Tag: Navadurge

  • Navratri 2023: ನವರಾತ್ರಿಗೆ ನವರಂಗು – ಒಂದೊಂದು ಬಣ್ಣದಲ್ಲೂ ಅಡಗಿದೆ ದುರ್ಗೆಯ ಶಕ್ತಿ

    Navratri 2023: ನವರಾತ್ರಿಗೆ ನವರಂಗು – ಒಂದೊಂದು ಬಣ್ಣದಲ್ಲೂ ಅಡಗಿದೆ ದುರ್ಗೆಯ ಶಕ್ತಿ

    ದೇಶಾದ್ಯಂತ ವಿವಿಧೆಡೆ ವಿವಿಧ ರೀತಿಯಲ್ಲಿ ನವರಾತ್ರಿ ಹಬ್ಬ (Navaratri Festival) ಆಚರಿಸಲಾಗುತ್ತದೆ. 9 ದಿನಗಳ ಕಾಲ ಆಚರಿಸುವ ಪ್ರಮುಖ ಹಿಂದೂ ಹಬ್ಬಗಳಲ್ಲಿ ಇದೂ ಒಂದು. ಆ 9 ದಿನಗಳು ನವದುರ್ಗೆಯರಿಗೆ ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗುತ್ತವೆ. ಎಲ್ಲೆಲ್ಲೂ ರಂಗುರಂಗಾದ ಬಣ್ಣಗಳು ಹಬ್ಬದಲ್ಲಿ ಮೇಳೈಸುತ್ತವೆ. ಎಲ್ಲೆಲ್ಲೂ ಸಂಭ್ರಮ ಮನೆ ಮಾಡಿರುತ್ತವೆ. ನವರಾತ್ರಿಯ 9 ಬಣ್ಣಗಳ ವಿಶೇಷತೆ ಏನು ಎಂಬುದನ್ನು ಯೋಚಿಸಿದ್ದೀರಾ? ಹೌದು, ನವರಾತ್ರಿಯ 9 ಬಣ್ಣಗಳಿಗೆ ಒಂದೊಂದು ಅರ್ಥವಿದೆ. ಆ ಒಂದೊಂದು ಬಣ್ಣಗಳು ನವದುರ್ಗೆಯರನ್ನು ಪ್ರತಿನಿಧಿಸುತ್ತವೆ. ಅವುಗಳ ಬಗ್ಗೆ ಇಲ್ಲಿ ತಿಳಿಯೋಣ…..

    ಮೊದಲ ದಿನ
    ನವರಾತ್ರಿಯ ಮೊದಲ ದಿನ ಹಳದಿ ಬಣ್ಣದ ಸಂಕೇತವಾಗಿರುತ್ತದೆ. ಪರ್ವತಗಳ ತಾಯಿ ಶೈಲಪುತ್ರಿಯನ್ನು ಈ ಬಣ್ಣ ಪ್ರತಿನಿಧಿಸುತ್ತದೆ. ತಾಯಿ ಶೈಲಪುತ್ರಿ ದೇವಿಯು ಪರಿಸರದ ತಾಯಿಯಾಗಿದ್ದು ಶಕ್ತಿ ಸ್ವರೂಪಿಣಿ ಕೂಡ ಹೌದು. ಹಳದಿಯು ಉಜ್ವಲತೆ, ಖುಷಿ ಮತ್ತು ಉತ್ಸಾಹದ ಸಂಕೇತ. ನವರಾತ್ರಿಯ ಶುಭಾರಂಭಕ್ಕೆ ಹಳದಿಯು ಒಂದು ಶಕ್ತಿಯಾಗಿದೆ.

    2ನೇ ದಿನ
    ನವರಾತ್ರಿಯ 2ನೇ ದಿನವು ಬ್ರಹ್ಮಚಾರಿಣಿ ಮಾತೆಗೆ ಅರ್ಪಣೆ. ಪಾರ್ವತಿಯಾಗಿ ಹಿಮಾಲಯನ ಪುತ್ರಿಯಾಗಿ ಜನಿಸಿದ ದೇವಿಯು ಶಿವನನ್ನು ಪತಿಯಾಗಿ ಪಡೆಯಲು ನಾರದರ ಉಪದೇಶದಂತೆ ಕಠಿಣ ತಪಸ್ಸನ್ನು ಮಾಡುತ್ತಾಳೆ. ಕಠಿಣ ತಪಸ್ಸು ಮಾಡಿದ್ದರಿಂದ ದೇವಿಗೆ ತಪಶ್ಚಾರಿಣೀ ಅರ್ಥಾತ್‌ ಬ್ರಹ್ಮಚಾರಿಣೀ ಎನ್ನುವ ಹೆಸರು ಬಂತು. ಬ್ರಹ್ಮಚಾರಿಣಿಯ ತಪಸ್ಸಿಗೆ ಮೆಚ್ಚಿ ಶಿವನು ಒಲಿಯುತ್ತಾನೆ. ಈ ದಿನ ಬಿಳಿ ಬಣ್ಣದ ಸಂಕೇತವಾಗಿದೆ. ಶ್ವೇತ ವರ್ಣವು ಶಾಂತಿಯನ್ನು ಸೂಚಿಸುತ್ತದೆ.

    3ನೇ ದಿನ
    ನವರಾತ್ರಿಗಳಲ್ಲಿ ಬರುವ 9 ವರ್ಣಗಳಲ್ಲಿ ಕೆಂಪು ಬಣ್ಣ ಅತ್ಯಂತ ಶಕ್ತಿಶಾಲಿ. ಈ ದಿನದಂದು ಚಂದ್ರಘಂಟಾ ದೇವಿಯನ್ನು ಪೂಜಿಸಲಾಗುತ್ತದೆ. ಪ್ರಕಾಶಮಾನವಾದ ಕೆಂಪು ಹೂವುಗಳಿಂದ ಮನೆಯನ್ನು ಅಲಂಕರಿಸಬಹುದು. ಜೊತೆಗೆ ಕೆಂಪು ಬಣ್ಣದ ಹಣ್ಣುಗಳನ್ನ ಪ್ರಸಾದವಾಗಿ ಅರ್ಪಿಸಬೇಕು. ಕೆಂಪು ಬಣ್ಣವು ಕೋಪದ ಸಂಕೇತ.

    4ನೇ ದಿನ
    ಕೂಷ್ಮಾಂಡ ದೇವಿಗೆ ನವರಾತ್ರಿಯ 4ನೇ ದಿನ ಅರ್ಪಣೆ. ಅಂದು ನೀಲಿ ಬಣ್ಣದ ಬಟ್ಟೆ ಧರಿಸಬೇಕು. ಈ ವರ್ಣವನ್ನು ಕೂಷ್ಮಾಂಡ ದುರ್ಗಾದೇವಿ ಮೆಚ್ಚಿಸಲು ಬಳಸಲಾಗುತ್ತದೆ. ನವರಾತ್ರಿಯಲ್ಲಿ ನೀಲಿ ಬಣ್ಣದ ಬಟ್ಟೆ ಧರಿಸಿ ದೇವಿಯನ್ನ ಪೂಜಿಸುವುದರಿಂದ ಆರೋಗ್ಯ, ಆಯಸ್ಸು, ಸಂಪತ್ತು ಲಭಿಸುತ್ತದೆ ಅನ್ನುವುದು ನಂಬಿಕೆ.

    5ನೇ ದಿನ
    ನವರಾತ್ರಿಯ 5ನೇ ದಿನವು ತಾಯಿ ಸ್ಕಂದಮಾತೆಗೆ ಅರ್ಪಣೆ. ಕಾರ್ತಿಕೇಯ ಅಥವಾ ಸ್ಕಂದನ ತಾಯಿಯೇ ಸ್ಕಂದ ಮಾತೆ. ಯುದ್ಧದ ಸಮಯದಲ್ಲಿ ಪೂಜಿಸುವ ದೇವಿ ಇವಳು. ಕೇಸರಿ ಬಣ್ಣವು ಖುಷಿ ಹಾಗೂ ಶಕ್ತಿಯ ಸಂಕೇತವಾಗಿರುವುದರಿಂದ ಅಂದು ಕೇಸರಿ ಬಣ್ಣವನ್ನು ಬಳಸಿದರೆ ಒಳಿತು.

    6ನೇ ದಿನ
    ನವರಾತ್ರಿಯ 6ನೇ ದಿನವು ಕಾತ್ಯಾಯನಿ ದೇವಿಗೆ ಮೀಸಲು. ಈ ದೇವಿಯ ಪ್ರಕಾಶಮಾನವಾದ ನಗುವು ಸೂರ್ಯನಿಗೆ ಭೂಮಿಯನ್ನು ಬೆಳಗುವ ಶಕ್ತಿ ನೀಡುತ್ತದೆ. ಸೂರ್ಯನು ಜೀವಂತವಾಗಿರುವಂತೆ ಈ ತಾಯಿ ನೋಡಿಕೊಳ್ಳುತ್ತಾಳೆ ಎಂಬ ನಂಬಿಕೆಯಿದೆ. ಅಂದು ಹಸಿರು ಬಣ್ಣದ ಬಟ್ಟೆ ಧರಿಸಬೇಕು. ಹಸಿರು ಪ್ರಕೃತಿ, ಶಕ್ತಿ, ಪರಿಸರ ಹಾಗೂ ಬೆಳವಣಿಗೆಯ ಸಂಕೇತ.

    7ನೇ ದಿನ
    ನವರಾತ್ರಿಯ 7ನೇ ದಿನವನ್ನು ತಾಯಿ ಕಾಳರಾತ್ರಿಗೆ ಅರ್ಪಿಸಲಾಗುತ್ತದೆ. ಅಂದು ಬೂದು ಬಣ್ಣ ಹೆಚ್ಚು ಸೂಕ್ತ. ಬೂದು ಬಣ್ಣವು ನಮ್ಮ ಮನಸ್ಸಿನ ಭಾವನೆಗಳ ಸಂಕೇತವಾಗಿದೆ. ಮನಸ್ಸಿನಲ್ಲಿರುವ ಕೆಟ್ಟ ವಿಷಯಗಳನ್ನು ತಾಯಿ ತೊಡೆದುಹಾಕುತ್ತಾಳೆ ಎಂಬುದು ಭಕ್ತರ ನಂಬಿಕೆ.

    8ನೇ ದಿನ
    ನವರಾತ್ರಿ 8ನೇ ದಿನ ತಾಯಿ ಮಹಾಗೌರಿಗೆ ಮೀಸಲಾಗಿದೆ. ಮಹಾಗೌರಿ ಆಧ್ಯಾತ್ಮಿಕ ಶಕ್ತಿಯೊಂದಿಗೆ ಜನರನ್ನು ಆಶೀರ್ವದಿಸುತ್ತಾಳೆ ಎಂಬ ನಂಬಿಕೆ ಇಂದಿಗೂ ಭಕ್ತರಲ್ಲಿ ಇದೆ. ಅಂದು ದೇವಿಗೆ ಪ್ರಿಯವಾದ ಗುಲಾಬಿ ಬಣ್ಣ ಧರಿಸುವುದು ಒಳಿತು. ಗುಲಾಬಿ ಬಣ್ಣವು ಶಾಂತಿ ಮತ್ತು ಬುದ್ಧಿವಂತಿಕೆಯ ಬಣ್ಣವಾದ್ದರಿಂದ ಅಂದು ದೇವಿ ಅಲಂಕಾರಕ್ಕೆ ಬಳಸಲಾಗುತ್ತದೆ.

    9ನೇ ದಿನ
    ನವರಾತ್ರಿಯ 9ನೇ ದಿನವು ತಾಯಿ ಸಿದ್ಧಿಧಾತ್ರಿಗೆ ಅರ್ಪಣೆ. ದೇವಿಯು ಜ್ಞಾನವನ್ನು ಕರುಣಿಸುತ್ತಾಳೆ. ಜೊತೆಗೆ ನಮ್ಮೆಲ್ಲರ ಗುರಿ ಮುಟ್ಟಲು ನೆರವಾಗುತ್ತಾಳೆ. ಅಂದು ದೇವಿಗೆ ಪ್ರಿಯವಾದ ನೇರಳೆ ಬಣ್ಣ ಧರಿಸಬೇಕು. ನೇರಳೆ ಬಣ್ಣವು ಆಕಾಂಕ್ಷೆಗಳ ಹಾಗೂ ಶಕ್ತಿಯ ಸಂಕೇತವಾಗಿರುತ್ತದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನವರಾತ್ರಿ ವಿಶೇಷ – ಸ್ಕಂದಮಾತೆಯನ್ನ ಪೂಜಿಸುವುದು ಏಕೆ?

    ನವರಾತ್ರಿ ವಿಶೇಷ – ಸ್ಕಂದಮಾತೆಯನ್ನ ಪೂಜಿಸುವುದು ಏಕೆ?

    ಗನ್ಮಾತೆ ದುರ್ಗೆಯ ಐದನೇ ಸ್ವರೂಪವನ್ನು ‘ಸ್ಕಂದಮಾತಾ’ ಎಂಬ ಹೆಸರಿನಿಂದ ಕರೆಯಲಾಗುತ್ತದೆ. ಈ ಭಗವಾನ್ ಸ್ಕಂದನು ‘ಕುಮಾರ ಕಾರ್ತಿಕೇಯ’ ಎಂಬ ಹೆಸರಿನಿಂದಲೂ ತಿಳಿಯಲ್ಪಡುತ್ತಾನೆ. ಇವನು ಪ್ರಸಿದ್ಧ ತಾರಕನ ಜೊತೆಗಿನ ಸಂಗ್ರಾಮದಲ್ಲಿ ದೇವತೆಗಳ ಸೇನಾಪತಿಯಾಗಿದ್ದನು. ಪುರಾಣಗಳಲ್ಲಿ ಇವನನ್ನು ಕುಮಾರ ಹಾಗೂ ಶಕ್ತಿಧರ ಎಂದು ಹೇಳಿ ಇವನ ಮಹಿಮೆಯನ್ನು ವರ್ಣಿಸಲಾಗಿದೆ. ನವಿಲನ್ನು ವಾಹನವಾಗಿ ಬಳಸುವ ಕಾರಣ ಈತನನ್ನು ‘ಮಯೂರವಾಹನ’ ಎಂದೂ ಕರೆಯುತ್ತಾರೆ.

    ಸ್ಕಂದನ ತಾಯಿಯಾದ್ದರಿಂದ ದುರ್ಗೆಯ ಈ ಐದನೇ ಸ್ವರೂಪವನ್ನು ‘ಸ್ಕಂದಮಾತಾ’ ಎಂದು ಕರೆಯಲಾಗುತ್ತದೆ. ನವರಾತ್ರಿಯ ಐದನೇ ದಿನ ಇವಳ ಉಪಾಸನೆ ಮಾಡಲಾಗುತ್ತದೆ. ಈ ದಿನ ಸಾಧಕನ ಮನಸ್ಸು ವಿಶದ್ಧ ಚಕ್ರದಲ್ಲಿ ನೆಲೆ ನಿಲ್ಲುತ್ತದೆ. ಇವಳ ವಿಗ್ರಹದಲ್ಲಿ ಭಗವಾನ್ ಸ್ಕಂದನು ಬಾಲರೂಪದಲ್ಲಿ ಇವಳ ತೊಡೆಯಲ್ಲಿ ಕುಳಿತ್ತಿದ್ದಾನೆ. ಇದನ್ನೂ ಓದಿ: ನವರಾತ್ರಿ ವಿಶೇಷ- ನಾಲ್ಕನೇ ದಿನ ಕೂಷ್ಮಾಂಡ ದೇವಿ ಆರಾಧನೆ ಮಾಡೋದು ಯಾಕೆ ಗೊತ್ತಾ?

    ಸ್ಕಂದಮಾತೆಯಾದ ಇವಳಿಗೆ ನಾಲ್ಕು ಭುಜಗಳಿರುತ್ತವೆ. ಇವಳು ಬಲಗಡೆಯ ಮೇಲಿನ ಕೈಯಿಂದ ಸ್ಕಂದನ್ನು ತೊಡೆಯಲ್ಲಿ ಹಿಡಿದುಕೊಂಡಿದ್ದಾಳೆ. ಮೇಲಕ್ಕಿತ್ತಿರುವ ಕೆಳಗಿನ ಬಲ ಕೈಯಲ್ಲಿ ಕಮಲ ಪುಷ್ಪವನ್ನು ಹಿಡಿದಿದ್ದಾಳೆ. ಎಡಗಡೆಯ ಮೇಲಿನ ಕೈಯಲ್ಲಿ ವರಮುದ್ರೆ ಮತ್ತು ಮೇಲಕ್ಕೆತ್ತಿರುವ ಎಡಗೈಯಲ್ಲಿಯೂ ಕಮಲವಿದೆ. ಇವಳ ಶರೀರದ ಬಣ್ಣವೂ ಪೂರ್ಣವಾಗಿ ಬೆಳ್ಳಗಿದ್ದು, ಕಮಲದ ಆಸನದಲ್ಲಿ ವಿರಾಜಮಾನಳಾಗಿದ್ದಾಳೆ. ಇದೇ ಕಾರಣದಿಂದ ಇವಳನ್ನು ಪದ್ಮಸನಾದೇವೀ ಎಂದೂ ಹೇಳುತ್ತಾರೆ. ಸಿಂಹವೂ ಇವಳ ವಾಹನವಾಗಿದೆ. ಇದನ್ನೂ ಓದಿ: ನವರಾತ್ರಿ ಸಂಭ್ರಮ – 9 ದಿನ ಯಾವ ಬಣ್ಣದ ಉಡುಪು ಧರಿಸಿ ಪೂಜಿಸಿದ್ರೆ ಉತ್ತಮ? ಇಲ್ಲಿದೆ ವಿವರ

    ನವರಾತ್ರಿಯ ಪೂಜೆಯಲ್ಲಿ ಐದನೇ ದಿನದ ಮಹತ್ವ ಶಾಸ್ತ್ರಗಳಲ್ಲಿ ತುಂಬಾ ಹೇಳಲಾಗಿದೆ. ವಿಶುದ್ಧ ಚಕ್ರದಲ್ಲಿ ನೆಲೆಸಿದ ಮನಸ್ಸುಳ್ಳ ಸಾಧಕನ ಸಮಸ್ತ ಬಾಹ್ಯ ಕ್ರಿಯೆಗಳು ಹಾಗೂ ಚಿತ್ತವೃತ್ತಿಗಳು ಲೋಪವಾಗುತ್ತವೆ. ಅವನು ವಿಶುದ್ಧ ಚೈತನ್ಯ ಸ್ವರೂಪದತ್ತು ಮುಂದುವರಿಯುತ್ತವೆ. ಅವನ ಮನಸ್ಸು ಎಲ್ಲ ಲೌಕಿಕ, ಸಾಂಸಾರಿಕ ಬಂಧನಗಳಿಂದ ಮುಕ್ತವಾಗಿ ಪದ್ಮಾಸನಾ ಸ್ಕಂದಮಾತೆಯ ಸ್ವರೂಪದಲ್ಲಿ ಪೂರ್ಣವಾಗಿ ತಲ್ಲೀನವಾಗುತ್ತದೆ. ಈ ಸಮಯದಲ್ಲಿ ಸಾಧಕನು ಹೆಚ್ಚಿನ ಎಚ್ಚರಿಕೆಯಿಂದ ಉಪಾಸನೆಯಲ್ಲಿ ಮುಂದರಿಯಬೇಕು. ಅವನು ತನ್ನ ಎಲ್ಲ ಧ್ಯಾನ- ವೃತ್ತಿಗಳನ್ನು ಏಕಾಗ್ರವಿರಿಸಿಕೊಂಡು ಸಾಧನೆಯ ಪಥದಲ್ಲಿ ಮುಂದೆ ಹೋಗಬೇಕು. ಇದನ್ನೂ ಓದಿ: ನವರಾತ್ರಿ ವಿಶೇಷ – ಮೂರನೇ ದಿನ ಚಂದ್ರಘಂಟಾ ದೇವಿಯ ಪೂಜೆ ಮಾಡೋದು ಯಾಕೆ?

    ಜಗಜ್ಜನನಿ ಸ್ಕಂದಮಾತೆಯ ಉಪಾಸನೆಯಿಂದ ಭಕ್ತನ ಎಲ್ಲ ಇಚ್ಛೆಗಳು ಪೂರ್ಣವಾಗುತ್ತವೆ. ಈ ಮತ್ರ್ಯಲೋಕದಲ್ಲೇ ಅವನಿಗೆ ಪರಮ ಶಾಂತಿ ಮತ್ತು ಸುಖದ ಅನುಭವವಾಗ ತೊಡಗುತ್ತದೆ. ಅವನಿಗಾಗಿ ಮೋಕ್ಷದ ಬಾಗಿಲು ತಾನಾಗಿ ಸುಲಭವಾಗುತ್ತದೆ ಎನ್ನುವ ನಂಬಿಕೆಯಿದೆ. ಸ್ಕಂದಮಾತೆಯ ಉಪಾಸನೆಯಿಂದ ಬಾಲರೂಪೀ ಭಗವಾನ್ ಸ್ಕಂದನ ಉಪಾಸನೆಯೂ ಕೂಡ ತಾನಾಗಿಯೇ ಆಗುತ್ತದೆ.

     

  • ಛಾಯಾಗ್ರಾಹಕ ಪುನೀಕ್ ಶೆಟ್ಟಿಯ ಕೈಚಳಕ – ನವದುರ್ಗೆಯಾದ ಬಂಟ್ವಾಳದ ಬಾಲಕಿ

    ಛಾಯಾಗ್ರಾಹಕ ಪುನೀಕ್ ಶೆಟ್ಟಿಯ ಕೈಚಳಕ – ನವದುರ್ಗೆಯಾದ ಬಂಟ್ವಾಳದ ಬಾಲಕಿ

    ಮಂಗಳೂರು: ನವರಾತ್ರಿ ಅಥವಾ ದಸರಾ ಬಂತೆಂದರೆ ಸಾಕು, ನಾನಾ ಬಗೆಯ ಸಂಭ್ರಮಗಳು ಕಳೆಗಟ್ಟುತ್ತವೆ. ಅದರಲ್ಲೂ ಇತ್ತೀಚಿನ ವರ್ಷಗಳಲ್ಲಿ ವಿಶೇಷ ಧಾರ್ಮಿಕ ಹಬ್ಬಗಳ ಸಂದರ್ಭಗಳಲ್ಲಿ ವಿವಿಧ ಬಗೆಯ ವೇಷಗಳಲ್ಲಿ ಮಿಂಚುವ ಟ್ರೆಂಡ್‍ನ್ನು ಕೂಡ ನಾವು ನೋಡುತ್ತಿದ್ದೇವೆ. ಇದೀಗ ಮಂಗಳೂರಿನಲ್ಲಿ ನವರಾತ್ರಿ ಸಂದರ್ಭದಲ್ಲಿ ಇಂತಹುದೇ ಒಂದು ಪ್ರಯತ್ನ ನಡೆದಿದೆ.

    ನವರಾತ್ರಿಗೆ ನವವಿಧ ವಸ್ತ್ರ ವೈವಿಧ್ಯ, ಪೂಜೆಗಳಲ್ಲಿ ತೊಡಗಿಸಿಕೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ ನವದುರ್ಗೆಯ ರೂಪದಲ್ಲೇ ದೇವತೆ ಪ್ರತ್ಯಕ್ಷವಾದರೆ ಅದರ ಸೊಬಗು ಹೇಗಿರಬಹುದು? ಇಂತಹ ಒಂದು ಪರಿಕಲ್ಪನೆ ಮಂಗಳೂರಿನಲ್ಲಿ ಸಾಕಾರಗೊಂಡಿದೆ. ಇದಕ್ಕೆ ಸಾಕಾರ ನೀಡಿರುವುದು ಬಾಲಕಿ ವಿಷ್ಣುಪಿಯಾ ಮತ್ತು ಛಾಯಾಗ್ರಾಹಕ ಪುನೀಕ್ ಶೆಟ್ಟಿ.

    ವಿಷ್ಣುಪ್ರಿಯಾ ಎನ್ನುವ ಹೆಸರು ಕೇಳಿದೊಡನೆ ಆ ಮಗು ಭಗವಾನ್ ವಿಷ್ಣು ಆರಾಧಕರ ಕುಟುಂಬದಿಂದ ಬಂದಿರಬೇಕು ಎನ್ನುವ ಕಲ್ಪನೆ ಬರಬಹುದು. ಆದರೆ ಈ ಮಗುವಿಗೆ ವಿಷ್ಣುಪಿಯ ಎನ್ನುವ ಹೆಸರು ಬರಲು ಕಾರಣ ಕನ್ನಡ ಚಿತ್ರರಂಗದ ಸಾಹಸ ಸಿಂಹ ವಿಷ್ಣುವರ್ಧನ್ ಎಂದರೆ ನೀವು ನಂಬಲೇಬೇಕು.

    ವಿಷ್ಣುವರ್ಧನ್ ಅವರ ಯಜಮಾನ ಸಿನಿಮಾ ನೋಡಿ ಅದೇ ಹೆಸರಿನ “ಯಜಮಾನ ಉಪ್ಪಿನಕಾಯಿ” ಸಂಸ್ಥೆ ಮಾಡಿ ಹೆಸರಾದ ಬಂಟ್ವಾಳದ ವರದರಾಯ ಪೈಯವರ ಕತೆ ನಿಮಗೆ ತಿಳಿದಿರಬಹುದು. ಅವರ ಪುತ್ರಿಯೇ ಈ ವಿಷ್ಣುಪ್ರಿಯಾ. ಮೂಡುಬಿದ್ರೆಯ ರೋಟರಿ ಇಂಗ್ಲಿಷ್ ಮೀಡಿಯಂ ಸೆಂಟ್ರಲ್ ಸ್ಕೂಲ್‍ನಲ್ಲಿ ನಾಲ್ಕನೇ ತರಗತಿ ವಿದ್ಯಾರ್ಥಿನಿಯಗಿರುವ ಈಕೆ ಕೊಯಂಬತ್ತೂರಿನಲ್ಲಿ ನಡೆದ ಸ್ಪಲ್ ‘ಬಿ’ ಎನ್ನುವ ರಾಷ್ಟ್ರ ಮಟ್ಟದ ಮಕ್ಕಳ ಸ್ಪರ್ಧೆಯಲ್ಲಿ 47ನೇ ರ್ಯಾಂಕ್ ಪಡೆದಿದ್ದಾಳೆ. ವೆಂಕಟಕೃಷ್ಣ ಭಟ್ ಅವರ ಬಳಿ ಕರ್ನಾಟಕ ಸಂಗೀತ ಮತ್ತು ಬಾಲಕೃಷ್ಣ ಮಂಜೇಶ್ವರ ಅವರಿಂದ ಭರತನಾಟ್ಯವನ್ನು ಅಭ್ಯಾಸ ಮಾಡುತ್ತಿರುವ ವಿಷ್ಣುಪ್ರಿಯಾ ತಂದೆಯ ಬಳಿಯಲ್ಲೇ ಇಲೆಕ್ಟ್ರಿಕಲ್ ಆರ್ಗನ್ ಕಲಿಯುತ್ತಿದ್ದಾಳೆ.

    ಇಂಥ ಮುದ್ದು ಕಂದನನ್ನು ಇರಿಸಿಕೊಂಡು ನವದುರ್ಗೆಯರ ರೂಪ ನೀಡಿ ನೋಡುವ ಆಕಾಂಕ್ಷೆ ಮಾತಾಪಿತರಲ್ಲಿ ಮೂಡಿದೆ. ಶ್ರದ್ದಾ ಅಶ್ವಿನ್ ಪ್ರಭು ಅವರು ನಡೆಸಿದ ನವದುರ್ಗೆಯರ ಮೇಕಪ್‍ಗೆ ಸ್ಥಿರಚಿತ್ರ ರೂಪ ನೀಡಲು ಮಂಗಳೂರಿನ ಖ್ಯಾತ ಛಾಯಾಗ್ರಾಹಕ ಪುನೀಕ್ ಶೆಟ್ಟಿ ಕೈ ಜೋಡಿಸಿದ್ದಾರೆ. ಸಿನಿಮಾ ನಿರ್ದೇಶಕರು ಕೂಡ ಆಗಿರುವ ಪುನೀಕ್ ಶೆಟ್ಟಿ, ಎರಡೇ ದಿನದಲ್ಲಿ ನವದುರ್ಗೆಯರ ರೂಪದಲ್ಲಿ ಮಗುವನ್ನು ಫೋಟೋಗಳಲ್ಲಿ ಚಿತ್ರಿಸಿದ್ದಾರೆ.