Tag: Navaratri

  • ನವರಾತ್ರಿಯ 9ನೇ ದಿನ ಸಿದ್ಧಿದಾತ್ರೀ ಆರಾಧನೆ

    ನವರಾತ್ರಿಯ 9ನೇ ದಿನ ಸಿದ್ಧಿದಾತ್ರೀ ಆರಾಧನೆ

    ಗನ್ಮಾತೆ ದುರ್ಗಾದೇವಿಯ ಒಂಭತ್ತನೇ ಶಕ್ತಿಯ ಹೆಸರು ಸಿದ್ಧಿದಾತ್ರಿ. ಇವಳು ಎಲ್ಲ ಪ್ರಕಾರದ ಸಿದ್ಧಿಗಳನ್ನು ಕೊಡುವಂತಹವಳು. ಮಾರ್ಕಡೇಯ ಪುರಾಣದ ಅನುಸಾರ ಅಣಿಮಾ, ಮಾಹಿಮಾ, ಗರಿಮಾ, ಲಘಮಾ, ಪ್ರಾಪ್ತಿ, ಪ್ರಾಕಮ್ಯ, ಈಶಿತ್ವ ಮತ್ತು ವಶಿತ್ವ ಹೀಗೆ ಎಂಟು ಸಿದ್ಧಿಗಳು ಇವೆ.

    ದೇವೀಪುರಾಣಕ್ಕನುಸಾರ ಭಗವಾನ್ ಶಿವನು ಇವಳ ಕೃಪೆಯಿಂದ ಇವೆಲ್ಲ ಸಿದ್ಧಿಗಳನ್ನು ಪಡೆದುಕೊಂಡಿದ್ದನು. ಇವಳ ಅನುಕಂಪದಿಂದಲೇ ಭಗವಾನ್ ಶಿವನ ಅರ್ಧ ಶರೀರವು ದೇವಿಯಾಗಿತ್ತು. ಇದೇ ಕಾರಣದಿಂದ ಅವನು ಜಗತ್ತಿನಲ್ಲಿ ‘ಅರ್ಧನಾರೀಶ್ವರ’ ಹೆಸರಿನಿಂದ ಪ್ರಸಿದ್ಧನಾದನು. ಸಿದ್ಧಿದಾತ್ರಿಗೆ ನಾಲ್ಕು ಭುಜಗಳಿದ್ದು, ಇವಳ ವಾಹನ ಸಿಂಹವಾಗಿದೆ. ಇವಳು ಫಲಪುಷ್ಪದ ಮೇಲೆ ವಿರಾಜಮಾನವಾಗಿ ಕುಳಿತುಕೊಂಡಿರುತ್ತಾಳೆ. ಇವಳ ಕೆಳಗಿನ ಬಲಕೈಯಲ್ಲಿ ಚಕ್ರ, ಮೇಲಿನ ಕೈಯಲ್ಲಿ ಗದೆ ಇದೆ. ಎಡಗಡೆ ಕೆಳಗಿನ ಕೈಯಲ್ಲಿ ಶಂಖ ಮತ್ತು ಮೇಲಿನ ಕೈಯಲ್ಲಿ ಕಮಲವಿದೆ.

    ನವರಾತ್ರಿಯ 9ನೇ ದಿನ ಇವಳ ಉಪಾಸನೆ ಮಾಡಲಾಗುತ್ತದೆ. ಈ ದಿನ ಶಾಸ್ತ್ರೀಯ ವಿಧಿ-ವಿಧಾನದಿಂದ ಹಾಗೂ ಪೂರ್ಣನಿಷ್ಠೆಯಿಂದ ಸಾಧನೆ ಮಾಡುವ ಸಾಧಕರಿಗೆ ಸಿದ್ಧಿಗಳು ಪ್ರಾಪ್ತಿ ಆಗುತ್ತವೆ. ಬ್ರಹ್ಮಾಂಡದ ಮೇಲೆ ವಿಜಯವನ್ನು ಪಡೆಯುವ ಸಾಮಥ್ರ್ಯ ಅವನಲ್ಲಿ ಬಂದು ಬಿಡುತ್ತದೆ. ಪ್ರತಿಯೊಬ್ಬ ಮನುಷ್ಯನು ತಾಯಿ ಸಿದ್ಧಿದಾತ್ರಿಯ ಕೃಪೆಯನ್ನು ಪಡೆದುಕೊಳ್ಳಲು ನಿರಂತರ ಪ್ರಯತ್ನ ಮಾಡಬೇಕು. ಅವಳ ಆರಾಧನೆಯ ಕಡೆಗೆ ಮುಂದುವರಿಯಬೇಕು. ಇವಳ ಕೃಪೆಯಿಂದ ಅತ್ಯಂತ ದುಃಖರೂಪೀ ಸಂಸಾರದಿಂದ ನಿರ್ಲಿಪ್ತನಾಗಿದ್ದುಕೊಂಡು ಎಲ್ಲ ಸುಖವನ್ನು ಭೋಗಿಸುತ್ತಾ ಅವನು ಮೋಕ್ಷವನ್ನು ಪಡೆಯಬಲ್ಲನು.

    ನವದುರ್ಗೆಯಲ್ಲಿ ಸಿದ್ಧಿದಾತ್ರಿ ದೇವಿಯೂ ಕೊನೆಯವಳಾಗಿದ್ದಾಳೆ. ಬೇರೆ ಎಂಟು ದುರ್ಗೆಯರ ಪೂಜೆ ಉಪಾಸನೆಯನ್ನು ಶಾಸ್ತ್ರೀಯ ವಿಧಿ-ವಿಧಾನಕ್ಕನುಸಾರ ಮಾಡುತ್ತಾ ಭಕ್ತರು ನವರಾತ್ರಿಯ ಒಂಭತ್ತನೇ ದಿನ ಇವಳ ಉಪಾಸನೆಯಲ್ಲಿ ಪ್ರವೃತ್ತರಾಗುತ್ತಾರೆ. ಈ ಸಿದ್ಧಿದಾತ್ರೀ ದೇವಿಯ ಉಪಾಸನೆಯನ್ನು ಪೂರ್ಣಗೊಳಿಸಿದ ಬಳಿಕ ಭಕ್ತರ, ಸಾಧಕರ, ಲೌಕಿಕ-ಪಾರಲೌಕಿಕ ಎಲ್ಲ ಪ್ರಕಾರದ ಕಾಮನೆಯಗಳ ಪೂರ್ತಿ ಆಗಿ ಹೋಗುತ್ತದೆ ಎನ್ನುವ ನಂಬಿಕೆಯಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    ದಸರಾ ಸುದ್ದಿಗಳು:

    1. ನವರಾತ್ರಿಯ ಕೊನೆಯ ದಿನ ಆಚರಿಸುವ ಆಯುಧ ಪೂಜೆಯ ಮಹತ್ವವೇನು?

    2. ಮೈಸೂರು ದಸರಾ: ರತ್ನ ಖಚಿತ ಸಿಂಹಾಸನದ ಜೋಡಣೆ ಕಾರ್ಯ ಆರಂಭ

    3. ದಸರಾಗೆ ನಿಮ್ಮ ಮನೆಯಲ್ಲಿರಲಿ ಮೈಸೂರು ಪಾಕ್

    4. ಮೈಸೂರು ಪಾಕ್ ಕಂಡು ಹಿಡಿದಿದ್ದು ಯಾರು? ಇಲ್ಲಿದೆ ಮಾಹಿತಿ

    5. ಗೊಂಬೆ ಹಬ್ಬದ ಸಿದ್ಧತೆ ಹೀಗಿರಲಿ

    6. ದಸರಾ ಹಬ್ಬಕ್ಕೆ ಸ್ಟೈಲಿಶ್ ಆಗಿ ಕಾಣ್ಬೇಕಾ ಹೀಗಿರಲಿ ನಿಮ್ಮ ಸೀರೆ ಆಯ್ಕೆ

    7. ನವರಾತ್ರಿ ಸಂಭ್ರಮ – 9 ದಿನ ಯಾವ ಬಣ್ಣದ ಉಡುಪು ಧರಿಸಿ ಪೂಜಿಸಿದ್ರೆ ಉತ್ತಮ? ಇಲ್ಲಿದೆ ವಿವರ

    8.ದೇಶದ ವಿವಿಧ ರಾಜ್ಯಗಳಲ್ಲಿ ದಸರಾ ಹೇಗೆ ಆಚರಿಸುತ್ತಾರೆ? – ಇಲ್ಲಿದೆ ಮಾಹಿತಿ

    9.ನವರಾತ್ರಿ ಹಬ್ಬ ಹೆಣ್ಣು ಮಕ್ಕಳಿಗೆ ಇಷ್ಟ ಯಾಕೆ?

    10. ನವರಾತ್ರಿ ಮೊದಲ ದಿನ ಶೈಲಪುತ್ರಿಯ ಪೂಜೆ: ದಾಕ್ಷಾಯಿಣಿ ಶೈಲಪುತ್ರಿಯಾಗಿ ಶಿವನ ಕೈ ಹಿಡಿದ ಕಥೆ ಓದಿ

    11. ನವರಾತ್ರಿ ಎರಡನೇ ದಿನ ಇಷ್ಟಾರ್ಥ ಸಿದ್ಧಿಗಾಗಿ ಬ್ರಹ್ಮಚಾರಿಣಿಯನ್ನು ಪೂಜಿಸೋದು ಯಾಕೆ? ಪುರಾಣ ಕಥೆ ಓದಿ

    12. ಸಿಂಪಲ್ ಮೈಸೂರು ಬೋಂಡಾ ಮಾಡುವ ವಿಧಾನ

    13. ನವದುರ್ಗೆಯ 4ನೇ ರೂಪ ಕೂಷ್ಮಾಂಡ -ಇವಳ ಭಕ್ತಿಯಿಂದ ಆಯಸ್ಸು, ಬಲ, ಆರೋಗ್ಯ ವೃದ್ಧಿ

    14. ನವರಾತ್ರಿ ವಿಶೇಷ – ಸ್ಕಂದಮಾತೆಯನ್ನ ಪೂಜಿಸುವುದು ಏಕೆ?

    15. ಜನ್ಮ-ಜನ್ಮಾಂತರದ ಪಾಪಗಳನ್ನು ನಾಶಮಾಡುವ 6ನೇ ಅವತಾರ ಕಾತ್ಯಾಯನೀ

    16. ಮೈಸೂರಿನ ಸಿಹಿ ಮಾತ್ರವಲ್ಲ ಹಬ್ಬಕ್ಕಾಗಿ ಬಾದೂಷವನ್ನು ಮಾಡಿ-ಇಲ್ಲಿದೆ ಸರಳ ವಿಧಾನ

    17. 7ನೇ ದಿನ ಕಾಲರಾತ್ರಿಯನ್ನು ಪೂಜೆ ಮಾಡೋದು ಯಾಕೆ?

    18. ನವರಾತ್ರಿಯ 8ನೇ ದಿನ ಮಹಾಗೌರಿಯ ಪೂಜೆ!

  • ಕೊಲ್ಲರು ಮೂಕಾಂಬಿಕಾ ದೇಗುಲದ ಲಕ್ಷ್ಮಿ ಮಂಟಪ ಪ್ರವೇಶಿಸಿದ ಮಾಜಿ ಮಹಿಳಾ ಅಧಿಕಾರಿ- ಭಕ್ತರಿಂದ ಭಾರೀ ಆಕ್ರೋಶ

    ಕೊಲ್ಲರು ಮೂಕಾಂಬಿಕಾ ದೇಗುಲದ ಲಕ್ಷ್ಮಿ ಮಂಟಪ ಪ್ರವೇಶಿಸಿದ ಮಾಜಿ ಮಹಿಳಾ ಅಧಿಕಾರಿ- ಭಕ್ತರಿಂದ ಭಾರೀ ಆಕ್ರೋಶ

    ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಲಕ್ಷ್ಮಿ ಮಂಟಪವನ್ನು ವಿವಾದಿತ ಮಹಿಳಾ ಅಧಿಕಾರಿಯೊಬ್ಬರು ಪ್ರವೇಶಿಸಿ ಭಾರೀ ಚರ್ಚೆಗೆ ಕಾರಣವಾಗಿದ್ದಾರೆ. ಈ ವಿಡಿಯೋ ವಾಟ್ಸಾಪ್‍ನಲ್ಲಿ ಹರಿದಾಡುತ್ತಿದ್ದು, ಅರ್ಚಕರ ವಿರುದ್ಧ ಭಕ್ತರು ಕಿಡಿಕಾರಿದ್ದಾರೆ.

    ಬೈಂದೂರಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಆಡಳಿತಾಧಿಕಾರಿಯಾಗಿದ್ದ ಉಮಾ ಅವರು ಲಕ್ಷ್ಮಿ ಮಂಟಪ ಪ್ರವೇಶಿಸಿದ್ದಾರೆ. ದೇವಸ್ಥಾನದ ಒಳಗಿನ ಸಿಸಿಟಿವಿ ಕ್ಯಾಮೆರಾದಲ್ಲಿ ಈ ದೃಶ್ಯ ಸೆರೆಯಾಗಿದ್ದು, ಮುಖಂಡರೊಬ್ಬರು ಇದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದು, ವಿಡಿಯೋ ನೋಡಿದ ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಯಾಕೆ ಪ್ರವೇಶಿಸಬಾರದು?
    ನವರಾತ್ರಿಯಲ್ಲಿ ಕೊಲ್ಲೂರಿನಲ್ಲಿ ಮಹಿಳೆಯರಿಗೆ ಬಾಗಿನ ಕೊಡುವ ಸಂಪ್ರದಾಯ ಇದೆ. ನವರಾತ್ರಿಯ ಮೊದಲ ದಿನ ಒಬ್ಬರಿಗೆ, ಎರಡನೇ ದಿನ ಇಬ್ಬರಿಗೆ ಹೀಗೆ ಕ್ರಮವಾಗಿ ನೀಡುತ್ತಾ ಬಂದು ಕೊನೆಯ (9ನೇ) ದಿನ ಗ್ರಾಮದ 9 ಜನ ಬ್ರಾಹ್ಮಣ ಮಹಿಳೆಯರಿಗೆ ಬಾಗಿನ ಕೊಡುವ ಸಂಪ್ರದಾಯವಿದೆ. ಆ ಸಂದರ್ಭದಲ್ಲಿ ಮಾತ್ರ ಮಹಿಳೆಯರು ಲಕ್ಷ್ಮಿ ಮಂಟಪ ಪ್ರವೇಶಿಸಬಹುದು. ಆದರೆ ಅಧಿಕಾರಿ ಉಮಾ ಅವರು ನವರಾತ್ರಿ ದೇವಸ್ಥಾನ ಭೇಟಿ ಸಂದರ್ಭದಲ್ಲಿ ಲಕ್ಷ್ಮಿ ಮಂಟಪ ಪ್ರವೇಶಿಸಿದ್ದರಿಂದ ಅಪಚಾರ ಆಗಿದೆ ಎಂಬುದು ಸದ್ಯದ ಆರೋಪ.

    ಉಮಾ ಅವರು ಅಧಿಕಾರದಲ್ಲಿ ಅನೇಕ ಅಕ್ರಮಗಳು ನಡೆದಿದ್ದು, ಭಕ್ತರೊಬ್ಬರು ಹರಕೆ ನೀಡಿದ್ದ ಚಿನ್ನವನ್ನು ಅಡ ಇಟ್ಟು ದೇವಳದ ಸಿಬ್ಬಂದಿ ಗೋಲ್‍ಮಾಲ್ ಮಾಡಿದ್ದರು. ಅವರು ಅಧಿಕಾರದಲ್ಲಿ ಇರುವುದಾಗ ಲಕ್ಷ್ಮಿ ಮಂಟಪ ಪ್ರವೇಶಕ್ಕೆ ಅವಕಾಶ ಕೊಟ್ಟಿತ್ತು. ಆದರೆ ಈಗ ವಿವಾದ ಎದುರಿಸುತ್ತಿರುವಾಗ ದೇವಸ್ಥಾನ ಹಾಗೂ ಲಕ್ಷ್ಮಿ ಮಂಟಪ ಪ್ರವೇಶ ನೀಡಿದ್ದಕ್ಕೆ ಭಾರೀ ಟೀಕೆ ವ್ಯಕ್ತವಾಗಿದೆ.

    ಉಮಾ ಈ ಹಿಂದೆ ಅಧಿಕಾರಿಯಾಗಿದ್ದರು ಎಂಬ ಕಾರಣಕ್ಕೆ ಕೆಲ ಅರ್ಚಕರು ಲಕ್ಷ್ಮಿ ಮಂಟಪ ಪ್ರವೇಶಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ. ಆದರೆ ಇದನ್ನು ನೋಡಿದ ಮತ್ತೊಂದು ಗುಂಪು ಇದಕ್ಕೆ ತಗಾದೆ ಎತ್ತಿದೆ. ಇತ್ತ ಭಕ್ತರು ಕೂಡ ಅರ್ಚಕರ ವಿರುದ್ಧ ಕಿಡಿಕಾರಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ನವರಾತ್ರಿಯ 8ನೇ ದಿನ ಮಹಾಗೌರಿಯ ಪೂಜೆ!

    ನವರಾತ್ರಿಯ 8ನೇ ದಿನ ಮಹಾಗೌರಿಯ ಪೂಜೆ!

    ಗನ್ಮಾತೆ ದುರ್ಗಾದೇವಿಯ ಎಂಟನೇ ರೂಪ ಮಹಾಗೌರಿ. ಶ್ವೇತ ಬಣ್ಣದ ದೇವಿಗೆ ಶಂಖ, ಚಂದ್ರ ಮತ್ತು ಕುಂದ ಪುಷ್ಪ ಇವುಗಳ ಉಪಮೆ ಕೊಡಲಾಗಿದೆ. ಇವಳಿಗೆ ನಾಲ್ಕು ಭುಜಗಳಾಗಿದ್ದು, ಇವಳ ವಾಹನ ವೃಷಭವಾಗಿದೆ. ಆ ವೃಷಭ ಕೂಡ ಬೆಳ್ಳಗಿದೆ. ಇವಳ ಮೇಲಿನ ಬಲಕೈಯಲ್ಲಿ ಅಭಯಮುದ್ರೆ ಮತ್ತು ಕೆಳಗಿನ ಬಲಕೈಯಲ್ಲಿ ತ್ರಿಶೂಲವಿದೆ.

    ಮೇಲಿನ ಎಡಕೈಯಲ್ಲಿ ಢಮರು ಹಾಗೂ ಕೆಳಗಿನ ಎಡಗೈಯಲ್ಲಿ ವರಮುದ್ರೆ ಇದೆ. ತನ್ನ ಪಾರ್ವತಿ ರೂಪದಲ್ಲಿ ಇವಳು ಭಗವಾನ್ ಶಿವವನ್ನು ಪತಿಯಾಗಿ ಪಡೆಯಲು ಭಾರೀ ಕಠೋರ ತಪಸ್ಸು ಮಾಡಿದ್ದಳು. ನಾನು ಶಿವನಲ್ಲದೇ ಬೇರೆ ಯಾವುದೇ ದೇವತೆಯನ್ನು ವರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಳು. ಕಠೋರ ತಪಸ್ಸಿನಿಂದಾಗಿ ಈಕೆಯ ಶರೀರ ಕಪ್ಪು ಬಣ್ಣಕ್ಕೆ ತಿರುಗಿತ್ತು. ಇವಳ ತಪಸ್ಸಿಗೆ ಸಂತುಷ್ಟನಾಗಿ ಭಗವಾನ್ ಶಿವನು ಇವಳ ಶರೀರವನ್ನು ಗಂಗೆಯ ಪವಿತ್ರ ಜಲದಿಂದ ಚೆನ್ನಾಗಿ ತೊಳೆದಾಗ ಶ್ವೇತ ಬಣ್ಣಕ್ಕೆ ಬದಲಾದ ಕಾರಣ ಈಕೆಗೆ ಗೌರಿ ಹೆಸರು ಬಂದಿದೆ.

    ನವರಾತ್ರಿಯ ಎಂಟನೇ ದಿನ ಇವಳ ಉಪಾಸನೆಯಿಂದ ಭಕ್ತರ ಎಲ್ಲ ಕಷ್ಟಗಳು ತೊಳೆದು ಹೋಗುತ್ತದೆ. ಅವರ ಪಾಪಗಳೂ ಕೂಡ ನಾಶವಾಗಿ ಹೋಗುತ್ತದೆ. ಭವಿಷ್ಯದಲ್ಲಿ ಪಾಪ-ಸಂತಾಪ, ದೈನ್ಯ- ದುಃಖ, ಅವರ ಬಳಿಗೆ ಎಂದು ಬರುವುದಿಲ್ಲ. ಅವರು ಎಲ್ಲ ಪ್ರಕಾರದಿಂದ ಪವಿತ್ರ ಅಕ್ಷಯ ಪುಣ್ಯಗಳ ಅಧಿಕಾರಿಯಾಗುತ್ತಾರೆ. ಜಗಜ್ಜನನಿಯ ಧ್ಯಾನ-ಸ್ಮರಣೆ, ಪೂಜೆ-ಆರಾಧನೆಯು ಭಕ್ತರಿಗಾಗಿ ಎಲ್ಲಾವಿಧದಿಂದ ಶ್ರೇಯಸ್ಕರವಾಗಿದೆ.

    ಇವಳ ಕೃಪೆಯಿಂದ ಅಲೌಕಿಕ ಸಿದ್ಧಿಗಳು ಪ್ರಾಪ್ತವಾಗುತ್ತದೆ. ಮನಸ್ಸನ್ನು ಏಕನಿಷ್ಠವಾಗಿಸಿ ಮನುಷ್ಯನು ಸದಾಕಾಲ ಇವಳ ಧ್ಯಾನ ಮಾಡಬೇಕು. ಇವಳ ಉಪಾಸನೆಯಿಂದ ಭಕ್ತರ ಅಸಂಭವ ಕಾರ್ಯಕಗಳು ಕೂಡ ನೆರವೇರುತ್ತದೆ ಎನ್ನುವ ನಂಬಿಕೆಯಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    ದಸರಾ ಸುದ್ದಿಗಳು:

    1. ನವರಾತ್ರಿಯ ಕೊನೆಯ ದಿನ ಆಚರಿಸುವ ಆಯುಧ ಪೂಜೆಯ ಮಹತ್ವವೇನು?

    2. ಮೈಸೂರು ದಸರಾ: ರತ್ನ ಖಚಿತ ಸಿಂಹಾಸನದ ಜೋಡಣೆ ಕಾರ್ಯ ಆರಂಭ

    3. ದಸರಾಗೆ ನಿಮ್ಮ ಮನೆಯಲ್ಲಿರಲಿ ಮೈಸೂರು ಪಾಕ್

    4. ಮೈಸೂರು ಪಾಕ್ ಕಂಡು ಹಿಡಿದಿದ್ದು ಯಾರು? ಇಲ್ಲಿದೆ ಮಾಹಿತಿ

    5. ಗೊಂಬೆ ಹಬ್ಬದ ಸಿದ್ಧತೆ ಹೀಗಿರಲಿ

    6. ದಸರಾ ಹಬ್ಬಕ್ಕೆ ಸ್ಟೈಲಿಶ್ ಆಗಿ ಕಾಣ್ಬೇಕಾ ಹೀಗಿರಲಿ ನಿಮ್ಮ ಸೀರೆ ಆಯ್ಕೆ

    7. ನವರಾತ್ರಿ ಸಂಭ್ರಮ – 9 ದಿನ ಯಾವ ಬಣ್ಣದ ಉಡುಪು ಧರಿಸಿ ಪೂಜಿಸಿದ್ರೆ ಉತ್ತಮ? ಇಲ್ಲಿದೆ ವಿವರ

    8.ದೇಶದ ವಿವಿಧ ರಾಜ್ಯಗಳಲ್ಲಿ ದಸರಾ ಹೇಗೆ ಆಚರಿಸುತ್ತಾರೆ? – ಇಲ್ಲಿದೆ ಮಾಹಿತಿ

    9.ನವರಾತ್ರಿ ಹಬ್ಬ ಹೆಣ್ಣು ಮಕ್ಕಳಿಗೆ ಇಷ್ಟ ಯಾಕೆ?

    10. ನವರಾತ್ರಿ ಮೊದಲ ದಿನ ಶೈಲಪುತ್ರಿಯ ಪೂಜೆ: ದಾಕ್ಷಾಯಿಣಿ ಶೈಲಪುತ್ರಿಯಾಗಿ ಶಿವನ ಕೈ ಹಿಡಿದ ಕಥೆ ಓದಿ

    11. ನವರಾತ್ರಿ ಎರಡನೇ ದಿನ ಇಷ್ಟಾರ್ಥ ಸಿದ್ಧಿಗಾಗಿ ಬ್ರಹ್ಮಚಾರಿಣಿಯನ್ನು ಪೂಜಿಸೋದು ಯಾಕೆ? ಪುರಾಣ ಕಥೆ ಓದಿ

    12. ಸಿಂಪಲ್ ಮೈಸೂರು ಬೋಂಡಾ ಮಾಡುವ ವಿಧಾನ

    13. ನವದುರ್ಗೆಯ 4ನೇ ರೂಪ ಕೂಷ್ಮಾಂಡ -ಇವಳ ಭಕ್ತಿಯಿಂದ ಆಯಸ್ಸು, ಬಲ, ಆರೋಗ್ಯ ವೃದ್ಧಿ

    14. ನವರಾತ್ರಿ ವಿಶೇಷ – ಸ್ಕಂದಮಾತೆಯನ್ನ ಪೂಜಿಸುವುದು ಏಕೆ?

    15. ಜನ್ಮ-ಜನ್ಮಾಂತರದ ಪಾಪಗಳನ್ನು ನಾಶಮಾಡುವ 6ನೇ ಅವತಾರ ಕಾತ್ಯಾಯನೀ

    16. ಮೈಸೂರಿನ ಸಿಹಿ ಮಾತ್ರವಲ್ಲ ಹಬ್ಬಕ್ಕಾಗಿ ಬಾದೂಷವನ್ನು ಮಾಡಿ-ಇಲ್ಲಿದೆ ಸರಳ ವಿಧಾನ

    17. 7ನೇ ದಿನ ಕಾಲರಾತ್ರಿಯನ್ನು ಪೂಜೆ ಮಾಡೋದು ಯಾಕೆ?

  • ಪ್ರವಚನ ಕೇಳಲು ಬಂದ ಕಪಿರಾಯ – ವಿಡಿಯೋ ನೋಡಿ

    ಪ್ರವಚನ ಕೇಳಲು ಬಂದ ಕಪಿರಾಯ – ವಿಡಿಯೋ ನೋಡಿ

    ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ನವರಾತ್ರಿ ಅಂಗವಾಗಿ ದೇವಿಯ ಪ್ರವಚನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಮಂಗವೊಂದು ಪ್ರವಚನ ಕೇಳುತ್ತಿರುವ ಅಪರೂಪದ ದೃಶ್ಯವೊಂದು ಕಂಡುಬಂದಿದೆ.

    ಹುಬ್ಬಳ್ಳಿಯ ಕಲ್ಯಾಣ ನಗರದ ರಾಮಕೃಷ್ಣ ಆಶ್ರಮದಲ್ಲಿ ನವರಾತ್ರಿ ಅಂಗವಾಗಿ ದೇವಿಯ ಪ್ರವಚನ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಗಣೇಶ ಭಟ್ ಅವರಿಂದ ದೇವಿಯ ಪ್ರವಚನ ಕಾರ್ಯಕ್ರಮ ನೇರವೇರಿಸಲಾಗಿತ್ತು. ಈ ವೇಳೆ ಗಣೇಶ ಭಟ್ ಅವರು ವೇದಿಕೆ ಮೇಲೆ ಕುಳಿತು ಪ್ರವಚನ ಮಾಡುವಾಗ ಮಂಗವೊಂದು ಅವರ ಬಳಿ ಬಂದು ಕುಳಿತು ಪ್ರವಚನವನ್ನು ಕೇಳಿದೆ.

    ಶಾಂತವಾಗಿ ಕುಳಿತು ಯಾರಿಗೂ ತೊಂದರೆ ಮಾಡದೇ ಪ್ರವಚನ ಕೇಳಿದ ಈ ಕೋತಿಯನ್ನು ನೋಡಿ ಭಕ್ತರು ಅಚ್ಚರಿಗೊಂಡಿದ್ದಾರೆ. ಕಾರ್ಯಕ್ರಮದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಇದ್ದರೂ ಮಂಗ ಮಾತ್ರ ಪ್ರವಚಕರಾದ ಗಣೇಶ್ ಭಟ್ ಅವರ ಹತ್ತಿರ ಕುಳಿತು ಪ್ರವಚನ ಕೇಳಿದೆ. ಅಷ್ಟೇ ಅಲ್ಲದೇ ಪ್ರವಚಕರಾದ ಗಣೇಶ್ ಭಟ್ ಅವರು ಕೂಡ ಮಂಗನನ್ನು ಪಕ್ಕದಲ್ಲೇ ಕೂರಿಸಿಕೊಂಡು ಪ್ರವಚನವನ್ನು ಮಾಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://www.youtube.com/watch?v=kGJGxMAwChs&feature=youtu.be

  • ನವದುರ್ಗೆಯ 4ನೇ ರೂಪ ಕೂಷ್ಮಾಂಡ -ಇವಳ ಭಕ್ತಿಯಿಂದ ಆಯಸ್ಸು, ಬಲ, ಆರೋಗ್ಯ ವೃದ್ಧಿ

    ನವದುರ್ಗೆಯ 4ನೇ ರೂಪ ಕೂಷ್ಮಾಂಡ -ಇವಳ ಭಕ್ತಿಯಿಂದ ಆಯಸ್ಸು, ಬಲ, ಆರೋಗ್ಯ ವೃದ್ಧಿ

    ವರಾತ್ರಿಯ ನಾಲ್ಕನೇಯ ದಿನ ದೇವಿಯನ್ನು ಕೂಷ್ಮಾಂಡ ರೂಪದಲ್ಲಿ ಪೂಜಿಸಲಾಗುತ್ತದೆ. ತನ್ನ ಮಧುರ ನಗುವಿನಿಂದ ಅಂಡ ಅರ್ಥಾತ್ ಬ್ರಹ್ಮಾಂಡವನ್ನು ಉತ್ಪನ್ನವಾಗಿಸುವ ಕಾರಣ ಇವಳನ್ನು ಕೂಷ್ಮಾಂಡ ದೇವಿ ಎಂದು ಕರೆಯಲಾಗುತ್ತದೆ.

    ಇವಳಿಗೆ ಎಂಟು ಭುಜಗಳಿರುವ ಕಾರಣ ಅಷ್ಟಭುಜಾದೇವಿ ಎಂದು ಕರೆಯಲಾಗುತ್ತದೆ. ಇವಳ ಏಳು ಕೈಗಳಲ್ಲಿ ಕ್ರಮವಾಗಿ ಕಮಂಡಲ, ಧನಸ್ಸು, ಬಾಣ, ಕಮಲ, ಅಮೃತ ತುಂಬಿದ ಕಲಶ, ಚಕ್ರ ಮತ್ತು ಗದೆ ಇದೆ. ಇವಳ ವಾಹನ ಸಿಂಹವಾಗಿದೆ. ಸಂಸ್ಕೃತದಲ್ಲಿ ಕುಂಬಳಕಾಯಿಯನ್ನು ಕೂಷ್ಮಾಂಡವೆಂದು ಹೇಳುತ್ತಾರೆ. ಬಲಿಯಲ್ಲಿ ಕುಂಬಳಕಾಯಿಯ ಬಲಿಯೇ ಇವಳಿಗೆ ಪ್ರಿಯವಾಗಿದೆ. ಈ ಕಾರಣದಿಂದಲೂ ಇವಳನ್ನು ಕೂಷ್ಮಾಂಡ ಎಂದು ಕರೆಯುತ್ತಾರೆ.

    ಸೃಷ್ಟಿಯ ಅಸ್ತಿತ್ವವೇ ಇಲ್ಲದಿರುವಾಗ, ಎಲ್ಲೆಡೆ ಅಂಧಕಾರವೇ-ಅಂಧಕಾರ ಪಸರಿಸಿತ್ತು. ಆಗ ಇದೇ ದೇವಿಯು ತನ್ನ ‘ಈಶತ್’ ಹಾಸ್ಯದಿಂದ ಬ್ರಹ್ಮಾಡವನ್ನು ರಚಿಸಿದ್ದಳು. ಆದ್ದರಿಂದ ಇವಳೇ ಸೃಷ್ಟಿಯ ಆದಿ-ಸ್ವರೂಪ ಆದಿಶಕ್ತಿಯಾಗಿದ್ದಾಳೆ. ಇವಳಿಂದ ಮೊದಲು ಬ್ರಹ್ಮಾಂಡದ ಅಸ್ತಿತ್ವವೇ ಇರಲಿಲ್ಲ.

    ಇವಳ ನಿವಾಸವು ಸುರ್ಯಮಂಡಲದೊಳಗಿನ ಲೋಕದಲ್ಲಿ ಇದೆ. ಸೂರ್ಯ ಲೋಕದಲ್ಲಿ ನಿವಾಸ ಮಾಡುವ ಅರ್ಹತೆ ಮತ್ತು ಶಕ್ತಿ ಇವಳಲ್ಲೇ ಇದೆ. ಇವಳ ಶರೀರದ ಕಾಂತಿ, ಪ್ರತಿಭೆಯೂ ಸೂರ್ಯನಿಗೆ ಸಮಾನವಾಗಿ ದೇವಿಪ್ಯಮಾನ ಹಾಗೂ ಹೊಳೆಯುವಂತಹುದು.

    ಬೇರೆ ಯಾವುದೇ ದೇವದೇವತೆಗಳು ಇವಳ ತೇಜ, ಪ್ರಭಾವಕ್ಕೆ ಸರಿಗಟ್ಟಲಾರರು. ಇವಳ ತೇಜ ಮತ್ತು ಪ್ರಕಾಶದಿಂದಲೇ ಹತ್ತೂ ದಿಕ್ಕುಗಳು ಪ್ರಕಾಶವಾಗಿದೆ. ಬ್ರಹ್ಮಾಂಡದ ಎಲ್ಲ ವಸ್ತುಗಳಲ್ಲಿ, ಪ್ರಾಣಿಗಳಲ್ಲಿ ಇರುವ ತೇಜ ಇವಳದೇ ಛಾಯೆಯಾಗಿದೆ.

    ನಾಲ್ಕನೇಯ ದಿನ ಸಾಧಕನ ಮನಸ್ಸು ‘ಅನಾಹುತ’ ಚಕ್ರದಲ್ಲಿ ನೆಲೆನಿಲ್ಲುತ್ತದೆ. ಆದ್ದರಿಂದ ಅಂದು ಅವನು ಅತ್ಯಂತ ಪವಿತ್ರ ಮತ್ತು ಅಚಂಚಲ ಮನಸ್ಸಿನಿಂದ ಕೂಷ್ಮಾಂಡ ದೇವಿಯ ಸ್ವರೂಪವನ್ನು ಧ್ಯಾನದಲ್ಲಿ ಧರಿಸಿಕೊಂಡು ಪೂಜೆ ಉಪಾಸನೆಯ ಕಾರ್ಯದಲ್ಲಿ ತೊಡಬೇಕು. ಜಗಜ್ಜನನೀ ಕೂಷ್ಮಾಂಡ ದೇವಿಯ ಉಪಾಸನೆಯಿಂದ ಭಕ್ತರ ಎಲ್ಲ ರೋಗ- ಶೋಕಗಳು ನಾಶವಾಗುತ್ತದೆ. ಇವಳ ಭಕ್ತಿಯಿಂದ ಆಯಸ್ಸು, ಯಶ, ಬಲ, ಆರೋಗ್ಯದ ವೃದ್ಧಿಯಾಗುತ್ತದೆ. ತಾಯಿ ಕೂಷ್ಮಾಂಡ ದೇವಿಯು ಸ್ವಲ್ಪ ಸೇವೆ-ಭಕ್ತಿಯಿಂದ ಪ್ರಸನ್ನಳಾಗುತ್ತಾಳೆ. ನಿಜವಾದ ಹೃದಯದಿಂದ ಮನುಷ್ಯನು ಇವಳಿಗೆ ಶರಣಾಗತನಾದರೆ ಬಳಿಕ ಅವನಿಗೆ ಅತ್ಯಂತ ಸುಲಭವಾಗಿ ಪರಮ ಪದದ ಪ್ರಾಪ್ತಿಯಾಗಬಲ್ಲದು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    ದಸರಾ ಸುದ್ದಿಗಳು:

    1. ನವರಾತ್ರಿಯ ಕೊನೆಯ ದಿನ ಆಚರಿಸುವ ಆಯುಧ ಪೂಜೆಯ ಮಹತ್ವವೇನು?

    2. ಮೈಸೂರು ದಸರಾ: ರತ್ನ ಖಚಿತ ಸಿಂಹಾಸನದ ಜೋಡಣೆ ಕಾರ್ಯ ಆರಂಭ

    3. ದಸರಾಗೆ ನಿಮ್ಮ ಮನೆಯಲ್ಲಿರಲಿ ಮೈಸೂರು ಪಾಕ್

    4. ಮೈಸೂರು ಪಾಕ್ ಕಂಡು ಹಿಡಿದಿದ್ದು ಯಾರು? ಇಲ್ಲಿದೆ ಮಾಹಿತಿ

    5. ಗೊಂಬೆ ಹಬ್ಬದ ಸಿದ್ಧತೆ ಹೀಗಿರಲಿ

    6. ದಸರಾ ಹಬ್ಬಕ್ಕೆ ಸ್ಟೈಲಿಶ್ ಆಗಿ ಕಾಣ್ಬೇಕಾ ಹೀಗಿರಲಿ ನಿಮ್ಮ ಸೀರೆ ಆಯ್ಕೆ

    7. ನವರಾತ್ರಿ ಸಂಭ್ರಮ – 9 ದಿನ ಯಾವ ಬಣ್ಣದ ಉಡುಪು ಧರಿಸಿ ಪೂಜಿಸಿದ್ರೆ ಉತ್ತಮ? ಇಲ್ಲಿದೆ ವಿವರ

    8.ದೇಶದ ವಿವಿಧ ರಾಜ್ಯಗಳಲ್ಲಿ ದಸರಾ ಹೇಗೆ ಆಚರಿಸುತ್ತಾರೆ? – ಇಲ್ಲಿದೆ ಮಾಹಿತಿ

    9.ನವರಾತ್ರಿ ಹಬ್ಬ ಹೆಣ್ಣು ಮಕ್ಕಳಿಗೆ ಇಷ್ಟ ಯಾಕೆ?

    10. ನವರಾತ್ರಿ ಮೊದಲ ದಿನ ಶೈಲಪುತ್ರಿಯ ಪೂಜೆ: ದಾಕ್ಷಾಯಿಣಿ ಶೈಲಪುತ್ರಿಯಾಗಿ ಶಿವನ ಕೈ ಹಿಡಿದ ಕಥೆ ಓದಿ

    11. ನವರಾತ್ರಿ ಎರಡನೇ ದಿನ ಇಷ್ಟಾರ್ಥ ಸಿದ್ಧಿಗಾಗಿ ಬ್ರಹ್ಮಚಾರಿಣಿಯನ್ನು ಪೂಜಿಸೋದು ಯಾಕೆ? ಪುರಾಣ ಕಥೆ ಓದಿ

    12. ಸಿಂಪಲ್ ಮೈಸೂರು ಬೋಂಡಾ ಮಾಡುವ ವಿಧಾನ

  • ನವರಾತ್ರಿ ಮಹಿಮೆ – ಕಣ್ಣು ಬಿಟ್ಟ ದೇವಿ: ವಿಡಿಯೋ ವೈರಲ್

    ನವರಾತ್ರಿ ಮಹಿಮೆ – ಕಣ್ಣು ಬಿಟ್ಟ ದೇವಿ: ವಿಡಿಯೋ ವೈರಲ್

    ಹಾಸನ: ಜಿಲ್ಲೆಯ ಅರಸೀಕರೆ ತಾಲೂಕಿನ ಬೆಂಡೆಕೆರೆ ಗ್ರಾಮದ ಭದ್ರಕಾಳಿ ಮೂರ್ತಿ ಕಣ್ಣುಬಿಟ್ಟಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಬೆಂಡೆಕೆರೆ ಗ್ರಾಮದ ವೀರಭದ್ರೇಶ್ವರ ದೇವಾಲಯದಲ್ಲಿ ಈ ಭದ್ರಕಾಳಿ ಮೂರ್ತಿ ಪ್ರತಿಷ್ಠಾಪಿಸಲಾಗಿದೆ. ಕಳೆದ ಮಹಾಲಯ ಅಮಾವಾಸ್ಯೆ ದಿನದಂದು ದೇವಸ್ಥಾನದ ಪೂಜೆ ಸಂದರ್ಭದಲ್ಲಿ ಭದ್ರಕಾಳಿ ಮೂರ್ತಿಯು ಕಣ್ಣು ಬಿಟ್ಟಂತೆ ಗೋಚರಿಸಿದೆ. ತಕ್ಷಣ ಭಕ್ತಾದಿಯೊಬ್ಬರು ಅದನ್ನು ತಮ್ಮ ಮೊಬೈಲ್‍ನಲ್ಲಿ ವಿಡಿಯೋ ಮಾಡಿಕೊಂಡಿದ್ದಾರೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಜನ ತಂಡೋಪತಂಡವಾಗಿ ದೇವಾಲಯಕ್ಕೆ ಭೇಟಿ ನೀಡುತ್ತಿದ್ದಾರೆ.

    ಬೆಂಡೆಕೆರೆ ಗ್ರಾಮದ ಹೊರಭಾಗದಲ್ಲಿ ಈ ದೇವಾಲಯ ಇದ್ದು, ಅಮವಾಸ್ಯೆಗಳಂದು ವಿಶೇಷ ಪೂಜೆ ಸಲ್ಲಿಸಲಾಗುತ್ತದೆ. ಈ ಮಹಾಲಯ ಅಮಾವಾಸ್ಯೆಯ ದಿನದಂದು ಭದ್ರಕಾಳಿ ಕಣ್ಣು ತೆರೆದಿದ್ದು, ಆ ವಿಡಿಯೋ ತಡವಾಗಿ ವೈರಲ್ ಆಗಿದೆ. ಈ ಹಿಂದೆಯೂ ಕೂಡ ಅಮವಾಸ್ಯೆ ದಿನ ಈ ರೀತಿಯ ಪವಾಡ ನಡದಿದೆ ಎಂದು ಗ್ರಾಮಸ್ಥರು ಹೇಳುತ್ತಿದ್ದಾರೆ.

    ವೀರಭದ್ರೇಶ್ವರ ದೇವಾಲಯದಲ್ಲಿ ಈ ಭದ್ರಕಾಳಿ ಮೂರ್ತಿ ಇದೆ. ಈ ಹಿಂದೆ ದೇವಿ ಮೂರ್ತಿ ಕಣ್ಣು ಬಿಟ್ಟಾಗ ಫೋಟೋವನ್ನು ತೆಗೆದಿದ್ದೆ. ಈಗ ಮಹಾಲಯ ಅಮಾವಾಸ್ಯೆ ದಿನ ಸಂಜೆ ಕುಂಕುಮ ತೆಗೆದುಕೊಂಡು ಬರೋಣ ಎಂದು ದೇವಾಲಯದ ಬಳಿ ಹೋಗಿದ್ದೆ. ಆಗ ದೇವಿ ಕಣ್ಣು ಬಿಟ್ಟು ಗೋಚರಿಸುತ್ತಿತ್ತು. ಅದನ್ನು ವಿಡಿಯೋ ಮಾಡಿದ್ದೇವೆ. ನಾನು ಮಾತ್ರವಲ್ಲ ಅಲ್ಲಿದ್ದ ಹತ್ತಾರು ಜನರು ಅದನ್ನು ನೋಡಿದ್ದಾರೆ ಎಂದು ಸ್ಥಳೀಯ ಚಂದ್ರು ಅವರು ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://www.youtube.com/watch?v=M2rIA8MjG90

  • ನವರಾತ್ರಿ ಹಬ್ಬ ಹೆಣ್ಣು ಮಕ್ಕಳಿಗೆ ಇಷ್ಟ ಯಾಕೆ?

    ನವರಾತ್ರಿ ಹಬ್ಬ ಹೆಣ್ಣು ಮಕ್ಕಳಿಗೆ ಇಷ್ಟ ಯಾಕೆ?

    ಬೆಂಗಳೂರು: ವಿಶ್ವವಿಖ್ಯಾತ ದಸರಾ ಹಬ್ಬ ಬಂತು ಎಂದರೆ ಎಲ್ಲೆಡೆ ಸಂಭ್ರಮ ಕಾಣಸಿಗುತ್ತದೆ. ದಸರಾ ಕರ್ನಾಟಕದ ನಾಡಹಬ್ಬ ಆಗಿದ್ದು 10 ದಿನಗಳ ನಡೆಯುವ ವಿಶೇಷ ಹಬ್ಬದಲ್ಲಿ 9 ದಿನಗಳ ಕಾಲ ವಿವಿಧ ಆಚರಣೆಗಳನ್ನು ಮಾಡಲಾಗುತ್ತದೆ. ಈ ಸಮಯದಲ್ಲಿ ನವರಾತ್ರಿಯ 9 ದಿನ ಆಚರಣೆ ಮಾಡುವುದರಿಂದ 9 ಮಹಡಿಯ ತರಹ ಮಾಡಿ ಗೊಂಬೆಗಳನ್ನು ಕೂರಿಸುವುದು ನಮ್ಮ ಕರ್ನಾಟಕದ ವಿಶಿಷ್ಟತೆಯಾಗಿದೆ.

    ಮೈಸೂರು ಭಾಗದಲ್ಲಿ `ಬೊಂಬೆ ಕೂಡಿಸುವ’ ಪದ್ಧತಿಯೂ ಸರಿಸುಮಾರು 500 ವರ್ಷಗಳಿಂದ ನಡೆದುಕೊಂಡು ಬರುತ್ತಿವೆ. ದಸರಾ ಹಬ್ಬದ ನವರಾತ್ರಿ ಹೆಣ್ಣು ಮಕ್ಕಳಿಗೆ ಇಷ್ಟವಾಗುವ ಹಬ್ಬವಾಗಿದ್ದು, ಈ ವೇಳೆ ಮನೆಯಲ್ಲಿ ಹೆಣ್ಣುಮಕ್ಕಳು ನವರಾತ್ರಿಯ ಅಷ್ಟು ದಿನಗಳು ಬೊ0ಬೆ ಕೂರಿಸಿ ಸಿಂಗಾರ ಮಾಡುವ ಮೂಲಕ ಹಬ್ಬದ ಸಂಭ್ರಮವನ್ನು ಹೆಚ್ಚಿಸುತ್ತಾರೆ. ಅಲ್ಲದೇ ಅವುಗಳಿಗೆ ಪ್ರತಿದಿನ ಪೂಜೆ ಮಾಡಿ ಆರತಿ ಬೆಳಗಿ ಪುಟ್ಟ ಮಕ್ಕಳನ್ನು ಕರೆದು ಅವರಿಗೆ ಬಾಗಿನ ಕೊಟ್ಟು ಕಳುಹಿಸುವ ಪದ್ಧತಿ ರೂಡಿಯಲ್ಲಿದೆ. ಇಲ್ಲಿ ಪ್ರಮುಖವಾಗಿ ಮದುವೆಯಾದ ಹೆಣ್ಣು ಮಕ್ಕಳು ತವರಿನಿಂದ ತಂದ ಪಟ್ಟದ ಗೊಂಬೆಗಳನ್ನು ಇಟ್ಟು ಪೂಜಿಸುತ್ತಾರೆ.

    ಪತ್ರಿ ಮನೆಯಲ್ಲಿ ಕೂರಿಸುವ ಒಂದೊಂದು ಬೊಂಬೆಗಳು ಒಂದೊಂದು ವಿಶೇಷ ಕಥೆ ಹೇಳುತ್ತವೆ. ನಮ್ಮ ಸಂಸ್ಕೃತ , ಧಾರ್ಮಿಕ ಪರಂಪರೆ, ಸಾಹಿತ್ಯ, ಆಚರಣೆ, ವೈಚಾರಿಕತೆ, ವಿಜ್ಞಾನ, ಪೌರಾಣಿಕ ಕಥೆ, ಹೀಗೆ ಕಾಲ, ವಿಷಯಕ್ಕೆ ತಕ್ಕಂತೆ ಗೊಂಬೆಗಳನ್ನು ಆಯ್ಕೆ ಮಾಡಿ ಸಿದ್ಧತೆ ಮಾಡಲಾಗಿರುತ್ತದೆ. ಅಲ್ಲದೇ ನಾಡಿನ ಸಂ ಸಂಸ್ಕೃತಿ ಹಾಗೂ ಐತಿಹಾಸಿಕ ಹಿನ್ನೆಲೆಯನ್ನು ಸಾರುವ ಗೊಂಬೆಗಳು ಪ್ರಮುಖ ಸ್ಥಾನ ಪಡೆದಿರುತ್ತದೆ. ಮುಖ್ಯವಾಗಿ ಗ್ರಾಮೀಣ ಭಾಗದ ಬದುಕಿನ ಕಲೆಯನ್ನು ಸಾರುವ, ದರ್ಬಾರಿನಲ್ಲಿ ಕುಳಿತ ರಾಜ ಹೀಗೆ ಒಂದೊಂದು ನಯನ ಮನೋಹರವಾಗಿರುತ್ತದೆ.

    ಇಂತಹ ಬೊಂಬೆ ಹಬ್ಬಕ್ಕೆ ಗೊಂಬೆ ಕೂರಿಸುವ ಕಾರ್ಯಕ್ಕೆ ಪೂರಕವಾಗಿ ಗೊಂಬೆ ಮಾರಾಟ ಹಾಗೂ ಪ್ರದರ್ಶನಗಳು ನಡೆಸಲಾಗುತ್ತದೆ. ಕರ್ನಾಟಕದ ಮೈಸೂರು, ಬೆಂಗಳೂರು, ಚನ್ನಪಟ್ಟಣ, ಕಿನ್ನಾಳ ಮತ್ತು ಖಾನಾಪುರದಲ್ಲಿ ತಯಾರಾಗಿರುವ ಬೊಂಬೆಗಳ ಜೊತೆಗೆ ತಮಿಳುನಾಡು, ಆಂಧ್ರಪ್ರದೇಶ, ಉತ್ತರಪ್ರದೇಶದ, ಪಶ್ಚಿಮ ಬಂಗಾಳ, ರಾಜಸ್ಥಾನದಲ್ಲಿ ತಯಾರು ಮಾಡಲಾಗುವ ಗೊಂಬೆಗಳು ಕೂಡ ಈ ವೇಳೆ ಕಾಣಬಹುದಾಗಿದೆ.

    ಹವ್ಯಾಸವಾದ ಸಂಪ್ರದಾಯ ಪದ್ಧತಿ: ಬಹಳಷ್ಟು ಹೆಣ್ಣು ಮಕ್ಕಳಿಗೆ ಸಂಪ್ರದಾಯವಾಗಿ ಈ ಆಚರಣೆ ಸದ್ಯ ಒಂದು ಕಲೆಯ ಹವ್ಯಾಸವಾಗಿದೆ. ತಾವು ಪ್ರದರ್ಶಿಸುವ ಗೊಂಬೆಗಳಲ್ಲಿ ಒಂದು ವಿಶಿಷ್ಟ ಕಥೆಯನ್ನೇ ಹೇಳುವ ಸಾಮರ್ಥ್ಯ ಇಂದು ರೂಪುಗೊಂಡಿದೆ. ಇದರಲ್ಲಿ ಹಣದ ಜೊತೆಗೆ ಸಮಯವನ್ನು ಮೀಸಲಿಡುವ ಕೌಶಲ್ಯವೂ ಹೆಣ್ಣು ಮಕ್ಕಳಲ್ಲಿ ಬೆಳೆಯುತ್ತದೆ. ಅಲ್ಲದೇ ವರ್ಷದಿಂದ ವರ್ಷಕ್ಕೆ ಹೊಸ ಹೊಸ ಪರಿಕಲ್ಪನೆ ಮೂಡಿ ವಿಶಿಷ್ಟತೆ ಕಾರಣವಾಗುತ್ತದೆ. ದಸರಾ ಪ್ರಾರಂಭಕ್ಕೆ ಮುನ್ನವೇ ಆರಂಭವಾರುವ ಇದರ ಸಿದ್ಧತೆ ಕಾರ್ಯ ಸಿದ್ಧಪಡಿಸುವ ವ್ಯಕ್ತಿಯ ಕ್ರಿಯಾಶೀಲತೆಯನ್ನು ಪ್ರದರ್ಶಿಸುತ್ತದೆ.

    ಗೊಂಬೆಗಳ ವಿಶಿಷ್ಟತೆ: ಮೊದಲೇ ಹೇಳಿದಂತೆ ಕರ್ನಾಟಕ ಮಾತ್ರವಲ್ಲದೇ ದೇಶದ ವಿವಿಧ ಭಾಗದ ವಿಭಿನ್ನ ಶೈಲಿಯ ಹಾಗೂ ಗಾತ್ರದ, ಸನ್ನಿವೇಶಗಳ ಬೊಂಬೆಗಳು ಎಲ್ಲೆಡೆ ನೋಡುಗರನ್ನು ಸೆಳೆಯುತ್ತದೆ. ಇದು ನೋಡುಗರನ್ನು ಮತ್ತೊಂದು ಲೋಕಕ್ಕೆ ಕರೆದ್ಯೊಯುತ್ತದೆ. ಇಂತಹ ಕಲೆ ಕ್ಷಣ ಮಾತ್ರದಲ್ಲಿ ಎಂತಹರನ್ನು ಕ್ಷಣ ಮಾತ್ರದಲ್ಲಿ ಸೆಳೆಯುತ್ತದೆ.

    ದಸರಾ ಗೊಂಬೆ ನಿರ್ವಹಣೆ: 9 ದಿನಗಳ ನಡೆಯುವ ಪ್ರದರ್ಶನ ಮುಕ್ತಾಯ ವಾದ ಬಳಿಕ ಮುಂದಿನ ವರ್ಷಕ್ಕೆ ಅವುಗಳ ನಿರ್ವಹಣೆ ಮಾಡುವುದು ಪ್ರಮುಖವಾಗಿದ್ದು ಈ ಕುರಿತು ಸಲಹೆಗಳು ಇಂತಿದೆ. ಮುಖ್ಯವಾಗಿ ಗೊಂಬೆಗಳನ್ನು ಹತ್ತಿ ಬಟ್ಟೆಯಲ್ಲಿ ಸುತ್ತಿ ಇಡುವುದರಿಂದ ಅವುಗಳ ಬಣ್ಣ ಹಾಗೂ ಹೊಳಪು ಕೆಡದಂತೆ ರಕ್ಷಣೆ ಮಾಡಬಹುದು. ಅಲ್ಲದೇ ಮಣ್ಣಿನ ಗೊಂಬೆ ಇತರೇ ಗೊಂಬೆಗಳನ್ನು ಪ್ರತ್ಯೇಕವಾಗಿ ಇಡುವುದು ಒಳಿತು. ಮುಂದಿನ ವರ್ಷ ಅವುಗಳ ಬಳಕೆ ವೇಳೆ ಬಣ್ಣ ಮಾಸಿದ್ದರೆ, ಅಂತಹವುಗಳನ್ನು ವೃತ್ತಿಪರ ವ್ಯಕ್ತಿಗಳಿಗೆ ನೀಡುವುದು ಸೂಕ್ತ. ಇದರೊಂದಿಗೆ ಪ್ಯಾಕ್ ಮಾಡಿದ ಗೊಂಬೆಗಳನ್ನು ಸುರಕ್ಷಿತ ಸ್ಥಳದಲ್ಲಿ ಇಟ್ಟು ರಕ್ಷಣೆ ಮಾಡಬೇಕಾಗುತ್ತದೆ.

    ನಮಗೆ ಕಳುಹಿಸಿ: ನಾಡಿನಾದ್ಯಂತ ಹಲವು ಮನೆಗಳಲ್ಲಿ ಗೊಂಬೆಗಳನ್ನು ಕೂರಿಸಿದರೂ ಅದನ್ನು ನೋಡಲು ಎಲ್ಲರಿಗೂ ಸಾಧ್ಯವಿಲ್ಲ. ಅದ್ದರಿಂದ ನಿಮ್ಮ ಮನೆಯಲ್ಲಿರುವ ದಸರಾ ಬೊಂಬೆಯನ್ನು ಇಡೀ ಕರ್ನಾಟಕ ಜನತೆ ನೋಡವಂತೆ ಮಾಡಲು ನಮಗೆ ಕಳುಹಿಸಿ. ಏನ್ ಮಾಡ್ಬೇಕು? ನಿಮ್ಮ ಮನೆಯಲ್ಲಿ ದಸರಾ ಬೊಂಬೆಗಳನ್ನು ಕೂರಿಸಿದ್ದರೆ ಈಗಲೇ ನಿಮ್ಮ ಹೆಸರು ಮತ್ತು ವಿಳಾಸದೊಂದಿಗೆ ವಿಡಿಯೋ, ಫೋಟೋವನ್ನು 99000 60222 ಸೆಂಡ್ ಮಾಡಿ.

    ದಸರಾ ಸುದ್ದಿಗಳು:

    1. ನವರಾತ್ರಿಯ ಕೊನೆಯ ದಿನ ಆಚರಿಸುವ ಆಯುಧ ಪೂಜೆಯ ಮಹತ್ವವೇನು?

    2. ಮೈಸೂರು ದಸರಾ: ರತ್ನ ಖಚಿತ ಸಿಂಹಾಸನದ ಜೋಡಣೆ ಕಾರ್ಯ ಆರಂಭ

    3. ದಸರಾಗೆ ನಿಮ್ಮ ಮನೆಯಲ್ಲಿರಲಿ ಮೈಸೂರು ಪಾಕ್

    4. ಮೈಸೂರು ಪಾಕ್ ಕಂಡು ಹಿಡಿದಿದ್ದು ಯಾರು? ಇಲ್ಲಿದೆ ಮಾಹಿತಿ

    5. ಗೊಂಬೆ ಹಬ್ಬದ ಸಿದ್ಧತೆ ಹೀಗಿರಲಿ

    6. ದಸರಾ ಹಬ್ಬಕ್ಕೆ ಸ್ಟೈಲಿಶ್ ಆಗಿ ಕಾಣ್ಬೇಕಾ ಹೀಗಿರಲಿ ನಿಮ್ಮ ಸೀರೆ ಆಯ್ಕೆ

    7. ನವರಾತ್ರಿ ಸಂಭ್ರಮ – 9 ದಿನ ಯಾವ ಬಣ್ಣದ ಉಡುಪು ಧರಿಸಿ ಪೂಜಿಸಿದ್ರೆ ಉತ್ತಮ? ಇಲ್ಲಿದೆ ವಿವರ

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ನವರಾತ್ರಿ ಮೊದಲ ದಿನ ಶೈಲಪುತ್ರಿಯ ಪೂಜೆ: ದಾಕ್ಷಾಯಿಣಿ ಶೈಲಪುತ್ರಿಯಾಗಿ ಶಿವನ ಕೈ ಹಿಡಿದ ಕಥೆ ಓದಿ

    ನವರಾತ್ರಿ ಮೊದಲ ದಿನ ಶೈಲಪುತ್ರಿಯ ಪೂಜೆ: ದಾಕ್ಷಾಯಿಣಿ ಶೈಲಪುತ್ರಿಯಾಗಿ ಶಿವನ ಕೈ ಹಿಡಿದ ಕಥೆ ಓದಿ

    ಶ್ವಯುಜ ಶುಕ್ಲ ಪಾಡ್ಯಮಿಯಿಂದ ದಶಮಿಯತನಕ ಆಚರಿಸಲ್ಪಡುವ ಪವಿತ್ರ ಮಹಿಮೆಯಿಂದ ಕೂಡಿದ ಹಬ್ಬವೇ ನವರಾತ್ರಿ. ಒಂಬತ್ತು ರಾತ್ರಿಗಳ ಆಚರಿಸಲ್ಪಡುವ ಹಬ್ಬವಾಗಿರುವುದರಿಂದ ಇದಕ್ಕೆ ನವರಾತ್ರಿ ಎಂದು ಹೆಸರು ಬಂದಿದೆ.

    ನವರಾತ್ರಿ ಹಬ್ಬದ ಒಂಭತ್ತು ದಿನವೂ ಶಕ್ತಿ ದೇವಿ ಜಗನ್ಮಾತೆಯನ್ನು ಆರಾಧಿಸಲಾಗುತ್ತದೆ. ನವರಾತ್ರಿಯ ಮೊದಲ ಮೂರು ದಿನ ಮಹಾಕಾಳಿ ಅಥವಾ ದುರ್ಗೆಯನ್ನೂ, ನಂತರ ಮೂರು ದಿನ ಮಹಾಲಕ್ಷ್ಮಿಯನ್ನೂ, ಕೊನೆಯ ಮೂರು ದಿನ ಮಹಾ ಸರಸ್ವತಿಯನ್ನು ಪೂಜಿಸಲಾಗುತ್ತಿದೆ. ಮಹಾಕಾಳಿ ತಾಮಸ ಗುಣಕ್ಕೂ, ಮಹಾಲಕ್ಷ್ಮಿ ರಾಜಸಗುಣಕ್ಕೂ, ಮಹಾಸರಸ್ವತಿ ಸಾತ್ವಿಕ ಗುಣದ ಸಂಕೇತ. ನವರಾತ್ರಿ ಆಚರಿಸುವ ಭಕ್ತರು ತಾಮಸದಿದ ರಾಜಸದೆಡೆಗೆ, ರಾಜಸದಿಂದ ಸಾತ್ವಿಕದೆಡೆಗೆ ಬಂದಾಗ ಹಬ್ಬ ಹೆಚ್ಚು ಅರ್ಥಪೂರ್ಣವಾಗುತ್ತದೆ.

    ನವರಾತ್ರಿ ವೇಳೆ ದೇವಿಯ ಪೂಜೆ, ದೇವಿ ಭಾಗವತ, ದುರ್ಗ ಸಪ್ತಶತೀ, ಲಲಿತಾ ಸಹಸ್ರನಾಮ ಪವಿತ್ರ ಸ್ತೋತ್ರಗಳ ಮತ್ತು ಮಂತ್ರಗಳ ಪಠಣ ಹಾಗೂ ಪಾರಾಯಣ ನಡೆಯುತ್ತದೆ. ನವದುರ್ಗೆಯರ ಆರಾಧನೆಯ ಹಿನ್ನೆಲೆಯಲ್ಲಿ ಇಂದಿನಿಂದ ಪ್ರತಿದಿನ ದೇವಿಯ ಒಂದೊಂದು ಅವತಾರದ ವಿವರಣೆಯನ್ನು ಪಬ್ಲಿಕ್ ಟಿವಿ ಪ್ರಕಟಿಸಲಿದೆ.

    ಒಂಬತ್ತು ದುರ್ಗೆಯರು:
    1. ಶೈಲಪುತ್ರಿ
    2. ಬ್ರಹ್ಮಚಾರಿಣಿ
    3. ಚಂದ್ರಘಂಟಾ
    4. ಕೂಷ್ಮಾಂಡಾ
    5. ಸ್ಕಂದ ಮಾತೆ
    6. ಕಾತ್ಯಾಯನಿ
    7. ಕಾಳರಾತ್ರಿ
    8. ಮಹಾಗೌರಿ
    9. ಸಿದ್ಧಿದಾತ್ರಿ


    ಪರ್ವತ ರಾಜ ಹಿಮವಂತನ ಪುತ್ರಿಯೇ ಶೈಲಪುತ್ರಿ. ದಸರಾ ದಿನ ಈ ದೇವಿಯನ್ನು ಮೊದಲಿಗೆ ಆರಾಧಿಸುತ್ತಾರೆ. ಈ ದೇವಿಯನ್ನು ಆರಾಧಿಸಲು ಒಂದು ಕಥೆಯಿದೆ. ಪ್ರಜಾಪತಿ ಬಹ್ಮನ ಮಗನಾದ ದಕ್ಷ ತನ್ನ 27 ಮಂದಿ ಪುತ್ರಿಯರನ್ನು ಚಂದ್ರನಿಗೆ ಮದುವೆ ಮಾಡಿ ಕೊಟ್ಟಿದ್ದ. ಉಳಿದವರಲ್ಲಿ ಒಬ್ಬಳಾದ ದಾಕ್ಷಾಯಿಣಿ ಶಿವನನ್ನು ವರಿಸಿದ್ದಳು.

    ದಕ್ಷ ಮಹಾರಾಜನಿಗೆ ಅಳಿಯ ಶಿವನನ್ನು ಕಂಡರೆ ಆಗುತ್ತಿರಲಿಲ್ಲ. ಹಿಮಾವೃತವಾಗಿರುವ ಕೈಲಾಸ ಅಥವಾ ಸ್ಮಶಾನದಲ್ಲಿ ವಾಸ, ಕುತ್ತಿಗೆಗೆ ನಾಗರಹಾವು ಇರುವ ಶಿವನಿಗಿಂತ ನನ್ನ ಚೆಲುವೆಯಾಗಿರುವ ಮಗಳಿಗೆ ಉತ್ತಮನಾಗಿರುವ ವರ ಸಿಗುತ್ತಿದ್ದ ಎಂದು ಹೇಳಿಕೊಳ್ಳುತ್ತಿದ್ದ.

    ಶಿವನ ವಿಚಾರದಲ್ಲಿ ಅಸಮಾಧಾನವನ್ನು ಹೊರಹಾಕುತ್ತಿದ್ದ ದಕ್ಷ ಒಂದು ದೊಡ್ಡ ಯಜ್ಞವನ್ನು ಆಯೋಜಿಸಿದ್ದ. ಈ ಯಜ್ಞಕ್ಕೆ ಆಗಮಿಸುವಂತೆ ಎಲ್ಲ ಮಕ್ಕಳಿಗೆ, ಬಂಧು ಮಿತ್ರರಿಗೆ ಆಹ್ವಾನ ನೀಡಿದ್ದ. ಈ ಸಮಾರಂಭಕ್ಕೆ ದಕ್ಷ ಪ್ರವೇಶಿಸುತ್ತಿದ್ದಂತೆ ಬ್ರಹ್ಮ ಮತ್ತು ಶಿವ ಬಿಟ್ಟು ಉಳಿದ ಎಲ್ಲರೂ ಎದ್ದು ನಿಂತು ಗೌರವ ಸೂಚಿಸಿದರು. ಈ ವೇಳೆ ದಕ್ಷ, “ಶಿವ ದೇವರು ಆಗಿರಬಹುದು. ಆದರೆ ಅವನಿಗೆ ನಾನು ಮಾವ. ಸಂಬಂಧದಲ್ಲಿ ನಾನು ಆತನಿಗಿಂತ ದೊಡ್ಡವ. ಶಿವ ಎದ್ದು ನಿಂತು ನನಗೆ ಗೌರವ ನೀಡಬಹುದಿತ್ತು. ಈ ರೀತಿ ಅಗೌರವ ಸಲ್ಲಿಸಿದ್ದು ಸರಿಯಲ್ಲ” ಎಂದು ಮನಸ್ಸಿನಲ್ಲೇ ಕಹಿಯನ್ನು ಅನುಭವಿಸಿದ.

    ಕೆಲ ಸಮಯದ ಬಳಿಕ ದಕ್ಷ ಮತ್ತೊಂದು ಯಜ್ಞವನ್ನು ಆಯೋಜಿಸಿದ. ಈ ಬಾರಿ ಮಗಳು ದಾಕ್ಷಾಯಿಣಿ ಮತ್ತು ಶಿವನಿಗೆ ಆಹ್ವಾನ ನೀಡದೇ ಎಲ್ಲ ಮಕ್ಕಳಿಗೆ ಆಹ್ವಾನ ನೀಡಿದ್ದ. ತಂದೆ ಯಾಗವನ್ನು ಆಯೋಜಿಸಿದ ವಿಚಾರ ತಿಳಿದು ಮಗಳು ಶಿವನ ಜೊತೆ,”ನಾವು ಈ ಕಾರ್ಯಕ್ರಮದಲ್ಲಿ ಭಾಗಿಯಾಗೋಣವೇ” ಎಂದು ಕೇಳುತ್ತಾಳೆ. ಇದಕ್ಕೆ ಶಿವ,”ಯಾವುದೇ ಶುಭ ಸಮಾರಂಭಕ್ಕೆ ಆಹ್ವಾನ ಇಲ್ಲದೇ ಹೋಗಬಾರದು. ತವರು ಮನೆ ಸೇರಿದಂತೆ ಎಲ್ಲಿಗೂ ಹೋಗಬಾರದು” ಎಂದು ತಿಳಿಹೇಳುತ್ತಾನೆ. ಇದಕ್ಕೆ ದಾಕ್ಷಾಯಿಣಿ,”ಕೆಲಸದ ಒತ್ತಡದಲ್ಲಿ ಯಾವುದೋ ಅನಿವಾರ್ಯ ಕಾರಣದಿಂದಾಗಿ ತಂದೆಗೆ ಮರೆತುಹೋಗಿರಬಹುದು. ತಂದೆ ಮನೆಗೆ ಹೋಗಲು ಮಗಳಿಗೆ ಆಹ್ವಾನ ಯಾಕೆ ಬೇಕು”ಎಂದು ಪ್ರಶ್ನಿಸುತ್ತಾಳೆ. ತೆರಳುವುದು ಬೇಡ ಎಂದು ಹೇಳಿದರೂ ಪತ್ನಿಯ ಹಠಕ್ಕೆ ಕರಗಿ ಶಿವ ತಂದೆಯ ಮನೆಗೆ ಹೋಗಲು ಅನುಮತಿ ನೀಡುತ್ತಾನೆ.

    ಪತಿಯಿಂದ ಅನುಮತಿ ಸಿಕ್ಕಿದ್ದೆ ತಡ ದಾಕ್ಷಾಯಿಣಿ ಶಿವನ ವಾಹನ ನಂದಿಯನ್ನೇರಿ, ಕೈಗೆ ಸಿಕ್ಕ ಉಡುಗೊರೆಯನ್ನು ಹಿಡಿದುಕೊಂಡು ತಂದೆಯ ಯಜ್ಞ ಸಮಾರಂಭಕ್ಕೆ ತೆರಳುತ್ತಾಳೆ. ಮಗಳನ್ನು ನೋಡಿದ ಕೂಡಲೇ ದಕ್ಷ,”ನಾನು ನಿನಗೆ ಆಹ್ವಾನ ನೀಡಿಲ್ಲ. ಬಂದಿದ್ದು ಯಾಕೆ? ನಿನ್ನ ಪತಿಯನ್ನೂ ಕರೆದುಕೊಂಡು ಬಂದಿದ್ದೀಯಾ” ಎಂದು ಪ್ರಶ್ನೆ ಮಾಡುತ್ತಾನೆ. ತಂದೆ ಮನ ನೋಯಿಸಿದರೂ ಆ ನೋವನ್ನು ತಡೆದುಕೊಳ್ಳುತ್ತಾಳೆ. ಯಜ್ಞ ಆರಂಭವಾದ ಬಳಿಕವೂ ದಕ್ಷ ಮತ್ತೆ ಶಿವನ ವಿರುದ್ಧ ಕಿಡಿಕಾರುತ್ತಾನೆ.”ನೀನು ಪತಿಯನ್ನು ಸೇರು. ಇಲ್ಲಿಂದ ಹೊರಟು ಹೋಗು” ಎಂದು ಅವಮಾನಿಸುತ್ತಾನೆ. ಈ ಎಲ್ಲರ ಮುಂದೆ ಆದ ಅವಮಾನವನ್ನು ಸಹಿಸದ ದಾಕ್ಷಾಯಿಣಿ ಶಿವನನ್ನು ಧ್ಯಾನಿಸುತ್ತಾ,”ಪತಿಯೇ ನಾನು ನಿಮ್ಮ ಮಾತನ್ನು ಕೇಳಿ ಇಲ್ಲಿಗೆ ಬಾರಬಾರದಿತ್ತು. ತಂದೆ ನಿಮಗೆ ಮಾಡಿದ ಈ ಅವಮಾನವನ್ನು ನಾನು ಸಹಿಸಲಾರೆ” ಎಂದು ಪ್ರಾರ್ಥಿಸಿ ಮುಂದಿದ್ದ ಯಜ್ಞ ಕುಂಡಕ್ಕೆ ಹಾರಿ ಪ್ರಾಣತ್ಯಾಗ ಮಾಡುತ್ತಾಳೆ.

    ಪತಿಯನ್ನು ಅವಮಾನಿಸಿದ್ದನ್ನು ಸಹಿಸದೆ ಯಜ್ಞ ಕುಂಡಕ್ಕೆ ಹಾರಿಕೊಂಡಿದ್ದ ದಾಕ್ಷಾಯಿಣಿಗೆ ಅಂದಿನಿಂದ `ಸತಿ’ ಎಂಬ ಹೆಸರು ಬಂತು. ಸತಿ ಮುಂದಿನ ಜನ್ಮದಲ್ಲಿ ಹಿಮವಂತನ ಪುತ್ರಿಯಾಗಿ ಜನಿಸಿ ‘ಶೈಲಪುತ್ರಿ’ ಎಂದು ಹೆಸರುವಾಸಿಯಾಗುತ್ತಾಳೆ. ಮತ್ತೆ ಶಿವನ ಮಡದಿಯಾಗುತ್ತಾಳೆ. ಮದುವೆಯಾದ ಬಳಿಕ ಶಿವ ಪತ್ನಿಗೆ ವರ್ಷದಲ್ಲಿ 10 ದಿನ ಮಾತ್ರ ತವರು ಮನೆಗೆ ತೆರಳಲು ಅನುಮತಿ ನೀಡುತ್ತಾನೆ. ಅದರ ಸೂಚನೆ ಏನೋ ಎಂಬಂತೆ ಈಗಲೂ ದಸರಾ ಸಮಯದಲ್ಲಿ ಮದುವೆಯಾದ ಹೆಣ್ಣುಮಕ್ಕಳನ್ನು ತವರಿಗೆ ಆಮಂತ್ರಿಸಿ ಗೌರವಿಸುವ ಸಂಪ್ರದಾಯ ನಡೆಯುತ್ತದೆ. ಶೈಲಪುತ್ರಿ ವೃಷಭ ವಾಹನದ ಮೇಲೆ ಕುಳಿತು, ಬಲಗೈಯಲ್ಲಿ ತ್ರಿಶೂಲ ಮತ್ತು ಎಡಗೈಯಲ್ಲಿ ಕಮಲಪುಷ್ಪ ಹಿಡಿದುಕೊಂಡಿರುತ್ತಾಳೆ.

    ದಸರಾ ಸುದ್ದಿಗಳು:

    1. ನವರಾತ್ರಿಯ ಕೊನೆಯ ದಿನ ಆಚರಿಸುವ ಆಯುಧ ಪೂಜೆಯ ಮಹತ್ವವೇನು?

    2. ಮೈಸೂರು ದಸರಾ: ರತ್ನ ಖಚಿತ ಸಿಂಹಾಸನದ ಜೋಡಣೆ ಕಾರ್ಯ ಆರಂಭ

    3. ದಸರಾಗೆ ನಿಮ್ಮ ಮನೆಯಲ್ಲಿರಲಿ ಮೈಸೂರು ಪಾಕ್

    4. ಮೈಸೂರು ಪಾಕ್ ಕಂಡು ಹಿಡಿದಿದ್ದು ಯಾರು? ಇಲ್ಲಿದೆ ಮಾಹಿತಿ

    5. ಗೊಂಬೆ ಹಬ್ಬದ ಸಿದ್ಧತೆ ಹೀಗಿರಲಿ

    6. ದಸರಾ ಹಬ್ಬಕ್ಕೆ ಸ್ಟೈಲಿಶ್ ಆಗಿ ಕಾಣ್ಬೇಕಾ ಹೀಗಿರಲಿ ನಿಮ್ಮ ಸೀರೆ ಆಯ್ಕೆ

    7. ನವರಾತ್ರಿ ಸಂಭ್ರಮ – 9 ದಿನ ಯಾವ ಬಣ್ಣದ ಉಡುಪು ಧರಿಸಿ ಪೂಜಿಸಿದ್ರೆ ಉತ್ತಮ? ಇಲ್ಲಿದೆ ವಿವರ

    8.ದೇಶದ ವಿವಿಧ ರಾಜ್ಯಗಳಲ್ಲಿ ದಸರಾ ಹೇಗೆ ಆಚರಿಸುತ್ತಾರೆ? – ಇಲ್ಲಿದೆ ಮಾಹಿತಿ

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ದೇಶದ ವಿವಿಧ ರಾಜ್ಯಗಳಲ್ಲಿ ದಸರಾ ಹೇಗೆ ಆಚರಿಸುತ್ತಾರೆ? – ಇಲ್ಲಿದೆ ಮಾಹಿತಿ

    ದೇಶದ ವಿವಿಧ ರಾಜ್ಯಗಳಲ್ಲಿ ದಸರಾ ಹೇಗೆ ಆಚರಿಸುತ್ತಾರೆ? – ಇಲ್ಲಿದೆ ಮಾಹಿತಿ

    ಸರಾ ಕರ್ನಾಟಕ ರಾಜ್ಯದ ನಾಡ ಹಬ್ಬ. ಹಿಂದೂ ಧರ್ಮದವರಿಗೆ ಇದೊಂದು ಪ್ರಮುಖ ಹಬ್ಬ. ವಿಜಯನಗರದ ಅರಸರ ಕಾಲದಿಂದಲೇ ‘ನವರಾತ್ರಿ’ ಅಥವಾ ‘ದಸರಾ ಹಬ್ಬ’ ಚಾಲ್ತಿಗೆ ಬಂದಿದೆ ಎಂದು ಇತಿಹಾಸ ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಹಬ್ಬವನ್ನು ಭಾರತದ ಉತ್ತರ ಭಾಗಗಳಲ್ಲಿ ‘ದಶೇರ’ವಾಗಿಯೂ, ‘ದುರ್ಗಾ ಪೂಜೆ’ಯಾಗಿಯೂ ಆಚರಿಸುತ್ತಾರೆ.

    ಮೈಸೂರು: ಆಯುಧ ಪೂಜೆ, ವಿಜಯದಶಮಿ ಕರ್ನಾಟಕ ರಾಜ್ಯದಲ್ಲಿ ಅದರಲ್ಲೂ ಮೈಸೂರು ಪ್ರಾಂತ್ಯದಲ್ಲಿ ವಿಶೇಷವಾಗಿ ಆಚರಿಸಲಾಗುತ್ತದೆ. ಇತಿಹಾಸ ಪ್ರಸಿದ್ಧ ಮೈಸೂರಿನ ಅರಮನೆ ದೀಪಾಲಂಕಾರದಿಂದ ಕಂಗೊಳಿಸುತ್ತದೆ. ಮೈಸೂರನ್ನು ಆಳಿದ ರಾಜಮನೆತನ ಒಡೆಯರ ಕುಲ ದೇವತೆಯಾದ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಲಾಗುತ್ತದೆ. ಅಲ್ಲದೇ ವಿಜಯದಶಮಿಯಂದು ಆನೆಯ ಮೇಲೆ ಅಂಬಾರಿಯಲ್ಲಿ ಚಾಮುಂಡೇಶ್ವರಿಯನ್ನು ಕುಳ್ಳಿರಿಸಿ ಮೆರವಣಿಗೆಯ ಮೂಲಕ ಅರಮನೆಯಿಂದ ಬನ್ನಿ ಮಂಟಪಕ್ಕೆ ಒಯ್ಯುವುದು ಮೈಸೂರಿನ ವಿಶೇಷತೆ.

    ಮಂಗಳೂರು: ಮಂಗಳೂರಲ್ಲಿ ನವರಾತ್ರಿ ಎಂದು ಕರೆಯುವ ಈ ಹಬ್ಬದಲ್ಲಿ ಹುಲಿಯ ನೃತ್ಯ, ಕರಡಿಯ ನೃತ್ಯ ಹಾಗೂ ಸಿಂಹ ನೃತ್ಯ ಮಾಡುತ್ತಾರೆ. ಹತ್ತು ದಿನದ ಆಚರಣೆಯಲ್ಲಿ ಇಡೀ ನಗರವನ್ನು ಬೆಳಕಿನಿಂದ ಅಲಂಕರಿಸಲಾಗುತ್ತದೆ. ಹುಲಿ ವೇಷ, ದಸರಾದಲ್ಲಿ ಮಾಡುವ ಜನಪದ ನೃತ್ಯವಾಗಿದ್ದು, ಯುವಕರು ಐದರಿಂದ ಹತ್ತು ಪಡೆಗಳನ್ನು ಮಾಡಿಕೊಳ್ಳುತ್ತಾರೆ. ಅವರು ಹುಲಿಗಳಂತೆ ವೇಷ ಹಾಕಿಕೊಂಡು ಇಬ್ಬರಿಂದ ಮೂರು ಜನ ಡೋಲು ವಾದ್ಯದವರನ್ನು ಬಳಸಿ ಊರೆಲ್ಲಾ ತಿರುಗಾಡುತ್ತಾರೆ. ಶಾರದಾ ದೇವಿಗೆ ಹುಲಿ ವಾಹನ ಆದ್ದರಿಂದ ಅವಳಿಗೆ ಗೌರವ ಸೂಚಿಸಲು ಹುಲಿ ವೇಷ ಧರಿಸುತ್ತಾರೆ.

    ಮಂಗಳೂರಿನಲ್ಲಿ ಜನರು ತಮ್ಮ ಮನೆಗಳನ್ನು, ಅಂಗಡಿಗಳನ್ನು, ಉಪಹಾರ ಕೇಂದ್ರಗಳನ್ನು ಅಲಂಕರಿಸುತ್ತಾರೆ. ನವದುರ್ಗೆಯರ, ಮಹಾಗಣಪತಿಯ ಹಾಗೂ ಶಾರದೆಯ ಮೂರ್ತಿಗಳನ್ನು ಮೆರವಣಿಗೆ ಮಾಡಿ ಹೂಗಳಿಂದ ಅಲಂಕರಿಸಿದ ಛತ್ರಿ, ವರ್ಣ ಚಿತ್ರ, ಜಾನಪದ ನೃತ್ಯ, ಯಕ್ಷಗಾನ ಪಾತ್ರ, ಡೊಳ್ಳು ಕುಣಿತ, ಹುಲಿವೇಶ ಹಾಗು ಇನ್ನಿತರ ಸಾಂಪ್ರದಾಯಿಕ ಕಲಾ ರೂಪ ಈ ಹಬ್ಬಕ್ಕೆ ಮೆರಗು ನೀಡುತ್ತದೆ.

    ಮಡಿಕೇರಿ: ಮಡಿಕೇರಿಯಲ್ಲಿ ಹತ್ತು ದಿನಗಳ ನವರಾತ್ರಿ ಹಬ್ಬದ ಆಚರಣೆ ನಡೆಯುತ್ತದೆ. ಇಲ್ಲಿ ನಡೆಯುವ ದಸರಾಗೆ ನೂರು ವರ್ಷಗಳ ಇತಿಹಾಸವಿದ್ದು, ಇದರಲ್ಲಿ ಅಸುರರನ್ನು ಕೊಲ್ಲುತ್ತಿರುವ ಸುರರನ್ನು ಚಿತ್ರಿಸಿರುವ 10 ಮಂಟಪಗಳಿರುತ್ತವೆ. ಒಂದು ಮಂಟಪದಲ್ಲಿರುವ ಮೂರ್ತಿಗಳು ಸುಮಾರು 8 ರಿಂದ 15 ಅಡಿ ಎತ್ತರವಿದ್ದು, ಒಂದು ಮಂಟಪದ ವೆಚ್ಚ 3 ರಿಂದ 5 ಲಕ್ಷಗಳಾಗುತ್ತವೆ.

    ದಂತ ಕಥೆಗಳ ಪ್ರಕಾರ, ಬಹಳ ವರ್ಷಗಳ ಹಿಂದೆ ಮಡಿಕೇರಿಯ ಜನ ರೋಗ ಋಜಿನಗಳಿಂದ ನರಳುತ್ತಿದ್ದಾಗ ಮಡಿಕೇರಿಯ ರಾಜನು ಆಗಿನಿಂದ ಮಾರಿಯಮ್ಮ ಹಬ್ಬವನ್ನು ಆಚರಿಸಲು ಆರಂಭಿಸಿದನು. ಆಗಿನಿಂದ ಮಹಾಲಯ ಅಮಾವಾಸ್ಯೆಯ ನಂತರ ದಸರಾ ದಿನದಿಂದ ಮಾರಿಯಮ್ಮ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಈ ಬಾರಿ ಜಿಲ್ಲೆಯಲ್ಲಿ ವ್ಯಾಪಕ ನೆರೆ ಬಂದ ಹಿನ್ನೆಲೆಯಲ್ಲಿ ಸರಳ ದಸರಾ ಆಚರಿಸಲು ಜನ ತೀರ್ಮಾನಿಸಿದ್ದಾರೆ.

    ಕೇರಳ: ಕೇರಳದಲ್ಲಿ ನವರಾತ್ರಿಯ ಕೊನೆಯ ಮೂರು ದಿನಗಳ ಕಾಲ ಮಾತ್ರ ದೇವಿಯ ಆರಾಧನೆ ನಡೆಯುತ್ತದೆ. ಅಷ್ಟಮಿ, ನವಮಿ ಮತ್ತು ದಶಮಿಯ ದಿನ ಕೇರಳದಲ್ಲಿ ತಾಯಿ ಸರಸ್ವತಿಯ ಪೂಜೆ ನಡೆಸಲಾಗುತ್ತದೆ. ಕಲೆಯನ್ನು ಸರಸ್ವತಿ ಎಂದೇ ಪರಿಗಣಿಸುವ ಕೇರಳದ ಜನರು ಮನೆಯಲ್ಲಿರುವ ಸಂಗೀತ ಸಲಕರಣೆಗಳು, ಪುಸ್ತಕಗಳು ಎಲ್ಲವನ್ನೂ ಸರಸ್ವತಿಯ ಮೂರ್ತಿಯ ಮುಂದೆ ಇಟ್ಟು ಪೂಜಿಸುತ್ತಾರೆ. ನವರಾತ್ರಿಯ ಕೊನೆಯ ದಿನವಾದ ವಿಜಯ ದಶಮಿಯ ದಿನ ಪೂಜೆಗಿಟ್ಟ ಪುಸ್ತಕಗಳನ್ನು ತೆಗೆದು ಓದುತ್ತಾರೆ. ವಿದ್ಯಾದಶಮಿ ಎಂದು ಕರೆಯಲ್ಪಡುವ ಅಂದು ಅಧ್ಯಯನ ಮಾಡುವುದರಿಂದ ಸರಸ್ವತಿ ಒಲಿಯುತ್ತಾಳೆ ಎಂಬ ನಂಬಿಕೆ ಕೇರಳದಲ್ಲಿದೆ.

    ಆಂಧ್ರಪ್ರದೇಶ: ಆಂಧ್ರಪ್ರದೇಶದಲ್ಲಿ ನವರಾತ್ರಿಗೆ `ಬತುಕಾಮ್ಮ ಪಾಂಡುಗ’ ಎಂದು ಕರೆಯುತ್ತಾರೆ. ತೆಲಂಗಾಣ ಪ್ರದೇಶದಲ್ಲಿ ವಿಶೇಷವಾಗಿ ಈ ಬತುಕಾಮ್ಮ ಪಾಂಡುಗವನ್ನು ಆಚರಿಸುತ್ತಾರೆ. ಬತುಕಾಮ್ಮ ಪಾಂಡುಗ ಎಂದರೆ ತಾಯಿ ದುರ್ಗೆಗೆ ನೀಡುವ ಆಹ್ವಾನ. ನವರಾತ್ರಿಯ ಸಂದರ್ಭದಲ್ಲಿ ದೇವಿಯ ಆರಾಧನೆಗಾಗಿ ಮನೆ ಮನೆಯಲ್ಲಿ ಮಹಿಳೆಯರು ಬತುಕಾಮ್ಮನನ್ನು ಹೂವಿನಿಂದ ತಯಾರಿಸುತ್ತಾರೆ. ಕುಂಭದ ಆಕೃತಿಯಲ್ಲಿ ಬತುಕಾಮ್ಮನನ್ನು ತಯಾರಿಸಿ ಪೂಜಿಸುತ್ತಾರೆ. ನವರಾತ್ರಿಯ 9 ದಿನಗಳು ಸಂಜೆ ದೇವಿಗೆ ಪೂಜೆ ನಡೆಸಿ ಭಕ್ತಿ ಗೀತೆಗಳನ್ನು ಹಾಡಿ, ಬತುಕಾಮ್ಮನ ಸುತ್ತ ನೃತ್ಯ ಮಾಡಿ ಸಂಭ್ರಮಿಸುತ್ತಾರೆ. ನಂತರ ವಿದ್ಯಾದಶಮಿಯ ದಿನ ಹೂವಿನಿಂದ ತಯಾರು ಮಾಡಲಾಗಿದ್ದ ಬತುಕಾಮ್ಮನನ್ನು ನೀರಿನಲ್ಲಿ ತೇಲಿಬಿಡುತ್ತಾರೆ.

    ಪಂಜಾಬ್: ಪಂಜಾಬ್‍ನಲ್ಲಿ ನವರಾತ್ರಿಯ ಮೊದಲ ಏಳು ದಿನಗಳ ಕಾಲ ಹೆಚ್ಚಿನ ಪಂಜಾಬಿ ಜನರು ಹಗಲಿನಲ್ಲಿ ಉಪವಾಸ ಮಾಡಿ ದೇವಿಯನ್ನು ಪೂಜಿಸುತ್ತಾರೆ. ಪ್ರತಿ ರಾತ್ರಿ ದೇವಿಯ ಭಜನೆ ಮಾಡಿ ಪೂಜೆ ನೆರವೇರಿಸುತ್ತಾರೆ. ಅಷ್ಟಮಿಯ ದಿನ ಉಪವಾಸ ವ್ರತವನ್ನು ಕೈಬಿಟ್ಟು ವಿಜಯ ದಶಮಿಯ ತನಕ ನೆರೆಹೊರೆಯ ಒಂಬತ್ತು ಯುವತಿಯರನ್ನು ಆಮಂತ್ರಿಸಿ ಅವರಿಗೆ ಹಣ, ಸಿಹಿ ತಿಂಡಿಗಳನ್ನು ನೀಡಿ ಉಡುಗೊರೆಗಳನ್ನು ಕೊಟ್ಟು ಗೌರವಿಸಲಾಗುತ್ತದೆ. ಮನೆಗೆ ಆಹ್ವಾನಿಸುವ ಹೆಣ್ಣುಮಕ್ಕಳನ್ನು ದುರ್ಗೆಯ ಅವತಾರಗಳು ಎಂದು ಪರಿಗಣಿಸಲಾಗುತ್ತದೆ.

    ಪಶ್ಚಿಮ ಬಂಗಾಳ: ಪಶ್ಚಿಮ ಬಂಗಾಳದಲ್ಲಿ ದಸರಾದಂದು ದುರ್ಗೆಯ ಪೂಜೆ ಬಹಳ ವಿಜೃಂಭಣೆಯಿಂದ ನಡೆಯುತ್ತದೆ. ಆ ಸಮಯದಲ್ಲಿ ಕೋಲ್ಕತ್ತಾದಲ್ಲಿ ವಿಪರೀತವಾದ ಜನಸಂದಣಿ ಸೇರುತ್ತದೆ. ಅಲ್ಲದೇ ಸಾರ್ವಜನಿಕವಾಗಿ ದೇವಿ ಪೂಜೆಯನ್ನು ನಡೆಸುವ ಪರಿಪಾಠವೂ ಇದೆ. ಸಿಂಹದ ಮೇಲೆ ಕುಳಿತು ವಿವಿಧ ಬಗೆಯ ಆಯುಧಗಳನ್ನು ಹಿಡಿದಿರುವ ದೇವಿಯ ದೊಡ್ಡ ಮೂರ್ತಿಯನ್ನು ಇರಿಸಿ ಬೆಳಗ್ಗೆ ಸಂಜೆಗಳಲ್ಲಿ ಪೂಜೆ ಭಜನೆಗಳನ್ನು ಅರ್ಪಿಸುತ್ತಾರೆ. ಗಣೇಶ ಚತುರ್ಥಿಯಂತೆ ಸಾಮಾನ್ಯವಾಗಿ ಪಶ್ಚಿಮ ಬಂಗಾಳದಾದ್ಯಂತ ದುರ್ಗೆಯ ವಿಗ್ರಹಗಳನ್ನು ಪ್ರತಿಷ್ಠಾಪಿಸಿ, ಪೂಜಿಸಿ ನಂತರ ನೀರಿನಲ್ಲಿ ವಿಸರ್ಜಿಸಲಾಗುತ್ತದೆ.

    ಕೋಲ್ಕತ್ತಾದಲ್ಲಿ 10 ದಿನಗಳ ಕಾಲ ಬಣ್ಣ, ಭಾರೀ ಶಬ್ಧ, ದೀಪಾಲಂಕಾರ ಹಾಗೂ ವಿವಿಧ ರೀತಿಯ ಆಹಾರಗಳನ್ನು ತಯಾರಿಸುತ್ತಾರೆ. ಅಲ್ಲದೇ ಇಲ್ಲಿನ ಜನರು ಹಬ್ಬದಂದು ತೆಂಗಿನ ಸಿಪ್ಪೆಯೊಳಗೆ ಬೆಂಕಿ ಹಾಕಿ ಅದನ್ನು ಕೈಯಲ್ಲಿ ಹಿಡಿದು ನೃತ್ಯ ಮಾಡುತ್ತಾರೆ. ದಸರಾದಂದು ಈ ರಾಜ್ಯದ ಮುತ್ತೈದೆಯರು ದೇವರ ಮೇಲೆ ಕುಂಕುಮ ಹಾಕುತ್ತಾರೆ. ಆ ದಿನ ದೇವಿ ತನ್ನ ಪತಿಯ ಮನೆಗೆ ಹಿಂದಿರುತ್ತಿದ್ದಾಳೆ ಎಂದು ಅಲ್ಲಿನ ಜನರು ನಂಬುತ್ತಾರೆ. ದೇವಿಗೆ ಕುಂಕುಮ ಹಾಕಿದ್ದ ನಂತರ ಮುತ್ತೈದೆಯರು ಒಬ್ಬರಿಗೊಬ್ಬರು ತಮ್ಮ ಮೇಲೆ ಕುಂಕುಮ ಎರಚಿಕೊಳ್ಳುತ್ತಾರೆ. ತಮ್ಮ ಪತಿಯ ಆಯಸ್ಸು ವೃದ್ಧಿಗಾಗಿ ಈ ರೀತಿ ಆಚರಣೆ ಮಾಡುತ್ತಾರೆ.

    ದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲೂ ದಸರಾ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸುತ್ತಾರೆ. ದೆಹಲಿಯ ರಾಮ್‍ಲೀಲಾ ಮೈದಾನದಲ್ಲಿ ರಾಮಾಯಣ ನಾಟಕವನ್ನು ಮಾಡುತ್ತಾರೆ. ಸಾಂಸ್ಕೃತಿಕ ಉಡುಗೆ ತೊಟ್ಟು ರಾಮಾಯಣದ ನಾಟಕವನ್ನು ಮಾಡುತ್ತಾರೆ. ಅಲ್ಲದೇ ರಾವಣ, ಕುಂಭಕರ್ಣ, ಮೇಘನಾದ ದೊಡ್ಡ ಪ್ರತಿಕೃತಿಯನ್ನು ರಾಮ ಹಾಗೂ ಲಕ್ಷ್ಮಣ ವೇಷಧಾರಿ ತಮ್ಮ ಬಾಣಕ್ಕೆ ಬೆಂಕಿಗೆ ಹಚ್ಚಿ ಪ್ರತಿಕೃತಿಯನ್ನು ಸುಟ್ಟು ಹಾಕುತ್ತಾರೆ.

    ಗುಜರಾತ್: ಗುಜರಾತ್ ನಲ್ಲಿ ನವರಾತ್ರಿಯಂತೂ ಅತ್ಯಂತ ಅದ್ಧೂರಿಯಿಂದ ನಡೆಯುತ್ತದೆ. ಈ ಹಬ್ಬದಂದು ಮಹಿಳೆಯರು ಹಾಗೂ ಪುರುಷರು ಸೇರಿ ಗರ್ಭಾ ನೃತ್ಯ ಮಾಡುತ್ತಾರೆ. ಈ ಹಬ್ಬದಂದು ಗುಜರಾತಿನ ತುಂಬ ದಾಂಡಿಯಾ ಕೋಲು ಮತ್ತು ಡೋಲಿನ ಶಬ್ಧವೇ ಕೇಳಿಸುತ್ತದೆ. ಸಂಪ್ರದಾಯಸ್ಥರು 9 ದಿನಗಳ ಕಾಲವೂ ಉಪವಾಸ ಮಾಡಿ ಸಂಜೆಯ ವೇಳೆ ದುರ್ಗೆಯ ಪೂಜೆ ಮಾಡಿ ನಂತರ ಊಟ ಮಾಡುತ್ತಾರೆ. ಸಂಜೆ ಹೊತ್ತಿನಲ್ಲಿ ದೇವಿಗೆ ಆರತಿ ಬೆಳಗಿ ದೇವಿಯ ಮುಂದೆ ಗರ್ಭಾ ಅಥವಾ ದಾಂಡಿಯಾ ಎಂದು ಕರೆಯಲ್ಪಡುವ ವಿಶಿಷ್ಟ ನೃತ್ಯ ಮಾಡಿ ಸಂಭ್ರಮಿಸುತ್ತಾರೆ.

    ಮಹಾರಾಷ್ಟ್ರ: ಮಹಾರಾಷ್ಟ್ರದಲ್ಲಿ ನವರಾತ್ರಿಯನ್ನು ಹಬ್ಬವನ್ನು ವಿಜೃಂಭಣೆಯಿಂದ ಅತ್ಯಂತ ವೈಭವವಾಗಿ ಆಚರಿಸಲಾಗುತ್ತದೆ. ಇಲ್ಲಿ ಮಣ್ಣಿನ ಪಾತ್ರೆಯಲ್ಲಿ ಧ್ಯಾನಗಳ ಬೀಜವನ್ನು ತುಂಬಿ ಅದರ ಮೇಲೆ ಜೋಳದ ತೆನೆಗಳನ್ನು ಇಡಲಾಗುತ್ತದೆ, ನಂತರ ಆ ಮಡಿಕೆಯನ್ನು ಅದರೊಳಗಿನ ಬೀಜಗಳು ಮೊಳಕೆಯೊಡೆದು ಬರುವವರೆಗೂ ಸತತವಾಗಿ 9 ದಿನಗಳ ಕಾಲ ಭಕ್ತಿಯಿಂದ ಪೂಜಿಸುತ್ತಾರೆ. ಅಲ್ಲದೇ ಮಹಾರಾಷ್ಟ್ರದಲ್ಲಿ ನವರಾತ್ರಿ ಹಬ್ಬವನ್ನು ಹೊಸದಾಗಿ ಪ್ರಾರಂಭ ಮಾಡಲು ಇರುವ ಶುಭ ಸಂದರ್ಭವಾಗಿ ಪರಿಗಣಿಸಲಾಗುತ್ತದೆ. ಹೊಸ ಮನೆ ಅಥವಾ ಕಾರನ್ನು ಖರೀದಿಸುವುದು ಹೀಗೆ ಹೊಸ ಆರಂಭವನ್ನು ನವರಾತ್ರಿಯಿಂದಲೇ ಆರಂಭಿಸಬೇಕು ಎನ್ನುವ ನಂಬಿಕೆಯನ್ನು ಮರಾಠಿಗರು ಇಟ್ಟುಕೊಂಡಿದ್ದಾರೆ.

    ದಸರಾ ಸುದ್ದಿಗಳು:

    1. ನವರಾತ್ರಿಯ ಕೊನೆಯ ದಿನ ಆಚರಿಸುವ ಆಯುಧ ಪೂಜೆಯ ಮಹತ್ವವೇನು?

    2. ಮೈಸೂರು ದಸರಾ: ರತ್ನ ಖಚಿತ ಸಿಂಹಾಸನದ ಜೋಡಣೆ ಕಾರ್ಯ ಆರಂಭ

    3. ದಸರಾಗೆ ನಿಮ್ಮ ಮನೆಯಲ್ಲಿರಲಿ ಮೈಸೂರು ಪಾಕ್

    4. ಮೈಸೂರು ಪಾಕ್ ಕಂಡು ಹಿಡಿದಿದ್ದು ಯಾರು? ಇಲ್ಲಿದೆ ಮಾಹಿತಿ

    5. ಗೊಂಬೆ ಹಬ್ಬದ ಸಿದ್ಧತೆ ಹೀಗಿರಲಿ

    6. ದಸರಾ ಹಬ್ಬಕ್ಕೆ ಸ್ಟೈಲಿಶ್ ಆಗಿ ಕಾಣ್ಬೇಕಾ ಹೀಗಿರಲಿ ನಿಮ್ಮ ಸೀರೆ ಆಯ್ಕೆ

    7. ನವರಾತ್ರಿ ಸಂಭ್ರಮ – 9 ದಿನ ಯಾವ ಬಣ್ಣದ ಉಡುಪು ಧರಿಸಿ ಪೂಜಿಸಿದ್ರೆ ಉತ್ತಮ? ಇಲ್ಲಿದೆ ವಿವರ

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ವಾಟ್ಸಪ್ ಮಾಡಿದ್ರೆ, ದಸರಾ ಗೊಂಬೆಗಳನ್ನು ಜನತೆಗೆ ತೋರಿಸ್ತೀವಿ

    ವಾಟ್ಸಪ್ ಮಾಡಿದ್ರೆ, ದಸರಾ ಗೊಂಬೆಗಳನ್ನು ಜನತೆಗೆ ತೋರಿಸ್ತೀವಿ

    ಬೆಂಗಳೂರು: ವಿಶ್ವವಿಖ್ಯಾತ ದಸರಾ ಹಬ್ಬ ಬಂತು ಎಂದರೆ ಎಲ್ಲರು ಸಂಭ್ರಮ ಪಡುತ್ತಾರೆ. ಕರ್ನಾಟಕದ ನಾಡಹಬ್ಬ ಇದ್ದಾಗಿದ್ದು 10 ದಿನಗಳ ಕಾಲ ಹಬ್ಬವನ್ನು ಆಚರಿಸಲಾಗುತ್ತದೆ. 9 ದಿನಗಳ ಕಾಲ ಪೂಜೆಯನ್ನು ಮಾಡಿ 10ನೇ ದಿನ ವಿಜೃಂಭಣೆಯಿಂದ ವಿಜಯದಶಮಿಯನ್ನು ಆಚರಿಸಲಾಗುತ್ತದೆ.

    ನವರಾತ್ರಿಯ ಸಮಯದಲ್ಲಿ ಕರ್ನಾಟಕದಲ್ಲಿ ಬೊಂಬೆಗಳನ್ನು ಕೂರಿಸಿ ಅದ್ಧೂರಿಯಾಗಿ ಆಚರಿಸಲಾಗುತ್ತದೆ. ನವರಾತ್ರಿ 9 ದಿನ ಇರುವುದರಿಂದ 9 ಮಹಡಿಯ ತರಹ ಮಾಡಿ ಗೊಂಬೆಗಳನ್ನು ಕೂರಿಸುವುದು ವಿಶೇಷ.

    ಹಲವು ಮನೆಗಳಲ್ಲಿ ಗೊಂಬೆಗಳನ್ನು ಕೂರಿಸಿದರೂ ಅದನ್ನು ನೋಡಲು ಎಲ್ಲರಿಗೂ ಸಾಧ್ಯವಿಲ್ಲ ಎಂದು ನೀವು ಚಿಂತೆ ಮಾಡಬೇಕಾದ ಅಗತ್ಯವಿಲ್ಲ. ಪಬ್ಲಿಕ್ ಮ್ಯೂಸಿಕ್ ಮೂಲಕ ನಿಮ್ಮ ಮನೆಯಲ್ಲಿರುವ ದಸರಾ ಬೊಂಬೆಯನ್ನು ಇಡೀ ಕರ್ನಾಟಕ ಜನತೆ ನೋಡಬಹುದು.

    ಏನ್ ಮಾಡ್ಬೇಕು?
    ನಿಮ್ಮ ಮನೆಯಲ್ಲಿ ದಸರಾ ಬೊಂಬೆಗಳನ್ನು ಕೂರಿಸಿದ್ದರೆ ಈಗಲೇ ನಿಮ್ಮ ಹೆಸರು ಮತ್ತು ವಿಳಾಸವನ್ನು ಬರೆದು 99000 60800 ವಾಟ್ಸಪ್ ನಂಬರ್ ಗೆ ಸೆಂಡ್ ಮಾಡಿದರೆ ಆಯ್ತು. ನಾವೇ ನಿಮ್ಮ ಮನೆಗೆ ಬಂದು ಚಿತ್ರಿಕರಿಸಿ ವಾಹಿನಿಯಲ್ಲಿ ಪ್ರಸಾರ ಮಾಡುತ್ತೇವೆ.