Tag: nawaz sharif

  • ಅಮೆರಿಕದಲ್ಲಿ ಅವಮಾನ – ಸಿಂಗ್‌ ಬೆಂಬಲಿಸಿ  ಪಾಕ್‌ ಪ್ರಧಾನಿ ಷರೀಫ್‌ ವಿರುದ್ಧ ಗುಡುಗಿದ್ದ ಮೋದಿ

    ಅಮೆರಿಕದಲ್ಲಿ ಅವಮಾನ – ಸಿಂಗ್‌ ಬೆಂಬಲಿಸಿ ಪಾಕ್‌ ಪ್ರಧಾನಿ ಷರೀಫ್‌ ವಿರುದ್ಧ ಗುಡುಗಿದ್ದ ಮೋದಿ

    ಪ್ರಧಾನಿ ಮನಮೋಹನ್‌ ಸಿಂಗ್‌ (Manmohan Singh) ಅವರನ್ನು ಹೀಯಾಳಿಸಿದ್ದಕ್ಕೆ 2013ರಲ್ಲಿ ಪಾಕಿಸ್ತಾನ (Pakistan) ಪ್ರಧಾನಿ ನವಾಜ್ ಷರೀಫ್ (Nawaz Sharif) ಅವರನ್ನು ನರೇಂದ್ರ ಮೋದಿ (Narendra Modi) ಸಾರ್ವಜನಿಕವಾಗಿಯೇ ಟೀಕಿಸಿದ್ದರು.

    ನ್ಯೂಯಾರ್ಕ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ಪತ್ರಕರ್ತರ ಜತೆಗೆ ನಡೆಸಿದ ಸಭೆಯಲ್ಲಿ ಷರೀಫ್ ಅವರು ಪ್ರಧಾನಿ ಸಿಂಗ್ ಅವರನ್ನು `ಹಳ್ಳಿಯ ಮಹಿಳೆ’ (ದೆಹತಿ ಔರತ್) ಎಂದು ಬಣ್ಣಿಸಿದ್ದರು ಎಂದು ವರದಿಯಾಗಿತ್ತು.

    ಮಾಧ್ಯಮಗಳಲ್ಲಿಈ ವರದಿ ಪ್ರಕಟವಾದ ಬಳಿಕ ಬಿಜೆಪಿಯ ವಿಕಾಸ್ ರ್‍ಯಾಲಿ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಮೋದಿ, ನನ್ನ ದೇಶದ ಪ್ರಧಾನಿಯನ್ನು ಹಳ್ಳಿಯ ಮಹಿಳೆ ಎಂದು ಸಂಬೋಧಿಸಲು ನಿಮಗೆ ಎಷ್ಟು ಧೈರ್ಯ ಎಂದು ಪ್ರಶ್ನಿಸಿದ್ದರು. ಇದನ್ನೂ ಓದಿ: ಪಾಕ್‌ ಪ್ರಧಾನಿ ಜೊತೆ ವಿಶ್ವಕಪ್‌ ವೀಕ್ಷಣೆ – ಇಂಡೋ -ಪಾಕ್‌ ಕ್ರಿಕೆಟ್‌ಗೆ ಮತ್ತೆ ಚಾಲನೆ ನೀಡಿದ್ದ ಸಿಂಗ್‌!

     

    ದೇಶದೊಳಗೆ ನಾನು ಮನಮೋಹನ್‌ ಸಿಂಗ್ ಅವರನ್ನು ವಿರೋಧಿಸಬಹುದು. ಆದರೆ ವಿದೇಶದಲ್ಲಿ ಅವರಿಗೆ ಆಗುವ ಅವಮಾನವನ್ನು ಸಹಿಸುವುದಿಲ್ಲ. 1.2 ಶತಕೋಟಿ ಜನಸಂಖ್ಯೆಯ ಈ ರಾಷ್ಟ್ರವು ತನ್ನ ಪ್ರಧಾನಿಯ ಅವಮಾನವನ್ನು ಎಂದಿಗೂ  ಸಹಿಸುವುದಿಲ್ಲ ಎಂದು ಆಕ್ರೋಶ ಹೊರ ಹಾಕಿದ್ದರು.

    ವಿದೇಶದಲ್ಲಿ ಭಾರತಕ್ಕೆ ಮಾಡುವ ಯಾವುದೇ ಅವಮಾನವನ್ನು ನಾವು ಸಹಿಸುವುದಿಲ್ಲ. ಇದೊಂದು ಗಂಭೀರ ವಿಷಯ ಎಂದು ಕಿಡಿಕಾರಿದ್ದರು. ಈ ಸಂರ್ಭದಲ್ಲಿ ಮೋದಿ ಗುಜರಾತ್‌ ಮುಖ್ಯಮಂತ್ರಿಯಾಗಿದ್ದರೂ ಬಿಜೆಪಿಯ ಪ್ರಧಾನಿ ಅಭ್ಯರ್ಥಿಯಾಗಿ ಬಿಂಬಿತವಾಗಿದ್ದರು.

     

  • ವಾಜಪೇಯಿ ಜೊತೆ ಸಹಿ ಹಾಕಿದ್ದ ಒಪ್ಪಂದವನ್ನು ನಾವು ಉಲ್ಲಂಘನೆ ಮಾಡಿದ್ದೆವು:  ತಪ್ಪೊಪ್ಪಿಕೊಂಡ ನವಾಜ್‌ ಷರೀಫ್‌

    ವಾಜಪೇಯಿ ಜೊತೆ ಸಹಿ ಹಾಕಿದ್ದ ಒಪ್ಪಂದವನ್ನು ನಾವು ಉಲ್ಲಂಘನೆ ಮಾಡಿದ್ದೆವು: ತಪ್ಪೊಪ್ಪಿಕೊಂಡ ನವಾಜ್‌ ಷರೀಫ್‌

    ಇಸ್ಲಾಮಾಬಾದ್‌: ಪಾಕಿಸ್ತಾನದ (Pakistan) ರಾಜಕಾರಣಿಗಳು ಭಾರತದ ಅಭಿವೃದ್ಧಿಯ ಬಗ್ಗೆ ಮೆಚ್ಚುಗೆ ಮಾತನಾಡುತ್ತಿದ್ದಂತೆ ಈಗ ಮಾಜಿ ಪ್ರಧಾನಿ ನವಾಜ್ ಷರೀಫ್ ಪಾಕಿಸ್ತಾನ ಕಾರ್ಗಿಲ್‌ ಯುದ್ಧ ಮಾಡಿದ್ದು ತಪ್ಪು ಎಂದು ಅಧಿಕೃತವಾಗಿ ಹೇಳಿದ್ದಾರೆ.

    ಭಾರತದ ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ (Atal Bihari Vajpayee ) ಜೊತೆ 1999 ರಲ್ಲಿ ಸಹಿ ಹಾಕಿದ್ದ ಒಪ್ಪಂದವನ್ನು ನಾವು ಉಲ್ಲಂಘನೆ ಮಾಡಿದ್ದೆವು ಎಂದು ನವಾಜ್ ಷರೀಫ್ (Nawaz Sharif) ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ.

    ಸುಪ್ರೀಂ ಕೋರ್ಟ್‌ 6 ವರ್ಷ ಅನರ್ಹಗೊಳಿಸಿದ ನಂತರ ಇಂದು ಲಾಹೋರ್‌ನಲ್ಲಿ (Lahore) ಪಾಕಿಸ್ತಾನ ಮುಸ್ಲಿಂ ಲೀಗ್‌-ನವಾಜ್‌ ಪಕ್ಷದ ಅಧ್ಯಕ್ಷರನ್ನಾಗಿ ನವಾಜ್ ಷರೀಫ್ ಅವರನ್ನು ಮರು ಆಯ್ಕೆ ಮಾಡಲಾಯಿತು.

    ಈ ವೇಳೆ ಅವರು ಮಾತನಾಡಿದ ಅವರು, ಮೇ 28, 1998 ರಂದು, ಪಾಕಿಸ್ತಾನವು ಐದು ಪರಮಾಣು ಪರೀಕ್ಷೆಗಳನ್ನು (Nuclear Test) ನಡೆಸಿತು. ಅದರ ನಂತರ ವಾಜಪೇಯಿ ಅವರು ಇಲ್ಲಿಗೆ ಬಂದು ನಮ್ಮೊಂದಿಗೆ ಒಪ್ಪಂದ ಮಾಡಿಕೊಂಡರು. ಆದರೆ ನಾವು ಆ ಒಪ್ಪಂದವನ್ನು ಉಲ್ಲಂಘಿಸಿ ಕಾರ್ಗಿಲ್‌ ಯುದ್ಧ (Kargil War) ಮಾಡಿದೆವು. ಇದು ನಾವು ಮಾಡಿದ ತಪ್ಪು ಎಂದು ಹೇಳಿದರು.

    ಅಮೆರಿಕದ ಅಧ್ಯಕ್ಷ ಬಿಲ್ ಕ್ಲಿಂಟನ್ ಅವರು ಪರಮಾಣು ಪರೀಕ್ಷೆಗಳನ್ನು ನಡೆಸುವುದನ್ನು ತಡೆಯಲು ಪಾಕಿಸ್ತಾನಕ್ಕೆ 5 ಬಿಲಿಯನ್ ಡಾಲರ್‌ ನೀಡುವುದಾಗಿ ಹೇಳಿದ್ದರು. ಆದರೆ ನಾನು ಈ ಪ್ರಸ್ತಾಪವನ್ನು ನಿರಾಕರಿಸಿದೆ. ಒಂದು ವೇಳೆ ನನ್ನ ಸ್ಥಾನದಲ್ಲಿ ಇಮ್ರಾನ್‌ ಖಾನ್‌ ಇದ್ದಿದ್ದರೆ ಕ್ಲಿಂಟನ್‌ ಪ್ರಸ್ತಾಪವನ್ನು ಒಪ್ಪಿಕೊಳ್ಳುತ್ತಿದ್ದರು ಎಂದು ತಿಳಿಸಿದರು.

    1999ರಲ್ಲಿ ಏನಾಗಿತ್ತು?
    ಐತಿಹಾಸಿಕ ಶೃಂಗಸಭೆಯ ನಂತರ ನವಾಜ್ ಷರೀಫ್ ಮತ್ತು ಅಟಲ್‌ ಬಿಹಾರಿ ವಾಜಪೇಯಿ ಅವರು ಫೆಬ್ರವರಿ 21, 1999 ರಂದು ಲಾಹೋರ್ ಘೋಷಣೆಗೆ ಸಹಿ ಹಾಕಿದ್ದರು. ಉಭಯ ದೇಶಗಳ ನಡುವಿನ ಶಾಂತಿ ಮತ್ತು ಸ್ಥಿರತೆಯ ಕಾಪಾಡುವ ದೃಷ್ಟಿಯಿಂದ ಈ ಐತಿಹಾಸಿಕ ಒಪ್ಪಂದ ಭಾರೀ ಮಹತ್ವ ಪಡೆದಿತ್ತು. ಇದನ್ನೂ ಓದಿ: ಚನ್ನಗಿರಿ ಗಲಭೆ ಕೇಸ್‌ – ಬಂಧನ ಭೀತಿಯಿಂದ ಗ್ರಾಮವನ್ನೇ ತೊರೆದ ಜನ

    ಈ ಒಪ್ಪಂದ ನಡೆದ ಬಳಿಕ ಪಾಕಿಸ್ತಾನವು ತನ್ನ ಪಡೆಗಳನ್ನು ಮತ್ತು ಅರೆಸೈನಿಕ ಪಡೆಗಳನ್ನು ಆಪರೇಷನ್ ಬದ್ರ್ ಅಡಿಯಲ್ಲಿ ಎಲ್‍ಒಸಿಯ(ಗಡಿ ನಿಯಂತ್ರಣ ರೇಖೆ) ಭಾರತದ ಕಾರ್ಗಿಲ್‌ಗೆ ರಹಸ್ಯವಾಗಿ ಕಳುಹಿಸಿತ್ತು. ನಂತರ ಪಾಕಿಸ್ತಾನವು ಕಾರ್ಗಿಲ್‍ನ 130 ರಿಂದ 200 ಚದರ ಕಿ.ಮೀ ನಡುವಿನ ಪ್ರದೇಶವನ್ನು ಆಕ್ರಮಿಸಿಕೊಂಡಿತ್ತು. ಈ ವಿಚಾರ ಭಾರತೀಯ ಸೈನಿಕರಿಗೆ ತಿಳಿದ ಬಳಿಕ ಮೇ 3 ರಿಂದ ಯುದ್ಧ ಆರಂಭವಾಯಿತು. ಮೂರು ತಿಂಗಳು ಕಾದಾಟ ನಡೆದು ಜುಲೈ 26ರಂದು ಆಕ್ರಮಿತ ಭಾರತೀಯ ಪ್ರದೇಶಗಳನ್ನು ತೊರೆಯುವಂತೆ ಪಾಕಿಸ್ತಾನಿ ಪಡೆಗಳಿಗೆ ಸೂಚಿಸುವ ಮೂಲಕ ಯುದ್ಧ ಕೊನೆಗೊಂಡಿತು.

    ಅಚ್ಚರಿಯ ವಿಷಯ ಏನೆಂದರೆ ನಾವು ಭಾರತದ ಮೇಲೆ ದಾಳಿ ಮಾಡುತ್ತಿದ್ದೇವೆ ಎಂಬ ವಿಚಾರ ಪಾಕಿಸ್ತಾನದ ಪ್ರಧಾನಿಯಾಗಿದ್ದ ನವಾಜ್ ಷರೀಫ್ ಅವರಿಗೆ ತಿಳಿದಿರಲಿಲ್ಲ. ಕಾರ್ಗಿಲ್‌ ಯುದ್ಧದ ಹಿಂದಿನ ಮಾಸ್ಟರ್‌ ಮೈಂಡ್‌ ಪಾಕಿಸ್ತಾನದ ಆಗಿನ ಆರ್ಮಿ ಜನರಲ್ ಪರ್ವೇಜ್ ಮುಷರಫ್, ಪಾಕಿಸ್ತಾನ್ ಎಕ್ಸ್ ಕಾರ್ಪ್ಸ್ ಕಮಾಂಡರ್ ಲೆಫ್ಟಿನೆಂಟ್ ಜನರಲ್ ಮಹ್ಮದ್ ಅಹ್ಮದ್, ಮೇಜರ್ ಜನರಲ್ ಜಾವೇದ್ ಹಸನ್, ಪಾಕಿಸ್ತಾನದ ಸೇನೆಯ ಮೇಜರ್ ಜನರಲ್ ಅಶ್ರಫ್ ರಶೀದ್ ಆಗಿದ್ದರು.

    ಕಾರ್ಗಿಲ್ ಬೆಟ್ಟದ ಎತ್ತರದ ಪ್ರದೇಶದಲ್ಲಿ ಪಾಕ್ ಸೈನಿಕರು ಅವಿತಿದ್ದರೆ ಭಾರತದ ಸೈನಿಕರು ಕೆಳಗಡೆ ಇದ್ದರು. ಭಾರತ ಸೈನಿಕರ ಚಲನವಲನಗಳನ್ನು ತಿಳಿದುಕೊಳ್ಳುತ್ತಿದ್ದ ಪಾಕ್ ಸೈನಿಕರು ಸುಲಭವಾಗಿ ಮೇಲಿನಿಂದ ದಾಳಿ ಮಾಡುತ್ತಿದ್ದರು. ಪರಿಸ್ಥಿತಿ ಕಠಿಣವಾಗಿದ್ದರೂ ಕಾರ್ಗಿಲ್‍ನ್ನು ರಕ್ಷಿಸಲು ಭಾರತ ವಿಶೇಷ ಪಡೆಗಳೊಂದಿಗೆ ಸುಮಾರು 30,000 ಸೈನಿಕರನ್ನು ಕಾರ್ಗಿಲ್ ದ್ರಾಸ್ ಪ್ರದೇಶಕ್ಕೆ ಕಳುಹಿಸಿತ್ತು. ಈ ಯುದ್ಧದಲ್ಲಿ 527ಕ್ಕೂ ಹೆಚ್ಚು ಸೈನಿಕರು ದೇಶಕ್ಕಾಗಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದರು.

     

  • ಪಾಕಿಸ್ತಾನದಲ್ಲಿ ಮೊದಲ ಮಹಿಳಾ ಮುಖ್ಯಮಂತ್ರಿಯಾಗಿ ನವಾಜ್‌ ಷರೀಫ್‌ ಪುತ್ರಿ ಆಯ್ಕೆ

    ಪಾಕಿಸ್ತಾನದಲ್ಲಿ ಮೊದಲ ಮಹಿಳಾ ಮುಖ್ಯಮಂತ್ರಿಯಾಗಿ ನವಾಜ್‌ ಷರೀಫ್‌ ಪುತ್ರಿ ಆಯ್ಕೆ

    ಲಾಹೋರ್: ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್‌ ಷರೀಫ್‌ (Nawaz Sharif) ಅವರ ಪುತ್ರಿಯೂ ಆಗಿರುವ ಪಿಎಂಎಲ್-ಎನ್ ನಾಯಕಿ ಮರ್ಯಮ್‌ ನವಾಜ್‌ (Maryam Nawaz) ಪಾಕಿಸ್ತಾನ ಪಂಜಾಬ್‌ ಪ್ರಾಂತ್ಯದ ಮೊದಲ ಮಹಿಳಾ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ.

    12 ಕೋಟಿ ಜನ ನೆಲೆಸಿರುವ ಪಂಜಾಬ್‌ ಪ್ರಾಂತ್ಯದಲ್ಲಿ ನಡೆದ ಚುನಾವಣೆಯಲ್ಲಿ ಇಮ್ರಾನ್‌ ಖಾನ್‌ ಅವರ ಪಿಟಿಐ ಬೆಂಬಲಿತ ಪಕ್ಷದ ಬಸುನ್ನಿ ಇತ್ತೆಹಾದ್‌ ಕೌನ್ಸಿಲ್‌ (SIC)ನ ನಾಯಕ ರಾಣಾ ಅಫ್ತಾಬ್‌ ವಿರುದ್ಧ ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ (PML-N) ಪಕ್ಷದ ಮರ್ಯಮ್‌ (50) ಜಯಗಳಿಸಿದ್ದಾರೆ.

    ಪಂಜಾಬ್‌ ಅಸೆಂಬ್ಲಿ ಚುನಾವಣೆಗೆ ಹೋಗುವ ಮುನ್ನ ಮರ್ಯಮ್‌ ತನ್ನ ಜತಿ ಉಮ್ರಾದಲ್ಲಿರುವ ತನ್ನ ತಾಯಿಯ ಸಮಾಧಿಗೆ ಭೇಟಿ ನೀಡಿದ್ದರು. ಈ ಸಂದೇಶವನ್ನು ಎಕ್ಸ್‌ ಖಾತೆಯಲ್ಲೂ ಹಂಚಿಕೊಳ್ಳಲಾಗಿದೆ. ಇದನ್ನೂ ಓದಿ: ಕ್ರೀಡಾಂಗಣದಲ್ಲಿ ಸಾರ್ವಜನಿಕವಾಗಿ ಇಬ್ಬರ ತಲೆಗೆ 15 ಬಾರಿ ಗುಂಡಿಟ್ಟು ಮರಣದಂಡನೆ

    ಮರ್ಯಮ್‌ ನವಾಜ್‌ ಯಾರು?
    50 ವರ್ಷ ವಯಸ್ಸಿನ ಮರ್ಯಮ್‌ ಪಾಕಿಸ್ತಾನದಲ್ಲಿ 3 ಬಾರಿ ಪ್ರಧಾನಿಯಾಗಿದ್ದ ನವಾಜ್ ಷರೀಫ್ ಅವರ ಪುತ್ರಿ. 1992ರಲ್ಲಿ, ಅವರು ಸಫರ್ ಅವನ್ ಎಂಬವರೊಂದಿಗೆ ವಿವಾಹವಾದರು, ದಂಪತಿಗೆ ಈಗ ಮೂವರು ಮಕ್ಕಳಿದ್ದಾರೆ. ಸಫರ್ ಆ ಸಮಯದಲ್ಲಿ ಪಾಕಿಸ್ತಾನದ ಸೇನೆಯಲ್ಲಿ ಕ್ಯಾಪ್ಟನ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಬಳಿಕ ನವಾಜ್ ಷರೀಫ್‌ ಪಾಕಿಸ್ತಾನದ ಪ್ರಧಾನಿಯಾಗಿ ಅಧಿಕಾರದಲ್ಲಿದ್ದಾಗ ಭದ್ರತಾ ಅಧಿಕಾರಿಯಾಗಿದ್ದರು. ಆರಂಭದಿಂದಲೇ ತನ್ನನ್ನು ಸಮಾಜಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದ ಮರ್ಯಮ್‌ 2012ರಲ್ಲಿ ಅವರು ರಾಜಕೀಯಕ್ಕೆ ಪ್ರವೇಶಿಸಿದ್ದರು.

    2013ರ ಸಾರ್ವತ್ರಿಕ ಚುನಾವಣೆಯ ಸಮಯದಲ್ಲಿ ಚುನಾವಣಾ ಪ್ರಚಾರದ ಉಸ್ತುವಾರಿ ವಹಿಸಿದ್ದರು. 2024ರ ಪಾಕಿಸ್ತಾನದ ಸಾರ್ವತ್ರಿಕ ಚುನಾವಣೆಯ ಸಮಯದಲ್ಲಿ, ಅವರು ಪಾಕಿಸ್ತಾನದ ರಾಷ್ಟ್ರೀಯ ಅಸೆಂಬ್ಲಿ ಮತ್ತು ಪಂಜಾಬ್‌ನ ಪ್ರಾಂತೀಯ ಅಸೆಂಬ್ಲಿಗೆ ಮೊದಲ ಬಾರಿಗೆ ಚುನಾಯಿತರಾಗಿದ್ದಾರೆ. ಇದನ್ನೂ ಓದಿ: ಕಾಶ್ಮೀರ ಸುರಕ್ಷಿತವಾಗಿದೆ, ನಾನು ಸ್ವತಂತ್ರಳಾಗಿದ್ದೇನೆ – ಬ್ರಿಟನ್ ಸಂಸತ್‌ನಲ್ಲಿ ಕಾಶ್ಮೀರದ ಪತ್ರಕರ್ತೆ ಶ್ಲಾಘನೆ

  • ಪಾಕ್ ಚುನಾವಣೆ ಮತ ಎಣಿಕೆ ಅಂತ್ಯ; ಇಮ್ರಾನ್ ಖಾನ್ ಮುನ್ನಡೆ, ನವಾಜ್ ಷರೀಫ್‌ಗೆ ಸೇನೆ ಬೆಂಬಲ

    ಪಾಕ್ ಚುನಾವಣೆ ಮತ ಎಣಿಕೆ ಅಂತ್ಯ; ಇಮ್ರಾನ್ ಖಾನ್ ಮುನ್ನಡೆ, ನವಾಜ್ ಷರೀಫ್‌ಗೆ ಸೇನೆ ಬೆಂಬಲ

    ಇಸ್ಲಾಮಾಬಾದ್: ಆರ್ಥಿಕ ಬಿಕ್ಕಟ್ಟಿನಿಂದ ಚೇತರಿಸಿಕೊಳ್ಳಲು ಹರಸಾಹಸ ಪಡುತ್ತಿರುವ ಪಾಕಿಸ್ತಾನಕ್ಕೆ ಚುನಾವಣೆಯ ಅತಂತ್ರ ತೀರ್ಪಿನಿಂದ ಮತ್ತೊಂದು ಹೊಡೆತ ಬಿದ್ದಿದೆ. ಇತ್ತ ಪಕ್ಷಗಳು ಬಹುಮತಕ್ಕಾಗಿ ನಾಯಕರನ್ನು ಒಗ್ಗೂಡಿಸಲು ಮುಂದಾಗಿದ್ದು, ಕುದುರೆ ವ್ಯಾಪಾರದ ಪರಿಸ್ಥಿತಿ ಎದುರಾಗಿದೆ.

    ಜೈಲಿನಲ್ಲಿರುವ ಇಮ್ರಾನ್ ಖಾನ್‌ಗೆ ಚುನಾವಣೆಯಲ್ಲಿ ಸ್ಪರ್ಧಿಸದಂತೆ ನಿರ್ಬಂಧಿಸಲಾಗಿತ್ತು. ಪಾಕಿಸ್ತಾನದ ಸಾರ್ವತ್ರಿಕ ಚುನಾವಣೆಯಲ್ಲಿ ಅವರದೇ ಪಕ್ಷ ಪಾಕಿಸ್ತಾನ್ ತೆಹ್ರೀಕ್-ಇನ್ಸಾಫ್ (ಪಿಟಿಐ) ಅನ್ನು ಬೆಂಬಲಿಸುವ ಸ್ವತಂತ್ರ ಅಭ್ಯರ್ಥಿಗಳು 101 ಸ್ಥಾನಗಳನ್ನು ಗೆದ್ದುಕೊಂಡಿದ್ದಾರೆ. ಆದರೆ ಸರ್ಕಾರ ರಚನೆಗೆ ಬೇಕಾದ ಬಹುಮತಕ್ಕೆ 32 ಸ್ಥಾನಗಳ ಕೊರತೆಯಿದೆ. ಇದನ್ನೂ ಓದಿ: ಪಾಕ್ ಚುನಾವಣಾ ಫಲಿತಾಂಶ ಪ್ರಶ್ನಿಸಿ ಕೋರ್ಟ್ ಮೆಟ್ಟಿಲೇರಿದ ಅಭ್ಯರ್ಥಿಗಳು

    ಗುರುವಾರ ಸಂಜೆ ಮತದಾನ ಮುಗಿದ ಸುಮಾರು 60 ಗಂಟೆಗಳ ನಂತರ ಅಂತಿಮ ಫಲಿತಾಂಶವನ್ನು ಪ್ರಕಟಿಸಲಾಯಿತು. ಪಾಕಿಸ್ತಾನ ಚುನಾವಣಾ ಆಯೋಗವು, ಇಂಟರ್ನೆಟ್ ಸಮಸ್ಯೆಯು ವಿಳಂಬಕ್ಕೆ ಕಾರಣವಾಗಿದೆ. ಇದರಿಂದಾಗಿ ಮತದಾನ ಕೇಂದ್ರಗಳು ಫಲಿತಾಂಶ ರವಾನಿಸಲು ತೊಂದರೆ ಎದುರಿಸುತ್ತಿವೆ ಎಂದು ತಿಳಿಸಿದೆ.

    ನವಾಜ್ ಷರೀಫ್ ಅವರ ಪಾಕಿಸ್ತಾನ್ ಮುಸ್ಲಿಂ ಲೀಗ್ (ಎನ್), ಸೇನೆಯ ಬೆಂಬಲ ಹೊಂದಿದೆ. 266 ಸ್ಥಾನಗಳ ಅಸೆಂಬ್ಲಿಯಲ್ಲಿ ಕೇವಲ 73 ಸ್ಥಾನಗಳನ್ನು ಮಾತ್ರ ಗೆದ್ದಿದೆ. ಬಿಲಾವಲ್ ಭುಟ್ಟೋ ಜರ್ದಾರಿ ಅವರ ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ (ಪಿಪಿಪಿ) 54 ಸ್ಥಾನಗಳನ್ನು ಗೆದ್ದಿದೆ. ಇದನ್ನೂ ಓದಿ: ಲಂಡನ್‌ ಪ್ಲಾನ್‌ ವಿಫಲವಾಗಿದೆ- ಫಲಿತಾಂಶ ಘೋಷಣೆಗೂ ಮುನ್ನ ಇಮ್ರಾನ್‌ ವಿಜಯದ ಭಾಷಣ

    ಖಾನ್ ಮತ್ತು ಮಾಜಿ ಪ್ರಧಾನಿ ನವಾಜ್ ಷರೀಫ್ ಇಬ್ಬರೂ ಶನಿವಾರ ತಮ್ಮ ವಿಜಯ ಘೋಷಿಸಿಕೊಂಡಿದ್ದರು. ಮುಂದಿನ ಸರ್ಕಾರವನ್ನು ಯಾರು ರಚಿಸುತ್ತಾರೆ ಎಂಬುದು ಅನಿಶ್ಚಿತತೆಯಿಂದ ಕೂಡಿದೆ.

  • ಲಂಡನ್‌ ಪ್ಲಾನ್‌ ವಿಫಲವಾಗಿದೆ- ಫಲಿತಾಂಶ ಘೋಷಣೆಗೂ ಮುನ್ನ ಇಮ್ರಾನ್‌ ವಿಜಯದ ಭಾಷಣ

    ಲಂಡನ್‌ ಪ್ಲಾನ್‌ ವಿಫಲವಾಗಿದೆ- ಫಲಿತಾಂಶ ಘೋಷಣೆಗೂ ಮುನ್ನ ಇಮ್ರಾನ್‌ ವಿಜಯದ ಭಾಷಣ

    ಇಸ್ಲಾಮಾಬಾದ್:‌ ಪಾಕಿಸ್ತಾನದಲ್ಲಿ ನಡೆದ ಚುನಾವಣೆಯ ಮತ ಎಣಿಕೆ ನಡೆಯುತ್ತಿರುವಂತೆಯೇ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (PTI) ಬೆಂಬಲಿತ ಪಕ್ಷೇತರ ಅಭ್ಯರ್ಥಿಗಳು ಇಲ್ಲಿಯವರೆಗೆ ಹೆಚ್ಚು ಸ್ಥಾನಗಳನ್ನು ಗೆದ್ದಿದ್ದಾರೆ ಎಂದು ಹೇಳಲಾಗುತ್ತಿದ್ದು, ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಈ ನಡುವೆ ಜೈಲಿನಲ್ಲಿರುವ ಮಾಜಿ ಪ್ರಧಾನಿ ಇಮ್ರಾನ್ ಖಾನ್ (Imran Khan) ವಿಜಯದ ಭಾಷಣವನ್ನು ಮಾಡಿದ್ದಾರೆ.

    AI ಮೂಲಕ  ಅವರ ಧ್ವನಿಯನ್ನು ನೀಡಿ ಭಾಷಣದ ವಿಡಿಯೋವನ್ನು ಸೃಷ್ಟಿಸಿ ಬಿಡುಗಡೆ ಮಾಡಲಾಗಿದೆ.   ಪ್ರತಿಸ್ಪರ್ಧಿ ಮತ್ತು ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ (PML- N) ಮುಖ್ಯಸ್ಥ ನವಾಜ್ ಷರೀಫ್ (Nawaz Sharif) ವಿರುದ್ಧ ಕಿಡಿಕಾರಿದ್ದಾರೆ. ಇದನ್ನೂ ಓದಿ: ಪಾಕ್‌ ಚುನಾವಣೆ; ಪಿಎಂಎಲ್‌-ಎನ್‌ ಅತಿ ದೊಡ್ಡ ಪಕ್ಷ?- ಸಮ್ಮಿಶ್ರ ಸರ್ಕಾರ ರಚನೆಗೆ ಮುಂದಾದ ಮಾಜಿ ಪ್ರಧಾನಿ

    ಇಮ್ರಾನ್‌ ಖಾನ್‌ ಹೇಳಿದ್ದೇನು..?: ನನ್ನ ಪ್ರೀತಿಯ ದೇಶವಾಸಿಗಳೇ, ಇಷ್ಟು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಿ ಮತ್ತು ನಿಮ್ಮ ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸುವ ಮೂಲಕ ಸ್ವಾತಂತ್ರ್ಯದ ಮರುಸ್ಥಾಪನೆಗೆ ನೀವು ಅಡಿಪಾಯವನ್ನು ಹಾಕಿದ್ದೀರಿ. ಚುನಾವಣೆಯಲ್ಲಿ ಸುಸೂತ್ರವಾಗಿ ಗೆಲ್ಲಲು ಸಹಾಯ ಮಾಡಿದ್ದಕ್ಕಾಗಿ ಅಭಿನಂದನೆಗಳನ್ನು ಸಲ್ಲಿಸುತ್ತಿದ್ದೇನೆ ಎಂದಿದ್ದಾರೆ.

    ನೀವೆಲ್ಲರೂ ಮತ ಚಲಾಯಿಸಲು ಬರುತ್ತೀರಿ ಎಂದು ನಾನು ನಂಬಿದ್ದೇ. ಅದರಂತೆ ನೀವೆಲ್ಲರೂ ನನ್ನ ನಂಬಿಕೆಯನ್ನು ಗೌರವಿಸಿದ್ದೀರಿ. ನೀವೆಲ್ಲರೂ ಅತೀ ಹೆಚ್ಚು ಮತಗಳನ್ನು ನೀಡಿದ್ದೀರಿ. ಇದು ಕೆಲವರಿಗೆ ಆಘಾತವುಂಟು ಮಾಡಿದೆ. ಪ್ರಜಾಪ್ರಭುತ್ವದ ಹಬ್ಬದಲ್ಲಿ ನಿಮ್ಮ ಸಕ್ರಿಯ ಭಾಗವಹಿಸುವಿಕೆಯಿಂದಾಗಿ ‘ಲಂಡನ್ ಯೋಜನೆ’ ವಿಫಲವಾಗಿದೆ ಎಂದು ಇಮ್ರಾನ್‌ ಖಾನ್‌ ವಾಗ್ದಾಳಿ ನಡೆಸಿದರು.

    ಇದೇ ವೇಳೆ ಚುನಾವಣಾ ಅಕ್ರಮಗಳ ಬಗ್ಗೆ ಮಾತನಾಡುತ್ತಾ, ಚುನಾವಣಾ ದುಷ್ಕೃತ್ಯಗಳನ್ನು ಯಾವುದೇ ಪಾಕಿಸ್ತಾನಿ ಒಪ್ಪಿಕೊಳ್ಳುವುದಿಲ್ಲ. ಹಿಂಸಾತ್ಮಕ ಘಟನೆಗಳ ಬಗ್ಗೆ ಅಂತರಾಷ್ಟ್ರೀಯ ಮಾಧ್ಯಮಗಳು ಸಹ ವ್ಯಾಪಕವಾಗಿ ವರದಿ ಮಾಡಿದೆ. ಈ ಹಿನ್ನೆಲೆಯಲ್ಲಿ ನಾವು 170 ಸ್ಥಾನಗಳನ್ನು ಗಳಿಸುವ ಮೂಲಕ ರಾಷ್ಟ್ರೀಯ ಅಸೆಂಬ್ಲಿಯನ್ನು ಗೆಲ್ಲುವ ಹಾದಿಯಲ್ಲಿದ್ದೇವೆ. ನನ್ನ ದೇಶವಾಸಿಗಳೇ, ನೀವೆಲ್ಲರೂ ಪಾಕಿಸ್ತಾನದಲ್ಲಿ ಪ್ರಜಾಪ್ರಭುತ್ವವನ್ನು ಮರುಸ್ಥಾಪಿಸಲು ದಿನಾಂಕವನ್ನು ನಿಗದಿಪಡಿಸಿದ್ದೀರಿ. 2024ರ ಚುನಾವಣೆಯಲ್ಲಿ ನಾವು ಮೂರನೇ ಎರಡರಷ್ಟು ಬಹುಮತದೊಂದಿಗೆ ಗೆಲ್ಲುತ್ತೇವೆ. ನಿಮ್ಮ ಮತದ ಶಕ್ತಿಯನ್ನು ಎಲ್ಲರೂ ನೋಡಿದ್ದಾರೆ ಎಂದರು.

    ಈ ನಡುವೆ ನವಾಜ್ ಷರೀಫ್ ಮತ್ತು ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ (ಪಿಪಿಪಿ) ಅಧ್ಯಕ್ಷ ಬಿಲಾವಲ್ ಭುಟ್ಟೋ ಜರ್ದಾರಿ ಹಾಗೂ ಸಹ ಅಧ್ಯಕ್ಷ ಆಸಿಫ್ ಅಲಿ ಜರ್ದಾರಿ ಅವರು ಲಾಹೋರ್‌ನಲ್ಲಿ ಸಭೆ ನಡೆಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

  • ಪಾಕ್‌ ಚುನಾವಣೆ; ಪಿಎಂಎಲ್‌-ಎನ್‌ ಅತಿ ದೊಡ್ಡ ಪಕ್ಷ?- ಸಮ್ಮಿಶ್ರ ಸರ್ಕಾರ ರಚನೆಗೆ ಮುಂದಾದ ಮಾಜಿ ಪ್ರಧಾನಿ

    ಪಾಕ್‌ ಚುನಾವಣೆ; ಪಿಎಂಎಲ್‌-ಎನ್‌ ಅತಿ ದೊಡ್ಡ ಪಕ್ಷ?- ಸಮ್ಮಿಶ್ರ ಸರ್ಕಾರ ರಚನೆಗೆ ಮುಂದಾದ ಮಾಜಿ ಪ್ರಧಾನಿ

    ಇಸ್ಲಾಮಾಬಾದ್‌: ಪಾಕಿಸ್ತಾನದ ನ್ಯಾಷನಲ್‌ ಅಸೆಂಬ್ಲಿಗೆ ನಡೆದ ಚುನಾವಣೆಯಲ್ಲಿ ಪಾಕ್‌ ಮಾಜಿ ಪ್ರಧಾನಿ ನವಾಜ್‌ ಷರೀಫ್‌ ಅವರ ಪಿಎಂಎಲ್‌ ಪಕ್ಷವು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಷರೀಫ್‌ ಸಮ್ಮಿಶ್ರ ಸರ್ಕಾರ ರಚನೆಗೆ ಮುಂದಾಗಿದ್ದಾರೆ ಎನ್ನಲಾಗಿದೆ.

    ಪಾಕ್‌ ನ್ಯಾಷನಲ್‌ ಅಸೆಂಬ್ಲಿ ಚುನಾವಣೆಯ ಮತ ಎಣಿಕೆ ಇಂದು (ಶುಕ್ರವಾರ) ನಡೆಯಿತು. ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್‌ ಷರೀಫ್‌ ಗೆಲುವಿನ ನಗೆ ಬೀರಿದ್ದಾರೆ. ತಮ್ಮ ರಾಜಕೀಯ ಪಕ್ಷವು ಮತಗಳಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಸಮ್ಮಿಶ್ರ ಸರ್ಕಾರವನ್ನು ರಚಿಸುವ ಬಗ್ಗೆ ಚರ್ಚಿಸುವುದಾಗಿ ಅವರು ತಿಳಿಸಿದ್ದಾರೆ.

    ಷರೀಫ್ ತಮ್ಮ ಪಕ್ಷ ಎಷ್ಟು ಸ್ಥಾನಗಳನ್ನು ಗೆದ್ದಿದೆ ಎಂಬುದನ್ನು ಬಹಿರಂಗಪಡಿಸಿಲ್ಲ. ಅಸೆಂಬ್ಲಿಯ 265 ಸ್ಥಾನಗಳಿಗೆ ಚುನಾವಣೆ ನಡೆದಿದ್ದು, ಇನ್ನೂ ಕೆಲವು ಸ್ಥಾನಗಳಲ್ಲಿ ಎಣಿಕೆ ನಡೆಯುತ್ತಿದೆ.

    ಚುನಾವಣಾ ಸಮಿತಿಯು ಪ್ರಕಟಿಸಿದ ಎಣಿಕೆಯಲ್ಲಿ, ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ (PML-N) 61 ಸ್ಥಾನಗಳನ್ನು ಗೆದ್ದಿದೆ ಎಂದು ತೋರಿಸಿದೆ. ಇದು ಸರ್ಕಾರ ರಚನೆಗೆ ಹಕ್ಕು ಸಾಧಿಸಲು ಬೇಕಾದ 133 ಸ್ಥಾನಗಳಿಗಿಂತ ಕಡಿಮೆಯಾಗಿದೆ.

    ತಮ್ಮ ಪಕ್ಷಕ್ಕೆ ಅಗತ್ಯವಿರುವ ಸ್ಥಾನಗಳು ಬಂದಿಲ್ಲ. ಆದರೆ ಸಮ್ಮಿಶ್ರ ಸರ್ಕಾರ ರಚಿಸುವ ಕುರಿತು ಚರ್ಚಿಸಲು ನಮ್ಮ ಪ್ರತಿನಿಧಿಗಳು, ಪಾಕಿಸ್ತಾನ ಪೀಪಲ್ಸ್ ಪಾರ್ಟಿಯ ಮಾಜಿ ಅಧ್ಯಕ್ಷ ಆಸಿಫ್ ಅಲಿ ಜರ್ದಾರಿ ಸೇರಿದಂತೆ ಇತರ ಪಕ್ಷಗಳ ನಾಯಕರನ್ನು ಭೇಟಿಯಾಗಲಿದ್ದಾರೆ ಎಂದು ಷರೀಫ್ ತಿಳಿಸಿದ್ದಾರೆ.

    ಪಾಕ್‌ ನ್ಯಾಷನಲ್‌ ಅಸೆಂಬ್ಲಿಯ 266 ಸ್ಥಾನಗಳ (ಮೀಸಲು ಕ್ಷೇತ್ರಗಳನ್ನು ಬಿಟ್ಟು) ಪೈಕಿ ಸದ್ಯ 265 ರಲ್ಲಿ ಚುನಾವಣೆ ನಡೆದಿದೆ. ಅಧಿಕಾರದ ಗದ್ದುಗೆ ಏರಲು ಯಾವುದೇ ಪಕ್ಷ 133 ಸ್ಥಾನಗಳನ್ನು ಗೆಲ್ಲಬೇಕಿದೆ.

  • Pakistan Polls: ಲಾಹೋರ್‌ನಲ್ಲಿ 55 ಸಾವಿರ ಮತಗಳಿಂದ ನವಾಜ್ ಷರೀಫ್‌ಗೆ ಗೆಲುವು

    Pakistan Polls: ಲಾಹೋರ್‌ನಲ್ಲಿ 55 ಸಾವಿರ ಮತಗಳಿಂದ ನವಾಜ್ ಷರೀಫ್‌ಗೆ ಗೆಲುವು

    ಇಸ್ಲಾಮಾಬಾದ್:‌ ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ (Nawaz Sharif) ಅವರು ಲಾಹೋರ್ ಕ್ಷೇತ್ರದಲ್ಲಿ ಯಾಸ್ಮಿನ್ ರಶೀದ್ ವಿರುದ್ಧ 55,000 ಮತಗಳಿಂದ ಗೆದ್ದಿದ್ದಾರೆ.

    ಹಿಂಸಾಚಾರದ ನಡುವೆಯೂ ಪಾಕಿಸ್ತಾನದಲ್ಲಿ (Pakistan) ಮತದಾನ ನಡೆದಿದೆ. ಈ ಮೂಲಕ ಪಾಕಿಸ್ತಾನ ಗುರುವಾರ ತನ್ನ ಹೊಸ ಸರ್ಕಾರವನ್ನು ಆಯ್ಕೆ ಮಾಡಲು ಮತ ಚಲಾಯಿಸಿದೆ. ಸದ್ಯ ಮತ ಎಣಿಕೆ ನಡೆಯುತ್ತಿದ್ದು, ಇಲ್ಲಿಯವರೆಗೆ 265 ಸ್ಪರ್ಧಿಗಳ ಪೈಕಿ 13 ಸ್ಥಾನಗಳ ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಲಾಗಿದೆ.

    ಸ್ವತಂತ್ರವಾಗಿ ಸ್ಪರ್ಧಿಸಿದ್ದ ಇಮ್ರಾನ್ ಖಾನ್ (Imran Khan) ಬೆಂಬಲಿತ ಅಭ್ಯರ್ಥಿಗಳು ಐದು ಸ್ಥಾನಗಳನ್ನು ಪಡೆದುಕೊಂಡಿದ್ದರೆ, ನಾಲ್ಕು ಸ್ಥಾನಗಳನ್ನು ಮಾಜಿ ಪ್ರಧಾನಿ ನವಾಜ್ ಷರೀಫ್ ಅವರ ಪಕ್ಷವಾದ ಪಾಕಿಸ್ತಾನ್ ಮುಸ್ಲಿಂ ಲೀಗ್ (Pakistan Muslim League) ಗೆದ್ದಿದೆ. ಇದನ್ನೂ ಓದಿ: ಸುಳ್ಳು ಮಾಹಿತಿ ಹರಡಿ ದೊಡ್ಡ ತಪ್ಪು ಮಾಡಿದೆ- ಕ್ಷಮೆಯಾಚಿಸಿದ ಎಬಿಡಿ

    ಹತ್ಯೆಗೀಡಾದ ಪ್ರಧಾನಿ ಬೆನಜೀರ್ ಭುಟ್ಟೊ (Benazir Bhutto) ಅವರ ಪುತ್ರ, ಜರ್ದಾರಿಯ ಪಾಕಿಸ್ತಾನ್ ಪೀಪಲ್ಸ್ ಪಾರ್ಟಿಯ ಬಿಲಾವಲ್ ಭುಟ್ಟೋ ಮೂರು ಸ್ಥಾನಗಳನ್ನು ಪಡೆದುಕೊಂಡಿದ್ದಾರೆ. ಇತ್ತ ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್  ಪುತ್ರ ತಲ್ಹಾ ಹಫೀಜ್ ಸಯೀದ್ ಲಾಹೋರ್ ಕ್ಷೇತ್ರದಿಂದ ಸೋತಿದ್ದಾರೆ.

    12 ಕೋಟಿಗೂ ಹೆಚ್ಚು ಮತದಾರರು ಮತ ಚಲಾಯಿಸಲು ಅನುಕೂಲವಾಗುವಂತೆ ದೇಶಾದ್ಯಂತ ನಿನ್ನೆ ರಜೆ ಘೋಷಿಸಲಾಗಿತ್ತು. ಮತದಾನದ ನಂತರ ಮತಗಳ ಎಣಿಕೆ ಪ್ರಾರಂಭವಾಯಿತು.

  • ಭಾರತವು ಚಂದ್ರನನ್ನು ತಲುಪಿದ್ರೆ, ಪಾಕ್ ಪ್ರಪಂಚದ ಮುಂದೆ ಭಿಕ್ಷೆ ಬೇಡುತ್ತಿದೆ: ನವಾಜ್ ಷರೀಫ್

    ಭಾರತವು ಚಂದ್ರನನ್ನು ತಲುಪಿದ್ರೆ, ಪಾಕ್ ಪ್ರಪಂಚದ ಮುಂದೆ ಭಿಕ್ಷೆ ಬೇಡುತ್ತಿದೆ: ನವಾಜ್ ಷರೀಫ್

    ಇಸ್ಲಾಮಾಬಾದ್: ಭಾರತವು ಚಂದ್ರನನ್ನು (Chandrayaan-3) ತಲುಪಿ ವಿಶ್ವದಾದ್ಯಂತ ಹೆಗ್ಗಳಿಕೆಗೆ ಪಾತ್ರವಾದರೆ, ಇತ್ತ ಪಾಕಿಸ್ತಾನವು ಪ್ರಪಂಚದ ಮುಂದೆ ಭಿಕ್ಷೆ ಬೇಡುತ್ತಿದೆ ಎಂದು ಪಾಕ್ ಮಾಜಿ ಪ್ರಧಾನಿ ನವಾಜ್ ಷರೀಫ್ (Nawaz Sharif) ಬೇಸರ ವ್ಯಕ್ತಪಡಿಸಿದ್ದಾರೆ.

    ವೀಡಿಯೋ ಲಿಂಕ್ ಮೂಲಕ ಲಾಹೋರ್ ನ ಪಕ್ಷದ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದ ಅವರು, ಭಾರತವು (India) ಚಂದ್ರನನ್ನು ತಲುಪಿ ಜಿ20 ಶೃಂಗಸಭೆಯನ್ನು (G-20 Summit) ಬಹಳ ಯಶಸ್ವಿಯಾಗಿ ನಡೆಸಿದೆ. ಆದರೆ ಇಂದು ಪಾಕಿಸ್ತಾನದ (Pakistan) ಪ್ರಧಾನಿ ಹಣಕ್ಕಾಗಿ ಪ್ರಪಂಚದ ಶ್ರೀಮಂತ ದೇಶಗಳ ಮುಂದೆ ಭಿಕ್ಷೆ ಬೇಡುತ್ತಿದ್ದಾರೆ. ಭಾರತ ಮಾಡಿದ ಸಾಧನೆಯನ್ನು ಪಾಕಿಸ್ತಾನಕ್ಕೆ ಸಾಧಿಸಲು ಏಕೆ ಸಾಧ್ಯವಾಗಲಿಲ್ಲ? ಇದಕ್ಕೆ ಯಾರು ಹೊಣೆ ಎಂದು ಪ್ರಶ್ನಿಸಿದ್ದಾರೆ.

    1990 ರಲ್ಲಿ ತಮ್ಮ ಸರ್ಕಾರ ಪ್ರಾರಂಭಿಸಿದ ಆರ್ಥಿಕ ಸುಧಾರಣೆಗಳನ್ನು ಭಾರತ ಅನುಸರಿಸಿದೆ. ಅಟಲ್ ಬಿಹಾರಿ ವಾಜಪೇಯಿ (Atal Bihari Vijapayee) ಅವರು ಭಾರತದ ಪ್ರಧಾನಿಯಾದಾಗ ಭಾರತದ ವಿದೇಶಿ ವಿನಿಮಯ ಕೇವಲ ಒಂದು ಶತಕೋಟಿ ಡಾಲರ್‍ಗಳಷ್ಟಿತ್ತು. ಆದರೆ ಈಗ ಅದು 600 ಶತಕೋಟಿ ಡಾಲರ್‍ಗೆ ಏರಿದೆ. ಭಾರತ ಇಂದು ಎಲ್ಲಿಗೆ ತಲುಪಿದೆ?, ಪಾಕಿಸ್ತಾನ ಭಿಕ್ಷಾಟನೆಯಿಂದ ಎಲ್ಲಿದೆ ಎಂದು ಪ್ರಶ್ನಿಸಿದರು.

    ಇದೇ ವೇಳೆ ನಿವೃತ್ತ ಸೇನಾ ಮುಖ್ಯಸ್ಥ ಜನರಲ್ ಕಮರ್ ಜಾವೇದ್ ಬಾಜ್ವಾ, ಮಾಜಿ ಐಎ ಮುಖ್ಯಸ್ಥ ಫೈಜ್ ಹಮೀದ್ ಮತ್ತು ಮಾಜಿ ಮುಖ್ಯ ನ್ಯಾಯಮೂರ್ತಿ ಮಿಯಾನ್ ಸಾಕಿಬ್ ನಿಸಾರ್ ಅವರು ಪಾಕಿಸ್ತಾನದ ಈ ಸ್ಥಿತಿಗೆ ಕಾರಣ ಎಂದು ನವಾಜ್ ಷರೀಫ್ ದೂರಿದ್ದಾರೆ. ಇದನ್ನೂ ಓದಿ: ಉಲ್ಟಾ ಹೊಡೆದ ಕೆನಡಾ- ಭಾರತವನ್ನು ಪ್ರಚೋದಿಸುತ್ತಿಲ್ಲವೆಂದ ಟ್ರುಡೋ

    ಮುಂಬರುವ ಚುನಾವಣೆಗಳಲ್ಲಿ ಪಕ್ಷದ ರಾಜಕೀಯ ಪ್ರಚಾರವನ್ನು ಮುನ್ನಡೆಸಲು ಷರೀಫ್ ಮೊದಲ ಬಾರಿಗೆ ಅಕ್ಟೋಬರ್ 21 ರಂದು ದೇಶಕ್ಕೆ ಹಿಂದಿರುಗುವುದಾಗಿ ಘೋಷಿಸಿದ್ದಾರೆ. ಯುಕೆಯಲ್ಲಿ ನಾಲ್ಕು ವರ್ಷಗಳ ಸ್ವಯಂ-ಘೋಷಿತ ಗಡಿಪಾರು ಕೊನೆಗೊಳ್ಳಲಿದೆ. ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ತಮ್ಮ ಪಕ್ಷ ಗೆಲ್ಲಲಿದೆ ಎಂದು ಷರೀಫ್ ಘೋಷಿಸಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 8 ವರ್ಷಗಳ ಬಳಿಕ ಭಾರತದ ನೆಲಕ್ಕೆ ಕಾಲಿಡುತ್ತಿರುವ ಪಾಕ್ ಸಚಿವ

    8 ವರ್ಷಗಳ ಬಳಿಕ ಭಾರತದ ನೆಲಕ್ಕೆ ಕಾಲಿಡುತ್ತಿರುವ ಪಾಕ್ ಸಚಿವ

    ನವದೆಹಲಿ: ಪಾಕಿಸ್ತಾನದ (Pakistan) ವಿದೇಶಾಂಗ ಸಚಿವ ಬಿಲಾವಲ್ ಭೂಟ್ಟೊ ಜರ್ದಾರಿ (Bilawal Bhutto Zardari) ಅವರು ಗೋವಾದಲ್ಲಿ (Goa) ನಡೆಯಲಿರುವ ಶಾಂಘೈ ಸಹಕಾರ ಸಂಸ್ಥೆಯ (Shanghai Cooperation Organisation) ವಿದೇಶಾಂಗ ಸಚಿವರ ಸಭೆಯಲ್ಲಿ ಪಾಲ್ಗೊಳ್ಳಲು ಮೇ ತಿಂಗಳಲ್ಲಿ ಭಾರತಕ್ಕೆ (India) ಭೇಟಿ ನೀಡಲಿದ್ದಾರೆ.

    ಜರ್ದಾರಿ ಅವರು ಮೇ 4 ಹಾಗೂ 5 ರಂದು ಗೋವಾದಲ್ಲಿ ನಡೆಯಲಿರುವ ಸಭೆಯಲ್ಲಿ ಪಾಕಿಸ್ತಾನದ ನಿಯೋಗವನ್ನು ನಿರ್ವಹಿಸಲಿದ್ದಾರೆ ಎಂದು ಪಾಕಿಸ್ತಾನ ವಿದೇಶಾಂಗ ಕಚೇರಿಯ ವಕ್ತಾರ ಮುಮ್ತಾಜ್ ಜಹ್ರಾ ಬಲೋಚ್ (Mumtaz Zahrah Baloch) ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಎಲೆಕ್ಷನ್ ಹೊತ್ತಿನಲ್ಲೇ ಡಿಕೆಶಿಗೆ ಶಾಕ್ – CBI ತನಿಖೆಗೆ ಕೋರ್ಟ್ ಅಸ್ತು

    ಸಭೆಯಲ್ಲಿನ ನಮ್ಮ ಭಾಗವಹಿಸುವಿಕೆಯು ಎಸ್‍ಸಿಓ ಚಾರ್ಟರ್ ಹಾಗೂ ಅದರ ಪ್ರಕ್ರಿಯೆಗಳಿಗೆ ಪಾಕಿಸ್ತಾನದ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ. ಪಾಕಿಸ್ತಾನವು ತನ್ನ ವಿದೇಶಾಂಗ ನೀತಿಯ ಆದ್ಯತೆಗಳಲ್ಲಿ ಪ್ರಾದೇಶಿಕವಾಗಿ ನೀಡುವ ಪ್ರಾಮುಖ್ಯತೆಯನ್ನು ಅದು ಎತ್ತಿ ಹಿಡಿಯುತ್ತದೆ ಎಂದು ಅವರು ಹೇಳಿದ್ದಾರೆ.

    2014ರಲ್ಲಿ ನವಾಜ್ ಷರೀಫ್ (Nawaz Sharif) ಭಾರತಕ್ಕೆ ಭೇಟಿ ನೀಡಿದ್ದರು. ಅವರ ನಂತರ ಪಾಕಿಸ್ತಾನದ ಯಾವ ನಾಯಕರೂ ಭೇಟಿ ನೀಡಿರಲಿಲ್ಲ. ಈಗ ಜರ್ದಾರಿ ಅವರು ಭಾರತಕ್ಕೆ ಭೇಟಿ ನೀಡುತ್ತಿದ್ದಾರೆ.

    ಪ್ರಸ್ತುತ ಶಾಂಘೈ ಸಹಕಾರ ಸಂಸ್ಥೆ ಅಧ್ಯಕ್ಷ ಸ್ಥಾನವನ್ನು ಹೊಂದಿರುವ ಭಾರತವು, ಜನವರಿಯಲ್ಲಿ ಚೀನಾದ ನೂತನ ವಿದೇಶಾಂಗ ಸಚಿವ ಕ್ವಿನ್ ಗ್ಯಾಂಗ್ ಮತ್ತು ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೊ ಜರ್ದಾರಿ ಸೇರಿದಂತೆ ಸದಸ್ಯ ರಾಷ್ಟ್ರಗಳಿಗೆ ಆಹ್ವಾನವನ್ನು ಕಳುಹಿಸಿತ್ತು.

    ಪ್ರಸ್ತುತ ಅಧ್ಯಕ್ಷ ಸ್ಥಾನವನ್ನು ಹೊಂದಿದ್ದೇವೆ. ನಾವು ಪಾಕಿಸ್ತಾನ ಸೇರಿದಂತೆ ಎಲ್ಲಾ ಸದಸ್ಯ ದೇಶಗಳಿಗೆ ಆಹ್ವಾನಗಳನ್ನು ನೀಡಿದ್ದೇವೆ. ಅವರೆಲ್ಲರೂ ಕಾರ್ಯಕ್ರಮಗಳಿಗೆ ಹಾಜರಾಗಬೇಕೆಂದು ನಿರೀಕ್ಷಿಸುತ್ತೇವೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಅಧಿಕೃತ ವಕ್ತಾರ ಅರಿಂದಮ್ ಬಾಗ್ಚಿ ಫೆಬ್ರವರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದರು.

    2019ರಲ್ಲಿ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಪಾಕಿಸ್ತಾನ ಬೆಂಬಲಿತ ಭಯೋತ್ಪಾದಕರು ನಡೆಸಿದ್ದ ದಾಳಿ ಹಾಗೂ ಪಾಕಿಸ್ತಾನದ ಬಾಲಾಕೋಟ್‍ನಲ್ಲಿ ಭಯೋತ್ಪಾದಕರ ಶಿಬಿರಗಳ ಮೇಲೆ ಭಾರತ ನಡೆಸಿದ ಸರ್ಜಿಕಲ್ ಸ್ಟ್ರೈಕ್ ನಂತರ ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಬಂಧಗಳು ತೀವ್ರ ಹದಗೆಟ್ಟಿತ್ತು. ನಂತರ 2019ರ ಆಗಸ್ಟ್‌ನಲ್ಲಿ ಭಾರತವು ಜಮ್ಮು ಮತ್ತು ಕಾಶ್ಮೀರದ ವಿಶೇಷ ಅಧಿಕಾರವನ್ನು ಹಿಂತೆಗೆದುಕೊಳ್ಳುವುದಾಗಿ ಘೋಷಿಸಿದ ನಂತರ ಸಂಬಂಧಗಳು ಮತ್ತಷ್ಟು ಹಾಳಾಗಿತ್ತು.

    ಎಂಟು ಸದಸ್ಯ ರಾಷ್ಟ್ರಗಳ ಶಾಂಘೈ ಸಹಕಾರ ಸಂಸ್ಥೆಯು ತನ್ನ ಸದಸ್ಯ ರಾಷ್ಟ್ರಗಳ ನಡುವೆ ಆರ್ಥಿಕ, ರಾಜಕೀಯ ಮತ್ತು ಮಿಲಿಟರಿ ಸಹಕಾರವನ್ನು ಉತ್ತೇಜಿಸುವ ಉದ್ದೇಶದಿಂದ ಎರಡು ದಶಕಗಳ ಹಿಂದೆ ಸ್ಥಾಪಿಸಲಾದ ಪ್ರಮುಖ ಪ್ರಾದೇಶಿಕ ಶಕ್ತಿ ಕೇಂದ್ರವಾಗಿದೆ. ಇದನ್ನೂ ಓದಿ: ಸೇನಾ ವಾಹನಕ್ಕೆ ಬೆಂಕಿ ತಗುಲಿ 4 ಯೋಧರು ಸಜೀವದಹನ

  • ಭಾರತವನ್ನು ಹೊಗಳಿದ ಇಮ್ರಾನ್ ಖಾನ್‍ಗೆ ಪಾಕ್ ಬಿಟ್ಟು ತೊರೆಯಿರಿ ಎಂದ ಷರೀಫ್ ಪುತ್ರಿ

    ಭಾರತವನ್ನು ಹೊಗಳಿದ ಇಮ್ರಾನ್ ಖಾನ್‍ಗೆ ಪಾಕ್ ಬಿಟ್ಟು ತೊರೆಯಿರಿ ಎಂದ ಷರೀಫ್ ಪುತ್ರಿ

    ಇಸ್ಲಾಮಾಬಾದ್: ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ (ಪಿಎಂಎಲ್-ಎನ್) ಉಪಾಧ್ಯಕ್ಷೆ ಮತ್ತು ಮಾಜಿ ಪ್ರಧಾನಿ ನವಾಜ್ ಷರೀಫ್ ಅವರ ಪುತ್ರಿ  ರ‍್ಯಮ್ ನವಾಜ್ ಷರೀಫ್ ಅವರು, ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಭಾರತವನ್ನು ಅಷ್ಟೊಂದು ಇಷ್ಟಪಡುವುದಾದರೆ ಪಾಕ್ ತೊರೆದು ಭಾರತಕ್ಕೆ ಹೋಗುವಂತೆ ಕಟುವಾಗಿ ಟೀಕಿಸಿದ್ದಾರೆ.

    ಈ ಹಿಂದೆ ಇಮ್ರಾನ್ ಅವರು ಭಾರತವನ್ನು ‘ಖುದ್ದರ್ ಕ್ವಾಮ್’ (ಬಹಳ ಸ್ವಾಭಿಮಾನಿ ಜನರು) ಎಂದು ಶ್ಲಾಘಿಸಿದ್ದ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಧಿಕಾರ ಹೋದದ್ದನ್ನು ನೋಡಿ ಹುಚ್ಚೆದ್ದು ಕುಣಿದಾಡುತ್ತಿರುವ ವ್ಯಕ್ತಿಗೆ ಯಾರು ಹೇಳಬೇಕು. ಬೇರೆಯವರಲ್ಲ ಸ್ವಂತ ಪಕ್ಷದವರೇ ಅವರನ್ನು ಉಚ್ಛಾಟಿಸಿದ್ದಾರೆ. ನೀವು ಭಾರತವನ್ನು ತುಂಬಾ ಇಷ್ಟಪಡುವುದಾದರೆ, ಅಲ್ಲಿಗೆ ತೆರಳಿ ಮತ್ತು ಪಾಕಿಸ್ತಾನವನ್ನು ಬಿಟ್ಟುಬಿಡಿ ಎಂದಿದ್ದಾರೆ. ಇದನ್ನೂ ಓದಿ: ಮುಸ್ಲಿಮರನ್ನ ಮದುವೆಯಾದ್ರೆ SSK ಸಮಾಜದಿಂದ ಬಹಿಷ್ಕರಿಸಿ: ನಾಗೇಶ್‌

    ಪಾಕಿಸ್ತಾನದ ಸಂಸತ್ತಿನಲ್ಲಿ ಇಮ್ರಾನ್ ಖಾನ್ ವಿರುದ್ಧದ ಅವಿಶ್ವಾಸ ಮತಕ್ಕೂ ಮೊದಲು ಅಧಿಕಾರಕ್ಕಾಗಿ ಈ ರೀತಿ ಅಳುತ್ತಿರುವವರನ್ನು ನಾನು ನೋಡಿದ್ದು ಇದೇ ಮೊದಲು ಎಂದು ಹೇಳಿದರು. ಇದನ್ನೂ ಓದಿ: ಬಿಜೆಪಿಯಲ್ಲೇ ಆರಗ ಜ್ಞಾನೇಂದ್ರ ವಿರುದ್ಧ ಅಪಸ್ವರ- ಬದಲಾಗುತ್ತಾ ಸಚಿವರ ಖಾತೆ..?

    ಖಾನ್ ಅವರು ತಮ್ಮ ವಿರುದ್ಧದ ಅವಿಶ್ವಾಸ ನಿರ್ಣಯದ ಮೊದಲು ರಾಷ್ಟ್ರವನ್ನುದ್ದೇಶಿಸಿ ಮಾತನಾಡಿ, ಯಾವುದೇ ಸೂಪರ್ ಪವರ್ ಭಾರತಕ್ಕೆ ಷರತ್ತುಗಳನ್ನು ನಿರ್ದೇಶಿಸಲು ಸಾಧ್ಯವಿಲ್ಲ. ನವದೆಹಲಿ ಮತ್ತು ಇಸ್ಲಾಮಾಬಾದ್ ಎರಡೂ ಉತ್ತಮ ಸಂಬಂಧವನ್ನು ಹಂಚಿಕೊಳ್ಳುವುದಿಲ್ಲ ಎಂದು ಒಪ್ಪಿಕೊಂಡಿದ್ದರು. ಭಾರತೀಯರು ಖುದ್ದಾರ್ ಕ್ವಾಮ್ (ಬಹಳ ಸ್ವಾಭಿಮಾನಿ ಜನರು). ಯಾವುದೇ ಮಹಾಶಕ್ತಿಯು ಭಾರತಕ್ಕೆ ಷರತ್ತುಗಳನ್ನು ನಿರ್ದೇಶಿಸಲು ಸಾಧ್ಯವಿಲ್ಲ ಎಂದು ಇಮ್ರಾನ್ ಅವರು ಶುಕ್ರವಾರ ಹೇಳಿದ್ದರು.

    ಆರ್‍ಎಸ್‍ಎಸ್ ಸಿದ್ಧಾಂತ ಮತ್ತು ಈ ಹಿಂದೆ ಕಾಶ್ಮೀರವನ್ನು ಪಾಕಿಸ್ತಾನವು ಯಾವ ರೀತಿ ಬಳಸಿಕೊಂಡಿದೆ ಎಂಬುದರ ಬಗ್ಗೆ ನಮಗೆ ಬೇಸರವಿದೆ. ಹೀಗಾಗಿ ಭಾರತವು ನಮ್ಮ ಜೊತೆ ಉತ್ತಮ ಸಂಬಂಧವನ್ನು ಹೊಂದಿಲ್ಲ. ಭಾರತ ಮತ್ತು ಪಾಕಿಸ್ತಾನ ಎರಡೂ ಒಟ್ಟಿಗೆ ಸ್ವಾತಂತ್ರ್ಯವನ್ನು ಪಡೆದುಕೊಂಡವು. ಆದರೆ ಇಸ್ಲಾಮಾಬಾದ್ ಅನ್ನು ಟಿಶ್ಯೂ ಪೇಪರ್ ಆಗಿ ಬಳಸಲಾಗುತ್ತದೆ ಎಂದರು.