Tag: naturopathy

  • ಅಧಿವೇಶನಕ್ಕೂ ಮುನ್ನವೇ ಮೈತ್ರಿ ಸರ್ಕಾರ ಕೆಡವಲು ಮತ್ತೆ ಹರಸಾಹಸ!

    ಅಧಿವೇಶನಕ್ಕೂ ಮುನ್ನವೇ ಮೈತ್ರಿ ಸರ್ಕಾರ ಕೆಡವಲು ಮತ್ತೆ ಹರಸಾಹಸ!

    ಬೆಂಗಳೂರು: ಮೈತ್ರಿ ಸರ್ಕಾರವನ್ನು ಉರುಳಿಸುವ ರಣತಂತ್ರವನ್ನು ರೂಪಿಸುವುದರಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಬ್ಯುಸಿ ಆಗಿದ್ದು, ಕೇರಳಕ್ಕೆ ಪ್ರವಾಸ ಕೈಗೊಳ್ಳಲಿದ್ದಾರೆ.

    ಅಧಿವೇಶನಕ್ಕೂ ಮುನ್ನವೇ ಸರ್ಕಾರ ಕೆಡವಲು ಮತ್ತೆ ಹರಸಾಹಸ ಮಾಡಲಾಗುತ್ತಿದ್ದು, ಬಿಜೆಪಿ ಆಂಡ್ ಕಾಂಗ್ರೆಸ್ ಅತೃಪ್ತರಿಂದ ಈಗಾಗಲೇ ಗುಪ್ತ್ ಗುಪ್ತ್ ರಣತಂತ್ರ ನಡೆದಿದೆ. ಆರೋಗ್ಯದ ಕಡೆ ಒತ್ತುಕೊಡುವ ನೆಪದಲ್ಲಿ ಬಿಎಸ್‍ವೈ ಇಂದು ಕೇರಳಕ್ಕೆ ಶಿಫ್ಟ್ ಆಗುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

    ಬಿಎಸ್ ಯಡಿಯೂರಪ್ಪ ಪ್ರಕೃತಿ ಚಿಕಿತ್ಸೆಗೆ ಎಂದು ಕೇರಳಕ್ಕೆ ಹೊರಡಲಿದ್ದು, ಡಿಸೆಂಬರ್ 8ರ ಬಳಿಕ ರಾಜ್ಯಕ್ಕೆ ಮತ್ತೆ ವಾಪಸ್ ಆಗಲಿದ್ದಾರೆ. ಪ್ರಕೃತಿ ಚಿಕಿತ್ಸೆ ಜೊತೆ ವಿಶ್ರಾಂತಿ, ಪೂಜೆ ಪುನಸ್ಕಾರಗಳಲ್ಲಿ ಬಿಎಸ್‍ವೈ ಭಾಗಿಯಾಗಲಿದ್ದಾರೆ. ಇದೇ ಅವಧಿಯಲ್ಲಿ ಬಿಜೆಪಿ ಆಪರೇಷನ್ ಮಾಡಲಿದಿಯಾ ಎಂಬ ಸಂಶಯ ವ್ಯಕ್ತವಾಗಿದೆ. ನಿಜಕ್ಕೂ ಬಿಎಸ್‍ವೈ ಚಿಕಿತ್ಸೆಗಾಗಿ ಹೋಗುತ್ತಿದ್ದಾರಾ ಅಥವಾ ಮೈತ್ರಿ ಕೆಡವಲು ಹೊಸ ರಣತಂತ್ರ ರೂಪಿಸಲು ತೆರಳುತ್ತಿದ್ದಾರಾ ಎಂಬ ಪ್ರಶ್ನೆಗಳು ಇದೀಗ ರಾಜಕೀಯ ವಲಯದಲ್ಲಿ ಎದ್ದಿದೆ.

    ಅತ್ತ ಕಾಂಗ್ರೆಸ್‍ನ 10ಕ್ಕೂ ಹೆಚ್ಚು ಅತೃಪ್ತರ ತಂಡ ಮಹಾರಾಷ್ಟ್ರಕ್ಕೆ ಶಿಫ್ಟ್ ಆಗುವ ಸಾಧ್ಯತೆ ಇದ್ದು, ಇಂದು ಸಂಜೆ ಮಹಾರಾಷ್ಟ್ರಕ್ಕೆ ತೆರಳಲು ಕೈ ಶಾಸಕರು ಪ್ಲಾನ್ ನಡೆಸಿದ್ದಾರೆ ಎಂದು ಹೇಳಲಾಗುತ್ತದೆ. ಒಂದು ವೇಳೆ ಹೈಕಮಾಂಡ್ ನಿಂದ ಆದೇಶ ಬಂದರೆ 6 ಅಥವಾ 7ರಂದು ಸಂಪುಟ ವಿಸ್ತರಣೆಯ ಸಭೆಯನ್ನು ನಡೆಸುವ ಸಾಧ್ಯತೆ ಇದೆ. ಹೀಗಾಗಿ ಇಂದು ಸಂಜೆ ವೇಳೆಗೆ ಅತೃಪ್ತರ ನಿರ್ಧಾರ ಬದಲಾದರೂ ಅಚ್ಚರಿ ಏನು ಇಲ್ಲ ಎಂದು ಹೇಳಲಾಗುತ್ತಿದೆ.

    ಈಗಾಗಲೇ ಬಿಜೆಪಿ ಆಪರೇಷನ್ ಮಾಡಲು ಮುಂದಾಗಿದ್ದು, ಸೋತಿತ್ತು. ಈಗ ಮತ್ತೆ ಕೇರಳಕ್ಕೆ ಹೋಗುವ ಮೂಲಕ ಮತ್ತೊಮ್ಮೆ ಆಪರೇಷನ್ ಕಮಲ ಮಾಡಲು ಮುಂದಾಗುತ್ತಿದೆ. ಇನ್ನೊಂದು ಕಡೆ ಬಿ.ಎಸ್ ಯುಡಿಯೂರಪ್ಪ ಅನಾರೋಗ್ಯದ ಕಾರಣದಿಂದ ಪ್ರಕೃತಿ ಚಿಕಿತ್ಸೆ ಪಡೆಯಲು ಕೇರಳಕ್ಕೆ ಹೋಗುತ್ತಿದ್ದು, ಎಂಟು ದಿನಗಳ ಕಾಲ ಕೇರಳದಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ರಾಜಕೀಯದಲ್ಲಿ ಕ್ರಿಯಾಶೀಲವಾಗಿ ತೊಡಗಲು ದೇಹ, ಮನಸ್ಸು ಸಜ್ಜಾಗಿದೆ: ಸಿದ್ದರಾಮಯ್ಯ

    ರಾಜಕೀಯದಲ್ಲಿ ಕ್ರಿಯಾಶೀಲವಾಗಿ ತೊಡಗಲು ದೇಹ, ಮನಸ್ಸು ಸಜ್ಜಾಗಿದೆ: ಸಿದ್ದರಾಮಯ್ಯ

    ಬೆಂಗಳೂರು: ನಾನು ಕರ್ನಾಟಕ ರಾಜಕೀಯದಲ್ಲಿ ಮತ್ತಷ್ಟು ಕ್ರಿಯಾಶೀಲನಾಗುತ್ತೇನೆ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

    ರಾಜಕೀಯದಲ್ಲಿ ಇನ್ನಷ್ಟು ಕ್ರಿಯಾಶೀಲವಾಗಿ ತೊಡಗಿಸಿಕೊಳ್ಳಲು ದೇಹ ಮತ್ತು ಮನಸ್ಸು ಸಜ್ಜಾಗಿದೆ ಎಂದು ಬರೆದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದಾರೆ.

    ಸಿದ್ದರಾಮಯ್ಯ ಅವರು ಧರ್ಮಸ್ಥಳದ ಶಾಂತಿವನದಲ್ಲಿ ಪಕೃತಿ ಚಿಕಿತ್ಸೆ ಪಡೆದು ಗುರುವಾರ ಬೆಂಗಳೂರುಗೆ ಆಗಮಿಸಿದ್ದಾರೆ. ಈ ಮೂಲಕ ತಾವು ಮತ್ತೇ ರಾಜ್ಯ ರಾಜಕೀಯದಲ್ಲಿ ಸಕ್ರಿಯರಾಗುವ ಸಂದೇಶವನ್ನು ಟ್ವಿಟ್ಟರ್ ಮೂಲಕ ಹರಿಯಬಿಟ್ಟಿದ್ದಾರೆ.

    “ಉಜಿರೆಯ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿ ಚಿಕಿತ್ಸೆ ಪಡೆದು ಕಳೆದ ರಾತ್ರಿ ಬೆಂಗಳೂರಿಗೆ ಹಿಂದಿರುಗಿದ್ದೇನೆ. ವಿಧಾನಸಭೆ ಚುನಾವಣೆ ಪ್ರಚಾರ ಹಾಗೂ ಸರ್ಕಾರ ರಚನೆಯ ಒತ್ತಡದಿಂದ ದೇಹ ಮತ್ತು ಮನಸ್ಸು ಬಳಲಿತ್ತು. ಇದರಿಂದಾಗಿ ಪಕೃತಿ ಚಿಕಿತ್ಸೆ ಪಡೆದಿದ್ದು, ಸುಧಾರಿಸಿ ಉಲ್ಲಸಿತನಾಗಿರುವೆ. ಇನ್ನು ರಾಜಕೀಯದಲ್ಲಿ ಇನ್ನಷ್ಟು ಕ್ರಿಯಾಶೀಲವಾಗಿ ತೊಡಗಿಸಿಕೊಳ್ಳಲು ದೇಹ ಮತ್ತು ಮನಸ್ಸು ಸಜ್ಜಾಗಿದೆ” ಎಂದು ಬರೆದು ಟ್ವೀಟ್ ಮಾಡಿದ್ದಾರೆ.

    “ಹನ್ನೆರಡು ದಿನಗಳ ಕಾಲ ಉಜಿರೆ ಪ್ರಕೃತಿ ಚಿಕಿತ್ಸಾ ಕೇಂದ್ರ ನನ್ನ ಮನೆಯಾಗಿತ್ತು. ಅಲ್ಲಿನ ಡಾ. ಪ್ರಶಾಂತ್ ಶೆಟ್ಟಿ ನೇತೃತ್ವದ ವೈದ್ಯರ ತಂಡ ನನ್ನನ್ನು ತಮ್ಮ ಕುಟುಂಬದ ಸದಸ್ಯನಂತೆ ನನ್ನ ಪಾಲನೆ ಮಾಡಿದ್ದಾರೆ. ಅವರ ಸೇವಾ ಬದ್ಧತೆ ಮತ್ತು ತೋರಿಸಿದ ಕಾಳಜಿಗೆ ತುಂಬು ಹೃದಯದ ಕೃತಜ್ಞತೆಗಳು. ಎಲ್ಲರಿಗೂ ವೃತ್ತಿಯಲ್ಲಿ ಇನ್ನಷ್ಟು ಯಶಸ್ಸು ಸಿಗಲೆಂದು ಹಾರೈಸುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.

  • ಸಿದ್ದರಾಮಯ್ಯ ಆಗಮನದಿಂದ ಧರ್ಮಸ್ಥಳದ ಪ್ರಕೃತಿ ಚಿಕಿತ್ಸಾಲಯಲ್ಲಿ ನ್ಯೂ ರೂಲ್ಸ್

    ಸಿದ್ದರಾಮಯ್ಯ ಆಗಮನದಿಂದ ಧರ್ಮಸ್ಥಳದ ಪ್ರಕೃತಿ ಚಿಕಿತ್ಸಾಲಯಲ್ಲಿ ನ್ಯೂ ರೂಲ್ಸ್

    ಮಂಗಳೂರು: ಧರ್ಮಸ್ಥಳದ ಶಾಂತಿವನ ಇದೀಗ ಅಕ್ಷರಶಃ ಅಶಾಂತಿಯ ತಾಣವಾಗಿ ಮಾರ್ಪಾಡಾಗಿದೆ. ಶಾಂತಿ ಬೇಕು ಎಂದು ಇಲ್ಲಿಗೆ ಬರುವವರಿಗೆ ಶಾಂತಿ ಇಲ್ಲದಂತಾಗಿದೆ. ಪ್ರಕೃತಿ ಚಿಕಿತ್ಸೆಯ ಈ ತಾಣ ಕಳೆದ ಕೆಲ ದಿನಗಳಿಂದ ರಾಜಕೀಯ ತಾಣವಾಗಿ ಬದಲಾಗಿದೆ. ರಾಜಕೀಯ ಮೇಲಾಟದಿಂದಾಗಿ ಶಾಂತಿನವದ ಆಡಳಿತ ಮಂಡಳಿಯೇ ಕಂಗಾಲಾಗಿದೆ. ಇನ್ನು ಮುಂದೆ ರಾಜಕಾರಣಿಗಳಿಗೆ ಪ್ರಕೃತಿ ಚಿಕಿತ್ಸಾಲಯದಲ್ಲಿ ಚಿಕಿತ್ಸೆ ನೀಡೊದೇ ಬೇಡ ಎನ್ನುವ ತೀರ್ಮಾನಕ್ಕೆ ಬಂದಿದೆ.

    ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಳೆದ 12 ದಿನಗಳ ಕಾಲ ಈ ಪ್ರಕೃತಿ ಚಿಕಿತ್ಸಾಲಯದಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಆರಾಮವಾಗಿ ಇದ್ದು ಫಿಟ್ ಆಗಿ ಹೊರ ಬರಬೇಕೆಂದಿದ್ದ ಸಿದ್ದರಾಮಯ್ಯ ಮಾತ್ರ ಶಾಂತಿವನದ ಒಳಗೂ ರಾಜಕೀಯದ ಚದುರಂಗ ಆಟವಾಡಿದ್ದಾರೆ. ಅದಕ್ಕೆ ಸಾಕ್ಷಿ ಎಂಬಂತೆ ಸಿದ್ದರಾಮಯ್ಯ ತಮ್ಮ ಆಪ್ತರೊಂದಿಗೆ ಮೈತ್ರಿ ಸರ್ಕಾರದ ವಿರುದ್ಧ ಅಸಮಧಾನ ವ್ಯಕ್ತಪಡಿಸಿದ್ದು, ಮಾಧ್ಯಮಗಳ ಮೂಲಕ ಬಹಿರಂಗಗೊಂಡಿತ್ತು.

    ಸಿದ್ದರಾಮಯ್ಯ ಶಾಂತಿವನಕ್ಕೆ ದಾಖಲಾದ ದಿನದಿಂದ ಡಿಸ್ಚಾರ್ಜ್ ಆಗುವ ಇಂದಿನವರೆಗೂ ಶಾಂತಿವನದ ವೈದ್ಯರು, ಸಿಬ್ಬಂದಿ, ರೋಗಿಗಳು ಸೇರಿದಂತೆ ಯಾರಿಗೂ ಶಾಂತಿ ಇಲ್ಲದಂತಾಗಿದೆ. ಪ್ರತಿದಿನ ಸಿದ್ದರಾಮಯ್ಯನವರ ಆಪ್ತರು, ಶಾಸಕರುಗಳು, ಬೆಂಬಲಿಗರು ಮತ್ತು ಮಾಧ್ಯಮದವರು ಸೇರಿದಂತೆ ಎಲ್ಲರೂ ಮುಗಿಬಿದ್ದು ಬರುತ್ತಿದ್ದರು.ಶಾಂತಿಯಾಗಿರಬೇಕಾಗಿದ್ದ ಶಾಂತಿವನದಲ್ಲಿ ಅಶಾಂತಿ ಹುಟ್ಟಿಸಿತ್ತು. ಸ್ವತಃ ಸಿದ್ದರಾಮಯ್ಯನವರೂ ಯಾರನ್ನೇ ನೋಡಿದರೂ ಎಗರಾಡುತ್ತಿದ್ದರು. ಮಾಧ್ಯಮದವರಿಗಂತು ನಾನೇನು ಮಾತಾಡಲ್ಲರಿ ಎಂದು ಗರಂ ಆಗುತ್ತಿದ್ದರು.

    ಸಿದ್ದರಾಮಯ್ಯನವರ ಅಸಮಧಾನದ ಸುದ್ದಿ ಹೊರ ಬೀಳುತ್ತಿದ್ದಂತೆ ಮೈತ್ರಿ ಸರ್ಕಾರದಲ್ಲೂ ಸಾಕಷ್ಟು ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿತ್ತು. ಈ ವಿವಾದದಿಂದಲೇ ಪ್ರಕೃತಿ ಚಿಕಿತ್ಸಾಲಯ ರಾಜ್ಯದಲ್ಲಿ ಸುದ್ದಿ ಆಯಿತು. ರಾಜಕಾರಣಿಗಳು ಇಲ್ಲಿ ಚಿಕಿತ್ಸೆಗೆಂದು ದಾಖಲಾದರೆ ಏನೆಲ್ಲಾ ತೊಂದರೆಗಳಾಗುತ್ತೆ ಅನ್ನೋದನ್ನು ಶಾಂತಿವನ ಆಡಳಿತ ಮಂಡಳಿ ಈ ಘಟನೆಯಿಂದ ಕಂಡುಕೊಂಡಿದೆ. ಹೀಗಾಗಿ ಇನ್ನು ಮುಂದೆ ಶಾಂತಿವನ ಪ್ರಕೃತಿ ಚಿಕಿತ್ಸಾಲಯದಲ್ಲಿ ಯಾವುದೇ ರಾಜಕಾರಣಿಗಳಿಗೂ ಚಿಕಿತ್ಸೆ ನೀಡಬಾರದು ಎಂದು ಆಡಳಿತ ಮಂಡಳಿ ನಿರ್ಧರಿಸಿದೆ.

    ಸಿದ್ದರಾಮಯ್ಯ ಇಲ್ಲಿ ದಾಖಲಾದ ಬಳಿಕವಂತೂ ರಾಜಕಾರಣದ ತಲೆನೋವುಗಳನ್ನು ನೋಡಿದ ಶಾಂತಿವನದ ಆಡಳಳಿತ ಮಂಡಳಿ ರಾಜಕಾರಣಿಗಳನ್ನು ಸೇರಿಕೊಳ್ಳುವುದರ ಬಗ್ಗೆ ಗಂಭೀರವಾಗಿ ಚಿಂತನೆ ನಡೆಸಿದೆ. ಮುಂದೆ ಈ ರೀತಿ ರಾಜಕೀಯ ಈ ಶಾಂತಿವನದಲ್ಲಿ ನಡೆಯಬಾರದೆಂದು ಶಾಂತಿವನದ ಆಡಳಿತ ಮಂಡಳಿ ನಿರ್ಧರಿಸಿದೆ. ಇದಕ್ಕೆ ಸಾಕ್ಷಿಯಾಗಿದ್ದು, ಬುಧವಾರ ಪ್ರಕೃತಿ ಚಿಕಿತ್ಸಾಲಯಕ್ಕೆ ದಾಖಲಾಗಲು ದಿನ ನಿಗದಿಗೆ ಬಂದಿರುವ ಎಲ್ಲಾ ರಾಜಕಾರಣಿಗಳೂ ಆಡಳಿತ ಮಂಡಳಿ ದಿನ ನಿಗದಿಪಡಿಸದೆ ವಾಪಾಸ್ಸು ಕಳಿಸಿದೆ. ಸಿದ್ದರಾಮಯ್ಯನವರಂತೆ ನಾನು ಚಿಕಿತ್ಸೆಗಾಗಿ ಇಲ್ಲಿಗೆ ಬಂದಿದ್ದೇನೆ ಎಂದಿದ್ದ ಮಾಜಿ ಸಚಿವ ಟಿ.ಬಿ.ಜಯಚಂದ್ರ ಇಂದು ವಾಪಾಸ್ಸು ಹೋಗಿದ್ದು, ಮತ್ತೊಂದು ದಿನ ಇಲ್ಲಿಗೆ ಬಂದು ಚಿಕಿತ್ಸೆ ಪಡೆಯುತ್ತೇನೆ ಎಂದಿದ್ದಾರೆ.

    ಶಾಂತಿವನದಲ್ಲಿ ದಾಖಲಾದ ಪ್ರತಿ ರೋಗಿಯೂ ಅಲ್ಲಿನ ಎಲ್ಲಾ ಸೂಚನೆಗಳನ್ನು ಪಾಲಿಸಬೇಕು. ಆದರೆ ಸಿದ್ದರಾಮಯ್ಯನವರು ಮಾತ್ರ ಇಲ್ಲಿನ ಯಾವುದೇ ಸೂಚನೆಗಳನ್ನು ಪಾಲಿಸದೆ ಹೆಚ್ಚಿನ ಕಾಲ ರಾಜಕೀಯ ಮಾಡುವುದರಲ್ಲೇ ಕಳೆದಿದ್ದಾರೆ ಅನ್ನೋದನ್ನು ಆಡಳಿತ ಮಂಡಳಿ ಕಂಡುಕೊಂಡಿದೆ. ವಿಶ್ರಾಂತಿಯ ಸಮಯದಲ್ಲಿ ಎಲ್ಲರೂ ಸಿದ್ದರಾಮಯ್ಯನವರನ್ನು ಭೇಟಿ ಮಾಡುವುದರಿಂದ ರೋಗಿಗಳೂ ಸೇರಿದಂತೆ ಎಲ್ಲರಿಗೂ ತೊಂದರೆಗಳಾಗಿತ್ತು. ಹೀಗಾಗಿ ಮುಂದಿನ ದಿನಗಳಲ್ಲಿ ಇಂತಹ ಸ್ಥಿತಿ ಎದುರಾಗದಂತೆ ಶಾಂತಿವನ ಶಾಂತಿಯಾಗಿಯೇ ಇರಬೇಕೆಂದು ಆಡಳಿತ ಮಂಡಳಿ ರಾಜಕಾರಣಿಗಳನ್ನು ಹತ್ತಿರ ಸೇರಿದಂತೆ ನಿರ್ಧಾರ ಮಾಡಿದೆ.

  • ಆರೋಗ್ಯದಲ್ಲಿ ಚೇತರಿಕೆ: ಇಂದು ಸಂಜೆ ಕೇಜ್ರಿವಾಲ್ ದೆಹಲಿಗೆ

    ಆರೋಗ್ಯದಲ್ಲಿ ಚೇತರಿಕೆ: ಇಂದು ಸಂಜೆ ಕೇಜ್ರಿವಾಲ್ ದೆಹಲಿಗೆ

    ಬೆಂಗಳೂರು: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲಾರ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಇಂದು ಸಂಜೆ ಅವರು ದೆಹಲಿಯತ್ತ ಪ್ರಯಾಣವನ್ನು ಬೆಳಸಲಿದ್ದಾರೆ.

    ಸಕ್ಕರೆ ಕಾಯಿಲೆ, ಕಫ, ಬೊಜ್ಜು ಸಮಸ್ಯೆ ಮತ್ತು ಕೆಮ್ಮಿನಿಂದ ಬಳಲುತ್ತಿದ್ದ ಅವರು, ಪಂಜಾಬ್ ಚುನಾವಣೆಯ ನಂತರ ಫೆಬ್ರವರಿ 7 ರಂದು ನಗರದ ನೆಲಮಂಗಲದ ಚಿಕ್ಕ ಬಿದರಕಲ್ಲಿನ ಜಿಂದಾಲ್ ಪ್ರಕೃತಿ ಚಿಕಿತ್ಸಾ ಕೇಂದ್ರಕ್ಕೆ ಚಿಕಿತ್ಸೆಗಾಗಿ ಆಗಮಿಸಿದ್ದರು.

    ಪ್ರತಿನಿತ್ಯ ಚಿಕಿತ್ಸೆ ವೇಳೆಯಲ್ಲಿ ಬೆಳಗ್ಗೆ ಬೇಗನೆ ಎದ್ದು ವ್ಯಾಯಾಮ, ಪ್ರಾಣಾಯಾಮ, ಯೋಗ, ವಿವಿಧ ಬಗೆಯ ಪ್ರಕೃತಿ ಚಿಕಿತ್ಸೆ, ಮಡ್ ತೆರಫಿ, ಮಡ್ ಪ್ಯಾಕ್, ವಾಟರ್ ತೆರಫಿ, ಯೋಗ ನಿದ್ರಾ, ಅಧಿಕ ವ್ಯಾಯಾಮ ಹಾಗೂ ವೈದ್ಯರ ಸಲಹೆಯಂತೆ ಇನ್ನಿತರ ಚಟುವಟಿಕೆಯಲ್ಲಿ ಭಾಗಿಯಾಗಿದ್ದರು.

    2015 ರಲ್ಲಿ ಪ್ರಥಮ ಬಾರಿಗೆ ದೆಹಲಿ ಚುನಾವಣೆಯ ನಂತರ ಜಿಂದಾಲ್ ಪ್ರಕೃತಿ ಚಿಕಿತ್ಸಾಲಯದಲ್ಲಿ ಚಿಕಿತ್ಸೆಯನ್ನು ಪಡೆದಿದ್ದರು. 2016 ರ ಜನವರಿಯಲ್ಲಿ ಮತ್ತೊಮ್ಮೆ ಆಗಮಿಸಿ ತಪಾಸಣೆ ಮಾಡಿಸಿಕೊಂಡಿದ್ದರು. ಈ ಬಾರಿ ಒಟ್ಟು 15 ದಿನಗಳ ಕಾಲ ದೀರ್ಘಕಾಲ ಉಳಿದು ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಅರವಿಂದ್ ಕೇಜ್ರಿವಾಲ್ ಓರ್ವ ಮುಖ್ಯಮಂತ್ರಿಯಾಗಿದ್ದರೂ ಸಹ ಸಾಮಾನ್ಯ ರೋಗಿಯಾಗಿ ಚಿಕಿತ್ಸಗೆ ಸ್ಪಂದಿಸಿದ್ದಾರೆ ಎಂದು ಆಸ್ಪತ್ರೆಯ ವೈದ್ಯೆ ಡಾ.ಬಬಿನಾ ತಿಳಿಸಿದ್ದಾರೆ.