ಯರ ಮೇಲಿನ ಹಲ್ಲೆಗಳನ್ನು ಖಂಡಿಸಿ, ಇಂದು ರಾಷ್ಟ್ರೀಯ ಪ್ರತಿಭಟನಾ ದಿನವನ್ನು ನಡೆಸಲಾಗುತ್ತಿದೆ. ಡಾಕ್ಟರ್‌ಗಳ ಪ್ರೋಟೆಸ್ಟ್ ಗೆ ಈಗಾಗಲೇ ಸಾಕಷ್ಟು ಬೆಂಬಲ ವ್ಯಕ್ತವಾಗಿದೆ. ಇದೀಗ ನಟ ಕೋಮಲ್ ಸಹ ವೈದ್ಯರಿಗೆ ಸಾಥ್ ಕೊಟ್ಟಿದ್ದಾರೆ.

    ಈ ಬಗ್ಗೆ ಮಾತನಾಡಿದ ನಟ ಕೋಮಲ್, ಈ ವೀಡಿಯೋ ಮಾಡಲು ತುಂಬಾ ದೊಡ್ಡ ಕಾರಣ ಇದೆ, ಕಾರಣ ಅನ್ನುವುದಕ್ಕಿಂತ ವೈದ್ಯರ ಪ್ರತಿಭಟನೆ ದಿನವನ್ನು ಬೆಂಬಲಿಸಬೇಕಾದ ಕರ್ತವ್ಯವಿದೆ. ಕೋವಿಡ್ ಮಹಾಮಾರಿಯ ವಿರುದ್ಧ ಡಾಕ್ಟರ್ಸ್ ಹೊರಾಡುತ್ತಿದ್ದಾರೆ. ಆದರೆ ಹಣೆಬರಹ ಸರಿಯಿಲ್ಲದ ಸಮಯದಲ್ಲಿ ಎಷ್ಟೋ ಜನ ರೋಗಿಗಳು ಸಾವನ್ನಪ್ಪುತ್ತಾರೆ. ಹಾಗಂತ ಎಲ್ಲಾ ಸಾವಿಗೂ ಡಾಕ್ಟರ್ಸ್ ಕಾರಣ ಆಗುವುದಿಲ್ಲ, ಅವರ ಮೇಲೆ ಹಲ್ಲೆ ನಡೆಯುತ್ತಿದೆ. ಎಲ್ಲರಿಗೂ ಗೊತ್ತಿರುವ ಹಾಗೇ ನಾನು ಮತ್ತೆ ಹೇಳುತ್ತೇನೆ, ವೈದ್ಯೋ ನಾರಾಯಣ ಹರಿ ಅಂದರೆ ವೈದ್ಯರನ್ನು ನಾರಾಯಣನಿಗೆ ನಮ್ಮ ಸಂಸ್ಕೃತಿಯಲ್ಲಿ ಹೋಲಿಸಲಾಗುತ್ತದೆ. ಎಲ್ಲರಿಗೂ ನೋವಿರುತ್ತದೆ ನಮ್ಮ ಆಪ್ತರೊಬ್ಬರು ಸತ್ತಿದ್ದಾರೆ ಎಂದರೆ ಎಲ್ಲಾ ಸಂದರ್ಭದಲ್ಲೂ ಡಾಕ್ಟರ್ಸ್ ಕಾರಣವಾಗುವುದಿಲ್ಲ ಎಂದು ಹೇಳಿದ್ದಾರೆ.

    ಟ್ರೀಟ್ಮೆಂಟ್ ಅವರಿಗೆ ಗೊತ್ತಿರುವ ಮಟ್ಟಿಗೆ ಮಾಡಿರುತ್ತಾರೆ. ಯಾರೂ ರೋಗಿ ಸಾಯಲಿ ಎಂದು ಬಯಸುವುದಿಲ್ಲ. ಹಾಗಾಗಿ ನನ್ನ ಕಳಕಳಿಯ ಪ್ರಾರ್ಥನೆ ಡಾಕ್ಟರ್ ಗಳನ್ನು ಬೆಂಬಲಿಸಿ. ವೈದ್ಯರು ಜೀವವನ್ನು ಉಳಿಸುವವರು. ಸಂಯಮ ಇರಲಿ ಬೆಂಬಲಿಸಿ, ಪ್ರೋತ್ಸಾಹಿಸಿ.

    ತಮ್ಮ ಸ್ವಂತ ಅನುಭವವನ್ನು ಹಂಚಿಕೊಂಡ ನಟ, ವೈದ್ಯರು ದೇವರ ಸಮಾನವೆಂದು ಹೇಳುತ್ತೇನೆ ಉದಾಹರಣೆಗೆ ನನಗೆ ಕೋವಿಡ್ ಬಂದಿದ್ದನ್ನು ಗುಣಪಡಿಸಿದ್ದೆ ವೈದ್ಯರು. ಆದ್ದರಿಂದ ಕಳಕಳಿಯಿಂದ ಕೇಳುತ್ತೇನೆ ಹಲ್ಲೆ ಮಾಡಬೇಡಿ ಇದು ಅಪರಾಧ ಕೂಡ ಹೌದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ:  ರಾಷ್ಟ್ರೀಯ ಪ್ರತಿಭಟನಾ ದಿನಕ್ಕೆ ಬೆಂಬಲ ಸೂಚಿಸಿದ ನಟಿ ಆಶಿಕಾ ರಂಗನಾಥ್

  • ರಾಷ್ಟ್ರೀಯ ಪ್ರತಿಭಟನಾ ದಿನಕ್ಕೆ ಬೆಂಬಲ ಸೂಚಿಸಿದ ನಟಿ ಆಶಿಕಾ ರಂಗನಾಥ್

    ರಾಷ್ಟ್ರೀಯ ಪ್ರತಿಭಟನಾ ದಿನಕ್ಕೆ ಬೆಂಬಲ ಸೂಚಿಸಿದ ನಟಿ ಆಶಿಕಾ ರಂಗನಾಥ್

    ಬೆಂಗಳೂರು: ದೇಶಾದ್ಯಂತ ಇಂದು ವೈದ್ಯ ಸಂಘಟನೆಗಳು ರಾಷ್ಟ್ರೀಯ ಪ್ರತಿಭಟನಾ ದಿನ ಆಚರಿಸುತ್ತಿವೆ. ಕರ್ನಾಟಕ ವೈದ್ಯರ ಪ್ರೋಟೆಸ್ಟ್ ಗೆ, ಸ್ಯಾಂಡಲ್ ವುಡ್ ಖ್ಯಾತ ನಟಿ ಆಶಿಕಾ ರಂಗನಾಥ್ ಬೆಂಬಲ ಸೂಚಿಸಿದ್ದಾರೆ.

    ಈ ಪ್ರತಿಭಟನೆ ಬಗ್ಗೆ ಮಾತನಾಡಿರುವ ಅವರು, ಡಾಕ್ಟರ್ಸ್ ಎಂದರೆ ನನಗೆ ಮೊದಲು ನೆನಪಾಗುವ ಪದ ಸಂರಕ್ಷಕರು ಎಂದು. 14 ತಿಂಗಳಿನಿಂದ ಕೋವಿಡ್ ಮಹಾಮಾರಿಯ ಆರ್ಭಟ ನೆಡೆಯುತ್ತಿದೆ. ಈ ಸಂದರ್ಭದಲ್ಲಿ ಕುಟುಂಬದ ಜೊತೆ ತಮ್ಮ ಜೀವನವನ್ನು ಕೂಡ ಅಪಾಯಕ್ಕೆ ಒಡ್ಡಿಕೊಂಡು ಸಮಾಜಕ್ಕೋಸ್ಕರ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಜೊತೆಗೆ ಎಲ್ಲಾ ಆರೋಗ್ಯ ಕಾರ್ಯಕರ್ತರಿಗೂ ಅಭಾರಿಯಾಗಿದ್ದೇನೆ. ಆರೋಗ್ಯ ಕಾರ್ಯಕರ್ತರ ಪ್ರಯತ್ನ ಮತ್ತು ಸೇವಾ ಮನೋಭಾವಕ್ಕೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.

    ಡಾಕ್ಟರ್ಸ್‍ಗಳ ಮೇಲಿನ ಹಲ್ಲೆ ಖಂಡಿಸಿ, ಜನರಲ್ಲಿ ಸಾಮಾಜಿಕ ತಿಳುವಳಿಕೆ ಮೂಡಿಸಲು ಪ್ರತಿಭಟನೆ ನಡೆಸಲಾಗುತ್ತಿದೆ. ಈ ಜಾಗೃತಿ ಕಾರ್ಯಕ್ರಮಕ್ಕೆ ನಾನು ಸಂಪೂರ್ಣ ಬೆಂಬಲ ನೀಡುತ್ತಿದ್ದೇನೆ. ಎಲ್ಲರೂ ಕೂಡ ಬೆಂಬಲ ನೀಡಿ ಎಂದು ಮನವಿಮಾಡಿದ್ದಾರೆ. ನಮ್ಮ ಡಾಕ್ಟರ್ಸ್‍ನ ನಾವು ಉಳಿಸಿಕೊಳ್ಳೋಣ, ಅವರ ಪ್ರಯತ್ನಗಳನ್ನು ಶ್ಲಾಘಿಸೋಣ… #Save the Saviours# ಎನ್ನುವ ಹ್ಯಾಶ್ ಟ್ಯಾಗ್ ಮುಖಾಂತರ ಈ ಪ್ರತಿಭಟನೆ ನಡೆಸಿದ್ದಾರೆ. ಇದನ್ನೂ ಓದಿ: ಟಾಪ್‍ಲೆಸ್ ಫೋಟೋ ಶೂಟ್‍ನಲ್ಲಿ ನಟಿ ಕಿಯಾರಾ ಅಡ್ವಾಣಿ ಸಖತ್ ಹಾಟ್