Tag: Naxalite couple

  • 220 ಕೇಸ್‌ಗಳಲ್ಲಿ ಬೇಕಾಗಿದ್ದ ನಕ್ಸಲ್‌ ದಂಪತಿ ಪೊಲೀಸರ ಮುಂದೆ ಶರಣಾಗತಿ

    220 ಕೇಸ್‌ಗಳಲ್ಲಿ ಬೇಕಾಗಿದ್ದ ನಕ್ಸಲ್‌ ದಂಪತಿ ಪೊಲೀಸರ ಮುಂದೆ ಶರಣಾಗತಿ

    – ಶಸ್ತ್ರಾಸ್ತ್ರ ತ್ಯಜಿಸಿದ ನಕ್ಸಲ್‌ ದಂಪತಿಗೆ ರಾಜ್ಯ, ಕೇಂದ್ರ ಸರ್ಕಾರದಿಂದ 23 ಲಕ್ಷ

    ಮುಂಬೈ: 220 ಪ್ರಕರಣಗಳಲ್ಲಿ ಬೇಕಾಗಿದ್ದ ಮೋಸ್ಟ್‌ ವಾಂಟೆಡ್‌ ನಕ್ಸಲ್‌ ದಂಪತಿ (Naxal Couple) ತಮ್ಮ ಶಸ್ತ್ರಾಸ್ತ್ರಗಳನ್ನು ತ್ಯಜಿಸಿ ಪೊಲೀಸರ ಮುಂದೆ ಶರಣಾಗಿದ್ದಾರೆ.

    ಗಿರಿಧರ್ ಎಂದೂ ಕರೆಯಲ್ಪಡುವ ನಕ್ಸಲೈಟ್ ನಂಗ್ಸು ತುಮ್ರೆಟಿ ತನ್ನ ಪತ್ನಿ ಸಂಗೀತಾ ಉಸೇಂಡಿ ಅಲಿಯಾಸ್ ಲಲಿತಾಳೊಂದಿಗೆ ಮಹಾರಾಷ್ಟ್ರದ (Maharashtra) ಗಡ್ಚಿರೋಲಿ ಜಿಲ್ಲೆಯಲ್ಲಿ ಶನಿವಾರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ಸಮ್ಮುಖದಲ್ಲಿ ಶರಣಾದರು. ಇದನ್ನೂ ಓದಿ: ಭಾನುವಾರ ನಡೆಯಬೇಕಿದ್ದ ನೀಟ್-ಪಿ.ಜಿ ಪರೀಕ್ಷೆ ಮುಂದೂಡಿಕೆ

    ಗಿರಿಧರ್ ವಿರುದ್ಧ 170ಕ್ಕೂ ಹೆಚ್ಚು ಪ್ರಕರಣಗಳಿದ್ದವು. ಆತನ ತಲೆಗೆ 25 ಲಕ್ಷ ರೂ. ಬಹುಮಾನ ಘೋಷಿಸಲಾಗಿತ್ತು. ಆತನ ಪತ್ನಿ ವಿರುದ್ಧ 17 ಪ್ರಕರಣಗಳಿದ್ದು, ಆಕೆ ತಲೆಗೆ 16 ಲಕ್ಷ ರೂ. ಬಹುಮಾನ ಘೋಷಿಸಲಾಗಿತ್ತು. ಈಗ ಇಬ್ಬರೂ ತಮ್ಮ ಶಸ್ತ್ರಾಸ್ತ್ರಗಳನ್ನು ತ್ಯಜಿಸಲು ನಿರ್ಧರಿಸಿದ್ದಾರೆ.

    ಗಿರಿಧರ್ 1996 ರಲ್ಲಿ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಎಡಪಲ್ಲಿ ದಳಕ್ಕೆ ಸೇರಿದ್ದ. ಗಡ್ಚಿರೋಲಿಯಲ್ಲಿ ಅದರ ಚಟುವಟಿಕೆಗಳ ಮುಖ್ಯಸ್ಥನಾಗಿದ್ದ. ಈತನ ವಿರುದ್ಧ 86 ಎನ್‌ಕೌಂಟರ್‌ಗಳು ಮತ್ತು 15 ಬೆಂಕಿ ಹಚ್ಚುವಿಕೆ ಸೇರಿದಂತೆ 179 ಪ್ರಕರಣಗಳಿವೆ. ಆತನ ಪತ್ನಿ ಲಲಿತಾ ಕೂಡ 17 ಪ್ರಕರಣಗಳನ್ನು ಎದುರಿಸುತ್ತಿದ್ದಾಳೆ. ಶರಣಾಗತಿ ಮತ್ತು ಪುನರ್ವಸತಿ ಯೋಜನೆಯಡಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಗಿರಿಧರ್‌ಗೆ 15 ಲಕ್ಷ ರೂ. ಮತ್ತು ಲಲಿತಾಗೆ 8.50 ಲಕ್ಷ ರೂ. ನೀಡಲಾಗಿದೆ. ಇದನ್ನೂ ಓದಿ: ಕಾರ್ಖಾನೆಯೊಂದರಲ್ಲಿ ಭಾರೀ ಸ್ಫೋಟ- ನಾಲ್ವರ ದುರ್ಮರಣ

    ಗಿರಿಧರ್ ಶರಣಾಗತಿಯಿಂದ ಗಡ್ಚಿರೋಲಿಯಲ್ಲಿ ಮಾವೋವಾದಿ ಚಳವಳಿಯ ಬೆನ್ನೆಲುಬು ಮುರಿದಿದೆ. ನಕ್ಸಲ್ ಹಾವಳಿಯನ್ನು ಕೊನೆಗೊಳಿಸಲು ಗಡ್ಚಿರೋಲಿ ಪೊಲೀಸರ ಅವಿರತ ಪ್ರಯತ್ನಗಳನ್ನು ನಾನು ಪ್ರಶಂಸಿಸುತ್ತೇನೆ ಎಂದು ದೇವೇಂದ್ರ ಫಡ್ನವಿಸ್‌ ಎಂದು ತಿಳಿಸಿದ್ದಾರೆ.

  • ನಕ್ಸಲ್‌ ದಂಪತಿ ಮಗಳು 10 ನೇ ತರಗತಿ ಪಾಸ್‌; ಅಪ್ಪ-ಅಮ್ಮನ ಥರ ಆಗಲ್ಲ, ಡಾಕ್ಟರ್‌ ಆಗ್ತೀನಿ ಅಂದ್ಳು ಬಾಲಕಿ

    ನಕ್ಸಲ್‌ ದಂಪತಿ ಮಗಳು 10 ನೇ ತರಗತಿ ಪಾಸ್‌; ಅಪ್ಪ-ಅಮ್ಮನ ಥರ ಆಗಲ್ಲ, ಡಾಕ್ಟರ್‌ ಆಗ್ತೀನಿ ಅಂದ್ಳು ಬಾಲಕಿ

    ರಾಯ್ಪುರ: ಅಪ್ಪ-ಅಮ್ಮ ನಕ್ಸಲರು. ಆದರೆ ಮಗಳು ಮಾತ್ರ ಚೆನ್ನಾಗಿ ಓದಿ ಡಾಕ್ಟರ್‌ ಆಗಬೇಕು ಎಂದು ಕನಸು ಹೊತ್ತು ಸಾಗುತ್ತಿದ್ದಾಳೆ. ಛತ್ತೀಸಗಢದ ಬಾಲಕಿಯೊಬ್ಬಳು 10 ತರಗತಿ ಬೋರ್ಡ್‌ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾಳೆ. ತಾನು ಡಾಕ್ಟರ್‌ ಆಗಬೇಕೆಂಬ ಆಸೆಯನ್ನೂ ಹೊಂದಿದ್ದಾಳೆ. ಆದರೆ ಆಕೆಯ ಪೋಷಕರು ನಕ್ಸಲರು.

    ನಾರಾಯಣಪುರ ಜಿಲ್ಲೆಯ ಅಬುಜ್ಮದ್‌ ಪ್ರದೇಶದ ಸೋನ್ವಾರಮ್, ಆರತಿ ಹೆಸರಿನ ನಕ್ಸಲ್‌ ದಂಪತಿ ಪುತ್ರಿಯಾಗಿರುವ ಬಾಲಕಿ 10ನೇ ತರಗತಿಯಲ್ಲಿ 54.5% ರಷ್ಟು ಅಂಕ ಪಡೆದು ತೇರ್ಗಡೆಯಾಗಿದ್ದಾಳೆ. ಈ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಬಾಲಕಿ, ನಾನು 10ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವುದು ಸಂತಸ ತಂದಿದೆ. ಅಪ್ಪ-ಅಮ್ಮನ ಥರ ಆಗಲ್ಲ. ನಾನು ವೈದ್ಯೆಯಾಗಬೇಕು. ನನ್ನ ಹಳ್ಳಿಯ ಜನರ ಸೇವೆ ಮಾಡಬೇಕು ಎಂದು ಆಕೆ ಆಕಾಂಕ್ಷೆ ವ್ಯಕ್ತಪಡಿಸಿದ್ದಾಳೆ. ಇದನ್ನೂ ಓದಿ: ಮಣಿಪುರದಲ್ಲಿ ಉಗ್ರರ ದಾಳಿ – ಓರ್ವ ಪೊಲೀಸ್ ಹುತಾತ್ಮ, ನಾಲ್ವರು ಗಂಭೀರ

    “ನನಗೆ ಶಿಕ್ಷಣ ಪಡೆಯಲು ಅನೇಕ ತೊಂದರೆಗಳಿವೆ. ಕೆಲವು ದಾಖಲೆಗಳ ಕೊರತೆಯಿಂದಾಗಿ ಮಾದಿಯಾ ಬುಡಕಟ್ಟಿನ ಸದಸ್ಯೆ ಎಂದು ಗುರುತಿಸುವ ಪರಿಶಿಷ್ಟ ಪಂಗಡ (ಎಸ್‌ಟಿ) ಪ್ರಮಾಣಪತ್ರ ಮತ್ತು ನಿವಾಸ ಪ್ರಮಾಣಪತ್ರವನ್ನು ಪಡೆಯಲು ಸಾಧ್ಯವಾಗದ ಕಾರಣ ಮುಂದಿನ ಅಧ್ಯಯನದಲ್ಲಿ ಸವಾಲುಗಳನ್ನು ಎದುರಿಸುತ್ತಿದ್ದೇನೆ. ಈ ಪ್ರಮಾಣಪತ್ರಗಳು ನನಗೆ ಸರ್ಕಾರದ ಯೋಜನೆಗಳ ಪ್ರಯೋಜನ ಪಡೆಯಲು ಸಹಾಯ ಮಾಡುತ್ತದೆ. ಆ ಮೂಲಕ ನನ್ನ ಅಧ್ಯಯನವನ್ನು ಮುಂದುವರಿಸಲು ಮತ್ತು ವೈದ್ಯೆಯಾಗುವ ಕನಸನ್ನು ನನಸಾಗಿಸಲು ಸಹಾಯ ಮಾಡುತ್ತದೆ” ಎಂದು ಬಾಲಕಿ ಹೇಳಿಕೊಂಡಿದ್ದಾಳೆ.

    ಬಾಲಕಿ, ತನ್ನ ಹೆತ್ತವರ ಬಗ್ಗೆ ಹೆಚ್ಚು ಬಹಿರಂಗಪಡಿಸಿಲ್ಲ. ಆಕೆಯ ಕಿರಿಯ ಸಹೋದರ ಗ್ರಾಮದ ರಾಮಕೃಷ್ಣ ಮಿಷನ್ ಆಶ್ರಮ ಶಾಲೆಯಲ್ಲಿ 9 ನೇ ತರಗತಿಯಲ್ಲಿ ಓದುತ್ತಿದ್ದಾನೆ. ಬಾಲಕಿ ತಂದೆ ಸೋನ್ವಾರಮ್ ಸಲಾಮ್ ಪ್ರಸ್ತುತ ಅಬುಜ್‌ಮದ್‌ನ ಅಕಬೇಡ ಮತ್ತು ಕುತುಲ್ ಪ್ರದೇಶಗಳಲ್ಲಿ ಮಾವೋವಾದಿ ಸಂಘಟನೆಯಲ್ಲಿ ಕಮಾಂಡರ್ ಆಗಿ ಸಕ್ರಿಯನಾಗಿದ್ದಾನೆ. ಆತನ ಪತ್ನಿ, ಕೆಳ ಹಂತದ ಕೇಡರ್ ಆಗಿದ್ದಾಳೆ. ಈ ನಕ್ಸಲ್ ದಂಪತಿ ಬಗ್ಗೆ ಸುಳಿವು ಕೊಟ್ಟವರಿಗೆ ಸೂಕ್ತ ಬಹುಮಾನ ನೀಡಲಾಗುವುದು ಎಂದು ಪೊಲೀಸರು ಘೋಷಿಸಿದ್ದಾರೆ. ಇದನ್ನೂ ಓದಿ: ಪೊಲೀಸ್ ಠಾಣೆಯ ಕುರ್ಚಿಯಲ್ಲೇ ರಾಜಾರೋಷವಾಗಿ ಕುಳಿತು ಮದ್ಯಪಾನ- ವ್ಯಕ್ತಿ ಅರೆಸ್ಟ್