Tag: Nava Brindavana

  • ರಘುವರ್ಯ ತೀರ್ಥರ ಮಧ್ಯಾರಾಧನೆ ಮಹೋತ್ಸವ ಸಂಪನ್ನ

    ರಘುವರ್ಯ ತೀರ್ಥರ ಮಧ್ಯಾರಾಧನೆ ಮಹೋತ್ಸವ ಸಂಪನ್ನ

    ಕೊಪ್ಪಳ: ಗಂಗಾವತಿ (Gangavathi) ತಾಲೂಕಿನ ಆನೆಗೊಂದಿ (Anegondi) ಗ್ರಾಮದ ನವಬೃಂದಾವನ ಗಡ್ಡೆಯಲ್ಲಿ ಶ್ರೀರಘುವರ್ಯ ತೀರ್ಥರ ಮಧ್ಯಾರಾಧನೆಯ ಮಹೋತ್ಸವವನ್ನು ಶನಿವಾರ ನೆರವೆರಿಸಲಾಯಿತು.ಇದನ್ನೂ ಓದಿ: ವಿಮಾನ ದುರಂತ ಸ್ಥಳಕ್ಕೆ ಭೇಟಿ – ಗಾಯಾಳುಗಳ ಆರೋಗ್ಯ ವಿಚಾರಿಸಿ, ಧೈರ್ಯ ತುಂಬಿದ ಮಲ್ಲಿಕಾರ್ಜುನ ಖರ್ಗೆ

    ಉತ್ತರಾಧಿ ಮಠದ ಮಠಾಧೀಶರಾದ ಶ್ರೀ ಸತ್ಯಾತ್ಮತೀರ್ಥ ಸ್ವಾಮೀಜಿ, ಶಿವಮೊಗ್ಗದ ಆರ್ಯ ಅಕ್ಷೋಭ್ಯ ತೀರ್ಥ ಮಠದ ಮಠಾಧೀಶರಾದ ರಘುವಿಜಯ ತೀರ್ಥರ ಸಾನಿಧ್ಯದಲ್ಲಿ ಮಧ್ಯಾರಾಧನೆ ಮಹೋತ್ಸವ ಪೂಜಾ ಕಾರ್ಯಕ್ರಮಗಳನ್ನು ನಡೆಸಲಾಯಿತು. ಮಧ್ಯಾರಾಧನೆಯ ಅಂಗವಾಗಿ ರಘುವರ್ಯ ತೀರ್ಥರ ಮೂಲಬೃಂದಾವನಕ್ಕೆ ನಿರ್ಮೂಲ್ಯ ವಿಸರ್ಜನೆ, ಪಂಚಾಮೃತ ಅಭಿಷೇಕ, ರೇಷ್ಮೆ ವಸ್ತ್ರಗಳ ಸಮರ್ಪಣೆ, ವಿವಿಧ ಪುಷ್ಪಗಳ ಅಲಂಕಾರ, ಮಹಾಮಂಗಳಾರತಿ ಸೇರಿದಂತೆ ನಾನಾ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ಜರುಗಿದವು. ನಂತರ ಉತ್ತರಾಧಿ ಮಠದ ಶ್ರೀಗಳಾದ ಸತ್ಯಾತ್ಮ ತೀರ್ಥ ಶ್ರೀಗಳಿಂದ ಭಕ್ತರಿಗೆ ತಪ್ತಮುದ್ರಾಧಾರಣೆ, ಸಂಸ್ಥಾನ ಪೂಜೆ, ಹಸ್ತೋದಕ ಪೂಜೆಗಳನ್ನು ನಡೆಸಲಾಯಿತು.

    ನಂತರ ಸತ್ಯಾತ್ಮ ತೀರ್ಥ ಶ್ರೀಗಳು ಮಾತನಾಡಿ, ನವಬೃಂದಾವನ ಗಡ್ಡೆಯಲ್ಲಿ ಬೃಂದಾವನರಾಗಿರುವ ಶ್ರೀ ರಘುವರ್ಯ ತೀರ್ಥರು ತೋರಿಸಿಕೊಟ್ಟ ಮಾರ್ಗದಲ್ಲಿ, ಸಾಧಿಸಿದ ಹಾದಿಯಲ್ಲಿ ನಾವೆಲ್ಲರೂ ಸಾಗಬೇಕು. ಅವರ ಸಂದೇಶಗಳನ್ನು ಆಚರಣೆಗೆ ತರಬೇಕು. ಸುಧಾ-ಸರ್ವಮೂಲ ಗ್ರಂಥಗಳ ಅಧ್ಯಯನದ ಮೂಲಕ ಜೀವನ ಪಾವನಗೊಳಿಸಿಕೊಳ್ಳಬೇಕು. ನವಬೃಂದಾವನ ಗಡ್ಡೆ ಒಂದು ಪರಮ ಪವಿತ್ರ ತಾಣವಾಗಿದ್ದು, ಇಲ್ಲಿನ ಯತಿಗಳ ಆರಾಧನೆಯಲ್ಲಿ ಭಾಗವಹಿಸುವ ಮೂಲಕ ಅವರ ಆಶೀರ್ವಾದಕ್ಕೆ ಪಾತ್ರರಾಗಬೇಕು ಎಂದು ಹೇಳಿದರು. ಮಠದ ದಿವಾನ ಪಂಡಿತ ಶಶಿಧರ ಚಾರ್ಯರು, ಉಮರ್ಜಿ ಶ್ರೀಕರಾಚಾರ್ಯರು, ಮಹಿಷಿ ಆನಂದ ಆಚಾರ್ಯ, ನರಸಿಂಹ ಆಚಾರ್ಯ, ಜ್ಯೋತಿಷ್ಯ ವಿದ್ವಾಂಸ ಪ್ರಸನ್ನಾಚಾರ್ಯ ಕಟ್ಟಿ, ಮಠದ ವ್ಯವಸ್ಥಾಪಕ ಆನಂದ ಆಚಾರ್ಯ ಹಾಗೂ ಇತರರಿದ್ದರು.ಇದನ್ನೂ ಓದಿ: 11A ಸೀಟ್ ಮಿಸ್ಟರಿ – 2 ವಿಮಾನ ಪತನ, ಒಂದೇ ಕಡೆ ಕುಳಿತಿದ್ದ ಇಬ್ಬರು ಮೃತ್ಯುಂಜಯರು!

  • ನವಬೃಂದಾವನ ಧ್ವಂಸ ಖಂಡಿಸಿದ ಉಡುಪಿಯ ಅಷ್ಟಮಠಾಧೀಶರು

    ನವಬೃಂದಾವನ ಧ್ವಂಸ ಖಂಡಿಸಿದ ಉಡುಪಿಯ ಅಷ್ಟಮಠಾಧೀಶರು

    ಉಡುಪಿ: ಹಂಪಿಯ ಚಕ್ರತೀರ್ಥದಲ್ಲಿರುವ ಶ್ರೀ ವ್ಯಾಸರಾಜ ತೀರ್ಥರ ಬೃಂದಾವನ ಕೆಡವಿರುವ ಪ್ರಕರಣ ಸಾಕಷ್ಟು ವಿವಾದ ಸೃಷ್ಟಿಸಿದೆ. ಘಟನೆಯನ್ನು ಉಡುಪಿಯ ಅಷ್ಟಮಠಾಧೀಶರು ಖಂಡಿಸಿದ್ದಾರೆ.

    ಹಿರಿಯ ಯತಿಗಳಾದ ಪೇಜಾವರ ಮಠದ ವಿಶ್ವೇಶತೀರ್ಥರು ಮಾತನಾಡಿ, ಈ ಕೃತ್ಯದಿಂದ ಕರ್ನಾಟಕಕ್ಕೆ ಆಘಾತವಾಗಿದೆ. ವ್ಯಾಸರಾಜರು ವಿಜಯನಗರ ಸಾಮ್ರಾಜ್ಯದ ಹೆಮ್ಮೆ. ದಾಸ ಸಾಹಿತ್ಯದ ಪ್ರವರ್ತಕಕರು. ಈ ಕೃತ್ಯ ಹಿಂದೂ ಸಮಾಜಕ್ಕೆ ಮಾಡಿರುವ ಅಪಮಾನ, ದೇಶಕ್ಕೆ ಅವಮಾನಕರ ಸಂಗತಿ. ಸರಿಯಾದ ತನಿಖೆ ಮಾಡಬೇಕು ಎಂದು ಸರ್ಕಾರವನ್ನು ಆಗ್ರಹಿಸಿದ್ದಾರೆ. ಇದನ್ನೂ ಓದಿ: ನಿಧಿಗಾಗಿ ಇತಿಹಾಸದ ಪ್ರಸಿದ್ಧ ನವಬೃಂದಾವನ ಧ್ವಂಸ – ಸಿಡಿದೆದ್ದ ನಟ ಜಗ್ಗೇಶ್

    ಮಾಧ್ವ ಪರಂಪರೆಯ ಎಲ್ಲಾ ಯತಿಗಳು ತುರ್ತಾಗಿ ಸೇರಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ. ತಕ್ಷಣವೇ ನವಬೃಂದಾವನ ಸ್ಥಳಕ್ಕೆ ಭೇಟಿ ನೀಡುತ್ತೇವೆ ಎಂದು ಹೇಳಿದರು.

    ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿ, ಇಂದು ಬೆಳಗ್ಗೆ ಆಘಾತಕಾರಿ ಸುದ್ದಿಯನ್ನು ಕೇಳಿದ್ದೇವೆ. ಇದು ನೋವವನ್ನು ಉಂಟು ಮಾಡಿದೆ. ಈ ಕುರಿತು ತನಿಖೆ ನಡೆಸಿ, ಆರೋಪಿಗಳಿಗೆ ಸೂಕ್ತ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದರು.

    ಪರ್ಯಾಯ ಪಲಿಮಾರು ಮಠದ ವಿದ್ಯಾಧೀಶ ತೀರ್ಥ ಸ್ವಾಮೀಜಿ ಪ್ರಕರಣವನ್ನು ಹಿಂದೂ ಸಮಾಜ ಗಂಭೀರವಾಗಿ ಪರಿಗಣಿಸಿರುವುದಾಗಿ ಹೇಳಿದರು. ಈ ಬಗ್ಗೆ ಸೂಕ್ತ ತನಿಖೆಯಾಗಬೇಕೆಂದು ಆಗ್ರಹಿಸಿದರು.

    ಏನಿದು ಪ್ರಕರಣ?:
    ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಆನೆಗುಂದಿ ಸಮೀಪವಿರುವ ನವಬೃಂದಾವನ ಗಡ್ಡೆ ತುಂಗಭದ್ರಾ ನದಿಯ ಮಧ್ಯದಲ್ಲಿದೆ. ಇಲ್ಲಿ ವ್ಯಾಸರಾಜರು ಸೇರಿದಂತೆ ಒಟ್ಟು ಒಂಬತ್ತು ಯತಿಗಳ ಸಮಾಧಿಗಳು ಇವೆ. ದುಷ್ಕರ್ಮಿಗಳು ನಿಧಿಯ ಆಸೆಗಾಗಿ ಬುಧವಾರ ರಾತ್ರಿ ನವಬೃಂದಾವನವನ್ನು ಅಗೆದು ಹಾಕಿದ್ದಾರೆ. ಸಮಾಧಿಯ ಕೆಳಭಾಗವನ್ನು ಸಹ ಸಂಪೂರ್ಣ ಅಗೆದಿದ್ದರಿಂದ ನಿಧಿಗಾಗಿ ಹೀಗೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

    ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾಗಿದ್ದು, ಗಂಗಾವತಿ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಂಗಾವತಿಯ ತಹಶೀಲ್ದಾರ್ ವೀರೇಶ ಅವರು ಕೂಡ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

  • ನಿಧಿಗಾಗಿ ಇತಿಹಾಸದ ಪ್ರಸಿದ್ಧ ನವಬೃಂದಾವನ ಧ್ವಂಸ – ಸಿಡಿದೆದ್ದ ನಟ ಜಗ್ಗೇಶ್

    ನಿಧಿಗಾಗಿ ಇತಿಹಾಸದ ಪ್ರಸಿದ್ಧ ನವಬೃಂದಾವನ ಧ್ವಂಸ – ಸಿಡಿದೆದ್ದ ನಟ ಜಗ್ಗೇಶ್

    ಬೆಂಗಳೂರು: ನಿಧಿಗಾಗಿ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗುಂದಿ ಬಳಿ ಇರುವ ನವವೃಂದಾವನನ್ನು ದುಷ್ಕರ್ಮಿಗಳು ಅಗೆದು ಧ್ವಂಸ ಮಾಡಿದ್ದಾರೆ. ಇದಕ್ಕೆ ನಟ ಜಗ್ಗೇಶ್ ಪ್ರತಿಕ್ರಿಯಿಸಿ, ಈ ಕೃತ್ಯ ಮಾಡಿದವರ ವಂಶ ಸರ್ವನಾಶವಾಗುತ್ತದೆ ಎಂದು ಶಾಪ ಹಾಕಿದ್ದಾರೆ.

    ನಟ ಜಗ್ಗೇಶ್ ಟ್ವೀಟ್ ಮಾಡುವ ಮೂಲಕ ನವವೃಂದಾವನನ್ನು ಧ್ವಂಸ ಮಾಡಿದವರ ವಿರುದ್ಧ ಸಿಡಿದೆದ್ದಿದ್ದಾರೆ. “ಅಯ್ಯೋ ದೇವರೇ ಎಂಥ ಹೀನ ಕೃತ್ಯ ಮಾಡಿದ್ದಾರೆ. ಈ ಕೃತ್ಯ ಮಾಡಿದವರ ವಂಶ ಸರ್ವನಾಶವಾಗುತ್ತದೆ. ಸನಾತನ ನಮ್ಮ ಶ್ರೇಷ್ಟತೆಯ ಗುರುಪರಂಪರೆಗೆ ಕೈ ಹಾಕಿದ್ದಾರೆ. ಹೀಗಾಗಿ ಪಾಪಿಗಳಿಗೆ ಕ್ಷಮೆಯಿರದಿರಲಿ. ಸಂಬಂಧಪಟ್ಟ ಅಧಿಕಾರಿವರ್ಗ ಸೂಕ್ತಕ್ರಮ ತೆಗೆದುಕೊಳ್ಳಬೇಕು. ಗುರುಭಕ್ತರೇ ಪುನರ್ ನಿರ್ಮಾಣಕ್ಕೆ ಹಾಗೂ ಕಾನೂನು ಕ್ರಮಕ್ಕೆ ಹ್ಯಾಶ್‍ಟ್ಯಾಗ್ ಮಾಡಿ ಒತ್ತಾಯಿಸಿ” ಎಂದು ಆಕ್ರೋಶಗೊಂಡು ಹೇಳಿದ್ದಾರೆ.

    ಗಂಗಾವತಿ ತಾಲೂಕಿನ ಆನೆಗುಂದಿ ಬಳಿ ಇರುವ ನವವೃಂದಾವನ ಗಡ್ಡೆ ತುಂಗಭದ್ರಾ ನದಿಯ ಮಧ್ಯದಲ್ಲಿದೆ. ಇಲ್ಲಿ ವ್ಯಾಸರಾಜರು ಸೇರಿದಂತೆ ಒಟ್ಟು ಒಂಬತ್ತು ಯತಿಗಳ ಸಮಾಧಿಗಳು ಇವೆ. ಇಲ್ಲಿ ಪ್ರತಿವರ್ಷ ರಾಘವೇಂದ್ರ ಮಠದವರಿಂದ ಮತ್ತು ಉತ್ತಾರಾಧಿ ಮಠದಿಂದ ಅದ್ಧೂರಿಯಾಗಿ ಆರಾಧನೆ ಕಾರ್ಯಕ್ರಮ ಜರಗುತ್ತದೆ.

    ನವ ವೃಂದಾವನ ಮಾಲಿಕತ್ವಕ್ಕಾಗಿ ಈ ಎರಡು ಮಠದವರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ಯಾರ ಪರವೂ ತೀರ್ಪು ಬಂದಿಲ್ಲ. ಸಾಕಷ್ಟು ವಿವಾದಿತ ಪ್ರದೇಶ ಇದಾಗಿದ್ದು, ಬುಧವಾರ ರಾತ್ರಿ ದುಷ್ಕರ್ಮಿಗಳು ನಿಧಿಯ ಆಸೆಗಾಗಿ ನವ ವೃಂದಾವನವನ್ನು ಅಗೆದು ಹಾಕಿರಬಹುದು ಎನ್ನುವ ಶಂಕೆ ವ್ಯಕ್ತವಾಗಿದೆ.

    ಸಮಾಧಿಯ ಕೆಳಭಾಗವನ್ನು ಸಹ ಸಂಪೂರ್ಣ ಅಗೆದಿದ್ದು, ಇದು ಪಕ್ಕಾ ನಿಧಿಗಾಗಿ ಅಗೆದಿದ್ದಾರೆ ಎಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಗಂಗಾವತಿ ತಹಶಿಲ್ದಾರ ವೀರೇಶ್ ಮತ್ತು ಗಂಗಾವತಿ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

  • ನಿಧಿಗಾಗಿ ಇತಿಹಾಸ ಪ್ರಸಿದ್ಧ ನವಬೃಂದಾವನ ಧ್ವಂಸ

    ನಿಧಿಗಾಗಿ ಇತಿಹಾಸ ಪ್ರಸಿದ್ಧ ನವಬೃಂದಾವನ ಧ್ವಂಸ

    ಕೊಪ್ಪಳ: ಕೆಲ ಕಿಡಿಗೇಡಿಗಳು ನಿಧಿಗಾಗಿ ಐತಿಹಾಸಿಕ ಪ್ರಸಿದ್ಧ ನವಬೃಂದಾವನವನ್ನು ಧ್ವಂಸಗೊಳಿಸಿದ ಘಟನೆ ಗಂಗಾವತಿ ತಾಲೂಕಿನ ಆನೆಗುಂದಿಯಲ್ಲಿ ನಡೆದಿದೆ.

    ಆನೆಗುಂದಿ ಸಮೀಪವಿರುವ ನವಬೃಂದಾವನ ಗಡ್ಡೆ ತುಂಗಭದ್ರಾ ನದಿಯ ಮಧ್ಯದಲ್ಲಿದೆ. ಇಲ್ಲಿ ವ್ಯಾಸರಾಜರು ಸೇರಿದಂತೆ ಒಟ್ಟು ಒಂಬತ್ತು ಯತಿಗಳ ಸಮಾಧಿಗಳು ಇವೆ. ದುಷ್ಕರ್ಮಿಗಳು ನಿಧಿಯ ಆಸೆಗಾಗಿ ಬುಧವಾರ ರಾತ್ರಿ ನವಬೃಂದಾವನವನ್ನು ಅಗೆದು ಹಾಕಿದ್ದಾರೆ. ಸಮಾಧಿಯ ಕೆಳಭಾಗವನ್ನು ಸಹ ಸಂಪೂರ್ಣ ಅಗೆದಿದ್ದರಿಂದ ನಿಧಿಗಾಗಿ ಹೀಗೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

    ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾಗಿದ್ದು, ಗಂಗಾವತಿ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಂಗಾವತಿಯ ತಹಶೀಲ್ದಾರ್ ವೀರೇಶ ಅವರು ಕೂಡ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

    ನವಬೃಂದಾವನದಲ್ಲಿ ಪ್ರತಿವರ್ಷ ರಾಘವೇಂದ್ರ ಮಠದವರಿಂದ ಮತ್ತು ಉತ್ತಾರಾಧಿ ಮಠದಿಂದ ಅದ್ಧೂರಿಯಾಗಿ ಆರಾಧನೆ ಕಾರ್ಯಕ್ರಮ ಜರಗುತ್ತದೆ. ನವಬೃಂದಾವನ ಮಾಲೀಕತ್ವಕ್ಕಾಗಿ ಈ ಎರಡು ಮಠದವರು ಸುಪ್ರೀಂಕೊರ್ಟ್ ಮೆಟ್ಟಿಲೇರಿದ್ದು, ಯಾರ ಪರವೂ ತೀರ್ಪು ಬಂದಿಲ್ಲ.