Tag: navayuga toll

  • ಲಾಕ್‍ಡೌನ್ ಮೊದಲ ದಿನ – ನಗರದ ಬಹುತೇಕ ರಸ್ತೆಗಳು ಖಾಲಿ ಖಾಲಿ

    ಲಾಕ್‍ಡೌನ್ ಮೊದಲ ದಿನ – ನಗರದ ಬಹುತೇಕ ರಸ್ತೆಗಳು ಖಾಲಿ ಖಾಲಿ

    ಬೆಂಗಳೂರು: ಲಾಕ್‍ಡೌನ್‍ನ ಮೊದಲ ದಿನ ನವಯುಗ ಟೋಲ್, ಮಲ್ಲೇಶ್ವರಂ, ಮೆಜೆಸ್ಟಿಕ್ ಸೇರಿದಂತೆ ಬಹುತೇಕ ರಸ್ತೆಗಳು ಸಂಪೂರ್ಣವಾಗಿ ಬಂದ್ ಆಗಿದೆ.

    ಲಾಕ್‍ಡೌನ್ ಹಿನ್ನೆಲೆಯಲ್ಲಿ ಮೆಜೆಸ್ಟಿಕ್‍ನಲ್ಲಿ ಬಿಎಂಟಿಸಿ ಮತ್ತು ಕೆಎಸ್ಆರ್‌ಟಿಸಿ ಎಂಟ್ರಿ ಮತ್ತು ಎಕ್ಸಿಟ್‍ಗಳನ್ನ ಬ್ಯಾರಿಕೇಡ್‍ಗಳನ್ನ ಹಾಕಿ ಮುಚ್ಚಲಾಗಿದೆ. ಯಾವುದೇ ಬಸ್‍ಗಳ ಓಡಾಟವಿಲ್ಲ. ಇಡೀ ಮೆಜೆಸ್ಟಿಕ್ ಸುತ್ತಮುತ್ತ ಪೊಲೀಸರು ರಸ್ತೆಯನ್ನು ಬಂದ್ ಮಾಡಿದ್ದಾರೆ. ಅಲ್ಲದೇ ಮೆಜೆಸ್ಟಿಕ್ ನಿಲ್ದಾಣದ ಅಂಗಡಿ ಮುಂಗಟ್ಟು ಸಹ ಸಂಪೂರ್ಣ ಬಂದ್ ಆಗಿವೆ. ಹೋಟೆಲ್, ಟೀ ಅಂಗಡಿಗಳು ಓಪನ್ ಇಲ್ಲ.

    ಪ್ರತಿ ನಿತ್ಯ ಇಷ್ಟೊತ್ತಿಗಾಗಲೇ ಗಿಜಿಗುಡುತ್ತಿದ್ದ ಮೆಜೆಸ್ಟಿಕ್ ಈಗ ಪ್ರಯಾಣಿಕರಿಲ್ಲದೇ ಖಾಲಿ ಖಾಲಿ ಆಗಿದೆ. ಕೇವಲ ತುರ್ತು ಸೇವೆಗಷ್ಟೇ ಬಿಎಂಟಿಸಿ ಬಸ್ ಲಭ್ಯವಿರುತ್ತದೆ. ಎರ್ಮೆಜೆನ್ಸಿ ಬಸ್‍ಗಳು ಬೆಳಗ್ಗೆ 8 ಗಂಟೆಯಿಂದ ಸಂಜೆ 6 ಗಂಟೆವರೆಗೆ ಓಡಾಡುತ್ತವೆ. ಕೆಲವರು ಬಸ್ ಇಲ್ಲದ ಕಾರಣ ನಡೆದುಕೊಂಡೇ ಹೋಗುತ್ತಿದ್ದಾರೆ.

    ಕಳೆದ ದಿನದವರೆಗೂ ತುಂಬಾ ಟ್ರಾಫಿಕ್ ಇದ್ದ ನೆಲಮಂಗಲ ನವಯುಗ ಟೋಲ್ ಈಗ ಫುಲ್ ಖಾಲಿಯಾಗಿದೆ. ಕೊರೊನಾಗೆ ಹೆದರಿ ಊರು ಬಿಡುತ್ತಿದ್ದವರಿಂದ ಫುಲ್ ಟ್ರಾಫಿಕ್ ಉಂಟಾಗಿತ್ತು. ಆದರೆ ಲಾಕ್‍ಡೌನ್ ಹಿನ್ನೆಲೆ ಪೂರ್ತಿ ಖಾಲಿ ಖಾಲಿಯಾಗಿದೆ. ಸರಕು ಸಾಗಣೆ ವಾಹನಗಳು ಎಂದಿನಂತೆ ಓಡಾಡುತ್ತಿವೆ. ಜೊತೆಗೆ ತೀರ ವಿರಳವಾಗಿ ದ್ವಿಚಕ್ರ ವಾಹನಗಳು ಕಾಣಿಸಿಕೊಳ್ಳುತ್ತಿವೆ.

    ನೆಲಮಂಗಲ ಬಳಿಯ ತುಮಕೂರು ಹಾಗೂ ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗೂಡ್ಸ್ ವಾಹನಗಳು ಮಾತ್ರ ಸಂಚಾರ ಮಾಡುತ್ತಿದ್ದಾವೆ. ಕೇವಲ ಬೆರಳೆಣಿಕೆಯಷ್ಟು ಜನರರು ಖಾಸಗಿ ವಾಹನಗಳಲ್ಲಿ ಸಂಚಾರ ಮಾಡುತ್ತಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗಡಿಯಲ್ಲಿ ಚೆಕ್ ಪೋಸ್ಟ್ ನಿರ್ಮಾಣ ಮಾಡಲಾಗಿದೆ. ನೆಲಮಂಗಲ ಪೊಲೀಸರು ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ನಗರ ಪ್ರವೇಶಕ್ಕೆ ನಿರ್ಬಂಧ ಮಾಡಿದ್ದಾರೆ.

    ಮಲ್ಲೇಶ್ವರಂ ಮಾರುಕಟ್ಟೆಯಲ್ಲಿ ಹಾಲು, ತರಕಾರಿ, ಹಣ್ಣು ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಆದರೂ ರಸ್ತೆಗಳು ಖಾಲಿ ಖಾಲಿಯಾಗಿವೆ. ಅಗತ್ಯ ವಸ್ತುಗಳ ಖರೀದಿಗಷ್ಟೇ ಜನರ ಓಡಾಡುತ್ತಿದ್ದಾರೆ.

  • ಮನೆ ಖಾಲಿ ಮಾಡ್ಕೊಂಡು ಬೆಂಗ್ಳೂರು ಬಿಟ್ಟು ಊರಿನತ್ತ ಪ್ರಯಾಣ- ಟ್ರಾಫಿಕ್ ಜಾಮ್

    ಮನೆ ಖಾಲಿ ಮಾಡ್ಕೊಂಡು ಬೆಂಗ್ಳೂರು ಬಿಟ್ಟು ಊರಿನತ್ತ ಪ್ರಯಾಣ- ಟ್ರಾಫಿಕ್ ಜಾಮ್

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಮಹಾಸ್ಫೋಟವಾಗುತ್ತಿದ್ದಂತೆ ಭಯಭೀತರಾದ ಜನರು ಬೆಂಗಳೂರು ಬಿಟ್ಟು ತಮ್ಮ ತಮ್ಮ ಊರುಗಳಿಗೆ ಪ್ರಯಾಣ ಮಾಡುತ್ತಿದ್ದಾರೆ.

    ಬೆಂಗಳೂರಿನಿಂದ ಜನರು ತಮ್ಮ ಊರಿಗೆ ಹೊರಟಿರುವ ಹಿನ್ನೆಲೆಯಲ್ಲಿ ನವಯುಗ ಟೋಲ್ ಬಳಿ ಟ್ರಾಫಿಕ್ ಜಾಮ್ ಉಂಟಾಗಿದೆ. ತುಮಕೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನವಯುಗ ಟೋಲ್‍ನಲ್ಲಿ ಸಾಲಾಗಿ ವಾಹನಗಳು ನಿಂತಿವೆ. ಈ ಮೂಲಕ ಶನಿವಾರ ಬೆಂಗಳೂರು ನಗರದಲ್ಲಿ ಕೊರೊನಾ ಮಹಾ ಸ್ಫೋಟಕ್ಕೆ ಜನರು ಹೆದರಿಕೊಂಡಿದ್ದಾರೆ ಎನ್ನಲಾಗಿದೆ.

    ಇನ್ನೂ ಕೆಲವರು ಬೆಂಗಳೂರಿಗಿಂತ ತಮ್ಮ ಊರುಗಳೇ ಸುರಕ್ಷಿತ ಎಂದು ಮನೆ ಖಾಲಿ ಮಾಡಿಕೊಂಡು ಲಗೇಜ್ ಸಮೇತ ಬೆಂಗಳೂರು ಬಿಟ್ಟು ಹೊರಟ್ಟಿದ್ದಾರೆ. ಮಕ್ಕಳಿಗೆ ಶಾಲೆ ಇಲ್ಲ, ನಮಗೂ ಮಾಡಲು ಕೆಲಸವಿಲ್ಲ. ಇದರಿಂದ ಮನೆ ಬಾಡಿಗೆ ಕಟ್ಟಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ನಮ್ಮ ಊರಿಗೆ ಹೋಗುತ್ತಿದ್ದೇವೆ ಎಂದು ಜನರು ಹೇಳುತ್ತಿದ್ದಾರೆ.

    ಬೆಂಗಳೂರಿನಲ್ಲಿ ಶನಿವಾರ ಬರೋಬ್ಬರಿ 596 ಮಂದಿಗೆ ಕೊರೊನಾ ದೃಢವಾಗಿದೆ. ಹೀಗಾಗಿ ಕೊರೊನಾ ತಡೆಗಾಗಿ ಸರ್ಕಾರ ಪ್ರತಿ ಭಾನುವಾರ ಲಾಕ್‍ಡೌನ್ ಮಾಡಲು ನಿರ್ಧರಿಸಿದೆ. ಹಾಗೆಯೇ ನೈಟ್ ಕರ್ಫ್ಯೂ ಅವಧಿಯನ್ನು ವಿಸ್ತರಣೆ ಮಾಡಲಾಗುತ್ತಿದೆ. ರಾತ್ರಿ 8 ಗಂಟೆಯಿಂದಲೇ ಕರ್ಫ್ಯೂ ಜಾರಿಯಾಗಲಿದ್ದು, ಅನಾವಶ್ಯಕವಾಗಿ ಹೊರ ಬರೋರ ವಿರುದ್ಧ ಕಠಿಣ ಕ್ರಮಕೈಗೊಳ್ಳಲು ಸರ್ಕಾರ ನಿರ್ಧರಿಸಿದೆ.

    ಸೋಮವಾರದಿಂದ ಕರ್ನಾಟಕದಲ್ಲಿ ನೈಟ್ ಕರ್ಫ್ಯೂ ಜಾರಿಯಾಗಲಿದ್ದು, ರಾತ್ರಿ 8 ರಿಂದ ಬೆಳಗ್ಗೆ 5 ಗಂಟೆಯವರೆಗೆ ಬಂದ್ ಆಗಲಿದೆ. ಶನಿವಾರ ಒಂದೇ ದಿನ ಕೊರೊನಾ ಮಹಾಸ್ಫೋಟ ಸಂಭವಿಸಿದ ಹಿನ್ನೆಲೆಯಲ್ಲಿ ರಾತ್ರಿ ಕರ್ಫ್ಯೂ ಮತ್ತೆ ಜಾರಿಯಾಗಿದೆ. ಇವತ್ತು ಒಂದೇ ದಿನ ಮಾತ್ರ ರಾತ್ರಿ 9 ಗಂಟೆ ತನಕ ವ್ಯವಹಾರ ನಡೆಸಬಹುದಾಗಿದ್ದು, ನಾಳೆಯಿಂದ ರಾತ್ರಿ 8 ಗಂಟೆಯಿಂದ 5 ರ ತನಕ ಕರ್ಫ್ಯೂ ಇರಲಿದೆ.

  • ನೆಲಮಂಗಲದಲ್ಲಿ ಕರ್ಫ್ಯೂ ಉಲ್ಲಂಘಿಸಿದವ ಪೊಲೀಸ್ ವಶ

    ನೆಲಮಂಗಲದಲ್ಲಿ ಕರ್ಫ್ಯೂ ಉಲ್ಲಂಘಿಸಿದವ ಪೊಲೀಸ್ ವಶ

    – ಖಾಸಗಿ ಅಂಬುಲೆನ್ಸ್ ದುರ್ಬಳಕೆ
    – ಟೋಲ್‍ನಲ್ಲಿ ಕ್ಯೂ ನಿಂತ ವಾಹನಗಳು

    ಬೆಂಗಳೂರು/ನೆಲಮಂಗಲ: ಮನೆಯಿಂದ ಹೊರಗೆಬರಬೇಡಿ ಅಂದರೂ ಜನರು ಕೇಳುತ್ತಿಲ್ಲ. ನೆಲಮಂಗಲದಲ್ಲಿಯೂ ಇಂತದ್ದೇ ಘಟನೆ ನಡೆದಿದ್ದು, ಈ ಹಿನ್ನೆಲೆಯಲ್ಲಿ ಪೊಲೀಸರು ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ.

    ಹೌದು. ನವಯುಗ ಟೋಲ್ ಬಳಿ ಜನರನ್ನು ಸೇರಿಸಿಕೊಂಡು ಹೀರೋ ಆಗಲು ಹೋಗಿ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾನೆ. ವ್ಯಕ್ತಿ ಟೋಲ್ ಬಳಿ ವಾಹನಗಳನ್ನ ಬಿಡದಿದ್ದಕ್ಕೆ ಪೊಲೀಸರೊಂದಿಗೆ ವಾಗ್ವಾದ ನಡೆಸಿದ್ದಾನೆ. ಅಲ್ಲದೆ ಜನರನ್ನು ಗುಂಪು ಕಟ್ಟಿಕೊಂಡು ಪೊಲೀಸರೊಂದಿಗೆ ವಾಗ್ವದಕ್ಕಿಳಿದಿದ್ದ. ಈ ವೇಳೆ ಪೊಲೀಸರು ಎಷ್ಟೇ ಮನವೊಲಿಸಿದ್ರೂ ಕೇಳಲಿಲ್ಲ. ಹೀಗಾಗಿ ಆತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಲ್ಲದೆ ಪೊಲೀಸ್ ವಾಹನದ ಮೂಲಕ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.

    9 ದಿನಗಳ ಕರ್ನಾಟಕ ಲಾಕ್ ಡೌನ್ ಆದೇಶ ಮಾಡಿದ್ದು, ರಾಜ್ಯಾದ್ಯಂತ 144 ಸೆಕ್ಷನ್ ಜಾರಿ ಮಾಡಿದೆ. ಆದರೂ ಸರ್ಕಾರದ ಆದೇಶ ಪಾಲಿಸದೇ ವಾಹನಗಳು ಇಂದು ರಸ್ತೆಗಿಳಿದಿವೆ. ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳ ಸಂಚಾರ ಮಾಡುತ್ತಿವೆ. ಯಾವುದೇ ಮುಂಜಾಗೃತೆ ವಹಿಸದೇ ವಾಹನ ಸವಾರರು ಓಡಾಟ ಮಾಡುತ್ತಿದ್ದಾರೆ.

    ನೆಲಮಂಗಲ ತಾಲೂಕಿನ ಎರಡು ಗಡಿ ಭಾಗದಲ್ಲಿ ಅಂದರೆ ಮಹದೇವಪುರ ಹಾಗೂ ಹಳೇನಿಜಗಲ್ಲು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ತಪಾಸಣೆ ನಡೆಸಲಾಗುತ್ತಿದೆ.

    ಖಾಸಗಿ ಅಂಬುಲೆನ್ಸ್ ದುರ್ಬಳಕೆ:
    ಕೊರೊನಾ ಭೀತಿಯಿಂದ 144 ಜಾರಿ ಮಾಡಿದರೆ ಇದನ್ನೇ ಖಾಸಗಿ ಅಂಬುಲೆನ್ಸ್ ಗಳು ಇದನ್ನೇ ಬಂಡವಾಳ ಮಾಡಿಕೊಂಡಿವೆ. ನೆಲಮಂಗಲ ಮಾರ್ಗದಿಂದ ಹಾಸನಕ್ಕೆ ಜನರನ್ನು ಅಂಬುಲೆನ್ಸ್ ನಲ್ಲಿ ಸಾಗಾಟ ಮಾಡಲಾಗುತ್ತಿದೆ. ಪ್ರಶ್ನೆ ಮಾಡಿದ್ರೆ ಏನಿಗಾ ತುರ್ತು ಸ್ಥಿತಿ ಎಂದು ಅಂಬುಲೆನ್ಸ್ ವಾಹನದ ಸಿಬ್ಬಂದಿ ಹೇಳುತಿದ್ದಾರೆ.

    ಕ್ಯೂ ನಿಂತ ವಾಹನಗಳು:
    ನಗರದಿಂದ ಹೊರಗಡೆ ಹೋದರೆ ಟೋಲ್ ಗಳಲ್ಲೇ ಲಾಕ್ ಆಗೋದು ಗ್ಯಾರಂಟಿಯಾಗಿದೆ. ಯಾಕಂದ್ರೆ ಕಿಲೋ ಮೀಟರ್ ಗಟ್ಟಲೆ ವಾಹನಗಳು ಕ್ಯೂ ನಿಂತಿವೆ. ನಗರದಿಂದ ಇನ್, ಔಟ್ ಆಗೋ ವಾಹನಗಳು ಕೂಡ ಫುಲ್ ಬಂದ್ ಆಗಿವೆ. ಹೀಗಾಗಿ ನವಯುಗ ಟೋಲ್ ಮುಂದೆ ವಾಹನಗಳು ಸಾಲು ಸಾಲು ನಿಂತಿವೆ.

  • ಟೋಲ್ ಬಳಿ ಲಾರಿ ಹರಿಸಿ RTI ಕಾರ್ಯಕರ್ತನ ಹತ್ಯೆಗೆ ಯತ್ನ!

    ಟೋಲ್ ಬಳಿ ಲಾರಿ ಹರಿಸಿ RTI ಕಾರ್ಯಕರ್ತನ ಹತ್ಯೆಗೆ ಯತ್ನ!

    ಬೆಂಗಳೂರು: ಕೊಬ್ಬರಿ ಹಗರಣ ಬಯಲಿಗೆಳೆದಿದ್ದ ಆರ್ ಟಿಐ ಕಾರ್ಯಕರ್ತ ರವಿಕುಮಾರ್ ಹತ್ಯೆಗೆ ಸಂಚು ನಡೆಸಲಾಗಿದೆ. ದಾಖಲೆ ಇಲ್ಲದೆ ಕೊಬ್ಬರಿಯನ್ನ ಹೊರರಾಜ್ಯಕ್ಕೆ ಅಕ್ರಮವಾಗಿ ಸಾಗಾಟದ ಬಗ್ಗೆ ವಾಣಿಜ್ಯ ತೆರಿಗೆ ಆಯುಕ್ತರಿಗೆ ತುಮಕೂರು ಮೂಲದ ರವಿ ದೂರು ನೀಡಿದ್ರು. ಅಲ್ಲದೆ ಅದಕ್ಕೆ ಬೇಕಾದ ಎಲ್ಲಾ ಆಡಿಯೋ, ವಿಡಿಯೋ ಸಾಕ್ಷ್ಯ ಕೂಡಾ ಒದಗಿಸಿದ್ದರು.

    ಇದರ ಮಧ್ಯೆ ರವಿ ಕುಮಾರ್ ಕಾರ್ ಮೇಲೆ ಲಾರಿ ಹರಿಸಿ ಹತ್ಯೆಗೆ ಸಂಚು ರೂಪಿಸಲಾಗಿದೆಯಂತೆ. ನೆಲಮಂಗಲ ಪಟ್ಟಣದ ನವಯುಗ ಟೋಲ್ ಬಳಿ ತಮಿಳುನಾಡು ರಿಜಿಸ್ಟ್ರೇಷನ್ ಲಾರಿ ರವಿ ಕಾರಿಗೆ ಡಿಕ್ಕಿ ಹೊಡೆದಿದೆ. ಚಾಲಕ ಇದು ಬ್ರೆಕ್ ಫೇಲ್ಯೂರ್‍ನಿಂದ ಆಗಿರುವ ಅಪಘಾತ ಎಂದು ಹೇಳಿದ್ರೂ, ಲಾರಿ ಬ್ರೇಕ್ ಫೇಲ್ಯೂರ್ ಆಗಿರಲಿಲ್ಲ ಅನ್ನೋದು ಬೆಳಕಿಗೆ ಬಂದಿದೆ. ಘಟನೆ ಸಂಬಂಧ ನೆಲಮಂಗಲ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ರವಿಕುಮಾರ್ ದೂರು ಕೊಟ್ಟು ಒಂದೂವರೆ ತಿಂಗಳಾದ್ರೂ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಬಗ್ಗೆ ತಿಪಟೂರು ಎಪಿಎಂಸಿ ಕಾರ್ಯದರ್ಶಿಯನ್ನು ಕೇಳಿದ್ರೆ, ಈ ವಿಚಾರವಾಗಿ ದೂರು ನೀಡಿದ್ರೆ ಯಾವುದೇ ಪ್ರಯೋಜನ ಇಲ್ಲ. 29 ಮಂದಿ ಕೆಲಸಗಾರರ ಜಾಗದಲ್ಲಿ ಇರೋದು ಇಬ್ಬರು ಮಾತ್ರ. ಹೀಗಿದ್ದಾಗ ಅಕ್ರಮ ತಡೆಗಟ್ಟಲು ಹೇಗೆ ಸಾಧ್ಯ ಅಂತಿದ್ದಾರೆ ಎಂದು ರವಿ ಪಬ್ಲಿಕ್ ಟಿವಿಗೆ ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv