Tag: naval base

  • ಫಸ್ಟ್‌ ಟೈಂ ಕಾರವಾರಕ್ಕೆ ಬಂತು ಐಎನ್‌ಎಸ್‌ ವಿಕ್ರಾಂತ್‌ – ನಿಲುಗಡೆಯಾಗುತ್ತಿರುವುದು ಯಾಕೆ?

    ಫಸ್ಟ್‌ ಟೈಂ ಕಾರವಾರಕ್ಕೆ ಬಂತು ಐಎನ್‌ಎಸ್‌ ವಿಕ್ರಾಂತ್‌ – ನಿಲುಗಡೆಯಾಗುತ್ತಿರುವುದು ಯಾಕೆ?

    ಕಾರವಾರ: ಭಾರತದ ಮೊದಲ ಸ್ವದೇಶಿ ನಿರ್ಮಿತ ವಿಮಾನವಾಹಕ ನೌಕೆ ಎಂದೇ ಹೆಗ್ಗುರುತಿಗೆ ಪಾತ್ರವಾಗಿರುವ ಐಎನ್ಎಸ್ ವಿಕ್ರಾಂತ್ (INS Vikrant) ಕದಂಬ ನೌಕಾನೆಲೆಯ ಜಟ್ಟಿಗೆ (ಬರ್ತಿಂಗ್ ಜಾಗ) ಮೊದಲ ಬಾರಿ ಆಗಮಿಸಿದೆ.

    ಈ ಹಿಂದೆ ವಿಕ್ರಾಂತ್ ಹಡಗು ಕೊಚ್ಚಿಯಲ್ಲಿಯೇ ಇದ್ದು ನಂತರ ಅರಬ್ಬಿ ಸಮುದ್ರದಲ್ಲಿ ಪರೀಕ್ಷಾರ್ಥ ಕಾರ್ಯಾಚರಣೆ ನಡೆಸಿತ್ತು. ಇದೀಗ ಕಾರವಾರದ ಕದಂಬ ನೌಕಾ ನೆಲೆಯಲ್ಲಿ (INS Kadamba Naval Base) ಯಶಸ್ವಿಯಾಗಿ ನಿಲುಗಡೆಯಾಗಿರುವ ವಿಕ್ರಾಂತ್‌ ಒಂದು ತಿಂಗಳ ಕಾಲ ಇಲ್ಲಿಯೇ ಇರಲಿದೆ. ನಂತರ ಇಂಧನ, ಆಹಾರ ತುಂಬಿಕೊಂಡು ಪೂರ್ವ ಹಾಗೂ ಪಶ್ಚಿಮ ಕರಾವಳಿಯಲ್ಲಿ ಕಾರ್ಯಾಚರಣೆ ನಡೆಸಲಿದೆ.

    ಏಷ್ಯಾದ ಅತೀ ದೊಡ್ಡ ನೌಕಾ ನೆಲೆ ಎಂದೇ ಪ್ರಸಿದ್ಧಿ ಪಡೆದಿರುವ ಕದಂಬದಲ್ಲಿ ಈಗಾಗಲೇ 40 ಯುದ್ದ ಹಡಗುಗಳು, ಜಲಾಂತರ್ಗಾಮಿ ನೌಕೆ ನಿಲ್ಲುವಷ್ಟು ವ್ಯವಸ್ಥೆ ಕಲ್ಪಿಸಲಾಗಿದೆ. ದೇಶದ ಮೊದಲ ಹಡಗುಗಳನ್ನು ರಿಪೇರಿ ಮಾಡಲು ಸಮುದ್ರದಿಂದಲೇ ಮೇಲೆತ್ತಿ ದಡಕ್ಕೆ ತರುವ  ʼಟ್ರಾಲಿ ಶಿಪ್ಟಿಂಗ್ ಸಿಸ್ಟಮ್ʼತಂತ್ರಜ್ಞಾನ ಇಲ್ಲಿರುವುದು ವಿಶೇಷ. ಇದನ್ನೂ ಓದಿ: MIG-21 ಫೈಟರ್‌ ಜೆಟ್‌ ಹಾರಾಟ ಬಂದ್ – IAF ಮಹತ್ವದ ನಿರ್ಧಾರ

    ಸೀ ಬರ್ಡ್‌ ಸ್ಟೇಜ್ -1 ರಲ್ಲಿ ಮೂರು ಜಟ್ಟಿಗಳು ನಿರ್ಮಾಣಗೊಂಡಿದ್ದವು. ಆದರೆ ಸ್ಟೇಜ್-2 ನಲ್ಲಿ ಮತ್ತೆ ಮೂರು ಜಟ್ಟಿಗಳನ್ನು ನಿರ್ಮಾಣ ಮಾಡಲಾಗಿದ್ದು ಎರಡು ಜಟ್ಟಿಯಲ್ಲಿ ಏಷ್ಯಾದ ಅತೀ ದೊಡ್ಡ ಯುದ್ಧ ಹಡಗು ನಿಲುಗಡೆ ಮಾಡಬಹುದಾಗಿದೆ. ಈ ಕಾರಣಕ್ಕೆ ವಿಕ್ರಮಾದಿತ್ಯ ಹಾಗೂ ವಿಕ್ರಾಂತ್ ಯುದ್ದ ವಿಮಾನ ವಾಹಕಗಳಿಗೆ ಇಲ್ಲಿ ಸ್ಥಳಾವಕಾಶ ಮಾಡಿಕೊಡಲಾಗಿದೆ.

    ಐಎನ್ಎಸ್ ವಿಕ್ರಾಂತ್ ವಿಶೇಷತೆ ಏನು?
    ಕೊಚ್ಚಿಯ ಹಡಗು ಕಾರ್ಖಾನೆಯಲ್ಲಿ 2000 ತಂತ್ರಜ್ಞರು, 13 ವರ್ಷಗಳಿಂದ ಕೆಲಸ ಮಾಡಿ ನಿರ್ಮಾಣ ಮಾಡಿದ ಯುದ್ಧನೌಕೆ ಇದಾಗಿದ್ದು, ಕಳೆದ ವರ್ಷ ಪ್ರಧಾನಿ ನರೇಂದ್ರ ಮೋದಿ (PM Narendra Modi) ಲೋಕಾರ್ಪಣೆ ಮಾಡಿದ್ದರು.

    40 ಸಾವಿರ ಟನ್‌ ತೂಕದ 23 ಸಾವಿರ ಕೋಟಿ ರೂ. ಹಣ ವ್ಯಯಿಸಿ ಯುದ್ಧವಿಮಾನ ವಾಹಕ ನೌಕೆಯನ್ನು ಸ್ವದೇಶಿ ತಂತ್ರಜ್ಞಾನವನ್ನು ಬಳಸಿ ನಿರ್ಮಿಸಿಸುವ ಮೂಲಕ ವಿಶ್ವದ 6 ಪ್ರಮುಖ ರಾಷ್ಟ್ರಗಳ ಸಾಲಿಗೆ ಭಾರತ ಸೇರಿದೆ. ಈ ಹಿಂದೆ ಅಮೆರಿಕ, ರಷ್ಯಾ, ಚೀನಾ, ಫ್ರಾನ್ಸ್‌, ಇಂಗ್ಲೆಂಡ್‌, ಇಟಲಿ ಮಾತ್ರವೇ ಈ ಸಾಧನೆಗೈದಿದ್ದವು. ಇದನ್ನೂ ಓದಿ: ವೇದಿಕೆಯಲ್ಲೇ ಎಂ.ಬಿ ಪಾಟೀಲ್‌ಗೆ ಗದರಿದ ಡಿಕೆಶಿ – ಮುಜುಗರಕ್ಕೆ ಒಳಗಾಗಿ ಸುಮ್ಮನೆ ಕುಳಿತ MBP

    ಉದ್ದ 262 ಮೀಟರ್‌, ಅಗಲ 62 ಮೀಟರ್‌, ಎತ್ತರ- 59 ಮೀಟರ್‌ ಹೊಂದಿರುವ ಯುದ್ಧ ನೌಕೆಯಲ್ಲಿ 18 ಮಹಡಿಗಳಿದ್ದು 2,400 ವಿಭಾಗಗಳು ಇವೆ. ಒಂದೇ ಬಾರಿಗೆ 1600 ನೌಕಾ ಸಿಬ್ಬಂದಿಯನ್ನು ಐಎನ್‌ಎಸ್‌ ವಿಕ್ರಾಂತ್‌ನಲ್ಲಿ ನಿಯೋಜಿಸಬಹುದಾಗಿದೆ.

    ಮಿಗ್‌- 29 ಕೆ, ಕಮೋವ್‌- 31 ಹೆಲಿಕಾಪ್ಟರ್‌ಗಳು, ಅಮೆರಿಕ ನಿರ್ಮಿತ ಎಫ್‌-18ಎ ಸೂಪರ್‌ ಹಾರ್ನೆಟ್‌, ಫ್ರಾನ್ಸ್‌ ನಿರ್ಮಿತ ರಫೇಲ್‌ ಯುದ್ಧ ವಿಮಾನಗಳು, ಫೈಟರ್‌ ಜೆಟ್‌ ಎಂಎಚ್‌- 60 ರೋಮಿಯೊ ಮಲ್ಟಿರೋಲ್‌ ಹೆಲಿಕಾಪ್ಟರ್‌ಗಳು,  32 ಮಧ್ಯಮ ಶ್ರೇಣಿಯ ಮೇಲ್ಮೈಯಿಂದ ಚಿಮ್ಮುವ ವಾಯು ಕ್ಷಿಪಣಿಗಳು ಮತ್ತು ಎಕೆ- 630 ಫಿರಂಗಿ ಗನ್‌ಗಳೂ ವಿಕ್ರಾಂತ್‌ ಬತ್ತಳಿಕೆಯಲ್ಲಿದೆ.

    ಇದರ ರನ್‌ ವೇ 262 ಮೀಟರ್‌ಗಳಷ್ಟು ಉದ್ದವಿದೆ. ಬರೋಬ್ಬರಿ 2 ಫುಟ್ಬಾಲ್‌ ಮೈದಾನದಷ್ಟು ದೊಡ್ಡದಾಗಿದೆ.  2 ಒಲಿಂಪಿಕ್ಸ್‌ ಈಜುಕೊಳಗಳನ್ನು ನಿರ್ಮಿಸಬಹುದಾದಷ್ಟು ಉದ್ದವಾದ ರನ್‌ವೇ ಹೊಂದಿದೆ.

    2,500 ಕಿ.ಮೀ. ಉದ್ದದ ವಿದ್ಯುತ್‌ ಕೇಬಲ್‌ ವಿಕ್ರಾಂತ್‌ನ ಒಡಲೊಳಗಿದೆ. ಇದರ ಅಡುಗೆಮನೆಯಲ್ಲಿ ಒಂದೇ ದಿನದಲ್ಲಿ 4,800 ಜನರಿಗೆ ಅಡುಗೆ ಸಿದ್ಧಪಡಿಸಬಹುದು. 1 ಗಂಟೆಯಲ್ಲಿ 3 ಸಾವಿರ ಚಪಾತಿ ಮಾಡುವ, ಇಡ್ಲಿ ಬೇಯಿಸುವ ಅತ್ಯಾಧುನಿಕ ಯಂತ್ರಳಿವೆ.

    ಈ ನೌಕೆ ಗಂಟೆಗೆ 33 ಕಿ.ಮೀ. ವೇಗದಲ್ಲಿ ಚಲಿಸಿ, ಒಂದೇ ಬಾರಿಗೆ 7,500 ನಾಟಿಕಲ್‌ ಮೈಲು ಕ್ರಮಿಸಬಲ್ಲದು. 250 ಟ್ಯಾಂಕರ್‌ಗಳಷ್ಟು ಇಂಧನ ಇದರಲ್ಲಿರುತ್ತದೆ. ಸಿಬ್ಬಂದಿ ಆರೋಗ್ಯ ಹದಗೆಡದಂತೆ ನೋಡಿಕೊಳ್ಳಲು 16 ಬೆಡ್‌ಗಳ ಆಸ್ಪತ್ರೆ ಕೂಡ ಇದೆ.

    2025ಕ್ಕೆ ದೇಶಕ್ಕೆ ಸಮರ್ಪಣೆ
    ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಅರಗಾದಲ್ಲಿ ಕದಂಬ ನೌಕಾನೆಲೆಯು ಏಷ್ಯಾದಲ್ಲೇ ಅತೀ ದೊಡ್ಡ ನೌಕಾನೆಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಇಲ್ಲಿನ ಭೂ ಪ್ರದೇಶ ವೈರಿಗಳಿಗೆ ಚಿತ್ತ ಕಾಣದಂತೆ ಮಾಡಿ ಶತ್ರುಗಳ ಮೇಲೆ ಮುಗಿಬೀಳಲು ಸುವ್ಯವಸ್ಥಿತ ನೌಕಾ ತಾಣವಾಗಿ ಮಾರ್ಪಡುತಿದ್ದು ಇದೀಗ ನೌಕಾ ನೆಲೆಯಲ್ಲಿ ಎರಡನೇ ಹಂತದ ಕಾಮಗಾರಿಗಳು ಮುಕ್ತಾಯದ ಹಂತ ತಲುಪಿದೆ. ಒಂದು ಲಕ್ಷ ಸಿಬ್ಬಂದಿಗೆ ವಸತಿ ನಿಲಯ ,ಕಚೇರಿ ಸಂಕೀರ್ಣ, ರಿಪೇರಿ ಯಾರ್ಡ್‌ಗಳು ಈಗಾಗಲೇ ನಿರ್ಮಾಣದ ಅಂತಿಮ ಹಂತ ತಲುಪಿದ್ದು ನೌಕಾ ದಳದ ಮಾಹಿತಿ ಪ್ರಕಾರ 2025ರ ವೇಳೆಗೆ ದೇಶಕ್ಕೆ ಸಮರ್ಪಣೆಗೊಳ್ಳಲಿದೆ.

  • ನೌಕಾಪಡೆ ಆಫೀಸರ್ ಎಂದು ಕಾರವಾರ ನೆಲೆಗೆ ನುಗ್ಗಲು ಯತ್ನಿಸಿದವ ಅರೆಸ್ಟ್‌

    ನೌಕಾಪಡೆ ಆಫೀಸರ್ ಎಂದು ಕಾರವಾರ ನೆಲೆಗೆ ನುಗ್ಗಲು ಯತ್ನಿಸಿದವ ಅರೆಸ್ಟ್‌

    ಕಾರವಾರ: ನಕಲಿ ದಾಖಲೆ ನೀಡಿ ನೌಕಾನೆಲೆಗೆ ನುಗ್ಗಲು ಯತ್ನಿಸಿದ ಯುವಕನನ್ನು ನೌಕಾದಳದ ಪೊಲೀಸರು ಬಂಧಿಸಿದ ಘಟನೆ ಉತ್ತರಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಅರಗಾದ ಕದಂಬ ನೌಕಾನೆಲೆಯಲ್ಲಿ ನಡೆದಿದೆ.

    ಶಿವಮೊಗ್ಗ ಜಿಲ್ಲೆಯ ಗಾಜನೂರಿನ ಕಿರಣ್ ಎಸ್.ಆರ್.ನನ್ನು ನೌಕಾದಳ ಪೊಲೀಸರು ಬಂಧಿಸಿದ್ದಾರೆ. ನೌಕಾಪಡೆಯ ಪ್ರೊಬೆಷನರಿ ಸಬ್ ಲೆಫ್ಟಿನೆಂಟ್ ಆಫೀಸರ್ ಎಂದು ಪರಿಚಯಿಸಿಕೊಂಡಿದ್ದ ಈತ, ಮಾನವ ಸಂಪನ್ಮೂಲ ಮತ್ತು ಯೋಜನಾ ನಿರ್ದೇಶನಾಲಯದಿಂದ 2021ರ ಡಿ.14ರಂದು ತನ್ನ ನೇಮಕಾತಿಯಾಗಿದೆ ಎಂದು ಹೇಳಿಕೊಂಡಿದ್ದನು. ತನ್ನ ಗುರುತಿನ ಚೀಟಿ ಮತ್ತು ಅದಕ್ಕೊಂದು ಸಂಖ್ಯೆಯನ್ನೂ ಸಿದ್ಧಪಡಿಸಿಕೊಂಡಿದ್ದ ಈತ ನೌಕಾ ನೆಲೆಯ ಮುಖ್ಯ ಗೇಟ್ ಬಳಿ ತೆರಳುವಾಗ ತಪಾಸಣೆ ವೇಳೆ ನೀಡಿದ್ದನು. ಇದನ್ನೂ ಓದಿ: ಒಟ್ಟಿಗೆ ಫೈಟರ್ ಜೆಟ್ ಹಾರಿಸಿ ಇತಿಹಾಸ ಸೃಷ್ಟಿದ ತಂದೆ- ಮಗಳು

    ಆತ ನೀಡಿದ ದಾಖಲೆಗಳು ಮತ್ತು ಗುರುತಿನ ಚೀಟಿಯನ್ನು ಪರಿಶೀಲಿಸಿದಾಗ ಎಲ್ಲವೂ ನಕಲಿ ಎಂಬುದು ದೃಢವಾಗಿದ್ದು, ಬಳಿಕ ನೌಕಾನೆಲೆಯ ಅಧಿಕಾರಿಗಳು ಆತನನ್ನು ವಶಕ್ಕೆ ಪಡೆದು ಕಾರವಾರ ಗ್ರಾಮೀಣ ಠಾಣೆ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ಇದನ್ನೂ ಓದಿ: ಭಾರತದ ಸುಬ್ರಮಣಿಯನ್ ಈಗ ವಿಶ್ವಸಂಸ್ಥೆಯ ಸುಡಾನ್ ಮಿಷನ್ ಕಮಾಂಡರ್

    Live Tv
    [brid partner=56869869 player=32851 video=960834 autoplay=true]