Tag: Navodaya Self Help Group

  • ನವೋದಯ ಸ್ವಸಹಾಯ ಗುಂಪುಗಳ ರಜತ ಸಂಭ್ರಮದ ಸಮಾವೇಶಕ್ಕೆ ಸಿದ್ಧತೆ ಪೂರ್ಣ: ಡಾ. ಎಂ.ಎನ್.ರಾಜೇಂದ್ರ ಕುಮಾರ್

    ನವೋದಯ ಸ್ವಸಹಾಯ ಗುಂಪುಗಳ ರಜತ ಸಂಭ್ರಮದ ಸಮಾವೇಶಕ್ಕೆ ಸಿದ್ಧತೆ ಪೂರ್ಣ: ಡಾ. ಎಂ.ಎನ್.ರಾಜೇಂದ್ರ ಕುಮಾರ್

    – ಒಂದೂವರೆ ಲಕ್ಷ ಪ್ರತಿನಿಧಿಗಳ ಭಾಗಿ ನಿರೀಕ್ಷೆ

    ಮಂಗಳೂರು: ನಗರದ ಬಂಗ್ರಕೂಳೂರಿನ ಗೋಲ್ಡ್ ಫಿಂಚ್ ಸಿಟಿಯಲ್ಲಿ ಮೇ 10 ರಂದು ನಡೆಯಲಿರುವ ನವೋದಯ ಸ್ವಸಹಾಯ ಗುಂಪುಗಳ 25 ನೇ ವರ್ಷದ ಅಂಗವಾಗಿ ನಡೆಯುವ ಸಮಾವೇಶ ‘ರಜತ ಸಂಭ್ರಮ’ ರಾಜ್ಯದ ಐತಿಹಾಸಿಕ ಸಮಾವೇಶವಾಗಲಿದೆ. ಸಮಾವೇಶದಲ್ಲಿ ಸುಮಾರು 1.5 ಲಕ್ಷಕ್ಕೂ ಮಿಕ್ಕಿ ಮಹಿಳೆಯರು ನೀಲಿ ಬಣ್ಣದ ಸಮವಸ್ತ್ರದಲ್ಲಿ ಭಾಗವಹಿಸಲಿರುವುದು ರಾಜ್ಯದಲ್ಲಿಯೇ ಪ್ರಥಮ. ಈ ಹಿನ್ನೆಲೆಯಲ್ಲಿ ಸಿದ್ಧತೆಗಳು ಪೂರ್ಣಗೊಂಡಿದೆ ಎಂದು ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ಸಂಸ್ಥಾಪಕ ಡಾ. ಎಂ.ಎನ್. ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.

    ಮಂಗಳೂರಿನ ಬಂಗ್ರಕೂಳೂರಿನ ಗೋಲ್ಡ್ ಪಿಂಚ್ ಸಿಟಿಯಲ್ಲಿ ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ವತಿಯಿಂದ ಹಮ್ಮಿಕೊಂಡ ಸುದ್ದಿಗೋಷ್ಠಿಯನ್ನುದ್ದೇಶಿಸಿ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಮಾತನಾಡಿ, ಈ ಸಮಾವೇಶ ಮಹಿಳಾ ಸಬಲೀಕರಣ, ಸಶಕ್ತತೆಯ ಹಿನ್ನೆಲೆಯಲ್ಲಿ ಇತರರಿಗೂ ಮಾದರಿ ಸಮಾವೇಶ ಆಗಬೇಕು ಎನ್ನುವುದು ನಮ್ಮ ಆಶಯ. ಈ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ವಿಧಾನಸಭೆಯ ಸಭಾಧ್ಯಕ್ಷರು ಹಾಗೂ ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕ ಯು.ಟಿ. ಖಾದರ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮೊದಲಾದವರು ಆಗಮಿಸಲಿದ್ದಾರೆ. ಇದನ್ನೂ ಓದಿ: ನವೋದಯ ರಜತ ಸಂಭ್ರಮ – ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ ಭಾಗಿ: ರಾಜೇಂದ್ರ ಕುಮಾರ್

    ನವೋದಯ ಸ್ವಸಹಾಯ ಗುಂಪುಗಳು ಗ್ರಾಮೀಣ ಜನರ ಬದುಕಿನಲ್ಲಿ ಆರ್ಥಿಕ ಸ್ವಾವಲಂಬನೆಯನ್ನು ಮೂಡಿಸಿ ಪ್ರಜಾಪ್ರಭುತ್ವದ ತಳಹದಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಗ್ರಾಮಾಂತರ ಪ್ರದೇಶಗಳಲ್ಲಿ ಆರ್ಥಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಅಭಿವೃದ್ಧಿಯ ಜೊತೆಗೆ ಸಬಲೀಕರಣದ ಹಾದಿಯಲ್ಲಿ ಸಾಗುತ್ತಿದೆ. ಈ ಒಂದು ಉದಾತ್ತವಾದ ಉದ್ದೇಶವನ್ನಿಟ್ಟುಕೊಂಡು ನವೋದಯ ಸ್ವಸಹಾಯ ಗುಂಪುಗಳ ರಜತ ಸಂಭ್ರಮ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

    ಎಲ್ಲರನ್ನೂ ಒಳಗೊಳ್ಳುವ ಸಮಾವೇಶ- ನವೋದಯ ಸ್ವಸಹಾಯ ಸಂಘದಲ್ಲಿ ಜಾತಿ, ಮತ ಭೇದವಿಲ್ಲದೆ ಎಲ್ಲಾ ಜನರನ್ನು ಒಳಗೊಂಡ ಸಮಾವೇಶ ಎಂದು ಸಮಾವೇಶದ ಸಂಘಟಕರಾದ ದೇವಿ ಪ್ರಸಾದ್ ಶೆಟ್ಟಿ ತಿಳಿಸಿದ್ದಾರೆ. ಇದನ್ನೂ ಓದಿ: ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ – ರಾಜನಾಥ್ ಸಿಂಗ್ ಮಹತ್ವದ ಸುಳಿವು

    2000ನೇ ಇಸವಿಯ ಜನವರಿ 29ರಂದು ಕಾರ್ಕಳದಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಹಾಗೂ ಆಗಿನ ಸಹಕಾರ ಸಚಿವ ಡಿ.ಕೆ.ಶಿವಕುಮಾರ್ ಅವರಿಂದ ಉದ್ಘಾಟಿಸಲ್ಪಟ್ಟ ನವೋದಯ ಸ್ವಸಹಾಯ ಗುಂಪುಗಳ ಕಾರ್ಯ ವಿಸ್ತಾರವು ಇಂದು ರಾಜ್ಯದ 8 ಜಿಲ್ಲೆಗಳಿಗೆ ಪಸರಿಸಿದೆ. ಇದರಲ್ಲಿ ಸುಮಾರು 5ಲಕ್ಷಕ್ಕೂ ಹೆಚ್ಚು ಸದಸ್ಯರಿದ್ದು, ಮುಖ್ಯವಾಗಿ ಮಹಿಳೆಯರಿಗೆ ಸ್ವಾವಲಂಬಿ ಬದುಕು ಕಲ್ಪಿಸಿಕೊಟ್ಟಿದೆ. ನವೋದಯದ ರಜತ ಸಂಭ್ರಮವನ್ನು ದೇಶಕ್ಕೆ ಮಾದರಿಯಾಗಿ ಹಮ್ಮಿಕೊಳ್ಳುವ ಯೋಜನೆ ರೂಪಿಸಿ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ. ಬೆಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ., ಮಂಗಳೂರು ಇದರ ಅಧ್ಯಕ್ಷರು ಹಾಗೂ ನವೋದಯ ಗ್ರಾಮ ವಿಕಾಸ ಟ್ರಸ್ಟ್(ರಿ.) ಮಂಗಳೂರು ಇದರ ಸಂಸ್ಥಾಪಕರಾದ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಸಮಾರಂಭದ ಅಧ್ಯಕ್ಷತೆ ವಹಿಸಲಿರುವರು.

    ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಡಾ. ಡಿ.ವೀರೇಂದ್ರ ಹೆಗ್ಗಡೆ ಹಾಗೂ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಸಚಿವ ಕೆ.ಎನ್.ರಾಜಣ್ಣ, ಮಾಜಿ ಸಿಎಂ ಎಂ.ವೀರಪ್ಪ ಮೊಯ್ಲಿ, ಸಚಿವರಾದ ದಿನೇಶ್ ಗುಂಡೂರಾವ್, ಲಕ್ಷ್ಮೀ ಹೆಬ್ಬಾಳ್ಕರ್‌, ಶಿವಾನಂದ ಪಾಟೀಲ, ಆರ್.ಬಿ.ತಿಮ್ಮಾಪುರ ಅವರು ಭಾಗವಹಿಸಲಿದ್ದಾರೆ ಎಂದು ದೇವಿಪ್ರಸಾದ್ ತಿಳಿಸಿದ್ದಾರೆ.

    ಸುದ್ದಿಗೋಷ್ಠಿಯಲ್ಲಿ ಎಸ್‌ಸಿಡಿಸಿಸಿ ಬ್ಯಾಂಕ್‌ನ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ, ಬ್ಯಾಂಕ್ ನಿರ್ದೇಶಕರಾದ ಭಾಸ್ಕರ್.ಎಸ್. ಕೋಟ್ಯಾನ್, ಶಶಿಕುಮಾರ್ ರೈ ಬಿ.ದೇವಿ ಪ್ರಸಾದ್ ಶೆಟ್ಟಿ ಬೆಳಪು, ಎಂ. ವಾದಿರಾಜ ಶೆಟ್ಟಿ, ಎಸ್.ಬಿ.ರಾಜೇಶ್ ರಾವ್, ಕುಶಾಲಪ್ಪ ಗೌಡ, ಬ್ಯಾಂಕಿನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಗೋಪಾಲಕೃಷ್ಣ ಭಟ್ ಕೆ, ಜನವೋದಯ ಟ್ರಸ್ಟಿಗಳಾದ ಮೇಘರಾಜ್ ಆರ್. ಜೈನ್, ಸುನಿಲ್ ಕುಮಾರ್ ಬಜಗೋಳಿ, ಸ್ಕ್ಯಾಡ್ಸ್ ಅಧ್ಯಕ್ಷ ರವೀಂದ್ರ ಕಂಬಳಿ, ಉದ್ಯಮಿ ಪುಷ್ಪರಾಜ್ ಜೈನ್, ನವೋದಯ ಚ್ಯಾರಿಟಬಲ್ ಟ್ರಸ್ಟ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪೂರ್ಣಿಮಾ ಶೆಟ್ಟಿ ಉಪಸ್ಥಿತರಿದ್ದರು. ಇದನ್ನೂ ಓದಿ: ರಾಜ್ಯದ 17 ಅಣೆಕಟ್ಟುಗಳಲ್ಲಿ ಅಲರ್ಟ್ – ನಾರಾಯಣಪುರ ಡ್ಯಾಂಗೆ 42 ಪೊಲೀಸ್ ಸಿಬ್ಬಂದಿ ನಿಯೋಜನೆ

    * ಬಂಗ್ರಕೂಳೂರಿನ ಗೋಲ್ಡ್ ಪಿಂಚ್ ಸಿಟಿಯಲ್ಲಿ ಒಂದೂವರೆ ಲಕ್ಷ ಜನರು ಭಾಗವಹಿಸಬಹುದಾದ ಬೃಹತ್ ಸಭಾಂಗಣ ನಿರ್ಮಿಸಲಾಗಿದೆ.
    * 3 ಸಾವಿರ ಬಸ್ ಹಾಗೂ 750 ಕಾರ್‌ಗಳನ್ನು ವ್ಯವಸ್ಥೆ ಮಾಡಲಾಗಿದೆ.
    * ಊಟದ ವ್ಯವಸ್ಥೆಗಾಗಿ ಸ್ಥಳದಲ್ಲಿ 160 ಕೌಂಟರ್ ನಿರ್ಮಿಸಲಾಗಿದೆ.
    * ನವೋದಯ ಸ್ವ ಸಹಾಯ ಗುಂಪುಗಳ ವಸ್ತು ಪ್ರದರ್ಶನದ ವ್ಯವಸ್ಥೆ ಇರುತ್ತದೆ.
    * ಪಡುಬಿದ್ರೆ ಬಂಟರ ಸಭಾಂಗಣ, ವಾಮಂ ಜೂರು, ಬಂಟ್ವಾಳ ಬಂಟರ ಭವನ, ಯಶಸ್ವಿ ಹಾಲ್ ಪರಂಗಿಪೇಟೆಯಲ್ಲಿ ಸಮಾವೇಶಕ್ಕೆ ಆಗಮಿಸುವವರಿಗೆ ಆಹಾರದ ಪೊಟ್ಟಣ ನೀಡಲಾಗುವುದು ಎಂದು ದೇವಿ ಪ್ರಸಾದ್ ಶೆಟ್ಟಿ ಸಮಾವೇಶದ ಸಿದ್ಧತೆಯ ಬಗ್ಗೆ ವಿವರಿಸಿದರು.
    * ಬಂಗ್ರಕೂಳೂರಿನಲ್ಲಿ ಎಂ.ಎನ್.ಆರ್ ಪ್ರೊಡಕ್ಷನ್ಸ್ ಸಂಸ್ಥೆಯ ವತಿಯಿಂದ ಡಾ.ಎಂ.ಎನ್.ರಾಜೇಂದ್ರ ಕುಮಾರ್ ನಿರ್ಮಾಪಕರಾಗಿರುವ ವಿಜಯ ಕುಮಾರ್ ಕೊಡಿಯಾಲ ಬೈಲ್ ಅವರ ನಿರ್ದೇಶನದ ‘ಡಾಕ್ಟ್ರಾ ಭಟ್ರಾ’ ಹೆಸರಿನ ತುಳು ಚಲನಚಿತ್ರದ ಪೋಸ್ಟರನ್ನು ಡಾ‌.ಎಂ.ಎನ್.ರಾಜೇಂದ್ರ ಕುಮಾರ್ ಗುರುವಾರ ಬಿಡುಗಡೆ ಗೊಳಿಸಿದರು. ಈ ಸಂದರ್ಭದಲ್ಲಿ ನಿರ್ದೇಶಕ ವಿಜಯ ಕುಮಾರ್ ಕೊಡಿಯಾಲ ಬೈಲ್ ಉಪಸ್ಥಿತರಿದ್ದರು.

  • ನವೋದಯ ರಜತ ಸಂಭ್ರಮ – ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ ಭಾಗಿ: ರಾಜೇಂದ್ರ ಕುಮಾರ್

    ನವೋದಯ ರಜತ ಸಂಭ್ರಮ – ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ ಭಾಗಿ: ರಾಜೇಂದ್ರ ಕುಮಾರ್

    ಮಂಗಳೂರು: ನವೋದಯ ಗ್ರಾಮ ವಿಕಾಸ ಟ್ರಸ್ಟ್ ಪ್ರವರ್ತಿತ ನವೋದಯ ಸ್ವಸಹಾಯ ಗುಂಪುಗಳ ಸ್ಥಾಪನೆಯ ರಜತ ಮಹೋತ್ಸವ ಸಮಾರಂಭ `ನವೋದಯ ರಜತ ಸಂಭ್ರಮ’ ಮೇ 10ರಂದು ನಗರದ ಬಂಗ್ರಕೂಳೂರಿನ ಗೋಲ್ಡ್ ಫಿಂಚ್ ಸಿಟಿಯಲ್ಲಿ ನಡೆಯಲಿದ್ದು, 1.5 ಲಕ್ಷ ಮಂದಿ ನೀಲಿ ಸಮವಸ್ತ್ರ ಧರಿಸಿ ಪಾಲ್ಗೊಳ್ಳುವ ಮೂಲಕ ಹೊಸ ದಾಖಲೆ ಸೃಷ್ಟಿಯಾಗಲಿದೆ ಎಂದು ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ, ನವೋದಯ ಗ್ರಾಮ ವಿಕಾಸ ಟ್ರಸ್ಟ್ ಸಂಸ್ಥಾಪಕ ಡಾ.ಎಂ.ಎನ್.ರಾಜೇಂದ್ರ ಕುಮಾರ್(Dr M N Rajendra Kumar) ತಿಳಿಸಿದ್ದಾರೆ.

    ಮಂಗಳೂರಿನಲ್ಲಿ(Mangaluru) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನವೋದಯ ಸ್ವಸಹಾಯ ಗುಂಪುಗಳು ಗ್ರಾಮೀಣ ಜನರ ಬದುಕಿನಲ್ಲಿ ಆರ್ಥಿಕ ಸ್ವಾವಲಂಬನೆಯನ್ನು ಮೂಡಿಸಿ ಪ್ರಜಾಪ್ರಭುತ್ವದ ತಳಹದಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಸಂಘಟನೆ ಹಾಗೂ ಜನಜಾಗೃತಿ ಮೂಲಕ ಜನಸೇವೆಯಲ್ಲಿ ತೊಡಗಿಸಿಕೊಂಡಿದೆ. ನಮ್ಮಿಂದ, ನಮಗಾಗಿ, ನಮಗೋಸ್ಕರ ಸ್ವಸಹಾಯ ಸಂಘಗಳು ಎಂಬ ಧೋರಣೆ ಹೊಂದಿರುವ ನವೋದಯ ಸ್ವಸಹಾಯ ಗುಂಪುಗಳು ಗ್ರಾಮಾಂತರ ಪ್ರದೇಶಗಳಲ್ಲಿ ಆರ್ಥಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಅಭಿವೃದ್ಧಿಯ ಜೊತೆಗೆ ಸಬಲೀಕರಣದ ಹಾದಿಯಲ್ಲಿ ದಾಪುಗಾಲು ಹಾಕುತ್ತಿದೆ. ಎಲ್ಲರೂ ಒಂದೇ ಎಂಬ ಸಮಾನತೆಯ ಮನೋಭಾವದೊಂದಿಗೆ ಸ್ವಸಹಾಯ ಗುಂಪಿನ 1.5 ಲಕ್ಷ ಸದಸ್ಯೆಯರು ಸಮವಸ್ತ್ರ ಧರಿಸಿ ಪಾಲ್ಗೊಳ್ಳುತ್ತಿದ್ದಾರೆ ಎಂದು ಹೇಳಿದರು.  ಇದನ್ನೂ ಓದಿ: ನೀವು ಮೇಕಪ್‌ ಪ್ರಿಯರೇ? – ದೇಹದ ಹಾರ್ಮೋನ್‌ಗಳ ಮೇಲೆ ನೇರ ಎಫೆಕ್ಟ್‌

    ಸಮಾವೇಶದ ಉದ್ಘಾಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ನೆರವೇರಿಸಲಿದ್ದಾರೆ. ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್(Thawar Chand Gehlot) ನವೋದಯ ರಜತ ಸಂಭ್ರಮದ ನೆನಪಿಗಾಗಿ ವಿಶಿಷ್ಟ ರೀತಿಯ ಲಾಂಛನವನ್ನು ಬಿಡುಗಡೆಗೊಳಿಸಲಿದ್ದಾರೆ. ನವೋದಯ ಸ್ವ-ಸಹಾಯ ಗುಂಪುಗಳ ಸದಸ್ಯರಿಗೆ ಸವಲತ್ತು ವಿತರಣೆಯನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್(Devendra Fadnavis) ಅವರು ನೆರವೇರಿಸಲಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ನನಗೆ ನಮ್ಮ ದೇಶ ಮುಖ್ಯ, ಅದಕ್ಕೆ ಯುದ್ಧಕ್ಕೆ ಹೋಗ್ತೀನಿ ಎಂದಿದ್ದೆ: ಸಚಿವ ಜಮೀರ್

    ರಜತ ಸಂಭ್ರಮದ `ಸಂತೃಪ್ತಿ’ ಸ್ಮರಣ ಸಂಚಿಕೆಯ ಬಿಡುಗಡೆಯನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್(D K Shivakumar) ನೆರವೇರಿಸಲಿದ್ದು, ರಜತ ಸಂಭ್ರಮ ಆಚರಣೆಯ ಸಂದರ್ಭ ಸಹಕಾರಿ ಧ್ವಜಾರೋಹಣವನ್ನು ರಾಜ್ಯ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ನೆರವೇರಿಸಲಿದ್ದಾರೆ. ಅತ್ಯುತ್ತಮ ನವೋದಯ ಗುಂಪುಗಳಿಗೆ ಪ್ರಶಸ್ತಿ ಪ್ರದಾನವನ್ನು ಕೇಂದ್ರ ಸರ್ಕಾರದ ಗ್ರಾಹಕ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ(Prahlad Joshi) ನೆರವೇರಿಸಲಿದ್ದಾರೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ನಗದು, ಟಾರ್ಚ್, ವೈದ್ಯಕೀಯ ಕಿಟ್ ಕೈಲ್ಲಿಟ್ಟುಕೊಳ್ಳಿ – ನಾಳೆ 244 ಜಿಲ್ಲೆಗಳಲ್ಲಿ ಮಾಕ್ ಡ್ರಿಲ್ ಹೇಗಿರಲಿದೆ?

    ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯ ಡಾ ಡಿ.ವೀರೇಂದ್ರ ಹೆಗ್ಗಡೆ ಹಾಗೂ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರು ಆಶೀರ್ವಚನ ನೀಡಲಿದ್ದಾರೆ ಎಂದು ಹೇಳಿದರು.

  • ನವೋದಯ ಸ್ವ-ಸಹಾಯ ಸಂಘಕ್ಕೆ ರಜತ ಸಂಭ್ರಮ: ಮೇ 10ಕ್ಕೆ ಮಂಗಳೂರಿನಲ್ಲಿ ಅದ್ಧೂರಿ ಕಾರ್ಯಕ್ರಮ

    ನವೋದಯ ಸ್ವ-ಸಹಾಯ ಸಂಘಕ್ಕೆ ರಜತ ಸಂಭ್ರಮ: ಮೇ 10ಕ್ಕೆ ಮಂಗಳೂರಿನಲ್ಲಿ ಅದ್ಧೂರಿ ಕಾರ್ಯಕ್ರಮ

    ಮಂಗಳೂರು: ನವೋದಯ ಸ್ವಸಹಾಯ ಗುಂಪುಗಳಿಗೆ (Navodaya Self Help Group) 25 ವರ್ಷ ಪೂರ್ಣಗೊಂಡ ಹಿನ್ನಲೆಯಲ್ಲಿ ರಜತ ಸಂಭ್ರಮ ಕಾರ್ಯಕ್ರಮ ಮೇ.೧೦ರಂದು ಅದ್ದೂರಿಯಾಗಿ ನಡೆಯುತ್ತದೆ ಎಂದು ಎಸ್‌ಸಿಡಿಸಿಸಿ ಬ್ಯಾಂಕ್‌ನ (SCCDCC Bank) ಅಧ್ಯಕ್ಷ, ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್‌ನ ಸಂಸ್ಥಾಪಕರಾದ ಡಾ.ಎಂ.ಎನ್.ರಾಜೇಂದ್ರ ಕುಮಾರ್ ತಿಳಿಸಿದರು.

    ಮಂಗಳೂರಿನಲ್ಲಿ (Mangaluru) ಪತ್ರಿಕಾಗೋಷ್ಠಿಯಲ್ಲಿ ನಡೆಸಿದ ಅವರು, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಪ್ರಮುಖ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಂಸದ, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ, ಪೇಜಾವರ ಮಠಾಧೀಶರು, ಸಹಕಾರಿ ಸಚಿವ ಕೆ.ಎನ್.ರಾಜಣ್ಣ, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಸಚಿವರಾದ ಶಿವಾನಂದ ಪಾಟೀಲ್, ಆರ್.ಬಿ.ತಿಮ್ಮಾಪುರ, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ, ಲಕ್ಷ್ಮಣ ಸವದಿ, ಜಿ.ಟಿ.ದೇವೇಗೌಡ, ಡಾ.ಉದಯ್ ಶಂಕರ್ ಆವಸ್ತಿ, ಮುರುಗೇಶ್ ನಿರಾಣಿ, ಸುನೀಲ್ ಕುಮಾರ್, ಶಿವರಾಮ್ ಹೆಬ್ಬಾರ್, ಸಂಸದರಾದ ಕ್ಯಾ.ಬ್ರಿಜೇಶ್ ಚೌಟ, ಕೋಟ ಶ್ರೀನಿವಾಸ್ ಪೂಜಾರಿ, ಉದ್ಯಮಿ ಡಾ.ಪ್ರಕಾಶ್ ಶೆಟ್ಟಿ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಪಹಲ್ಗಾಮ್‌ ದಾಳಿ – ದೆಹಲಿಯಲ್ಲಿ ಪಾಕ್‌ ಹೈಕಮಿಷನ್‌ನಿಂದ ಕೇಕ್‌ ಆರ್ಡರ್‌!

    ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದ ಸುಮಾರು 3,000 ಬಸ್‌ಗಳಲ್ಲಿ ಮಹಿಳೆಯರು ನಗರಕ್ಕೆ ಬರಲಿದ್ದು, ಅಂದು ದೇಶದಲ್ಲೇ ಮೊದಲ ಬಾರಿಗೆ ಒಂದೂವರೆ ಲಕ್ಷ ಮಂದಿ ಸಂಘದ ಮಹಿಳೆಯರು ನೀಲಿ ಬಣ್ಣದ ಸಮವಸ್ತ್ರದಲ್ಲಿ ಪಾಲ್ಗೊಳ್ಳಲಿದ್ದಾರೆ. ಪ್ರತೀ ಬಸ್‌ಗಳಲ್ಲಿ ಇಬ್ಬರು ಪುರುಷ ಸಿಬ್ಬಂದಿಯನ್ನು ನೇಮಕ ಮಾಡಲಾಗುವುದು. ತಿಂಡಿ, ಊಟೋಪಚಾರದ ವ್ಯವಸ್ಥೆ ಮಾಡಲಿದ್ದು, ಎಲ್ಲಾ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಲು ಶ್ರಮಿಸಲಾಗುವುದು ಎಂದರು. ಇದನ್ನೂ ಓದಿ: ಪಹಲ್ಗಾಮ್ ದಾಳಿ – ಭಾರತದಲ್ಲಿ ಪಾಕ್‌ನ X ಖಾತೆ ಬಂದ್‌

    ಪತ್ರಿಕಾಗೋಷ್ಠಿಯಲ್ಲಿ ಬ್ಯಾಂಕ್‌ನ ಟ್ರಸ್ಟಿಗಳಾದ ವಿನಯ ಕುಮಾರ್ ಸೂರಿಂಜೆ, ಭಾಸ್ಕರ್.ಎಸ್.ಕೋಟ್ಯಾನ್,ಶಶಿಕುಮಾರ್.ರೈ.ಬಿ, ದೇವಿಪ್ರಸಾದ್ ಶೆಟ್ಟಿ ಬೆಳಪು, ಕೆ.ಜೈರಾಜ್.ಬಿ ರೈ, ಮೋನಪ್ಪ ಶೆಟ್ಟಿ ಎಕ್ಕಾರು, ಬ್ಯಾಂಕ್‌ನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಗೋಪಾಲಕೃಷ್ಣ ಭಟ್.ಕೆ, ನವೋದಯ ಟ್ರಸ್ಟಿಗಳಾದ ಮೇಘರಾಜ್ ಆರ್.ಜೈನ್, ಸುನಿಲ್ ಕುಮಾರ್ ಬಜಗೋಳಿ, ಜಯಪ್ರಕಾಶ್ ತುಂಬೆ, ಟ್ರಸ್ಟ್ ಮುಖ್ಯಕಾರ್ಯ ನಿರ್ವಹಣಾಧಿಕಾರಿ ಪೂರ್ಣಿಮಾ ಶೆಟ್ಟಿ ಸೇರಿ ಹಲವರು ಉಪಸ್ಥಿತರಿದ್ದರು.