Tag: Naveen Reddy

  • ‘ಅಕಿರ’ ನಿರ್ದೇಶಕನ ಹೊಸ ಕನಸಿಗೆ ಮೆಲೋಡಿ ಸಾಂಗ್ ಸಾಥ್

    ‘ಅಕಿರ’ ನಿರ್ದೇಶಕನ ಹೊಸ ಕನಸಿಗೆ ಮೆಲೋಡಿ ಸಾಂಗ್ ಸಾಥ್

    ವ್ ಸ್ಟೋರಿ ಕಥೆ ಹೇಳಿ ಗೆದ್ದಿರುವ ನಿರ್ದೇಶಕ ನವೀನ್ ರೆಡ್ಡಿ (Naveen Reddy) ಹೊಸ ಕನಸು ‘ಮೂರನೇ ಕೃಷ್ಣಪ್ಪ’.. ಅಕಿರ ಹಾಗೂ ರಿಲ್ಯಾಕ್ಸ್ ಸತ್ಯ ಸಿನಿಮಾ ಮೂಲಕ ಕನ್ನಡ ಚಿತ್ರರಂಗದಲ್ಲಿ ಭರವಸೆ ಮೂಡಿಸಿರುವ ಅವರೀಗ ವಿಭಿನ್ನ ಶೀರ್ಷಿಕೆಯೊಂದಿಗೆ ಆನೇಕಲ್ ಭಾಗದ ಕಥೆ ಹೇಳೋದಿಕ್ಕೆ ನಿಮ್ಮ ಮುಂದೆ ಬರ್ತಿದ್ದಾರೆ. ಸದ್ದಿಲ್ಲದೇ ಮೂರನೇ ಕೃಷ್ಣಪ್ಪ ಸಿನಿಮಾದ ಶೂಟಿಂಗ್ ಕಂಪ್ಲೀಟ್ ಆಗಿದ್ದು, ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಚಿತ್ರತಂಡ ಬ್ಯುಸಿಯಾಗಿದೆ.

    ಮೂರನೇ ಕೃಷ್ಣಪ್ಪ (Murane Krishnappa) ಬಳಗವೀಗ ಪ್ರಮೋಷನ್ ಪಡಸಾಲೆಗಿಳಿದಿದೆ. ಅದರ ಮೊದಲ ಭಾಗವಾಗಿ ಕಳೆದ ವಾರವಷ್ಟೇ ಟೈಟಲ್ ಟೀಸರ್ ರಿಲೀಸ್ ಮಾಡಿ ಥ್ರಿಲ್ ಹೆಚ್ಚಿಸಿತ್ತು. ಇದೀಗ ಮೂರನೇ ಕೃಷ್ಣಪ್ಪ ಸಿನಿಮಾದ ಮೆಲೋಡಿ ಮಸ್ತಿಯೊಂದು ಅನಾವರಣಗೊಂಡಿದೆ. ಆನಂದ್ ಆಡಿಯೋ ಯೂಟ್ಯೂಬ್ ನಲ್ಲಿ ಬಗೆಹರಿಯದ ಒಗಟುಗಳು ಎಂಬ ಸಾಹಿತ್ಯದ ಹಾಡು (Song) ಬಿಡುಗಡೆಯಾಗಿದೆ. ಸುಪ್ರಿತ್ ಶರ್ಮಾ ಎಸ್ ಈ ಹಾಡಿಗೆ ಸಾಹಿತ್ಯ ನೀಡುವುದರ ಜೊತೆಗೆ ಸಂಗೀತ ಕೂಡ ಒದಗಿಸಿದ್ದಾರೆ. ನಿಹಾಲ್ ಟೌರೊ ಬಗೆಹರಿಯದ ಒಗಟುಗಳು ಗೀತೆಗೆ ಧ್ವನಿಯಾಗಿದ್ದಾರೆ.

    ರೆಡ್ ಡ್ರಾಗ್ಯನ್ ಫಿಲ್ಮಂಸ್ ಪ್ರೊಡಕ್ಷನ್ ಹೌಸ್ ಎರಡನೇ ಕೊಡುಗೆ ಮೂರನೇ ಕೃಷ್ಣಪ್ಪ. ಈ ಹಿಂದೆ ರಿಲ್ಯಾಕ್ಸ್ ಸತ್ಯ ಚಿತ್ರವನ್ನು ಇದೇ ಪ್ರೊಡಕ್ಷನ್ ನಡಿ ಮೋಹನ್ ರೆಡ್ಡಿ ಜಿ, ರವಿಶಂಕರ್ ನಿರ್ಮಿಸಿದ್ದರು. ಇದೀಗ ಇದೇ ಪ್ರೊಡಕ್ಷನ್ ಹೌಸ್ ನಡಿ ಇವರಿಬ್ಬರು ಮೂರನೇ ಕೃಷ್ಣಪ್ಪ ಸಿನಿಮಾಗೆ ಹಣ ಹಾಕಿದ್ದಾರೆ. ಆನೇಕಲ್ ಭಾಗದ ಭಾಷೆಯ ಸೊಬಗನ್ನು ಹೊತ್ತು ಬಂದಿರುವ ಈ ಚಿತ್ರದಲ್ಲಿ ಸಂಪತ್ ಮೈತ್ರೀಯಾ (Sampath Maitreya), ರಂಗಾಯಣ ರಘು ಮುಖ್ಯಭೂಮಿಕೆಯಲ್ಲಿ ನಟಿಸಿದ್ದು, ಶ್ರೀಪ್ರಿಯಾ ನಾಯಕಿಯಾಗಿ ಅಭಿನಯಿಸಿದ್ದಾರೆ. ಉಳಿದಂತೆ ತುಕಾಲಿ ಸಂತೋಷ್, ಉಗ್ರಂ ಮಂಜು ತಾರಾಬಳಗದಲ್ಲಿದ್ದಾರೆ.

    ಮೂರನೇ ಕೃಷ್ಣಪ್ಪ ಸಿನಿಮಾ ಆನಂದ್ ರಾಜವಿಕ್ರಮ್ ಸಂಗೀತ, ಶ್ರೀಕಾಂತ್ ಸಂಕಲನ, ಯೋಗಿ ಛಾಯಾಗ್ರಹಣವಿದೆ. ಫ್ರೆಶ್ ಕಥೆಯೊಂದಿಗೆ ಸಿನಿಮಾಪ್ರೇಮಿಗಳ ಎದುರು ಬರ್ತಿರುವ ನವೀನ್ ರೆಡ್ಡಿ ತಮ್ಮ ಹೊಸ ಪ್ರಯೋಗವನ್ನು ಜನವರಿ ಅಥವಾ ಫೆಬ್ರವರಿ ತಿಂಗಳಂದು ಪ್ರೇಕ್ಷಕ ಎದುರು ತರಲು ಯೋಜನೆ ಹಾಕಿಕೊಂಡಿದ್ದಾರೆ.

  • ಮಾದೇವನಿಗೆ ಸೋನಲ್ ಮೊಂಥೆರೋ ಜೋಡಿ

    ಮಾದೇವನಿಗೆ ಸೋನಲ್ ಮೊಂಥೆರೋ ಜೋಡಿ

    ರಿ ಟೈಗರ್ ವಿನೋದ್ ಪ್ರಭಾಕರ್ ಭತ್ತಳಿಕೆಯ ಬಹುನಿರೀಕ್ಷಿತ ಸಿನಿಮಾಗಳಲ್ಲೊಂದು ಮಾದೇವ. ವಿಭಿನ್ನ ಕಥಾಹಂದರ ಹೊಂದಿರುವ ಈ ಸಿನಿಮಾ ಅಂಗಳಕ್ಕೀಗ ಪಂಚತಂತ್ರ ಬ್ಯೂಟಿ ಸೋನಲ್ ಮೊಂಥೆರೋ ಎಂಟ್ರಿ ಕೊಟ್ಟಿದ್ದಾರೆ. ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಸೋನಲ್ ಈ ಚಿತ್ರದಲ್ಲಿ ವಿನೋದ್ ಪ್ರಭಾಕರ್ ಗೆ ಜೋಡಿಯಾಗಿ ನಟಿಸಲಿದ್ದಾರೆ.

    ವಿನೋದ್ ಹಾಗೂ ಸೋನಲ್ ಈ ಹಿಂದೆ ರಾಬರ್ಟ್ ಸಿನಿಮಾದಲ್ಲಿ ತನು-ರಾಘವ ಎಂಬ ಪಾತ್ರದ ಮೂಲಕ ಪ್ರೇಕ್ಷಕರ ಮನೆ ಗೆದ್ದಿದ್ದರು. ಇದೀಗ ಮತ್ತೊಮ್ಮೆ ಈ ಜೋಡಿ ಒಂದಾಗಿರುವುದು ಅಭಿಮಾನಿಗಳಲ್ಲಿ ನಿರೀಕ್ಷೆ ಹೆಚ್ಚಿಸಿದೆ. ಖಾಕಿ ಸಿನಿಮಾ ಸಾರಥಿ ನವೀನ್ ಬಿ ರೆಡ್ಡಿ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಮಾದೇವ ಚಿತ್ರದಲ್ಲಿ ಸೋನಲ್ 80ರ ದಶಕದ ಮಧ್ಯಮವರ್ಗದ ಹುಡುಗಿಯಾಗಿ ಬಣ್ಣ ಹಚ್ಚಲಿದ್ದಾರೆ. ಇದನ್ನೂ ಓದಿ:ನೇಪಾಳದಲ್ಲೂ ರಿಲೀಸ್ ಆಗಲಿದೆ ವಿಕ್ರಾಂತ್ ರೋಣ: 27 ದೇಶಗಳಲ್ಲಿ ಪ್ರಿವ್ಯೂ ಶೋ

    80 ದಶಕದ ಎಮೋಷನಲ್ ಹಾಗೂ ಮಾಸ್ ಎಲಿಮೆಂಟ್ ಕಂಟೆಂಟ್ ಹೊಂದಿರುವ ಮಾದೇವ ಸಿನಿಮಾ ರೈಲು ಮತ್ತು ಜೈಲಿನ ಬ್ಯಾಕ್ ಡ್ರಾಪ್ ನಲ್ಲಿ ನಡೆಯಲಿದೆ. ವಿನೋದ್ ಪ್ರಭಾಕರ್ ಈ ಹಿಂದಿನ ಪಾತ್ರಗಳಿಗಿಂತ ಈ ಚಿತ್ರದಲ್ಲಿ ಡಿಫರೆಂಟ್ ಆಗಿ ಕಾಣಿಸಿಕೊಳ್ಳಲಿದ್ದಾರೆ. ಶಿವಮೊಗ್ಗ, ಧಾರವಾಡ ಮತ್ತು ಹೈದರಾಬಾದ್‌ನಲ್ಲಿ ಸಿನಿಮಾದ ಶೂಟಿಂಗ್ ನಡೆಯಲಿದೆ. ಹಿರಿಯ ನಟಿ ಶ್ರುತಿ, ಪೋಷಕ ಕಲಾವಿದ ಅಚ್ಯುತ್ ಕುಮಾರ್, ಕಾಕ್ರೋಚ್ ಸುಧಿ ಸೇರಿದಂತೆ ಹಲವರು ತಾರಾಬಳಗದಲ್ಲಿದ್ದು, ಬಾಲಕೃಷ್ಣ ತೋಟ ಕ್ಯಾಮೆರಾ ಕೈಚಳಕ, ಪ್ರದ್ಯೋಥನ್ ಮ್ಯೂಸಿಕ್ ಪುಳಕ ಸಿನಿಮಾಕ್ಕಿದೆ. ಗಾಯತ್ರಿ ರಾಜೇಶ್ ಹಾಗೂ ಲವ್ ಗುರು ಸುಮನ್ ನಿರ್ಮಾಣದ ಮಾದೇವ ಸಿನಿಮಾದ ಶೂಟಿಂಗ್ ಭರದಿಂದ ಸಾಗ್ತಿದೆ.

    Live Tv
    [brid partner=56869869 player=32851 video=960834 autoplay=true]

  • ‘ಮಾದೇವ’ನಾಗಿ ಮರಿ ಯಂಗ್ ಟೈಗರ್ ವಿನೋದ್ ಪ್ರಭಾಕರ್

    ‘ಮಾದೇವ’ನಾಗಿ ಮರಿ ಯಂಗ್ ಟೈಗರ್ ವಿನೋದ್ ಪ್ರಭಾಕರ್

    ಮ್ಮದೇ ಬ್ಯಾನರ್ ನ ಸಿನಿಮಾದಲ್ಲಿ ನಟಿಸುತ್ತಿರುವ ಮರಿ ಯಂಗ್ ಟೈಗರ್ ವಿನೋದ್ ಪ್ರಭಾಕರ್ ಇದೀಗ ಹೊಸ ಸಿನಿಮಾವೊಂದನ್ನು ಒಪ್ಪಿಕೊಂಡಿದ್ದಾರೆ. ಈ ಸಿನಿಮಾಗೆ ಮಾದೇವ ಎಂದು ಹೆಸರಿಡಲಾಗಿದೆ. ಇದೊಂದು ಮಾಸ್ ಸಿನಿಮಾವಾಗಿದ್ದು, ಈ ಸಿನಿಮಾದಲ್ಲಿ ಅವರು ಮಾದೇವನಾಗಿ ಅಬ್ಬರಿಸಲಿದ್ದಾರೆ. ಈ ಸಿನಿಮಾದ ಪೋಸ್ಟರ್ ಇಂದು ರಿಲೀಸ್ ಆಗಿದೆ.

    ಗಾಯತ್ರಿ ಆರ್ ಹಳಲೆ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದು, ನವೀನ್ ರೆಡ್ಡಿ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬರಲಿದೆ. ಮಾಸ್ ಸಿನಿಮಾಗಳಿಗೆ ವಿನೋದ್ ಪ್ರಭಾಕರ್ ಹೇಳಿ ಮಾಡಿಸಿದ ನಟ. ಅವರಿಗಾಗಿಯೇ ಈ ರೀತಿಯ ಕಥೆಯನ್ನು ಬರೆದಿದ್ದಾರಂತೆ ನಿರ್ದೇಶಕ ನವೀನ್ ರೆಡ್ಡಿ. ಸದ್ಯದಲ್ಲೇ ಸಿನಿಮಾದ ಶೂಟಿಂಗ್ ಕೂಡ ಶುರುವಾಗಲಿದೆಯಂತೆ. ಇದನ್ನೂ ಓದಿ: ರಾಧಿಕಾ ಪಂಡಿತ್ ತಂದೆ -ತಾಯಿಯ ವಿವಾಹ ವಾರ್ಷಿಕೋತ್ಸವ ಸಂಭ್ರಮ

    ಮಾದೇವ ಶಿವನ ಮತ್ತೊಂದು ಹೆಸರು. ಹಾಗಾಗಿ ಉಗ್ರ ಸ್ವರೂಪಿಯ ಹೆಸರಿನಲ್ಲಿ ಈ ಸಿನಿಮಾ ತಯಾರಾಗಲಿದೆಯಂತೆ. ಪಾತ್ರದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಸಿನಿಮಾ ಟೀಮ್ ಬಹಿರಂಗ ಪಡಿಸದೇ ಇದ್ದರೂ, ಈ ಸಿನಿಮಾದಲ್ಲಿ ವಿನೋದ್ ರಗಡ್ ಲುಕ್ ನಲ್ಲಿ ಕಾಣಿಸಿಕೊಳ್ಳಲಿದ್ದಾರಂತೆ. ಈವರೆಗೂ ಮಾಡದೇ ಇರುವಂತಹ ಪಾತ್ರ ಅದಾಗಿದೆ ಎಂದಿದ್ದಾರೆ.

    Live Tv

  • ಕಾಮನ್‍ಮ್ಯಾನ್‍ನನ್ನು ಎಚ್ಚರಿಸಿದ ಖಾಕಿ ಸಿನಿಮಾ

    ಕಾಮನ್‍ಮ್ಯಾನ್‍ನನ್ನು ಎಚ್ಚರಿಸಿದ ಖಾಕಿ ಸಿನಿಮಾ

    ಮಾಸ್ ಟೀಸರ್, ಟ್ರೈಸರ್ ಮೂಲಕ ಸಖತ್ ಕ್ರೇಜ್ ಕ್ರಿಯೇಟ್ ಮಾಡಿದ್ದ ಯುವ ಸಾಮ್ರಾಟ್ ಚಿರು ಸರ್ಜಾ ಅಭಿನುಯದ ‘ಖಾಕಿ’ ಚಿತ್ರ ಇಂದು ರಾಜ್ಯಾದ್ಯಂತ ಯಶಸ್ವಿಯಾಗಿ ಬಿಡುಗಡೆಯಾಗಿದೆ. ಮೊದಲ ದಿನ ಚಿತ್ರಕ್ಕೆ ಹೌಸ್ ಫುಲ್ ರೆಸ್ಪಾನ್ಸ್ ಸಿಕ್ಕಿದ್ದು ಚಿರು ಮಾಸ್ ಅಭಿನಯಕ್ಕೆ ಸಿನಿರಸಿಕರು ಫಿದಾ ಆಗಿದ್ದಾರೆ.

    ನವೀನ್ ರೆಡ್ಡಿ ಮೊದಲ ಬಾರಿ ಆ್ಯಆಕ್ಷನ್ ಕಟ್ ಹೇಳಿರುವ ಈ ಚಿತ್ರ ಯುವ ಸಾಮ್ರಾಟ್‍ಗೆ ಹೊಸ ಇಮೇಜ್ ತಂದುಕೊಡೋದ್ರಲ್ಲಿ ಡೌಟೇ ಇಲ್ಲ. ಆ ರೀತಿ ತಮ್ಮ ಅಭಿನಯವನ್ನು ತೆರೆ ಮೇಲೆ ತೋರಿದ್ದಾರೆ ಚಿರು ಸರ್ಜಾ. ರೆಗ್ಯುಲರ್ ಆಗಿ ಶುರುವಾಗೋ ಸಿನಿಮಾದಲ್ಲಿ ಪ್ಯಾರಲಲ್
    ಪೊಲೀಸ್ ಎಂಬ ಡಿಫರೆಂಟ್ ಕನ್ಸೆಪ್ಟ್ ತರೋ ಮೂಲಕ ನಿರ್ದೇಶಕ ನವೀನ್ ರೆಡ್ಡಿ ಗೆದ್ದಿದ್ದಾರೆ. ಎಲ್ಲೂ ಬೋರ್ ಹೊಡಿಸದೆ ಅಚ್ಚುಕಟ್ಟಾಗಿ ಚಿತ್ರಕಥೆ ಹೆಣೆದಿದ್ದಾರೆ ನಿರ್ದೇಶಕರು.

    ಕಾಮನ್‍ಮ್ಯಾನ್ ಪವರ್ ಏನು ಅನ್ನೋದನ್ನ ನಾಯಕ ನಟನ ಪಾತ್ರದ ಮೂಲಕ ಮನದಟ್ಟು ಮಾಡುವ ಮೂಲಕ ಪ್ರತಿಯೊಬ್ಬರೂ ವ್ಯವಸ್ಯೆಯಲ್ಲಾಗುವ ಅವ್ಯವಸ್ಥೆ ವಿರುದ್ಧ ಹೋರಾಟಕ್ಕೆ ನಿಂತ್ರೆ ಸಮಾಜದಲ್ಲಿ ಎಲ್ಲವನ್ನು ಸರಿದಾರಿಗೆ ತರಬಹುದು ಅನ್ನೋದನ್ನ ಖಾಕಿ ಚಿತ್ರ ಕಮರ್ಶಿಯಲ್ ಎಳೆಯಲ್ಲಿ ಹೇಳ ಹೊರಟಿದೆ. ಚಿರು ಆ ಪಾತ್ರವನ್ನು ಅಷ್ಟೇ ಅಚ್ಚುಕಟ್ಟಾಗಿ ನಿಭಾಯಿಸಿದ್ದಾರೆ.

    ಮಾಸ್ ಡೈಲಾಗ್‍ಗಳು ಶಿಳ್ಳೆ ಚಪ್ಪಾಳೆ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿವೆ. ನಾಯಕಿ ಪಾತ್ರದಲ್ಲಿ ನಟಿಸಿರುವ ತಾನ್ಯ ಹೋಪ್ ನಾಯಕನಿಗೆ ಪ್ರತಿಹಂತದಲ್ಲಿ ಸಪೋರ್ಟ್ ಮಾಡುವ ಕ್ಯಾರೆಕ್ಟರ್ ಜೊತೆ ನಾಯಕನ ಮನದರಿಸಿಯಾಗಿ ಮಿಂಚಿದ್ದಾರೆ. ಛಾಯಾಸಿಂಗ್, ದೇವ್ ಗಿಲ್, ಶಿವಮಣಿ ತಮ್ಮ ಅಮೋಘ ಅಭಿನಯದಿಂದ ಮನಸೆಳೆಯುತ್ತಾರೆ. ಹಾಡುಗಳು ಚಿತ್ರದ ಪ್ಲಸ್ ಪಾಯಿಂಟ್ ಆಗಿದೆ. ಒಟ್ಟಿನಲ್ಲಿ ಖಾಕಿ ಚಿತ್ರ ಒಂದೊಳ್ಳೆ ಸಂದೇಶದ ಜತೆ ಚಿರು ಅಭಿಮಾನಿಗಳಿಗೆ ಭರಪೂರ ಮನರಂಜನೆಯನ್ನು ನೀಡುತ್ತೆ.

    ಚಿತ್ರ: ಖಾಕಿ
    ನಿರ್ದೇಶಕ: ನವೀನ್ ರೆಡ್ಡಿ.ಬಿ
    ಸಂಗೀತ: ರಿತ್ವಿಕ್ ಮುರಳೀಧರ್
    ಛಾಯಾಗ್ರಹಣ: ಬಾಲಾ
    ನಿರ್ಮಾಪಕ: ತರುಣ್ ಶಿವಪ್ಪ
    ತಾರಾಬಳ: ಚಿರಂಜೀವಿ ಸರ್ಜಾ, ತಾನ್ಯಾ ಹೋಪ್, ಛಾಯಾ ಸಿಂಗ್, ದೇವ್ ಗಿಲ್, ಶಿವಮಣಿ,
    ಇತರರು.

    ರೇಟಿಂಗ್: 3.5/5

  • ‘ಖಾಕಿ’ಯಲ್ಲಿ ಚಿರು ಕಾಮನ್ ಮ್ಯಾನ್!

    ‘ಖಾಕಿ’ಯಲ್ಲಿ ಚಿರು ಕಾಮನ್ ಮ್ಯಾನ್!

    ರುಣ್ ಶಿವಪ್ಪ ಅವರು ನಿರ್ಮಿಸುತ್ತಿರುವ, ಚಿರಂಜೀವಿ ಸರ್ಜಾ ನಾಯಕರಾಗಿ ನಟಿಸುತ್ತಿರುವ `ಖಾಕಿ’ ತೆರೆಗೆ ಬರಲು ಸಿದ್ಧವಾಗಿದೆ. ಸಿನಿಮಾ ಸೆಟ್ಟೇರಿದಾಗಿನಿಂದ ಪೋಸ್ಟರ್ ನಿಂದಲೇ ಸದ್ದು ಮಾಡ್ತಿದ್ದ ಸಿನಿಮಾದ ಟೀಸರ್ ಹಾಗೂ ವಿಡಿಯೋ ಸಾಂಗ್ ಮೂಲಕವೂ ಜನಮನ ಗೆದ್ದಿತ್ತು. ಇದೀಗ ಸಿನಿಮಾದ ಕಂಪ್ಲೀಟ್ ಕೆಲಸ ಮುಗಿದಿದ್ದು, ಇದೇ 24 ರಂದು ತೆರೆಗೆ ಅಪ್ಪಳಿಸಲಿದೆ.

    ಬ್ಯಾಕ್ ಟು ಬ್ಯಾಕ್ ಆ್ಯಕ್ಷನ್ ಸಿನಿಮಾಗಳ ಮೂಲಕ ಕಾಣಿಸುತ್ತಿರುವ ಚಿರಂಜೀವಿ ಸರ್ಜಾ, ‘ಖಾಕಿ’ ಸಿನಿಮಾದಲ್ಲಿ ತನ್ನ ಖದರ್ ಲುಕ್ ನಲ್ಲಿ ಮಿಂಚ್ತಿದ್ದಾರೆ. ಇದೊಂದು ಪಕ್ಕಾ ಕಮರ್ಷಿಯಲ್ ಸಿನಿಮಾವಾಗಿದೆ. ಖಾಕಿ ಸಿನಿಮಾಗೆ ದಿ ಪವರ್ ಆಫ್ ಕಾಮನ್ ಮ್ಯಾನ್ ಅನ್ನೋ ಟ್ಯಾಗ್ ಲೈನ್ ಇಡಲಾಗಿದೆ. ಸಿನಿಮಾದಲ್ಲಿ ಚಿರಂಜೀವಿ ಸರ್ಜಾ, ಕೇಬಲ್ ಹುಡುಗನಾಗಿ ಕಾಣಿಸಿಕೊಂಡಿದ್ದಾರೆ. ಚಿತ್ರದಲ್ಲಿ ಮಾಸ್ ಅಂಶಗಳು ಹೈಲೈಟ್ ಆಗಿದ್ದು ‘ಖಾಕಿ’ ತೀರಾ ಭಿನ್ನವಾಗಿದೆ ಅಂತಾನೆ ಹೇಳಲಾಗ್ತಿದೆ. ಇದನ್ನೂ ಓದಿ: ‘ಖಾಕಿ’ಯಲ್ಲಿ ಅಬ್ಬರಿಸಿದ ಚಿರಂಜೀವಿ ಸರ್ಜಾ!

    ‘ಖಾಕಿ’ ಚಿತ್ರದ ಮತ್ತೊಂದು ವಿಶೇಷತೆ ಅಂದ್ರೆ ಚಿತ್ರಕ್ಕೆ ಮಾಸ್ ಟೈಟಲ್ ಇದ್ದರೂ ಕೂಡ, ಚಿತ್ರದಲ್ಲಿ ಚಿರು ಸರ್ಜಾ ಖಾಕಿ ತೊಟ್ಟಿಲ್ಲ. ಬದಲಿಗೆ ಕಾಮನ್ ಮ್ಯಾನ್ ಆಗಿಯೇ ದರ್ಶನ ಕೊಟ್ಟಿದ್ದಾರೆ. ನವೀನ್ ರೆಡ್ಡಿ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರಕ್ಕೆ ರಿತ್ವಿಕ್ ಸಂಗೀತ ನೀಡಿದ್ದಾರೆ. ಬಾಲಾ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ವಿನೋದ್ ಸಾಹಸ ನಿರ್ದೇಶನ ಹಾಗೂ ಭೂಷಣ್, ಧನು ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ. ಚಿರಂಜೀವಿ ಸರ್ಜಾಗೆ ನಾಯಕಿಯಾಗಿ ತಾನ್ಯ ಹೋಪ್ ನಟಿಸಿದ್ದಾರೆ. ದೇವ್ ಗಿಲ್, ಶಿವಮಣಿ, ಶಶಿ, ನವ್ಯ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.